Liger Movie | ಗುಲಾಬಿ ಸಾಕು ಮಾನ ಮುಚ್ಚೋಕೆ! ಲೈಗರ್‌ ಪೋಸ್ಟರ್‌ನಲ್ಲಿ ವಿಜಯ್‌ ದೇವರಕೊಂಡ ನಗ್ನಾವತಾರ - Vistara News

ಕಾಲಿವುಡ್

Liger Movie | ಗುಲಾಬಿ ಸಾಕು ಮಾನ ಮುಚ್ಚೋಕೆ! ಲೈಗರ್‌ ಪೋಸ್ಟರ್‌ನಲ್ಲಿ ವಿಜಯ್‌ ದೇವರಕೊಂಡ ನಗ್ನಾವತಾರ

Liger Movie ಬಾಕ್ಸಿಂಗ್‌ ಕುರಿತಾದ ಸಿನಿಮಾವಾಗಿದ್ದು, ಮಾಸ್‌ ಲುಕ್‌ನಲ್ಲಿ ವಿಜಯ್‌ ದೇವರಕೊಂಡ ಕಾಣಿಸಿಕೊಳ್ಳುತ್ತಿದ್ದಾರೆ. ಬಾಕ್ಸಿಂಗ್‌ ಹೆವಿವೇಟ್‌ ಮೈಕ್‌ ಟೈಸನ್‌ ಕೂಡ ಇದರಲ್ಲಿ ನಟಿಸುತ್ತಿರುವುದು ವಿಶೇಷ.

VISTARANEWS.COM


on

Liger Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ವಿಜಯ್‌ ದೇವರಕೊಂಡ ಅಭಿನಯದ ʻಲೈಗರ್‌ʼ (Liger Movie) ಸಿನಿಮಾದ ಪೋಸ್ಟರ್‌ ಇದೀಗ ಬಿಡುಗಡೆಗೊಂಡಿದೆ. ಹಲವು ಹಿಟ್‌ ಚಿತ್ರಗಳನ್ನು ನೀಡಿದ ಪುರಿ ಜಗನ್ನಾಥ್‌ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ವಿಜಯ್‌ ದೇವರಕೊಂಡ ಹಾಗೂ ಪುರಿ ಜಗನ್ನಾಥ್‌ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾದಲ್ಲಿ ಅನನ್ಯಾ ಪಾಂಡೆ ಲೀಡ್‌ ರೋಲ್‌ನಲ್ಲಿ ಮಿಂಚಲಿದ್ದಾರೆ.

ಆಗಸ್ಟ್‌ 25ರಂದು ತೆರೆಗೆ ಬರಲಿದ್ದು, ಪೋಸ್ಟರ್‌ ಬಗ್ಗೆ ಅಭಿಮಾನಿಗಳು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಇದು ಬಾಕ್ಸಿಂಗ್‌ ಕುರಿತಾದ ಸಿನಿಮಾವಾಗಿದ್ದು, ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವಿಜಯ್‌ ದೇವರಕೊಂಡ ಇಷ್ಟು ದಿನ ರೋಮ್ಯಾಂಟಿಕ್‌ ಲುಕ್‌ನಲ್ಲಿಯೇ ಕಾಣಿಸಿಕೊಳ್ಳುತ್ತಿದ್ದರು. ಹೊಸ ಪೋಸ್ಟರ್‌ನಲ್ಲಿ ಒಂದು ಗುಲಾಬಿ ಹೂವಿನ ಗುಚ್ಛ ಅವರ ಕಟಿಯನ್ನು ಮುಚ್ಚಿರುವುದು ಬಿಟ್ಟರೆ, ಅವರ ಮೈಮೇಲೆ ಬಟ್ಟೆಯ ಒಂದೆಳೆಯೂ ಇಲ್ಲ. ಬಾಕ್ಸಿಂಗ್‌ನ ದಿಗ್ಗಜ ಮೈಕ್‌ ಟೈಸನ್‌ ಕೂಡ ಇದರಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ಇದನ್ನೂ ಓದಿ | Kushi Movie : ಶೂಟಿಂಗ್‌ ವೇಳೆ ಅವಘಡದಲ್ಲಿ ವಿಜಯ್‌ ದೇವರಕೊಂಡ -ಸಮಂತಾಗೆ ಗಾಯ

ಕರಣ್‌ ಜೋಹರ್‌, ಪುರಿ ಜಗನ್ನಾಥ್‌, ಚಾರ್ಮಿ ಕೌರ್‌ ಹಾಗೂ ಅಪೂರ್ವ ಮೆಹ್ತಾ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಜುಲೈ 10ರಂದು ಟ್ರೈಲರ್‌ ರಿಲೀಸ್‌ ಆಗಲಿದ್ದು, ಪ್ಯಾನ್‌ ಇಂಡಿಯಾ ಸಿನಿಮಾವಾಗಿದೆ ಲೈಗರ್‌. ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿರುವ ಈ ಸಿನಿಮಾ ಚಿತ್ರದ ಪೋಸ್ಟ್‌ ಪ್ರೊಡಕ್ಷನ್‌ಗಳು ಭರದಿಂದ ಸಾಗುತ್ತಿವೆ.

ಲೈಗರ್ ಚಿತ್ರದ ಹೊಸ ಪೋಸ್ಟರ್ ಆಮೀರ್ ಖಾನ್ ಅವರ ಪಿಕೆ ಚಿತ್ರದ ಪೋಸ್ಟರನ್ನು ನೆನಪಿಸುತ್ತಿದೆ ಎಂದು ನೆಟ್ಟಿಗರು ಕಮೆಂಟ್ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಆಮೀರ್ ಖಾನ್ ಕೂಡಾ ನ್ಯೂಡ್ ಲುಕ್​​​​​ನಲ್ಲಿ ಕಾಣಿಸಿಕೊಂಡಿದ್ದು ರೇಡಿಯೋ ಮೂಲಕ ಮಾನ ಮುಚ್ಚಿಕೊಂಡಿದ್ದರು. ಇದೀಗ ವಿಜಯ್ ದೇವರಕೊಂಡ ಇದೇ ಲುಕ್​​​​ನಲ್ಲಿ ಕಾಣಿಸಿಕೊಂಡಿದ್ದು ಸಿನಿಮಾ ನೋಡಿದ ನಂತರ ಚಿತ್ರದಲ್ಲಿ ಈ ಲುಕ್​​​​​​​​​ ಅವಶ್ಯಕತೆಯಿದೆಯೇ ಇಲ್ಲವೇ ಎಂಬುದು ತಿಳಿಯುತ್ತದೆ. 

ಇದನ್ನೂ ಓದಿ | Tollywood News: ರೆಟ್ರೋ ಲುಕ್‌ನಲ್ಲಿ ಮಿಂಚಿದ ರಾಮ್‌ಚರಣ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Actor Rajinikanth: ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ.

VISTARANEWS.COM


on

Actor Rajinikanth attends grandson Ved cricket themed birthday party
Koo

ಚೆನ್ನೈ: ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮೊಮ್ಮಗ ವೇದ್ ಕೃಷ್ಣ ಹುಟ್ಟುಹಬ್ಬದ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ (Actor Rajinikanth) ಮತ್ತು ಅವರ ಪತ್ನಿ ಲತಾ ಪಾಲ್ಗೊಂಡಿದ್ದರು. ಮೇ 6ರಂದು ವೇದ್‌ ಒಂಬತ್ತನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು. ಕ್ರಿಕೆಟ್‌ ಥೀಮ್‌ನಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ರಜನಿಕಾಂತ್ ಅವರು ಕೇಕ್ ಅನ್ನು ಕತ್ತರಿಸುತ್ತಿರುವಾಗ ವೇದ್ ಅವರ ಹಿಂದೆ ನಿಂತಿರುವುದನ್ನು ನಾವು ನೋಡಬಹುದು. ಇದೀಗ ಈ ಪಾರ್ಟಿಯ ವಿಡಿಯೊಗಳು ವೈರಲ್‌ ಆಗುತ್ತಿವೆ.

ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ. ಸೌಂದರ್ಯಾ ಅಧಿಕೃತವಾಗಿ ವೀಡಿಯೊವನ್ನು ಹಂಚಿಕೊಂಡಿಲ್ಲವಾದರೂ, ಕೆಲವು ಫ್ಯಾನ್‌ ಪೇಜ್‌ಗಳು ಪೋಸ್ಟ್‌ ಮಾಡಿವೆ. ವೇದ್ ಕೃಷ್ಣ ಸೌಂದರ್ಯ ರಜನಿಕಾಂತ್ ಮತ್ತು ಅವರ ಮಾಜಿ ಪತಿ ಅಶ್ವಿನ್ ರಾಮ್‌ಕುಮಾರ್ ಅವರ ಮಗ. 2017 ರಲ್ಲಿ ದಂಪತಿಗಳು ವಿಚ್ಛೇದನ ಪಡೆದರು.

ಇದನ್ನೂ ಓದಿ: Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

ಅಶ್ವಿನ್‌ ರಾಮ್‌ಕುಮಾರ್‌ ಜತೆ ಸೌಂದರ್ಯ 2010ರಲ್ಲಿ ಸಪ್ತಪದಿ ತುಳಿದಿದ್ದರು. ಈ ಜೋಡಿಗೆ 2015ರಲ್ಲಿ ಮೊದಲ ಮಗು ಜನಿಸಿತ್ತು. ಆ ಮಗುವೇ ವೇದ್‌. 2017ರಲ್ಲಿ ಸೌಂದರ್ಯ ಮತ್ತು ಅಶ್ವಿನ್‌ ವಿಚ್ಛೇದನ ಪಡೆದುಕೊಂಡರು. 2019ರಲ್ಲಿ ವಿಶಾಗನ್‌​ ವನಂಗಮುಡಿ ಜತೆ ಸೌಂದರ್ಯ ಎರಡನೇ ಮದುವೆ ಮಾಡಿಕೊಂಡರು.

ರಜನಿಕಾಂತ್ ಕೊನೆಯ ಬಾರಿಗೆ ಮಗಳು ಐಶ್ವರ್ಯಾ ನಿರ್ದೇಶನದ ʻಲಾಲ್ ಸಲಾಂʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ನಿರ್ದೇಶಕ ಟಿಜೆ ಜ್ಞಾನವೇಲ್ ಅವರೊಂದಿಗೆ ʻವೆಟ್ಟೈಯಾನ್ʼ ಚಿತ್ರೀಕರಣದಲ್ಲಿದ್ದಾರೆ. ಚಿತ್ರದಲ್ಲಿ ಅಮಿತಾಭ್‌ ಬಚ್ಚನ್, ಫಹದ್ ಫಾಸಿಲ್ ಮತ್ತು ರಾಣಾ ದಗ್ಗುಬಾಟಿ ಕೂಡ ನಟಿಸಿದ್ದಾರೆ.. ʻತಲೈವರ್ 171ʼ ಸಿನಿಮಾದ ಫಸ್ಟ್ ಲುಕ್‌ ಔಟ್‌ ಆಗಿದೆ. ಇನ್ನೂ ಹೆಸರಿಡದ ʻತಲೈವರ್ 171ʼ (Thalaivar 171) ಹೊಚ್ಚ ಹೊಸ ಪೋಸ್ಟರ್‌ನಲ್ಲಿ, ರಜನಿಕಾಂತ್‌ ಸ್ಟೈಲಿಶ್ ಆಗಿ ಕಂಡಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಏಪ್ರಿಲ್ 22ರಂದು ಬಹಿರಂಗಪಡಿಸಲಾಗುವುದು ಎಂದು ಲೋಕೇಶ್ ಕನಕರಾಜ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Continue Reading

ಕಾಲಿವುಡ್

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

Kamal Haasan: ಇಂಡಿಯನ್ʼ ಸೀಕ್ವೆಲ್‌ಗೆ ಕಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್.ಶಂಕರ್ ಆ್ಯಕ್ಷನ್‌ ಕಟ್‌ ಹೇಳಿರುವುದು ಇಷ್ಟೆಲ್ಲ ನಿರೀಕ್ಷೆ ಹೆಚ್ಚಲು ಕಾರಣ. ಜತೆಗೆ ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ. ಹೀಗಾಗಿಯೇ ಚಿತ್ರವನ್ನು ಥಿಯೇಟರ್‌ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

VISTARANEWS.COM


on

Kamal Haasan Indian 2 to release on July 12
Koo

ಬೆಂಗಳೂರು: ಕಮಲ್ ಹಾಸನ್ (Kamal Haasan) ಮತ್ತು ನಿರ್ದೇಶಕ ಶಂಕರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಇಂಡಿಯನ್ 2’ ಜುಲೈ 12 ರಂದು (Indian 2 to release) ಮೂರು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮೇ 19ರಂದು ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಇತ್ತೀಚಿನ ಪೋಸ್ಟರ್‌ಗಳ ಪ್ರಕಾರ, ಅನಿರುದ್ಧ್ ರವಿಚಂದರ್ ಸಂಯೋಜಿಸಿದ ಮೊದಲ ಸಿಂಗಲ್ ಮೇ 22 ರಂದು ಬಿಡುಗಡೆಯಾಗಲಿದೆ.

ಇಂಡಿಯನ್ʼ ಸೀಕ್ವೆಲ್‌ಗೆ ಕಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್.ಶಂಕರ್ ಆ್ಯಕ್ಷನ್‌ ಕಟ್‌ ಹೇಳಿರುವುದು ಇಷ್ಟೆಲ್ಲ ನಿರೀಕ್ಷೆ ಹೆಚ್ಚಲು ಕಾರಣ. ಜತೆಗೆ ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ. ಹೀಗಾಗಿಯೇ ಚಿತ್ರವನ್ನು ಥಿಯೇಟರ್‌ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಕಾಜಲ್ ಅಗರ್ವಾಲ್, ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೋವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ. ವಿಶೇಷ ಎಂದರೆ ಕಮಲ್ ಹಾಸನ್ ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Kamal Haasan: ಇಂಡಿಯಾ ಒಕ್ಕೂಟಕ್ಕೆ ಕಮಲ್‌ ಹಾಸನ್‌ ಸೇರ್ಪಡೆ? ಅವರು ಹೇಳಿದ್ದಿಷ್ಟು

ಇದನ್ನೂ ಓದಿ: Kamal Haasan: ಇಂಡಿಯಾ ಒಕ್ಕೂಟಕ್ಕೆ ಕಮಲ್‌ ಹಾಸನ್‌ ಸೇರ್ಪಡೆ? ಅವರು ಹೇಳಿದ್ದಿಷ್ಟು

ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದೆ. ಅನಿರುದ್ಧ್ ರವಿಚಂದರ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರ ಛಾಯಾಗ್ರಹಣ ಇದೆ. ಎ.ಶ್ರೀಕರ್ ಪ್ರಸಾದ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ʼಇಂಡಿಯನ್‌ʼ

1996ರಲ್ಲಿ ತೆರೆಕಂಡ ಎಸ್‌.ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಹೊಂದಿದ್ದ ಈ ಸಿನಿಮಾದಲ್ಲಿಯೂ ಕಮಲ್‌ ಹಾಸನ್‌ ದ್ವಿಪಾತ್ರ ನಿಭಾಯಿಸಿದ್ದರು.

ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

ಈ ಮಧ್ಯೆ ಕಮಲ್‌ ಹಾಸನ್‌ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼಯಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಟಾಲಿವುಡ್ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಕೆರಳಿಸಿದೆ. ಭೂತ ಕಾಲ ಮತ್ತು ಭವಿಷ್ಯದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್‌ಗಳ ಪ್ರಕಾರ ಚಿತ್ರವು ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ.

Continue Reading

ಕಾಲಿವುಡ್

Vijay Sethupathi: ವಿಜಯ್ ಸೇತುಪತಿ- ರುಕ್ಮಿಣಿ ವಸಂತ್ ನಟನೆಯ ತಮಿಳು ಸಿನಿಮಾ ಟೀಸರ್‌ ಔಟ್‌!  

Vijay Sethupathi ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

VISTARANEWS.COM


on

Vijay Sethupathi Starrer Tamil Movie Teaser Released
Koo

ಬೆಂಗಳೂರು: ವಿಜಯ್ ಸೇತುಪತಿ ನಟನೆಯ ‘ಏಸ್’ (Ace) ಫಸ್ಟ್ ಲುಕ್ ಹಾಗೂ ಟೈಟಲ್ ಟೀಸರ್ ರಿಲೀಸ್ ಆಗಿದೆ. ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ನಟನೆಯ ‘ಏಸ್’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ಅಂಶಗಳನ್ನು ಒಳಗೊಂಡಿರುವ ಅನಿಮೇಟೆಡ್ ಸ್ವರೂಪದಲ್ಲಿ ಟೀಸರ್ ಅನಾವರಣಗೊಳ್ಳಿಸಲಾಗಿದೆ. ವಿಜಯ್ ಸೇತುಪತಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಕನ್ನಡತಿ ರುಕ್ಮಿಣಿ ವಸಂತ್ ಸಾಥ್ ಕೊಟ್ಟಿದ್ದಾರೆ.

ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

ಇದನ್ನೂ ಓದಿ: SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಕ್ರೈಮ್ ಥ್ರಿಲ್ಲರ್ ಕಾಮಿಡಿ ಕಥಾಹಂದರ ಹೊಂದಿರುವ ಏಸ್ ಸಿನಿಮಾವನ್ನು, 7Cs ಎಂಟರ್‌ಟೈನ್‌ಮೆಂಟ್‌ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಭಾರೀ ನಿರೀಕ್ಷೆ ಮೂಡಿಸಿರುವ ಚಿತ್ರ ಈ ವರ್ಷವೇ ರಿಲೀಸ್ ಆಗಲಿದೆ.

ಏಸ್’ ಸಿನಿಮಾದಲ್ಲಿ ತಮಿಳಿನ ಜನಪ್ರಿಯ ಹಾಸ್ಯ ನಟ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ನಟಿಸಿದ್ದು ಅವರ ಜೊತೆಗೆ ದಿವ್ಯಾ ಪಿಳ್ಳೈ, ಪಿಎಸ್ ಅವಿನಾಶ್, ರಾಜಕುಮಾರ್, ಬಬ್ಲು ಮತ್ತು ಇನ್ನೂ ಕೆಲವು ಪ್ರಮುಖ ನಟರು ಸಿನಿಮಾದ ಭಾಗವಾಗಿ ಅಭಿನಯ ಮಾಡಿದ್ದಾರೆ.

ಸಿದ್ದರಾಮಯ್ಯ ಜೀವನಾಧರಿತ ಸಿನಿಮಾ

ಕನ್ನಡ ಚಿತ್ರರಂಗದಲ್ಲಿ ಈಗೀಗ ಹಲವಾರು ಬಯೋಪಿಕ್‌ ಸಿನಿಮಾಗಳು ಆಗುತ್ತಿವೆ. ಇದೀಗ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧರಿತ (Biopic) ಸಿನಿಮಾ ಆಗುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ತೆರೆಗೆ ಬರುತ್ತಿದೆ. ಇನ್ನು ವಿಶೇಷ ಅಂದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವನ್ನು ತಮಿಳು ನಟ ವಿಜಯ್ ಸೇತುಪತಿ (Vijay Sethupathi) ನಿಭಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಸಿನಿಮಾಗಾಗಿ ನಟನನ್ನು ಅಪ್ರೋಚ್‌ ಮಾಡಲಾಗಿದೆ ಎಂತಲೂ ವರದಿಯಾಗಿದೆ.

ಸಿದ್ದರಾಮಯ್ಯ ಅವರು ಬಯೋಪಿಕ್‌ ಸಿನಿಮಾಗೆ ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದೆ. ಮಾ.30ರಂದು ರಾಮನವಮಿಯಂದು ಸಿದ್ದರಾಮಯ್ಯ ಮನೆಯ ಮುಂದೆಯೇ ಚಿತ್ರದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಇದೀಗ ಈ ಪಾತ್ರಕ್ಕೆ ವಿಜಯ್‌ ಸೇತುಪತಿ ಅವರು ವಿಜಯ್ ಕೂಡ ಈ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂತಲೂ ವೈರಲ್‌ ಆಗಿದೆ.

Continue Reading

ಕಾಲಿವುಡ್

Kanguva Film: 10,000 ಜನರನ್ನು ಒಳಗೊಂಡಿತ್ತು ʻಕಂಗುವʼ ಚಿತ್ರದ ಸೂರ್ಯ-ಬಾಬಿ ಡಿಯೋಲ್‌ರ ಈ ದೃಶ್ಯ!

Kanguva Film: ಸೂರ್ಯ ಮತ್ತು ಬಾಬಿ ಡಿಯೋಲ್ ಎರಡು ಬುಡಕಟ್ಟುಗಳ ನಾಯಕರಾಗಿ ಇರುತ್ತಾರೆ. ಇವರಿಬ್ಬರ ನಡುವಿನ ಕಾಳಗ ಇಲ್ಲಿ ತೋರಿಸಲಾಗಿತ್ತು. ಟೀಸರ್‌ನಲ್ಲಿ ರಕ್ತಪಾತ ಮತ್ತು ಸಾವುಗಳು ಪ್ರಮುಖ ಹೈಲೈಟ್‌. ಬಾಬಿ ಡಿಯೋಲ್​ ಅವರು ‘ಕಂಗುವ’ ಚಿತ್ರದಲ್ಲಿ ಇನ್ನೂ ಕ್ರೂರವಾದ ಅವತಾರ ತಾಳಿದ್ದರು. ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ.

VISTARANEWS.COM


on

Kanguva Film Suriya-Bobby Deol's war scene with 10,000 people
Koo

ಬೆಂಗಳೂರು: ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್‌ ಆಗಿತ್ತು. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ವರದಿಯ ಪ್ರಕಾರ ಬರೋಬ್ಬರಿ 10,000 ಜನರನ್ನು ಈ ದೃಶ್ಯದಲ್ಲಿ ಬಳಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಮೂಲಗಳ ಪ್ರಕಾರ ʻʻಗ್ರೀನ್‌ ಸ್ಟುಡಿಯೋ , ನಿರ್ದೇಶಕ ಶಿವ ಮತ್ತು ಇಡೀ ತಂಡ ಈ ದೃಶ್ಯಕ್ಕೆ ನ್ಯಾಯ ಸಲ್ಲಿಸಿದೆ ಎನ್ನಲಾಗಿದೆ. ಚಿತ್ರದಲ್ಲಿ ಸೂರ್ಯ ಶಿವಕುಮಾರ್, ಬಾಬಿ ಡಿಯೋಲ್ ಮತ್ತು 10,000ಕ್ಕೂ ಹೆಚ್ಚು ಜನರನ್ನು ಒಳಗೊಂಡಿರುವ ದೊಡ್ಡ ಯುದ್ಧದ ದೃಶ್ಯವನ್ನು ನಿರ್ದೇಶಕರು ಚೆನ್ನಾಗಿ ನಿಭಾಯಿಸಿದ್ದಾರೆʼʼಎನ್ನಲಾಗಿದೆ. ವರ್ಷದ ಅತಿ ದೊಡ್ಡ ಮತ್ತು ದುಬಾರಿ ಚಿತ್ರಗಳಲ್ಲಿ ಒಂದು ಎಂದು ಊಹಿಸಲಾಗಿರುವ ಕಂಗುವವನ್ನು (Kanguva Budget) ಸುಮಾರು 300 ಕೋಟಿಗೂ ಹೆಚ್ಚು ಬಜೆಟ್‌ ನಲ್ಲಿ ನಿರ್ಮಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಚಿತ್ರವೂ ಚಿತ್ರರಂಗದಲ್ಲಿ ಬಹು ದಾಖಲೆಗಳನ್ನು ಮುರಿಯಲಿದೆ ಎಂದು ಊಹಿಸಲಾಗಿದೆ.

ಇದನ್ನೂ ಓದಿ: Kanguva Budget: ಭಾರಿ ಸದ್ದು ಮಾಡುತ್ತಿರುವ ಕಂಗುವ ಚಿತ್ರದ ಬಜೆಟ್ ಎಷ್ಟು ಗೊತ್ತೇ?

ಟೀಸರ್‌ನಲ್ಲಿ ಏನಿತ್ತು?

ಸೂರ್ಯ ಮತ್ತು ಬಾಬಿ ಡಿಯೋಲ್ ಎರಡು ಬುಡಕಟ್ಟುಗಳ ನಾಯಕರಾಗಿ ಇರುತ್ತಾರೆ. ಇವರಿಬ್ಬರ ನಡುವಿನ ಕಾಳಗ ಇಲ್ಲಿ ತೋರಿಸಲಾಗಿತ್ತು. ಟೀಸರ್‌ನಲ್ಲಿ ರಕ್ತಪಾತ ಮತ್ತು ಸಾವುಗಳು ಪ್ರಮುಖ ಹೈಲೈಟ್‌. ಬಾಬಿ ಡಿಯೋಲ್​ ಅವರು ‘ಕಂಗುವ’ ಚಿತ್ರದಲ್ಲಿ ಇನ್ನೂ ಕ್ರೂರವಾದ ಅವತಾರ ತಾಳಿದ್ದರು.

ಯುವಿ ಕ್ರಿಯೇಷನ್ಸ್ ಸಹಯೋಗದಲ್ಲಿ ಸ್ಟುಡಿಯೋ ಗ್ರೀನ್ ನಿರ್ಮಾಣ ಸಂಸ್ಥೆಯು ಸೂರ್ಯ ಮತ್ತು ದಿಶಾ ಪಟಾನಿ ಅಭಿನಯದ ‘ಕಂಗುವ’ ಚಿತ್ರವನ್ನು ನಿರ್ಮಿಸುತ್ತಿದೆ.

38 ಭಾಷೆಗಳಲ್ಲಿ ಕಂಗುವ ಬಿಡುಗಡೆಗೆ ಪ್ಲ್ಯಾನ್

ಖ್ಯಾತ ಕಾಲಿವುಡ್ ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.

ತಾತ್ಕಾಲಿಕವಾಗಿ ʻಸೂರ್ಯ 42ʼ ಎಂದು ಹೆಸರಿಸಲಾದ ಸೂರ್ಯ ಅವರ ಮುಂಬರುವ ಬಹು ನಿರೀಕ್ಷಿತ ಈ ಚಿತ್ರವು ಇದೀಗ ʻಕಂಗುವʼ ಎಂಬ ಹೆಸರನ್ನು ಪಡೆದುಕೊಂಡಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading
Advertisement
Viral Video
ವೈರಲ್ ನ್ಯೂಸ್28 seconds ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

T20 World Cup 2024
ಕ್ರಿಕೆಟ್2 mins ago

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

Crime News
ದೇಶ25 mins ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

missing case davanagere
ಕ್ರೈಂ37 mins ago

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Star Kids with Sanskrit Names From Yami Gautam to Priyanka Chopra
ಬಾಲಿವುಡ್39 mins ago

Star Kids with Sanskrit Names: ಮಕ್ಕಳಿಗೆ ಸಂಸ್ಕೃತ ಮೂಲದ ಹೆಸರನ್ನೇ ಇಟ್ಟ ಸ್ಟಾರ್ಸ್‌ಗಳಿವರು!

Rohit Sharma
ಕ್ರೀಡೆ39 mins ago

Rohit Sharma: ಖಾಸಗಿತನಕ್ಕೆ ಧಕ್ಕೆ ಆರೋಪ ಮಾಡಿದ ರೋಹಿತ್​ಗೆ ಸ್ಪಷ್ಟನೆ ನೀಡಿದ ಸ್ಟಾರ್‌ಸ್ಪೋರ್ಟ್ಸ್

corona virus wave in singapore
ಪ್ರಮುಖ ಸುದ್ದಿ59 mins ago

Corona Virus: ಸಿಂಗಾಪುರದಲ್ಲಿ ಕೋವಿಡ್‌-19 ಹೊಸ ಅಲೆ, ರಾಜ್ಯದಲ್ಲಿ ಅಲರ್ಟ್‌, ಇಂದು ಆರೋಗ್ಯ ಇಲಾಖೆ ಸಭೆ

KKR vs SRH
ಕ್ರೀಡೆ1 hour ago

KKR vs SRH: ಇಂದು ಮೊದಲ ಕ್ವಾಲಿಫೈಯರ್‌ ಪಂದ್ಯ: ಅಯ್ಯರ್​-ಕಮಿನ್ಸ್​ ಪಡೆಗಳ ಫೈನಲ್‌ ರೇಸ್‌

ISIS Terrorists
ದೇಶ1 hour ago

ISIS Terrorists: ಬಿಜೆಪಿ, ಆರ್ ಎಸ್ ಎಸ್ ನಾಯಕರ ಮೇಲೆ ಆತ್ಮಾಹುತಿ ದಾಳಿಗೆ ಸಂಚು ಮಾಡಿದ್ದ ಐಸಿಸ್ ಉಗ್ರರು; ಸೆರೆ ಸಿಕ್ಕಿದ್ದು ಹೇಗೆ?

Shocking News
ವಿದೇಶ1 hour ago

Shocking News: ಎಚ್‌ಐವಿ ಪಾಸಿಟಿವ್‌ ವಿಚಾರ ಮುಚ್ಚಿಟ್ಟ ಲೈಂಗಿಕ ಕಾರ್ಯಕರ್ತೆ; 211 ಮಂದಿಗೆ ಎದುರಾಯ್ತು ಸಂಕಷ್ಟ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ20 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌