Samantha: ಸಮಂತಾ ಸ್ಟೆಪ್ಸ್‌ ಹಾಕಿದ 'ಊ ಅಂಟಾವ ಮಾವ' ಹಾಡಿನ ಕುರಿತು ಗಾಯಕಿ ಎಲ್.ಆರ್.ಈಶ್ವರಿ ಬೇಸರ - Vistara News

ಕಾಲಿವುಡ್

Samantha: ಸಮಂತಾ ಸ್ಟೆಪ್ಸ್‌ ಹಾಕಿದ ‘ಊ ಅಂಟಾವ ಮಾವ’ ಹಾಡಿನ ಕುರಿತು ಗಾಯಕಿ ಎಲ್.ಆರ್.ಈಶ್ವರಿ ಬೇಸರ

ಅಲ್ಲು ಅರ್ಜುನ್ ಮತ್ತು ಸಮಂತಾ ಸ್ಟೆಪ್‌ ಹಾಕಿರುವ (Samantha) ಪುಷ್ಪ ಚಿತ್ರದ ಹಾಡಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪುಷ್ಪ ಚಿತ್ರದ ‘ಊ ಅಂಟಾವ ಮಾವ’ ಹಾಡಿನ ಬಗ್ಗೆ ಸಂದರ್ಶನವೊಂದರಲ್ಲಿ ಬೇಸರ ಹೊರಹಾಕಿದ್ದಾರೆ.

VISTARANEWS.COM


on

LR Eswari Said About Samantha Ruth Prabhu's Oo Antava Song
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಮಿಳು, ತೆಲುಗು, ಮಲಯಾಳಂ, ಕನ್ನಡ, ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಹಲವಾರು ಹಾಡುಗಳನ್ನು ಹಾಡಿರುವ ಹಿರಿಯ ಹಿನ್ನೆಲೆ ಗಾಯಕಿ ಎಲ್.ಆರ್. ಈಶ್ವರಿ (LR Eswari) ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. 83ರ ಹರೆಯದ ಗಾಯಕಿ ಇತ್ತೀಚಿನ ದಿನಗಳಲ್ಲಿ ಚಿತ್ರಗಳಲ್ಲಿನ ಐಟಂ ಹಾಡುಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ವಿಭಿನ್ನ ಧ್ವನಿ ಮೂಲಕ ದಕ್ಷಿಣ ಭಾರತದ ಸಿನಿ ಪ್ರೇಮಿಗಳ ಮನಸ್ಸಿನಲ್ಲಿದ್ದಾರೆ. ಅದರಲ್ಲೂ ‘ಜೋಕೆ ನಾನು ಬಳ್ಳಿಯ ಮಿಂಚು’ ಎಂದು ಹಾಡಿರುವ ಕನ್ನಡ ಹಾಡು ತುಂಬಾನೇ ಫೇಮಸ್ ಅಗಿತ್ತು. ಈಗ ಅಲ್ಲು ಅರ್ಜುನ್, ಮತ್ತು ಸಮಂತಾ ಸ್ಟೆಪ್‌ ಹಾಕಿರುವ (Samantha) ಪುಷ್ಪ ಚಿತ್ರದ ಹಾಡಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪುಷ್ಪ ಚಿತ್ರದ ‘ಊ ಅಂಟಾವ ಮಾವ’ ಹಾಡಿನ ಬಗ್ಗೆ ಸಂದರ್ಶನವೊಂದರಲ್ಲಿ ಬೇಸರ ಹೊರಹಾಕಿದ್ದಾರೆ.

ಎಲ್.ಆರ್.ಈಶ್ವರಿ ಮಾತನಾಡಿ ʻʻಈಗ ಬರುತ್ತಿರುವ ಹಾಡುಗಳು ನನಗೆ ಇಷ್ಟವಾಗುತ್ತಿಲ್ಲ. ಇತ್ತೀಚೆಗೆ, ನಾನು ‘ಊ ಅಂಟಾವ ಮಾವ’ ಹಾಡನ್ನು ಕೇಳಿದೆ. ಅದೆಲ್ಲ ಹಾಡೇ? ಆರಂಭದಿಂದ ಕೊನೆಯವರೆಗೂ ಒಂದೇ ಪಿಚ್‌ನಲ್ಲಿತ್ತು. ಗಾಯಕರಿಗೆ ಏನು ಗೊತ್ತು? ಹಾಡುಗಾರರಿಗೆ ತಂಡದವರು ಸೂಚಿಸಿದಂತೆ ಹಾಡುತ್ತಾರೆ. ಗಾಯಕರ ಮೇಲೆ ನಿಗಾ ಇಡೋದು ಸಂಗೀತ ನಿರ್ದೇಶಕರ ಜವಾಬ್ದಾರಿ ಆಗಿರುತ್ತದೆ. ಅದೇ ಹಾಡನ್ನು ನನಗೆ ಹಾಡಲು ಬಿಟ್ಟಿದ್ದರೆ ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗುತ್ತಿದ್ದೆ ಎಂದರು.

ಇದನ್ನೂ ಓದಿ: Samantha: ʻಖುಷಿʼ ಸಿನಿಮಾ ಸೆಟ್‌ನಲ್ಲಿ ಸಮಂತಾ: ಕೇಕ್‌ ಕತ್ತರಿಸಿ ಸಂಭ್ರಮಿಸಿದ ಚಿತ್ರತಂಡ

ಮಾತು ಮುಂದುವರಿಸಿ ʻʻನನಗೆ ಹಾಡು ಇಷ್ಟವಾಗಲಿಲ್ಲ. ಹೊಸದಾಗಿ ಬರುವ ಮಕ್ಕಳಿಗೆ (ಗಾಯಕರು) ಏನು ಗೊತ್ತು? ಸಂಗೀತ ನಿರ್ದೇಶಕರು ಗಮನ ಹರಿಸಿಬೇಕು. ನಮ್ಮ ಕಾಲದ ಆ ಹಾಡುಗಳನ್ನು ಇಂದಿಗೂ ಎಲ್ಲರಿಗೂ ಮನರಂಜನೆಯನ್ನು ನೀಡುತ್ತದೆ. ನಮ್ಮ ಹಾಡುಗಳು ಕ್ಲಾಸಿಕ್ ಆಗಿ ಉಳಿದಿರುವುದಕ್ಕೆ ಕಾರಣವಿದೆ ಮತ್ತು ಇಂದಿಗೂ ಗಮನಾರ್ಹವಾಗಿದೆ. ಕಥೆ ಮತ್ತು ವೀಕ್ಷಕರನ್ನು ಸೆಳೆಯುವ ಪ್ರತಿಭೆ ಎಲ್ಲಿಗೆ ಬಂದು ನಿಂತಿದೆ’ ಎಂದು ಈಶ್ವರಿ ಹೇಳಿದ್ದಾರೆ.

ಅಲ್ಲು ಅರ್ಜುನ್‌ ಅಭಿನಯದ ಪುಷ್ಪ ಸಿನಿಮಾದ ‘ಊ ಅಂಟಾವ ಮಾವ’ ಹಾಡು 2022ರಲ್ಲಿ ಅತ್ಯಂತ ಜನಪ್ರಿಯ ಟ್ರ್ಯಾಕ್‌ಗಳಲ್ಲಿ ಒಂದಾಗಿದೆ. ಈ ಹಾಡನ್ನು ಇಂದ್ರಾವತಿ ಚೌಹಾಣ್ ಹಾಡಿದ್ದಾರೆ ಮತ್ತು ಸಾಹಿತ್ಯವನ್ನು ಚಂದ್ರಬೋಸ್ ಬರೆದಿದ್ದಾರೆ. ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Actress Nayanthara: ನಯನತಾರಾ ಅವಳಿ ಮಕ್ಕಳ ಭರ್ಜರಿ ಆಟೋ ಸವಾರಿ!

Actress Nayanthara: ಅವಕಾಶ ಸಿಕ್ಕಾಗಲೆಲ್ಲಾ ಮಕ್ಕಳನ್ನು ಆಟೋ ರೈಡ್‌ಗೆ ಕರೆದೊಯ್ಯುತ್ತಲೇ ಇರುತ್ತಾರೆ ನಯನತಾರಾ. ದಂಪತಿ ಇತ್ತೀಚೆಗೆ ಚೆನ್ನೈನ ತಿರುಚೆಂದೂರ್ ಮತ್ತು ಕನ್ಯಾಕುಮಾರಿಗೆ ಪ್ರವಾಸಕ್ಕೆ ತೆರಳಿದ್ದರು. ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

VISTARANEWS.COM


on

Actress Nayanthara twin sons on auto ride
Koo

ಬೆಂಗಳೂರು: ನಯನತಾರಾ (Actress Nayanthara) ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ತಮ್ಮ ಅವಳಿ ಮಕ್ಕಳಾದ ಉಯಿರ್ ಮತ್ತು ಉಳಗ್ ಅವರನ್ನು ಚೆನ್ನೈನಲ್ಲಿ ಆಟೋ ಸವಾರಿ ಮಾಡಿಸಿದ್ದಾರೆ. ಮೇ 20ರಂದು ‘ನಯನತಾರಾ’ ವೀಡಿಯೊವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲಾ ಮಕ್ಕಳನ್ನು ಆಟೋ ರೈಡ್‌ಗೆ ಕರೆದೊಯ್ಯುತ್ತಲೇ ಇರುತ್ತಾರೆ. ದಂಪತಿ ಇತ್ತೀಚೆಗೆ ಚೆನ್ನೈನ ತಿರುಚೆಂದೂರ್ ಮತ್ತು ಕನ್ಯಾಕುಮಾರಿಗೆ ಪ್ರವಾಸಕ್ಕೆ ತೆರಳಿದ್ದರು.

ಕೆಲವು ದಿನಗಳ ಹಿಂದೆ ಚೆನ್ನೈನಲ್ಲಿ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದ ನಟಿ ನಯನತಾರಾ ಈ ಅವಳಿ ಮಕ್ಕಳ ಪೂರ್ಣ ಹೆಸರನ್ನು ಬಹಿರಂಗಪಡಿಸಿದ್ದರು. ಈವೆಂಟ್‌ನಲ್ಲಿ ʻʻನನ್ನ ಮೊದಲ ಮಗ ಉಯಿರ್ ರುದ್ರೋನಿಲ್ ಎನ್ ಶಿವನ್ ಮತ್ತು ನನ್ನ ಎರಡನೇ ಮಗ ಉಳಗ್ ದೈವಿಗ್ ಎನ್ ಶಿವನ್ʼʼ ಎಂದು ಹೇಳಿಕೊಂಡಿದ್ದರು. ನಯನತಾರಾ ಮಕ್ಕಳ ಆರೈಕೆಗಾಗಿ ನಟನೆಯಿಂದ ದೂರ ಸರಿಯಲಿದ್ದಾರೆ ಎನ್ನುವ ಮಾತುಗಳು ಕೂಡ ಹರಿದಾಡಿದ್ದವು. ನಟನೆ ಹಾಗೂ ಮಕ್ಕಳ ಜವಾಬ್ದಾರಿ ಎರಡನ್ನು ನಿಭಾಯಿಸುವುದು ಕಷ್ಟವಾದ ಹಿನ್ನೆಲೆಯಲ್ಲಿ ಮಕ್ಕಳ ಜೊತೆ ಸಮಯ ಕಳೆಯಲು ಕೆಲ ಕಾಲ ನಟಿ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಮಾತು ಕಾಲಿವುಡ್ ಅಂಗಳದಲ್ಲಿ ಕೇಳಿ ಹರಿದಾಡಿತ್ತು. ಆದರೆ ನಟಿ ʻಜವಾನ್‌ʼ ಸಿನಿಮಾ ಮೂಲಕ ಮತ್ತೆ ಕಮ್‌ ಬ್ಯಾಕ್‌ ಆದರು.

ಇದನ್ನೂ ಓದಿ: Actress Nayanthara: ನಿವಿನ್ ಪೌಲ್‌-ನಯನತಾರಾ ಹೊಸ ಸಿನಿಮಾ ಅನೌನ್ಸ್‌!

ಇತ್ತೀಚೆಗೆ ಥಿಯೇಟರ್‌ಗಳಲ್ಲಿ ತೆರೆಕಂಡ ಲೇಡಿ ಸೂಪರ್‌ ಸ್ಟಾರ್‌ ನಯನತಾರಾ (Actress Nayanthara) ಅಭಿನಯದ ʼಅನ್ನಪೂರ್ಣಿʼ (Annapoorani) ಚಿತ್ರ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗಿತ್ತು. ಸಿನಿಮಾ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಕೇಸ್ ಕೂಡ ದಾಖಲಿಸಿದ್ದರು. ಇದಾದ ಬಳಿಕ ನೆಟ್​ಫ್ಲಿಕ್ಸ್ ಎಚ್ಚೆತ್ತುಕೊಂಡಿದ್ದು, ಸಿನಿಮಾವನ್ನು ಡಿಲೀಟ್ ಮಾಡಿತ್ತು. ಇನ್‌ಸ್ಟಾ ಮೂಲಕ ನಟಿ ಕ್ಷಮೆ ಕೂಡ ಕೇಳಿದ್ದರು.

ಏಪ್ರಿಲ್ 14ರಂದು ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ನಯನತಾರಾ. ಸಂದೀಪ್ ಕುಮಾರ್ ಮತ್ತು ಜಾರ್ಜ್ ಫಿಲಿಪ್ ಜೋಡಿ ಈ ಸಿನಿಮಾ ನಿರ್ದೇಶಿಸಲಿದ್ದಾರೆ. ನಯನತಾರಾ ಮತ್ತು ನಿವಿನ್ ಪೌಲಿ ಅವರು ಚಿತ್ರದಲ್ಲಿ ನಟಿಸಿರುವುದಲ್ಲದೇ ತಮ್ಮ ನಿರ್ಮಾಣ ಸಂಸ್ಥೆಗಳ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.ಈ ಸಿನಿಮಾ ಮೊದಲು ನಯನತಾರಾ ಮತ್ತು ನಿವಿನ್ ಪೌಲ್‌ 2019 ರಲ್ಲಿ ‘ಲವ್ ಆ್ಯಕ್ಷನ್ ಡ್ರಾಮಾ’ ನಲ್ಲಿ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. ಈ ಸಿನಿಮಾಗೆ ಧ್ಯಾನ್ ಶ್ರೀನಿವಾಸನ್ ನಿರ್ದೇಶನವಿತ್ತು. ಇದೀಗ ಮತ್ತೆ ತೆರೆ ಮೇಲೆ ಮಿಂಚಲು ಜೋಡಿ ರೆಡಿಯಾಗಿದೆ.

ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Continue Reading

ಕಾಲಿವುಡ್

Actor Rajinikanth: ಮೊಮ್ಮಗನ ಕ್ರಿಕೆಟ್‌ ಥೀಮ್‌ ಬರ್ತ್‌ಡೇ ಪಾರ್ಟಿಯಲ್ಲಿ ಭಾಗಿಯಾದ ತಲೈವಾ!

Actor Rajinikanth: ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ.

VISTARANEWS.COM


on

Actor Rajinikanth attends grandson Ved cricket themed birthday party
Koo

ಚೆನ್ನೈ: ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಮೊಮ್ಮಗ ವೇದ್ ಕೃಷ್ಣ ಹುಟ್ಟುಹಬ್ಬದ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ (Actor Rajinikanth) ಮತ್ತು ಅವರ ಪತ್ನಿ ಲತಾ ಪಾಲ್ಗೊಂಡಿದ್ದರು. ಮೇ 6ರಂದು ವೇದ್‌ ಒಂಬತ್ತನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು. ಕ್ರಿಕೆಟ್‌ ಥೀಮ್‌ನಲ್ಲಿ ಪಾರ್ಟಿಯನ್ನು ಆಯೋಜಿಸಲಾಗಿತ್ತು. ರಜನಿಕಾಂತ್ ಅವರು ಕೇಕ್ ಅನ್ನು ಕತ್ತರಿಸುತ್ತಿರುವಾಗ ವೇದ್ ಅವರ ಹಿಂದೆ ನಿಂತಿರುವುದನ್ನು ನಾವು ನೋಡಬಹುದು. ಇದೀಗ ಈ ಪಾರ್ಟಿಯ ವಿಡಿಯೊಗಳು ವೈರಲ್‌ ಆಗುತ್ತಿವೆ.

ಮೇ 6ರಂದು ತೆಗೆದ ವಿಡಿಯೊ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿವೆ. ಇದು ಸೌಂದರ್ಯ ರಜನಿಕಾಂತ್ ಅವರ ಮಗ ವೇದ್ ಕೃಷ್ಣ ಅವರ ಹುಟ್ಟುಹಬ್ಬದ ಪಾರ್ಟಿ ವಿಡಿಯೊಗಳು. ವೇದ್ ಟೀಂ ಇಂಡಿಯಾ ಜೆರ್ಸಿ ಧರಿಸಿದ್ದರೆ, ಸೌಂದರ್ಯ ಚೆನ್ನೈ ಸೂಪರ್ ಕಿಂಗ್ಸ್ ಜೆರ್ಸಿ ಧರಿಸಿ ಕಾಣಿಸಿಕೊಂಡಿದ್ದರು. ಎರಡನೇ ಮಗ ವೀರ್‌ನನ್ನು ಎತ್ಡುತಿಕೊಂಡಿದ್ದಾರೆ. ಸೌಂದರ್ಯಾ ಅಧಿಕೃತವಾಗಿ ವೀಡಿಯೊವನ್ನು ಹಂಚಿಕೊಂಡಿಲ್ಲವಾದರೂ, ಕೆಲವು ಫ್ಯಾನ್‌ ಪೇಜ್‌ಗಳು ಪೋಸ್ಟ್‌ ಮಾಡಿವೆ. ವೇದ್ ಕೃಷ್ಣ ಸೌಂದರ್ಯ ರಜನಿಕಾಂತ್ ಮತ್ತು ಅವರ ಮಾಜಿ ಪತಿ ಅಶ್ವಿನ್ ರಾಮ್‌ಕುಮಾರ್ ಅವರ ಮಗ. 2017 ರಲ್ಲಿ ದಂಪತಿಗಳು ವಿಚ್ಛೇದನ ಪಡೆದರು.

ಇದನ್ನೂ ಓದಿ: Actor Rajinikanth: ಲೋಕೇಶ್ ಕನಕರಾಜ್-ರಜನಿ ಸಿನಿಮಾಗೆ ಟಾಲಿವುಡ್‌ ಖ್ಯಾತ ನಟ ಭರ್ಜರಿ ಎಂಟ್ರಿ?

ಅಶ್ವಿನ್‌ ರಾಮ್‌ಕುಮಾರ್‌ ಜತೆ ಸೌಂದರ್ಯ 2010ರಲ್ಲಿ ಸಪ್ತಪದಿ ತುಳಿದಿದ್ದರು. ಈ ಜೋಡಿಗೆ 2015ರಲ್ಲಿ ಮೊದಲ ಮಗು ಜನಿಸಿತ್ತು. ಆ ಮಗುವೇ ವೇದ್‌. 2017ರಲ್ಲಿ ಸೌಂದರ್ಯ ಮತ್ತು ಅಶ್ವಿನ್‌ ವಿಚ್ಛೇದನ ಪಡೆದುಕೊಂಡರು. 2019ರಲ್ಲಿ ವಿಶಾಗನ್‌​ ವನಂಗಮುಡಿ ಜತೆ ಸೌಂದರ್ಯ ಎರಡನೇ ಮದುವೆ ಮಾಡಿಕೊಂಡರು.

ರಜನಿಕಾಂತ್ ಕೊನೆಯ ಬಾರಿಗೆ ಮಗಳು ಐಶ್ವರ್ಯಾ ನಿರ್ದೇಶನದ ʻಲಾಲ್ ಸಲಾಂʼ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ನಿರ್ದೇಶಕ ಟಿಜೆ ಜ್ಞಾನವೇಲ್ ಅವರೊಂದಿಗೆ ʻವೆಟ್ಟೈಯಾನ್ʼ ಚಿತ್ರೀಕರಣದಲ್ಲಿದ್ದಾರೆ. ಚಿತ್ರದಲ್ಲಿ ಅಮಿತಾಭ್‌ ಬಚ್ಚನ್, ಫಹದ್ ಫಾಸಿಲ್ ಮತ್ತು ರಾಣಾ ದಗ್ಗುಬಾಟಿ ಕೂಡ ನಟಿಸಿದ್ದಾರೆ.. ʻತಲೈವರ್ 171ʼ ಸಿನಿಮಾದ ಫಸ್ಟ್ ಲುಕ್‌ ಔಟ್‌ ಆಗಿದೆ. ಇನ್ನೂ ಹೆಸರಿಡದ ʻತಲೈವರ್ 171ʼ (Thalaivar 171) ಹೊಚ್ಚ ಹೊಸ ಪೋಸ್ಟರ್‌ನಲ್ಲಿ, ರಜನಿಕಾಂತ್‌ ಸ್ಟೈಲಿಶ್ ಆಗಿ ಕಂಡಿದ್ದಾರೆ. ಚಿತ್ರದ ಶೀರ್ಷಿಕೆಯನ್ನು ಏಪ್ರಿಲ್ 22ರಂದು ಬಹಿರಂಗಪಡಿಸಲಾಗುವುದು ಎಂದು ಲೋಕೇಶ್ ಕನಕರಾಜ್ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Continue Reading

ಕಾಲಿವುಡ್

Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

Kamal Haasan: ಇಂಡಿಯನ್ʼ ಸೀಕ್ವೆಲ್‌ಗೆ ಕಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್.ಶಂಕರ್ ಆ್ಯಕ್ಷನ್‌ ಕಟ್‌ ಹೇಳಿರುವುದು ಇಷ್ಟೆಲ್ಲ ನಿರೀಕ್ಷೆ ಹೆಚ್ಚಲು ಕಾರಣ. ಜತೆಗೆ ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ. ಹೀಗಾಗಿಯೇ ಚಿತ್ರವನ್ನು ಥಿಯೇಟರ್‌ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

VISTARANEWS.COM


on

Kamal Haasan Indian 2 to release on July 12
Koo

ಬೆಂಗಳೂರು: ಕಮಲ್ ಹಾಸನ್ (Kamal Haasan) ಮತ್ತು ನಿರ್ದೇಶಕ ಶಂಕರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ‘ಇಂಡಿಯನ್ 2’ ಜುಲೈ 12 ರಂದು (Indian 2 to release) ಮೂರು ಭಾಷೆಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮೇ 19ರಂದು ಚಿತ್ರತಂಡ ಬಿಡುಗಡೆ ದಿನಾಂಕವನ್ನು ಘೋಷಿಸಿದೆ. ಇತ್ತೀಚಿನ ಪೋಸ್ಟರ್‌ಗಳ ಪ್ರಕಾರ, ಅನಿರುದ್ಧ್ ರವಿಚಂದರ್ ಸಂಯೋಜಿಸಿದ ಮೊದಲ ಸಿಂಗಲ್ ಮೇ 22 ರಂದು ಬಿಡುಗಡೆಯಾಗಲಿದೆ.

ಇಂಡಿಯನ್ʼ ಸೀಕ್ವೆಲ್‌ಗೆ ಕಾಲಿವುಡ್‌ನ ಖ್ಯಾತ ನಿರ್ದೇಶಕ ಎಸ್.ಶಂಕರ್ ಆ್ಯಕ್ಷನ್‌ ಕಟ್‌ ಹೇಳಿರುವುದು ಇಷ್ಟೆಲ್ಲ ನಿರೀಕ್ಷೆ ಹೆಚ್ಚಲು ಕಾರಣ. ಜತೆಗೆ ಈ ಚಿತ್ರವು 1996ರ ‘ಇಂಡಿಯನ್’ ಚಿತ್ರದ ಮುಂದುವರಿದ ಭಾಗವಾಗಿರುವುದು ಕೂಡ ದೇಶದ ಸಿನಿ ಪ್ರಿಯರ ಗಮನ ಸೆಳೆದಿದೆ. ಹೀಗಾಗಿಯೇ ಚಿತ್ರವನ್ನು ಥಿಯೇಟರ್‌ಗಳಲ್ಲಿ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಕಾಜಲ್ ಅಗರ್ವಾಲ್, ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೋವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ. ವಿಶೇಷ ಎಂದರೆ ಕಮಲ್ ಹಾಸನ್ ದ್ವಿಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Kamal Haasan: ಇಂಡಿಯಾ ಒಕ್ಕೂಟಕ್ಕೆ ಕಮಲ್‌ ಹಾಸನ್‌ ಸೇರ್ಪಡೆ? ಅವರು ಹೇಳಿದ್ದಿಷ್ಟು

ಇದನ್ನೂ ಓದಿ: Kamal Haasan: ಇಂಡಿಯಾ ಒಕ್ಕೂಟಕ್ಕೆ ಕಮಲ್‌ ಹಾಸನ್‌ ಸೇರ್ಪಡೆ? ಅವರು ಹೇಳಿದ್ದಿಷ್ಟು

ಸುಬಾಸ್ಕರನ್ ಅವರ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದೆ. ಅನಿರುದ್ಧ್ ರವಿಚಂದರ್ ಈ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರ ಛಾಯಾಗ್ರಹಣ ಇದೆ. ಎ.ಶ್ರೀಕರ್ ಪ್ರಸಾದ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ʼಇಂಡಿಯನ್‌ʼ

1996ರಲ್ಲಿ ತೆರೆಕಂಡ ಎಸ್‌.ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಹೊಂದಿದ್ದ ಈ ಸಿನಿಮಾದಲ್ಲಿಯೂ ಕಮಲ್‌ ಹಾಸನ್‌ ದ್ವಿಪಾತ್ರ ನಿಭಾಯಿಸಿದ್ದರು.

ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

ಈ ಮಧ್ಯೆ ಕಮಲ್‌ ಹಾಸನ್‌ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ತೆಲುಗು ಚಿತ್ರ ʼಕಲ್ಕಿ 2898 ಎಡಿʼಯಲ್ಲಿ ಪ್ರಮುಖ ಪಾತ್ರವೊಂದನ್ನು ನಿಭಾಯಿಸಿದ್ದಾರೆ. ಟಾಲಿವುಡ್ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಕೆರಳಿಸಿದೆ. ಭೂತ ಕಾಲ ಮತ್ತು ಭವಿಷ್ಯದ ಕಥೆ ಹೇಳಲಿರುವ ʼಕಲ್ಕಿ 2898 ಎಡಿʼ ಚಿತ್ರಕ್ಕೆ ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ ಕೂಡ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೋಸ್ಟರ್‌ಗಳ ಪ್ರಕಾರ ಚಿತ್ರವು ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಬಿಡುಗಡೆಯಾಗಲಿದೆ.

Continue Reading

ಕಾಲಿವುಡ್

Vijay Sethupathi: ವಿಜಯ್ ಸೇತುಪತಿ- ರುಕ್ಮಿಣಿ ವಸಂತ್ ನಟನೆಯ ತಮಿಳು ಸಿನಿಮಾ ಟೀಸರ್‌ ಔಟ್‌!  

Vijay Sethupathi ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

VISTARANEWS.COM


on

Vijay Sethupathi Starrer Tamil Movie Teaser Released
Koo

ಬೆಂಗಳೂರು: ವಿಜಯ್ ಸೇತುಪತಿ ನಟನೆಯ ‘ಏಸ್’ (Ace) ಫಸ್ಟ್ ಲುಕ್ ಹಾಗೂ ಟೈಟಲ್ ಟೀಸರ್ ರಿಲೀಸ್ ಆಗಿದೆ. ಮಕ್ಕಳ್ ಸೆಲ್ವನ್ ವಿಜಯ್ ಸೇತುಪತಿ ನಟನೆಯ ‘ಏಸ್’ ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಜೂಜು, ಬಂದೂಕು, ಸ್ಫೋಟ, ದರೋಡೆ ಮತ್ತು ಬೈಕ್ ಚೇಸಿಂಗ್ ಅಂಶಗಳನ್ನು ಒಳಗೊಂಡಿರುವ ಅನಿಮೇಟೆಡ್ ಸ್ವರೂಪದಲ್ಲಿ ಟೀಸರ್ ಅನಾವರಣಗೊಳ್ಳಿಸಲಾಗಿದೆ. ವಿಜಯ್ ಸೇತುಪತಿ ರಗಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದು, ಅವರಿಗೆ ಜೋಡಿಯಾಗಿ ಕನ್ನಡತಿ ರುಕ್ಮಿಣಿ ವಸಂತ್ ಸಾಥ್ ಕೊಟ್ಟಿದ್ದಾರೆ.

ಏಸ್ ಸಿನಿಮಾದಲ್ಲಿ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಪಿ.ಎಸ್.ಅವಿನಾಶ್, ದಿವ್ಯಾ ಪಿಳ್ಳೈ, ಬಬ್ಲು, ರಾಜಕುಮಾರ್ ಮತ್ತು ಅನೇಕ ಪ್ರಮುಖ ನಟರು ತಾರಾಬಳಗದಲ್ಲಿದ್ದಾರೆ. ಆರ್ಮುಗ ಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಕರಣ್ ಬಹದ್ದೂರ್ ರಾವತ್ ಛಾಯಾಗ್ರಹಣ ಮತ್ತು ಜಸ್ಟಿನ್ ಪ್ರಭಾಕರನ್ ಸಂಗೀತ ಸಂಯೋಜಿಸಿದ್ದು, ಗೋವಿಂದರಾಜ್ ಸಂಕಲನ ಒದಗಿಸಿದ್ದಾರೆ.

ಇದನ್ನೂ ಓದಿ: SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

ಕ್ರೈಮ್ ಥ್ರಿಲ್ಲರ್ ಕಾಮಿಡಿ ಕಥಾಹಂದರ ಹೊಂದಿರುವ ಏಸ್ ಸಿನಿಮಾವನ್ನು, 7Cs ಎಂಟರ್‌ಟೈನ್‌ಮೆಂಟ್‌ ಬ್ಯಾನರ್ ನಡಿ ನಿರ್ಮಾಣ ಮಾಡಲಾಗಿದೆ. ಭಾರೀ ನಿರೀಕ್ಷೆ ಮೂಡಿಸಿರುವ ಚಿತ್ರ ಈ ವರ್ಷವೇ ರಿಲೀಸ್ ಆಗಲಿದೆ.

ಏಸ್’ ಸಿನಿಮಾದಲ್ಲಿ ತಮಿಳಿನ ಜನಪ್ರಿಯ ಹಾಸ್ಯ ನಟ ಯೋಗಿ ಬಾಬು ಪ್ರಮುಖ ಪಾತ್ರದಲ್ಲಿ ನಟಿಸಿದ್ದು ಅವರ ಜೊತೆಗೆ ದಿವ್ಯಾ ಪಿಳ್ಳೈ, ಪಿಎಸ್ ಅವಿನಾಶ್, ರಾಜಕುಮಾರ್, ಬಬ್ಲು ಮತ್ತು ಇನ್ನೂ ಕೆಲವು ಪ್ರಮುಖ ನಟರು ಸಿನಿಮಾದ ಭಾಗವಾಗಿ ಅಭಿನಯ ಮಾಡಿದ್ದಾರೆ.

ಸಿದ್ದರಾಮಯ್ಯ ಜೀವನಾಧರಿತ ಸಿನಿಮಾ

ಕನ್ನಡ ಚಿತ್ರರಂಗದಲ್ಲಿ ಈಗೀಗ ಹಲವಾರು ಬಯೋಪಿಕ್‌ ಸಿನಿಮಾಗಳು ಆಗುತ್ತಿವೆ. ಇದೀಗ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಜೀವನಾಧರಿತ (Biopic) ಸಿನಿಮಾ ಆಗುತ್ತಿದೆ. ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೀವನ ಚರಿತ್ರೆ ತೆರೆಗೆ ಬರುತ್ತಿದೆ. ಇನ್ನು ವಿಶೇಷ ಅಂದರೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರವನ್ನು ತಮಿಳು ನಟ ವಿಜಯ್ ಸೇತುಪತಿ (Vijay Sethupathi) ನಿಭಾಯಿಸುತ್ತಿದ್ದಾರೆ ಎಂದು ವರದಿಯಾಗಿದೆ. ಈಗಾಗಲೇ ಸಿನಿಮಾಗಾಗಿ ನಟನನ್ನು ಅಪ್ರೋಚ್‌ ಮಾಡಲಾಗಿದೆ ಎಂತಲೂ ವರದಿಯಾಗಿದೆ.

ಸಿದ್ದರಾಮಯ್ಯ ಅವರು ಬಯೋಪಿಕ್‌ ಸಿನಿಮಾಗೆ ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದೆ. ಮಾ.30ರಂದು ರಾಮನವಮಿಯಂದು ಸಿದ್ದರಾಮಯ್ಯ ಮನೆಯ ಮುಂದೆಯೇ ಚಿತ್ರದ ಪೋಸ್ಟರ್ ಲಾಂಚ್ ಮಾಡಲಾಗಿದೆ. ಇದೀಗ ಈ ಪಾತ್ರಕ್ಕೆ ವಿಜಯ್‌ ಸೇತುಪತಿ ಅವರು ವಿಜಯ್ ಕೂಡ ಈ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂತಲೂ ವೈರಲ್‌ ಆಗಿದೆ.

Continue Reading
Advertisement
Self Harming
ಕರ್ನಾಟಕ15 mins ago

Self Harming: ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

HD Kumaraswamy attack on DK Shivakumar and he gives reason for Devaraje Gowda fears for his life in jail
ರಾಜಕೀಯ38 mins ago

HD Kumaraswamy: ದೇವರಾಜೇಗೌಡರಿಗೆ ಜೈಲಲ್ಲಿ ಜೀವ ಭಯ ಇದೆ; ಕಾರಣ ಬಿಚ್ಚಿಟ್ಟ ಎಚ್‌ಡಿ ಕುಮಾರಸ್ವಾಮಿ

Wedding Fashion
ಫ್ಯಾಷನ್1 hour ago

Wedding Fashion: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾಗಿವೆ ಈ ಮಿರಮಿರ ಮಿನುಗುವ ಲೆಹೆಂಗಾಗಳು!

Sambit Patra
ದೇಶ1 hour ago

‘ಪುರಿ ಜಗನ್ನಾಥನೇ ಮೋದಿಯ ಭಕ್ತ’ ಹೇಳಿಕೆ; ಪ್ರಾಯಶ್ಚಿತ್ತವಾಗಿ ಸಂಬಿತ್‌ ಪಾತ್ರಾ 3 ದಿನ ಉಪವಾಸ!

2024 Bajaj Pulsar F250
ಪ್ರಮುಖ ಸುದ್ದಿ1 hour ago

2024 Bajaj Pulsar F250 : ಬೆಲೆ ಏರಿಕೆ ಮಾಡದೇ ಹೊಸ ಪಲ್ಸರ್​ 250 ರಸ್ತೆಗಿಳಿಸಲಿದೆ ಬಜಾಜ್​​

Karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Cauvery Dispute
ಕರ್ನಾಟಕ1 hour ago

Cauvery Dispute: ತಮಿಳುನಾಡಿಗೆ 2.5 ಟಿಎಂಸಿ ಕಾವೇರಿ ನೀರು ಹರಿಸಲು CWMA ಸೂಚನೆ

Brand Bangalore and BJP Slams DK Shivakumar and Congress Government
ರಾಜಕೀಯ1 hour ago

Brand Bangalore: ಬಯಲಾಯ್ತು ಮುಖವಾಡ, ಬೀದಿಗೆ ಬಂತು ಬಂಡವಾಳ; ಬ್ರ್ಯಾಂಡ್‌ ಬೆಂಗಳೂರು ಬಗ್ಗೆ ಕುಟುಕಿದ ಬಿಜೆಪಿ

Eye Care Tips
ಆರೋಗ್ಯ2 hours ago

Eye Care Tips: ಕಣ್ಣಿನ ಸುಸ್ತಿಗೆ ನೀವು ಇಷ್ಟಾದರೂ ಮಾಡಿ, ಕಣ್ಣಿಗೆ ಅಗತ್ಯ ವಿಶ್ರಾಂತಿ ನೀಡಿ!

Turbulence
ಪ್ರಮುಖ ಸುದ್ದಿ2 hours ago

Turbulence: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ; ಒಬ್ಬ ಪ್ರಯಾಣಿಕ ಸಾವು, 30 ಮಂದಿಗೆ ಗಾಯ, ಇಲ್ಲಿದೆ ಭೀಕರ ವಿಡಿಯೊ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌