Mahesh Babu film SSMB 28 titled Reveal Mahesh Babu: ಮಹೇಶ್‌ ಬಾಬು ಹೊಸ ಸಿನಿಮಾ ಟೈಟಲ್‌ ರಿವೀಲ್‌; ಸಖತ್‌ ಅಬ್ಬಬ್ಬಾ ಏನ್‌ ʻಖಾರʼ ಅಂದ್ರು ಫ್ಯಾನ್ಸ್‌! - Vistara News

South Cinema

Mahesh Babu: ಮಹೇಶ್‌ ಬಾಬು ಹೊಸ ಸಿನಿಮಾ ಟೈಟಲ್‌ ರಿವೀಲ್‌; ಸಖತ್‌ ಅಬ್ಬಬ್ಬಾ ಏನ್‌ ʻಖಾರʼ ಅಂದ್ರು ಫ್ಯಾನ್ಸ್‌!

Mahesh Babu: ಟಾಲಿವುಡ್‌ ಪ್ರಿನ್ಸ್‌ ಮಹೇಶ್‌ ಬಾಬು ಅವರ ನೂತನ ಸಿನಿಮಾ ಹೆಸರು ಕೊನೆಗೂ ರಿವೀಲ್‌ ಆಗಿದೆ. ಕೆಂಪು ಬಣ್ಣದ ಚೌಕವುಳ್ಳ ಶರ್ಟ್ ಧರಿಸಿ ಹಣೆಗೆ ಕೆಂಪು ಪಟ್ಟಿ ಕಟ್ಟಿಕೊಂಡು ಬೀಡಿ ಸೇದುತ್ತಿರುವ ಫಸ್ಟ್‌ಲುಕ್‌ ಬಿಡುಗಡೆಗೊಂಡಿದ್ದು, ಫ್ಯಾನ್ಸ್‌ ಫುಲ್‌ ಖುಷ್‌ ಆಗಿದ್ದಾರೆ.

VISTARANEWS.COM


on

Mahesh Babu film SSMB 28 titled
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu ) ತಂದೆ ಸೂಪರ್​ ಸ್ಟಾರ್ ಕೃಷ್ಣ ಅವರ ಜನುಮದಿನ ಪ್ರಯುಕ್ತ ತಮ್ಮ 28ನೇ ಚಿತ್ರದ ಫಸ್ಟ್ ಲುಕ್ ಪೋಸ್ಟರ್‌ ಹಾಗೂ ಟೈಟಲ್‌ ಅನ್ನು ಅನಾವರಣಗೊಳಿಸಿದ್ದಾರೆ. ಪೋಸ್ಟರ್‌ ನೋಡುವಾಗಲೇ ಮಹೇಶ್‌ ಬಾಬು ಫ್ಯಾನ್ಸ್‌ ಸಖತ್‌ ಖಾರವಾಗಿದೆ ಎಂದು ಪ್ರತಿಕ್ರಿಯಿಸಿದ್ದರು. ಇದೀಗ ಲುಕ್‌ಗೆ ತಕ್ಕಂತೆ ಸಿನಿಮಾಗೂ ಖಡಕ್‌ ಹೆಸರನ್ನೇ ಇಡಲಾಗಿದೆ. ‘ಗುಂಟೂರು ಖಾರಂ’ (Guntur Kaaram) ಎಂದು ಖಾರವಾದ ಟೈಟಲ್‌ ಅನ್ನೇ ಇಡಲಾಗಿದೆ. ಇಷ್ಟು ದಿನ ಎಸ್ಎಸ್​ಎಂಬಿ28 ಎಂದು ಕರೆಯಲಾಗುತ್ತಿದ್ದ ಈ ಸಿನಿಮಾಕ್ಕೆ ಇನ್ನು ಮುಂದೆ ಗುಂಟೂರು ಖಾರಂ ಎಂದು ಹೆಸರು.

ಫಸ್ಟ್‌ಲುಕ್‌ ಪೋಸ್ಟರ್‌ನಲ್ಲಿ ಮಹೇಶ್‌ ಬಾಬು ಕೆಂಪು ಬಣ್ಣದ ಚೌಕವುಳ್ಳ ಶರ್ಟ್ ಧರಿಸಿ ಹಣೆಗೆ ಕೆಂಪು ಪಟ್ಟಿ ಕಟ್ಟಿಕೊಂಡು ಬೀಡಿ ಸೇದುತ್ತಿದ್ದಾರೆ. ಇದರಲ್ಲಿ ಸಿನಿಮಾದ ಹೆಸರನ್ನೂ ರಿವೀಲ್‌ ಮಾಡಲಾಗಿದೆ. ಸಿನಿಮಾದ ಹೊಸ ಪೋಸ್ಟರ್ ಅನ್ನು ಮಹೇಶ್ ಬಾಬು, ಅವರ ಪತ್ನಿ ನಮ್ರತಾ ಶಿರೋಡ್ಕರ್ ಸೇರಿದಂತೆ ಹಲವರು ಹಂಚಿಕೊಂಡಿದ್ದಾರೆ.

ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ. ʻಮಹರ್ಷಿʼ ಸಿನಿಮಾ ನಂತರ ಮತ್ತೆ ಇಬ್ಬರೂ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ನಟಿ ಶ್ರೀಲೀಲಾ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ʻಅತಡುʼ ಮತ್ತು ʻಖಲೇಜಾʼದಂತಹ ಬ್ಲಾಕ್‌ಬಸ್ಟರ್ ಚಿತ್ರಗಳಲ್ಲಿ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಒಟ್ಟಿಗೆ ಕೆಲಸ ಮಾಡಿದ್ದರು. ಈ ಸಿನಿಮಾದಲ್ಲಿ ಜಗಪತಿ ಬಾಬು ಪ್ರಮುಖ ಪಾತ್ರ ನಿಭಾಯಿಸಲಿದ್ದಾರೆ ಎಂದು ವರದಿಯಾಗಿದೆ. ಎಸ್. ಥಮನ್ ಸಂಗೀತ ಸಂಯೋಜನೆ ಇದೆ.

2024ರ ಜನವರಿ 13ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ‘ಹಾರಿಕಾ ಆ್ಯಂಡ್​ ಹಾಸಿನಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ಅದ್ಧೂರಿಯಾಗಿ ನಿರ್ಮಾಣ ಆಗುತ್ತಿದೆ. ಎಸ್​. ರಾಧಾಕೃಷ್ಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.

ಇದನ್ನೂ ಓದಿ: Mahesh Babu : ಮಹೇಶ್​ ಬಾಬು 28ನೇ ಚಿತ್ರದ ಮಾಸ್‌ ಲುಕ್‌ ಪೋಸ್ಟರ್‌ ಔಟ್‌!

ಎಸ್ಎಸ್ ರಾಜಮೌಳಿ ಸಿನಿಮಾದಲ್ಲಿ ಮಹೇಶ್‌ ಬಾಬು ಮ್ಯಾನರಿಸಂ ಬದಲು!

ಇದರ ನಂತರ, ಮಹೇಶ್ ಬಾಬು RRR ಚಲನಚಿತ್ರ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರ ಜತೆ ಸಿನಿಮಾ ಮಾಡಲಿದ್ದಾರೆ. ಚಿತ್ರಕ್ಕೆ ತಾತ್ಕಾಲಿಕವಾಗಿ SSMB29 ಎಂದು ಹೆಸರಿಡಲಾಗಿದೆ.

ರಾಜಮೌಳಿ ಸಿನಿಮಾಗೆ ಮಹೇಶ್‌ ಬಾಬು ಅವರ ಲುಕ್‌ ಮತ್ತು ಮ್ಯಾನರಿಸಂ ಬದಲಾಗುತ್ತಿದೆ ಎನ್ನಲಾಗುತ್ತಿದೆ. ಈಗಾಗಲೇ ಈ ಸಿನಿಮಾದ ಸ್ಕ್ರಿಪ್ಟ್‌ ಭರದಿಂದ ಸಾಗಿದ್ದು, ಡೈನಾಮಿಕ್ ಜೋಡಿ ತೆರೆ ಮೇಲೆ ಬರುವುದನ್ನು ಸಿನಿಪ್ರಿಯರು ಕಾಯುತ್ತಿದ್ದಾರೆ. ರಾಜಮೌಳಿ ಜತೆಗಿನ ಈ ಚಿತ್ರ ಮಹೇಶ್‌ ಬಾಬು 29ನೇ ಸಿನಿಮಾ ಆಗಿದೆ. ತಾತ್ಕಾಲಿಕವಾಗಿ SSMB29 ಹೆಸರು ನೀಡಲಾಗಿದೆ. ಮತ್ತು ಈ ಬಾರಿ ಈ ಸಿನಿಮಾದಲ್ಲಿ ಆರ್‌ಆರ್‌ಆರ್‌ಗಿಂತ ಹೆಚ್ಚು ವಿಎಫ್‌ಎಕ್ಸ್‌ ಬಳಸಲಿದ್ದಾರೆ ಎನ್ನಲಾಗುತ್ತಿದೆ.

ರಾಜಮೌಳಿ, ಕೆ.ಎಲ್‌. ನಾರಾಯಣ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಇದಕ್ಕಾಗಿ ವಿಶೇಷ ತಂಡವನ್ನು ರಚನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಒಟ್ಟಾರೆ ರಾಜಮೌಳಿ -ಮಹೇಶ್ ಬಾಬು ಕಾಂಬಿನೇಷನ್ ಚಿತ್ರದಲ್ಲಿ ಚಿತ್ರೀಕರಣಕ್ಕೆ ಕಾಡಿನಲ್ಲಿ ಸೆಟ್ಟೇರಲಿದೆ ಎನ್ನಲಾಗುತ್ತಿದೆ. ಹೆಚ್ಚಾಗಿ ರಾಜಮೌಳಿ ಅರಣ್ಯದಲ್ಲೇ ಹೆಚ್ಚು ಚಿತ್ರೀಕರಣ ಮಾಡುತ್ತಾರೆ. ಇದರಿಂದಾಗಿ ಜನರಿಗೆ ಇನ್ನೂ ಕ್ರೇಜ್‌ ಹೆಚ್ಚಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Harshika Poonacha: ಹರ್ಷಿಕಾ ಪೂಣಚ್ಚ-ಭುವನ್‌ ಮೇಲೆ ಅಟ್ಯಾಕ್! ಕನ್ನಡ ಮಾತನಾಡಿದ್ದೇ ತಪ್ಪಾಯ್ತಾ?

Harshika Poonacha: ಸ್ಯಾಂಡಲ್‌ವುಡ್‌ನ ಕ್ಯೂಟ್‌ ಜೋಡಿ ಹರ್ಷಿಕಾ ಪೂಣಚ್ಚ (Harshika poonacha) ಮತ್ತು ಭುವನ್‌ ಪೊನ್ನಪ್ಪ (Bhuvan Ponnappa) ಅವರ ಮದುವೆ 2023ರ ಆಗಸ್ಟ್‌ 24ರಂದು ವಿರಾಜಪೇಟೆಯಲ್ಲಿ ನಡೆದಿತ್ತು. ಪಿ.ಯು.ಸಿ ಚಿತ್ರದ ಮೂಲಕ ನಾಯಕಿಯಾಗಿ ಹೊರಹೊಮ್ಮಿದವರು ಹರ್ಷಿಕಾ. ಮೊದಲ ಬಾರಿಗೆ ಪುನೀತ್ ಅಭಿನಯದ ಜಾಕಿ ಚಿತ್ರದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿದ ಬಳಿಕ ಅವರು ಹಿಂದಿರುಗಿ ನೋಡಿಲ್ಲ.

VISTARANEWS.COM


on

Harshika Poonacha Bhuvan! for speak Kannada
Koo

ಬೆಂಗಳೂರು: ಬೆಂಗಳೂರಿನಲ್ಲಿ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಹಾಗೂ ಪತಿ ನಟ ಭುವನ್ ಮೇಲೆ ಹಲ್ಲೆ ನಡೆದಿದೆ. ಕಾರ್ ಪಾರ್ಕಿಂಗ್ ವಿಚಾರಕ್ಕೆ ಕಿರಿಕ್ ತೆಗೆದು ಚಿನ್ನದ ಸರ ಕದಿಯಲು ಆರೋಪಿಗಳು ಯತ್ನಿಸಿದ್ದಾರೆ. ಫ್ರೆಜರ್ ಟೌನ್ ಪುಲಕೇಶಿ ನಗರದಲ್ಲಿ ಘಟನೆ ನಡೆದಿದೆ. ಚಿನ್ನದ ಸರ ಕದಿಯಲು ಯತ್ನಿಸಿದ್ದಲ್ಲದೇ ಕನ್ನಡದಲ್ಲಿ ಮಾತನಾಡಬೇಡಿ ಎಂದು ಆರೋಪಿಗಳು ದರ್ಪ ತೋರಿದ್ದಾರೆ. ಹರ್ಷಿಕಾ ಪೂಣಚ್ಚ ಹಲ್ಲೆ ನಡೆದ ವಿಡಿಯೊವನ್ನು ಚಿತ್ರೀಕರಿಸಿ, ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ನೀಡಿದರೂ ಏನೂ ಪ್ರಯೋಜನವಾಗಿಲ್ಲ ಎಂದು ನಟಿ ಹೇಳಿರುವುದಾಗಿ ವರದಿಯಾಗಿದೆ. ಸದ್ಯ ನಟಿ ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಹರ್ಷಿಕಾ ಪೋಸ್ಟ್‌ನಲ್ಲಿ ʻʻಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ. ನಮಸ್ಕಾರ, ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ. ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯ ವಾಗ ಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ”.
“ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ “ಕರಾಮಾ” ಎಂಬ ರೆಸ್ಟೊರೆಂಟ್‌ನಲ್ಲಿ ಸಂಜೆ ಕುಟುಂಬದೊಂದಿಗೆ ಊಟ ಮಾಡಲು ತೆರಳಿದ್ದೆ. ಭೋಜನವನ್ನು ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್‌ನಿಂದ ನಮ್ಮ ವಾಹನವನ್ನು ಸ್ವೀಕರಿಸಿ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು , ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮ್ಮನ್ನು ಮುಟ್ಟಬಹುದು ಎಂದು ವಾದಿಸಲು ಪ್ರಾರಂಭಿಸಿದರು. ನನ್ನ ಪತಿ “ಇನ್ನು ವಾಹನ ಮೂವ್ ಮಾಡಿಲ್ವಲ್ಲ ಸೈಡು ಬಿಡಿ” ಎಂದು ಹೇಳಿದರು ಏಕೆಂದರೆ ಅವರು ನಾವು ವಾಹನವನ್ನು ಸ್ವಲ್ಪ ಮುಂದಕ್ಕೆ ಸರಿಸಿದೆವು, ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು, ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದರು. ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು ಮತ್ತು ಹೆಚ್ಚು ಪ್ರತಿಕ್ರಿಯಿಸಲಿಲ್ಲ. ನನಗೆ ಆಶ್ಚರ್ಯವಾಯಿತು ಏಕೆಂದರೆ ಅವರು ಸಾಮಾನ್ಯವಾಗಿ ತುಂಬಾ ಸಿಟ್ಟು ಸ್ವಭಾವದವರು. 2 – 3 ನಿಮಿಷಗಳಲ್ಲಿ ಅದೇ ಗ್ಯಾಂಗ್‌ನ 20 – 30 ಸದಸ್ಯರ ಗುಂಪು ಜಮಾಯಿಸಿತು ಮತ್ತು ಅವರಲ್ಲಿ 2 ಜನರು ನನ್ನ ಗಂಡನ ಚಿನ್ನದ ಸರವನ್ನು ಕಿತ್ತು, ಅದನ್ನು ಬಹಳ ಕೌಶಲ್ಯದಿಂದ ತಮ್ಮ ಕಡೆಗೆ ಎಳೆಯಲು ಪ್ರಯತ್ನಿಸಿದರು. ಅಷ್ಟೊತ್ತಿಗಾಗಲೇ ಇಡೀ ತಂಡವು ಚಿನ್ನದ ಸರ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೈಗೆ ಸಿಗದೆ ರೊಚ್ಚಿಗೆದ್ದು ವಾಹನಕ್ಕೆ ಹಾನಿ ಮಾಡಿ ನಮಗೆ ಅಥವಾ ಯಾರಿಗೂ ಅರ್ಥವಾಗದ ವಿಷಯಗಳನ್ನು ಹೇಳಿ ನಮ್ಮನ್ನು ದೈಹಿಕವಾಗಿ ನಿಂದಿಸಲು ಪ್ರಯತ್ನಿಸಿದರು. ನಮ್ಮ ವಾಹನದಲ್ಲಿ ಮಹಿಳೆಯರು ಮತ್ತು ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರೀಯಿಸಲಿಲ್ಲ. ಅಲ್ಲದೆ ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ನೀವು ನಮ್ಮ ಪ್ರದೇಶಕ್ಕೆ ಬಂದಿದ್ದೀರಾ, ನಿಮಗೆ ಬೇಕಾದ ಭಾಷೆಗಳಲ್ಲಿ ಮಾತನಾಡುವುದನ್ನು ನಿಲ್ಲಿಸಿ, ಯೇ ಲೋಕಲ್ ಕನ್ನಡ್ ವಾಲಾ ಹೇ (ಈ ವ್ಯಕ್ತಿಗಳು ಸ್ಥಳೀಯ ಕನ್ನಡ ಜನರು) ಎನ್ನುತ್ತಿದ್ದರು. ನನ್ನ ಗಂಡ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ ಅದು ಅವರನ್ನು ಹೆಚ್ಚು ಕೆರಳಿಸಿತು. ಅವರಲ್ಲಿ ಹೆಚ್ಚಿನವರು ಹಿಂದಿ, ಉರ್ದು ಅಥವಾ ಇಂಗ್ಲಿಷ್ ಮತ್ತು ಕೆಲವರು ಮುರಿದ ಕನ್ನಡದಲ್ಲಿ ಮಾತನಾಡುತ್ತಿದ್ದರುʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Harshika Poonacha: ಹರ್ಷಿಕಾ-ಭುವನ್‌ ಮದುವೆ ಸಂಭ್ರಮದ ಫೋಟೊಗಳು

‘ನಾವು ಸಮೀಪದಲ್ಲಿ ಗಸ್ತು ಪೊಲೀಸ್ ವಾಹನವನ್ನು ಕಂಡು ಘಟನೆಯನ್ನು ಹತ್ತಿರದ ಪೊಲೀಸ್ ಠಾಣೆಯ ASI ಉಮೇಶ್ ಅವರಿಗೆ ವಿವರಿಸಿದೆವು. ಅವರು ನಮಗೆ ಸಹಾಯ ಮಾಡಲು ಆಸಕ್ತಿ ತೋರಲಿಲ್ಲ. ಇಲಾಖೆಯ ಮೇಲಧಿಕಾರಿಗಳ ಜತೆ ಮಾತನಾಡಬೇಕು ಎಂದ ಅವರು, ಬಂದು ಏನಾಯಿತು ಎಂದು ತಿಳಿದುಕೊಳ್ಳುವ ಸೌಜನ್ಯವೂ ಇಲ್ಲ. ಕೇವಲ 2 ಕಟ್ಟಡಗಳ ಮುಂದಿರುವ ರೆಸ್ಟೊರೆಂಟ್‌ನ ಮುಂದೆ ಮೂಸಂಬಿ ಜ್ಯೂಸ್ ಕುಡಿಯುತ್ತ ಕಾರ್​ನಲ್ಲಿ ಅವರು ಕುಳಿತಿದ್ದರು’ ಎಂದು ಆರೋಪಿಸಿದ್ದಾರೆ ಹರ್ಷಿಕಾ.

ʻʻಈ ಘಟನೆಯ ನಂತರ ನಾನು ಮಾನಸಿಕವಾಗಿ ಸಂಪೂರ್ಣ ಆಘಾತಕ್ಕೊಳಗಾಗಿದ್ದೇನೆ. ನಾನು ಹುಟ್ಟಿ ಬೆಳೆದ ನಗರದಲ್ಲಿ ಹೊರಗೆ ಹೋಗಲು ನನಗೆ ಇನ್ನೂ ಭಯವಾಗುತ್ತಿದೆ. ನನಗೆ ಜೀವನದಲ್ಲಿ ಎಲ್ಲವನ್ನು ಕೊಟ್ಟ ನಗರದಲ್ಲಿ ಇಂತಹ ಅನುಭವ ಆಗಿದ್ದು ಇದೇ ಮೊದಲು. ಇದನ್ನು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಗಮನಕ್ಕೆ ತರಲು ಮತ್ತು ಭವಿಷ್ಯದಲ್ಲಿ ಯಾವುದೇ ಮಹಿಳೆ ಅಥವಾ ಕುಟುಂಬವು ಬೆಂಗಳೂರಿನಲ್ಲಿ ಇಂತಹ ಅಗ್ನಿಪರೀಕ್ಷೆಗಳಿಗೆ ಒಳಗಾಗಬಾರದು ಎಂದು ನಾನು ಇದನ್ನು ಪೋಸ್ಟ್ ಮಾಡುತ್ತಿದ್ದೇನೆʼʼಎಂದು ಬರೆದುಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ನ ಕ್ಯೂಟ್‌ ಜೋಡಿ ಹರ್ಷಿಕಾ ಪೂಣಚ್ಚ (Harshika poonacha) ಮತ್ತು ಭುವನ್‌ ಪೊನ್ನಪ್ಪ (Bhuvan Ponnappa) ಅವರ ಮದುವೆ 2023ರ ಆಗಸ್ಟ್‌ 24ರಂದು ವಿರಾಜಪೇಟೆಯಲ್ಲಿ ನಡೆದಿತ್ತು. ಪಿ.ಯು.ಸಿ ಚಿತ್ರದ ಮೂಲಕ ನಾಯಕಿಯಾಗಿ ಹೊರಹೊಮ್ಮಿದವರು ಹರ್ಷಿಕಾ. ಮೊದಲ ಬಾರಿಗೆ ಪುನೀತ್ ಅಭಿನಯದ ಜಾಕಿ ಚಿತ್ರದಲ್ಲಿ ಅಭಿನಯಿಸುವ ಅವಕಾಶ ಸಿಕ್ಕಿದ ಬಳಿಕ ಅವರು ಹಿಂದಿರುಗಿ ನೋಡಿಲ್ಲ.

ಈ ಚಿತ್ರದ ನಟನೆಗೆ ಹರ್ಷಿಕಾಗೆ ಬೆಸ್ಟ್ ಸೈಡ್ ಆಕ್ಟರ್ ಎಂಬ ಪ್ರಶಸ್ತಿ ದೊರೆತಿತ್ತು. ಭಲೇ ಜೋಡಿ’, ‘ಉಪೇಂದ್ರ ಮತ್ತೆ ಬಾ’, ‘ಚಾರ್‌ಮಿನಾರ್’, ‘ಕಾಸಿನಸರ’ ಹೀಗೆ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಭುವನ್‌ ಅವರು ಕುಚ್ಚಿಕು ಕುಚ್ಚಿಕು, ರಾಂಧವ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

Continue Reading

ಸಿನಿಮಾ

Pruthvi Ambaar: ʻದಿಯಾʼ ಹೀರೊಗೆ `ರಥಾವರʼ ಡೈರೆಕ್ಟರ್ ಆ್ಯಕ್ಷನ್ ಕಟ್!

Pruthvi Ambaar: ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಜತೆ ಚಂದ್ರಶೇಖರ್ ಬಂಡಿಯಪ್ಪ ಕೈ ಜೋಡಿಸಿದ್ದಾರೆ. ಕಲ್ಟ್ ಕಥೆಗಳನ್ನು ಹೇಳಿ ಸಕ್ಸೆಸ್‌ ಕಂಡಿರುವ ಅವರೀಗ ಫ್ಯಾಮಿಲಿ ಕತೆಯತ್ತ ವಾಲಿದ್ದಾರೆ. ಹೌದು ಈ ಬಾರಿ ಚಂದ್ರಶೇಖರ್ ಬಂಡಿಯಪ್ಪ ಫ್ಯಾಮಿಲಿ ಎಂಟರ್‌ಟೈನರ್‌ ಸಿನಿಮಾ ಮಾಡುತ್ತಿದ್ದಾರೆ. ಸಹಜ ನಟನೆಯಿಂದಲೇ ಹೆಸರು ಮಾಡಿದವರು ಪೃಥ್ವಿ.. ದಿಯಾ ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ಕರಾವಳಿ ಕುವರ ಪರಭಾಷೆಯಲ್ಲಿಯೂ ಮಿಂಚುತ್ತಿದ್ದು, ಇದೀಗ ರಥಾವರ ಡೈರೆಕ್ಟರ್ ಜೊತೆ ಸಿನಿಮಾ ಮಾಡುತ್ತಿರುವುದು ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ.

VISTARANEWS.COM


on

Pruthvi Ambaar new movie direction by Rathaavara Director
Koo

ಬೆಂಗಳೂರು: `ರಥಾವರʼ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ದ (Pruthvi Ambaar) ಸಿನಿಮಾ. 2015ರಲ್ಲಿ ತೆರೆಗೆ ಬಂದಿದ್ದ ಈ ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಹೊಸ ಅವತಾರದಲ್ಲಿ ಘರ್ಜಿಸಿದ್ದರು. ʻರಥಾವರʼ ಸಿನಿಮಾ ಮೂಲಕ ವಿಶಿಷ್ಟ ಕಥೆ ಹೇಳಿ ನಿರ್ದೇಶನದಲ್ಲಿಯೂ (Rathaavara Director) ಗೆದ್ದವರು ಚಂದ್ರಶೇಖರ್ ಬಂಡಿಯಪ್ಪ. ಆನೆ ಪಟಾಕಿ ಮೂಲಕ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಟ್ಟಿದ್ದ ಅವರು ಆ ಬಳಿಕ ʻರಥಾವರʼ, ʻತಾರಕಾಸುರʼ ಸಿನಿಮಾ ಮಾಡಿ ಗೆದ್ದರು. ಈ ಚಿತ್ರಗಳ ಸಕ್ಸೆಸ್‌ ಬಳಿಕ ಬಾಲಿವುಡ್‌ಗೆ ಹಾರಿರುವ ಚಂದ್ರಶೇಖರ್ ಬಂಡಿಯಪ್ಪ ರೆಡ್ ಕಾಲರ್ ಎಂಬ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸ ಮುಗಿಸಿರುವ ಅವರು ಗುರುದತ್ ಗಾಣಿಗ ನಿರ್ದೇಶನದ ಕರಾವಳಿ ಚಿತ್ರಕ್ಕೂ ಕಥೆ ಬರೆದಿದ್ದಾರೆ. ಇದೀಗ ಚಂದ್ರಶೇಖರ್ ಬಂಡಿಯಪ್ಪ ಹೊಸ ಕಥೆ ಹೇಳುವುದಕ್ಕೆ ನಿಮ್ಮ ಮುಂದೆ ಬರುತ್ತಿದ್ದಾರೆ.

ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ಜತೆ ಚಂದ್ರಶೇಖರ್ ಬಂಡಿಯಪ್ಪ ಕೈ ಜೋಡಿಸಿದ್ದಾರೆ. ಕಲ್ಟ್ ಕಥೆಗಳನ್ನು ಹೇಳಿ ಸಕ್ಸೆಸ್‌ ಕಂಡಿರುವ ಅವರೀಗ ಫ್ಯಾಮಿಲಿ ಕತೆಯತ್ತ ವಾಲಿದ್ದಾರೆ. ಹೌದು ಈ ಬಾರಿ ಚಂದ್ರಶೇಖರ್ ಬಂಡಿಯಪ್ಪ ಫ್ಯಾಮಿಲಿ ಎಂಟರ್‌ಟೈನರ್‌ ಸಿನಿಮಾ ಮಾಡುತ್ತಿದ್ದಾರೆ. ಸಹಜ ನಟನೆಯಿಂದಲೇ ಹೆಸರು ಮಾಡಿದವರು ಪೃಥ್ವಿ.. ದಿಯಾ ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ಕರಾವಳಿ ಕುವರ ಪರಭಾಷೆಯಲ್ಲಿಯೂ ಮಿಂಚುತ್ತಿದ್ದು, ಇದೀಗ ರಥಾವರ ಡೈರೆಕ್ಟರ್ ಜೊತೆ ಸಿನಿಮಾ ಮಾಡುತ್ತಿರುವುದು ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ.

ಇದನ್ನೂ ಓದಿ: Pruthvi Ambaar: ಪ್ರೇಕ್ಷಕರು ಅಪ್ಪಿದ ‘ಫಾರ್ ರಿಜಿಸ್ಟ್ರೇಷನ್’ ಸಿನಿಮಾಗೆ 25 ದಿನದ ಸಂಭ್ರಮ!

ಚಂದ್ರಶೇಖರ್ ಬಂಡಿಯಪ್ಪ ಪ್ರತಿ ಸಿನಿಮಾದಲ್ಲಿಯೂ ಹೊಸ ಕಥೆಯೊಂದಿಗೆ ಬರ್ತಾರೆ. ಆನೆ ಪಟಾಕಿಯಲ್ಲಿ ಕಾಮಿಡಿ, ರಥಾವರದಲ್ಲಿ ಕಲ್ಟ್, ತಾರಕಾಸುರದಲ್ಲೊಂದು ಬಗೆ, ರೆಡ್ ಕಾಲರ್ ನಲ್ಲಿ ಕ್ರೈಮ್ ಥ್ರಿಲ್ಲರ್, ಕರಾವಳಿಯಲ್ಲಿ ಕರಾವಳಿ ಸೊಡಗನ್ನು ಕಟ್ಟಿಕೊಟ್ಟಿರುವ ಅವರು ಹೊಸ ಸಿನಿಮಾದಲ್ಲಿ ಯಾವ ರೀತಿ ಕಥೆಯನ್ನು ಹೇಳಿದ್ದಾರೆ ಎಂಬ ಕುತೂಹಲ ಕೆರಳಿಸಿದೆ.

ಪೃಥ್ವಿ-ಚಂದ್ರಶೇಖರ್ ಬಂಡಿಯಪ್ಪ ಜೋಡಿಯ ಸಿನಿಮಾವನ್ನು ವಿದ್ಯಾ ಶೇಖರ್ ಎಂಟರ್ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಉಳಿದ ತಾರಾಬಳಗ ಹಾಗೂ ತಾಂತ್ರಿಕ ಬಳಗವನ್ನು ಚಿತ್ರತಂಡದ ಒಂದೊಂದಾಗಿ ಮಾಹಿತಿ ನೀಡಲಿದೆ.

Continue Reading

ಸಿನಿಮಾ

Kantara Movie: ‘ಕಾಂತಾರ 2’ ಸಿನಿಮಾದಲ್ಲಿ ಇರಲಿದ್ದಾರಾ ಮೋಹನ್​ಲಾಲ್?

Kantara Movie:  ಲೆಜೆಂಡರಿ ಮೋಹನ್​ಲಾಲ್ ಅವರನ್ನು ಭೇಟಿ ಮಾಡಿದ್ದು ಖುಷಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದೆ. ಈ ಮೊದಲು ರಿಷಬ್ ಶೆಟ್ಟಿ ಅವರು ಮಲಯಾಳಂ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ರಿಷಬ್ ಅವರು ಒಟಿಟಿ ಪ್ಲೇಗೆ ಸ್ಪಷ್ಟನೆ ನೀಡಿದ್ದರು.

VISTARANEWS.COM


on

Kantara Movie Rishab Shetty And Pragathi Shetty Met Mohanlal
Koo

ಬೆಂಗಳೂರು: ʼಕಾಂತಾರʼ ಪ್ಯಾನ್‌ (Kantara Movie) ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತ್ತು. ಹೀಗಾಗಿ ಪ್ರೀಕ್ವೆಲ್ ಕೂಡ ಕನ್ನಡದ ಜತೆಗೆ ವಿವಿಧ ಭಾಷೆಗಳಲ್ಲಿ ತೆರೆಗೆ ಬರಲಿದೆ. ಕೆಲವು ದಿನಗಳ ಹಿಂದೆ ಹೊರ ಬಿದ್ದ ಫಸ್ಟ್‌ ಲುಕ್‌ ಪೋಸ್ಟರ್‌ ದೇಶದ ಗಮನ ಸೆಳೆದಿತ್ತು. ಇದನ್ನೂ ಹೊಂಬಾಳೆ ಫಿಲ್ಮ್ಸ್‌ ನಿರ್ಮಿಸಲಿದ್ದು, ಅಂದಾಜು 125 ಕೋಟಿ ರೂ. ಬಜೆಟ್‌ನಲ್ಲಿ ತಯಾರಾಗುತ್ತಿದೆ ಎನ್ನಲಾಗಿದೆ. ಈಗ ರಿಷಬ್ ಶೆಟ್ಟಿ (Rishab shetty) ಅವರು ಮಲಯಾಳಂನ ಖ್ಯಾತ ನಟ ಮೋಹನ್​ಲಾಲ್ (Mohan Lal) ಅವರನ್ನು ಭೇಟಿ ಮಾಡಿದ್ದಾರೆ. ‘ಕಾಂತಾರ 2’ ಸಿನಿಮಾದಲ್ಲಿ ಮೋಹನ್​ಲಾಲ್ ನಟಿಸಲಿದ್ದಾರಾ ಎಂಬ ಕುತೂಹಲ ಸಿನಿರಸಿಕರಲ್ಲಿ ಹೆಚ್ಚಾಗಿದೆ.

‘ಲೆಜೆಂಡರಿ ಮೋಹನ್​ಲಾಲ್ (Kantara Movie) ಅವರನ್ನು ಭೇಟಿ ಮಾಡಿದ್ದು ಖುಷಿ ಇದೆ’ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದೆ. ಈ ಮೊದಲು ರಿಷಬ್ ಶೆಟ್ಟಿ ಅವರು ಮಲಯಾಳಂ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ವರದಿ ಆಗಿತ್ತು. ಇದಕ್ಕೆ ರಿಷಬ್ ಅವರು ಒಟಿಟಿ ಪ್ಲೇಗೆ ಸ್ಪಷ್ಟನೆ ನೀಡಿದ್ದರು. ಮೊದಲ ಭಾಗದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ಮಿಂಚಿದ್ದರು. ರಿಷಬ್‌ ಜತೆಗೆ ಅವರ ಪಾತ್ರಕ್ಕೂ ಮೆಚ್ಚುಗೆ ಲಭ್ಯವಾಗಿತ್ತು. ‘ಕಾಂತಾರ: ಚಾಪ್ಟರ್ 1’ನಲ್ಲಿ ಸಪ್ತಮಿ ನಟಿಸುತ್ತಿಲ್ಲ ಎಂದು ನಟಿಯೇ ಅಧಿಕೃತ ಮಾಹಿತಿ ಹಂಚಿಕೊಂಡಿದ್ದರು. ಕಾಂತಾರʼ ಕಥೆ ನಡೆಯುವುದಕ್ಕೆ ಮುನ್ನ ಏನಾಗಿತ್ತು ಎನ್ನುವುದನ್ನು ರಿಷಬ್‌ ಶೆಟ್ಟಿ ಈ ಭಾಗದಲ್ಲಿ ವಿವರಿಸಲಿದ್ದಾರೆ. ಕ್ರಿ.ಶ. 301-400ರ ಕಾಲಘಟ್ಟದ ಕಥೆ ತೆರೆ ಮೇಲೆ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಿನಿಮಾ ಪಂಜುರ್ಲಿ ದೈವ ಮತ್ತು ಗುಳಿಗ ದೈವಗಳ ಮೂಲದ ಕಥೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Kantara Movie: ʻಕಾಂತಾರಾʼ ಪ್ರೀಕ್ವೆಲ್​ನಲ್ಲಿ ಸಪ್ತಮಿ ಗೌಡ ಇಲ್ಲ! ಆ ಪಾತ್ರಕ್ಕೆ ಬಂದವರು ಯಾರು?

‘ಕಾಂತಾರ ಒಂದು ದಂತಕಥೆʼ ಎಂದರೆ ಮೊದಲ ಭಾಗ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗಿತ್ತು. ಇದೀಗ ಪ್ರೀಕ್ವೆಲ್ ರೈಟ್ಸ್ ಕೂಡ ಅಮೇಜಾನ್ ಪ್ರೈಂ ವಿಡಿಯೋ ಪಾಲಾಗಿದೆ. ಕೆಲವು ಮೂಲಗಳ ಪ್ರಕಾರ ಚಿತ್ರದಲ್ಲಿ ಒಂದಕ್ಕಿಂತ ಹೆಚ್ಚು ನಾಯಕಿಯ ಪಾತ್ರ ಇರಲಿದೆ ಎನ್ನಲಾಗಿದೆ. ಇನ್ನು ಕೆಲವು ವರದಿಗಳು ನಾಯಕಿಯಾಗಿ ರುಕ್ಮಿಣಿ ವಸಂತ್‌ ಆಯ್ಕೆಯಾಗಿದ್ದಾರೆ ಎಂದಿವೆ. ಚಿತ್ರತಂಡ ಇನ್ನೂ ಈ ವಿಚಾರವನ್ನು ಅಧಿಕೃತವಾಗಿ ಘೋಷಿಸಿಲ್ಲ.

Continue Reading

ಸಿನಿಮಾ

Rishab Shetty: ರಿಷಬ್‌ ಮೀಟ್ಸ್‌ ಮೋಹನ್‌ಲಾಲ್‌; ʼಕಾಂತಾರʼ ಪ್ರೀಕ್ವೆಲ್​ನಲ್ಲಿ ಅಭಿನಯಿಸುತ್ತಾರಾ ಮಾಲಿವುಡ್‌ ಸೂಪರ್‌ ಸ್ಟಾರ್‌?

Rishab Shetty: ಕನ್ನಡ ಪ್ರೇಕ್ಷಕರು ಮಾತ್ರವಲ್ಲ ಇಡೀ ದೇಶದ ಚಿತ್ರ ಪ್ರೇಮಿಗಳು ಕಾತುರದಿಂದ ಕಾಯುವಂತೆ ಮಾಡಿದ ಚಿತ್ರ ʼಕಾಂತಾರ: ಚಾಪ್ಟರ್ 1’. ರಿಷಬ್‌ ಶೆಟ್ಟಿ ನಟಿಸುವ ಜತೆಗೆ ಆ್ಯಕ್ಷನ್‌ ಕಟ್‌ ಹೇಳಲಿರುವ ಈ ಚಿತ್ರದ ಶೂಟಿಂಗ್‌ ಇನ್ನೇನು ಆರಂಭವಾಗಲಿದೆ. ಕುಂದಾಪುರದ ಬಳಿ ಇದಕ್ಕಾಗಿ ಬೃಹತ್‌ ಸೆಟ್‌ ಹಾಕಲಾಗಿದೆ. ಈ ಮಧ್ಯೆ ಮಾಲಿವುಡ್‌ ಸೂಪರ್‌ ಸ್ಟಾರ್‌ ಮೋಹನ್‌ಲಾಲ್‌ ಅವರನ್ನು ರಿಷಬ್‌ ಶೆಟ್ಟಿ ಭೇಟಿಯಾಗಿದ್ದು ಕುತೂಹಲ ಮೂಡಿಸಿದೆ. ಅವರೂ ಈ ಚಿತ್ರದಲ್ಲಿ ನಟಿಸುತ್ತಾರಾ ಎನ್ನುವ ಅನುಮಾನ ಹುಟ್ಟು ಹಾಕಿದೆ.

VISTARANEWS.COM


on

Rishab Shetty
Koo

ಬೆಂಗಳೂರು: ಕನ್ನಡ ಪ್ರೇಕ್ಷಕರು ಮಾತ್ರವಲ್ಲ ಇಡೀ ದೇಶದ ಚಿತ್ರ ಪ್ರೇಮಿಗಳು ಕಾತುರದಿಂದ ಕಾಯುವಂತೆ ಮಾಡಿದ ಚಿತ್ರ ʼಕಾಂತಾರ: ಚಾಪ್ಟರ್ 1’ (Kantara: Chapter 1). 2022ರಲ್ಲಿ ತೆರೆಕಂಡು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಇನ್ನಿಲ್ಲದಂತೆ ಸದ್ದು ಮಾಡಿದ್ದ ʼಕಾಂತಾರʼ (Kantara) ಚಿತ್ರದ ಪ್ರೀಕ್ವೆಲ್‌ ಇದು. ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ʼಕಾಂತಾರʼ ಸಿನಿಮಾದಲ್ಲಿ ರಿಷಬ್‌ ಶೆಟ್ಟಿ (Rishab Shetty) ನಾಯಕನಾಗಿ ಮಿಂಚಿದ್ದರು. ಜತೆಗೆ ನಿರ್ದೇಶಕನಾಗಿಯೂ ಗಮನ ಸೆಳೆದಿದ್ದರು. ಹೀಗಾಗಿ ʼಕಾಂತಾರ: ಚಾಪ್ಟರ್ 1’ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಮೂಡಿದೆ. ಇದೀಗ ಚಿತ್ರತಂಡ ಶೂಟಿಂಗ್‌ಗಾಗಿ ಕುಂದಾಪುರದಲ್ಲಿ ಬೀಡು ಬಿಟ್ಟಿದೆ. ಈ ಮಧ್ಯೆ ರಿಷಬ್‌ ಶೆಟ್ಟಿ ಮಲಯಾಳಂ ಸೂಪರ್‌ ಸ್ಟಾರ್‌, ಬಹುಭಾಷಾ ನಟ, ರಾಷ್ಟ್ರೀಯ ಚಲನಚಿತ್ರ ಪುರಸ್ಕೃತ ಮೋಹನ್‌ಲಾಲ್‌ (Mohanlal) ಅವರನ್ನು ಭೇಟಿ ಮಾಡಿದ್ದಾರೆ. ಹೀಗಾಗಿ ಅವರೂ ಕಾಂತಾರ ಪ್ರೀಕ್ವೆಲ್‌ ಭಾಗವಾಗುತ್ತಿದ್ದಿರಾ ಎನ್ನುವ ಮಿಲಿಯನ್‌ ಡಾಲರ್‌ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.

ಕುಂದಾಪುರದಲ್ಲಿ ಮುಹೂರ್ತ ನಡೆಸಿದ್ದು ಬಿಟ್ಟರೆ ʼಕಾಂತಾರʼ ಚಿತ್ರತಂಡ ಬಳಿಕ ಹೆಚ್ಚಿನ ಮಾಹಿತಿ ಬಿಟ್ಟು ಕೊಟ್ಟಿಲ್ಲ. ಯಾರೆಲ್ಲ ಅಭಿನಯಿಸುತ್ತಾರೆ ಎನ್ನುವ ಬಗ್ಗೆಯೂ ಮಾಹಿತಿ ನೀಡಿಲ್ಲ. ವಿವಿಧ ಸಿನಿಮಾ ರಂಗದ ದಿಗ್ಗಜರು ಕಾಣಿಸಿಕೊಳ್ಳಲಿದ್ದಾರೆ ಎಂಬೆಲ್ಲ ಗಾಳಿಸುದ್ದಿ ಹರಿದಾಡುತ್ತಿದ್ದವು. ಹೀಗಾಗಿ ಮೋಹನ್‌ಲಾಲ್‌ ಭೇಟಿ ಮತ್ತಷ್ಟು ನಿರೀಕ್ಷೆ ಹುಟ್ಟು ಹಾಕಿದೆ.

ಮೋಹನ್‌ಲಾಲ್‌ ಅವರನ್ನು ರಿಷಬ್‌ ಭೇಟಿಯಾಗಿದ್ದೇಕೆ?

ಮೋಹನ್‌ಲಾಲ್‌ ಏಪ್ರಿಲ್‌ 17ರಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ ರಿಷಬ್‌ ಶೆಟ್ಟಿ ಮತ್ತು ಅವರ ಪತ್ನಿ ಪ್ರಗತಿ ಶೆಟ್ಟಿ ಮೋಹನ್‌ಲಾಲ್‌ ಅವರನ್ನು ಭೇಟಿಯಾಗಿದ್ದಾರೆ. ಈಗಾಗಲೇ ರಿಷಬ್‌ ಶೆಟ್ಟಿ ಕುಂದಾಪುರದಲ್ಲಿ ʼಕಾಂತಾರ: ಚಾಪ್ಟರ್‌ 1ʼಗಾಗಿ ಬೃಹತ್‌ ಸೆಟ್‌ ಹಾಕಿದ್ದಾರೆ. ಕೊಲ್ಲೂರು ಸಮೀಪವೇ ಸೆಟ್‌ ಹಾಕಲಾಗಿದೆ. ಹೀಗಾಗಿ ಮೋಹನ್‌ಲಾಲ್‌ ಅವರನ್ನು ಭೇಟಿಯಾಗಿದ್ದಾರೆ.

ವೈರಲ್‌

ಸದ್ಯ ರಿಷಬ್‌ ಶೆಟ್ಟಿ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಮೋಹನ್‌ಲಾಲ್‌ ಅವರನ್ನು ಭೇಟಿಯಾದ ಫೋಟೊವನ್ನು ಪೋಸ್ಟ್‌ ಮಾಡಿದ್ದು, ವೈರಲ್‌ ಆಗಿದೆ. ʼʼದಿಗ್ಗಜ ಕಲಾವಿದರಾದ ಮೋಹನ್‌ಲಾಲ್‌ ಅವರನ್ನು ಭೇಟಿಯಾಗಿದ್ದು ಅಪಾರ ಸಂತಸ ತಂದಿದೆʼʼ ಎಂದು ಅವರು ಬರೆದುಕೊಂಡಿದ್ದಾರೆ. ಈ ಫೋಟೊ ನೋಡ ಅನೇಕರು, ಇಬ್ಬರನ್ನು ಒಂದೇ ಚಿತ್ರದಲ್ಲಿ ನೋಡಲು ಬಯಸುವುದಾಗಿ ಕಮೆಂಟ್‌ ಮಾಡಿದ್ದಾರೆ. ರಿಷಬ್‌ ಅವರು ಮೋಹನ್‌ಲಾಲ್‌ಗೆ ಆ್ಯಕ್ಷನ್‌ ಕಟ್‌ ಹೇಳಬೇಕು ಎಂದು ಇನ್ನು ಹಲವರು ಆಗ್ರಹಿಸಿದ್ದಾರೆ. ಒಂದು ವೇಳೆ ಈ ಇಬ್ಬರು ತೆರೆ ಹಂಚಿಕೊಂಡರೆ ಅದ್ಭುತವೇ ಸೃಷ್ಟಿಯಾಗಲಿದೆ ಎಂದು ಕೆಲವರು ಹೇಳಿದ್ದಾರೆ. ಒಟ್ಟಿನಲ್ಲಿ ʼಕಾಂತಾರʼ ಪ್ರೀಕ್ವೆಲ್​ನಲ್ಲಿ ʼಕಂಪ್ಲೀಟ್‌ ಆ್ಯಕ್ಟರ್‌ʼ ಮೋಹನ್‌ಲಾಲ್‌ ನಟಿಸುತ್ತಾರಾ ಅಥವಾ ಇದು ಕೇವಲ ಸೌಜನ್ಯದ ಭೇಟಿಯಾ ಎನ್ನುವುದನ್ನು ತಿಳಿಯಲು ಇನ್ನಷ್ಟು ದಿನ ಕಾಯಲೇ ಬೇಕು.

ಸಪ್ತಮಿ ಗೌಡ ಇರುತ್ತಾರಾ?

ʼಕಾಂತಾರʼ ಸಿನಿಮಾದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ಮಿಂಚಿದ್ದರು. ರಿಷಬ್‌ ಜತೆಗೆ ಅವರ ಪಾತ್ರಕ್ಕೂ ಮೆಚ್ಚುಗೆ ಲಭ್ಯವಾಗಿತ್ತು. ಇದೀಗ ಚಾಪ್ಟರ್‌ 1ರಲ್ಲಿ ಅಭಿನಯಿಸಲಿದ್ದಾರಾ ಎನ್ನುವ ಪ್ರಶ್ನೆಗೆ ಅವರೇ ಉತ್ತರಿಸಿದ್ದಾರೆ. ʼ‘ಕಾಂತಾರ: ಚಾಪ್ಟರ್ 1’ನಲ್ಲಿ ನಾನು ನಟಿಸುತ್ತಿಲ್ಲ. ಈಗ ಆಗುತ್ತಿರುವುದು ಪ್ರೀಕ್ವೆಲ್‌. ಪಾತ್ರವೇ ಇಲ್ಲ ಎಂದಾಗ ನಟಿಸುವುದು ಹೇಗೆ? ಆ ಪಾತ್ರಕ್ಕೆ ಬೇರೆಯವರು ಬಂದಿದ್ದಾರೆ. ʻಕಾಂತಾರʼ ಸಿನಿಮಾ ರಿಲೀಸ್ ಆಗಿ ಎರಡು ವರ್ಷ ಕಳೆದರೂ ಈಗಲೂ ಅದರ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಪ್ರೀಕ್ವೆಲ್‌ ಕೂಡ ಚೆನ್ನಾಗಿ ಮೂಡಿ ಬರಲಿದೆʼʼ ಎಂದು ಅವರು ಹೇಳಿರುವುದಾಗಿ ವರದಿಯೊಂದು ತಿಳಿಸಿದೆ.

ಇದನ್ನೂ ಓದಿ; Kantara Movie: ʼಕಾಂತಾರ ಚಾಪ್ಟರ್‌ 1ʼ ಶೂಟಿಂಗ್‌ ಆರಂಭಕ್ಕೂ ಮುನ್ನ ಒಟಿಟಿ ಹಕ್ಕು ಭಾರೀ ಮೊತ್ತಕ್ಕೆ ಸೇಲ್‌; ಖರೀದಿಸಿದ್ದು ಯಾರು?

ʼಕಾಂತಾರʼ ಕಥೆ ನಡೆಯುವುದಕ್ಕೆ ಮುನ್ನ ಏನಾಗಿತ್ತು ಎನ್ನುವುದನ್ನು ರಿಷಬ್‌ ಶೆಟ್ಟಿ ಈ ಭಾಗದಲ್ಲಿ ವಿವರಿಸಲಿದ್ದಾರೆ. ಕ್ರಿ.ಶ. 301-400ರ ಕಾಲಘಟ್ಟದ ಕಥೆ ತೆರೆ ಮೇಲೆ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಿನಿಮಾ ಪಂಜುರ್ಲಿ ದೈವ ಮತ್ತು ಗುಳಿಗ ದೈವಗಳ ಮೂಲದ ಕಥೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ.

Continue Reading
Advertisement
summer trip
ಪ್ರವಾಸ5 mins ago

Summer Tour: ಹಚ್ಚ ಹಸುರಿನ ಪ್ರಶಾಂತ ನಗರ ಶಿಲ್ಲಾಂಗ್; ಬೇಸಿಗೆ ಪ್ರವಾಸಕ್ಕೆ ಸೂಕ್ತ

Viral Video
ವೈರಲ್ ನ್ಯೂಸ್8 mins ago

Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Harshika Poonacha Bhuvan! for speak Kannada
ಸ್ಯಾಂಡಲ್ ವುಡ್27 mins ago

Harshika Poonacha: ಹರ್ಷಿಕಾ ಪೂಣಚ್ಚ-ಭುವನ್‌ ಮೇಲೆ ಅಟ್ಯಾಕ್! ಕನ್ನಡ ಮಾತನಾಡಿದ್ದೇ ತಪ್ಪಾಯ್ತಾ?

murali sreeshankar
ಕ್ರೀಡೆ32 mins ago

Murali Sreeshankar: ಒಲಿಂಪಿಕ್ಸ್‌ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಟೂರ್ನಿಯಿಂದ ಹೊರಬಿದ್ದ ಪದಕ ಭರವಸೆಯ ಕ್ರೀಡಾಪಟು

virat kohli
ಕ್ರೀಡೆ1 hour ago

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ ನೋಡಲು ಮುಗಿಬಿದ್ದ ಅಭಿಮಾನಿಗಳು

Pruthvi Ambaar new movie direction by Rathaavara Director
ಸಿನಿಮಾ1 hour ago

Pruthvi Ambaar: ʻದಿಯಾʼ ಹೀರೊಗೆ `ರಥಾವರʼ ಡೈರೆಕ್ಟರ್ ಆ್ಯಕ್ಷನ್ ಕಟ್!

Kantara Movie Rishab Shetty And Pragathi Shetty Met Mohanlal
ಸಿನಿಮಾ2 hours ago

Kantara Movie: ‘ಕಾಂತಾರ 2’ ಸಿನಿಮಾದಲ್ಲಿ ಇರಲಿದ್ದಾರಾ ಮೋಹನ್​ಲಾಲ್?

Solution For Pimple
ಆರೋಗ್ಯ2 hours ago

Solution For Pimples: ಈ ಆಹಾರಗಳ ಸಹವಾಸ ಬಿಡಿ; ಮೊಡವೆಯನ್ನು ದೂರವಿಡಿ!

indian navy chief of naval staff dinesh tripathi
ಪ್ರಮುಖ ಸುದ್ದಿ2 hours ago

Indian Navy: ನೌಕಾಪಡೆ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ

IPL 2024
ಕ್ರೀಡೆ2 hours ago

IPL 2024: ಕೆಕೆಆರ್​ ವಿರುದ್ಧ ಹಸಿರು ಜೆರ್ಸಿಯಲ್ಲಿ ಆಡಲಿದೆ ಆರ್​ಸಿಬಿ; ಈ ಬಾರಿಯ ಉದ್ದೇಶವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ6 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌