Site icon Vistara News

Music Composer Hamsalekha : ಜೈನ ಫಿಲಾಸಫಿ ಬುಲ್‌‌ಶಿಟ್ ಎಂದು ಅವಮಾನಿಸಿದ ಹಂಸಲೇಖ ಈಗ ಕ್ಷಮಿಸಿ ಅಂತಿದ್ದಾರೆ!

Music Composer Hamsalekha Ask Apology To Jain Community controversial

ಬೆಂಗಳೂರು: ಹಂಸಲೇಖ (Music Composer Hamsalekha) ಅವರು ಕೆಲವೊಮ್ಮೆ ಅವರು ವಿವಾದಗಳನ್ನು ಮಾಡಿಕೊಳ್ಳುತ್ತಾರೆ. ಇತ್ತೀಚೆಗೆ ಅವರು ಜೈನ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಇದು ಸಾಕಷ್ಟು ವಿವಾದ ಸೃಷ್ಟಿ ಮಾಡಿತ್ತು. ಅನೇಕರು ಹಂಸಲೇಖ ಬಳಿ ಕ್ಷಮೆ ಕೇಳುವಂತೆ ಆಗ್ರಹಿಸಿದ್ದರು. ಅಂತೆಯೇ ಹಂಸಲೇಖ ಅವರು ಕ್ಷಮೆ ಕೇಳಿದ್ದಾರೆ. ಕಾರ್ಯಕ್ರಮ ಒಂದರಲ್ಲಿ ಹಂಸಲೇಖ ಅವರು ‘ಜೈನರ ಫಿಲಾಸಫಿಯಲ್ಲಿ 24 ಜನ್ಮಗಳು ಇವೆಯಂತೆ. ಅದೆಲ್ಲ ಸುಳ್ಳು, ಬುಲ್​ಶಿಟ್’ ಎಂದು ಹೇಳಿದ್ದರು. ಇದಾದ ಬಳಿಕ ಜೈನ ಧರ್ಮದವರು ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಹಂಸಲೇಖ ಅವರು ಈ ಬಗ್ಗೆ ಕ್ಷಮೆ ಕೇಳಿದ್ದಾರೆ.

ಇನ್ನು ಈ ವಿವಾದ ಆದ ಬೆನ್ನಲ್ಲೇ ವಿಡಿಯೊ ಮೂಲಕ ಕ್ಷಮೆ ಕೂಡ ಕೇಳಿದರು. ವಿಡಿಯೊದಲ್ಲಿ ‘’ಮಹನೀಯರೆ ದಯಮಾಡಿ ಕ್ಷಮಿಸಿ.. ನಾನು ಯಾವತ್ತೂ ಅದರ ವಿರುದ್ಧ ಮಾತನಾಡಬೇಕು ಎಂಬ ಯೋಚನೆ ಮಾಡಿದವನಲ್ಲ. ಆ ಪದವನ್ನ ಬಳಸಬೇಕು ಅಂದುಕೊಳ್ಳಲಿಲ್ಲ. ಅಲ್ಲಿ ತುಂಬಾ ಒತ್ತಡಗಳಿಂದ, ನನ್ನನ್ನ ಎಳೆದಾಡುತ್ತಿದ್ದರು. ನಾನೇನೋ ಗದರಲು ಹೋಗಿ ಆಮೇಲೆ ಈ ಕಡೆ ಬಂದೆ. ಆ ಮಾತು ಬಂದಿದ್ದು ತಪ್ಪಾಯ್ತು. ಇನ್ಯಾವತ್ತೂ ಆ ರೀತಿಯ ತಪ್ಪುಗಳನ್ನ ಮಾಡೋದಿಲ್ಲ. ನಾನು ಪಂಪನ ದಾಸಾನುದಾಸ. ಕನ್ನಡವನ್ನ ಕಟ್ಟಿದ ಆ ಮಹಾನ್ ವ್ಯಕ್ತಿಯ ಸೇವೆಗೆ ನಿಂತಿರೋನು ನಾನು. ದಯಮಾಡಿ ಇದನ್ನ ಬೆಳೆಸಬೇಡಿ. ಪತ್ರದ ಮುಖಾಂತರವೂ ಕ್ಷಮೆ ಕೇಳಿದ್ದೇನೆ. ದಯವಿಟ್ಟು ಈ ವಿಷಯವನ್ನ ಇಲ್ಲಿಗೆ ಮುಕ್ತಾಯ ಮಾಡಿ’’ ಎಂದು ವಿಡಿಯೋದಲ್ಲಿ ಹಂಸಲೇಖ ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: Krishan Kumar: ಕೇವಲ 21ನೇ ವಯಸ್ಸಿಗೆ ನಿಧನ ಹೊಂದಿದ ‘ಅನಿಮಲ್’ ಸಿನಿಮಾ ನಿರ್ಮಾಪಕನ ಮಗಳು

ಇನ್ನು ಪತ್ರದ ಮೂಲಕ ಕೂಡ ʻʻ’ಕ್ಷಮೆಯಿರಲಿ.. ನನ್ನ ಪಂಪನಾಣೆ, ನನ್ನ ಪದ ಬಳಕೆ ಉದ್ದೇಶ ಪೂರಿತವಲ್ಲ. ಗಲಾಟೆ, ಒತ್ತಡದ ಆ ಕ್ಯಾಮರಾಗಳ ಗುಂಪಿನಲ್ಲಿ ಆ ಮಾತು ತೂರಿ ಬಂದಿದೆ. ತ್ಯಾಗ ಮತ್ತು ಸಹನೆಯ ಸಂಸ್ಕೃತಿಯನ್ನು ಜಗತ್ತಿಗೆ ನೀಡಿದ ಜೈನ ಸಮುದಾಯಕ್ಕೆ ಶಿರಬಾಗಿ ಕ್ಷಮೆ ಕೋರುತ್ತೇನೆ. ಪ್ರಿಯ ಮಾಧ್ಯಮಗಳೇ, ದಯಮಾಡಿ. ನಾನು ದುಡುಕಿ ಮಾತಾಡಿದ ಆ “BULLSHIT” ಪದವನ್ನು DELETE ಮಾಡಿ. ಕನ್ನಡದ ಕಾವ್ಯಪರಂಪರೆಯ ಬೇರು ಕಾಂಡಗಳಾಗಿರುವ ಜೈನಕವಿ ಮುನಿ ಪರಂಪರೆಗೆ ಆಗಿರುವ ಗಾಯವನ್ನು ವಾಸಿಮಾಡಲು ಈ ಮೂಲಕ ಕೋರುತ್ತಿದ್ದೇನೆ. ಆಡು ಮಾತುಗಳನ್ನು COIN ಮಾಡುವ ನನ್ನಂತ ಸಿನಿಮಾ ರೈಟರ್‌ಗಳಿಗೆ ಇದು ಶಾಸ್ತಿ ಮತ್ತು ಶಾಪ ಎಂದು ನಾನು ಭಾವಿಸಿದ್ದೇನೆ. ಆ ‘ಮಾತು’ ನನ್ನ ಬಾಯಿಂದ ಅಲ್ಲಿ ಹೊರಟ ಹಿನ್ನೆಲೆ ಹೀಗಿದೆಆ ಕಾರ್ಯಕ್ರಮ ಮುಗಿಸಿ ಹೊರ ಬರುವಾಗ. channel ನವರು Individual byte ಗಳಿಗಾಗಿ ಕೈ ಹಿಡಿದು ಎಳೆದಾಡಿದರು. ಆಗ ಸಿಟ್ಟು ತಡೆದುಕೊಂಡು ಹೊರಬಂದೆ. ನನ್ನ ಸಹಾಯಕ, ನನ್ನನ್ನ ಹೊಗಳಿದ – ‘ಸಿಟ್ಟು ತಡೆಯಲಾಗಲಿಲ್ಲ ಆದರೂ ತಡೆದುಕೊಂಡಿದ್ದು ಒಳ್ಳೆದಾಯ್ತು ಸಾರ್” – ಎಚಿದ. ಆಗ ನಾನು ಆತನಿಗೆ “ಸಿಟ್ಟು, ಹೋಗಿ ಬರೋ ಬುಲೆಟ್ಟು ” ಎಂದು ನಗಿಸಿದೆ. ನಾನು ಇನ್ನೂ ಮುಂದುವರೆದು ಸಿಟ್ಟು ಒಂದು ಬುಲ್ಶಿಟ್ಟು” ಎಂದೆ. ಆದರೆ ಆ ಪದ ಅಲ್ಲಿ ಬರಬಾರದಿತ್ತು. ಇಷ್ಟೆ ನಡೆದಿದ್ದು. ದಯವಿಟ್ಟು ಕ್ಷಮಿಸಿ…’’ ಎಂದು ಪತ್ರದ ಮೂಲಕ ಕ್ಷಮೆ ಕೇಳಿದ್ದಾರೆ.

Exit mobile version