Site icon Vistara News

Mahesh Babu : ಮಹೇಶ್​ ಬಾಬು 28ನೇ ಚಿತ್ರದ ಮಾಸ್‌ ಲುಕ್‌ ಪೋಸ್ಟರ್‌ ಔಟ್‌!

Mahesh Babu poster of SSMB28

ಬೆಂಗಳೂರು: ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu ) ತಂದೆ ಸೂಪರ್​ ಸ್ಟಾರ್ ಕೃಷ್ಣ ಅವರ ಜನುಮದಿನ ಪ್ರಯುಕ್ತ ತಮ್ಮ 28ನೇ ಚಿತ್ರದ ಫಸ್ಟ್ ಲುಕ್ ಪೋಸ್ಟರ್‌ ಅನಾವರಣಗೊಳಸಿದ್ದಾರೆ. ಈ ಹಿಂದೆಯೇ ಮಹೇಶ್​ ಬಾಬು ಅವರು 28ನೇ ಚಿತ್ರದ ಟೈಟಲ್ ಹಾಗೂ ಫಸ್ಟ್‌ ಲುಕ್‌ ಅನ್ನು ತಂದೆಯ ಜನುಮದಿನದಂದೇ ಅನಾವರಣಗೊಳಿಸಲಾಗುವುದು ಎಂದು ಹೇಳಿಕೊಂಡಿದ್ದರು. ಮೇ 31ರಂದು ಕೃಷ್ಣ ಅವರ ಜನುಮದಿನದ ಅಂಗವಾಗಿ ಅವರ ಹಳೇ ಸಿನಿಮಾ ಮರು ಬಿಡುಗಡೆ ಆಗಲಿದೆ. ‘ಮೋಸಗಾಳ್ಳಕು ಮೋಸಗಾಳ್ಳು’ ಸಿನಿಮಾ ರೀ-ರಿಲೀಸ್​ ಆಗುತ್ತಿದ್ದು, ಅದರ ಜತೆ ಮಹೇಶ್​ ಬಾಬು ಅವರ 28ನೇ ಚಿತ್ರದ ಟೈಟಲ್​ ಅನಾವರಣ ಆಗಲಿದೆ.

ಮಹೇಶ್​ ಬಾಬು ರಗಡ್‌ ಲುಕ್‌, ತಲೆಗೆ ಬಟ್ಟೆ ಕಟ್ಟಿಕೊಂಡು ಪೋಸ್​ ನೀಡಿದ್ದಾರೆ. ಈ ಗೆಟಪ್​ ಮೂಲಕ ಅವರ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ ಮಹೇಶ್‌ ಬಾಬು. ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ. ʻಮಹರ್ಷಿʼ ಸಿನಿಮಾ ನಂತರ ಮತ್ತೆ ಇಬ್ಬರೂ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ತಾತ್ಕಾಲಿಕವಾಗಿ SSMB28 ಎಂದು ಹೆಸರಿಡಲಾಗಿದೆ.

ಈ ಹಿಂದೆ ʻಅತಡುʼ ಮತ್ತು ʻಖಲೇಜಾʼದಂತಹ ಬ್ಲಾಕ್‌ಬಸ್ಟರ್ ಚಿತ್ರಗಳಲ್ಲಿ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಒಟ್ಟಿಗೆ ಕೆಲಸ ಮಾಡಿದ್ದರು. ನಟಿ ಶ್ರೀಲೀಲಾ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಎಸ್ ಥಮನ್ ಸಂಗೀತ ಸಂಯೋಜಿಸಿದ್ದಾರೆ. ಈ ಸಿನಿಮಾದಲ್ಲಿ ಜಗಪತಿ ಬಾಬು ಪ್ರಮುಖ ಪಾತ್ರ ನಿಭಾಯಿಸಲಿದ್ದಾರೆ ಎಂದು ವರದಿಯಾಗಿದೆ. 2024ರ ಜನವರಿ 13ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ‘ಹಾರಿಕಾ ಆ್ಯಂಡ್​ ಹಾಸಿನಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ಅದ್ಧೂರಿಯಾಗಿ ನಿರ್ಮಾಣ ಆಗುತ್ತಿದೆ. ಎಸ್​. ರಾಧಾಕೃಷ್ಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ: ಮಹೇಶ್‌ ಬಾಬು ತಂದೆ ನಟ ಕೃಷ್ಣ ಹೃದಯಸ್ತಂಭನದಿಂದ ನಿಧನ

ಮಹೇಶ್‌ ಬಾಬು ಟ್ವೀಟ್

ಎಸ್ಎಸ್ ರಾಜಮೌಳಿ ಸಿನಿಮಾದಲ್ಲಿ ಮಹೇಶ್‌ ಬಾಬು ಮ್ಯಾನರಿಸಂ ಬದಲು!

ಇದರ ನಂತರ, ಮಹೇಶ್ ಬಾಬು RRR ಚಲನಚಿತ್ರ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರ ಜತೆ ಸಿನಿಮಾ ಮಾಡಲಿದ್ದಾರೆ. ಚಿತ್ರಕ್ಕೆ ತಾತ್ಕಾಲಿಕವಾಗಿ SSMB29 ಎಂದು ಹೆಸರಿಡಲಾಗಿದೆ.

ರಾಜಮೌಳಿ ಸಿನಿಮಾಗೆ ಮಹೇಶ್‌ ಬಾಬು ಅವರ ಲುಕ್‌ ಮತ್ತು ಮ್ಯಾನರಿಸಂ ಬದಲಾಗುತ್ತಿದೆ ಎನ್ನಲಾಗುತ್ತಿದೆ. ಈಗಾಗಲೇ ಈ ಸಿನಿಮಾದ ಸ್ಕ್ರಿಪ್ಟ್‌ ಭರದಿಂದ ಸಾಗಿದ್ದು, ಡೈನಾಮಿಕ್ ಜೋಡಿ ತೆರೆ ಮೇಲೆ ಬರುವುದನ್ನು ಸಿನಿಪ್ರಿಯರು ಕಾಯುತ್ತಿದ್ದಾರೆ. ರಾಜಮೌಳಿ ಜತೆಗಿನ ಈ ಚಿತ್ರ ಮಹೇಶ್‌ ಬಾಬು 29ನೇ ಸಿನಿಮಾ ಆಗಿದೆ. ತಾತ್ಕಾಲಿಕವಾಗಿ SSMB29 ಹೆಸರು ನೀಡಲಾಗಿದೆ. ಮತ್ತು ಈ ಬಾರಿ ಈ ಸಿನಿಮಾದಲ್ಲಿ ಆರ್‌ಆರ್‌ಆರ್‌ಗಿಂತ ಹೆಚ್ಚು ವಿಎಫ್‌ಎಕ್ಸ್‌ ಬಳಸಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Mahesh Babu: ನಿರ್ದೇಶಕ ತ್ರಿವಿಕ್ರಮ್ ನಡೆಗೆ ಬೇಸರಗೊಂಡ್ರಾ ಮಹೇಶ್‌ ಬಾಬು?

ರಾಜಮೌಳಿ, ಕೆ.ಎಲ್‌. ನಾರಾಯಣ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಒಂದು ವಿಶಿಷ್ಟ ತಂಡವನ್ನು ರಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಒಟ್ಟಾರೆ ರಾಜಮೌಳಿ -ಮಹೇಶ್ ಬಾಬು ಕಾಂಬಿನೇಷನ್ ಚಿತ್ರದಲ್ಲಿ ಚಿತ್ರೀಕರಣಕ್ಕೆ ಕಾಡಿನಲ್ಲಿ ಸೆಟ್ಟೇರಲಿದೆ ಎನ್ನಲಾಗುತ್ತಿದೆ. ಹೆಚ್ಚಾಗಿ ರಾಜಮೌಳಿ ಅರಣ್ಯದಲ್ಲೇ ಹೆಚ್ಚು ಚಿತ್ರೀಕರಣ ಮಾಡುತ್ತಾರೆ. ಇದರಿಂದಾಗಿ ಜನರಿಗೆ ಇನ್ನೂ ಕ್ರೇಜ್‌ ಹೆಚ್ಚಾಗಿದೆ.

Exit mobile version