Ladki Film | ಬೆಂಗಳೂರಿನಲ್ಲಿ ಹುಡುಗಿ ಚಿತ್ರದ ಪ್ರಚಾರ ಮಾಡಿದ RGV: ಬಿಡುಗಡೆಗೆ ಸಜ್ಜಾದ ಲಡ್ಕಿ - Vistara News

ಟಾಲಿವುಡ್

Ladki Film | ಬೆಂಗಳೂರಿನಲ್ಲಿ ಹುಡುಗಿ ಚಿತ್ರದ ಪ್ರಚಾರ ಮಾಡಿದ RGV: ಬಿಡುಗಡೆಗೆ ಸಜ್ಜಾದ ಲಡ್ಕಿ

ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾ ಅವರ ಲಡ್ಕಿ (Ladki Film) ತೆರೆಗೆ ಬರಲು ಸಜ್ಜಾಗಿದೆ. ಭಾರತ ಮತ್ತು ಚೀನಾದಲ್ಲಿ ಬಿಡುಗಡೆಗೊಳ್ಳುತ್ತಿದೆ.

VISTARANEWS.COM


on

Ladki Film
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಖ್ಯಾತ ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾ ವಿಭಿನ್ನ ಸಿನಿಮಾಗಳನ್ನು ನೀಡುವುದರಲ್ಲಿ ಎತ್ತಿದ ಕೈ. ತಮಗೆ ಅನ್ನಿಸಿದ್ದನ್ನು ಅಂದುಕೊಂಡಂತೆಯೇ ಸಿನಿಪ್ರಿಯರ ಮುಂದೆ ತರುವಲ್ಲಿ ನಿಸ್ಸೀಮ. ಹೊಸತನಕ್ಕೆ ಮಿಡಿಯುವ, ಹೊಸತನವನ್ನು ಬಿಂಬಿಸುವ ಆರ್‌ಜಿವಿ ಈಗ ಪ್ಯಾನ್ ಇಂಡಿಯಾ ಸಿನಿಮಾವನ್ನು ನಿರ್ಮಾಣ ಮಾಡಿದ್ದು, ಜುಲೈ ೧೫ಕ್ಕೆ ದೇಶ ಸೇರಿದಂತೆ ವಿದೇಶದಲ್ಲೂ ತೆರೆಗೆ ಬರಲಿದೆ.

ಅಂದಹಾಗೆ ಈ ಸಿನಿಮಾ ಹೆಸರು “ಲಡ್ಕಿ” (Ladki Film). ಕನ್ನಡದಲ್ಲಿ “ಹುಡುಗಿ” ಎಂದು ನಾಮಕರಣ ಮಾಡಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಈ ಸಿನಿಮಾ ಬಗ್ಗೆ ಪ್ರಚಾರ ಮಾಡಿದ್ದಾರೆ. ಹುಡುಗಿ ಯಾವ ತರ ಕಾಣಿಸಿಕೊಳ್ಳಲಿದ್ದಾಳೆ? ಯಾವ ರೀತಿ ಬಿಂಬಿಸಲಾಗಿದೆ? ಹೇಗೆ ಭಿನ್ನವಾಗಿರಲಿದೆ ಎಂಬ ಕುತೂಹಲದೊಂದಿಗೆ ಸಿನಿಪ್ರಿಯರು ಹಾಗೂ ಆರ್‌ಜಿಬಿ ಫ್ಯಾನ್ಸ್‌ ಕಾಯುತ್ತಿದ್ದಾರೆ.

ಇದನ್ನೂ ಓದಿ | ದಿಶಾ ಸಿನಿಮಾ ಹೆಸರಲ್ಲಿ ವಂಚನೆ; ನಿರ್ದೇಶಕ ರಾಮ್‌ ಗೋಪಾಲ್‌ ವರ್ಮಾ ವಿರುದ್ಧ ಕೇಸ್‌

ಚೀನಾದ 40 ಸಾವಿರ ಸ್ಕ್ರೀನ್‌ನಲ್ಲಿ ಲಡ್ಕಿ

ಚಿತ್ರತಂಡ ಹೇಳಿಕೊಂಡಿರುವ ಪ್ರಕಾರ, ಇದೊಂದು ಇಂಡೋ ಚೈನೀಸ್ ಪ್ರೊಡಕ್ಷನ್ ಸಿನಿಮಾ. ಹಾಗಾಗಿ ಚೀನಾದ ಸುಮಾರು 40 ಸಾವಿರಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ‘ಲಡ್ಕಿ’ ತೆರೆಗೆ ಬರುತ್ತಿದೆ. ತ್ರಿಕೋನ ಪ್ರೇಮ ಕಥೆಯ ಕಥಾಹಂದರವನ್ನು ಈ ಸಿನಿಮಾ ಒಳಗೊಂಡಿದ್ದು, ಚೀನಾದ ನೇಟಿವಿಟಿಯನ್ನು ಒಳಗೊಳ್ಳಲಾಗಿದೆಯೇ ಎಂಬ ಗುಟ್ಟನ್ನು ಚಿತ್ರತಂಡ ಇನ್ನೂ ಬಿಟ್ಟುಕೊಟ್ಟಿಲ್ಲ.

ಮಾರ್ಷಲ್ ಆರ್ಟ್ಸ್ ಹಿನ್ನೆಲೆಯ ಬಹುಭಾಷಾ ಸಿನಿಮಾ

ಈ ಸಿನಿಮಾ ಮಹಿಳಾ ಪ್ರಧಾನವಾಗಿದ್ದು, ಮಾರ್ಷಲ್‌ ಆರ್ಟ್ಸ್ ಕೇಂದ್ರಿತವಾಗಿ ಚಿತ್ರಿಸಲಾಗಿದೆ. ಪೂಜಾ ಭಾಲೇಕರ್ ನಾಯಕಿಯಾಗಿ ನಟಿಸಿದ್ದಾರೆ. ಆರ್ಟ್ಸಿ ಮೀಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ಮಾಣ ಮಾಡಿದೆ. ತೆಲುಗು, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ಸಿನಿಮಾ ತೆರೆಕಾಣಲಿದೆ.

ಮಾಧ್ಯಮದವರೊಂದಿಗೆ ಮಾತನಾಡಿದ ರಾಮ್‌ ಗೋಪಾಲ್‌ ವರ್ಮಾ, “ಈ ಸಿನಿಮಾ ತುಂಬಾ ವಿಶೇಷವಾಗಿದೆ. ನಾನು ಚಿಕ್ಕವನಿದ್ದಾಗ ಎಂಟರ್ ದಿ ಡ್ರ್ಯಾಗನ್ ಸಿನಿಮಾ ನೋಡಿದ್ದೆ. ಆ ಕಥೆಯ ನಾಯಕ‌ ಬ್ರೂಸ್ಲಿಯಿಂದ ಸ್ಫೂರ್ತಿ ಪಡೆದುಕೊಂಡಿದ್ದೇನೆ. ಮಾರ್ಷಲ್ ಆರ್ಟ್ಸ್‌ ಇಲ್ಲಿ ಪ್ರಧಾನವಾಗಿದೆ. ಈ ಕಲೆಯನ್ನು ಹೊಂದಿರುವವರು ಬಹಳ ವಿರಳ. ಅದರಲ್ಲಿಯೂ ಹೆಣ್ಣು ಮಕ್ಕಳು ಸ್ವಲ್ಪ ದೂರವೇ ಇದ್ದಾರೆ. ನಾಯಕಿ ಪೂಜಾ ಹನ್ನೆರಡು ವರ್ಷದಿಂದ ಸಮರಕಲೆ ಅಭ್ಯಾಸ ಮಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಆಕೆಯನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿತ್ತು. ಅವರು ಅದ್ಭುತವಾಗಿ ನಟಿಸಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ | ದ್ರೌಪದಿ ಮುರ್ಮು ಅವಹೇಳನ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

ಇದನ್ನೂ ಓದಿ | ದ್ರೌಪದಿ ಮುರ್ಮು ಅವಹೇಳನ: ರಾಮ್ ಗೋಪಾಲ್ ವರ್ಮಾ ವಿರುದ್ಧ ಕೇಸ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kannada New Movie: ʻಸಂಭವಾಮಿ ಯುಗೇ ಯುಗೇʼ ಚಿತ್ರದ ಮೊದಲ ಹಾಡು ರಿಲೀಸ್‌ ಮಾಡಿದ ನಟಿ ಶ್ರುತಿ ಹರಿಹರನ್!

Kannada New Movie: ಖ್ಯಾತ ನಟಿ ಶ್ರುತಿ ಹರಿಹರನ್ ಜಾನಪದ ಶೈಲಿಯ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಅರಸು ಅಂತಾರೆ ಬರೆದಿರುವ ಈ ಹಾಡಿಗೆ ಗೀತಾ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ. ಪೂರನ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ನಕಾಶ್ ಹಾಗೂ ಸ್ಪರ್ಶ ಹಾಡಿದ್ದಾರೆ. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

VISTARANEWS.COM


on

Sambavami Yuge Yuge song release By sruthi hariharan
Koo

ಬೆಂಗಳೂರು: ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ (Kannada New Movie) ನಾಯಕನಾಗಿ ನಟಿಸಿರುವ “ಸಂಭಾವಮಿ ಯುಗೇಯುಗೇ” ಚಿತ್ರದ ಮೊದಲ ಹಾಡು “ಡೋಲು ತಮಟೆ ವಾದ್ಯ” ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ನಟಿ ಶ್ರುತಿ ಹರಿಹರನ್ ಜಾನಪದ ಶೈಲಿಯ ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ಅರಸು ಅಂತಾರೆ ಬರೆದಿರುವ ಈ ಹಾಡಿಗೆ ಗೀತಾ ಮಾಸ್ಟರ್ ನೃತ್ಯ ಸಂಯೋಜಿಸಿದ್ದಾರೆ. ಪೂರನ್ ಶೆಟ್ಟಿಗಾರ್ ಸಂಗೀತ ಸಂಯೋಜಿಸಿದ್ದಾರೆ. ನಕಾಶ್ ಹಾಗೂ ಸ್ಪರ್ಶ ಹಾಡಿದ್ದಾರೆ. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ʻʻಇದು ನನ್ನ ಮೊದಲ ಚಿತ್ರ. ನನ್ನ ಮೇಲೆ ನಂಬಿಕೆ ಇಟ್ಟು ಇಂಥದ್ದೊಂದು ಅವಕಾಶ ಕೊಟ್ಟ ನಿರ್ಮಾಪಕಿ ಪ್ರತಿಭಾ ಅವರಿಗೆ ಧನ್ಯವಾದಗಳು. ಇದೊಂದು ಕಮರ್ಷಿಯಲ್‍ ಥ್ರಿಲ್ಲರ್ ನ ಚಿತ್ರ. ಮಂಡ್ಯ, ಚನ್ನಪಟ್ಟಣ, ರಾಮನಗರ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ನಾನು ಹತ್ತು ವರ್ಷಗಳಿಂದ ಹಲವು ನಿರ್ದೇಶಕರ ಜೊತೆಗೆ ಕೆಲಸ ಮಾಡಿದ್ದೆ. ಇದೊಂದು ಹಳ್ಳಿ ಹಿನ್ನೆಲೆಯ ಚಿತ್ರ. ಹಳ್ಳಿ ಹುಡುಗರು ಓದಿ, ಪಟ್ಟಣಕ್ಕೆ ಹೋಗಿ ನೆಲೆಸುತ್ತಾರೆ. ಇದರಿಂದ ಮುಂದಿನ ತಲೆಮಾರಿನ ಕಥೆ ಏನು? ಹಳ್ಳಿ ಉಳಿಯುವುದು ಹೇಗೆ? ಹಾಗಾಗಿ ಯುವಕರು ಹಳ್ಳಿಯಲ್ಲೇ ನೆಲಸಬೇಕು ಎಂಬುದೆ ಚಿತ್ರದ ಕಥಾ ಸಾರಾಂಶ. ಜೂನ್‍ 21ಕ್ಕೆ ಚಿತ್ರ ಬಿಡುಗಡೆ ಆಗಲಿದೆ. ಇದು ಕಮರ್ಷಿಯಲ್‍ ಚಿತ್ರವಾದರೂ ಇವತ್ತಿನ ತಲೆಮಾರಿನವರಿಗೆ ಕನೆಕ್ಟ್ ಆಗುವ ಹಲವು ಅಂಶಗಳಿವೆʼʼ ಎಂದರು ನಿರ್ದೇಶಕ ಚೇತನ್ ಚಂದ್ರಶೇಖರ್ ಶೆಟ್ಟಿ.

ಇದನ್ನೂ ಓದಿ: Kannada New Movie: ಸಿನಿಮಾ ಆಗುತ್ತಿದೆ ʼಪೆನ್‌ಡ್ರೈವ್ʼ! ಕುತೂಹಲಭರಿತ ಪೋಸ್ಟರ್

ನಾಯಕ ಜಯ್ ಶೆಟ್ಟಿ ಮಾತನಾಡಿ ʻʻನನಗೆ ಆಶ್ರಯ ಕೊಟ್ಟ ಊರಿಗೆ ಏನಾದರೂ ಮಾಡಬೇಕು ಎಂದು ನಾಯಕ ಮುಂದಾಗುತ್ತಾನೆ. ಆ ಹಳ್ಳಿಯ ಪಂಚಾಯ್ತಿ ಅಧ್ಯಕ್ಷನಾಗುತ್ತಾನೆ. ಮುಂದೇನಾಗುತ್ತದೆ ಎಂಬುದು ಚಿತ್ರದ ಕಥೆ. ನಾನು ಹೊಸಬನಾದರೂ ನನ್ನ ಮೇಲೆ ನಂಬಿಕೆ ಇಟ್ಟು, ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರು ಮತ್ತು ನಿರ್ದೇಶಕರಿಗೆ ಧನ್ಯವಾದಗಳುʼʼ ಎಂದರು.

ʻʻನಾನು ಬಿಜಾಪುರ ಮೂಲದವಳು. ಆದರೆ, ಬೆಳೆದಿದ್ದು ಮುಂಬೈನಲ್ಲಿ. ಕನ್ನಡದಲ್ಲಿ ನಟಿಸಬೇಕು ಎಂಬ ಆಸೆ ಇತ್ತು. ಒಂಬತ್ತು ವರ್ಷಗಳ ಕಾಲ ಮಾಡಲಿಂಗ್‍ ಮಾಡಿದ್ದೇನೆ. ಹೀಗಿರುವಾಗಲೇ ಚಿತ್ರದಲ್ಲಿ ನಟಿಸುವ ಅವಕಾಶ ಸಿಕ್ಕಿತು. ನನ್ನ ಭಾಷೆ ಮತ್ತು ನಟನೆಯನ್ನು ತಿದ್ದಿತೀಡಿದ ನಿರ್ದೇಶಕ ಚೇತನ್‍ ಶೆಟ್ಟಿ ಅವರಿಗೆ ಧನ್ಯವಾದಗಳುʼʼ ಎಂದರು ನಾಯಕಿ ನಿಶಾ ರಜಪೂತ್ .

ಪ್ರಮುಖಪಾತ್ರದಲ್ಲಿ ನಟಿಸಿರುವ ಅಶೋಕ್ ಕುಮಾರ್ ಹಾಗೂ ಮಧುರಗೌಡ ಕೂಡ ತಮ್ಮ ಪಾತ್ರದ ಕುರಿತು ಮಾತನಾಡಿದರು. ಚಿತ್ರದಲ್ಲಿ ನಟಿಸಿರುವ ರಾಜೇಂದ್ರ ಕಾರಂತ್‍, ಅಶ್ವಿನ್‍ ಹಾಸನ್‍, ವಿಕ್ಟರಿ ವಾಸು, ಛಾಯಾಗ್ರಾಹಕ ರಾಜು ಹೆಮ್ಮಿಗೆಪುರ, ಕಾರ್ಯಕಾರಿ ನಿರ್ಮಾಪಕ ದಿನೇಶ್ ರಾಜನ್ ಸೇರಿದಂತೆ ಹಲವರು ಈ ಸಮಾರಂಭದಲ್ಲಿ ಹಾಜರಿದ್ದರು. ನಿರ್ಮಾಪಕಿ ಪ್ರತಿಭಾ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು.

Continue Reading

ಸಿನಿಮಾ

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

ಬಾಹುಬಲಿ: ಕ್ರೌನ್ ಆ ಬ್ಲಡ್ ಅನಿಮೇಟೆಡ್ ಸರಣಿ ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ ಬಿಡುಗಡೆಯಾಗಿದ್ದು, ಶರದ್ ಕೇಲ್ಕರ್ (Sharad Kelkar) ಚಿತ್ರದೊಂದಿಗಿನ ತಮ್ಮ ನಂಟನ್ನು ನೆನಪಿಸಿಕೊಂಡಿದ್ದಾರೆ.

VISTARANEWS.COM


on

By

Sharad Kelkar
Koo

ಅದ್ಧೂರಿ ಬಜೆಟ್‌ನ ʼಬಾಹುಬಲಿʼ (bahubali) ಚಿತ್ರದ ಒಂದೊಂದು ದೃಶ್ಯಗಳು ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಸಿನಿಮಾದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷ ಸಮೀಪಿಸಿದರೂ ಈಗಲೂ ಚಿತ್ರದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇದೆ. ʼಬಾಹುಬಲಿʼ ಪಾತ್ರಧಾರಿ ಪ್ರಭಾಸ್‌ಗೆ (actor prabhas) ಧ್ವನಿ ನೀಡಿರುವ ಶರದ್ ಕೇಳ್ಕರ್ (Sharad Kelkar) ತಮ್ಮ ಮರೆಯಲಾಗದ ಅನುಭವವನ್ನು ಹಂಚಿಕೊಂಡಿದ್ದಾರೆ.

ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ (Disney Plus star) ಬಿಡುಗಡೆಯಾಗಿರುವ “ಬಾಹುಬಲಿ: ಕ್ರೌನ್ ಆ ಬ್ಲಡ್” (Baahubali: Crown of Blood) ಅನಿಮೇಟೆಡ್ ಸರಣಿಯು ಈಗ ಚರ್ಚೆಯಲ್ಲಿದೆ. ಬಾಹುಬಲಿ ಮತ್ತು ಮಾಹಿಷ್ಮತಿಯ ಜಗತ್ತಿನಲ್ಲಿ ಇದೂವರೆಗೂ ಕೇಳಿರದ, ಕಂಡಿರದ ಹಾಗೂ ತಿಳಿಯಲಾಗದಿದ್ದ ಅನೇಕ ಘಟನೆಗಳು ಕಥೆಗಳು ಒಂದೊಂದಾಗಿ ಕೇಳಿ ಬರುತ್ತಿವೆ.


ಅನೇಕ ಐತಿಹಾಸಿಕ ಚಿತ್ರಗಳಿಗೆ ಧ್ವನಿ ನೀಡಿ ಖ್ಯಾತರಾಗಿರುವ ಮೂಲತಃ ನಟರೂ ಆಗಿರುವ ಶರದ್ ಕೇಳ್ಕರ್ ಅವರು ಬಾಹುಬಲಿ ನಾಯಕ ಪ್ರಭಾಸ್‌ ಅವರಿಗೆ ಕಂಠದಾನ ಮಾಡಿದ್ದರು. ಈ ಕುರಿತಂತೆ ಅವರು ತಮ್ಮ ಸಂತಸವನ್ನು ಈಗ ಹಂಚಿಕೊಂಡಿದ್ದಾರೆ.

ತನ್ನ ಬಲವಾದ ಧ್ವನಿಗಾಗಿ ಹೆಸರಾಗಿರುವ ಶರದ್ , ಐಕಾನಿಕ್ ‘ಬಾಹುಬಲಿ’ ಸರಣಿಯನ್ನು ಹಿಂದಿ ಭಾಷೆಗೆ ಡಬ್‌ ಮಾಡುವಾಗ ಚಲನಚಿತ್ರ ನಿರ್ಮಾಪಕ ಎಸ್‌.ಎಸ್. ರಾಜಮೌಳಿ ಅವರು ತಮ್ಮ ಆಯ್ಕೆ ಬಗ್ಗೆ ಮೊದಲು ಸಂದೇಹ ಪಟ್ಟಿದ್ದರು. ‘ಬಾಹುಬಲಿ: ದಿ ಬಿಗಿನಿಂಗ್’ ಮತ್ತು ‘ಬಾಹುಬಲಿ: ದಿ ಕನ್‌ಕ್ಲೂಷನ್’ ಎರಡರಲ್ಲೂ ರೆಬೆಲ್ ಸ್ಟಾರ್ ಪ್ರಭಾಸ್ ಮೂಲತಃ ಚಿತ್ರಿಸಿದ ಅಮರೇಂದ್ರ ಬಾಹುಬಲಿ ಮತ್ತು ಮಹೇಂದ್ರ ಬಾಹುಬಲಿ ಪಾತ್ರಗಳಿಗೆ ಧ್ವನಿ ನೀಡಿದ ಕೇಳ್ಕರ್‌ ಅವರು ಎಪಿಕ್ ಸಾಹಸದ ಡಬ್ಬಿಂಗ್ ಕಾರ್ಯದ ಬಗ್ಗೆ ಅನೇಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ.

ಪವನ್ ಕಲ್ಯಾಣ್ ಅಭಿನಯದ 2016 ರ ತೆಲುಗು ಆಕ್ಷನ್- ಕಾಮಿಡಿ ಚಿತ್ರ ‘ಸರ್ದಾರ್ ಗಬ್ಬರ್ ಸಿಂಗ್’ ನಲ್ಲಿ ಕೇಳ್ಕರ್ ತೊಡಗಿಸಿಕೊಂಡಿದ್ದರು. ಈ ವೇಳೆ ಸಿಬ್ಬಂದಿಯೊಬ್ಬ ಅವರ ಗಾಯನವನ್ನು ಗುರುತಿಸಿ ರಾಜಮೌಳಿ ಅವರಿಗೆ ಇವರ ಹೆಸರು ಶಿಫಾರಸು ಮಾಡಿದ್ದರು ಎನ್ನಲಾಗಿದೆ.


ನನಗೆ ‘ಬಾಹುಬಲಿ’ ಬಗ್ಗೆ ಯಾವುದೇ ಕಲ್ಪನೆ ಇರಲಿಲ್ಲ. ಆದರೆ ನಾನು ರಾಜಮೌಳಿ ಅವರ ಹಿಂದಿನ ಚಿತ್ರಗಳಾದ ‘ಮಗಧೀರ’ ನೋಡಿದ್ದೇನೆ. ಒಬ್ಬ ನಟನಾಗಿ ನಾನು ಈ ಮಾಸ್ಟರ್‌ಪೀಸ್‌ನ ಸೃಷ್ಟಿಕರ್ತನನ್ನು ಭೇಟಿಯಾಗಲು ಬಯಸಿದ್ದೆ. ಹಾಗಾಗಿ ನಾನು ನನ್ನ ಧ್ವನಿ ಪರೀಕ್ಷೆಯನ್ನು ಮಾಡಿದೆ. ಟೇಪ್ ನೊಂದಿಗೆ ಮರುದಿನ ಅವರನ್ನು ಸ್ಟುಡಿಯೋದಲ್ಲಿ ಭೇಟಿಯಾದೆ. ನೀವು ಬಾಹುಬಲಿಗಾಗಿ ಡಬ್ಬಿಂಗ್ ಮಾಡುತ್ತಿದ್ದೀರಿ ಎಂದು ಅವರು ಹೇಳಿದಾಗ ನಂಬಲು ಅಸಾಧ್ಯವಾಯಿತು ಎಂದಿದ್ದಾರೆ ಕೇಳ್ಕರ್.

ಈ ಪಾತ್ರವು ಕೇಳ್ಕರ್ ಅವರ ವೃತ್ತಿಜೀವನವನ್ನು ಗಮನಾರ್ಹವಾಗಿ ಹೆಚ್ಚಿಸಿತು. ಮಾತ್ರವಲ್ಲದೆ ಅವರನ್ನು ಅಪಾರ ಅಭಿಮಾನಿಗಳ ಗುಂಪಿಗೆ ಪ್ರೀತಿಸುವಂತೆ ಮಾಡಿತು, ಅವರಿಗೆ “ಬಾಹುಬಲಿಯ ಧ್ವನಿ” ಮತ್ತು ಪ್ರೀತಿಯಿಂದ “ಭಾರತದ ಧ್ವನಿ” ಎಂಬ ಬಿರುದು ಸಿಗುವಂತಾಯಿತು. ಮೊದಲು ನಾನೊಬ್ಬ ನಟ. ಉತ್ತಮವಾಗಿ ಅಭಿನಯಿಸಬಲ್ಲೆ. ವಿವಿಧ ಬಗೆಯ ಪಾತ್ರಗಳನ್ನು ಮಾಡುತ್ತಾ ಬಂದಿದ್ದೇನೆ. ಆದರೂ ಒಳ್ಳೆಯ ಕಾಲಕ್ಕೆ ಕಾಯುತ್ತಿದ್ದೇನೆ. ಅತ್ಯುತ್ತಮವಾದದ್ದು ಇನ್ನು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎನ್ನುತ್ತಾರೆ ಶರದ್.

ಇದನ್ನೂ ಓದಿ: Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಎಸ್.ಎಸ್. ರಾಜಮೌಳಿ- ಶರದ್‌ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿದ್ದು, ಜೀವನ್ ಜೆ. ಕಾಂಗ್, ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ ಎಂದು ಶರದ್ ಹೇಳಿದ್ದಾರೆ.


ಅನಿಮೇಟೆಡ್ ಸರಣಿ ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಹಿಂದಿ ಭಾಷೆಗೆ ಭಾಷಾಂತರವಾಗಿದ್ದು, ಕೇಲ್ಕರ್ ಧ್ವನಿ ನೀಡಿದ್ದಾರೆ. ಈ ಸರಣಿಯು ಮೇ 17ರಿಂದ ಡಿಸ್ನಿ ಪ್ಲಸ್‌ನಲ್ಲಿ ಪ್ರದರ್ಶನ ಕಾಣುತ್ತಿದೆ.

Continue Reading

South Cinema

Rave party: ರೇವ್ ಪಾರ್ಟಿಯ ಕುರಿತು ತೆಲುಗು ನಟಿ ಆಶಿ ರಾಯ್ ಸ್ಫೋಟಕ ಹೇಳಿಕೆ!

Rave party: ರೇವ್‌ ಪಾರ್ಟಿಯಲ್ಲಿ ಹೇಮಾ ಮತ್ತು ಶ್ರೀಕಾಂತ್‌ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು. ಇದೀಗ ಈ ಪಾರ್ಟಿಯಲ್ಲಿ ಆಶಿ ರಾಯ್‌ ಇದ್ದರು ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಲುಗು ನಟಿ ಹೇಮಾ (telugu actress Hema) ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಅಲ್ಲಿ ತಾನಿರಲಿಲ್ಲ ಎಂದು ಹೇಮಾ ವಿಡಿಯೋ ಸಂದೇಶ ಹರಿಬಿಟ್ಟಿದ್ದು, ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ.

VISTARANEWS.COM


on

Rave party telugu actress Ashi Roy in party
Koo

ಬೆಂಗಳೂರು: ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದ ರೇವ್‌ ಪಾರ್ಟಿಯಲ್ಲಿ (Rave party) ತೆಲುಗು ನಟಿ ಹೇಮಾ (telugu actress Hema) ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದರು. ಆದರೆ ಅಲ್ಲಿ ತಾನಿರಲಿಲ್ಲ ಎಂದು ಹೇಮಾ ವಿಡಿಯೋ ಸಂದೇಶ ಹರಿಬಿಟ್ಟಿದ್ದರು. ಬಳಿಕ ಪೊಲೀಸರು, ಆಕೆ ಪಾರ್ಟಿಯಲ್ಲಿ ಭಾಗಿಯಾಗಿದ್ದನ್ನು ಖಚಿತಪಡಿಸಿದ್ದರು. ಈಗಾಗಲೇ ಪಾರ್ಟಿ ಆಯೋಜಿಸಿದ್ದ ಐವರನ್ನು ಬಂಧಿಸಲಾಗಿದೆ. ಈಗ ಬೆಂಗಳೂರಿನ ರೇವ್ ಪಾರ್ಟಿಯಲ್ಲಿ ಮತ್ತೊಬ್ಬ ನಟಿ ಹೆಸರು ಕೇಳಿ ಬಂದಿದೆ. ತೆಲುಗಿನ ನಟಿ ಆಶಿ ರಾಯ್ ತಾನು ಪಾರ್ಟಿಯಲ್ಲಿ ಇದ್ದೆ ಎಂದು ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

ರೇವ್‌ ಪಾರ್ಟಿಯಲ್ಲಿ ಹೇಮಾ ಮತ್ತು ಶ್ರೀಕಾಂತ್‌ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು. ಇದೀಗ ಈ ಪಾರ್ಟಿಯಲ್ಲಿ ಆಶಿ ರಾಯ್‌ ಇದ್ದರು ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಆಶಿ ರಾಯ್‌ ವಿಡಿಯೊದಲ್ಲಿ ಮಾತನಾಡಿ ʻʻಅದೊಂದು ಬರ್ತ್‌ಡೇ ಪಾರ್ಟಿಯಾಗಿತ್ತು. ಒಳಗೆ ಏನು ನಡೀತಿತ್ತು ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ದಯವಿಟ್ಟು ನೀವೆಲ್ಲ ನನ್ನ ಬೆಂಬಲಿಸಿ. ನಾನು ಕಷ್ಟಪಟ್ಟು ಉದ್ಯಮದಲ್ಲಿ ಬೆಳೆಯುತ್ತಿರುವ ಹುಡುಗಿ. ದಯವಿಟ್ಟು ನನಗೆ ಸಹಾಯ ಮಾಡಿʼʼ ಎಂದು ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಆಶಿ ರಾಯ್‌ ಹಲವು ಸಂದರ್ಶನದಲ್ಲಿ ಪಾರ್ಟಿಯಲ್ಲಿ ಹೇಮಾ ಅವರನ್ನು ನೋಡಿಲ್ಲ ಎಂದಿದ್ದಾರೆ. ಆಶಿರಾಯ್‌ ಅವರು ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

ರೇವ್‌ ಪಾರ್ಟಿಯಲ್ಲಿ ನಾನಿಲ್ಲ ಎಂದಿದ್ದ ತೆಲುಗು ನಟಿ ಹೇಮಾ

ಮೂಲಗಳ ಪ್ರಕಾರ, ಮುಜುಗರ ತಪ್ಪಿಸಲು ಅದೇ ಫಾರಂ ಹೌಸ್‌ನಲ್ಲೇ ವಿಡಿಯೋ ಚಿತ್ರೀಕರಿಸಿ ಹೇಮಾ ಅವರು ಹರಿಬಿಟ್ಟಿದ್ದರು. ಹೆಬ್ಬಗೋಡಿ ಫಾರ್ಮ್ ಹೌಸ್ ಒಳಗಡೆಯೇ ವಿಡಿಯೋ ಮಾಡಿ, ತಾನು ಹೈದರಾಬಾದ್‌ ಫಾರ್ಮ್ ಹೌಸ್‌ನಲ್ಲಿದ್ದೀನಿ ಎಂದು ಹೇಳಿದ್ದರು. ಆದರೆ ಪೊಲೀಸರು ಆಕೆಯ ತಪ್ಪು ಮಾಹಿತಿಯನ್ನು ಬಯಲು ಮಾಡಿದ್ದರು.

ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಸದ್ಯ ಫಾರ್ಮ್ ಹೌಸಿನ ಇಂಚಿಂಚನ್ನೂ ಬಿಡದೆ ಜಾಲಾಡುತ್ತಿದ್ದಾರೆ. 3 ಜನ ಡ್ರಗ್ ಪೆಡ್ಲರ್‌ಗಳು, ಆಯೋಜಕ ವಾಸು ಸೇರಿ ಐದು ಜನರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್‌ಗಳೂ ಭಾಗಿಗಳಾಗಿದ್ದರು. ಇವರು ಯಥೇಚ್ಛವಾಗಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು. ವಾಸು ಹುಟ್ಟಿದ ಹಬ್ಬಕ್ಕೆ ಪಾರ್ಟಿ ಆಯೋಜಿಸಿದ ಆರ್ಗನೈಸರ್ ಅರುಣ್, ಸಿದ್ಧಿಕಿ, ರಣಬೀರ್, ನಾಗಬಾಬುರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾದಕ ವಸ್ತು ಸಿಕ್ಕಿದಂತಹ ಐಷಾರಾಮಿ ಮರ್ಸಿಡಿಸ್‌ ಬೆಂಜ್‌, ರೇಂಜ್ ರೋವರ್, ಆಡಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಪೊಲೀಸರು ರೇವ್‌ ಪಾರ್ಟಿಯಲ್ಲಿದ್ದ 101 ಮಂದಿಯನ್ನೂ ಕೂರಿಸಿಕೊಂಡು, ಯಾರ್ಯಾರು ಡ್ರಗ್ಸ್‌ ತೆಗೆದುಕೊಂಡಿದ್ದಾರೆ ಎಂಬುದಕ್ಕೆ ವೈದ್ಯಕೀಯ ಪರೀಕ್ಷೆ ಮಾಡಿಸುತ್ತಿದ್ದಾರೆ. ಮೆಡಿಕಲ್‌ ಟೀಮನ್ನು ಫಾರಂ ಹೌಸ್‌ಗೆ ಕರೆಸಲಾಗಿದ್ದು, ಮೆಡಿಕಲ್‌ ಮುಗಿಯುವವರೆಗೆ ಎಲ್ಲ ಅತಿಥಿಗಳನ್ನೂ ಫಾರಂ ಹೌಸ್‌ ತೊರೆಯದಂತೆ ನಿರ್ಬಂಧಿಸಲಾಗಿದೆ. ಸದ್ಯ 30 ಜನ ಹುಡುಗಿಯರು, 71 ಜನ ಪುರುಷರು ಹೀಗೆ ಒಟ್ಟು 101 ಜನರ ವಿಚಾರಣೆ ನಡೆಯುತ್ತಿದೆ.

Continue Reading

ಟಾಲಿವುಡ್

List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

List of Movies Releasing: ಈ ವಾರ ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ (Kannada New Movie) ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಸಿನಿಮಾ ತೆರೆಗೆ ಬರುತ್ತಿದೆ. ಜೂನ್ 4ಕ್ಕೆ ಲೋಕಸಭೆ ಚುನಾವಣೆ ಫಲಿತಾಂಶ ಸಹ ಹೊರ ಬೀಳಲಿದೆ. ಆ ಬಳಿಕವೇ ಚಿತ್ರರಂಗ ಸಹಜ ಸ್ಥಿತಿಗೆ ಮರಳುವ ಸಾಧ್ಯತೆಯಿದೆ. ದೊಡ್ಡ ಸಿನಿಮಾಗಳು ಅಲ್ಲದೇ ಇದ್ದರೂ ಒಂದಷ್ಟು ಸಿನಿಮಾಗಳು ಈ ವಾರ ಬಿಡುಗಡೆಗೆ ಸಜ್ಜಾಗಿವೆ. ಅವುಗಳು ಯಾವುದೆಲ್ಲ ನೋಡೋಣ!

VISTARANEWS.COM


on

List of Movies Releasing From may 24
Koo

ಬೆಂಗಳೂರು: ಐಪಿಎಲ್‌, ಲೋಕಸಭಾ ಎಲೆಕ್ಷನ್‌ನಿಂದಾಗಿ ಕನ್ನಡ ಸಿನಿಮಾಗಳು (List of Movies Releasing) ಪ್ರೇಕ್ಷಕರ ಮುಂದೆ ಬಂದಿಲ್ಲ. ಜೂನ್ 4ಕ್ಕೆ ಲೋಕಸಭೆ ಚುನಾವಣೆ ಫಲಿತಾಂಶ ಸಹ ಹೊರ ಬೀಳಲಿದೆ. ಆ ಬಳಿಕವೇ ಚಿತ್ರರಂಗ ಸಹಜ ಸ್ಥಿತಿಗೆ ಮರಳುವ ಸಾಧ್ಯತೆಯಿದೆ. ದೊಡ್ಡ ಸಿನಿಮಾಗಳು ಅಲ್ಲದೇ ಇದ್ದರೂ ಒಂದಷ್ಟು ಸಿನಿಮಾಗಳು ಈ ವಾರ ಬಿಡುಗಡೆಗೆ ಸಜ್ಜಾಗಿವೆ. ಅವುಗಳು ಯಾವುದೆಲ್ಲ ನೋಡೋಣ…

‘ದಿ ಜಡ್ಜ್‌ಮೆಂಟ್’

ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ (tKannada New Movie) ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ಗುರುರಾಜ್ ಕುಲಕರ್ಣಿ ನಿರ್ದೇಶನದ ‘ದಿ ಜಡ್ಜ್‌ಮೆಂಟ್’ ಸಿನಿಮಾ ಈ ವಾರ ತೆರೆಗೆ ಬರ್ತಿದೆ.ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿ ವರ್ಮ ಸಾಹಸ ನಿರ್ದೇಶನ, ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ‘ದ ಜಡ್ಜ್ ಮೆಂಟ್’ ಚಿತ್ರಕ್ಕಿದೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಮೂರನೇ ಕೃಷ್ಣಪ್ಪ

ವಿಭಿನ್ನ ಕಥಾನಕದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಹೊರಟಿರುವ ಸಿನಿಮಾ ʻಮೂರನೇ ಕೃಷ್ಣಪ್ಪʼ. ಲೂಸ್ ಮಾದ ಯೋಗಿ (Kannada New Movie) ಸಂಭಾಷಣೆಯಿಂದ ಶುರುವಾಗುವ ಟ್ರೈಲರ್‌ನಲ್ಲಿ ಕೋಲಾರ‌ ಕನ್ನಡ‌ , ರಂಗಾಯಣ ರಘು, ಸಂಪತ್ ಮೈತ್ರಿಯಾಯಂತಹ ಅದ್ಭುತ ಕಲಾವಿದರ ಅಭಿನಯ ಗಮನ ಸೆಳೆಯುತ್ತದೆ. ಹಳ್ಳಿ ಸೊಗಡನ್ನು ಸೊಗಸಾಗಿ ಕಟ್ಟಿಕೊಡಲಾಗಿದೆ. ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು, ಸಿನಿಪ್ರಿಯರಿಗೆ ಮನರಂಜನೆ ಗ್ಯಾರಂಟಿ ಎಂಬ ಸಂದೇಶ ರವಾನಿಸಿದೆ. ರೆಡ್ ಡ್ರ್ಯಾಗನ್ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ‘ಮೂರನೇ ಕೃಷ್ಣಪ್ಪ’ ಸಿನಿಮಾಗೆ ಮೋಹನ್ ರೆಡ್ಡಿ ಜಿ, ರವಿಶಂಕರ್ ಹಣ ಹೂಡಿದ್ದಾರೆ. ಆನೇಕಲ್ ಭಾಗದ ಭಾಷೆಯ ಸೊಬಗನ್ನು ಇಟ್ಟುಕೊಂಡು ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ನಾಯಕನಾಗಿ ನಟಿಸುತ್ತಿದ್ದರೆ, ಪ್ರಮುಖ ಪಾತ್ರದಲ್ಲಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿದ್ದಾರೆ. ಮೇ 24ಕ್ಕೆ ಮೂರನೇ ಕೃಷ್ಣಪ್ಪನ ಕಥೆ ತೆರೆಗೆ ಬರಲಿದೆ.

3ದೇವಿ

3ದೇವಿ ಅಶ್ವಿನ್ ಮ್ಯಾಥ್ಯೂ ನಿರ್ದೇಶನದ 3ದೇವಿ ಸಿನಿಮಾ ಕೂಡ ಈ ವಾರವೇ ಪ್ರೇಕ್ಷಕರ ಮುಂದೆ ಬರಲಿದೆ. ಮೊಗ್ಗಿನ ಮನಸ್ಸಿನ ಶುಭಾ ಪೂಂಜಾ (Shubha Poonja) ದೇವಿ ರೂಪದಲ್ಲಿಯೇ ಅಭಿನಯಿಸಿದ್ದಾರೆ. ಸಂಧ್ಯಾ ಮತ್ತು ಜ್ಯೋತ್ಸ್ನಾ ತಾರಾಗಣದಲ್ಲಿದ್ದಾರೆ.

ಎವಿಡೆನ್ಸ್

ಸಿ. ಪಿ ಪ್ರವೀಣ್ ನಿರ್ದೇಶನದ ‘ಎವಿಡೆನ್ಸ್’ ಚಿತ್ರ ಇದೇ ಶುಕ್ರವಾರ ತೆರೆ ಕಾಣುತ್ತಿದೆ. ʼಮಂಗಳಗೌರಿ ಮದುವೆ’ ಸೇರಿ ಅನೇಕ ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿರುವ, ಅದರಲ್ಲಿಯೂ ದೇವಿ ಪಾತ್ರದಲ್ಲಿ ಹೆಚ್ಚು ಕಾಣಿಸಿಕೊಂಡಿರುವ ನಟಿ ಮಾನಸಾ ಜೋಶಿ ಅವರು ಈ ಬಾರಿ ‘ಎವಿಡೆನ್ಸ್’ ಎನ್ನುವ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಈ 3 ಚಿತ್ರಗಳ ಜೊತೆಗೆ ‘ಸೆಲ್ಯೂಟ್’ ಎನ್ನುವ ಮತ್ತೊಂದು ಕನ್ನಡ ಸಿನಿಮಾ ತೆರೆಗೆ ಬರಲಿದೆ.

ಟರ್ಬೋ

ಮಮ್ಮುಟ್ಟಿ (Mammootty) ಅವರು ಈ ಹಿಂದೆ ಘೋಷಿಸಿದ ಮೂರು ಸಿನಿಮಾಗಳ ಬಿಡುಗಡೆಗಳಲ್ಲಿ ʻಟರ್ಬೋʼ (Turbo Trailer Out) ಕೂಡ ಒಂದು. ರಾಜ್ ಬಿ ಶೆಟ್ಟಿ (Raj B Shetty) ಮತ್ತು ತೆಲುಗು ನಟ ಸುನೀಲ್ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇಲ್ಲಿ ರಾಜ್‌ ಬಿ ಶೆಟ್ಟಿ ಅವರದ್ದು ಸಣ್ಣ ಪಾತ್ರ ಏನಲ್ಲ. ಮಮ್ಮುಟಿಗೆ ಪೈಪೋಟಿ ಕೊಡುವಂತಿದೆ. ಟರ್ಬೊ’ ಸಿನಿಮಾ ನಿರ್ದೇಶಕ ವೈಶಾಖ್ ಜತೆ ಇದು ಮೂರನೇ ಬಾರಿ ಮಮ್ಮುಟ್ಟಿ ಜತೆ ಕೈ ಜೋಡಿಸುತ್ತಿದ್ದಾರೆ. ಪೊಕ್ಕಿರಿ ರಾಜ ಮತ್ತು ಮಧುರ ರಾಜ ಸಿನಿಮಾಗಳ ಬಳಿಕ ಮಮ್ಮುಟ್ಟಿಯವರ ಮೂರನೇ ಚಿತ್ರವಾಗಿದೆ.

ಇದನ್ನೂ ಓದಿ: Dina Bhavishya : ಈ ರಾಶಿಯವರು ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ

ಚಲನಚಿತ್ರ ನಿರ್ಮಾಪಕ ಮಿಧುನ್ ಮ್ಯಾನುಯೆಲ್ ಥಾಮಸ್ ಬರೆದ ಚಿತ್ರಕಥೆಯನ್ನು ಈ ಸಿನಿಮಾ ಆಧರಿಸಿದೆ. ಇದು ಆ್ಯಕ್ಷನ್ ಕಾಮಿಡಿ ಎಂದು ಹೇಳಲಾಗುತ್ತದೆ. ಸಿನಿಮಾದಲ್ಲಿ ಮಮ್ಮುಟ್ಟಿಗೆ ನಾಯಕಿಯಾಗಿ ನಟಿ ಜ್ಯೋತಿಕಾ ಕಾಣಿಸಿಕೊಂಡಿದ್ದು, ಒಂದು ದಶಕದ ಬಳಿಕ ಮಲಯಾಳಂ ಚಿತ್ರರಂಗಕ್ಕೆ ಹಿಂತಿರುಗಿದ್ದಾರೆ.ಇದೊಂದು ಆಕ್ಷನ್ ಕಾಮಿಡಿ ಎಂಟರ್‌ಟೈನರ್ ಆಗಿದ್ದು ಮೇ 23ಕ್ಕೆ ತೆರೆಗೆ ಬರಲಿದೆ. ಆಟೋ ಬಿಲ್ಲ ಆಗಿ ತೆಲುಗು ನಟ ಸುನೀಲ್ ಕೂಡ ಕಾಣಿಸಿಕೊಂಡಿದ್ದಾರೆ. ಅಂಜನಾ ಜಯಪ್ರಕಾಶ್, ಕಬೀರ್ ದುಹಾನ್ ಸಿಂಗ್, ಸಿದ್ದಿಕಿ ಸೇರಿದಂತೆ ದೊಡ್ಡ ತಾರಾಗಣ ‘ಟರ್ಬೋ’ ಚಿತ್ರದಲ್ಲಿದೆ. ವಿಷ್ಣು ಶರ್ಮಾ ಛಾಯಾಗ್ರಹಣ, ಕ್ರಿಸ್ಟೋ ಕ್ಸೇವಿಯರ್ ಸಂಗೀತ ಚಿತ್ರಕ್ಕಿದೆ.

Continue Reading
Advertisement
Road Accident
ಕರ್ನಾಟಕ3 mins ago

Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Porsche Car Crash
ದೇಶ3 mins ago

Porsche Crash: ಇಬ್ಬರ ಸಾವಿಗೆ ಕಾರಣವಾದ 17 ವರ್ಷದ ಬಾಲಕನಿಗೆ ಪೋರ್ಶೆ ಕಾರು ಸಿಕ್ಕಿದ್ದು ʼಬರ್ತ್‌ಡೇ ಗಿಫ್ಟ್‌ʼ!

Electric Scooters
ಪ್ರಮುಖ ಸುದ್ದಿ3 mins ago

Electric Scooters : ದೊಡ್ಡ ಬೂಟ್​ ಸ್ಪೇಸ್ ಇರುವಂಥ 5 ಎಲೆಕ್ಟ್ರಿಕ್​ ಸ್ಕೂಟರ್​ಗಳು ಇವು

Shreyanka Patil
ಕ್ರೀಡೆ10 mins ago

Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

Kendall Jenner American model flaunted
ಬಾಲಿವುಡ್34 mins ago

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

How To Get Rid Of Cockroaches
ಲೈಫ್‌ಸ್ಟೈಲ್38 mins ago

How To Get Rid Of Cockroaches: ಜಿರಳೆಗಳು ಮನೆಯೊಳಗೆ ಬರದಂತೆ ಮಾಡುವ ಈ ಉಪಾಯಗಳು ನಿಮಗೆ ತಿಳಿದಿದೆಯೆ?

Lockup Death
ಕರ್ನಾಟಕ40 mins ago

Lockup Death: ಚನ್ನಗಿರಿ ಆದಿಲ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

theft Case in Raichur
ರಾಯಚೂರು40 mins ago

Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Swati Maliwal
ದೇಶ46 mins ago

Swati Maliwal case: “ರೇಪ್‌, ಕೊಲೆ ಮಾಡೋದಾಗಿ ಬೆದರಿಕೆ ಬರ್ತಿದೆ”- ಸ್ವಾತಿ ಮಲಿವಾಲ್‌ ಮತ್ತೊಂದು ಆರೋಪ

India Head Coach
ಕ್ರಿಕೆಟ್56 mins ago

India Head Coach: ಕೋಚ್​ ಹುದ್ದೆಗೆ ನಾನು ರೆಡಿ; ಆದರೆ ಒಂದು ಷರತ್ತು ಎಂದ ಗಂಭೀರ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 week ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 week ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌