Meghana Raj: ಮೇಘನಾ ರಾಜ್‌ ನಟನೆಯ ʼತತ್ಸಮ ತದ್ಭವʼ ಸಿನಿಮಾದ ಟೀಸರ್‌ ಔಟ್‌! Vistara News
Connect with us

South Cinema

Meghana Raj: ಮೇಘನಾ ರಾಜ್‌ ನಟನೆಯ ʼತತ್ಸಮ ತದ್ಭವʼ ಸಿನಿಮಾದ ಟೀಸರ್‌ ಔಟ್‌!

Meghana Raj: ಒಂದಷ್ಟು ಥ್ರಿಲ್ಲಿಂಗ್ ಅಂಶಗಳೂ ಕೂಡ ಟೀಸರ್‌ನಲ್ಲಿ ಇದೆ. ಮೇಘನಾ ರಾಜ್ ಅವರ ನಟನೆ ಎಲ್ಲರ ಗಮನ ಸೆಳೆದಿದೆ. ಆಗಸ್ಟ್​ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ಟೀಸರ್​​ನಲ್ಲಿ ಮಾಹಿತಿ ನೀಡಲಾಗಿದೆ.

VISTARANEWS.COM


on

Meghana Raj
Koo

ಬೆಂಗಳೂರು: ನಟಿ ಮೇಘನಾ ರಾಜ್‌ (Meghana Raj) ನಟನೆಯ ʼತತ್ಸಮ ತದ್ಭವʼ ಸಿನಿಮಾದ ಟೀಸರ್‌ ಬಿಡುಗೆಗೊಂಡಿದೆ. ಜುಲೈ 17ರ ಬೆಳಗ್ಗೆ 10:31ಕ್ಕೆ ಟೀಸರ್ ರಿಲೀಸ್ ಆಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಈ ಟೀಸರ್ ಇದೆ. ಮಿಸ್ಸಿಂಗ್ ಕೇಸ್​ನ ಕಥೆ ಎಂದು ಟೀಸರ್‌ ಮೂಲಕ ರಿಔಇಲ್‌ ಆಗಿದೆ. ‘ನನ್ನ ಹೆಸರು ಆರಿಕಾ. ನನ್ನ ಪತಿ ಕಾಣೆ ಆಗಿದ್ದಾರೆ’ ಎಂದು ಮೇಘನಾ ರಾಜ್ ಬಂದು ದೂರು ನೀಡುತ್ತಾರೆ. ಇನ್ನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಪ್ರಜ್ವಲ್ ದೇವರಾಜ್ ಕಾಣಿಸಿಕೊಂಡಿದ್ದಾರೆ.

ಒಂದಷ್ಟು ಥ್ರಿಲ್ಲಿಂಗ್ ಅಂಶಗಳೂ ಕೂಡ ಟೀಸರ್‌ನಲ್ಲಿ ಇದೆ. ಮೇಘನಾ ರಾಜ್ ಅವರ ನಟನೆ ಎಲ್ಲರ ಗಮನ ಸೆಳೆದಿದೆ. ಆಗಸ್ಟ್​ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ಟೀಸರ್​​ನಲ್ಲಿ ಮಾಹಿತಿ ನೀಡಲಾಗಿದೆ. ತತ್ಸಮ ತದ್ಭವ ಸಿನಿಮಾಕ್ಕೆ ಪನ್ನಗ ಭರಣ ಹಾಗೂ ಸ್ಫೂರ್ತಿ ಅನಿಲ್‌ ಅವರು ಬಂಡವಾಳ ಸುರಿದಿದ್ದಾರೆ. ವಿಶಾಲ್‌ ಆತ್ರೇಯ ಅವರು ಸಿನಿಮಾಕ್ಕೆ ಆಕ್ಷನ್‌ ಕಟ್‌ ಹೇಳುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಸಿನಿಮಾಕ್ಕೆ ವಾಸುಕಿ ವೈಭವ್‌ ಅವರ ಸಂಗೀತ, ಶ್ರೀನಿವಾಸ್‌ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಅವರ ಸಂಕಲನವಿದೆ.

ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದೆ ಎಂದು ಚಿತ್ರತಂಡ ಈ ಮುಂಚೆಯೇ ಮಾಹಿತಿ ಹಂಚಿಕೊಂಡಿತ್ತು. , ಹಿರಿಯ ನಟಿ ಶ್ರುತಿ ಕೂಡ ಮನೋವೈದ್ಯರ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಸಿನಿಮಾಗೆ ಜೀವ ತುಂಬಿದ್ದಾರೆ. ಇದೊಂದು ಸಸ್ಪೆನ್ಸ್‌ ಕ್ರೈಂ ಜಾನರ್‌ನ ಸಿನಿಮಾ ಎಂದು ಸಿನಿತಂಡ ಮಾಹಿತಿ ಕೊಟ್ಟಿದೆ.

ಇದನ್ನೂ ಓದಿ: Meghana Raj: ಅಂತೂ ಗುಡ್‌ ನ್ಯೂಸ್‌ ಕೊಟ್ಟ ನಟಿ ಮೇಘನಾ ರಾಜ್‌!

ತತ್ಸಮ ತದ್ಭವ ಚಿತ್ರದ ಟೀಸರ್‌

ಈಗ ‘ತತ್ಸಮ ತದ್ಭವ’ ತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿ ಆಗಿದೆ. ಮೇಘನಾ ರಾಜ್ ಅವರು ಮೇ 3ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ‘ತತ್ಸಮ ತದ್ಭವ’ ಚಿತ್ರದ ಹೊಸ ಪೋಸ್ಟರ್ ಬಿಡುಗಡೆ ಆಗಿತ್ತು. ಈ ಪೋಸ್ಟರ್​ ನೋಡಿ ಫ್ಯಾನ್ಸ್ ಖಷಿಪಟ್ಟಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

South Cinema

Pooja Hegde: ಖ್ಯಾತ ಕ್ರಿಕೆಟಿಗನ ಜತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಪೂಜಾ ಹೆಗ್ಡೆ?

Pooja Hegde: ಮದುವೆಗೆ ಎಲ್ಲ ಸಿದ್ಧತೆ ನಡೆಯುತ್ತಿದೆ ಎಂತಲೂ ವರದಿಯಾಗಿದೆ.ಆ ಖ್ಯಾತ ಕ್ರಿಕೆಟಿಗ ಯಾರು ಎಂಬುದರ ಬಗ್ಗೆ ಎಲ್ಲೂ ರಿವೀಲ್ ಆಗಿಲ್ಲ.

VISTARANEWS.COM


on

Edited by

Pooja Hegde
Koo
Pooja Hegde
ನಟಿ ಪೂಜಾ ಹೆಗ್ಡೆ Pooja Hegde ಹಲವು ಸಿನಿಮಾಗಳು ಸೋಲು ಕಂಡಿವೆ ನಟಿ ಆಗಾಗ ಫೋಟೊ ಶೂಟ್‌ ಮೂಲಕ ಸುದ್ದಿಯಾಗುತ್ತಲೇ ಇರುತ್ತಾರೆ ಆದರೀಗ ನಟಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ
Pooja Hegde
ಖ್ಯಾತ ಕ್ರಿಕೆಟಿಗನ ಜತೆ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ ಎಂದು ವರದಿಯಾಗಿದೆ

ಇದನ್ನೂ ಓದಿ: Pooja Hegde: ಕೆಂಪು ಉಡುಪಿನಲ್ಲಿ ಸಖತ್‌ ಹಾಟ್‌ ಆಗಿ ಕಂಡ ಪೂಜಾ ಹೆಗ್ಡೆ

Pooja Hegde
ಮದುವೆಗೆ ಎಲ್ಲ ಸಿದ್ಧತೆ ನಡೆಯುತ್ತಿದೆ ಎಂತಲೂ ವರದಿಯಾಗಿದೆ ಆ ಖ್ಯಾತ ಕ್ರಿಕೆಟಿಗ ಯಾರು ಎಂಬುದರ ಬಗ್ಗೆ ಎಲ್ಲೂ ರಿವೀಲ್ ಆಗಿಲ್ಲ
Pooja Hegde
ಈ ಬಗ್ಗೆ ನಟಿ ಯಾವುದೇ ಸ್ಪಷ್ಟನೆ ನೀಡಿಲ್ಲ ಆದರೆ ತೆಲುಗು ಮಾಧ್ಯಮಗಳು ಈ ಬಗ್ಗೆ ಸುದ್ದಿ ಮಾಡಿವೆ
Pooja Hegde
ನಟಿ ಸೌತ್ ಬಾಲಿವುಡ್ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ
Pooja Hegde
ಓಕೆ ಲೈಲಾ ಪಾರೋ ಚಿತ್ರದ ಮೂಲಕ ಪೂಜಾ ನಾಯಕಿಯಾಗಿ ಪದಾರ್ಪಣೆ ಮಾಡಿದರು
Continue Reading

South Cinema

Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ

Darshan Thoogudeepa: ನಟ ದರ್ಶನ್ ಅವರ ಬೇಜವಾಬ್ದಾರಿತನದ ಹೇಳಿಕೆ ವಿರುದ್ಧ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಆಕ್ರೋಶ ಹೊರ ಹಾಕಿದೆ.

VISTARANEWS.COM


on

Edited by

actor Darshan
Koo

ಮಂಡ್ಯ: ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್‌ 26ರಂದು (ಮಂಗಳವಾರ)‌ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ (Bangalore bandh on September 26) ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಸ್ಯಾಂಡಲ್‌ವುಡ್‌ ಕಲಾವಿದರೂ ಕೂಡ ರೈತರಿಗೆ ಬೆಂಬಲ ನೀಡುತ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan Thoogudeepa) ಕೂಡ ರೈತರ ಬೆಂಬಲಕ್ಕೆ ನಿಂತಿದ್ದರು. ಈ ವೇಳೆ ಕನ್ನಡ ಸಿನಿಮಾ ಕಲಾವಿದರು ಅದಕ್ಕೆ ಬರಲಿಲ್ಲ, ಇದಕ್ಕೆ ಬರಲಿಲ್ಲ ಎಂದು ಹೇಳುತ್ತೀರಲ್ಲ ಕರ್ನಾಟಕದಲ್ಲಿ ತಮಿಳು ಸಿನಿಮಾವೊಂದು 36 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ತಮಿಳು ನಟರು ಹಾಗೂ ಅವರ ಸಿನಿಮಾಗಳ ಬಗ್ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದರು. ಇದೀಗ ನಟ ದರ್ಶನ್ ಅವರ ಬೇಜಾವಬ್ದಾರಿತನದ ಹೇಳಿಕೆ ವಿರುದ್ಧ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಆಕ್ರೋಶ ಹೊರ ಹಾಕಿದೆ.

ನಟ ದರ್ಶನ್ ವಿರುದ್ಧ ಭುಗಿಲೆದ್ದ ಆಕ್ರೋಶ

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಹೋರಾಟ ನಡೆಸಿದೆ. ಕಾವೇರಿ ವಿಚಾರವಾಗಿ ನಟ ದರ್ಶನ್‌ ಬೇಜವಾಬ್ದಾರಿತನದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ʻʻನಟ ದರ್ಶನ್ ಅವರು ಕೂಡಲೇ ರೈತರಲ್ಲಿ ಕ್ಷಮೆ ಕೇಳಬೇಕು. ನಾವು ಒಂದು ತಿಂಗಳಿನಿಂದ ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟಕ್ಕೆ ದರ್ಶನ್ ಬಂದರೆ ಬಲ ಸಿಗುತ್ತದೆ ಎಂದು ಭಾವಿಸಿದ್ದೇವು. ಅದಕ್ಕಾಗಿಯೇ ನಾವು ಆಹ್ವಾನಿಸಿದ್ದೇವು. ಕಾವೇರಿ ಕೊಳ್ಳದ ಜಿಲ್ಲೆಯವರಾಗಿ ಹೋರಾಟಗಾರರ ಬಗ್ಗೆ ಕೇವಲವಾಗಿ ಮಾತನಾಡಬಾರದು. ಜವಾಬ್ದಾರಿಯುತ ನಟನಾಗಿ ಹೋರಾಟಕ್ಕೆ ದನಿಗೂಡಿಸಿಬೇಕಿತ್ತುʼʼ ಎಂದು ರೈತರು ದರ್ಶನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: Darshan Thoogudeepa: ತಮಿಳು ಸಿನಿಮಾ ಯಾಕೆ ನೋಡಿದ್ರಿ? ಕಾವೇರಿ ವಿಚಾರದಲ್ಲಿ ದರ್ಶನ್‌ ಕೆಂಡ

ದರ್ಶನ್‌ ಹೇಳಿದ್ದೇನು?

ಕಾವೇರಿ ಗಲಾಟೆ ಆರಂಭ ಆಗುತ್ತಿದ್ದಂತೆ ಸ್ಯಾಂಡಲ್‌ವುಡ್‌ ನಟರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಕನ್ನಡ ಚಿತ್ರರಂಗದ ತಾರೆಗಳು ಧ್ವನಿ ಎತ್ತುತ್ತಿಲ್ಲ ಎಂಬಂತಹ ಮಾತುಗಳು ಕೇಳಿ ಬಂದಿದ್ದವು. ಈ ಬಗ್ಗೆ ನಟ ದರ್ಶನ್‌ ಖಾರವಾಗಿಯೇ ಮಾತನಾಡಿದ್ದರು. ʻʻಕರ್ನಾಟಕದಲ್ಲಿ ತಮಿಳು ಸಿನಿಮಾವೊಂದು 36 ಕೋಟಿ ರೂ. ಕಲೆಕ್ಷನ್ ಮಾಡಿದೆ. ದರ್ಶನ್, ಶಿವಣ್ಣ, ಸುದೀಪ್, ಯಶ್ ಮಾತ್ರ ನಿಮಗೆ ಕಾಣುತ್ತಾರಾ? ಅವರು ಯಾರೂ ಕಾಣಿಸೋದಿಲ್ಲವೇ?ʼʼ ಎಂದು ಕನ್ನಡ ಕಲಾವಿದರ ಬಗ್ಗೆ ಟೀಕೆ ಮಾಡಿದವರಿಗೆ ದರ್ಶನ್ ತಿರುಗೇಟು ನೀಡಿದ್ದರು.

ದರ್ಶನ್‌ ವಿಡಿಯೊದಲ್ಲಿ ʻʻನೋಡಿ ಸ್ವಾಮಿ ಮೊನ್ನೆ ಮೊನ್ನೆಯಷ್ಟೇ ಒಂದು ತಮಿಳು ಸಿನಿಮಾ ರಿಲೀಸ್ ಆಯ್ತು. ಒಬ್ಬ ವಿತರಕ 6 ಕೋಟಿಗೆ ಸಿನಿಮಾ ತಗೊಂಡ. 35, 36 ಕೋಟಿ ರೂ. ಮಾಡಿದ. ಆ ಸಿನಿಮಾವನ್ನು ಇಲ್ಲಿ ತಮಿಳಿನವರು ನೋಡಿದ್ರಾ ಸ್ವಾಮಿ? ಎಲ್ಲೋ ಇದ್ದು ಏನೋ ಮಾಡಿದವರಿಗೆ ನೂರಾರು ಕೋಟಿ ಕೊಡ್ತೀರಾ? ಯಾಕೆ ನೀವು ಕನ್ನಡ ಸಿನಿಮಾಗೆ ಕೊಡಲ್ಲ?.” ಎಂದು ಪ್ರಶ್ನೆ ಮಾಡಿದ್ದರು. ನೀವು ಕನ್ನಡ ಸಿನಿಮಾ ನೋಡೋದಿಲ್ಲ, ನಾವೇಕೆ ಬೆಂಬಲ ನೀಡಬೇಕು ಎಂಬರ್ಥದಲ್ಲಿ ಮಾತನಾಡಿದ್ದರು.

Continue Reading

South Cinema

Dhruva Sarja: ಸಮಾಜಮುಖಿ ಕಾರ್ಯದಲ್ಲಿ ಕಾರುಣ್ಯ ರಾಮ್‌: ಅಶ್ವಿನಿ ಪುನೀತ್, ಧ್ರುವ ಸರ್ಜಾ ಸಾಥ್!

ಈ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ (ashwini puneeth rajkumar) ಹಾಗೂ ಧ್ರುವ ಸರ್ಜಾ (Dhruva Sarja) ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು.

VISTARANEWS.COM


on

Edited by

Karunya Ram in Social Work
Koo

ಬೆಂಗಳೂರು: ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಂಡಿರುವ ನಟಿ ಕಾರುಣ್ಯ ರಾಮ್ (Karunya Ram) ಸದ್ಯ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ಹಾಗೂ ಕಿಮ್ಸ್ ಆಸ್ಪತ್ರೆಯ ಸಹಯೋಗದಲ್ಲಿ ಅಂಗಾಂಗ ದಾನ ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ (ashwini puneeth rajkumar) ಹಾಗೂ ಧ್ರುವ ಸರ್ಜಾ (Dhruva Sarja) ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು.

ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ನಟಿ ಕಾರುಣ್ಯ ರಾಮ್, ‘ಅಂಗಾಂಗ ದಾನ ಮಾಡುವುದರಿಂದ ನಾವು ಸತ್ತ ಬಳಿಕವೂ ನಮ್ಮ ಉಪಯೋಗ ಆಗುತ್ತದೆ. ಅಂಗಾಂಗ ದಾನದಿಂದ ಪುಣ್ಯ ಸಿಗುತ್ತದೆ. ಎಲ್ಲರೂ ಅಂಗಾಂಗ ದಾನ ಮಾಡಿ’ ಎಂದು ಮನವಿ ಮಾಡಿದರು.

ಧ್ರುವ ಸರ್ಜಾ ಮಾತನಾಡಿ ʻʻಅನೇಕರಿಗೆ ನಾವು ಯೂಸ್ ಲೆಸ್ ಅಂತ ಹೇಳುತ್ತಿರುತ್ತೇವೆ. ಆದರೆ ಉಪಯೋಗಕ್ಕೆ ಬರದೇ ಇರುವವರಲ್ಲ. ಯೂಸ್ಡ್ ಲೆಸ್ ಅಷ್ಟೇ. ಅಂಗಾಂಗ ದಾನ ಮಾಡಿ ಇನ್ನೊಬ್ಬರಿಗೆ ಉಪಯೋಗ ಆಗುತ್ತದೆ. ನಾವು ಸತ್ತ ಮೇಲೂ ಇನ್ನೊಬ್ಬರಿಗೆ ಉಪಯೋಗ ಆಗುತ್ತದೆ ಎಂದರೆ ಯಾಕೆ ಮಾಡಬಾರದು. ಎಲ್ಲರೂ ದಯವಿಟ್ಟು ಇದಕ್ಕೆ ಕೈ ಜೋಡಿಸಿ. ನಿಮ್ಮ ಪಕ್ಕದವರಿಗೂ ಹೇಳಿ. ಇಂಥ ಶಿಬಿರಗಳನ್ನು ಎಲ್ಲಾ ಕಡೆ ಮಾಡಬೇಕು, ಹೆಚ್ಚು ಹೆಚ್ಚು ಇಂತಹ ಶಿಬಿರಗಳು ಆಗಬೇಕು’ ಎಂದರು.

ಇದನ್ನೂ ಓದಿ: Dhruva Sarja: ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ಧ್ರುವ ಸರ್ಜಾ, ಕಾರುಣ್ಯ ರಾಮ್!

Karunya Ram in Social Work

ಕಾರ್ಯಕ್ರಮದಲ್ಲಿ ಸುಮಾರು 700 ರಿಂದ 1000 ಮಂದಿ ಅಂಗಾಂಗ ದಾನ ಪ್ರತಿಗೆ ಸಹಿ ಮಾಡಿದರು. ಈ ಕಾರ್ಯಕ್ರಮದಲ್ಲಿ ಹೆಲ್ತ್ ಅಂಡ್ ವೆಲ್ತ್ ಜಾಯಿಂಟ್ ಡೈರೆಕ್ಟರ್, ಕಿಮ್ಸ್ ಅಧ್ಯಕ್ಷರು, ಆರ್ಗನ್ ಡೊನೇಷನ್ ಡಿಪಾರ್ಟ್ಮೆಂಟ್ ಭಾಗಿಯಾಗಿತ್ತು.

Continue Reading

South Cinema

Film Chamber Karnataka: ನಾಳೆ ಚಿತ್ರಮಂದಿರಗಳು ತೆರೆಯಲ್ಲ; ಬೆಂಗಳೂರು ಬಂದ್‌ಗೆ ಚಿತ್ರೋದ್ಯಮ ಸಾಥ್‌!

ಕಾವೇರಿ ನದಿ ನೀರು ವಿಚಾರವಾಗಿ ಹೋರಾಟ ಮಾಡುತ್ತಿರುವ ರೈತರ ಪರ ನಿಲ್ಲಲು ಕರ್ನಾಟಕ ಚಲನಚಿತ್ರ ವಾಣಿಜ್ಯ (Film Chamber Karnataka) ಮಂಡಳಿ ನಿರ್ಧರಿಸಿದೆ. ಈಗಾಗಲೇ ಹಲವು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ.

VISTARANEWS.COM


on

Edited by

Film Chamber Karnataka
Koo

ಬೆಂಗಳೂರು: ಕಾವೇರಿ ನೀರಿನ ಉಳಿವಿಗಾಗಿ ಸೆಪ್ಟೆಂಬರ್‌ 26ರಂದು (ಮಂಗಳವಾರ)‌ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ (Bangalore bandh on September 26) ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಕಾವೇರಿ ನದಿ ನೀರು ವಿಚಾರವಾಗಿ ಹೋರಾಟ ಮಾಡುತ್ತಿರುವ ರೈತರ ಪರ ನಿಲ್ಲಲು ಕರ್ನಾಟಕ ಚಲನಚಿತ್ರ ವಾಣಿಜ್ಯ (Film Chamber Karnataka) ಮಂಡಳಿ ನಿರ್ಧರಿಸಿದೆ. ಈಗಾಗಲೇ ಹಲವು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ.

ಕನ್ನಡ ಚಿತ್ರರಂಗದ ಪ್ರದರ್ಶಕ ಸಂಘದ ಅಧ್ಯಕ್ಷರಾದ ಕೆ.ವಿ.ಚಂದ್ರಶೇಖರ್ ಈ ಬಗ್ಗೆ ಮಾತನಾಡಿ ʻʻಅಧ್ಯಕ್ಷರು ಪಧಾಧಿಕಾರಿಗಳ ಜತೆ ಕೂತು ಚರ್ಚೆ ಮಾಡಿದ್ದೇವೆ. ನೀರಿನ ವಿಚಾರದಲ್ಲಿ ಕರೆ ನೀಡಿದ ಬಂದ್​ಗೆ ಚಿತ್ರಮಂದಿರಗಳು ಬೆಂಬಲಕ್ಕೆ ಸದಾ ಸಿದ್ಧ. ನಾಡಿನ ಹಿತಕ್ಕಾಗಿ ಚಿತ್ರೋದ್ಯಮ ಯಾವತ್ತೂ ಇರುತ್ತದೆʼʼಎಂದರು.

ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಮ್. ಸುರೇಶ್ ಮಾತನಾಡಿ ʻʻಕಾವೇರಿ ವಿಚಾರ ಗಂಭೀರವಾದ ವಿಚಾರ. ನಮ್ಮ ಅಂಗ ಸಂಸ್ಥೆಗಳ ಜತೆ ಚರ್ಚೆ ಮಾಡಬೇಕು. ಕಲಾವಿದರನ್ನು ಭೇಟಿ ಮಾಡಬೇಕು. ಸಮಯದ ಅಭಾವ ಇದೆ. ಹೀಗಾಗಿ ರೂಪುರೇಷೆಯನ್ನು ಸಾಯಂಕಾಲ ತಿಳಿಸುತ್ತೇವೆ. ರೈತರ ನೀರಿನ ಸಮಸ್ಯೆ ಆ ಸಮಸ್ಯೆಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ಸರ್ಕಾರಕ್ಕೆ ಮನದಟ್ಟು ಆಗಬೇಕಂದರೆ ಸಮಯವಕಾಶ ಬೇಕು. ಬೆಳಗ್ಗೆ 6 ಗಂಟೆಯಿಂದ ಸಂಜೆ 6ರವರೆಗೆ ಚಿತ್ರಮಂದಿರಗಳನ್ನು ಬಂದ್ ಮಾಡುತ್ತೇವೆ’ ಎಂದರು.

ನಾಳೆಯ ಬೆಂಗಳೂರು ಬಂದ್‌ಗೆ ಬೆಂಬಲವನ್ನೂ ಸೂಚಿಸಿರುವ ವಾಣಿಜ್ಯ ಮಂಡಳಿ, ಬೆಂಗಳೂರು ಸಿಟಿಯಲ್ಲಿ ಶೂಟಿಂಗ್ ನಡೆಯುವುದಿಲ್ಲ. ಬೆಂಗಳೂರು ಬಿಟ್ಟು ಹೊರಗೆ ಶೂಟಿಂಗ್ ಮಾಡುತ್ತಿರುವವರಿಗೆ ತೊಂದರೆ ಇಲ್ಲ ಎಂದಿದೆ.

ಇದನ್ನೂ ಓದಿ: Karnataka Film Chamber: ಕರ್ನಾಟಕ ಚಲನಚಿತ್ರ ಮಂಡಳಿ ಚುನಾವಣೆ; ಮಕ್ಕಳ ಕ್ಷೇಮಾಭಿವೃದ್ಧಿ ಟ್ರಸ್ಟ್ ಆರಂಭಿಸಿದ ಶಿಲ್ಪಾ ಶ್ರೀನಿವಾಸ್!

ಹಿರಿಯ ನಟಿ ಲೀಲಾವತಿ ಸಾಥ್‌

ಈಗಾಗಲೇ ವಿವಿಧ ರೈತ ಹಾಗೂ ಸಂಘಟನೆಗಳು ಹೋರಾಟ ನಡೆಸುತಿದ್ದು, ಕಾವೇರಿ ಹೋರಾಟಕ್ಕೆ ತಮ್ಮ ಆರೋಗ್ಯವನ್ನೂ ಲೆಕ್ಕಿಸದೆ ಹಿರಿಯ ನಟಿ ಎಂ.ಲೀಲಾವತಿ ಕೂಡ ಬೆಂಬಲ ನೀಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಮನೆಯಲ್ಲಿ ಮಾತನಾಡಿದ ಅವರು ʻʻನಾನು ಸಹ ಕಾವೇರಿ ಹೋರಾಟಕ್ಕೆ ಹೊರಡುವೆ. ನಮ್ಮ ಜಲ, ನಮ್ಮ ನೆಲ, ನಮ್ಮ ನುಡಿ, ಎಲ್ಲಾ ಕನ್ನಡಕೊಸ್ಕರ. ಕಾವೇರಿ ನೀರಿಗಾಗಿ ನಾನು ಹೋರಾಟಕ್ಕೆ ಬರುವೆ’ ಎಂದಿದ್ದಾರೆ. ನೆಲಮಂಗಲದ ಮನೆಯಿಂದ ಮಂಡ್ಯ ಪ್ರತಿಭಟನೆ ಸ್ಥಳಕ್ಕೆ ಮಗ ವಿನೋದ್ ರಾಜ್ ಜತೆಗೆ ಹೊರಟಿದ್ದಾರೆ.

ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಸಂಘಟನೆ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್​ಗೆ ಬೆಂಬಲ ನೀಡಿದೆ. ಮಂಗಳವಾರದಂದು ಕಿರುತೆರೆಗೆ ಸಂಬಂಧಿಸಿದ ಯಾವುದೇ ಚಿತ್ರೀಕರಣ ನಡೆಯುವುದಿಲ್ಲ ಎಂದು ಸಂಘದ ಅಧ್ಯಕ್ಷ ಗಣೇಶ್ ರಾವ್ ಕೇಸರ್ಕರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಬಂದ್‌ ದಿನ ಏನು ಇರಲ್ಲ?

ಆಟೋ, ಕ್ಯಾಬ್, ಗೂಡ್ಸ್ ವಾಹನಗಳು, ಖಾಸಗಿ ಬಸ್‌ಗಳು, ಥಿಯೇಟರ್‌, ಸೂಪರ್ ಮಾರ್ಕೆಟ್‌, ಪೆಟ್ರೋಲ್ ಬಂಕ್‌, ಶಾಲಾ -ಕಾಲೇಜ್‌ಗಳು, ಅಂಗಡಿಗಳು, ಬೀದಿಬದಿ ಅಂಗಡಿಗಳು, ಜ್ಯುವೆಲ್ಲರಿ ಶಾಪ್‌ಗಳು, ಕೈಗಾರಿಕೆಗಳು ಹೋಟೆಲ್‌ಗಳು, ಮಾಲ್‌ಗಳು.

ಎಲ್ಲ ಬಿಎಂಟಿಸಿ ಬಸ್‌ ಘಟಕಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದು, ಬೆಳಗ್ಗೆ 6ರಿಂದ ಸಂಜೆ 6ಗಂಟೆವರೆಗೆ ಬಿಎಂಟಿಸಿ ಬಸ್‌ಗಳನ್ನು ಹೊರತರದಿರಲು ನೌಕರರು ನಿರ್ಧರಿಸಿದ್ದಾರೆ. ಖಾಸಗಿ ಶಾಲೆಗಳಿಗೆ ಬಹುತೇಕ ರಜೆ ಘೋಷಣೆಯಾಗಿದ್ದು, ಪರೀಕ್ಷೆಗಳು ನಡೆಯುವ ಕಡೆ ನೌಕರರು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾಗಿ ಬಂದ್‌ಗೆ ಬೆಂಬಲ ಸೂಚಿಸಲಿದ್ದಾರೆ.

Continue Reading
Advertisement
viral news kannada
ಕ್ರಿಕೆಟ್5 mins ago

Kapil Dev Kidnap: ವಿಶ್ವಕಪ್​ ವಿಜೇತ ನಾಯಕ ಕಪಿಲ್ ದೇವ್​ ಕಿಡ್ನಾಪ್​; ವಿಡಿಯೊ ವೈರಲ್​

bangalore Bandh kuruburu deatained
ಕರ್ನಾಟಕ7 mins ago

Bangalore Bandh : ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಪ್ರತಿಭಟನೆ: ಕುರುಬೂರು ಶಾಂತ ಕುಮಾರ್‌ ಪೊಲೀಸ್‌ ವಶಕ್ಕೆ

pakistan Team
ಕ್ರಿಕೆಟ್44 mins ago

Pakistan team: ಕೊನೆಗೂ ಬಗೆಹರಿದ ಪಾಕ್ ತಂಡದ​ ವೀಸಾ ಸಮಸ್ಯೆ; ಬುಧವಾರ ಭಾರತ ಪ್ರಯಾಣ

bus auto accident
ದಕ್ಷಿಣ ಕನ್ನಡ46 mins ago

Road Accident: ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ

home lizard
ಲೈಫ್‌ಸ್ಟೈಲ್1 hour ago

Lizards in home: ಹಲ್ಲಿಯನ್ನು ಮನೆಯಿಂದ ಓಡಿಸುವ ಕಲೆ ನಿಮಗೆ ಗೊತ್ತೇ? ಇಲ್ಲಿವೆ ಟಿಪ್ಸ್!

healthy children food
Relationship2 hours ago

Parenting Tips: ನಿಮ್ಮ ಮಕ್ಕಳು ಅಡ್ಡ ಬೆಳೆಯದೆ, ಉದ್ದ ಬೆಳೆಯಬೇಕೆಂದರೆ ಈ ಆಹಾರವನ್ನೇ ನೀಡಿ!

Reality Shows neads a break
ಅಂಕಣ2 hours ago

Raja Marga Column : ನಿಮ್ಮ ಮಕ್ಕಳನ್ನು ಸೂಪರ್‌ ಹೀರೊ ಮಾಡಲು ಹೋಗ್ಬೇಡಿ; ರಿಯಾಲಿಟಿ ಶೋಗಳಿಗೆ ಬೇಕು ಬ್ರೇಕ್!

bangalore bandh
Live News2 hours ago

Bangalore Bandh Live: ಬೆಂಗಳೂರು ಬಂದ್‌ ಆರಂಭ; ಎಲ್ಲೆಲ್ಲಿ ಏನೇನಾಗ್ತಿದೆ?

Vistara Editorial, Janata Darshan by CM must appreciated
ಕರ್ನಾಟಕ3 hours ago

ವಿಸ್ತಾರ ಸಂಪಾದಕೀಯ: ಜನತಾ ದರ್ಶನ ಪ್ರಶಂಸಾರ್ಹ, ಪರಿಹಾರವೂ ದೊರೆಯಲಿ

Dina Bhavishya
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ4 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ16 hours ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ17 hours ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ20 hours ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ20 hours ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌