Megastar Chiranjeevi rumours of getting cancer Megastar Chiranjeevi: ಮೆಗಾ ಸ್ಟಾರ್ ಚಿರಂಜೀವಿಗೆ ಕ್ಯಾನ್ಸರ್‌! ಈ ಸುದ್ದಿ ನಿಜನಾ? ಆತಂಕದಲ್ಲಿ ಅಭಿಮಾನಿಗಳು - Vistara News

South Cinema

Megastar Chiranjeevi: ಮೆಗಾ ಸ್ಟಾರ್ ಚಿರಂಜೀವಿಗೆ ಕ್ಯಾನ್ಸರ್‌! ಈ ಸುದ್ದಿ ನಿಜನಾ? ಆತಂಕದಲ್ಲಿ ಅಭಿಮಾನಿಗಳು

Megastar Chiranjeevi: ಚಿರಂಜಿವಿ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿತ್ತು. ಚಿರಂಜೀವಿ ಅವರಿಗೆ ಏನಾಗಿತ್ತು ಎಂದು ಬೇಸರಕ್ಕೊಳಗಾಗಿದ್ದರು. ಇದೇ ಸಮಯಕ್ಕೆ ತೆಲುಗು ಮಾಧ್ಯಮಗಳಲ್ಲಿ ಬಂದ ಹಲವು ಸುದ್ದಿಗಳು ಈ ಆತಂಕವನ್ನು ಹೆಚ್ಚಿಸಿದವು.

VISTARANEWS.COM


on

Megastar Chiranjeevi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮೆಗಾಸ್ಟಾರ್ ಚಿರಂಜೀವಿ (Megastar Chiranjeevi:) ಅವರಿಗೆ ಕ್ಯಾನ್ಸರ್ ಇದೆ ಎಂಬ ಸುದ್ದಿಗಳು ಹಲವು ದಿನಗಳಿಂದ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಚಿರಂಜಿವಿ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿತ್ತು. ಚಿರಂಜೀವಿ ಅವರಿಗೆ ಏನಾಗಿತ್ತು ಎಂದು ಬೇಸರಕ್ಕೊಳಗಾಗಿದ್ದರು. ಇದೇ ಸಮಯಕ್ಕೆ ತೆಲುಗು ಮಾಧ್ಯಮಗಳಲ್ಲಿ ಬಂದ ಹಲವು ಸುದ್ದಿಗಳು ಈ ಆತಂಕವನ್ನು ಹೆಚ್ಚಿಸಿದವು ಈ ಬಗ್ಗೆ ಸ್ವತಃ ನಟ ಚಿರಂಜೀವಿ ಅವರು ಸ್ಪಷ್ಟನೆ ನೀಡಿದ್ದಾರೆ(Fact Check).

ಚಿರಂಜೀವಿ ಅವರಿಗೆ ಕ್ಯಾನ್ಸರ್ ಊತ ಉಂಟಾಗಿತ್ತು ಹಾಗೂ ಅವರು ಸಮಯಕ್ಕೆ ಸರಿಯಾದ ಚಿಕಿತ್ಸೆ ಪಡೆದು ಸರಿಪಡಿಸಿಕೊಂಡರು ಎಂದೆಲ್ಲಾ ಸುದ್ದಿಗಳನ್ನು ಮಾಧ್ಯಮಗಳು ಪ್ರಕಟಿಸಿದ್ದವು. ಈ ಕುರಿತಾದ ಸುದ್ದಿಗಳು ಹೆಚ್ಚಾಗಿ ಹರಿದಾಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಚಿರಂಜೀವಿ ಟ್ವೀಟ್ ಮಾಡುವ ಮೂಲಕ ಈ ಎಲ್ಲಾ ಸುದ್ದಿಗಳಿಗೆ ಉತ್ತರ ನೀಡಿದ್ದಾರೆ.

ʻʻಸ್ವಲ್ಪ ಸಮಯದ ಹಿಂದೆ ನಾನು ಕ್ಯಾನ್ಸರ್ ಕೇಂದ್ರವನ್ನು ಉದ್ಘಾಟಿಸುವಾಗ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯತೆಯ ಬಗ್ಗೆ ಮಾತನಾಡಿದ್ದೆ. ನಿಯಮಿತವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರೆ ಕ್ಯಾನ್ಸರ್ ಬರದಂತೆ ತಡೆಯಬಹುದು ಎಂದು ಹೇಳಿದ್ದೆ. ಕ್ಯಾನ್ಸರ್ ರಹಿತ ಊತವನ್ನು ಪತ್ತೆ ಹಚ್ಚಿ ತೆಗೆಯಲಾಗಿದೆ ಎಂದು ಹೇಳಿದ್ದೆ. ‘ಮೊದಲು ಪರೀಕ್ಷೆ ಮಾಡದೇ ಇದ್ದಿದ್ದರೆ ಕ್ಯಾನ್ಸರ್ ಆಗಿಬಿಡುತ್ತಿತ್ತು’ ಎಂದು ಮಾತ್ರ ಹೇಳಿದ್ದೆ. ಅದಕ್ಕೇ ಎಲ್ಲರೂ ಮುಂಜಾಗ್ರತೆ ವಹಿಸಿ ವೈದ್ಯಕೀಯ ಪರೀಕ್ಷೆ/ಸ್ಕ್ರೀನಿಂಗ್ ಮಾಡಿಸಿಕೊಳ್ಳಬೇಕು’ ಎಂದು ಮಾತ್ರ ಹೇಳಿದ್ದೆ. ಆದರೆ ಕೆಲವು ಮಾಧ್ಯಮ ಸಂಸ್ಥೆಗಳು ಇದನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ ‘ನನಗೆ ಕ್ಯಾನ್ಸರ್ ಬಂದಿದೆ’ ಮತ್ತು ‘ಚಿಕಿತ್ಸೆಯಿಂದ ನಾನು ಬದುಕುಳಿದೆ’ ಎಂದು ಸುದ್ದಿ ಪ್ರಕಟಿಸಿದವು. ಅವರೆಲ್ಲರಿಗೂ ಈ ಸ್ಪಷ್ಟನೆ. ಅಂತಹ ಪತ್ರಕರ್ತರಿಗೂ ಒಂದು ಮನವಿ. ವಿಷಯ ಅರ್ಥವಾಗದೆ ಅಸಂಬದ್ಧವಾಗಿ ಬರೆಯಬೇಡಿ. ಈ ಕಾರಣದಿಂದಾಗಿ, ಅನೇಕ ಜನರು ಭಯಭೀತರಾಗಿದ್ದಾರೆ ಮತ್ತು ನೋವಿಗೊಳಗಾಗಿದ್ದಾರೆʼʼಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Chiranjeevi | ಮೆಗಾಸ್ಟಾರ್ ಚಿರಂಜೀವಿ ಅಭಿನಯದ ʻವಾಲ್ತೇರ್‌ ವೀರಯ್ಯʼ ಮೊದಲ ದಿನದ ಕಲೆಕ್ಷನ್‌ ಎಷ್ಟು?

ಚಿರಂಜೀವಿ (Megastar Chiranjeevi) ಸದ್ಯ ತಮ್ಮ ಮುಂಬರುವ ಚಿತ್ರ ಭೋಲಾ ಶಂಕರ್ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ಮಾರ್ಚ್ 1ರಂದು, ಮೆಗಾಸ್ಟಾರ್ ಚಿರಂಜೀವಿ ʻಭೋಲಾ ಶಂಕರ್ʼ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನಾವರಣಗೊಳಿಸಿದ್ದರು. ಈ ಸಿನಿಮಾ ಆಗಸ್ಟ್ 11ರಂದು ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿದೆ.
ಭೋಲಾ ಶಂಕರ್ ಸಿನಿಮಾವನ್ನು ಮೆಹರ್ ರಮೇಶ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಚಿರಂಜೀವಿ, ತಮನ್ನಾ ಮತ್ತು ಕೀರ್ತಿ ಸುರೇಶ್ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದ ಕಥೆಯನ್ನು ಶಿವ ಮತ್ತು ಆದಿ ನಾರಾಯಣ ಬರೆದಿದ್ದು, ಮಾಮಿದಲ ತಿರುಪತಿ ಸಂಭಾಷಣೆ ಬರೆದಿದ್ದಾರೆ.

ರಘು ಬಾಬು, ಮುರಳಿ ಶರ್ಮಾ, ರವಿಶಂಕರ್, ವೆನ್ನೆಲ ಕಿಶೋರ್, ಸುಶಾಂತ್ ಮತ್ತು ತುಳಸಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದಡ್ಲಿ ಛಾಯಾಗ್ರಹಣ, ಮಾರ್ತಾಂಡ್ ಕೆ ವೆಂಕಟೇಶ್ ಸಂಕಲನ ಮತ್ತು ಮಹತಿ ಸ್ವರ ಸಾಗರ್ ಸಂಗೀತ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

South Cinema

Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

Mahesh Babu: ವೈರಲ್‌ ಆದ ವಿಡಿಯೊದಲ್ಲಿ ಮಹೇಶ್ ಕಪ್ಪು ಮತ್ತು ಬಿಳಿ ಜಾಕೆಟ್‌ನಲ್ಲಿ ಬೂದು ಬಣ್ಣದ ಟೀ ಶರ್ಟ್ ಮತ್ತು ಜೀನ್ಸ್‌ನೊಂದಿಗೆ ಕಾಣಿಸಿಕೊಂಡಿದ್ದರು. ಮಹೇಶ್​ ಬಾಬು ಅವರು ವಿಶೇಷ ತರಬೇತಿ ಕೂಡ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ದುಬೈನಿಂದ ಮಹೇಶ್‌ ಬಾಬು ಅವರು ವಾಪಸ್​ ಹೈದರಾಬಾದ್​ಗೆ ಬಂದಿದ್ದಾರೆ ಎಂದು ವರದಿಯಾಗಿದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. ದುಬೈನಿಂದ ಶೂಟಿಂಗ್‌ ಮುಗಿಸಿ ವಾಪಸ್‌ ಬರುವಾಗ ಮಹೇಶ್‌ ಬಾಬು ಅವರ ಲುಕ್‌ ಬಹಿರಂಗವಾಗಿದೆ.

VISTARANEWS.COM


on

Mahesh Babu SS Rajamouli return from Dubai
Koo

ಬೆಂಗಳೂರು: ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಹಾಗೂ ನಿರ್ದೇಶಕ ರಾಜಮೌಳಿ (SS Rajamouli) ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. ಸದ್ಯಕ್ಕೆ ‘SSMB 29’ ಎಂದು ಕರೆಯಲಾಗುತ್ತಿದೆ. ದುಬೈನಿಂದ ಶೂಟಿಂಗ್‌ ಮುಗಿಸಿ ವಾಪಸ್‌ ಬರುವಾಗ ಮಹೇಶ್‌ ಬಾಬು ಅವರ ಲುಕ್‌ ಬಹಿರಂಗವಾಗಿದೆ. ಈ ಸಿನಿಮಾದಲ್ಲಿ ಮಹೇಶ್‌ ಬಾಬು ಅವರ ಲುಕ್‌ ಡಿಫ್‌ರೆಂಟ್‌ ಆಗಿರಲಿದೆ ಎಂದು ಈ ಮುಂಚೆ ರಾಜಮೌಳಿ ಅವರು ಹೇಳಿದ್ದರು. ಆ ಲುಕ್​ ಬಹಿರಂಗ ಆಗಬಾರದು ಎಂಬುದು ರಾಜಮೌಳಿ ಅವರ ಉದ್ದೇಶ ಆಗಿತ್ತು. ಅದಕ್ಕಾಗಿ ಅವರು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ ಈಗ ಮಹೇಶ್​ ಬಾಬು ಅವರು ಹೊಸ ಗೆಟಪ್​ ಬಹಿರಂಗ ಆಗಿದೆ.

ವೈರಲ್‌ ಆದ ವಿಡಿಯೊದಲ್ಲಿ ಮಹೇಶ್ ಕಪ್ಪು ಮತ್ತು ಬಿಳಿ ಜಾಕೆಟ್‌ನಲ್ಲಿ ಬೂದು ಬಣ್ಣದ ಟೀ ಶರ್ಟ್ ಮತ್ತು ಜೀನ್ಸ್‌ನೊಂದಿಗೆ ಕಾಣಿಸಿಕೊಂಡಿದ್ದರು. ಮಹೇಶ್​ ಬಾಬು ಅವರು ವಿಶೇಷ ತರಬೇತಿ ಕೂಡ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ದುಬೈನಿಂದ ಮಹೇಶ್‌ ಬಾಬು ಅವರು ವಾಪಸ್​ ಹೈದರಾಬಾದ್​ಗೆ ಬಂದಿದ್ದಾರೆ ಎಂದು ವರದಿಯಾಗಿದೆ. ಈ ಸಿನಿಮಾದ ಪಾತ್ರಕ್ಕಾಗಿ ಅವರು ಕೂದಲು ಬೆಳೆಸಿದ್ದಾರೆ ಎಂದು ವರದಿಯಾಗಿದೆ. ರಾಜಮೌಳಿ ಇತ್ತೀಚೆಗೆ ಆರ್‌ಆರ್‌ಆರ್ ಸಿನಿಮಾದ ವಿಶೇಷ ಪ್ರದರ್ಶನಕ್ಕಾಗಿ ಜಪಾನ್‌ಗೆ ಬಂದಿದ್ದರು.

ಇದನ್ನೂ ಓದಿ: Mahesh Babu: ಮಹೇಶ್ ಬಾಬು-ರಾಜಮೌಳಿ ಸಿನಿಮಾ ಮುಹೂರ್ತ ಎಲ್ಲಿ? ಯಾವಾಗ?

ಎಸ್‌ಎಸ್ ರಾಜಮೌಳಿ (SS Rajamouli) ಅವರು ಪತ್ನಿ ರಮಾ ರಾಜಮೌಳಿ ಅವರೊಂದಿಗೆ ಮಾರ್ಚ್ 18ರಂದು ಜಪಾನ್‌ನಲ್ಲಿ ‘ಆರ್‌ಆರ್‌ಆರ್’ ಪ್ರದರ್ಶನಕ್ಕೆ ಹಾಜರಾಗಿದ್ದರು. ಮತ್ತೊಮ್ಮೆ ಸಿನಿಮಾ ಸ್ಕ್ರೀನಿಂಗ್‌ಗಾಗಿ ನಿರ್ದೇಶಕ ರಾಜಮೌಳಿ ಅಲ್ಲಿಗೆ ಹೋಗಿದ್ದರು. ಅಭಿಮಾನಿಗಳೊಂದಿಗೆ ಸಂವಾದದ ಸಮಯದಲ್ಲಿ, ಅವರು ಮಹೇಶ್ ಬಾಬು ಅವರೊಂದಿಗಿನ ತಮ್ಮ ಮುಂಬರುವ ಚಿತ್ರದ ಬಗ್ಗೆ ಮಾತನಾಡಿದ್ದರು.

ಜಪಾನ್‌ನಲ್ಲಿ ನಡೆದ ಸ್ಕ್ರೀನಿಂಗ್‌ನಲ್ಲಿ ಮಾತನಾಡಿದ ಎಸ್‌ಎಸ್ ರಾಜಮೌಳಿ, “ನಮ್ಮ ಮುಂದಿನ ಚಿತ್ರದ ಸ್ಕ್ರಿಪ್ಟ್‌ ಕೆಲಸ ಮಗಿಸಿದ್ದೇವೆ. ಚಿತ್ರ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ. ಇನ್ನೂ ಕಾಸ್ಟಿಂಗ್ ಪೂರ್ಣಗೊಂಡಿಲ್ಲ. ಮುಖ್ಯ ನಾಯಕ, ಅಂದರೆ ಮಹೇಶ್‌ ಬಾಬು ಅವರು ಮಾತ್ರ ಫಿಕ್ಸ್‌ ಆಗಿದ್ದಾರೆ. ಆತ ತುಂಬಾ ಒಳ್ಳೆಯ ನಟ. ಸುಂದರ ಕೂಡ. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರನ್ನು ಇಲ್ಲಿಗೆ ಕರೆತಂದು ನಿಮಗೆ ಪರಿಚಯಿಸುತ್ತೇನೆʼʼ ಎಂದಿದ್ದರು

2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading

ಸ್ಯಾಂಡಲ್ ವುಡ್

Yuva Movie: ಒಟಿಟಿಗೆ ಬಂದಾಯ್ತು ʻಯುವʼ: ಸಿನಿಮಾ ನೋಡಬಹುದು, ಆದರೆ….

Yuva Movie: ಈ ಚಿತ್ರದ ಮೊದಲ ಹಾಡಿಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಸಾಂಗ್ ಕೊರಿಯೋಗ್ರಫಿ ಮಾಡಿದ್ದಾರೆ. ಸುಮಾರು 3 ಕೋಟಿ ರೂ. ಮೊತ್ತಕ್ಕೆ ‘ಯುವ’ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದೆ ಎನ್ನಲಾಗಿದೆ.

VISTARANEWS.COM


on

Yuva Movie streaming ott yuva rajkumar
Koo

ಬೆಂಗಳೂರು: ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ (Hombale Films) ನಿರ್ಮಿಸುತ್ತಿರುವ, ಯುವ ರಾಜ್‌ಕುಮಾರ್ ಅಭಿನಯದ ಚಿತ್ರ ʼಯುವʼ (Yuva Movie). ಮಾರ್ಚ್‌ 29ರಂದು ತೆರೆ ಕಂಡಿತ್ತು. ಆದರೀಗ ಸಿನಿಮಾ ತೆರೆ ಕಂಡ 21 ದಿನಕ್ಕೆ ಒಟಿಟಿಗೆ ಬಂದಿದೆ. ಸದ್ದಿಲ್ಲದೇ ಸಿನಿಮಾ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ (Amazon Prime) ಆಗುತ್ತಿದೆ.

ವಿಶೇಷ ಎಂದರೆ ಸಿನಿಮಾವನ್ನು ಪ್ರೈಂ ಚಂದಾದಾರರು ವೀಕ್ಷಿಸಲು ಸಾಧ್ಯವಿಲ್ಲ. ಸದ್ಯಕ್ಕೆ ಬಾಡಿಗೆ ಪದ್ಧತಿಯಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. 349 ರೂ. ಕೊಟ್ಟು ಸಿನಿಮಾ ವೀಕ್ಷಿಸಬೇಕಿದೆ. ಚಾಮರಾಜನಗರದಲ್ಲಿ ‘ಯುವ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಲಾಗಿತ್ತು. ಹೊಸಪೇಟೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಪ್ರೀ ರಿಲೀಸ್ ಈವೆಂಟ್ ಕೂಡ ನಡೆದಿತ್ತು.ಸಿನಿಮಾ 20 ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿದೆ. ಒಟಿಟಿಗೆ ಬಂದಿದ್ದರೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಈ ಚಿತ್ರದ ಮೊದಲ ಹಾಡಿಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಸಾಂಗ್ ಕೊರಿಯೋಗ್ರಫಿ ಮಾಡಿದ್ದಾರೆ. ಸುಮಾರು 3 ಕೋಟಿ ರೂ. ಮೊತ್ತಕ್ಕೆ ‘ಯುವ’ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Yuva Rajkumar: ʻಯುವʼನ ಆರ್ಭಟ ಶುರು: ಸಿನಿಮಾ ನೋಡಿ ಬೆಳ್ಳುಳ್ಳಿ ಕಬಾಬ್‌ ಚಂದ್ರು ಏನಂದ್ರು?

ಏಪ್ರಿಲ್ 23ರಂದು ಯುವ ರಾಜ್‌ಕುಮಾರ್ ಹುಟ್ಟುಹಬ್ಬ. ಮರುದಿನ ಡಾ. ರಾಜ್‌ಕುಮಾರ್ ಜಯಂತೋತ್ಸವ ಇದೆ. ಹಾಗಾಗಿ ಅದೇ ಸಂಭ್ರಮದಲ್ಲಿ ಹೊಸ ಸಿನಿಮಾ ಘೋಷಣೆ ಮಾಡುವ ನಿರೀಕ್ಷೆಯಿದೆ ಎನ್ನಲಾಗಿದೆ.

Continue Reading

ಸ್ಯಾಂಡಲ್ ವುಡ್

Uttarakaanda Movie: ಪಾಟೀಲನಾಗಿ ‘ಉತ್ತರಕಾಂಡ’ ಸಿನಿಮಾಗೆ ಎಂಟ್ರಿ ಕೊಟ್ಟ ಯೋಗರಾಜ್ ಭಟ್

Uttarakaanda Movie: ಉತ್ತರಕಾಂಡʼದ ಮುಹೂರ್ತ 2022ರಲ್ಲಿ‌ಯೇ ಆಗಿತ್ತು. ಆದರೆ ಇದುವರೆಗೆ ಚಿತ್ರೀಕರಣ ಆರಂಭವಾಗಿರಲಿಲ್ಲ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದೆʼʼ ಎಂದು ಚಿತ್ರತಂಡ ತಿಳಿಸಿದೆ.

VISTARANEWS.COM


on

Uttarakaanda Movie Yogaraj bhat entry
Koo

ಬೆಂಗಳೂರು: ಖ್ಯಾತ ನಿರ್ದೇಶಕ ಯೋಗರಾಜ್ ಭಟ್ `ಉತ್ತರಾಕಾಂಡ’ದಲ್ಲಿ (Uttarakaanda Movie) ನಟಿಸಲಿದ್ದಾರೆ‌. “ಪಾಟೀಲ” ಎಂಬ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆ್ಯಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,‌ಇದೀಗ ವಿಭಿನ್ನವಾಗಿ ಆ್ಯಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ‌. ಈ ವರ್ಷದ ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಉತ್ತರಕಾಂಡʼ (Uttarakaanda Movie)ವೂ ಒಂದು. ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್‌, ಡಾಲಿ‌ ಧನಂಜಯ್‌ ಮತ್ತೊಮ್ಮೆ ತೆರೆ ಮೇಲೆ ಒಂದಾಗುತ್ತಿರುವ ಕಾರಣಕ್ಕೆ ಈ ಸಿನಿಮಾ ಈಗಾಗಲೇ ಕುತೂಹಲ ಕೆರಳಿಸಿದೆ. ಏ. 15 ಸಿನಿಮಾದ ಶೂಟಿಂಗ್‌ ಆರಂಭಿಸಲಾಗಿದೆ. 

ಏ.18ರಂದು ಚಿತ್ರತಂಡ ದೂದ್‌ಪೇಡ ದಿಗಂತ್‌ ಅವರ ಲುಕ್‌ ಅನಾವರಣಗೊಳಿಸಿತ್ತು. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು, ಇನ್ನಷ್ಟು ನಿರೀಕ್ಷೆ ಮೂಡಿಸಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Uttarakaanda Movie: ʻಉತ್ತರಕಾಂಡʼ ಸಿನಿಮಾದಲ್ಲಿ ದೂದ್ ಪೇಡಾ ದಿಗಂತ್ ಈಗʻಮಿರ್ಚಿ ಮಲ್ಲಿಗೆʼ!

ನಾಯಕಿ ಪಾತ್ರದಿಂದ ಹೊರ ಬಂದಿದ್ದ ರಮ್ಯಾ

ಚಿತ್ರತಂಡ ಆರಂಭದಲ್ಲಿ ನಾಯಕಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರನ್ನು ಹೆಸರಿಸಿತ್ತು. ಮಾತ್ರವಲ್ಲ ರಮ್ಯಾ ಚಿತ್ರದ ಮುಹೂರ್ತದಲ್ಲಿಯೂ ಭಾಗವಹಿಸಿದ್ದರು. ಆದರೆ ಇತ್ತೀಚೆಗೆ ಅವರು ಚಿತ್ರತಂಡದಿಂದ ಹೊರಬಂದು ಶಾಕ್‌ ನೀಡಿದ್ದರು. ಕಳೆದ ವರ್ಷ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದಿದ್ದ ರಮ್ಯಾ ಕೆಲವು ದಿನಗಳ ಹಿಂದೆ ʼಉತ್ತರಕಾಂಡʼ ಸಿನಿಮಾದಿಂದಲೂ ಹೊರ ಬಂದಿದ್ದರು. ʼ‘ಡೇಟ್ಸ್​ ಕೊರತೆಯಿಂದಾಗಿ ನಾನು ʼಉತ್ತರಕಾಂಡʼದಲ್ಲಿ ಕೆಲಸ ಮಾಡುತ್ತಿಲ್ಲ (ಸಿನಿಮಾ ಮತ್ತು ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ಸ್ಥಗಿತಗೊಳಿಸಿದ್ದೇನೆ). ಚಿತ್ರತಂಡಕ್ಕೆ ನಾನು ಶುಭ ಹಾರೈಸುತ್ತೇನೆ’ʼ ಎಂದು ರಮ್ಯಾ ಕಾರಣ ತಿಳಿಸಿದ್ದರು. ಆ ಮೂಲಕ ಅನೇಕ ವರ್ಷಗಳ ಬಳಿಕ ಅವರನ್ನು ತೆರೆ ಮೇಲೆ ನೋಡಬೇಕೆಂಬ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.

ವಿಳಂಬಕ್ಕೆ ಕಾರಣವೇನು?

ʼʼಉತ್ತರಕಾಂಡʼದ ಮುಹೂರ್ತ 2022ರಲ್ಲಿ‌ಯೇ ಆಗಿತ್ತು. ಆದರೆ ಇದುವರೆಗೆ ಚಿತ್ರೀಕರಣ ಆರಂಭವಾಗಿರಲಿಲ್ಲ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದೆʼʼ ಎಂದು ಚಿತ್ರತಂಡ ತಿಳಿಸಿದೆ. ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Nenapirali Prem: ಪೊಲೀಸ್ ಖದರ್‌ನಲ್ಲಿ `ನೆನಪಿರಲಿ ಪ್ರೇಮ್’: ಹೊಸ ಸಿನಿಮಾ ಅನೌನ್ಸ್‌!

Nenapirali Prem: ನೆನಪಿರಲಿ ಪ್ರೇಮ್ ಮತ್ತೆ ಪೊಲೀಸ್ ಪಾತ್ರ ಮಾಡಿದ್ದಾರೆ. 11 ವರ್ಷದ ಹಿಂದೆ ಪೊಲೀಸ್ ರೋಲ್ ಮಾಡಿದ್ದರು. ಶತ್ರು ಅನ್ನೋ ಈ ಚಿತ್ರದಲ್ಲಿ ಪೊಲೀಸ್ ಖದರ್ ನಲ್ಲಿ ಪವರ್ ತೋರಿಸಿದ್ದರು. ಆದರೆ ಪ್ರೇಮ್ ಈ ಸಲ ಬೇರೆ ರೀತಿಯ ಪೊಲೀಸ್ ಪಾತ್ರ ಮಾಡಿದ್ದಾರೆ. ರಫ್ ಆ್ಯಂಡ್ ಟಫ್ ಅಲ್ಲದೇ, ರಗಡ್ ಲುಕ್ ಇರೋ ಪೊಲೀಸ್ ರೀತಿನೂ ಕಾಣಿಸುತ್ತಿದ್ದಾರೆ. ಕೈಯಲ್ಲಿ ಸಿಂಗಲ್ ಬ್ಯಾರಲ್ ಗನ್ ಕೂಡ ಇದೆ. ಅದನ್ನ ಸ್ಟೈಲ್ ಆಗಿಯೂ ಪ್ರೇಮ್ ಹಿಡಿದು ಕೊಂಡು, ದೊಂಬಿ ಮಾಡೋರ ಕಡೆಗೆ ಮುಖ ಮಾಡಿ ನಿಂತಿದ್ದಾರೆ.

VISTARANEWS.COM


on

Nenapirali Prem New Movie announced
Koo

ಬೆಂಗಳೂರು: `ಅಪ್ಪ ಐ ಲವ್ ಯೂ; ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದ ಲವ್ಲಿ ಸ್ಟಾರ್ ಪ್ರೇಮ್ (Nenapirali Prem) ಈಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಅವರು ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಾಗಿ ರಗಡ್ ಅವತಾರ ತಾಳಿದ್ದಾರೆ. ಏ. 18 ಪ್ರೇಮ್ ಅವರ ಜನುಮದಿನ (Nenapirali Prem birthday) . ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ಮುಹೂರ್ತ ನೆರವೇರಿದ್ದು, ಇಡೀ ಚಿತ್ರತಂಡ ಭಾಗಿಯಾಗಿ ತಾಯಿಯ ಆಶೀರ್ವಾದ ಪಡೆದುಕೊಂಡರು.

ನೆನಪಿರಲಿ ಪ್ರೇಮ್ ಮಾತನಾಡಿ, ʻʻಇಂದು ನಾನು ಹುಟ್ಟಿದ ದಿನ. ಈ ದಿನ ಮುಹೂರ್ತ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿತ್ತು. 2.0 ರೀಬ್ರ್ಯಾಂಡಿಂಗ್ ಎಂದು ನನ್ನ ಸ್ನೇಹಿತರು ಕೇಳಿದರು. ಈ ಮೊದಲು ಆಕ್ಷನ್ ಸಿನಿಮಾ ಮಾಡಿದ್ದೇವು. ಆದರೆ ಬಹಳಷ್ಟು ಗ್ಯಾಪ್ ಆಗಿತ್ತು. ಲವ್ ಬ್ರ್ಯಾಂಡ್ ಆಗಿದ್ದರಿಂದ ಈಗ ಒಂದೊಳ್ಳೆ ಕಥೆಯೊಂದಿಗೆ ನಿರ್ದೇಶಕರು ಬಂದರು. ಹೀಗಾಗಿ ಈ ಚಿತ್ರ ಒಪ್ಪಿಕೊಂಡೆ. ಸಿನಿಮಾದಲ್ಲಿ ಸ್ಟ್ರೀಕ್ಟ್ ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದೇನೆ. ಸ್ಕ್ರೀಪ್ಟ್ ರೆಡಿಯಾಗ್ತಿದೆ. ಕ್ಲೈಮ್ಯಾಕ್ಸ್ ಚರ್ಚೆ ಹಂತದಲ್ಲಿದೆ. ಪೂರ್ಣ ಪ್ರಮಾಣದಲ್ಲಿ ಸ್ಟಾರ್ ಕಾಸ್ಟ್ ಡಿಸೈಡ್ ಆಗಿಲ್ಲ. ಮುಂದಿನ ದಿನಗಳಲ್ಲಿ ಮುಹೂರ್ತ ಮಾಡಬೇಕು ಎಂದುಕೊಂಡಿದ್ದೇವು. ಆದರೆ ನಿಮ್ಮ ಬರ್ತ್ ಡೇ ಒಳ್ಳೆ ಸಂದರ್ಭ ಸರ್ ಎಂದು ನಿರ್ದೇಶಕರು ಹೇಳಿದ್ದರು. ಹೀಗಾಗಿ ಈ ದಿನ ಮುಹೂರ್ತ ಮಾಡಿದ್ದೇವೆʼʼ ಎಂದರು.

ಇದನ್ನೂ ಓದಿ: Nenapirali Prem: ಇದೇ ಏಪ್ರಿಲ್ 12ಕ್ಕೆ ʻನೆನಪಿರಲಿ ಪ್ರೇಮ್ʼ ಸಿನಿಮಾ ರಿಲೀಸ್‌!

ತೇಜೇಶ್ ಮಾತನಾಡಿ, ʻʻಇದು ನನ್ನ ಮೊದಲ ಸಿನಿಮಾ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದೆ. ಟೈಟಲ್ ಚರ್ಚೆಯಲ್ಲಿದೆ. ಕಥೆಗೆ ಪ್ರೇಮ್ ಸರ್ ಸೂಟ್ ಆಗಿರುವುದರಿಂದ ಅವರನ್ನು ಆಯ್ಕೆ ಮಾಡಿದ್ದೇವೆ. ರಂಗಾಯಣ ರಘು ಸರ್ ಚಿತ್ರದ ಭಾಗವಾಗಿದ್ದಾರೆ. ಈ ತಿಂಗಳಾತ್ಯಂಕ್ಕೆ ಶೂಟಿಂಗ್ ಗೆ ಹೊರಡಲಿದ್ದೇವೆʼʼ ಎಂದು ಮಾಹಿತಿ ನೀಡಿದರು.

ನೆನಪಿರಲಿ ಪ್ರೇಮ್ ಮತ್ತೆ ಪೊಲೀಸ್ ಪಾತ್ರ ಮಾಡಿದ್ದಾರೆ. 11 ವರ್ಷದ ಹಿಂದೆ ಪೊಲೀಸ್ ರೋಲ್ ಮಾಡಿದ್ದರು. ಶತ್ರು ಅನ್ನೋ ಈ ಚಿತ್ರದಲ್ಲಿ ಪೊಲೀಸ್ ಖದರ್ ನಲ್ಲಿ ಪವರ್ ತೋರಿಸಿದ್ದರು. ಆದರೆ ಪ್ರೇಮ್ ಈ ಸಲ ಬೇರೆ ರೀತಿಯ ಪೊಲೀಸ್ ಪಾತ್ರ ಮಾಡಿದ್ದಾರೆ. ರಫ್ ಆ್ಯಂಡ್ ಟಫ್ ಅಲ್ಲದೇ, ರಗಡ್ ಲುಕ್ ಇರೋ ಪೊಲೀಸ್ ರೀತಿನೂ ಕಾಣಿಸುತ್ತಿದ್ದಾರೆ. ಕೈಯಲ್ಲಿ ಸಿಂಗಲ್ ಬ್ಯಾರಲ್ ಗನ್ ಕೂಡ ಇದೆ. ಅದನ್ನ ಸ್ಟೈಲ್ ಆಗಿಯೂ ಪ್ರೇಮ್ ಹಿಡಿದು ಕೊಂಡು, ದೊಂಬಿ ಮಾಡೋರ ಕಡೆಗೆ ಮುಖ ಮಾಡಿ ನಿಂತಿದ್ದಾರೆ.

ಯುವ ಪ್ರತಿಭೆ ತೇಜಸ್ ಬಿ.ಕೆ ಕಥೆ ಚಿತ್ರಕಥೆ ಬರೆದು ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ, ಆನಂದ್ ಮೀನಾಕ್ಷಿ ಛಾಯಾಗ್ರಹಣ ಚಿತ್ರಕ್ಕಿದೆ. ಹೆಸರಿಡದ ಈ ಸಿನಿಮಾಗೆ ಮಧು ಗೌಡ ಬಂಡವಾಳ ಹೂಡಿದ್ದಾರೆ. ಮುಹೂರ್ತ ನೆರವೇರಿಸಿರುವ ಚಿತ್ರತಂಡ ಈ ತಿಂಗಳ್ಯಾಂತಕ್ಕೆ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.

Continue Reading
Advertisement
Neha Murder Case
ಹುಬ್ಬಳ್ಳಿ22 mins ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Lok sabha election-2024
Latest34 mins ago

Lok sabha election-2024: ಶತಾಯುಷಿಗಳೇ ಚುನಾವಣೆಯ ಬ್ರಾಂಡ್​ ಅಂಬಾಸಿಡರ್​ಗಳು!

Viral Video
ದೇಶ37 mins ago

Viral Video: 7 ಮಕ್ಕಳನ್ನು ದೇವರು ಕೊಟ್ಟಿದ್ದಾದರೆ ಬಡತನಕ್ಕೆ ಮೋದಿ ಹೇಗೆ ಕಾರಣ? ಮುಸ್ಲಿಂ ಮಹಿಳೆಗೆ ತರಾಟೆ!

AC Helmet
ದೇಶ42 mins ago

AC Helmet: ಬೇಸಿಗೆ ಎಫೆಕ್ಟ್​​; ಟ್ರಾಫಿಕ್ ಪೊಲೀಸರ ಹೆಲ್ಮೆಟ್​ಗೆ ಎಸಿ!

Tarak Ponnappa out of udho udho sri renuka yellamma serial
ಕಿರುತೆರೆ45 mins ago

Tarak Ponnappa: ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ’ಧಾರಾವಾಹಿಗೆ ವಿದಾಯ ಹೇಳಿದ ʻಕೆಜಿಎಫ್‌ʼ ಖ್ಯಾತಿಯ ನಟ!

electoral Bond
ಪ್ರಮುಖ ಸುದ್ದಿ58 mins ago

Electoral Bond : ಎನ್​ಡಿಎ ಅಧಿಕಾರಕ್ಕೆ ಬಂದರೆ ಚುನಾವಣಾ ಬಾಂಡ್​ ವ್ಯವಸ್ಥೆ ಮರುಜಾರಿ; ನಿರ್ಮಲಾ ಸೀತಾರಾಮನ್​

boat capsizes in bhatkal
ಉತ್ತರ ಕನ್ನಡ1 hour ago

Boat Capsizes: ಭಾರೀ ಗಾಳಿ ಮಳೆಗೆ ಅರಬ್ಬೀ ಸಮುದ್ರದಲ್ಲಿ ಬೋಟ್‌ ಮುಳುಗಡೆ, ನಾಲ್ವರ ರಕ್ಷಣೆ; ಇಲ್ಲಿದೆ ವಿಡಿಯೋ

Mahesh Babu SS Rajamouli return from Dubai
South Cinema1 hour ago

Mahesh Babu: ಹೇಗಿದೆ ಮಹೇಶ್‌ ಬಾಬು ಲುಕ್‌? ರಾಜಮೌಳಿ ಪ್ಲ್ಯಾನ್​ ಉಲ್ಟಾ!

MS Dhoni
ಪ್ರಮುಖ ಸುದ್ದಿ2 hours ago

MS Dhoni : ಸಿಎಸ್​ಕೆ ವಾರ್ಷಿಕೋತ್ಸವದಂದೇ 101 ಮೀಟರ್ ಸಿಕ್ಸರ್ ಬಾರಿಸಿದ ಧೋನಿ!

Modi In Karnataka
ಪ್ರಮುಖ ಸುದ್ದಿ2 hours ago

PM Narendra Modi: ಬೆಂಗಳೂರಿನಲ್ಲಿ ಇಂದು ಮೋದಿ; ಸಂಚಾರಕ್ಕೆ ಪರ್ಯಾಯ ರಸ್ತೆಗಳ ಸೂಚನೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ22 mins ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ20 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

ಟ್ರೆಂಡಿಂಗ್‌