Kannada New Movie: ’ಕ್ಲಾಂತ’ ಮೂಲಕ ಕನ್ನಡಕ್ಕೆ ಬಂದ ತುಳು ಹೀರೊ! - Vistara News

South Cinema

Kannada New Movie: ’ಕ್ಲಾಂತ’ ಮೂಲಕ ಕನ್ನಡಕ್ಕೆ ಬಂದ ತುಳು ಹೀರೊ!

Kannada New Movie: ’ ದಗಲ್ ಬಾಜಿಲು ಎಂಬ ತುಳು ಚಿತ್ರದಲ್ಲಿ ಅಮೋಘವಾಗಿ ಅಭಿನಯಿಸಿ ಮನಗೆದ್ದಿದ್ದ ವಿಘ್ನೇಶ್ ಕನ್ನಡದಲ್ಲೂ ಮೋಡಿ ಮಾಡುವ ಭರವಸೆ ಹುಟ್ಟಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಒಬ್ಬ ಪ್ರಾಮಿಸಿಂಗ್ ಹೀರೋ ಸಿಗುವುದರಲ್ಲಿ ಯಾವುದೇ ಸಂದೇಶವಿಲ್ಲ.

VISTARANEWS.COM


on

KLAANTHA kannada Novie hero Vighnesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶೀರ್ಷಿಕೆಯೇ ಸಿನಿಮಾ ಪ್ರೇಕ್ಷಕರಿಗೆ (Kannada New Movie) ಮೊದಲ ಆಮಂತ್ರಣ. ಸಿನಿಮಾ ಮೇಕರ್‌ಗಳು ಅದನ್ನೇ ಗಮನದಲ್ಲಿಟ್ಟುಕೊಂಡು ಏನಾದರೊಂದು ಹೊಸದನ್ನು ನೀಡಬೇಕೆನ್ನುವ ಆಶಯ ಹೊಂದಿರುತ್ತಾರೆ. ಈ ನಡುವೆ ಬಗೆಬಗೆಯ ಶೀರ್ಷಿಕೆಗಳ ಮೂಲಕವೇ ಸಿನಿಮಾಗಳು ತೆರೆಗೆ ಬರುತ್ತಿವೆ. ಅಂತಹದ್ದೇ ವಿಭಿನ್ನ ಬಗೆಯ ಟೈಟಲ್ ಮೂಲಕ ಗಮನಸೆಳೆದಿರುವ ಚಿತ್ರ ʼಕ್ಲಾಂತʼ.

ವೈಭವ್ ಪ್ರಶಾಂತ್ ನಿರ್ದೇಶನದ ʼಕ್ಲಾಂತʼ ಸಿನಿಮಾದ ಟೀಸರ್ ಈಗಾಗಲೇ ಗಮನ ಸೆಳೆದಿದೆ. ನಾಯಕ ವಿಘ್ನೇಶ್ ಹಾಗೂ ಸಂಗೀತ ಭಟ್ ಅಭಿನಯ ಎಲ್ಲರಿಗೂ ಮೆಚ್ಚುಗೆಯಾಗಿದೆ. ಅದರಲ್ಲೂ ವಿಘ್ನೇಶ್ ಅವರಂತೂ ಆಕ್ಷನ್ ದೃಶ್ಯಗಳಲ್ಲಿ ಎಲ್ಲರನ್ನೂ ಮೀರಿಸುವಂತೆ ಪವರ್ ಫುಲ್ ಆಗಿ ಅಬ್ಬರಿಸಿದ್ದಾರೆ. ʼದಗಲ್ ಬಾಜಿಲುʼ ಎಂಬ ತುಳು ಚಿತ್ರದಲ್ಲಿ ಅಮೋಘವಾಗಿ ಅಭಿನಯಿಸಿ ಮನಗೆದ್ದಿದ್ದ ವಿಘ್ನೇಶ್ ಕನ್ನಡದಲ್ಲೂ ಮೋಡಿ ಮಾಡುವ ಭರವಸೆ ಹುಟ್ಟಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಒಬ್ಬ ಪ್ರಾಮಿಸಿಂಗ್ ಹೀರೋ ಸಿಗುವುದರಲ್ಲಿ ಯಾವುದೇ ಸಂದೇಶವಿಲ್ಲ.

ತುಳು ಸಿನಿಮಾ ʼದಗಲ್ ಬಾಜಿಲುʼ ಮೂಲಕ ವಿಘ್ನೇಶ್ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದರು. ಮೊದಲ ಸಿನಿಮಾದಲ್ಲಿಯೇ ಗೆಲುವಿನ ನಗೆ ಬೀರಿದ್ದ ಅವರೀಗ ಕನ್ನಡ ಚಿತ್ರರಂಗಕ್ಕೆ ಹೀರೊ ಆಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಕ್ಲಾಂತಾ ಸಿನಿಮಾದ ಒಂದಷ್ಟು ಸ್ಯಾಂಪಲ್ಸ್ ನೋಡುತ್ತಿದ್ದರೆ ವಿಘ್ನೇಶ್ ನಟನೆ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸ್ಯಾಂಡಲ್ ವುಡ್ ಒಂದೊಳ್ಳೆ ಮಾಸ್ ಹೀರೋ ಸಿಗೋದು ಪಕ್ಕ ಅಂತಿದೆ ಗಾಂಧಿನಗರ.

KLAANTHA kannada Novie hero Vighnesh

ರಂಗನ್ ಸ್ಟೈಲ್, ದಗಲು ಬಾಜಿಲು ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್ ಪ್ರಶಾಂತ್ ಕ್ಲಾಂತ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಎಂ ವಿಘ್ನೇಶ್ ನಾಯಕನಾಗಿ, ಸಂಗೀತ ಭಟ್ ನಾಯಕಿಯಾಗಿ ನಟಿಸುತ್ತಿದ್ದು, ಉಳಿದಂತೆ ಶೋಭರಾಜ್ , ವೀಣಾ ಸುಂದರ್ , ಕಾಮಿಡಿ ಕಿಲಾಡಿ ದೀಪಿಕಾ , ಪ್ರವೀಣ್ ಜೈನ್ , ಯುವ , ತಿಮ್ಮಪ್ಪ ಕುಲಾಲ್ , ಸ್ವಪ್ನ , ರಾಘವೇಂದ್ರ ಕಾರಂತ್ , ಪಂಚಮಿ ವಾಮಂಜೂರ್ , ವಾಮದೇವ ಪುಣಿಂಚತ್ತಾಯ ಮುಂತಾದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Kannada New Movie: ‘ರಾಮಾ ರಾಮಾ ರೇ’ ನಿರ್ದೇಶಕನ ಹೊಸ ಸಿನಿಮಾ ಅನೌನ್ಸ್‌!

ಕ್ಲಾಂತ ಸಿನಿಮಾದ ಚಿತ್ರೀಕರಣ ಕುಕ್ಕೆ ಸುಬ್ರಹ್ಮಣ್ಯ , ಗುಂಡ್ಯ , ಕಳಸ ಸುತ್ತ ಮುತ್ತ ಕಾಡಿನಲ್ಲಿ ಅದ್ಧೂರಿ ವೆಚ್ಚದಲ್ಲಿ ತಯಾರಾಗಿದೆ. ಪಕ್ಕಾ ಆಕ್ಷನ್ , ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದ್ದು, ಎಸ್ ಪಿ ಚಂದ್ರಕಾಂತ್ ಸಂಗೀತ, ಪಿಆರ್ ಸೌಂದರ್ ರಾಜ್ ಸಂಕಲನ, ಮೋಹನ್ ಲೋಕನಾಥ್ ಛಾಯಾಗ್ರಹಣ ಚಿತ್ರಕ್ಕಿದೆ.

ಸಂತೋಷ್ ನಾಯ್ಕ್, ವರಾಹ ರೂಪಂ ಖ್ಯಾತಿಯ ಶಶಿರಾಜ್ ಕಾವೂರ್, ವೈಭವ್ ಪ್ರಶಾಂತ್ ಸಾಹಿತ್ಯ ಹಾಡುಗಳಿಗಿದ್ದು, ವಿನೋದ್ ಸ್ಟಂಟ್ ಮಾಸ್ಟರ್ ಆಗಿ , ಮಹೇಶ್ ದೇವ್ ಡಿ ಎನ್ ಪುರ ಸಂಭಾಷಣೆ ಸಿನಿಮಾಕ್ಕಿದೆ. ಎರಡು ಹಾಡುಗಳಿಗೆ ರಘು ಅವರ ನೃತ್ಯ ಸಂಯೋಜನೆ ಇದೆ . ಅನುಗ್ರಹ ಪವರ್ ಮೀಡಿಯಾ ಬ್ಯಾನರ್ ನಡಿ ಉದಯ್ ಅಮ್ಮಣ್ಣಾಯ ಬಂಡವಾಳ ಹೂಡಿದ್ದು, ಅರುಣ್ ಗೌಡ, ಪ್ರದೀಪ್ ಗೌಡ ಹೇಮಂತ್ ರೈ ಸಹ ನಿರ್ಮಾಪಕರಾಗಿ ಆಗಿ ಸಾಥ್ ಕೊಟ್ಟಿದ್ದಾರೆ. ಡಿಸೆಂಬರ್ 8ಕ್ಕೆ ʼಕ್ಲಾಂತʼ ಸಿನಿಮಾ ರಾಜ್ಯಾದ್ಯಂತ ಮೆರವಣಿಗೆ ಹೊರಡಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಾಲಿವುಡ್

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Aavesham Releases On OTT: ಆವೇಶಂʼ ಸಿನಿಮಾವು ಭಾರತದಲ್ಲಿ 93.9 ಕೋಟಿ ರೂ. ಗಳಿಕೆ ಮಾಡಿತ್ತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 146.9 ಕೋಟಿ ರೂ. ಗಳಿಕೆ ಕಂಡಿತ್ತು. ಈ ಚಿತ್ರದ ಬಜೆಟ್‌ 30 ಕೋಟಿ ರೂ. ಆಗಿತ್ತು. ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ʻಆವೇಶಂʼ (Aavesham Releases On OTT) ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಥಿಯೇಟರ್‌ನಲ್ಲಿ ಬಿಡುಗಡೆಯಾದ ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ, ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ.

VISTARANEWS.COM


on

Aavesham Releases On OTT Fahadh Faasil Hit Malayalam Film
Koo

ಬೆಂಗಳೂರು: ಫಹಾದ್ ಫಾಸಿಲ್ (Fahadh Faasil) ಅಭಿನಯದ ಬ್ಲಾಕ್‌ಬಸ್ಟರ್‌ ಮಲಯಾಳಂ ಸಿನಿಮಾ ʻಆವೇಶಂʼ ಒಟಿಟಿಗೆ ಸದ್ದಿಲ್ಲದೆ ಎಂಟ್ರಿ ಕೊಟ್ಟಿದೆ. ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ʻಆವೇಶಂʼ (Aavesham Releases On OTT) ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಥಿಯೇಟರ್‌ನಲ್ಲಿ ಬಿಡುಗಡೆಯಾದ ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ, ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ.

ʻಆವೇಶಂʼ ಸಿನಿಮಾವು ಭಾರತದಲ್ಲಿ 93.9 ಕೋಟಿ ರೂ. ಗಳಿಕೆ ಮಾಡಿತ್ತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 146.9 ಕೋಟಿ ರೂ. ಗಳಿಕೆ ಕಂಡಿತ್ತು. ಈ ಚಿತ್ರದ ಬಜೆಟ್‌ 30 ಕೋಟಿ ರೂ. ಆಗಿತ್ತು. ಇದೀಗ ಅಮೆಜಾನ್‌ ಪ್ರೈಂನಲ್ಲಿ ಸಿನಿಮಾ ಸ್ಟ್ರೀಮಿಂಗ್‌ ಆಗುತ್ತಿದೆ. ಡಬ್ಬಿಂಗ್ ಆವೃತ್ತಿಗಳ ಕುರಿತು ಇನ್ನೂ ಯಾವುದೇ ಅಪಡೇಟ್‌ ಬಂದಿಲ್ಲ. ಫ್ರಂಟ್ ರೋ ಅವರ ಟ್ವೀಟ್ ಪ್ರಕಾರ, ಆವೇಶಂನ ಡಿಜಿಟಲ್ ಹಕ್ಕುಗಳು 35 ಕೋಟಿ ರೂಪಾಯಿಗಳಿಗೆ ಮಾರಾಟವಾಗಿವೆ. ಈ ಮೂಲಕ ದುಲ್ಕರ್ ಸಲ್ಮಾನ್ ಅವರ ʻಕಿಂಗ್ ಆಫ್ ಕೋಥಾʼದ ದಾಖಲೆಯನ್ನು ಮುರಿದಿದೆ ಎಂದು ವರದಿಯಾಗಿದೆ. ʻಕಿಂಗ್ ಆಫ್ ಕೋಥಾʼ 32 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಲಾಗಿತ್ತು.

ಜಿತು ಮಾಧವನ್ ನಿರ್ದೇಶನದ ಈ ಚಿತ್ರದಲ್ಲಿ ಆಶಿಶ್ ವಿದ್ಯಾರ್ಥಿ, ಮನ್ಸೂರ್ ಅಲಿ ಖಾನ್ ಮತ್ತು ಸಜಿನ್ ಗೋಪು ಕೂಡ ನಟಿಸಿದ್ದಾರೆ. ಮಲಯಾಳಂ ಸಿನಿಮಾದ ಪ್ರಮುಖ ಕಥೆ ಬೆಂಗಳೂರಿನಲ್ಲಿ ನಡೆಯುತ್ತದೆ. ಓದಲೆಂದು ಬೆಂಗಳೂರಿಗೆ ಬರುವ ಮೂವರು ಹುಡುಗರು ಅಲ್ಲಿ ಜಗಳದಲ್ಲಿ ಸಿಕ್ಕಿ ಬಿದ್ದು ಸ್ಥಳೀಯ ದರೋಡೆಕೋರನ ನೆರವಿನಿಂದ ಗೆಲುವು ಪಡೆಯಲು ಪ್ರಯತ್ನಿಸುವಂತಹ ಕಥೆ ಹೊಂದಿದೆ. ಆ ಸ್ಥಳೀಯ ದರೋಡೆಕೋರ ಬೇರಾರು ಅಲ್ಲ, ಫಹಾದ್‌ ಫಾಸಿಲ್‌.

ಸಂಪೂರ್ಣ ಬಿಳಿ ಉಡುಗೆಯಲ್ಲಿ, ಚಿನ್ನದ ಸರಗಳೊಂದಿಗೆ, ದಪ್ಪ ಮೀಸೆಯನ್ನು ಹೊಂದಿರುವ ಫಹಾದ್‌ ಪಾತ್ರ ಪ್ರೇಕ್ಷಕರಿಂದ ಸಾಕಷ್ಟು ಪ್ರೀತಿಯನ್ನು ಪಡೆದಿದೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಫಹಾದ್ ಅವರು ರಂಗಾ ಪಾತ್ರವನ್ನು ಏಕೆ ಆಯ್ಕೆ ಮಾಡಿಕೊಂಡೆ ಎಂಬುದರ ಕುರಿತು ಈ ಮುಂಚೆ ಹೇಳಿಕೊಂಡಿದ್ದರು. ʻʻನಾನು ಈ ಮೊದಲು ಅಂತಹ ಪಾತ್ರಗಳನ್ನು ಮಾಡಿಲ್ಲ. ಆದ್ದರಿಂದ ಈ ಕಥೆ ನನ್ನ ಬಳಿಗೆ ಬಂದಾಗ, ನಾನು ಹೌದು ಎಂದು ಹೇಳಿದೆ. ಈ ಹಿಂದೆ ನಾನು ಮಾಡಿದ್ದ ಪಾತ್ರಗಳಿಗಿಂತ ಭಿನ್ನವಾಗಿ ಇತ್ತು. ಅಲ್ಲದೆ, ನಾನು ಕನ್ನಡ ಮತ್ತು ಮಲಯಾಳಂ ಮಿಶ್ರಿತ ಭಾಷೆ ಮಾತನಾಡಬೇಕು ಎಂದು ಮನೋರಮಾ ಹೇಳಿದ್ದರುʼʼ ಎಂದರು. ಇವು 2024ರಲ್ಲಿ ಅತ್ಯಧಿಕ ಗಳಿಕೆ ಮಾಡಿದ ನಾಲ್ಕನೇ ಮಲಯಾಳ ಸಿನಿಮಾವೆಂಬ ಖ್ಯಾತಿಗೆ ಪಾತ್ರವಾಗಿತ್ತು.

ಇದನ್ನೂ ಓದಿ: Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

ಇನ್ನು ಫಹಾದ್‌ ಫಾಸಿಲ್‌ ಹಲವು ಬಹು ನಿರೀಕ್ಷಿತ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್ ಅವರ ಪ್ಯಾನ್‌ ಇಂಡಿಯಾ ಚಿತ್ರ ‌ʼಪುಷ್ಪ 2: ದಿ ರೂಲ್‌ʼ ಸಿನಿಮಾದ ಮುಖ್ಯ ಪಾತ್ರದಲ್ಲಿ ಫಹಾದ್‌ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ನಾಯಕಿಯಾಗಿರುವ ಈ ಚಿತ್ರದ ಮೊದಲ ಭಾಗ ಸೂಪರ್‌ ಹಿಟ್‌ ಆಗಿತ್ತು. ಅಲ್ಲದೆ ಅಲ್ಲು ಅರ್ಜುನ್‌ ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನೂ ತಂಡು ಕೊಟ್ಟಿತ್ತು. ಕಥೆಗೆ ಟ್ವಿಸ್ಟ್‌ ಕೊಡುವ ಪಾತ್ರದಲ್ಲಿ ಫಹಾದ್‌ ನಟಿಸಿದ್ದರು. ಎರಡನೇ ಭಾಗದಲ್ಲಿನ ಅವರ ಪಾತ್ರದ ಬಗ್ಗೆ ಕುತೂಹಲ ಮೂಡಿದೆ.

ಇದರ ಜತೆಗೆ ಹಲವು ವರ್ಷಗಳ ಬಳಿಕ ತೆರೆ ಮೇಲೆ ಒಂದಾಗುತ್ತಿರುವ ಸೂಪರ್‌ ಸ್ಟಾರ್‌ಗಳಾದ ರಜನಿಕಾಂತ್‌- ಅಮಿತಾಭ್‌ ಬಚ್ಚನ್‌ ಅವರ ʼವೆಟ್ಟೈಯನ್‌ʼ ಸಿನಿಮಾದಲ್ಲಿ ಫಹಾದ್‌ ಅಭಿನಯಿಸುತ್ತಿದ್ದಾರೆ. ಇದನ್ನು ಟಿ.ಜೆ.ಜ್ಞಾನವೇಲ್ ನಿರ್ದೇಶಿಸುತ್ತಿದ್ದಾರೆ. ರಾಣಾ ದಗ್ಗುಬಾಟಿ, ಮಂಜು ವಾರಿಯರ್‌, ರಿತಿಕಾ ಸಿಂಗ್‌, ದುಶಾರಾ ವಿಜಯನ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೆ ಫಾಹದ್‌ ಮಲಯಾಳಂನ ʼಆವೇಶಮ್‌ʼ, ʼಪಾಟ್ಟುʼ, ʼಹನುಮಾನ್‌ ಗೇರ್‌ʼ ಮತ್ತಿತರ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಟಾಲಿವುಡ್

Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

Rashmika Mandanna: ಈದ್ ದಿನವೇ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದರು ಸಲ್ಮಾನ್ ಖಾನ್ (Salman Khan).ಎಆರ್ ಮುರುಗದಾಸ್ (AR Murugadoss) ಜತೆ ಸಲ್ಮಾನ್ ಖಾನ್ ಕೈ ಜೋಡಿಸಿದ್ದು, ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದರು. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

VISTARANEWS.COM


on

Rashmika Mandanna Signed Salman Khan Sikandar
Koo

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಇದು ರಶ್ಮಿಕಾ ಅವರ ನಾಲ್ಕನೇ ಬಾಲಿವುಡ್ ಚಿತ್ರ. ಈ ಚಿತ್ರವನ್ನು ಎ.ಆರ್. ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ.

ಈ ಸುದ್ದಿಯನ್ನು ರಶ್ಮಿಕಾ ಮಂದಣ್ಣ ಮೇ.8ರಂದು ಇನ್‌ಸ್ಟಾ ಮೂಲಕ ಖಚಿತಪಡಿಸಿದ್ದಾರೆ. “ನೀವು ಬಹಳ ಸಮಯದಿಂದ ಮುಂದಿನ ಅಪ್‌ಡೇಟ್‌ ಬಗ್ಗೆ ನನ್ನನ್ನು ಕೇಳುತ್ತಿದ್ದೀರಿ. ಇದೀಗ ನಿಮ್ಮ ಮುಂದೆ. ʻಸಿಕಂದರ್‌ ಸಿನಿಮಾ ಭಾಗವಾಗಿರುವುದಕ್ಕೆ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ ಮತ್ತು ಗೌರವಿಸುತ್ತೇನೆʼʼಎಂದು ಇನ್‌ಸ್ಟಾದಲ್ಲಿ ಬರೆದುಕೊಂಡಿದ್ದಾರೆ ರಶ್ಮಿಕಾ. ಚಿತ್ರದಲ್ಲಿ ರಶ್ಮಿಕಾ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ವರದಿಯಾಗಿದೆ.

ಈದ್ ದಿನವೇ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದರು ಸಲ್ಮಾನ್ ಖಾನ್ (Salman Khan).ಎಆರ್ ಮುರುಗದಾಸ್ (AR Murugadoss) ಜತೆ ಸಲ್ಮಾನ್ ಖಾನ್ ಕೈ ಜೋಡಿಸಿದ್ದು, ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದರು. ಮಾರ್ಚ್ 12ರಂದು, ಸಲ್ಮಾನ್ ಖಾನ್ ತಮ್ಮ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಲ್ಲಿ ಸಿನಿಮಾ ಬಗ್ಗೆ ಹಂಚಿಕೊಂಡಿದ್ದರು. ಪ್ರತಿಭಾವಂತರಾದ ಎಆರ್ ಮುರುಗದಾಸ್ ನನ್ನ ಸ್ನೇಹಿತ, ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವಾಗಿದೆ. ಈ ಸಹಯೋಗ ವಿಶೇಷವಾಗಿದೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದ ನಮ್ಮ ಮೇಲೆ ಇರಲಿʼʼಎಂದು ಬರೆದುಕೊಂಡಿದ್ದರು.

ಇದನ್ನೂ ಓದಿ: Rashmika Mandanna: ನ್ಯಾಶನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ತಂಗಿ ಈಗ ಹೇಗಿದ್ದಾರೆ?

ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು.

ಸೊನಾಕ್ಷಿ ಸಿನ್ಹಾ ನಟನೆಯ ‘ಅಕಿರಾ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಮುರುಗದಾಸ್ ನಿರ್ದೇಶನದಲ್ಲಿ ಮೂಡಿ ಬಂದಿದ್ದ ‘ಸ್ಟಾಲಿನ್’ ಚಿತ್ರವನ್ನು ಹಿಂದಿಯಲ್ಲಿ ‘ಜೈ ಹೋ’ ಹೆಸರಲ್ಲಿ ರೀಮೇಕ್ ಮಾಡಲಾಗಿತ್ತು.

ʻಸಿಖಂದರ್’ ಸಿನಿಮಾ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿರಲಿದೆ. 400 ಕೋಟಿ ರೂಪಾಯಿ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ ಎಂದು ವರದಿಯಾಗಿದೆ. ಸಲ್ಮಾನ್ ಖಾನ್ ಕೊನೆಯದಾಗಿ ‘ಟೈಗರ್ 3’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

ರಶ್ಮಿಕಾ ಮುಂದೆ ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ಫಹಾದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

Continue Reading

ಮಾಲಿವುಡ್

Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan dies ಸಂಗೀತ್ ಶಿವನ್ ಮೂಲತಃ ಕೇರಳದ ತಿರುವನಂತಪುರಂನವರು. 1989 ರಲ್ಲಿ ಆಮೀರ್ ಖಾನ್-ನ ಅಭಿನಯದ ರಾಖ್‌ಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟರು. 1990ರಲ್ಲಿ ಮಲಯಾಳಂನ ‘ವ್ಯೂಹಂ’ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಹೊಸ ಅಧ್ಯಾಯ ಆರಂಭಿಸಿದರು.

VISTARANEWS.COM


on

Sangeeth Sivan dies Riteish Deshmukh Tusshar Kapoor pay tribute
Koo

ಬೆಂಗಳೂರು: ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ (Sangeeth Sivan dies) ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಂಗೀತ್ ಶಿವನ್ ಅವರಿಗೆ 61 ವರ್ಷ ವಯಸ್ಸಾಗಿತ್ತು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಸಂಗೀತ್ ಶಿವನ್ ಮೂಲತಃ ಕೇರಳದ ತಿರುವನಂತಪುರಂನವರು. 1989 ರಲ್ಲಿ ಆಮೀರ್ ಖಾನ್ ಅಭಿನಯದ ರಾಖ್‌ಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟರು. 1990ರಲ್ಲಿ ಮಲಯಾಳಂನ ‘ವ್ಯೂಹಂ’ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಹೊಸ ಅಧ್ಯಾಯ ಆರಂಭಿಸಿದರು. ಮೋಹನ್​ಲಾಲ್​ ನಟನೆಯ ‘ಯೋಧ’ ಸಿನಿಮಾಗೆ ನಿರ್ದೇಶನ ಮಾಡಿ ಅವರು ಗುರುತಿಸಿಕೊಂಡರು.

ʻಜೋರ್ʼ, ʻಕ್ಯಾ ಕೂಲ್ ಹೈ ಹಮ್ʼ, ʻಅಪ್ನಾ ಸಪ್ನಾ ಮನಿ ಮನಿʼ ಮತ್ತು ʻಯಮ್ಲಾ ಪಗ್ಲಾ ದೀವಾನಾ 2ʼ ಮುಂತಾದ ಹಿಂದಿ ಚಲನಚಿತ್ರಗಳನ್ನು ಸಹ ನಿರ್ದೇಶಿಸಿದ್ದಾರೆ. ಮಲಯಾಳಂನ ‘ರೋಮಾಂಚಂ’ ಸಿನಿಮಾವನ್ನು ಹಿಂದಿಯಲ್ಲಿ ರಿಮೇಕ್​ ಮಾಡಲು ಅವರು ಮುಂದಾಗಿದ್ದರು. ಆ ಕೆಲಸ ಪೂರ್ಣಗೊಳ್ಳುವುದಕ್ಕೂ ಮೊದಲೇ ಅವರು ನಿಧನರಾಗಿರಾಗಿದ್ದಾರೆ.

ರಿತೇಶ್ ದೇಶ್‌ಮುಖ್ ಅವರು ಎಕ್ಸ್‌ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. “ಸಂಗೀತ್ ಶಿವನ್ ಸರ್ ಇನ್ನಿಲ್ಲ ಎಂದು ಗೊತ್ತಾದಾಗ ತೀವ್ರ ದುಃಖ ಮತ್ತು ಆಘಾತವಾಯಿತು.ಮೃದು ಮಾತು, ಸೌಮ್ಯ ಮತ್ತು ಅದ್ಭುತ ಮನುಷ್ಯ.ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ, ಪತ್ನಿ, ಮಕ್ಕಳು, ಸಹೋದರರಿಗೆ ನನ್ನ ಸಂತಾಪʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Do You Know: ನಿಮಗಿದು ಗೊತ್ತಾ? ಲವ್‌ ಮಾಡುತ್ತಿದ್ದರೆ ತೂಕ ಜಾಸ್ತಿಯಾಗುತ್ತದೆ!

ಸುನೀಲ್​ ಶೆಟ್ಟಿ, ರಿತೇಶ್​ ದೇಶಮುಖ್​, ಜಾಕಿ ಶ್ರಾಫ್​, ಸೆಲಿನಾ ಜೇಟ್ಲಿ, ಚಂಕಿ ಪಾಂಡೆ, ರಾಜ್​ಪಾಲ್​ ಯಾದವ್​, ತುಷಾರ್​ ಕಪೂರ್​, ಇಶಾ ಕೊಪ್ಪಿಕರ್​, ನೇಹಾ ದೂಪಿಯಾ, ಅನುಪಮ್​ ಖೇರ್​ ಮುಂತಾದ ಸೆಲೆಬ್ರಿಟಿಗಳ ಜೊತೆ ಸಂಗೀತ್​ ಶಿವನ್​ ಕೆಲಸ ಮಾಡಿದ್ದರು.

Continue Reading

ಸ್ಯಾಂಡಲ್ ವುಡ್

Actor Ravichandran: ಕನಸುಗಾರನ ʻಪ್ರೇಮಲೋಕ 2’ ಚಿತ್ರಕ್ಕೆ ನಾಯಕಿ ಫಿಕ್ಸ್‌!

Actor Ravichandran: 1987ರಲ್ಲಿ ರಿಲೀಸ್ ಆದ ‘ಪ್ರೇಮಲೋಕ’ ಸಿನಿಮಾ ರವಿಚಂದ್ರನ್ ಅವರೇ ನಿರ್ಮಾಣ ಮಾಡಿ, ನಟಿಸಿ, ನಿರ್ದೇಶನ ಮಾಡಿದ್ದರು. ಅಂದಿನ ಕಾಲಕ್ಕೆ ಈ ಸಿನಿಮಾ ಬರೋಬ್ಬರಿ 11 ಹಾಡುಗಳನ್ನು ಹೊಂದಿತ್ತು. ಈ ಕಾರಣಗಳಿಂದಾಗಿ ಯಾರೋಬ್ಬ ನಿರ್ಮಾಪಕರು ಮುಂದೆ ಬರಲೇ ಇಲ್ಲ. ಹೀಗಾಗಿ ರವಿಚಂದ್ರನ್‌ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಈ ವೇಳೆ ಬೆಂಬಲಕ್ಕೆ ನಿಂತಿದ್ದು ರವಿಚಂದ್ರನ್ ತಂದೆ ವೀರಸ್ವಾಮಿ. ಇದಾದ ಬಳಿಕ ಸಿನಿಮಾ ಗೆಲುವು ಕಂಡಿತ್ತು.

VISTARANEWS.COM


on

Actor Ravichandran female lead in ravichandrans premaloka 2
Koo

ಬೆಂಗಳೂರು: ಹಂಪಿ ಉತ್ಸವದ ಸಮಯದಲ್ಲಿ ಕ್ರೇಜಿ ಸ್ಟಾರ್‌ ರವಿಚಂದ್ರನ್‌ (Actor Ravichandran) ಅವರು ಒಂದು ವರ್ಷದಿಂದ ಪ್ರೇಮಲೋಕ ಸಿನಿಮಾಗೆ ತಯಾರಿ ನಡೆಸುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ಮೂಲಕ ‘ಪ್ರೇಮಲೋಕ 2’ ಶೀಘ್ರದಲ್ಲಿಯೇ ಅನೌನ್ಸ್ ಆಗಲಿದೆ ಎಂಬ ಸುಳಿವು ನೀಡಿದ್ದರು. ಶೀಘ್ರದಲ್ಲೇ ಆ ಸಿನಿಮಾ ಸೆಟ್ಟೇರಲಿದೆ. ಪುತ್ರ ಮನೋರಂಜನ್ ಹೀರೊ ಆಗಿ ನಟಿಸಲಿದ್ದಾರೆ. ಸದ್ಯ ರವಿಚಂದ್ರನ್ ‘ಪ್ರೇಮಲೋಕ’-2 ಚಿತ್ರದ ಕಥೆ, ಚಿತ್ರಕಥೆ ಸಿದ್ಧಪಡಿಸುತ್ತಿದ್ದಾರೆ.

‘ಪ್ರೇಮಲೋಕ’ ಚಿತ್ರಕ್ಕಾಗಿ ಜ್ಯೂಹಿ ಚಾವ್ಲಾ ಕನ್ನಡಕ್ಕೆ ಬಂದಿದ್ದರು. ಆದರೆ ಈ ಬಾರಿ ಮನೋರಂಜನ್ ಜತೆ ಚೆನ್ನೈ ಚೆಲುವೆ ತೇಜು ಅಶ್ವಿನಿ ರೊಮ್ಯಾನ್ಸ್ ಮಾಡುತ್ತಾರೆ ಎನ್ನುವ ಗುಸುಗುಸು ಶುರುವಾಗಿದೆ. ಮೇ 30 ರವಿಚಂದ್ರನ್ ಅವರ ಬರ್ತ್​ಡೇ. ಅಂದು ‘ಪ್ರೇಮಲೋಕ 2’ ಚಿತ್ರ ಲಾಂಚ್ ಆಗಲಿದೆ. ರವಿಚಂದ್ರನ್ ಅವರ ಪಾತ್ರ ಯಾವ ರೀತಿಯಲ್ಲಿ ಇರಲಿದೆ ಅನ್ನೋ ಕುತೂಹಲ ಮೂಡಿದೆ. ಈ ಚಿತ್ರದಲ್ಲಿ 20-25 ಸಾಂಗ್​ಗಳು ಇರಲಿವೆ ಎಂದು ತಂಡ ಹೇಳಿಕೊಂಡಿದೆ.

1987ರಲ್ಲಿ ರಿಲೀಸ್ ಆದ ‘ಪ್ರೇಮಲೋಕ’ ಸಿನಿಮಾ ರವಿಚಂದ್ರನ್ ಅವರೇ ನಿರ್ಮಾಣ ಮಾಡಿ, ನಟಿಸಿ, ನಿರ್ದೇಶನ ಮಾಡಿದ್ದರು. ಅಂದಿನ ಕಾಲಕ್ಕೆ ಈ ಸಿನಿಮಾ ಬರೋಬ್ಬರಿ 11 ಹಾಡುಗಳನ್ನು ಹೊಂದಿತ್ತು. ಈ ಕಾರಣಗಳಿಂದಾಗಿ ಯಾರೋಬ್ಬ ನಿರ್ಮಾಪಕರು ಮುಂದೆ ಬರಲೇ ಇಲ್ಲ. ಹೀಗಾಗಿ ರವಿಚಂದ್ರನ್‌ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಈ ವೇಳೆ ಬೆಂಬಲಕ್ಕೆ ನಿಂತಿದ್ದು ರವಿಚಂದ್ರನ್ ತಂದೆ ವೀರಸ್ವಾಮಿ. ಇದಾದ ಬಳಿಕ ಸಿನಿಮಾ ಗೆಲುವು ಕಂಡಿತ್ತು.

ಇದನ್ನೂ ಓದಿ: Pepper Spray: ಪೆಪ್ಪರ್‌ ಸ್ಪ್ರೇ ಬಹಳ ಡೇಂಜರ್‌..ಅದನ್ನು ರಕ್ಷಣೆಗೆ ಬಳಸುವಂತಿಲ್ಲ- ಹೈಕೋರ್ಟ್‌

ಈ ಮುಂಚೆ ರವಿಚಂದ್ರನ್‌ ಅವರು ʻʻದೊಡ್ಡ ಮಗ ಮನೋರಂಜನ್ ನಟಿಸುತ್ತಾನೆ. ಚಿಕ್ಕ ಮಗ ಚಿಕ್ಕ ಪಾತ್ರ ಮಾಡುತ್ತಾನೆ. ನಾನು ತಂದೆಯ ಪಾತ್ರ ಮಾಡುತ್ತೇನೆ. 20-25 ಹಾಡುಗಳು ಇರುತ್ತವೆ. ಎಲ್ಲಾ ವಯಸ್ಸಿನವರಿಗೂ ಸಿನಿಮಾ ಇಷ್ಟ ಆಗುತ್ತದೆ. ಇಲ್ಲಿ ಜಾತಿ, ರಾಜಕೀಯದ ವಿಚಾರ ಇರಲ್ಲ. ಕೇವಲ ಪ್ರೀತಿ ವಿಚಾರ ಇರಲಿದೆ. ಪ್ರತಿಯೊಬ್ಬರಿಗೂ ಸಿನಿಮಾದಲ್ಲಿ ನಟಿಸುವ ಅವಕಾಶ ಇದೆ. ಸಿನಿಮಾದಲ್ಲಿ ಯಾರೆಲ್ಲ ನಟಿಸಬೇಕು ಎಂದಿದ್ದೀರೋ ಇನ್​ಸ್ಟಾಗ್ರಾಮ್‌ ಅಕೌಂಟ್​ಗೆ ಫ್ಯಾಮಿಲಿ ಫೋಟೊ ಹಾಕ್ಕೊಂಡು ಬನ್ನಿʼಎಂದಿದ್ದರು.

Continue Reading
Advertisement
IPL 2024
ಪ್ರಮುಖ ಸುದ್ದಿ1 hour ago

IPL 2024 : ಆರ್​ಸಿಬಿಗೆ ಐದನೇ ವಿಜಯ, ಪಂಜಾಬ್​ ವಿರುದ್ಧ 60 ರನ್ ಭರ್ಜರಿ ಗೆಲುವು

Padma Awards 2024
ಪ್ರಮುಖ ಸುದ್ದಿ2 hours ago

Padma Awards 2024 : ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ

Prajwal Revanna Case
ಪ್ರಮುಖ ಸುದ್ದಿ2 hours ago

Prajwal Revanna Case : ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧ ಲೈಂಗಿಕ ಕಿರುಕುಳ ಕೇಸ್​ ದಾಖಲು

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

T20 World Cup 2024
ಪ್ರಮುಖ ಸುದ್ದಿ3 hours ago

T20 World Cup : ವಿಶ್ವ ಕಪ್​ಗೆ ತಂಡ ಪ್ರಕಟಿಸಿದ ಶ್ರೀಲಂಕಾ, ಸಿಎಸ್​​ಕೆ ಆಟಗಾರನಿಗೂ ಚಾನ್ಸ್​​

ಉತ್ತರ ಕನ್ನಡ3 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾರ್ವಭೌಮ ಗುರುಕುಲಕ್ಕೆ ಶೇ.100 ಫಲಿತಾಂಶ

Yallapur Vishwadarshana Group of institutions performed well in SSLC Result 2024
ಉತ್ತರ ಕನ್ನಡ4 hours ago

SSLC Result 2024: ಯಲ್ಲಾಪುರದ ವಿಶ್ವದರ್ಶನ ಶಿಕ್ಷಣ ಸಮೂಹ ಪ್ರೌಢಶಾಲೆಗಳ ಉತ್ತಮ ಸಾಧನೆ

women's Cricket team
ಕ್ರೀಡೆ4 hours ago

Womens Cricket Team : ಬಾಂಗ್ಲಾ ವಿರುದ್ಧ 5-0 ಕ್ಲೀನ್​ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರು

Mother passed SSLC exam with her son in Hassan
ಕರ್ನಾಟಕ4 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮಗನ ಜತೆ ತಾಯಿಯೂ ಪಾಸ್!

Failed in SSLC Exam Student suicide in mandya
ಮಂಡ್ಯ4 hours ago

SSLC Result 2024: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌; ನೇಣಿಗೆ ಶರಣಾದ ವಿದ್ಯಾರ್ಥಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ4 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ5 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ11 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ12 hours ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ12 hours ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು12 hours ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ13 hours ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

SSLC Exam Result 2024 Announce
ಬೆಂಗಳೂರು14 hours ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

ಟ್ರೆಂಡಿಂಗ್‌