Child Artists : ಸೀರಿಯಲ್‌, ರಿಯಾಲಿಟಿ ಶೋದಲ್ಲಿ ಮಕ್ಕಳ ಅಭಿನಯ; ಡಿಸಿ ಅನುಮತಿ ಸಹಿತ ಹಲವು ಕಂಡಿಷನ್ಸ್‌ - Vistara News

ಸಿನಿಮಾ

Child Artists : ಸೀರಿಯಲ್‌, ರಿಯಾಲಿಟಿ ಶೋದಲ್ಲಿ ಮಕ್ಕಳ ಅಭಿನಯ; ಡಿಸಿ ಅನುಮತಿ ಸಹಿತ ಹಲವು ಕಂಡಿಷನ್ಸ್‌

Child artists: ಮನರಂಜನಾ ಕ್ಷೇತ್ರದಲ್ಲಿ ಮಕ್ಕಳನ್ನು ಬಳಕೆ ಮಾಡುವ ವಿಚಾರದಲ್ಲಿ ಕಾರ್ಮಿಕ ಇಲಾಖೆ ಕೆಲವೊಂದು ಷರತ್ತುಗಳನ್ನು ವಿಧಿಸಿದೆ. ಶೂಟಿಂಗ್ ನಲ್ಲಿ 5 ಗಂಟೆಗಿಂತ ಹೆಚ್ಚು ಅವಧಿ ಮಕ್ಕಳನ್ನು ಬಳಸುವಂತಿಲ್ಲ. ಶಿಕ್ಷಣಕ್ಕೆ ತೊಂದರೆಯಾಗದಂತೆ ಮಕ್ಕಳನ್ನು ನಿರಂತರವಾಗಿ 27 ದಿನಕ್ಕಿಂತ ಹೆಚ್ಚು ದಿನಗಳನ್ನು ಈ ಕೆಲಸಗಳಲ್ಲಿ ತೊಡಗಿಸಬಾರದು ಎಂದು ಸೂಚಿಸಲಾಗಿದೆ.

VISTARANEWS.COM


on

Child Artists labour rules
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿನಿಮಾ, ಸೀರಿಯಲ್‌, ರಿಯಾಲಿಟಿ ಶೋ ಸೇರಿದಂತೆ ಮನರಂಜನಾ ಕ್ಷೇತ್ರದಲ್ಲಿ ಮಕ್ಕಳ ಪಾಲ್ಗೊಳ್ಳುವಿಕೆ (Child Artists) ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತು ಇದರ ಮೂಲಕ ಮಕ್ಕಳು ಮತ್ತು ಪೋಷಕರು ಆದಾಯವನ್ನೂ ಗಳಿಸುತ್ತಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರದಲ್ಲಿ ಮಕ್ಕಳ ಬಳಕೆಗೆ ಕೆಲವೊಂದು ಷರತ್ತುಗಳನ್ನು ಕಾರ್ಮಿಕ ಇಲಾಖೆ (Labour Department) ವಿಧಿಸಲು ಮುಂದಾಗಿದೆ. 14 ವರ್ಷಕ್ಕಿಂತ ಕೆಳ ವಯಸ್ಸಿನ ಮಕ್ಕಳನ್ನು ಅಪಾಯಕಾರಿ ಸೇರಿದಂತೆ ಯಾವುದೇ ಉದ್ಯೋಗದಲ್ಲಿ ಬಳಸಬಾರದು ಎಂಬ ಬಾಲ ಕಾರ್ಮಿಕ ವಿರೋಧಿ ನಿಯಮಗಳನ್ನು (Child labour rules) ಮನರಂಜನಾ ಕ್ಷೇತ್ರಕ್ಕೂ (Entertainment field) ಅನ್ವಯವಾಗಿಸಲು ಸಿದ್ಧತೆ ನಡೆದಿದೆ. ಇದರ ನಿಯಮಗಳಲ್ಲಿ ಅತ್ಯಂತ ಪ್ರಮುಖವಾದುದು ಎಂದರೆ ಮನರಂಜನಾ ಕ್ಷೇತ್ರದಲ್ಲಿ ಮಕ್ಕಳು ನಟಿಸುವ ಮುನ್ನ ಜಿಲ್ಲಾಧಿಕಾರಿಯಿಂದ ಅನುಮತಿ ಪಡೆಯಬೇಕು ಮತ್ತು ಈ ರೀತಿಯ ನಟನೆಗೆ ಸಮಯದ ಮಿತಿ ವಿಧಿಸಬೇಕು ಹಾಗೂ ನಟನೆಯಿಂದ ಗಳಿಸಿದ ಹಣದಲ್ಲಿ ಒಂದಂಶವನ್ನು ಅವರ ಹೆಸರಿನಲ್ಲೇ ಠೇವಣಿಯಾಗಿ ಇಡಬೇಕು ಎನ್ನುವುದು.

ಮಕ್ಕಳ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಾಯೋಜಕರು ದಂಡಾಧಿಕಾರಿಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಶೂಟಿಂಗ್ ನಲ್ಲಿ 5 ಗಂಟೆಗಿಂತ ಹೆಚ್ಚು ಅವಧಿ ಮಕ್ಕಳನ್ನು ಬಳಸುವಂತಿಲ್ಲ. ಶಿಕ್ಷಣಕ್ಕೆ ತೊಂದರೆಯಾಗದಂತೆ ನಿರಂತರವಾಗಿ 27 ದಿನಕ್ಕಿಂತ ಹೆಚ್ಚು ದಿನಗಳನ್ನು ಈ ಕೆಲಸಗಳಲ್ಲಿ ತೊಡಗಿಸಬಾರದು ಎನ್ನುವುದು ಪ್ರಮುಖ ಸೂಚನೆಗಳಾಗಿವೆ.

ಸದ್ಯ ಈ ಸುತ್ತೋಲೆ ಚಲನಚಿತ್ರ ವಾಣಿಜ್ಯ ಮಂಡಳಿ, ಚಲನಚಿತ್ರ ಅಕಾಡೆಮಿ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿಗೂ ತಲುಪಿದೆ. ಮುಂದಿನ ದಿನಗಳಲ್ಲಿ ನಿಯಮಾವಳಿ ಹೇಗೆಲ್ಲ ಬಾಲ ಕಾರ್ಮಿಕರ ಅಭಿನಯಕ್ಕೆ ಅನ್ವಯ ಆಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಹಾಗಿದ್ದರೆ ಸುತ್ತೋಲೆಯಲ್ಲಿ ಏನೆಲ್ಲ ಅಂಶಗಳನ್ನು ತಿಳಿಸಲಾಗಿದೆ.?

ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ಕರ್ನಾಟಕ ನಿಯಮಗಳನ್ವಯ ಮಕ್ಕಳು ಬಾಲ ನಟ/ನಟಿಯಾಗಿ ನಟನಾ ಕೆಲಸ ಮಾಡಲು ಇರುವ ಕಾನೂನಾತ್ಮಕ ಅಂಶಗಳು ಹಾಗೂ ಅನುಷ್ಠಾನ ಮಾಡುವ ಕುರಿತ ಸುತ್ತೋಲೆ ಇದಾಗಿದೆ. ಇದರ ಪ್ರಕಾರ, ಈಗಿರುವ ಕಾಯಿದೆ ಪ್ರಕಾರ ನಟನಾ ಕ್ಷೇತ್ರದಲ್ಲಿ ಮಕ್ಕಳು ತೊಡಗಿಸಿಕೊಳ್ಳಬಹುದು. ಆದರೆ, ಅದಕ್ಕೂ ಕೆಲವೊಂದು ನಿಯಮಗಳಿವೆ ಎಂದು ತಿಳಿಸಲಾಗಿದೆ.

ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ತಿದ್ದುಪಡಿ ಕಾಯ್ದೆ,2016 ರನ್ವಯ ಮಕ್ಕಳ ಶಿಕ್ಷಣದ ಹಕ್ಕಿಗೆ ಮಾರಕವಾಗದಂತೆ ಬಾಲ ನಟ/ನಟಿಯಾಗಿ ನಟನಾ ಕೆಲಸ ನಿರ್ವಹಿಸುವ ಚಟುವಟಿಕೆಗಳನ್ನು ಹೊರತುಪಡಿಸಿ, ಕಾಯ್ದೆಯು ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ ಹಾಗೂ ಕಾಯ್ದೆಯು 14- 18ರ ವಯಸ್ಸಿನ ಕಿಶೋರ ಕಾರ್ಮಿಕರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕಿಶೋರಾವಸ್ಥೆಯ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಂಡಲ್ಲಿ ಅಂತಹ ಮೊದಲ ಅಪರಾಧಕ್ಕೆ ತಪ್ಪಿತಸ್ಥ ಮಾಲಿಕರಿಗೆ 6 ತಿಂಗಳಿನಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ, ರೂ.20,000/- ರಿಂದ ರೂ.50.000/- ರವರೆಗೆ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿರುತ್ತದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿರುತ್ತದೆ ಎಂದು ಸುತ್ತೋಲೆಯಲ್ಲಿ ನೆನಪಿಸಲಾಗಿದೆ.

ಇದನ್ನೂ ಓದಿ : Jio Cinema : ಜಿಯೋಸಿನಿಮಾದ ‘ಜೀತೋ ಧನ್ ಧನಾ ಧನ್‌’ ಸ್ಪರ್ಧೆಗೆ ಟಿವಿಎಸ್​ ಯೂರೋಗ್ರಿಪ್​ ಪ್ರಾಯೋಜಕತ್ವ

ಹಾಗಿದ್ದರೆ ಬಾಲ ಕಲಾವಿದರಿಗೆ ಅನ್ವಯವಾಗುವ ನಿಯಮಗಳೇನು?

ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986ರ ಕರ್ನಾಟಕ ನಿಯಮಗಳು ‘2ಸಿ’ ರಲ್ಲಿ ಒಬ್ಬ ಕಲಾವಿದನಾಗಿ ಕೆಲಸ ಮಾಡಬೇಕಾದ ಮಗು(1) ಕಲಂ 3ರ ತಡೆಗಳನ್ವಯ ಕೆಳಗಿನ ಪರಿಸ್ಥಿತಿಗಳಿಗೆ ನಿಯಮಗಳಿಗೆ ಒಳಪಟ್ಟಂತೆ ಮಗು ಕಲಾವಿದನಾಗಿ ಕೆಲಸ ಮಾಡಬಹುದು ಎಂದು ಹೇಳಿದೆ.

  1. ಮಕ್ಕಳನ್ನು ಬಳಸಿ ಚಿತ್ರ ನಿರ್ಮಾಣ ಮಾಡುವ ಸಂದರ್ಭದಲ್ಲಿ ಅವರ ನಿರ್ಲಕ್ಷ್ಯ ಅಥವಾ ಶೋಷಣೆ ನಡೆಯದಂತೆ ಕ್ರಮ ಕೈಗೊಂಡಿರಬೇಕು. ಇಲ್ಲವಾದಲ್ಲಿ ಚಲನಚಿತ್ರಗಳ ಅಥವಾ ದೂರದರ್ಶನದ ಪ್ರದರ್ಶನದ ಹಕ್ಕು ನಿರಾಕರಣೆಯ ಅವಕಾಶಗಳಿಗೆ
    ಒಳಪಟ್ಟಿದೆ ಎಂಬುದನ್ನು ನಿರ್ಮಾಪಕರಿಗೆ ಖಚಿತಪಡಿಸುವುದು.
  2. ಮಗುವಿನ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಲು ಖಾತ್ರಿಪಡಿಸುವುದು.
  3. ಮಗುವಿಗೆ ಸಕಾಲಿಕ ಪೌಷ್ಠಿಕ ಆಹಾರ ಒದಗಿಸುವುದು.
  4. ದೈನಂದಿನ ಅಗತ್ಯಗಳಿಗೆ ಸಾಕಾಗುವಷ್ಟು ಸಾಮಾಗ್ರಿಗಳು, ಸ್ವಚ್ಚ ಮತ್ತು ಸುರಕ್ಷಿತವಾ ಆಶ್ರಯ ಒದಗಿಸುವುದು.
  5. ಶಿಕ್ಷಣದ ಹಕ್ಕು ಸಂರಕ್ಷಣೆ, ಲೈಂಗಿಕ ಅಪರಾಧಗಳಿಂದ ರಕ್ಷಣೆ ಒಳಗೊಂಡಂತೆ ಮಕ್ಕಳ ರಕ್ಷಣೆ ಕುರಿತಾಗಿ ಕಾಲ ಕಾಲಕ್ಕೆ ಜಾರಿಯಲ್ಲಿರುವ ಎಲ್ಲಾ ಕಾನೂನುಗಳ ಮಾಡುವುದು.
  6. ಮಗು ಶಾಲೆಯ ಪಾಠ ಪ್ರವಚನಗಳಿಗೆ ಗೈರಾಗದಂತೆ ಶಿಕ್ಷಣದಲ್ಲಿ ನಿರಂತದ ಮುಂದುವರೆಯಲು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವುದನ್ನು ಖಾತರಿಪಡಿಸಬೇಕು ಮತ್ತು ಯಾವುದೇ ಮಗು ನಿರಂತರವಾಗಿ 27 ದಿನಗಳಿಗಿಂತ ಹೆಚ್ಚಿನ ದಿನಗಳು ಕೆಲಸದಲ್ಲಿ ತೂಡಗಲು ಅವಕಾಶ ನೀಡಬಾರದು.
  7. ಮಗುವಿನ ರಕ್ಷಣೆ, ಪೋಷಣೆ ಮತ್ತು ಹಿತಾಸಕ್ತಿಯನ್ನು ಕಾಪಾಡಲು ನಿರ್ಮಾಣ ಆ ಕಾರ್ಯಕ್ರಮದಲ್ಲಿ ತೊಡಗಿರುವ ಪ್ರತಿ 5 ಮಕ್ಕಳಿಗೆ ಒಬ್ಬರಂತೆ ಜವಬ್ದಾರಿ ವ್ಯಕ್ತಿ ನೇಮಿಸುವುದು.
  8. ನಿರ್ಮಾಣ ಅಥವಾ ಕಾರ್ಯಕ್ರಮದಿಂದ ಮಗುವಿಗೆ ಬರುವ ಒಟ್ಟು ಆದಾಯದ ಕನಿಷ್ಠ ಭಾಗವನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಮಗುವಿನ ಹೆಸರಿನಲ್ಲಿ ನಿಶ್ಚಿತ ಠೇವಣಿ ಖಾತೆ ತೆರೆದು ಇಡಬೇಕು. ಅದನ್ನು ಮಗು ಪ್ರಾಯಸ್ಥನಾದಾಗ ಪಡೆಯಲು ಅವಕಾಶ ಕಲ್ಪಿಸುವುದು.
  9. ಯಾವುದೇ ಮಗುವಿನ ಒಪ್ಪಿಗೆ ಮತ್ತು ಇಚ್ಛೆಗೆ ವಿರುದ್ಧವಾಗಿ ಯಾವುದೇ ಧ್ವನಿ, ದೃಶ್ಯ ಕ್ರೀಡಾ ಚಟುವಟಿಕೆ ಅನೌಪಚಾರಿಕ ಮನರಂಜನಾ ಚಟುವಟಿಕೆ ಒಳಗೊಂಡಂತೆ ಭಾಗವಹಿಸುವಂತೆ ಮಾಡಬಾರದು.
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Film festival: ಬೆಂಗಳೂರಿನಲ್ಲಿ ಮೇ 4, 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ

Film festival: ಮೇ 4 ಮತ್ತು 5ರಂದು‌ ಬೆಂಗಳೂರಿನ ಭಾರತೀಯ ವಿದ್ಯಾಭವನ ಹಾಗೂ ಸುಚಿತ್ರ ಫಿಲ್ಮ್‌ ಸೊಸೈಟಿಯಲ್ಲಿ ಖ್ಯಾತ ನಟ, ನಿರ್ದೇಶಕ ಗುರುದತ್‌ ಅವರ ಪ್ಯಾಸಾ, ಕಾಗಜ್‌ ಕೆ ಫೂಲ್‌, Mr&Mrs 55, ಆರ್‌ ಪಾರ್‌ ಚಿತ್ರಗಳ ಪ್ರದರ್ಶನ ನಡೆಯಲಿದೆ. ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್‌ ಮಾಧ್ಯಮ ಸಹಯೋಗ ನೀಡಿದೆ.

VISTARANEWS.COM


on

Film Festival
Koo

ಬೆಂಗಳೂರು: ರೋಟರಿ ನೀಡೀ ಹಾರ್ಟ್‌ ಫೌಂಡೇಶನ್‌ ವತಿಯಿಂದ ಮೇ 4 ಮತ್ತು 5ರಂದು ಗುರುದತ್‌ ಚಲನ ಚಿತ್ರೋತ್ಸವ ಮತ್ತು ಸಂಗೀತ ರಸ ಸಂಜೆ (Film festival) ಕಾರ್ಯಕ್ರಮವನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಹಿಂದಿ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಗುರುದತ್‌ ಅವರ ಚಲನಚಿತ್ರಗಳ ಕಲೆ ಮತ್ತು ಆತ್ಮಾವಲೋಕನ ನಡೆಯಲಿದೆ.

ಭಾರತೀಯ ವಿದ್ಯಾಭವನದಲ್ಲಿ ಮೇ 4ರಂದು ಬೆಳಗ್ಗೆ 10ಗಂಟೆಯಿಂದ ವಿ.ಕೆ.ಮೂರ್ತಿಯವರ ಛಾಯಾಗ್ರಹಣ ಕುರಿತು ಜಿ.ಎಸ್‌.ಭಾಸ್ಕರ್‌ ಅವರ ಸಂವಾದ ಇರಲಿದೆ. ಭಾರತೀಯ ವಿದ್ಯಾಭವನ ಹಾಗೂ ಸುಚಿತ್ರ ಫಿಲ್ಮ್‌ ಸೊಸೈಟಿಯಲ್ಲಿ ಬೆಳಗ್ಗೆ 10ಗಂಟೆಯಿಂದ ಖ್ಯಾತ ನಟ, ನಿರ್ದೇಶಕ ಗುರುದತ್‌ ಅವರ ಪ್ಯಾಸಾ, ಕಾಗಜ್‌ ಕೆ ಫೂಲ್‌, Mr&Mrs 55, ಆರ್‌ ಪಾರ್‌ ಚಿತ್ರಗಳ ಪ್ರದರ್ಶನ ನಡೆಯಲಿದೆ. ಕಾರ್ಯಕ್ರಮಕ್ಕೆ ವಿಸ್ತಾರ ನ್ಯೂಸ್ ಮಾಧ್ಯಮ ಸಹಯೋಗ ನೀಡಿದೆ.

ನಿರ್ಗತಿಕರು ಹಾಗೂ ಬಡವರ ಹೃದಯ ಶಸ್ತ್ರಚಿಕಿತ್ಸೆಗಳಿಗೆ ನೆರವಾಗುವ ಉದ್ದೇಶದಿಂದ ರೋಟರಿ ನೀಡೀ ಹಾರ್ಟ್‌ ಫೌಂಡೇಶನ್‌ ಈ ಕಾರ್ಯಕ್ರಮ ಆಯೋಜಿಸಿದ್ದು, ಪ್ರವೇಶದ ಡೋನರ್‌ ಪಾಸ್‌ಗಳ ದರ 2000 ರೂ., 1500 ರೂ. ಹಾಗೂ 800 ರೂ., ಡೆಲಿಗೇಟ್‌ ಪಾಸ್‌ 500 ರೂ. ಇರಲಿದೆ.

ಸಂಗೀತ ರಸ ಸಂಜೆ

ಭಾರತೀಯ ವಿದ್ಯಾಭವನದಲ್ಲಿ ಶನಿವಾರ (ಮೇ 4ರಂದು) ಸಂಜೆ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ. ನಿರ್ವಾಹಕರಾದ ನರಸಿಂಹನ್‌ ಕಣ್ಣನ್‌, ಶಾರದಾ ಶೆನೊಯ್‌, ಗಾಯಕರಾದ ರಾಮ ತೀರಥ್‌, ಸಮನ್ವಿತಾ ಶರ್ಮಾ, ಶ್ರುತಿ ಬಿಡೆ, ಗೋವಿಂದ್‌ ಕರ್ನೂಲ್‌, ನರಸಿಮ್ಮನ್‌ ಕಣ್ಣನ್‌, ವಾದ್ಯ ವೃಂದ ಕಲಾವಿದರಾದ ಪ್ರದೀಪ್‌ ಪಾಟ್ಕರ್‌ ಮತ್ತು ಸಂಘವು ಕಾರ್ಯಕ್ರಮ ನಡೆಸಿಕೊಡಲಿದೆ. ಕಾರ್ಯಕ್ರಮದ ಡೋನರ್‌ ಪಾಸ್‌ ದರ 2000 ರೂ., 1500 ರೂ. ಹಾಗೂ 800 ರೂ. ಇದೆ.

ಕಾರ್ಯಕ್ರಮಕ್ಕೆ ಆಗಮಿಸುವವರು ಪಾಸ್‌ಗಳಿಗಾಗಿ ರೋ.ಮನೋಜ್‌ ಅಗರ್ವಾಲ್-9845012716‌, ರೋ. ಹರಿ ಪಬ್ಬತ್ತಿ-9663305911, ರೋ.ರಾಜಾರಾಂ ಕೃಷ್ಣಮೂರ್ತಿ-9980009398 ಸಂಪರ್ಕಿಸಬಹುದು.

ಇದನ್ನೂ ಓದಿ | ರಾಜಮಾರ್ಗ ಅಂಕಣ: ದೇಶದ ಯುವಜನತೆಯ ಹೃದಯದ ಬಡಿತ ಅರ್ಜಿತ್ ಸಿಂಗ್, ನಿಮಗೆ ಹ್ಯಾಪಿ ಬರ್ತ್‌ಡೇ!

Continue Reading

ಬಾಲಿವುಡ್

Parineeti Chopra: ವೃತ್ತಿ ಜೀವನದ ಆರಂಭಿಕ ದಿನಗಳನ್ನು ನೆನೆದು ಭಾವುಕರಾದ ಪರಿಣಿತಿ ಚೋಪ್ರಾ!

Parineeti Chopra: ರಾಜ್ ಶಾಮಾನಿ ಅವರೊಂದಿಗಿನ ಪಾಡ್‌ಕಾಸ್ಟ್‌ ಚರ್ಚೆಯಲ್ಲಿ ನಟಿ ತನ್ನ ವೃತ್ತಿಜೀವನದ ಆರಂಭಿಕ ದಿನಗಳ ಬಗ್ಗೆ ಮಾತನಾಡಿದ್ದಾರೆ. ಆರಂಭದಲ್ಲಿ ಅಷ್ಟಾಗಿ ಹಣ ಗಳಿಸಿರಲಿಲ್ಲ ಎಂದು ಬಹಿರಂಗಪಡಿಸಿದರು. ರಾಜ್ ಶಾಮಾನಿ ಅವರೊಂದಿಗಿನ ಪಾಡ್‌ಕಾಸ್ಟ್‌ ಚರ್ಚೆಯಲ್ಲಿ ನಟಿ ತನ್ನ ವೃತ್ತಿಜೀವನದ ಆರಂಭಿಕ ದಿನಗಳ ಬಗ್ಗೆ ಮಾತನಾಡಿದ್ದಾರೆ. ತಮ್ಮ ಐದನೇ ಚಿತ್ರದ ಬಳಿಕ ನಟಿ ವ್ಯಾಪಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ನಟಿ ಪರಿಣಿತಿ ಚೋಪ್ರಾ (parineeti chopra) ಅವರು ಈ ಸಿನಿಮಾದಲ್ಲಿ ಅಮರ್ ಜೋತ್ ಪಾತ್ರ ಮಾಡಿದ್ದಾರೆ. ದಿವಂಗತ ಗಾಯಕ ಅಮರ್ ಸಿಂಗ್ ಚಮ್ಕಿಲಾ ಮತ್ತು ಅವರ ಪತ್ನಿ ಅಮರಜೋತ್ ಕೌರ್ ಅವರ ಜೀವನಾಧಾರಿತ ಬಯೋಪಿಕ್ ಸಿನಿಮಾ ಇದು.

VISTARANEWS.COM


on

Parineeti Chopra talks about initial struggles in the Industry
Koo

ಬೆಂಗಳೂರು: ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ (Parineeti Chopra) ಅವರು ತಮ್ಮ ವೃತ್ತೀ ಜೀವನದ ಆರಂಭಿಕ ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಹೋರಾಟ ಜೀವನ ನಡೆಸಿರುವುದಾಗಿ ಪಾಡ್‌ಕಾಸ್ಟ್‌ನ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ತಮ್ಮ ಐದನೇ ಚಿತ್ರದ ಬಳಿಕ ನಟಿ ವ್ಯಾಪಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ರಾಜ್ ಶಾಮಾನಿ ಅವರೊಂದಿಗಿನ ಪಾಡ್‌ಕಾಸ್ಟ್‌ ಚರ್ಚೆಯಲ್ಲಿ ನಟಿ ತನ್ನ ವೃತ್ತಿಜೀವನದ ಆರಂಭಿಕ ದಿನಗಳ ಬಗ್ಗೆ ಮಾತನಾಡಿದ್ದಾರೆ. ಆರಂಭದಲ್ಲಿ ಅಷ್ಟಾಗಿ ಹಣ ಗಳಿಸಿರಲಿಲ್ಲ ಎಂದು ಬಹಿರಂಗಪಡಿಸಿದರು.

ಪರಿಣಿತಿ ಮಾತನಾಡಿ, “ನಾನು ತುಂಬಾ ಶ್ರೀಮಂತ ಹಿನ್ನೆಲೆಯಿಂದ ಬಂದವಳಲ್ಲ. ನಾನು ತುಂಬಾ ಸರಳ, ಮಧ್ಯಮ ವರ್ಗದ ಹುಡುಗಿ. ಆಗ ನನಗೆ ಬಾಲಿವುಡ್ ಹೇಗೆ ಎಂಬುದು ಅರ್ಥವಾಗುತ್ತಿರಲಿಲ್ಲ. ಮುಂಬೈನಲ್ಲಿ ಜನರು ಹೇಗೆ ಕಾರ್ಯನಿರ್ವಹಿಸುತ್ತಾರೆ ಎಂಬುದು ನನಗೆ ನಿಜವಾಗಿ ತಿಳಿದಿರಲಿಲ್ಲ. ದೊಡ್ಡ ವರ್ಗದ ಸ್ನೇಹಿತರು ನನಗೆ ಗೊತ್ತಿರಲಿಲ್ಲ. ನನಗೆ ನನ್ನಲ್ಲಿ ತರಬೇತುದಾರರಾಗಲಿ, ಸ್ಟೈಲಿಸ್ಟ್‌ಗಳಾಗಲಿ ಆಗ ಇರಲಿಲ್ಲ. ಆಗ ತಿಂಗಳಿಗೆ ಸುಮಾರು 2 ಲಕ್ಷ ರೂ, ಕೊಟ್ಟು ತರಬೇತುದಾರರನ್ನು ನೇಮಿಸಿಕೊಳ್ಳುವಂತೆ ಯಾರೋ ಒಬ್ಬರು ಶಿಫಾರಸು ಮಾಡಿದ್ದರು. ಆದರೆ ಆಗ ನನ್ನ ಬಳಿ ಅಷ್ಟಾಗಿ ಹಣ ಇರುತ್ತಿರರಿಲ್ಲ. ಮೂರನೇ ಚಿತ್ರ ಮಾಡುವಾಗ ನನ್ನ ಸಂಭಾವನೆ 4 ಲಕ್ಷ ರೂ. ಆಗಿತ್ತು. ಆ ಸಮಯದಲ್ಲಿ ನನಗೆ ಕೆಲವರು ಯಾಕೆ ಫಿಟ್‌ನೆಸ್‌ ಟ್ರೈನರ್‌ಗಳನ್ನು ನೀವು ನೇಮಿಸಿಕೊಳ್ಳುತ್ತಿಲ್ಲ? ಎಂದು ಕೇಳುತ್ತಿದ್ದರು. ಆಗ ನನಗೆ ಕೇವಲ 5 ಲಕ್ಷ ರೂ. ಸಂಭಾವನೆ ಆಗಿತ್ತು ಎಂದು ಹೇಳಿದ್ದೆ. ಆ ಬಳಿಕ ಅವರು ನನ್ನ ಸ್ಥಿತಿ ಗತಿ ತಿಳಿದುಕೊಂಡ ನಂತರ ಇವೆಲ್ಲವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ ಎಂದರೆ ನೀವು ವೃತ್ತಿಯಲ್ಲಿ ಇರಬಾರದು ಎಂದು ಹೇಳಿದರುʼʼಎಂದು ನಟಿ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Lok Sabha Election 2024: ರಾಮಕೃಷ್ಣ ಹೆಗಡೆಯಂತೆ ಲಿಂಗಾಯತರ ಪರ ಗಟ್ಟಿಯಾಗಿ ನಿಂತ ನಾಯಕ ಪ್ರಲ್ಹಾದ್ ಜೋಶಿ ಎಂದ ಯತ್ನಾಳ್

ಸಿನಿಮಾ ವಿಚಾರಕ್ಕೆ ಬಂದರೆ, ಪರಿಣಿತಿ ಪ್ರಸ್ತುತ ದಿಲ್ಜಿತ್ ದೋಸಾಂಜ್ ಅವರೊಂದಿಗೆ ʻಅಮರ್ ಸಿಂಗ್ ಚಮ್ಕಿಲಾʼ ಚಿತ್ರದಲ್ಲಿ ನಟಿಸಿದ್ದಾರೆ. ಈಗಾಗಲೇ ಸಿನಿಮಾ ಇದು ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್‌ಗೆ ಆಗುತ್ತಿದೆ. ಸಿನಿಮಾ ಭಾರಿ ಮೆಚ್ಚುಗೆ ಪಡೆದುಕೊಂಡಿದೆ.

ನಟಿ ಪರಿಣಿತಿ ಚೋಪ್ರಾ (parineeti chopra) ಅವರು ಈ ಸಿನಿಮಾದಲ್ಲಿ ಅಮರ್ ಜೋತ್ ಪಾತ್ರ ಮಾಡಿದ್ದಾರೆ. ದಿವಂಗತ ಗಾಯಕ ಅಮರ್ ಸಿಂಗ್ ಚಮ್ಕಿಲಾ ಮತ್ತು ಅವರ ಪತ್ನಿ ಅಮರಜೋತ್ ಕೌರ್ ಅವರ ಜೀವನಾಧಾರಿತ ಬಯೋಪಿಕ್ ಸಿನಿಮಾ ಇದು.

ಏನಿದು ಕಥೆ?

ತನ್ನ ಹಾಡುಗಳಿಂದಲೇ ಜನಪ್ರಿಯರಾದ ಗಾಯಕ, ಸಂಗೀತಗಾರ ಅಮರ್‌ ಸಿಂಗ್‌ ಚಮ್ಕಿಲಾ ಅವರ ಜೀವನಗಾಥೆಯನ್ನು ಆಧರಿಸಿ ಈ ಸಿನಿಮಾ ನಿರ್ಮಿಸಲಾಗಿದೆ. 1980 ರ ದಶಕದಲ್ಲಿ ಜನಪ್ರಿಯತೆ ಪಡೆದ ʻಪಂಜಾಬ್‌ ಎಲ್ವಿಸ್‌ʼ ಎಂದೇ ಖ್ಯಾತಿ ಪಡೆದ ಚಮ್ಕಿಲಾರ ಬದುಕಿನ ಕಥೆಯಿದು . ಈ ಗಾಯಕ ತನ್ನ 27ನೇ ವಯಸ್ಸಿನಲ್ಲಿಯೇ ಕೊಲೆಯಾದರು. ಕಾಂಟ್ರವರ್ಸಿಯಲ್‌ ಹಾಡುಗಳು ಅಮರ್‌ ಸಿಂಗ್‌ ಚಮ್ಕಿಲಾ ಸಾವಿಗೆ ಕಾರಣವಾಗಿರಬಹುದು ಎಂದು ವರದಿಯಾಗಿದೆ.

Continue Reading

ಸಿನಿಮಾ

The Rulers: ಅಂಬೇಡ್ಕರ್ ಹೆಸರಲ್ಲಿ ಸಿನಿಮಾ ಮಾಡಿದ್ದಕ್ಕೆ` ರೌಡಿ ಶೀಟರ್ʼ ಪಟ್ಟ ಕೊಡ್ತಾ ಕಾಂಗ್ರೆಸ್ ಸರ್ಕಾರ? ನಟ ಹೇಳಿದ್ದೇನು?

The Rulers: Power of Constitution: ದಿ ರೂಲರ್ಸ್ಸ್ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನ ಬರೆದಿರುವುದು ಕೋಲಾರದ ಡಾ. ಕೆ.ಎಮ್ ಸಂದೇಶ್. ಡಾ. ಬಿ.ಆರ್ ಅಂಬೇಡ್ಕರ್ ತತ್ವ ಸಿದ್ದಾಂತವನ್ನು ಮೈಗೂಡಿಸಿಕೊಂಡು, ವರ್ಷಗಳಿಂದ ಸಾಮಾಜಿಕ ಸಮಾನತೆಗಾಗಿ 350ಕ್ಕೂ ಹೆಚ್ಚು ಹೋರಾಟಗಳನ್ನ ಮಾಡಿ ಗೆದ್ದಿರೋ, 350ಕ್ಕೂ ಹೆಚ್ಚು ಅಂತರ್ಜಾತಿ ವಿವಾಹಗಳನ್ನ ಮಾಡಿರೋ ಇವರು ತಮ್ಮ ಬದುಕಿನಲ್ಲೇ ನಡೆದ ಘಟನೆಗಳನ್ನಿಟ್ಟುಕೊಂಡು ಕಮರ್ಷಿಯಲ್ಲಾಗಿ ಸಿನಿಮಾ ಮಾಡಿದ್ದಾರೆ.

VISTARANEWS.COM


on

Congress government notice to The Rulers: Power of Constitution hero
Koo

ಬೆಂಗಳೂರು: ʻದ ರೂಲರ್ಸ್ʼ Power of Constitution (The Rulers: Power of Constitution) ಇದು ಸ್ಯಾಂಡಲ್ ವುಡ್ (Sandalwood Movie) ಅಂಗಳದಲ್ಲಿ ಸದ್ದಿಲ್ಲದೇ ಸಿದ್ಧವಾಗಿರುವ ಹೊಸ ಸಿನಿಮಾ. ಕಾಲಿವುಡ್‌ನ ಖ್ಯಾತ ನಿರ್ದೇಶಕ, ಪೊಲ್ಲಾದವನ್‌, ಅಸುರನ್‌, ವಿಸಾರಣೈ ಚಿತ್ರಗಳ ಮೂಲಕ ರಾಷ್ಟ್ರ ಮಟ್ಟದಲ್ಲಿ ಸುದ್ದಿ ಮಾಡಿದ ವೆಟ್ರಿಮಾರನ್ (Director Vetrimaran) ಗರಡಿಯಲ್ಲಿ ನುರಿತ ಕನ್ನಡದ ಹುಡುಗರು ಕಟ್ಟಿದ ಸೂಕ್ಷ್ಮ ಸಂವೇದನೆಗಳ (Sensitive Movie) ಸಿನಿಮಾ (The Rulers Movie). ಸಂವಿಧಾನದ ಶಕ್ತಿಯನ್ನು ತೋರುವ ಚಲನಚಿತ್ರ ʻದ ರೂಲರ್ಸ್ʼ ಸಿನಿ ತಂಡ ಈಗ ತೊಂದರೆಯಲ್ಲಿದೆ. ಮೊದಲ ಭಾರಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ವಿಜೃಂಭಣೆಯಿಂದ ತೋರಿಸುವ ಪ್ರಯತ್ನ ಮಾಡಿರುವ ʻರೂಲರ್ಸ್ʼ ಚಿತ್ರದ ನಾಯಕ ನಟ ಸಂದೇಶ್ ಅವರ ಮೇಲೆ ಕಾಂಗ್ರೆಸ್ ಸರ್ಕಾರ ನೋಟಿಸ್‌ ಜಾರಿ ಮಾಡಿದೆ. ಈ ಬಗ್ಗೆ ನಟ ಸಂದೇಶ್ ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

ವೆಟ್ರಿಮಾರನ್‌ ಅವರ ತಂಡದಲ್ಲಿ ಕೆಲಸ ಮಾಡಿದ್ದ ಹುಡುಗರೆಲ್ಲಾ ಸೇರಿ ಚೊಚ್ಚಲ ಕನ್ನಡ ಸಿನಿಮಾ ಮಾಡಿದ್ದಾರೆ. ʻದ ರೂಲರ್ಸ್ʼ ಟೈಟಲ್‌ಗೆ Power of Constitution ಅನ್ನೋ ಅಡಿ ಬರಹವಿದೆ. ಹೊಸ ವರ್ಷದ ಮೊದಲ ದಿನ ದ ರೂಲರ್ಸ್ ಚಿತ್ರದ ಟೀಸರ್ ರಿಲೀಸ್ ಮಾಡಿದ್ದು, ಅದು ಸಾಕಷ್ಟು ಸೌಂಡ್‌ ಮಾಡಿತ್ತು. ಕೋಲಾರ ಜಿಲ್ಲೆಯಲ್ಲಿ ನಡೆದಿರುವ, ನಡೆಯುತ್ತಿರುವ ಘಟನಾವಳಿಗಳನ್ನಾಧರಿಸಿ ಮಾಡಿರುವ ಕಥೆ. ಸಂವಿಧಾನವೊಂದು ನೀಡುವ ಆಸರೆ ಮತ್ತು ಶಕ್ತಿ ಎಂಥಹದ್ದು, ಅದು ಭಾರತೀಯ ಪ್ರಜ್ಞೆಗೆ ಕೊಟ್ಟಿರೋ ಶಕ್ತಿ ಎಂಥಹದ್ದು ಅನ್ನೋ ವಿಚಾರವನ್ನ ಮೂಲವಾಗಿಸಿಕೊಂಡು ದ ರೂಲರ್ಸ್ ಚಿತ್ರವನ್ನ ಮಾಡಲಾಗಿದೆ.

ಇದನ್ನೂ ಓದಿ: Anupama Parameswaran: ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ ಅನೌನ್ಸ್‌: ನಟಿಯ ಲುಕ್‌ಗೆ ಫ್ಯಾನ್ಸ್‌ ಫಿದಾ!

ತೊಂದರೆಯಲ್ಲಿ ಚಿತ್ರತಂಡ

ತಂಡ ಸದ್ಯ ತೊಂದರೆಯಲ್ಲಿದೆ. ಕನ್ನಡ ಸಿನಿಮಾ ರಂಗದಲ್ಲಿ ಮೊದಲ ಭಾರಿಗೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ವಿಜೃಂಭಣೆಯಿಂದ ತೋರಿಸುವ ಪ್ರಯತ್ನ ಮಾಡಿರುವದ ʻದ ರೂಲರ್ಸ್ʼ ಚಿತ್ರದ ನಾಯಕ ನಟ ಸಂದೇಶ್ ಅವರ ಮೇಲೆ ಕಾಂಗ್ರೆಸ್ ಸರ್ಕಾರ ನೋಟಿಸ್‌ ಜಾರಿ ಮಾಡಿದೆ ಎಂದು ಚಿತ್ರತಂಡ ಆರೋಪಿಸಿದೆ. ಸಂದೇಶ್ ಈ ಬಗ್ಗೆ ಮಾತನಾಡಿ ʻʻನನ್ನ ಜನರ ಪರವಾಗಿ 341 ಯಶಸ್ವಿ ಹೋರಾಟಗಳು, 151 ಅಂತರ್ಜಾತೀಯ ವಿವಾಹಗಳನ್ನು ಮಾಡಿ, ಹಲವು ಮಕ್ಕಳಿಗೆ ವಿಧ್ಯಾಭ್ಯಾಸ, ನೂರಾರು ಗುಡಿಸಲು ವಾಸಿಗಳಿಗೆ ಮನೆ ನಿರ್ಮಿಸಿಕೊಟ್ಟಿದ್ದು, ಸಾವಿರ ಹೆಣ್ಣು ಮಕ್ಕಳಿಗೆ ನ್ಯಾಯ ದೊರಕಿಸಿಕೊಟ್ಟಿದ್ದೇನೆ. ನನ್ನ ಜನರ ಪರ ಹೋರಾಟ ಮಾಡುವ ಸಂದರ್ಭಗಳಲ್ಲಿ ನನ್ನ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ನ್ಯಾಯಲಯದಲ್ಲಿ ಪ್ರಕರಣಗಳಲ್ಲಿ ನಮಗೆ ಜಯ ಸಿಕ್ಕಿದೆ. ಇಲ್ಲಿಯ ತನಕ ನಮ್ಮ‌ ಜನರ ಪರವಾಗಿ ಹೋರಾಟ ಮಾಡಿದ್ದೇನೆ ಹೊರೆತು ಯಾವತ್ತು ಜನರಿಗೆ ತೊಂದರೆ ಕೊಟ್ಟಿಲ್ಲ. ಇತ್ತಿಚಿಗೆ ಒಂದು ವರ್ಷದಿಂದ ನನ್ನ ಮೇಲೆ ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಶಕ್ತಿ ಅಡಿಯಲ್ಲಿ ಚಲನಚಿತ್ರ ಮೂಡಿ ಬಂದಿದ್ದು, ನಮ್ಮ ಸಿನಿಮಾ ಆಡಿಯೋ ಕಾರ್ಯಕ್ರಮ ಮಾರ್ಚ್ 17 ರಂದು ಮಾಡಿದೆವು. , ಇದನ್ನು ನೋಡಿ ಕೋಪಿಸಿಕೊಂಡ ಮನುವಾದಿಗಳು ಮಾರ್ಚ್ 25ರಂದ ನನಗೆ ನೋಟಿಸ್ ಸಹ ಜಾರಿ ಮಾಡಿ, ರೌಡಿ ಪಟ್ಟ ಕೊಟ್ಟಿದ್ದಾರೆ. ಅದು ಕೂಡ ನಮ್ಮ ಸರ್ಕಾರದಿಂದಲೇ ಹೀಗೆ ಮಾಡಿರುವುದು ಮನಸ್ಸಿಗೆ ನೋವುಂಟು ಮಾಡಿದೆʼʼ ಎಂದು ವಿಡಿಯೊ ಶೇರ್‌ ಮಾಡಿಕೊಂಡಿದ್ದಾರೆ.

ಸಿನಿಮಾದಲ್ಲಿ ಏನಿದೆ?

ಈ ಸಿನಿಮಾದಲ್ಲಿ ಇಲ್ಲಿ ಮೇಲೂ ಕೀಳು ಅನ್ನುವ ಸಮುದಾಯಗಳ ಸಂಘರ್ಷದಲ್ಲಿ ಮರೆಯಾದ ಮಾನವೀಯತೆಯನ್ನು ಒಂದು ಕಡೆ ಬಿಂಬಿಸಿದರೆ, ಮತ್ತೊಂದು ಕಡೆ ಸಂವಿಧಾನ ಕೊಟ್ಟಿರುವ ಸಮಾನತೆಯ ಹಕ್ಕನ್ನು ಪ್ರತಿಪಾದಿಸುವ, ಅದರ ಶಕ್ತಿಯನ್ನು ಪ್ರದರ್ಶಿಸುವ ಮತ್ತೊಂದು ಮಜಲನ್ನು ಅನಾವರಣಗೊಳಿಸಿದ್ದಾರಂತೆ.

ದಿ ರೂಲರ್ಸ್ಸ್ ಚಿತ್ರಕ್ಕೆ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನ ಬರೆದಿರುವುದು ಕೋಲಾರದ ಡಾ. ಕೆ.ಎಮ್ ಸಂದೇಶ್. ಡಾ. ಬಿ.ಆರ್ ಅಂಬೇಡ್ಕರ್ ತತ್ವ ಸಿದ್ದಾಂತವನ್ನು ಮೈಗೂಡಿಸಿಕೊಂಡು, ವರ್ಷಗಳಿಂದ ಸಾಮಾಜಿಕ ಸಮಾನತೆಗಾಗಿ 350ಕ್ಕೂ ಹೆಚ್ಚು ಹೋರಾಟಗಳನ್ನ ಮಾಡಿ ಗೆದ್ದಿರೋ, 350ಕ್ಕೂ ಹೆಚ್ಚು ಅಂತರ್ಜಾತಿ ವಿವಾಹಗಳನ್ನು ಮಾಡಿರೋ ಇವರು ತಮ್ಮ ಬದುಕಿನಲ್ಲೇ ನಡೆದ ಘಟನೆಗಳನ್ನಿಟ್ಟುಕೊಂಡು ಕಮರ್ಷಿಯಲ್ಲಾಗಿ ಸಿನಿಮಾ ಮಾಡಿದ್ದಾರೆ.

ಇದನ್ನೂ ಓದಿ: Pavitra Naresh: ಪವಿತ್ರಾ ಲೋಕೇಶ್-ನರೇಶ್ ಪ್ರೇಮ ಕಹಾನಿ ಶುರುವಾಗಿದ್ದು ಹೇಗೆ? ’ಮತ್ತೆ ಮದುವೆ’ ಟ್ರೈಲರ್‌ ಔಟ್‌!

ಎಂ.ಎನ್.ಎಂ ಮೂವೀಸ್ ಬ್ಯಾನರ್ ನಡಿಯಲ್ಲಿ ಅಶ್ವಥ್ ಬಳಗೆರೆ ನಿರ್ಮಾಣದಲ್ಲಿ, ಉದಯ್ ಭಾಸ್ಕರ್ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಕರುಣ್ ಕೆ.ಜಿ.ಎಫ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ನವ ಪ್ರತಿಭೆ ವಿಶಾಲ್, ರಿತಿಕಾ ಗೌಡ, ಕೆ.ಜಿ.ಎಫ್‌ನ ಪಠಾಣ್ ಖ್ಯಾತಿಯ ಪುನೀತ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ಖುದ್ದು ಸಂದೇಶ್ ತಮ್ಮ ನೈಜ ಪಾತ್ರವನ್ನ ತಾವೇ ಮಾಡಿದ್ದಾರೆ.

ಸದ್ಯ ಎ2 ಮ್ಯೂಸಿಕ್ ಯೂಟ್ಯೂಬ್ ಚಾನಲ್‌ನಲ್ಲಿ ಟೀಸರ್‌ ರಿಲೀಸ್‌ ಆಗಿತ್ತು. ಸೂಕ್ಷ್ಮ ವಿಚಾರವನ್ನು ನೇರವಾಗಿ ಹೇಳೋ ಪ್ರಯತ್ನ ಮಾಡಿರುವ ದ ರೂಲರ್ಸ್ ಚಿತ್ರ ವಿಶಿಷ್ಟವಾಗಿ ಪ್ರೇಕ್ಷಕರನ್ನ ಸೆಳೆಯುತ್ತಿದ್ದು, ಸಾಮಾಜಿಕವಾಗಿಯೂ ಸದ್ದು ಮಾಡುವ ಸೂಚನೆ ಕೊಡುತ್ತಿದೆ.

Continue Reading

ಸಿನಿಮಾ

Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

Ramayana Movie: ರಣಬೀರ್ ಕಪೂರ್ (Ranbir Kapoor) ಮುಂಬರುವ ಸಿನಿಮಾ ‘ರಾಮಾಯಣ’ (Ramayana Movie) ಚಿತ್ರದ ರಾಮನ ಪಾತ್ರಕ್ಕಾಗಿ ಕಠಿಣ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಮುಂಚೆ ʻಅನಿಮಲ್‌ʼ ಸಿನಿಮಾಗಾಗಿ ತೂಕ ಹೆಚ್ಚಿಸಿಕೊಂಡಿದ್ದರು. ಇದೀಗ ರಾಮಾಯಣ ಸಿನಿಮಾಗಾಗಿ ಸಖತ್‌ ಫಿಟ್‌ ಫೈನ್‌ ಆಗಿದ್ದಾರೆ.ಚಿತ್ರದಲ್ಲಿ ರಾವಣನಾಗಿ ಯಶ್ ನಟಿಸುತ್ತಾರೆ ಎನ್ನುವ ಮಾತುಗಳು ಬಹಳ ಹಿಂದೆಯೇ ಕೇಳಿಬಂದಿತ್ತು. ಆದರೆ ಈ ಬಗ್ಗೆ ಖಚಿತ ಮಾಹಿತಿ ಇನ್ನು ಲಭ್ಯವಾಗಿಲ್ಲ. ಆದರೆ ಯಶ್ ಚಿತ್ರ ನಿರ್ಮಾಣಕ್ಕೆ ನಮಿತ್ ಮಲ್ಹೋತ್ರಾ ಜೊತೆ ಕೈ ಜೋಡಿಸಿರುವುದು ವರದಿಯಾಗಿದೆ.

VISTARANEWS.COM


on

Ramayana Movie Ranbir Kapoor, Sai Pallavi's first look leaked
Koo

ಬೆಂಗಳೂರು: ನಿತೇಶ್ ತಿವಾರಿ (Nitesh Tiwari) ನಿರ್ದೇಶನದ ‘ರಾಮಾಯಣ’ ಸಿನಿಮಾ (Ramayana Set Pic leaked) ಸೆಟ್ಟೇರಿದೆ. ಮುಂಬೈ ಸ್ಟುಡಿಯೊವೊಂದರಲ್ಲಿ ಗುರುಕುಲದ ಸೆಟ್ ನಿರ್ಮಿಸಿ ʻರಾಮಾಯಣʼ ಸಿನಿಮಾ ಚಿತ್ರೀಕರಣ ಆರಂಭಿಸಿದ್ದಾರೆ. ಈಗಾಗಲೇ ಹಲವು ಬಾರಿ ಸಿನಿಮಾದ ಫೋಟೊಗಳು ಲೀಕ್‌ ಆಗಿವೆ. ಇದೀಗ ಮತ್ತೆ ರಣಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ಅವರ ಲುಕ್‌ ವೈರಲ್‌ ಆಗಿದೆ.

ರಾಮಾಯಣ ಸೆಟ್‌ನಲ್ಲಿ ರಣಬೀರ್ ಸಾಂಪ್ರದಾಯಿಕ ಉಡುಗೆಯಲ್ಲಿ ಭಗವಾನ್ ರಾಮನಂತೆ ಮತ್ತು ಸೀತೆಯಂತೆ ರಾಜಕುಮಾರಿ ಲುಕ್‌ನಲ್ಲಿರುವ ಸಾಯಿ ಪಲ್ಲವಿ ಫೋಟೊ ಸೋರಿಕೆಯಾಗಿದೆ. ಸಾಕಷ್ಟು ಭದ್ರತೆ ನಡುವೆ ಮುಂಬೈನಲ್ಲಿ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಸೆಟ್‌ನಲ್ಲಿ ಮೊಬೈಲ್ ಫೋನ್‌ಗಳನ್ನು ಕೊಂಡೊಯ್ಯದಂತೆ ಚಿತ್ರತಂಡ ಆದೇಶಿಸಿದೆ. ಆದರೂ ಚಿತ್ರದ ಫೋಟೊಗಳು ಲೀಕ್ ಆಗಿರುವುದು ಚಿತ್ರತಂಡಕ್ಕೆ ಬೇಸರ ತಂದಿದೆ.ಚಿತ್ರದಲ್ಲಿ ರಾವಣನಾಗಿ ಯಶ್ ನಟಿಸುತ್ತಾರೆ ಎನ್ನುವ ಮಾತುಗಳು ಬಹಳ ಹಿಂದೆಯೇ ಕೇಳಿಬಂದಿತ್ತು. ಆದರೆ ಈ ಬಗ್ಗೆ ಖಚಿತ ಮಾಹಿತಿ ಇನ್ನು ಲಭ್ಯವಾಗಿಲ್ಲ. ಆದರೆ ಯಶ್ ಚಿತ್ರ ನಿರ್ಮಾಣಕ್ಕೆ ನಮಿತ್ ಮಲ್ಹೋತ್ರಾ ಜೊತೆ ಕೈ ಜೋಡಿಸಿರುವುದು ವರದಿಯಾಗಿದೆ.

ರಣಬೀರ್ ಕಪೂರ್ (Ranbir Kapoor) ಮುಂಬರುವ ಸಿನಿಮಾ ‘ರಾಮಾಯಣ’ (Ramayana Movie) ಚಿತ್ರದ ರಾಮನ ಪಾತ್ರಕ್ಕಾಗಿ ಕಠಿಣ ತರಬೇತಿಯನ್ನು ಪಡೆಯುತ್ತಿದ್ದಾರೆ. ಈ ಮುಂಚೆ ʻಅನಿಮಲ್‌ʼ ಸಿನಿಮಾಗಾಗಿ ತೂಕ ಹೆಚ್ಚಿಸಿಕೊಂಡಿದ್ದರು. ಇದೀಗ ರಾಮಾಯಣ ಸಿನಿಮಾಗಾಗಿ ಸಖತ್‌ ಫಿಟ್‌ ಫೈನ್‌ ಆಗಿದ್ದಾರೆ.

ಇದನ್ನೂ ಓದಿ: Ramayana Movie: ರಾಮನಿಗೆ 75 ಕೋಟಿ ರೂ, ರಾವಣನಿಗೆ 50 ಕೋಟಿ ರೂ, ಸೀತೆಗೆ ಸಂಭಾವನೆ ಎಷ್ಟು?

ಈ ಮುಂಚೆ ನಟರ ವೇಷಭೂಷಣದಲ್ಲಿರುವ ಚಿತ್ರಗಳು ಸೋರಿಕೆಯಾದ ಬಳಿಕ ಚಿತ್ರೀಕರಣದ ಮೊದಲ ಎರಡು ದಿನಗಳು ಕಾಲ ನಿರ್ದೇಶಕರು ಒತ್ತಡವನ್ನುಂಟುಮಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಈ ಫೋಟೊಗಳಿಂದ ನಿರ್ದೇಶಕ ನಿತೇಶ್ ತಿವಾರಿ ತುಂಬ ಬೇಸರಿಸಿಗೊಂಡಿದ್ದರು ಎಂದು ವರದಿಯಾಗಿತ್ತು. ಈಗಾಗಲೇ ಸೆಟ್‌ನಲ್ಲಿ ಕಟ್ಟುನಿಟ್ಟಾದ ಕ್ರಮ ಕೈಗೊಂಡಿದ್ದು ಫೋನ್‌ಕೂಡ ನಿಷೇಧಿಸಲಾಗಿದೆ ಎನ್ನಲಾಗಿತ್ತು.

ದೃಶ್ಯಕ್ಕೆ ಅಗತ್ಯವಿರುವ ನಟರು ಮತ್ತು ತಂತ್ರಜ್ಞರನ್ನು ಮಾತ್ರ ಸೆಟ್‌ನಲ್ಲಿ ಇರುವಂತೆ ಆದೇಶ ನೀಡಿದ್ದು, ಉಳಿದವರಿಗೆ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿತ್ತು. ಇನ್ನು ದಶರಥನಾಗಿ ಅರುಣ್‌ ಗೋವಿಲ್, ಹನುಮಂತನಾಗಿ ಸನ್ನಿ ಡಿಯೋಲ್ ನಟಿಸುತ್ತಾರೆ ಎನ್ನಲಾಗುತ್ತಿದೆ. ರಾವಣನ ಸಹೋದರಿ ಶೂರ್ಪನಖಿಯಾಗಿ ರಕುಲ್‌ಪ್ರೀತ್ ಸಿಂಗ್ ಹಾಗೂ ಮಡದಿ ಮಂಡೋದರಿಯಾಗಿ ಸಾಕ್ಷಿ ತನ್ವರ್ ನಟಿಸುತ್ತಾರೆ ಎಂದು ವರದಿಯಾಗಿದೆ.

ಸದ್ಯ ಯಶ್ ‘ಟಾಕ್ಸಿಕ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಮಾಯಣ’ ಚಿತ್ರದಲ್ಲಿ ಸದ್ಯ ಬೇರೆ ಕಲಾವಿದರ ದೃಶ್ಯಗಳನ್ನು ಸೆರೆಹಿಡಿಯಲಿದ್ದು ನಿಧಾನವಾಗಿ ಯಶ್ ತಂಡ ಸೇರಿಕೊಳ್ಳುತ್ತಾರೆ ಎನ್ನಲಾಗುತ್ತಿದೆ.

Continue Reading
Advertisement
IPL 2024
ಪ್ರಮುಖ ಸುದ್ದಿ5 mins ago

IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

CBI Raid
ದೇಶ13 mins ago

CBI Raid: ಸಂದೇಶ್‌ಖಾಲಿ ಟಿಎಂಸಿ ನಾಯಕನ ಆಪ್ತನ ಮನೆಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರದ ಮೂಲ ಪತ್ತೆ

Hassan Pen Drive Case
ಪ್ರಮುಖ ಸುದ್ದಿ28 mins ago

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

KL Rahul
ಕ್ರಿಕೆಟ್33 mins ago

KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

Modi in Karnataka
ಪ್ರಮುಖ ಸುದ್ದಿ1 hour ago

Modi in Karnataka: ಬೆಳಗಾವಿಗೆ ಆಗಮಿಸಿದ ಪ್ರಧಾನಿ‌ ಮೋದಿ; ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ

Hasan pen drive case
ಹಾಸನ1 hour ago

Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Air Force Chopper
ದೇಶ2 hours ago

Air Force Chopper: ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ

TCS World 10K
ಬೆಂಗಳೂರು2 hours ago

TCS World 10K : ನಾಳೆ ಬೆಂಗಳೂರಿನಲ್ಲಿ ವಿಶ್ವ ವಿಖ್ಯಾತಿಯ ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಾಥಾನ್​

Lok Sabha Election 2024 special kit for the polling staff
ಉತ್ತರ ಕನ್ನಡ2 hours ago

Lok Sabha Election 2024: ಲೋಕಸಭಾ ಚುನಾವಣೆ ಸಿಬ್ಬಂದಿಗೆ ತಯಾರಾಗಿದೆ ವಿಶೇಷ ಕಿಟ್

virat kohli
ಪ್ರಮುಖ ಸುದ್ದಿ3 hours ago

Virat Kohli : ಅಭ್ಯಾಸದ ಮಧ್ಯೆ ಮೊಬೈಲ್​ನಲ್ಲೇ ಡೆಲ್ಲಿ ವರ್ಸಸ್​​ ಮುಂಬೈ ಮ್ಯಾಚ್ ನೋಡಿದ ಕೊಹ್ಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20247 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ12 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ19 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌