Megha Shetty: ವಿನಯ್ ರಾಜ್‌ಕುಮಾರ್ ಸಿನಿಮಾಗೆ ಮೇಘಾ ಶೆಟ್ಟಿ ನಾಯಕಿ! Vistara News
Connect with us

South Cinema

Megha Shetty: ವಿನಯ್ ರಾಜ್‌ಕುಮಾರ್ ಸಿನಿಮಾಗೆ ಮೇಘಾ ಶೆಟ್ಟಿ ನಾಯಕಿ!

Megha Shetty: ಚಿತ್ರದ ಚಿತ್ರೀಕರಣ ಅಕ್ಟೋಬರ್ 4 ರಂದು ಪ್ರಾರಂಭವಾಗಲಿದ್ದು, ಮೊದಲ ದಿನದ ಚಿತ್ರೀಕರಣ ಕಡೂರಿನಲ್ಲಿ ನಡೆಯಲಿದೆ. ಚಿತ್ರದಲ್ಲಿ ನಟನಾಗಿ ವಿನಯ್ ರಾಜ್ ಕುಮಾರ್ ಅವರು ನಟಿಸುತ್ತಿರುವುದು ಅಧಿಕೃತವಾಗಿದ್ದು, ನಿರ್ಮಾಪಕರು ಇದೀಗ ಚಿತ್ರದ ನಾಯಕ ನಟಿಯಾಗಿ ಮೇಘಾ ಶೆಟ್ಟಿಯವರನ್ನು ಅಂತಿಮಗೊಳಿಸಿದ್ದಾರೆ.

VISTARANEWS.COM


on

Megha Shetty Vinay Rajkumar
Koo

ಬೆಂಗಳೂರು: ʻಜೊತೆ ಜೊತೆಯಲಿʼ ಧಾರಾವಾಹಿ ಖ್ಯಾತಿಯ ಮೇಘಾ ಶೆಟ್ಟಿ (Megha Shetty) ಆಗಾಗ ರೀಲ್ಸ್‌ ಮಾಡುವುದರ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಮೇಘಾ ದೊಡ್ಮನೆ ಕುಟಂಬಕ್ಕೆ ಎಂಟ್ರಿ ಕೊಟ್ಟಿದ್ದಾರೆ. ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಸಿನಿಮಾ ಬಹಳ ಹಿಂದೆ ಸೆಟ್ಟೇರಿತ್ತು. ಆದರೆ ನಾಯಕಿ ಯಾರೆಂಬುದರ ಬಗ್ಗೆ ಸಿನಿರಸಿಕರು ಕುತೂಹಲದಿಂದ ಕಾದಿದ್ದರು. ಇದೀಗ ಮೇಘಾ ಶೆಟ್ಟಿ ನಾಯಕಿ ಎಂಬುದು ಕನ್‌ಫರ್ಮ್‌ ಆಗಿದೆ.

ಚಿತ್ರದ ಚಿತ್ರೀಕರಣ ಅಕ್ಟೋಬರ್ 4 ರಂದು ಪ್ರಾರಂಭವಾಗಲಿದ್ದು, ಮೊದಲ ದಿನದ ಚಿತ್ರೀಕರಣ ಕಡೂರಿನಲ್ಲಿ ನಡೆಯಲಿದೆ. ಚಿತ್ರದಲ್ಲಿ ನಾಯಕ ನಟನಾಗಿ ವಿನಯ್ ರಾಜ್ ಕುಮಾರ್ ಅವರು ನಟಿಸುತ್ತಿರುವುದು ಅಧಿಕೃತವಾಗಿದ್ದು, ನಿರ್ಮಾಪಕರು ಇದೀಗ ಚಿತ್ರದ ನಾಯಕ ನಟಿಯಾಗಿ ಮೇಘಾ ಶೆಟ್ಟಿಯವರನ್ನು ಅಂತಿಮಗೊಳಿಸಿದ್ದಾರೆ. ಸತತ ನಾಲ್ಕು ವರ್ಷಗಳ ಕಾಲ ಪ್ರೇಕ್ಷಕರನ್ನು ರಂಜಿಸಿರುವ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಮೇಘಾ ಶೆಟ್ಟಿಯ ಅಭಿನಯಕ್ಕೆ ಫ್ಯಾನ್ಸ್‌ ಫಿದಾ ಆಗಿದ್ದರು. ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ʻಟ್ರಿಬಲ್ ರೈಡಿಂಗ್ʼ ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟರು ಮೇಘಾ ಶೆಟ್ಟಿ. ಧನ್ವೀರ್ ನಟನೆಯ ʻಕೈವʼ ಸಿನಿಮಾದಲ್ಲೂ ನಾಯಕಿಯಾಗಿ ನಟಿಸಿದ್ದಾರೆ. ಇತ್ತೀಚೆಗೆ ಮರಾಠಿ ಭಾಷೆಗೂ ಕಾಲಿಟ್ಟಿದ್ದಾರೆ. ‘ಲಂಡನ್ ಕೆಫೆ’ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಕೃಷ್ಣ ಅಭಿನಯದ ದಿಲ್ಪಸಂದ್ ಚಿತ್ರದಲ್ಲಿಯೂ ನಟಿಸಿದ್ದರು.

ಇದನ್ನೂ ಓದಿ: Megha Shetty: ಮದುವೆ ಫಿಕ್ಸ್‌ ಆಯ್ತಾ ಬಂಗಾರ? ಮೂಗು ಚುಚ್ಚಿಸಿಕೊಂಡ ಮೇಘಾ ಶೆಟ್ಟಿಗೆ ಫ್ಯಾನ್ಸ್‌ ಪ್ರಶ್ನೆ!

ಗ್ರಾಮಾಯಣ ಸಿನಿಮಾ

ಚಿತ್ರವನ್ನು ಲಹರಿ ಫಿಲ್ಮ್ಸ್‌ ಹಾಗೂ ವೀನಸ್‌ ಎಂಟರ್‌ಟೈನರ್ ನಿರ್ಮಿಸುತ್ತಿದೆ. ಹಳ್ಳಿಯ ಹಿನ್ನೆಲೆಯಲ್ಲಿ ವಿನಯ್ ಗ್ರಾಮೀಣ ಯುವಕನ ಪಾತ್ರದಲ್ಲಿ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಖ್ಯಾತ ಕಲಾವಿದ ಗೋಪಾಲಕೃಷ್ಣ ದೇಶಪಾಂಡೆ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಟಿ ಅಪರ್ಣಾ ಕೂಡ ಇದರಲ್ಲಿದ್ದಾರೆ. ಚಿತ್ರತಂಡ ಅಂತಿಮ ಹಂತದ ಕಾಸ್ಟಿಂಗ್‌ನಲ್ಲಿದ್ದು, ಶೀಘ್ರದಲ್ಲೇ ಸಂಪೂರ್ಣ ತಾರಾಗಣದ ಬಗ್ಗೆ ಅಧಿಕೃತ ಮಾಹಿತಿ ನೀಡಲಿದೆ. ಚಿತ್ರಕ್ಕೆ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಅಭಿಷೇಕ್ ಕಾಸರಗೋಡು ಅವರ ಛಾಯಾಗ್ರಹಣವಿದೆ.

ಅಂದೊಂದಿತ್ತು ಕಾಲ ಚಿತ್ರದ ಚಿತ್ರೀಕರಣ ಕೂಡ ವಿನಯ್ ಮುಗಿಸಿದ್ದಾರೆ. ಗಣೇಶ್‌ ಚತುರ್ಥಿ ದಿನ ಅಂದೊಂದಿತ್ತು ಕಾಲ ಚಿತ್ರದಿಂದ ಟೀಸರ್‌ ಕೂಡ ರಿಲೀಸ್‌ ಆಗಿದೆ. ಪೆಪೆ ಸಿನಿಮಾ ಕೂಡ ರಿಲೀಸ್‌ ಆಗುವ ಹಂತದಲ್ಲಿದೆ. ಉದಯ್ ಸಿನಿ ವೆಂಚರ್, ದೀಪ ಫಿಲಂಸ್ ಬ್ಯಾನರ್ ನಡಿ ಉದಯ್ ಶಂಕರ್ ಮತ್ತು ಶ್ರೀರಾಮ್ ಬಿ ಎಮ್ ಕೋಲಾರ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

South Cinema

Kamal Haasan: ಕಮಲ್ ಹಾಸನ್ ಜನುಮದಿನಕ್ಕೆ ಮತ್ತೊಂದು ಸೂಪರ್‌ ಹಿಟ್‌ ಸಿನಿಮಾ ಮರು ಬಿಡುಗಡೆ!

Kamal Haasan: ಬಾಂಬೆ ಮೂಲದ ಭೂಗತ ಜಗತ್ತಿನ ಡಾನ್ ವರದರಾಜನ್ ಮುದಲೀರ್ ಅವರ ಜೀವನವನ್ನು ಆಧರಿಸಿದೆ .’ನಾಯಕನ್’ ಬಿಡುಗಡೆಯಾಗಿ 36 ವರ್ಷಗಳ ನಂತರ 4ಕೆ ರೂಪದಲ್ಲಿ ಮರು ಬಿಡುಗಡೆಗೆ ಸಿದ್ಧವಾಗಿದೆ ಎಂದು ಘೋಷಿಸಲಾಗಿದೆ.

VISTARANEWS.COM


on

Edited by

Kamal Haasan Nayakan
Koo

ಬೆಂಗಳೂರು: ಮಣಿರತ್ನಂ ನಿರ್ದೇಶನದ ಕಮಲ್ ಹಾಸನ್ (Kamal Haasan starrer Nayakan) ಅಭಿನಯದ `ನಾಯಕನ್’ ನವೆಂಬರ್ 3ರಂದು ಚಿತ್ರಮಂದಿರಗಳಲ್ಲಿ ಮರು-ಬಿಡುಗಡೆಯಾಗಲಿದೆ. ಕಮಲ್ ಹಾಸನ್ ಜನುಮದಿನದ ಪ್ರಯುಕ್ತ ಈ ಸಿನಿಮಾ ರಿ ರಿಲೀಸ್‌ ಆಗುತ್ತಿದೆ. ಈ ಸಿನಿಮಾದಲ್ಲಿ ಶರಣ್ಯ ಮತ್ತು ಕಾರ್ತಿಕಾ ಕೂಡ ಕಾಣಿಸಿಕೊಂಡಿದ್ದರು. ಜನಗರಾಜ್, ವಿಜಯನ್, ಎಂ.ವಿ. ವಾಸುದೇವ ರಾವ್, ದೆಹಲಿ ಗಣೇಶ್, ನಿಜಲ್ಗಲ್ ರವಿ, ನಾಸರ್ ಮತ್ತು ತಾರಾ ಪೋಷಕ ಪಾತ್ರಗಳಲ್ಲಿದ್ದಾರೆ. ʻನಾಯಕನ್ʼ ಸಿನಿಮಾವು ಹಾಲಿವುಡ್ ಕ್ಲಾಸಿಕ್ ‘ದಿ ಗಾಡ್‌ಫಾದರ್’ ನಿಂದ ಪ್ರೇರಿತವಾಗಿದ್ದು, ಬಾಂಬೆ ಮೂಲದ ಭೂಗತ ಜಗತ್ತಿನ ಡಾನ್ ವರದರಾಜನ್ ಮುದಲೀರ್ ಅವರ ಜೀವನವನ್ನು ಆಧರಿಸಿದೆ. ‘ನಾಯಕನ್’ ಬಿಡುಗಡೆಯಾಗಿ 36 ವರ್ಷಗಳ ನಂತರ 4ಕೆ ರೂಪದಲ್ಲಿ ಮರು ಬಿಡುಗಡೆಗೆ ಸಿದ್ಧವಾಗಿದೆ ಎಂದು ಘೋಷಿಸಲಾಗಿದೆ.

ಚಲನಚಿತ್ರ ಮಂದಿರಗಳಲ್ಲಿ ಇತ್ತೀಚೆಗೆ ಹೀರೊಗಳ ಹಳೆಯ ಸೂಪರ್‌ ಹಿಟ್‌ ಸಿನಿಮಾಗಳನ್ನು ಮರು-ಬಿಡುಗಡೆ ಮಾಡುವುದು ಕಾಮನ್‌ ಆಗಿದೆ. ಹೊಸ ಚಲನಚಿತ್ರಗಳು ಪ್ರೇಕ್ಷಕರನ್ನು ಸೆಳೆಯಲು ವಿಫಲವಾಗುತ್ತಿರುವ ಕಾರಣ ಪ್ರೇಕ್ಷಕರನ್ನು ಮತ್ತೆ ಚಿತ್ರಮಂದಿರಗಳಿಗೆ ಕರೆತರಲು ಹಿಂದಿನ ಜನಪ್ರಿಯ ತಾರೆಯರ ಜನ್ಮ ವಾರ್ಷಿಕೋತ್ಸವದಂದು ವಿಶೇಷ ಪ್ರದರ್ಶನಗಳನ್ನು ನಡೆಸುತ್ತಿವೆ.

‘ನಾಯಕನ್’ ಸಿನಿಮಾ ವಿತರಕರು ಇತ್ತೀಚೆಗೆ ಚಿತ್ರದ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ. ಸಿನಿಮಾವನ್ನು ತಮಿಳುನಾಡು, ಕರ್ನಾಟಕ ಮತ್ತು ಕೇರಳದಾದ್ಯಂತ ಎಲ್ಲ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡುವುದಾಗಿ ಮಾಹಿತಿ ನೀಡಿದ್ದಾರೆ. ಸೂಪರ್ ಹಿಟ್ ಚಿತ್ರ ‘ನಾಯಕನ್’ ಮೂರು ರಾಷ್ಟ್ರೀಯ ಪ್ರಶಸ್ತಿಗಳು ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗೆದ್ದಿದೆ. 1988ರಲ್ಲಿ ಆಸ್ಕರ್ ಪ್ರಶಸ್ತಿಗಳಿಗಾಗಿ ನಾಮೀನೇಟ್ ಆಗಿತ್ತು.

“ನಾವು ಈ ಹಿಂದೆ ಹಳೆಯ ಹಿಟ್ ಚಿತ್ರಗಳ ಪ್ರದರ್ಶನವನ್ನು ಆಯೋಜಿಸಿದ್ದೇವೆ. ಆದರೆ ಅದು ಸೀಮಿತ ಪ್ರಮಾಣದಲ್ಲಿ ಇತ್ತು. ಆದ್ದರಿಂದ ಕಾರ್ಯಸಾಧ್ಯವಾಗಿರಲಿಲ್ಲ. ಅಮಿತಾಭ್‌ ಬಚ್ಚನ್ ಅವರ ಸಿನಿಮಾಗಳೂ ಮತ್ತೆ ಮರು ಬಿಡುಗಡೆಯಾದಾಗ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದ್ದರಿಂದ ನಾವು ಸ್ಕ್ರೀನ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಿದೆವುʼʼ ಎಂದು INOX ಲೀಸರ್‌ನ ಮುಖ್ಯ ಪ್ರೋಗ್ರಾಮಿಂಗ್ ಅಧಿಕಾರಿ ರಾಜೇಂದ್ರ ಸಿಂಗ್ ಜ್ಯಾಲಾ ಹಿಂದಿನ ಸಂದರ್ಶನದಲ್ಲಿ ಹೇಳಿಕೊಂಡಿದ್ದರು.

ಇದನ್ನೂ ಓದಿ: Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್‌ ಹಾಸನ್

ಕಮಲ್‌ ಕೈಯಲ್ಲಿ ಸಾಲು ಸಾಲು ಸಿನಿಮಾಗಳು

ಸದ್ಯ ಕಮಲ್‌ ಅವರ ಕೈಯಲ್ಲಿ ನಾಲ್ಕು ಪ್ರಾಜೆಕ್ಟ್‌ಗಳಿವೆ. ಅವುಗಳಲ್ಲಿ ಯಾವುದೂ ಬಿಡುಗಡೆ ದಿನಾಂಕವನ್ನು ಘೋಷಿಸಿಲ್ಲ. ನಾಗ್ ಅಶ್ವಿನ್ ಅವರ ಮುಂದಿನ ಚಿತ್ರ ಕಲ್ಕಿಯಲ್ಲಿ (Kalki cinema) ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ಅಮಿತಾಭ್ ಬಚ್ಚನ್, ಪ್ರಭಾಸ್, ದೀಪಿಕಾ ಪಡುಕೋಣೆ ಇತರ ಪ್ರಮುಖ ತಾರೆಗಳು ಇದ್ದಾರೆ. ಎಸ್ ಶಂಕರ್ ಅವರ 1996ರ ಚಲನಚಿತ್ರದ ಮುಂದುವರಿದ ಭಾಗವಾದ ಇಂಡಿಯನ್-2 ಸಿನಿಮಾದಲ್ಲಿಯೂ ಕಮಲ್‌ ಇದ್ದಾರೆ. ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಸಹ ನಡೆಯುತ್ತಿದೆ. ಇವುಗಳ ಹೊರತಾಗಿ H. ವಿನೋದ್ ಅವರೊಂದಿಗೆ ಒಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ, ಇದು ತಾತ್ಕಾಲಿಕವಾಗಿ ʻKH233- ರೈಸ್ ಟು ರೂಲ್ʼ ಎಂದು ಹೆಸರಿಸಲಾಗಿದೆ. ಕಮಲ್ ಹಾಸನ್ ಅವರು KH234ಗಾಗಿ 37 ವರ್ಷಗಳ ನಂತರ ಮಣಿರತ್ನಂ ಅವರೊಂದಿಗೆ ಮತ್ತೆ ಒಂದಾಗುತ್ತಿದ್ದಾರೆ. ಇದರಲ್ಲಿ ದುಲ್ಕರ್ ಸಲ್ಮಾನ್, ತ್ರಿಷಾ ಮತ್ತು ಜಯಂ ರವಿ ಕೂಡ ಕಾಣಿಸಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ.

Continue Reading

South Cinema

Parineeti Chopra: ಮದುವೆಯಲ್ಲಿ ಫೋನ್‌, ಕ್ಯಾಮೆರಾಗಳಿಗೆ ಟೇಪ್‌, 100 ಭದ್ರತಾ ಸಿಬ್ಬಂದಿ!

Parineeti Chopra: ವರದಿಗಳ ಪ್ರಕಾರ, ಮದುವೆಯಲ್ಲಿ ಭಾಗವಹಿಸುವವರಿಗೆ ಮೊಬೈಲ್‌ ಕೂಡ ಬಳಸುವಂತಿಲ್ಲ. ಮೂರು ದಿನಗಳ ಕಾಲ ಯಾವುದೇ ಸಿಬ್ಬಂದಿಗೆ ಆವರಣದಿಂದ ಹೊರಬರಲು ಅವಕಾಶವಿಲ್ಲ ಎಂದು ವರದಿಯಾಗಿದೆ.

VISTARANEWS.COM


on

Edited by

Parineeti Chopra Wedding
Koo

ಬೆಂಗಳೂರು: ಸೆಪ್ಟೆಂಬರ್ 24ರಂದು ಬಾಲಿವುಡ್‌ ನಟಿ ಪರಿಣಿತಿ ಚೋಪ್ರಾ (Parineeti Chopra) ಹಾಗೂ ಆಮ್‌ ಆದ್ಮಿ ಪಕ್ಷದ ಸಂಸದ ರಾಘವ್‌ ಚಡ್ಡಾ (Raghav Chadha) ಅವರ ವಿವಾಹ ಉದಯಪುರದಲ್ಲಿ ಅದ್ಧೂರಿಯಾಗಿ ನೆರವೇರಲಿದೆ. ಈಗಾಗಲೇ ಜೋಡಿ ಉದಯಪುರಕ್ಕೆ (Parineeti Chopra wedding) ತಲುಪಿದೆ. ಸದ್ಯ ಜೋಡಿಯ ವಿವಾಹ ಪೂರ್ವ ಕಾರ್ಯಕ್ರಮಗಳು ನಡೆಯುತ್ತಿವೆ. ವಿವಾಹದಲ್ಲಿ 100 ಖಾಸಗಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಷ್ಟೇ ಅಲ್ಲ, ಮದುವೆಯಲ್ಲೂ ಕಟ್ಟುನಿಟ್ಟಿನ ಭದ್ರತಾ ನಿಯಮಗಳಿವೆ. ವರದಿಗಳ ಪ್ರಕಾರ, ಮದುವೆಯಲ್ಲಿ ಭಾಗವಹಿಸುವವರಿಗೆ ಮೊಬೈಲ್‌ ಕೂಡ ಬಳಸುವಂತಿಲ್ಲ. ಮೂರು ದಿನಗಳ ಕಾಲ ಯಾವುದೇ ಸಿಬ್ಬಂದಿಗೆ ಆವರಣದಿಂದ ಹೊರಬರಲು ಅವಕಾಶವಿಲ್ಲ ಎಂದು ವರದಿಯಾಗಿದೆ.

ಹೋಟೆಲ್ ಮೂಲಗಳ ಪ್ರಕಾರ, ಮದುವೆಯ ಸಿದ್ಧತೆಗಳ ಜತೆಗೆ ಕಾರ್ಯಕ್ರಮದ ಫೋಟೊಗಳು ಮತ್ತು ವಿಡಿಯೊಗಳು ಲೀಕ್‌ ಆಗದ್ದಂತೆ ವಿಶೇಷ ಸಿದ್ಧತೆಗಳನ್ನು ಮಾಡಲಾಗಿದೆ. ಹೋಟೆಲ್‌ಗೆ ಪ್ರವೇಶಿಸುವವರ ಮೊಬೈಲ್ ಕ್ಯಾಮೆರಾಗಳಿಗೆ ನೀಲಿ ಬಣ್ಣದ ಟೇಪ್ ಅನ್ನು ಅಂಟಿಸಲಾಗುತ್ತದೆ. ಇದರಿಂದ ಅವರು ಮದುವೆ ಸಮಾರಂಭದಲ್ಲಿ ಯಾವುದೇ ವೀಡಿಯೊ-ಫೋಟೋಗ್ರಾಫ್ ತೆಗೆದುಕೊಳ್ಳುವಂತಿಲ್ಲ. ಈ ನೀಲಿ ಟೇಪ್‌ನ ವಿಶೇಷತೆ ಏನೆಂದರೆ, ಇದನ್ನು ಮೊಬೈಲ್ ಕ್ಯಾಮೆರಾದಲ್ಲಿ ಅಳವಡಿಸಿದ ನಂತರ ಯಾರಾದರೂ ಅದನ್ನು ತೆಗೆದರೆ, ಟೇಪ್‌ನಲ್ಲಿ ಬಾಣದ ಚಿಹ್ನೆ ಗೋಚರಿಸುತ್ತದೆ. ಸೆಕ್ಯೂರಿಟಿ ಅವರು ಪರಿಶೀಲಿಸಿದಾಗ ಕ್ಯಾಮೆರಾ ಬಳಸಲು ಟೇಪ್ ತೆಗೆದಿರುವುದು ಗೊತ್ತಾಗಿ ಬಿಡುತ್ತದೆ. ಈ ನಿರ್ಬಂಧವು ವಿಶೇಷವಾಗಿ ಹೋಟೆಲ್ ಸಿಬ್ಬಂದಿಗೆ, ಬಾಣಸಿಗರಿಗೆ ಅನ್ವಯಿಸುತ್ತದೆ. ಕರಣ್ ಜೋಹರ್, ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ, ಡಿಸೈನರ್ ಮನೀಶ್ ಮಲ್ಹೋತ್ರಾ ಅವರಂತಹ ಸೆಲೆಬ್ರಿಟಿಗಳು ಇಂದೇ (ಸೆ. 23) ಉದಯಪುರಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Parineeti Chopra; ನಾಳೆ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಅದ್ಧೂರಿ ಮದುವೆ; ಭರ್ಜರಿ ಸಿದ್ಧತೆ!

ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಈ ವರ್ಷ ಮೇ 13 ರಂದು ನವದೆಹಲಿಯ ಕಪುರ್ತಲಾ ಹೌಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಮದುವೆಗೆ 20 ಕ್ಕೂ ಹೆಚ್ಚು ಅತಿಥಿಗಳಿಗೆ ಸ್ಥಳಾವಕಾಶ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. 50ಕ್ಕೂ ಹೆಚ್ಚು ವಿವಿಐಪಿಗಳು ಭಾಗಿಯಾಗಲಿದ್ದಾರೆ ಎಂದು ವರದಿಯಾಗಿದೆ. ವಿವಾಹದಲ್ಲಿ ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಹಲವರು ಇರಲಿದ್ದಾರೆ. ಮದುವೆಯ ನಂತರ, ಹರಿಯಾಣದ ಗುರುಗ್ರಾಮದಲ್ಲಿ ಆರತಕ್ಷತೆ ನಡೆಯಲಿದೆ.

ಈ ಜೋಡಿ ಕಳೆದ ವರ್ಷದಿಂದಲೂ ಪ್ರೀತಿಯಲ್ಲಿದೆ. ಪರಿಣಿತಿ ಅವರು ಚಮ್ಕೀಲಾ ಸಿನಿಮಾಕ್ಕಾಗಿ ಪಂಜಾಬ್‌ನಲ್ಲಿ ಚಿತ್ರೀಕರಣ ನಡೆಸುತ್ತಿದ್ದರು. ಆ ವೇಳೆ ರಾಘವ್‌ ಅವರು ಅಲ್ಲಿಗೆ ತೆರಳಿ ನಟಿಯೊಂದಿಗೆ ಮಾತನಾಡಿದ್ದರು. ಆಗಲೇ ಅವರಿಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು ಎಂದೂ ಹೇಳಲಾಗುತ್ತಿದೆ.

Continue Reading

South Cinema

Actress Nayanthara: ಯೂಟ್ಯೂಬರ್ ಸಿನಿಮಾಗೆ ನಯನತಾರಾ ನಾಯಕಿ; ಅಚ್ಚರಿಗೊಂಡ ಫ್ಯಾನ್ಸ್‌!

Actress Nayanthara : ಯೂಟ್ಯೂಬರ್ ಡ್ಯೂಡ್ ವಿಕ್ಕಿ ಅವರ ಜತೆ ಸಿನಿಮಾ ಮಾಡುತ್ತಿದ್ದಾರೆ. ಈಗ ನಟಿ ಯೂಟ್ಯೂಬರ್ ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ನಾಯಕಿ ಆಗಿ ಮಿಂಚಲು ತಯಾರಾಗಿದ್ದಾರೆ. ಇದು ಫ್ಯಾನ್ಸ್‌ಗೆ ಅಚ್ಚರಿ ತಂದಿದೆ.

VISTARANEWS.COM


on

Edited by

Mannangatti Poster
Koo

ಬೆಂಗಳೂರು: ನಯನತಾರಾ (Actress Nayanthara: ) ಇನ್ನೂ ಜವಾನ್‌ (Jawan Movie)ಸಿನಿಮಾ ಸಕ್ಸೆಸ್‌ ಮೂಡ್‌ನಲ್ಲಿದ್ದಾರೆ. ಈ ಸಿನಿಮಾ ಮೂಲಕ ಕಾಲಿವುಡ್‌ ಲೇಡಿ ಸೂಪರ್‌ ಸ್ಟಾರ್‌ ಹಿಂದಿಗೂ ಪರಿಚಯವಾದರು. ನಯನತಾರಾ ಹೊಸಬರ ಜತೆ ಕೆಲಸ ಮಾಡುವುದಿಲ್ಲ ಎಂದು ಹಲವರ ವಾದವಾಗಿತ್ತು. ಜವಾನ್‌ ಯಶಸ್ಸಿನ ಉತ್ತಂಗದಲ್ಲಿರುವ ನಟಿ ಇನ್ನು ಹೊಸಬರ ಜತೆ ಕೆಲಸ ಮಾಡುವುದೇ ಇಲ್ಲ ಎಂಬ ಚರ್ಚೆಗಳು ಆಗಿತ್ತು. ಆದರೀಗ ನಟಿ ಈ ವದಂತಿಗಳನ್ನು ಸುಳ್ಳು ಮಾಡಿದ್ದಾರೆ. ಯೂಟ್ಯೂಬರ್ ಡ್ಯೂಡ್ ವಿಕ್ಕಿ ಅವರ ಜತೆ ಸಿನಿಮಾ ಮಾಡುತ್ತಿದ್ದಾರೆ. ಈಗ ನಟಿ ಯೂಟ್ಯೂಬರ್ ನಿರ್ದೇಶನ ಮಾಡುತ್ತಿರುವ ಸಿನಿಮಾದಲ್ಲಿ ನಾಯಕಿ ಆಗಿ ಮಿಂಚಲು ತಯಾರಾಗಿದ್ದಾರೆ. ಇದು ಫ್ಯಾನ್ಸ್‌ಗೆ ಅಚ್ಚರಿ ತಂದಿದೆ.

ಯೂಟ್ಯೂಬರ್ ಡ್ಯೂಡ್ ವಿಕ್ಕಿ ನಿರ್ದೇಶನದದ ಈ ಸಿನಿಮಾಗೆ ನಯನತಾರಾ ನಾಯಕಿ. ಈಗಾಗಲೇ ಚಿತ್ರತಂಡ ಮೋಷನ್‌ ಪೋಸ್ಟರ್‌ ಹಂಚಿಕೊಂಡಿದೆ. ಈ ಯೋಜನೆಗೆ ‘ಮನ್ನಂಗಟ್ಟಿ’ ಎಂದು ಹೆಸರಿಡಲಾಗಿದೆ. ಮತ್ತು ಅದರ ಅಡಿಬರಹ, ‘1960 ರಿಂದ ಮನ್ನಂಗಟ್ಟಿ (Mannangatti)’. ಈ ಚಿತ್ರಕ್ಕೆ ‘ಸಿನ್ಸ್ 1960’ ಎನ್ನುವ ಅಡಿಬರಹ ಇದೆ. ಲಕ್ಷ್ಮಣ್ ಕುಮಾರ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಯೋಗಿ ಬಾಬು, ಗೌರಿ ಕಿಶನ್ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಚಿತ್ರದ ಚಿತ್ರೀಕರಣ ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ಆರ್‌ಡಿ ರಾಜಶೇಖರ್ ಛಾಯಾಗ್ರಹಣವನ್ನು ನಿರ್ವಹಿಸುತ್ತಿದ್ದಾರೆ ಮತ್ತು ಸೀನ್ ರೋಲ್ಡನ್ ಸಂಗೀತ ಸಂಯೋಜಿಸಿದ್ದಾರೆ. ಡ್ಯೂಡ್ ವಿಕ್ಕಿ ಬರೆದು ನಿರ್ದೇಶಿಸಿದ ಈ ಚಿತ್ರವನ್ನು ಪ್ರಿನ್ಸ್ ಪಿಕ್ಚರ್ಸ್ ಬೆಂಬಲಿಸಿದೆ. ನಯನತಾರಾ ನಟನೆಯ ಮತ್ತೊಂದು ಸಿನಿಮಾ ‘ಉರೈವನ್’ ಸೆಪ್ಟೆಂಬರ್ 28ರಂದು ರಿಲೀಸ್ ಆಗಲಿದೆ. ಇದರ ಪ್ರಚಾರದಲ್ಲಿ ಅವರು ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಜಯಂ ರವಿ ಹೀರೋ. ಈ ಸಿನಿಮಾಗೆ ಎ ಪ್ರಮಾಣಪತ್ರ ಸಿಕ್ಕಿದೆ. ‘ದಿ ವ್ಯಾಕ್ಸಿನ್ ವಾರ್’ ಸಿನಿಮಾ ಕೂಡ ಇದೇ ದಿನ ರಿಲೀಸ್ ಆಗುತ್ತಿದ್ದು, ಭರ್ಜರಿ ಪೈಪೋಟಿ ಉಂಟಾಗಲಿದೆ.

ಇದನ್ನೂ ಓದಿ: Actress Nayanthara: ನಿರ್ದೇಶಕ ಅಟ್ಲೀ ಜತೆ ಇರುವ ಫೋಟೊ ಹಂಚಿಕೊಂಡ ನಯನತಾರಾ; ಮುನಿಸಿಗೆ ತೆರೆ ಎಳೆದರೆ?

ಇದನ್ನೂ ಓದಿ: Actress Nayanthara: ನಿರ್ದೇಶಕ ಅಟ್ಲೀ ಜತೆ ಇರುವ ಫೋಟೊ ಹಂಚಿಕೊಂಡ ನಯನತಾರಾ; ಮುನಿಸಿಗೆ ತೆರೆ ಎಳೆದರೆ?

 ಬಾಲಿವುಡ್‌ ಸಿನಿಮಾಗಳಲ್ಲಿ ನಟಿಸಲ್ವಾ ನಯನತಾರಾ?

ಶಾರುಖ್ ಖಾನ್ (Shah Rukh Khan) ಅವರ ಬ್ಲಾಕ್‌ಬಸ್ಟರ್ ಸಿನಿಮಾ ʻಜವಾನ್‌ʼನಲ್ಲಿ ನಟಿ ನಯನತಾರಾ(Nayanthara) ಏಜೆಂಟ್ ನರ್ಮದಾ ರಾಯ್‌ ಪಾತ್ರವನ್ನು ನಿರ್ವಹಿಸಿದ್ದಾರೆ. ಶಾರುಖ್‌-ನಯನತಾರಾ ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿಯನ್ನು ಅಭಿಮಾನಿಗಳು ಇಷ್ಟಪಟ್ಟಿದ್ದಾರೆ. ಆದರೆ, ನಯನತಾರಾ ಅವರಿಗೆ ಅಟ್ಲೀ ಕುರಿತು ಅಸಮಾಧಾನ ಇದೆ ಎಂದು ವರದಿಯಾಗಿತ್ತು. ಚಿತ್ರದಲ್ಲಿ ತಮ್ಮ ಪಾತ್ರವನ್ನು ಹಲವು ಕಡೆ ಕತ್ತರಿಸಿದ್ದರಿಂದ ಅಟ್ಲಿಯೊಂದಿಗೆ ನಯನತಾರಾ ತುಂಬಾ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿತ್ತು. ಅಲ್ಲದೆ, ದೀಪಿಕಾ ಅವರ ಪಾತ್ರವನ್ನು ಹೆಚ್ಚು ಹೈಲೈಟ್‌ ಮಾಡಿರುವ ಬಗ್ಗೆ ನಟಿ ಬೇಸರ ವ್ಯಕ್ತಪಡಿಸಿದ್ದಾರೆ ಎಂದೂ ವರದಿಯಾಗಿತ್ತು.

ಚಿತ್ರದಲ್ಲಿ ವಿಕ್ರಮ್ ರಾಥೋಡ್ (ಶಾರುಖ್‌) ಪತ್ನಿಯಾಗಿ ದೀಪಿಕಾ ಪಡುಕೋಣೆ ವಿಶೇಷವಾಗಿ ಕಾಣಿಸಿಕೊಂಡಿದ್ದಾರೆ. ಮೂಲ ಪ್ರಕಾರ ದೀಪಿಕಾ ಅವರದ್ದು ಅತಿಥಿ ಪಾತ್ರವಲ್ಲ. ಬದಲಿಗೆ ಜವಾನ್ ಅನ್ನು “ಶಾರುಖ್‌-ದೀಪಿಕಾ” ಚಿತ್ರದಂತೆ ಕಾಣುವಂತೆ ಮಾಡಲಾಗಿದೆ ಎಂದು ಹೇಳಿದೆ. ಇದು ಅತಿಥಿ ಪಾತ್ರವಾಗಿರಲಿಲ್ಲ. ಜವಾನ್ ಅನ್ನು ಬಹುತೇಕ ಶಾರುಖ್‌-ದೀಪಿಕಾ ಚಿತ್ರದಂತೆ ಕಾಣುವಂತೆ ಮಾಡಲಾಗಿದೆ. ನಯನತಾರಾ ದಕ್ಷಿಣದ ಪ್ರಮುಖ ನಟಿ, ಆದ್ದರಿಂದ ಅವರು ಜವಾನ್ ಸಿನಿಮಾ ಬಗ್ಗೆ ಸಂತೋಷವಾಗಿರಲಿಲ್ಲ. ಇನ್ನು ಮುಂದೆ ಯಾವುದೇ ಬಾಲಿವುಡ್‌ ಸಿನಿಮಾಗಳಲ್ಲಿ ಕಾಣಿಸುವುದಿಲ್ಲ ಎಂದು ನಯನತಾರಾ ಅಸಮಾಧಾನ ಹೊರ ಹಾಕಿದ್ದಾರೆ ಎಂದು ವರದಿಯಾಗಿತ್ತು.

Continue Reading

South Cinema

Vijay Raghavendra: ವಿಜಯ್ ರಾಘವೇಂದ್ರ -ಸೋನು ಗೌಡ ಜೋಡಿಯ ಮರೀಚಿ ಸಿನಿಮಾದ ಟೀಸರ್‌ ಔಟ್‌!

Vijay Raghavendra: ಪೊಲೀಸ್ ಖದರ್‌ನಲ್ಲಿ ರಾಘು ಕಾಣಿಸಿಕೊಂಡಿದ್ದಾರೆ. ಟೀಸರ್ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ.

VISTARANEWS.COM


on

Edited by

Vijay Raghavendra
Koo

ಬೆಂಗಳೂರು: ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ (Vijay Raghavendra) ಹಾಗೂ ಸೋನು ಗೌಡ (sonu gowda) ನಟನೆಯ ಮರೀಚಿ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಸಸ್ಪೆನ್ಸ್ ಥ್ರಿಲ್ಲಿಂಗ್ ಅಂಶಗಳ ಝಲಕ್ ಕುತೂಹಲ ಹೆಚ್ಚಿಸಿದೆ. ಪೊಲೀಸ್ ಖದರ್‌ನಲ್ಲಿ ರಾಘು ಕಾಣಿಸಿಕೊಂಡಿದ್ದಾರೆ. ಟೀಸರ್ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿ ಹಂಚಿಕೊಂಡಿದೆ.

ನಿರ್ದೇಶಕ ಹಾಗೂ ನಿರ್ಮಾಪಕ ಸಿದ್ಧ್ರುವ್ ಮಾತನಾಡಿ, ʻʻಮರೀಚಿ ಟೈಟಲ್ ಇಡುವ ಮೊದಲು 150 ಟೈಟಲ್ ನಮ್ಮ ಮುಂದೆ ಇತ್ತು. ಅದರಲ್ಲಿ ಋಷಿ ಹೆಸರು ಇಡುವ ಟೈಟಲ್ ಆಯ್ಕೆ ಮಾಡಬೇಕಿತ್ತು. ಅದಕ್ಕೆ ಮರೀಚಿ ಆಯ್ಕೆ ಮಾಡಿದ್ದೇನೆ. ಮರೀಚಿ ಎಂದರೆ ಬ್ರಹ್ಮನ ಮಗ. ದೇವದಾಸ್ ಹಾಗೂ ಅಸುರರ ಗಾಡ್ ಫಾದರ್. ನಮ್ಮ ಚಿತ್ರದಲ್ಲಿ ಒಳ್ಳೆಯದು ಕೆಟ್ಟದಕ್ಕೆ ಮರೀಚಿ ಗಾಡ್ ಫಾದರ್ ಎಂದು ತೆಗೆದುಕೊಂಡಿದ್ದೇವೆ. ತುಂಬ ಅದ್ಭುತವಾಗಿ ಕಥೆ ಮೂಡಿ ಬಂದಿದೆ. ಒಂದೊಳ್ಳೆ ಪ್ರಯತ್ನ ಮಾಡಿದ್ದೇವೆ. ಸ್ಕ್ರೀನ್ ಪ್ಲೇ, ಸ್ಟೋರಿ ಎಲ್ಲವೂ ಚೆನ್ನಾಗಿ ಬಂದಿದೆʼʼ ಎಂದರು.

ನಟ ವಿಜಯ್ ರಾಘವೇಂದ್ರ ಮಾತನಾಡಿ, ʻʻಮರೀಚಿ ಟೀಸರ್ ಲಾಂಚ್ ಆಗಿದೆ. ಟ್ಯಾಗ್ ಲೈನ್ ಹೇಳುವಂತೆ God father of good and bad ಎನ್ನುವಾಗೇ ಪ್ರತಿಯೊಬ್ಬರ ಮನಸ್ಸಿನಲ್ಲಿ ಕಥೆ ಎಣೆಯುವ ಮನಸ್ಸು ಆಗುತ್ತದೆ. ನಮಗೂ ಅದೇ ಬೇಕಿರುವುದು. ಮರೀಚಿ ಸಿನಿಮಾ ಒಂದು ಕ್ರೈಮ್ ಥ್ರಿಲ್ಲರ್ ಟೀಸರ್ ನೋಡಿದರೆ ಗೊತ್ತಾಗುತ್ತದೆ. ಈ ಚಿತ್ರದಲ್ಲಿ ಪೊಲೀಸ್ ಪಾತ್ರ ಮಾಡುವ ಅವಕಾಶವನ್ನು ನಿರ್ದೇಶಕರು ಕೊಟ್ಟಿದ್ದಾರೆ. ಮರೀಚಿ ಸಿನಿಮಾದಲ್ಲಿ ತಾಂತ್ರಿಕ ವರ್ಗದವರನ್ನು ಎಷ್ಟು ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದರೋ ಅದೇ ರೀತಿ ತೆರೆಮೇಲೆ ಬರುವ ಕಲಾವಿದರನ್ನು ಅಷ್ಟೇ ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದಾರೆ. ಅದರಲ್ಲಿ ನಾನು ಒಬ್ಬ ಇದ್ದೇನೆ ಎಂದು ಹೇಳಲು ಖುಷಿಯಾಗುತ್ತದೆʼʼ ಎಂದರು.

ಇದನ್ನೂ ಓದಿ: Vijay Raghavendra: ವಿಜಯ್‌ ರಾಘವೇಂದ್ರರನ್ನು ಭೇಟಿ ಮಾಡಿದ ಕಿಚ್ಚ ಸುದೀಪ್‌-ಪ್ರಿಯಾ ದಂಪತಿ

ನಟಿ ಸೋನುಗೌಡ ಮಾತನಾಡಿ, ʻʻಮರೀಚಿ ಸ್ಟೋರಿ ಲೈನ್ ನನಗೆ ಬಹಳ ಇಷ್ಟವಾಯಿತು. ಈ ಚಿತ್ರದಲ್ಲಿ ಪರ್‌ಫಾರ್ಮೆನ್ಸ್‌ಗೆ ತುಂಬ ಸ್ಕೋಪ್ ಇತ್ತು. ನನ್ನ ಪಾತ್ರ ತುಂಬ ಚೆನ್ನಾಗಿ ಬಂದಿದೆ. ಹ್ಯಾಪಿ ನ್ಯೂ ಇಯರ್‌ನಲ್ಲಿ ಗಂಡ ಹೆಂಡತಿಯಾಗಿ ನಾನು ವಿಜಯ್ ಸರ್ ನಟಿಸಿದ್ದೆವು. ಇಲ್ಲಿಯೂ ಗಂಡ ಹೆಂಡತಿಯಾಗಿ ನಟಿಸಿದ್ದೇವೆ. ಎಮೋಷನಲ್ ಆಗಿ ಮರೀಚಿ ಸಿನಿಮಾ ಮೂಡಿಬಂದಿದೆ. ಸ್ಕ್ರೀನ್ ನಲ್ಲಿ ನಾವು ಹೇಗೆ ಕಾಣಿಸುತ್ತೇವೆ ಎಂಬುದನ್ನು ನೋಡಲು ನಾನು ಕೂಡ ಕಾತುರಳಾಗಿದ್ದೇನೆʼʼ ಎಂದರು.

ಮರೀಚಿ ಲವ್ ಸ್ಟೋರಿ ಒಳಗೊಂಡಂತೆ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ, ಒಂದಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ಸಿದ್ಧ್ರುವ್ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಕಥೆ, ಚಿತ್ರಕಥೆ ಕೂಡ ಇವರೇ ಬರೆದಿದ್ದಾರೆ .

ವಿಜಯ ರಾಘವೇಂದ್ರ ಜೋಡಿಯಾಗಿ ನಟಿ ಸೋನು ಗೌಡ ನಟಿಸುತ್ತಿದ್ದು. ಅಭಿ ದಾಸ್, ಸ್ಪಂದನಾ ಸೋಮಣ್ಣ, ಆರ್ಯನ್, ಶ್ರುತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದೆ. ಎಸ್ ಎಸ್ ರೆಕ್ ಬ್ಯಾನರ್ ನಡಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಚಿತ್ರವನ್ನು ನಿರ್ಮಿಸಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

Continue Reading
Advertisement
iphone 7
ತಂತ್ರಜ್ಞಾನ7 mins ago

Apple Iphone : ಐಫೋನ್ ಬಳಕೆದಾರರೇ ಇಲ್ಲಿ ಕೇಳಿ; ನಿಮಗೊಂದು ಸೆಕ್ಯುರಿಟಿ ಅಲರ್ಟ್​ ಕೊಟ್ಟಿದೆ ಕೇಂದ್ರ ಸರ್ಕಾರ

Pradeep Easwar performs pada puja
ಕರ್ನಾಟಕ13 mins ago

Pradeep Eshwar: ಪೌರಕಾರ್ಮಿಕರಿಗೆ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್‌ ಈಶ್ವರ್‌

Sachin Tendulkar Presented Indian cricket team jersey - written "Nammo" in back to PM Narendra Modi.
ಕ್ರಿಕೆಟ್18 mins ago

Varanasi Stadium: ಮೋದಿಗೆ ಟೀಮ್​ ಇಂಡಿಯಾ ಜೆರ್ಸಿ ನೀಡಿ ಗೌರವಿಸಿದ ಸಚಿನ್ ತೆಂಡೂಲ್ಕರ್

Srilalitha reddy
ಕರ್ನಾಟಕ24 mins ago

Murder Case : ನೀರಿನ ತೊಟ್ಟಿಯಲ್ಲಿ ತೇಲುತ್ತಿತ್ತು ಮಗುವಿನ ಶವ; ಮೊಮ್ಮಗಳನ್ನೇ ಕೊಂದು ಬಿಟ್ಟನಾ!

Brundavana Kannada Serial
ಕಿರುತೆರೆ25 mins ago

Brindavana Serial Kannada: ಅಪರೂಪದ ಕತೆಯೊಂದಿಗೆ ʻಕನ್ನಡತಿ’ ಅಮ್ಮಮ್ಮ; ʻಬೃಂದಾವನʼಕ್ಕೆ ಯೋಗರಾಜ್ ಭಟ್ ಸಾಥ್‌!

Kamal Haasan Nayakan
South Cinema27 mins ago

Kamal Haasan: ಕಮಲ್ ಹಾಸನ್ ಜನುಮದಿನಕ್ಕೆ ಮತ್ತೊಂದು ಸೂಪರ್‌ ಹಿಟ್‌ ಸಿನಿಮಾ ಮರು ಬಿಡುಗಡೆ!

Nayanthara And Atlee Rumours Shah Rukh
ಬಾಲಿವುಡ್32 mins ago

Shah Rukh Khan: ನಯನತಾರಾ-ಅಟ್ಲೀ ಮುನಿಸಿನ ರೂಮರ್ಸ್‌ ಬೆನ್ನಲ್ಲೇ ನಟಿಗೆ ಸ್ಕ್ರೀನ್​ ಸ್ಪೇಸ್​ ಸಿಕ್ಕಿಲ್ಲ ಎಂದ ಶಾರುಖ್‌!

GS Basavaraj HD Devegowda
ಕರ್ನಾಟಕ35 mins ago

BJP-JDS Alliance: ಅವ್ರು ಗೆಲ್ಲಲ್ಲ; ತುಮಕೂರಿನಲ್ಲಿ ದೇವೇಗೌಡ್ರ ಸ್ಪರ್ಧೆಗೆ ಹಾಲಿ ಬಿಜೆಪಿ ಸಂಸದ ಬಸವರಾಜ್‌ ತೀವ್ರ ವಿರೋಧ

Narendra Modi
ಕ್ರಿಕೆಟ್38 mins ago

Narendra Modi : ಶಿವನ ಥೀಮ್ ಹೊಂದಿರುವ ಕ್ರಿಕೆಟ್ ಸ್ಟೇಡಿಯಮ್​ಗೆ ಅಡಿಗಲ್ಲು ಹಾಕಿದ ಪ್ರಧಾನಿ ಮೋದಿ, ಎಲ್ಲಿ ನಿರ್ಮಾಣ?

Police visit sopt
ಕರ್ನಾಟಕ53 mins ago

Murder Case : ಮಲಗಿದ್ದವಳ ಮೇಲೆ ಕಲ್ಲು ಎತ್ತಿಹಾಕಿ ಕೊಂದ; ಬಳಿಕ ಮರಕ್ಕೆ ನೇಣು ಬಿಗಿದುಕೊಂಡ ಕುಡುಕ ಪತಿ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ12 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ7 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ1 week ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ1 week ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌