Liger Movie | ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಕ್ಲೈಮ್ಯಾಕ್ಸ್‌: ಷರಾ ಬರೆದ ಟ್ವಿಟ್ಟಿಗರು! - Vistara News

ಟಾಲಿವುಡ್

Liger Movie | ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಕ್ಲೈಮ್ಯಾಕ್ಸ್‌: ಷರಾ ಬರೆದ ಟ್ವಿಟ್ಟಿಗರು!

ವಿಜಯ್‌ ದೇವರಕೊಂಡ ಅಭಿನಯದ ಲೈಗರ್‌ ಸಿನಿಮಾ (Liger Movie) ವಿಶ್ವಾದ್ಯಂತ ಬಿಡುಗಡೆಗೊಂಡಿದೆ. ಪ್ರೇಕ್ಷಕರು ಟ್ವೀಟ್‌ ಮೂಲಕ ವಿಮರ್ಶೆಗಳನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

Liger Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್ ನಟ ವಿಜಯ್ ದೇವರಕೊಂಡ ಅಭಿನಯದ ಲೈಗರ್ ಸಿನಿಮಾ (Liger Movie) ವಿಶ್ವಾದ್ಯಂತ ಗುರುವಾರ (ಆ.25) ಬಿಡುಗಡೆಗೊಂಡಿದೆ. ಈ ಸಿನಿಮಾ ಬಗ್ಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಅಭಿಮಾನಿಗಳು ಖುಷ್‌ ಆಗಿದ್ದಾರೆ. ಆದರೆ, ಕೆಲವರು ಟ್ವಿಟ್ಟರ್‌ ಮೂಲಕ ಜಾಡಿಸಿದ್ದು, ಭಾರತೀಯ ಚಿತ್ರರಂಗದಲ್ಲಿಯೇ ಅತ್ಯಂತ ಕೆಟ್ಟ ಕ್ಲೈಮ್ಯಾಕ್ಸ್‌ ಅನ್ನು ಈ ಸಿನಿಮಾ ಹೊಂದಿದೆ ಎಂದು ಬರೆದುಕೊಂಡಿದ್ದಾರೆ.

ʻʻಇದು ಅತ್ಯುನ್ನತ ಸಿನಿಮಾ. ವಿಜಯ್‌ ದೇವರಕೊಂಡ ಅವರ ಬಾಕ್ಸಿಂಗ್‌ ದೃಶ್ಯಗಳು ಕ್ಲಾಸಿ ಆಗಿ ಮೂಡಿ ಬಂದಿದೆ. ಅನನ್ಯಾ ಪಾಂಡೆ ನಟನೆ ರೊಮ್ಯಾಂಟಿಕ್‌ ಆಗಿದ್ದು, ತುಂಬಾ ಚೆಂದವಾಗಿ ಕಾಣಿಸಿದ್ದಾರೆʼʼ ಎಂದು ಕೆಲವರು ಟ್ವೀಟ್‌ ಮೂಲಕ ತಮ್ಮ ಸಂತಸವನ್ನು ಹೊರಹಾಕಿದ್ದಾರೆ.

ʻʻಸಿನಿಮಾದಲ್ಲಿ ಅಬ್ಬರವಿದ್ದರೂ ಸೊಗಸಾಗಿ ಮೂಡಿಬಂದಿದೆ. ಫೈಟರ್‌ ಜೀವನ ಅಷ್ಟಾಗಿ ಚೆನ್ನಾಗಿಲ್ಲ. ಫೈಟ್‌ಗಳ ಅಬ್ಬರ ಮಾತ್ರ ಇದೆ. ಆದರೆ, ಕಥೆ ಇಲ್ಲ” ಎಂದು ಕೆಲವರು ಟ್ವೀಟ್‌ ಮಾಡಿದ್ದಾರೆ. ಸಿನಿಮಾದ ಕ್ಲೈಮ್ಯಾಕ್ಸ್‌ ಭಾರತೀಯ ಸಿನಿಮಾ ಇತಿಹಾಸದಲ್ಲಿಯೇ ಅತ್ಯಂತ ಕೆಟ್ಟ ಕ್ಲೈಮ್ಯಾಕ್ಸ್‌ ಹೊಂದಿದೆʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ | Liger Movie | ನಾಳೆಯಿಂದ ತೆರೆ ಮೇಲೆ ಅಬ್ಬರಿಸಲಿದೆ ಲೈಗರ್‌: ಟಿಕೆಟ್‌ ಸೋಲ್ಡ್‌ ಔಟ್‌!

ಸಿನಿಮಾ ತಾಂತ್ರಿಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರೇಕ್ಷಕರು ಒಳ್ಳೆಯ ಪ್ರತಿಕ್ರಿಯೆ ನೀಡಿದ್ದು, ʻʻಕ್ಯಾಮರಾ ಮತ್ತು ಸಾಹಸ ನಿರ್ದೇಶನ ಅದ್ಭುತವಾಗಿ ಮೂಡಿ ಬಂದಿದೆʼʼ ಎಂದು ಹಲವರು ಟ್ವೀಟ್‌ ಮಾಡಿದ್ದಾರೆ. ಮೊದಲಾರ್ಧ ತಾಯಿಯ ಸೆಂಟಿಮೆಂಟ್‌ ಉತ್ತಮವಾಗಿ ಬಂದಿದೆ. ಅಲ್ಲದೆ, ಮಾಸ್‌ ಮಸಲಾವನ್ನು ಇದರಲ್ಲಿ ಕಾಣಬಹುದಾಗಿದೆ. ಆದರೆ, ಚಿತ್ರಕಥೆ ಚೆನ್ನಾಗಿಲ್ಲʼʼ ಎಂದು ಟ್ವೀಟಿಗರು ಮೂದಲಿಸಿದ್ದಾರೆ.

ಬೆಳ್ಳಂಬೆಳಗ್ಗೆ ಥಿಯೇಟರ್ ಅಂಗಳಕ್ಕೆ ವಿಜಯ್ ದೇವರಕೊಂಡ ಫ್ಯಾನ್ಸ್ ಲಗ್ಗೆ ಇಟ್ಟಿದ್ದಾರೆ. ಕರ್ನಾಟಕದಲ್ಲೂ ಲೈಗರ್ ಅಬ್ಬರ ಜೋರಾಗಿದೆ.

ಧರ್ಮ ಪ್ರೊಡಕ್ಷನ್‌ನಡಿ ಸಿನಿಮಾವನ್ನು ಅದ್ಧೂರಿಯಾಗಿ ನಿರ್ಮಿಸಲಾಗಿದೆ. ಪೋಸ್ಟರ್‌ಗಳಿಂದಲೇ ನಿರೀಕ್ಷೆ ಹೆಚ್ಚಿಸಿದೆ. ಹಿಂದಿ, ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ತಯಾರಾಗಿರುವ ಪ್ಯಾನ್ ಇಂಡಿಯಾ ಚಿತ್ರವಾಗಿದೆ.

ವಿಜಯ್‌ ದೇವರಕೊಂಡ ಇಷ್ಟು ದಿನ ರೊಮ್ಯಾಂಟಿಕ್‌ ಲುಕ್‌ನಲ್ಲಿಯೇ ಕಾಣಿಸಿಕೊಳ್ಳುತ್ತಿದ್ದರು. ಬಾಕ್ಸಿಂಗ್‌ನ ದಿಗ್ಗಜ ಮೈಕ್‌ ಟೈಸನ್‌ ಕೂಡ ಇದರಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ.

ಇದನ್ನೂ ಓದಿ | Liger Movie | ವಿಶ್ವಾದ್ಯಂತ ಶುರುವಾಗಿದೆ ಲೈಗರ್‌ ಆರ್ಭಟ: ಅಕ್ಡಿ ಪಕ್ಡಿ ಹಾಡಿಗೆ ಹುಚ್ಚೆದ್ದು ಕುಣಿದ ಫ್ಯಾನ್ಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Nandamuri Balakrishna: ನಟಿ ಅಂಜಲಿಯನ್ನು (Actress Anjali ) ವೇದಿಕೆಯಲ್ಲಿಯೇ ತಳ್ಳಿದ್ದರು ಬಾಲಯ್ಯ. ನಟಿ ಅಂಜಲಿ “ನಾವಿಬ್ಬರು ಗ್ರೇಟ್ ಫ್ರೆಂಡ್ಸ್” ಎಂದು ಹೇಳಿ ಆ ಚರ್ಚೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದರು. . ಆದರೆ ಇದೀಗ ಅದೇ ಕಾರ್ಯಕ್ರಮದ ಮತ್ತೊಂದು ವೀಡಿಯೊ ವೈರಲ್ ಆಗಿ ಮತ್ತೆ ಬಾಲಯ್ಯ ಟ್ರೋಲ್ ಆಗುವಂತಾಗಿದೆ.

VISTARANEWS.COM


on

Nandamuri Balakrishna touch actress anjali back
Koo

ಬೆಂಗಳೂರು: ತೆಲುಗು ಸೂಪರ್‌ಸ್ಟಾರ್ ನಂದಮೂರಿ ಬಾಲಕೃಷ್ಣ (Nandamuri Balakrishna) ಇತ್ತೀಚೆಗೆ ತಮ್ಮ ಚಿತ್ರ `ಗ್ಯಾಂಗ್ಸ್ ಆಫ್ ಗೋದಾವರಿ’ (Gangs of Godavari) ಪ್ರಚಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಟಿ ಅಂಜಲಿಯನ್ನು (Actress Anjali ) ವೇದಿಕೆಯಲ್ಲಿಯೇ ತಳ್ಳಿದ್ದರು. ಈ ವಿಡಿಯೊ ಭಾರಿ ವೈರಲ್‌ ಆಗಿ, ಸಖತ್‌ ಟ್ರೋಲ್‌ ಆಗಿದ್ದರು ಬಾಲಯ್ಯ. ನಟಿ ಅಂಜಲಿ “ನಾವಿಬ್ಬರು ಗ್ರೇಟ್ ಫ್ರೆಂಡ್ಸ್” ಎಂದು ಹೇಳಿ ಆ ಚರ್ಚೆಗೆ ಬ್ರೇಕ್ ಹಾಕುವ ಪ್ರಯತ್ನ ಮಾಡಿದ್ದರು. . ಆದರೆ ಇದೀಗ ಅದೇ ಕಾರ್ಯಕ್ರಮದ ಮತ್ತೊಂದು ವೀಡಿಯೊ ವೈರಲ್ ಆಗಿ ಮತ್ತೆ ಬಾಲಯ್ಯ ಟ್ರೋಲ್ ಆಗುವಂತಾಗಿದೆ. ವೇದಿಕೆಗೆ ಅಂಜಲಿ ಹೊರಟು ನಿಂತಾಗ ನಟ ಬಾಲಯ್ಯ ಆಕೆಯ ಹಿಂಬದಿಯನ್ನು ನಯವಾಗಿ ತಟ್ಟಿದ್ದಾರೆ ಎನ್ನಲಾಗಿದೆ.

ಕಾರ್ಯಕ್ರಮದ ವೇದಿಕೆ ಮುಂಭಾಗದಲ್ಲಿ ಬಾಲಕೃಷ್ಣ ಕುಳಿತಿದ್ದಾಗ ಅವರ ಕಾಲ ಬಳಿ ನೀರಿನ ಬಾಟಲ್‌ನಲ್ಲಿ ಮದ್ಯದ ರೀತಿಯ ಪಾನೀಯ ಇರುವುದು ಕಂಡುಬಂದಿತ್ತು. ಇದನ್ನು ನೋಡಿ ಅವರು ಕುಡಿದು ವೇದಿಕೆಯಲ್ಲಿ ಆ ರೀತಿ ನಡೆದುಕೊಂಡಿದ್ದಾರೆ ಎಂದು ಕೆಲವರು ಆರೋಪಿಸಿದ್ದರು. ಆದರೆ ಅದೆಲ್ಲಾ ಗ್ರಾಫಿಕ್ಸ್ ಎಂದು ಕಾರ್ಯಕ್ರಮದ ಆಯೋಜಕರು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Nandamuri Balakrishna: ವೇದಿಕೆ ಮೇಲೆ ತಳ್ಳಿದ್ದ ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

ಬಾಲಯ್ಯ ಬಗ್ಗೆ ಕೊನೆಗೂ ಪ್ರತಿಕ್ರಿಯೆ ಕೊಟ್ಟ ನಟಿ ಅಂಜಲಿ!

‘ಗ್ಯಾಂಗ್ಸ್ ಆಫ್ ಗೋದಾವರಿ’ ಯ ಪ್ರೀ-ರಿಲೀಸ್ ಸಮಾರಂಭದಲ್ಲಿ (Vishwak Sen and Neha Shetty) ಬಾಲಕೃಷ್ಣ ಮುಖ್ಯ ಅತಿಥಿಯಾಗಿದ್ದರು. ನೇಹಾ ಶೆಟ್ಟಿ ಮೊದಲಾದವರು ವೇದಿಕೆ ಮೇಲೆ ನಿಂತಿದ್ದರು. ಬಾಲಯ್ಯ ಅವರು ಅಂಜಲಿಗೆ ಏನನ್ನೋ ಹೇಳುವ ಪ್ರಯುತ್ನ ಮಾಡಿದ್ದಾರೆ. ಆದರೆ, ಅವರಿಗೆ ಇದು ಕೇಳಿಲ್ಲ. ಇದರಿಂದ ಸಿಟ್ಟಾದ ಬಾಲಯ್ಯ ಅವರು ಅಂಜಲಿಯನ್ನು ತಳ್ಳಿದ್ದರು ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿದ್ದವು.

ವೈರಲ್‌ ಆದ ವಿಡಿಯೊದಲ್ಲಿ ವೇದಿಕೆಯ ಮೇಲೆ ನೇಹಾ ಶೆಟ್ಟಿ ಮತ್ತು ಅಂಜಲಿ ಅಕ್ಕ ಪಕ್ಕ ನಿಂತಿದ್ದರು. ನೇಹಾ ಅವರಿಗೆ ನಯವಾಗಿ ಪಕ್ಕಕ್ಕೆ ಸರಿಯಲು ಕೇಳುತ್ತಾರೆ. ಕೆಲವು ಕ್ಷಣಗಳ ನಂತರ, ಬಾಲಯ್ಯ ಅವರು ಅಂಜಲಿಯನ್ನು ದೂರ ತಳ್ಳುತ್ತಾರೆ, ಬಹುತೇಕ ನಟಿ ಬಿದ್ದೇ ಬಿಡುವಂತಿದ್ದರು. ಆಗ ನೇಹಾ ಅವರು ಅಂಜಲಿ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಬಳಿಕ ನಟಿಯರು ತಮಾಷೆಯಾಗಿ ಬಾಲಯ್ಯ ನೋಡಿ ನಕ್ಕಿದ್ದರು.

ಕಾರ್ಯಕ್ರಮದ ಕ್ಲಿಪ್ ಅನ್ನು ಹಂಚಿಕೊಂಡಿರುವ ಅಂಜಲಿ ಹೀಗೆ ಬರೆದುಕೊಂಡಿದ್ದರು “ಗ್ಯಾಂಗ್ಸ್ ಆಫ್ ಗೋದಾವರಿ ಪ್ರೀ-ರಿಲೀಸ್ ಈವೆಂಟ್‌ವನ್ನು ತಮ್ಮ ಉಪಸ್ಥಿತಿಯೊಂದಿಗೆ ಅಲಂಕರಿಸಿದ್ದಕ್ಕಾಗಿ ನಾನು ಬಾಲಕೃಷ್ಣ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಬಾಲಕೃಷ್ಣ ಅವರು ಮತ್ತು ನಾನು ಯಾವಾಗಲೂ ಪರಸ್ಪರ ಗೌರವವನ್ನು ಉಳಿಸಿಕೊಂಡಿದ್ದೇವೆ. ಬಹಳ ಹಿಂದಿನಿಂದಲೂ ನಾವಿಬ್ಬರು ಪರಸ್ಪರ ಉತ್ತಮ ಸ್ನೇಹ, ಗೌರವವನ್ನು ಹಂಚಿಕೊಂಡಿದ್ದೇವೆ ಎಂದು ಹೇಳುವುದಕ್ಕೆ ನಾನು ಬಯಸುತ್ತೇನೆ. ಅವರ ಜತೆ ವೇದಿಕೆ ಹಂಚಿಕೊಂಡಿದ್ದು ಅದ್ಭುತವಾಗಿತ್ತುʼʼಎಂದು ಬರೆದುಕೊಂಡಿದ್ದರು.

Continue Reading

ಒಟಿಟಿ

Bujji and Bhairava: ಅಮೆಜಾನ್​ಗೆ ಬಂದ ‘ಕಲ್ಕಿ’ಯ ಬುಜ್ಜಿ-ಭೈರವ; ಹೆಚ್ಚಾಯ್ತು ‘ಕಲ್ಕಿ 2898 ಎಡಿ’ ನಿರೀಕ್ಷೆ!

Bujji and Bhairava: ‘ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ.

VISTARANEWS.COM


on

Bujji and Bhairava Prabhas animated show raises
Koo

ಬೆಂಗಳೂರು: ಕೆಲವು ದಿನಗಳ ಹಿಂದೆ ಭೈರವ ಹಾಗೂ ಬುಜ್ಜಿಯ ಟೀಸರ್‌ವನ್ನು ‘ಕಲ್ಕಿ 2898 ಎಡಿ’ ತಂಡ ಬಿಡುಗಡೆಗೊಳಿಸಿತ್ತು. ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸಿರೀಸ್‌ವನ್ನು ಈಗ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ. . ಪ್ರಭಾಸ್ ಮತ್ತು ನಾಗ್ ಅಶ್ವಿನ್ ಅವರ ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಜೋಡಿಯ (Bujji and Bhairava) ಮಹತ್ವಾಕಾಂಕ್ಷೆಯ ಯೋಜನೆಯಾದ ‘ಕಲ್ಕಿ 2898 ಎಡಿ’ (Kalki 2989 ad) ತಂಡ, ಸಿನಿಮಾದ ಅನಿಮೇಟೆಡ್ ಸರಣಿಯನ್ನು ಬಿಡುಗಡೆ ಮಾಡಿದೆ. ‘ಕಲ್ಕಿ 2898 ಎಡಿ’ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುವ ಮುನ್ನವೇ ಅದರ ಅನಿಮೇಟೆಡ್ ಸರಣಿ ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದ್ದು ಪ್ರೇಕ್ಷಕರು ಸಖತ್‌ ಖುಷ್‌ ಆಗಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾ ಜೂನ್‌ 27ಕ್ಕೆ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೆ ಭೈರವ ಹಾಗೂ ಬುಜ್ಜಿಯ ಟೀಸರ್ ಅನ್ನು ಚಿತ್ರತಂಡ ಅದ್ಧೂರಿಯಾಗಿ ಬಿಡುಗಡೆ ಮಾಡಿತ್ತು. ಇದೀಗ ಇದೇ ಭೈರವ ಹಾಗೂ ಬುಜ್ಜಿಯ ಅನಿಮೇಟೆಡ್ ಸರಣಿಯನ್ನು ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಮಾಡಲಾಗಿದೆ. ‘ಕಲ್ಕಿ 2898 ಎಡಿ’ ಸಿನಿಮಾನಲ್ಲಿ ಪ್ರಭಾಸ್ ಭೈರವನ ಪಾತ್ರ ಮಾಡಿದ್ದು, ಭೈರವನ ಜೊತೆಗಾತಿಯಾಗಿ ಬುಜ್ಜಿ ಎಂಬ ಯಂತ್ರವಿದೆ. ಇನ್ನು ʻಬುಜ್ಜಿʼ ಯಂತ್ರಕ್ಕೆ ಕೀರ್ತಿ ಸುರೇಶ್‌ ಧ್ವನಿ ನೀಡಿದ್ದಾರೆ. ನಾಗ್ ಅಶ್ವಿನ್ ನಿರ್ದೇಶನದ, ‘ಬಿ&ಬಿ: ಬುಜ್ಜಿ ಮತ್ತು ಭೈರವ’ ಸಾಕಷ್ಟು ಆಕ್ಷನ್ ಮತ್ತು ಕಾಮಿಡಿ ಇದೆ. ಅನಿಮೇಟೆಡ್ ಸರಣಿಯ ಭೈರವನ ಪಾತ್ರಕ್ಕೆ ಪ್ರಭಾಸ್ ಅವರೇ ಧ್ವನಿ ನೀಡಿದ್ದಾರೆ. 

ಇದನ್ನೂ ಓದಿ: Heat Wave: ಬಿಸಿಗಾಳಿ ಶಾಖಕ್ಕೆ ಉತ್ತರ ಭಾರತ ಸಂಪೂರ್ಣ ತತ್ತರ; ಎಮರ್ಜೆನ್ಸಿ ಘೋಷಣೆ ಆಗುತ್ತಾ?

ಪ್ಯಾನ್‍ ಇಂಡಿಯಾ ಸೂಪರ್‌ ಸ್ಟಾರ್‌ ಪ್ರಭಾಸ್‍ (Actor Prabhas) ಅಭಿನಯದ ‘ಕಲ್ಕಿ 2898 ಎಡಿ’ (Kalki 2898 AD) ಚಿತ್ರ ಸದ್ಯ ಸದ್ದು ಮಾಡುತ್ತಿದೆ. ಜೂನ್ 27ರಂದು ತೆರೆಗೆ ಬರಲು ಸಜ್ಜಾಗಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಸಿನಿ ಪ್ರಿಯರ ಗಮನ ಸೆಳೆದಿದೆ.

ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ

ಐದನೇ ಸೂಪರ್‌ ಸ್ಟಾರ್‌ ಬುಜ್ಜಿ ಬೇರೆ ಯಾರೂ ಅಲ್ಲ ನಾಯಕ ಭೈರವ (ಪ್ರಭಾಸ್‌)ನ ಆಪ್ತ ಸ್ನೇಹಿತ ಎಂದೇ ಕರೆಯಲ್ಪಡುವ ವಿಶೇಷ ವಾಹನ. ಬುಜ್ಜಿ ಹೆಸರಿನ ಈ ಆಪ್ತ ಗೆಳೆಯ ಚಿತ್ರದ ನಾಯಕ ಭೈರವನ ಅತ್ಯಂತ ನಂಬಿಕಸ್ಥ ಎನಿಸಿಕೊಂಡಿದೆ ಎಂದು ಚಿತ್ರ ತಂಡ ವಿವರಿಸಿದೆ. ಈ ಗೆಳೆಯನ ಕುರಿತು ವೈಜಯಂತಿ ನೆಟ್‍ವರ್ಕ್ ಯೂಟ್ಯೂಬ್‌ ಚಾನಲ್‍ನಲ್ಲಿ ಹೊಸ ವೀಡಿಯೋ ರಿಲೀಸ್‌ ಮಾಡಿತ್ತು.

ಈ ವರ್ಷದ ಅತೀ ನಿರೀಕ್ಷಿತ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ‘ಕಲ್ಕಿ 2898 ಎಡಿ’ ಚಿತ್ರದಲ್ಲಿ ಪ್ರಭಾಸ್ ಜತೆಗೆ ಅಮಿತಾಭ್‍ ಬಚ್ಚನ್, ಕಮಲ್ ಹಾಸನ್, ದೀಪಿಕಾ ಪಡುಕೋಣೆ, ದಿಶಾ ಪಠಾಣಿ ಮುಂತಾದವರು ನಟಿಸಿದ್ದಾರೆ. ವೈಜಯಂತಿ ಮೂವೀಸ್ ಬ್ಯಾನರ್‌ನಡಿ ತಯಾರಾಗುತ್ತಿರುವ ಈ ಚಿತ್ರವನ್ನು ನಾಗ್‍ ಅಶ್ವಿನ್‍ ನಿರ್ದೇಶನ ಮಾಡಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಚಿತ್ರದಲ್ಲಿನ ಅಮಿತಾಭ್ ಬಚ್ಚನ್‍ ಅವರ ಪಾತ್ರವನ್ನು ಅನಾವರಣಗೊಳಿಸಲಾಗಿತ್ತು. ಅಶ್ವತ್ಥಾಮನಾಗಿ ಅಮಿತಾಭ್‍ ನಟಿಸಿದ್ದು, ಅವರ ಪಾತ್ರ ಹೇಗಿರಬಹುದು ಎಂದು ಪ್ರೇಕ್ಷಕರು ತುದಿಗಾಲಲ್ಲಿ ಕಾಯುವಂತಾಗಿದೆ. ಅವರ ಪಾತ್ರ ಪರಿಚಯಿಸುವ ಟೀಸರ್‌ ತೆಲುಗು, ತಮಿಳು, ಕನ್ನಡ, ಹಿಂದಿ, ಮಲಯಾಳಂ ಮತ್ತು ಇಂಗ್ಲಿಷ್‍ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಿದೆ.

Continue Reading

ಟಾಲಿವುಡ್

Nivetha Pethuraj: ಪೊಲೀಸ್ ಅಧಿಕಾರಿಯೊಂದಿಗೆ ಬಹುಭಾಷಾ ನಟಿ ಕಿರಿಕ್‌; ವಿಡಿಯೊ ವೈರಲ್‌!

Nivetha Pethuraj: ಸಿನಿಮಾ ವಿಚಾರಕ್ಕೆ ಬಂದರೆ ನಿವೇತಾ ಕೊನೆಯ ಬಾರಿಗೆ ಜಿಯೋ ಸಿನಿಮಾದಲ್ಲಿ ಕಳೆದ ವರ್ಷ ಮೇ 27 ರಂದು ಬಿಡುಗಡೆಯಾದ ʻಬೂʼ ಎಂಬ ದ್ವಿಭಾಷಾ ಹಾರರ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಂಡರು. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ರಕುಲ್ ಪ್ರೀತ್ ಸಿಂಗ್, ವಿಶ್ವಕ್ ಸೇನ್ ಮತ್ತು ರೆಬಾ ಮೋನಿಕಾ ಜಾನ್ ತೆರೆ ಹಂಚಿಕೊಂಡಿದ್ದಾರೆ.

VISTARANEWS.COM


on

Nivetha Pethuraj heated argument video with cops
Koo

ಬೆಂಗಳೂರು: ಬಹುಭಾಷಾ ನಟಿ ನಿವೇತಾ ಪೇತುರಾಜ್ (Nivetha Pethuraj) ಅವರು ಹೈದರಾಬಾದ್‌ನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಜಗಳವಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಕಾರಿನ ಟ್ರಂಕ್‌ ಓಪನ್‌ ಮಾಡುವಂತೆ ಕೇಳಿದ ಪೊಲೀಸರೊಂದಿಗೆ ಅವರು ವಾಗ್ವದ ನಡೆಸಿದ್ದು ಮಾತ್ರವಲ್ಲದೆ, ಈ ದೃಶ್ಯವನ್ನು ಚಿತ್ರೀಕರಿಸಿದವರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ನಿವೇತಾ ಪೇತುರಾಜ್ ಪೊಲೀಸರೊಂದಿನ ವಾಗ್ವಾದದ ವಿಡಿಯೊ ಇದೀಗ ಭಾರಿ ಚರ್ಚೆ ಹುಟ್ಟುಹಾಕಿದೆ. ಕಾರಿನಲ್ಲಿ ಹೋಗುತ್ತಿದ್ದ ನಿವೇತಾ ಅವರನ್ನು ತಡೆದ ಪೊಲೀಸರು ಕಾರಿನ ಡಿಕ್ಕಿ ಓಪನ್‌ ಮಾಡುವಂತೆ ಹೇಳಿದ್ದಾರೆ. ತೆರೆಯಲು ನಿರಾಕರಿಸಿದ ನಟಿ ಪೊಲೀಸ್ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಸಿದರು. ಡಾಕ್ಯುಮೆಂಟ್‌ಗಳೆಲ್ಲಾ ಸರಿಯಾಗಿವೆ, ದಯವಿಟ್ಟು ಅರ್ಥಮಾಡಿಕೊಳ್ಳಿ ನಾನು ಡಿಕ್ಕಿ ತೆರೆಯಲ್ಲ. ಎಂದು ಹೇಳುತ್ತಾರೆ. ಪೊಲೀಸರು ಮತ್ತು ನಿವೇತಾ ಅವರ ನಡುವಿನ ವಾಗ್ವಾದದ ದೃಶ್ಯವನ್ನು ರೆಕಾರ್ಡ್‌ ಮಾಡುತ್ತಿದ್ದ ವ್ಯಕ್ತಿಗೂ ಆ ಸಂದರ್ಭದಲ್ಲಿ ನಟಿ ತರಾಟೆಗೆ ತೆಗೆದುಕೊಳ್ಳುತ್ತಾರೆ.

ಇದನ್ನೂ ಓದಿ: Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಇದು ಪ್ರಚಾರದ ಗಿಮಿಕ್‌ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೂ ಕೆಲವರು ಈ ವಿಡಿಯೊ ಫೇಕ್‌ ಇರಬಬಹುದು ಶೂಟಿಂಗ್‌ ದೃಶ್ಯ ಇರಬಹುದುʼಎಂದು ಕಮೆಂಟ್‌ ಮಾಡಿದ್ದಾರೆ. ಪೊಲೀಸರು ಕಾಲಿಗೆ ಕ್ರಾಕ್ಸ್‌ ಧರಿಸಿದ್ದ ಕಾರಣ ನೆಟ್ಟಿಗರು ಇದೆಲ್ಲಾ ಪಬ್ಲಿಸಿಟಿ ಸ್ಟಂಟ್‌ ಎಂದು ಕಮೆಂಟ್‌ ಮಾಡುತ್ತಿದ್ದಾರೆ. ಹೀಗಿದ್ದರೂ ನಟಿ ಈ ವಿಡಿಯೋದ ಬಗ್ಗೆ ಇನ್ನೂ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ.

ಸಿನಿಮಾ ವಿಚಾರಕ್ಕೆ ಬಂದರೆ ನಿವೇತಾ ಕೊನೆಯ ಬಾರಿಗೆ ಜಿಯೋ ಸಿನಿಮಾದಲ್ಲಿ ಕಳೆದ ವರ್ಷ ಮೇ 27 ರಂದು ಬಿಡುಗಡೆಯಾದ ʻಬೂʼ ಎಂಬ ದ್ವಿಭಾಷಾ ಹಾರರ್ ಥ್ರಿಲ್ಲರ್ ಚಲನಚಿತ್ರದಲ್ಲಿ ಕಾಣಿಸಿಕೊಂಡರು. ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆಯಾದ ಈ ಚಿತ್ರವನ್ನು ಎ.ಎಲ್.ವಿಜಯ್ ನಿರ್ದೇಶಿಸಿದ್ದರು. ರಕುಲ್ ಪ್ರೀತ್ ಸಿಂಗ್, ವಿಶ್ವಕ್ ಸೇನ್ ಮತ್ತು ರೆಬಾ ಮೋನಿಕಾ ಜಾನ್ ತೆರೆ ಹಂಚಿಕೊಂಡಿದ್ದಾರೆ.

ಪ್ರಸ್ತುತ, ನಟಿ ತಮಿಳಿನ ʻಸೊಪ್ಪಣ್ಣ ಸುಂದರಿʼಯ ತೆಲುಗು ರಿಮೇಕ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ವೈರಲ್ ಆಗಿರುವ ವಿಡಿಯೊ ಈ ಸಿನಿಮಾದೇ ಆಗಿರಬಹದು ಎಂದು ಹಲವರು ಊಹಿಸಿದ್ದಾರೆ.

Continue Reading

ಟಾಲಿವುಡ್

Maharaja Trailer: ವಿಜಯ್‌ ಸೇತುಪತಿ 50ನೇ ಚಿತ್ರದ ʻಮಹಾರಾಜʼ ಟ್ರೈಲರ್‌ ಔಟ್‌: ಫ್ಯಾನ್ಸ್‌ ಫಿದಾ!

Maharaja Trailer: ವಿಜಯ್‌ ಸೇತುಪತಿ 50ನೇ ಚಿತ್ರಕ್ಕಾಗಿ,(50th film ‘Maharaja) ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಜತೆ ಕೈ ಜೋಡಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಜತೆಗೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್ ಮತ್ತು ನಟ್ಟಿ ನಟರಾಜ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದು, ದಿನೇಶ್ ಪುರುಷೋತ್ತಮನ್ ಅವರ ಛಾಯಾಗ್ರಹಣವಿದೆ. ಕನ್ನಡದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ಟ್ರೇಲರ್‌ನಲ್ಲಿರುವ ಸಂಗೀತವೇ ಭಯ ಹುಟ್ಟಿಸುವಂತಿದೆ. 

VISTARANEWS.COM


on

Maharaja trailer released Vijay Sethupathi has a secret
Koo

ಬೆಂಗಳೂರು: ನಟ ವಿಜಯ್‌ ಸೇತುಪತಿ ಅವರ 50ನೇ ಚಿತ್ರ ʻಮಹಾರಾಜʼ ಟ್ರೈಲರ್‌ (Maharaja Trailer) ಬಿಡುಗಡೆಯಾಗಿದೆ. ನಿಥಿಲನ್ ಸಾಮಿನಾಥನ್ ನಿರ್ದೇಶನದ ಈ ಚಿತ್ರದಲ್ಲಿ ವಿಜಯ್ ಮತ್ತು ಅನುರಾಗ್ ಕಶ್ಯಪ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಟ್ರೈಲರ್‌ನಲ್ಲಿ ನೋಡಿದಾಗ ವಿಜಯ್ ಕ್ಷೌರಿಕ ಪಾತ್ರ ನಿಭಾಯಿಸಿದ್ದಾರೆ. ನಾಪತ್ತೆಯಾದ ಲಕ್ಷ್ಮೀಯನ್ನು ಹುಡುಕಿ ಕೊಡಿ ಎಂದು ಕಥಾನಾಯಕ ಪೊಲೀಸ್‌ ಸ್ಟೇಷನ್‌ಗೆ ಬರ್ತಾನೆ. ಅಷ್ಟಕ್ಕೂ ಆ ಲಕ್ಷ್ಮೀ ಯಾರು? ಹೀಗೆ ಸಸ್ಪೆನ್ಸ್‌ ಥ್ರಿಲ್ಲರ್‌ ಶೈಲಿಯಲ್ಲಿಯೇ ಟ್ರೇಲರ್‌ ನೋಡಿಸಿಕೊಂಡು ಹೋಗುತ್ತದೆ.

ಟ್ರೈಲರ್‌ನಲ್ಲಿ ಲಕ್ಷ್ಮೀಯನ್ನು ಹುಡುಕಿ ಕೊಡಿ ಎಂದು ಕಥಾನಾಯಕ ಪೊಲೀಸ್‌ ಸ್ಟೇಷನ್‌ಗೆ ಬರ್ತಾನೆ. ಚಿನ್ನ, ಹಣ,ಸಹೋದರಿ, ಹೆಂಡತಿ , ಮಗು ಯಾವುದು ಅಲ್ಲ. ಅಷ್ಟಕ್ಕೂ ಆ ಲಕ್ಷ್ಮೀ ಯಾರು? ಹೀಗೆ ಸಸ್ಪೆನ್ಸ್‌ ಥ್ರಿಲ್ಲರ್‌ ಶೈಲಿಯಲ್ಲಿಯೇ ಟ್ರೇಲರ್‌ ನೋಡಿಸಿಕೊಂಡು ಹೋಗುತ್ತದೆ.

ವಿಜಯ್‌ ಸೇತುಪತಿ 50ನೇ ಚಿತ್ರಕ್ಕಾಗಿ,(50th film ‘Maharaja) ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಜತೆ ಕೈ ಜೋಡಿಸಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಜತೆಗೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್ ಮತ್ತು ನಟ್ಟಿ ನಟರಾಜ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದು, ದಿನೇಶ್ ಪುರುಷೋತ್ತಮನ್ ಅವರ ಛಾಯಾಗ್ರಹಣವಿದೆ. ಕನ್ನಡದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ಟ್ರೇಲರ್‌ನಲ್ಲಿರುವ ಸಂಗೀತವೇ ಭಯ ಹುಟ್ಟಿಸುವಂತಿದೆ. 

ಇದನ್ನೂ ಓದಿ: Air India Maharaja : ಏರ್‌ ಇಂಡಿಯಾ ರಿಬ್ರಾಂಡಿಂಗ್‌, ಮಹಾರಾಜ ನೇಪಥ್ಯಕ್ಕೆ?

ಮಹಾರಾಜ ಚಿತ್ರದಲ್ಲಿ ಮಮತಾ ಮೋಹನ್‌ದಾಸ್, ನಟರಾಜ್ , ಭಾರತಿರಾಜ, ಅಭಿರಾಮಿ, ಸಿಂಗಂಪುಲಿ ಮತ್ತು ಕಲ್ಕಿ ಕೂಡ ನಟಿಸಿದ್ದಾರೆ. ಪ್ಯಾಶನ್ ಸ್ಟುಡಿಯೋಸ್ ಮತ್ತು ದಿ ರೂಟ್ ಅಡಿಯಲ್ಲಿ ಸುಧನ್ ಸುಂದರಂ ಮತ್ತು ಜಗದೀಶ್ ಪಳನಿಸಾಮಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಮಹಾರಾಜ ಚಿತ್ರದ ಬಿಡುಗಡೆ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ.

ಈ ಹಿಂದೆ ನಟ ಈ ಸಿನಿಮಾ ಕುರಿತು ಮಾತನಾಡಿ ʻʻʻ50ನೇ ಸಿನಿಮಾವನ್ನು ನಿರೀಕ್ಷಿಸಿರಲಿಲ್ಲ. ಇದು ಮೈಲಿಗಲ್ಲಿನಂತಿದೆ. ನಾವು ಎಷ್ಟು ದೂರ ಬಂದಿದ್ದೇವೆ ಎಂಬುದದಕ್ಕೆ ಒಂದು ಭರವಸೆ ಇದು. ಒಳ್ಳೆಯ ಅನುಭವ ನೀಡಿದ ಎಲ್ಲಾ ನಿರ್ದೇಶಕರು ಮತ್ತು ಕಲಾವಿದರಿಗೆ ಧನ್ಯವಾದಗಳು” ಎಂದಿದ್ದರು.

“ನಾನ್ ಮಹಾನ್ ಅಲ್ಲಾ ಚಿತ್ರದ ಡಬ್ಬಿಂಗ್ ಮುಗಿದ ನಂತರ, ಅರುಲ್ದಾಸ್ ಅಣ್ಣನ್ ಮತ್ತು ನಾನು ಪರಸ್ಪರರ ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡೆವು. ಇದ್ದಕ್ಕಿದ್ದಂತೆ ಒಂದು ದಿನ ಎರಡು ಮಿಸ್ಡ್ ಕಾಲ್‌ಗಳಿದ್ದವು. ನಾವು ಮತ್ತೆ ಕರೆ ಮಾಡಿದಾಗ, ನಮ್ಮ ಸ್ನೇಹಿತ ಸೀನು ರಾಮಸಾಮಿ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ, ಯಾವುದೇ ಪಾತ್ರ ಕೊಟ್ಟರೂ ಸಿನಿಮಾ ಮಾಡು ಎಂದು ಹೇಳಿದ್ದರು. ಆಮೇಲೆ ಹೋಗಿ ಸೀನು ರಾಮಸಾಮಿ ಸರ್ ಅವರನ್ನು ನೋಡಿದೆ. ಆ ನಂತರ ನಡೆದಿದ್ದೆಲ್ಲ ಇತಿಹಾಸ, ಈಗ ಈ ಹಂತ ತಲುಪಿದ್ದೇನೆ. ತುಂಬಾ ಧನ್ಯವಾದಗಳು ಅರುಲ್ದಾಸ್. ಧನ್ಯವಾದಗಳು ಸೀನು ಸರ್. ಈ ಕ್ಷಣಕ್ಕೆ ಧನ್ಯವಾದಗಳುʼʼ ಎಂದು ಹೇಳಿಕೊಂಡಿದ್ದರು.

Continue Reading
Advertisement
Arvind Kejriwal
ದೇಶ10 mins ago

Arvind Kejriwal: ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ಇಂದು ಮತ್ತೆ ತಿಹಾರ್‌ ಜೈಲಿಗೆ

Deepika Padukone clicks selfies with fans dinner outing with family
ಬಾಲಿವುಡ್20 mins ago

Deepika Padukone: ಫ್ಯಾಮಿಲಿ ಜತೆ ಜಾಲಿ ಮಾಡುತ್ತಿರುವ ಪ್ರೆಗ್ನೆಂಟ್‌ ದೀಪಿಕಾ ಪಡುಕೋಣೆ

Rohit Sharma
ಕ್ರೀಡೆ29 mins ago

Rohit Sharma: ರೋಹಿತ್​ ಅಪ್ಪಿಕೊಳ್ಳಲು ಯತ್ನಿಸಿದ ಅಭಿಮಾನಿಯನ್ನು ಹೆಡೆಮುರಿ ಕಟ್ಟಿದ ನ್ಯೂಯಾರ್ಕ್ ಪೊಲೀಸ್; ವಿಡಿಯೊ ವೈರಲ್​

Prajwal Revanna Case
ಕರ್ನಾಟಕ43 mins ago

Hassan MP Prajwal Revanna case: ಮೊಂಡಾಟ ಬಿಡದ ಪ್ರಜ್ವಲ್‌; ಇಂದೇ ಸ್ಥಳ ಮಹಜರಿಗೆ SIT ಪ್ಲ್ಯಾನ್‌

Actor Suriya visits temple ahead of Suriya 44
ಕಾಲಿವುಡ್52 mins ago

Actor Suriya: ಹೊಸ ಸಿನಿಮಾ ಶೂಟಿಂಗ್‌ ಶುರು ಮಾಡಿದ ನಟ ಸೂರ್ಯ!

IND vs BAN
ಕ್ರೀಡೆ57 mins ago

IND vs BAN: ಪಾಂಡ್ಯ ಬಲಿಷ್ಠ ಹೊಡೆತಕ್ಕೆ ನೆತ್ತರು ಚೆಲ್ಲಿದ ಬಾಂಗ್ಲಾ ಬೌಲರ್; ವಿಡಿಯೊ ವೈರಲ್​

Assembly Election Results 2024:
ದೇಶ1 hour ago

Assembly Election Results 2024: ಇಂದು ಅರುಣಾಚಲ ಪ್ರದೇಶ & ಸಿಕ್ಕಿಂ ರಿಸಲ್ಟ್‌; 10 ಅಭ್ಯರ್ಥಿಗಳು ಅವಿರೋಧ ಆಯ್ಕೆ

Weather Updates
ಮಳೆ2 hours ago

Weather Updates:ಇಡೀ ರಾತ್ರಿ ಭಾರೀ ಮಳೆ; ಮುಂಗಾರು ಆರಂಭದಲ್ಲೇ ಬೆಂಗಳೂರು ಅಸ್ತವ್ಯಸ್ತ

cyber attack ನನ್ನ ದೇಶ ನನ್ನ ದನಿ
ಅಂಕಣ2 hours ago

ಸೈಬರ್‌ ಸೇಫ್ಟಿ ಅಂಕಣ: 2024ರ ಸೈಬರ್‌ ಸೆಕ್ಯುರಿಟಿ ಟ್ರೆಂಡ್‌ಗಳು

ನನ್ನ ದೇಶ ನನ್ನ ದನಿ baman das basu
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಬ್ರಿಟಿಷರು ಬರುವ ಮೊದಲು ರಸ್ತೆಗಳೇ ಇರಲಿಲ್ಲವಾದರೆ, ಕೃಷ್ಣದೇವರಾಯನ ಭಾರಿ ಸೈನ್ಯ ಆಕಾಶದಲ್ಲಿ ಹಾರಾಡುತ್ತಿತ್ತೇ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು17 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 weeks ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌