Site icon Vistara News

Kannada New Movie: ಸೆಟ್ಟೇರಿತು ’ಕೃಷ್ಣಾ ನೀ ಬೇಗನೆ ಬಾರೋ’ ಸಿನಿಮಾ!

krishna nee begane baro Movie on set

ಬೆಂಗಳೂರು: 80ರ ದಶಕದಲ್ಲಿ ಡಾ. ವಿಷ್ಣುವರ್ಧನ್ ಅಭಿನಯದ (Kannada New Movie) ’ಕೃಷ್ಣಾ ನೀ ಬೇಗನೆ ಬಾರೋ’ ಚಿತ್ರವು ಬಿಡುಗಡೆಗೊಂಡು ಸೂಪರ್‌ಹಿಟ್ ಆಗಿತ್ತು. ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸೆಟ್ಟೇರಿದೆ. ಪ್ರೇಮಿಗಳ ದಿನದಂದು ಬಲಮುರಿ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಮುಹೂರ್ತ ನಡೆಯಿತು. ನಟರಾದ ಅನೀಶ್‌ ತೇಜಶ್ವರ್ ಮತ್ತು ಇಶಾನ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ನಿರ್ಮಾಪಕರ ಸೋದರ ಹೈದರಾಬಾದ್ ಉದ್ಯಮಿ ಶ್ರೀನಿಬಾಬು ಪುಲ್ಲೆಟ್ ಕ್ಯಾಮೆರಾ ಆನ್ ಮಾಡಿದರು. ದುಬೈನ ಎಸ್. ನೀಲಕಂಠ ಮತ್ತು ಚಲಪತಿರಾಜು ಜಂಟಿಯಾಗಿ ನೀಲಕಂಠ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ ಹೂಡುತ್ತಿದ್ದಾರೆ. ಟಾಲಿವುಡ್‌ನ ಜಿ. ಸೂರ್ಯತೇಜ ನಿರ್ದೇಶಕರಾಗಿ ಚಂದನವನಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

ಕಥೆಗೆ ಪೂರಕವಾಗುವಂತೆ, ಇದೇ ಶೀರ್ಷಿಕೆ ಇಡಲಾಗಿದೆ. ಪ್ರತಿ ಪಾತ್ರಕ್ಕೂ ಪ್ರಾಮುಖ್ಯತೆ ನೀಡಲಾಗಿದ್ದು, ಒಂದೊಂದು ಉಪಕಥೆಯು ಆಯಾ ಊರಿನಲ್ಲಿ ನಡೆಯಲಿದೆ. ಕೃಷ್ಣನಿಗೆ ಗೋಪಿಕಾ ಸ್ತ್ರೀಯರು ಇರುತ್ತಾರೆ. ಆದರೆ ನಮ್ಮ ಸಿನಿಮಾದ ಕೃಷ್ಣನಿಗೆ ಯಾವುದೇ ಹುಡುಗೀರು ಇರುವುದಿಲ್ಲ. ಕೃಷ್ಣ ಎನ್ನುವ ಹೆಸರಿಗೆ ಅರ್ಥವಿಲ್ಲದಂತೆ ಇರುತ್ತಾನೆ. ಹೀಗಿರುವಾಗ ನಾಲ್ಕು ಹುಡುಗೀರು ಹೇಗೆ ಕನೆಕ್ಟ್ ಆಗುತ್ತಾರೆ. ಅವರಿಗೂ ಇವನಿಗೂ ಏನು ಸಂಬಂಧ? ಮುಂದೆ ಹೀಗೆ ಇರುತ್ತಾನಾ? ಅಥವಾ ಬದಲಾವಣೆಗೊಳ್ಳುತ್ತಾನಾ ಎಂಬುದನ್ನು ಹಾಸ್ಯದ ಮೂಲಕ ತೋರಿಸಲಾಗುತ್ತಿದೆ. ಬೆಂಗಳೂರು, ಗೋವಾ, ಕೇರಳ ಹಾಗೂ ಹಾಡಿಗಾಗಿ ವಿದೇಶಕ್ಕೆ ಹೋಗುವ ಇರಾದೆ ಇದೆ. ಕನ್ನಡ,ತೆಲುಗು,ತಮಿಳು ಮತ್ತು ಭೋಜಪುರಿ ಭಾಷೆಗಳಲ್ಲಿ ಸಿದ್ದಗೊಳ್ಳಲಿದೆ. ಭೋಜಪುರಿಯಲ್ಲಿ ಕೃಷ್ಣನ ಭಕ್ತರು ಹೆಚ್ದಿಗೆ ಇರುವುದರಿಂದ ಅಲ್ಲಿನ ಭಾಷೆಗೆ ಡಬ್ ಮಾಡಲಾಗುತ್ತಿದೆ.

ಇದನ್ನೂ ಓದಿ: Kannada New Movie: ಡಿ.ಸತ್ಯಪ್ರಕಾಶ್ ನಿರ್ದೇಶನದ “X&Y” ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ

ಭಾರ್ಗವ್.ಬಿವಿ.ಗೆ ನಾಯಕನಾಗಿ ಏಳನೇ ಚಿತ್ರವಂತೆ. ಬಾಂಬೆ ಮೂಲದ ಊರ್ವಶಿ ಪರದೇಶಿ, ಚೈತ್ರಾ, ಪ್ರಿಯಾಂಕ, ಆಶುರೆಡ್ಡಿ ನಾಯಕಿಯರು. ಉಳಿದಂತೆ ತಾರಾ, ಅಚ್ಯುತಕುಮಾರ್, ಬಲರಾಜವಾಡಿ, ಕಬೀರ್‌ದುಹಾನ್‌ಸಿಂಗ್, ಅಜಯ್‌ರತ್ನಂ ಮುಂತಾದವರು ನಟಿಸುತ್ತಿದ್ದಾರೆ. ನಾಲ್ಕು ಹಾಡುಗಳಿಗೆ ರಾಗ ಒದಗಿಸಲು ಸಂಗೀತ ಸಂಯೋಜಕರ ಆಯ್ಕೆ ಸದ್ಯದಲ್ಲೆ ಮುಗಿಯಲಿದೆ. ಛಾಯಾಗ್ರಹಣ ಆರ್ಯ ಅವರದಾಗಿದೆ.

Exit mobile version