Site icon Vistara News

Kichcha Sudeepa: ಎದೆಯ ಮೇಲಿನ ಹಚ್ಚೆಯಂತೆ ಸದಾ ಜೊತೆಗಿರುವೆ ಅಂದಿದ್ಯಾಕೆ ಕಿಚ್ಚ ಸುದೀಪ್‌?‌ ಹೊಸ ಟ್ವೀಟ್‌ ವೈರಲ್!

Kichcha Sudeepa Wrote New letter after election campaign

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (C M Basavaraj Bommai) ಅವರ ಪರವಾಗಿ ವಿಧಾನಸಭಾ ಚುನಾವಣೆಯಲ್ಲಿ (Karnataka Election) ಪ್ರಚಾರ ಮಾಡುತ್ತೇನೆ ಮತ್ತು ಅವರ ಹೇಳಿದವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದ ಚಿತ್ರನಟ ಕಿಚ್ಚ ಸುದೀಪ್‌ (Kichcha Sudeepa) ಭರ್ಜರಿ ರೋಡ್‌ ಶೋ ಮಾಡಿದ್ದಾಗಿದೆ. ಇದರ ಬೆನ್ನಲ್ಲೇ ಟ್ವಿಟರ್​ ಖಾತೆಯಲ್ಲಿ ಪತ್ರವನ್ನು ಬರೆದಿದ್ದಾರೆ. ಪತ್ರ ಬರೆದಿರುವುದು ವಿಧಾನಸಭಾ ಚುನಾವಣೆ ಪ್ರಚಾರದ ಕುರಿತಾಗಿಯೇ ಎಂಬುದು ವಿಶೇಷ.

ಪತ್ರದಲ್ಲಿ ಏನಿದೆ?

ʻʻನಿಮ್ಮ ಕಣ್ಣಲ್ಲಿ ಕಂಡ ಅಪಾರ ಪ್ರೀತಿ ನನ್ನ ಬದುಕಿನ ರೀತಿ. ನಿಮ್ಮ ನಿರಂತರ ರಣಕೇಕೆ ಸಾಕಿಷ್ಟು ಈ ಜನುಮಕೆ. ಹಣತೆ ಹೊತ್ತಿಸಿ ಆರತಿ ಎತ್ತಿದಿರಿ. ದಾರಿಯುದ್ದಕ್ಕೂ ಹೂವ ಚೆಲ್ಲಿದಿರಿ. ನಿಮ್ಮ ಎದೆಯ ಮೇಲಿನ ಹಚ್ಚೆಯಂತೆ. ಸದಾ ಜೊತೆಗಿರುವೆ…….

ಜನಸಾಗರದ ನೂಕು ನುಗಲ್ಲಿನಲ್ಲಿ, ಕೆಲವರಿಗೆ ಬಿದ್ದ ಪೋಲಿಸ್ ಲಾಠಿ ಏಟಿಗೆ ಕ್ಷಮೆ ಇರಲಿ. ಸ್ನೇಹಿತರೆ ನಿಮ್ಮ ಪ್ರತಿ ಮನದಲ್ಲಿ, ಈ ಪ್ರೀತಿ ಹೀಗೆ ಇರಲಿ. ಕರುನಾಡಲ್ಲಿ ನಡೆದ ಈ ಮೆರವಣಿಗೆಯುದ್ದಕ್ಕೂ ಜೊತೆಯಾಗಿ ಸಾಗಿದ ಮಾಧ್ಯಮ ಮಿತ್ರರಿಗೆ ಕಾಳಜಿಯಿಂದ ಕಾವಲಿಟ್ಟ ಪೊಲೀಸರಿಗೆ, ಮಿಲಿಟರಿ ಕಮಾಂಡೋ ಸಿಬ್ಬಂದಿಗೆ, ಲಕ್ಷಾಂತರ ಕಾರ್ಯಕರ್ತರಿಗೆ ಮತ್ತು ಹೃದಯಗೀತೆಯಾದ ನನ್ನ ಪ್ರೀತಿಯ ಸ್ನೇಹಿತರಿಗೆ ಚಿರಋಣಿ..

-ಪ್ರೀತಿಯಿಂದ ನಿಮ್ಮ ಕಿಚ್ಚʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Karnataka Election : ಕಿಚ್ಚ ಸುದೀಪ್‌ ಫ್ಯಾನ್ಸ್‌ ಮೇಲೆ ಹಿಗ್ಗಾಮುಗ್ಗಾ ಲಾಠಿಪ್ರಹಾರ

ಹೊಸ ಸಿನಿಮಾದ ಪ್ರೊಮೊ ಶೂಟಿಂಗ್ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ ಸುದೀಪ್​. ಈ ನಡುವೆಯೇ, ಚುನಾವಣೆಗೆ ಸಂಬಂಧಿಸಿದ ಪತ್ರವೊಂದನ್ನು ಪೋಸ್ಟ್‌​ ಮಾಡಿದ್ದಾರೆ. ಇದರಲ್ಲಿ ಅವರು ಪ್ರಚಾರದ ವೇಳೆಯಲ್ಲಿ ಆದ ಅನುಭವವನ್ನು ಅವರು ಕಾವ್ಯ ರೂಪದಲ್ಲಿ ಇಳಿಸಿದ್ದಾರೆ.

ಬಿಜೆಪಿ ಪರ ಕಿಚ್ಚ ಸುದೀಪ್‌ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ವಿ. ಸೋಮಣ್ಣ (V Somanna) ಪರ ನಗರದಲ್ಲಿ ರೋಡ್‌ ಶೋ ನಡೆಸಿದ್ದರು. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಕ್ಷೇತ್ರದಲ್ಲಿ ರೋಡ್‌ ಶೋ, ದಾವಣಗೆರೆಯ ಉತ್ತರ ಮತ್ತು ದಕ್ಷಿಣದ ಅಭ್ಯರ್ಥಿಗಳಾದ ಲೊಕ್ಕಿಕೇರಿ ನಾಗರಾಜ್ ಹಾಗೂ ಅಜಯ್ ಪರ ರೋಡ್ ಶೋ‌, ಶಿರಾಳಕೊಪ್ಪಗಳಲ್ಲಿ ಕೂಡ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಪರ ಪ್ರಚಾರ ನಡೆಸಿದ್ದರು .ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಪರವಾಗಿ ರೋಡ್‌ ಶೋ ನಡೆಸಿದ್ದರು. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರೊಂದಿಗೆ ಪ್ರಚಾರಕ್ಕಿಳಿದಿದ್ದರು.

ಇದನ್ನೂ ಓದಿ: Kichcha Sudeepa: ಹೊಸ ಸಿನಿಮಾ ಬಗ್ಗೆ ಅಪ್‌ಡೇಟ್‌ ಹಂಚಿಕೊಂಡ ಕಿಚ್ಚ ಸುದೀಪ್‌

ಚಿತ್ರೀಕರಣದಲ್ಲಿ ಬ್ಯುಸಿಯಾಗುತ್ತಿರುವ ಕಿಚ್ಚ ಸುದೀಪ್‌

ಕೆಲ ದಿನಗಳ ಹಿಂದೆ ತಮ್ಮ ಮೂರು ಸಿನಿಮಾಗಳ ಕುರಿತು ಮಾಹಿತಿ ಹಂಚಿಕೊಂಡಿದ್ದರು. ಮೇ 22ರಂದು ಮೊದಲ ಸಿನಿಮಾದ ಪ್ರೊಮೊ ಚಿತ್ರೀಕರಣ ಹಾಗೂ ಜೂನ್ 1ರಂದು ಆ ಸಿನಿಮಾವನ್ನು ಲಾಂಚ್ ಮಾಡುವುದಾಗಿ ಟ್ವೀಟ್‌ನಲ್ಲಿ ಬರೆದುಕೊಂಡಿದ್ದರು.

ವರದಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾದ ಪ್ರೋಮೊ ಮೇ 22ರಿಂದ ಶುರುವಾಗಲಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ ಎನ್ನಲಾಗಿದೆ.

Exit mobile version