Megastar Chiranjeevi: ರಾಮಮಂದಿರ ಉದ್ಘಾಟನೆಗೆ ಫ್ಯಾಮಿಲಿ ಜತೆ ಭಾಗಿಯಾಗಲಿದ್ದಾರೆ ನಟ ಚಿರಂಜೀವಿ - Vistara News

South Cinema

Megastar Chiranjeevi: ರಾಮಮಂದಿರ ಉದ್ಘಾಟನೆಗೆ ಫ್ಯಾಮಿಲಿ ಜತೆ ಭಾಗಿಯಾಗಲಿದ್ದಾರೆ ನಟ ಚಿರಂಜೀವಿ

Megastar Chiranjeevi ಮೆಗಾಸ್ಟಾರ್ ಚಿರಂಜೀವಿ ಅವರು ‘ಹನುಮಾನ್’ ಚಿತ್ರದ ಪ್ರಿ ರಿಲೀಸ್ ಇವೆಂಟ್‌ನಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ‘ಹನುಮಾನ್’ ಚಿತ್ರ ಸಂಕ್ರಾಂತಿ ಸಂದರ್ಭದಲ್ಲಿ ಅಂದರೆ ಜನವರಿ 12ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

VISTARANEWS.COM


on

Megastar Chiranjeevi attend Ram Temple consecration ceremony
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದಕ್ಷಿಣ ಭಾರತದ ಚಿತ್ರರಂಗದ ಗಣ್ಯರಾದ ರಜನಿಕಾಂತ್‌, ಚಿರಂಜೀವಿ (Megastar Chiranjeevi), ಮೋಹನ್‌ಲಾಲ್‌, ಧನುಷ್‌, ಪ್ರಭಾಸ್ ಅವರಿಗೂ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಲಾಗಿದೆ ಎಂದು ಹಿಂದೆ ವರದಿಯಾಗಿತ್ತು. ಇದೀಗ ಮೆಗಾಸ್ಟಾರ್ ಚಿರಂಜೀವಿ ಅವರು ‘ಹನುಮಾನ್’ ಚಿತ್ರದ ಪ್ರಿ-ರಿಲೀಸ್ ಇವೆಂಟ್‌ನಲ್ಲಿ, ಅಯೋಧ್ಯೆಯ ರಾಮಮಂದಿರದ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಳ್ಳುವುದಾಗಿ ದೃಢಪಡಿಸಿದರು. ಜನವರಿ 7ರಂದು ನಡೆದ ಸಮಾರಂಭದಲ್ಲಿ ಮಾತನಾಡಿದ ನಟ ʻಕುಟುಂಬ ಸದಸ್ಯರೊಂದಿಗೆ ಹಾಜರಾಗುತ್ತೇನೆʼ ಎಂದು ಬಹಿರಂಗಪಡಿಸಿದರು. ರಾಮ್ ಚರಣ್ ಮತ್ತು ಅವರ ಪತ್ನಿ ಉಪಾಸನಾ ಅವರೊಂದಿಗೆ ಚಿರಂಜೀವಿ ಅವರು ಹೋಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಸ್ಯಾಂಡಲ್‌ವುಡ್‌ನ ಯಶ್‌ ಹಾಗೂ ರಿಷಬ್‌ ಶೆಟ್ಟಿ ಅವರಿಗೆ ರಾಮಮಂದಿರ ಟ್ರಸ್ಟ್‌ ಆಹ್ವಾನ ನೀಡಿದೆ ಎಂದು ತಿಳಿದುಬಂದಿದೆ. ಇನ್ನು ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌, ರಣಬೀರ್‌ ಕಪೂರ್‌, ಮಾಧುರಿ ದೀಕ್ಷಿತ್‌, ಅಕ್ಷಯ್‌ ಕುಮಾರ್‌, ಆಲಿಯಾ ಭಟ್‌, ಆಯುಷ್ಮಾನ್‌ ಕುರಾನ, ಅಜಯ್‌ ದೇವಗನ್‌, ಅನುಪಮ್‌ ಖೇರ್‌, ಸಂಜಯ್‌ ಲೀಲಾ ಬನ್ಸಾಲಿ ಸೇರಿ ಹಲವು ನಟ-ನಟಿಯರು, ನಿರ್ದೇಶಕರಿಗೆ ಆಹ್ವಾನಿಸಲಾಗಿದೆ.

ಮೆಗಾಸ್ಟಾರ್ ಚಿರಂಜೀವಿ ಅವರು ‘ಹನುಮಾನ್’ ಚಿತ್ರದ ಪ್ರಿ ರಿಲೀಸ್ ಇವೆಂಟ್‌ನಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ‘ಹನುಮಾನ್’ ಚಿತ್ರ ಸಂಕ್ರಾಂತಿ ಸಂದರ್ಭದಲ್ಲಿ ಅಂದರೆ ಜನವರಿ 12ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಸಮಾರಂಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಮೆಗಾಸ್ಟಾರ್ ಚಿರಂಜೀವಿ, “ರಾಮಮಂದಿರ ನಿರ್ಮಾಣ ಇತಿಹಾಸದಲ್ಲಿ ಒಂದು ಮೈಲುಗಲ್ಲು. ರಾಮಮಂದಿರದ ಉದ್ಘಾಟನಾ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸಲಾಗಿತ್ತು. ಇದೇ ತಿಂಗಳ 22ರಂದು ನಾನು ನನ್ನ ಕುಟುಂಬದೊಂದಿಗೆ ಪಾಲ್ಗೊಳ್ಳುತ್ತೇನೆʼʼ ಎಂದು ಹೇಳಿಕೆ ನೀಡಿದರು.

ಇದನ್ನೂ ಓದಿ: Ram Mandir : ರಾಮ ಮಂದಿರ ನಿರ್ಮಾಣಕ್ಕೆ 11 ಕೋಟಿ ದೇಣಿಗೆ ನೀಡಿದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆ

ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ದೇಶದ ಸುಮಾರು 4 ಸಾವಿರ ಸಂತರು ಪಾಲ್ಗೊಳ್ಳಲಿದ್ದಾರೆ. ಇಡೀ ಕಾರ್ಯಕ್ರಮದಲ್ಲಿ ಸುಮಾರು 10-15 ಸಾವಿರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.ರಾಮಮಂದಿರಕ್ಕೆ ಚಾಲನೆ ನೀಡುವ ದಿನ ದೇಶಾದ್ಯಂತ 5 ಲಕ್ಷ ದೇವಾಲಯಗಳಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ವೇಳೆ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ 2019ರ ನವೆಂಬರ್‌ 9ರಂದು ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿ, ರಾಮಜನ್ಮಭೂಮಿಯಲ್ಲಿಯೇ ರಾಮಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿದೆ. 2020ರ ಆಗಸ್ಟ್‌ 5ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kalki 2898 AD: ನಾಲ್ಕೇ ದಿನಕ್ಕೆ 500 ಕೋಟಿ ರೂ. ಗಳಿಕೆ ಮಾಡಿದ ʻಕಲ್ಕಿ 2898 ಎಡಿʼಸಿನಿಮಾ!

Kalki 2898 AD:  ಕಲ್ಕಿ ವಿಶ್ವ ಬಾಕ್ಸ್ ಆಫೀಸ್​ನಲ್ಲೂ ಮಿಂಚುತ್ತಿದೆ. ಅಮೆರಿಕ, ಆಸ್ಟ್ರೇಲಿಯಾ ಮೊದಲಾದ ಕಡೆಗಳಲ್ಲಿ ಸಿನಿಮಾ ಮೆಚ್ಚುಗೆ ಪಡೆಯುತ್ತಿದೆ. ಈ ಚಿತ್ರ ವಿಶ್ವಾದ್ಯಂತ 800 ಕೋಟಿ ರೂಪಾಯಿ ಗಳಿಸಿದೆ. ಶೀಘ್ರವೇ ಚಿತ್ರ 1000 ಕೋಟಿ ರೂಪಾಯಿ ಕ್ಲಬ್ ಸೇರುವ ಸಾಧ್ಯತೆ ಇದೆ.

VISTARANEWS.COM


on

Kalki 2898 AD box office collection weekend 2
Koo

ಬೆಂಗಳೂರು: ‘ಕಲ್ಕಿ 2898 ಎಡಿ’ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕ್ಲಬ್ ಸೇರಿದೆ. ಕೇವಲ 11 ದಿನಕ್ಕೆ ಈ ಸಿನಿಮಾ ಇಷ್ಟು ದೊಡ್ಡ ಮೊತ್ತದ ಕಲೆಕ್ಷನ್ ಮಾಡಿದೆ. ಫಿಲ್ಮ್ ಟ್ರೇಡ್ ಪೋರ್ಟಲ್ ಸ್ಯಾಕ್‌ನಿಲ್ಕ್ ಪ್ರಕಾರ, ಚಿತ್ರವು ತನ್ನ ಎರಡನೇ ಭಾನುವಾರದಂದು 500 ಕೋಟಿ ಮೈಲಿಗಲ್ಲನ್ನು ದಾಟಿದೆ.

ಕಲ್ಕಿ 2898 AD ತನ್ನ ಮೊದಲ ವಾರದಲ್ಲಿ ಒಟ್ಟು ರೂ 414.85 ಕೋಟಿ ಗಳಿಸಿತು. ಕಲ್ಕಿ ವಿಶ್ವ ಬಾಕ್ಸ್ ಆಫೀಸ್​ನಲ್ಲೂ ಮಿಂಚುತ್ತಿದೆ. ಅಮೆರಿಕ, ಆಸ್ಟ್ರೇಲಿಯಾ ಮೊದಲಾದ ಕಡೆಗಳಲ್ಲಿ ಸಿನಿಮಾ ಮೆಚ್ಚುಗೆ ಪಡೆಯುತ್ತಿದೆ. ಈ ಚಿತ್ರ ವಿಶ್ವಾದ್ಯಂತ 800 ಕೋಟಿ ರೂಪಾಯಿ ಗಳಿಸಿದೆ. ಶೀಘ್ರವೇ ಚಿತ್ರ 1000 ಕೋಟಿ ರೂಪಾಯಿ ಕ್ಲಬ್ ಸೇರುವ ಸಾಧ್ಯತೆ ಇದೆ.

ತೆಲುಗು ಪ್ರದರ್ಶನಗಳಲ್ಲಿ 242.85 ಕೋಟಿ ರೂಪಾಯಿಗಳನ್ನು ಮತ್ತು ಹಿಂದಿ ಪ್ರದರ್ಶನಗಳಲ್ಲಿ 211.9 ಕೋಟಿ ರೂಪಾಯಿಗಳನ್ನು ಗಳಿಸಿದೆ. ಚಿತ್ರದ ತಮಿಳು ಶೋಗಳು 30.1 ಕೋಟಿ, ಮಲಯಾಳಂ ಶೋ 18.2 ಕೋಟಿ ಮತ್ತು ಕನ್ನಡ ಪ್ರದರ್ಶನಗಳು ರೂ 3.95 ಕೋಟಿ ರೂ. ಆಗಿದೆ.

ನಾಗ್ ಅಶ್ವಿನ್ ಅವರು ‘ಕಲ್ಕಿ 2898 ಎಡಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2ಡಿ ಜೊತೆಗೆ 3ಡಿಯಲ್ಲೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಈ ಚಿತ್ರದ ಬಜೆಟ್ 600 ಕೋಟಿ ರೂಪಾಯಿ ಎನ್ನಲಾಗಿದೆ. ಈ ಕಾರಣದಿಂದಲೇ ಸಿನಿಮಾ ದೊಡ್ಡ ಮೊತ್ತದ ಗಳಿಕೆ ಮಾಡೋ ಅವಶ್ಯಕತೆ ಇತ್ತು. ಸದ್ಯ ಆಗಿರೋ ಗಳಿಕೆಯಿಂದ ನಿರ್ಮಾಪಕರಿಗೆ ಇನ್ನೂ ದೊಡ್ಡ ಲಾಭವೇನು ಆಗಿಲ್ಲ. ‘ಕಲ್ಕಿ 2898 ಎಡಿ’ ಚಿತ್ರ ತೆಲುಗು, ತಮಿಳು, ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ರಿಲೀಸ್ ಆಗಿದೆ. ವೈಜಯಂತಿ ಮೂವಿಸ್ ಮೂಲಕ ಅಶ್ವಿನಿ ದತ್ ಸಿನಿಮಾ ನಿರ್ಮಾಣ ಮಾಡಿದ್ದಾರೆ.

ಸಲಾರ್’ ನಂತರ ಬಿಡುಗಡೆಯಾದ ಕಲ್ಕಿ ಸಿನಿಮಾ ಮೂಲಕ, ಪ್ರಭಾಸ್ ಚಿತ್ರೋದ್ಯಮದಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ತಲುಪಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ದೊಡ್ಡ ಮಟ್ಟದ ಓಪನಿಂಗ್ ಪ್ರಭಾಸ್‌ ಸಿನಿಮಾಗಳಿಗೆ ಸಿಗುತ್ತಿವೆ. ಇದೀಗ ‘ಕಲ್ಕಿ 2898 AD’ ಸಿನಿಮಾ ಸಹ ಇದಕ್ಕೆ ಹೊರತಾಗಿಲ್ಲ, ಇದು ಭಾರತೀಯ ಚಿತ್ರರಂಗದಲ್ಲಿ ಅವರ ಮೂರನೇ ಅತಿದೊಡ್ಡ ಕಲೆಕ್ಷನ್‌ ಮಾಡಿದ ಸಿನಿಮಾವಾಗಿದೆ.

ಇದನ್ನೂ ಓದಿ: Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

‘ಬಾಹುಬಲಿ’ಯಿಂದ ‘ಸಲಾರ್’, ‘ಕಲ್ಕಿ 2898 AD’ ವರೆಗೆ ಪ್ರಭಾಸ್ ತಮ್ಮ ಸ್ಟಾರ್ ಪವರ್‌ಗೆ ಸಾಟಿಯಿಲ್ಲ ಎಂಬುದನ್ನು ಸಾಬೀತುಪಡಿಸುತ್ತಲೇ ಬಂದಿದ್ದಾರೆ. ಸಮಕಾಲೀನ ಸಿನಿಮಾರಂಗದಲ್ಲಿ ಅತ್ಯಂತ ಅಪ್ರತಿಮ ಮತ್ತು ಪ್ರಭಾವಶಾಲಿ ನಟರಲ್ಲಿ ಒಬ್ಬರಾಗಿ ಹೊರಹೊಮ್ಮುತ್ತಿದ್ದಾರೆ ಪ್ರಭಾಸ್.‌ ಅಂದಹಾಗೆ ನಾಗ್ ಅಶ್ವಿನ್ ನಿರ್ದೇಶಿಸಿದ, ‘ಕಲ್ಕಿ 2898 AD’ 2898 AD ವರ್ಷದಲ್ಲಿ ಹಿಂದೂಗಳ ಮಹಾಕಾವ್ಯ ಮಹಾಭಾರತದಿಂದ ಸ್ಫೂರ್ತಿ ಪಡೆದು ನಿರ್ಮಿಸಲಾಗಿದೆ. ಈ ವೈಜ್ಞಾನಿಕ ಆಕ್ಷನ್ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್ ಮತ್ತು ಕಮಲ್ ಹಾಸನ್ ಅವರಂತಹ ಲೆಜಂಡರಿ ಕಲಾವಿದರಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ದಿಶಾ ಪಟಾನಿ ಸೇರಿ ಸಾಕಷ್ಟು ಕಲಾವಿದರು ಬಣ್ಣ ಹಚ್ಚಿದ್ದಾರೆ.

Continue Reading

ಸ್ಯಾಂಡಲ್ ವುಡ್

Chandan Shetty: ಚಂದನ್‌ ಶೆಟ್ಟಿಗೆ ಒಳ್ಳೆ ಹುಡುಗಿ ಜತೆ ಮದುವೆಯಾಗುವ ಕನಸು ಏನೋ ಇತ್ತಂತೆ ಆದರೆ….

Chandan Shetty ಚಂದನ್‌ ಸಂದರ್ಶನವೊಂದರಲ್ಲಿ ಈ ಮುಂಚೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದರು. ಇದೀಗ ಮತ್ತೊಂದು ಮಾಧ್ಯಮದ ಸಂದರ್ಶನವೊಂದರಲ್ಲಿ ʻʻಒಳ್ಳೆ, ಚೆನ್ನಾಗಿರುವ ಹುಡುಗಿ ಜತೆ ಮದುವೆಯಾಗುವ ಕನಸು ನನಗೂ ಇತ್ತು. ಅದೇ ರೀತಿ ಹುಡುಗಿ ಸಿಕ್ಕಿದ್ದರು. ಆದರೆ ಕಾರಣಾಂತರದಿಂದ ಹೀಗಾಯ್ತುʼʼಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Chandan Shetty talk about future decision
Koo

ಬೆಂಗಳೂರು: : ಕನ್ನಡದ ರ್‍ಯಾಪರ್‌ ಚಂದನ್ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ವಿಚ್ಛೇದನ ಪಡೆದ ಬೆನ್ನಲ್ಲೇ ಚಂದನ್‌ ಶೆಟ್ಟಿ ಹಲವು ಸಂದರ್ಶನಗಳಲ್ಲಿ ಹಾಗೇ ಸಿನಿಮಾ ಪ್ರಮೋಷನ್‌ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ. ಚಂದನ್‌ ಸಂದರ್ಶನವೊಂದರಲ್ಲಿ ಈ ಮುಂಚೆ ಹಲವು ವಿಚಾರಗಳನ್ನು ಹೇಳಿಕೊಂಡಿದ್ದರು. ಇದೀಗ ಮತ್ತೊಂದು ಮಾಧ್ಯಮದ ಸಂದರ್ಶನವೊಂದರಲ್ಲಿ ʻʻಒಳ್ಳೆ, ಚೆನ್ನಾಗಿರುವ ಹುಡುಗಿ ಜತೆ ಮದುವೆಯಾಗುವ ಕನಸು ನನಗೂ ಇತ್ತು. ಅದೇ ರೀತಿ ಹುಡುಗಿ ಸಿಕ್ಕಿದ್ದರು. ಆದರೆ ಕಾರಣಾಂತರದಿಂದ ಹೀಗಾಯ್ತುʼʼಎಂದು ಹೇಳಿಕೊಂಡಿದ್ದಾರೆ.

ಚಂದನ್‌ ಶೆಟ್ಟಿ ಮಾತನಾಡಿ ʻʻನನಗೂ ಒಳ್ಳೆಯ ಹುಡುಗಿ ಜತೆ ಮದುವೆಯಾಗುವ ಕನಸು ಇತ್ತು. ಆದರೆ ಹೀಗಾಯ್ತು. ಜೀವನ ಅಂದರೆ ಹಾಗೇ ಸಮುದ್ರ ತರಹ. ಕೆಲವು ಸಲ ಚಿಕ್ಕ ಅಲೆ ಬರುತ್ತದೆ, ಕೆಲವು ಸಹ ದೊಡ್ಡ ಅಲೆ ಬರುತ್ತದೆ, ಕೆಲವು ಸಲ ಸುನಾಮಿ ಬರುತ್ತದೆ. ಯಾವಾಗ, ಹೇಗೆ ಆಗುತ್ತದೆ ಗೊತ್ತಾಗಲ್ಲ. ಎಲ್ಲರ ಜೀವನದಲ್ಲಿ ನೋವು ಸರ್ವೇ ಸಾಮಾನ್ಯ. . ನನ್ನ ಜೀವನದಲ್ಲಿ ಇದು ಕೆಟ್ಟ ನೆನಪಾಗಿದೆ ಅಷ್ಟೇ. ಲವ್ ಮಾಡುವ ಸಂದರ್ಭದಲ್ಲಿ ಇಬ್ಬರೂ ಕೂಡ ಬೇರೆ ಬೇರೆಯಾಗಿಯೇ ಇರುತ್ತಾರೆ. ಆಗ ಪ್ರೀತಿಯಲ್ಲಿ ಬಿದ್ದಿರುತ್ತಾರೆ ಹೊರತು ಮದುವೆಯಾಗಿರುವುದಿಲ್ಲ. ಆದರೆ ಲವ್ ಅನ್ನೋದೆ ಬೇರೆ. ಮದುವೆಯೇ ಬೇರೆ. ಮದುವೆಯಾಗಿ ಒಂದೇ ರೂಂನಲ್ಲಿ ಸಂಸಾರ ಮಾಡುತ್ತಾರಲ್ವಾ ಅದೇ ಬೇರೆ. ಅದು ಮದುವೆಯಾದವರಿಗೆ ಮಾತ್ರ ಗೊತ್ತಿರುತ್ತೆʼʼಎಂದರು.

ಇನ್ನು ಮತ್ತೆ ಇಬ್ಬರೂ ಒಂದಾಗ್ತಾರ ಎಂಬ ಪ್ರಶ್ನೆಗೆ ಚಂದನ್‌ ಉತ್ತರಿಸಿ ʻʻನಮ್ಮ ಮನಸ್ಸಿನಲ್ಲಿ ಆದ ಗೊಂದಲಗಳು ಬೇರೆಯವರಿಗೆ ಅರ್ಥವಾಗುವುದಿಲ್ಲ. ಆದರೆ ಎಲ್ಲರೂ ಒಳ್ಳೆಯ ಮನಸ್ಸಿನಿಂದಲೇ ಹೇಳುತ್ತಾರೆ. ಬಿಡಿ ಈವಾಗೆಲ್ಲ ಮುಗೀತು. ಮತ್ತೆ ಈ ಬಗ್ಗೆ ಮಾತು ಬೇಡ. ನಾನು ಹೊಸ ಜೀವನ ಕಟ್ಟಿಕೊಳ್ಳಬೇಕು ಎಂದು ಕಾಯ್ತಾ ಇದ್ದೇನೆ. ಮತ್ತೆ ಹಳೇ ಚಂದನ್ ಶೆಟ್ಟಿ ಬೇಕುʼʼಎಂದರು.

ಇದನ್ನೂ ಓದಿ: Chandan Shetty: ಚಂದನ್‌ ಶೆಟ್ಟಿ ಮತ್ತೆ ಮದುವೆ ಆಗೋದು ಯಾವಾಗ? ಹೆಣ್ಣು ಮಕ್ಕಳ ಮೇಲೆ ಕೈ ಮಾಡಲು ಆಗಲ್ಲ ಎಂದಿದ್ಯಾಕೆ?

ಡಿವೋರ್ಸ್‌ ಬೆನ್ನಲ್ಲೇ ಗುಡ್‌ ನ್ಯೂಸ್‌ ಕೊಟ್ಟ ಚಂದನ್‌ ಶೆಟ್ಟಿ!

ಅರುಣ್ ಅಮುಕ್ತ ನಿರ್ದೇಶನದ ʻವಿದ್ಯಾರ್ಥಿ ವಿದ್ಯಾರ್ಥಿನಿಯರೇʼ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೊ ಸಾಂಗ್ ಬಿಡುಗಡೆಗೊಂಡಿದೆ ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಈ ಹಾಡಿಗೆ ಧ್ವನಿಯಾಗಿದ್ದಾರೆ. ಈಗ ಬಿಡುಗಡೆಗೊಂಡಿರೋ ಹಾಡು ರ್ಯಾಪ್ ಶೈಲಿಯಲ್ಲಿ ಮೂಡಿ ಬಂದಿದೆ. ಚೇತನ್ ಕುಮಾರ್ ಸಾಹಿತ್ಯಕ್ಕೆ ವಿಜೇತ್ ಕೃಷ್ಣ ಸಂಗೀತ ಸಂಯೋಜನೆ ಮಾಡಿದ್ದಾರೆ. ಚಂದನ್ ಶೆಟ್ಟಿ ಮತ್ತು ವಿಜೇತ್ ಕೃಷ್ಣ ಧ್ವನಿಯಾಗಿದ್ದಾರೆ. ಇದು ವಿಜೇತ್ ಕೃಷ್ಣ ಮತ್ತು ಚಂದನ್ ಶೆಟ್ಟಿ ಅವರುಗಳ ಎರಡನೇ ಸಮಾಗಮ.

Continue Reading

ಟಾಲಿವುಡ್

Raj Tarun: ಯುವ ನಟ ರಾಜ್ ತರುಣ್ ಮಾಜಿ ಪ್ರೇಯಸಿ ವಿರುದ್ಧ ದೂರು ದಾಖಲಿಸಿದ ನಟಿ!

Raj Tarun: ರಾಜ್ ತರುಣ್​ಗೆ ಅವರು ನಟಿಸುತ್ತಿರುವ ಸಿನಿಮಾದ ನಾಯಕ ನಟಿಯೊಂದಿಗೆ ಸಂಬಂಧವಿದ್ದು ಆಕೆಯ ಕಾರಣಕ್ಕೆ ನನಗೆ ಮೋಸ ಮಾಡಿದ್ದಾರೆ ಎಂದು ಲಾವಣ್ಯ ದೂರಿನಲ್ಲಿ ಉಲ್ಲೇಖಿಸಿದ್ದರು. ಇದೀಗ ರಾಜ್ ತರುಣ್​ರ ಹೊಸ ಸಿನಿಮಾದ ನಾಯಕ ನಟಿ, ರಾಜ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ನೀಡಿದ್ದಾರೆ.

VISTARANEWS.COM


on

Raj Tarun’s Heroine Malvi Malhotra Files Complaint
Koo

ಬೆಂಗಳೂರು: ಉಯ್ಯಾಲ ಜಂಪಾಲ’, ‘ಕುಮಾರಿ 21 ಎಫ್’, ‘ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಟಾಲಿವುಡ್​ನ ಜನಪ್ರಿಯ ಯುವ ನಟ ರಾಜ್ ತರುಣ್ (Raj Tarun) ವಿರುದ್ಧ ಅವರ ಪ್ರೇಯಸಿಯೇ ವಂಚನೆ ಪ್ರಕರಣ ದಾಖಲಿಸಿದ್ದರು. ಪೊಲೀಸ್ ಠಾಣೆಯಲ್ಲಿ ಲಾವಣ್ಯ ಹೆಸರಿನ ಯುವತಿ ದೂರು ದಾಖಲಿಸಿದ್ದು, ತಮಗೆ ನಟ ರಾಜ್ ತರುಣ್ ವಂಚನೆ ಮಾಡಿದ್ದಾನೆಂದು ಆರೋಪಿಸಿದ್ದರು. ಮಾತ್ರವಲ್ಲ ರಾಜ್ ತರುಣ್​ಗೆ ಅವರು ನಟಿಸುತ್ತಿರುವ ಸಿನಿಮಾದ ನಾಯಕ ನಟಿಯೊಂದಿಗೆ ಸಂಬಂಧವಿದ್ದು ಆಕೆಯ ಕಾರಣಕ್ಕೆ ನನಗೆ ಮೋಸ ಮಾಡಿದ್ದಾರೆ ಎಂದು ಲಾವಣ್ಯ ದೂರಿನಲ್ಲಿ ಉಲ್ಲೇಖಿಸಿದ್ದರು. ಇದೀಗ ರಾಜ್ ತರುಣ್​ರ ಹೊಸ ಸಿನಿಮಾದ ನಾಯಕ ನಟಿ, ರಾಜ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ನೀಡಿದ್ದಾರೆ.

”ಲಾವಣ್ಯ ನನ್ನ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು. ನಾನು ರಾಜ್ ತರುಣ್‌ ಜತೆ ಸಂಬಂಧ ಹೊಂದಿಲ್ಲ ಮತ್ತು ನಮ್ಮಿಬ್ಬರ ಮಧ್ಯೆ ಇರುವುದು ಕೇವಲ ಫ್ರೆಂಡ್‌ಶಿಪ್‌. ನಮ್ಮ ನಡುವೆ ಯಾವುದೇ ರೀತಿಯ ಸಂಬಂಧವಿಲ್ಲ” ಎಂದು ಹೇಳಿಕೊಂಡಿದ್ದಾರೆ. “ತಿರಗಬ್ಯಾಡರ ಸಾಮಿ” ಚಿತ್ರದಲ್ಲಿ ನಟಿಸಿದ್ದರು ಮಾಳವಿ ಮಲ್ಹೋತ್ರಾ.

ಇದೀಗ ಲಾವಣ್ಯ ಈಗ ಇದೇ ಮಾಳವಿ ಅವರು ರಾಜ್ ತರುಣ್​ರ ಪ್ರೇಯಸಿ ಲಾವಣ್ಯ ವಿರುದ್ಧ ದೂರು ದಾಖಲಿಸಿದ್ದಾರೆ. ಹೈದರಾಬಾದ್​ ಡಿಸಿಪಿ ಅವರನ್ನು ಭೇಟಿ ಆಗಿರುವ ಮಾಳವಿ ಮಲ್ಹೋತ್ರಾ, ʻʻಹಿಮಾಚಲ ಪ್ರದೇಶದಲ್ಲಿ ವಾಸಿಸುತ್ತಿರುವ ತನ್ನ ಕುಟುಂಬಕ್ಕೆ ಲಾವಣ್ಯ ಬೆದರಿಕೆ ಹಾಕಿದ್ದಾಳೆ. ಮತ್ತು ತನ್ನ ಸಹೋದರನಿಗೆ ಕರೆ ಮಾಡಿ ಪ್ರಾಣ ತೆಗೆಯುವುದಾಗಿ ಬೆದರಿಕೆ ಹಾಕಿದ್ದಾಳೆ. ಲಾವಣ್ಯ ಯಾರು ಹಾಗೇ ಅವರ ಮುಖವನ್ನು ಇನ್ನೂ ನಾನು ನೋಡಿಲ್ಲ. ರಾಜ್ ತರುಣ್ ಅವರು ನನ್ನ ಮಾಜಿ ಎಕ್ಸ್‌ ಎಂದು ಹೇಳಿದ್ದರಿಂದ ನಾನು ಅವಳನ್ನು ಬ್ಲಾಕ್ ಮಾಡಿದ್ದೇನೆ ರಾಜ್ ತರುಣ್ ಬಳಿಯೂ ನನ್ನ ಅಪ್ಪನ ಫೋನ್ ನಂಬರ್ ಇರಲಿಲ್ಲ. ಆದರೆ ಲಾವಣ್ಯ ಅವಳ ಬಳಿ ಇದೆ. ನನ್ನ ಖಾಸಗಿ ಜೀವನದ ಮೇಲೆ ಆಕೆ ನಿಗಾ ಇರಿಸಿದ್ದಾಳೆ. ನನ್ನ ಖಾಸಗಿ ಜೀವನದಲ್ಲಿ ಮೂಗು ತೂರಿಸಿದ್ದಾಳೆ ಅದು ಅಪರಾಧ. ಪೊಲೀಸರು ಈ ವಿಷಯವಾಗಿ ಕೂಡಲೇ ಕ್ರಮ ಕೈಗೊಳ್ಳಬೇಕುʼʼ ಎಂದಿದ್ದಾರೆ. 

ಇದನ್ನೂ ಓದಿ: Dolly Dhananjay: ಐತಿಹಾಸಿಕ ‘ಹಲಗಲಿ’ ಸಿನಿಮಾದಲ್ಲಿ ‘ಡಾಲಿ’ ಧನಂಜಯ ಹೀರೊ!

ಲಾವಣ್ಯ ಈ ಹಿಂದೆ ದೂರು ನೀಡಿದ್ದೇನು?

ನಟ ರಾಜ್ ತರುಣ್ ವಂಚನೆ ಮಾಡಿದ್ದಾನೆಂದು ಆರೋಪಿಸಿದ್ದರು. . “ರಾಜ್ ತರುಣ್ ನನ್ನನ್ನು ನಂಬಿ, ಪ್ರೀತಿಸಿ, ದೈಹಿಕವಾಗಿಯೂ ಬಳಸಿಕೊಂಡಿದ್ದಾರೆ. ಇದಕ್ಕೆ ಕಾರಣ ಒಬ್ಬ ಯುವತಿ . ಹಾಗಾಗಿಯೇ ಆಕೆಯ ಹಾಗೂ ಆಕೆಯ ಸಹೋದರನ ವಿರುದ್ಧ ನರಸಿಂಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ನಾನು ರಾಜ್‌ತರುಣ್ ಜತೆ 11 ವರ್ಷಗಳಿಂದ ಸಂಬಂಧ ಹೊಂದಿದ್ದೆ. ದೇವಸ್ಥಾನದಲ್ಲಿ ಮದುವೆ ಕೂಡ ಮಾಡಿಕೊಂಡಿದ್ದೇವು. ಆದರೆ ಆಕೆಯೊಂದಿಗೆ ಸಂಬಂಧ ಹೊಂದಿದ್ದ ಕಾರಣ 3 ತಿಂಗಳ ಹಿಂದೆ ರಾಜ್ ಮನೆ ಬಿಟ್ಟು ನನ್ನಿಂದ ದೂರ ಉಳಿದಿದ್ದರು’’ ಎಂದು ಲಾವಣ್ಯ ಹೇಳಿಕೆ ನೀಡಿರುವುದಾಗಿ ವರದಿಯಾಗಿತ್ತು.

Continue Reading

ಸ್ಯಾಂಡಲ್ ವುಡ್

Kiccha Sudeep: ಮುಂದಿನ ಸಿನಿಮಾಗಾಗಿ ಭಾರಿ ವರ್ಕೌಟ್‌ ಮಾಡ್ತಾ ಇದ್ದಾರೆ ಕಿಚ್ಚ!

Kiccha Sudeep: ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ ಕಿಚ್ಚ. ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ.

VISTARANEWS.COM


on

Kiccha Sudeep workout For next Movie
Koo

ಬೆಂಗಳೂರು: ‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ (Kiccha Sudeep) ಒಪ್ಪಿಕೊಂಡಿರುವ ಸಿನಿಮಾ ʻಮ್ಯಾಕ್ಸ್ʼ (MAX). ಹೀಗಾಗಿ ಈ ಸಿನಿಮಾ ಬಗ್ಗೆ ಅವರ ಅಭಿಮಾನಿಗಳಲ್ಲಿ ಬಹಳಷ್ಟು ನಿರೀಕ್ಷೆಯಿದೆ. ಮ್ಯಾಕ್ಸ್ ಸಿನಿಮಾದಲ್ಲಿ ಸುದೀಪ್ ಪೊಲೀಸ್‌ ಪಾತ್ರದಲ್ಲಿ ಮಿಂಚಲಿದ್ದಾರೆ. ಪಾತ್ರದ ಹೆಸರು ವಿಭಿನ್ನವಾಗಿಯೇ ಇದೆ. ಈಗಾಗಲೇ ಸಿನಿಮಾ ಚಿತ್ರೀಕರಣ ಮುಗಿಸಿದ್ದು, ಮುಂದಿನ ಸಿನಿಮಾಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಬಿಲ್ಲಾ ರಂಗ ಭಾಷಾ’ಗಾಗಿ ರೆಡಿಯಾಗುತ್ತಿದ್ದಾರೆ. ಈ ಸಿನಿಮಾದಲ್ಲಿ ಮೂರು ಪಾತ್ರಗಳಲ್ಲಿ ಸುದೀಪ್ ನಟಿಸಲಿದ್ದಾರೆ ಎನ್ನಲಾಗುತ್ತಿದ್ದು, ಒಂದೊಂದು ಪಾತ್ರಕ್ಕೆ ಒಂದೊಂದು ರೀತಿ ಮ್ಯಾನರಿಸಂನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದೀಗ ಕಿಚ್ಚ ಅವರು ವರ್ಕೌಟ್‌ ಮಾಡಿರುವ ಫೋಟೊವನ್ನು ಹಂಚಿಕೊಂಡಿದ್ದಾರೆ.

ಒಂದು ಪಾತ್ರದಲ್ಲಿ ಭಾರಿ ಕಟ್ಟುಮಸ್ತಾದ ದೇಹವನ್ನು ಹೊಂದಿದ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದು, ಅದಕ್ಕಾಗಿ ಜಿಮ್​ನಲ್ಲಿ ಬೆವರಿಳಿಸುತ್ತಿದ್ದಾರೆ ಕಿಚ್ಚ. ಮ್ಯಾಕ್ಸ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗುವ ಮುನ್ನವೇ ‘ಬಿಲ್ಲಾ ರಂಗ ಭಾಷಾ’ ಸಿನಿಮಾಕ್ಕೆ ತಯಾರಾಗುತ್ತಿದ್ದಾರೆ. ಈ ಸಿನಿಮಾವನ್ನು ಅನುಪ್ ಭಂಡಾರಿ ನಿರ್ದೇಶನ ಮಾಡಲಿದ್ದಾರೆ. ‘ದ್ರೋಣಾಚಾರ್ಯ’ ಸಿನಿಮಾವನ್ನು ಅನುಪ್ ನಿರ್ದೇಶನ ಮಾಡಲಿದ್ದಾರೆ ಎನ್ನಲಾಗಿತ್ತು, ಆದರೆ ಅದರ ಬದಲಿಗೆ ‘ಬಿಲ್ಲಾ ರಂಗ ಭಾಷಾ’ ಸಿನಿಮಾ ಪ್ರಾರಂಭ ಮಾಡಿದ್ದಾರೆ.

ಮ್ಯಾಕ್ಸ್ʼ ಸಿನಿಮಾಕ್ಕೆ ಕನ್ನಡದ ತಾರೆಯರು ಇದ್ದಾರೆ. ಕನ್ನಡದ ಟೆಕ್ನಿಷನ್‌ಗಳೂ ಇದ್ದಾರೆ. ಹಾಗೆ ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶೇಖರ್ ಚಂದ್ರ ಕ್ಯಾಮೆರಾ ವರ್ಕ್ ಮಾಡಿದ್ದಾರೆ. ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೆ ಕೂಡ ಈ ಸಿನಿಮಾದಲ್ಲಿ ಇದ್ದಾರೆ.

ಇದನ್ನೂ ಓದಿ: Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

ವರಲಕ್ಷ್ಮಿ ಶರತ್ ಕುಮಾರ್ ಕೂಡ ಈ ಚಿತ್ರದಲ್ಲಿ ನಟಿಸಿದ್ದಾರೆ. ವಿಜಯ್ ಕಾರ್ತಿಕೇಯ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ತಮಿಳು ನಿರ್ಮಾಪಕ ಕಲೈಪುಲಿ ಎಸ್. ತನು ಜೊತೆ ಸೇರಿ ಕಿಚ್ಚ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

Continue Reading
Advertisement
MUDA site scandal
ಕರ್ನಾಟಕ4 mins ago

MUDA site scandal: ಸಿಎಂ ಆಪ್ತ ರಾಕೇಶ್‌ ಪಾಪಣ್ಣಗೆ ಹಂಚಿಕೆಯಾಗಿದ್ದ ಮುಡಾ ಸೈಟ್‌ಗೂ ತಡೆ!

steel flyover bridge shivananda circle
ಪ್ರಮುಖ ಸುದ್ದಿ11 mins ago

Steel Flyover: ಬೆಂಗಳೂರಿನ ಮೊದಲ ಸ್ಟೀಲ್‌ ಫ್ಲೈಓವರ್‌ ಸೇತುವೆಯಲ್ಲಿ ಬಿರುಕು

Gurdaspur attack
ವಿದೇಶ12 mins ago

Gurdaspur Attack: ಗುರುದಾಸಪುರ ಉಗ್ರ ದಾಳಿಯ ರೂವಾರಿ, ಐಎಸ್ಐ ಅಧಿಕಾರಿಯನ್ನು ಕರಾಚಿಯಲ್ಲಿ ಫಿನಿಷ್ ಮಾಡಿದ ‘ಅಪರಿಚಿತರು’!

Karnataka Rain
ಮಳೆ13 mins ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Haveri accident Shivanna couple helped the money to families
ಸ್ಯಾಂಡಲ್ ವುಡ್22 mins ago

Shiva Rajkumar: ಹಾವೇರಿ ಅಪಘಾತ; ಮೃತಪಟ್ಟ ಕುಟುಂಬಗಳಿಗೆ ಧನ ಸಹಾಯ ಮಾಡಿದ ಶಿವಣ್ಣ ದಂಪತಿ

Mumbai Cricket Association
ಪ್ರಮುಖ ಸುದ್ದಿ27 mins ago

Mumbai Cricket Association : ಮುಂಬೈನಲ್ಲಿ ನಿರ್ಮಾಣವಾಗಲಿದೆ 1 ಲಕ್ಷ ಪ್ರೇಕ್ಷಕರ ಸಾಮರ್ಥ್ಯದ ಕ್ರಿಕೆಟ್​ ಸ್ಟೇಡಿಯಮ್​

Paris Olympics 2024
ದೇಶ41 mins ago

Paris Olympics 2024: ಸರ್ಕಾರಿ, ಖಾಸಗಿ ವಲಯದ ಪಾಲುದಾರಿಕೆಯಿಂದ ಕ್ರೀಡೆಗಳ ಭವಿಷ್ಯ ನಿರ್ಧಾರ: ಪಾರ್ಥ್ ಜಿಂದಾಲ್

gold rate today
ಕರ್ನಾಟಕ45 mins ago

Gold Rate Today: ಬಂಗಾರ ಖರೀದಿಸುವ ಪ್ಲ್ಯಾನ್‌ ಇದೆಯೇ? ಚಿನ್ನದ ದರ ಹೀಗಿದೆ ನೋಡಿ

Self Harming
ಕ್ರೈಂ48 mins ago

Self Harming: ನವೋದಯ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣು

Karnataka weather Forecast
ಮಳೆ58 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ13 mins ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ58 mins ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜುಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ18 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ20 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ21 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು2 days ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಟ್ರೆಂಡಿಂಗ್‌