Lucky Man Movie | ಇಂದು ರಾಜ್ಯಾದ್ಯಂತ ಲಕ್ಕಿಮ್ಯಾನ್ ರಿಲೀಸ್ : ಥಿಯೇಟರ್ ಅಂಗಳದಲ್ಲಿ ಸಂಭ್ರಮಿಸಿದ ಅಪ್ಪು ಫ್ಯಾನ್ಸ್! - Vistara News

ಸಿನಿಮಾ

Lucky Man Movie | ಇಂದು ರಾಜ್ಯಾದ್ಯಂತ ಲಕ್ಕಿಮ್ಯಾನ್ ರಿಲೀಸ್ : ಥಿಯೇಟರ್ ಅಂಗಳದಲ್ಲಿ ಸಂಭ್ರಮಿಸಿದ ಅಪ್ಪು ಫ್ಯಾನ್ಸ್!

ಪುನೀತ್ ರಾಜಕುಮಾರ್‌ ಹಾಗೂ ಡಾರ್ಲಿಂಗ್‌ ಕೃಷ್ಣಾ ಅಭಿನಯದ ಲಕ್ಕಿಮ್ಯಾನ್‌ ಚಿತ್ರ (Lucky Man Movie) ರಾಜ್ಯಾದ್ಯಂತ ತೆರೆ ಕಂಡಿದೆ. ಥಿಯೇಟರ್ ಅಂಗಳದಲ್ಲಿ ಅಪ್ಪು ಅಭಿಮಾನಿಗಳ ಹಬ್ಬ ರಂಗೇರಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕನ್ನಡ ಚಿತ್ರರಂಗಕ್ಕೆ ಲಕ್‌ನಂತೆಯೇ (Lucky Man Movie) ಇದ್ದ ಪುನೀತ್ ರಾಜಕುಮಾರ್‌ ನಟನೆಯ ಲಕ್ಕಿ ಮ್ಯಾನ್‌ ಚಿತ್ರ ಶುಕ್ರವಾರ (ಸೆ.9) ರಾಜ್ಯಾದ್ಯಂತ ಬಿಡುಗಡೆಗೊಂಡಿದೆ. ನಟ ಪುನೀತ್‌ ರಾಜ್‌ಕುಮಾರ್‌ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಥಿಯೇಟರ್ ಅಂಗಳದಲ್ಲಿ ಅಪ್ಪು ಅಭಿಮಾನಿಗಳ ಹಬ್ಬ ರಂಗೇರಿದೆ.

300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ‘ಲಕ್ಕಿಮ್ಯಾನ್’ ಬಿಡುಗಡೆಗೊಂಡಿದ್ದು, 40 ನಿಮಿಷಕ್ಕೂ ಹೆಚ್ಚು ಪುನೀತ್‌ ರಾಜ್‌ಕುಮಾರ್‌ ಸ್ಕ್ರೀನ್‌ನಲ್ಲಿ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸಿನಿಮಾ ನೋಡಿ ಅಪ್ಪು ಫ್ಯಾನ್ಸ್‌ ಕಣ್ಣೀರಿಟ್ಟಿದ್ದಾರೆ. ಪುನೀತ್ ರಾಜಕುಮಾರ್ ಇಷ್ಟದ ಚಿತ್ರಮಂದಿರ ನರ್ತಕಿ 10 ತಿಂಗಳಿಂದ ಪ್ರದರ್ಶನ ನಿಲ್ಲಿಸಿತ್ತು. ಇದೀಗ ನರ್ತಕಿ ಥಿಯೇಟರ್‌ನಲ್ಲಿ ʻಲಕ್ಕಿಮ್ಯಾನ್’ ಫಸ್ಟ್ ಡೇ ಫಸ್ಟ್ ಶೋ ಆಗಿ ತೆರೆ ಕಂಡಿರುವುದು ವಿಶೇಷ. ನರ್ತಕಿ ಚಿತ್ರಮಂದಿರದಲ್ಲೇ ರಾಜ್‌ ಕುಟುಂಬ ಸಿನಿಮಾ ನೋಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇದನ್ನೂ ಓದಿ | Lucky Man Movie | ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆ ಬರೆದ ಪವರ್ ಸ್ಟಾರ್ ಲಕ್ಕಿಮ್ಯಾನ್!

ಪುನೀತ್ ಗಾಗಿ ಡಾನ್ಸ್ ಮಾಡಿದ ಮಕ್ಕಳು!
ಚಿತ್ರಮಂದಿರದ ಅಂಗಳದಲ್ಲಿ ಅಪ್ಪು ರೀತಿ ಸ್ಟೆಪ್ಸ್ ಹಾಕಿ ಪುಟಾಣಿ ಮಕ್ಕಳು ಡ್ಯಾನ್ಸ್‌ ಮಾಡಿ ಗಮನ ಸೆಳೆದರು. ಮಕ್ಕಳ ಡಾನ್ಸ್ ನೋಡಿ ಫ್ಯಾನ್ಸ್‌ ಸಂಭ್ರಮಿಸಿದ್ದಾರೆ. ಅಪ್ಪು ಅಭಿಮಾನಿಗಳ ಜತೆ ನಿರ್ದೇಶಕ ನಾಗೇಂದ್ರ ಪ್ರಸಾದ್‌ ಟಪಾಂಗುಚ್ಚಿ ಸ್ಟೆಪ್ಸ್ ಹಾಕಿದರು. ನಟ ಡಾರ್ಲಿಂಗ್ ಕೃಷ್ಣ ಹಾಗೂ ನಟಿ ಸಂಗೀತ ಕೂಡ ಸಿನಿಮಾ ವೀಕ್ಷಿಸಲು ನರ್ತಕಿ ಥಿಯೇಟರ್‌ಗೆ ಆಗಮಿಸಿದ್ದರು.

ನಾಗೇಂದ್ರ ಪ್ರಸಾದ್‌ ನಿರ್ದೇಶನ ಮಾಡಿದ್ದು, ಪಿ ಆರ್ ಮೀನಾಕ್ಷಿ ಸುಂದರಂ ಹಾಗೂ ಆರ್‌. ಸುಂದರ್‌ ಕಾಮರಾಜ್ ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ, ರೋಶನಿ ಪ್ರಕಾಶ್, ಪುನೀತ್ ರಾಜ್ ಕುಮಾರ್ ಮತ್ತು ಪ್ರಭುದೇವ ಸಿನಿಮಾದಲ್ಲಿ ನಟಿಸಿದ್ದಾರೆ.

Lucky Man Movie

ಇದನ್ನೂ ಓದಿ | Lucky Man Movie | ಲಕ್ಕಿ ಮ್ಯಾನ್‌ ಚಿತ್ರಕ್ಕೆ ಯು ಸರ್ಟಿಫಿಕೇಟ್‌: ಅಡ್ವಾನ್ಸ್ ಬುಕ್ಕಿಂಗ್‌ ಓಪನ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Chetan Chandra: ಬೆಂಗಳೂರಿನ ಕಗ್ಗಲಿಪುರದಲ್ಲಿ ಕಾರಿನಲ್ಲಿ ಹೋಗುತ್ತಿದ್ದ ನಟ ಚೇತನ್ ಚಂದ್ರ ಅವರನ್ನು ಅಡ್ಡಗಟ್ಟಿ ಕೆಲ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ.

VISTARANEWS.COM


on

Chetan Chandra
Koo

ಬೆಂಗಳೂರು: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಅವರ ಮೇಲೆ ಹಲ್ಲೆ ಮಾಡಿರುವ ಘಟನೆ (Chetan Chandra) ನಗರದ ಕನಕಪುರ ರಸ್ತೆಯ ಕಗ್ಗಲಿಪುರದಲ್ಲಿ ನಡೆದಿದೆ. ಪಿಯುಸಿ, ರಾಜಧಾನಿ, ಜರಾಸಂಧ, ಪ್ರಭುತ್ವ ಚಿತ್ರಗಳ ಮೂಲಕ ಖ್ಯಾತವಾಗಿರುವ ನಟನ ಮೇಲೆ ಭಾನುವಾರ ಹಲ್ಲೆ ನಡೆದಿದೆ.

ಕಾರಿನಲ್ಲಿದ್ದ ನಟ ಚೇತನ್ ಚಂದ್ರ ಅವರನ್ನು ರಕ್ತ ಬರುವಂತೆ ಥಳಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ನಟ ಚೇತನ್ ಚಂದ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಟನ ಮೇಲೆ 20ಕ್ಕೂ ಹೆಚ್ಚು ಮಂದಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಪೈಕಿ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ನಟ ಚೇತನ್‌ ಚಂದ್ರ ಅವರಿಗೆ ಕಗ್ಗಲಿಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಇದನ್ನೂ ಓದಿ | Ram Charan: ಚುನಾವಣಾ ಪ್ರಚಾರದ ವೇಳೆ ರಾಮ್ ಚರಣ್ ಶರ್ಟ್‌ ಹರಿದ ಫ್ಯಾನ್ಸ್‌: ಅಲ್ಲು ಸುತ್ತ ಜನವೋ ಜನ!

ಭಾನುವಾರ ಅಮ್ಮಂದಿರ ದಿನವಾಗಿದ್ದರಿಂದ ನಟ ಚೇತನ್ ಚಂದ್ರ ಅವರು ದೇವಸ್ಥಾನಕ್ಕೆ ಹೋಗಿ ಬರುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿ ಬಂದ ಕೆಲ ಕಿಡಿಗೇಡಿಗಳು ಕಾರಿಗೆ ಅಡ್ಡ ಹಾಕಿ, ದುಡ್ಡು ಕೀಳಲು ಮುಂದಾಗಿದ್ದಾರೆ. ಹಣ ಕೊಡೋದಿಲ್ಲ ಎಂದಿದ್ದಕ್ಕೆ ಗಲಾಟೆ ಮಾಡಿ, ನಟ ಚೇತನ್ ಚಂದ್ರ ಅವರ ಮುಖಕ್ಕೆ ರಕ್ತ ಬರುವ ಹಾಗೆ ಕಿಡಿಗೇಡಿಗಳು ಹೊಡೆದಿದ್ದಾರೆ.

ಅಮ್ಮನ ನೆನೆದಾಗ ಮಗುವಾಗುವೆ ಎಂದ ಜಗ್ಗೇಶ್‌: ದುನಿಯಾ ವಿಜಯ್‌ ಭಾವುಕ ಪೋಸ್ಟ್‌!

Mother's Day 2024 Duniya Vijay jaggesh Post Viral

ಬೆಂಗಳೂರು: ಅಮ್ಮ ಅಮ್ಮ ಅನ್ನೋ ಮಾತು ಬಂತು ಎಲ್ಲಿಂದ..? ಭೂಮಿಗೆ ಬಂದ (Mother’s Day 2024) ಮೊದಲನೆ ಕಂದನ ಅಳುವ ದನಿಯಿಂದ ʼಈ ಸಾಲುಗಳು ಯಾವಾಗಲೂ ನಮ್ಮನ್ನ ಬಿಡದೇ ಕಾಡುತ್ತವೆ. ʼಅಮ್ಮʼ ಅನ್ನೋ ಶಬ್ದಕ್ಕೆ ಅರ್ಥ ನಿಡುವುದು ಕೂಸೇ ಆದ್ರೂ ಆ ಕೂಸಿಗೆ ರೆಕ್ಕೆ ಕಟ್ಟಿ ಹಾರೋ ಹಾಗೇ ಮಾಡೋಳು ತಾಯಿ. ಪ್ರತಿವರ್ಷ ಮೇ ತಿಂಗಳ 2ನೇ ಭಾನುವಾರ ಮದರ್ಸ್ ಡೇ. ತಾಯಂದಿರ ದಿನದ ಹಿನ್ನೆಲೆಯಲ್ಲಿ ಜಗ್ಗೇಶ್, ದುನಿಯಾ ವಿಜಯ್ ಸೇರಿದಂತೆ ಹಲವರು ತಮ್ಮ ತಾಯಿಯನ್ನು ಸ್ಮರಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ.

ನವರಸ ನಾಯಕ ಜಗ್ಗೇಶ್‌ ಅವರು ಇನ್‌ಸ್ಟಾದಲ್ಲಿ ಅಮ್ಮನ ತೊಡೆ ಮೇಲೆ ಮಲಗಿರುವ ಫೋಟೊ ಜತೆಗೆ ಹೀಗೆ ಬರೆದಿದ್ದಾರೆ. ಧನ್ಯವಾದ ಜೀ ಕನ್ನಡ. ನನ್ನ ಪ್ರೀತಿಯ ಅಮ್ಮನ ಈ ರೀತಿ ನೆನೆಯುವಂತ ಕಾಣಿಕೆಗಾಗಿ.
ನಾನು ಇಂದು 61 ವರ್ಷವಾದರು ಅಮ್ಮನ ನೆನೆದಾಗ ಮಗುವಾಗುವೆ. ಅಂತಹ ಶಕ್ತಿಯಿದೆ ಅಮ್ಮನ ಎರಡಕ್ಷರಕ್ಕೆ.
ಕಾರುಣ್ಯ ಸೆಲೆಯ ಓ ಅಮ್ಮಂದಿರೆ…ನೀವುಗಳು ಇರಬೇಕು ಶಾಶ್ವತ. ದೃವನಕ್ಷತ್ರದಂತೆ..! ಮರೆಯಾಗದೆ ಮಕ್ಕಳ ಮುಂದೆ..ʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Viral News: ಇಂತಹ ಅಮ್ಮಂದಿರೂ ಇರ್ತಾರಾ? ಈ ಶಾಕಿಂಗ್‌ ವಿಡಿಯೊ ನೋಡಿದರೆ ನಿಮ್ಮ ರಕ್ತ ಕುದಿಯುವುದು ಖಚಿತ

ದುನಿಯಾ ವಿಜಯ್‌ ಅವರು ಅಮ್ಮನ ಜತೆ ಇರುವ ಫೋಟೊ ಶೇರ್‌ ಮಾಡಿ ʻʻಈ ಉಸಿರು ಕೊಟ್ಟ ನಿನಗೆ
ನನ್ನ ಉಸಿರಿರೊವರೆಗೂ. ಪ್ರತಿ ದಿನ ಆಚರಣೆಯೇ ಅಮ್ಮʼʼ ಎಂದು ಬರೆದುಕೊಂಡಿದ್ದಾರೆ.

ಮಹಾಮಾರಿ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ದುನಿಯಾ ವಿಜಯ್‌ ಅಮ್ಮ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿತ್ತು. ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಹಾಗೂ ತಾಯಿ ನಾರಾಯಣಮ್ಮ ಅವರಿಗೆ ಕೋವಿಡ್ 19 ಪಾಸಿಟಿವ್ ಕಂಡುಬಂದಿತ್ತು. ಮನೆಯಲ್ಲೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಸಿ, ತಂದೆ-ತಾಯಿಯನ್ನು ದುನಿಯಾ ವಿಜಯ್ ಆರೈಕೆ ಮಾಡಿದ್ದರು. ಮಾರಣಾಂತಿಕ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದ ನಾರಾಯಣಮ್ಮ ಅವರಿಗೆ ಬ್ರೇನ್ ಸ್ಟ್ರೋಕ್ ಆಗಿತ್ತು. 3 ವರ್ಷಗಳ ಹಿಂದೆ ನಟ ದುನಿಯಾ ವಿಜಯ್ ನಾರಾಯಣಮ್ಮ ನಿಧನರಾದರು.

ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಅವರ ತಾಯಿ ಸುಜಾತಾ ಕಾಮತ್‌ ಕಿಡ್ನಿ ವೈಫಲ್ಯದಿಂದಾಗಿ ಕೊನೆಯುಸಿರೆಳೆದಿದ್ದರು. ಈ ದಿನ ನಟಿ ತಮ್ಮ ತಾಯಿಯನ್ನು ನೆನಪಿಸಿಕೊಂಡು, ಮಿಸ್‌ ಯೂ ಅಮ್ಮ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ (Duniya Vijay) ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ವಿಶೇಷ ಅಂದರೆ ಈ ಸಿನಿಮಾ ಮೂಲಕ ದುನಿಯಾ ವಿಜಯ್‌ ಅವರ ಮಗಳು ಮೋನಿಕಾ ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ಕಾಟೇರ’ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಮೋನಿಕಾ ಈಗ ಹೆಸರು ಬದಲಾಯಿಸಿಕೊಂಡಿದ್ದಾರೆ. ಸಿನಿಮಾಗಾಗಿ ರಿತಾನ್ಯಾ ಎಂದು ಹೆಸರು ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ | Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ. ಕೋಲಾರ ಸುತ್ತಮುತ್ತ ಸಿನಿಮಾದ ಕಥೆ ನಡೆಯಲಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನೈಜ್ಯ ಕಥೆಯನ್ನು ಆಧರಿಸಿದ ಸಿನಿಮಾ ಎಂದು ಹೇಳಿಕೊಂಡಿದೆ. ಕೋಲಾರ ಭಾಷೆಯಲ್ಲಿ ಚಿತ್ರದ ಡೈಲಾಗ್ ಇರಲಿದೆ.

Continue Reading

ಸಿನಿಮಾ

Vijay Rao Herur: ‘ವಿಜಯದಾಸರು’ ಚಿತ್ರದ ಸಹ ನಟ ವಿಜಯ್‌ ರಾವ್ ಹೇರೂರು ವಿಧಿವಶ

Vijay Rao Herur: ಇತ್ತೀಚೆಗೆ ಬಿಡುಗಡೆಯಾದ ‘ವಿಜಯದಾಸರು’ ಚಿತ್ರದಲ್ಲಿ ಗಂಗಾವತಿಯ ವಿಜಯ್‌ರಾವ್ ಹೇರೂರು ಅವರು ಸಹ ನಟರಾಗಿ ನಟಿಸಿ ಜನಪ್ರಿಯರಾಗಿದ್ದರು.

VISTARANEWS.COM


on

vijay Rao herur
Koo

ಗಂಗಾವತಿ: ಪಟ್ಟಣದ ಬ್ರಾಹ್ಮಣ ಸಮಾಜದ ಮುಖಂಡ, ನಟ ವಿಜಯ್‌ರಾವ್ ಹೇರೂರು(51) (Vijay Rao Herur) ಅವರು ಭಾನುವಾರ ಬೆಳಗ್ಗೆ ಹೃದಯಘಾತದಿಂದ ನಿಧನರಾದರು. ಇತ್ತೀಚೆಗೆ ಬಿಡುಗಡೆಯಾದ ‘ವಿಜಯದಾಸರು’ ಚಿತ್ರದಲ್ಲಿ ಇವರು ಸಹ ನಟರಾಗಿ ನಟಿಸಿ ಜನಪ್ರಿಯರಾಗಿದ್ದರು.

ದಾಸ ಸಾಹಿತ್ಯದ ಜತೆಗೆ ಸಮಾಜಮುಖಿ ಕಾರ್ಯಗಳಲ್ಲಿ ಗುರುತಿಸಿಕೊಂಡಿದ್ದ ವಿಜಯ್‌ ರಾವ್ ಅವರು ಸಿನಿಮಾಗಳಲ್ಲಿ ನಟಿಸುವ ಆಸೆ ಹೊಂದಿದ್ದರು. ಆದರೆ ವಿಧಿಯಾಟದಿಂದ ಅವರು ಹೃದಯಘಾತಕ್ಕೆ ಒಳಗಾದ್ದಾರೆ. ಇವರು ತಾಯಿ, ಸಹೋದರ ಸೇರಿ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ವಿವಿಧ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ತೆಲುಗಿನ ‘ತ್ರಿನಯನಿ’ ಧಾರಾವಾಹಿ ನಟಿ, ಕನ್ನಡತಿ ಪವಿತ್ರ ಜಯರಾಂ ಅಪಘಾತದಲ್ಲಿ ನಿಧನ

Pavithra Jayaram Trinayani serial Fame No More

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani serial) ಜನಪ್ರಿಯರಾಗಿರುವ ಕನ್ನಡತಿ ಪವಿತ್ರ ಜಯರಾಂ (Pavithra Jayaram) ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಇಂದು (ಮೇ.12) ಮುಂಜಾನೆ ಅಪಘಾತವಾಗಿದೆ ಎಂದು ವರದಿಯಾಗಿದೆ. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼಎಂದಿದ್ದರು.

ಇದನ್ನೂ ಓದಿ: IPL 2024: ಬೆಂಗಳೂರಲ್ಲಿಂದು ಆರ್‌ಸಿಬಿ, ಡೆಲ್ಲಿ ನಿರ್ಣಾಯಕ ಪಂದ್ಯ; ಮಳೆ ಅಡ್ಡಿ ಆಗತ್ತಾ ? ಇಲ್ಲಿದೆ ರಿಪೋರ್ಟ್

“ಅಷ್ಟೇ ಅಲ್ಲ 16ನೇ ವಯಸ್ಸಿಗೆ ಮದುವೆ ಮಾಡಿದ್ದರು. ಮ್ಯಾರೇಜ್ ಲೈಫ್ ಕೂಡ ನನ್ನದು ಅಷ್ಟಾಗಿ ಸರಿಯಿರಲಿಲ್ಲ. ಓದು ಕೂಡ ಅರ್ಧಕ್ಕೆ ಮುಗಿದಿತ್ತು. ಚಿಕ್ಕ ಚಿಕ್ಕ ಮಕ್ಕಳು ಇರುವಾಗಲೇ ನನ್ನ ಮಗಳು ಮತ್ತು ಮಗನನ್ನು ಕರೆದುಕೊಂಡು ಬೆಂಗಳೂರಿಗೆ ಅವಕಾಶ ಅರಸಿಕೊಂಡು ಬಂದೆ. ಮಕ್ಕಳನ್ನು ಬೆಳೆಸಲು ಹೌಸ್ ಕೀಪಿಂಗ್ ಕೆಲಸ ಕೂಡ ಮಾಡಿದ್ದೆ. ನರ್ಸಿಂಗ್ ಕಾಲೇಜಿನ ಲೈಬ್ರರಿಯಲ್ಲಿ ಕೂಡ ಕೆಲಸ ಮಾಡಿದ್ದೆʼʼಎಂದು ಹೇಳಿಕೊಂಡಿದ್ದರು.

Continue Reading

ಕ್ರಿಕೆಟ್

Queen’s Premier League: ಕಿರುತೆರೆ ,ಹಿರಿತೆರೆ ಹೆಣ್ಮಕ್ಕಳಿಗಾಗಿ ಶುರುವಾಯ್ತು ಕ್ವೀನ್ಸ್‌ ಪ್ರೀಮಿಯರ್ ಲೀಗ್!

Queen’s Premier League: ಈ‌ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನ್ನಡ ಸಿನಿಮಾ, ಸೀರಿಯಲ್, ಆಂಕರ್ಸ್, ಮಾಡೆಲ್ ಭಾಗವಹಿಸಲು ವೇದಿಕೆ‌ ಕಲ್ಪಿಸಿಕೊಡಲಾಗಿದೆ. ಅದರ ಭಾಗವಾಗಿ QPLನ ಲೋಗೋ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕರವೇ ಅಧ್ಯಕ್ಷ ನಾರಾಯಣ ಗೌಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂಎನ್ ಸುರೇಶ್, ಉದ್ಯಮಿ ಪೂರ್ವಂಕರ್ ಸಿಇಒ ಮಲ್ಲಣ್ಣ, ಅಂತಾರಾಷ್ಟ್ರೀಯ ಕ್ರೀಡಾಪಟು ವೃಂದಾ ದಿನೇಶ್, ಮಹಿಳಾ ಕ್ರಿಕೆಟರ್ ಗಳಾದ ಪುಷ್ಪ ಕುಮಾರಿ, ಪ್ರತ್ಯುಷ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

VISTARANEWS.COM


on

Queen's Premier League start
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹಲವಾರು ಕ್ರಿಕೆಟ್ ಪಂದ್ಯಾವಳಿಗಳಿವೆ. ಸಿಸಿಎಲ್, ಕೆಸಿಸಿ, ಟಿಪಿಎಲ್ ಸೇರಿದಂತೆ ಹತ್ತಕ್ಕೂ ಹೆಚ್ಚು ಕ್ರಿಕೆಟ್ ಟೂರ್ನಮೆಂಟ್ ಗಳಿವೆ. ಆದರೆ ಕಿರುತೆರೆ ಹಾಗೂ ಹಿರಿತೆರೆ ಮಹಿಳೆಯರಿಗಾಗಿ ಯಾವುದೇ ಕ್ರಿಕೆಟ್ ಪಂದ್ಯಾವಳಿಗಳಿಲ್ಲ. ಹೀಗಾಗಿ ಕ್ರಿಯೇಟಿವ್ ಫ್ರೆಂಡ್ಸ್ ಕಂಪನಿ ʻಕ್ವೀನ್ಸ್‌ ಪ್ರೀಮಿಯರ್ ಲೀಗ್ʼ (Queen’s Premier League) ಎಂಬ ಹೊಸ ಪರಿಕಲ್ಪನೆಯನ್ನು ಪರಿಚಯಿಸಿದೆ.

ಈ‌ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕನ್ನಡ ಸಿನಿಮಾ, ಸೀರಿಯಲ್, ಆಂಕರ್ಸ್, ಮಾಡೆಲ್ ಭಾಗವಹಿಸಲು ವೇದಿಕೆ‌ ಕಲ್ಪಿಸಿಕೊಡಲಾಗಿದೆ. ಅದರ ಭಾಗವಾಗಿ QPLನ ಲೋಗೋ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕರವೇ ಅಧ್ಯಕ್ಷ ನಾರಾಯಣ ಗೌಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂಎನ್ ಸುರೇಶ್, ಉದ್ಯಮಿ ಪೂರ್ವಂಕರ್ ಸಿಇಒ ಮಲ್ಲಣ್ಣ, ಅಂತಾರಾಷ್ಟ್ರೀಯ ಕ್ರೀಡಾಪಟು ವೃಂದಾ ದಿನೇಶ್, ಮಹಿಳಾ ಕ್ರಿಕೆಟರ್ ಗಳಾದ ಪುಷ್ಪ ಕುಮಾರಿ, ಪ್ರತ್ಯುಷ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಲೋಗೊ ಬಿಡುಗಡೆ ಮಾಡಿದ ಪುಷ್ಪಕುಮಾರಿ, ʻʻಕ್ರಿಕೆಟ್ ಹುಡುಗರಿಗೆ ಮಾತ್ರ ಎನ್ನುವ ಕಾಲವಿತ್ತು. ಆದರೆ ನಾವು ಅಂದು ಛಲ ಬಿಡದೆ ಆಡಿದ್ದೇವೆ. ಮಹಿಳೆಯರಿಗಾಗಿ ಈ ರೀತಿ ಕ್ರಿಕೆಟ್ ಪಂದ್ಯಾವಳಿ ನಡೆಸುತ್ತಿರುವುದು ಖುಷಿʼʼ ಎಂದರು.

ಇದನ್ನೂ ಓದಿ: Dolly Dhananjay:  ಡಾಲಿ ಅಭಿನಯದ ʻಕೋಟಿʼ ಸಿನಿಮಾದ ಮೊದಲ ಹಾಡು ನಾಳೆ ಬಿಡುಗಡೆ

ನಟ ಹಾಗೂ QPL ಮೆಂಟರ್ ಆಗಿರುವ ಪ್ರಮೋದ್ ಶೆಟ್ಟಿ ಮಾತನಾಡಿ, ʻʻಜೂನ್ ತಿಂಗಳಲ್ಲಿ QPL ಪಂದ್ಯಾವಳಿ ನಡೆಸಲು ಯೋಜನೆ ಹಾಕಿಕೊಂಡಿದ್ದೇವೆ. ಕಲಾವಿದರ ಜತೆಗೆ ಆಂಕರ್ಸ್, ಮಾಡೆಲ್‌ಗೆ ಇಲ್ಲಿ ಕ್ರಿಕೆಟ್ ಆಡಲು ಅವಕಾಶವಿದೆ. ಇವರನ್ನು ನೋಡಿಕೊಂಡು ಹೊಸ ಜನರೇಷನ್ ಕ್ರಿಕೆಟ್ ಆಡಲು ಪ್ರೇರಣೆಯಾಗಲಿ. ಈ ಪಂದ್ಯಾವಳಿ ನಾವು ಮಾಡುತ್ತಿಲ್ಲ.‌ಇದರಿಂದ ಬಂದ ದುಡ್ಡನ್ನು ನನ್ನ ತಂಡ ರಂಗಸೌರಭಕ್ಕೆ‌ ಮೀಸಲು ಇಡಲಾಗುತ್ತದೆ. ಶಾಲಾ ಕಾಲೇಜು ಮಟ್ಟದಿಂದಲೇ ಹಲವು ಪ್ರತಿಭೆಗಳನ್ನು ರಂಗಭೂಮಿಗೆ ಕರೆತಂದು ನಟನೆಯನ್ನು ಕಲಿಸುವ ಕೆಲಸವನ್ನು ರಂಗಸೌರಭ ಮಾಡುತ್ತಿದೆ. ಹೀಗಾಗಿ QPL ನಿಂದ ಬಂದ ಲಾಭವನ್ನು ಇಲ್ಲಿಗೆ ನೀಡಲಾಗುತ್ತದೆ. ಈ ಪಂದ್ಯಾವಳಿ ಯಶಸ್ವಿಯಾಗಲು ಹೆಚ್ಚು ನಟಿಮಣಿರು ಹೆಚ್ಚಾಗಿ ಕೈ ಜೋಡಿಸಬೇಕುʼʼ ಎಂದರು.

ನಟಿ ಭವ್ಯಾ ಗೌಡ ಮಾತನಾಡಿ, ʻʻಈ ಕಾನ್ಸೆಪ್ಟ್ ನನ್ನ ಮೈಂಡ್ ನಲ್ಲಿ ತುಂಬಾ ತಿಂಗಳಿನಿಂದ ಇತ್ತು. ಆರ್ ಸಿಬಿ ಹುಡುಗಿರು ಯಾವಾಗ ಕಪ್ ಎತ್ತಿದರೋ ಆಗ ನಮ್ಮ ಜೋಶ್ ಜಾಸ್ತಿಯಾಯ್ತು. ಹೆಣ್ಮಕ್ಕಳು ಯಾವುದಕ್ಕೂ ಕಮ್ಮಿ ಇಲ್ಲ ಅನ್ನೋದನ್ನು ತೋರಿಸಲು ಶುರು ಮಾಡಿದ್ದೇವೆ. ಈ ಕ್ರಿಕೆಟ್ ಪಂದ್ಯಾವಳಿಯನ್ನೂ ಒಂದೊಳ್ಳೆ ಉದ್ದೇಶ ಇಟ್ಟಿಕೊಂಡು ಮಾಡುತ್ತಿದ್ದೇವೆ. ಹೆಣ್ಮಕ್ಕಳಿಗೆ ಬ್ಯಾಟು ಬಾಲ್ ಹಿಡಿದು ಫೀಲ್ಡ್ ಗೆ ಇಳಿಯುತ್ತಿದ್ದೇವೆ. ಗಂಡು ಮಕ್ಕಳು ಚಿಯರ್ ಅಪ್ ಮಾಡಲು ರೆಡಿಯಾಗಿʼʼ ಎಂದರು.

ಕನ್ನಡ ಸಿನಿಮಾ ಪ್ರೇಮಿಗಳನ್ನು ರಂಜಿಸುವ ಕ್ವೀನ್ಸ್ ಗಳ ಮನರಂಜನೆಗಾಗಿ ಹಾಗೂ ಒಂದೊಳ್ಳೆ ಉದ್ದೇಶ ಇಟ್ಟುಕೊಂಡು ಈ ಪಂದ್ಯಾವಳಿ ನಡೆಸಲಾಗುತ್ತಿದೆ. ರಂಗಪ್ರತಿಭೆಗಳನ್ನು ಸಜ್ಜುಗೊಳಿಸುವ ರಂಗಸೌರಭಕ್ಕೆ QPL ಲಾಭವನ್ನು ನೀಡಲಾಗುತ್ತದೆ.

ʻಕ್ವೀನ್ಸ್‌ ಪ್ರೀಮಿಯರ್ ಲೀಗ್ʼ ಆಯೋಜಕರ ಬಳಗದಲ್ಲಿ ಮಹೇಶ್ ಕುಮಾರ್, ಪ್ರಮೋದ್ ಶೆಟ್ಟಿ, ಭವ್ಯ ಗೌಡ, ಸಾತ್ವಿಕ್, ಸಂತೋಷ್, ಚೇತನ್, ಸಚಿನ್ ಹಾಗೂ ಪ್ರೇಮ್ ಇದ್ದಾರೆ. ಸದ್ಯ QPL ಲೋಗೋ ಲಾಂಚ್ ಕಾರ್ಯಕ್ರಮ ನಡೆದಿದ್ದು, ಮುಂದಿನ ದಿನಗಳಲ್ಲಿ auction, ಜೆರ್ಸಿ ಲಾಂಚ್, ಟ್ರೋಫಿ ಬಿಡುಗಡೆ ಮಾಡಲಾಗುತ್ತದೆ.

Continue Reading

ಸ್ಯಾಂಡಲ್ ವುಡ್

Kannada New Movie: ಮನರಂಜನೆಯ ರಸದೌತಣ ಬಡಿಸಲು ಬಂದ ʻಮೂರನೇ ಕೃಷ್ಣಪ್ಪʼ: ಟ್ರೈಲರ್‌ ಔಟ್‌!

Kannada New Movie: ರೆಡ್ ಡ್ರ್ಯಾಗನ್ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ‘ಮೂರನೇ ಕೃಷ್ಣಪ್ಪ’ ಸಿನಿಮಾಗೆ ಮೋಹನ್ ರೆಡ್ಡಿ ಜಿ, ರವಿಶಂಕರ್ ಹಣ ಹೂಡಿದ್ದಾರೆ. ಆನೇಕಲ್ ಭಾಗದ ಭಾಷೆಯ ಸೊಬಗನ್ನು ಇಟ್ಟುಕೊಂಡು ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ನಾಯಕನಾಗಿ ನಟಿಸುತ್ತಿದ್ದರೆ, ಪ್ರಮುಖ ಪಾತ್ರದಲ್ಲಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿದ್ದಾರೆ.

VISTARANEWS.COM


on

Kannada New Movie Moorane Krishnappa trailer Out
Koo

ಬೆಂಗಳೂರು: ವಿಭಿನ್ನ ಕಥಾನಕದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಹೊರಟಿರುವ ಸಿನಿಮಾ ʻಮೂರನೇ ಕೃಷ್ಣಪ್ಪʼ. ಇದೀಗ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ಲೂಸ್ ಮಾದ ಯೋಗಿ (Kannada New Movie) ಸಂಭಾಷಣೆಯಲ್ಲಿ‌ ಶುರುವಾಗುವ ಟ್ರೈಲರ್‌ನಲ್ಲಿ ಕೋಲಾರ‌ ಕನ್ನಡ‌ , ರಂಗಾಯಣ ರಘು, ಸಂಪತ್ ಮೈತ್ರಿಯಾಯಂತಹ ಅದ್ಭುತ ಕಲಾವಿದರ ಅಭಿನಯ, ಹಳ್ಳಿ ಸೊಗಡನ್ನು ಸೊಗಸಾಗಿ ಕಟ್ಟಿಕೊಡಲಾಗಿದೆ. ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು, ಸಿನಿಪ್ರಿಯರಿಗೆ ಮನರಂಜನೆ ಗ್ಯಾರೆಂಟಿ ಎಂಬ ಸಂದೇಶ ರವಾನಿಸಿದೆ.

‘ಮೂರನೇ ಕೃಷ್ಣಪ್ಪ’ ಸಿನಿಮಾವನ್ನು ನವೀನ್ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ವಿಭಿನ್ನ ಶೀರ್ಷಿಕೆಯೊಂದಿಗೆ ಪ್ರೇಕ್ಷಕರನ್ನು ರಂಜಿಸುವುದಕ್ಕೆ ನವೀನ್ ಮುಂದಾಗಿದ್ದಾರೆ.

ರೆಡ್ ಡ್ರ್ಯಾಗನ್ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ‘ಮೂರನೇ ಕೃಷ್ಣಪ್ಪ’ ಸಿನಿಮಾಗೆ ಮೋಹನ್ ರೆಡ್ಡಿ ಜಿ, ರವಿಶಂಕರ್ ಹಣ ಹೂಡಿದ್ದಾರೆ. ಆನೇಕಲ್ ಭಾಗದ ಭಾಷೆಯ ಸೊಬಗನ್ನು ಇಟ್ಟುಕೊಂಡು ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ನಾಯಕನಾಗಿ ನಟಿಸುತ್ತಿದ್ದರೆ, ಪ್ರಮುಖ ಪಾತ್ರದಲ್ಲಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿದ್ದಾರೆ.

ಇದನ್ನೂ ಓದಿ: Kannada New Movie: ‘ಗಾಡ್ ಪ್ರಾಮಿಸ್’ ಚಿತ್ರಕ್ಕೆ ಮುನ್ನುಡಿ; ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಮುಹೂರ್ತ

ಇವರೊಂದಿಗೆ ತುಕಾಲಿ ಸಂತೋಷ್, ಉಗ್ರಂ ಮಂಜು ಸೇರಿದಂತೆ ಹಲವರು ನಟಿಸಿದ್ದಾರೆ. ‘ಮೂರನೇ ಕೃಷ್ಣಪ್ಪ’ ಸಿನಿಮಾಕ್ಕೆ ಆನಂದ್ ರಾಜವಿಕ್ರಮ್ ಸಂಗೀತ ನೀಡಿದ್ದು, ಶ್ರೀಕಾಂತ್ ಎಡಿಟಿಂಗ್ ಮಾಡಿದ್ದರೆ, ಯೋಗಿ ಕ್ಯಾಮೆರಾ ಹ್ಯಾಂಡಲ್ ಮಾಡಿದ್ದಾರೆ. ಮೇ 24ಕ್ಕೆ ಮೂರನೇ ಕೃಷ್ಣಪ್ಪನ ಕಥೆ ತೆರೆಗೆ ಬರಲಿದೆ.

Continue Reading
Advertisement
Dina Bhavishya
ಭವಿಷ್ಯ26 mins ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case
ಕರ್ನಾಟಕ6 hours ago

Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

IPL 2024
ಪ್ರಮುಖ ಸುದ್ದಿ6 hours ago

IPL 2024 : ಡೆಲ್ಲಿ ವಿರುದ್ಧ ಆರ್​​ಸಿಬಿ 47 ರನ್ ಗೆಲುವು, ಪ್ಲೇಆಫ್​ಗೆ ಇನ್ನೊಂದು ಗೆಲುವು ಬೇಕು

Chetan Chandra
ಕರ್ನಾಟಕ7 hours ago

Chetan Chandra: ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಹಲ್ಲೆ; ರಕ್ತ ಬರುವಂತೆ ಥಳಿತ

Virat kohli
Latest7 hours ago

Virat kohli: ಅಂಪೈರ್​ಗಳ ಜತೆ ಮತ್ತೆ ಜಗಳವಾಡಿದ ವಿರಾಟ್​ ಕೊಹ್ಲಿ; ಇಲ್ಲಿದೆ ವಿಡಿಯೊ

Sunil Narine
ಪ್ರಮುಖ ಸುದ್ದಿ7 hours ago

Sunil Narine : ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದು ಎಲೈಟ್​ ಪಟ್ಟಿ ಸೇರಿದ ಸುನೀಲ್ ನರೈನ್​

vijay Rao herur
ಸಿನಿಮಾ7 hours ago

Vijay Rao Herur: ‘ವಿಜಯದಾಸರು’ ಚಿತ್ರದ ಸಹ ನಟ ವಿಜಯ್‌ ರಾವ್ ಹೇರೂರು ವಿಧಿವಶ

Virat Kohli
ಪ್ರಮುಖ ಸುದ್ದಿ7 hours ago

Virat kohli: ಕೊಹ್ಲಿಯನ್ನುಔಟ್ ಮಾಡಿ ಕೆಣಕಿದ ಇಶಾಂತ್​ ಶರ್ಮಾ; ವಿಡಿಯೊ ನೋಡಿ

Ravindra Jadeja
ಕ್ರೀಡೆ8 hours ago

Ravindra Jadeja : ವಿಕೆಟ್​ಗೆ ಹೋಗುತ್ತಿದ್ದ ಚೆಂಡು ತಡೆದ ಜಡೇಜಾಗೆ ಔಟ್ ಕೊಟ್ಟ ಅಂಪೈರ್​; ಇಲ್ಲಿದೆ ವಿಡಿಯೊ

Rain News
ಕರ್ನಾಟಕ8 hours ago

Rain News: ಬಾಗಲಕೋಟೆಯಲ್ಲಿ ಸಿಡಿಲಿಗೆ ಬಾಲಕ ಬಲಿ; ಬೆಳಗಾವಿಯ ಮನೆಗಳಿಗೆ ನುಗ್ಗಿದ ಮಳೆ ನೀರು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ26 mins ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ11 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ12 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ12 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ15 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ17 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ3 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

ಟ್ರೆಂಡಿಂಗ್‌