Masha And The Bear: ಬೆಂಗಳೂರಿಗೆ ಬರ್ತಿದ್ದಾರೆ ʻಮಾಶಾ ಆ್ಯಂಡ್‌ ದಿ ಬೇರ್ʼ! - Vistara News

ಸಿನಿಮಾ

Masha And The Bear: ಬೆಂಗಳೂರಿಗೆ ಬರ್ತಿದ್ದಾರೆ ʻಮಾಶಾ ಆ್ಯಂಡ್‌ ದಿ ಬೇರ್ʼ!

Masha And The Bear: ಜನಪ್ರಿಯ ಕಾರ್ಟೂನ್‌ ಸಿರೀಸ್‌ ‘ಮಾಶಾ ಆ್ಯಂಡ್‌ ದಿ ಬೇರ್’ ಅನ್ನು ರಂಗವೇದಿಕೆಗೆ ಅಳವಡಿಸಿ ಭಾರತದ ಪ್ರಮುಖ ನಗರಗಳಲ್ಲಿ ಪ್ರದರ್ಶನ ಮಾಡಲು ಎಲ್ಲ ಸಿದ್ಧತೆಗಳೂ ನಡೆದಿವೆ. ಈ ಬಾರಿ ತಮ್ಮ ಅಭಿಮಾನಿ ಚಿಣ್ಣರ ಎದುರು ನೇರವಾಗಿ ಕಾಣಿಸಿಕೊಳ್ಳಲಿರುವ ಅವರು, ಪತ್ತೇದಾರಿ ಕಥೆಯೊಂದನ್ನು ರಂಗದ ಮೇಲೆ ಪ್ರಸ್ತುತಪಡಿಸಲಿದ್ದಾರೆ.

VISTARANEWS.COM


on

Masha And The Bear in banglore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಶಿಷ್ಟವಾದ ಮನರಂಜನಾತ್ಮಕ ಕಾರ್ಯಕ್ರಮಗಳನ್ನು ಕೊಡುವಲ್ಲಿ ಮುಂಚೂಣಿಯಲ್ಲಿರುವ ವಯಕಾಮ್‌ 18 ಲೈವ್‌, ಇದೀಗ ತನ್ನ ದಾರಿಯಲ್ಲಿ ಇನ್ನೊಂದು ಮಹತ್ವದ ಹೆಜ್ಜೆಯನ್ನು ಇಡುತ್ತಿದೆ. ಪುಟ್ಟ ಮಕ್ಕಳಿಗೆಲ್ಲ ಚಿರಪರಿಚಿತವಾಗಿರುವ ಮಾಶಾ ಆ್ಯಂಡ್‌ ದಿ ಬೇರ್​ (Masha And The Bear) ತಮ್ಮ ಅಭಿಮಾನಿಗಳನ್ನು ಭೇಟಿಯಾಗಲು, ಅವರ ಮುಂದೆ ಲೈವ್ ಪ್ರದರ್ಶನ ನೀಡಲು ಮೊಟ್ಟ ಮೊದಲ ಬಾರಿಗೆ ಭಾರತಕ್ಕೆ ಬರುತ್ತಿದ್ದಾರೆ. ಬೆಂಗಳೂರಿನಲ್ಲಿಯೂ ವೇದಿಕೆ ಸಜ್ಜುಗೊಂಡಿದೆ.

ಜನಪ್ರಿಯ ಕಾರ್ಟೂನ್‌ ಸಿರೀಸ್‌ ‘ಮಾಶಾ ಆ್ಯಂಡ್‌ ದಿ ಬೇರ್’ ಅನ್ನು ರಂಗವೇದಿಕೆಗೆ ಅಳವಡಿಸಿ ಭಾರತದ ಪ್ರಮುಖ ನಗರಗಳಲ್ಲಿ ಪ್ರದರ್ಶನ ಮಾಡಲು ಎಲ್ಲ ಸಿದ್ಧತೆಗಳೂ ನಡೆದಿವೆ. ಈ ಬಾರಿ ತಮ್ಮ ಅಭಿಮಾನಿ ಚಿಣ್ಣರ ಎದುರು ನೇರವಾಗಿ ಕಾಣಿಸಿಕೊಳ್ಳಲಿರುವ ಅವರು, ಪತ್ತೇದಾರಿ ಕಥೆಯೊಂದನ್ನು ರಂಗದ ಮೇಲೆ ಪ್ರಸ್ತುತಪಡಿಸಲಿದ್ದಾರೆ.
ವಯಕಾಮ್18 ಲೈವ್ ನಿರ್ಮಾಣ ಮಾಡಿರುವ, ಎಸ್‌ಎಸ್‌ಬಿಸಿ ಇಂಡಿಯಾ ಪ್ರಸ್ತುತಪಡಿಸುತ್ತಿರುವ ಈ ಲೈವ್‌ ಷೋ ಟೂರ್‌, ಡಿಸೆಂಬರ್ 23ರಂದು ಮುಂಬೈನಿಂದ ಪ್ರಾರಂಭಗೊಳ್ಳಲಿದೆ. ನಂತರ ಭಾರತದ ಪ್ರಮುಖ ಮಹಾನಗರಗಳಾದ ದೆಹಲಿ, ಹೈದರಾಬಾದ್‌ ಮತ್ತು ಬೆಂಗಳೂರುಗಳಲ್ಲಿಯೂ ಪ್ರದರ್ಶನ ನೀಡಿ ಮತ್ತೆ ಮುಂಬೈನಲ್ಲಿಯೇ ಈ ಲೈವ್‌ಷೋ ಟೂರ್ ಕೊನೆಗೊಳ್ಳಲಿದೆ.

ಪತ್ತೇದಾರಿ ಕಥೆಯಲ್ಲಿ ನಿಮ್ಮ ಪಾಲೂ ಇರಲಿದೆ!

‘ಅ ವೆರಿ ಡಿಟೆಕ್ಟೀವ್ ಸ್ಟೋರಿ’ ಎನ್ನುವುದು ಈ ಷೋಗೆ ನೀಡಿರುವ ಅಡಿಟಿಪ್ಪಣಿ. ಹೌದು, ಈ ಲೈವ್‌ ಷೋದಲ್ಲಿ ಮಾಶಾ ಮತ್ತು ಬೇರ್ ಸೇರಿಕೊಂಡು ಮನೆಯಲ್ಲಿ ಕಳೆದುಹೋಗಿರುವ ವಸ್ತುವೊಂದನ್ನು ಹುಡುಕುವ ಪತ್ತೇದಾರಿ ಕೆಲಸ ಮಾಡಲಿದ್ದಾರೆ. ಪತ್ತೇಧಾರಿ ಕಥೆ ಅಂದಮೇಲೆ ಕೇಳಬೇಕೆ? ಸಾಕಷ್ಟು ರೋಚಕತೆ, ಕುತೂಹಲ, ಪನ್‌ ಎಲ್ಲವೂ ಇರಲಿದೆ. ಅಷ್ಟೇ ಅಲ್ಲ, ತಮ್ಮ ಪತ್ತೇಧಾರಿಕೆಯಲ್ಲಿ ಮಾಶಾ ಮತ್ತು ಬೇರ್ ಪ್ರೇಕ್ಷಕರ ಎದುರು ಕೂತಿರುವವರ ಸಹಾಯವನ್ನೂ ಪಡೆಲಿದ್ದಾರೆ! ಅಂದರೆ ಪ್ರೇಕ್ಷಕನೂ ಈ ಷೋದ ಪಾತ್ರಧಾರಿ ಆಗಿರುತ್ತಾನೆ? ಪ್ರೇಕ್ಷಕರ ಜೊತೆ ಮಾತಾಡುತ್ತ, ಅವರನ್ನು ನಗಿಸುತ್ತ, ಅವರಲ್ಲಿ ಕುತೂಹಲ ಕೆರಳಿಸುತ್ತ ಸಾಗುವ ಹಾಗೆಯೇ ಇಡೀ ಷೋವನ್ನು ವಿನ್ಯಾಸಗೊಳಿಸಲಾಗಿದೆ. ವಿಶಾಲ್ ಅಸ್ರಾಣಿ ಈ ಷೋವನ್ನು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: Darshan Thoogudeepa: ಭಾರಿ ಮೊತ್ತಕ್ಕೆ ಕಾಟೇರ ಡಿಜಿಟಲ್‌, ಸ್ಯಾಟಲೈಟ್ ಮಾರಾಟ!

ಯಾರು ಯಾರೆಲ್ಲ ಇರ್ತಾರೆ?

ʻಮಾಶಾ ಆ್ಯಂಡ್‌ ದಿ ಬೇರ್ʼ ಬಗ್ಗೆ ಪುಟಾಣಿಗಳಿಗೆ ಹೇಳುವುದೇ ಬೇಕಿಲ್ಲ. ಎಲ್ಲ ಮಕ್ಕಳಿಗೂ ಗೊತ್ತಿರುವ, ಎಲ್ಲ ಮಕ್ಕಳೊಟ್ಟಿಗೆ ಹಿರಿಯರಿಗೂ ಪರಿಚಿತವಾಗಿರುವ ಕಾರ್ಟೂನ್‌ ಕ್ಯಾರೆಕ್ಟರ್‌ಗಳು ಅವು. ಆದರೆ ಷೋದಲ್ಲಿ ಬರೀ ಆ ಎರಡು ಪಾತ್ರಗಳು ಮಾತ್ರವಲ್ಲ. ಸೀರೀಸ್‌ನಲ್ಲಿ ಕಾಣುವ, ಪ್ರೊಫೆಸರ್ ನಾನ್‌ಬೆಲೆವಿಯಸ್‌, ರೋಸಿ, ಪಾಂಡಾ, ಸ್ಲೈ ಫಾಕ್ಸ್‌ ಮತ್ತು ಸಿಲ್ಲಿ ಫಾಕ್ಸ್ ಸೇರಿದಂತೆ ಇನ್ನೂ ಹಲವು ಪಾತ್ರಗಳು ಈ ಷೋದ ಭಾಗವಾಗಿರುತ್ತವೆ.

ಯಾವಾಗ ಎಲ್ಲಿ?

ಮಾಶಾ ಆ್ಯಂಡ್‌ ದಿ ಬೇರ್ ಲೈವ್ ಷೋ ಟೂರ್ ಡಿಸೆಂಬರ್ 23ರಂದು ಮುಂಬೈನಲ್ಲಿ ಆರಂಭಗೊಳ್ಳುತ್ತದೆ. 24ರಂದೂ ಮುಂಬೈನಲ್ಲಿಯೇ ಪ್ರದರ್ಶನ ಇರುತ್ತದೆ. 2024 ಜನವರಿ 20 ಮತ್ತು 21ರಂದು ದೆಹಲಿಯಲ್ಲಿ ಎರಡು ದಿನಗಳ ಷೋ ಆಯೋಜಿಸಲಾಗಿದೆ. ಫೆಬ್ರುವರಿ 3 ಮತ್ತು 4ರಂದು ಹೈದರಾಬಾದ್‌ನಲ್ಲಿ ಪ್ರದರ್ಶನ ನಡೆಯಲಿದೆ.
ಫೆಬ್ರುವರಿ 10-11ರಂದು ‘ಮಾಶಾ ಆಂಡ್‌ ದಿ ಬೇರ್’ ತಂಡ ಬೆಂಗಳೂರಿಗೆ ಬರಲಿದೆ. ಬೆಂಗಳೂರಿನ ಮಾಶಾ, ಬೇರ್ ಅಭಿಮಾನಿಗಳಿಗಾಗಿ ಎರಡು ದಿನ ಹಲವು ಪ್ರದರ್ಶನಗಳು ನಡೆಯಲಿವೆ.

ಪಾಲ್ಗೊಳ್ಳುವುದು ಹೇಗೆ?

‘ಮಾಶಾ ಆ್ಯಂಡ್‌ ದಿ ಬೇರ್’ ಷೋದಲ್ಲಿ ನೀವೂ ಪಾಲ್ಗೊಳ್ಳಬಹುದು. ನಿಮ್ಮ ಟಿಕೆಟ್‌ಗಳನ್ನು www.kidsdayout.co ದಲ್ಲಿ ಈಗಲೇ ಬುಕ್ ಮಾಡಬಹುದು. ಎಚ್‌ಎಸ್‌ಬಿಸಿ ಕಾರ್ಡ್‌ ಇರುವವರಿಗೆ ಷೋ ಪ್ರಾರಂಭವಾಗುವ 72 ಗಂಟೆಗಳಿಗೂ ಮುನ್ನ ತಮ್ಮ ಇಷ್ಟದ ಸೀಟ್‌ ಬುಕ್ ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಅಲ್ಲದೇ ಷೋದ ಪಾತ್ರಗಳನ್ನು ಭೇಟಿಯಾಗಿ ಶುಭಾಶಯ ಕೋರುವ ಅವಕಾಶವನ್ನೂ ನೀಡಲಾಗುತ್ತಿದೆ. ಟಿಕೆಟ್ ದರದಲ್ಲಿಯೂ ವಿಶೇಷ ರಿಯಾಯತಿ ಇರುತ್ತದೆ. ಟಿಕೆಟ್ ಬುಕ್ ಮಾಡಿಕೊಂಡವರಿಗೆ ಪ್ರದರ್ಶನದ ಸ್ಥಳ, ಸಮಯದ ಮಾಹಿತಿಯನ್ನು ನೀಡಲಾಗುವುದು.

ಮಾಶಾ ಆ್ಯಂಡ್‌ ದಿ ಬೇರ್ ಭಾರತದಲ್ಲಿ ಈಗಾಗಲೇ ಸಾಕಷ್ಟು ಜನಪ್ರಿಯವಾಗಿರುವ ಕಾರ್ಟೂನ್ ಸೀರೀಸ್‌. ಚಿಣ್ಣರ ಜತೆಯಲ್ಲಿ ಪೋಷಕರೂ ಕೂತು ನೋಡುವ ಈ ರಿಯಾಲಿಟಿ ಷೋದ ಪಾತ್ರಗಳೂ ಎಲ್ಲರಿಗೂ ಪರಿಚಿತವೇ ಆಗಿವೆ. ಈಗ ವಯಕಾಮ್‌ 18ಲೈವ್‌ ಅವುಗಳನ್ನು ನೇರವಾಗಿ ನೋಡುವ ಅವಕಾಶವನ್ನೂ ಮಾಡಿಕೊಡುತ್ತಿದೆ. ಕಳೆದ ವರ್ಷ, ‘ಪೆಪ್ಪಾ ಪಿಗ್‌ ಲೈವ್‌ ಷೋ’ ಕೂಡ ಇದೇ ರೀತಿ ಭಾರತದ ಬೇರೆ ಬೇರೆ ನಗರಗಳಲ್ಲಿ ಲೈವ್‌ ಪ್ರದರ್ಶನಗಳನ್ನು ನೀಡಿ ಯಶಸ್ವಿಯಾಗಿತ್ತು. ಅದೇ ದಾರಿಯಲ್ಲಿ ಈಗ ಮಾಶಾ ಆ್ಯಂಡ್‌ ದಿ ಬೇರ್ ಕೂಡ ನಡೆಯುತ್ತಿದ್ದು, ಜನರಿಗೆ ಮನರಂಜನೆಯ ರಸದೂಟವನ್ನು ಬಡಿಸಲು ಸರ್ವಸನ್ನದ್ಧವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Lok Sabha Elections 2024: ಈ ಬಾಲಿವುಡ್‌ ಸ್ಟಾರ್ಸ್‌ಗಳು ಈ ಬಾರಿ ವೋಟ್‌ ಹಾಕಲೇ ಇಲ್ಲ!

Lok Sabha Elections 2024: ನಟಿ ಕತ್ರಿನಾ ಕೈಫ್ ಸದ್ಯ ಲಂಡನ್‌ನಲ್ಲಿದ್ದಾರೆ. ವದಂತಿಗಳ ಪ್ರಕಾರ ಕತ್ರಿನಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಭಾರತದಲ್ಲಿದ್ದರೂ ಅವರು ಬ್ರಿಟಿಷ್ ಪ್ರಜೆಯಾದ್ದರಿಂದ ಮತದಾನ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅದೇ ರೀತಿ ಆಲಿಯಾ ಕೂಡ ವೋಟ್‌ ಹಾಕಿಲ್ಲ.

VISTARANEWS.COM


on

Lok Sabha Elections 2024 7 celebs who didn’t vote in Lok Sabha Elections
Koo

ಬೆಂಗಳೂರು: ದೇಶದಲ್ಲಿ ಈಗಾಗಲೇ ನಾಲ್ಕು (Lok Sabha Elections 2024) ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಐದನೇ ಹಂತದ ಮತದಾನ ಸೋಮವಾರ ಆಗಿದೆ. ಹಲವಾರು ಬಾಲಿವುಡ್ ತಾರೆಯರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ದೀಪಿಕಾ ಪಡುಕೋಣೆ, ಶಾರುಖ್ ಖಾನ್, ಆಮೀರ್ ಖಾನ್ ಮತ್ತು ಅವರ ಕುಟುಂಬ, ಸಲ್ಮಾನ್ ಖಾನ್ ಮತ್ತು ಅವರ ಪೋಷಕರು, ರಣಬೀರ್ ಕಪೂರ್, ಅಕ್ಷಯ್ ಕುಮಾರ್, ಐಶ್ವರ್ಯಾ ರೈ ಬಚ್ಚನ್, ಅಮಿತಾಭ್‌ ಬಚ್ಚನ್ ಮತ್ತು ಕಿಯಾರಾ ಆಡ್ವಾಣಿ ಸೇರಿದಂತೆ ಅನೇಕರು ವೋಟ್‌ ಮಾಡಿದ್ದಾರೆ. ಆದರೆ ಕೆಲವು ಸೆಲೆಬ್ರಿಟಿಗಳು ವೋಟ್‌ ಹಾಕಿಲ್ಲ.

ನಟಿ ಕತ್ರಿನಾ ಕೈಫ್ ಸದ್ಯ ಲಂಡನ್‌ನಲ್ಲಿದ್ದಾರೆ. ವದಂತಿಗಳ ಪ್ರಕಾರ ಕತ್ರಿನಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಭಾರತದಲ್ಲಿದ್ದರೂ ಅವರು ಬ್ರಿಟಿಷ್ ಪ್ರಜೆಯಾದ್ದರಿಂದ ಮತದಾನ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಅದೇ ರೀತಿ ಆಲಿಯಾ ಕೂಡ ವೋಟ್‌ ಹಾಕಿಲ್ಲ.

ಅಮಿತಾಭ್‌ ಬಚ್ಚನ್ ಮತ್ತು ಜಯಾ ಬಚ್ಚನ್ ಒಟ್ಟಿಗೆ ಬಂದು ವೋಟ್‌ ಹಾಕಿದರು. ಐಶ್ವರ್ಯಾ ರೈ ಬಚ್ಚನ್ ಅವರು ಕಾನ್‌ ಫೆಸ್ಟಿವಲ್‌ ಮುಗಿಸಿ ಒಬ್ಬರೇ ಬಂದು ವೋಟ್‌ ಮಾಡಿದರು. ಆದರೆ ಅಭಿಷೇಕ್ ಮುಂಬೈನಲ್ಲಿದ್ದರೂ ವೋಟ್‌ ಹಾಕಿರುವುದು ಕಂಡು ಬಂದಿಲ್ಲ . ಜಾಕ್ವೆಲೀನ್ ಪ್ರಸ್ತುತ 77ನೇ ಕಾನ್‌ ಫೆಸ್ಟಿವಲ್‌ ಚಲನಚಿತ್ರೋತ್ಸವಕ್ಕಾಗಿ ಫ್ರಾನ್ಸ್‌ನಲ್ಲಿದ್ದಾರೆ. ನಟಿ ಶ್ರೀಲಂಕಾದ ಪ್ರಜೆ, ಅದಕ್ಕಾಗಿಯೇ ಅವರು ಭಾರತದಲ್ಲಿದ್ದರೂ ಮತ ಚಲಾಯಿಸಿಲ್ಲ.

ಇದನ್ನೂ ಓದಿ: Lok Sabha Elections 2024: ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಟಾಲಿವುಡ್ ಸ್ಟಾರ್ಸ್‌​!

ಅನುಷ್ಕಾ ಕೂಡ ಈ ಬಾರಿ ವೋಟ್‌ ಮಾಡಿಲ್ಲ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ಇದ್ದ ಕಾರಣ ಅನುಷ್ಕಾ ಅವರು ಈ ಬಾರಿ ಮತ ಚಲಾಯಿಸಲು ಹೋಗಿಲ್ಲ.

ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆಗಿದೆ.

Continue Reading

South Cinema

Allu Arjun: ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ಅಲ್ಲು ಅರ್ಜುನ್‌ ದಂಪತಿ! ಫ್ಯಾನ್ಸ್‌ಗೆ ಅಚ್ಚರಿ

Allu Arjun: ಐಕಾನ್ ಸ್ಟಾರ್​ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ನಟಿಸಿದ್ದಾರೆ.

VISTARANEWS.COM


on

Allu Arjun Sneha spotted at a dhaba
Koo

ಬೆಂಗಳೂರು: ಅಲ್ಲು ಅರ್ಜುನ್ (Allu Arjun) ಮತ್ತು ಪತ್ನಿ ಸ್ನೇಹಾ ರೆಡ್ಡಿ ಅವರು ರಸ್ತೆ ಬದಿಯ ಡಾಬಾದಲ್ಲಿ ಊಟ ಮಾಡಿರುವ ಫೋಟೊ ಇದೀಗ ವೈರಲ್‌ ಆಗಿದೆ. ಡಾಬಾದಲ್ಲಿ ಊಟ ಮಾಡುತ್ತಿರುವ ಫೋಟೊ ಕಂಡು ದಂಪತಿಯ ‘ಸರಳತೆ’ಗೆ ನೆಟ್ಟಿಗರು ಹಾಡಿ ಹೊಗಳುತ್ತಿದ್ದಾರೆ. ಜೋಡಿ ಯಾವ ಡಾಬಾದಲ್ಲಿ ಊಟ ಮಾಡಿದೆ ಎಂದು ತಿಳಿದು ಬಂದಿಲ್ಲ.

ಅಭಿಮಾನಿಯೊಬ್ಬರು ಕ್ಲಿಕ್ಕಿಸಿದ ಚಿತ್ರದಲ್ಲಿ ಅಲ್ಲು ಅವರು ಫೋನ್‌ನಲ್ಲಿ ಮಾತನಾಡುತ್ತಿರುವುದನ್ನು ಕಾಣಬಹುದು, ಸ್ನೇಹಾ ಊಟ ಮಾಡುತ್ತಿದ್ದಾರೆ. ʻʻರಸ್ತೆ ಬದಿಯ ಡಾಬಾದಲ್ಲಿ ಜೋಡಿ! ಸರಳತೆಯ ಮನುಷ್ಯ.” ಎಂದು ಬರೆದುಕೊಂಡಿದ್ದಾರೆ ಒಬ್ಬ ಅಭಿಮಾನಿ. ಇನ್ನೊಬ್ಬರು ʻʻಪುಷ್ಪ ಅಂತಹ ಸೂಪರ್‌ ಹಿಟ್‌ ಸಿನಿಮಾ ಮಾಡಿದ್ದರೂ ಸಿಂಪಲ್‌ ಆಗಿ ಇದ್ದಾರೆʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಐಕಾನ್ ಸ್ಟಾರ್​ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ನಟಿಸಿದ್ದಾರೆ.

ಇದನ್ನೂ ಓದಿ: ರಾಮನಗರದಲ್ಲಿ ಯುವಕನ ಕತ್ತು ಕೊಯ್ದು ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ; ಕೊಪ್ಪಳದಲ್ಲಿ ಸಿಲಿಂಡರ್‌ ಸ್ಫೋಟದಿಂದ ಹೊತ್ತಿ ಉರಿದ ಡಾಬಾ

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಪುಷ್ಪ 2 ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿದ್ದಾರೆ. ಅವರು ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿದ್ದರು. ಅವರು ಗೂಂಡಾಗಳನ್ನು ಹೊಡೆಯುತ್ತಿರುವುದು ಕಂಡುಬಂದಿದೆ.

ಪುಷ್ಪಾ 2 ಅನ್ನು ಚಿತ್ರಮಂದಿರಗಳಲ್ಲಿ ನೋಡಲು ಎಲ್ಲರೂ ಉತ್ಸುಕರಾಗಿದ್ದಾರೆ. ಚಿತ್ರವು ಖಂಡಿತವಾಗಿಯೂ ಬಾಕ್ಸ್ ಆಫೀಸ್ ಆಳುತ್ತಿದೆ. ಪುಷ್ಪಾ 2 ಚಿತ್ರದ ಥಿಯೇಟರ್ ಹಕ್ಕುಗಳನ್ನು ಅನಿಲ್ ತಡಾನಿ 200 ಕೋಟಿ ರೂ.ಗೆ ಮುಂಗಡವಾಗಿ ಖರೀದಿಸಿದ್ದಾರೆ ಎಂದು ಪಿಂಕ್​ವಿಲ್ಲಾ ಇತ್ತೀಚೆಗೆ ವರದಿ ಮಾಡಿತ್ತು.

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!
ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading

ಸ್ಯಾಂಡಲ್ ವುಡ್

Meghana Raj: ಅಮ್ಮನಿಗೆ ಚಿನ್ನದ ಓಲೆ ಗಿಫ್ಟ್‌ ಕೊಟ್ಟ ಮೇಘನಾ ರಾಜ್‌; ಕಣ್ಣೀರಿಟ್ಟ ಪ್ರಮೀಳಾ

Meghana Raj: ಮೇಘನಾ (Meghana Raj) ಅಮ್ಮ ಪ್ರಮೀಳಾ ಜೋಶಾಯ್ ಅವರಿಗೆ ಬಿಗ್‌ ಸರ್‌ಪ್ರೈಸ್‌ ನೀಡಿದ್ದಾರೆ. ಅಮ್ಮಂದಿರ ದಿನ ಹಾಗೂ ಅಮ್ಮನ ಹುಟ್ಟು ಹಬ್ಬದ ಅಂಗವಾಗಿ ಚಿನ್ನದ ಓಲೆ ಗಿಫ್ಟ್‌ ಮಾಡಿದ್ದಾರೆ. ಓಲೆ ಕಂಡೊಡನೆ ಭಾವುಕರಾಗಿದ್ದಾರೆ ಪ್ರಮೀಳಾ.

VISTARANEWS.COM


on

Meghana Raj Mother Day Gift Shopping to mother
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ಮೇಘನಾ ರಾಜ್‌ (Actress Meghana Raj) ಹೊಸ ಯುಟ್ಯೂಬ್‌ ಚಾನೆಲ್ ಶುರು ಮಾಡಿರುವುದು ಗೊತ್ತೇ ಇದೆ. ಪುತ್ರ ರಾಯನ್ ರಾಜ್ ಸರ್ಜಾ, ಪ್ರಮೀಳಾ ಜೋಶಾಯ್ ಹಾಗೂ ಸುಂದರ್ ರಾಜ್ ಜತೆ ಹಲವಾರು ವಿಡಿಯೊಗಳನ್ನು ಪೋಸ್ಟ್‌ ಮಾಡಿದ್ದಾರೆ. ಇದೀಗ ಮೇಘನಾ (Meghana Raj) ಅಮ್ಮ ಪ್ರಮೀಳಾ ಜೋಶಾಯ್ ಅವರಿಗೆ ಬಿಗ್‌ ಸರ್‌ಪ್ರೈಸ್‌ ನೀಡಿದ್ದಾರೆ. ಅಮ್ಮಂದಿರ ದಿನ ಹಾಗೂ ಅಮ್ಮನ ಹುಟ್ಟು ಹಬ್ಬದ ಅಂಗವಾಗಿ ಚಿನ್ನದ ಓಲೆ ಗಿಫ್ಟ್‌ ಮಾಡಿದ್ದಾರೆ. ಓಲೆ ಕಂಡೊಡನೆ ಭಾವುಕರಾಗಿದ್ದಾರೆ ಪ್ರಮೀಳಾ.

ಯುಟ್ಯೂಬ್‌ನಲ್ಲಿ ಮೇಘನಾ ರಾಜ್‌ ಅವರು ಈ ವಿಡಿಯೊ ಪೋಸ್ಟ್‌ ಮಾಡಿದ್ದಾರೆ. ನನ್ನ ತಾಯಿ ಹೆಚ್ಚಾಗಿ ಬಂಗಾರದ ಉಂಗರವನ್ನು ಹಾಕಿಕೊಳ್ಳುತ್ತಾರೆ. ಆದರೆ ಈ ಬಾರಿ ನಾನು ಚಿನ್ನದ ಓಲೆ ಅವರಿಗೆ ಗಿಫ್ಟ್‌ ನೀಡಬೇಕು ಅಂದುಕೊಂಡಿದ್ದೆ. ಮದರ್ಸ್‌ ಡೇಗೆ ಗಿಫ್ಟ್‌ ಕೊಡುವಾಗ ಹೆಣ್ಣು ಮಕ್ಕಳು ಹೇಗೆ ಲೆಕ್ಕಾ ಮಾಡುತ್ತಾರೆ ಅಂದ್ರೆ ಅಮ್ಮನಿಗೆ ಅದು ಕೊಟ್ಟರೆ ನಾವೂ ಬಳಸಬಹುದು ಅನ್ನೋ ಮಲ್ಟಿಪರ್ಪಸ್‌ ಆಲೋಚನೆಯಲ್ಲಿ ಕೊಡಿಸುತ್ತಿರುವೆʼʼಎಂದು ಗಿಫ್ಟ್‌ ಬಾಕ್ಸ್‌ ಅಮ್ಮನ ಕೈಗೆ ಕೊಟ್ಟರು ಮೇಘನಾ. ಬಾಕ್ಸ್‌ ನೋಡಿ ಗೆಸ್‌ ಮಾಡಲು ಶುರು ಮಾಡುವ ಪ್ರಮೀಳಾ ಜೋಷಾಯಿ ಇದು ಲಿಪ್‌ಸ್ಟಿಕ್‌ ಇದು ರಿಂಗ್ ಇದು ಕಾಲಿ ಡಬ್ಬ ಎಂದು ಗೆಸ್‌ ಮಾಡುತ್ತಾರೆ. ಆಮೇಲೆ ಚಿನ್ನದ ಅಂಗಡಿ ಹೆಸರು ಓದಿ ಮೌನಿಯಾಗಿ ಬಿಡುತ್ತಾರೆ.

ಇದನ್ನೂ ಓದಿ: Meghana Raj: ಚಿರು ಕೊನೆ ಚಿತ್ರ ಅಲ್ಲ ಎಂದ ಮೇಘನಾ ರಾಜ್‌; ಧ್ರುವ ಸರ್ಜಾ ಭಾವುಕ ಮಾತು!

ಕಿವಿ ಓಲೆ ನೋಡಿದ ಕೂಡಲೇ ಭಾವುಕರಾದರು ಪ್ರಮೀಳಾ. ಜತೆಗೆ ಮಗಳಿಗೆ ನಾನೇ ಈ ವರ್ಷ ಏನು ಗಿಫ್ಟ್‌ ಕೊಟ್ಟಿಲ್ಲ ಎಂದು ಭಾವುಕರಾದರು. ಕೆಲವು ದಿನಗಳ ಹಿಂದೆ ಮೇಘನಾ ರಾಜ್‌ ವಕೇಶನ್‌ ಮೂಡ್‌ನಲ್ಲಿರುವ ವಿಡಿಯೊಗಳನ್ನು ಪೋಸ್ಟ್‌ ಮಾಡಿದ್ದರು ಮೇಘನಾ ರಾಜ್‌ ಯುಟ್ಯೂಬ್‌ನಲ್ಲಿ ಈಗೀಗ ಸಖತ್‌ ಬ್ಯುಸಿಯಾಗಿದ್ದಾರೆ.

ಮೇಘನಾ ರಾಜ್​ ಬದುಕಲ್ಲಿ 2020 ಕೆಟ್ಟವರ್ಷ. ಅವರು ಐದು ತಿಂಗಳ ಗರ್ಭಿಣಿಯಾಗಿದ್ದಾಗಲೇ, ಪತಿ ಚಿರಂಜೀವಿ ಸರ್ಜಾರನ್ನು ಕಳೆದು ಕೊಂಡರು. 2020ರ ಜೂನ್​ 7ರಂದು ಚಿರು ಹೃದಯಾಘಾತದಿಂದ ಮೃತಪಟ್ಟಿದ್ದರು. ಅದಾದ ಬಳಿಕ ಮಗ ರಾಯನ್​ ಹುಟ್ಟಿದ. ಬಳಿಕ ʻತತ್ಸಮ ತದ್ಭವʼ ಸಿನಿಮಾ ಮೂಲಕ ತೆರೆಗೆ ಮತ್ತೆ ಬಂದರು ನಟಿ. ತತ್ಸಮ ತದ್ಭವ ಸಿನಿಮಾಕ್ಕೆ ಪನ್ನಗ ಭರಣ ಹಾಗೂ ಸ್ಫೂರ್ತಿ ಅನಿಲ್‌ ಅವರು ಬಂಡವಾಳ ಸುರಿದಿದ್ದಾರೆ. ವಿಶಾಲ್‌ ಆತ್ರೇಯ ಅವರು ಸಿನಿಮಾಕ್ಕೆ ಆಕ್ಷನ್‌ ಕಟ್‌ ಹೇಳುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸಿನಿಮಾಕ್ಕೆ ವಾಸುಕಿ ವೈಭವ್‌ ಅವರ ಸಂಗೀತ, ಶ್ರೀನಿವಾಸ್‌ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಅವರ ಸಂಕಲನವಿದೆ.

Continue Reading

South Cinema

 L2 Empuraan: ಮೋಹನ್‌ಲಾಲ್ ಬರ್ತ್‌ಡೇ; L2E-ಎಂಪುರಾನ್‌ ಲುಕ್‌ ಔಟ್‌!

 L2 Empuraan: ಈ ಚಿತ್ರವನ್ನು ಆಶೀರ್ವಾದ್ ಸಿನಿಮಾಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸಲಿವೆ. ಇದು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೂಸಿಫರ್ 2019ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಗಳಿಕೆಗಳಲ್ಲಿ ಒಂದಾಯಿತು.

VISTARANEWS.COM


on

L2 Empuraan first look poster shared by Prithviraj Sukumaran
Koo

ಬೆಂಗಳೂರು: ಇಂದು ಮಾಲಿವುಡ್‌ ಸ್ಟಾರ್‌ ಮೋಹನ್‌ಲಾಲ್ (Mohanlal as Khureshi Abraam ) ಅವರ 64ನೇ ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ನಟ ಪೃಥ್ವಿರಾಜ್ ಸುಕುಮಾರನ್ ʻL2 ಎಂಪುರಾನ್‌ʼ (L2 Empuraan) ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೃಥ್ವಿರಾಜ್ ಅವರ ನಿರ್ದೇಶನದಲ್ಲಿ, ಮೋಹನ್‌ಲಾಲ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರ 2019ರ ಬ್ಲಾಕ್‌ಬಸ್ಟರ್ ಚಲನಚಿತ್ರ ʻಲೂಸಿಫರ್‌ʼನ ಮುಂದುವರಿದ ಭಾಗವಾಗಿದೆ.

ʻL2 ಎಂಪುರಾನ್‌ʼಗಾಗಿ ಮೋಹನ್‌ಲಾಲ್‌ನ ಜಾಕೆಟ್ ಮತ್ತು ಪ್ಯಾಂಟ್‌ ಧರಿಸಿದ್ದಾರೆ. ಭದ್ರತಾ ಸಿಬ್ಬಂದಿಗಳ ನಡುವೆ ಖಡಕ್‌ ಆಗಿ ನಡೆದುಕೊಂಡು ಹೋಗುತ್ತಿರುವ ಪೋಸ್ಟರ್‌ ಇದು. ಲೂಸಿಫರ್ ಪೃಥ್ವಿರಾಜ್ ಅವರ ನಿರ್ದೇಶನದ ಚೊಚ್ಚಲ ಚಿತ್ರವಾಗಿತ್ತು. ಅದಾದ ಬಳಿಕ ʻಬ್ರೋ ಡ್ಯಾಡಿʼ ಸಿನಿಮಾವನ್ನು ಒಟ್ಟಿಗೆ ಮಾಡಿದ್ದರು. ಮತ್ತೆ ಈ ಜೋಡಿ L2E-ಎಂಪುರಾನ್‌ ಮೂಲಕ ಒಂದಾಗಿದೆ.

ಈ ಚಿತ್ರವನ್ನು ಆಶೀರ್ವಾದ್ ಸಿನಿಮಾಸ್ ಮತ್ತು ಲೈಕಾ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಿಸಲಿವೆ. ಇದು ಮಲಯಾಳಂ, ತಮಿಳು, ತೆಲುಗು, ಕನ್ನಡ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲೂಸಿಫರ್ 2019ರಲ್ಲಿ ಬಿಡುಗಡೆಗೊಂಡು ಬ್ಲಾಕ್‌ಬಸ್ಟರ್‌ ಹಿಟ್‌ ಆಯಿತು. ಮಲಯಾಳಂ ಚಿತ್ರರಂಗದ ಇತಿಹಾಸದಲ್ಲಿ ಅತಿದೊಡ್ಡ ಗಳಿಕೆಗಳಲ್ಲಿ ಒಂದಾಯಿತು. ಮೋಹನ್‌ಲಾಲ್ ಅವರಲ್ಲದೆ, ಚಿತ್ರದಲ್ಲಿ ವಿವೇಕ್ ಒಬೆರಾಯ್, ಮಂಜು ವಾರಿಯರ್, ಟೊವಿನೋ ಥಾಮಸ್, ಪೃಥ್ವಿರಾಜ್ ಸುಕುಮಾರನ್, ಇಂದ್ರಜಿತ್ ಸುಕುಮಾರನ್, ಸಾನಿಯಾ ಐಯಪ್ಪನ್, ಸಾಯಿ ಕುಮಾರ್, ಜಾನ್ ವಿಜಯ್, ಸಚಿನ್ ಖೇಡೇಕರ್, ಬೈಜು ಸಂತೋಷ್, ಕಲಾಭವನ್ ಶಾಜೋನ್, ಫಾಜಿಲ್, ಸುರೇಶ್ ಚಂದ್ರ ಮೆನನ್ ಮತ್ತು ನೈಲಾ ಉಷಾ ಕಾಣಿಸಿಕೊಂಡಿದ್ದಾರೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಮೋಹನ್ ಲಾಲ್ ಕೊನೆಯದಾಗಿ ಕಾಣಿಸಿಕೊಂಡದ್ದು ಫ್ಯಾಂಟಸಿ ನಾಟಕ ಮಲೈಕೊಟ್ಟೈ ವಾಲಿಬನ್ (2024), ಇದನ್ನು ಲಿಜೋ ಜೋಸ್ ಪೆಲ್ಲಿಸ್ಸೆರಿ ನಿರ್ದೇಶಿಸಿದ್ದಾರೆ.

ಮೋಹನ್‌ಲಾಲ್‌ ಜತೆ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ

ನಂದಕಿಶೋರ್ ಅವರು ಮಲಯಾಳಂ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಮಾಲಿವುಡ್‌ ಸ್ಟಾರ್‌ ಮೋಹನ್ ಲಾಲ್ (Actor Mohan Lal) ಅವರಿಗೆ ನಂದಕಿಶೋರ್ ಸಿನಿಮಾ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಈ ಸಿನಿಮಾಗೆ ಏಕ್ತಾ ಕಪೂರ್‌ ಅವರ ಸಹ ನಿರ್ಮಾಣವಿದೆ. ಈ ಬಹುನಿರೀಕ್ಷಿತ ಚಿತ್ರದ ಶೂಟಿಂಗ್​ ಆರಂಭ ಆಗಿದೆ. ಈ ಚಿತ್ರದ ಪಾತ್ರವರ್ಗ ಗಮನ ಸೆಳೆಯುತ್ತಿದೆ. ಈಗ ರಾಗಿಣಿ ದ್ವಿವೇದಿ (Ragini Dwivedi) ಅವರು ನಟ ಮೋಹನ್​ಲಾಲ್​ ಜತೆ ನಟಿಸುತ್ತಿದ್ದಾರೆ. ಮೋಹನ್​ಲಾಲ್​ ಅಭಿನಯದ ‘ವೃಷಭ’ ಸಿನಿಮಾ ಮೇಲೆ ಅಭಿಮಾನಿಗಳಿಗೆ ಸಖತ್​ ನಿರೀಕ್ಷೆ ಇದೆ.

Continue Reading
Advertisement
Rameshwaram Cafe Blast
ಕರ್ನಾಟಕ5 seconds ago

Rameshwaram Cafe Blast: ಹುಬ್ಬಳ್ಳಿ ಸೇರಿ 4 ರಾಜ್ಯಗಳ ಹಲವೆಡೆ ಎನ್‌ಐಎ ದಾಳಿ; 11 ಶಂಕಿತ ಉಗ್ರರು ವಶಕ್ಕೆ

Virat kohli
ಪ್ರಮುಖ ಸುದ್ದಿ7 mins ago

IPL 2024 : ಕೊಹ್ಲಿಯನ್ನು ಗಂಭೀರ್ ಅಪ್ಪಿಕೊಂಡಿದ್ದು ಫೇರ್​ಪ್ಲೇ ಅವಾರ್ಡ್​ಗಾಗಿಯಾ? ಅವರ ಮಾತಲ್ಲೇ ಕೇಳಿ

Phone tapping case and R Ashok demands for CBI investigation
ರಾಜಕೀಯ27 mins ago

Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

Porsche Crash
ದೇಶ36 mins ago

Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

IPL 2024
ಕ್ರೀಡೆ45 mins ago

IPL 2024 : ಕೊಹ್ಲಿಯನ್ನೂ ಟೀಕಿಸುವುದರ ನಡುವೆಯೂ ಆರ್​​ಸಿಬಿ ಕಪ್​ ಗೆಲ್ಲುತ್ತದೆ ಎಂದ ಗವಾಸ್ಕರ್​

Road Accident
ಶಿವಮೊಗ್ಗ54 mins ago

Road Accident: ಮರಕ್ಕೆ ಬಸ್‌ ಡಿಕ್ಕಿಯಾಗಿ ಹಲವರಿಗೆ ಗಾಯ; ಆಟೋ ಪಲ್ಟಿಯಾಗಿ ಚಾಲಕ ಸಾವು

Dwayne Bravo
ಪ್ರಮುಖ ಸುದ್ದಿ1 hour ago

Dwayne Bravo : ಅಫಘಾನಿಸ್ತಾನ ತಂಡದಲ್ಲಿ ದೊಡ್ಡ ಜವಾಬ್ದಾರಿ ವಹಿಸಿಕೊಂಡ ಡ್ವೇನ್ ಬ್ರಾವೊ

Narendra Modi
ಪ್ರಮುಖ ಸುದ್ದಿ1 hour ago

Narendra Modi: ಅಂಬೇಡ್ಕರ್‌ ಇರದಿದ್ದರೆ ಮೀಸಲಾತಿ ಜಾರಿಗೆ ನೆಹರು ಬಿಡುತ್ತಿರಲಿಲ್ಲ ಎಂದ ಮೋದಿ!

Self Harming
ಕರ್ನಾಟಕ2 hours ago

Self Harming: ಹುಬ್ಬಳ್ಳಿಯಲ್ಲಿ ನೇಣಿಗೆ ಶರಣಾದ ಜೋಡಿ; ಅನೈತಿಕ ಸಂಬಂಧ ಶಂಕೆ

HD Kumaraswamy attack on DK Shivakumar and he gives reason for Devaraje Gowda fears for his life in jail
ರಾಜಕೀಯ2 hours ago

HD Kumaraswamy: ದೇವರಾಜೇಗೌಡರಿಗೆ ಜೈಲಲ್ಲಿ ಜೀವ ಭಯ ಇದೆ; ಕಾರಣ ಬಿಚ್ಚಿಟ್ಟ ಎಚ್‌ಡಿ ಕುಮಾರಸ್ವಾಮಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು8 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು9 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌