Site icon Vistara News

kirik Keerthi: ಡೆತ್​ನೋಟ್​ ಬರೆದು ಡಿಲೀಟ್​ ಮಾಡಿದ ಕಿರಿಕ್​ ಕೀರ್ತಿ; ಜಗತ್ತಿಗೇ ವಿದಾಯ ಹೇಳುವ ನಿರ್ಧಾರ ಮಾಡಿದ್ದೇಕೆ ಅವರು?

Kirik Keerthi Facebook On his depression

#image_title

ಬಿಗ್​ ಬಾಸ್ ಮಾಜಿ ​ಸ್ಪರ್ಧಿ ಕಿರಿಕ್​ ಕೀರ್ತಿ ಸೋಷಿಯಲ್​ ಮೀಡಿಯಾಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಕಿರಿಕ್​ ಕೀರ್ತಿ ತಮ್ಮ ತೀಕ್ಷ್ಣ ಮಾತುಗಳಿಂದಲೇ ಸುದ್ದಿಯಲ್ಲಿರುತ್ತಾರೆ. ಆದರೆ ಈ ಸಲ ಅವರೊಂದು ಶಾಕಿಂಗ್​ ವಿಷಯವನ್ನು ತಮ್ಮ ಫೇಸ್​ಬುಕ್​ ಪೋಸ್ಟ್​​ನಲ್ಲಿ ಹಾಕಿಕೊಂಡು ಸುದ್ದಿಯಾಗಿದ್ದಾರೆ. ‘ನಾನು ಈ ಜಗತ್ತಿಗೆ ವಿದಾಯ ಹೇಳಿಬಿಡಬೇಕು ಎಂದು ನಿರ್ಧಾರ ಮಾಡಿದ್ದೆ. ಡೆತ್​ ನೋಟ್​​ನ್ನು ಕೂಡ ಬರೆದಿಟ್ಟಿದ್ದೆ’ ಎಂದು ಅವರು ಫೇಸ್​​ಬುಕ್​​ನಲ್ಲಿ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ತಾವೀಗ ಡಿಪ್ರೆಶನ್​​ (ಖಿನ್ನತೆ)ಗೆ ಜಾರಿದ್ದಾಗಿ ಹೇಳಿಕೊಂಡಿದ್ದು, ಅದರಿಂದ ಹೊರಬರಲು ನಿಮ್ಮೆಲ್ಲರ ಸಹಕಾರ ಬೇಕು ಎಂದಿದ್ದಾರೆ. ಹಾಗೇ, ಮಗ ಆವಿಷ್ಕಾರ್​ ಕೀರ್ತಿಯೊಂದಿಗೆ ಇರುವ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

ಹೀಗಿದೆ ನೋಡಿ ಕಿರಿಕ್​ ಕೀರ್ತಿ ಫೇಸ್​ಬುಕ್ ಪೋಸ್ಟ್​..‘ನಿರ್ಧಾರ ಮಾಡಿಬಿಟ್ಟಿದ್ದೆ…ಜಗತ್ತಿಗೆ ವಿದಾಯ ಹೇಳಿಬಿಡಬೇಕು ಅಂತ…ಕಾರಣಗಳು ಹಲವು…ವೈಯಕ್ತಿಕ ಜೀವನದಲ್ಲಾದ ಕೆಲವು ಘಟನೆಗಳು ನನ್ನನ್ನು ಇನ್ನಿಲ್ಲದಂತೆ ಕುಗ್ಗಿಸಿತ್ತು. ಜೀವನದ ಮೇಲೊಂದು ಕೆಟ್ಟ ನಿರಾಸಕ್ತಿ ಬಂದಿತ್ತು. ಎಲ್ಲ ಪ್ರಯತ್ನಗಳೂ ಕೈಕೊಡ್ತಿತ್ತು… ಒಂದು ಕಡೆ ಜಿಹಾದಿಗಳ ಬೆದರಿಕೆ ಕರೆಗಳು ಕುಟುಂಬವನ್ನು ಡಿಸ್ಟರ್ಬ್ ಮಾಡಿತ್ತು. ಸೋಷಿಯಲ್ ಮೀಡಿಯಾದಿಂದಲೂ ಸ್ವಲ್ಪ ದೂರವೇ ಇದ್ದೆ. ಆದ್ರೆ ಈಗ ಎಲ್ಲದಕ್ಕೂ ಹೆದರಿ ಹೋಗಿಬಿಟ್ರೆ ನನ್ನನ್ನು ಈ ಪರಿಸ್ಥಿತಿಗೆ ತಂದವರಿಗೆ ಉತ್ತರ ಕೊಡೋದು ಹೇಗೆ..? ನನ್ನ ನಂಬಿ ಹೂಡಿಕೆ ಮಾಡಿರೋರಿಗೆ ನ್ಯಾಯ ಸಿಗೋದು ಹೇಗೆ…? ನನ್ನ ಮಗನ ಭವಿಷ್ಯ ಕಟ್ಟೋದು ಹೇಗೆ..? ಈ ಪ್ರಶ್ನೆಗಳು ಕಾಡಿದವು. ಟೈಪ್ ಮಾಡಿದ ಡೆತ್ ನೋಟ್ ಡಿಲೀಟ್ ಮಾಡ್ದೆ. 10 ನಿಮಿಷ ಧ್ಯಾನ ಮಾಡಿದೆ. ತಡವಾದ್ರೂ ಪರವಾಗಿಲ್ಲ ನನ್ನ ನಂಬಿದ ಎಲ್ಲರಿಗೂ ಅವರಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳೋ ಹಾಗೆ ಸಾಧಿಸಬೇಕು ಅಂತ ಡಿಸೈಡ್ ಮಾಡ್ದೆ. ಮನಸ್ಸಲ್ಲಿದ್ದ ಕೆಟ್ಟ ಅಲೋಚನೆಗಳನ್ನು ಕಿತ್ತು ಬಿಸಾಕಿದ್ದೇನೆ. ಕೆಲವರನ್ನು ಕಳೆದುಕೊಂಡಿದ್ದರ ಹೊರತು ಬೇರೆ ಎಲ್ಲವನ್ನೂ ಟ್ರ್ಯಾಕಿಗೆ ತರುವ ಪ್ರಾಮಾಣಿಕ ಪ್ರಯತ್ನ ಮಾಡ್ತೀನಿ. ನಿಮ್ಮ ಬೆಂಬಲ‌ ಜೊತೆಗಿರಲಿ. ಡಿಪ್ರೆಷನ್‌ನಿಂದ ಮತ್ತೆ ವಾಪಸ್ ಬರಲು ಸಹಕರಿಸಿ. ಮತ್ತೆ ನನ್ನ ಮುಖದ ಮೇಲಿನ ನಗು ವಾಪಸ್ ತರುವ ತನಕ ಪ್ರಯತ್ನ‌ ನಿರಂತರ… ಇದು ಹೇಳಿಕೊಳ್ಳಬಾರದ ವಿಷಯ.. ಆದ್ರೆ ಹೇಳಿಕೊಂಡರಷ್ಟೆ ಸಮಾಧಾನ’.

ಕಿರಿಕ್​ ಕೀರ್ತಿ ಹಿಂದೂ ಧರ್ಮದ ಪರ ಸದಾ ಮಾತನಾಡುತ್ತಾರೆ. ಯಾವುದೇ ಕೋಮು ಗಲಾಟೆಯಾದಾಗ-ಇದಕ್ಕೆ ಸಂಬಂಧಪಟ್ಟ ಹತ್ಯೆಯಾದಾಗ ಅದರ ವಿರುದ್ಧ ಧ್ವನಿ ಎತ್ತುತ್ತಾರೆ. ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ತಮ್ಮ ಕುಟುಂಬದ ಫೋಟೋ ಹಂಚಿಕೊಳ್ಳುತ್ತಿರುತ್ತಾರೆ. ಬಿಗ್​ಬಾಸ್​ ಸೀಸನ್​ 4ರಲ್ಲಿ ಸ್ಪರ್ಧಿಸಿದ್ದರು.

ಇದನ್ನೂ ಓದಿ: Bigg Boss Kannada: ಇದು ಬಿಗ್‌ ಬಾಸ್‌ ಸ್ನೇಹಿತರ ಸಮ್ಮಿಲನ ; ಸಪ್ಪೆ ಹೋಟೆಲ್‌ ಗ್ಯಾಂಗ್ ಎಂದ ಅನುಪಮಾ!

Exit mobile version