Movie Review | 777 ಚಾರ್ಲಿ ಪ್ರೀತಿಯ ಜರ್ನಿಯಲ್ಲಿ ನಗುವಿದೆ, ಕಣ್ಣೀರಿದೆ, ಮೌನವೂ ಇದೆ! Vistara News
Connect with us

ಪ್ರಮುಖ ಸುದ್ದಿ

Movie Review | 777 ಚಾರ್ಲಿ ಪ್ರೀತಿಯ ಜರ್ನಿಯಲ್ಲಿ ನಗುವಿದೆ, ಕಣ್ಣೀರಿದೆ, ಮೌನವೂ ಇದೆ!

777 ಚಾರ್ಲಿ ಪ್ರಪಂಚಕ್ಕೆ ಒಮ್ಮೆ ಹೋಗಿ ಬಂದರೆ ಹತ್ತಾರು ಸಂಗತಿಗಳು ಕಾಡುತ್ತವೆ. ಆದರೆ ಅದಾವುದರ ಬಗ್ಗೆಯೂ ಮಾತನಾಡಲು ಆಗುವುದಿಲ್ಲ. ಒಂದು ಗಾಢ ಮೌನ ಮಾತ್ರ ಉಳಿದಿರುತ್ತದೆ.

VISTARANEWS.COM


on

777 ಚಾರ್ಲಿ
Koo

ಬೆಂಗಳೂರು: ಜೋರಾಗಿ ಸುರಿದ ಮಳೆ ಒಂದು ಘಳಿಗೆಯಲ್ಲಿ ನಿಂತು ಮೌನವಾಗುತ್ತದೆ. ಕದಡಿದ ನೀರು ಸ್ವಲ್ಪ ಸಮಯ ಹಾಗೇ ಬಿಟ್ಟರೆ ತಣ್ಣಗೆ ಶಾಂತವಾಗುತ್ತದೆ. ಆಗೆಲ್ಲ ಒಂದು ಮೌನ ಕಾಡುತ್ತದೆ. ಮನಸ್ಸಿನ ಒಂದು ಭಾರ ಇಳಿದಾಗ ಕಾಡುವ ಮೌನವೇ 777 ಚಾರ್ಲಿ ಸಿನಿಮಾ. ಎಲ್ಲೆಡೆ ಸದ್ದುಗದ್ದಲ, ವೈಲೆನ್ಸ್‌ ತುಂಬಿರುವ ಸಿನಿಮಾಗಳು ಪ್ಯಾನ್‌ ಇಂಡಿಯಾ ವ್ಯಾಪಿಸುತ್ತಿರುವುದರ ನಡುವೆ ʼಚಾರ್ಲಿʼಯ ಮೌನ ಇಡೀ ದೇಶವನ್ನೇ ಆವರಿಸಿದೆ.

ಚಿತ್ರ: 777 ಚಾರ್ಲಿ
ನಿರ್ದೇಶನ: ಕಿರಣ್‌ರಾಜ್
ನಿರ್ಮಾಣ: ಪರಂವಾಃ ಸ್ಟುಡಿಯೋಸ್
ನಿರ್ಮಾಪಕ: ರಕ್ಷಿತ್‌ ಶೆಟ್ಟಿ, ಜಿ.ಎಸ್‌ ಗುಪ್ತಾ
ಸಂಗೀತ: ನೊಬಿನ ಪೌಲ್
ಛಾಯಾಗ್ರಹಣ: ಅರವಿಂದ್
ತಾರಾಗಣ: ರಕ್ಷಿತ್‌ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್‌ ಬಿ ಶೆಟ್ಟಿ, ಅಭಿಜಿತ್‌ ಮಹೇಶ್‌, ಭಾರ್ಗವಿ ನಾರಾಯಣ್‌, ಬಾಬ್ಬಿ ಸಿಂಹ
ರೇಟಿಂಗ್:‌ 4/5

ಧರ್ಮನ ಜರ್ನಿಗೆ ಜತೆಯಾದ ಚಾರ್ಲಿ

ನಾನು. ನನ್ನ ಕೆಲಸ. ನನ್ನ ಮನೆ. ಮತ್ತೆ ಗಲಾಟೆ. ಪ್ರಪಂಚದಲ್ಲಿ ಇವಿಷ್ಟು ಬಿಟ್ಟರೆ ಬೇರೆ ಏನೂ ಇಲ್ಲವೆಂಬಂತೆ ಬದುಕುತ್ತಿರುವ ವ್ಯಕ್ತಿ ಧರ್ಮ. ಆತನ ವ್ಯಕ್ತಿತ್ವದ ಒಂದು ಪರಿಚಯ ನೀಡುವುದಾದರೆ ಆತನ ಬಳಿ ಯಾರೇ ಸಹಾಯ ಕೇಳಿಕೊಂಡು ಬಂದರೂ ಆತ ಹಾಗೇ ಕಳುಹಿಸುವುದಿಲ್ಲ. ಕ್ಯಾಕರಿಸಿ ಉಗ್ದೇ ಕಳ್ಸೋದು. ಇದು ಆತನ ಬಗ್ಗೆ ಆತನೇ ಮಾಡಿಕೊಂಡ ಪರಿಚಯ. ಸದಾ ಕಾಲ ಕೆಂಡದಂತೆ ಕಾದಿರುವ ವ್ಯಕ್ತಿತ್ವ ಅವನದ್ದು. ಅವನ ಸುತ್ತಲಿನ ವಾತಾವರಣ ಖುಷಿಯಿಂದಿದ್ದರೂ ಆತ ನಗುವುದಿಲ್ಲ. ಅವನ ಮನಸ್ಸಿನಲ್ಲಿ ಬೆಟ್ಟದಷ್ಟು ನೋವಿದ್ದರೂ ಆತ ಅಳುವುದಿಲ್ಲ. ಅದಕ್ಕೆ ಕಾರಣ ಅವನ ಜೀವನದಲ್ಲಿ ನಡೆದ ಒಂದು ಕಹಿ ಘಟನೆ. ಒಂದು ಘಟನೆ ಮನುಷ್ಯನನ್ನು ಹೇಗೆ ಬೇಕಾದರೂ ಬದಲಾಯಿಸಬಹುದು ಎಂಬುದಕ್ಕೆ ಧರ್ಮನ ಬದುಕು ಉದಾಹರಣೆ.

ಇಂತಹ ರಫ್‌ ವ್ಯಕ್ತಿ ಧರ್ಮನ ಬದುಕಿನಲ್ಲಿ ಚಾರ್ಲಿ ನಗು ತುಂಬುತ್ತದೆ. ಭಾವನೆಗಳನ್ನು ಮರೆತಿದ್ದ ಧರ್ಮನ ಮನಸ್ಸಿಗೆ ಭಾವ ತುಂಬುತ್ತದೆ. ಪ್ರೀತಿ ಎಂದರೆ ಹಾಗೇ ಅಲ್ಲವೇ? ಅದು ಎಲ್ಲಿ? ಯಾವಾಗ? ಹೇಗೆ ದಕ್ಕುತ್ತದೆ ಎಂದು ಹೇಳಲಸಾಧ್ಯ. ಮನುಷ್ಯನ ಪ್ರೀತಿ ಮಾತ್ರವಲ್ಲ, ಪ್ರಾಣಿಗಳ ಸಾಂಗತ್ಯವೂ ಅದೇ ರೀತಿ. ನೀವು ನಿಜಕ್ಕೂ ಅದೃಷ್ಟವಂತರಾಗಿದ್ದರೆ ನಿಮ್ಮ ಬಾಳಿನಲ್ಲಿಯೂ ಒಂದು ನಾಯಿ ಆಗಮಿಸುತ್ತದೆ. ನಿಮ್ಮ ಬದುಕನ್ನು ಸುಂದರವಾಗಿಸುತ್ತದೆ. ಇದನ್ನು ತೋರಿಸಿಕೊಟ್ಟಿದ್ದು ಚಾರ್ಲಿ. ಯಾವುದೋ ಒಂದು ಹಂತದಲ್ಲಿ ಧರ್ಮನ ಬದುಕಿಗೆ ಬರುವ ಚಾರ್ಲಿ ಆತನನ್ನು ನಗಿಸುತ್ತದೆ, ಕುಣಿಸುತ್ತದೆ, ನೋಯಿಸುತ್ತದೆ, ಕಣ್ಣೀರು ತರಿಸುತ್ತದೆ, ಭಾವನೆಗಳನ್ನು ಆತನಲ್ಲಿ ತುಂಬುತ್ತದೆ. ಮನಸೆಳೆಯುವಂತಹ ಮುದ್ದಾದ ಪಾತ್ರ ಚಾರ್ಲಿ. ಈಗಾಗಲೇ ಟ್ರೈಲರ್‌ ನೋಡಿದವರಿಗೆ ಚಾರ್ಲಿಯ ಮೇಲೆ ಪ್ರೀತಿ ಹುಟ್ಟಿರುವುದಂತೂ ಖಚಿತ.

ಇವರಿಬ್ಬರ ಒಂದು ಅಡ್ವೆಂಚರ್‌ ಪಯಣವೇ ಈ ಸಿನಿಮಾ. ಈ ಪಯಣದಲ್ಲಿ ಧರ್ಮ ಬದಲಾದ ರೀತಿ, ಚಾರ್ಲಿ ಆತನನ್ನು ಪ್ರೀತಿಸುವ ಪರಿ ನಿಜಕ್ಕೂ ಅಚ್ಚರಿ ಮೂಡಿಸುವಂಥದ್ದು. ಮನುಷ್ಯನ ಪ್ರೀತಿಗಿಂತಲೂ ಒಂದು ಪ್ರಾಣಿಯ ಪ್ರೀತಿ ಹೇಗೆ ಶ್ರೇಷ್ಠವಾದದ್ದು ಎಂದು ನಿರ್ದೇಶಕ ಕಿರಣ್‌ರಾಜ್‌ ಅದ್ಭುತವಾಗಿ ನಿರೂಪಿಸಿದ್ದಾರೆ.

ಪ್ರತಿ ದಿನ ಇಡ್ಲಿ ನೀಡುವ ಅಜ್ಜಿ ಹಾಗೂ ಧರ್ಮನ ನಡುವಿನ ಅವ್ಯಕ್ತ ಬಾಂಧವ್ಯ, ಚಾರ್ಲಿ ಹಾಗೂ ಧರ್ಮನ ಜರ್ನಿಗೆ ಸಾಕ್ಷಿಯಾದ ಜನರ ಅಕ್ಕರೆ, ಎಲ್ಲವೂ ನೆನಪಪಿನಲ್ಲಿ ಉಳಿಯುವಂತೆ ಕಿರಣ್‌ರಾಜ್ ಚಿತ್ರಿಸಿದ್ದಾರೆ.‌

ಇವರಿಬ್ಬರ ಜರ್ನಿಗೆ ನೀವು ಯಾಕೆ ಸಾಕ್ಷಿಯಾಗಬೇಕು?

ಇದು ಧರ್ಮನ ಕಥೆ. ಚಾರ್ಲಿ ಎಂಬ ಮುದ್ದಾದ ನಾಯಿ ಈ ಕಥೆಯ ಆತ್ಮ. ಆದರೆ, ಇದು ಯಾವುದೋ ಒಂದು ಸನ್ನಿವೇಶದಲ್ಲಿ ನಿಮ್ಮದೇ ಕಥೆಯಾಗಿ ಕಾಣುತ್ತದೆ. ನಿಮ್ಮಲ್ಲಿ ಒಬ್ಬ ಧರ್ಮನಿರಬಹುದು, ನಿಮ್ಮ ಬಾಳಿಗೆ ಒಂದು ಚಾರ್ಲಿ ಪ್ರವೇಶಿಸಬಹುದು ಎಂಬಷ್ಟು ಆಪ್ತವಾಗಿರುವ ಪಯಣ ಇವರದ್ದು.
ಧರ್ಮನ ಪಾತ್ರವನ್ನು ಧರಿಸಿದ ರಕ್ಷಿತ್‌ ಶೆಟ್ಟಿ ಅವರ ಅಭಿನಯ ಶ್ಲಾಘನೀಯ. ಸಂಗೀತಾ ಶೃಂಗೇರಿ, ರಾಜ್‌ ಬಿ ಶೆಟ್ಟಿ, ಅಭಿಜಿತ್‌ ಮಹೇಶ್‌, ಭಾರ್ಗವಿ ನಾರಾಯಣ್‌, ಬಾಬ್ಬಿ ಸಿಂಹ ಅವರ ಅಭಿನಯ ಚಿತ್ರವನ್ನು ಜೀವಂತವಾಗಿರಿಸಿದೆ. ಪುಟ್ಟ ಹುಡುಗಿ ಶಾರ್ವರಿಯ ಮುದ್ದಾದ ನಟನೆ ಮನದಲ್ಲಿ ಅಚ್ಚಾಗಿ ಉಳಿಯುತ್ತದೆ.
ಕ್ಯಾಮೆರಾ ಹಿಂದೆ ಅರವಿಂದ ಕಶ್ಯಪ್‌ ಮೋಡಿ ಮಾಡಿದರೆ, ಸಂಗೀತದಲ್ಲಿ ನೊಬಿನ್‌ ಪೌಲ್‌ ಒಂದು ಮ್ಯಾಜಿಕ್‌ ಮಾಡಿದ್ದಾರೆ. ಹಾಡುಗಳು ಆಗಾಗ ಗುನುಗುತ್ತಿರಬೇಕು ಅನ್ನಿಸುತ್ತದೆ.
ಈ ಸಿನಿಮಾ ನಗು ಮತ್ತು ಅಳುವಿನ ಸಮ್ಮಿಲನ. ಮೊದಲಾರ್ಧದಲ್ಲಿ ತಮಾಷೆಯ ಮಾತುಗಳು ಮನಃಪೂರ್ತಿಯಾಗಿ ನಗಿಸುತ್ತದೆ. ದ್ವಿತೀಯಾರ್ಧದಲ್ಲಿ ಅಷ್ಟೇ ತೀವ್ರವಾದ ಭಾವನೆಗಳು ತುಂಬಿಕೊಂಡಿವೆ. ಉತ್ತಮ ಸಂಭಾಷಣೆ ಚಿತ್ರದ ಶಕ್ತಿ. ಒಂದಿಷ್ಟು ಕೌಂಟರ್‌ ಡೈಲಾಗ್ಸ್‌ ಹಾಗೂ ಫಿಲಾಸಾಫಿಕಲ್‌ ಟಚ್‌ ಇರುವ ಮಾತುಕತೆ ಇಲ್ಲಿದೆ.

777 ಚಾರ್ಲಿ

ಈ ಚಿತ್ರವನ್ನು ಅನುಭವಿಸುವುದು ಹೇಗೆ?

ಚಾರ್ಲಿ ಒಂದು ಸಿನಿಮಾ ಎನ್ನುವುದಕ್ಕಿಂತ ಇದೊಂದು ಎಮೊಷನ್.‌ ಎರಡೂವರೆ ಗಂಟೆ ನಿಮ್ಮನ್ನು ಚಾರ್ಲಿ ತನ್ನ ಪ್ರಪಂಚದಲ್ಲಿ ಹಿಡಿದಿಟ್ಟುಕೊಳ್ಳುತ್ತದೆ. ಕೆಲವು ಸನ್ನಿವೇಶಗಳಲ್ಲಿ ಲಾಜಿಕ್‌ ಮಿಸ್‌ ಆಗಿದೆ, ಕೆಲವು ಹಾಡುಗಳು ಕೇವಲ ಇಂಗ್ಲಿಷ್‌ ಇರುವುದರಿಂದ ಹಿಡಿಸುವುದಿಲ್ಲ, ಚಿತ್ರ ಮುಗಿದ ಮೇಲೆ ಮನಸ್ಸಿನಲ್ಲಿ ಉಳಿಯುವಂತಹ ಸಂಗತಿ ಇದರಲ್ಲಿ ಇಲ್ಲ ಎಂಬ ಟೀಕೆಯಿಂದ ದೂರ ನಿಂತು ಚಿತ್ರವನ್ನು ನೋಡಿ ಆನಂದಿಸಬೇಕು. ಈ ಚೌಕಟ್ಟಿನಲ್ಲಿ ನೋಡಿದರೆ ಚಿತ್ರದ ಸ್ವಾರಸ್ಯ ಸತ್ತುಹೋಗುತ್ತದೆ. ಈ ಸಿನಿಮಾ ಅವುಗಳನ್ನು ಮೀರಿದ್ದು. ಇದೊಂದು ವಿಸ್ಮಯಕಾರಿ ಪಯಣ.

ಸಿನಿಮಾದ ಅಂತ್ಯದಲ್ಲಿ ಮನದಲ್ಲಿ ಉಳಿಯುವುದು ಒಂದು ಗಾಢವಾದ ಮೌನ. ಒಂದು ಹನಿ ಕಣ್ಣೀರು. ಆಳವಾದ ತಳಮಳ.

ಇದನ್ನೂ ಓದಿ: Movie Review: Vikram | ತೆರೆಯ ಮೇಲೆ ಘಟಾನುಘಟಿಗಳ ತ್ರಿವಿಕ್ರಮ, ಕ್ಷಣ ಕ್ಷಣವೂ ರೋಚಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಆರೋಗ್ಯ

Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!

Chamarajanagar oxygen tragedy: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 2021ರಲ್ಲಿ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್‌ ಕೊರತೆಯಾಗಿ ಮೇ 2ರಂದು 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌, ಈ ಪ್ರಕರಣವನ್ನು ತನಿಖೆಗೆ ಆಗ್ರಹಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.

VISTARANEWS.COM


on

Edited by

Chamarajanagar oxygen tragedy and Dinesh Gundu Rao
Koo

ಬೆಂಗಳೂರು: ‌ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಹಾಗೂ ಕೋವಿಡ್‌ (Covid 19) ಸಂದರ್ಭದಲ್ಲಿ ನಡೆದ ಕೆಲವು ಸಂಗತಿಗಳ ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಹಿನ್ನೆಲೆಯಲ್ಲಿ 2021ರಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ (Chamarajanagar oxygen tragedy) ಪ್ರಕರಣದ ಮರು ತನಿಖೆಗೆ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಮುಂದಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಾತನಾಡಿ, ಈ ಘಟನೆಯು ಎರಡು ಇಲಾಖೆಗೆ ಒಳಪಡುತ್ತದೆ. ಹಾಗಾಗಿ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ (Health Department) ಸಮನ್ವಯತೆ ಇರುವುದರಿಂದ ತನಿಖೆಯನ್ನು ಮಾಡಬೇಕಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ದಿನೇಶ್‌ ಗುಂಡೂರಾವ್‌, ಈ ಹಿಂದಿನ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದರೆ, ಆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ ಹೊಸ ಸರ್ಕಾರ ಬಂದಿರುವುದರಿಂದ ನಾವು ಮರು ತನಿಖೆಗೆ ನಿರ್ಧಾರ ಮಾಡಿದ್ದೇವೆ. ಮರು ತನಿಖೆಗೆ ಸರ್ಕಾರಕ್ಕೆ ಹೇಳಿದ್ದೇನೆ. ಅದಕ್ಕೆ ಡಿಪಿಆರ್ ಕೂಡ ಸಿದ್ಧವಾಗುತ್ತಿದೆ ಎಂದು ತಿಳಿಸಿದರು.

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ರೋಗಿಗಳಿಗೆ ಆಕ್ಸಿಜನ್‌ ಕೊರತೆಯಾಗಿ 36 ಕೊರೊನಾ ರೋಗಿಗಳು ಮೃತಪಟ್ಟಿದ್ದರು. ಈ ಬಗ್ಗೆ ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌, ಈ ಪ್ರಕರಣವನ್ನು ತನಿಖೆಗೆ ಆದೇಶಿಸಿತ್ತು. ಈಗ ಅಧಿಕಾರಕ್ಕೆ ಬಂದೊಡನೆ ಈ ಪ್ರಕರಣದ ತನಿಖೆಗೆ ಮುಂದಾಗಿದೆ.

ಇದನ್ನೂ ಓದಿ: Electricity Bill: ನೇಕಾರರಿಗೆ ಶಾಕ್!‌ 90 ರೂಪಾಯಿ ಮಿನಿಮಮ್ ಚಾರ್ಜ್‌ 140ಕ್ಕೆ ಏರಿಕೆ; ಇದು ಗ್ಯಾರಂಟಿ ಎಫೆಕ್ಟಾ?

ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕ ಆಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ದಿನೇಶ್ ಗುಂಡೂರಾವ್, ದಕ್ಷಿಣ ಕನ್ನಡ ಪ್ರಜ್ಞಾವಂತ ಜಿಲ್ಲೆಯಾಗಿದೆ. ನಾನು ಯಾವ ಜಿಲ್ಲೆಗೂ ಬೇಡಿಕೆ ಇಟ್ಟಿರಲಿಲ್ಲ. ಇದು ಮುಖ್ಯಮಂತ್ರಿಗಳ ನಿರ್ಧಾರವಾಗಿದೆ. ಯಾವ ಜಿಲ್ಲೆಗೆ ಹೋದರೂ ಕೆಲಸ ಮಾಡಬೇಕು. ದಕ್ಷಿಣ ಕನ್ನಡದಲ್ಲಿ ಜನ ಸಹೋದರತೆಯಿಂದ ಬದುಕಿ ಬಾಳಬೇಕು. ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಬೇಕಿದೆ. ಅಲ್ಲಿ ಶಾಂತಿ ಸೌಹರ್ದತೆ ನೆಲೆಸಬೇಕಿದೆ. ಅ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಕೋವಿಡ್ ಅವಧಿಯ ಟೆಂಡರ್‌ಗಳ ಮರು ಪರಿಶೀಲನೆ ಮಾಡಾಗುತ್ತದೆ. ಅನುಮಾನ ಬಂದ ಟೆಂಡರ್‌ಗಳ ತನಿಖೆ ಮಾಡುತ್ತೇವೆ. ಹೆಚ್ಚು ಬಿಡ್ ಮಾಡಿರುವ ಟೆಂಡರ್‌ಗಳನ್ನು ಪರಿಶೀಲಿಸಲು ಕ್ರಮ ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಈ ಹಿಂದೆ ಕರೆಯಲಾಗಿದ್ದ 108 ಆಂಬ್ಯುಲೆನ್ಸ್ ಟೆಂಡರ್ ಮತ್ತು ಡಯಾಲಿಸಿಸ್ ಟೆಂಡರ್ ಅನ್ನು ರದ್ದುಪಡಿಸಿದ್ದು, ಮರು ಟೆಂಡರ್ ಕರೆಯುತ್ತೇವೆ. ಜಿವಿಕೆ ಮೇಲೆ ಆರೋಪ ಬಂದಿರುವ ಕಾರಣ ಈ ಕ್ರಮ ತೆಗೆದುಕೊಂಡಿದ್ದೇವೆ. ಮುಂದಿನ ದಿನಗಳಲ್ಲಿ ಟೆಂಡರ್ ‌ಕರೆಯುತ್ತೇವೆ ಎಂದು ಹೇಳಿದರು.

ಅಧಿಕಾರಿಗಳಿಗೆ ತರಾಟೆ

ಆರೋಗ್ಯ ಇಲಾಖೆಯಲ್ಲಿ ಅಧಿಕಾರಿಗಳ ಜತೆ ಸಭೆ ಮುಂದುವರಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ವೇಳೆ ಸಚಿವ ದಿನೇಶ್‌ ಗುಂಡೂರಾವ್‌ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಗಳಲ್ಲಿ ಸಾವಾದರೆ ನಾನು ಸಹಿಸೋದಿಲ್ಲ. ಯಾರದ್ದೇ ತಪ್ಪು ಕಂಡುಬಂದರೂ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇನೆ. ಈ ವಿಚಾರವಾಗಿ ಯಾವುದೇ ರಾಜಕೀಯ ಒತ್ತಡ ತಂದರೂ ಪ್ರಯೋಜನ ಇಲ್ಲ. ರಾಜಕೀಯ ಒತ್ತಡ ತಂದರೆ ಅದರ ಮುಂದಿನ ಪರಿಣಾಮವನ್ನು ನೀವೇ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್‌ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!

ಈ ಹಿಂದೆ ಡಯಾಬಿಟಿಕ್ ಸಮೀಕ್ಷೆ ನಡೆಸಲಾಗಿತ್ತು. ಈ ವೇಳೆ ಜಿರೋ ಡಯಾಬಿಟಿಕ್ ಎಂದು ಯಾದಗಿರಿ ಜಿಲ್ಲೆಯಲ್ಲಿ ವರದಿ ನೀಡಲಾಗಿದೆ. ಆದರೆ, ಇಂತಹ ತಪ್ಪು ಮಾಹಿತಿಗಳನ್ನು ಕೊಡಬಾರದು ಎಂದು ಇದೇ ವೇಳೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಚಿವ ದಿನೇಶ್‌ ಗುಂಡೂರಾವ್‌ ಎಚ್ಚರಿಕೆ ನೀಡಿದರು.

Continue Reading

ಕರ್ನಾಟಕ

Manja Thread: ಯಾರೋ ಹಾರಿಸಿದ ಗಾಳಿಪಟದ ಮಾಂಜಾ ದಾರ ತೆಗೆಯಿತು ಅಮಾಯಕನ ಪ್ರಾಣ!

Manja Thread: ಇದುವರೆಗೂ ಪಕ್ಷಿಗಳ ಪ್ರಾಣ ತೆಗೆಯುತ್ತಿದ್ದ ಗಾಳಿಪಟದ ಮಾಂಜಾ ದಾರ, ಈಗ ಅಮಾಯಕ ಯುವಕನ ಪ್ರಾಣವನ್ನೇ ತೆಗೆದುಬಿಟ್ಟಿದೆ. ಸತತ ಆರು ದಿನಗಳ ಜೀವನ್ಮರಣ ಹೋರಾಟ ನಡೆಸಿ, ನರಳಾಡಿ ಪ್ರಾಣ ಬಿಟ್ಟಿದ್ದಾನೆ.

VISTARANEWS.COM


on

Edited by

Manja Thread dead person
ರವಿ ಮೃತ ದುರ್ದೈವಿ
Koo

ಗದಗ: ಕಳೆದ ಜೂ.4ರಂದು ಕಾರ ಹುಣ್ಣಿಮೆ ವೇಳೆ ಹಾರಿಸಿದ ಗಾಳಿಪಟದ ಚೈನೀಸ್‌ ಮಾಂಜಾ ದಾರವು (Manja Thread) ಸವಾರನ ಕುತ್ತಿಗೆ ಸಿಲುಕಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿರುವ ದಾರುಣ ಘಟನೆ ಗದಗದಲ್ಲಿ ನಡೆದಿದೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ನಾರಾಯಣ ದೇವರಕೆರೆ ನಿವಾಸಿ ರವಿ ಮೃತ ದುರ್ದೈವಿ.

ಉತ್ತರ‌ ಕರ್ನಾಟಕದಲ್ಲಿ ಕಾರ ಹುಣ್ಣಿಮೆ ವೇಳೆ ಗಾಳಿಪಟ ಹಾರಿಸುವ ಪರಿಪಾಠ ಇದೆ. ಆದರೆ ಇದೆ ಸಂಭ್ರಮವು ಬೈಕ್‌ ಸವಾರರಿಗೆ ಸಂಚಕಾರ ತಂದೊಡ್ಡಿದೆ. ಗದಗ ನಗರದ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ ರವಿ, ಬೈಕ್‌ನಲ್ಲಿ ಹೋಗುವಾಗ ಗಾಳಿಪಟದ ದಾರ ಕತ್ತು ಸೀಳಿತ್ತು. ರಕ್ತದ ಮಡುವಿನಲ್ಲೇ ಸ್ಥಳೀಯರು ಆಟೋ ಮೂಲಕ ರವಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಹರಿತವಾದ ದಾರವು ರವಿಯ ಕತ್ತನ್ನು ಬಲವಾಗಿ ಸೀಳಿದ್ದರಿಂದ, ಆರು ದಿನ ಬಳಿಕ ನರಳಾಡಿ ಪ್ರಾಣ ಬಿಟ್ಟಿದ್ದಾರೆ.

Manja Thread Effected

ಕಾಳಸಂತೆಯಲ್ಲಿ ಸಿಗ್ತಿದೆ ಅಪಾಯಕಾರಿ ದಾರ

ರಾಜ್ಯದಲ್ಲಿ ಚೈನೀಸ್ ಮಾಂಜಾ ದಾರ ಮಾರಾಟವು ನಿಷೇಧ ಇದ್ದರೂ, ಗದಗ ಜಿಲ್ಲೆಯಲ್ಲಿ ಮಾತ್ರ ಇದಕ್ಕೆ ಕಡಿವಾಣ ಬಿದ್ದಿಲ್ಲ. ಕಾಳಸಂತೆಗಳಲ್ಲಿ ಈ ಅಪಾಯಕಾರಿ ದಾರ ಮಾರಾಟವಾಗುತ್ತಿದೆ. ಗದಗ ಬೆಟಗೇರಿ ಅವಳಿ ನಗರದಲ್ಲಿ ಕಳೆದ ಭಾನುವಾರ (ಜೂ.4) ಕಾರ ಹುಣ್ಣಿಮೆಯ ದಿನದಂದು ಹಾರಿಸಿದ ಗಾಳಿಪಟದ ದಾರದಿಂದಾಗಿ ರೈಲ್ವೆ ಪೊಲೀಸ್ ಸೇರಿ ನಾಲ್ಕೈದು‌ ಜನರಿಗೆ ಗಾಯವಾಗಿತ್ತು. ಬೈಕ್‌ನಲ್ಲಿ ಹೋಗುವಾಗ ಕತ್ತು, ಕೈ-ಕಾಲುಗಳಿಗೆ ಹರಿತವಾದ ದಾರದಿಂದ ಗಾಯಗಳಾಗಿತ್ತು. ಈ ರೀತಿಯ ಅವಘಡಗಳು ನಡೆಯುತ್ತಿದ್ದರೂ, ಸಂಬಂಧಪಟ್ಟವರು ಗಪ್ ಚುಪ್ ಆಗಿದ್ದಾರೆ.

ಇದನ್ನೂ ಓದಿ: Viral News: ಶಾಲೆಗೆ ನೀರು ಪೂರೈಸಲು ಹೊರಟಿದ್ದ ಟ್ಯಾಂಕರ್‌ ವಾಪಸ್‌; ನೀರು ಕೊಡ್ಬೇಡ ಎಂದು ಗ್ರಾಪಂ ಅಧ್ಯಕ್ಷ ಅವಾಜ್‌

ಅಪಾಯಕಾರಿ ಮಾಂಜಾ ದಾರಕ್ಕೆ ಕಡಿವಾಣ ಹಾಕುವಂತೆ ವಿಸ್ತಾರ ನ್ಯೂಸ್ ಸುದ್ದಿ ಬಿತ್ತರಿಸಿತ್ತು. ಆದರೆ ಅಧಿಕಾರಿ ವರ್ಗ ಮಾತ್ರ ಕೈ ಕಟ್ಟಿ ಕುಳಿತು ನಿರ್ಲಕ್ಷ್ಯತನ ತೋರಿತ್ತು. ಇದರ ಪರಿಣಾಮ ಈಗ ಕಾರ ಹುಣ್ಣಿಮೆ ವೇಳೆ ಮಾಂಜಾ ದಾರದಲ್ಲಿ ಗಾಳಿಪಟ ಹಾರಿಸಿದ ಕಾರಣದಿಂದಾಗಿ ಸವಾರರು ಗಂಭೀರ ಗಾಯಗೊಂಡಿದ್ದರು. ಅದರಲ್ಲಿ ಒಬ್ಬ ಸವಾರ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ 15 ದಿನಗಳ ಹಿಂದಷ್ಟೇ ಚೈನೀಸ್‌ ಮಾಂಜಾ ದಾರ ಮಾರಾಟವನ್ನು ತಡೆಯುವಂತೆ ವಿವಿಧ ಸಂಘಟನೆಗಳು ಜಿಲ್ಲಾಧಿಕಾರಿಗಳಿಗೆ ಮನವಿ‌ ಮಾಡಿದ್ದರು. ‌ಆದರೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯತನ ತೋರಿಸಿದ್ದಾರೆಂದು ಕಿಡಿಕಾರಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading

ತಂತ್ರಜ್ಞಾನ

Aadhaar Services: ಆನ್‌ಲೈನ್ ಮೂಲಕ ಆಧಾರ್ ‘ಲಾಕ್’ ಮತ್ತು ‘ಅನ್‌ಲಾಕ್’ ಮಾಡುವುದು ಹೇಗೆ?

Aadhaar Services: ಸರ್ಕಾರಿ ಸೇವೆಗಳನ್ನು ಪಡೆಯಲು, ವಿಳಾಸ ಮತ್ತು ಗುರುತು ದೃಢೀಕರಣಕ್ಕೆ ಆಧಾರ್ ಅತ್ಯಗತ್ಯ ಸರ್ಕಾರಿ ಗುರುತಿನ ಪತ್ರವಾಗಿದೆ.

VISTARANEWS.COM


on

Edited by

Lock and unlock of aadhar services through online
Koo

ಬೆಂಗಳೂರು: ಕರ್ನಾಟಕದಲ್ಲಿ ಈಗ ಗ್ಯಾರಂಟಿಗಳ ಭರಾಟೆ. ಈ ಗ್ಯಾರಂಟಿ ಸೇವೆಗಳನ್ನು ಪಡೆಯಲು ಇತರ ಅಧಿಕೃತ ದಾಖಲೆಗಳ ಜತೆಗೆ ಆಧಾರ್ ಕೂಡ ಕಡ್ಡಾಯವಾಗಿಬೇಕು. ಹಾಗಾಗಿ, ಆಧಾರ್ ಮಾಡಿಸಿಕೊಳ್ಳಲು ಜನರು ಮುಗಿ ಬೀಳುತ್ತಿರುವ ವರದಿಗಳಾಗುತ್ತಿವೆ. ಗ್ಯಾರಂಟಿ ಮಾತ್ರವಲ್ಲದೇ ಕೇಂದ್ರವಾಗಲೀ, ರಾಜ್ಯ ಸರ್ಕಾರದ ಸೇವೆಗಳನ್ನು ಪಡೆಯಲು, ನಿಮ್ಮ ಅಧಿಕೃತ ವಿಳಾಸವನ್ನು ದೃಢೀಕರಿಸಲು ಈ ಆಧಾರ್ (Aadhaar Services) ಬೇಕೇ ಬೇಕು. ಆದರೆ, ಆಧಾರ್ ಮಾಹಿತಿ ಕಳುವಾದರೆ ಎಂಬ ಆತಂಕ ಇದ್ದೇ ಇರುತ್ತದೆ. ಬಳಕೆದಾರರಿಗೆ ಅಂಥದೊಂದು ಅನುಮಾನ ಮೂಡಿದರೆ, ನಿಮ್ಮ ಆಧಾರ್ ಸೇವೆಯನ್ನು ಲಾಕ್ (Lock) ಮಾಡಬಹುದು, ಅಗತ್ಯ ಎನಿಸಿದಾಗಿ ಮತ್ತೆ ಅನ್‌ಲಾಕ್ (Unlock) ಮಾಡಬಹುದು. ಅಂಥದೊಂದು ಅವಕಾಶವನ್ನು ಯುಐಡಿಎಐ ನೀಡಿದೆ.

ಬಳಕೆದಾರರ ಆಧಾರ್ ಸಂಖ್ಯೆಯ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ನಿವಾಸಿಗಳಿಗೆ ನಿಯಂತ್ರಣವನ್ನು ಒದಗಿಸಲು ಆಧಾರ್ ಸಂಖ್ಯೆಗಳನ್ನು ಲಾಕ್ ಮಾಡಲು ಮತ್ತು ಅನ್ಲಾಕ್ ಮಾಡಲು ಯುಐಡಿಎಐ ವ್ಯವಸ್ಥೆಯನ್ನು ಒದಗಿಸಿದೆ. ಬಳಕೆದಾರರು ಯುಐಡಿಎಐ ಜಾಲತಾಣ (www.myaadhaar.uidai.gov.in) ಅಥವಾ ಎಂಆಧಾರ್ (mAadhaar) ಆ್ಯಪ್ ಮೂಲಕ ಆಧಾರ್ ಲಾಕ್ ಮಾಡಬಹುದಾಗಿದೆ.

ಆಧಾರ್ ಹೇಗೆ ಲಾಕ್ ಮಾಡುವುದು?

ಎಸ್ಸೆಮ್ಮೆಸ್ ಮೂಲಕ: GVID ಟೈಪ್ ಮಾಡಿ ನಿಮ್ಮ ನಾಲ್ಕು ಅಥಾ ಎಂಟು ಅಂಕಿಗಳ ಯುಐಡಿ ನಂಬರ್ ಟೈಪ್ ಮಾಡಿ ಮತ್ತು ಅದನ್ನು 1947ಕೆ ಸೆಂಡ್ ಮಾಡಿದೆ. ಉದಾಹರಣೆ: GVID 7893 SMS to 1947

ವೆಬ್‌ಸೈಟ್ ಮೂಲಕ: ಯುಐಡಿಎಐ ವೆಬ್‌ಸೈಟ್ (https://resident.uidai.gov.in/aadhaar-lockunlock)ಗೆ ಭೇಟಿ ನೀಡಿ. ಹೋಮ್‌ಪುಟದಲ್ಲಿರುವ ಮೈ ಆಧಾರ್ ಸೆಕ್ಷನ್‌ನಲ್ಲಿರುವ ಲಾಕ್ ಆಧಾರ್ (Lock Aadhaar) ಮೇಲೆ ಕ್ಲಿಕ್ ಮಾಡಿ. ಬಳಿಕ ಯುಐಡಿ ಲಾಕ್ ಆಪ್ಷನ್ ಸೆಲೆಕ್ಟ್ ಮಾಡಿ. ಯುಐಡಿ ನಂಬರ್, ಹೆಸರು ಇತ್ಯಾದಿ ಮಾಹಿತಿಯನ್ನು ನಮೂದಿಸಿ. ಸೆಂಡ್ ಸೆಕ್ಯೂರಿಟಿ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ನಂಬರ್‌ಗೆ ಬರುವ ಸೆಕ್ಯೂರಿಟಿ ಕೋಡ್ ಎಂಟರ್ ಮಾಡಿ. ಆಗ ನಿಮ್ಮ ಆಧಾರ್ ಯಶಸ್ವಿಯಾಗಿ ಲಾಕ್ ಆಗುತ್ತದೆ.

ಆಧಾರ್ ಅನ್‌ಲಾಕ್ ಮಾಡುವುದು ಹೇಗೆ?

ಎಸ್ಸೆಮ್ಮೆಸ್ ಮೂಲಕ: RVID ಅಂತಾ ಟೈಪ್ ಮಾಡಿ ಸ್ಪೇಸ್ ಬಿಟ್ಟು ನಾಲ್ಕು ಅಥವಾ 8 ಅಂಕಿಗಳ ಯುಐಡಿ ನಂಬರ್ ಟೈಪ್ ಮಾಡಿ, 1947 ನಂಬರ್‌ಗೆ ಸೆಂಡ್ ಮಾಡಿ.

ಇದನ್ನೂ ಓದಿ: Aadhaar card : ಆಧಾರ್‌ ಜತೆ ನಿಮ್ಮ ಇ-ಮೇಲ್‌, ಮೊಬೈಲ್‌ ಲಿಂಕ್‌ ಆಗಿದೆಯೇ ? ಹೀಗೆ ಖಾತರಿಪಡಿಸಿಕೊಳ್ಳಿ

ವೆಬ್‌ಸೈಟ್ ಮೂಲಕ ಹೀಗೆ ಮಾಡಿ: ಇಲ್ಲಿ ಕೂಡ ಸೇನ್ ಲಾಕ್ ಮಾಡುವ ಪ್ರಕ್ರಿಯೇ ಫಾಲೋ ಮಾಡಬೇಕು. ಮೊದಲಿಗೆ ಯುಐಡಿಎಐಗೆ ಹೋಗಿ. ಬಳಿಕ ಅನ್‌ಲಾಕ್ ಆಯ್ಕೆಯ ಸೆಲೆಕ್ಟ ಮಾಡಿ. ಹೊಸ ವಿಐಡಿ ಮತ್ತುಸೆಕ್ಯೂರಿಟಿ ಕೋಡ್ ಎಂಟರ್ ಮಾಡಿ. ಸೆಂಡ್ ಒಟಿಪಿ ಬಟನ್ ಮೇಲೆ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ ಒಟಿಪಿಯನ್ನು ನಮೂದಿಸಿ. ಆಗ ನಿಮ್ಮ ಆಧಾರ್ ನಂಬರ್ ಯಶಸ್ವಿಯಾಗಿ ಅನ್‌ಲಾಕ್ ಆಗುತ್ತದೆ.

ತಂತ್ರಜ್ಞಾನದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Continue Reading

ದೇಶ

17 ವರ್ಷದ ಹೆಣ್ಣುಮಕ್ಕಳು ಮಗು ಹೆರುವ ಕಾಲವಿತ್ತು; ರೇಪ್‌ ಸಂತ್ರಸ್ತೆಯ ಗರ್ಭಪಾತ ಬೇಡವೆಂದ ಹೈಕೋರ್ಟ್

Viral News: ಅತ್ಯಾಚಾರಕ್ಕೀಡಾದ ಬಾಲಕಿಯು ಈಗ ಗರ್ಭ ಧರಿಸಿದ್ದು, ಆಕೆಯ ವಯಸ್ಸನ್ನು ಪರಿಗಣಿಸಿ ನ್ಯಾಯಾಲಯವು ವೈದ್ಯಕೀಯ ಗರ್ಭಪಾತಕ್ಕೆ ಅನುಮತಿ ನೀಡಬೇಕು ಎಂದು ಅರ್ಜಿ ಸಲ್ಲಿಸಲಾಗಿದೆ. ಆದರೆ, ಇದಕ್ಕೆ ಗುಜರಾತ್‌ ಹೈಕೋರ್ಟ್‌ ನಿರಾಕರಿಸಿದೆ.

VISTARANEWS.COM


on

Edited by

Gujarat High Court On Termination Of Pregnancy
Koo

ಗಾಂಧಿನಗರ: 17 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೋಡಲು ಗುಜರಾತ್‌ ಹೈಕೋರ್ಟ್‌ ನಿರಾಕರಿಸಿದೆ. ಅತ್ಯಾಚಾರ ಸಂತ್ರಸ್ತೆ ಗರ್ಭ ಧರಿಸಿ ಈಗ ತಿಂಗಳಾಗಿದೆ. ಆಕೆಯ ಗರ್ಭಪಾತಕ್ಕೆ ಕೋರಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್‌ ತಳ್ಳಿಹಾಕಿದೆ. ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯವು, “ಮೊದಲೆಲ್ಲ 17 ವರ್ಷದ ಹೆಣ್ಣುಮಕ್ಕಳು ಮಕ್ಕಳನ್ನು ಹೆರುತ್ತಿದ್ದರು, 14-15 ವರ್ಷಕ್ಕೆ ಮದುವೆಯಾಗುತ್ತಿದ್ದರು. ಇದೆಲ್ಲ ತಿಳಿಯಲು (Viral News) ಮನುಸ್ಮೃತಿ ಓದಿ” ಎಂದು ಕೂಡ ಹೇಳಿದೆ.

ಅತ್ಯಾಚಾರ ಸಂತ್ರಸ್ತೆಯ ವಯಸ್ಸನ್ನು ಪರಿಗಣಿಸಿ, ಆಕೆಗೆ ವೈದ್ಯಕೀಯ ಗರ್ಭಪಾತಕ್ಕೆ ಅನುಮತಿ ನೀಡಬೇಕು ಎಂದು ಸಂತ್ರಸ್ತ ಬಾಲಕಿಯ ತಂದೆಯು ಅರ್ಜಿ ಸಲ್ಲಿಸಿದ್ದರು. “ಹಿಂದಿನ ಕಾಲದಲ್ಲಿ 18 ವರ್ಷ ತುಂಬುವ ಮೊದಲೇ ಹೆಣ್ಣುಮಕ್ಕಳು ಮದುವೆಯಾಗಿ, ಮಕ್ಕಳನ್ನು ಹೆರುತ್ತಿದ್ದರು ಎಂಬುದು ಗೊತ್ತಿರಲಿ. ಇದನ್ನು ನೀವು ಓದಿಲ್ಲವೆಂದರೆ, ಮನುಸ್ಮೃತಿ ಓದಿ ತಿಳಿದುಕೊಳ್ಳಿ” ಎಂದು ನ್ಯಾಯಮೂರ್ತಿ ಸಮೀರ್‌ ಜೆ ದಾವೆ ಹೇಳಿದರು.

ಸಂತ್ರಸ್ತೆಯ ತಂದೆ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಸಿಕಂದರ್‌ ಸೈಯದ್‌, “ಆಗಸ್ಟ್‌ 18ರಂದು ಬಾಲಕಿಯು ಮಗು ಹೆರುವ ಸಾಧ್ಯತೆ ಇದೆ. ವೈದ್ಯರು ಡೇಟ್‌ ಕೊಟ್ಟಿದ್ದಾರೆ. ಆಕೆಯ ವಯಸ್ಸನ್ನು ಪರಿಗಣಿಸಿ ಗರ್ಭಪಾತಕ್ಕೆ ಅನುಮತಿ ನೀಡಬೇಕು” ಎಂದು ವಾದ ಮಂಡಿಸಿದರು. ಆದರೆ, ನ್ಯಾಯಾಲಯವು, “ಬಾಲಕಿ ಹಾಗೂ ಮಗು ಆರೋಗ್ಯವಾಗಿದ್ದರೆ ಗರ್ಭಪಾತಕ್ಕೆ ಅನುಮತಿ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿತು. ಹಾಗೆಯೇ, ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ಆದೇಶಿಸಿತು.

ಇದನ್ನೂ ಓದಿ: Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

ರಾಜಕೋಟ್‌ನಲ್ಲಿರುವ ಸಿವಿಲ್‌ ಆಸ್ಪತ್ರೆಯ ಮೆಡಿಕಲ್‌ ಸೂಪರಿಂಟೆಂಡೆಂಟ್‌ ಅವರು ಬಾಲಕಿ ಹಾಗೂ ಆಕೆಯ ಹೊಟ್ಟೆಯಲ್ಲಿರುವ ಮಗುವಿನ ವೈದ್ಯಕೀಯ ತಪಾಸಣೆಯನ್ನು ತುರ್ತಾಗಿ ಮಾಡಬೇಕು ಎಂದು ಗುಜರಾತ್‌ ಹೈಕೋರ್ಟ್‌ ನಿರ್ದೇಶನ ನೀಡಿದೆ. ವೈದ್ಯಕೀಯ ವರದಿಯನ್ನು ಆಧರಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ ನ್ಯಾಯಾಲಯವು, ಜೂನ್‌ 15ಕ್ಕೆ ವಿಚಾರಣೆ ಮುಂದೂಡಿದೆ.

ಸಹೋದರನಿಂದಲೇ ಗರ್ಭ ಧರಿಸಿದ 15 ವರ್ಷದ ಬಾಲಕಿಯ ಗರ್ಭಪಾತಕ್ಕೆ ಕೆಲ ದಿನಗಳ ಹಿಂದೆ ಕೇರಳ ಹೈಕೋರ್ಟ್‌ ಅನುಮತಿ ನೀಡಿತ್ತು. ಗರ್ಭಪಾತ ಮಾಡಿಸಲು ಅನುಮತಿ ಕೋರಿ ಬಾಲಕಿಯ ತಂದೆ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ್ದ ಏಕ ಸದಸ್ಯ ಪೀಠದ ನ್ಯಾ. ಜಿಯಾದ್‌ ರೆಹಮಾನ್‌ ಅವರು ಗರ್ಭಪಾತ ಮಾಡಿಸಲು ಅನುಮತಿ ನೀಡಿದ್ದರು.

“ಗರ್ಭಪಾತಕ್ಕೆ ಅನುಮತಿ ನೀಡದೆ ಹೋದರೆ ಸಾಮಾಜಿಕ ವ್ಯವಸ್ಥೆ ಹಾಗೂ ಬಾಲಕಿಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ, ಗರ್ಭಪಾತಕ್ಕೆ ಅನುಮತಿ ನೀಡಲಾಗಿದೆ” ಎಂದು ಸ್ಪಷ್ಟಪಡಿಸಿತು. ವೈದ್ಯಕೀಯ ಮಂಡಳಿಯು ಗರ್ಭಪಾತದ ಕುರಿತು ವರದಿ ಸಲ್ಲಿಸಿತ್ತು. 15 ವರ್ಷದ ಬಾಲಕಿಗೆ ಗರ್ಭಪಾತಕ್ಕೆ ಅನುಮತಿ ನೀಡದಿದ್ದರೆ ಸಾಮಾಜಿಕ ವ್ಯವಸ್ಥೆ ಹಾಗೂ ಆಕೆಯ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಹಾಗಾಗಿ, ಗರ್ಭಪಾತಕ್ಕೆ ಅನುಮತಿ ಸಿಕ್ಕಿತ್ತು.

Continue Reading
Advertisement
Chamarajanagar oxygen tragedy and Dinesh Gundu Rao
ಆರೋಗ್ಯ2 mins ago

Dinesh Gundu Rao: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ; ರೆಡಿ ಆಗ್ತಿದೆ ಡಿಪಿಆರ್!

Manja Thread dead person
ಕರ್ನಾಟಕ4 mins ago

Manja Thread: ಯಾರೋ ಹಾರಿಸಿದ ಗಾಳಿಪಟದ ಮಾಂಜಾ ದಾರ ತೆಗೆಯಿತು ಅಮಾಯಕನ ಪ್ರಾಣ!

Lock and unlock of aadhar services through online
ತಂತ್ರಜ್ಞಾನ8 mins ago

Aadhaar Services: ಆನ್‌ಲೈನ್ ಮೂಲಕ ಆಧಾರ್ ‘ಲಾಕ್’ ಮತ್ತು ‘ಅನ್‌ಲಾಕ್’ ಮಾಡುವುದು ಹೇಗೆ?

Gujarat High Court On Termination Of Pregnancy
ದೇಶ15 mins ago

17 ವರ್ಷದ ಹೆಣ್ಣುಮಕ್ಕಳು ಮಗು ಹೆರುವ ಕಾಲವಿತ್ತು; ರೇಪ್‌ ಸಂತ್ರಸ್ತೆಯ ಗರ್ಭಪಾತ ಬೇಡವೆಂದ ಹೈಕೋರ್ಟ್

Virat Kohli troll
ಕ್ರಿಕೆಟ್26 mins ago

WTC Final 2023: ಹಣಕ್ಕಾಗಿ ಅಲ್ಲ, ದೇಶಕ್ಕಾಗಿ ಆಡು; ಔಟಾದ ಬಳಿಕ ಊಟದ ಜತೆ ಬೈಗುಳ ತಿಂದ ಕೊಹ್ಲಿ

Appeals to CM not to increase liquor prices
ಕರ್ನಾಟಕ50 mins ago

Viral News: ಮುಖ್ಯಮಂತ್ರಿಗಳೇ ಎಣ್ಣೆ ರೇಟ್‌ ಜಾಸ್ತಿ ಮಾಡ್ಬೇಡಿ; BPL ಕಾರ್ಡ್‌ದಾರನ ವಾರ್ಷಿಕ ಲೆಕ್ಕ ಮುಂದಿಟ್ಟ ಕುಡುಕರ ಸಂಘ!

A new country is ready in just Rs 15 lakh and the name is Slowjamastan
ಪ್ರಮುಖ ಸುದ್ದಿ58 mins ago

New Country: ಕೇವಲ 15 ಲಕ್ಷ ರೂ.ನಲ್ಲಿ ರೆಡಿ ಆಯ್ತು ಹೊಸ ದೇಶ, ಹೆಸರು ಸ್ಲೋಜಾಮ್‌ಸ್ತಾನ!

water issuse
ಉಡುಪಿ1 hour ago

Viral News: ಶಾಲೆಗೆ ನೀರು ಪೂರೈಸಲು ಹೊರಟಿದ್ದ ಟ್ಯಾಂಕರ್‌ ವಾಪಸ್‌; ನೀರು ಕೊಡ್ಬೇಡ ಎಂದು ಗ್ರಾಪಂ ಅಧ್ಯಕ್ಷ ಅವಾಜ್‌

ICC World Test Championship Final 2023
Live News1 hour ago

WTC Final 2023: ಭಾರತ-ಆಸೀಸ್​ ಮೂರನೇ ದಿನದಾಟದ ಹೈಲೆಟ್ಸ್​

vidhana soudha
ಕರ್ನಾಟಕ1 hour ago

Karnataka Govt: ಜಿಲ್ಲಾ ಉಸ್ತುವಾರಿ ನೇಮಕದಲ್ಲಿ ಬಿಜೆಪಿ ನೀತಿಯನ್ನು ಕಿತ್ತೆಸೆದ ಕಾಂಗ್ರೆಸ್‌ ಸರ್ಕಾರ: ಇಬ್ಬರು ಸಚಿವರಿಗೆ ಜಿಲ್ಲೆ ಇಲ್ಲ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ11 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Cancellation of tenders for 108 ambulances and Dinesh Gundu rao
ಆರೋಗ್ಯ4 hours ago

Dinesh Gundu Rao: ಬಿಜೆಪಿ ಅವಧಿಯ 108 ಆಂಬ್ಯುಲೆನ್ಸ್‌, ಡಯಾಲಿಸಿಸ್‌ ಟೆಂಡರ್‌ ರದ್ದು; ಆರೋಗ್ಯ ಇಲಾಖೆಯಲ್ಲಿ ಮೇಜರ್‌ ಸರ್ಜರಿ

Meghalaya Villagers Chase Bangladesh soldiers
ದೇಶ4 hours ago

Viral Video : ಗಡಿ ದಾಟಿ ಭಾರತಕ್ಕೆ ನುಗ್ಗಿದ ಬಾಂಗ್ಲಾ ಯೋಧರು! ಅಟ್ಟಾಟಿಸಿಕೊಂಡು ಒದ್ದೋಡಿಸಿದ ಹಳ್ಳಿಗರು

snake mate in chamarajnagar 2
ಕರ್ನಾಟಕ4 hours ago

Video Viral: ಚಾಮರಾಜನಗರದಲ್ಲಿ ಹಾವುಗಳ ಮಿಲನ; ಗಂಟೆಗೂ ಹೆಚ್ಚು ಸರಸ ಸಲ್ಲಾಪ! ವೈರಲ್‌ ಆಯ್ತು ವಿಡಿಯೊ

Rain in mangalore
ಉಡುಪಿ5 hours ago

Rain News: ಬಿಪರ್‌ಜಾಯ್‌ ಸೈಕ್ಲೋನ್ ಎಫೆಕ್ಟ್‌; ಮಂಗಳೂರಲ್ಲಿ ಚಿಟಪಟ ಮಳೆ

Rain in koppal
ಉಡುಪಿ20 hours ago

Weather Report: ಕರಾವಳಿಯಲ್ಲಿ ಗುಡುಗಲಿರುವ ಮಳೆ; ಮಲೆನಾಡು, ಒಳನಾಡಲ್ಲಿ ಹೇಗಿರಲಿದೆ ಪ್ರಭಾವಳಿ

youths rescued in Kaveri river
ಕರ್ನಾಟಕ22 hours ago

Video Viral: ತಲಕಾಡಿನ ಕಾವೇರಿ ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಮೂವರು ಯುವಕರ ರಕ್ಷಣೆ!

Elephant attack in muttunga wildlife sanctuary
ಕರ್ನಾಟಕ1 day ago

Viral Video: ವನ್ಯಧಾಮದಲ್ಲಿ ಮೂತ್ರಕ್ಕೆಂದು ಕಾಡಿಗೆ ಹೋದ; ಆನೆ ದಾಳಿಗೆ ಹೆದರಿ ಪ್ಯಾಂಟ್‌ ಹಿಡಿದು ಓಡೋಡಿ ಬಂದ!

abhishek ambareesh wedding Reception
ಕರ್ನಾಟಕ2 days ago

Abhishek Ambareesh Reception: ಅಭಿ- ಅವಿವ ಅದ್ಧೂರಿ ಆರತಕ್ಷತೆ; ಲೈವ್‌ ವಿಡಿಯೊ ಇಲ್ಲಿದೆ

N Chaluvarayaswamy about Congress guarantee
ಕರ್ನಾಟಕ2 days ago

Video Viral: ಉಚಿತ ಗ್ಯಾರಂಟಿ ಯೋಜನೆ ಚುನಾವಣೆಯ ಚೀಪ್‌ ಗಿಮಿಕ್‌ ಎಂದ ಕೃಷಿ ಸಚಿವ ಚಲುವರಾಯಸ್ವಾಮಿ!

horoscope today love and horoscope
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರಿಗೆ ಇಂದು ಪ್ರೀತಿ ಅಂಕುರವಾಗಲಿದೆಯಂತೆ!

ಟ್ರೆಂಡಿಂಗ್‌

error: Content is protected !!