ಬಾಲಿವುಡ್
Masaba Gupta: ಫ್ಯಾಮಿಲಿ ಗೆಟ್ ಟು ಗೆದರ್ನಲ್ಲಿ ಸಂಭ್ರಮಿಸಿದ ನವದಂಪತಿ ಮಸಾಬಾ-ಸತ್ಯದೀಪ್
ಫ್ಯಾಮಿಲಿ ಗೆಟ್ ಟು ಗೆದರ್ನಲ್ಲಿ ಸಂಭ್ರಮಿಸಿದ ನವದಂಪತಿ ಮಸಾಬಾ-ಸತ್ಯದೀಪ್ (Masaba Gupta). ಕುಟುಂಬದೊಂದಿಗೆ ಮಸಾಬಾ- ಸತ್ಯದೀಪ್ ಕಾಣಿಸಿಕೊಂಡಿದ್ದು ಹೀಗೆ.
South Cinema
Shah Rukh Khan: ಶಾರುಖ್ ಅಭಿಮಾನಿಗಳ ಅಭಿಮಾನದ ಜವಾನ್ ಪೋಸ್ಟರ್ ವೈರಲ್! ಟ್ರೆಂಡ್ ಆಗಿದ್ಯಾಕೆ?
ಸೋಷಿಯಲ್ ಮೀಡಿಯಾದಲ್ಲಿ ಜವಾನ್ ಟ್ರೆಂಡ್ ಆಗುತ್ತಿದೆ. ಇದೀಗ ಜವಾನ್ ಚಿತ್ರೀಕರಣ ಮುಗಿದಿದೆಯಾ ಎಂದು ಅಭಿಮಾನಿಗಳು ಕಮೆಂಟ್ ಮೂಲಕ ಕೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ತಾವೇ ಪೋಸ್ಟರ್ (Shahrukh Khan) ತಯಾರಿಸಿ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಸಿನಿಮಾ ದೃಶ್ಯಗಳು ಆನ್ಲೈನ್ನಲ್ಲಿ ಸೋರಿಕೆ ಆಗಿತ್ತು.
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ (Shahrukh Khan) ಅಭಿನಯದ ʻಪಠಾಣ್ʼ ಸಿನಿಮಾ ಸಕ್ಸೆಸ್ ನಂತರ ಇದೀಗ ಶಾರುಖ್ ಅಭಿಮಾನಗಳ ಚಿತ್ತ ʻಜವಾನ್ʼ ಕಡೆ ಹೋಗಿದೆ. ನಿರ್ದೇಶಕ ಅಟ್ಲೀ ಜತೆಗೆ ಕೈ ಜೋಡಿಸುತ್ತಿದ್ದಾರೆ ನಟ ಶಾರುಖ್. ಜವಾನ್ ಜೂನ್ 2 ರಂದು ಬಿಡುಗಡೆಯಾಗಲಿದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದೆ ಎಂದು ವರದಿಯಾಗಿದೆ. ಇದೀಗ ಶಾರುಖ್ ಅಭಿಮಾನಿಗಳು ತಾವೇ ತಯಾರಿಸದ ಫೋಟೊಗಳನ್ನು ಪೋಸ್ಟ್ ಮಾಡಲು ಆರಂಭಿಸಿದ್ದಾರೆ. ಅಭಿಮಾನಿಗಳ ಅಭಿಮಾನದ ಪೋಸ್ಟರ್ಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಜವಾನ್ ಟ್ರೆಂಡ್ ಆಗುತ್ತಿದೆ. ಇದೀಗ ಜವಾನ್ ಚಿತ್ರೀಕರಣ ಮುಗಿದಿದೆಯಾ ಎಂದು ಅಭಿಮಾನಿಗಳು ಕಮೆಂಟ್ ಮೂಲಕ ಕೇಳುತ್ತಿದ್ದಾರೆ. ಅಷ್ಟೇ ಅಲ್ಲದೇ ತಾವೇ ಪೋಸ್ಟರ್ ತಯಾರಿಸಿ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಸಿನಿಮಾ ದೃಶ್ಯಗಳು ಆನ್ಲೈನ್ನಲ್ಲಿ ಸೋರಿಕೆ ಆಗಿತ್ತು. ಶೂಟಿಂಗ್ ಸೆಟ್ನಲ್ಲಿ ಶಾರುಖ್ ನಿಭಾಯಿಸುತ್ತಿರುವ ಆ್ಯಕ್ಷನ್ ದೃಶ್ಯಗಳು ಲೀಕ್ ಆಗಿತ್ತು. ಇದಾದ ಬಳಿಕ ಶಾರುಖ್ ಖಾನ್ ಅವರ ಅಭಿಮಾನಿಗಳ ಸಂಘಗಳು ಗ್ಲಿಂಪ್ಸ್ಗಳನ್ನು ಸೋರಿಕೆ ಮಾಡದಂತೆ ನೆಟಿಜನ್ಗಳಿಗೆ ವಿನಂತಿಸಿದೆ.
ಅಭಿಮಾನಿಗಳ ಸಂಘ ವಿನಂತಿಸಿದ ಪೋಸ್ಟ್
ಜವಾನ್ ಸಿನಿಮಾದಲ್ಲಿ ಶಾರುಖ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದು ಕಮರ್ಷಿಯಲ್ ಎಂಟರ್ಟೈನರ್ ಎಂದು ಹೇಳಲಾಗಿದೆ. ಗುಪ್ತಚರ ಅಧಿಕಾರಿ ಮತ್ತು ಕಳ್ಳನಾಗಿ ಶಾರುಖ್ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ನಯನತಾರಾ, ಸನ್ಯಾ ಮಲ್ಹೋತ್ರಾ, ಸುನಿಲ್ ಗ್ರೋವರ್ ಸೇರಿದಂತೆ ಇತರರು ಇದ್ದಾರೆ.
ಇದನ್ನೂ ಓದಿ; Shahrukh Khan: ಶಾರುಖ್ ಅಭಿನಯದ ʻಜವಾನ್ʼ ಸಿನಿಮಾ ದೃಶ್ಯ ಲೀಕ್
ಅಭಿಮಾನಿಗಳ ಪೋಸ್ಟ್
ರಾಮ್ ಚರಣ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಿದೆ. ಜವಾನ್ ಸಿನಿಮಾದಲ್ಲಿ ಮುಖ್ಯ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಟಾಲಿವುಡ್ನ ಅಲ್ಲು ಅರ್ಜುನ್ ಅವರಿಗೆ ಸಿನಿ ತಂಡ ಕೇಳಿಕೊಂಡಿತ್ತು. ಆದರೆ ಅಲ್ಲು ಅದಕ್ಕೆ ಒಪ್ಪಿಲ್ಲ ಎಂದು ಹೇಳಲಾಗಿದೆ. ಹಾಗೆಯೇ ದಳಪತಿ ವಿಜಯ್ ಅವರ ಬಳಿಯೂ ಜವಾನ್ ಸಿನಿಮಾದಲ್ಲಿ ನಟಿಸುವುದಕ್ಕೆ ಕೇಳಿಕೊಳ್ಳಲಾಗಿತ್ತು.
ಅಲ್ಲು ಮತ್ತು ದಳಪತಿ ವಿಜಯ್ ಇಬ್ಬರೂ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ಬಿಜಿ ಇರುವ ಹಿನ್ನೆಲೆಯಲ್ಲಿ ಜವಾನ್ ಸಿನಿಮಾಕ್ಕೆ ಒಪ್ಪಿಕೊಂಡಿಲ್ಲ ಎಂದು ಹೇಳಲಾಗಿದೆ.ಖ್ಯಾತ ನಟ ಶಿವರಾಜ್ ಕುಮಾರ್ ಅವರೂ ಈ ಚಿತ್ರದಲ್ಲಿ ವಿಶೇಷ ಪಾತ್ರವೊಂದರಲ್ಲಿ ನಟಿಸುತ್ತಾರೆ ಎನ್ನಲಾಗುತ್ತಿದೆ.
South Cinema
Priyanka Chopra: ಸೋದರಸಂಬಂಧಿ ಪರಿಣಿತಿ ಚೋಪ್ರಾ ಮದುವೆಗೆ ಬಂದಿದ್ದಾರಾ ಪ್ರಿಯಾಂಕಾ ಚೋಪ್ರಾ?
ಕುಟುಂಬ (Priyanka Chopra) ಸಮೇತರಾಗಿ ನಟಿ ಬರುತ್ತಿದ್ದಂತೆ ಸೋದರಸಂಬಂಧಿ ಪರಿಣಿತಿ ಚೋಪ್ರಾ ಅವರ ವದಂತಿಯ ಗೆಳೆಯ, ಎಎಪಿ ಸದಸ್ಯ ರಾಘವ್ ಚಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎಂಬ ಗಾಸಿಪ್ಗಳು ಹರಿದಾಡಿವೆ. ಕೆಲವು ದಿನಗಳಿಂದ, ಪರಿಣಿತಿ ಮತ್ತು ರಾಘವ್ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಇವೆ.
ಬೆಂಗಳೂರು: ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಮಾರ್ಚ್ 31ರ ಮಧ್ಯಾಹ್ನ ನಿಕ್ ಜೋನಾಸ್ ಮತ್ತು ಮಗಳು ಮಾಲತಿ ಮೇರಿ ಅವರೊಂದಿಗೆ ಮುಂಬೈಗೆ ಬಂದಿಳಿದರು. ಕುಟುಂಬ ಸಮೇತರಾಗಿ ನಟಿ ಬರುತ್ತಿದ್ದಂತೆ ಸೋದರಸಂಬಂಧಿ ಪರಿಣಿತಿ ಚೋಪ್ರಾ ಅವರ ವದಂತಿಯ ಗೆಳೆಯ, ಎಎಪಿ ಸದಸ್ಯ ರಾಘವ್ ಚಡ್ಡಾ ಅವರನ್ನು ಭೇಟಿಯಾಗಲಿದ್ದಾರೆ ಎಂಬ ಗಾಸಿಪ್ಗಳು ಹರಿದಾಡಿವೆ. ಕೆಲವು ದಿನಗಳಿಂದ, ಪರಿಣಿತಿ ಮತ್ತು ರಾಘವ್ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಇವೆ.
ದಂಪತಿ ಕುಟುಂಬಗಳು ಶೀಘ್ರದಲ್ಲೇ ರೋಕಾ ಸಮಾರಂಭವನ್ನು ಆಯೋಜಿಸಬಹುದು ಮತ್ತು ಮದುವೆಯ ತಯಾರಿಯಲ್ಲಿದೆ ಎಂದು ವದಂತಿಗಳಿವೆ. ಇದೀಗ ಪ್ರಿಯಾಂಕ ಭಾರತಕ್ಕೆ ಬರುತ್ತಿದ್ದಂತೆ ಮತ್ತಷ್ಟು ಚರ್ಚೆಗಳು ಆಗುತ್ತಿವೆ. ಪರಿಣಿತಿ ಮತ್ತು ಪ್ರಿಯಾಂಕಾ ಇನ್ನೂ ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಇಂಡಿಯಾ ಟುಡೇ ವರದಿಯು ಪ್ರಿಯಾಂಕಾ ಅವರು ರಾಘವ್ ಅವರನ್ನು ಭೇಟಿಯಾಗಬಹುದು ಎಂದು ಹೇಳಿಕೊಂಡಿದೆ.
ʻʻಸಿಟಾಡೆಲ್ ಚಿತ್ರದ ಪ್ರಚಾರಕ್ಕಾಗಿ ಪ್ರಿಯಾಂಕಾ ಶೀಘ್ರದಲ್ಲೇ ಭಾರತಕ್ಕೆ ಬರಲಿದ್ದಾರೆ. ಕೊಲ್ಲಿಯಲ್ಲಿ ಹಿಂತಿರುಗಿ, ನಂತರ ತನ್ನ ಸೋದರಸಂಬಂಧಿ ಪರಿಣಿತಿ ಚೋಪ್ರಾರನ್ನು ಭೇಟಿಯಾಗಲಿದ್ದಾರೆ. ನಟಿ ಪರಿಣಿತಿ ಅವರ ಸ್ನೇಹಿತ ರಾಘವ್ ಚಡ್ಡಾ ಅವರನ್ನು ಭೇಟಿಯಾಗಬಹುದು. ಅವರ ಕುಟುಂಬದವರ ಸಮ್ಮುಖದಲ್ಲಿ ಸಣ್ಣ ಸಮಾರಂಭ ನಡೆಯುವ ಸಾಧ್ಯತೆ ಇದೆʼʼಎಂದು ವರದಿಯಾಗಿದೆ.
ಇದನ್ನೂ ಓದಿ: Priyanka Chopra: ಆರ್ಆರ್ಆರ್ ತಮಿಳು ಸಿನಿಮಾ ಎಂದ ಪ್ರಿಯಾಂಕಾ ಚೋಪ್ರಾ: ಟ್ರೋಲ್ಗೆ ಗುರಿಯಾದ ನಟಿ
ರಾಜ್ಯಸಭಾ ಸಂಸದ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಘವ್ ಚಡ್ಡಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಬಾಲಿವುಡ್ನಲ್ಲಿ ವೇಗವಾಗಿ ಹರಡಿದೆ. ರಾಘವ್ ಚಡ್ಡಾ ಮತ್ತು ಪರಿಣಿತಿ ಚೋಪ್ರಾ ಮಾರ್ಚ್ 29ರ ರಾತ್ರಿ ದೆಹಲಿ ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಪರಿಣಿತಿ ಚೋಪ್ರಾ, ಇಮ್ತಿಯಾಜ್ ಅಲಿ ನಿರ್ದೇಶನದ ‘ಚಮ್ಕಿಲಾ’ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
South Cinema
Priyanka Chopra: ಮೊದಲ ಬಾರಿ ಮಗಳನ್ನು ಭಾರತಕ್ಕೆ ಕರೆತಂದ ಪ್ರಿಯಾಂಕಾ ಚೋಪ್ರಾ- ನಿಕ್ ಜೋನಸ್
ಮಾರ್ಚ್ 31ರಂದು ಮಧ್ಯಾಹ್ನ ನಟಿ ಮುಂಬೈ (Priyanka Chopra) ವಿಮಾನ ನಿಲ್ದಾಣದಲ್ಲಿ ಕುಟುಂಬದೊಂದಿಗೆ ಕಾಣಿಸಿಕೊಂಡಿದ್ದಾರೆ. ಮಾಧ್ಯಮಗಳ ಮುಂದೆ ಮಗಳನ್ನು ಎತ್ತುಕೊಂಡಿದ್ದ ಪ್ರಿಯಾಂಕ ಪೋಸ್ ನೀಡಿದ್ದಾರೆ.
ನವದೆಹಲಿ: ಇದೇ ಮೊದಲ ಬಾರಿಗೆ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಹಾಗೂ ನಿಕ್ ಜೋನಸ್ ಮಗಳು ಮಾಲತಿ ಮೇರಿ ಅವರನ್ನು ಭಾರತಕ್ಕೆ ಕರೆತಂದಿದ್ದಾರೆ. ಮಾರ್ಚ್ 31ರಂದು ಮಧ್ಯಾಹ್ನ ನಟಿ ಮುಂಬೈ ವಿಮಾನ ನಿಲ್ದಾಣದಲ್ಲಿ ಕುಟುಂಬದೊಂದಿಗೆ ಕಾಣಿಸಿಕೊಂಡಿದ್ದಾರೆ. ಮಾಧ್ಯಮಗಳ ಮುಂದೆ ಮಗಳನ್ನು ಎತ್ತುಕೊಂಡಿದ್ದ ಪ್ರಿಯಾಂಕ ಪೋಸ್ ನೀಡಿದ್ದಾರೆ.
ಇತ್ತೀಚೆಗಷ್ಟೇ ಪ್ರಿಯಾಂಕಾ ಚೋಪ್ರಾ ಬ್ರಿಟನ್ ಮ್ಯಾಗ್ಜಿನ್ವೊಂದಕ್ಕೆ ಪುಟ್ಟ ಮಗಳೊಂದಿಗೆ ಪೋಸ್ ಕೊಟ್ಟಿದ್ದರು. ಈ ವರ್ಷದ ಆರಂಭದಲ್ಲಿ ನಡೆದ ಹಾಲಿವುಡ್ ವಾಕ್ ಆಫ್ ಫೇಮ್ ಸಮಾರಂಭದಲ್ಲಿ ಪ್ರಿಯಾಂಕಾ ಚೋಪ್ರಾ ಮಗಳು ಮಾಲತಿ ಮೇರಿ ಮುಖವನ್ನು ಬಹಿರಂಗಪಡಿಸಿದರು.
ಕೆಲವು ಆರೋಗ್ಯ ಸಮಸ್ಯೆಗಳ ಕಾರಣಕ್ಕೆ ಪ್ರಿಯಾಂಕಾ ಚೋಪ್ರಾ ಬಾಡಿಗೆ ತಾಯ್ತನದ ಮೂಲಕ ಮಗಳನ್ನು ಪಡೆದಿದ್ದಾರೆ. 2018ರಲ್ಲಿ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ 2022ರ ಜನವರಿಯಲ್ಲಿ ತಮಗೆ ಹೆಣ್ಣುಮಗು ಹುಟ್ಟಿದ್ದಾಗಿ ತಿಳಿಸಿದ್ದರು. ಹಾಗೇ, ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಪಡೆದಿದ್ದಾಗಿಯೂ ಹೇಳಿದ್ದರು. ಈ ಒಂದು ವರ್ಷದಲ್ಲಿ ಪ್ರಿಯಾಂಕಾ ಚೋಪ್ರಾ ಮಗುವನ್ನು ಎತ್ತಿಕೊಂಡಿರುವ ಫೋಟೊಗಳು ವೈರಲ್ ಆಗಿದ್ದರೂ ಕೂಡ ಮಗುವಿನ ಮುಖ ಬಹಿರಂಗವಾಗಿರಲಿಲ್ಲ. ಅಕ್ಟೋಬರ್ನಲ್ಲಿ ಈ ದಂಪತಿ ಪುಟ್ಟ ಮಗಳೊಂದಿಗೆ ಅದ್ಧೂರಿಯಾಗಿ ದೀಪಾವಳಿ ಹಬ್ಬ ಆಚರಿಸಿದ್ದರು.
ಇದನ್ನೂ ಓದಿ: Priyanka Chopra: ಆರ್ಆರ್ಆರ್ ತಮಿಳು ಸಿನಿಮಾ ಎಂದ ಪ್ರಿಯಾಂಕಾ ಚೋಪ್ರಾ: ಟ್ರೋಲ್ಗೆ ಗುರಿಯಾದ ನಟಿ
ಮುಂಬೈ ವಿಮಾನ ನಿಲ್ದಾಣದಲ್ಲಿ ಮಗಳೊಂದಿಗೆ ಕಾಣಿಸಿಕೊಂಡ ದಂಪತಿ
ಪ್ರಿಯಾಂಕಾ ಚೋಪ್ರಾ ತಾವು 30ನೇ ವಯಸ್ಸಿನಲ್ಲಿ ಫ್ರೀಜ್ ಮಾಡಿಟ್ಟಿದ್ದ ಅಂಡಾಣುವಿನಿಂದ ತಮ್ಮ 39ನೇ ವಯಸ್ಸಿನಲ್ಲಿ ಬಾಡಿಗೆ ತಾಯಿಯ ಮೂಲಕ ಮಾಲತಿ ಮೇರಿ ಎಂಬ ಹೆಣ್ಣು ಮಗು ಹೊಂದಿದ್ದಾರೆ. ಶೀಘ್ರದಲ್ಲೇ ನಟಿ ‘ಸಿಟಾಡೆಲ್’ ಮತ್ತು ‘ಲವ್ ಎಗೇನ್’ ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
South Cinema
Bhola Movie: ಅಜಯ್ ದೇವಗನ್ ಅಭಿನಯದ ʻಭೋಲಾʼ ಚಿತ್ರ ಮೊದಲ ದಿನದ ಗಳಿಕೆ ಎಷ್ಟು?
ಭೋಲಾ (Bhola Movie) ಸಿನಿಮಾ ಹೆಚ್ಚಾಗಿ ಸಕಾರಾತ್ಮಕ ವಿಮರ್ಶೆಗಳನ್ನು ಗಳಿಸಿದೆ. ವಾರಾಂತ್ಯದಲ್ಲಿ ಹೆಚ್ಚಿನ ಸಂಗ್ರಹಣೆ ಮಾಡಬಹುದು ಎಂತಲೂ ವರದಿಯಾಗಿದೆ. ಐಪಿಎಲ್ ಪ್ರಾರಂಭವಾಗುವುದರಿಂದ ಸಿನಿಮಾ ಗಳಿಕೆಗೆ ತೊಂದರೆಯಾಗಬಹುದೆಂಬುದೂ ಸಹ ಹೇಳಲಾಗುತ್ತಿದೆ.
ಬೆಂಗಳೂರು: ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಟಬು ಅಭಿನಯದ ʻಭೋಲಾʼ ಸಿನಿಮಾ (Bhola Movie) ಮಾರ್ಚ್ 30ರಂದು ರಾಮ ನವಮಿಯಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಆ್ಯಕ್ಷನ್-ಥ್ರಿಲ್ಲರ್ ಭೋಲಾ ಸಿನಿಮಾವನ್ನು ಅಜಯ್ ದೇವಗನ್ ನಿರ್ದೇಶಿಸಿದ್ದಾರೆ. ಇದು 2019ರ ತಮಿಳು ಚಿತ್ರ ಕೈದಿಯ ರಿಮೇಕ್ ಆಗಿದೆ. ಮೊದಲ ದಿನ ಭೋಲಾ ಸಿನಿಮಾ 11.20 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿದೆ.
ಚಲನಚಿತ್ರ ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಹೀಗೆ ಬರೆದಿದ್ದಾರೆ, “ಭೋಲಾ ಮೊದಲನೇ ದಿನದಂದು 11.20 ಕೋಟಿ ರೂ. ಕಲೆಕ್ಷನ್ ಮಾಡಿದೆʼʼಎಂದು ಬರೆದುಕೊಂಡಿದ್ದಾರೆ. ಭೋಲಾ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿದ್ದರೂ ಸಹ ದೃಶ್ಯಂ ಸಿನಿಮಾದಷ್ಟು ಕಲೆಕ್ಷನ್ ಮಾಡಿಲ್ಲ.ಆದರೆ ಭೋಲಾ ಸಿನಿಮಾ ಹೆಚ್ಚಾಗಿ ಸಕಾರಾತ್ಮಕ ವಿಮರ್ಶೆಗಳನ್ನು ಗಳಿಸಿದೆ. ವಾರಾಂತ್ಯದಲ್ಲಿ ಹೆಚ್ಚಿನ ಸಂಗ್ರಹಣೆ ಮಾಡಬಹುದು ಎಂತಲೂ ವರದಿಯಾಗಿದೆ. ಐಪಿಎಲ್ ಪ್ರಾರಂಭವಾಗುವುದರಿಂದ ಸಿನಿಮಾ ಗಳಿಕೆಗೆ ತೊಂದರೆಯಾಗಬಹುದೆಂಬುದೂ ಸಹ ಹೇಳಲಾಗುತ್ತಿದೆ.
ಬಾಲಿವುಡ್ ಹಂಗಾಮಾ ಪ್ರಕಾರ, ಮೊದಲ ದಿನದಲ್ಲಿ ಪಠಾಣ್ 57 ಕೋಟಿ ರೂ. ಗಳಿಕೆ ಕಂಡಿತ್ತು. ಜೂಥಿ ಮೈನ್ ಮಕ್ಕರ್ 15.73 ಕೋಟಿ ರೂ. ಕಲೆಕ್ಷನ್ ಮಾಡಿದೆ. ಇವೆರಡು ಸಿನಿಮಾಗಳ ಬಳಿಕ ಭೋಲಾ ಈ ವರ್ಷದ ಮೊದಲನೇ ದಿನ ಮೂರನೇ ಅತಿ ಹೆಚ್ಚು ಗಳಿಕೆ ಕಂಡ ಸಿನಿಮಾ ಎನ್ನಲಾಗಿದೆ. ಅಜಯ್ ದೇವಗನ್ ಅವರ ದೃಶ್ಯಂ-2 ಸಿನಿಮಾ 15.38 ಕೋಟಿ ರೂ. ಮೂಲಕ ಪ್ರಬಲ ಓಪನಿಂಗ್ ಹೊಂದಿತ್ತು. ಅಂತಿಮವಾಗಿ 240.54 ಕೋಟಿ ರೂ. ಬಾಚಿಕೊಂಡಿತು. ದೃಶ್ಯಂ 2 ಮತ್ತು ಭೋಲಾ ಎರಡೂ ಮಲಯಾಳಂ ಮತ್ತು ತಮಿಳು ಚಿತ್ರಗಳ ರಿಮೇಕ್ಗಳಾಗಿವೆ. ಭೋಲಾ 2019ರಲ್ಲಿ ಬಿಡುಗಡೆಯಾದ ಲೋಕೇಶ್ ಕನಕರಾಜ್ ಅವರ ಕೈದಿಯ ರಿಮೇಕ್ ಆಗಿದೆ. ಇತ್ತೀಚೆಗೆ ಬಿಡುಗಡೆಯಾದ ಶೆಹಜಾದಾ ಮತ್ತು ಸೆಲ್ಫಿ ಕೂಡ ರೀಮೇಕ್ ಆಗಿದ್ದರೂ ಪ್ರೇಕ್ಷಕರನ್ನು ಆಕರ್ಷಿಸಲು ವಿಫಲವಾಗಿದೆ.
ಇದನ್ನೂ ಓದಿ: Bholaa trailer: ಅಜಯ್ ದೇವಗನ್ ನಟನೆ, ನಿರ್ದೇಶನದ ʻಭೋಲಾʼ ಟ್ರೈಲರ್ ಔಟ್
ʻಭೋಲಾʼ ಸಿನಿಮಾ 2019ರಲ್ಲಿ ಬಿಡುಗಡೆಯಾದ ತಮಿಳಿನ ʻಕೈದಿʼ ಚಿತ್ರದ ರಿಮೇಕ್ ಆಗಿದೆ. ತಮಿಳಿನಲ್ಲಿ ಕಾರ್ತಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟಬು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭೋಲಾ ಚಿತ್ರವು ಅಜಯ್ ದೇವಗನ್ ಮತ್ತು ನಟಿ ಟಬು ಅವರ ಒಂಬತ್ತನೇ ಚಿತ್ರವಾಗಿದೆ. ಇವರಿಬ್ಬರು ಕೊನೆಯದಾಗಿ ದೃಶ್ಯಂ 2ದಲ್ಲಿ ಕಾಣಿಸಿಕೊಂಡಿದ್ದಾರೆ .ಚಿತ್ರದಲ್ಲಿ ದೀಪಕ್ ಡೊಬ್ರಿಯಾಲ್, ಸಂಜಯ್ ಮಿಶ್ರಾ, ಅಮಲಾ ಪೌಲ್ ಮತ್ತು ವಿನೀತ್ ಕುಮಾರ್ ಸೇರಿದಂತೆ ಇತರರು ನಟಿಸಿದ್ದಾರೆ.
-
ದೇಶ19 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಕರ್ನಾಟಕ20 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಗ್ಯಾಜೆಟ್ಸ್9 hours ago
Aadhaar Update: ಆನ್ಲೈನ್ನಲ್ಲಿ ಆಧಾರ್ ಅಪ್ಡೇಟ್ ಉಚಿತ; ಈ ಸೌಲಭ್ಯ ಜೂನ್ 14ರವರೆಗೆ ಮಾತ್ರ
-
ಅಂಕಣ20 hours ago
ಗೋ ಸಂಪತ್ತು: ಆಹಾರವಾಗಿ ಮಾತ್ರವಲ್ಲ, ಔಷಧವಾಗಿಯೂ ಮಜ್ಜಿಗೆಗೆ ಮಹತ್ವವಿದೆ!
-
ಅಂಕಣ20 hours ago
Brand story : ಚೀನಾದ ಇ-ಕಾಮರ್ಸ್ ದಿಗ್ಗಜ ಅಲಿಬಾಬಾ, 6 ಕಂಪನಿಗಳಾಗಿ ವಿಭಜನೆಯಾಗುತ್ತಿರುವುದೇಕೆ?
-
ಕರ್ನಾಟಕ10 hours ago
B.Y. Vijayendra: ಯಾವುದೇ ಕಾರಣಕ್ಕೆ ವರುಣಾದಿಂದ ವಿಜಯೇಂದ್ರ ಸ್ಪರ್ಧಿಸಲ್ಲ: ಗೊಂದಲಕ್ಕೆ ತೆರೆಯೆಳೆದ ಯಡಿಯೂರಪ್ಪ
-
ದೇಶ11 hours ago
Gujarat High Court: ಪಿಎಂ ಮೋದಿ ಪದವಿ ಸರ್ಟಿಫಿಕೇಟ್ ಕೇಳಿದ್ದ ದಿಲ್ಲಿ ಸಿಎಂ ಕೇಜ್ರಿವಾಲ್ಗೆ 25 ಸಾವಿರ ರೂ. ದಂಡ!
-
ಕರ್ನಾಟಕ14 hours ago
SSLC Exam 2023: ಕಲಬುರಗಿಯಲ್ಲಿ ಎಸ್ಎಸ್ಎಲ್ಸಿ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ; ವಾಟ್ಸಾಪ್ನಲ್ಲಿ ಹರಿದಾಡಿದ ಕನ್ನಡ ಪೇಪರ್