Manoranjan Prabhakar | ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ವಿಧಿವಶ - Vistara News

ಕಿರುತೆರೆ

Manoranjan Prabhakar | ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ವಿಧಿವಶ

ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ (Manoranjan Prabhakar) ಬುಧವಾರ ನಿಧನ ಹೊಂದಿದ್ದಾರೆ. ಪತ್ನಿ, ಒಬ್ಬ ಪುತ್ರ ಹಾಗೂ ಒಬ್ಬರು ಪುತ್ರಿಯನ್ನು ಅಗಲಿದ್ದಾರೆ.

VISTARANEWS.COM


on

Manoranjan Prabhakar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಸಿನಿಮಾ ಹಾಗೂ ಕಿರುತೆರೆ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ (Manoranjan Prabhakar) ಬುಧವಾರ (ಡಿಸೆಂಬರ್‌ 14) ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.

ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಓರ್ವ ಪುತ್ರಿ ಇದ್ದಾರೆ. ೮೦೦ಕ್ಕೂ ಹೆಚ್ಚು ಸಂಗೀತದ ಆಲ್ಬಂ ಹೊರತಂದಿರುವ ಇವರು, ಮನೋರಂಜನ್ ಹೆಸರಿನ ತಂಡವನ್ನು ಕಟ್ಟಿಕೊಂಡು ಸಾಕಷ್ಟು ಕಾರ್ಯಕ್ರಮಗಳನ್ನು ನೀಡಿದ್ದಾರೆ.

ʻಕಾರ್ತಿಕ ದೀಪʼ ಸೇರಿದಂತೆ ಅನೇಕ ಧಾರಾವಾಹಿಗಳಿಗೆ ಶೀರ್ಷಿಕೆ ಸಂಗೀತವನ್ನು ನೀಡಿದ್ದಾರೆ. ಇವರು 70ರ ದಶಕದ ಆರಂಭದಲ್ಲಿ ಸಂಗೀತ ಕ್ಷೇತ್ರಕ್ಕೆ ಕಾಲಿಟ್ಟರು. ಮನೋರಂಜನ್‌ ತಂಡದ ಹೆಸರಿನಲ್ಲಿ ಕಾರ್ಯಕ್ರಮವನ್ನು ನೀಡುತ್ತಿದ್ದರು. 1980ರ ಅವಧಿಯಲ್ಲಿ ಇದು ಹೆಸರಾಂತ ತಂಡವಾಗಿತ್ತು. ಸಂಗೀತ ಕುಟುಂಬದಿಂದಲೇ ಬೆಳೆದು ಬಂದಿದ್ದ ಮನೋರಂಜನ್ ತಂದೆ ಪಂಡಿತ್ ಬಿ.ಎನ್. ಪಾರ್ಥಸಾರಥಿ ನಾಯ್ಡು ಕೂಡ ಸಂಗೀತದಲ್ಲಿ ಪಾಂಡಿತ್ಯ ಹೊಂದಿದ್ದರು.

ಇದನ್ನೂ ಓದಿ | K Muralidharan | ಹಿರಿಯ ನಿರ್ಮಾಪಕ ಕೆ. ಮುರಳೀಧರನ್ ವಿಧಿವಶ

90ರ ದಶಕದಲ್ಲಿ ಅವರು ಕೆಲಕಾಲ ಆದರ್ಶ ಫಿಲ್ಮ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಶಿಕ್ಷಕರಾಗಿದ್ದರು. ಸಂಗೀತಾಸಕ್ತರಿಗಾಗಿ ತಮ್ಮದೇ ಆದ ಶ್ರುತಿಲಯ ಕಲ್ಚರಲ್ ಅಕಾಡೆಮಿ ಪ್ರಾರಂಭಿಸಿ ಸಂಗೀತ ಕ್ಷೇತ್ರಕ್ಕೆ ಹೊಸ ಹೊಸ ಪ್ರತಿಭೆಗಳನ್ನು ನೀಡಿದ್ದಾರೆ.
ಪ್ರಭಾಕರ್ ಅವರು ಭಾರತ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಡಿಯಲ್ಲಿ ಭಾರತದ ಚಲನಚಿತ್ರ ವಿಭಾಗಕ್ಕಾಗಿ 15ಕ್ಕೂ ಹೆಚ್ಚು ಸಾಕ್ಷ್ಯಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ. ಅವರು 2000ರಲ್ಲಿ “ಗಾಳಿ ಮಾತು” ಎಂಬ ಚಲನಚಿತ್ರವನ್ನು ಸಹ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ | Gandasi Nagaraj | ಚಂದನವನದ ಹಿರಿಯ ವಸ್ತ್ರಾಲಂಕಾರ, ಹಾಸ್ಯ ಕಲಾವಿದ ಗಂಡಸಿ ನಾಗರಾಜ್ ವಿಧಿವಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Amruthadhaare Serial: ಇಂದು ಭೂಮಿಕಾಗೆ ಹುಟ್ಟು ಹಬ್ಬ: ರೀಲ್‌ ಗಂಡ ಎಸ್ಟೇಟ್​ ಬರೆದು ಕೊಟ್ರು! ರಿಯಲ್‌ ಗಂಡ ಕೊಟ್ಟ ಗಿಫ್ಟ್‌ ಏನು?

Amruthadhaare Serial: ಅಮೃತಧಾರೆ ಧಾರಾವಾಹಿ ʻಬಢೇ ಅಚ್ಚೇ ಲಗತೇ ಹೈʼ(Bade Acche Lagte Hain) ಹಿಂದಿ ಧಾರಾವಾಹಿಯ ರಿಮೇಕ್‌ ಆಗಿದೆ. ನಟ ರಾಜೇಶ್ ಅವರು ಗೌತಮ್ ಎನ್ನುವ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಛಾಯಾ ಸಿಂಗ್ ಭೂಮಿಕಾ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. . ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ.

VISTARANEWS.COM


on

Amruthadhaare Serial bhoomika in birthday chaya singh
Koo

ಇಂದು (ಮೇ 16) ಅಮೃತಧಾರೆ ಧಾರಾವಾಹಿ (Amruthadhaare Serial) ಖ್ಯಾತಿಯ ನಟಿ ಛಾಯಾ ಸಿಂಗ್ (Chaya Singh)​ ಅವರಿಗೆ ಜನುಮದಿನದ ಸಂಭ್ರಮ. ಧಾರಾವಾಹಿಯಿಂದ ಜನರಿಗೆ ಭೂಮಿಕಾ ಎಂದೇ ಪರಿಚಯ.

ನಟಿಯ ವಿಶೇಷ ದಿನದಂದು ಜೀ ಕನ್ನಡ ವಾಹಿನಿ ಛಾಯಾ ಸಿಂಗ್​ ಕುರಿತು ವಿಡಿಯೊ ಒಂದನ್ನು ರಿಲೀಸ್​ ಮಾಡಿದೆ. ವಯಸ್ಸಾದರೂ ಮದುವೆಯಾಗದೇ ಉಳಿದ ಮಧ್ಯಮ ಕುಟುಂಬದ ಹೆಣ್ಣುಮಗಳೊಬ್ಬಳು ಹೇಗೆ ಕೋಟ್ಯಧಿಪತಿ ಉದ್ಯಮಿ ಜತೆ ಜೀವನ ನಡೆಸುತ್ತಾಳೆ ಎಂಬುದೇ ಈ ಧಾರಾವಾಹಿಯ ಒನ್‌ಲೈನ್‌ ಸ್ಟೋರಿ.

ಧಾರಾವಾಹಿಯಲ್ಲಿ ಪತಿ ಗೌತಮ್‌ ಹೆಂಡತಿಯ ಹುಟ್ಟುಹಬ್ಬಕ್ಕೆಂದು ಚಿಕ್ಕಮಗಳೂರಿನ ಎಸ್ಟೇಟ್​ ಬರೆದು ಕೊಟ್ಟಿದ್ದಾನೆ. ಇದೀಗ ರಿಯಲ್‌ ಗಂಡ ಪತ್ನಿಗೆ ಏನು ಗಿಫ್ಟ್‌ ಕೊಟ್ಟಿದ್ದಾರೆ? ಎಂದು ನೆಟ್ಟಿಗರು ಪ್ರಶ್ನೆ ಮೂಲಕ ನಟಿಯ ಕಾಲೆಳೆಯುತ್ತಿದ್ದಾರೆ.

ಛಾಯಾ ಅವರ ರಿಯಲ್​ ಲೈಫ್​ ಪತಿಯ ಹೆಸರು ಕೃಷ್ಣ. ಇನ್​ಸ್ಟಾಗ್ರಾಮ್​ನಲ್ಲಿ ಅವರು ಪತಿಯ ಜತೆ ಆಗಾಗ ಫೋಟೋ ಶೇರ್​ ಮಾಡಿಕೊಳ್ಳುತ್ತಿರುತ್ತಾರೆ.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

ಕೃಷ್ಣ ಮತ್ತು ಛಾಯಾ ಮದುವೆಯಾಗಿ 11 ವರ್ಷಗಳೇ ಕಳೆದಿವೆ. ಛಾಯಾ ಅವರಿಗೆ ಕೃಷ್ಣ ಅವರ ಪರಿಚಯವಾದದ್ದು, ತಮಿಳು ಚಿತ್ರದಲ್ಲಿ ನಟಿಸುವ ಸಮಯದಲ್ಲಿ.
ಕನ್ನಡ ಸಿನಿರಂಗದಲ್ಲಿಯೂ ಸಕ್ರಿಯರಾಗಿರುವ ಛಾಯಾ, 2000ನೇ ಇಸವಿಯಲ್ಲಿ ತೆರೆಕಂಡ ಪಿ ಶೇಷಾದ್ರಿ ನಿರ್ದೇಶನದ `ಮುನ್ನುಡಿ’ ಚಿತ್ರದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. 
Continue Reading

ಕಿರುತೆರೆ

Bhavani Singh: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಸುಬ್ಬಲಕ್ಷ್ಮಿ ಸಂಸಾರʼ ಧಾರಾವಾಹಿ ನಟ!

Bhavani Singh: ಪಂಕಜ ಶಿವಣ್ಣ-ಭವಾನಿಸಿಂಗ್ ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಬೇಬಿ ಬಂಪ್‌ ಫೋಟೊ ಶೂಟ್‌ ಮಾಡಿಸಿಕೊಂಡಿದ್ದಾರೆ ಪಂಕಜ್‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಜೋಡಿಗೆ ವಿಶ್‌ ಮಾಡುತ್ತಿದ್ದಾರೆ ಫ್ಯಾನ್ಸ್‌.

VISTARANEWS.COM


on

Bhavani Singh pankaj shivanna couple expecting-their first child
Koo

‘ಚರಣದಾಸಿ’, ‘ಸುಬ್ಬಲಕ್ಷ್ಮಿ ಸಂಸಾರ’,’ರಕ್ಷಾ ಬಂಧನ’ ಖ್ಯಾತಿಯ ಕಿರುತೆರೆ ನಟ ಭವಾನಿ ಸಿಂಗ್ (Bhavani Singh) ಅವರು ತಂದೆಯಾಗುತ್ತಿದ್ದಾರೆ. ಪತ್ನಿ ಪಂಕಜ ಶಿವಣ್ಣ ಕೂಡ ನಟಿಯಾಗಿದ್ದು, ಇದೀಗ ಜೋಡಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದೆ.

ಭವಾನಿ ಸಿಂಗ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್‌ ಶೇರ್‌ ಮಾಡಿ ʻʻನಮ್ಮ ಸಂಸಾರ ದೊಡ್ಡದಾಗುತ್ತಿದೆʼʼ ಎಂದು ಬರೆದುಕೊಂಡಿದ್ದಾರೆ.

‘ಚರಣದಾಸಿ’ ಧಾರಾವಾಹಿ ಮೂಲಕ ನಟನೆಗೆ ಕಾಲಿಟ್ಟರು ನಟ ಭವಾನಿ ಸಿಂಗ್. ಪಂಕಜ ಶಿವಣ್ಣ ಅವರು ‘ಸುಬ್ಬಲಕ್ಷ್ಮಿ ಸಂಸಾರ’ ಧಾರಾವಾಹಿ ಮೂಲಕ ಭವಾನಿ ಸಿಂಗ್ ಅವರಿಗೆ ಪರಿಚಯವಾದರು.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

2019ರಲ್ಲಿ ಇವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದೀಗ ಐದು ವರ್ಷಗಳ ನಂತರ ಈ ಜೋಡಿ ಸಿಹಿಸುದ್ದಿಯನ್ನು ಹಂಚಿಕೊಂಡಿದೆ.
Continue Reading

ಕಿರುತೆರೆ

Star Suvarna: ಕಿರುತೆರೆಗೆ ಬರ್ತಿದೆ ಹೊಸ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ’: ಪ್ರಸಾರ ಯಾವಾಗ?

Star Suvarna: ಇಬ್ಬರು ಜನಪ್ರಿಯ ಆ್ಯಂಕರ್‌ಗಳನ್ನು ಹೊಂದಿರುವ ಈ ಶೋ ಒಟ್ಟು ಮೂರು ಸುತ್ತುಗಳನ್ನು ಹೊಂದಿರುತ್ತದೆ. ಇನ್ನು ‘Huu ಅಂತೀಯಾ…Uhuu ಅಂತೀಯಾ’ ಶೋ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿರೋದು ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ. ಹಾಗೂ ನಟನೆ ಹಾಗು ತನ್ನ ಹಾಸ್ಯಗಾರಿಕೆಯ ಮೂಲಕ ನೋಡುಗರ ಮನಗೆದ್ದಿರುವ ಅರುಣ್ ಹರಿಹರನ್. ಇವರಿಬ್ಬರು ಈ ಶೋನ ರೂವಾರಿಗಳಾಗಿದ್ದಾರೆ.

VISTARANEWS.COM


on

Star Suvarna HuAnthiya UhuuAnthiya new celebrity game show
Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ರಿಯಾಲಿಟಿ ಶೋಗಳ ಸರದಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ʻಸ್ಟಾರ್ ಸುವರ್ಣʼ ವಾಹಿನಿಯು ಇದೀಗ ‘Huu ಅಂತೀಯಾ…Uhuu ಅಂತೀಯಾ’ (HuAnthiya UhuuAnthiya) ಎಂಬ (Star Suvarna) ಹೊಸ ಬಗೆಯ ವಿನೂತನ ಗೇಮ್ ಶೋ ಅನ್ನು ಪ್ರಸಾರ ಮಾಡಲಿದೆ.

ಇಬ್ಬರು ಜನಪ್ರಿಯ ಆ್ಯಂಕರ್‌ಗಳನ್ನು ಹೊಂದಿರುವ ಈ ಶೋ ಒಟ್ಟು ಮೂರು ಸುತ್ತುಗಳನ್ನು ಹೊಂದಿರುತ್ತದೆ. ಸೆಲೆಬ್ರಿಟಿ ಸ್ಪರ್ಧಿಗಳಿಗೆ 6 ಲಕ್ಷ ರೂಪಾಯಿಗಳನ್ನು ಗೆಲ್ಲುವ ಅವಕಾಶವಿರುತ್ತದೆ. ಮೊದಲ ಸುತ್ತಿನಲ್ಲಿ ಸ್ಪರ್ಧಿಗಳು ಒಬ್ಬರ ನಂತರ ಒಬ್ಬರು ಆಡುತ್ತಾರೆ. ನಿರೂಪಕರು ನೀಡಿದ ಸತ್ಯ ಮತ್ತು ಸುಳ್ಳು ಸಂಗತಿಗಳನ್ನು ಸ್ಪರ್ಧಿಗಳು ಸರಿಯಾಗಿ ಆರಿಸಿದರೆ 1 ಲಕ್ಷ ರೂಪಾಯಿ ಗೆಲ್ಲುವ ಅವಕಾಶವಿದೆ.

ಇನ್ನು ಎರಡನೇ ಸುತ್ತಿನಲ್ಲಿ ಸ್ಪರ್ಧಿಗಳಿಗೆ ಆಹಾರವನ್ನು ಸೇವಿಸುವ ಸವಾಲಿರುತ್ತದೆ, ಮಜಾ ತುಂಬಿರುವ ಟ್ವಿಸ್ಟ್ ಗಳೊಂದಿಗೆ ಒಟ್ಟು 60 ಸೆಕೆಂಡ್‌ಗಳ ಸಮಯವನ್ನು ನೀಡಲಾಗುತ್ತದೆ. ಇದರಲ್ಲಿ ಗೆದ್ದ ವಿಜೇತರು 2 ಲಕ್ಷ ರೂಪಾಯಿಗಳನ್ನು ಗೆಲ್ಲಬಹುದು. ಮೂರನೇ ಹಾಗು ಕೊನೆಯ ಸುತ್ತಿನಲ್ಲಿ ಕೇವಲ ಇಬ್ಬರು ಸ್ಪರ್ಧಿಗಳು ತಮ್ಮ ಅದೃಷ್ಟದ ಆಧಾರದ ಮೇಲೆ ಆಡುತ್ತಾರೆ, ಗೆದ್ದ ಸ್ಪರ್ಧಿಗೆ 3 ಲಕ್ಷಗಳನ್ನು ಗೆಲ್ಲುವ ಅವಕಾಶವಿದೆ. ಇದು ಈ ಗೇಮ್ ಶೋ ನ ನಿಯಮಾವಳಿಗಳು.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

ಇನ್ನು ‘Huu ಅಂತೀಯಾ…Uhuu ಅಂತೀಯಾ’ ಶೋ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿರೋದು ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ. ಹಾಗೂ ನಟನೆ ಹಾಗು ತನ್ನ ಹಾಸ್ಯಗಾರಿಕೆಯ ಮೂಲಕ ನೋಡುಗರ ಮನಗೆದ್ದಿರುವ ಅರುಣ್ ಹರಿಹರನ್. ಇವರಿಬ್ಬರು ಈ ಶೋನ ರೂವಾರಿಗಳಾಗಿದ್ದಾರೆ. ಮೊದಲ ಗ್ರ್ಯಾಂಡ್ ಓಪನಿಂಗ್ ಸಂಚಿಕೆಯಲ್ಲಿ ಸೆಲೆಬ್ರಿಟಿ ಸ್ಫರ್ಧಿಗಳಾಗಿ ನಟ ಡಾರ್ಲಿಂಗ್ ಕೃಷ್ಣ, ನಟಿಯರಾದ ಮಿಲನಾ ನಾಗರಾಜ್ ಹಾಗು ಅಮೃತಾ ಅಯ್ಯಂಗಾರ್ ಭಾಗವಹಿಸಲಿದ್ದಾರೆ.

ಈ ರಿಯಾಲಿಟಿ ಶೋ ನ ಟೈಟಲ್ ಟ್ರ್ಯಾಕ್‌ಗೆ ನೋಡುಗರು ಫಿದಾ ಆಗಿದ್ದು, ಮಸ್ತ್ ಮನರಂಜನೆಗೆ ಕಾತುರತೆಯಿಂದ ಕಾಯುತ್ತಿದ್ದಾರೆ. ಅಷ್ಟೇ ಅಲ್ಲದೆ ಮನೆಯಲ್ಲಿ ಕುಳಿತು ವೀಕ್ಷಿಸುವ ವೀಕ್ಷಕರಿಗೂ “ಐ ಫೋನ್” ಗೆಲ್ಲುವ ಅವಕಾಶವನ್ನು ಸ್ಟಾರ್ ಸುವರ್ಣ ವಾಹಿನಿಯು ನೀಡುತ್ತಿದೆ. ಮೊದಲ ಹಾಗು ಎರಡನೇ ಸಂಚಿಕೆಯ ಕೊನೆಯಲ್ಲಿ ಕೇಳುವ ಪ್ರಶ್ನೆಗೆ ಸರಿಯಾದ ಉತ್ತರವನ್ನು ನೀಡಿದರೆ ‘I Phone’ ಗೆಲ್ಲುವ ಅವಕಾಶವನ್ನು ನೋಡುಗರು ಪಡೆಯುತ್ತಾರೆ.

ಇದೀಗ ಪ್ರೇಕ್ಷಕರನ್ನು ಮನರಂಜಿಸಲು ಬರ್ತಿದೆ ಹೊಚ್ಚ ಹೊಸ ಯೂನಿಕ್ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ. ‘ ಇದೇ ಮೇ 19 ರಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ ಸ್ವಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Continue Reading

ಕಿರುತೆರೆ

Anchor Anushree: ಖುಷಿಯಾಗಿದ್ರೂ ಕಷ್ಟ, ಸಾಧನೆ ಹೊಗಳಿದ್ರೆ ಬಕೆಟ್‌ ಅಂತೀರಾ: ಅನುಶ್ರೀ ಬೇಸರ

Anchor Anushree: ಕೆಲವು ದಿನಗಳ ಹಿಂದೆ ತುಳು ಪಾಡ್‌ಕಾಸ್ಟ್‌ನಲ್ಲಿ ಸಂದರ್ಶನ ಕೊಟ್ಟಿದ್ದರು. ತಮ್ಮ ಮದುವೆ ವಿಚಾರ ಸೇರಿದಂತೆ ಹಲವು ವೈಯಕ್ತಿಕ ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದರು. ಇದೀಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ ಮೂಲಕ ನೇರಪ್ರಸಾರದಲ್ಲಿ ಬಂದು ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು ಅನುಶ್ರೀ ಅವರು ತಮ್ಮ ವಿರುದ್ಧ ಕೆಲವರು ಮಾಡುವ ಟೀಕೆಗಳ ಕುರಿತು ನೋವು ತೋಡಿಕೊಂಡಿದ್ದಾರೆ.

VISTARANEWS.COM


on

Anchor Anushree talking with fans on instagram live
Koo

ಕಿರುತೆರೆ ಜನಪ್ರಿಯ ನಿರೂಪಕಿ, ಸ್ಯಾಂಡಲ್‌ವುಡ್‌ ನಟಿ (Sandalwood star) ಅನುಶ್ರೀ (Anchor anushree) ಅವರು ಕೆಲವು ದಿನಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ತುಳು ಪಾಡ್‌ಕಾಸ್ಟ್‌ನಲ್ಲಿ ಸಂದರ್ಶನ ಕೊಟ್ಟಿದ್ದರು. ತಮ್ಮ ಮದುವೆ ವಿಚಾರ ಸೇರಿದಂತೆ ಹಲವು ವೈಯಕ್ತಿಕ ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದರು.

ಇದೀಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ ಮೂಲಕ ನೇರಪ್ರಸಾರದಲ್ಲಿ ಬಂದು ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದಾರೆ. ಮೇ 13ರಂದು ನೇರ ಪ್ರಸಾರದಲ್ಲಿ ಬಂದಿರುವ ಅನುಶ್ರೀಯವರು, ಕೆಲವೊಂದು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಈ ಸಂದರ್ಭದಲ್ಲಿ ಅವರು ಅನುಶ್ರೀ ಅವರು ತಮ್ಮ ವಿರುದ್ಧ ಕೆಲವರು ಮಾಡುವ ಟೀಕೆಗಳ ಕುರಿತು ನೋವು ತೋಡಿಕೊಂಡಿದ್ದಾರೆ.

ʻʻಖುಷಿಯಾಗಿದ್ದರೆ ಓವರ್​ ಆ್ಯಕ್ಟಿಂಗ್​ ಅಂತೀರಿ, ಸ್ವಲ್ಪ ಕಷ್ಟ ಹೇಳಿಕೊಂಡು ಕಣ್ಣೀರು ಹಾಕಿದರೆ ಅದಕ್ಕೂ ಓವರ್ ಆ್ಯಕ್ಟಿಂಗ್​ ಅಂತೀರಿ, ಏನನ್ನಾದರೂ ನೋಡಿ ಆಶ್ಚರ್ಯ ಪಟ್ಟರೆ ಅದಕ್ಕೂ ಹಾಗೆಯೇ ಹೇಳುತ್ತೀರಿ… ಸಾಧನೆಯನ್ನು ಹೊಗಳಿದರೆ ಬಕೆಟ್​ ಅಂತೀರಿ. ಒಂದೊಂದು ಭಾವನೆಗೂ ಒಂದೊಂದು ಹೆಸರು ಕೊಡ್ತೀರಾʼʼ ಎಂದು ನೋವು ತೋಡಿಕೊಂಡರು. ʻʻಹತ್ತು ಜನರು ಹೀಗೆಲ್ಲಾ ಹೇಳಿದ್ರೂ, ಕೋಟ್ಯಂತರ ಮಂದಿ ಹರಸುವವರು ಇದ್ದಾರೆ. ಅವರ ಹೊಟ್ಟೆ ತಣ್ಣಗಾಗಿರಲಿʼʼ ಎಂದಿದ್ದಾರೆ.

Continue Reading
Advertisement
Sunil Chhetri
ಕ್ರೀಡೆ12 mins ago

Sunil Chhetri: ಭಾರತದ ಕಾಲ್ಚೆಂಡಿನ ಮಾಂತ್ರಿಕ ಸುನೀಲ್ ಚೆಟ್ರಿ ಸಾಧನೆಯೇ ರೋಚಕ

Fire Accident
ದೇಶ13 mins ago

Fire Accident: ಬಿಜೆಪಿ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ; ಅಗ್ನಿಶಾಮಕ ಸಿಬ್ಬಂದಿ ದೌಡು

XVU300
ಆಟೋಮೊಬೈಲ್15 mins ago

Mahindra XUV 3XO : ಮಹೀಂದ್ರಾದ ವಿಶೇಷ ದಾಖಲೆ; 60 ನಿಮಿಷದಲ್ಲಿ 50 ಸಾವಿರ ಕಾರು ಬುಕಿಂಗ್​!

Namrata Gowda Holiday Look in Red Ruffle Layered Maxi Dress
ಫ್ಯಾಷನ್20 mins ago

Namratha Gowda: ರೆಡ್‌ ರಫಲ್‌ ಲೇಯರ್‌ ಮ್ಯಾಕ್ಸಿ ಡ್ರೆಸ್‌ನಲ್ಲಿ ನಟಿ ನಮ್ರತಾ ಗೌಡ ಹಾಲಿಡೇ ಲುಕ್‌!

Viral News
ವೈರಲ್ ನ್ಯೂಸ್20 mins ago

Viral News: ಶ್ವಾನದ ಜತೆ ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿಯ ವೇಳೆ ಹಲ್ಲೆ; ಶಾಕಿಂಗ್‌ ವಿಡಿಯೊ ಇಲ್ಲಿದೆ

Karnataka Weather Forecast
ಮಳೆ33 mins ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

BMW X3 xDrive20d
ಪ್ರಮುಖ ಸುದ್ದಿ48 mins ago

BMW X3 : ಬಿಎಂಡಬ್ಲ್ಯು ಎಕ್ಸ್3 ಎಕ್ಸ್ ಡ್ರೈವ್ 20ಡಿ ಎಂ ಸ್ಪೋರ್ಟ್ ಶಾಡೋ ಎಡಿಷನ್ ಬಿಡುಗಡೆ

Most costly medicine
ಆರೋಗ್ಯ50 mins ago

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

Cannes 2024 Fashion celebrities trend
ಫ್ಯಾಷನ್55 mins ago

Cannes 2024 Fashion: ಕಾನ್‌ ಫಿಲ್ಮ್‌ ಫೆಸ್ಟಿವಲ್‌ನಲ್ಲಿ ಸೆಲೆಬ್ರೆಟಿಗಳ ಫ್ಯಾಷನ್‌ ಟ್ರೆಂಡ್‌ ಹೇಗಿದೆ ನೋಡಿ!

PM Narendra Modi
ದೇಶ59 mins ago

PM Narendra Modi:”ಅಬ್ಬಾ.. ಎಂಥಾ ಮೇಕಪ್!”- ಮತ್ತೆ ಗಮನ ಸೆಳೆದ ಮೋದಿ; ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ33 mins ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Suspicious Case
ಬೆಂಗಳೂರು6 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ3 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

ಟ್ರೆಂಡಿಂಗ್‌