Site icon Vistara News

Naga Chaitanya: ನಟಿ ಶೋಭಿತಾ ಜತೆ ನಾಗ ಚೈತನ್ಯ ಡೇಟಿಂಗ್; 2ನೇ ಮದುವೆ ಫಿಕ್ಸ್?

Naga Chaitanya shobhita dhulipala

ಬೆಂಗಳೂರು: ನಟಿ ಸಮಂತಾ (samantha) ಮಾಜಿ ಪತಿ ನಟ ನಾಗ ಚೈತನ್ಯ (Naga Chaitanya) ಎರಡನೇ ಮದುವೆಯಾಗಲು ಮುಂದಾಗಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿದೆ. ನಟ ಈ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ. ಆದರೂ ನಾಗ ಚೈತನ್ಯ ತಂದೆ ನಾಗುರ್ಜನ ಮಗನ ಎರಡನೇ ಮದುವೆಗೆ ತಯಾರಿ ಮಾಡುತ್ತಿದ್ದಾರೆ ಎಂದು ವರದಿಯಾಗಿತ್ತು. ಅಷ್ಟೇ ಅಲ್ಲದೇ ನಾಗ ಚೈತನ್ಯ ಮದುವೆ ಮಾಡಲು ಅಕ್ಕಿನೇನಿ ನಾಗಾರ್ಜುನ ಅವರು ಆಸಕ್ತಿ ತೋರಿ ನಾಗ ಚೈತನ್ಯಗೆ ಉದ್ಯಮಿ ಕುಟುಂಬದಿಂದ ಹೆಣ್ಣನ್ನು ತರಲು ಸಿದ್ಧತೆ ನಡೆದಿದ್ದು, ಈ ವರ್ಷವೇ ವಿವಾಹ ನಡೆಯಲಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ. ಆದರೆ, ಈ ವಿಚಾರದಲ್ಲಿ ಯಾವುದೇ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಇದೀಗ ಮೂಲಗಳ ಪ್ರಕಾರ ಇದ್ಯಾವುದೂ ಸತ್ಯವಲ್ಲ. ನಾಗ ಚೈತನ್ಯ ಗೆಳತಿಯೂ ಆದ ನಟಿ ಶೋಭಿತಾ ಧೂಳಿಪಾಲ (shobhita dhulipala) ಜತೆ ನಟ ಡೇಟಿಂಗ್‌ ಮಾಡುತ್ತಿದ್ದಾರೆ ಎನ್ನಲಾಗಿದೆ.

ಮೂಲಗಳ ಪ್ರಕಾರ, ಈ ಸುದ್ದಿಗಳಿಗೆ ಯಾವುದೇ ಅರ್ಥವಿಲ್ಲ. ಇದರಲ್ಲಿ ಯಾವುದೇ ಸತ್ಯವಿಲ್ಲ. ಈ ರೀತಿ ಏನೂ ನಡೆಯುತ್ತಿಲ್ಲ. ಉದ್ಯಮಿ ಕುಟುಂಬದಿಂದ ಹೆಣ್ಣನ್ನು ತರಲು ಸಿದ್ಧತೆ ನಡೆದಿದೆ ಎನ್ನುವ ಮಾಹಿತಿ ಸುಳ್ಳು ಎಂದು ಮಾಧ್ಯಮವೊಂದರಲ್ಲಿ ವರದಿಯಾಗಿದೆ. ಅಷ್ಟೇ ಅಲ್ಲದೇ ನಾಗ ಚೈತನ್ಯ ಈಗಲೂ ಕೂಡ ಶೋಭಿತಾ ಧೂಳಿಪಾಲ ಜತೆ ಸಂತೋಷದ ಕ್ಷಣವನ್ನು ಹಂಚಿಕೊಳ್ಳುತ್ತಿದ್ದಾರೆ. ಡೇಟಿಂಗ್ ಕೂಡ ಮಾಡುತ್ತಿದ್ದಾರೆ. ಮದುವೆಯಾಗಲು ಅಥವಾ ನಿಶ್ಚಿತಾರ್ಥ ಮಾಡಿಕೊಳ್ಳಲು ನಿರ್ಧರಿಸದ ಹೊರತು ಅವರು ಯಾವುದೇ ಸಮಯದಲ್ಲಿ ತಮ್ಮ ಸಂಬಂಧವನ್ನು ಬಹಿರಂಗವಾಗಿ ಬಹಿರಂಗಪಡಿಸುವುದಿಲ್ಲ. ”ಎಂದು ಮೂಲವು ಹಂಚಿಕೊಂಡಿದೆ.

ಇದನ್ನೂ ಓದಿ: Naga Chaitanya: ನಾಗಚೈತನ್ಯ ಪ್ಯಾನ್ ಇಂಡಿಯಾ ಸಿನಿಮಾ ಅನೌನ್ಸ್; ನೈಜ ಘಟನೆ ಸುತ್ತ ಇಡೀ ಕಥೆ!

ಕೆಲವು ಮೂಲಗಳು ಇದನ್ನು ಅಲ್ಲಗಳೆಯುತ್ತಿವೆ. ‘ನಾಗ ಚೈತನ್ಯ ಅವರಿಗೆ ಮದುವೆ ಬಗ್ಗೆ ಯಾವುದೇ ಆಸಕ್ತಿ ಇಲ್ಲ. ಸದ್ಯಕ್ಕಂತೂ ಅವರು ಎರಡನೇ ವಿವಾಹ ಆಗುತ್ತಿಲ್ಲ’ ಎಂದು ನಾಗ ಚೈತನ್ಯ ಆಪ್ತರು ಸ್ಪಷ್ಟನೆ ನೀಡಿದ್ದಾರೆ. ಈ ವಿಚಾರದಿಂದ ನಾಗ ಚೈತನ್ಯ ಅಭಿಮಾನಿಗಳು ಗೊಂದಲಕ್ಕೆ ಒಳಗಾಗಿದ್ದಾರೆ.

ನೈಜ ಘಟನೆಯತ್ತ ನಾಗಚೈತನ್ಯ

ಟಾಲಿವುಡ್ ಯುವ ಸಾಮ್ರಾಟ ನಾಗಚೈತನ್ಯ (Naga Chaitanya) ಹೊಸ ಸಿನಿಮಾಗೆ ಸಜ್ಜಾಗುತ್ತಿದ್ದಾರೆ. ಅದಕ್ಕಾಗಿ ಅವರು ಈ ಹಿಂದೆ ಆಂಧ್ರಪ್ರದೇಶದ ಶ್ರೀಕಾಕುಳಂ ಹಳ್ಳಿಗೆ ಭೇಟಿ ನೀಡಿ ಮೀನುಗಾರರ ಸಮುದಾಯ ಭೇಟಿ ಮಾಡಿ ಕೆಲ ಸಮಯ ಅವರೊಟ್ಟಿಗೆ ಕಳೆದಿದ್ದರು. ಮೀನುಗಾರರ ಸಂಸ್ಕೃತಿ, ನೆಲ, ಭಾಷೆ, ಜೀವನಶೈಲಿಯ ಬಗ್ಗೆ ತಿಳಿದುಕೊಂಡಿದ್ದರು. ಅಂದಹಾಗೆ ನಾಗಚೈತನ್ಯ ನಟಿಸುತ್ತಿರುವ 23ನೇ ಚಿತ್ರ ಇದಾಗಿದ್ದು, ನೈಜ ಘಟನೆಯ ಸುತ್ತ ಇಡೀ ಕಥೆಯನ್ನು ಕಟ್ಟಿಕೊಡಲಾಗಿದೆ.

ಕಾರ್ತಿಕೇಯ-2 ನಂತಹ ಪ್ಯಾನ್ ಇಂಡಿಯಾ ಬ್ಲಾಕ್ ಬಸ್ಟರ್ ಹಿಟ್ ಕೊಟ್ಟಿರುವ ಚಂದು ಮೊಂಡೇಟಿ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸದ್ಯ NC23 ಎಂಬ ತಾತ್ಕಾಲಿಕ ಟೈಟಲ್ ಇಡಲಾಗಿದ್ದು, ಶೀಘ್ರದಲ್ಲೇ ಈ ಚಿತ್ರ ಸೆಟ್ಟೇರುತ್ತಿದೆ. ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಈ ಸಿನಿಮಾವನ್ನು ಪ್ರಸ್ತುತಪಡಿಸುತ್ತಿದ್ದು, ಬನ್ನಿ ವಾಸ್ ಗೀತಾ ಆರ್ಟ್ಸ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: Naga Chaitanya: ನಿರ್ದೇಶಕ ಪರಶುರಾಮ್ ಬಗ್ಗೆ ಆಘಾತಕಾರಿ ಹೇಳಿಕೆ ನೀಡಿದ ನಾಗ ಚೈತನ್ಯ!

ನಾಗ ಚೈತನ್ಯ ಮತ್ತು ಸಾಯಿ ಪಲ್ಲವಿ ಅವರ ಬ್ಲಾಕ್‌ಬಸ್ಟರ್ ಕಾಂಬಿನೇಷನ್ ಮತ್ತೆ ಈ ಸಿನಿಮಾ ಮೂಲಕ ಚಿತ್ರತಂಡ ತರುತ್ತಿದೆ ಎಂದು ವರದಿಯಾಗಿದೆ. ಸಾಯಿ ಪಲ್ಲವಿ ಅಥವಾ ಕೀರ್ತಿ ಸುರೇಶ್ ಇಬ್ಬರಲ್ಲಿ ಒಬ್ಬರನ್ನು ಚಿತ್ರತಂಡ ನಾಯಕಿಯನ್ನಾಗಿ ಆಯ್ಕೆ ಮಾಡಕೊಳ್ಳಲಿದೆ ಎಂದು ವರದಿಯಾಗಿದೆ.

Exit mobile version