Kantara Movie | ʻವ್ಯಕ್ತಿಯನ್ನು ಗೇಲಿ ಮಾಡುವ ಹಕ್ಕು ಯಾರಿಗೂ ಇಲ್ಲʼ: ಮಾಲಿವುಡ್‌ ನಟಿ ಮಂಜು ಪಾತ್ರೋಜ್‌! - Vistara News

ಮಾಲಿವುಡ್

Kantara Movie | ʻವ್ಯಕ್ತಿಯನ್ನು ಗೇಲಿ ಮಾಡುವ ಹಕ್ಕು ಯಾರಿಗೂ ಇಲ್ಲʼ: ಮಾಲಿವುಡ್‌ ನಟಿ ಮಂಜು ಪಾತ್ರೋಜ್‌!

ಮಾಲಿವುಡ್‌ ನಟಿ ಮಂಜು ಪಾತ್ರೋಜ್‌ (Kantara Movie) ಚಿತ್ರದ ಬಾಡಿ ಶೇಮಿಂಗ್‌ ಕುರಿತಾಗಿ ಮಾತನಾಡಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಈ ಕುರಿತು ನಟಿ ಪೋಸ್ಟ್‌ ಮಾಡಿಕೊಂಡಿದ್ದಾರೆ.

VISTARANEWS.COM


on

Kantara Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕಾಂತಾರ ಸಿನಿಮಾ (Kantara Movie) ಇನ್ನೂ ಹಲವೆಡೆ ಹೌಸ್‌ಫುಲ್‌ ಪ್ರದರ್ಶನಗಳು ಕಾಣುತ್ತಿವೆ. ಹದಿನಾರು ಕೋಟಿ ಬಜೆಟ್‌ನಲ್ಲಿ ತಯಾರಾದ ಈ ಚಿತ್ರ ಇದೀಗ 400 ಕೋಟಿ ರೂ. ಕ್ಲಬ್ ಸೇರುವತ್ತ ದಾಪುಗಾಲು ಇಟ್ಟಿದೆ. ಕನ್ನಡದಲ್ಲಿ ಭರ್ಜರಿ ರೆಸ್ಪಾನ್ಸ್ ಪಡೆದಿರುವ ಸಿನಿಮಾ ತೆಲುಗು, ಹಿಂದಿ, ತಮಿಳು ಹಾಗೂ ಮಲಯಾಳಂ ಬಾಕ್ಸ್ ಆಫೀಸ್‌ನಲ್ಲೂ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಚಿತ್ರವನ್ನು ನೋಡಿ ಹಾಡಿ ಹೊಗಳಿದ್ದರು. ಇವೆಲ್ಲದರ ನಡುವೆ ಮಾಲಿವುಡ್‌ ನಟಿ ಮಂಜು ಪಾತ್ರೋಜ್‌ ಚಿತ್ರದ ಬಾಡಿ ಶೇಮಿಂಗ್‌ ಕುರಿತಾಗಿ ಮಾತನಾಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಈ ಕುರಿತು ನಟಿ ಪೋಸ್ಟ್‌ ಮಾಡಿಕೊಂಡಿದ್ದಾರೆ.

ʻʻಎರಡು ದಿನಗಳ ಹಿಂದೆ ಕಾಂತಾರ ಸಿನಿಮಾ ನೋಡಿದ್ದೆ. ಸಿನಿಮಾ ತುಂಬಾ ಇಷ್ಟವಾಯಿತು. ಆದರೆ ನಾನು ನೋಡಿದ ಒಂದು ದೃಶ್ಯದಲ್ಲಿ ಒಂದು ಪಾತ್ರವನ್ನು ಬಾಡಿ ಶೇಮಿಂಗ್‌ಗೆ ಒಳಪಡಿಸಲಾಗಿದೆʼʼ ಎಂದು ನಟಿ ಮಂಜು ಪಾತ್ರೋಜ್‌ ಬರೆದುಕೊಂಡಿದ್ದಾರೆ.

ಇದನ್ನೂ ಓದಿ | Kantara Movie | ಕಾಂತಾರ ಸಿನಿಮಾ ನನ್ನದೇ: ರಾಕಿಂಗ್‌ ಸ್ಟಾರ್‌ ಯಶ್‌!

ʻʻಕಾಂತಾರ ಚಿತ್ರವನ್ನು ಎರಡು ದಿನಗಳ ಹಿಂದೆ ನೋಡಿದ್ದೆ. ರಿಷಬ್ ಶೆಟ್ಟಿ ‘ಶಿವ’ ಪಾತ್ರಕ್ಕೆ ಜೀವ ತುಂಬಿದ್ದಾರೆ. ಪ್ರತಿಯೊಬ್ಬರೂ ತಮ್ಮ ಪಾತ್ರವನ್ನು ಅತ್ಯಂತ ಸುಂದರವಾಗಿ ನಿರ್ವಹಿಸಿದ್ದಾರೆ. ಕೊನೆಯಲ್ಲಿ ಶಿವನಾಗಿ ಬಂದ ರಿಷಬ್ ಅವರು ಅದ್ಭುತವಾಗಿ ನಟನೆ ಮಾಡಿದ್ದಾರೆ. ಚಿತ್ರದ ಛಾಯಾಗ್ರಹಣ, ನಿರ್ದೇಶನ ಮತ್ತು ಪಾತ್ರಗಳ ಅಭಿನಯ ಎಲ್ಲವೂ ಇಷ್ಟವಾಯಿತು. ಆದರೆ ಸಿನಿಮಾದಲ್ಲಿ ಒಂದು ದೃಶ್ಯ ಮಾತ್ರ ನನಗೆ ತುಂಬಾ ಬೇಸರವಾಯ್ತು. ಅದರ ಬಗ್ಗೆ ಬರೆಯಬೇಕು ಎಂದು ತುಂಬಾ ಸಲ ಅಂದುಕೊಂಡಿದ್ದೆ. ಚಿತ್ರದ ಮೊದಲ ಭಾಗದಲ್ಲಿ ಗೆಳೆಯರಿಬ್ಬರು ನಡೆದುಕೊಂಡು ಹೋಗುವ ದೃಶ್ಯವಿದೆ. ಅವರೊಬ್ಬರು ಸುಂದರ ಎಂಬ ಹೆಸರಿರುವವರು. ಮಾತಿನ ಮಧ್ಯೆ ಸುಂದನ ಗೆಳೆಯ, ಈ ಸಂಜೆ ನಿನ್ನ ಹೆಂಡತಿಯನ್ನು ತಂದು ಹೊಡೆಯೋಣ ಎಂದು ವ್ಯಂಗ್ಯವಾಡುತ್ತಾನೆ. ಆಗ ಸುಂದರನ ಮುಖದಲ್ಲಿ ಅಸೂಯೆ ಎದ್ದು ಕಾಣಿಸುತ್ತದೆ. ಇನ್ನೊಂದು ಕಡೆಯಿಂದ ಆತನ ಪತ್ನಿ ನಗುತ್ತಾಳೆ. ಈ ವೇಳೆ ಆಕೆಯ ಚಾಚಿರುವ ಹಲ್ಲನ್ನು ಎಮ್ಮೆಯ ಹಲ್ಲುಗಳಿಗೆ ಹೋಲಿಸಿ ತೋರಿಸಲಾಗುತ್ತದೆ. ಇದನ್ನು ನೋಡಿದ ಪ್ರೇಕ್ಷಕರು ಥಿಯೇಟರ್‌ನಲ್ಲಿ ಬಿದ್ದು ಬಿದ್ದು ನಗುತ್ತಾರೆ. ಅವರು ಯಾಕೆ ನಗುತ್ತಿದ್ದಾರೆ ಎಂಬುದೇ ಅರ್ಥವಾಗದ ವಿಷಯ. ಅಷ್ಟೊಂದು ಸುಂದರವಾದ ಸಿನಿಮಾದಲ್ಲಿ ಬಾಡಿ ಶೇಮ್ ಮಾಡುವ ಅಗತ್ಯವೇನಿತ್ತು. ಅದರಿಂದ ಸಿಗುವ ಲಾಭವೇನು? ಇದೊಂದು ಸಣ್ಣ ದೃಶ್ಯ. ಆದರೆ ಸಣ್ಣ ವಿಷಯವಲ್ಲ. ದೇಹವು ಹಾಸ್ಯದ ವಸ್ತುವಲ್ಲ. ಅದನ್ನು ನೋಡಿ ನಗಲು ಗೇಲಿ ಮಾಡುವ ಹಕ್ಕು ಯಾರಿಗೂ ಇಲ್ಲ. ಒಬ್ಬ ವ್ಯಕ್ತಿಯ ಆತ್ಮವಿಶ್ವಾಸವನ್ನು ಸೋಲಿಸುವ ಹಕ್ಕು ಯಾರಿಗೂ ಇಲ್ಲ ಸ್ನೇಹಿತರೇʼʼ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ | Kantara Movie | ಪುನೀತ್‌ ಈಗ ದೈವನರ್ತಕ : ವೈರಲ್‌ ಆಗ್ತಿದೆ ಪೋಸ್ಟರ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಾಲಿವುಡ್

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Aavesham Releases On OTT: ಆವೇಶಂʼ ಸಿನಿಮಾವು ಭಾರತದಲ್ಲಿ 93.9 ಕೋಟಿ ರೂ. ಗಳಿಕೆ ಮಾಡಿತ್ತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 146.9 ಕೋಟಿ ರೂ. ಗಳಿಕೆ ಕಂಡಿತ್ತು. ಈ ಚಿತ್ರದ ಬಜೆಟ್‌ 30 ಕೋಟಿ ರೂ. ಆಗಿತ್ತು. ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ʻಆವೇಶಂʼ (Aavesham Releases On OTT) ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಥಿಯೇಟರ್‌ನಲ್ಲಿ ಬಿಡುಗಡೆಯಾದ ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ, ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ.

VISTARANEWS.COM


on

Aavesham Releases On OTT Fahadh Faasil Hit Malayalam Film
Koo

ಬೆಂಗಳೂರು: ಫಹಾದ್ ಫಾಸಿಲ್ (Fahadh Faasil) ಅಭಿನಯದ ಬ್ಲಾಕ್‌ಬಸ್ಟರ್‌ ಮಲಯಾಳಂ ಸಿನಿಮಾ ʻಆವೇಶಂʼ ಒಟಿಟಿಗೆ ಸದ್ದಿಲ್ಲದೆ ಎಂಟ್ರಿ ಕೊಟ್ಟಿದೆ. ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ʻಆವೇಶಂʼ (Aavesham Releases On OTT) ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಥಿಯೇಟರ್‌ನಲ್ಲಿ ಬಿಡುಗಡೆಯಾದ ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ, ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ.

ʻಆವೇಶಂʼ ಸಿನಿಮಾವು ಭಾರತದಲ್ಲಿ 93.9 ಕೋಟಿ ರೂ. ಗಳಿಕೆ ಮಾಡಿತ್ತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 146.9 ಕೋಟಿ ರೂ. ಗಳಿಕೆ ಕಂಡಿತ್ತು. ಈ ಚಿತ್ರದ ಬಜೆಟ್‌ 30 ಕೋಟಿ ರೂ. ಆಗಿತ್ತು. ಇದೀಗ ಅಮೆಜಾನ್‌ ಪ್ರೈಂನಲ್ಲಿ ಸಿನಿಮಾ ಸ್ಟ್ರೀಮಿಂಗ್‌ ಆಗುತ್ತಿದೆ. ಡಬ್ಬಿಂಗ್ ಆವೃತ್ತಿಗಳ ಕುರಿತು ಇನ್ನೂ ಯಾವುದೇ ಅಪಡೇಟ್‌ ಬಂದಿಲ್ಲ. ಫ್ರಂಟ್ ರೋ ಅವರ ಟ್ವೀಟ್ ಪ್ರಕಾರ, ಆವೇಶಂನ ಡಿಜಿಟಲ್ ಹಕ್ಕುಗಳು 35 ಕೋಟಿ ರೂಪಾಯಿಗಳಿಗೆ ಮಾರಾಟವಾಗಿವೆ. ಈ ಮೂಲಕ ದುಲ್ಕರ್ ಸಲ್ಮಾನ್ ಅವರ ʻಕಿಂಗ್ ಆಫ್ ಕೋಥಾʼದ ದಾಖಲೆಯನ್ನು ಮುರಿದಿದೆ ಎಂದು ವರದಿಯಾಗಿದೆ. ʻಕಿಂಗ್ ಆಫ್ ಕೋಥಾʼ 32 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಲಾಗಿತ್ತು.

ಜಿತು ಮಾಧವನ್ ನಿರ್ದೇಶನದ ಈ ಚಿತ್ರದಲ್ಲಿ ಆಶಿಶ್ ವಿದ್ಯಾರ್ಥಿ, ಮನ್ಸೂರ್ ಅಲಿ ಖಾನ್ ಮತ್ತು ಸಜಿನ್ ಗೋಪು ಕೂಡ ನಟಿಸಿದ್ದಾರೆ. ಮಲಯಾಳಂ ಸಿನಿಮಾದ ಪ್ರಮುಖ ಕಥೆ ಬೆಂಗಳೂರಿನಲ್ಲಿ ನಡೆಯುತ್ತದೆ. ಓದಲೆಂದು ಬೆಂಗಳೂರಿಗೆ ಬರುವ ಮೂವರು ಹುಡುಗರು ಅಲ್ಲಿ ಜಗಳದಲ್ಲಿ ಸಿಕ್ಕಿ ಬಿದ್ದು ಸ್ಥಳೀಯ ದರೋಡೆಕೋರನ ನೆರವಿನಿಂದ ಗೆಲುವು ಪಡೆಯಲು ಪ್ರಯತ್ನಿಸುವಂತಹ ಕಥೆ ಹೊಂದಿದೆ. ಆ ಸ್ಥಳೀಯ ದರೋಡೆಕೋರ ಬೇರಾರು ಅಲ್ಲ, ಫಹಾದ್‌ ಫಾಸಿಲ್‌.

ಸಂಪೂರ್ಣ ಬಿಳಿ ಉಡುಗೆಯಲ್ಲಿ, ಚಿನ್ನದ ಸರಗಳೊಂದಿಗೆ, ದಪ್ಪ ಮೀಸೆಯನ್ನು ಹೊಂದಿರುವ ಫಹಾದ್‌ ಪಾತ್ರ ಪ್ರೇಕ್ಷಕರಿಂದ ಸಾಕಷ್ಟು ಪ್ರೀತಿಯನ್ನು ಪಡೆದಿದೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಫಹಾದ್ ಅವರು ರಂಗಾ ಪಾತ್ರವನ್ನು ಏಕೆ ಆಯ್ಕೆ ಮಾಡಿಕೊಂಡೆ ಎಂಬುದರ ಕುರಿತು ಈ ಮುಂಚೆ ಹೇಳಿಕೊಂಡಿದ್ದರು. ʻʻನಾನು ಈ ಮೊದಲು ಅಂತಹ ಪಾತ್ರಗಳನ್ನು ಮಾಡಿಲ್ಲ. ಆದ್ದರಿಂದ ಈ ಕಥೆ ನನ್ನ ಬಳಿಗೆ ಬಂದಾಗ, ನಾನು ಹೌದು ಎಂದು ಹೇಳಿದೆ. ಈ ಹಿಂದೆ ನಾನು ಮಾಡಿದ್ದ ಪಾತ್ರಗಳಿಗಿಂತ ಭಿನ್ನವಾಗಿ ಇತ್ತು. ಅಲ್ಲದೆ, ನಾನು ಕನ್ನಡ ಮತ್ತು ಮಲಯಾಳಂ ಮಿಶ್ರಿತ ಭಾಷೆ ಮಾತನಾಡಬೇಕು ಎಂದು ಮನೋರಮಾ ಹೇಳಿದ್ದರುʼʼ ಎಂದರು. ಇವು 2024ರಲ್ಲಿ ಅತ್ಯಧಿಕ ಗಳಿಕೆ ಮಾಡಿದ ನಾಲ್ಕನೇ ಮಲಯಾಳ ಸಿನಿಮಾವೆಂಬ ಖ್ಯಾತಿಗೆ ಪಾತ್ರವಾಗಿತ್ತು.

ಇದನ್ನೂ ಓದಿ: Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

ಇನ್ನು ಫಹಾದ್‌ ಫಾಸಿಲ್‌ ಹಲವು ಬಹು ನಿರೀಕ್ಷಿತ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್ ಅವರ ಪ್ಯಾನ್‌ ಇಂಡಿಯಾ ಚಿತ್ರ ‌ʼಪುಷ್ಪ 2: ದಿ ರೂಲ್‌ʼ ಸಿನಿಮಾದ ಮುಖ್ಯ ಪಾತ್ರದಲ್ಲಿ ಫಹಾದ್‌ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ನಾಯಕಿಯಾಗಿರುವ ಈ ಚಿತ್ರದ ಮೊದಲ ಭಾಗ ಸೂಪರ್‌ ಹಿಟ್‌ ಆಗಿತ್ತು. ಅಲ್ಲದೆ ಅಲ್ಲು ಅರ್ಜುನ್‌ ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನೂ ತಂಡು ಕೊಟ್ಟಿತ್ತು. ಕಥೆಗೆ ಟ್ವಿಸ್ಟ್‌ ಕೊಡುವ ಪಾತ್ರದಲ್ಲಿ ಫಹಾದ್‌ ನಟಿಸಿದ್ದರು. ಎರಡನೇ ಭಾಗದಲ್ಲಿನ ಅವರ ಪಾತ್ರದ ಬಗ್ಗೆ ಕುತೂಹಲ ಮೂಡಿದೆ.

ಇದರ ಜತೆಗೆ ಹಲವು ವರ್ಷಗಳ ಬಳಿಕ ತೆರೆ ಮೇಲೆ ಒಂದಾಗುತ್ತಿರುವ ಸೂಪರ್‌ ಸ್ಟಾರ್‌ಗಳಾದ ರಜನಿಕಾಂತ್‌- ಅಮಿತಾಭ್‌ ಬಚ್ಚನ್‌ ಅವರ ʼವೆಟ್ಟೈಯನ್‌ʼ ಸಿನಿಮಾದಲ್ಲಿ ಫಹಾದ್‌ ಅಭಿನಯಿಸುತ್ತಿದ್ದಾರೆ. ಇದನ್ನು ಟಿ.ಜೆ.ಜ್ಞಾನವೇಲ್ ನಿರ್ದೇಶಿಸುತ್ತಿದ್ದಾರೆ. ರಾಣಾ ದಗ್ಗುಬಾಟಿ, ಮಂಜು ವಾರಿಯರ್‌, ರಿತಿಕಾ ಸಿಂಗ್‌, ದುಶಾರಾ ವಿಜಯನ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೆ ಫಾಹದ್‌ ಮಲಯಾಳಂನ ʼಆವೇಶಮ್‌ʼ, ʼಪಾಟ್ಟುʼ, ʼಹನುಮಾನ್‌ ಗೇರ್‌ʼ ಮತ್ತಿತರ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಮಾಲಿವುಡ್

Sangeeth Sivan dies: ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan dies ಸಂಗೀತ್ ಶಿವನ್ ಮೂಲತಃ ಕೇರಳದ ತಿರುವನಂತಪುರಂನವರು. 1989 ರಲ್ಲಿ ಆಮೀರ್ ಖಾನ್-ನ ಅಭಿನಯದ ರಾಖ್‌ಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟರು. 1990ರಲ್ಲಿ ಮಲಯಾಳಂನ ‘ವ್ಯೂಹಂ’ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಹೊಸ ಅಧ್ಯಾಯ ಆರಂಭಿಸಿದರು.

VISTARANEWS.COM


on

Sangeeth Sivan dies Riteish Deshmukh Tusshar Kapoor pay tribute
Koo

ಬೆಂಗಳೂರು: ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ (Sangeeth Sivan dies) ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಂಗೀತ್ ಶಿವನ್ ಅವರಿಗೆ 61 ವರ್ಷ ವಯಸ್ಸಾಗಿತ್ತು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಸಂಗೀತ್ ಶಿವನ್ ಮೂಲತಃ ಕೇರಳದ ತಿರುವನಂತಪುರಂನವರು. 1989 ರಲ್ಲಿ ಆಮೀರ್ ಖಾನ್ ಅಭಿನಯದ ರಾಖ್‌ಗೆ ಕಾರ್ಯನಿರ್ವಾಹಕ ನಿರ್ಮಾಪಕರಾಗಿ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟರು. 1990ರಲ್ಲಿ ಮಲಯಾಳಂನ ‘ವ್ಯೂಹಂ’ ಸಿನಿಮಾಗೆ ನಿರ್ದೇಶನ ಮಾಡುವ ಮೂಲಕ ಹೊಸ ಅಧ್ಯಾಯ ಆರಂಭಿಸಿದರು. ಮೋಹನ್​ಲಾಲ್​ ನಟನೆಯ ‘ಯೋಧ’ ಸಿನಿಮಾಗೆ ನಿರ್ದೇಶನ ಮಾಡಿ ಅವರು ಗುರುತಿಸಿಕೊಂಡರು.

ʻಜೋರ್ʼ, ʻಕ್ಯಾ ಕೂಲ್ ಹೈ ಹಮ್ʼ, ʻಅಪ್ನಾ ಸಪ್ನಾ ಮನಿ ಮನಿʼ ಮತ್ತು ʻಯಮ್ಲಾ ಪಗ್ಲಾ ದೀವಾನಾ 2ʼ ಮುಂತಾದ ಹಿಂದಿ ಚಲನಚಿತ್ರಗಳನ್ನು ಸಹ ನಿರ್ದೇಶಿಸಿದ್ದಾರೆ. ಮಲಯಾಳಂನ ‘ರೋಮಾಂಚಂ’ ಸಿನಿಮಾವನ್ನು ಹಿಂದಿಯಲ್ಲಿ ರಿಮೇಕ್​ ಮಾಡಲು ಅವರು ಮುಂದಾಗಿದ್ದರು. ಆ ಕೆಲಸ ಪೂರ್ಣಗೊಳ್ಳುವುದಕ್ಕೂ ಮೊದಲೇ ಅವರು ನಿಧನರಾಗಿರಾಗಿದ್ದಾರೆ.

ರಿತೇಶ್ ದೇಶ್‌ಮುಖ್ ಅವರು ಎಕ್ಸ್‌ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. “ಸಂಗೀತ್ ಶಿವನ್ ಸರ್ ಇನ್ನಿಲ್ಲ ಎಂದು ಗೊತ್ತಾದಾಗ ತೀವ್ರ ದುಃಖ ಮತ್ತು ಆಘಾತವಾಯಿತು.ಮೃದು ಮಾತು, ಸೌಮ್ಯ ಮತ್ತು ಅದ್ಭುತ ಮನುಷ್ಯ.ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ, ಪತ್ನಿ, ಮಕ್ಕಳು, ಸಹೋದರರಿಗೆ ನನ್ನ ಸಂತಾಪʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Do You Know: ನಿಮಗಿದು ಗೊತ್ತಾ? ಲವ್‌ ಮಾಡುತ್ತಿದ್ದರೆ ತೂಕ ಜಾಸ್ತಿಯಾಗುತ್ತದೆ!

ಸುನೀಲ್​ ಶೆಟ್ಟಿ, ರಿತೇಶ್​ ದೇಶಮುಖ್​, ಜಾಕಿ ಶ್ರಾಫ್​, ಸೆಲಿನಾ ಜೇಟ್ಲಿ, ಚಂಕಿ ಪಾಂಡೆ, ರಾಜ್​ಪಾಲ್​ ಯಾದವ್​, ತುಷಾರ್​ ಕಪೂರ್​, ಇಶಾ ಕೊಪ್ಪಿಕರ್​, ನೇಹಾ ದೂಪಿಯಾ, ಅನುಪಮ್​ ಖೇರ್​ ಮುಂತಾದ ಸೆಲೆಬ್ರಿಟಿಗಳ ಜೊತೆ ಸಂಗೀತ್​ ಶಿವನ್​ ಕೆಲಸ ಮಾಡಿದ್ದರು.

Continue Reading

ಮಾಲಿವುಡ್

Actor Sathyaraj: `ಬಾಹುಬಲಿ’ ಕಟ್ಟಪ್ಪನ ತೊಡೆ ಮೇಲೆ ಕುಳಿತ ಈ ಕ್ಯೂಟ್‌ ನಟ ಯಾರು? ಹೇಳಿ ನೋಡೋಣ!

Actor Sathyaraj: ಸತ್ಯರಾಜ್ ಅವರು 240 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಭಾಸ್ ಮತ್ತು ಎಸ್‌.ಎಸ್ ರಾಜಮೌಳಿ ಅವರ ಬಾಹುಬಲಿ ಸಿನಿಮಾದ ಕಟ್ಟಪ್ಪ ಪಾತ್ರಕ್ಕಾಗಿ ಸತ್ಯರಾಜ್ ವಿಶ್ವಾದ್ಯಂತ ಖ್ಯಾತಿಯನ್ನು ಗಳಿಸಿದರು. ಅವರು ಇನ್ನೂ ಅನೇಕ ಪ್ರೇಕ್ಷಕರಿಗೆ ಕಟ್ಟಪ್ಪ ಎಂತಲೇ ಪರಿಚಿತರಾಗಿದ್ದಾರೆ. ಈಗ ಮಲಯಾಳ ಖ್ಯಾತ ನಟನ ಬಾಲ್ಯದ ಫೋಟೊ ವೈರಲ್‌ ಆಗಿದೆ. ಮೇ 7ರಂದು, MUBI ಇಂಡಿಯಾದ ಅಧಿಕೃತ ಎಕ್ಸ್‌ ಖಾತೆ ಫೋಟೊ ಶೇರ್‌ ಮಾಡಿಕೊಂಡಿದೆ.

VISTARANEWS.COM


on

Actor Sathyaraj throwback picture of with veteran actor
Koo

ಬೆಂಗಳೂರು: ಬಾಹುಬಲಿ ಸಿನಿಮಾ ಕಟ್ಟಪ್ಪ (Baahubali Actor Sathyaraj) ಪಾತ್ರದ ಮೂಲಕ ಹೆಸರುವಾಸಿಯಾಗಿರುವ ತಮಿಳು ಮತ್ತು ತೆಲುಗು ನಟ ಸತ್ಯರಾಜ್ (Actor Sathyaraj) ಜತೆ ಫಹಾದ್ ಫಾಸಿಲ್ ಪೋಸ್‌ (Fahadh Faasil) ಕೊಟ್ಟಿದ್ದಾರೆ. ಇದು 80ರ ದಶಕದ ಫೋಟೊ. ಆಗ ಫಹಾದ್ ಫಾಸಿಲ್ ತುಂಬ ಚಿಕ್ಕವರಿದ್ದರು. ಸತ್ಯರಾಜ್ ತೊಡೆ ಮೇಲೆ ಕುಳಿತು ಫಹಾದ್ ಫಾಸಿಲ್ ಕ್ಯೂಟ್‌ ಆಗಿ ಸ್ಮೈಲ್‌ ಕೊಟ್ಟಿದ್ದಾರೆ. ಈ ಫೋಟೊ ಈಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ನಟ ಸತ್ಯರಾಜ್ ಅವರು ಫಹಾದ್ ಅವರ ತಂದೆ ಫಾಸಿಲ್ ಜತೆ ತುಂಬ ಕ್ಲೋಸ್‌ ಇದ್ದರು. ಫಹಾದ್ ಅವರ ತಂದೆ ಫಾಸಿಲ್ ಹಾಗೂ ಸತ್ಯರಾಜ್‌ ‘ಎನ್ ಬೊಮ್ಮುಕುಟ್ಟಿ ಅಮ್ಮಾವುಕ್ಕು’ ಮತ್ತು ‘ಪೂವಿಜಿ ವಸಲಿಲೆ’ ಎಂಬ ತಮಿಳು ಚಿತ್ರಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು.

ಮೇ 7ರಂದು, MUBI ಇಂಡಿಯಾದ ಅಧಿಕೃತ ಎಕ್ಸ್‌ ಖಾತೆ ಸತ್ಯರಾಜ್ ಮತ್ತು ಫಹಾದ್ ಫಾಸಿಲ್ ಅವರ ಈ ಅಪರೂಪದ ಫೋಟೊವನ್ನು ಹಂಚಿಕೊಂಡಿದೆ. “1980ರ ದಶಕದಲ್ಲಿ ಸತ್ಯರಾಜ್ ಮತ್ತು ಫಹಾದ್ ಫಾಸಿಲ್ ” ಎಂದು ಪೋಸ್ಟ್‌ಗೆ ಶೀರ್ಷಿಕೆ ನೀಡಿದೆ. ಫಹಾದ್ ಫಾಸಿಲ್ ಜನಪ್ರಿಯ ನಿರ್ದೇಶಕ, ನಿರ್ಮಾಪಕ, ಮತ್ತು ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟ.ಎರಡು ತಮಿಳು ಚಿತ್ರಗಳಲ್ಲಿ ಸತ್ಯರಾಜ್ ಜತೆಗೂ ಫಹಾದ್ ಫಾಸಿಲ್ ತೆರೆ ಹಂಚಿಕೊಂಡಿದ್ದರು. ಆ ಎರಡೂ ಸಿನಿಮಾಗಳ ಬ್ಲಾಕ್ಬಸ್ಟರ್ ಹಿಟ್ ಕಂಡಿವೆ.

ಇದನ್ನೂ ಓದಿ: Kanakalatha Passes Away: 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟಿ ಇನ್ನಿಲ್ಲ

ನಟ ಫಹಾದ್ ಫಾಸಿಲ್ (Fahad Faasil) ಅವರು ತಮಿಳು, ತೆಲುಗು, ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ, ಅವರೆಂದಿಗೂ ಬಾಲಿವುಡ್​ನತ್ತ ಮುಖ ಮಾಡಿಲ್ಲ. ಪರಭಾಷೆಯ ‘ಸೂಪರ್ ಡಿಲಕ್ಸ್’, ‘ವಿಕ್ರಮ್’, ‘ಪುಷ್ಪ’ ಚಿತ್ರಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಅವರಿಗೆ ಈ ಮೊದಲು ಹಿಂದಿ ಆಫರ್​ಗಳು ಬಂದಿದ್ದವು. ಆದರೆ, ಅವರಿಗೆ ಯಾವುದೂ ಇಷ್ಟ ಆಗಿಲ್ಲ.

ಫಹಾದ್ ಫಾಸಿಲ್ ಕೊನೆಯದಾಗಿ ನಿರ್ದೇಶಕ ಜಿತು ಮಾಧವನ್ ಅವರ ‘ಆವೇಶಂ’ ನಲ್ಲಿ ಕಾಣಿಸಿಕೊಂಡರು. ಇದು ವಿಶ್ವಾದ್ಯಂತ ರೂ 150 ಕೋಟಿ ರೂ, ಗಳಿಕೆ ಕಂಡಿದೆ. ಫಹಾದ್ ಫಾಸಿಲ್ ನಟನೆಯ ‘ಪುಷ್ಪ: ದಿ ರೂಲ್’, ‘ಮಾರೀಸನ್’ ಮತ್ತು ರಜನಿಕಾಂತ್ ಅವರ ‘ವೆಟ್ಟೈಯನ್’ ಸೇರಿದಂತೆ ಮೂರು ಚಿತ್ರಗಳು ಬಿಡುಗಡೆಗೆ ಸಜ್ಜಾಗಿವೆ.

ಸತ್ಯರಾಜ್ ಕೊನೆಯದಾಗಿ ತಮಿಳು ಚಿತ್ರ ‘ಸಿಂಗಪುರ ಸಲೂನ್’ ನಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ‘ತೋಜರ್ ಚೆಗುವೇರಾ’ ಬಿಡುಗಡೆಗೆ ಸಜ್ಜಾಗುತ್ತಿದ್ದಾರೆ. ಸಿನಿಮಾ ಬಿಡುಗಡೆ ದಿನಾಂಕ ಇನ್ನಷ್ಟೇ ಪ್ರಕಟವಾಗಬೇಕಿದೆ. ಸತ್ಯರಾಜ್ ಅವರು 240 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಭಾಸ್ ಮತ್ತು ಎಸ್‌.ಎಸ್ ರಾಜಮೌಳಿ ಅವರ ಬಾಹುಬಲಿ ಸಿನಿಮಾದ ಕಟ್ಟಪ್ಪ ಪಾತ್ರಕ್ಕಾಗಿ ಸತ್ಯರಾಜ್ ವಿಶ್ವಾದ್ಯಂತ ಖ್ಯಾತಿಯನ್ನು ಗಳಿಸಿದರು. ಅವರು ಇನ್ನೂ ಅನೇಕ ಪ್ರೇಕ್ಷಕರಿಗೆ ಕಟ್ಟಪ್ಪ ಎಂತಲೇ ಪರಿಚಿತರಾಗಿದ್ದಾರೆ.

Continue Reading

ಮಾಲಿವುಡ್

Kanakalatha Passes Away: 350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ನಟಿ ಇನ್ನಿಲ್ಲ

Kanakalatha Passes Away: ಕಿರುತೆರೆ ಧಾರಾವಾಹಿಗಳಲ್ಲಿ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ನಿಭಾಯಿಸುತ್ತಿದ್ದರು ನಟಿ ಕನಕಲತಾ. ನಟಿ ಪಾರ್ಕಿನ್ಸನ್ ಕಾಯಿಲೆ ಮತ್ತು ಬುದ್ಧಿಮಾಂದ್ಯತೆಯಿಂದ (dementia and Parkinson’s disease) ಬಳಲುತ್ತಿದ್ದರು ಎಂದು ವರದಿಯಾಗಿದೆ.ಮೇ 6ರಂದು ತಿರುವನಂತಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಕೊನೆಯದಾಗಿ 2023 ರಲ್ಲಿ ಗಣೇಶ್ ರಾಜ್ ಅವರ ‘ಪೂಕ್ಕಲಂ’ ಚಿತ್ರದಲ್ಲಿ ಕಾಣಿಸಿಕೊಂಡರು.

VISTARANEWS.COM


on

Kanakalatha Passes Away Film serial actor Mollywood
Koo

ಬೆಂಗಳೂರು: ಮಾಲಿವುಡ್‌ ಖ್ಯಾತ ನಟಿ ಕನಕಲತಾ ಅವರು (Kanakalatha passes away) ಮೇ 6ರಂದು ತಿರುವನಂತಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. 2021 ರಿಂದ ಪಾರ್ಕಿನ್ಸನ್ ಕಾಯಿಲೆ ಮತ್ತು ಬುದ್ಧಿಮಾಂದ್ಯತೆಯಿಂದ (dementia and Parkinson’s disease) ಬಳಲುತ್ತಿದ್ದರು ಎಂದು ವರದಿಯಾಗಿದೆ.

ದಕ್ಷಿಣ ಭಾರತದ ಶ್ರೇಷ್ಠ ನಟಿ ಕನಕಲತಾ 350ಕ್ಕೂ ಹೆಚ್ಚು ಚಲನಚಿತ್ರಗಳು ಮತ್ತು 50ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ನಟಿಸಿದ್ದರು. ಅನೇಕ ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಒಂಬತ್ತನೇ ತರಗತಿಯಿಂದಲೇ ರಂಗಭೂಮಿ ಮತ್ತು ನಾಟಕದಲ್ಲಿ ತೊಡಗಿಸಿಕೊಂಡಿದ್ದ ಅವರು ರಂಗಭೂಮಿಯಲ್ಲಿ ತಮ್ಮ ಅಸಾಧಾರಣ ಪ್ರತಿಭೆಯಿಂದ ಸಿನಿಮಾ ಕ್ಷೇತ್ರವನ್ನು ಪ್ರವೇಶಿಸಿದರು.

ಈಗಾಗಲೇ ಹೇಳಿದಂತೆ ಕನಕಲತಾ ಅವರು ಪಾರ್ಕಿನ್ಸನ್‌ ಮತ್ತು ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದರು. ಕನಕಲತಾ ಅವರ ಜೀವನದ ಕೊನೆಯ ಕೆಲವು ವರ್ಷಗಳಲ್ಲಿ ತುಂಬಾ ಕಷ್ಟಪಟ್ಟಿದ್ದರು. ತನ್ನ ಹೆಸರನ್ನು ನೆನಪಿಸಿಕೊಳ್ಳಲಾಗದಷ್ಟು, ಟಿವಿಯಲ್ಲಿ ತನ್ನ ಸಿನಿಮಾ ಕಂಡರೂ ಅದು ತಾನೇ ಎಂದು ಗುರುತಿಸಲಾಗದಷ್ಟು ಆರೋಗ್ಯ ಹದಗೆಟ್ಟಿತ್ತು ಎಂದು ವರದಿ ಆಗಿದೆ.

ಇದನ್ನೂ ಓದಿ: Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

ಮಲಯಾಳಂ ನಟಿ ಕನಕಲತಾ ಅವರು ಆಗಸ್ಟ್‌ 24, 1960ರಲ್ಲಿ ಕೇರಳದ ಕೊಲ್ಲಂನಲ್ಲಿ ಪರಮೇಶ್ವರನ್‌ ಪಿಳ್ಳೈ ಮತ್ತು ಚಿನ್ನಮ್ಮ ದಂಪತಿಯ ಪುತ್ರಿಯಾಗಿ ಜನಿಸಿದರು. ಇವರು ಕೊಲ್ಲಾಮ್‌ನ ಸರಕಾರಿ ಮಹಿಳಾ ಶಾಲೆಯಲ್ಲಿ ಶಿಕ್ಷಣ ಪಡೆದರು. ಸಿನಿಮಾರಂಗಕ್ಕೆ ಪ್ರವೇಶಿಸುವ ಮೊದಲು ಅವರು ರಂಗಭೂಮಿ ಕಲಾವಿದೆಯಾಗಿದ್ದರು.

‘ಚಿಲ್ಲು’, ‘ಕರಿಯಿಲಕ್ಕಟ್ಟು ಪೋಲ್’, ‘ಜಾಗ್ರತ’, ‘ಕಿರೀಟಂ’, ‘ಸ್ಪಡಿಕಂ’, ಮತ್ತು ‘ಹರಿಕೃಷ್ಣನ್ಸ್’ ಸೇರಿದಂತೆ ಕೆಲವು ಪ್ರಮುಖ ಮಲಯಾಳಂ ಚಿತ್ರಗಳಲ್ಲಿನ ಅವರ ನೈಜ ಅಭಿನಯಕ್ಕೆ ಸಿನಿರಸಿಕರು ಮನಸೋತಿದ್ದರು. ಕೊನೆಯದಾಗಿ 2023 ರಲ್ಲಿ ಗಣೇಶ್ ರಾಜ್ ಅವರ ‘ಪೂಕ್ಕಲಂ’ ಚಿತ್ರದಲ್ಲಿ ಕಾಣಿಸಿಕೊಂಡರು.

ಪೃಥ್ವಿರಾಜ್ ಸುಕುಮಾರನ್ ಜತೆ 2006ರಲ್ಲಿ ತೆರೆಕಂಡ ‘ಪಾಕಲ’ ಚಿತ್ರದಲ್ಲಿ ಕನಕಲತಾ ತೆರೆ ಹಂಚಿಕೊಂಡಿದ್ದರು. ಪೃಥ್ವಿರಾಜ್ ಸುಕುಮಾರನ್ ಕೂಡ ನಟಿಯ ಪೋಸ್ಟ್‌ ಹಾಕಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಕಿರುತೆರೆ ಧಾರಾವಾಹಿಗಳಲ್ಲಿ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ನಿಭಾಯಿಸುತ್ತಿದ್ದರು ನಟಿ.

Continue Reading
Advertisement
Maggi Tragedy
ದೇಶ23 mins ago

Maggi Tragedy: ಮ್ಯಾಗಿ ತಿಂದ ಬಳಿಕ 10 ವರ್ಷದ ಬಾಲಕ ಸಾವು, ಒಂದೇ ಕುಟುಂಬದ ಐವರು ಅಸ್ವಸ್ಥ

Viral News
ವೈರಲ್ ನ್ಯೂಸ್30 mins ago

Viral News: ಲಾರಿಗೆ ಡಿಕ್ಕಿ ಹೊಡೆಯಿತು ಕಂತೆ ಕಂತೆ ನಗದು ಸಾಗಿಸುತ್ತಿದ್ದ ವ್ಯಾನ್‌; ನೋಟಿನ ರಾಶಿ ಹೇಗಿದೆ ನೋಡಿ

Morning Tips
ಲೈಫ್‌ಸ್ಟೈಲ್2 hours ago

Morning Tips: ಬೆಳಗ್ಗೆ 7 ಗಂಟೆಯೊಳಗೆ ನೀವು ಈ 7 ಕೆಲಸಗಳನ್ನು ಮಾಡುತ್ತೀರಾ?

Karnataka Weather Forecast
ಮಳೆ2 hours ago

Karnataka Weather : ಮೇ 13ರ ತನಕ ಈ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಯಂಕರ ಮಳೆ; ಬಿರುಗಾಳಿಯು ಸಾಥ್‌

Solar
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಸೌರ ವಿದ್ಯುತ್‌ ಉತ್ಪಾದನೆಯಲ್ಲಿ ಭಾರತ ಆತ್ಮನಿರ್ಭರ ಸಾಧನೆ ಶ್ಲಾಘನೀಯ

Protein Supplements
ಆರೋಗ್ಯ3 hours ago

Protein Supplements: ಪ್ರೊಟಿನ್‌ ಸಪ್ಲಿಮೆಂಟ್‌ನ ಸೈಡ್‌ ಎಫೆಕ್ಟ್‌ ಏನೇನು? ರಾಷ್ಟ್ರೀಯ ಪೌಷ್ಟಿಕಾಂಶ ಸಂಸ್ಥೆಯ ಸೂಚನೆ ಇಲ್ಲಿದೆ

Shankara Jayanti 2024
ಧಾರ್ಮಿಕ4 hours ago

Shankara Jayanti 2024: ಇಂದು ಶಂಕರ ಜಯಂತಿ; ಶಂಕರಾಚಾರ್ಯರ ಕುರಿತ 9 ಕುತೂಹಲಕರ ಸಂಗತಿಗಳು

International Nurses’s Day
ಆರೋಗ್ಯ4 hours ago

International Nurses’s Day: ಇಂದು ನರ್ಸ್‌ಗಳ ದಿನ; ಈ ದಿನಾಚರಣೆ ಹಿನ್ನೆಲೆ ಏನು?

Dina Bhavishya
ಭವಿಷ್ಯ4 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

IPL 2024
ಪ್ರಮುಖ ಸುದ್ದಿ8 hours ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು18 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ3 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌