Movie Review |ಸಿಂಪಲ್ಲಾಗಿಲ್ಲʼಅವತಾರ ಪುರುಷʼ Vistara News
Connect with us

ಸಿನಿಮಾ

Movie Review |ಸಿಂಪಲ್ಲಾಗಿಲ್ಲʼಅವತಾರ ಪುರುಷʼ

ಅವತಾರ ಪುರುಷ ಸಿನಿಮಾ suni ಅವರ ಮಾಮೂಲಿ ಸಿನಿಮಾಗಳಿಗಿಂತ ಸ್ವಲ್ಪ ವಿಭಿನ್ನವಾಗಿದೆ. ಈ ಸಿನಿಮಾ ಸುನಿ ಅವರ ಒಂದು ಹೊಸ ಬಗೆಯ ಪ್ರಯತ್ನ ಎಂದು ಹೇಳಬಹುದು.

VISTARANEWS.COM


on

Koo

ಚಿತ್ರ: ಅವತಾರ ಪುರುಷ: ಅಷ್ಟದಿಗ್ಬಂಧನ ಮಂಡಲಕ-1
ನಿರ್ದೇಶನ: ಸಿಂಪಲ್‌ ಸುನಿ
ನಿರ್ಮಾಪಕ: ಪುಷ್ಕರ್‌ ಮಲ್ಲಿಕಾರ್ಜುನಯ್ಯ
ಸಂಗೀತ: ಅರ್ಜುನ್‌ ಜನ್ಯ
ಛಾಯಾಗ್ರಹಣ: ವಿಲಿಯಮ್‌ ಡೇವಿಡ್
ತಾರಾಗಣ: ಶರಣ್‌, ಆಶಿಕಾ ರಂಗನಾಥ್‌, ಅಶುತೋಶ್‌ ರಾಣ, ಸಾಯಿಕುಮಾರ್‌, ಸುಧಾರಾಣಿ, ಸಾಧುಕೋಕಿಲ, ಶ್ರೀನಗರ ಕಿಟ್ಟಿ, ಭವ್ಯ.
ರೇಟಿಂಗ್‌: 3/5

ಸಿಂಪಲ್‌ ಸುನಿ ನಿರ್ದೇಶನದ ಹಾಗೂ ಕರುನಾಡ ಅಧ್ಯಕ್ಷ ಶರಣ್‌ ಅಭಿನಯದ ಅವತಾರ ಪುರುಷ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡಿದೆ. ಸಿಂಪಲ್‌ ಸುನಿ ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಹೊಸ ಬಗೆಯ ಸಿನಿಮಾಗಳನ್ನು ಮಾಡಬೇಕೆಂಬ ಸಾಲಿನಲ್ಲಿರುವ ಮುಂಚೂಣಿ ನಿರ್ದೇಶಕ. ಅವರ ಕಥೆಗಳು ಸಾಮಾನ್ಯವಾಗಿ ಸರಳ ಹಾಗೂ ಸುಂದರವಾಗಿರುತ್ತದೆ. ಆದರೆ ಅವತಾರ ಪುರುಷ ಸಿನಿಮಾ ಅವರ ಈವರೆಗಿನ ಸಿನಿಮಾಗಳಿಗಿಂತ ವಿಭಿನ್ನವಾಗಿದೆ. ಅವತಾರ ಪುರುಷ ಅವರ ಹೊಸ ಬಗೆಯ ಪ್ರಯತ್ನದ ಚಿತ್ರ.

ಕಥೆ ಹೇಗಿದೆ?

ಈ ಚಿತ್ರವು ಎರಡು ಭಾಗವಾಗಿ ಬಿಡುಗಡೆಗೊಳ್ಳಲಿದೆ. ಇದು ಮೊದಲ ಪಾರ್ಟ್.‌

ವಾಮಾಚಾರದ ಸುತ್ತಲೇ ನಡೆಯುವ ಒಂದು ವಿಭಿನ್ನ ಕಥೆಯನ್ನು ಸುನಿ ಬರೆದಿದ್ದಾರೆ. ಮಾಟ-ಮಂತ್ರ, ತಂತ್ರಗಳ ಆಚರಣೆ ಹಾಗೂ ಮಾಂತ್ರಿಕ ಆಧಿಪತ್ಯಕ್ಕಾಗಿ ಎರಡು ಪಕ್ಷಗಳ ನಡುವಿನ ಪೈಪೋಟಿಯನ್ನು ಕಥೆಯಾಗಿಸಲಾಗಿದೆ. ಈ ಕಥೆಯನ್ನು ಗಮನಿಸಿದಾಗ ಇದೊಂದು ಸುರ-ಅಸುರರ ನಡುವಿನ ಸಂಘರ್ಷ ಅಥವಾ ಧರ್ಮ-ಅಧರ್ಮಗಳ ನಡುವಿನ ಯುದ್ಧದ ಸಂಕೇತದಂತೆ ಕಾಣುತ್ತದೆ. ಪುರಾಣದ ಒಂದು ಮಹತ್ವವಾದ ತ್ರಿಶಂಕುವಿನ ಕಥೆಯನ್ನೂ ಇದಕ್ಕೆ ಜೋಡಿಸಿ ಹೆಣೆಯಲಾಗಿದೆ. ಈ ಕಥೆಯನ್ನು ಸರಿಯಾದ ರೀತಿಯಲ್ಲಿ ಜನರಿಗೆ ತಲುಪಿಸುವ ಯತ್ನ ಇಲ್ಲಿ ಢಾಳಾಗಿ ಕಾಣುತ್ತದೆ. ಇದಕ್ಕೆ ತಕ್ಕಂತೆ ಕೆಲವು ಅಧ್ಯಯನವನ್ನೂ ಮಾಡಿ ನಿರೂಪಿಸಲಾಗಿದ್ದು ಎದ್ದು ಕಾಣುತ್ತದೆ.

ಅಲ್ಲದೆ, ವಾಮಾಚಾರದ ನಡುವೆಯೇ ಸಾಗುವ ಕಥೆಗೆ ಒಂದು ಭಾವನಾತ್ಮಕ ಸಂಗತಿಯನ್ನೂ ಜೋಡಿಸಲಾಗಿದೆ.

ತಂದೆ ಮಗುವಿನ ಸಂಬಂಧ

ಈಗಾಗಲೇ ಟ್ರೇಲರ್‌ನಲ್ಲಿ ತೋರಿಸಿದಂತೆ ಒಬ್ಬ ತಂದೆ ತನ್ನ ಮಗುವನ್ನು ಕಳೆದುಕೊಂಡಿರುತ್ತಾನೆ. ಅವರ ನಿಜವಾದ ಮಗ ಯಾರು? ಎಂಬ ಪ್ರಶ್ನೆಯೇ ಮುಖ್ಯ ಕಥೆ. ಈ ನಡುವೆ ತ್ರಿಶಂಕು ಮಣಿಯನ್ನು ಪಡೆಯುವ ಕಾದಾಟ.

ಕಥೆ ಸರಳವಾಗಿ ಸಾಗುತ್ತದೆ. ಹೊಸ ಹೊಸ ತಿರುವುಗಳನ್ನು ನೀಡುವ ಪ್ರಯತ್ನ ಮಾಡಲಾಗಿದೆ. ಆದರೆ ಅದು ಅನಿರೀಕ್ಷಿತ ತಿರುವುಗಳಾಗಿ ಮೂಡಿಬಂದಿಲ್ಲ. ಶ್ರೀನಗರ ಕಿಟ್ಟಿಯ ಪಾತ್ರದ ಎಂಟ್ರಿ ಮಾತ್ರ ರೋಚಕವಾಗಿದೆ. ಉಳಿದಂತೆ ಕಥೆ ಹೇಗೆ ಮುಂದೆ ಸಾಗುತ್ತದೆ ಎಂದು ಪ್ರೇಕ್ಷಕ ಸುಲಭವಾಗಿ ಮೊದಲೇ ಊಹಿಸಬಹುದಾಗಿದೆ.

ಚಿತ್ರದ ಪ್ರಮುಖ ಅಂಶಗಳು:

  • ಇದು ಸಿಂಪಲ್‌ ಸುನಿ ಹಾಗೂ ಶರಣ್‌ ಅವರ ಕಾಂಬಿನೇಷನ್‌ನ ಮೊದಲ ಚಿತ್ರ. ಶರಣ್‌ ಅವರ ಮೊದಲ ಬಿಗ್‌ ಬಜೆಟ್‌ ಮೂವಿ ಎಂದೂ ಹೇಳಲಾಗಿದೆ.
  • ಚಿತ್ರದ ಮೊದಲಾರ್ಧ ತೀರಾ ಸಾಮಾನ್ಯವಾಗಿದೆ. ಆದರೆ ಇಂಟರ್‌ವಲ್‌ ನಂತರ ಕುತೂಹಲದಿಂದ ನೋಡುವಂತೆ ಪ್ರೇಕ್ಷಕರ ಗಮನವನ್ನು ಹಿಡಿದಿಡುವಲ್ಲಿ ಚಿತ್ರ ಯಶಸ್ವಿಯಾಗಿದೆ. ಹೊಸ ಬಗೆಯಲ್ಲಿ ಪುರಾಣದ ಕತೆಯನ್ನು ತೋರಿಸಲಾಗಿದೆ. ವಿಷುವಲ್‌ ಎಫೆಕ್ಟ್ಸ್‌ ಮೂಲಕ ಕಥೆಯನ್ನು ನಿರೂಪಿಸಲಾಗಿದ್ದು ವಿಶೇಷವಾಗಿ ಗಮನ ಸೆಳೆಯುತ್ತದೆ. ಈ ವಿಷಯದಲ್ಲಿ ಚಿತ್ರದ ಮೇಕಿಂಗ್‌ ತಂಡ ಗೆದ್ದಿದೆ ಎಂದು ಹೇಳಬಹುದು.
  • ಸಾಮಾನ್ಯವಾಗಿ ಸುನಿ ನಿರ್ದೇಶನದ ಚಿತ್ರದಲ್ಲಿ ಪಂಚ್‌ ಲೈನ್‌ಗಳು ಆಕರ್ಷಿಸುತ್ತವೆ. ಈ ಸಿನಿಮಾದಲ್ಲೂ ಹಲವು ಪಂಚ್‌ ಲೈನ್‌ಗಳು ಖುಷಿ ನೀಡುತ್ತವೆ. ಹಾಗೂ ಸಂಭಾಷಣೆ ಕೂಡ ಸೊಗಸಾಗಿದೆ. ಸುನಿ ಅವರ ಈವರೆಗಿನ ಸಿನಿಮಾಗಳಿಗಿಂತ ಕಾಮಿಡಿ ಡೈಲಾಗ್‌ಗಳು ಕಮ್ಮಿಯಿದೆ. ಆದರೆ ಈ ಚಿತ್ರದ ಕಥೆ ಗಂಭೀರವಾಗಿದ್ದು, ಕಾಮಿಡಿಗೆ ಅವಕಾಶ ಕಡಿಮೆ. ಹಾಗಾಗಿ ಅದರಿಂದ ಯಾವುದೇ ತೊಡಕು ಉಂಟಾಗಿಲ್ಲ.
  • ಕಂಟೆಂಪರರಿ ಜಗತ್ತಿಗೆ ಹೊಂದುವಂತಹ ಅಂಶಗಳನ್ನು ಸೇರಿಸಲಾಗಿದೆ. ಆದರೆ ಅದು ಸಹಜವಾಗಿ ಮೂಡಿಬರದೇ ಒತ್ತಾಯಪೂರ್ವಕವಾಗಿ ಸೇರಿಸದಂತೆ ಭಾಸವಾಗುತ್ತದೆ. ಉದಾಹರಣೆಗೆ, ಕೆಲವು ಹಾಡಿನಲ್ಲಿ ಬರುವ ಸಾಲುಗಳು ಅಥವಾ ಸಿನಿಮಾದ ಕೆಲವು ಡೈಲಾಗ್‌ಗಳು ಈ ಅನುಭವ ನೀಡುತ್ತದೆ.
  • ಚಿತ್ರದ ದೃಶ್ಯಗಳಿಗೆ ಹೊಂದುವಂತಹ ಒಳ್ಳೆಯ ಬ್ಯಾಕ್‌ಗ್ರೌಂಡ್‌ ಮ್ಯೂಸಿಕ್‌ ಅರ್ಜುನ್‌ ಜನ್ಯ ನೀಡಿದ್ದಾರೆ. ಆದರೆ ಹಾಡುಗಳು ಯಾವುದೂ ಅಷ್ಟಾಗಿ ನೆನಪಿನಲ್ಲಿ ಉಳಿಯುವುದಿಲ್ಲ.
  • ಕ್ಯಾಮೆರಾ ಹಿಂದೆ ವಿಲಿಯಮ್‌ ಡೇವಿಡ್‌ ಉತ್ತಮ ಕೈಚಳಕವನ್ನು ತೋರಿದ್ದಾರೆ. ಕೆಲವು ದೃಶ್ಯಗಳು ನೆನಪಿನಲ್ಲಿ ಉಳಿಯುವಂತೆ ಚಿತ್ರಿಸಲಾಗಿದೆ. ಆದರೆ ಕೆಲವು ಇನ್ನೂ ಉತ್ತಮಗೊಳಿಸಬಹುದಿತ್ತು ಎಂದೆನಿಸುತ್ತದೆ.

ಅಭಿನಯ ಹೇಗಿದೆ?

  • ಮುಖ್ಯ ಪಾತ್ರದಲ್ಲಿ ಶರಣ್‌ ಅಭಿನಯ ಮೆಚುವಂಥದ್ದು. ಶರಣ್‌ ಅವರ ಕಾಮಿಡಿ ಟೈಮಿಂಗ್‌ ಅದ್ಭುತವಾಗಿದೆ. ಅದಕ್ಕೆ ಸೂಕ್ತ ಸಂಭಾಷಣೆಯನ್ನು ಸುನಿ ಬರೆದಿದ್ದಾರೆ. ಶರಣ್‌ ಈ ಹಿಂದೆ ರಾಜರಾಜೇಂದ್ರದಂತಹ ಸಿನಿಮಾದಲ್ಲಿ ಇಏ ರೀತಿಯ ಪಾತ್ರ ನಿರ್ವಹಿಸಿದ್ದರು. ಇದೂ ಕೂಡ ಅದಕ್ಕೆ ಹತ್ತಿರವಾಗಿದೆ.
  • ಆಶಿಕಾ ರಂಗನಾಥ್‌ ಈವರೆಗೆ ಮಾಡಿದ ಚಿತ್ರಗಳಿಗಿಂತ ಇದರಲ್ಲಿ ಹೆಚ್ಚನ ಆತ್ಮವಿಶ್ವಾಸದಲ್ಲಿ ಅಭಿನಯಿಸಿದಂತೆ ಕಾಣುತ್ತದೆ. ಮೊದಲ ಅರ್ಧದಲ್ಲಿ ಸಾಮನ್ಯ ಎಂದು ಅನಿಸುವ ಭವ್ಯ ಅವರ ಅಭಿನಯ ಚಿತ್ರದ ಕ್ಲೈಮಾಕ್ಸ್‌ನಲ್ಲಿ ಬೆರಗು ಮೂಡಿಸಿದ್ದಾರೆ. ಇನ್ನು ಸಾಯಿಕುಮಾರ್‌ ಹಾಗೂ ಸುಧಾರಾಣಿ ತಮ್ಮ ಕರ್ತವ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.
  • ಮುಖ್ಯ ಖಳನಾಯಕನ ಪಾತ್ರದಲ್ಲಿ ಅಶುತೋಶ್‌ ರಾಣ ಮಾಂತ್ರಿಕನ ಲುಕ್‌ನಲ್ಲಿ ಭಯಾನಕವಾಗಿ ಕಾಣುತ್ತಾರೆ. ಬಾಲಾಜಿ ರಾಣ ನಟನೆ ಕೂಡ ಕಣ್ಣುಸೆಳೆಯುತ್ತದೆ. ಇನ್ನು ಹಾಸ್ಯಪಾತ್ರದಲ್ಲಿ ಸಾಧುಕೋಕಿಲ ಕಾಣಿಸಿಕೊಂಡಿದ್ದಾರೆ. ಆದರೆ ಈ ಸಿನಿಮಾದಲ್ಲಿ ಅವರ ಪಾತ್ರಕ್ಕೆ ಹೆಚ್ಚು ಒತ್ತು ನೀಡಿದಂತೆ ಕಂಡಿಲ್ಲ. ಆದರೆ ಮುಂದಿನ ಪಾರ್ಟ್‌ನಲ್ಲಿ ಅವರ ಪಾತ್ರಕ್ಕೆ ಮಹತ್ವವಿರಬಹುದೇ? ಎಂಬ ಸುಳಿವು ಹುಟ್ಟಿಹಾಕಿದೆ.
  • ಖದರ್‌ ಲುಕ್‌ನಲ್ಲಿ ಎಂಟ್ರಿ ಕೊಡುವ ಶ್ರೀನಗರ ಕಿಟ್ಟಿಯ ಪಾತ್ರವೇ ಚಿತ್ರದ ಸಿಗ್ನೇಚರ್.‌ ಅವರ ವಸ್ತ್ರಾಲಂಕಾರ ಹಾಗೂ ಮೇಕಪ್‌ ಮಾಂತ್ರಿಕನನ್ನೇ ಕಂಡಂತೆ ಆಗುತ್ತದೆ. ಅವರ ಗಂಭೀರವಾದ ಅಭಿನಯ ವಿಶೇಷವಾಗಿದೆ.

ಪಾರ್ಟ್‌ 2ನಲ್ಲಿ ಏನು ನಿರೀಕ್ಷಿಸಬಹುದು?

ರಾಮ ಜೋಯಿಸರ ಕಳೆದುಹೋದ ನಿಜವಾದ ಮಗ ಯಾರು? ತ್ರಿಶಂಕು ಮಣಿಯನ್ನು ಯಾರು ಪಡೆಯುತ್ತಾರೆ? ಯಾರು ತ್ರಿಶಂಕು ಸ್ವರ್ಗಕ್ಕೆ ಪಯಣಿಸುತ್ತಾರೆ? ಮುಖ್ಯ ಖಳನಾದ ಧಾರಕ ಹಾಗೂ ಶರಣ್‌ ನಿರ್ವಹಿಸಿದ ಕರ್ಣನ ಪಾತ್ರದ ನಡುವಿನ ಪೈಪೋಟಿಯಲ್ಲಿ ಯಾರು ಗೆಲ್ಲುತ್ತಾರೆ? ಶ್ರೀನಗರ ಕಿಟ್ಟಿಯ ಕುಮಾರನ ಪಾತ್ರ ಮುಂದೆ ಏನು ಹೆಜ್ಜೆಯಿಡುತ್ತಾನೆ? ಈ ಎಲ್ಲಾ ಪ್ರಶ್ನೆಗಳನ್ನು ಮೊದಲ ಭಾಗ ಹುಟ್ಟಿಹಾಕಿದೆ.

ಇನ್ನು ಈ ಪ್ರಶ್ನೆಗಳಿಗೆ ಉತ್ತರ ʼಅವತಾರಪುರುಷ: ತ್ರಿಶಂಕುಗಮನ- 2ʼ ದಲ್ಲಿ ಸಿಗುವ ನಿರೀಕ್ಷೆ ಹುಟ್ಟಿಸಿದೆ.

ಇದನ್ನೂ ಓದಿ: KGF ಸಿನಿಮಾ ವಿಮರ್ಶೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ದೇಶ

72 Hoorain: ಕಾಶ್ಮೀರ ಫೈಲ್ಸ್, ಕೇರಳ ಸ್ಟೋರಿ ಬಳಿಕ ಮತ್ತೊಂದು ವಿವಾದಾತ್ಮಕ ಸಿನಿಮಾ ’72 ಹೂರೇ’ ತೆರೆಗೆ ಬರಲು ಸಿದ್ಧ

72 Hoorain: ರಾಷ್ಟ್ರ ಪ್ರಶಸ್ತಿ ವಿಜೇತ ಸಂಜಯ್ ಪೂರನ್ ಸಿಂಗ್ ಚೌಹಾಣ್ ನಿರ್ದೇಶನದ 72 ಹೂರೇ ಚಿತ್ರದ ಟೀಸರ್ ಲಾಂಚ್ ಮಾಡಲಾಗಿದ್ದು, ಪರ ವಿರೋಧ ಚರ್ಚೆಗಳು ಶುರುವಾಗಿವೆ.

VISTARANEWS.COM


on

Edited by

72 Hoorain bollywood film is ready to release in India
Koo

ನವದೆಹಲಿ: ದಿ ಕೇರಳ ಸ್ಟೋರಿ (The Kerala Story), ಕಾಶ್ಮೀರ್ ಫೈಲ್ (The Kashmir Files), ದಿ ಡೈರಿ ಆಫ್ ವೆಸ್ಟ್ ಬೆಂಗಾಲ್ ಸಿನಿಮಾ ಬೆನ್ನಲ್ಲೇ ಮತ್ತೊಂದು ವಿವಾದಾತ್ಮಕ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಇಸ್ಲಾಮಿಕ್ ತೀವ್ರವಾದದ ಕತೆಯನ್ನು ಹೊಂದಿರುವ 72 ಹೂರೇ(72 Hoorain) ಚಿತ್ರದ ಟೀಸರ್ ಲಾಂಚ್ ಆಗಿದ್ದು, ತೀವ್ರ ವಿರೋಧ ಕೂಡ ವ್ಯಕ್ತವಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ಸಂಜಯ್ ಪೂರನ್ ಸಿಂಗ್ ಚೌಹಾಣ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಟೀಸರ್ ಲಾಂಚ್ ಆಗುತ್ತಿದ್ದಂತೆ ನೆಟ್ಟಿಗರು, ಮುಸ್ಲಿಮ್ ಮತ್ತು ಇಸ್ಲಾಮ್‌ಗೆ ಅವಮಾನ ಮಾಡುವ ಪ್ರಾಪಗ್ಯಾಂಡ ಚಿತ್ರ ಎಂದು ಟೀಕಿಸಿದ್ದಾರೆ.

ಇತ್ತೀಚೆಗಷ್ಟೇ 72 ಹೂರೇ ಚಿತ್ರದ ಫಸ್ಟ್ ಲುಕ್ ಅನಾವರಣ ಮಾಡಲಾಗಿತ್ತು. ಆಗಲೂ ಟ್ವಿಟರ್‌ನಲ್ಲಿ ಸಾಕಷ್ಟು ಪರ ಮತ್ತು ವಿರೋಧ ಚರ್ಚೆಗಳು ಶುರುವಾಗಿದ್ದವು. ಭಾರತದ ಕೋಮು ಸೌಹಾರ್ದತೆಯನ್ನು ಹಾಳು ಮಾಡುವ ಪ್ರಯತ್ನಗಳ ನಡೆಯುತ್ತಿವೆ ಎಂದು ಟೀಕೆ ವ್ಯಕ್ತವಾಗಿತ್ತು.

ಚಿತ್ರದ ಟೀಸರ್‌ನಲ್ಲಿ ಒಸಾಮಾ ಬಿನ್ ಲಾಡೆನ್, ಅಜ್ಮಲ್ ಕಸಬ್ ಸೇರಿದಂತೆ ಇತರ ಚಿತ್ರಗಳನ್ನು ಮತ್ತು ಯಾಕೂಬ್ ಮೆಮನ್‌ನ ಮಿಶ್ರಿತ ಫೋಟೋವನ್ನು ತೋರಿಸಲಾಗಿದೆ. ಮೇಲ್ನೋಟಕ್ಕೆ ಟೀಸರ್‌ನಲ್ಲಿ ಕಾಣುವ ಅಂಶಗಳು ಖಂಡಿತವಾಗಿಯೂ, ಈ ಸಿನಿಮಾ ಕೂಡ ಮುಸ್ಲಿಮರು ಸುತ್ತ ಸುತ್ತದೆ ಎಂಬುದು ವೇದ್ಯವಾಗುತ್ತದೆ. ಉಗ್ರರಾದ ಮಸೂದ್ ಅಜರ್ ಮತ್ತು ಹಫೀಜ್ ಸಯೀದ್ ಅವರನ್ನು ಹೋಲುವರವನ್ನು ಹೈಲೆಟ್ ಮಾಡಲಾಗಿರುವುದನ್ನು ಕಾಣಬಹುದಾಗಿದೆ.

ಇದನ್ನೂ ಓದಿ: The Kerala Story : ದಿ ಕೇರಳ ಸ್ಟೋರಿ ಸಿನಿಮಾದ ಬಗ್ಗೆ ಕೆಂಡ ಕಾರಿದ ಹಿರಿಯ ನಟ ನಾಸಿರುದ್ದೀನ್‌ ಶಾ

72 ಹೂರೇ ಚಿತ್ರದ ಟ್ರೈಲರ್ ಅನ್ನು ಸಹ ನಿರ್ದೇಶಕರಾಗಿರುವ ಅಶೋಕ್ ಪಂಡಿತ್ ಅವರು ಟ್ವಿಟರ್‌ನಲ್ಲಿ ಷೇರ್ ಮಾಡಿದ್ದಾರೆ. ಇವರು ಕಾಶ್ಮೀರ ಪಂಡತ್ ಕೂಡ ಹೌದು. ನಮ್ಮ ಚಿತ್ರ 72 Hoorain ಸಿನಿಮಾದ ಮೊದಲ ನೋಟವನ್ನು ನಿಮಗೆ ಪ್ರಸ್ತುತಪಡಿಸುವ ಭರವಸೆಯಂತೆ. ನೀವು ಅದನ್ನು ಇಷ್ಟಪಡುತ್ತೀರಿ ಎಂದು ನನಗೆ ಖಾತ್ರಿಯಿದೆ. ಭಯೋತ್ಪಾದಕರ ಮಾರ್ಗದರ್ಶಕರು ಭರವಸೆ ನೀಡಿದಂತೆ 72 ಕನ್ಯೆಯರನ್ನು ಭೇಟಿಯಾಗುವ ಬದಲು ನೀವು ಕ್ರೂರವಾಗಿ ಸಾಯುತ್ತಿದ್ದರೆ? ನನ್ನ ಮುಂಬರುವ ಚಿತ್ರ 72 ಹೂರೇ ನ ಮೊದಲ ನೋಟವನ್ನು ಪ್ರಸ್ತುತಪಡಿಸುತ್ತಿದ್ದೇನೆ. ಚಿತ್ರವು 7 ಜುಲೈ 2023 ರಂದು ಬಿಡುಗಡೆಯಾಗಲಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

72 ಹೂರೇ ಚಿತ್ರದ ಟೀಸರ್

Continue Reading

South Cinema

Kiccha Sudeep: ಅಭಿಷೇಕ್ ಅಂಬರೀಷ್​ಗೆ ಭರ್ಜರಿ ಗಿಫ್ಟ್‌ ಕೊಟ್ಟ ಕಿಚ್ಚ ಸುದೀಪ್‌!

Kiccha Sudeep: ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು

VISTARANEWS.COM


on

Edited by

Kichcha Sudeep at Abhishek Ambareesh Wedding
Koo

ಬೆಂಗಳೂರು; ಯಂಗ್‌ ರೆಬೆಲ್ ಸ್ಟಾರ್‌ ಅಭಿಷೇಕ್ ಅಂಬರೀಷ್‌ (Abhishek Ambareesh Wedding) ) ಹಾಗೂ ಅವಿವ ಬಿಡಪ ಜೂನ್‌ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಿಚ್ಚ ಸುದೀಪ್ (Kiccha Sudeep) ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿತ್ತು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.

ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು. ಅಭಿಷೇಕ್ ಮದುವೆಗೆ ಸುದೀಪ್ ಗ್ರ್ಯಾಂಡ್ ಆಗಿಯೇ ಎಂಟ್ರಿ ಕೊಟ್ಟರು. ಸುದೀಪ್ ಜತೆ ಪತ್ನಿ ಪ್ರಿಯಾ ಸುದೀಪ್ ಹಾಗೂ ಸಾನ್ವಿ ಸುದೀಪ್ ಕೂಡ ಆಗಮಿಸಿ ಅಭಿ-ಅವಿವಾಗೆ ಶುಭಕೋರಿದರು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.

ಇದನ್ನೂ ಓದಿ: Kiccha Sudeep: ಕನ್ನಡಿಗರ ಹೃದಯ ಗೆದ್ದ ʻ2018ʼ ಚಿತ್ರ; ಮಲಯಾಳಂ ಸಿನಿಮಾಗೆ ಕಿಚ್ಚ ಸುದೀಪ್ ಫುಲ್ ಫಿದಾ

Kiccha Sudeep

ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಖ್ಯಾತ ಫ್ಯಾಷನ್​ ಡಿಸೈನರ್​ ಪ್ರಸಾದ್​ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್​ ಅಂಬರೀಷ್​ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.

Continue Reading

South Cinema

Actor Yash: ಅಭಿಷೇಕ್‌ ದಂಪತಿಗೆ ವಿಶ್‌ ಮಾಡಿದ ಯಶ್‌ -ರಾಧಿಕಾ; ಸೈಲಿಶ್‌ ಆಗಿ ಕಂಡ ರಾಕಿ ಭಾಯ್!

Actor Yash : ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು

VISTARANEWS.COM


on

Edited by

Actor Yash In Abhishek ambareesh wedding
Koo
Actor Yash
ಕರ್ಕಾಟಕ ಲಗ್ನದಲ್ಲಿ 930 1030 ಅವಿವಾ ಹಾಗೂ ಅಭಿಷೇಕ್‌ ಹಸೆಮಣೆ ಏರಿದರು ಅಂಬರೀಷ್ ಅವರನ್ನು ಕಂಡರೆ ಯಶ್​ಗೆ Actor Yash ಅಚ್ಚುಮೆಚ್ಚು ಈಗ ಅವರು ಅಂಬಿ ಮಗ ಅಭಿಷೇಕ್ ಮದುವೆಗೆ ಆಗಮಿಸಿ ವಿಶ್ ಮಾಡಿದ್ದಾರೆ
Actor Yash
ಯಶ್‌ ಹಾಗೂ ರಾಧಿಕಾ ಪಂಡಿತ್‌ ಸ್ಟೈಲಿಶ್‌ ಆಗಿ ಕಾಣಿಸಿಕೊಂಡರು ಯಶ್‌ ಕೆಜಿಎಫ್ 2 ಲುಕ್​ಅನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ
Actor Yash
ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಂತೆ ಅದ್ಧೂರಿಯಾಗಿ ನೆರವೇರಿತು
Actor Yash
ನಿಶ್ಚಿತಾರ್ಥಕ್ಕೆ ಯಶ್‌ ಹಾಗೂ ರಾಧಿಕಾ ಭಾಗಿಯಾಗಿದ್ದರು
Actor Yash
ಖ್ಯಾತ ಫ್ಯಾಷನ್​ ಡಿಸೈನರ್​ ಪ್ರಸಾದ್​ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ Aviva Bidapa ಹಾಗೂ ಅಭಿಷೇಕ್​ ಅಂಬರೀಷ್​ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು
Continue Reading

South Cinema

Abhishek Ambareesh Wedding: ಅಭಿಷೇಕ್‌ ಅಂಬರೀಶ್‌- ಅವಿವ ಜೋಡಿಗೆ ಆಶೀರ್ವದಿಸಿದ ರಜನಿಕಾಂತ್‌!

Abhishek Ambareesh Wedding: ಸೂಪರ್‌ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್‌ ಅಂಬರೀಶ್‌ ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

VISTARANEWS.COM


on

Edited by

Rajinikanth Came to Abhishek Ambareesh And Aviva marriage
Koo
Abhishek Ambareesh Wedding

ಸೂಪರ್‌ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್‌ ಅಂಬರೀಶ್‌ (Abhishek Ambareesh Wedding) ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

Abhishek Ambareesh Wedding
ರಜನಿಕಾಂತ್ ಭಾಗವಹಿಸಿ ಮುವೆಯ ಸಂಭ್ರಮದಲ್ಲಿ ಭಾಗವಹಿಸಿ ದಂಪತಿಯನ್ನು ಆಶೀರ್ವದಿಸಿದರು ಇದೀಗ ವಿಡಿಯೊ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ
Abhishek Ambareesh Wedding

ಖ್ಯಾತ ಫ್ಯಾಷನ್​ ಡಿಸೈನರ್​ ಪ್ರಸಾದ್​ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್​ ಅಂಬರೀಷ್​ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು.

Abhishek Ambareesh Wedding
<br>ಕರ್ಕಾಟಕ ಲಗ್ನದಲ್ಲಿ 930 1030 ಇಬ್ಬರೂ ಹಸೆಮಣೆ ಏರಿದರು ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
Abhishek Ambareesh Wedding

ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ.

Continue Reading
Advertisement
Transport Minister Ramalinga reddy
ಕರ್ನಾಟಕ2 hours ago

Ramalinga Reddy: 4 ಸಾರಿಗೆ ನಿಗಮಗಳ ಅಧ್ಯಕ್ಷರಾಗಿ ರಾಮಲಿಂಗಾರೆಡ್ಡಿ ನೇಮಕ

DCM DK Shivakumar
ಕರ್ನಾಟಕ3 hours ago

Hosakerehalli Lake: ಕೆರೆಯಲ್ಲಿ ರಸ್ತೆ; ಡಿಕೆಶಿ ಸೂಚನೆ ಬೆನ್ನಲ್ಲೇ ಬಿಬಿಎಂಪಿಯ ಇಬ್ಬರು ಅಧಿಕಾರಿಗಳ ಅಮಾನತು

Indian Railways help desk
ದೇಶ3 hours ago

Odisha Train Accident : ಅವಘಡದಲ್ಲಿ ಮೃತಪಟ್ಟವರನ್ನು ಗುರುತಿಸಲು ಭಾರತೀಯ ರೈಲ್ವೆ ಮನವಿ

Water tap
ಕರ್ನಾಟಕ4 hours ago

Koppal News: ಕನಕಗಿರಿಯಲ್ಲಿ ಕಲುಷಿತ ನೀರು ಸೇವಿಸಿ ವೃದ್ಧೆ ಸಾವು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Rehena Fathima
ದೇಶ4 hours ago

ಬೆತ್ತಲೆಯಾಗುವುದು ಯಾವಾಗಲೂ ಅಶ್ಲೀಲವಲ್ಲ: ಬೆತ್ತಲಾದ 33 ವರ್ಷದ ಮಹಿಳೆಗೆ ಕೇರಳ ಹೈಕೋರ್ಟ್​​ನಿಂದ ರಿಲೀಫ್​

A sapling was planted on the banks of Tunga in Shivamogga
ಕರ್ನಾಟಕ4 hours ago

World Environment Day: ಶಿವಮೊಗ್ಗದಲ್ಲಿ ಸಹಸ್ರ ವೃಕ್ಷಾರೋಪಣ; ಸಾವಿರ ಗಿಡ ನೆಡುವ ಅಭಿಯಾನಕ್ಕೆ ಚಾಲನೆ

Ashwini Vaishnav
ಪ್ರಮುಖ ಸುದ್ದಿ4 hours ago

ವಿಸ್ತಾರ ಸಂಪಾದಕೀಯ: ರೈಲು ದುರಂತ ಬಳಿಕ ಪರಿಹಾರ ಕಾರ್ಯ; ರೈಲ್ವೆ ಸಚಿವರ ನಡೆ ಅನುಕರಣೀಯ

World Environment Day celebration at Shirsi veda health centere
ಉತ್ತರ ಕನ್ನಡ4 hours ago

Uttara Kannada News: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಂಕಣ ಬದ್ಧರಾಗಬೇಕು: ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

Ekana Stadium
ಕ್ರಿಕೆಟ್5 hours ago

ತಾಯಿ, ಮಗಳ ಜೀವ ತೆಗೆಯಿತು ಐಪಿಎಲ್ ಲಕ್ನೊ ತಂಡದ ಹೋರ್ಡಿಂಗ್

Bike Accident in Charmadi Ghat
ಕರ್ನಾಟಕ5 hours ago

Bike Accident: ಚಾರ್ಮಾಡಿ ಘಾಟ್‌ನಲ್ಲಿ ಸಾರಿಗೆ ಬಸ್‌ ಚಕ್ರಕ್ಕೆ ಸಿಲುಕಿ ಸ್ಕೂಟರ್‌ ಸವಾರ ಸಾವು

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ4 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ6 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್8 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Chakravarthy Sulibele and MB Patil
ಕರ್ನಾಟಕ15 hours ago

Chakravarthy Sulibele: ಜೈಲಿಗೆ ಕಳುಹಿಸಲೇ ಬೇಕು ಅಂತಿದ್ದರೆ ಬನ್ನಿ, ನಾನೂ ನೋಡ್ತೇನೆ: ಎಂಬಿಪಿಗೆ ಸೂಲಿಬೆಲೆ ಸವಾಲ್‌

Sevanthige Flower Farming
ಕೃಷಿ15 hours ago

Krishi Khajane : ಬಿಳಿ ಸೇವಂತಿಗೆ ಬೆಳೆದರೆ ಒಂದು ಎಕರೆಗೆ 5 ಲಕ್ಷ ರೂ. ಲಾಭ!

Horoscope Today
ಪ್ರಮುಖ ಸುದ್ದಿ22 hours ago

Horoscope Today : ಈ ನಾಲ್ಕು ರಾಶಿಯ ಉದ್ಯೋಗಿಗಳಿಗೆ ಇಂದು ಅದೃಷ್ಟದ ದಿನವಂತೆ!

Mangalore Moral Policing News
ಉಡುಪಿ2 days ago

Video: ನಮ್ಮ ನಿದ್ದೆಗೆಡಿಸಿದ್ದಾರೆ; ಮುಸ್ಲಿಮರೊಂದಿಗೆ ಬೀಚ್​​ಗೆ ಬಂದಿದ್ದ ಹುಡುಗಿಯರ ವಿರುದ್ಧ ನಿಂತ ಮಹಿಳೆಯರು

horoscope today
ಪ್ರಮುಖ ಸುದ್ದಿ2 days ago

Horoscope Today : ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರಿಕೆ ವಹಿಸಲೇಬೇಕು!

South facing house vastu
ಭವಿಷ್ಯ3 days ago

Vastu Tips : ದಕ್ಷಿಣ ದಿಕ್ಕಿಗೆ ಬಾಗಿಲಿರುವ ಮನೆ ಕೂಡ ಶುಭವಂತೆ! ಹೌದೇ? ಏನೆನ್ನುತ್ತದೆ ವಾಸ್ತು ಶಾಸ್ತ್ರ?

jackfruit
ಕೃಷಿ3 days ago

Krishi Khajane : ಹುಲುಸಾಗಿ ಹಲಸು ಬೆಳೆಯಿರಿ, ಎಕರೆಗೆ 2.5 ಲಕ್ಷ ಆದಾಯ ಪಡೆಯಿರಿ!

Bus Driver
ಕರ್ನಾಟಕ3 days ago

Viral Video: ಬೆಂಗಳೂರು ಟ್ರಾಫಿಕ್‌ನಲ್ಲೇ ಊಟ ಮಾಡಿ ಮುಗಿಸಿದ ಡ್ರೈವರ್! ಇಲ್ಲಿದೆ ನೋಡಿ ವಿಡಿಯೊ

horoscope today
ಪ್ರಮುಖ ಸುದ್ದಿ3 days ago

Horoscope Today : ಈ ಮೂರು ರಾಶಿಯವರಿಗೆ ಖರ್ಚು ಹೆಚ್ಚು; ಇಂದು ನಿಮ್ಮ ಭವಿಷ್ಯ ಹೀಗಿದೆ

Siddaramaiah
ಕರ್ನಾಟಕ3 days ago

Congress Guarantee : ಹೂ ಈಸ್‌ ಯುವರ್‌ ಯಜಮಾನಿ? ಸಿದ್ದರಾಮಯ್ಯ ಸುದ್ದಿಗೋಷ್ಠಿಯ ತಮಾಷೆ ಪ್ರಸಂಗಗಳು ಇಲ್ಲಿವೆ!

ಟ್ರೆಂಡಿಂಗ್‌

error: Content is protected !!