Naga Shaurya Marriage | ಬೆಂಗಳೂರಿನ ಅನುಷಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತೆಲುಗು ನಟ ನಾಗ ಶೌರ್ಯ - Vistara News

ಕಾಲಿವುಡ್

Naga Shaurya Marriage | ಬೆಂಗಳೂರಿನ ಅನುಷಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತೆಲುಗು ನಟ ನಾಗ ಶೌರ್ಯ

ಬೆಂಗಳೂರಿನಲ್ಲಿ ಇಂಟೀರಿಯರ್‌ ಡಿಸೈನರ್‌ ಆಗಿರುವ ಅನುಷಾ ಅವರನ್ನು ನಟ ನಾಗ ಶೌರ್ಯ (Naga Shaurya Marriage) ವರಿಸಿದ್ದಾರೆ. ಕುಟುಂಬಸ್ಥರು, ಸ್ನೇಹಿತರು ನಟನ ಮದುವೆಗೆ ಸಾಕ್ಷಿಯಾದರು.

VISTARANEWS.COM


on

Actor Naga Shaurya Marriage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತೆಲುಗು ನಟ ನಾಗ ಶೌರ್ಯ ಅವರು ಬೆಂಗಳೂರಿನ ಅನುಷಾ ಶೆಟ್ಟಿ ಜತೆ ದಾಂಪತ್ಯ (Naga Shaurya Marriage) ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಸಾಂಪ್ರದಾಯಿಕವಾದರೂ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ನಾಗ ಶೌರ್ಯ ಮದುವೆಯ ಫೋಟೊ ಹಾಗೂ ವಿಡಿಯೊ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಕುಟುಂಬಸ್ಥರು, ಆಪ್ತರು ಮದುವೆಗೆ ಸಾಕ್ಷಿಯಾದರು.

ವೃತ್ತಿಯಲ್ಲಿ ಇಂಟೀರಿಯರ್‌ ಡಿಸೈನರ್‌ ಆಗಿರುವ ಅನುಷಾ ಅವರನ್ನು ವರಿಸಿರುವ ನಾಗ ಶೌರ್ಯ, ಶನಿವಾರವೇ (ನವೆಂಬರ್‌ 19) ಗೆಳೆಯರಿಗೆಲ್ಲ ಬ್ಯಾಚುಲರ್‌ ಪಾರ್ಟಿ ಕೊಟ್ಟಿದ್ದರು. ಭಾನುವಾರ ಸಾಂಪ್ರದಾಯಿಕವಾಗಿ ಮದುವೆಯಾಗಿದ್ದಾರೆ. ಬಿಳಿ ಶರ್ಟ್‌ ಹಾಗೂ ಪಂಚೆಯಲ್ಲಿ ನಾಗ ಶೌರ್ಯ ಮಿಂಚಿದರೆ, ಸೀರೆ, ಒಡವೆ ಧರಿಸಿ, ಹೂ ಮುಡಿದು ಅನುಷ್ಕಾ ಗಮನ ಸೆಳೆದರು.

ಇತ್ತೀಚೆಗೆ ‘ಕೃಷ್ಣ ವೃಂದ ವಿಹಾರಿ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ನಾಗ ಶೌರ್ಯ, ಮತ್ತೊಂದು ಸಿನಿಮಾಗೆ ಸಹಿ ಹಾಕಿದ್ದಾರೆ. ಇದುವರೆಗೆ 23 ಸಿನಿಮಾಗಳಲ್ಲಿ ನಟಿಸಿದ್ದು, 2018ರಲ್ಲಿ ಬಿಡುಗಡೆಯಾಗಿದ್ದ ‘ಚಲೋ’ ಸಿನಿಮಾ ಅವರಿಗೆ ಹೆಚ್ಚಿನ ಖ್ಯಾತಿ ತಂದುಕೊಟ್ಟಿತ್ತು. ಇದರಲ್ಲಿ ಕನ್ನಡದ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದರು. ರಶ್ಮಿಕಾ ಮಂದಣ್ಣ ಅವರಿಗೆ ಕಾಲಿವುಡ್‌ನಲ್ಲಿ ಇದು ಮೊದಲ ಸಿನಿಮಾ ಆಗಿದೆ.

ಇದನ್ನೂ ಓದಿ | Actor Taylor Lautner | ವೈವಾಹಿಕ ಜೀವನಕ್ಕೆ ಕಾಲಿಟ್ಟ ʻಟ್ವಿಲೈಟ್‌ ಸಾಗಾʼ ಖ್ಯಾತಿಯ ನಟ ಟೇಲರ್ ಲೌಟ್ನರ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Varalaxmi Sarathkumar: ರಜನಿಕಾಂತ್‌ಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

Varalaxmi Sarathkumar: ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದರು. ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 

VISTARANEWS.COM


on

Varalaxmi Sarathkumar invites Rajinikanth for her wedding
Koo

ಬೆಂಗಳೂರು: ತಮಿಳು-ತೆಲುಗು ನಟಿ ವರಲಕ್ಷ್ಮಿ ಶರತ್‌ಕುಮಾರ್ (aralaxmi Sarathkumar) ಅವರು ತಮ್ಮ ಕುಟುಂಬದೊಂದಿಗೆ ರಜನಿಕಾಂತ್, ಹಾಗೂ ಅವರ ಪತ್ನಿ ಲತಾ ಮತ್ತು ಮಗಳು ಐಶ್ವರ್ಯಾ ರಜನಿಕಾಂತ್ ಅವರನ್ನು ಚೆನ್ನೈನ ಪೋಯಸ್ ಗಾರ್ಡನ್‌ನಲ್ಲಿರುವ ಅವರ ಮನೆಗೆ ಭೇಟಿ ನೀಡಿ ಮದುವೆಗೆ ಆಹ್ವಾನಿಸಿದರು. ವರಲಕ್ಷ್ಮಿ ಶರತ್‌ಕುಮಾರ್ ಜತೆ ತಂದೆ ಶರತ್‌ಕುಮಾರ್, ತಾಯಿ ಮತ್ತು ಸಹೋದರಿ ಸೇರಿ ಇಡೀ ಕುಟುಂಬವೇ ಜತೆಗೆ ಇತ್ತು.

ಭೇಟಿಯ ಫೋಟೋಗಳನ್ನು ಹಂಚಿಕೊಂಡಿರುವ ವರಲಕ್ಷ್ಮಿ, “ನಮ್ಮ ತಲೈವರ್ ರಜಿನಿಕಾಂತ್ ಸರ್ ಅವರನ್ನು ಭೇಟಿ ಮಾಡಿದೆ. ಅವರನ್ನು ಮತ್ತು ಲತಾ ಆಂಟಿ ಅವರನ್ನು ಮದುವೆ ಆಹ್ವಾನಿಸಿದೆ. ಧನ್ಯವಾದಗಳು ಸರ್ʼʼಎಂದು ಬರೆದುಕೊಂಡಿದ್ದಾರೆ.

ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದರು. ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. 

ಇದನ್ನೂ ಓದಿ: Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ನಟ ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆʼʼಎಂದು ಬರೆದುಕೊಂಡಿದ್ದರು.

aನಿಶ್ಚಿತಾರ್ಥ ಸಮಾರಂಭದಲ್ಲಿ, ವರಲಕ್ಷ್ಮಿ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿದ್ದರು. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇನ್ನೇನು ಶೀಘ್ರದಲ್ಲಿಯೇ ಈ ಜೋಡಿಯ ಮದುವೆಯ ದಿನಾಂಕವೂ ಘೋಷಣೆ ಆಗಲಿದೆ. ಈ ಮೊದಲು ವರಲಕ್ಷ್ಮಿ ಶರತ್‌ಕುಮಾರ್, ತಮಿಳು ನಟ ವಿಶಾಲ್ ಅವರನ್ನು ಪ್ರೀತಿಸುತ್ತಿದ್ದಾರೆ ಮತ್ತು ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಹರಿದಾಡಿದ್ದವು.

ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

Continue Reading

ಕಾಲಿವುಡ್

Actor Suriya: ರೆಟ್ರೋ ಲುಕ್‌ನಲ್ಲಿ ಕಂಡ ನಟ ಸೂರ್ಯ; ಸಖತ್‌ ಥ್ರಿಲ್ ಆದ್ರು ಫ್ಯಾನ್ಸ್‌!

Actor Suriya: ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ

VISTARANEWS.COM


on

Actor Suriya retro look from his next film with Karthik Subbaraj
Koo

ಬೆಂಗಳೂರು: ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಮತ್ತು ನಟ ಸೂರ್ಯ (Actor Suriya) ʻಸೂರ್ಯ 44ʼ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ. ನಟ ಮತ್ತು ನಿರ್ದೇಶಕ ಇಬ್ಬರೂ ಶೂಟಿಂಗ್ ಪ್ರಾರಂಭವಾಗಿದೆ ಎಂದು ವಿಡಿಯೊ ಮೂಲಕ ಘೋಷಿಸಿದ್ದಾರೆ. ಸೂರ್ಯ ರೆಟ್ರೋ ಲುಕ್‌ನಲ್ಲಿ ಕಾಣಿಸಿಕೊಂಡಿರುವುದನ್ನು ಕಂಡು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ಚಿತ್ರಕ್ಕಾಗಿ ತೆಗೆದ ಮೊದಲ ಶಾಟ್‌ವನ್ನು ನಟ ಬಹಿರಂಗಪಡಿಸಿದರು.

ಸೂಟ್‌ಕೇಸ್‌ ಜತೆಗೆ ಕುಳಿತುಕೊಂಡು ಸಮುದ್ರದ ಕಡೆಗೆ ನೋಡುತ್ತಿರುವ ಸೂರ್ಯ ಅವರ ಲುಕ್‌ ಬಹಿರಂಗಗೊಂಡಿದೆ. ಅಂಡಮಾನ್ ನಿಕೋಬಾರ್ ದ್ವೀಪಗಳಲ್ಲಿ ಚಿತ್ರದ ಚಿತ್ರೀಕರಣಕ್ಕೆ ಸೆಟ್‌ ಸಿದ್ಧಪಡಿಸಿದೆ ಎನ್ನಲಾಗಿದೆ.ಚಿತ್ರದಲ್ಲಿ ಉರಿಯಾಡಿ ವಿಜಯ್ ಕುಮಾರ್ ಪ್ರತಿಸ್ಪರ್ಧಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿದ್ದು, ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗಿದೆ. ನಟರಾದ ಜಯರಾಮ್ ಮತ್ತು ಜೋಜು ಜಾರ್ಜ್ ಚಿತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಚಿತ್ರದ ತಾರಾಗಣದ ಬಗ್ಗೆ ಅಧಿಕೃತ ಮಾಹಿತಿ ಚಿತ್ರತಂಡ ಹಂಚಿಕೊಂಡಿಲ್ಲ.

ಇದನ್ನೂ ಓದಿ: Actor Suriya: ಹೊಸ ಸಿನಿಮಾ ಶೂಟಿಂಗ್‌ ಶುರು ಮಾಡಿದ ನಟ ಸೂರ್ಯ!

ಈ ಸಿನಿಮಾವನ್ನು ತಮಿಳಿನ ಕಾರ್ತಿಕ್ ಸುಬ್ಬರಾಜು ನಿರ್ದೇಶನ ಮಾಡಲಿದ್ದಾರೆ. ಸೂಪರ್ ಹಿಟ್ ಸಿನಿಮಾಗಳಾದ ‘ಜಿಗರ್​ಥಂಡಾ’, ರಜನೀಕಾಂತ್ ನಟನೆಯ ‘ಪೆಟ್ಟಾ’, ‘ಜಿಗರ್ ಥಂಡಾ ಡಬಲ್ ಎಕ್ಸ್’, ‘ಮಹಾನ್’ ಇನ್ನಿತರೆ ಸಿನಿಮಾಗಳನ್ನು ಇವರು ನಿರ್ದೇಶಿಸಿದ್ದಾರೆ.2022 ರಲ್ಲಿ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಬಳಿಕ ಪೂಜಾ ಹೆಗ್ಡೆ ಯಾವುದೇ ದಕ್ಷಿಣ ಭಾರತದ ಸಿನಿಮಾದಲ್ಲಿ ನಟಿಸಿರಲಿಲ್ಲ. ಇದೀಗ ‘ಸೂರ್ಯ 44’ ಸಿನಿಮಾ ಮೂಲಕ ಪೂಜಾ ಕಮ್ ಬ್ಯಾಕ್ ಮಾಡಿದ್ದಾರೆ

ಸದ್ಯ ಸೂರ್ಯ ಅವರು ಶಿವ ನಿರ್ದೇಶನದ ‘ಕಂಗುವ’ ಚಿತ್ರದ ಬಿಡುಗಡೆಗಾಗಿ ಸೂರ್ಯ ಕಾಯುತ್ತಿದ್ದಾರೆ. ತಮಿಳು ಚಿತ್ರರಂಗದ (Tamil Cinema) ಖ್ಯಾತ ನಟ ಸೂರ್ಯ (Actor Surya) ಅವರ ಬಹು ನಿರೀಕ್ಷಿತ `ಕಂಗುವ’ (Kanguva Film) ಚಿತ್ರದ ಟೀಸರ್ ಔಟ್‌ ಆಗಿತ್ತು. ಬಾಲಿವುಡ್​ ನಟ ಬಾಬಿ ಡಿಯೋಲ್​ ಕೂಡ ಹೊಸ ಅವತಾರ ತಾಳಿದ್ದರು. ಬಾಬಿ ಡಿಯೋಲ್ ಒಳಗೊಂಡಿರುವ ಬೃಹತ್ ಯುದ್ಧದ ದೃಶ್ಯವನ್ನು ದೊಡ್ಡ ಪ್ರಮಾಣದಲ್ಲಿ ಚಿತ್ರೀಕರಿಸಲಾಗಿತ್ತು. ನಟ ಸೂರ್ಯ (Actor Suriya) ಅವರು ಸಿರುತೈ ಶಿವ ನಿರ್ದೇಶನದ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಕಂಗುವʼ ಚಿತ್ರವನ್ನು 38 ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ಮಾಪಕ ಕೆ.ಇ.ಜ್ಞಾನವೇಲ್ ರಾಜಾ ಅವರು ಹೇಳಿದ್ದರು. ‘ಕಂಗುವ’ ಸಿನಿಮಾವನ್ನು ಪ್ಯಾನ್ ಇಂಡಿಯಾ ಮಾತ್ರವಲ್ಲ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಬಿಡುಗಡೆ ಮಾಡುವ ಆಲೋಚನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದರು.

ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ನಟ ಐದು ಅವತಾರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೆಂಕಟೇರ್, ಅರತಾರ್, ಮಂದಾಂಕರ್, ಮುಕಾತಾರ್ ಮತ್ತು ಪೆರುಮಾನಾಥರ್ ಎಂಬ ಐದು ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ದಿಶಾ ಪಟಾನಿ ಈ ಚಿತ್ರದ ಮೂಲಕ ತಮಿಳಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇದರಲ್ಲಿ ಕೋವೈ ಸರಳಾ, ಯೋಗಿ ಬಾಬು, ಆನಂದ್ ರಾಜ್, ರೆಡಿನ್ ಕಿಂಗ್ಸ್ಲಿ, ರವಿ ರಾಘವೇಂದ್ರ ಮತ್ತು ಇತರರು ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ.

Continue Reading

ಕಾಲಿವುಡ್

Kamal Haasan: ತಮಿಳಿಗನೊಬ್ಬ ದೇಶ ಆಳುವ ದಿನ ಏಕೆ ಬರಬಾರದು? ಕಮಲ್‌ ಹಾಸನ್‌ ಪ್ರಶ್ನೆ!

Kamal Haasan: ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

VISTARANEWS.COM


on

Kamal Haasan gives a fiery speech at Indian 2 event
Koo

ಚೆನ್ನೈ: ಕಮಲ್‌ ಹಾಸನ್‌ (Kamal Haasan) ಅಭಿನಯದ ʻಇಂಡಿಯನ್ 2ʼ ಸಿನಿಮಾ ಆಡಿಯೊ ಲಾಂಚ್‌ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ. ನಿರ್ದೇಶಕ ಶಂಕರ್, ಕಮಲ್ ಹಾಸನ್, ಅನಿರುದ್ಧ್ ರವಿಚಂದರ್, ರಕುಲ್ ಪ್ರೀತ್ ಸಿಂಗ್ ಮತ್ತು ಕಾಜಲ್ ಅಗರ್ವಾಲ್, ಸಿಲಂಬರಸನ್ ಟಿಆರ್, ಲೋಕೇಶ್ ಕನಕರಾಜ್, ನೆಲ್ಸನ್ ದಿಲೀಪ್‌ಕುಮಾರ್, ಬಾಬಿ ಸಿಂಹ ಮತ್ತು ಬ್ರಹ್ಮಾನಂದಂ ಹಾಜರಿದ್ದರು. ಕಾರ್ಯಕ್ರಮದಲ್ಲಿ ಅತ್ಯಂತ ಖಡಕ್‌ ಆಗಿ ಭಾಷಣ ಮಾಡಿದರು ಕಮಲ್‌ ಹಾಸನ್‌.

ಕಮಲ್‌ ಭಾಷಣದಲ್ಲಿ ʻʻನಾನು ತಮಿಳಿಗ ಮತ್ತು ಭಾರತೀಯ. ನಾನು ಒಮ್ಮೆ ತಮಿಳಿಗ ಹಾಗೂ ಒಮ್ಮೆ ಭಾರತೀಯ ಎರಡೂ ಆಗಬಲ್ಲೆ. ಒಡೆದು ಆಳುವುದು ಬ್ರಿಟಿಷ್ ಪರಿಕಲ್ಪನೆಯಾಗಿತ್ತು. ಅವರು ಹಾಗೆ ಮಾಡಿದರು. ಏಕೆಂದರೆ ಭಾರತೀಯರು ಒಗ್ಗಟ್ಟಾದಾಗ ಓಡಿಹೋಗಲು ಅವರಿಗೆ ಒಂದು ಮನೆ ಎಂಬುದಿತ್ತು. ಆದರೆ ಇಂದು ಒಡೆದು ಆಳುತ್ತಿರುವವರು ಎಲ್ಲಿಗೆ ಓಡಿಹೋಗುತ್ತಾರೆ?’ ಎಂದು ಅವರು ಪ್ರಶ್ನೆ ಮಾಡಿದರು. ಭಾರತವನ್ನು ಒಡೆದು ಆಳುತ್ತಿರುವವರ ವಿರುದ್ಧ ಭಾರತೀಯರು ಒಂದಲ್ಲ ಒಂದು ದಿನ ದಂಗೆ ಏಳುತ್ತಾರೆ ಎಂದರು.

“ಪ್ರತಿಯೊಂದು ನಗರವೂ ​​ನಿಮ್ಮ ನಗರವೇ, ಎಲ್ಲರೂ ನಿಮ್ಮ ಬಂಧುಗಳೇ. ನಮ್ಮ ಈ ತಮಿಳು ರಾಜ್ಯಕ್ಕೆ ಬಂದವರಿಗೆ ನಾವು ಜೀವ ಕೊಡುವುದರಲ್ಲಿಯೂ ಹೆಸರುವಾಸಿಯಾಗಿದ್ದೇವೆ. ತಮಿಳಿಗನೊಬ್ಬ ದೇಶವನ್ನು ಆಳುವ ದಿನ ಏಕೆ ಬರಬಾರದು? ಇದು ನನ್ನ ದೇಶ, ಮತ್ತು ನಾವು ಏಕತೆಯನ್ನು ಕಾಪಾಡಬೇಕುʼʼಎಂದರು.  ಕಮಲ್ ಹಾಸನ್ ನಟರಾಗಿರುವ ಜೊತೆಗೆ ರಾಜಕಾರಣಿಯೂ ಹೌದು, ‘ಮಕ್ಕಳ್ ನಿಧಿ ಮಯಂ’ ಹೆಸರಿನ ಪಕ್ಷ ಕಟ್ಟಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: Dolly Dhananjay: ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ; ಜೂನ್ 14ರಂದು ಸಿನಿಮಾ ತೆರೆಗೆ!

ಈ ವರ್ಷದ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾದ `ಇಂಡಿಯನ್ 2‘ (Indian 2 Audio Launch) ಬಿಡುಗಡೆಗೆ ಮುಂಚಿತವಾಗಿ, ಜೂನ್ 1ರಂದು ಚೆನ್ನೈನ ನೆಹರು ಕ್ರೀಡಾಂಗಣದಲ್ಲಿ ಮೆಗಾ ಆಡಿಯೊ ಬಿಡುಗಡೆ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು.

ಜುಲೈ 12ಕ್ಕೆ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಹಿರಿಯ ಸ್ವಾತಂತ್ರ‍್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಜತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್, ಕಾಳಿದಾಸ್ ಜಯರಾಮ್, ಪ್ರಿಯಾ ಭವಾನಿ ಶಂಕರ್, ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ನೆಡುಮುಡಿ ವೇಣು, ಬಾಬಿ ಸಿಂಹ, ದೀಪಾ ಶಂಕರ್ ಮುಂತಾದವರು ನಟಿಸಿದ್ದಾರೆ.

ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ಜವಾಬ್ದಾರಿ ಹೊತ್ತಿದ್ದು, ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಸಂಕಲನದ ಕೆಲಸ ನಿಭಾಯಿಸಿದ್ದಾರೆ.

1996ರಲ್ಲಿ ತೆರೆಕಂಡ ಎಸ್‌. ಶಂಕರ್‌ ನಿರ್ದೇಶನದ ʼಇಂಡಿಯನ್‌ʼ ತಮಿಳು ಚಿತ್ರದಲ್ಲಿ ಕಮಲ್‌ ಹಾಸನ್‌ ಜತೆಗೆ ಮನೀಶಾ ಕೊಯಿರಾಲ, ಊರ್ಮಿಳಾ ಮಾತೋಂಡ್ಕರ್‌, ಸುಕನ್ಯಾ, ಮನೋರಮಾ, ನೆಡುಮುಡಿ ವೇಣು, ಕಸ್ತೂರಿ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು. ಭಾರತದ ಕ್ಲಾಸಿಕ್‌ ಚಿತ್ರಗಳಲ್ಲಿ ಇದೂ ಒಂದು ಎಂದು ಪರಿಗಣಿಸಲಾಗುತ್ತದೆ. ಪ್ರತಿಷ್ಠಿತ ಆಸ್ಕರ್‌ ಪ್ರಶಸ್ತಿಯ ನಾಮನಿರ್ದೇಶನಕ್ಕೂ ಇದನ್ನು ಪರಿಗಣಿಸಲಾಗಿತ್ತು. ಮಾತ್ರವಲ್ಲ ಕಮಲ್‌ ಹಾಸನ್‌ ತಮ್ಮ ನಟನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದರು. ಎ.ಆರ್‌.ರೆಹಮಾನ್‌ ಅವರ ಸಂಗೀತವೂ ಸಿನಿಪ್ರಿಯರ ಗಮನ ಸೆಳೆದಿತ್ತು.

Continue Reading

ಕಾಲಿವುಡ್

Actor Dhanush: ಇಳಯರಾಜ ಬಯೋಪಿಕ್‌ ಹೊಸ ಪೋಸ್ಟರ್‌ ಔಟ್‌; ಸಹೋದರರು ಎಂದು ಕಮಲ್‌ ಹಾಸನ್‌ ಹೇಳಿದ್ಯಾರಿಗೆ?

Actor Dhanush: ತಮಿಳು ನಟ ಧನುಷ್ (Actor Dhanush) ಅವರು ಇಳಯರಾಜ ಬಯೋಪಿಕ್‌ನಲ್ಲಿ ಅವರ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಅಧಿಕೃತಗೊಂಡಿದೆ. ಅರುಣ್ ಮಾಥೇಶ್ವರನ್ ನಿರ್ದೇಶನ ಕನೆಕ್ಟ್ ಮೀಡಿಯಾ ಮತ್ತು ಪಿಕೆ ಪ್ರೈಮ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದ ಫಸ್ಟ್‌ ಲಕ್‌ ಪೋಸ್ಟರ್‌ (Ilaiyaraaja first poster) ಚೆನ್ನೈನಲ್ಲಿ ಅನಾವರಣಗೊಂಡಿತ್ತು.

VISTARANEWS.COM


on

Actor Dhanush unveils new poster from Ilaiyaraaja biopic
Koo

ಬೆಂಗಳೂರು: ಸಂಗೀತ ಮಾಂತ್ರಿಕ ಇಳಯರಾಜ ಮತ್ತು ಚಲನಚಿತ್ರ ನಿರ್ಮಾಪಕ ಮಣಿರತ್ನಂ ಅವರಿಗೆ ಇಂದು (ಜೂನ್ 2) ಜನುಮದಿನದ ಸಂಭ್ರಮ. ವಿಶೇಷ ಸಂದರ್ಭದಲ್ಲಿ, ನಟರಾದ ಕಮಲ್ ಹಾಸನ್ ಮತ್ತು ಧನುಷ್ ಶುಭ ಹಾರೈಸಿದರು. ಇಳಯರಾಜ 81ನೇ ವಂಸತಕ್ಕೆ ಕಾಲಿಟ್ಟಿದ್ದಾರೆ. ತಮಿಳು ನಟ ಧನುಷ್ (Actor Dhanush) ಅವರು ಇಳಯರಾಜ ಬಯೋಪಿಕ್‌ನಲ್ಲಿ ಅವರ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಅಧಿಕೃತಗೊಂಡಿದೆ. ಅರುಣ್ ಮಾಥೇಶ್ವರನ್ ನಿರ್ದೇಶನ ಕನೆಕ್ಟ್ ಮೀಡಿಯಾ ಮತ್ತು ಪಿಕೆ ಪ್ರೈಮ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದ ಫಸ್ಟ್‌ ಲಕ್‌ ಪೋಸ್ಟರ್‌ (Ilaiyaraaja first poster) ಚೆನ್ನೈನಲ್ಲಿ ಅನಾವರಣಗೊಂಡಿತ್ತು. ಕನ್ನಡದಲ್ಲೂ ಸಿನಿಮಾ ಬರಲಿದೆ.

ಇದೀಗ ಧನುಷ್ ತಮ್ಮ ಮುಂಬರುವ ಚಿತ್ರವಾದ ಇಳಯರಾಜ ಅವರ ಜೀವನಚರಿತ್ರೆಯ ಹೊಸ ಪೋಸ್ಟರ್ ಹಂಚಿಕೊಂಡಿದ್ದಾರೆ. ಸಾವಿರಾರು ಜನರ ಮುಂದೆ ಹಾರ್ಮೋನಿಯಂ ಹಿಡಿದು ವೇದಿಕೆಯಲ್ಲಿ ನಿಂತಿರುವ ಪೋಸ್ಟರ್‌ ಹಂಚಿಕೊಂಡಿದ್ದಾರೆ. ‘ಹುಟ್ಟುಹಬ್ಬದ ಶುಭಾಶಯಗಳು ಮೇಷ್ಟ್ರೇ’ ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ.

ಕಮಲ್ ಹಾಸನ್ ಎಕ್ಸ್‌ನಲ್ಲಿ ಇಳಯರಾಜ ಮತ್ತು ಮಣಿರತ್ನಂ ಜತೆಗಿರುವ ಫೋಟೊವನ್ನು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. “ಡಬಲ್ ಹ್ಯಾಪಿನೆಸ್. ಸಂತೋಷವನ್ನು ಅಳೆಯಲು ಸಾಧ್ಯವೇ? ಇಂದು ನನ್ನ ದೊಡ್ಡಣ್ಣ ಹಾಗೂ ಚಿಕ್ಕಣ್ಣನ ಜನ್ಮದಿನವಾಗಿರುವುದರಿಂದ ಇದು ಸಂತೋಷದ ಕ್ಷಣವಾಗಿದೆ. ನನ್ನ ಪ್ರೀತಿಯ ಸಹೋದರ ಇಳಯರಾಜ ಅವರು ಸಂಗೀತದಲ್ಲಿ ಕಥೆಯನ್ನು ಹೇಳಲಿದ್ದಾರೆ. ನಿಮ್ಮಿಬ್ಬರಿಗೂ ಜನ್ಮದಿನದ ಶುಭಾಶಯಗಳು. ನಮ್ಮ ಮೂವರ ಪರಂಪರೆ ಶಾಶ್ವತವಾಗಿ ಮುಂದುವರಿಯಲಿ. ಹ್ಯಾಪಿ ಬರ್ತ್‌ಡೇ ಇಳಯರಾಜ ಮತ್ತು ಹ್ಯಾಪಿ ಬರ್ತ್‌ಡೇ ಮಣಿರತ್ನಂ. ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Actor Dhanush: ಧನುಷ್‌ಗೆ ಐಶ್ವರ್ಯಾ ದೋಖಾ; ಐಶ್ವರ್ಯಾಗೆ ಧನುಷ್‌ ಮೋಸ! ಖ್ಯಾತ ಗಾಯಕಿಯಿಂದ ಸೆನ್ಷೆಷನಲ್‌ ಮಾಹಿತಿ

ತಮಿಳು ನಟ ಧನುಷ್ (Actor Dhanush) ಅವರು ಇಳಯರಾಜ ಬಯೋಪಿಕ್‌ನಲ್ಲಿ ಅವರ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬುದು ಅಧಿಕೃತಗೊಂಡಿದೆ. ಅರುಣ್ ಮಾಥೇಶ್ವರನ್ ನಿರ್ದೇಶನ ಕನೆಕ್ಟ್ ಮೀಡಿಯಾ ಮತ್ತು ಪಿಕೆ ಪ್ರೈಮ್ ಪ್ರೊಡಕ್ಷನ್ಸ್ ನಿರ್ಮಿಸಿರುವ ಈ ಚಿತ್ರದ ಫಸ್ಟ್‌ ಲಕ್‌ ಪೋಸ್ಟರ್‌ (Ilaiyaraaja first poster) ಚೆನ್ನೈನಲ್ಲಿ ಅನಾವರಣಗೊಂಡಿತ್ತು.

ಚಿತ್ರವು ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಸೇರಿದಂತೆ ದೇಶಾದ್ಯಂತ ಬಹು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಇಷ್ಟು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿರುವುದು ಸಾಕಾಗುವುದಿಲ್ಲ. ಇತರ ಹಲವು ಭಾರತೀಯ ಭಾಷೆಗಳಲ್ಲಿ ಬಿಡುಗಡೆಯಾಗಬೇಕು ಎಂದು ಕಮಲ್ ಹಾಸನ್ ಅಭಿಪ್ರಾಯಪಟ್ಟರು.

ಈ ಬಯೋಪಿಕ್‌ಗೆ ಇಳಯರಾಜ ಅವರೇ ಸ್ವತಃ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಚಿತ್ರಕ್ಕೆ ನೀರವ್ ಷಾ ಕ್ಯಾಮೆರಾ ನಿರ್ವಹಿಸುತ್ತಿದ್ದು, ಮುತ್ತುರಾಜ ನಿರ್ಮಾಣ ವಿನ್ಯಾಸವನ್ನು ನೋಡಿಕೊಳ್ಳುತ್ತಿದ್ದಾರೆ. ಚಿತ್ರದ ಬಿಡುಗಡೆ ದಿನಾಂಕ ಮತ್ತು ಇತರ ವಿವರಗಳು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ಇಳಯರಾಜ ಭಾರತೀಯ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ. ಏಳು ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. 1,400 ಚಿತ್ರಗಳಿಗೆ ಸಂಗೀತ ನೀಡಿದ್ದಾರೆ. 20 ಸಾವಿರಕ್ಕೂ ಹೆಚ್ಚು ಕಾರ್ಯಕ್ರಮಗಳಲ್ಲಿ ಸಂಗೀತವಾದ್ಯ ನೀಡಿದ್ದಾರೆ. ಭಾರತದ ಅದರಲ್ಲೂ ತಮಿಳಿನ ಜಾನಪದ ಸಂಗೀತವನ್ನು ಆಧರಿಸಿಯೇ ಹೆಚ್ಚಾಗಿ ಇವರು ಹಾಡು ಕಟ್ಟಿದ್ದಾರೆ. ಇದೀಗ ಇಳಯರಾಜ ಅವರ ಜೀವನ ಪ್ರಯಾಣದ ಕುರಿತಾದ ಚಿತ್ರ ಸೆಟ್ಟೇರಲು ಸಜ್ಜಾಗುತ್ತಿದೆ.

ಧನುಷ್ ಈಗಾಗಲೇ ʻಕುಬೇರʼ ಮತ್ತು ʻರಾಯನ್‌ʼ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದಾರೆ. ʻನಿಲವುಕು ಎನ್ಮೇಲ್ ಎನ್ನದಿ ಕೋಬಂʼ ಚಿತ್ರವನ್ನು ಸಹ ನಿರ್ದೇಶಿಸುತ್ತಿದ್ದಾರೆ.

Continue Reading
Advertisement
Reliance Retail Tira unveils skin care brand Akind
ದೇಶ5 mins ago

Reliance Retail: ಚರ್ಮ ರಕ್ಷಣೆಯ ʼಅಕೈಂಡ್ʼ ಬ್ರಾಂಡ್‌ನ ಕ್ರೀಮ್‌ ಬಿಡುಗಡೆ

Union Budget 2024
ದೇಶ8 mins ago

Union Budget 2024: ಮೋದಿ 3.0 ಸರ್ಕಾರದ ಮೊದಲ ಬಜೆಟ್‌ ಯಾವಾಗ? ಇಲ್ಲಿದೆ ಬಿಗ್‌ ಅಪ್‌ಡೇಟ್‌

AIDSO protest demanding investigation into corruption in NEET entrance exam
ರಾಯಚೂರು11 mins ago

Raichur News: ನೀಟ್ ಭ್ರಷ್ಟಾಚಾರದ ತನಿಖೆಗೆ ಆಗ್ರಹಿಸಿ ಮಾನ್ವಿಯಲ್ಲಿ ಎಐಡಿಎಸ್ಒ ಪ್ರತಿಭಟನೆ

Joshimath Teshil Now Jyotirmath
ದೇಶ19 mins ago

Joshimath Teshil Now Jyotirmath: ಉತ್ತರಾಖಂಡದ ಜೋಶಿಮಠ ಈಗ ಜ್ಯೋತಿರ್ಮಠ!

ATM Cash Withdrawal Fee
ವಾಣಿಜ್ಯ37 mins ago

ATM Cash Withdrawal Fee: ಎಟಿಎಂ ನಗದು ಹಿಂಪಡೆಯುವಿಕೆ ಶುಲ್ಕ 21 ರೂ.ಗೆ ಏರಿಕೆ?

Siddaramaiah
ಕರ್ನಾಟಕ1 hour ago

ಸರ್ಕಾರಿ ನೌಕರರಿಗೆ ನಿರಾಸೆ; ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಬಗ್ಗೆ ಯಾವುದೇ ನಿರ್ಣಯ ಇಲ್ಲ!

NEET UG Result 2024
ಶಿಕ್ಷಣ1 hour ago

NEET UG Result 2024: ಏನಿದು ನೀಟ್‌ ವಿವಾದ? ಗ್ರೇಸ್‌ ಅಂಕ ಕೊಟ್ಟಿದ್ಯಾಕೆ? ಮರು ಪರೀಕ್ಷೆ ಮಾಡೋದ್ಯಾಕೆ?

Actor Darshan
ಕರ್ನಾಟಕ2 hours ago

Actor Darshan: ಅಪ್ಪನನ್ನು ಬೈದಿದ್ದಕ್ಕೆ ಥ್ಯಾಂಕ್ಸ್‌ ಎಂದ ದರ್ಶನ್‌ ಪುತ್ರ ವಿನೀಶ್;‌ ಪೋಸ್ಟ್‌ನಲ್ಲಿ ಇನ್ನೇನಿದೆ?

Viral Video
ವೈರಲ್ ನ್ಯೂಸ್2 hours ago

Viral Video: ಮಗನಿಗೆ ಮುಸಲ್ಮಾನರ ಕ್ಯಾಪ್‌ ಹಾಕಿದ ನಟಿ; ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ!

Donkey Population In Pak
ವಿದೇಶ2 hours ago

Donkey Population In Pak: ಹೆಚ್ಚುಹೆಚ್ಚು ಕತ್ತೆಗಳನ್ನು ಸಾಕಿ, ಆರ್ಥಿಕ ಬಿಕ್ಕಟ್ಟಿನಿಂದ ಪಾರಾಗಿ; ಪಾಕ್‌ಗೆ ಚೀನಾ ಸಲಹೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌