Site icon Vistara News

Kannada New Movie | ಕಾಂತಾರದ ʻಗುರುವʼ ನಾಯಕ ನಟನಾಗಿ ನಟಿಸಲಿರುವ ಚಿತ್ರಕ್ಕೆ ಮುಹೂರ್ತ

Kannada New Movie

ಉಳ್ಳಾಲ: ಕಾಂತಾರ ಚಿತ್ರದಲ್ಲಿ ಪ್ರಮುಖ ಗುರುವ ಪಾತ್ರ ಮಾಡಿದ್ದ ಸ್ವರಾಜ್ ಶೆಟ್ಟಿ ನಾಯಕ ನಟನಾಗಿ ನಟಿಸಲಿರುವ ಚಿತ್ರದ ಮುಹೂರ್ತ (Kannada New Movie) ಹರೇಕಳದ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಡಿಸೆಂಬರ್‌ 11ರ ಭಾನುವಾರ ನೆರವೇರಿದೆ. ಮ್ಯಾಕ್ಸ್ ಕ್ರಿಯೇಷನ್ಸ್ ಸಂಸ್ಥೆ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಇನ್ನಷ್ಟೇ ಹೆಸರಿಡಬೇಕಿದೆ.

ಹಿರಿಯ ರಂಗಕರ್ಮಿ ವಿಜಯಕುಮಾರ್ ಕೊಡಿಯಾಲ್ ಬೈಲ್ ಕ್ಲಾಪ್‌ ಮಾಡಿದರು. ಚಿತ್ರೀಕರಣಕ್ಕೆ ಚಲನಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಚಾಲನೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಮಾತಾಡಿದ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ʻʻಸ್ವರಾಜ್ ಶೆಟ್ಟಿ ಉತ್ತಮ ಕಲಾವಿದ. ಮೊದಲ ಬಾರಿ ಕಥೆ ಚಿತ್ರಕಥೆ ನಿರ್ದೇಶನದ ಜತೆಗೆ ನಾಯಕರಾಗಿ ಅಭಿನಯಿಸುತ್ತಿದ್ದಾರೆ. ಅವರಿಗೆ ಎಲ್ಲರ ಹಾರೈಕೆ ಇರಲಿ. ಕನ್ನಡ ಧಾರವಾಹಿ ʻರಾಧಾಕಲ್ಯಾಣʼ, ʻಕೃಷ್ಣ ತುಳಸಿʼ ಹಾಗೂ ಓಂಪ್ರಕಾಶ್ ರಾವ್ ಅವರ ಎರಡು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರ ಇನ್ನೇನು ತೆರೆಕಾಣಲಿದೆ. ಬಹುನಿರೀಕ್ಷಿತ ಬಿರ್ದ್ದ ಕಂಬುಲ ಚಿತ್ರದಲ್ಲಿ ನಿರ್ದೇಶಕ ಹಾಗೂ ನಾಯಕನಟನಾಗಿ ನಟಿಸಿ, ಶಿವದೂತೆ ಗುಳಿಗೆಯಲ್ಲೂ ನಾಟಕದಲ್ಲಿ ಒಂದು ದಿನಕ್ಕೆ ಮೂರು ಪ್ರದರ್ಶನವಿದ್ದರೂ ಅದೇ ಹುಮ್ಮಸ್ಸಿನಲ್ಲಿ ನಟಿಸುವ ಅದ್ಭುತ ಕಲಾವಿದ ಇವರುʼʼಎಂದರು.

ಪ್ರಕಾಶ್ ಪಾಂಡೇಶ್ವರ್ ಮಾತನಾಡಿ , “ಸ್ವರಾಜ್ ಎನ್ನುವ ಪ್ರತಿಭೆ ಪೂರ್ಣ ಪ್ರಮಾಣದಲ್ಲಿ ಈ ಚಿತ್ರದ ಮೂಲಕ ಪಯಣ ಆರಂಭಿಸಿದ್ದಾರೆ. ಭಾರೀ ಪ್ರಶಂಸೆ ಪಡೆದುಕೊಂಡ ನಟ ಸ್ವರಾಜ್ ಶೆಟ್ಟಿ .ಕಾಂತಾರ ಚಿತ್ರದಲ್ಲಿ ಕಂಡ ಯಶಸ್ಸು ಸೇರಿದಂತೆ ಶಿವದೂತೆ ಗುಳಿಗೆ ನಾಟಕದಲ್ಲೂ ಅದ್ಭುತ ನಟನೆಯನ್ನು ಮಾಡಿ ಖ್ಯಾತಿ ಗಳಿಸಿದವರು. ತಾವಾಗಿಯೇ ನಟಿಸಿ, ನಿರ್ದೇಶಿಸಿ, ಚಿತ್ರಕಥೆ ನೀಡಿ ತಯಾರಾಗುತ್ತಿರುವ ಸಿನಿಮಾವಿದು. ಚಿತ್ರತಂಡಕ್ಕೆ ಶುಭಹಾರೈಕೆಗಳುʼʼ ಎಂದರು.

ಇದನ್ನೂ ಓದಿ | Kannada New Movie | ʻಬಾಂಡ್‌ ರವಿʼ ಟ್ರೈಲರ್‌ ಔಟ್‌: ಸಿನಿಮಾ ರಿಲೀಸ್‌ ಯಾವಾಗ?

Kannada New Movie

ನಾಯಕನಟ ಸ್ವರಾಜ್ ಶೆಟ್ಟಿ ಮಾತನಾಡಿ, ʻʻಕಾಂತಾರ ಚಿತ್ರದಲ್ಲಿ ನಟಿಸಿರುವ ಪ್ರತಿಮಾ ನಾಯ್ಕ್, ಸತೀಶ್ ಆಚಾರ್ಯ, ರಾಧಾಕೃಷ್ಣ ನಾಯ್ಕ್ ಸೇರಿದಂತೆ ಅನೇಕ ಕಲಾವಿದರು ಚಿತ್ರದಲ್ಲಿ ನಟಿಸಲಿದ್ದಾರೆ. ಜನವರಿ ಶೂಟಿಂಗ್ ಸಂದರ್ಭದಲ್ಲಿ ಸ್ಟಾರ್ ಕಾಸ್ಟಿಂಗ್ ನಡೆಯಲಿದೆ. ಕನ್ನಡದಲ್ಲಿ ಚಿತ್ರೀಕರಣಗೊಳ್ಳಲಿರುವ ಚಿತ್ರ ನಂತರ ತುಳು ಭಾಷೆಯಲ್ಲೂ ತೆರೆಕಾಣಲಿದೆ. ಚಿತ್ರಕ್ಕೆ ಈಗಾಗಲೇ ಹೆಸರನ್ನು ಇಡಲಾಗಿದೆ. ಅದನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದ್ದೇವೆ. ಪ್ರೇಮ ಕಥೆಯನ್ನು ಒಳಗೊಂಡ ಚಿತ್ರ ಇದಾಗಿದ್ದು, ಮಂಗಳೂರಿನಾದ್ಯಂತ ೨೫ ದಿನಗಳ ಕಾಲ ಶೂಟಿಂಗ್ ನಡೆಯಲಿದೆʼʼ ಎಂದು ತಿಳಿಸಿದರು.

ಚಿತ್ರಕ್ಕೆ ಶಿವಾನಿ ರೈ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಚಿತ್ರ ನಿರ್ಮಾಪಕ ಹಾಗೂ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್, ನಾಯಕ ನಟ ಸ್ವರಾಜ್ ಶೆಟ್ಟಿ, ನಾಯಕಿ ನಟಿ ಶಿವಾನಿ ರೈ, ಭಾಗ್ಯರಾಜ್ ಶೆಟ್ಟಿ, ನಿರ್ಮಾಪಕಿ ರಕ್ಷಾ ರಾಜ್ ಶೆಟ್ಟಿ , ಪ್ರವೀಣ್ ಶೆಟ್ಟಿ, ಗಣೇಶ್ ನೀರ್ಚಾಲ್ ಉಪಸ್ಥಿತರಿದ್ದರು. ಚಿತ್ರಕ್ಕೆ ರೂಪೇಶ್‌ ಷಾಜಿ ಕ್ಯಾಮೆರಾ ನಿರ್ದೇಶನ ಇದ್ದರೆ, ವಿನೋದ್ ರಾಜ್ ಕೋಕಿಲ ಅವರ ಸಂಗೀತ ನಿರ್ದೇಶನವಿದೆ.

ಇದನ್ನೂ ಓದಿ | Kannada New Movie | ಶಿರಡಿ ಸಾಯಿಬಾಬಾ ಜೀವನ ಕಥೆ ಆಧಾರಿತ ಸಿನಿಮಾ ʻಸದ್ಗುರುʼ ಜನವರಿ 5ಕ್ಕೆ ತೆರೆಗೆ

Exit mobile version