Ravindar Chandrasekaran: ಜೈಲಿನಿಂದ ಹೊರ ಬಂದ ಗಂಡನನ್ನು ತಬ್ಬಿ ಮುದ್ದಾಡಿದ ನಟಿ ಮಹಾಲಕ್ಷ್ಮೀ! - Vistara News

South Cinema

Ravindar Chandrasekaran: ಜೈಲಿನಿಂದ ಹೊರ ಬಂದ ಗಂಡನನ್ನು ತಬ್ಬಿ ಮುದ್ದಾಡಿದ ನಟಿ ಮಹಾಲಕ್ಷ್ಮೀ!

Ravindar Chandrasekaran: ರವೀಂದರ್‌ ಇದೀಗ ಜೈಲಿನಿಂದ ಹೊರ ಬಂದಿದ್ದಾರೆ. ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ. ಗಂಡ ಹೊರ ಬರುತ್ತಿದ್ದಂತೆ ಮಹಾಲಕ್ಷ್ಮೀ ಗಂಡನನ್ನು ತಬ್ಬಿಕೊಂಡು ಪೋಸ್‌ ಕೊಟ್ಟಿದ್ದಾರೆ.

VISTARANEWS.COM


on

Mahalakshmi posts new photo with Ravinder Chandrasekhar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟಿ ಮಹಾಲಕ್ಷ್ಮೀ (mahalakshmi) ಪತಿ ರವೀಂದರ್ ಚಂದ್ರಶೇಖರ್ (Ravindar Chandrasekaran) ಜತೆ ಇರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಉದ್ಯಮಿಯೊಬ್ಬರಿಗೆ 16 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ರವೀಂದರ್‌ ಇದೀಗ ಜೈಲಿನಿಂದ ಹೊರ ಬಂದಿದ್ದಾರೆ. ನ್ಯಾಯಾಲಯವು ಷರತ್ತುಬದ್ಧ ಜಾಮೀನು ನೀಡಿದೆ. ಗಂಡ ಹೊರ ಬರುತ್ತಿದ್ದಂತೆ ಮಹಾಲಕ್ಷ್ಮೀ ಗಂಡನನ್ನು ತಬ್ಬಿಕೊಂಡು ಪೋಸ್‌ ಕೊಟ್ಟಿದ್ದಾರೆ.

ಗಂಡನ ಜತೆ ಫೋಟೊ ಹಂಚಿಕೊಂಡು “ನನ್ನ ಮುಖದಲ್ಲಿ ನಗು ತರಿಸಲು ನೀವು ಎಂದಿಗೂ ಸೋತಿಲ್ಲ. ನಂಬಿಕೆಯೇ ಪ್ರೀತಿಯ ಅಡಿಪಾಯ, ಅದೇ ಪ್ರೀತಿಯನ್ನು ಸುರಿಸಿ ಮತ್ತು ನನ್ನನ್ನು ಯಾವಾಗಲೂ ರಕ್ಷಿಸಿ” ಎಂದು ಅವರು ಕ್ಯಾಪ್ಷನ್‌ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ತಮಿಳು ಮಾಧ್ಯಮಗಳು ಮಹಾಲಕ್ಷ್ಮೀ ಅವರು ರವೀಂದರ್ ಬಗ್ಗೆ ಕೆಲವು ಆಘಾತಕಾರಿ ಹೇಳಿಕೆ ನೀಡಿ, ರವೀಂದರ್ ತನಗೆ ಮೋಸ ಮಾಡಿ ಮದುವೆಯಾಗಿದ್ದಾನೆ ಎಂದು ತನ್ನ ಸ್ನೇಹಿತರಿಗೆ ತಿಳಿಸಿದ್ದರು ಎಂದು ವರದಿ ಮಾಡಿತ್ತು.

ರವೀಂದರ್‌ ಅರೆಸ್ಟ್‌ ಆಗಿದ್ದೇಕೆ?

ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಹೂಡಿಕೆ ಮಾಡಿದರೆ ಉತ್ತಮ ಲಾಭ ಸಿಗುತ್ತದೆ ಎಂದು ನಕಲಿ ದಾಖಲೆಗಳನ್ನು ಸಿದ್ಧಪಡಿಸಿ ಚೆನ್ನೈ ಮೂಲದ ಉದ್ಯಮಿ ಬಾಲಾಜಿ ಎಂಬುವರ ಬಳಿ 16 ಕೋಟಿ ಪಡೆದು ವಂಚಿಸಿದ್ದರು.

ಇದನ್ನೂ ಓದಿ: Actress Mahalakshmi: ಮೋಸ ಮಾಡಿ ಮದ್ವೆಯಾದ; ಗಂಡನ ವಿರುದ್ಧ ನಟಿ ಮಹಾಲಕ್ಷ್ಮಿ ಆರೋಪ?

ಮದುವೆ ವಿಚಾರದಲ್ಲಿ ಮಹಾಲಕ್ಷ್ಮೀ-ರವೀಂದರ್‌ ಫೇಮಸ್‌

ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ವಿವಾಹವಾಗಿದ್ದ ತಮಿಳು ನಟಿ, ನಿರೂಪಕಿ ಮಹಾಲಕ್ಷ್ಮೀ (Actress Mahalakshmi) ಮತ್ತು ಖ್ಯಾತ ನಿರ್ಮಾಪಕ  ರವೀಂದರ್ ಚಂದ್ರಶೇಖರ್​ ಸೆಪ್ಟೆಂಬರ್​ 1ರಂದು ವಿವಾಹ ವಾರ್ಷಿಕೋತ್ಸವನ್ನು ಆಚರಿಸಿಕೊಂಡರು. 

ಅಂದಹಾಗೆ, ಮಹಾಲಕ್ಷ್ಮೀ ಮತ್ತು ರವಿಚಂದ್ರಶೇಖರ್ ಅವರಿಬ್ಬರಿಗೂ ಇದು ಎರಡನೇ ಮದುವೆ. ವಯಸ್ಸಿನಲ್ಲೂ ತುಂಬ ಅಂತರವಿದೆ. ರವೀಂದರ್ ಚಂದ್ರಶೇಖರ್ ಅವರು ದಪ್ಪ ಇರುವ ವಿಷಯಕ್ಕೂ ಟ್ರೋಲ್​ ಆಗಿದ್ದರು. ಮಹಾಲಕ್ಷ್ಮೀ ಅವರು ರವಿಚಂದ್ರಶೇಖರ್​ ಬಳಿ ಇರುವ ಹಣ ನೋಡಿ ಮರುಳಾಗಿ ಮದುವೆಯಾಗಿದ್ದಾರೆ ಎಂದೂ ಅನೇಕರು ವ್ಯಂಗ್ಯವಾಡಿದ್ದರು. ಈ ಜೋಡಿಯ ಮಧ್ಯೆಯ ಪ್ರೀತಿಯೇನೂ ಕಡಿಮೆಯಾಗಿಲ್ಲ. ಇತ್ತೀಚೆಗೆ ಮಡದಿ ಮಹಾಲಕ್ಷ್ಮಿ ಬಗ್ಗೆ ಭಾವನಾತ್ಮಕವಾಗಿ ಬರೆದಿದ್ದ ರವಿಚಂದ್ರಶೇಖರ್​, ‘ಈಕೆ ನನ್ನ ಜೀವನದ 8ನೇ ಅಚ್ಚರಿ’ ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Charuhasan Srinivasan: ಕಮಲ್ ಹಾಸನ್ ಸಹೋದರ, ನಟಿ ಸುಹಾಸಿನಿ ತಂದೆ ಆಸ್ಪತ್ರೆಗೆ ದಾಖಲು

Charuhasan Srinivasan: ನಟಿ, ನಿರ್ದೇಶಕಿ, ನಿರ್ಮಾಪಕ ಮತ್ತು ಲೇಖಕಿ ಸುಹಾಸಿನಿ ಮಣಿರತ್ನಂ ಅವರು ತಮ್ಮ ತಂದೆಯೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಸುಹಾಸಿನಿ ತನ್ನ ತಂದೆಯನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು. ಚಾರುಹಾಸನ್ ಶ್ರೀನಿವಾಸನ್ ಅವರು ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿದ್ದಾರೆ.

VISTARANEWS.COM


on

Charuhasan Srinivasan Hospitalised, Daughter Suhasini Shares Emotional Post
Koo

ಬೆಂಗಳೂರು: ಹಿರಿಯ ನಟ ಕಮಲ್ ಹಾಸನ್ (Kamal Haasan) ಅವರ ಹಿರಿಯ ಸಹೋದರ, ಚಾರುಹಾಸನ್ ಶ್ರೀನಿವಾಸನ್ (Charuhasan Srinivasan) ಅವರು ಇತ್ತೀಚೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಹಿರಿಯ ಮಗಳು, ನಟಿ, ನಿರ್ದೇಶಕಿ, ನಿರ್ಮಾಪಕ ಮತ್ತು ಲೇಖಕಿ ಸುಹಾಸಿನಿ ಮಣಿರತ್ನಂ ಅವರು ತಮ್ಮ ತಂದೆಯೊಂದಿಗೆ ಫೋಟೋವನ್ನು ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ, ಸುಹಾಸಿನಿ ತನ್ನ ತಂದೆಯನ್ನು ತಬ್ಬಿಕೊಳ್ಳುತ್ತಿರುವುದನ್ನು ಕಾಣಬಹುದು. ಚಾರುಹಾಸನ್ ಶ್ರೀನಿವಾಸನ್ ಅವರು ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿದ್ದಾರೆ.

ಫೋಟೋವನ್ನು ಹಂಚಿಕೊಂಡ ನಟಿ ಹೀಗೆ ಬರೆದಿದ್ದಾರೆ, “ ನೀವು ಇದನ್ನು ನನ್ನ ತಂದೆಗೆ ವೈದ್ಯಕೀಯ ವಾಸ್ತವ್ಯ ಎಂದು ಕರೆಯುತ್ತೀರಾ? ಅವರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು, ದಾದಿಯರು ಮತ್ತು ಹೆಣ್ಣುಮಕ್ಕಳಿಂದ ಪ್ರೀತಿ ಮತ್ತು ಕಾಳಜಿಯೊಂದಿಗೆʼಎಂದು ಫೋಟೊ ಶೇರ್‌ ಮಾಡಿಕೊಂಡಿದ್ದಾರೆ. ಪೋಸ್ಟ್ ನೋಡಿದ ಅಭಿಮಾನಿಗಳು ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ಚಾರುಹಾಸನ್ ಶ್ರೀನಿವಾಸನ್ ನಟ, ನಿರ್ದೇಶಕ ಮತ್ತು ನಿವೃತ್ತ ವಕೀಲರು. ತಮಿಳು, ಕನ್ನಡ, ತೆಲುಗು, ಮಲಯಾಳಂ ಮತ್ತು ಹಿಂದಿ ಚಲನಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ ಚಲನಚಿತ್ರ ತಬರನ ಕಥೆ (1987) ಗಾಗಿ ಅತ್ಯುತ್ತಮ ನಟ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ, ಮತ್ತು ಅತ್ಯುತ್ತಮ ನಟ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದರು.

ಕುಬಿ ಮತ್ತು ಇಯಾಲ, ರಘುವಿಂತೆ ಸ್ವಂತ ರಜಿಯಾ, ಮೀಂದುಂ ಒರು ಕಾತಲ್ ಕಥೈ, ನೇತಿ ಸಿದ್ಧಾರ್ಥ, ಮತ್ತು ಡಿಯರ್ ಕಾಮ್ರೇಡ್ ಮುಂತಾದ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಪುದಿಯ ಸಂಗಮಮ್ (1982) ಮತ್ತು ಐಪಿಸಿ 215 (2003) ಎಂಬ ಎರಡು ಚಲನಚಿತ್ರಗಳನ್ನು ನಿರ್ದೇಶಿಸಿದರು.

ಸಿನಿಮಾ ಜತೆಗೆ, ಥಿಂಕಿಂಗ್ ಆನ್ ಮೈ ಫೀಟ್: ಚಾರುಹಾಸನ್ ಆಟೋಬಯೋಗ್ರಫಿ, ನವದೆಹಲಿಯ ಲಿಫೈ ಪಬ್ಲಿಕೇಷನ್ಸ್, ಬಯೋಗ್ ಎಂಬ ಪುಸ್ತಕಗಳು ಪ್ರಕಟವಾಗಿದೆ, ಇದು 2015 ರಲ್ಲಿ ನವದೆಹಲಿ ವಿಶ್ವ ಪುಸ್ತಕ ಮೇಳದಲ್ಲಿ ಬಿಡುಗಡೆಯಾಯಿತು.

ವೈಯಕ್ತಿಕ ಜೀವನದ ಬಗ್ಗೆ ಹೇಳುವುದಾದರೆ, ಚಾರುಹಾಸನ್ ಜನವರಿ 5, 1931 ರಂದು ವಕೀಲ ಮತ್ತು ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಡಿ. ಶ್ರೀನಿವಾಸನ್ ಮತ್ತು ರಾಜಲಕ್ಷ್ಮಿ ದಂಪತಿಗೆ ಜನಿಸಿದರು. ಚಾರುಹಾಸನ್ ಹಿರಿಯ ಮಗ ಮತ್ತು ಕಮಲ್ ಹಾಸನ್ ಕಿರಿಯ ಸಹೋದರ.

ಚಾರುಹಾಸನ್ ಕೋಮಲಂ ಅವರನ್ನು ವಿವಾಹವಾಗಿದ್ದಾರೆ. ನಂದಿನಿ, ಸುಹಾಸಿನಿ ಮತ್ತು ಸುಭಾಸಿನಿ ಎಂಬ ಮೂವರು ಪುತ್ರಿಯರನ್ನು ಹೊಂದಿದ್ದಾರೆ. ಸುಹಾಸಿನಿ ನಟಿ.

Continue Reading

ಕಾಲಿವುಡ್

Kannappa Movie: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರದಿಂದ ಹೊರಬಿತ್ತು ಮಧುಬಾಲ ಫಸ್ಟ್‌ ಲುಕ್‌ !

Bedara Kannappa: ಬೇಡ ಕುಲದ ನಾಯಕಿಯಾಗಿ ಮಧು ಅವರ ಪಾತ್ರ ಕಣ್ಣಪ್ಪ ಚಿತ್ರದಲ್ಲಿ ಸಾಗಲಿದೆ. ತಮ್ಮ ಸಮುದಾಯದ ನಾಯಕಿ ಮಾತ್ರವಲ್ಲ, ಹೋರಾಟದಲ್ಲಿಯೂ ದಿಟ್ಟೆ, ಧೀರೆ. ಅಂದುಕೊಂಡಂತೆ ಮಧುಬಾಲ ಅವರ ಪಾತ್ರ ಮೂಡಿಬಂದಿದ್ದು, ನೋಡುಗರಿಗೆ ಇಷ್ಟವಾಗಲಿದೆ ಎಂಬುದು ಚಿತ್ರತಂಡ ಭರವಸೆಯ ಮಾತುಗಳು.

VISTARANEWS.COM


on

Madhubala Embodies Pannaga A Pillar of Strength in 'Kannappa'
Koo

ಬೆಂಗಳೂರು: ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ಟಾಲಿವುಡ್‌ನ ಕಣ್ಣಪ್ಪ (Kannappa Movie) ಸಿನಿಮಾ. ಈಗಾಗಲೇ ಸರಣಿ ಸ್ಟಾರ್‌ ಕಲಾವಿದರನ್ನೇ ಒಳಗೊಂಡಿರುವ ಕಣ್ಣಪ್ಪ ಸಿನಿಮಾ ಸದ್ಯ ಶೂಟಿಂಗ್‌ ಜತೆಗೆ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನೂ ಮುಂದುವರಿಸಿದೆ. ಜತೆಗೆ ಈಗಾಗಲೇ ಬಿಡುಗಡೆ ಆಗಿರುವ ಟೀಸರ್‌ ಸಹ ನೋಡುಗರ ಹುಬ್ಬೇರಿಸಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾದಲ್ಲಿ ವಿಷ್ಣು ಮಂಚು ಕಣ್ಣಪ್ಪನಾಗಿ ತಮ್ಮ ಖದರ್‌ ತೋರಿಸಲಿದ್ದಾರೆ. ಇದೀಗ ಇದೇ ಸಿನಿಮಾದಲ್ಲಿ ನಟಿಸುತ್ತಿರುವ ನಟಿ ಮಧುಬಾಲ ಅವರ ಲುಕ್‌ ಅನಾವರಣ ಮಾಡಲಾಗಿದೆ.

ನಟಿ ಮಧುಬಾಲಾ ಕಣ್ಣಪ್ಪ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬುದು ಈ ಹಿಂದೆಯೇ ಗೊತ್ತಿದ್ದ ವಿಚಾರ. ಆದರೆ, ಅವರ ಪಾತ್ರ ಹೇಗಿರಲಿದೆ ಎಂಬ ಬಗ್ಗೆ ಈ ವರೆಗೂ ಚಿತ್ರತಂಡ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಮಧುಬಾಲ ಅವರ ಪಾತ್ರ ಪರಿಚಯದ ಫಸ್ಟ್‌ ಲುಕ್‌ ರಿಲೀಸ್‌ ಆಗಿದೆ. ಕಣ್ಣಪ್ಪ ಚಿತ್ರದಲ್ಲಿ ಪನ್ನಗ ಹೆಸರಿನ ಖಡಕ್‌ ಪಾತ್ರದಲ್ಲಿ ಮಧುಬಾಲ ಮಿಂಚು ಹರಿಸಲಿದ್ದಾರೆ. ಕೈಯಲ್ಲಿ ಕತ್ತಿಹಿಡಿದು ಶತ್ರುಗಳ ಸಂಹಾರಕ್ಕೆ ನಿಂತಂತಿದೆ ಮಧು ಅವರ ಫಸ್ಟ್‌ ಲುಕ್‌.

ಬೇಡ ಕುಲದ ನಾಯಕಿಯಾಗಿ ಮಧು ಅವರ ಪಾತ್ರ ಕಣ್ಣಪ್ಪ ಚಿತ್ರದಲ್ಲಿ ಸಾಗಲಿದೆ. ತಮ್ಮ ಸಮುದಾಯದ ನಾಯಕಿ ಮಾತ್ರವಲ್ಲ, ಹೋರಾಟದಲ್ಲಿಯೂ ದಿಟ್ಟೆ, ಧೀರೆ. ಅಂದುಕೊಂಡಂತೆ ಮಧುಬಾಲ ಅವರ ಪಾತ್ರ ಮೂಡಿಬಂದಿದ್ದು, ನೋಡುಗರಿಗೆ ಇಷ್ಟವಾಗಲಿದೆ ಎಂಬುದು ಚಿತ್ರತಂಡ ಭರವಸೆಯ ಮಾತುಗಳು. ಇನ್ನು ಈಗಾಗಲೇ ಕಣ್ಣಪ್ಪ ಚಿತ್ರದ ಟೀಸರ್‌ ಜಾಗತಿಕ ಮಟ್ಟದಲ್ಲಿಯೂ ಕ್ರೇಜ್‌ ಸೃಷ್ಟಿಸಿದೆ. ಇತ್ತೀಚಿನ ಕಾನ್‌ ಸಿನಿಮೋತ್ಸವದಲ್ಲಿ ಈ ಚಿತ್ರದ ಟೀಸರ್‌ ಬಿಡುಗಡೆಯಾಗಿ, ಜಾಗತಿಕ ಪ್ರೇಕ್ಷಕರ ಗಮನ ಸೆಳೆದಿತ್ತು.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

ಕಣ್ಣಪ್ಪ ಸಿನಿಮಾ ಬರೀ ಇತಿಹಾಸವಲ್ಲ, ಇದು ಎರಡನೇ ಶತಮಾನದ ಚೋಳರ ಕಾಲದ ಕಥೆ ಎಂದು ಶಂಕರಾಚಾರ್ಯರು ಹೇಳಿದ್ದರು. 14 ನೇ ಶತಮಾನದಲ್ಲಿ ಕವಿ ಧೂರ್ಜಟಿ ಈ ಬಗ್ಗೆ ಬರೆದಿದ್ದಾರೆ. 18ನೇ ಶತಮಾನದಲ್ಲಿ ಬ್ರಿಟಿಷರೂ ಇಂಗ್ಲಿಷ್‌ನಲ್ಲಿ ಇದನ್ನು ಉಲ್ಲೇಖಿಸಿದ್ದಾರೆ. ಇದೆಲ್ಲವನ್ನು ಅಧ್ಯಯನ ನಡೆಸಿ ಈ ಸಿನಿಮಾ ಮಾಡಲಾಗಿದೆ ಎಂದು ಟೀಸರ್‌ ಬಿಡುಗಡೆ ಸಂದರ್ಭದಲ್ಲಿ ವಿಷ್ಣು ಮಂಚು ಹೇಳಿಕೊಂಡಿದ್ದರು. ಹಾಗಾಗಿಯೇ ಕುತೂಹಲ ದುಪ್ಪಟ್ಟಾಗಿದೆ.

ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್, ಶರತ್‌ಕುಮಾರ್, ಮಧುಬಾಲ, ಕಾಜಲ್‌ ಅಗರ್‌ವಾಲ್‌ ಸೇರಿ ಬಹು ತಾರಾಗಣವೇ ಇದೆ. ಮಗನ ಚಿತ್ರವನ್ನು ಸ್ವತಃ ತಂದೆ ಮೋಹನ್ ಬಾಬು ನಿರ್ಮಿಸುತ್ತಿರುವ ಈ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾರತೀಯ ಭಾಷೆಗಳಿಗೂ ಈ ಚಿತ್ರ ಡಬ್‌ ಆಗಿ ರಿಲೀಸ್‌ ಆಗಲಿದೆ. ಡಿಸೆಂಬರ್‌ನಲ್ಲಿ ಕಣ್ಣಪ್ಪ ಚಿತ್ರವನ್ನು ವಿಶ್ವದಾದ್ಯಂತ ಬಿಡುಗಡೆ ಮಾಡಲು ಪ್ಲಾನ್‌ ಮಾಡಿದೆ.

ಎವಿಎ ಎಂಟರ್‌ಟೈನ್‌ಮೆಂಟ್ಸ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಬ್ಯಾನರ್‌ಗಳಲ್ಲಿ ನೂರಾರು ಕೋಟಿ ಬಜೆಟ್‌ನಲ್ಲಿ ದೊಡ್ಡ ಕ್ಯಾನ್ವಾಸ್‌ನೊಂದಿಗೆ ಮೂಡಿಬರುತ್ತಿರುವ ಈ ಸಿನಿಮಾದ ಶೂಟಿಂಗ್‌ ಬಹುತೇಕ ಮುಗಿದಿದ್ದು, ವಿಎಫ್‌ಎಕ್ಸ್‌ ಕೆಲಸಕ್ಕೆ ಇಡೀ ತಂಡ ಹೆಚ್ಚಿನ ಶ್ರಮ ಹಾಕುತ್ತಿದೆ.

Continue Reading

ಟಾಲಿವುಡ್

Pushpa 2: ಪುಷ್ಪ 2 ಕ್ಲೈ ಮ್ಯಾಕ್ಸ್‌ ದೃಶ್ಯ ಲೀಕ್‌; ಕೋಪ ಹೊರ ಹಾಕಿದ ಅರ್ಜುನ್‌ ಫ್ಯಾನ್ಸ್‌!

Pushpa 2: ಸುಕುಮಾರ್ ಅವರು ‘ಪುಷ್ಪ 2’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಸೇರಿ ಅನೇಕರು ಸಿನಿಮಾದಲ್ಲಿ ಇದ್ದಾರೆ. ಈ ಚಿತ್ರದ ಶೂಟಿಂಗ್​ನಲ್ಲಿ ಫೋನ್ ಬಳಕೆ ನಿಷೇಧಿಸಲಾಗಿದೆ. ಆದಾಗ್ಯೂ ಕೆಲವರು ಮೊಬೈಲ್​ನ ಸೆಟ್​ ಒಳಗೆ ತೆಗೆದುಕೊಂಡು ಹೋಗಿದ್ದಾರೆ.

VISTARANEWS.COM


on

Pushpa 2 Allu Arjun climax leaked Fans urge producers to take action
Koo

ಬೆಂಗಳೂರು: ಸುಕುಮಾರ್ ಅವರ ಪುಷ್ಪ 2 ದಿ ರೂಲ್ (Pushpa 2 ) ಸಿನಿಮಾದಲ್ಲಿ , ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಫಹದ್ ಫಾಸಿಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ , ಡಿಸೆಂಬರ್‌ನಲ್ಲಿ ಸಿನಿಮಾ ಬಿಡುಗಡೆಯಾಗಲಿದೆ. ಇದೀಗ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣದ ವೇಳೆ ತೆಗೆದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದೀಗ ಸಿನಿಪ್ರಿಯರು ಲೀಕ್‌ ಆಗಿರುವ ವಿಡಿಯೊ ಕಂಡು ಈ ಬಗ್ಗೆ ಆಕ್ಷನ್‌ ತೆಗೆದುಕೊಳ್ಳಿ ಎಂದು ಕಮೆಂಟ್‌ ಮಾಡಿದ್ದಾರೆ.

ಸೆಟ್‌ಗಳಲ್ಲಿ ತೆಗೆದ ವಿಡಿಯೊವನ್ನು ಹಂಚಿಕೊಂಡಿರುವ ವ್ಯಕ್ತಿ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ, “ಅಲ್ಲು ಅರ್ಜುನ್ ಕ್ಲೈಮ್ಯಾಕ್ಸ್ ದೃಶ್ಯ.” ಎಂದು ಬರೆದುಕೊಂಡಿದ್ದಾರೆ, ಇದೀಗ ಈ ವಿಡಿಯೊ ಭಾರಿ ವೈರಲ್‌ ಆಗುತ್ತಿದೆ.
ಕೆಲವರು ಮೈತ್ರಿ ಮೂವಿ ಮೇಕರ್ಸ್‌ಗಳಿಗೆ ಕ್ರಮ ತೆಗೆದುಕೊಳ್ಳುವಂತೆ ಕೇಳಿದ್ದಾರೆ. ಒಬ್ಬರು ʻನೀವು ವೀಡಿಯೊವನ್ನು ಏಕೆ ಲೀಕ್ ಮಾಡುತ್ತಿದ್ದೀರಿʼಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ದಯವಿಟ್ಟು ವಿಡಿಯೊವನ್ನು ಡಿಲಿಟ್‌ ಮಅಡಿ ಎಂದು ಕಮೆಂಟ್‌ ಮಾಡಿದ್ದಾರೆ.

ಸುಕುಮಾರ್ ಅವರು ‘ಪುಷ್ಪ 2’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಡಾಲಿ ಧನಂಜಯ್ ಸೇರಿ ಅನೇಕರು ಸಿನಿಮಾದಲ್ಲಿ ಇದ್ದಾರೆ. ಈ ಚಿತ್ರದ ಶೂಟಿಂಗ್​ನಲ್ಲಿ ಫೋನ್ ಬಳಕೆ ನಿಷೇಧಿಸಲಾಗಿದೆ. ಆದಾಗ್ಯೂ ಕೆಲವರು ಮೊಬೈಲ್​ನ ಸೆಟ್​ ಒಳಗೆ ತೆಗೆದುಕೊಂಡು ಹೋಗಿದ್ದಾರೆ. ಕ್ಲೈಮ್ಯಾಕ್ಸ್ ಹಂತದ ಶೂಟಿಂಗ್​ನ ಕದ್ದು ಚಿತ್ರೀಕರಿಸಿದ್ದಾರೆ. ಸದ್ಯ ವಿಡಿಯೋ ಲೀಕ್ ಆಗಿದೆ.

ಇದನ್ನೂ ಓದಿ: Kannada New Movie: `ನೈಸ್ ರೋಡ್’ ಸಿನಿಮಾಗೆ ನೋಟಿಸ್ ; ಅಷ್ಟಕ್ಕೂ ಆಗಿದ್ದೇನು?

2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಎರಡನೇ ಹಾಡು ಕೂಡ ಔಟ್‌ ಆಗಿದ್ದು, ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.

Continue Reading

ಟಾಲಿವುಡ್

Sri Reddy: ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ; ಅರೆಬೆತ್ತಲೆ ಪ್ರತಿಭಟನೆ ಮೂಲಕ ಸದ್ದು ಮಾಡಿದ ನಟಿ ಶ್ರೀರೆಡ್ಡಿ ಪೋಸ್ಟ್‌ ವೈರಲ್‌!

Sri Reddy: ತೆಲುಗು ಫಿಲಂ ಚೇಂಬರ್ ಮುಂದೆ ನಟಿ ಶ್ರೀರೆಡ್ಡಿ ಟಾಪ್ ಲೆಸ್ ಪ್ರತಿಭಟನೆ ನಡೆಸಿ ದೇಶಾದ್ಯಂತ ಸಂಚಲನ ಮೂಡಿಸಿತ್ತು. . ನಟಿ ಶ್ರೀರೆಡ್ಡಿ ತೆಲುಗು ಸಿನಿರಂಗದ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಅಲ್ಲದೆ, ಅವಕಾಶ ನೀಡುವುದಾಗಿ ಲೈಂಗಿಕವಾಗಿ ತಮ್ಮನ್ನು ಬಳಸಿಕೊಂಡಿದ್ದಾರೆ ಎಂದು ದೂರಿದ್ದರು.

VISTARANEWS.COM


on

sri reddy me too fame telugu actress post goes viral
Koo

ಬೆಂಗಳೂರು: ಕೆಲವು ವರ್ಷಗಳ ಹಿಂದೆ ಟಾಲಿವುಡ್‌ನಲ್ಲಿ ʻಮಿಟೂʼ ಹಾಗೂ ಕ್ಯಾಸ್ಟಿಂಗ್ ಕೌಚ್ ಅವ್ಯವಹಾರಗಳ ಬಗ್ಗೆ ಧ್ವನಿ ಎತ್ತಿದ ನಟಿಯರಲ್ಲಿ ಶ್ರೀ ರೆಡ್ಡಿ (Sri Reddy) ಕೂಡ ಒಬ್ಬರು. ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿಯ ಮುಂದೆ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ್ದರು. ತೆಲುಗು ಫಿಲಂ ಚೇಂಬರ್ ಮುಂದೆ ನಟಿ ಶ್ರೀರೆಡ್ಡಿ ಟಾಪ್ ಲೆಸ್ ಪ್ರತಿಭಟನೆ ನಡೆಸಿ ದೇಶಾದ್ಯಂತ ಸಂಚಲನ ಮೂಡಿಸಿತ್ತು. ನಟಿ ಶ್ರೀರೆಡ್ಡಿ ತೆಲುಗು ಸಿನಿರಂಗದ ಮೇಲೆ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಅಲ್ಲದೆ, ಅವಕಾಶ ನೀಡುವುದಾಗಿ ಲೈಂಗಿಕವಾಗಿ ತಮ್ಮನ್ನು ಬಳಸಿಕೊಂಡಿದ್ದಾರೆ ಎಂದು ದೂರಿದ್ದರು. ಅಲ್ಲಿಂದ ನಟಿಯ ಹೆಸರು ಮುನ್ನಲೆಗೆ ಬಂದಿತ್ತು. ಇದೀಗ ನಟಿ ಶ್ರೀರೆಡ್ಡಿ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆತ್ಮಹತ್ಯೆಗೆ ಯೋಚಿಸುತ್ತಿದ್ದೇನೆ ಎಂದು ನಟಿ ಹೇಳಿಕೊಂಡಿದ್ದಾರೆ.

ನಟಿ ಶ್ರೀರೆಡ್ಡಿ ಟಾಲಿವುಡ್‌ನ ಹಲವು ಮಂದಿಯನ್ನು ಟಾರ್ಗೆಟ್ ಮಾಡಿದ್ದರು. ತೆಲುಗಿನ ಕೆಲವು ನಟಿಯರ ಮೇಲೂ ಗಂಭೀರ ಆರೋಪಗಳನ್ನು ಮಾಡಿದ್ದರು. ಅದರಲ್ಲಿ ಪವನ್‌ ಕಲ್ಯಾಣ್‌ ಅವರನ್ನು ನಟಿ ಬಿಟ್ಟಿಲ್ಲ. ಮಾತ್ರವಲ್ಲ ಪರಭಾಷೆ ನಟಿಯರಿಗೆ ಹಲವು ಅವಕಾಶಗಳನ್ನು ನೀಡುತ್ತಿದ್ದು, ತೆಲುಗು ನಟಿಯರಿಗೇ ಹೆಚ್ಚು ಅವಕಾಶ ಸಿಕ್ಕಿಲ್ಲ ಎಂದೂ ಟೀಕೆ ಕೂಡ ಮಾಡಿದ್ದರು. ಮೀಟೂ ಅಭಿಯಾನದ ವೇಲೆ ಹಲವು ರಾಜಕೀಯ, ಸಿನಿಮಾ ವ್ಯಕ್ತಿಗಳ ಬಗ್ಗೆ ಮಾಡಿದ ಪೋಸ್ಟ್‌ ಭಾರಿ ಸಂಚಲನ ಸೃಷ್ಟಿಸಿತ್ತು.

ಬಳಿಕ ಶ್ರೀರೆಡ್ಡಿ ಏನೇ ಹೇಳಿಕೆ ಕೊಟ್ಟರು ಜನರು ಆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಈ ಕಾರಣಕ್ಕೆ ಶ್ರೀರೆಡ್ಡಿ ತನ್ನದೊಂದು ಯೂಟ್ಯೂಬ್ ಚಾನೆಲ್ ತೆರೆದಿದ್ದರು ಅದರಲ್ಲಿ ಬೇರೆ ಬೇರೆ ವಿಷಯಗಳ ಬಗ್ಗೆ ವಿಡಿಯೋ ಮಾಡುತ್ತಿದ್ದರು. ಅದರಲ್ಲೂ ವೈಸಿಪಿ ನಾಯಕ ವೈಎಸ್ ಜಗನ್ ದೊಡ್ಡ ಅಭಿಮಾನಿಯಾಗಿದ್ದ ಶ್ರೀ ರೆಡ್ಡಿ ಅವರನ್ನು ಬೆಂಬಲಿಸಿ ವಿಡಿಯೋ ಮಾಡುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ವೈಸಿಪಿ ಪಕ್ಷದ ಪರವಾಗಿ ಹೆಚ್ಚು ವಿಡಿಯೋಗಳನ್ನು ಮಾಡಿ ಸುದ್ದಿಯಲ್ಲಿ ಇದ್ದರು.ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂದು ಶ್ರೀರೆಡ್ಡಿ ನಂಬಿದ್ದರು. ಆದರೆ, ಪರಿಸ್ಥಿತಿ ಬದಲಾಗಿತ್ತು. ಜಗನ್ ಮೋಹನ್ ರೆಡ್ಡಿ ಚುನಾವಣೆಯಲ್ಲಿ ಸೋತಿದ್ದರು. ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾದರೆ, ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿದ್ದರು.ಇದೀಗ ನಟಿ ಈ ಬಗ್ಗೆ ಭಾರಿ ಟ್ರೋಲ್‌ ಆಗುತ್ತಿದ್ದಾರೆ.

ಹಳೆಯ ವಿಡಿಯೊಳನ್ನು ಇಟ್ಟುಕೊಂಡು ನಟಿಯನ್ನು ಟ್ರೋಲ್‌ ಮಾಡಲಾಗುತ್ತಿದೆ. ಶ್ರೀರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳುವಂತೆ ತೆಲುಗುದೇಶಂ ಪಕ್ಷದ ಮುಖಂಡರು ಪೊಲೀಸರಿಗೆ ದೂರು ನೀಡಿದ್ದಾರೆ. ಇದರಿಂದಾಗಿ ಮನನೊಂದ ನಟಿ ಮಾನಸಿಕವಾಗಿ ನೊಂದಿದ್ದು, ಆತ್ಮಹತ್ಯೆಗೆ ಯೋಚಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇನ್ನು ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. ಈಗ ಹೇಳುತ್ತಿರುವ ಮಾತುಗಳು ಸಿಲ್ಲಿ ಎನಿಸಬಹುದು. ಆದರೆ, ನಾನು ಸಾಯಲು ಬಯಸುತ್ತೇನೆ ಎಂದು ಶ್ರೀರೆಡ್ಡಿ ಬರೆದುಕೊಂಡಿದ್ದಾರೆ.

ಶ್ರೀರೆಡ್ಡಿಗೆ ಚಲನಚಿತ್ರ ಕಲಾವಿದರ ಸಂಘ ನಿಷೇಧ ಹೇರಿತ್ತು. ಏಪ್ರಿಲ್ 2018 ರಲ್ಲಿ ಶ್ರೀ ರೆಡ್ಡಿ ಫಿಲಂ ಚೇಂಬರ್ ಮುಂದೆ ಬೆತ್ತಲೆಯಾಗಿ ಪ್ರದರ್ಶನ ನೀಡಿದ್ದರು. ಇದು ರಾಷ್ಟ್ರವ್ಯಾಪಿ ಸುದ್ದಿಯಾಯಿತು. ಶ್ರೀರೆಡ್ಡಿ ಲೈಂಗಿಕ ಕಿರುಕುಳ ಮತ್ತು ತೆಲುಗು ಹುಡುಗಿಯರಿಗೆ ಅವಕಾಶ ನೀಡದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದರು.


Continue Reading
Advertisement
Whatsapp Shutdown
ತಂತ್ರಜ್ಞಾನ4 mins ago

Alternative to Whatsapp: ವಾಟ್ಸಾಪ್ ಸ್ಥಗಿತಗೊಂಡರೆ ಏನ್‌ ಮಾಡೋದು? ಇಲ್ಲಿದೆ ಪರ್ಯಾಯ ಆ್ಯಪ್‌ಗಳ ಪಟ್ಟಿ

Kerala Floods
ದೇಶ52 mins ago

Kerala Floods: ಕೇರಳದಲ್ಲಿ ಪ್ರವಾಹ; ಪ್ರಾಣವನ್ನೇ ಒತ್ತೆ ಇಟ್ಟು ಗರ್ಭಿಣಿ ಪತ್ನಿಯನ್ನು ಆಸ್ಪತ್ರೆಗೆ ಕರೆದೊಯ್ದ ಪತಿ, Video ಇದೆ

Paris Olympics 2024
ಪ್ರಮುಖ ಸುದ್ದಿ54 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ವಿವಾದ; ಮಹಿಳೆ ವಿರುದ್ಧ ಸ್ಪರ್ಧಿಸಲು ಬಾಕ್ಸಿಂಗ್​ ಕಣಕ್ಕೆ ಇಳಿದ ಪುರುಷ!

vyasana mukta dinacharane programme in hosapete
ವಿಜಯನಗರ1 hour ago

Vijayanagara News: ಹೊಸಪೇಟೆಯಲ್ಲಿ ವ್ಯಸನ ಮುಕ್ತ ದಿನಾಚರಣೆ; ಜನ ಜಾಗೃತಿ

utthana vaarshika katha spardhe the last date for submission of the story is october 10
ಬೆಂಗಳೂರು1 hour ago

Utthana Katha Spardhe 2024: ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆ; ಕಥೆ ತಲುಪಿಸಲು ಅ.10 ಕೊನೆಯ ದಿನ

World Breastfeeding Week
ಆರೋಗ್ಯ1 hour ago

World Breastfeeding Week: ವಿಶ್ವ ಸ್ತನ್ಯಪಾನ ಸಪ್ತಾಹ; ಹಾಲುಣಿಸಿದರೆ ಮಗುವಿಗೆ ಮಾತ್ರವಲ್ಲ, ತಾಯಿಗೂ ಲಾಭ!

Saree Fashion
ಫ್ಯಾಷನ್2 hours ago

Saree Fashion: ಕಂಟೆಂಪರರಿ ಪ್ರಿಂಟೆಡ್‌ ವಿನ್ಯಾಸದಲ್ಲೂ ಬಂತು ಆರ್ಗನ್ಜಾ ಸೀರೆ!

kotak bank smart watch
ವಾಣಿಜ್ಯ2 hours ago

kotak bank smart watch: ಮೊಬೈಲ್‌ ಬೇಕಿಲ್ಲ, ವಾಚ್‌ನಲ್ಲೇ ಆನ್‌ಲೈನ್‌ ಪೇಮೆಂಟ್‌! ಬಂದಿದೆ ಕೋಟಕ್-ಜಿಓಕ್ಯೂಐಐ ಸ್ಮಾರ್ಟ್ ವಾಚ್!

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024 : ಭಾರತದವರೇ ಆದ ಎಚ್​ಎಸ್​ ಪ್ರಣಯ್​ ಸೋಲಿಸಿ ಕ್ವಾರ್ಟರ್​​ ಫೈನಲ್ಸ್​ಗೇರಿದ ಲಕ್ಷ್ಯ ಸೇನ್​

Wayanad Landslide
ದೇಶ2 hours ago

Wayanad Landslide: ವಯನಾಡು ಸ್ಥಿತಿ ನೋಡಿ ತಂದೆ ಸಾವು ನೆನಪಾಯ್ತು ಎಂದ ರಾಹುಲ್‌ ಗಾಂಧಿ; ಸಾವಿನ ಸಂಖ್ಯೆ 300ರ ಸನಿಹ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ8 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ9 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ9 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌