Lakshmi Manchu: ಕ್ಯಾಮೆರಾಗೆ ಅಡ್ಡ ಬಂದ ವ್ಯಕ್ತಿಗೆ ಹೊಡೆದ ನಟಿ; ನಾನು ಮಾಡಿದ್ದೇ ಸರಿ ಎಂದ ಲಕ್ಷ್ಮಿ ಮಂಚು! - Vistara News

South Cinema

Lakshmi Manchu: ಕ್ಯಾಮೆರಾಗೆ ಅಡ್ಡ ಬಂದ ವ್ಯಕ್ತಿಗೆ ಹೊಡೆದ ನಟಿ; ನಾನು ಮಾಡಿದ್ದೇ ಸರಿ ಎಂದ ಲಕ್ಷ್ಮಿ ಮಂಚು!

Lakshmi Manchu: ಕ್ಯಾಮೆರಾಗೆ ಅಡ್ಡ ಬಂದ ವ್ಯಕ್ತಿಗೆ ಹೊಡೆದ ಕುರಿತು ನಟಿ ಲಕ್ಷ್ಮಿ ಮಾತನಾಡಿದ್ದಾರೆ. ʻʻನಾನು ಏನು ಮಾಡಿದ್ದೇನೋ ಅದು ಸರಿಯಾಗಿದೆ. ಏಟಿಗೆ ಆ ವ್ಯಕ್ತಿ ಅರ್ಹರುʼʼ ಎಂದು ಹೇಳಿದ್ದಾರೆ.

VISTARANEWS.COM


on

Lakshmi Manchu hitting man
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇತ್ತೀಚೆಗೆ ಟಾಲಿವುಡ್‌ ನಟಿ ಲಕ್ಷ್ಮಿ ಮಂಚು (Lakshmi Manchu) ಸಂದರ್ಶನದ ವೇಳೆ ಕ್ಯಾಮೆರಾ ಮುಂದೆ ನಡೆದು ಅಡ್ಡ ಬಂದ ವ್ಯಕ್ತಿಗೆ ಹೊಡೆದು ಸುದ್ದಿಯಾಗಿದ್ದರು. ನಟಿಯ ಈ ವರ್ತನೆಗೆ (Lakshmi Manchu justifies) ಸಾಕಷ್ಟು ಟ್ರೋಲ್‌ಗೆ ಗುರಿಯಾಗಿದ್ದರು. ಆದರೀಗ ನಟಿ ಈ ಬಗ್ಗೆ ಮಾತನಾಡಿದ್ದಾರೆ. ʻʻನಾನು ಏನು ಮಾಡಿದ್ದೇನೋ ಅದು ಸರಿಯಾಗಿದೆ. ಏಟಿಗೆ ಆ ವ್ಯಕ್ತಿ ಅರ್ಹರುʼʼ ಎಂದು ಹೇಳಿದ್ದಾರೆ.

ಸೈಮಾ ಪ್ರಶಸ್ತಿ ( SIIMA 2023) ಪ್ರದಾನ ಸಮಾರಂಭದಲ್ಲಿ ಈ ಘಟನೆ ನಡೆದಿತ್ತು. ಇದೀಗ ನಟಿ ಈ ಬಗ್ಗೆ ಮಾತನಾಡಿ ʻʻನಾನು ರೆಡ್ ಕಾರ್ಪೆಟ್ ಮೇಲೆ ಇದ್ದೇನೆ ಎಂದು ಆ ವ್ಯಕ್ತಿಗೆ ಚೆನ್ನಾಗಿ ತಿಳಿದಿತ್ತು. ಇದು ಯಾರೋ ಸುಮ್ಮನೆ ವಿಡಿಯೊ ತೆಗೆದಿದ್ದಲ್ಲ. ಆತ ತುಂಬಾ ನಿರ್ಲಕ್ಷ್ಯದಿಂದಿದ್ದರು. ಕ್ಯಾಮೆರಾದ ಮುಂದೆ ನೋಡಿಯೂ ಹಾಗೇ ನಡೆದುಕೊಂಡು ಹೋದರು. ನಾನೊಬ್ಬ ನಟಿ, ನನ್ನ ಕ್ಯಾಮೆರಾ ಮುಂದೆ ಬರಬೇಡಿ. ಯಾವತ್ತೂ ಯಾವುದೇ ಕಲಾವಿದರ ಜತೆ ಹಾಗೆ ಮಾಡಬೇಡಿ. ನಾನು ಏನು ಮಾಡಿದ್ದೇನೋ ಅದು ಸರಿಯಾಗಿದೆ. ಆ ಏಟಿಗೆ ಆ ವ್ಯಕ್ತಿ ಅರ್ಹರುʼʼ ಎಂದು ಹೇಳಿದ್ದಾರೆ.

ನಟಿ ಮಾತು ಮುಂದುವರಿಸಿ ʻʻನನಗೆ ಈ ವಿಡಿಯೊ ವೈರಲ್‌ ಆಗುತ್ತದೆ ಎಂಬ ವಿಚಾರ ಕೂಡ ತಿಳಿದಿತ್ತು. ಇಂದಿನ ಜಗತ್ತಿನಲ್ಲಿ, ನಿಜವಾಗಿಯೂ ಏನಾಯಿತು ಎಂಬುದನ್ನು ತಿಳಿದುಕೊಳ್ಳಲು ಯಾರಿಗೂ ಸಮಯ ಅಥವಾ ತಾಳ್ಮೆ ಇಲ್ಲ. ಎಲ್ಲರೂ ನನ್ನನ್ನು ಅರ್ಥಮಾಡಿಕೊಳ್ಳುತ್ತಾರೆ ಎಂದು ನಾನು ನಿರೀಕ್ಷಿಸಲು ಸಾಧ್ಯವಿಲ್ಲ. ಅಲ್ಲದೆ, ನನ್ನನ್ನು ಸಾಬೀತುಪಡಿಸಬೇಕೆಂಬುದು ನನಗಿಲ್ಲʼʼ ಎಂತಲೂ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: SIIMA 2023: ʼಸೈಮಾʼದಲ್ಲೂ ಕಾಂತಾರ ಕಲರವ; ಅತಿ ಹೆಚ್ಚು ಪ್ರಶಸ್ತಿ ಬಾಚಿದ ದಾಖಲೆ!

ಆಗಿದ್ದೇನು?

ದುಬೈನ ಅಬುಧಾಬಿಯಲ್ಲಿ ಇತ್ತೀಚೆಗೆ ನಡೆದ SIIMA ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ರೆಡ್ ಕಾರ್ಪೆಟ್‌ನಲ್ಲಿ ಸಂದರ್ಶಕರೊಂದಿಗೆ ನಟಿ ಮಾತನಾಡುತ್ತಿದ್ದರು. ಈ ವೇಳೆ ಒಬ್ಬ ವ್ಯಕ್ತಿ ಕ್ಯಾಮೆರಾ ಮುಂದೆ ನಡೆಯುತ್ತಾರೆ. ಕೋಪಗೊಂಡ ಲಕ್ಷ್ಮಿ ಮಂಚು ಅವರ ಬೆನ್ನಿಗೆ ಹೊಡೆದಿದ್ದಾರೆ. ಜತೆಗೆ ಕೆಟ್ಟ ಶಬ್ದದಿಂದ ಬೈದಿದ್ದಾರೆ. ಇನ್ನೊಬ್ಬ ವ್ಯಕ್ತಿ ಕೂಡ ಅವರ ಸಂದರ್ಶನಕ್ಕೆ ಅಡ್ಡಿ ಮಾಡಲು ಪ್ರಯತ್ನಿಸಿದಾಗ, ‘ಕ್ಯಾಮೆರಾ ಹಿಂದೆಯಿಂದ ಹೋಗಪ್ಪ. ಇದು ಬೇಸಿಕ್ ತಿಳಿವಳಿಕೆ’ ಎಂದಿದ್ದಾರೆ.

ಮಂಚು ಲಕ್ಷ್ಮಿ ತೆಲುಗಿನಲ್ಲಿ ಸಖತ್‌ ಫೇಮಸ್‌. ರಿಯಾಲಿಟಿ ಶೋ, ನಿರೂಪಕಿಯಾಗಿ ನಟಿ ಮಿಂಚುತ್ತಿದ್ದಾರೆ. ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಬೆಳೆಯುತ್ತಿರುವ ಇವರು ಒಳ್ಳೆಯ ಸಿನಿಮಾ ಅವಕಾಶಗಳನ್ನು ಪಡೆಯುತ್ತಿದ್ದಾರೆ. ನಟಿ ಸೈಮಾ ಅವಾರ್ಡ್ಸ್, ಫಿಲ್ಮ್​ಫೇಮ್‌ ಅವಾರ್ಡ್ಸ್ ಸೌತ್ ಹಾಗೂ ಎರಡು ರಾಜ್ಯ ನಂದಿ ಪ್ರಶಸ್ತಿ ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Rashmika Mandanna: ಸಮಾರಂಭಗಳಲ್ಲಿ ರಶ್ಮಿಕಾ ಇಂಗ್ಲೀಷ್‌ ಏಕೆ ಮಾತನಾಡಲ್ಲ? ನಟಿ ಕೊಟ್ಟ ಸ್ಪಷ್ಟನೆ ಏನು?

Rashmika Mandanna: ಆನಂದ್ ದೇವರಕೊಂಡ ಅವರ ಮುಂಬರುವ ಚಿತ್ರ `ಗಂ ಗಂ ಗಣೇಶ’ ( Gam Gam Ganesha) ಸಿನಿಮಾದ ಪ್ರಿ-ರಿಲೀಸ್ ಸಮಾರಂಭದಲ್ಲಿ ಭಾಗವಹಿಸಿದ್ದರು. ಈವೆಂಟ್‌ನ ಅವರ ಕೆಲವು ಫೋಟೊ ಹಾಗೂ ವಿಡಿಯೊಗಳನ್ನು ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಇದೀಗ ರಶ್ಮಿಕಾ ಫ್ಯಾನ್ಸ್‌ ಎಕ್ಸ್‌ನಲ್ಲಿ ರಶ್ಮಿಕಾ ಅವರು ಇಂಗ್ಲಿಷ್‌ನಲ್ಲಿ ಮಾತನಾಡಬೇಕು ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ರಶ್ಮಿಕಾ ಉತ್ತರವನ್ನೂ ನೀಡಿದ್ದಾರೆ.

VISTARANEWS.COM


on

Rashmika Mandanna shares why she doesn’t speak English
Koo

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗೆ ಆನಂದ್ ದೇವರಕೊಂಡ ಅವರ ಮುಂಬರುವ ಚಿತ್ರ `ಗಂ ಗಂ ಗಣೇಶ’ ( Gam Gam Ganesha) ಸಿನಿಮಾದ ಪ್ರಿ-ರಿಲೀಸ್ ಸಮಾರಂಭದಲ್ಲಿ ಭಾಗವಹಿಸಿದ್ದರು. ಈವೆಂಟ್‌ನ ಅವರ ಕೆಲವು ಫೋಟೊ ಹಾಗೂ ವಿಡಿಯೊಗಳನ್ನು ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಇದೀಗ ರಶ್ಮಿಕಾ ಫ್ಯಾನ್ಸ್‌ ಎಕ್ಸ್‌ನಲ್ಲಿ ರಶ್ಮಿಕಾ ಅವರು ಇಂಗ್ಲಿಷ್‌ನಲ್ಲಿ ಮಾತನಾಡಬೇಕು ಎಂದು ಮನವಿ ಮಾಡಿದ್ದಾರೆ. ಈ ಬಗ್ಗೆ ರಶ್ಮಿಕಾ ಉತ್ತರವನ್ನೂ ನೀಡಿದ್ದಾರೆ.

ರಶ್ಮಿಕಾ ಫ್ಯಾನ್ಸ್‌ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ ʻʻನೀವು ಇಂಗ್ಲಿಷ್‌ನಲ್ಲಿ ಮಾತನಾಡಲು ವಿನಂತಿ. ಇಂದು ನೀವು ಈವೆಂಟ್‌ನಲ್ಲಿ ತುಂಬ ಸುಂದರವಾಗಿ ಕಾಣುತ್ತೀದ್ದೀರಿ. ನಿಮ್ಮನ್ನು ನೋಡಿ ನಮಗೆ ತುಂಬಾ ಸಂತೋಷವಾಯಿತು, ಆದರೆ ನಾವು ನಿಮ್ಮನ್ನು ನೋಡಿ ಆನಂದಿಸುವಷ್ಟು ನಿಮ್ಮ ಮಾತುಗಳನ್ನು ಕೇಳಿಯೂ ಖುಷಿ ಪಡುತ್ತೇವೆ. ಆದರೆ, ನೀವು ತೆಲುಗಿನಲ್ಲಿ ಮಾತನಾಡುವುದನ್ನು ಮುಂದುವರಿಸಿದ್ದೀರಿ, ಅದು ನಮಗೆ ಅರ್ಥವಾಗಲಿಲ್ಲ. ಒಂದು ವೇಳೆ ನಾರ್ಥ್‌ ಸೈಡ್‌ ನಿಮಗೆ ಅಭಿಮಾನಿಗಳಿದ್ದರೆ, ಅವರೂ ನಿಮ್ಮ ಮಾತನ್ನು ಕೇಳಲು ಇಷ್ಟಪಡುತ್ತಾರೆ ಎಂದು ನೀವು ಭಾವಿಸುವುದಿಲ್ಲವೇ? ನೀವು ಇಂಗ್ಲಿಷ್‌ನಲ್ಲಿ ಮಾತನಾಡಿದರೆ, ಹೆಚ್ಚಿನ ಜನರು ನಿಮ್ಮನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ, ನಾರ್ಥ್‌ ಮತ್ರವಲ್ಲ ಕನ್ನಡ, ತಮಿಳು ಅಥವಾ ಮಲಯಾಳಂ ಮಾತನಾಡುವವರೂ ಸಹ ಅರ್ಥ ಮಾಡಿಕೊಳ್ಳಲು ಬಯಸುತ್ತಾರೆ. ಇಂಗ್ಲೀಷ್‌ನಲ್ಲಿ ಮಾತನಾಡಿ ಎಂಬುದೇ ನಮ್ಮ ವಿನಂತಿʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಹೆಸರು ಕೇಳುತ್ತಲೇ ನಾಚಿ ನೀರಾದ ರಶ್ಮಿಕಾ; ಸದ್ಯದಲ್ಲೇ ಗುಡ್‌ನ್ಯೂಸ್‌?

ಈ ಪೋಸ್ಟ್‌ಗೆ ರಶ್ಮಿಕಾ ಎಕ್ಸ್‌ ಮೂಲಕ ಹೀಗೆ ಬರೆದುಕೊಂಡಿದ್ದಾರೆ ʻʻನಾನು ಇಂಗ್ಲಿಷ್‌ನಲ್ಲಿ ಮಾತನಾಡಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ. ನೀವು ಎಲ್ಲಿಂದಲೇ ಬಂದಿದ್ದರೂ ಸಹ ಅರ್ಥ ಮಾಡಿಸಲು ಪ್ರಯತ್ನಿಸುತ್ತೇನೆ. ಆದರೆ ಅನೇಕ ಜನರು ಅವರ ಭಾಷೆಗಳಲ್ಲಿ ಮಾತನಾಡಬೇಕೆಂದು ಬಯಸುತ್ತಾರೆ. ಆಗ ನಾನು ಭಾಷೆಯ ಬಗ್ಗೆ ಅಗೌರವ ತೋರುತ್ತೇನೆ ಅಥವಾ ನನಗೆ ಭಾಷೆ ತಿಳಿದಿಲ್ಲ ಎಂದು ಭಾವಿಸುತ್ತಾರೆ. ಹೀಗಾಗಿ ನನ್ನ ನನ್ನ ಕೈಲಾದಷ್ಟು ಪ್ರಯತ್ನಿಸುವೆʼʼಎಂದು ಬರೆದುಕೊಂಡಿದ್ದಾರೆ.

ರಶ್ಮಿಕಾ ಮಂದಣ್ಣ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಅವರು, ‘ರೇನ್ಬೋ, ‘ಡಿ 51’, ‘ಛಾವಾ’, ‘ಪುಷ್ಪ: ದಿ ರೂಲ್’, ಮತ್ತು ರವಿತೇಜಾ ಅವರೊಂದಿಗೆ ಹೆಸರಿಡದ ಚಿತ್ರದಲ್ಲಿ ಮುಂದಿನ ದಿನಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಶೀಘ್ರದಲ್ಲೇ ಚಿತ್ರಕ್ಕಾಗಿ ಮತ್ತೆ ಒಂದಾಗುತ್ತಾರೆ ಎಂದು ವದಂತಿಗಳಿವೆ. ಹಿಂದಿಯಲ್ಲಿ, ಅವರು ಸಲ್ಮಾನ್ ಖಾನ್ ಅವರೊಂದಿಗೆ ಸಿಕಂದರ್ ಮತ್ತು ವಿಕ್ಕಿ ಕೌಶಲ್ ಅವರೊಂದಿಗೆ ಛಾವಾದಲ್ಲಿ ನಟಿಸಲಿದ್ದಾರೆ. ತೆಲುಗಿನಲ್ಲಿ, ಅವರು ಅಲ್ಲು ಅರ್ಜುನ್ ಜೊತೆ ಪುಷ್ಪ: ದಿ ರೂಲ್, ಧನುಷ್ ಜೊತೆ ಕುಬೇರ, ದಿ ಗರ್ಲ್‌ಫ್ರೆಂಡ್ ಮತ್ತು ರೇನ್‌ಬೋ ಚಿತ್ರಗಳಲ್ಲಿ ನಟಿಸಲಿದ್ದಾರೆ.

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸಲ್ಮಾನ್ ಖಾನ್ (Salman Khan) ಅವರ ಹೊಸ ಪ್ರಾಜೆಕ್ಟ್ ʻಸಿಕಂದರ್ʼ ಸಿನಿಮಾದಲ್ಲಿ ನಾಯಕಿಯಾಗಿ ಮಿಂಚಲಿದ್ದಾರೆ. ಇದು ರಶ್ಮಿಕಾ ಅವರ ನಾಲ್ಕನೇ ಬಾಲಿವುಡ್ ಚಿತ್ರ. ಈ ಚಿತ್ರವನ್ನು ಎ.ಆರ್. ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ.

ತಮಿಳು, ತೆಲುಗಿನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಎಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವನ್ನು ಸಾಜಿದ್ ನಾಡಿಯಾವಾಲ ನಿರ್ಮಾಣ ಮಾಡುತ್ತಿದ್ದು, ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಮುರುಗದಾಸ್ ಅವರು ಈ ಮೊದಲು ‘ಗಜಿನಿ’, ‘ಸ್ಟಾಲಿನ್’, ‘ಸೆವೆಂತ್ ಸೆನ್ಸ್’, ‘ತುಪ್ಪಾಕಿ’, ‘ಸ್ಪೈಡರ್’ ಸೇರಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟಿದ್ದರು. ಮುರುಗದಾಸ್ ಅವರು ಆಮಿರ್ ಖಾನ್ ನಟಿಸಿದ್ದ ‘ಗಜಿನಿ’ ಚಿತ್ರವನ್ನು ಅವರೇ ನಿರ್ದೇಶನ ಮಾಡಿದ್ದರು. ರಶ್ಮಿಕಾ ಮುಂದೆ ಪುಷ್ಪಾ 2 ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಮತ್ತು ಫಹಾದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಗಸ್ಟ್ 15ರಂದು ಸಿನಿಮಾ ಬಿಡುಗಡೆಯಾಗಲಿದೆ.

Continue Reading

ಸ್ಯಾಂಡಲ್ ವುಡ್

Ambareesh Birthday: ಸಿಹಿ ಸುದ್ದಿ ಕೊಡಲಿದ್ದಾರಾ ಅಭಿಷೇಕ್‌-ಅವಿವಾ? ಸುಮಲತಾ ಹೇಳಿದ್ದೇನು?

Ambareesh Birthday: ಇನ್ನು ರೆಬಲ್‌ ಸ್ಟಾರ್‌ ಹುಟ್ಟುಹಬ್ಬ ನಟ ದರ್ಶನ್‌ ವಿಶೇಷ ರೀತಿಯಲ್ಲಿ ಶುಭಕೋರಿದ್ದಾರೆ. ಅಂಬರೀಶ್‌ ಅವರ ವಿಶೇಷ ಪೋಸ್ಟರ್ ರಿಲೀಸ್ ಮಾಡಿ ದರ್ಶನ್‌ ಶುಭಕೋರಿದ್ದಾರೆ. ಎಕ್ಸ್‌ನಲ್ಲಿ ಸ್ಪೆಷಲ್ ಆಗಿ ಅಂಬರೀಶ್ ಅಪ್ಪಾಜಿಗೆ ದರ್ಶನ್ (Darshan) ವಿಶ್ ಮಾಡಿದ್ದಾರೆ. ಅಭಿಷೇಕ್‌ ಅಂಬರೀಶ್‌ ಕಂಠೀರವ ಸ್ಟುಡಿಯೋದಲ್ಲಿರೋ ಅಂಬರೀಶ್ ಸಮಾಧಿಗೆ ಬಂದು ಪೂಜೆ ಸಲ್ಲಿಸಲಿದ್ದಾರೆ. ಮಾಧ್ಯಮಗಳ ಬಳಿ ಅಂಬರೀಶ್ ಅವರ ನೆನಪುಗಳ ಕುರಿತಾಗಿ ಸುಮಲತಾ ಮಾತನಾಡಿದರು.

VISTARANEWS.COM


on

Ambareesh Birthday during Sumalatha Ambareesh Talks About Abhishek Ambareesh And Aviva
Koo

ಬೆಂಗಳೂರು: ಇಂದು ರೆಬೆಲ್ ಸ್ಟಾರ್ ಅಂಬರೀಶ್ ಜನ್ಮ ದಿನ (Ambareesh Birthday). ಅಂಬಿ ನಮ್ಮನ್ನಗಲಿ ಐದು ವರ್ಷಗಳು ಕಳೆದರೂ ಬದುಕಿದ್ದಾಗ ಅವರು ಅದೆಷ್ಟು ಅಭಿಮಾನಿ ಬಳಗ ಹೊಂದಿದ್ದರೋ ಅಷ್ಟೇ ಫ್ಯಾನ್‌ ಬೇಸ್‌ ಇವತ್ತಿಗೂ ಅವರಿಗಿದೆ. ಇಂದು ಅವರ 72 ನೇ ಜನ್ಮ ದಿನವಾದ ಇಂದು ಪತ್ನಿ ಸುಮಲತಾ ಅಂಬರೀಶ್‌, ಪುತ್ರ ಅಭಿಷೇಕ್‌ ಅಂಬರೀಶ್‌ ಕಂಠೀರವ ಸ್ಟುಡಿಯೋದಲ್ಲಿರೋ ಅಂಬರೀಶ್ ಸಮಾಧಿಗೆ ಬಂದು ಪೂಜೆ ಸಲ್ಲಿಸಲಿದ್ದಾರೆ. ಮಾಧ್ಯಮಗಳ ಬಳಿ ಅಂಬರೀಶ್ ಅವರ ನೆನಪುಗಳ ಕುರಿತಾಗಿ ಸುಮಲತಾ ಮಾತನಾಡಿದರು. ಈ ಸಮಯದಲ್ಲಿ ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಅಪ್ಪ ಆಗುತ್ತಿದ್ದಾರೆಯೇ? ನೀವು ಅಜ್ಜಿ ಆಗುತ್ತಿದ್ದೀರಿಯೇ? (Abhishek Ambareesh And Aviva) ಎಂಬ ಪ್ರಶ್ನೆ ಬಂತು. ಆಗ ಸಮಲತಾ ಅವರು ʻʻಸದ್ಯಕ್ಕೆ ಇಲ್ಲ. ಸಿಹಿ ಸುದ್ದಿ ಇದ್ದಾಗ ಖಂಡಿತ ಹೇಳುತ್ತೇನೆʼʼಎಂದರು.

ಈ ವೇಳೆ ಸುಮಲತಾ ಮಾತನಾಡಿ ʻʻಅಂಬಿ ಅಗಲಿ ಆರು ವರ್ಷ ಆಗಿದೆ. ಆದರೆ ಅಂಬಿ ಇದ್ದಾಗ ಎಷ್ಟು ಪ್ರೀತಿ ತೋರಿಸುತ್ತಿದ್ದರೋ ಅಷ್ಟೇ ಪ್ರೀತಿ ಈಗಲೂ ಅಭಿಮಾನಿಗಳು ತೋರಿಸುತ್ತಿದ್ದಾರೆ. ಅಂಬರೀಶ್ ಮಾಡಿದ ಸಮಾಜಮುಖಿ ಕೆಲಸಗಳನ್ನ ನೆನಪಲ್ಲಿಟ್ಕೊಂಡಿದ್ದಾರೆ ಜನ. ಕಳೆದ ವರ್ಷ ಅಂಬರೀಶ್ ಫೌಂಡೇಶನ್ ಶುರು ಮಾಡಿದ್ವಿ. ಫೌಂಡೇಶನ್ ವತಿಯಿಂದ ಸಾಧಕರನ್ನ ಗುರ್ತಿಸಿ ಸನ್ಮಾನಿಸುವ ಕೆಲಸ ಆಗ್ತಿದೆ. ಸಮಾಜಮುಖಿ ಕೆಲಸ ಮಾಡಿದವರಿಗೆ, ಬೇರೆ ಬೇರೆ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಅಂಬರೀಶ್ ಫೌಂಡೇಶನ್ ವತಿಯಿಂದ ಸನ್ಮಾನ ಆಗುತ್ತಿದೆ. ಮಂಡ್ಯದಲ್ಲಿ ಇಂದು ಕಾರ್ಯಕ್ರಮ ಹಮ್ಮಿಕೊಳ್ಳಾಗಿದೆ. ಹೋದ ಕಡೆಯಲೆಲ್ಲ ಅಂಬರೀಶ್ ಅವರ ಬಗ್ಗೆ ನಮಗೆ ಗೊತ್ತಿಲ್ಲದ ಕೆಲಸಗಳ ಬಗ್ಗೆ ಹೇಳ್ತಾರೆʼʼಎಂದರು.

ಇದನ್ನೂ ಓದಿ: Ambareesh Birthday: ರೆಬಲ್‌ ಸ್ಟಾರ್‌ 72 ನೇ ಹುಟ್ಟುಹಬ್ಬ; ಅಂಬಿ ಸ್ಮರಣಾರ್ಥ ಅಭಿಮಾನಿಗಳಿಂದ ವಿವಿಧ ಕಾರ್ಯಕ್ರಮ

ಸುಮಲತಾ ಅಂಬರೀಷ್ ಅವರು ಬೆಳಿಗ್ಗೆಯೇ ಮಗ ಅಭಿಷೇಕ್ ಹಾಗೂ ಸೊಸೆ ಅವಿವಾ ಜತೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸ್ಮಾರಕಕ್ಕೆ ಬಂದು ಪೂಜೆ ಸಲ್ಲಿಸಿದ್ದಾರೆ.

ಅಂಬರೀಶ್‌ರನ್ನು ನೆನೆದ ಡಿ ಬಾಸ್‌

ಇನ್ನು ರೆಬಲ್‌ ಸ್ಟಾರ್‌ ಹುಟ್ಟುಹಬ್ಬ ನಟ ದರ್ಶನ್‌ ವಿಶೇಷ ರೀತಿಯಲ್ಲಿ ಶುಭಕೋರಿದ್ದಾರೆ. ಅಂಬರೀಶ್‌ ಅವರ ವಿಶೇಷ ಪೋಸ್ಟರ್ ರಿಲೀಸ್ ಮಾಡಿ ದರ್ಶನ್‌ ಶುಭಕೋರಿದ್ದಾರೆ. ಎಕ್ಸ್‌ನಲ್ಲಿ ಸ್ಪೆಷಲ್ ಆಗಿ ಅಂಬರೀಶ್ ಅಪ್ಪಾಜಿಗೆ ದರ್ಶನ್ (Darshan) ವಿಶ್ ಮಾಡಿದ್ದಾರೆ.

ನಮ್ಮೆಲ್ಲರ ಅಚ್ಚುಮೆಚ್ಚಿನ ಸಹೃದಯಿ, ರೆಬೆಲ್ ಸ್ಟಾರ್ ಅಂಬಿ ಅಪ್ಪಾಜಿರವರ ಹುಟ್ಟುಹಬ್ಬದ (Birthday) ಪ್ರಯುಕ್ತ ಮೂಡಿಬಂದಿರುವ CDP ಬಿಡುಗಡೆ ಮಾಡಲು ಅವಕಾಶ ಮಾಡಿಕೊಟ್ಟ ಅಭಿಮಾನಿ ಸಮೂಹಕ್ಕೆ ಧನ್ಯವಾದಗಳು. ನಮ್ಮ ನಿಷ್ಠೆಯ ಕೆಲಸ-ಕಾರ್ಯಗಳಲ್ಲಿ ಸದಾ ಬೆನ್ನೆಲುಬಾಗಿ ಅಂಬಿ ಅಪ್ಪಾಜಿ ನಮ್ಮೊಂದಿಗೆ ಜೀವಂತವಾಗಿದ್ದಾರೆ ಎಂದು ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ದರ್ಶನ್‌ ಅಂಬರೀಶ್‌ಗೆ ಶುಭಕೋರಿದ್ದಾರೆ.

Continue Reading

ಟಾಲಿವುಡ್

Pushpa 2: ʼಪುಷ್ಪ 2ʼ ಸಿನಿಮಾದ ಎರಡನೇ ಹಾಡು ರಿಲೀಸ್‌: ಅಲ್ಲು ಜತೆ ಹೆಜ್ಜೆ ಹಾಕಿದ ರಶ್ಮಿಕಾ!

Pushpa 2: ಸಾಮಿ ಹಾಡನ್ನೂ ಮೀರಿಸುವಂತಿದೆ ಹಾಡು. ಅ ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಹಾಡಿಗೆ ಬಾಲಿವುಡ್‌ ಗಣೇಶ್ ಆಚಾರ್ಯ ಕೊರಿಯೋಗ್ರಾಫಿ ಇದೆ.ಈ ಹಾಡು 6 ಭಾಷೆಗಳಲ್ಲಿ ಮೂಡಿ ಬಂದಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ.

VISTARANEWS.COM


on

Pushpa 2 SOOSEKI Couple Song Lyrical Video out
Koo

ಬೆಂಗಳೂರು: ಸದ್ಯ ದೇಶದ ಗಮನ ಸೆಳೆದಿರುವ ಚಿತ್ರಗಳ ಪೈಕಿ ಟಾಲಿವುಡ್‌ ಸ್ಟೈಲಿಶ್‌ ಸ್ಟಾರ್‌ ಅಲ್ಲು ಅರ್ಜುನ್‌-ರಶ್ಮಿಕಾ ಮಂದಣ್ಣ ಅಭಿನಯದ ʼಪುಷ್ಪ 2ʼ (Pushpa 2) ಕೂಡ ಒಂದು. 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದೀಗ ಎರಡನೇ ಹಾಡು ಔಟ್‌ ಆಗಿದೆ. ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀವ್ಸ್‌ ಪಡೆದುಕೊಂಡಿದೆ.

ಸಾಮಿ ಹಾಡನ್ನೂ ಮೀರಿಸುವಂತಿದೆ ಸೂಸೇನೆ ಹಾಡು. ಅ ದೇವಿಶ್ರೀ ಪ್ರಸಾದ್‌ ಸಂಗೀತ ನಿರ್ದೇಶನದಲ್ಲಿ ಶ್ರೇಯಾ ಘೋಷಾಲ್‌ ಈ ಹಾಡಿಗೆ ಧ್ವನಿಯಾಗಿದ್ದಾರೆ. ಹಾಡಿಗೆ ಬಾಲಿವುಡ್‌ ಗಣೇಶ್ ಆಚಾರ್ಯ ಕೊರಿಯೋಗ್ರಾಫಿ ಇದೆ.

6 ಭಾಷೆಗಳಲ್ಲಿಯೂ ಶ್ರೇಯಾ ಮೋಡಿ

ಈ ಹಾಡು 6 ಭಾಷೆಗಳಲ್ಲಿ ಮೂಡಿ ಬಂದಿದೆ. ಎಲ್ಲ ಭಾಷೆಗಳಲ್ಲಿಯೂ ಶ್ರೇಯಾ ಘೋಷಾಲ್‌ ಹಾಡಿಗೆ ಧ್ವನಿ ನೀಡುತ್ತಿರುವುದು ವಿಶೇಷ. ಸೂಸೆಕಿ (ತೆಲುಗು), ನೋಡೋಕ (ಕನ್ನಡ), ಅಂಗಾರೊನ್‌ (ಹಿಂದಿ), ಸೂಡಾನ (ತಮಿಳು), ಕಂಡಾಲೋ (ಮಲಯಾಳಂ) ಮತ್ತು ಆಗುನೆರ್‌ (ಬಂಗಾಳಿ) ಎಂದು ಆರಂಭವಾಗುವ ಹಾಡನ್ನು ಶ್ರೇಯಾ ಘೋಷಾಲ್‌ ಹಾಡಿದ್ದಾರೆ.

ಇದನ್ನೂ ಓದಿ: Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

ಚಿತ್ರ ಬಿಡುಗಡೆ ಯಾವಾಗ?

ʼಪುಷ್ಪ 2ʼ ಸಿನಿಮಾ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ. ಮೈತ್ರಿ ಮೂವೀ‌ ಮೇಕರ್ಸ್ ದುಬಾರಿ ಬಜೆಟ್‌ನಲ್ಲಿ ಚಿತ್ರ ನಿರ್ಮಿಸುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್‌ ಜತೆಯಾಗಿ ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹದ್ ಫಾಸಿಲ್, ಡಾಲಿ ಧನಂಜಯ್, ಅನಸೂಯಾ ಭಾರದ್ವಾಜ್ ಸೇರಿದಂತೆ ಹಲವು ಕಲಾವಿದರು ಅಭಿನಯಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ʼಪುಷ್ಪ 2ʼ ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದ್ದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿರುವುದು ಕಂಡು ಬಂದಿತ್ತು. ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿ ಗೂಂಡಾಗಳನ್ನು ಹೊಡೆಯುತ್ತಿರುವುದು ಟೀಸರ್‌ ಕಂಡು ಬಂದು ವೀಕ್ಷಕರ ಕುತೂಹಲ ಕೆರಳಿಸಿತ್ತು. ಸದ್ಯ ಅಭಿಮಾನಿಗಳು ಚಿತ್ರ ಬಿಡುಗಡೆ ದಿನಾಂಕವನ್ನು ಎದುರು ನೋಡುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Shakhahaari Movie: ಪ್ರೇಕ್ಷಕರನ್ನು ಆವರಿಸಿದ ‘ಶಾಖಾಹಾರಿ’: ಪರಭಾಷಿಕರಿಂದಲೂ ಚಿತ್ರಕ್ಕೆ ಮೆಚ್ಚುಗೆ!

Shakhahaari Movie : ಚಿತ್ರಮಂದಿರದಲ್ಲಿ ದಕ್ಕದ ಪ್ರೀತಿ ಶಾಖಾಹಾರಿ ಚಿತ್ರಕ್ಕೆ ಒಟಿಟಿಯಲ್ಲಿ ದೊರೆಯುತ್ತಿದೆ. ಅಮೇಜಾನ್ ಪ್ರೈಮ್‌ಗೆ ಎಂಟ್ರಿ ಕೊಟ್ಟ ಬರೀ 4 ದಿನದಲ್ಲಿ 10 ಮಿಲಿಯನ್ ನಿಮಿಷಗಳ ಸ್ಟ್ರೀಮಿಂಗ್ ಕಂಡಿರುವ ಸಿನಿಮಾ.. ಎಲ್ಲಾ ಜಾಲತಾಣಗಳಲ್ಲು ಬಹಳಷ್ಟು ಜನ ದಿನೇ ದಿನೇ ಮೆಚ್ಚುಗೆ ವ್ಯಕ್ತಪಡಿಸುತ್ತ ಇರುವುದು ಗಮನಾರ್ಹ.

VISTARANEWS.COM


on

Shakhahaari Movie 1 cr minutes of streaming amazon prime
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಭಿನ್ನ-ವಿಭಿನ್ನ ಪ್ರಯತ್ನಗಳು ನಡೆಯುತ್ತಿವೆ. ಹೊಸಬರ ಜತೆಗೆ ಅನುಭವಿ ತಾರಾಬಳಗ ಕೈ ಜೋಡಿಸಿದಾಗ ಒಂದೊಳ್ಳೆ ಅದ್ಭುತ ಸಿನಿಮಾ ಹೊರಹೊಮ್ಮಲಿದೆ ಎಂಬುದಕ್ಕೆ ʻಶಾಖಾಹಾರಿʼ ಚಿತ್ರ (Shakhahaari Movie) ತಾಜಾ ಉದಾಹರಣೆ. ತನ್ನ ಒಳ್ಳೆಯ ಕಂಟೆಂಟ್‌ನಿಂದಲೇ ಭಾರೀ ಸದ್ದು ಮಾಡಿದ್ದ ಈ ಚಿತ್ರವೀಗ ಅಮೇಜಾನ್ ಪ್ರೈಮ್‌ನಲ್ಲಿ ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಶಾಖಾಹಾರಿ ನೋಡಿದವರೆಲ್ಲಾ ಇಂತಹ ಸಿನಿಮಾವನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡ್ವಲ್ಲಾ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಫೆಬ್ರವರಿ 16ರಂದು ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿದ್ದ ಶಾಖಾಹಾರಿ ಸಿನಿಮಾವೀಗ ಮೂರು ತಿಂಗಳ ಬಳಿಕ ಒಟಿಟಿಗೆ ಲಗ್ಗೆ ಇಟ್ಟಿದೆ. ಶುಕ್ರವಾರದಿಂದ ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮ್ ಆಗಿರುವ ಈ ಚಿತ್ರವನ್ನು ನೋಡಿದವರೆಲ್ಲಾ ವಾವ್ ಇಂತಹ ಪ್ರಯತ್ನಗಳು ಮಾಲಿವುಡ್‌ನಲ್ಲಿ ಮಾತ್ರವಲ್ಲ ನಮ್ಮಲ್ಲಿಯೂ ನಡೆಯುತ್ತವೆ. ಅದಕ್ಕೆ ಪ್ರೇಕ್ಷಕಪ್ರಭು ಬೆನ್ನುತಟ್ಟಬೇಕಷ್ಟೇ.

ಚಿತ್ರಮಂದಿರದಲ್ಲಿ ದಕ್ಕದ ಪ್ರೀತಿ ಶಾಖಾಹಾರಿ ಚಿತ್ರಕ್ಕೆ ಒಟಿಟಿಯಲ್ಲಿ ದೊರೆಯುತ್ತಿದೆ. ಅಮೇಜಾನ್ ಪ್ರೈಮ್‌ಗೆ ಎಂಟ್ರಿ ಕೊಟ್ಟ ಬರೀ 4 ದಿನದಲ್ಲಿ 10 ಮಿಲಿಯನ್ ನಿಮಿಷಗಳ ಸ್ಟ್ರೀಮಿಂಗ್ ಕಂಡಿರುವ ಸಿನಿಮಾ.. ಎಲ್ಲಾ ಜಾಲತಾಣಗಳಲ್ಲು ಬಹಳಷ್ಟು ಜನ ದಿನೇ ದಿನೇ ಮೆಚ್ಚುಗೆ ವ್ಯಕ್ತಪಡಿಸುತ್ತ ಇರುವುದು ಗಮನಾರ್ಹ.

ಇದನ್ನೂ ಓದಿ: Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

ಶಾಖಾಹಾರಿಗೆ ಜೈ ಎಂದ ಸತೀಶ್

ನೀನಾಸಂ ಸತೀಶ್ ಶಾಖಾಹಾರಿ ಸಿನಿಮಾವನ್ನು ಬಾಯ್ ತುಂಬಾ ಹೊಗಳಿದ್ದಾರೆ. ಯಾವ ನೀರಿಕ್ಷೆಯು ಇಲ್ಲದೆ ಸುಮ್ಮನೆ ಸಿನಿಮಾ ನೋಡುತ್ತಾ ಹೋದಾಗ,ಸಿನಿಮಾ ನಮ್ಮನ್ನು ಒಳಗೆ ಸೆಳೆದೊಯ್ಯುತ್ತದೆ,ಸುಳಿಯಂತೆ. ಪ್ರಾಮಾಣಿಕವಾದ, ಯಾರನ್ನೂ ಮೆಚ್ಚಿಸಲು ಅಲ್ಲದೆ ತಮ್ಮಷ್ಟಕ್ಕೆ ತಂಡ ಧ್ಯಾನಿಸಿದೆ. ಸಿನಿಮಾ ಬರೀ ನಿರ್ದೇಶಕ,ಅಥವಾ ನಟರಲ್ಲದೆ ಸಮೂಹದ ಕೆಲಸ ಎಂಬುದನ್ನು ಮತ್ತೆ ಸಾಬೀತು ಮಾಡಿದೆ.ಗೆಳೆಯ ಗೋಪಿ ವಾವ್! ರಘು ಅಣ್ಣ ನಮ್ಮ ಹೆಮ್ಮೆ! ನಿರ್ದೇಶಕ ಸಂದೀಪ್ ,ಮತ್ತು ಛಾಯಾಗ್ರಹಣ, ಸಂಗೀತ ಎಲ್ಲವೂ ಅದ್ಭುತ.ನೋಡಲೇಬೇಕಾದ ನಮ್ಮ ಚಿತ್ರ ಎಂದು ಟ್ವೀಟ್ ಮಾಡಿದ್ದಾರೆ.

ಕ್ಲೈಮ್ಯಾಕ್ಸ್ ಚಿಂದಿ ಎಂದ ಪೃಥ್ವಿ

ನಟ ಪೃಥ್ವಿ ಅಂಬಾರ್ ಕೂಡ ಚಿತ್ರವನ್ನು ನೋಡಿ ಮನಸಾರೆ ಕೊಂಡಾಡಿದ್ದಾರೆ. ಶಾಖಾಹಾರಿ ಬಿಡುಗಡೆ ಸಮಯದಲ್ಲಿ ನನ್ನ ಚಿತ್ರ ಬಿಡುಗಡೆಯಾಗಿತ್ತು. ಹೀಗಾಗಿ ಇಂತಹ ಒಳ್ಳೆ ಸಿನಿಮಾವನ್ನು ಮಿಸ್ ಮಾಡಿಕೊಂಡಿದ್ದೇನೆ. ಅದಕ್ಕಾಗಿ ನನಗೆ ಬೇಸರವಿದೆ. ಚಿತ್ರದ ಕಥೆ, ಟ್ವಿಸ್ಟ್, ಕ್ಲೈಮ್ಯಾಕ್ಸ್ ಎಲ್ಲವೂ ಅದ್ಭುತ. ರಂಗಾಯಣ ರಘು ಸರ್ ಹಾಗೂ ಗೋಪಾಲ್ ದೇಶಪಾಂಡೇ ಸರ್ ಅಭಿನಯ ಸೂಪರ್ ಎಂದಿದ್ದಾರೆ.

ಸಂದೀಪ್ ಸುಂಕದ್ ನಿರ್ದೇಶನದ ‘ಶಾಖಾಹಾರಿ’ ಸಿನಿಮಾದ ಸೂತ್ರಧಾರಿ. ಕನ್ನಡ ಚಿತ್ರರಂಗದ ಹಿರಿಯ ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು. ಪೊಲೀಸ್ ಅಧಿಕಾರಿಯಾಗಿ ಗೋಪಾಲಕೃಷ್ಣ ದೇಶಪಾಂಡೆ ಅತ್ಯದ್ಬುತವಾಗಿ ನಟಿಸಿದ್ದರು. ಉಳಿದಂತೆ ವಿನಯ್, ನಿಧಿ ಹೆಗಡೆ, ಸುಜಯ್ ಶಾಸ್ತ್ರೀ, ಹರಿಣಿ ಹಾಗೂ ಕಾನ್‌ಸ್ಟೇಬಲ್ ಮಮತಕ್ಕನ ಪಾತ್ರಧಾರಿಯಾಗಿ ಪ್ರತಿಭಾ ನಾಯಕ್ ತಮ್ಮ ಪಾತ್ರಗಳಿಗೆ ನ್ಯಾಯ ಸಲ್ಲಿಸಿದ್ದಾರೆ. ಕೀಲಂಬಿ ಮೀಡಿಯಾ ಲ್ಯಾಬ್ ಬ್ಯಾನರ್ ನಡಿ ರಾಜೇಶ್ ಕೀಲಾಂಬಿ, ರಂಜಿನಿ ಪ್ರಸನ್ನ ಶಾಖಾಹಾರಿಗೆ ಬಂಡವಾಳ ಹೂಡಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿಯ ಹಳ್ಳಿಯೊಂದರಲ್ಲಿ ನಡೆಯುವ ರೋಚಕ ಕಥೆಯೇ ಶಾಖಾಹಾರಿ. ಸಿನಿಮಾದಲ್ಲಿ ಮಾಸ್ತಿಕಟ್ಟೆ ಸುಬ್ರಮಣ್ಯ ಅಲಿಯಾಸ್ ಸುಬ್ಬಣ್ಣ (ರಂಗಾಯಣ ರಘು)ಗೆ ಹಿಂದೆ-ಮುಂದೆ ಯಾರೂ ಇರುವುದಿಲ್ಲ. ಹೋಟೆಲ್ ಮಾಲೀಕನಾಗಿರುವ ಸುಬ್ಬಣ್ಣ, ಬಾಣಸಿಗನಾಗಿಯೂ ಕೆಲಸ ಮಾಡಿಕೊಂಡಿರುತ್ತಾರೆ. ಇವರದ್ದು ಶುದ್ಧ ಶಾಕಾಹಾರಿ ಹೋಟೆಲ್… ಹೀಗಿರುವಾಗ, ಅಲ್ಲಿ ನಡೆಯುವ ಕೆಲ ಘಟನೆಗಳಿಂದ ಸುಬ್ಬಣ್ಣನ ಹೋಟೆಲ್ ಹೇಗೆ ‘ಶಾಖಾ’ಹಾರಿ ಆಗುತ್ತೆ ಎಂಬುದೆ ರೋಚಕ ವಿಷಯ.

Continue Reading
Advertisement
Modi Meditation
ದೇಶ3 mins ago

Modi Meditation: ಮೋದಿ ಧ್ಯಾನ ಮಾಡುವುದೂ ನೀತಿ ಸಂಹಿತೆ ಉಲ್ಲಂಘನೆ ಎಂದ ಕಾಂಗ್ರೆಸ್;‌ ಆಯೋಗಕ್ಕೆ ದೂರು!

T20 World Cup 2024
ಕ್ರೀಡೆ6 mins ago

T20 World Cup 2024: ಟಿ20 ವಿಶ್ವಕಪ್​ನಲ್ಲಿ ಎಷ್ಟು ಬೌಲರ್​ಗಳು ಹ್ಯಾಟ್ರಿಕ್​ ವಿಕೆಟ್​ ಕಿತ್ತ ಸಾಧನೆ ಮಾಡಿದ್ದಾರೆ?

Self Harming
ಕರ್ನಾಟಕ47 mins ago

Self Harming: ಶಾಲೆಗೆ ಹೋಗಲು ಬೇಸತ್ತು 11 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

Rudram II
ದೇಶ1 hour ago

Rudram II: ಆಗಸದಿಂದಲೇ ವೈರಿಗಳನ್ನು ನಾಶಪಡಿಸುವ ರುದ್ರಂ II ಕ್ಷಿಪಣಿ ಪ್ರಯೋಗ ಯಶಸ್ವಿ; ಶತ್ರುಗಳಿಗೆ ನಡುಕ!

Chahal-Dhanashree
ಕ್ರೀಡೆ2 hours ago

Chahal-Dhanashree: ಶೀಘ್ರದಲ್ಲೇ ಸಿಹಿ ಸುದ್ದಿ ನೀಡಲಿದ್ದಾರಾ ಚಹಲ್?; ಕುತೂಹಲ ಮೂಡಿಸಿದ ಪತ್ನಿಯ ಪೋಸ್ಟ್!

Timing change of 5 trains arriving at Sri Siddharooda Swamiji Railway Station Hubballi
ಹುಬ್ಬಳ್ಳಿ2 hours ago

Hubballi Train: ಪ್ರಯಾಣಿಕರೇ ಗಮನಿಸಿ; ಹುಬ್ಬಳ್ಳಿಗೆ ಆಗಮಿಸುವ 5 ರೈಲುಗಳ ಸಮಯ ಬದಲಾಗಿದೆ

Valmiki corporation Scam
ಕರ್ನಾಟಕ2 hours ago

Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

PM Kisan Samman
ಕೃಷಿ2 hours ago

PM Kisan Samman: ಪಿಎಂ ಕಿಸಾನ್ ಸಮ್ಮಾನ್ 17ನೇ ಕಂತಿನ ಹಣ ಬಿಡುಗಡೆ ಯಾವಾಗ? ಪರಿಶೀಲಿಸುವುದು ಹೇಗೆ?

Nita Ambani
ವಾಣಿಜ್ಯ2 hours ago

Nita Ambani: ನೀತಾ ಅಂಬಾನಿ ಕುಡಿಯುವ ನೀರಿನ ಬಾಟಲಿಯ ಬೆಲೆ 49 ಲಕ್ಷ ರೂಪಾಯಿ!

Team India Coach
ಕ್ರೀಡೆ2 hours ago

Team India Coach: ಅಭಿಮಾನಿಗಳು ಬಯಸಿದರೂ ಕೋಚ್​ ಹುದ್ದೆಗೆ ಧೋನಿ ಅನರ್ಹ; ಕಾರಣವೇನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 day ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ7 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌