Mohanlal: ʼಅಮ್ಮʼ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್‌ಲಾಲ್ ರಾಜೀನಾಮೆ - Vistara News

ಸಿನಿಮಾ

Mohanlal: ʼಅಮ್ಮʼ ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್‌ಲಾಲ್ ರಾಜೀನಾಮೆ

ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿದ ಅನಂತರ ಮಲಯಾಳಂ ಚಿತ್ರರಂಗದ ಹಿರಿಯ ವ್ಯಕ್ತಿಗಳು ಲೈಂಗಿಕ ದೌರ್ಜನ್ಯದ ದೂರುಗಳನ್ನು ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಮಲಯಾಳಂ ಚಲನಚಿತ್ರ ನಟರ ಸಂಘದ (AMMA) ಅಧ್ಯಕ್ಷ ಸ್ಥಾನಕ್ಕೆ ನಟ ಮೋಹನ್ ಲಾಲ್ (Mohanlal) ಹಾಗೂ ಚಲನಚಿತ್ರ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ರಾಜೀನಾಮೆ ಸಲ್ಲಿಸಿದರು.

VISTARANEWS.COM


on

Mohanlal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ಹಿರಿಯ ನಟ ಸಿದ್ದಿಕ್ (veteran actor Siddique) ಮತ್ತು ಚಿತ್ರನಿರ್ಮಾಪಕ ರಂಜಿತ್ ಬಾಲಕೃಷ್ಣನ್ (Filmmaker Ranjith Balakrishnan) ಸೇರಿದಂತೆ ಮಾಲಿವುಡ್‌ನ ಕೆಲವು ಮಂದಿಯ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಗಳು ಕೇಳಿ ಬಂದ ಬಳಿಕ ನಟ ಮೋಹನ್‌ಲಾಲ್ (Mohanlal) ಅವರು ಮಲಯಾಳಂ ಚಲನಚಿತ್ರ ಕಲಾವಿದರ ಸಂಘದ (AMMA) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚಲನಚಿತ್ರ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ಕೂಡ ರಾಜೀನಾಮೆ ಸಲ್ಲಿಸಿದ್ದಾರೆ.

ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯು ನೈತಿಕ ಜವಾಬ್ದಾರಿಯನ್ನು ತೆಗೆದುಕೊಂಡಿದೆ. ಸಮಿತಿಯ ವಿರುದ್ಧ ಕೆಲವು ನಟರು ಮಾಡಿದ ಆರೋಪಗಳಿಂದ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಲು ನಿರ್ಧರಿಸಲಾಗಿದೆ. ಎರಡು ತಿಂಗಳೊಳಗೆ ಹೊಸ ಸಮಿತಿ ರಚನೆಗೆ ಚುನಾವಣೆ ನಡೆಯಲಿದೆ ಎಂದು ʼಅಮ್ಮʼ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ವಾರ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಿದ ಅನಂತರ ಮಲಯಾಳಂ ಚಿತ್ರರಂಗದ ಹಿರಿಯ ವ್ಯಕ್ತಿಗಳು ಲೈಂಗಿಕ ದೌರ್ಜನ್ಯದ ದೂರುಗಳನ್ನು ಎದುರಿಸುತ್ತಿದ್ದಾರೆ.

ಮಹಿಳೆಯರ ವಿರುದ್ಧ ನಡೆದ ದೌರ್ಜನ್ಯದ ಆಘಾತಕಾರಿ ಕಥೆಗಳನ್ನು ಒಳಗೊಂಡಿರುವ ವರದಿಯನ್ನು 2019ರಲ್ಲಿ ಕೇರಳ ಸರ್ಕಾರಕ್ಕೆ ಸಲ್ಲಿಸಿದ್ದರೂ ಅದನ್ನು ನಿರ್ಲಕ್ಷಿಸಲಾಗಿತ್ತು. 2019ರಲ್ಲಿ ನಟ ಸಿದ್ದಿಕ್ ಎರ್ನಾಕುಲಂ ಜಿಲ್ಲೆಯ ತಮ್ಮ ಮನೆಯಲ್ಲಿ ಚಲನಚಿತ್ರವೊಂದರ ಪಾತ್ರದ ಕುರಿತು ಮಾತನಾಡಲು ಜೂನಿಯರ್ ಕಲಾವಿದರೊಬ್ಬರನ್ನು ಆಹ್ವಾನಿಸಿ ಅನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನುವ ದೂರು ಕೇಳಿ ಬಂದಿದೆ. ಸಿದ್ದಿಕ್ ಈ ಆರೋಪವನ್ನು ತಿರಸ್ಕರಿಸಿದ್ದು, ಚಲನಚಿತ್ರ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಕಸಿದುಕೊಳ್ಳಲು ಈ ಆರೋಪ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮತ್ತೊಂದು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಸಿದ್ದಿಕ್ ಕಳೆದ ವಾರ ತಮ್ಮ ಹುದ್ದೆಯನ್ನು ತ್ಯಜಿಸಿದ್ದು, ರೇವತಿ ಸಂಪತ್ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಅವರು ಲೈಂಗಿಕವಾಗಿ, ದೈಹಿಕವಾಗಿ ಮತ್ತು ಮಾನಸಿಕವಾಗಿ ನಿಂದಿಸಿದ್ದಾರೆ ಎಂದು ಹೇಳಿದ್ದಾರೆ.

ಮತ್ತೊಬ್ಬ ನಟಿ ಮಿನು ಮುನೀರ್, ಪ್ರಮುಖ ನಟರಾದ ಎಂ. ಮುಖೇಶ್, ಜಯಸೂರ್ಯ ಮತ್ತು ಇತರ ಇಬ್ಬರು 2013 ರಲ್ಲಿ ಚಲನಚಿತ್ರವೊಂದರ ಸೆಟ್‌ನಲ್ಲಿ ತನ್ನನ್ನು ದೈಹಿಕವಾಗಿ ಮತ್ತು ಮಾತಿನಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಶೂಟಿಂಗ್ ವೇಳೆ ನನಗೆ ಕಹಿ ಅನುಭವವಾಗಿದೆ. ನಾನು ರೆಸ್ಟ್ ರೂಂಗೆ ಹೋಗಿದ್ದೆ ಮತ್ತು ನಾನು ಹೊರಗೆ ಬಂದಾಗ ಜಯಸೂರ್ಯ ನನ್ನ ಒಪ್ಪಿಗೆಯಿಲ್ಲದೆ ನನ್ನನ್ನು ತಬ್ಬಿಕೊಂಡು ಮುತ್ತು ಕೊಟ್ಟರು. ನಾನು ಆಘಾತಕ್ಕೊಳಗಾಗಿ ಓಡಿಹೋದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Samantha Ruth Prabhu: ನೀವು ಪರಿಪೂರ್ಣ ತಂದೆಯಾಗುತ್ತೀರಿ; ನಾಗಚೈತನ್ಯ ಬಗ್ಗೆ ಸಮಂತಾ ಹೇಳಿದ ವಿಡಿಯೊ ವೈರಲ್

ಹಿರಿಯ ನಟ ಮಣಿಯನ್ ಪಿಳ್ಳರಾಜು ಅವರು ಆರೋಪಗಳ ತನಿಖೆಗೆ ಒತ್ತಾಯಿಸಿದ್ದು, ಆರೋಪಗಳ ಹಿಂದೆ ಬಹು ಪಟ್ಟಭದ್ರ ಹಿತಾಸಕ್ತಿಗಳಿವೆ ಎಂದು ಹೇಳಿದ್ದಾರೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎಲ್ಲ ಲೈಂಗಿಕ ದೌರ್ಜನ್ಯ ಆರೋಪಗಳ ತನಿಖೆಗೆ ಏಳು ಸದಸ್ಯರ ಎಸ್‌ಐಟಿಯನ್ನು ರಚಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Actor Chikkanna: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ ವಿಚಾರಣೆಗೆ ಹಾಜರು

ಕಳೆದ ಬಾರಿ ವಿಚಾರಣೆ ಬಳಿಕ ನಟ ದರ್ಶನ್ ಅವರನ್ನು ಕಾಣಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರಿಂದ ನಟ ಚಿಕ್ಕಣ್ಣನನ್ನು (Actor Chikkanna) ಮತ್ತೆ ಈ ಬಾರಿ ಎಸಿಪಿ ಚಂದನ್ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದ ನಟ ಚಿಕ್ಕಣ್ಣ ನ್ಯಾಯಾಧೀಶರ ಮುಂದೆಯೂ ಹಾಜರಾಗಿದ್ದರು. ಸಿಆರ್ ಪಿಸಿ 164 ಅಡಿಯಲ್ಲಿ ಅವರ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿತ್ತು.

VISTARANEWS.COM


on

By

Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿ ನಟ ಚಿಕ್ಕಣ್ಣ (Actor Chikkanna) ಬಸವೇಶ್ವರನಗರದಲ್ಲಿರುವ ತನಿಖಾಧಿಕಾರಿ ಮುಂದೆ ಗುರುವಾರ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಚಿಕ್ಕಣ್ಣ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾದರು.

ಕಳೆದ ಬಾರಿ ವಿಚಾರಣೆ ಬಳಿಕ ನಟ ದರ್ಶನ್ (actor darshan) ಅವರನ್ನು ಕಾಣಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರಿಂದ ನಟ ಚಿಕ್ಕಣ್ಣನನ್ನು ಮತ್ತೆ ಈ ಬಾರಿ ಎಸಿಪಿ ಚಂದನ್ ವಿಚಾರಣೆಗೆ ಕರೆದಿದ್ದಾರೆ ಎನ್ನಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದ ನಟ ಚಿಕ್ಕಣ್ಣ ನ್ಯಾಯಾಧೀಶರ ಮುಂದೆಯೂ ಹಾಜರಾಗಿದ್ದರು. ಸಿಆರ್ ಪಿಸಿ 164 ಅಡಿಯಲ್ಲಿ ಅವರ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿತ್ತು.

ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ನಟ ದರ್ಶನ್ ಭೇಟಿಗೆ ತೆರೆಳಿದ್ದ ನಟ ಚಿಕ್ಕಣ್ಣನ ಜೊತೆ ಈ ಸಂದರ್ಭದಲ್ಲಿ ಅಭಿಷೇಕ್ ಅಂಬರೀಶ್ , ಧನ್ವೀರ್ ಕೂಡ ಇದ್ದರು. ಅಲ್ಲಿ ದರ್ಶನ್ ಭೇಟಿ ಮಾಡಿ ಕೆಲಕಾಲ ಚಿಕ್ಕಣ್ಣ ಮಾತುಕತೆ ನಡೆಸಿದ್ದರು.
ನಟ ದರ್ಶನ್ ನನ್ನು ಭೇಟಿ ಮಾಡಿದ ಕಾರಣಕ್ಕಾಗಿ ಪೊಲೀಸರಿಂದ ಚಿಕ್ಕಣ್ಣಗೆ ನೊಟೀಸ್ ನೀಡಲಾಗಿತ್ತು.


ಪಾರ್ಟಿ ವಿಚಾರದಲ್ಲಿ ವಿಚಾರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೆಸ್ಟ್ ಆಗಿದ್ದ ನಟ ದರ್ಶನ್ ಜೊತೆ ಅದೇ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ ಅವರನ್ನು ಈ ಹಿಂದೆ ವಿಚಾರಣೆಗೆ ಒಳಪಡಿಸಲಾಗಿತ್ತು. ನಟ ಯಶಸ್‌ ಸೂರ್ಯ ಕೂಡ ಅಂದು ಕುಖ್ಯಾತ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ ನಲ್ಲಿ ಡಿ ಗ್ಯಾಂಗ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು.

ದರ್ಶನ್ ಆಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಲ್ಲದೇ ಹಲವು ಮಂದಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಅವರ ಹೇಳಿಕೆಗಳನ್ನು ದಾಖಲಿಸಿದ್ದಾರೆ. ಹೇಳಿಕೆ ನೀಡಿದವರನ್ನು ಸಾಕ್ಷಿಗಳಾಗಿ ಪರಿಗಣಿಸಲಾಗಿದೆ.

ಇದನ್ನೂ ಓದಿ: Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ನಟ ದರ್ಶನ್ ಜೊತೆ ಕೊಲೆಯ ದಿನ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣ ಅವರನ್ನು ಈ ಹಿಂದೆ ಮೂರು ಗಂಟೆಗಳ ಕಾಲ ವಿಶೇಷ ತನಿಖಾ ತಂಡ ವಿಚಾರಣೆ ನಡೆಸಿದೆ. ವಿಚಾರಣೆ ಸಂದರ್ಭದಲ್ಲಿ, ಅದೇ ದಿನ ತಾನು ದರ್ಶನ್ ಜೊತೆ ಪಾರ್ಟಿ ಮಾಡಿದ್ದು ನಿಜ ಎಂದು ಚಿಕ್ಕಣ್ಣ ಒಪ್ಪಿಕೊಂಡಿದ್ದರು.

Continue Reading

ಸ್ಯಾಂಡಲ್ ವುಡ್

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

Actor Darshan: ಪರಪ್ಪನ ಅಗ್ರಹಾರ ಜೈಲಿನೊಳಗೆ ಕೈದಿಗಳ ಜತೆಗೆ ಕಾಫಿ ಕಪ್‌ ಹಿಡಿದು ಸಿಗರೇಟು ಸೇದುತ್ತಾ ಕುಳಿತಿದ್ದ ಕಾರಣಕ್ಕೆ ಇದೀಗ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

VISTARANEWS.COM


on

By

Actor Darshan
Koo

ಬಳ್ಳಾರಿ/ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ (Chitradurga Renukaswamy murder case) ಬಂಧಿಯಾಗಿರುವ ನಟ ದರ್ಶನ್ (Actor Darshan) ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಇದೀಗ ಕೋರ್ಟ್‌ ಆದೇಶದ ಮೇರೆಗೆ ಬಳ್ಳಾರಿ ಜೈಲಿಗೆ (bellary jail) ಸ್ಥಳಾಂತರ ಆಗಿದ್ದಾರೆ. ಬಿಗಿ ಭದ್ರೆತೆಯೊಂದಿಗೆ ಪರಪ್ಪನ ಅಗ್ರಹಾರದಿಂದ ಬಳ್ಳಾರಿಗೆ ಜೈಲಿಗೆ ದರ್ಶನ್‌ನನ್ನು ಕರೆತರಲಾಯಿತು.

ಪೊಲೀಸರು ದರ್ಶನ್ ಇದ್ದ ವಾಹನಕ್ಕೆ ಸಂಪೂರ್ಣ ಬಟ್ಟೆ ಕಟ್ಟಿ ಯಾರಿಗೂ ಕಾಣಿಸಬಾರೆಂದು ಕರೆತಂದಿದ್ದರು. ಬಳ್ಳಾರಿ ಜೈಲಿಗೆ ಬಂದ ನಟ ದರ್ಶನ್‌ರಿಗೆ ಮೊದಲು ಮೆಡಿಕಲ್ ಚೆಕಪ್‌ಗೆ ಕರೆದೊಯ್ದಲಾಗಿತ್ತು. ಬಳಿಕ ದರ್ಶನ್‌ಗೆ ನಿಗದಿ ಮಾಡಿದ್ದ ಸೆಲ್‌ಗೆ ಬಿಡಲಾಗಿದೆ.

ಗಾಡಿಗೆ ಅಡ್ಡ ಬಂದ ಹಸುಗಳು

ನಟ ದರ್ಶನ್‌ ಕರೆತರುವಾಗ ಸೆಂಟ್ರಲ್ ಜೈಲ್ ರಸ್ತೆಯಲ್ಲಿ ಹತ್ತಾರು ಹಸುಗಳು ಅಡ್ಡಬಂದಿದ್ದವು. ಬಳಿಕ ಪೊಲೀಸ್‌ ಸಿಬ್ಬಂದಿಯೇ ಹಸುಗಳು ಬೇಗ ಹೋಗಲಿ ಎಂದು ಓಡಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಓಡಿಸುವ ವೇಳೆ ಬೆದರಿದ ಘಟನೆಯು ನಡೆದಿದೆ.

ಹೈದರ್‌ಬಾದ್‌ ರಸ್ತೆ ಮೂಲಕ ಬಳ್ಳಾರಿ ತಲುಪಿದ ಪೊಲೀಸರು

ಇನ್ನೂ ಪೊಲೀಸರು ಮಾಧ್ಯಮಗಳ ಕಣ್ತಪ್ಪಿಸಿ ದರ್ಶನ್‌ನನ್ನು ಹೈದರ್‌ಬಾದ್ ರಸ್ತೆಯಲ್ಲಿ ಕರೆದುಕೊಂಡು ಹೋದರು. ಬಳ್ಳಾರಿಗೆ ದೇವನಹಳ್ಳಿ, ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಮಾರ್ಗವಾಗಿ ಕರೆದುಕೊಂಡು ಹೋಗಿದ್ದಾರೆ. ಎರಡು ಬೊಲೇರೋ ಹಾಗೂ ಒಂದು ಟಿಟಿ ವಾಹನ ಪ್ರತ್ಯೇಕವಾಗಿ ಗುರುವಾರ ಬೆಳಗ್ಗೆ 5:28ಕ್ಕೆ ದೇವನಹಳ್ಳಿ ಟೋಲ್ ಪಾಸ್ ಆದ ದೃಶ್ಯ ಲಭ್ಯವಾಗಿದೆ. ದೇವನಹಳ್ಳಿ ಸಾದಹಳ್ಳಿ ಟೋಲ್‌ನಲ್ಲಿ ಪೊಲೀಸರಿಂದ ದರ್ಶನ್ ಕರೆದುಕೊಂಡು ಹೋಗುತ್ತಿರುವ ವಾಹನಗಳು ಪಾಸ್ ಮಾಡಿಕೊಟ್ಟಿದ್ದಾರೆ.

ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಿದ್ದು ಯಾಕಾಗಿ?

ಪರಪ್ಪನ ಅಗ್ರಹಾರ ಜೈಲಿನೊಳಗೆ ಕಾಫಿ ಕಪ್‌ ಹಿಡಿದು ಸಿಗರೇಟು ಸೇದುತ್ತಾ ಕೈದಿಗಳ ಜತೆಗೆ ಕುಳಿತಿರುವ ನಟ ದರ್ಶನ್‌ನ (Actor Darshan) ಫೋಟೊಗಳು ವೈರಲ್‌ ಆಗಿತ್ತು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ2 ಆರೋಪಿ ಆಗಿರುವ ನಟ ದರ್ಶನ್‌ ಮತ್ತು ಗ್ಯಾಂಗ್‌ ಬಂಧಿಯಾಗಿದೆ.

ಜೈಲಿನ ಒಳಗೆ ದರ್ಶನ್‌ ಬಿಂದಾಸ್‌ ಆಗಿದ್ದರು. ಬ್ಯಾರಕ್‌ನಿಂದ ಹೊರಗೆ ಚೇರ್‌ನಲ್ಲಿ ಕುಳಿತಿರುವ ನಟ ದರ್ಶನ್‌ ಬಲಗೈನಲ್ಲಿ ಕಪ್‌, ಎಡಗೈನಲ್ಲಿ ಸಿಗರೇಟ್‌ ಸೇದುವ ಫೋಟೋ ವೈರಲ್‌ ಆಗಿತ್ತು. ದರ್ಶನ್‌ ಜತೆಗೆ ವಿಲ್ಸನ್‌ ಗಾರ್ಡನ್‌ ನಾಗ, ಎ11 ಆರೋಪಿ ದರ್ಶನ್‌ ಮ್ಯಾನೇಜರ್‌ ನಾಗರಾಜ್‌, ಕುಳ್ಳ ಸೀನಾ ಒಟ್ಟಾಗಿ ಕೂತು ಹರಟೆ ಹೊಡೆದಿದ್ದರು.

ಯಾವ್ಯಾವ ಜೈಲಿಗೆ ಯಾರು?

  1. 1.ಬಳ್ಳಾರಿ‌ ಜೈಲಿಗೆ ದರ್ಶನ್
    2.ಮೈಸೂರು ಜೈಲಿಗೆ ಪವನ್, ರಾಘವೇಂದ್ರ ನಂದೀಶ್
  2. 3.ಶಿವಮೊಗ್ಗ ಜೈಲಿಗೆ ಜಗದೀಶ್, ಲಕ್ಷ್ಮಣ್
  3. 4.ಧಾರವಾಡ ಜೈಲಿಗೆ ಧನರಾಜ್
  4. 5.ವಿಜಯಪುರ ಜೈಲಿಗೆ ವಿನಯ್
  5. 6.ಕಲಬುರುಗಿ ಜೈಲಿಗೆ ನಾಗರಾಜ್
  6. 7.ಬೆಳಗಾವಿ ಜೈಲಿಗೆ ಪ್ರದೂಶ್

ಜೈಲು ಸಿಬ್ಬಂದಿ ಜತೆ ಅಳಲು ತೋಡಿಕೊಂಡ ದರ್ಶನ್

ಈಗಾಗಲೇ ಸೆರೆಮನೆ ವಾಸದ ಕಷ್ಟ ಅನುಭವಿಸಿರುವ ನಟ ದರ್ಶನ್ ಈ ಕುರಿತು ಜೈಲು ಸಿಬ್ಬಂದಿ ಜತೆ ದುಃಖ ವ್ಯಕ್ತಪಡಿಸಿದ್ದರು. ಇದೆಲ್ಲಾ ಬೇಕಿತ್ತಾ ನಂಗೆ ಎಂದು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ನಟ ದರ್ಶನ್ ಅಭಿನಯದ ಚೌಕ ಚಿತ್ರವನ್ನು ಈ ಹಿಂದೆ ಬಳ್ಳಾರಿ ಜೈಲಿನಲ್ಲಿಯೇ ಚಿತ್ರೀಕರಣ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಅಲ್ಲಿನ ಖೈದಿಗಳ ಜೊತೆ ನಟ ಸಹಜ ಮಾತುಕತೆ ನಡೆಸಿದ್ದರು. ಬಳ್ಳಾರಿ ಜೈಲಿನ ಕಷ್ಟಗಳು, ಅಲ್ಲಿನ ವಾತಾವರಣದ ಬಗ್ಗೆ ಅಲ್ಲಿನ ಖೈದಿಗಳಿಂದ ತಿಳಿದುಕೊಂಡಿರುವ ದರ್ಶನ್‌ಗೆ ಈಗ ತಾನೇ ಆ ಜೈಲಿಗೆ ಖೈದಿಯಾಗಿ ವರ್ಗಾವಣೆಯಾಗುತ್ತಿರುವುದು ಆತಂಕ ಹೆಚ್ಚಿಸಿದೆ ಎನ್ನಲಾಗಿದೆ.

ಸಾಮಾನ್ಯ ಸೆಲ್ ನಲ್ಲಿ ದರ್ಶನ್ ?

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ವಿಐಪಿ ಸೆಲ್‌ಗಳು ಇಲ್ಲ. ಇಲ್ಲಿ ಎಲ್ಲವೂ ಸಾಮಾನ್ಯ ಸೆಲ್‌ಗಳಾಗಿದೆ. ಹೀಗಾಗಿ ದರ್ಶನ್ ಕೂಡ‌ ಇಲ್ಲಿರುವ ಎಲ್ಲ ಕೈದಿಗಳಂತೆಯೇ ಸಾಮಾನ್ಯ ಕೈದಿಯಾಗಿ‌ ಮುಂದುವರಿಯಬೇಕಿದೆ. ಕೇಂದ್ರ ಕಾರಾಗೃಹದ ಹೊರ ಭದ್ರತಾ ವಿಭಾಗದ ಸೆಲ್‌ನಲ್ಲಿ ನಟ ದರ್ಶನ್ ಅವರನ್ನು ಇರಿಸಲಾಗುತ್ತದೆ. ಹೊರ ಭದ್ರತಾ ವಿಭಾಗದಲ್ಲಿ ಒಟ್ಟು 11 ಸೆಲ್‌ಗಳಿದ್ದು, ಒಂದು ಸೆಲ್‌ನಲ್ಲಿ ಇಬ್ಬರು ಕೈದಿಗಳು ಇರುವ ವ್ಯವಸ್ಥೆ ಇದೆ. ಪ್ರತಿಯೊಂದು ಸೆಲ್ 10/10 ಅಡಿ ಅಗಲವನ್ನು ಹೊಂದಿದೆ.

ಇಲ್ಲಿರುವ ಹನ್ನೊಂದು ಸೆಲ್‌ಗಳಿಗೆ ದಿನದ 24 ಗಂಟೆಯೂ ಭದ್ರತೆ ವ್ಯವಸ್ಥೆ ಮಾಡಲಾಗುತ್ತದೆ. ಸೆಲ್ ಮುಂಭಾಗ 20 ಅಡಿ ಅಗಲ 60 ಅಡಿ ಉದ್ದದ ಜಾಗದಲ್ಲಿ ವಾಕಿಂಗ್ ಮಾಡಬಹುದು. ಬೆಳಗ್ಗೆ ಮತ್ತು ಸಂಜೆ ವಾಕಿಂಗ್ ಮಾಡಲು 15 ನಿಮಿಷ ಅವಕಾಶವಿದೆ. ಈ ವೇಳೆ ಭದ್ರತೆ ಸಿಬ್ಬಂದಿ ಕೂಡ ಹಾಜರಿರುತ್ತಾರೆ. ಸೆಲ್‌ನ ಒಳಗಡೆ ಬಾತ್ ರೂಂ, ಶೌಚಾಲಯದ ವ್ಯವಸ್ಥೆ ಇದ್ದು, ಸ್ನಾನ ಮಾಡಲು ತಣ್ಣೀರು ಮಾತ್ರ ಇರುತ್ತದೆ. ಈ ಸೆಲ್‌ಗೆ ಎರಡು ಗೇಟ್‌ಗಳಿರುತ್ತವೆ. ಇಲ್ಲಿರುವ ಹನ್ನೊಂದು ಸೆಲ್ ಗಳಲ್ಲಿ ಸದ್ಯ ಶಿವಮೊಗ್ಗ, ಹಾಸನ,ಬೆಂಗಳೂರು, ಮಂಗಳೂರು ಮೂಲದ ಕೈದಿಗಳಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Kannada New Movie: ರಿಷಭ್ ಶೆಟ್ಟಿ ನಿರ್ಮಾಣದ ಪ್ರಮೋದ್ ಶೆಟ್ಟಿ ಅಭಿನಯದ “ಲಾಫಿಂಗ್ ಬುದ್ಧ” ಈ ವಾರ ತೆರೆಗೆ

ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ. ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರ (Kannada New Movie) ಈ ವಾರ ಬಿಡುಗಡೆಯಾಗುತ್ತಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ. ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರ (Kannada New Movie) ಈ ವಾರ ಬಿಡುಗಡೆಯಾಗುತ್ತಿದೆ.

ಪೊಲೀಸ್ ಅವರ ಕುಟುಂಬ ಹಾಗೂ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೇ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ.

ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ‌. ತೇಜು ಬೆಳವಾಡಿ ನಾಯಕಿಯಾಗಿ ನಟಿಸಿದ್ದಾರೆ. ದಿಗಂತ್ ಮಂಚಾಲೆ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಬರುವಿಕೆಯಿಂದ ಕಥೆಗೆ ಒಂದು ತಿರುವು ಸಿಗುತ್ತದೆ. ಹಿರಿಯ ನಟ ಸುಂದರರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಭದ್ರಾವತಿ, ಜೋಗ, ಸಾಗರ ಹಾಗೂ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ‌. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡು ಹಾಗೂ ಟ್ರೇಲರ್ ಮೆಚ್ಚುಗೆ ಪಡೆದುಕೊಂಡಿದೆ.

ಇದನ್ನೂ ಓದಿ: Bengaluru Power Cut: ಆ.29 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ವಿಷ್ಣು ವಿಜಯ್ ಸಂಗೀತ ನಿರ್ದೇಶನ, ಎಸ್. ಚಂದ್ರಶೇಖರನ್ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ ಹಾಗೂ ಧರಣಿ ಗಂಗೆಪುತ್ರ ಅವರ ಕಲಾ ನಿರ್ದೇಶನ “ಲಾಫಿಂಗ್ ಬುದ್ಧ” ಚಿತ್ರಕ್ಕಿದೆ.

Continue Reading

ಪ್ರಮುಖ ಸುದ್ದಿ

Actor Darshan: ದರ್ಶನ್ ಗ್ಯಾಂಗ್ ಬಂಧನ ಅವಧಿ ಸೆಪ್ಟೆಂಬರ್ 9 ರವರೆಗೆ ವಿಸ್ತರಣೆ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ (Actor Darshan) ಮತ್ತು ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಬುಧವಾರ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ನ್ಯಾಯಾಧೀಶರು ಆದೇಶ ನೀಡಿದರು.

VISTARANEWS.COM


on

By

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Chitradurga Renukaswamy murder case) ಸಂಬಂಧಿಸಿ ಸೆಪ್ಟೆಂಬರ್ 9 ರವರೆಗೆ ನಟ ದರ್ಶನ್ (Actor Darshan) ಮತ್ತು ಇತರ ಆರೋಪಿಗಳಿಗೆ ನ್ಯಾಯಾಂಗ ಬಂಧನ (Judicial custody) ಅವಧಿ ವಿಸ್ತರಣೆ ಮಾಡಿ 24 ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ದರ್ಶನ್ ಮತ್ತು ಗ್ಯಾಂಗ್ ನ ನ್ಯಾಯಾಂಗ ಬಂಧನ ಅವಧಿ ಬುಧವಾರ ಅಂತ್ಯವಾದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಜೈಲು ಅಧಿಕಾರಿಗಳು ಹಾಜರು ಪಡಿಸಿದರು.

ತುಮಕೂರು ಹಾಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ರೇಣುಕಾಸ್ವಾಮಿ ಕೊಲೆ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾದರು.

ಪವಿತ್ರ ಗೌಡ, ದರ್ಶನ್, ಪುಟ್ಟಸ್ವಾಮಿ ಅಲಿಯಾಸ್ ಪವನ್, ನಂದಿಶ್ ,ರಾಘವೇಂದ್ರ, ಲಕ್ಷ್ಮಣ, ದೀಪಕ್, ಪ್ರದೂಷ್, ಕಾರ್ತಿಕ್, ಕೇಶವಮೂರ್ತಿ, ನಿಖಿಲ್ ಹೆಸರು ಕರೆದು ಹಾಜರಾತಿ ತೆಗೆದುಕೊಂಡ ನ್ಯಾಯಾಧೀಶರು ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದರು.

ರಿಮ್ಯಾಂಡ್ ಅರ್ಜಿ ಸಲ್ಲಿಕೆ

ತಂದೆಗೆ ಕ್ಯಾನ್ಸರ್ ಇದೆ. ನನ್ನನ್ನು ಬೆಂಗಳೂರು ಜೈಲಿನಿಂದ ಶಿಪ್ಟ್ ಮಾಡಬೇಡಿ ಎಂದು ಪ್ರದೂಷ್ ಈ ಸಂದರ್ಭದಲ್ಲಿ ನ್ಯಾಯಾಧೀಶರ ಬಳಿ ಮನವಿ ಮಾಡಿದ್ದಾರೆ. ಆರೋಪಿ ಕುಟುಂಬಸ್ಥರಿಗೆ ಭೇಟಿಗೆ ಅವಕಾಶ ನೀಡುತ್ತಿದ್ದೀರಾ ಎಂದು ಜೈಲು ಸಿಬ್ಬಂದಿಗೆ ಜಡ್ಜ್ ಪ್ರಶ್ನಿಸಿದ್ದಾರೆ.

ಹೊಸ ಎಫ್ ಐಆರ್ ಗಳ ಸಂಬಂಧ ತನಿಖೆ ಹಂತದಲ್ಲಿ ಇರುವುದರಿಂದ ಯಾರಿಗೂ ಅವಕಾಶ ಕೊಡುತ್ತಿಲ್ಲ ಎಂದು ಜೈಲಾಧಿಕಾರಿಗಳು ಈ ಸಂದರ್ಭದಲ್ಲಿ ನ್ಯಾಯಾಧೀಶರಿಗೆ ತಿಳಿಸಿದ್ದಾರೆ.

ದಯವಿಟ್ಟು ನನ್ನ ಶಿಫ್ಟ್ ಮಾಡಬೇಡಿ ಸ್ವಾಮಿ.. ಎಂದು ಪರಿಪರಿಯಾಗಿ ಪ್ರದೂಷ್ ಈ ಸಂದರ್ಭದಲ್ಲಿ ಬೇಡಿಕೊಂಡರು. ನಾಗರಾಜ್ ಮತ್ತು ಲಕ್ಷ್ಮಣ್ ಕೂಡ ನಮ್ಮನ್ನು ಶಿಫ್ಟ್ ಮಾಡಬೇಡಿ ಎಂದು ಮನವಿ ಮಾಡಿದರು.

ಆಗ ಕುಟುಂಬಸ್ಥರ ಭೇಟಿಗೆ ಅವಕಾಶ ನೀಡಲು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಿದ ನ್ಯಾಯಾಧೀಶರು, ನಿಯಮಗಳು ಏನಿವೆಯೋ ಅದನ್ನು ಮಾಡಲಾಗುತ್ತದೆ ಎಂದು ಅವರಿಗೆ ಉತ್ತರಿಸಿದರು.

ಜೈಲು ಅಧಿಕಾರಿಗಳು ಅವರ ಪ್ರಕ್ರಿಯೆ ಅವರು ಮಾಡುತ್ತಾರೆ ಎಂದು ಹೇಳಿ ಆರೋಪಿಗಳ ಮನವಿಯನ್ನು ತಿರಸ್ಕರಿಸಿದರು.

ಪೊಲೀಸರ ಮನವಿ

ದರ್ಶನ್ ಗ್ಯಾಂಗ್ ನ್ಯಾಯಾಂಗ ಬಂಧನ ಮುಂದುವರಿಕೆಗೆ ಮನವಿ ಮಾಡಿದ ಪೊಲೀಸರು ನ್ಯಾಯಾಲಯದ ಮುಂದೆ ಹತ್ತು ಅಂಶಗಳನ್ನು ಪ್ರಸ್ತಾವಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಗಳ ಪಾತ್ರ ಎಲ್ಲ ರೀತಿಯಲ್ಲಿ‌ ಧೃಡವಾಗಿದೆ, ಕೇಸ್ ನಲ್ಲಿ ಇನ್ನೂ ಕೆಲ ಸಾಂದರ್ಭಿಕ ಸಾಕ್ಷಿಗಳ ಹೇಳಿಕೆ ಬಾಕಿ ಇದೆ, ಅಗತ್ಯವಿದ್ದರೆ 164 ಅಡಿ ಹೇಳಿಕೆ ದಾಖಲಿಸಬೇಕಿದೆ. ಸದ್ಯ ಆರೋಪಿಗಳಿಗೆ ಜಾಮೀನು ನೀಡಿದರೆ ಸಾಕ್ಷಿಗೆ ಬೆದರಿಕೆ ಸಾಧ್ಯತೆ, ವ್ಯವಸ್ಥಿತ ರೀತಿಯಲ್ಲಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಾಗಿರುತ್ತದೆ, ಪ್ರಭಾವಿ ಆರೋಪಿ ಮೃತನ ಕುಟುಂಬಕ್ಕೆ ಬೆದರಿಕೆ, ಆಮಿಷ ಸಾಧ್ಯತೆ, ಎಫ್ ಎಸ್ ಎಲ್ ವರದಿಯಲ್ಲಿ ಆರೋಪಿಗಳ ಪಾತ್ರ ಸಾಬೀತು, ಟೆಕ್ನಿಕಲ್ ಎವಿಡೆನ್ಸ್ ಬಗ್ಗೆ ಕೆಲ ವರದಿ ಬಾಕಿ‌ ಇದೆ. ಇನ್ನೂ ಕೆಲವು ವಸ್ತುಗಳ ಎಫ್ ಎಸ್ ಎಲ್ ಗೆ ಕಳುಹಿಸಿ ವರದಿ ಪಡೆಯಬೇಕು, ಈ ವೇಳೆ ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ನ್ಯಾಯಾಲಯಕ್ಕೆ ಪೊಲೀಸರು ಮನವಿ ಮಾಡಿದ್ದಾರೆ.

ಜೈಲು ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ

ನಟ ದರ್ಶನ ಜೈಲಿನಲ್ಲಿ ಕಾಫಿ ಕುಡಿದ ಪೋಟೋ ವೈರಲ್ ವಿಷಯಕ್ಕೆ ಸಂಬಂಧಿಸಿ ದರ್ಶನ ಪರ ವಕೀಲ ಅನೀಲ್ ಬಾಬು ಪ್ರತಿಕ್ರಿಯಿಸಿದ್ದು, ಇದು ಜೈಲಿನಲ್ಲಿ ಇರುವ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ಎಂದು ಹೇಳಿದ್ದಾರೆ.

ಪೋಟೋ ಹಾಗೂ ವಿಡಿಯೋ ಲೀಕ್ ಅಗಿರೋದಕ್ಕೆ ಜೈಲ್ ಅಧಿಕಾರಿಗಳೇ ನೇರ ಕಾರಣ. ಜೈಲಿನ ಸಿಬ್ಬಂದಿ ಎಲ್ಲಾ ರೀತಿಯ ಚೆಕ್ ಮಾಡಬೇಕು. ಯಾರೋ ಒಬ್ಬರು ವಿಡಿಯೋ ಕಾಲ್ ಮಾಡಿ ಹಾಯ್ ಅನ್ನು ಅಂತ ಹೇಳಿದರೆ ಅದಕ್ಕೆ ದರ್ಶನ ಹಾಯ್ ಅಂತ ಹೇಳಿದ್ದಾರೆ. ಇದು ದರ್ಶನ ತಪ್ಪಲ್ಲ. ಅವರಿಗೂ ತಿಳಿಯದೇ ಆಗಿರೋ ಘಟನೆ ಎಂದಿದ್ದಾರೆ.

ಇನ್ನೂ ಜೈಲಿನಲ್ಲಿ ಕುರ್ಚಿ, ಕಾಫಿ ಕಪ್ ಹೇಗೆ ಬಂತು ಅಂತ ಅಧಿಕಾರಿಗಳು ವಿಚಾರಣೆ ಮಾಡಬೇಕು. ಇದಕ್ಕೆ ದರ್ಶನ ಕಾರಣ ಅಂದ್ರೆ ತಪ್ಪು. ಇನ್ನೂ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುತ್ತಿದ್ದಾರೆ ಇದು ಕೋರ್ಟ್ ಅದೇಶ. ಇದಕ್ಕೆ ನಮ್ಮ ಅಭ್ಯಂತರ ಇಲ್ಲ. ಅಧಿಕಾರಿಗಳ ತಪ್ಪಿಗೆ ಈ ರೀತಿಯ ಶಿಕ್ಷೆ ಅಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Actor Darshan: ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ: ಪೊಲೀಸ್ ತನಿಖೆ ಶುರು

ಇನ್ನೂ ಜೈಲಿನಲ್ಲಿ ರೌಡಿಗಳ ಜೊತೆ ಸ್ನೇಹ ಸಂಬಂಧ ಇದೆ ಅಂತಾರೆ. ಆದರೆ ದರ್ಶನ ಗೆ ಇವರು ಯಾರು ಮೊದಲಿನಿಂದ ಪರಿಚಯ ಇಲ್ಲ. ಜೈಲಿನಲ್ಲಿ ಪರಿಚಯ ಅಗಿದೆ ಅಷ್ಟೆ. ಚಾರ್ಜ್ ಶೀಟ್ ಸಲ್ಲಿಕೆ ಮಾಡ್ಲಿ. ವಾದ ಮಾಡಿ ದರ್ಶನ ನಿರಪರಾಧಿ ಅಂತ ಹೊರಗೆ ತರುತ್ತೇವೆ ಎಂದರು.

Continue Reading
Advertisement
Deepfake Video
ವೈರಲ್ ನ್ಯೂಸ್19 mins ago

Deepfake Video: ಶುಬ್ ಮನ್ ಗಿಲ್ ಅನ್ನು ದೂಷಿಸಿದ ವಿರಾಟ್; ಡೀಪ್ ಫೇಕ್ ವಿಡಿಯೋ ವೈರಲ್

Road Accident
ಬೆಂಗಳೂರು19 mins ago

Road Accident : ಚಾಲುಕ್ಯ ಸರ್ಕಲ್‌ನಲ್ಲಿ ಸೈಕಲ್‌ ಸವಾರನಿಗೆ ಲಾರಿ ಡಿಕ್ಕಿ; ಹೊರಬಂತು ಮೆದುಳು!

Actor Chikkanna
ಪ್ರಮುಖ ಸುದ್ದಿ34 mins ago

Actor Chikkanna: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ ವಿಚಾರಣೆಗೆ ಹಾಜರು

Actor Darshan
ಸ್ಯಾಂಡಲ್ ವುಡ್1 hour ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

Hair Combing
ಆರೋಗ್ಯ5 hours ago

Hair Combing: ಕೂದಲು ಬಾಚುವ ಅಭ್ಯಾಸವಿಲ್ಲವೇ? ಹಾಗಾದರೆ ಇದನ್ನೊಮ್ಮೆ ಓದಿ!

dhavala dharini column Hanuman's setubandha to meet Sugriva in ramayana by narayana yaji
ಅಂಕಣ5 hours ago

ಧವಳ ಧಾರಿಣಿ ಅಂಕಣ: ಸುಗ್ರೀವನ ಭೇಟಿಗೆ ಹನುಮಂತನ ಸೇತುಬಂಧ ಹೇಗಿತ್ತು?

karnataka weather Forecast
ಮಳೆ6 hours ago

Karnataka Weather : ಬೆಂಗಳೂರಿನಲ್ಲಿ ಘಳಿಗೆವೊಂದು ವಾತಾವರಣ; ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ7 hours ago

Dina Bhavishya: ಈ ದಿನ ಆತ್ಮೀಯರೊಂದಿಗೆ ಕಾಲ ಕಳೆಯುವಿರಿ; ಆದ್ರೆ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ

Murder Case
ಬೆಂಗಳೂರು15 hours ago

Murder Case: ಶೀಲ ಶಂಕೆ; ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಭೀಕರ ಹತ್ಯೆ

Actor Darshan
ಬೆಂಗಳೂರು16 hours ago

Actor Darshan: ಪವಿತ್ರಾಗೌಡ ಜಾಮೀನು ಅರ್ಜಿಯ ಭವಿಷ್ಯ ಆ.31ಕ್ಕೆ ನಿರ್ಧಾರ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Actor Darshan
ಸ್ಯಾಂಡಲ್ ವುಡ್1 hour ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ5 days ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ4 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

ಟ್ರೆಂಡಿಂಗ್‌