ಆಶಿಕ್‌ ಬಾಬು ಹೊಸ ಚಿತ್ರ Neelavelicham ಫಸ್ಟ್‌ ಲುಕ್‌ ರಿಲೀಸ್‌, ಇದು ಬಶೀರ್‌ ಹಾರರ್‌! - Vistara News

ಮಾಲಿವುಡ್

ಆಶಿಕ್‌ ಬಾಬು ಹೊಸ ಚಿತ್ರ Neelavelicham ಫಸ್ಟ್‌ ಲುಕ್‌ ರಿಲೀಸ್‌, ಇದು ಬಶೀರ್‌ ಹಾರರ್‌!

ಸೂಕ್ಷ್ಮಸಂವೇದನೆಯ ಸಿನಿಮಾಗಳಿಗೆ ಹೆಸರಾದ ಆಶಿಕ್‌ ಬಾಬು ಮೊದಲ ಬಾರಿಗೆ ಹಾರರ್‌ ಸಿನಿಮಾ ಮಾಡುತ್ತಿದ್ದಾರೆ. ನೀಲವೆಳಿಚಂ ಚಿತ್ರದ ಫಸ್ಟ್‌ ಲುಕ್‌ ಬಿಡುಗಡೆಯಾಗಿದ್ದು ಭಾರಿ ಕುತೂಹಲ ಹುಟ್ಟು ಹಾಕಿದೆ. ವೈಕೋಂ ಮಹಮ್ಮದ್‌ ಬಶೀರ್‌ ಅವರ ಇದೇ ಹೆಸರಿನ ಕಥೆ ಈಗ ಸಿನಿಮಾ ಆಗುತ್ತಿದೆ.

VISTARANEWS.COM


on

Neelavelicham
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಾಲ್ಟ್‌ ಅಂಡ್ ಪೆಪ್ಪರ್‌, ವೈರಸ್‌ ಮೊದಲಾದ ಸೂಕ್ಷ್ಮ ಸಂವೇದಿ ಚಿತ್ರಗಳ ಮೂಲಕ ಮಲಯಾಳಂ ಚಿತ್ರಲೋಕವನ್ನು ಹೊಸ ಎತ್ತರಕ್ಕೇರಿಸಿದ ನಿರ್ದೇಶಕ ಆಶಿಕ್‌ ಬಾಬು ತಮ್ಮ ಹೊಸ ಚಿತ್ರ ʻನೀಲವೆಳಿಚಂʼನ (Neelavelicham) ಫಸ್ಟ್‌ ಲುಕ್‌ ಬಿಡುಗಡೆ ಮಾಡಿದ್ದಾರೆ. ಜತೆಗೆ ಚಿತ್ರದ ನಾಯಕನಾಗಿರುವ ಟೊವಿನೊ ಥಾಮಸ್‌ ಅವರು ತಮ್ಮ ಇನ್‌ಸ್ಟಾ ಪೋಸ್ಟ್‌ನಲ್ಲಿ ಚಿತ್ರ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಲಿದೆ ಎಂದಿದ್ದಾರೆ.

ಮಲಯಾಳಂನ ಹಿರಿಯ ಲೇಖಕ ವೈಕೋಮ್‌ ಮಹಮ್ಹದ್‌ ಬಶೀರ್‌ ಅವರ ಅತ್ಯಂತ ಪ್ರಸಿದ್ಧ ಕೃತಿ ʼನೀಲವೆಳಿಚಂʼ ಅನ್ನು ಅದೇ ಹೆಸರಿನಲ್ಲಿ ಚಿತ್ರವಾಗಿ ರೂಪಾಂತರಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ.

ಇದನ್ನೂ ಓದಿ | ನಿಗೂಢ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ರೂಪದರ್ಶಿ

ವೈಕಂ ಬಶೀರ್‌ ಅವರ ಹಲವು ಕಥೆಗಳು ಸಿನಿಮಾ ಆಗಿವೆ. ಅವರ ಸಣ್ಣ ಕಥೆಯನ್ನು ಆಧರಿಸಿ ʼಭಾರ್ಗವಿ ನಿಲಯಂʼ ಎಂಬ ಚಿತ್ರ ನಿರ್ಮಾಣವಾಗಿತ್ತು. ಪ್ರೇಮ್ ನಜೀರ್, ಮಧು ಮತ್ತು ವಿಜಯ ನಿರ್ಮಲಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. 1964ರಲ್ಲಿ ಬಿಡುಗಡೆಯಾದ ‘ಭಾರ್ಗವಿ ನಿಲಯಂ’ ಮೊದಲ ಮಲಯಾಳಂ ಹಾರರ್‌ ಚಿತ್ರ ಎಂದು ಪರಿಗಣಿಸಲಾಗಿತ್ತು. ನೀಲವೆಳಿಚಂ ಕೂಡ ಇಂಥದೊಂದು ಹಾರರ್‌ ಕಾನ್ಸೆಪ್ಟನ್ನು ಹೊಂದಿದೆ. ಕಾಡಿನ ನಡುವೆ ಇರುವ ಒಂಟಿ ಮನೆಯಲ್ಲಿ ಸಣ್ಣ ವಯಸ್ಸಿಗೇ ಪ್ರಾಣ ಕಳೆದುಕೊಂಡ ಹೆಣ್ಮಗಳ ಆತ್ಮ ಸುತ್ತಾಡುತ್ತದೆ ಎಂಬ ಸುದ್ದಿ ಹರಡಿರುತ್ತದೆ. ಪ್ರೀತಿ ಮಾಡಿ ಮೋಸ ಹೋದ ಹೆಣ್ಮಗಳು ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಕೆ ದೆವ್ವವಾಗಿದ್ದಾಳೆ ಎಂಬ ಕಥೆ ಎಲ್ಲರ ಬಾಯಲ್ಲೂ ಇತ್ತು. ಅಲ್ಲಿಗೆ ಯುವ ಕಥೆಗಾರ ಬಶೀರ್‌ ಬರುತ್ತಾರೆ. ಮುಂದೇನಾಗುತ್ತದೆ ಎನ್ನುವುದು ಕಥೆ ಮತ್ತು ಸಿನಿಮಾ! ಸಿನಿಮಾದ ಫಸ್ಟ್‌ ಲುಕ್‌ನಲ್ಲಿ ಒಬ್ಬ ವ್ಯಕ್ತಿ ಮನೆಯನ್ನು ಪ್ರವೇಶಿಸಿ ಕತ್ತಲೆ ತುಂಬಿದ ಪ್ರದೇಶದಲ್ಲಿ ಅತ್ತಿತ್ತ ನೋಡುತ್ತಿರುವ ದೃಶ್ಯವಿದೆ.

ʼನೀಲವೆಳಿಚಂʼ ಸಿನಿಮಾದಲ್ಲಿ ಪೃಥ್ವಿರಾಜ್‌ ಸುಕುಮಾರನ್‌, ಕುಂಚಾಕೊ ಬಾಬನ್‌ ಮತ್ತು ಸೌಬಿನ್‌ ಶಾಹಿರ್‌ ನಟಿಸುವುದಾಗಿ ಡಿಸೈಡ್‌ ಆಗಿತ್ತು. ಆದರೆ ಡೇಟ್‌ ಕ್ಲಾಶ್‌ ಆದ ಕಾರಣ, ಟೋವಿನೋ ಥಾಮಸ್‌, ರೋಷನ್‌ ಮ್ಯಾಥ್ಯೂ ಮತ್ತು ಶೈನ್‌ ಟಾಮ್‌ ಚಾಕೋ ಅವರು ನಟಿಸುತ್ತಿದ್ದಾರೆ.

ನಟಿ ರೀಮಾ ಕಲ್ಲಿಂಗಲ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ನಿರ್ದೇಶಕ ಆಶಿಕ್‌ ಅಬು ಅವರ ಮೊದಲ ಹಾರರ್‌ ಫಿಲ್ಮ್‌ ಆಗಿದ್ದು, ʼʼನೀಲವೆಳಿಚಂ” ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆಯನ್ನು ಹುಟ್ಟು ಹಾಕಿದೆ. ಚಿತ್ರ ಡಿಸೆಂಬರ್‌ ನಲ್ಲಿ ರಿಲೀಸ್‌ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಬರಹಗಾರ ಹೃಷಿಕೇಶ್ ಭಾಸ್ಕರನ್ ಚಿತ್ರಕಥೆಯನ್ನು ಬರೆದಿದ್ದಾರೆ.

ಇದನ್ನೂ ಓದಿ | Me Too ಆರೋಪ ಸುಳಿಯಲ್ಲಿ ಮಲಯಾಳಂ ನಟ ವಿಜಯ್‌ ಬಾಬು: ನಾನವನಲ್ಲ ಎಂದ ʼಶರಬತ್‌ ಶಮೀರ್‌ʼ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಾಲಿವುಡ್

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

Manjummel Boys: ʻಮಂಜುಮ್ಮೇಲ್ ಬಾಯ್ಸ್ʼ ಸುಮಾರು 5 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಚಿತ್ರದ ಗಳಿಕೆ ಬರೋಬ್ಬರಿ 200 ಕೋಟಿ ರೂ. ಗಳಿಕೆ ಕಂಡಿದೆ. ಥಿಯೇಟರ್‌ನಲ್ಲಿ ಪ್ರೇಕ್ಷಕರ ಗಮನ ಸೆಳೆದ ಈ ಚಿತ್ರ ಒಟಿಟಿ (OTT)ಗೆ ಬರಲು ಸಿದ್ಧವಾಗಿದೆ. ಡಿಸ್ನಿ ಪ್ಲಸ್ ಹಾಟ್​​ಸ್ಟಾರ್ ಮೂಲಕ ‘ಮಂಜುಮ್ಮೇಲ್ ಬಾಯ್ಸ್’ ವೀಕ್ಷಣೆಗೆ ಲಭ್ಯವಾಗಲಿದೆ. ಚಿದಂಬರಂ ನಿರ್ದೇಶನದ ಈ ಚಿತ್ರ ಫೆಬ್ರವರಿ 22ರಂದು ಥಿಯೇಟರ್​ನಲ್ಲಿ ಬಿಡುಗಡೆಯಾಗಿತ್ತು.

VISTARANEWS.COM


on

Manjummel Boys
Koo

ಬೆಂಗಳೂರು: ಕೆಲವು ಸಮಯದಿಂದ ಮಂಕಾಗಿದ್ದ ಮಲಯಾಳಂ ಚಿತ್ರರಂಗ (Mollywood) ಮತ್ತೆ ಸದ್ದು ಮಾಡತೊಡಗಿದೆ. ಬ್ಯಾಕ್‌ ಟು ಬ್ಯಾಕ್‌ ಮಲಯಾಳಂ ಚಿತ್ರಗಳು ಬಾಕ್ಸ್‌ ಆಫೀಸ್‌ನಲ್ಲಿ ಕಮಾಲ್‌ ಮಾಡುವ ಜತೆಗೆ ದೇಶದ ಗಮನ ಸೆಳೆಯುತ್ತಿವೆ. ಅದರಲ್ಲಿಯೂ ʻಮಂಜುಮ್ಮೆಲ್ ಬಾಯ್ಸ್ʼ (Manjummel Boys)ನ ಹವಾ ಜೋರಾಗಿಯೇ ಬೀಸುತ್ತಿದೆ. ಸುಮಾರು 5 ಕೋಟಿ ರೂ. ಬಜೆಟ್‌ನಲ್ಲಿ ತಯಾರಾದ ಈ ಚಿತ್ರದ ಗಳಿಕೆ ಬರೋಬ್ಬರಿ 200 ಕೋಟಿ ರೂ. ಗಳಿಕೆ ಕಂಡಿದೆ. ಥಿಯೇಟರ್‌ನಲ್ಲಿ ಪ್ರೇಕ್ಷಕರ ಗಮನ ಸೆಳೆದ ಈ ಚಿತ್ರ ಒಟಿಟಿ (OTT)ಗೆ ಬರಲು ಸಿದ್ಧವಾಗಿದೆ. ಮೇ 5 (ಭಾನುವಾರ) ಸಿನಿಮಾ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ.

ಥಿಯೇಟರ್‌ಗಳಲ್ಲಿ ʻಮಂಜುಮ್ಮೆಲ್ ಬಾಯ್ಸ್ʼನನ್ನು ನೋಡಲಾಗದವರು ಒಟಿಟಿಗೆ ಯಾವಾಗ ಬರುತ್ತದೆ ಎಂದು ಕುತೂಹಲದಿಂದ ಕಾಯುತ್ತಿದ್ದಾರೆ. ಅವರ ಕಾತುರಕ್ಕೆ ಕೊನೆಗೂ ತೆರೆ ಬಿದ್ದಿದೆ. ಡಿಸ್ನಿ ಪ್ಲಸ್ ಹಾಟ್​​ಸ್ಟಾರ್ ಮೂಲಕ ‘ಮಂಜುಮ್ಮೇಲ್ ಬಾಯ್ಸ್’ ವೀಕ್ಷಣೆಗೆ ಲಭ್ಯವಾಗಲಿದೆ. ಮೇ 3ರಂದು ‘ಮಂಜುಮ್ಮೇಲ್ ಬಾಯ್ಸ್’ ಒಟಿಟಿಯಲ್ಲಿ ಪ್ರಸಾರ ಕಾಣಲಿದೆ ಎಂದು ಹೇಳಲಾಗಿತ್ತು. ಆದರೆ, ಇದಕ್ಕೆ ಟ್ವಿಸ್ಟ್ ನೀಡಲಾಗಿದೆ. ಮೇ 5 (ಭಾನುವಾರ) ಸಿನಿಮಾ ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ.

ಇದನ್ನೂ ಓದಿ: Manjummel Boys: ಕನ್ನಡದಲ್ಲೂ ಬರಲಿದೆ ʻಮಂಜುಮ್ಮೆಲ್ ಬಾಯ್ಸ್ʼ? ಒಟಿಟಿಗೆ ಯಾವಾಗ?

ಚಿದಂಬರಂ ನಿರ್ದೇಶನದ ಈ ಚಿತ್ರ ಫೆಬ್ರವರಿ 22ರಂದು ಥಿಯೇಟರ್​ನಲ್ಲಿ ಬಿಡುಗಡೆಯಾಗಿತ್ತು. ಅಂದಿನಿಂದ ಇದು ಸುಮಾರು 200 ಕೋಟಿ ರೂ. ಕಲೆಕ್ಷನ್‌ ಮಾಡಿದ್ದು, ಈ ಮೂಲಕ ಅತ್ಯಧಿಕ ಗಳಿಕೆ ಕಂಡ ಮಲಯಾಳಂ ಚಿತ್ರ ಎನ್ನುವ ದಾಖಲೆ ಬರೆದಿದೆ. ಇದು ಚಿದಂಬರಂ ಅವರ ಎರಡನೇ ಸಿನಿಮಾ. 2021ರಲ್ಲಿ ಇವರು ಆ್ಯಕ್ಷನ್‌ ಕಟ್‌ ಹೇಳಿದ್ದ ʼಜಾನ್‌.ಇ.ಮಾನ್‌ʼ ಚಿತ್ರ ಬಿಡುಗಡೆಯಾಗಿತ್ತು. ನಟ ʻಮಂಜುಮ್ಮೇಲ್ ಬಾಯ್ಸ್ʼ ಸಿನಿಮಾವನ್ನು ಸೌಬಿನ್ ಶಾಹಿರ್ ಚಿತ್ರವನ್ನು ನಿರ್ಮಾಣ ಮಾಡುವ ಜತೆಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಮತ್ತು ಜೀನ್ ಪಾಲ್ ಲಾಲ್ ಮತ್ತಿತರರು ನಟಿಸಿದ್ದಾರೆ.

ಕಥೆ ಏನು?

2006ರಲ್ಲಿ ಕೇರಳದಿಂದ ತಮಿಳುನಾಡಿನ ಕೊಡೈಕೆನಲ್​ಗೆ ಫ್ರೆಂಡ್ಸ್ ಗ್ರೂಪೊಂದಕು ಟ್ರಿಪ್ ಹೊರಡುತ್ತದೆ. ʻಡೆವಿಲ್ಸ್ ಕಿಚನ್ʼ ಹೆಸರಿನ ಗುಹೆಯಲ್ಲಿ ಸುಭಾಷ್ ಎಂಬಾತ ಬೀಳುತ್ತಾನೆ. ಆತನನ್ನು ರಕ್ಷಿಸಲು ಫ್ರೆಂಡ್ಸ್ ಪ್ರಯತ್ನಿಸುತ್ತಾರೆ. ಇದರಲ್ಲಿ ಯಶಸ್ವಿ ಆಗ್ತಾರಾ ಇಲ್ಲವಾ ಎಂಬುದೇ ಕಥೆ.

ಇದನ್ನೂ ಓದಿ: Ramayana Movie: ರಾಮಾಯಣ’ ಸಿನಿಮಾದ ರಣ್‌ಬೀರ್, ಸಾಯಿ ಪಲ್ಲವಿ ಲುಕ್ ಲೀಕ್

ನೈಜ ಘಟನೆ

ವಿಶೇಷ ಎಂದರೆ ಇದು ನೈಜ ಘಟನೆ ಆಧಾರಿತ ಸಿನಿಮಾ. ನೈಜವಾಗಿ, ಸರಳವಾಗಿ ಚಿತ್ರವನ್ನು ನಿರೂಪಿಸಲಾಗಿದೆ. ಇದು ಈ ಚಿತ್ರದ ಯಶಸ್ಸಿಗೆ ಮುಖ್ಯ ಕಾರಣ ಎಂದು ಸಿನಿಮಾ ತಜ್ಞರು ಅಭಿಪ್ರಾಯ ಪಡುತ್ತಾರೆ. ಈ ಹಿಂದೆ ಸಿನಿಮಾ ರಂಗದ ಹಲವು ದಿಗ್ಗಜರು ಈ ಚಿತ್ರದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು.

ಮಂಜುಮ್ಮೇಲ್ ಬಾಯ್ಸ್ʼ ಚಿತ್ರದ ಮೂಲಕ ಮಾಲಿವುಡ್‌ ಭರ್ಜರಿ ಕಂಬ್ಯಾಕ್‌ ಮಾಡಿದೆ. ಇತ್ತೀಚೆಗೆ ತೆರೆಕಂಡ ಹಲವು ಮಲಯಾಳಂ ಚಿತ್ರಗಳಯ ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡಿವೆ. ʼಪ್ರೇಮುಲುʼ, ʼಭ್ರಮಯುಗಂʼ, ʼಅಬ್ರಹಾಂ ಓಜ್ಲರ್ʼ ಮುಂತಾದ ಸಿನಿಮಾಗಳು ಹಿಟ್‌ ಆಗಿವೆ.

Continue Reading

ಮಾಲಿವುಡ್

Actor Mohanlal: 56ನೇ ಬಾರಿಗೆ ಮೋಹನ್ ಲಾಲ್ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ ಈ ಫೇಮಸ್‌ ನಟಿ!

Actor Mohanlal: ನಟಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಶೇರ್‌ ಮಾಡಿ ʻʻನಾಲ್ಕು ವರ್ಷಗಳು ನಾಲ್ಕು ನಿಮಿಷಗಳಂತೆ ಕಳೆದಿವೆ. L360”ಎಂದು ಬರೆದುಕೊಂಡಿದ್ದಾರೆ. ಹಲವು ದಶಕಗಳಿಂದ ನಟಿ ಶೋಬನಾ ಮಲಯಾಳಂ ಚಿತ್ರರಂಗದಲ್ಲಿ ನಟಿಸಿಕೊಂಡು ಬಂದವರು. ನಟನೆ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಲವು ನೃತ್ಯ ಪ್ರದರ್ಶನಗಳನ್ನು ನೀಡುತ್ತ ಬರುತ್ತಿದ್ದರು.

VISTARANEWS.COM


on

Actor Mohanlal Shobana reunites L360
Koo

ಬೆಂಗಳೂರು: ಮಾಲಿವುಡ್‌ ಫ್ಯಾನ್ಸ್‌ ನಟ ಮೋಹನ್ ಲಾಲ್ (Actor Mohanlal) ಮತ್ತು ಶೋಬನಾ (Shobana) ನಡುವಿನ ಆನ್-ಸ್ಕ್ರೀನ್ ಕೆಮಿಸ್ಟ್ರಿಯನ್ನು ಇಷ್ಟಪಡುತ್ತಾರೆ. ಇದೀಗ ಈ ತಾರೆಯರು ಹಲವು ವರ್ಷಗಳ ಬ್ರೇಕ್‌ ನಂತರ ಒಟ್ಟಿಗೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ತಾತ್ಕಾಲಿಕವಾಗಿ ಶೀರ್ಷಿಕೆ ಇಡಲಾದ L360 ಗಾಗಿ ತೆರೆಯ ಮೇಲೆ ಮತ್ತೆ ಒಂದಾಗಲು ಸಿದ್ಧರಾಗಿದ್ದಾರೆ. ʻಆಪರೇಷನ್ ಜಾವಾʼ ಖ್ಯಾತಿಯ ತರುಣ್ ಮೂರ್ತಿ ನಿರ್ದೇಶಿಸುತ್ತಿರುವ ಈ ಚಿತ್ರ ಶೀಘ್ರದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದ್ದು, ಇಬ್ಬರೂ ತಾರೆಯರು 56ನೇ ಬಾರಿಗೆ ತೆರೆಯನ್ನು ಒಟ್ಟಿಗೆ ಹಂಚಿಕೊಳ್ಳುತ್ತಿದ್ದಾರೆ.

ನಟಿ ತನ್ನ ಇನ್‌ಸ್ಟಾಗ್ರಾಮ್‌ನಲ್ಲಿ ಈ ಬಗ್ಗೆ ಶೇರ್‌ ಮಾಡಿ ʻʻನಾಲ್ಕು ವರ್ಷಗಳು ನಾಲ್ಕು ನಿಮಿಷಗಳಂತೆ ಕಳೆದಿವೆ. L360”ಎಂದು ಬರೆದುಕೊಂಡಿದ್ದಾರೆ. ಹಲವು ದಶಕಗಳಿಂದ ನಟಿ ಶೋಬನಾ ಮಲಯಾಳಂ ಚಿತ್ರರಂಗದಲ್ಲಿ ನಟಿಸಿಕೊಂಡು ಬಂದವರು. ಸಾರ್ವಜನಿಕರಿಂದ ಹೆಚ್ಚಾಗಿ ದೂರವೇ ಇರುತ್ತಿದ್ದರು. ನಟನೆ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಲವು ನೃತ್ಯ ಪ್ರದರ್ಶನಗಳನ್ನು ನೀಡುತ್ತ ಬರುತ್ತಿದ್ದರು.

ಈ ಹಿಂದೆ, ನಟಿ ಸುರೇಶ್ ಗೋಪಿ, ಕಲ್ಯಾಣಿ ಪ್ರಿಯದರ್ಶನ್ ಮತ್ತು ದುಲ್ಕರ್ ಸಲ್ಮಾನ್ ಅವರೊಂದಿಗೆ ನಟಿಸಿದ 2020 ರ ʻವಾರಣೆ ಅವಶ್ಯಮುಂದ್ʼ ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದರು. ಅನೂಪ್ ಸತ್ಯನ್ ಅವರ ಈ ʻವಾರಣೆ ಅವಶ್ಯಮುಂದ್ʼ ಚಿತ್ರದಲ್ಲಿ ಶೋಬನಾ 7 ವರ್ಷಗಳ ನಂತರ ಮತ್ತೆ ಬಣ್ಣ ಹಚ್ಚಿದ್ದರು. ಇದೀಗ ಮೋಹನ್‌ಲಾಲ್‌ ಅವರ ಜತೆ ನಟಿಸಲಿರುವ ಸಿನಿಮಾ ಶೋಬನಾ ಅವರ 91ನೇ ಸಿನಿಮಾವಾಗಿದೆ.

ಇದನ್ನೂ ಓದಿ: Actor Mohanlal: ಮೋಹನ್‌ಲಾಲ್ ಅಭಿನಯದ ʻಮಲೈಕೋಟ್ಟೈ ವಾಲಿಬನ್ʼ ಟೀಸರ್‌ ಔಟ್‌!

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Continue Reading

ಮಾಲಿವುಡ್

Manjummel Boys: ಕನ್ನಡದಲ್ಲೂ ಬರಲಿದೆ ʻಮಂಜುಮ್ಮೆಲ್ ಬಾಯ್ಸ್ʼ? ಒಟಿಟಿಗೆ ಯಾವಾಗ?

Manjummel Boys: ಚಿದಂಬರಂ ಪೊದುವಾಲ್ ಅವರ ಎರಡನೇ ನಿರ್ದೇಶನ ಸಿನಿಮಾ ಇದು. ಈ ಮುಂಚೆ ʻಜೇನ್‌ಮ್ಯಾನ್ʼ ಹೆಚ್ಚು ಮೆಚ್ಚುಗೆ ಪಡೆದುಕೊಂಡಿತ್ತು. ಸುಶಿನ್ ಶ್ಯಾಮ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.ಫೆಬ್ರವರಿ 22ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು ಏಕಕಾಲಕ್ಕೆ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎನ್ನುವ ಚರ್ಚೆ ನಡೆಯುತ್ತಿದೆ.

VISTARANEWS.COM


on

Manjummel Boys ott malayalam to premiere on may
Koo

ಬೆಂಗಳೂರು: ʼಮಂಜುಮ್ಮೇಲ್ ಬಾಯ್ಸ್’ (Manjummel Boys) ಸಾರ್ವಕಾಲಿಕ ಅತಿ ಹೆಚ್ಚು ಹಣ ಗಳಿಸಿದ ಮಲಯಾಳಂ ಚಿತ್ರವಾಗಿ ಹೊರಹೊಮ್ಮಿತ್ತು. ಮಂಜುಮ್ಮೇಲ್ ಬಾಯ್ಸ್’ ಸಿನಿಮಾವನ್ನು ಪ್ರೇಕ್ಷಕರು ಮಾತ್ರವೇ ಅಲ್ಲದೆ ಸಿನಿಮಾ ಸೆಲೆಬ್ರಿಟಿಗಳು, ಸ್ಟಾರ್ ನಟರು ಸಹ ನೋಡಿ ಮೆಚ್ಚಿಕೊಂಡಿದ್ದರು. ಇದೀಗ ‘ಮಂಜುಮ್ಮೆಲ್ ಬಾಯ್ಸ್’ ಸಿನಿಮಾ ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ನಲ್ಲಿ ಮೇ 3ರಂದು ಸ್ಟ್ರೀಮಿಂಗ್ ಆಗುವುದು ಬಹುತೇಕ ಖಚಿತ ಎಂದು ವರದಿಯಾಗಿದೆ. ಫೆಬ್ರವರಿ 22ರಂದು ತೆರೆಗೆ ಬಂದಿದ್ದ ಸಿನಿಮಾ ಈಗಾಗಲೇ 50 ದಿನ ಪೂರೈಸಿದೆ. ಸದ್ಯ ತೆಲುಗು, ತಮಿಳು, ಕನ್ನಡಕ್ಕೂ ಸಿನಿಮಾ ಡಬ್ ಆಗಿದ್ದು ಏಕಕಾಲಕ್ಕೆ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎನ್ನುವ ಚರ್ಚೆ ನಡೆಯುತ್ತಿದೆ.

ರಜನಿಕಾಂತ್​ಗೆ ಬಹಳ ಇಷ್ಟವಾಗಿತ್ತು ಸಿನಿಮಾ

ಇತ್ತೀಚೆಗಷ್ಟೇ, ಮಂಜುಮ್ಮೆಲ್ ಬಾಯ್ಸ್ ನಿರ್ದೇಶಕ ಚಿದಂಬರಂ ಪೊದುವಾಲ್ (Chidambaram Poduval) ಮತ್ತು ತಂಡ ಸೂಪರ್‌ಸ್ಟಾರ್ ರಜನಿಕಾಂತ್ (Superstar Rajinikanth ) ಅವರನ್ನು ಚೆನ್ನೈನಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದರು. ಮಂಜುಮ್ಮೇಲ್ ಬಾಯ್ಸ್’ ಸೂಪರ್ ಸ್ಟಾರ್ ರಜನಿಕಾಂತ್​ಗೆ ಬಹಳ ಇಷ್ಟವಾಗಿದ್ದು, ಚಿತ್ರತಂಡವನ್ನು ಮನೆಗೆ ಆಹ್ವಾನಿಸಿ ಸತ್ಕರಿಸಿದ್ದರು.

ಇದನ್ನೂ ಓದಿ: Manjummel Boys: ʼಮಂಜುಮ್ಮೇಲ್ ಬಾಯ್ಸ್’ ತಂಡಕ್ಕೆ ರಜನಿಕಾಂತ್‌ ಸತ್ಕಾರ!

ಏನಿದು ಕಥೆ?

ಸೌಬಿನ್ ಶಬೀರ್ ಸಿನಿಮಾ ನಿರ್ಮಾಣ ಮಾಡಿದ್ದಾರೆ. 2006ರಲ್ಲಿ ಕೇರಳದಿಂದ ತಮಿಳುನಾಡಿನ ಕೊಡೈಕೆನಲ್​ಗೆ ಫ್ರೆಂಡ್ಸ್ ಗ್ರೂಪ್ ಒಂದು ಟ್ರಿಪ್ ಹೊರಡುತ್ತದೆ. ʻಡೆವಿಲ್ಸ್ ಕಿಚನ್ʼ ಹೆಸರಿನ ಗುಹೆಯಲ್ಲಿ ಸುಭಾಷ್ ಎಂಬಾತ ಬೀಳುತ್ತಾನೆ. ಆತನ ರಕ್ಷಿಸಲು ಫ್ರೆಂಡ್ಸ್ ಪ್ರಯತ್ನಿಸುತ್ತಾರೆ. ಇದರಲ್ಲಿ ಸಕ್ಸೆಸ್‌ ಆಗ್ತಾರಾ? ಇಲ್ಲವಾ ಎಂಬುದೇ ಕಥೆ. ಮಲಯಾಳಂ ಮಾತ್ರವಲ್ಲದೆ ತಮಿಳುನಾಡಿನಲ್ಲೂ ಸಿನಿಮಾ ಒಳ್ಳೆಯ ಗಳಿಕೆ ಮಾಡುತ್ತಿದೆ. ಈ ಚಿತ್ರ ತಮಿಳಿಗೂ ಡಬ್ ಆಗಿ ರಿಲೀಸ್ ಆಗಿದೆ.ಸೌಬಿನ್ ಶಾಹಿರ್, ಶ್ರೀನಾಥ್ ಭಾಸಿ, ಬಾಲು ವರ್ಗೀಸ್, ಗಣಪತಿ ಮತ್ತು ಜೀನ್ ಪಾಲ್ ಲಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿದಂಬರಂ ಪೊದುವಾಲ್ ಅವರ ಎರಡನೇ ನಿರ್ದೇಶನ ಸಿನಿಮಾ ಇದು. ಈ ಮುಂಚೆ ʻಜೇನ್‌ಮ್ಯಾನ್ʼ ಹೆಚ್ಚು ಮೆಚ್ಚುಗೆ ಪಡೆದುಕೊಂಡಿತ್ತು. ಸುಶಿನ್ ಶ್ಯಾಮ್ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.

Continue Reading

Latest

Movie web series: ಆ್ಯಕ್ಷನ್‌, ಥ್ರಿಲರ್, ಹಾರರ್: ವಾರಾಂತ್ಯಕ್ಕೆ ಬರಲಿವೆ ಬಹು ನಿರೀಕ್ಷಿತ ಚಿತ್ರಗಳು!

Movie, web series: ಹಬ್ಬ ಮುಗಿದು ವಾರ ಕೊನೆಯಾಗುವ ಹೊತ್ತಿಗೆ ಮುಂದಿನ ವಾರದಿಂದ ಒಂದೊಂದು ಚಿತ್ರಗಳು ತೆರೆಗೆ ಬರಲು ಕಾತರಿಸುವಂತಿದೆ. ಒಟಿಟಿಯಲ್ಲೂ ಹೊಸಹೊಸ ಸರಣಿಗಳು ಬರುವ ನಿರೀಕ್ಷೆ ಮೂಡಿಸಿದೆ. ಕೆಲವು ವೆಬ್ ಸೀರಿಸ್‌ಗಳು ಈ ವಾರದಲ್ಲೇ ಸರಣಿ ಪ್ರದರ್ಶನಕ್ಕೆ ಚಾಲನೆ ನೀಡಿವೆ. ಗುರುವಾರ, ಶುಕ್ರವಾರ, ಶನಿವಾರ ಒಂದಷ್ಟು ಸಿನಿಮಾ, ಸೀರಿಸ್ ಬಿಡುಗಡೆಯಾಗಲು ಕಾಯುತ್ತಿವೆ.

VISTARANEWS.COM


on

By

Movie, web series
Koo

ಬೆಂಗಳೂರು: ಹಬ್ಬದ ವೇಳೆಗೆ ಹೊಸ ಚಿತ್ರ ತೆರೆಗೆ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದವರಿಗೆ ಈ ಬಾರಿ ಯುಗಾದಿ (yugad), ಈದ್ ಮಿಲಾದ್ (eid-millad) ಹಬ್ಬ ಬೇಸರ ಮೂಡಿಸಿತ್ತು. ಯಾಕೆಂದರೆ ರಜೆಯ ಮೂಡ್ ನಲ್ಲಿದ್ದವರಿಗೆ ಯಾವುದೇ ದೊಡ್ಡ ಸಿನಿಮಾಗಳು (Movie, web series) ತೆರೆ (theater) ಮೇಲೆ ಕಾಣಲಿಲ್ಲ, ಒಟಿಟಿಯಲ್ಲೂ (OTT) ಸಿಗಲಿಲ್ಲ.

ಹಬ್ಬ ಮುಗಿದು ವಾರ ಕೊನೆಯಾಗುವ ಹೊತ್ತಿಗೆ ಮುಂದಿನ ವಾರದಿಂದ ಒಂದೊಂದು ಚಿತ್ರಗಳು ತೆರೆಗೆ ಬರಲು ಕಾತರಿಸುವಂತಿದೆ. ಒಟಿಟಿಯಲ್ಲೂ ಹೊಸಹೊಸ ಸರಣಿಗಳು ಬರುವ ನಿರೀಕ್ಷೆ ಮೂಡಿಸಿದೆ. ಕೆಲವು ವೆಬ್ ಸೀರಿಸ್‌ಗಳು ಈ ವಾರದಲ್ಲೇ ಸರಣಿ ಪ್ರದರ್ಶನಕ್ಕೆ ಚಾಲನೆ ನೀಡಿವೆ. ಗುರುವಾರ, ಶುಕ್ರವಾರ, ಶನಿವಾರ ಒಂದಷ್ಟು ಸಿನಿಮಾ, ಸೀರಿಸ್ ಬಿಡುಗಡೆಯಾಗಲು ಕಾಯುತ್ತಿವೆ.

ಇದನ್ನೂ ಓದಿ: Duniya Vijay: ಪುತ್ರಿಗಾಗಿ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌

ಎಂದಿನಂತೆ ಕನ್ನಡ ಚಿತ್ರರಂಗದಿಂದ ಯಾವುದೇ ಹೊಸ ಸಿರೀಸ್‌, ಚಿತ್ರಗಳು ತೆರೆಗೆ ಬರುವ ನಿರೀಕ್ಷೆ ಇಲ್ಲ. ಈಗಾಗಲೇ ಥಿಯೇಟರ್‌ಗಳಲ್ಲಿ ‘ಯುವ’, ‘ಬ್ಲಿಂಕ್’ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಕೆಲವು ಸಿನಿಮಾಗಳು ಥಿಯೇಟರ್‌ಗೆ ಬಂದಿದ್ದರೂ ಒಟಿಟಿಗೆ ಬಂದಿಲ್ಲ. ಹೀಗಾಗಿ ಮುಂದೆಯಾದರೂ ಒಂದಷ್ಟು ಸಿನಿಮಾಗಳ ಒಟಿಟಿಯಲ್ಲಿ ಬರಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ ಕನ್ನಡ ಸಿನಿ ಪ್ರಿಯರು.

ಈ ವಾರದಲ್ಲಿ ಹಲವು ಚಿತ್ರಗಳು ಥಿಯೇಟರ್ ಹಾಗೂ ಓಟಿಟಿಗೆ ಬರಲು ಸಜ್ಜಾಗಿದೆ. ಅವುಗಳ ಕುರಿತು ಮಾಹಿತಿ ಇಲ್ಲಿದೆ.

ʻಬಡೇ ಮಿಯಾ ಚೋಟೆ ಮಿಯಾʼ

ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಜೊತೆಯಾದರೆ ಆ್ಯಕ್ಷನ್ ನೊಂದಿಗೆ ಮನೋರಂಜನೆಗೇನೂ ಕೊರತೆಯಾಗದು. ಇವರಿಬ್ಬರು ಒಟ್ಟಿಗೆ ನಟಿಸಿರುವ ಅಲಿ ಅಬ್ಬಾಸ್ ಜಾಫರ್ ನಿರ್ದೇಶನದ ʻಬಡೇ ಮಿಯಾ ಚೋಟೆ ಮಿಯಾʼ ಈ ವಾರದಲ್ಲಿ ತೆರೆಗೆ ಬರಲಿದೆ. ಮಾನುಷಿ ಚಿಲ್ಲರ್‌, ಸೋನಾಕ್ಷಿ ಸಿನ್ಹಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ʻಮೈದಾನ್’

ಬಹು ನಿರೀಕ್ಷೆ ಮೂಡಿಸಿರುವ ಅಜಯ್ ದೇವಗನ್ ಜತೆಗೆ ಪ್ರಿಯಾಮಣಿ ನಟನೆಯ ‘ಮೈದಾನ್’ ಸಿನಿಮಾ ತೆರೆಗೆ ಬರಲು ಕಾಯುತ್ತಿದೆ. ಬೋನಿ ಕಪೂರ್ ನಿರ್ದೇಶನದ ಈ ಚಿತ್ರ ಖ್ಯಾತ ಭಾರತದ ಫುಟ್ಬಾಲ್ ತರಬೇತುದಾರ ಸೈಯದ್ ಅಬ್ದುಲ್ ರಹೀಮ್ ಅವರ ಜೀವನವನ್ನು ಆಧರಿಸಿದೆ.

ಪ್ರೇಮಲು

ಹಾಟ್ ಸ್ಟಾರ್ ನಲ್ಲಿ ಸಣ್ಣ ಬಜೆಟ್‌ನ ಮಲಯಾಳಂ ಚಿತ್ರ ಪ್ರೇಮಲು ತೆರೆಗೆ ಬರಲಿದೆ. ಮಲಯಾಳಂ ಹಾಗೂ ತೆಲುಗಿನಲ್ಲಿ ಡಬ್ ಆಗಿ ಹಿಟ್ ಆಗಿದ್ದ ಈ ಚಿತ್ರದ ತೆಲುಗು ಚಿತ್ರ ಈಗಾಗಲೇ ಒಟಿಟಿಯಲ್ಲಿದೆ. ಏಪ್ರಿಲ್ 12ರಂದು ಮಲಯಾಳಂ, ತಮಿಳು, ಕನ್ನಡ ಮತ್ತು ಹಿಂದಿಯಲ್ಲಿ ಡಿಸ್ನಿ+ ಹಾಟ್‌ಸ್ಟಾರ್ ಒಟಿಟಿಯಲ್ಲಿ ಸ್ಟ್ರೀಮ್ ಆಗಲಿದೆ. ನೆಸ್ಲೇನ್ ಕೆ ಗೂಫರ್ ಮತ್ತು ಮಮಿತಾ ಬೈಜು ನಾಯಕಿಯರಾಗಿ ನಟಿಸಿರುವ ಪ್ರೇಮಲು ಚಿತ್ರವನ್ನು ಗಿರೀಶ್ ಎಡಿ ನಿರ್ದೇಶಿಸಿದ್ದಾರೆ.

ಕರುಂಗಾಪಿಯಂ

ಬಾಕ್ಸ್ ಆಫೀಸ್ ನಲ್ಲಿ ಹೀನಾಯ ಸೋಲು ಕಂಡ ಕಾಜಲ್ ಅಗರ್‌ವಾಲ್ ಹಾಗೂ ರೆಗಿಮಾ ಕಸೆಂದ್ರಾ ನಟನೆಯ ‘ಕರುಂಗಾಪಿಯಂ’ ಸಿನಿಮಾ ತೆಲುಗಿಗೂ ಡಬ್ ಆಗಿ ಒಟಿಟಿಯಲ್ಲಿ ತೆರೆಕಂಡಿದೆ.


ಅಮೇಜಾನ್ ಪ್ರೈಂ

ಈ ಬಾರಿ ಅಮೇಜಾನ್ ಪ್ರೈಂ ನಲ್ಲಿ ಏಪ್ರಿಲ್ 1ರಿಂದ ಹಾಲಿವುಡ್ ಸಿರೀಸ್ ಫಾಲ್ ಔಟ್, ಏಪ್ರಿಲ್ 9ರಿಂದ ಹಾರರ್ ಸಿನೆಮಾ ದಿ ಎಕ್ಸಾರ್ಸಿಸ್ಟ್: ಬಿಲಿವರ್, ಏಪ್ರಿಲ್ 8 ಅನ್‌ಫರ್ಗಟನ್ ಸೀಸನ್-5 ಸರಣಿ, ಏಪ್ರಿಲ್ 12ರಿಂದ ಎನ್‌ಡಬ್ಲೂಎಸ್‌ಎಲ್ -ಒರಿಜಿನಲ್ ಸೀರಿಸ್ ತೆರೆಕಾಣುತ್ತಿದೆ.


ನೆಟ್‌ಫ್ಲಿಕ್ಸ್

ನೆಟ್‌ಫ್ಲಿಕ್ಸ್ ನಲ್ಲಿಏಪ್ರಿಲ್ 8ರಿಂದ ಸ್ಪಿರಿಟ್ ರೇಂಜರ್ಸ್-ಸೀಸನ್-3(ಆನಿಮೇಟೆಡ್ ಸೀರಿಸ್), ಏಪ್ರಿಲ್ 10ರಿಂದ ದಿ ಹೈಜಾಕಿಂಗ್ ಆಫ್ ಫ್ಲೈಟ್ 601(ವೆಬ್ ಸೀರಿಸ್), ಅನ್‌ಲಾಕ್ಡ್: ಎ ಜೈಲ್ ಎಕ್ಸ್‌ಪೆರಿಮೆಂಟ್(ಡಾಕ್ಯೂ ಸೀರಿಸ್), ಜೆನ್ನಿಫರ್ ವಾಟ್ ಡಿಡ್(ಕ್ರೈಂ ಡಾಕ್ಯುಮೆಂಟರಿ), ಆಂತ್ರಾಸೈಟ್(ಫ್ರೆಂಚ್ ವೆಬ್ ಸೀರಿಸ್), ಏಪ್ರಿಲ್ 11ರಿಂದ ಮಿಡ್ ಸಮ್ಮರ್ ನೈಟ್- ಸೀಸನ್-1(ನಾರ್ವೆ ಥ್ರಿಲ್ಲರ್ ಸೀರಿಸ್), ಯಾಜ್ ದಿ ಕ್ರೋ ಫೈಲ್ಸ್- ಸೀಸನ್-3(ಟರ್ಕಿಸ್ ವೆಬ್ ಸೀರಿಸ್) , ಹಾರ್ಟ್‌ಬ್ರೇಕ್ ಹೈ- ಸೀಸನ್-2 (ಟೀನ್ ಬೆವ್ ಸೀರಿಸ್), ಏಪ್ರಿಲ್ 12ರಿಂದ ಸ್ಟೋಲೆನ್(ಸ್ವಿಡಿಶ್ ಸಿನಿಮಾ), ಅಮರ್ ಸಿಂಗ್ ಚಮ್ಕಿಲಾ(ಹಿಂದಿ ಸಿನಿಮಾ) ತೆರೆಯಲ್ಲಿ ಕಾಣಿಸಲಿದೆ. ಜೀ-5ನಲ್ಲಿ ಏಪ್ರಿಲ್ 12ರಿಂದ ʻಗಾಮಿʼ (ತೆಲುಗು ಸಿನಿಮಾ) ತೆರೆಗೆ ಬರಲಿದೆ.

Continue Reading
Advertisement
Rescue of a boy who drowned at Malpe beach Two boys die after taking bath in Sindagi
ಕ್ರೈಂ6 mins ago

Malpe Beach: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಣೆ; ಸಿಂದಗಿಯಲ್ಲಿ ಸ್ನಾನಕ್ಕೆಂದು ಬಾವಿಗಿಳಿದಿದ್ದ ಬಾಲಕರಿಬ್ಬರ ಸಾವು

Fortis Hospital Launches Deep Brain Stimulation DBS Clinic to Treat Parkinson Disease
ಕರ್ನಾಟಕ16 mins ago

Fortis Hospital: ಪಾರ್ಕಿನ್ಸನ್‌ ಕಾಯಿಲೆ ಚಿಕಿತ್ಸೆಗೆ ಪ್ರತ್ಯೇಕ ಕ್ಲಿನಿಕ್‌ ಆರಂಭಿಸಿದ ಫೋರ್ಟಿಸ್‌ ಆಸ್ಪತ್ರೆ

Divorce Celebration
ವೈರಲ್ ನ್ಯೂಸ್22 mins ago

Divorce Celebration: ಗಂಡನ ಬಿಟ್ಟು ಬಂದ ಮಗಳನ್ನು ಅದ್ಧೂರಿ ಮೆರವಣಿಗೆಯಲ್ಲಿ ಕರೆ ತಂದ ಅಪ್ಪ!

RBI Guideline
ವಾಣಿಜ್ಯ24 mins ago

RBI Guideline: ಬ್ಯಾಂಕುಗಳಿಗೆ ಬಿಸಿ ಮುಟ್ಟಿಸಿದ ಆರ್‌ಬಿಐ; ಸಂಗ್ರಹಿಸಿದ ಹೆಚ್ಚುವರಿ ಶುಲ್ಕ ಮರುಪಾವತಿಗೆ ಸೂಚನೆ

IPL 2024
ಪ್ರಮುಖ ಸುದ್ದಿ30 mins ago

IPL 2024 : ಬುದ್ಧಿ ಹೇಳಿದರೂ ಕೇಳದ ಕೆಕೆಆರ್​ ಬೌಲರ್​ ರಾಣಾಗೆ ಮತ್ತೆ ದಂಡ ; ಒಂದು ಪಂದ್ಯದಿಂದ ಸಸ್ಪೆಂಡ್​​

Minister Lakshmi hebbalkar spoke in Prajadhwani 02 Lok Sabha election campaign programme at Gokak
ಕರ್ನಾಟಕ34 mins ago

Lok Sabha Election: ಸಿದ್ದರಾಮಯ್ಯ ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ? ರಮೇಶ್‌ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ

Ballari Lok Sabha constituency Congress candidate eTukaram election campaign in Hosapete
ಬಳ್ಳಾರಿ37 mins ago

Lok Sabha Election 2024: ಜನರ ಬದುಕಿನ ಭಾರ ಕಡಿಮೆ ಮಾಡಿದ್ದು ಕಾಂಗ್ರೆಸ್‌ ಎಂದ ಈ. ತುಕಾರಾಂ

Hassan Pen Drive case
ಪ್ರಮುಖ ಸುದ್ದಿ1 hour ago

Hassan Pen Drive Case: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

Fact check
ಪ್ರಮುಖ ಸುದ್ದಿ1 hour ago

Fact Check : ಕರ್ನಾಟಕದವರು ಪಾಪಿಗಳು ಅಂಥ ಹೇಳಿದ್ರಾ ಮೋದಿ; ಕಾಂಗ್ರೆಸ್ ಮಾಡಿದ ಪೋಸ್ಟ್​ ಸುಳ್ಳಾ? ಇಲ್ಲಿದೆ ನಿಜಾಂಶ

Suhana Khan
ಬಾಲಿವುಡ್1 hour ago

Suhana Khan: ಬ್ರೇಕಪ್‌ ಬಗ್ಗೆ ಓಪನ್‌ ಆಗಿ ಮಾತನಾಡಿದ ಶಾರುಖ್‌ ಪುತ್ರಿ ಸುಹಾನಾ ಖಾನ್‌; ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ15 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌