Naga Chaitanya: ನಿಶ್ಚಿತಾರ್ಥದ ಮೊದಲು ಮಾಜಿ ಪತ್ನಿಯ ಪೋಟೊ ಡಿಲಿಟ್‌ ಮಾಡಿದ ನಾಗ ಚೈತನ್ಯ! - Vistara News

ಸಿನಿಮಾ

Naga Chaitanya: ನಿಶ್ಚಿತಾರ್ಥದ ಮೊದಲು ಮಾಜಿ ಪತ್ನಿಯ ಪೋಟೊ ಡಿಲಿಟ್‌ ಮಾಡಿದ ನಾಗ ಚೈತನ್ಯ!

Naga Chaitanya: ನಾಗ ಚೈತನ್ಯ ಈ ಹಿಂದೆ ಸಮಂತಾ ಅವರೊಂದಿಗಿನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದರು, ಇದರಲ್ಲಿ ಸಮಂತಾ ಜತೆ ಇದ್ದ ಕೆಲವು ಫೋಟೊಗಳು, ಮನೆಯ ಚಿತ್ರಗಳು ಇತ್ತು. ಮಜಿಲಿ ತಂಡದೊಂದಿಗೆ ಪೋಸ್ ನೀಡುತ್ತಿರುವುದು ಕಂಡುಬಂದಿದೆ.

VISTARANEWS.COM


on

Naga Chaitanya deleated ex samantha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಗ ಚೈತನ್ಯ (Naga Chaitanya) ಅವರು ಶೋಭಿತಾ ಧೂಳಿಪಾಲ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೊದಲು ಮಾಜಿ ಪತ್ನಿ ಸಮಂತಾ ರುತ್ ಪ್ರಭು ಜತೆ ಇರುವ ಫೋಟೊಗಳನ್ನು ಡಿಲಿಟ್‌ ಮಾಡಿದ್ದಾರೆ. ನಾಗ ಚೈತನ್ಯ ಮತ್ತು ಶೋಭಿತಾ ಗುರುವಾರ ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡರು. ಜೋಡಿಯ ನಿಶ್ಚಿತಾರ್ಥದ ಫೋಟೋಗಳನ್ನು ನಾಗಾರ್ಜುನ ಅವರು ಹಂಚಿಕೊಂಡಿದ್ದಾರೆ

ನಾಗ ಚೈತನ್ಯ ಈ ಹಿಂದೆ ಸಮಂತಾ ಅವರೊಂದಿಗಿನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದರು, ಇದರಲ್ಲಿ ಸಮಂತಾ ಜತೆ ಇದ್ದ ಕೆಲವು ಫೋಟೊಗಳು, ಮನೆಯ ಚಿತ್ರಗಳು ಇತ್ತು. ಮಜಿಲಿ ತಂಡದೊಂದಿಗೆ ಪೋಸ್ ನೀಡುತ್ತಿರುವುದು ಕಂಡುಬಂದಿದೆ. ಮಜಿಲಿ ಚಿತ್ರದ ಪೋಸ್ಟರ್ ಕೂಡ ಇದೆ. ಇದೀಗ ವರದಿಯ ಪ್ರಕಾರ ರ ಟೈಮ್‌ಲೈನ್‌ನಲ್ಲಿ ಇವರಿಬ್ಬರ ಪೋಸ್ಟ್‌ಗಳು ಮಾತ್ರ ಇವೆ.

ಇದನ್ನೂ ಓದಿ: Kannada New Movie: ‘ಮರ್ಫಿ’ ಸಿನಿಮಾದ ಹಾಡು ಬಿಡುಗಡೆ; ಸಮಯ ಸ್ಮರಿಸಿದ ಪ್ರಭು ಮುಂಡ್ಕೂರ್!

ಮೇ 2022ರಲ್ಲಿ, ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಮೊದಲ ಬಾರಿಗೆ ಹೈದರಾಬಾದ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಶೋಭಿತಾ ಧೂಳಿಪಾಲ ತಮ್ಮ ʻಮೇಜರ್ʼ ಚಿತ್ರದ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದರು. ಆ ಸಮಯದಲ್ಲಿ ನಟಿ ಚಿತ್ರದ ಪ್ರಚಾರ ಮಾತ್ರವಲ್ಲದೆ ಮೇ 31 ರಂದು ಜನ್ಮದಿನ ಆಚರಣೆ ಮಾಡಿಕೊಂಡಿದ್ದರು. ನಾಗ ಚೈತನ್ಯ ಅವರು ಆಚರಣೆಯ ಭಾಗವಾಗಿದ್ದರು. ಬಳಿಕ ಅಲ್ಲಿಂದ ಇಬ್ಬರೂ ಸ್ನೇಹಿತರಾದರು. ಅವರ ಸ್ನೇಹ ಬಲವಾಗಿ ಡೇಟಿಂಗ್ ಪ್ರಾರಂಭಿಸಿದರು. ಎರಡು ವರ್ಷಗಳ ಕಾಲ ಒಟ್ಟಿಗೆ ಸಮಯ ಕಳೆದಿದ್ದರು. ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ವಕೇಶನ್‌ಗೆ ಹೋಗಿರುವ ಹಲವಾರು ಫೋಟೊಗಳು ವೈರಲ್‌ ಆಗಿವೆ. ಆದರೆ ಪ್ರತಿ ಬಾರಿ ಡೇಟಿಂಗ್‌ ವಂದತಿ ಹಬ್ಬಿದ್ದಾಗಲೂ ಜೋಡಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿರಲಿಲ್ಲ. ಇದೀಗ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

37 ವರ್ಷದ ನಟ ನಾಗ ಚೈತನ್ಯ ಅವರು 32 ವರ್ಷದ ಶೋಭಿತಾಗೆ ತಮ್ಮ ಹೈದರಾಬಾದ್ನ ಮನೆಯಲ್ಲಿ ಉಂಗುರ ತೊಡಿಸಿದ್ದಾರೆ. ಈ ಜೋಡಿ ನಡುವೆ  5 ವರ್ಷಗಳ ಏಜ್ ಗ್ಯಾಪ್ ಇದೆ. ನಾಗ ಚೈತನ್ಯಗಿಂತ ಶೋಭಿತಾ 5 ವರ್ಷ ಚಿಕ್ಕವರಾಗಿದ್ದಾರೆ.

ಅಂತಿಮವಾಗಿ, ನಾಗಾರ್ಜುನ ಎಕ್ಸ್‌ನಲ್ಲಿ ಸುದ್ದಿಯನ್ನು ದೃಢಪಡಿಸಿದ್ದಾರೆ. ಫೋಟೊಗಳನ್ನು ಹಂಚಿಕೊಂಡು, “ನಮ್ಮ ಮಗ ನಾಗ ಚೈತನ್ಯ ಅವರ ನಿಶ್ಚಿತಾರ್ಥ ಬೆಳಗ್ಗೆ 9:42ಕ್ಕೆ ಶೋಭಿತಾ ಧೂಳಿಪಾಲ ಜತೆ ನೆರವೇರಿದೆ. ಶೋಭಿತಾ ಧೂಳಿಪಾಲರನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಜೋಡಿಗೆ ಅಭಿನಂದನೆಗಳು! ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿ! 8.8.8 ಅನಂತ ಪ್ರೀತಿಯ ಆರಂಭʼʼಎಂದು ಬರೆದುಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada New Movie: ಜಯ್ ಶೆಟ್ಟಿ ಅಭಿನಯದ ʼಸತ್ವಿʼ ಸಿನೆಮಾ ಪೋಸ್ಟರ್ ರಿಲೀಸ್‌

Kannada New Movie: ʼಸಂಭವಾಮಿ ಯುಗೇಯುಗೇʼ ಚಿತ್ರದ ನಾಯಕ ಜಯ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಜಯ್ ಶೆಟ್ಟಿ ನಾಯಕನಾಗಿ‌ ನಟಿಸುತ್ತಿರುವ “ಸತ್ವಿ” ಚಿತ್ರದ ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕನಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

VISTARANEWS.COM


on

Kannada New Movie
Koo

ಬೆಂಗಳೂರು: ಇತ್ತೀಚೆಗೆ ಬಿಡುಗಡೆಯಾಗಿ ಯಶಸ್ಸು ಕಂಡ “ಸಂಭವಾಮಿ ಯುಗೇಯುಗೇ” ಚಿತ್ರದ ನಾಯಕ ಜಯ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಜಯ್ ಶೆಟ್ಟಿ ನಾಯಕನಾಗಿ‌ ನಟಿಸುತ್ತಿರುವ “ಸತ್ವಿ” ಚಿತ್ರದ (Kannada New Movie) ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕನಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ.

ಡೇವಿಡ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು “ಸಂಭವಾಮಿ ಯುಗೇಯುಗೇ” ಸೇರಿದಂತೆ ಕನ್ನಡದ ಅನೇಕ ಚಿತ್ರಗಳಿಗೆ ಹಾಗೂ ಹಲವು ಖಾಸಗಿ ವಾಹಿನಿಗಳಿಗೂ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿರುವ ರವೀಶ್ ಆತ್ಮಾರಾಮ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ‌. ಇದು ರವೀಶ್ ಅವರಿಗೆ ಮೊದಲ ನಿರ್ದೇಶನದ ಚಿತ್ರ.

ಇದನ್ನೂ ಓದಿ: Sunita Williams: 2025ರವರೆಗೂ ಬಾಹ್ಯಾಕಾಶದಲ್ಲೇ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌; ನಾಸಾ ಘೋಷಣೆ

ಇದು 1935ರಿಂದ 2024ರವರೆಗಿನ ಕಾಲಘಟ್ಟದ ಕಥೆಯಾಗಿರುತ್ತದೆ‌. ನಿರ್ದೇಶಕರೇ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ‌.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

ನೋಡುಗನಿಗೆ ಬೇಕಾದ ಎಲ್ಲಾ ಅಂಶಗಳು ಚಿತ್ರದಲ್ಲಿದೆ. ಆದರೆ ಅಡ್ವೆಂಚರ್ಸ್‌ಗೆ ಹೆಚ್ಚು ಒತ್ತು ಕೊಡಲಾಗಿದೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ. “ಸಂಭಾವಮಿ ಯುಗೇಯುಗೇ” ಚಿತ್ರದಲ್ಲಿ ಕಾರ್ಯ ನಿರ್ವಹಿಸಿದ್ದ ಬಹುತೇಕ ತಂತ್ರಜ್ಞರು ಈ ಚಿತ್ರದಲ್ಲೂ ಇರುತ್ತಾರೆ.‌ ಜಯ್ ಶೆಟ್ಟಿ ಅವರಿಗೆ ನಾಯಕಿಯಾಗಿ ನಯನ ನಟಿಸುತ್ತಿದ್ದಾರೆ. ಹೆಚ್ಚಿನ ವಿವರಗಳನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ನಿರ್ದೇಶಕ ರವೀಶ್ ಆತ್ಮಾರಾಮ್ ತಿಳಿಸಿದ್ದಾರೆ‌.

Continue Reading

ಕರ್ನಾಟಕ

Thangalaan Movie: ಬಹುನಿರೀಕ್ಷಿತ ʼತಂಗಲಾನ್‍ʼ ಚಿತ್ರಕ್ಕೆ ʼಕಾಂತಾರʼ ಸ್ಫೂರ್ತಿ ಎಂದ ಚಿಯಾನ್‌ ವಿಕ್ರಮ್‌!

Thangalaan Movie: ಜ್ಞಾನವೇಲ್ ರಾಜ್ ನಿರ್ಮಾಣದ ಪಾ. ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್ʼ ಚಿತ್ರವು ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಬ್ರಿಟೀಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಆಧರಿಸಿ ಈ ಚಿತ್ರ ಮಾಡಲಾಗಿದೆ. ಈ ಸಿನಿಮಾದಲ್ಲಿ ವಿಕ್ರಮ್, ಮಾಳವಿಕಾ ಮೋಹನನ್, ಪಾರ್ವತಿ, ಬ್ರಿಟೀಷ್‍ ನಟ ಡೇನಿಯಲ್‍ ಮತ್ತಿತರರು ನಟಿಸಿದ್ದಾರೆ.

VISTARANEWS.COM


on

Thangalan Movie
Koo

ಬೆಂಗಳೂರು: ಜ್ಞಾನವೇಲ್ ರಾಜ್ ನಿರ್ಮಾಣದ,‌ ಪಾ ರಂಜಿತ್ ನಿರ್ದೇಶನದ ಹಾಗೂ ಚಿಯಾನ್ ವಿಕ್ರಮ್‍ ಅಭಿನಯದ ‘ತಂಗಲಾನ್ʼ ಚಿತ್ರವು (Thangalaan Movie) ಇದೇ ಆಗಸ್ಟ್ 15ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಬ್ರಿಟೀಷರ ಆಳ್ವಿಕೆಯ ಸಮಯದಲ್ಲಿ ಕೆಜಿಎಫ್‍ನಲ್ಲಿ ನಡೆದಿರಬಹುದಾದ ಒಂದು ಕಾಲ್ಪನಿಕ ಕಥೆಯನ್ನು ಚಿತ್ರ ಮಾಡಿದ್ದಾರೆ “ಕಬಾಲಿ” ಖ್ಯಾತಿಯ ನಿರ್ದೇಶಕ ಪಾ ರಂಜಿತ್‍. ಈ ಚಿತ್ರದಲ್ಲಿ ವಿಕ್ರಮ್, ಮಾಳವಿಕಾ ಮೋಹನನ್, ಪಾರ್ವತಿ, ಬ್ರಿಟೀಷ್‍ ನಟ ಡೇನಿಯಲ್‍ ಮುಂತಾದವರು ನಟಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ವಿಕ್ರಮ್‍, ‘ನಾನು ಇದುವರೆಗೂ “ಅನ್ನಿಯನ್”, “ಪಿತಾಮಗನ್” ಸೇರಿದಂತೆ ಹಲವು ಚಿತ್ರಗಳಲ್ಲಿ ವಿಭಿನ್ನವಾದ ಪಾತ್ರಗಳನ್ನು ಮಾಡಿದ್ದೇನೆ. ಆದರೆ ‘ತಂಗಲಾನ್‍’ ಚಿತ್ರಕ್ಕೆ ಹೋಲಿಸಿದರೆ ಅದು ಶೇ. 8ರಷ್ಟು ಮಾತ್ರ. ಇದು ನನ್ನ ಜೀವನದ ಅತ್ಯಂತ ಕಷ್ಟಕರವಾದ ಚಿತ್ರ. ಪ್ರತಿ ದೃಶ್ಯಕ್ಕೂ ನಾವು ಸಾಕಷ್ಟು ಕಷ್ಟಪಟ್ಟಿದ್ದೇವೆ. ಚಿತ್ರೀಕರಣ ಸಮಯದಲ್ಲಿ ಸಾಕಷ್ಟು ಏಟು ಬಿದ್ದಿವೆ. ರೊಮ್ಯಾಂಟಿಕ್‍ ದೃಶ್ಯಗಳು ಸಹ ಕಷ್ಟವಾಗಿತ್ತು. ನಾವು ನಮಗೆ ಗೊತ್ತಿಲ್ಲದ ಪಾತ್ರಗಳಾಗುವುದೇ ನಿಜವಾದ ಕಷ್ಟ. ಬ್ರಿಟಿಷರ ಆಳ್ವಿಕೆ ಸಮಯದಲ್ಲಿ ಏನಾಗಿದ್ದರಿಬಹುದು? ಆಗಿನ ಬುಡಕಟ್ಟು ಜನಾಂಗದವರು ಹೇಗಿದ್ದಿರಬಹುದು ಎಂದು ನಮಗೆ ಗೊತ್ತಿಲ್ಲ. ಹಾಗಾಗಿ, ಯಾವ ದೃಶ್ಯವೂ ಸುಲಭವಾಗಿರಲಿಲ್ಲ. ಇಲ್ಲಿ ನಾವು ಅವರ ತರಹ ನಟನೆ ಮಾಡಬೇಕು ಎಂಬುದಕ್ಕಿಂತ, ಅವರ ತರಹ ಇರಬೇಕಿತ್ತು. ಈ ಚಿತ್ರಕ್ಕಾಗಿ ಒಂದು ಶತಕದ ಹಿಂದಕ್ಕೆ ಹೋಗುವಂತಾಯಿತು ಎಂದು ತಿಳಿಸಿದರು.

ಇದನ್ನೂ ಓದಿ: Vinesh Phogat: ವಿನೇಶ್​ಗೆ 1.5 ಕೋಟಿ ಬಹುಮಾನ ಘೋಷಿಸಿದ ಹರಿಯಾಣ ಸರ್ಕಾರ

ಈ ಚಿತ್ರದ ಪಾತ್ರಕ್ಕಾಗಿ ವಿಕ್ರಮ್‍ ಆರು ತಿಂಗಳ ತಯಾರಿ ನಡೆಸಿದ್ದಾರಂತೆ ಹಾಗೂ ತುಂಬಾ ತೂಕವನ್ನು ಕಳೆದುಕೊಂಡಿದ್ದಾರಂತೆ. ದೈಹಿಕವಾಗಿ ಬದಲಾಗುವುದಕ್ಕಿಂತ ಮಾನಸಿಕವಾಗಿ ಬದಲಾಗುವುದು ಬಹಳ ಕಷ್ಟವಾಗಿತ್ತು. ಪ್ರತಿ ದಿನ ನಾಲ್ಕೈದು ಗಂಟೆಗಳ ಕಾಲ ಮೇಕಪ್‍ ಹಾಕಿಕೊಳ್ಳಬೇಕಿತ್ತು ಎಂದು ಚಿತ್ರೀಕರಣ ಸಮಯದ ಅನುಭವವನ್ನು ವಿಕ್ರಮ್ ಹಂಚಿಕೊಂಡರು.

ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಮಾಡುವುದಕ್ಕೆ ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರʼ ದೊಡ್ಡ ಸ್ಫೂರ್ತಿ ಎಂದು ತಿಳಿಸಿದ ಚಿಯಾನ್ ವಿಕ್ರಮ್, ಉತ್ತಮ ಕಂಟೆಂಟ್ ಇದ್ದರೆ ಜಗತ್ತಿನ ಯಾವ ಮೂಲೆಗೆ ಬೇಕಾದರೂ ತೆಗೆದುಕೊಂಡು ಹೋಗಬಹುದು ಎನ್ನುವುದನ್ನು ಆ ಚಿತ್ರ ತೋರಿಸಿತು ಎಂದರು.

ಇದನ್ನೂ ಓದಿ: Repo Rate: ಗೃಹಸಾಲದ ಇಎಂಐ ಭಾರ ಇಳಿಕೆ ಇಲ್ಲ; ರೆಪೋ ದರ ಯಥಾಸ್ಥಿತಿ

ಚಿತ್ರ ಸಾಗಿ ಬಂದ ಬಗ್ಗೆ ನಿರ್ದೇಶಕ ಪಾ. ರಂಜಿತ್ ವಿವರಿಸಿದರು. “ನಾನು ಮತ್ತು ವರಲಕ್ಷ್ಮೀ” ಕನ್ನಡ ಚಿತ್ರದಲ್ಲಿ ನಟಿಸಿದ್ದನ್ನು ನೆನಪಿಸಿಕೊಂಡ ನಟಿ ಮಾಳವಿಕ ಮೋಹನನ್ “ತಂಗಲಾನ್” ಚಿತ್ರದ ತಮ್ಮ ಪಾತ್ರದ ಕುರಿತು ಮಾಹಿತಿ ನೀಡಿದರು. ಹಾಲಿವುಡ್ ನಟ ಡೇನಿಯಲ್ ಕೂಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಈ ಚಿತ್ರ ಪ್ರತಿಷ್ಠಿತ ಕೆ.ವಿ‌.ಎನ್ ಸಂಸ್ಥೆಯ ಮೂಲಕ ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದೆ‌.

Continue Reading

ಸ್ಯಾಂಡಲ್ ವುಡ್

Kannada New Movie: ‘ಮರ್ಫಿ’ ಸಿನಿಮಾದ ಹಾಡು ಬಿಡುಗಡೆ; ಸಮಯ ಸ್ಮರಿಸಿದ ಪ್ರಭು ಮುಂಡ್ಕೂರ್!

Kannada New Movie: BSP ವರ್ಮಾ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಪ್ರಭು ಮುಂಡ್ಕೂರ್ ವರ್ಮಾ ಜೊತೆಗೂಡಿ ಚಿತ್ರಕಥೆ ಬರೆದಿದ್ದಾರೆ. ರೊಮ್ಯಾಂಟಿಕ್ ಡ್ರಾಮಾ ಎಳೆಯ ʻಮರ್ಫಿʼ ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ಪ್ರಭು ಮುಂಡ್ಕೂರ್, ರೋಶಿನಿ ಪ್ರಕಾಶ್ , ಇಳಾ ವೀರಮಲ್ಲ ಜೊತೆಯಲ್ಲಿ ದತ್ತಣ್ಣ, ಅಶ್ವಿನಿ ರಾವ್ ಪಲ್ಲಕ್ಕಿ, ಮಹಾಂತೇಶ್ ಹೀರೇಮಠ್, ರಾಮಪ್ರಸಾದ್ ಬಾಣಾವರ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ.

VISTARANEWS.COM


on

Kannada New Movie Samaya Lyrical Murphy Roshini Varma Rajat Hegde
Koo

ಬೆಂಗಳೂರು: ಕನ್ನಡ ಚಿತ್ರರಂಗದ ಭರವಸೆ ನಾಯಕ ನಟ ಪ್ರಭು ಮುಂಡ್ಕೂರ್ ನಟನೆಯ ʻಮರ್ಫಿʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಸೆಪ್ಟಂಬರ್ 27ಕ್ಕೆ ಚಿತ್ರ ತೆರೆಗೆ ಬರುತ್ತಿದ್ದು, ಪ್ರಚಾರ ಕಾರ್ಯಗಳಿಗೆ ಚಾಲನೆ ಕೊಡಲಾಗಿದೆ. ಮರ್ಫಿ ಅಂಗಳದಿಂದ ಸಮಯ ಎಂಬ ಮನಮೋಹಕ ಹಾಡು ಬಿಡುಗಡೆ ಮಾಡಲಾಗಿದೆ. ಅರ್ಜುನ್ ಜನ್ಯ ಟ್ಯೂನ್ ಹಾಕಿರುವ ಗೀತೆಗೆ ಧನಂಜಯ್ ರಂಜನ್ ಪದ ಗೀಚಿದ್ದು, ರಜತ್ ಹೆಗ್ಡೆ ಧ್ವನಿಯಾಗಿದ್ದಾರೆ. ನಾಯಕ ಪ್ರಭು ಮುಂಡ್ಕೂರ್, ನಾಯಕಿಯರಾದ ರೋಶಿನಿ ಪ್ರಕಾಶ್ ಹಾಗೂ ಇಳಾ ವೀರಮಲ್ಲ ಹಾಡಿನಲ್ಲಿ ಮಿಂಚಿದ್ದಾರೆ.

BSP ವರ್ಮಾ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಪ್ರಭು ಮುಂಡ್ಕೂರ್ ವರ್ಮಾ ಜೊತೆಗೂಡಿ ಚಿತ್ರಕಥೆ ಬರೆದಿದ್ದಾರೆ. ರೊಮ್ಯಾಂಟಿಕ್ ಡ್ರಾಮಾ ಎಳೆಯ ʻಮರ್ಫಿʼ ಚಿತ್ರದಲ್ಲಿ ದೊಡ್ಡ ತಾರಾಬಳಗವಿದೆ. ಪ್ರಭು ಮುಂಡ್ಕೂರ್, ರೋಶಿನಿ ಪ್ರಕಾಶ್ , ಇಳಾ ವೀರಮಲ್ಲ ಜೊತೆಯಲ್ಲಿ ದತ್ತಣ್ಣ, ಅಶ್ವಿನಿ ರಾವ್ ಪಲ್ಲಕ್ಕಿ, ಮಹಾಂತೇಶ್ ಹೀರೇಮಠ್, ರಾಮಪ್ರಸಾದ್ ಬಾಣಾವರ ಸೇರಿದಂತೆ ಹಲವರು ಬಣ್ಣ ಹಚ್ಚಿದ್ದಾರೆ. ನವೀನ್ ರೆಡ್ಡಿ, ಪ್ರಭು, ವರ್ಮಾ ಸಂಭಾಷಣೆ ಬರೆದಿದ್ದು, ಮಹೇಶ ತೊಗಟ ಸಂಕಲನ, ಆದರ್ಶ ಆರ್ ಕ್ಯಾಮೆರಾ ಹಿಡಿದ್ದಾರೆ.

ಇದನ್ನೂ ಓದಿ: Tharun Sudhir: ಸೋನಾಲ್‌- ತರುಣ್‌ ಕಲ್ಯಾಣ: ಸಿನಿಮಾ, ರಾಜಕೀಯದ ಗಣ್ಯರಿಗೆ ತಲುಪಿತು ಆಮಂತ್ರಣ ಪತ್ರ!

ಸೋಮಣ್ಣ ಟಾಕೀಸ್ ಮತ್ತು ವರ್ಣಸಿಂಧು ಸ್ಟುಡಿಯೋಸ್ ಬ್ಯಾನರ್ ನಡಿ ರಾಮ್ ಕೋ ಸೋಮಣ್ಣ ಹಾಗೂ ಬಿಎಸ್ ಪಿ ವರ್ಮಾ ಮರ್ಫಿ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಯು ಸರ್ಟಿಫಿಕೇಟ್ ಪಡೆದು ಸೆನ್ಸಾರ್ ಪಾಸಾಗಿರುವ ಈ ಚಿತ್ರದಲ್ಲಿ ಮನರಂಜನೆ ಜೊತೆಗೆ ಎಮೋಷನಲ್ ಅಂಶಗಳನ್ನು ಅಚ್ಚುಕಟ್ಟಾಗಿ ಕಟ್ಟಿ ಕೊಡಲಾಗಿದೆ. ಒಂದೇ ಮಾತಿನಲ್ಲಿ ಹೇಳಬೇಕು ಎಂದರೆ ಮನೆಮಂದಿಯಲ್ಲಾ ಕುಳಿತು ನೋಡುವಂತಹ ಒಂದು ನೀಟಾದ ಸಿನಿಮಾ ಎನ್ನುವುದು ಚಿತ್ರತಂಡ ಅಭಿಪ್ರಾಯ. ಇನ್ನು ಮರ್ಫಿಯಲ್ಲಿ ಏಳು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದ್ದಾರೆ. ಪಕ್ಕ ಸೆಪ್ಟಂಬರ್ 27ರಂದು ರಾಜ್ಯಾದ್ಯಂತ ಮರ್ಫಿ ಸಿನಿಮಾ ಬೆಳ್ಳಿಪರದೆಗೆ ಎಂಟ್ರಿ ಕೊಡಲಿದೆ.

Continue Reading

ಟಾಲಿವುಡ್

Naga Chaitanya: ನಾಗ ಚೈತನ್ಯ- ಶೋಭಿತಾ ಲವ್ ಸ್ಟೋರಿ ಶುರುವಾಗಿದ್ದು ಹೇಗೆ? ಇಬ್ಬರ ನಡುವಿನ ಏಜ್ ಗ್ಯಾಪ್ ಎಷ್ಟು?

Naga Chaitanya: ಇತ್ತೀಚೆಗೆ, ಶೋಭಿತಾ ಧೂಳಿಪಾಲ ಅವರು ಜಂಗಲ್ ಸಫಾರಿಯ ಫೋಟೊಗಳನ್ನು ಹಂಚಿಕೊಂಡಿದ್ದರು. ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇತ್ತು. ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿತ್ತು. ಈ ಹಿಂದೆ ಜೋಡಿ ಲಂಡನ್‌ನಲ್ಲಿ ಕಾಣಿಸಿಕೊಂಡಿತ್ತು. 

VISTARANEWS.COM


on

Naga Chaitanya Sobhita Love Story REVEALED age gap
Koo

ಬೆಂಗಳೂರು: ನಾಗ ಚೈತನ್ಯ (Naga Chaitanya) ಮತ್ತು ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಜೋಡಿ ಹೈದರಾಬಾದ್‌ನಲ್ಲಿ ನಾಗಾರ್ಜುನ ಅವರ ಮನೆಯಲ್ಲಿ ಎಂಗೇಜ್‌ಮೆಂಟ್‌ ಮಾಡಿಕೊಂಡಿದೆ. ನಿಶ್ಚಿತಾರ್ಥ ಸಮಾರಂಭದ ಫೋಟೋಗಳನ್ನು ಸೂಪರ್‌ಸ್ಟಾರ್ ನಾಗಾರ್ಜುನ ಹಂಚಿಕೊಂಡು ಜೋಡಿಗೆ ಆಶೀರ್ವದಿಸಿದರು. ಆದರೆ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಲವ್ ಸ್ಟೋರಿ ಶುರುವಾಗಿದ್ದು ಹೇಗೆ? ಎಂಬ ಕುತೂಹಲ ಫ್ಯಾನ್ಸ್‌ಗೆ ಇದೆ. ತಿಳಿಯಲು ಮುಂದೆ ಓದಿ.

ಮೇ 2022ರಲ್ಲಿ, ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಮೊದಲ ಬಾರಿಗೆ ಹೈದರಾಬಾದ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡರು. ಶೋಭಿತಾ ಧೂಳಿಪಾಲ ತಮ್ಮ ʻಮೇಜರ್ʼ ಚಿತ್ರದ ಪ್ರಚಾರಕ್ಕಾಗಿ ನಗರಕ್ಕೆ ಬಂದಿದ್ದರು. ಆ ಸಮಯದಲ್ಲಿ ನಟಿ ಚಿತ್ರದ ಪ್ರಚಾರ ಮಾತ್ರವಲ್ಲದೆ ಮೇ 31 ರಂದು ಜನ್ಮದಿನ ಆಚರಣೆ ಮಾಡಿಕೊಂಡಿದ್ದರು. ನಾಗ ಚೈತನ್ಯ ಅವರು ಆಚರಣೆಯ ಭಾಗವಾಗಿದ್ದರು. ಬಳಿಕ ಅಲ್ಲಿಂದ ಇಬ್ಬರೂ ಸ್ನೇಹಿತರಾದರು. ಅವರ ಸ್ನೇಹ ಬಲವಾಗಿ ಡೇಟಿಂಗ್ ಪ್ರಾರಂಭಿಸಿದರು. ಎರಡು ವರ್ಷಗಳ ಕಾಲ ಒಟ್ಟಿಗೆ ಸಮಯ ಕಳೆದಿದ್ದರು. ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ವಕೇಶನ್‌ಗೆ ಹೋಗಿರುವ ಹಲವಾರು ಫೋಟೊಗಳು ವೈರಲ್‌ ಆಗಿವೆ. ಆದರೆ ಪ್ರತಿ ಬಾರಿ ಡೇಟಿಂಗ್‌ ವಂದತಿ ಹಬ್ಬಿದ್ದಾಗಲೂ ಜೋಡಿ ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿರಲಿಲ್ಲ. ಇದೀಗ ನಾಗ ಚೈತನ್ಯ ಮತ್ತು ಶೋಭಿತಾ ಧೂಳಿಪಾಲ ಅವರು ಆಗಸ್ಟ್ 8 ರಂದು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

37 ವರ್ಷದ ನಟ ನಾಗ ಚೈತನ್ಯ ಅವರು 32 ವರ್ಷದ ಶೋಭಿತಾಗೆ ತಮ್ಮ ಹೈದರಾಬಾದ್ನ ಮನೆಯಲ್ಲಿ ಉಂಗುರ ತೊಡಿಸಿದ್ದಾರೆ. ಈ ಜೋಡಿ ನಡುವೆ  5 ವರ್ಷಗಳ ಏಜ್ ಗ್ಯಾಪ್ ಇದೆ. ನಾಗ ಚೈತನ್ಯಗಿಂತ ಶೋಭಿತಾ 5 ವರ್ಷ ಚಿಕ್ಕವರಾಗಿದ್ದಾರೆ.

ಅಂತಿಮವಾಗಿ, ನಾಗಾರ್ಜುನ ಎಕ್ಸ್‌ನಲ್ಲಿ ಸುದ್ದಿಯನ್ನು ದೃಢಪಡಿಸಿದ್ದಾರೆ. ಫೋಟೊಗಳನ್ನು ಹಂಚಿಕೊಂಡು, “ನಮ್ಮ ಮಗ ನಾಗ ಚೈತನ್ಯ ಅವರ ನಿಶ್ಚಿತಾರ್ಥ ಬೆಳಗ್ಗೆ 9:42ಕ್ಕೆ ಶೋಭಿತಾ ಧೂಳಿಪಾಲ ಜತೆ ನೆರವೇರಿದೆ. ಶೋಭಿತಾ ಧೂಳಿಪಾಲರನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ಜೋಡಿಗೆ ಅಭಿನಂದನೆಗಳು! ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ. ದೇವರು ಒಳ್ಳೆಯದು ಮಾಡಲಿ! 8.8.8 ಅನಂತ ಪ್ರೀತಿಯ ಆರಂಭʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Naga Chaitanya: ನಾಗ ಚೈತನ್ಯ ಜತೆ ಎಂಗೇಜ್ ಆದ ಶೋಭಿತಾ ಧೂಳಿಪಾಲ; ಸಂಭ್ರಮದ ಫೋಟೋಸ್‌ ವೈರಲ್‌!

ಇತ್ತೀಚೆಗೆ, ಶೋಭಿತಾ ಧೂಳಿಪಾಲ ಅವರು ಜಂಗಲ್ ಸಫಾರಿಯ ಫೋಟೊಗಳನ್ನು ಹಂಚಿಕೊಂಡಿದ್ದರು. ನಾಗ ಚೈತನ್ಯ ಕೂಡ ಒಂದು ಫೋಟೋ ಪೋಸ್ಟ್ ಮಾಡಿದ್ದು, ಕಾಡಿನ ರೀತಿಯ ಬ್ಯಾಕ್​ಗ್ರೌಂಡ್ ಇತ್ತು. ಈ ಕಾರಣದಿಂದ ಇಬ್ಬರೂ ಒಂದೇ ಕಡೆಯಲ್ಲಿ ಸುತ್ತಾಡುತ್ತಿದ್ದಾರೆ ಎನ್ನಲಾಗಿತ್ತು. ಈ ಹಿಂದೆ ಜೋಡಿ ಲಂಡನ್‌ನಲ್ಲಿ ಕಾಣಿಸಿಕೊಂಡಿತ್ತು. 

Continue Reading
Advertisement
Waqf Act
ದೇಶ26 mins ago

Waqf Act: ಪುರಸಭೆ ಕಚೇರಿಯನ್ನೇ ನುಂಗಿದ ವಕ್ಫ್‌ ಮಂಡಳಿ; ಆಸ್ತಿ ಕಬಳಿಕೆ ಬಣ್ಣ ಬಯಲು ಮಾಡಿದ ಕೇಂದ್ರ ಸಚಿವ!

ಪ್ರಮುಖ ಸುದ್ದಿ40 mins ago

Paris Olympics 2024 : ಭಾರತ ಹಾಕಿ ತಂಡಕ್ಕೆ ಕಂಚಿನ ಪದಕ, ಸ್ಪೇನ್ ವಿರುದ್ಧ 2-1 ಗೋಲ್​ಗಳ ಗೆಲುವು

Viral Video
Latest1 hour ago

Viral Video: ಮೃಗಾಲಯಕ್ಕೆ ನುಗ್ಗಿ ಪ್ರಾಣಿಗಳನ್ನೂ ಹಿಂಸಿಸಿದ ಬಾಂಗ್ಲಾದ ದುಷ್ಟ ಪ್ರತಿಭಟನಾಕಾರರು!

CM Siddaramaiah
ಕರ್ನಾಟಕ1 hour ago

CM Siddaramaiah: ಮೋದಿ ಸರ್ಕಾರದ ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿಗೆ ಸಿದ್ದರಾಮಯ್ಯ ವಿರೋಧ

KPSC Exam
ನೋಟಿಸ್ ಬೋರ್ಡ್1 hour ago

KPSC Exam: ಆ.25ರಂದು 384 ಗೆಜೆಟೆಡ್‌ ಹುದ್ದೆಗಳ ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ

Baby Death
Latest1 hour ago

Baby Death: ಪ್ರಣಯಕ್ಕೆ ಡಿಸ್ಟರ್ಬ್‌ ಆಯಿತೆಂದು ಕೋಪಗೊಂಡ ಪ್ರಿಯತಮ ಮಹಿಳೆಯ ಮಗುವನ್ನು ನೆಲಕ್ಕೆ ಬಡಿದು ಕೊಂದ!

Wayanad Landslide
ದೇಶ1 hour ago

Wayanad Landslide: ವಯನಾಡಿನಲ್ಲಿ ಸೈನಿಕರ ಕಾರ್ಯಾಚರಣೆ ಮುಕ್ತಾಯ; ಸೆಲ್ಯೂಟ್‌ ಹೊಡೆದು ಬೀಳ್ಕೊಟ್ಟ ಜನ, Video ಇದೆ

Manu Bhaker
ಪ್ರಮುಖ ಸುದ್ದಿ2 hours ago

Paris Olympics 2024 : ಅಥ್ಲೀಟ್​ಗಳಿಗೆ ಒಲಿಂಪಿಕ್ಸ್​ ಮಸ್ಕಾಟ್​ ಚಿತ್ರ ಇರುವ ಕಾಂಡೋಮ್ ಹಂಚಿದ ಆಯೋಜಕರು!

Viral Video
Latest2 hours ago

Viral Video: ಒಂಟೆಯ ಮುಂದಿನ ಕಾಲು ಕಟ್ಟಿ ಚೂರಿಯಿಂದ ಇರಿದ; ಒಂಟೆ ಜಾಡಿಸಿ ಒದ್ದ ಹೊಡೆತಕ್ಕೆ ಸತ್ತೇ ಹೋದ!

Bengaluru Power Cut
ಕರ್ನಾಟಕ2 hours ago

Bengaluru Power Cut: ಆ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 hours ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ5 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌