Naga Shaurya: ಗೆಳತಿಗೆ ಕಪಾಳಮೋಕ್ಷ ಮಾಡಿದ ಯುವಕನಿಗೆ ಸಖತ್‌ ಕ್ಲಾಸ್‌ ತೆಗೆದುಕೊಂಡ ನಟ ನಾಗ ಶೌರ್ಯ: ವಿಡಿಯೊ ವೈರಲ್‌! - Vistara News

ಟಾಲಿವುಡ್

Naga Shaurya: ಗೆಳತಿಗೆ ಕಪಾಳಮೋಕ್ಷ ಮಾಡಿದ ಯುವಕನಿಗೆ ಸಖತ್‌ ಕ್ಲಾಸ್‌ ತೆಗೆದುಕೊಂಡ ನಟ ನಾಗ ಶೌರ್ಯ: ವಿಡಿಯೊ ವೈರಲ್‌!

ಆರಂಭದಲ್ಲಿ ಈ ವಿಡಿಯೊ ವೈರಲ್ ಆದಾಗ, ನಟ ನಾಗ ಶೌರ್ಯ (Naga Shaurya) ಅವರು ನಡುರಸ್ತೆಯಲ್ಲಿ ಯಾರೋ ಯುವಕನ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಸತ್ಯಾಸತ್ಯತೆ ಗೊತ್ತಾದ ಮೇಲೆ ನಾಗ ಶೌರ್ಯ ಅವರ ಕಾರ್ಯಕ್ಕೆ ಎಲ್ಲರಿಂದ ಮೆಚ್ಚುಗೆ ಸಿಕ್ಕಿದೆ.

VISTARANEWS.COM


on

Naga Shaurya tells him to apologise who slaps girlfriend in publi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರೇಮಿಗಳಿಬ್ಬರು ರಸ್ತೆ ಮಧ್ಯೆ ಜಗಳವಾಡುತ್ತಿದ್ದರು. ಆಗ ಯುವಕ, ಯುವತಿ ಮೇಲೆ ಕೈ ಮಾಡಿದ್ದಾನೆ. ಇದನ್ನು ಕಂಡು ಸಿಟ್ಟಿಗೆದ್ದ ಟಾಲಿವುಡ್‌ ನಟ ನಾಗ ಶೌರ್ಯ (Naga Shaurya), ಕಾರಿನಿಂದ ಇಳಿದಿದ್ದಾರೆ. ಯುವತಿ ಹಲ್ಲೆ ಮಾಡಿದ್ದಕ್ಕಾಗಿ ಕ್ಷಮೆ ಕೇಳುವಂತೆ ಆ ಹುಡುಗನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇದೀಗ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ನಡು ರಸ್ತೆಯಲ್ಲಿಯೇ ನಟ ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದು, ಆ ಹುಡುಗ, ‘ನಾನು ಆಕೆಯ ಲವರ್’ಎಂದಕ್ಷಾಣ ಕೋಪಗೊಂಡ ನಾಗ ನಾಗ ಶೌರ್ಯ ʻʻ”ನೀವು ಯಾಕೆ ಆಕೆಯ ಕೆನ್ನಗೆ ಬಾರಿಸಿದ್ದು? ಅವರು ನಿಮ್ಮ ಪ್ರೇಮಿಯಾಗಿರಬಹುದು, ಇದರರ್ಥ ನೀವು ಈ ರೀತಿ ಅನುಚಿತವಾಗಿ ವರ್ತಿಸಬಹುದು ಎಂದಲ್ಲ. ಅವರಿಗೆ ಸಾರಿ ಹೇಳು” ಎಂದು ಶೌರ್ಯ ಅವರು ಕ್ಲಾಸ್‌ ತೆಗೆದುಕೊಂಡಿದ್ದಾರೆ. ಟ್ವಿಟರ್‌ನಲ್ಲಿ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ಶೌರ್ಯ ಅವರ ವರ್ತನೆಗೆ ಅವರ ಅಭಿಮಾನಿಗಳು ಶ್ಲಾಘಿಸಿದ್ದಾರೆ. ಒಬ್ಬರು ಟ್ವೀಟ್‌ನಲ್ಲಿ, “ನಿಮಗೆ ನನ್ನ ಗೌರವವಿದೆ ಸಹೋದರ ” ಎಂದು ಕಮೆಂಟ್‌ ಮಾಡಿದರೆ, ಮತ್ತೊಬ್ಬರು ಟ್ವೀಟ್ ಮಾಡಿ, “ನಾಗ ಶೌರ್ಯ ಅವರಿಗೆ ಹ್ಯಾಟ್ಸ್ ಆಫ್. ನೀವು ಮಾಡಿದ್ದಕ್ಕಾಗಿ ಅಪಾರ ಗೌರವವಿದೆʼʼ ಎಂದಿದ್ದಾರೆ.

ಇದನ್ನೂ ಓದಿ: Naga Shaurya Marriage | ಬೆಂಗಳೂರಿನ ಅನುಷಾ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ತೆಲುಗು ನಟ ನಾಗ ಶೌರ್ಯ

ಯುವಕನಿಗೆ ಕ್ಲಾಸ್‌ ತೆಗೆದುಕೊಂಡ ನಾಗ ಶೌರ್ಯ

ಆರಂಭದಲ್ಲಿ ಈ ವಿಡಿಯೊ ವೈರಲ್ ಆದಾಗ, ನಟ ನಾಗ ಶೌರ್ಯ ಅವರು ನಡುರಸ್ತೆಯಲ್ಲಿ ಯಾರೋ ಯುವಕನ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಸತ್ಯಾಸತ್ಯತೆ ಗೊತ್ತಾದ ಮೇಲೆ ನಾಗ ಶೌರ್ಯ ಅವರ ಕಾರ್ಯಕ್ಕೆ ಎಲ್ಲರಿಂದ ಮೆಚ್ಚುಗೆ ಸಿಕ್ಕಿದೆ.

ನಾಗ ಶೌರ್ಯ ಅವರ ಮುಂಬದರುವ ʻಫಲಾನಾ ಅಬ್ಬಾಯಿ ಫಲಾನಾ ಅಮ್ಮಾಯಿʼ (Phalana Abbayi Phalana Ammayi) ಮಾರ್ಚ್ 17ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮಾಳವಿಕಾ ನಾಯರ್ ಸಹ-ನಟಿಯಾಗಿ ನಟಿಸಿರುವ ಈ ಸಿನಿಮಾವನ್ನು ಶ್ರೀನಿವಾಸ್ ಅವಸರಲ ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: Rashmika Mandanna | ನಟ ನಾಗಶೌರ್ಯ ಜತೆ ನಟಿ ಕಿರಿಕ್‌, ರಶ್ಮಿಕಾ ಮಂದಣ್ಣ ಬ್ಯಾನ್‌ ಮಾಡಲು ಅಸಾಧ್ಯ: ತೋಟಾ ಪ್ರಸಾದ್‌

ಕೆಲವುದಿನಗಳ ಹಿಂದೆ ನಾಗ ಶೌರ್ಯ ಅವರು ಬೆಂಗಳೂರಿನ ಅನುಷಾ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. . ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಸಾಂಪ್ರದಾಯಿಕವಾದರೂ ಅದ್ಧೂರಿಯಾಗಿ ಮದುವೆಯಾಗಿದ್ದಾರೆ. ಇದುವರೆಗೆ 23 ಸಿನಿಮಾಗಳಲ್ಲಿ ನಟಿಸಿದ್ದು, 2018ರಲ್ಲಿ ಬಿಡುಗಡೆಯಾಗಿದ್ದ ‘ಚಲೋ’ ಸಿನಿಮಾ ಅವರಿಗೆ ಹೆಚ್ಚಿನ ಖ್ಯಾತಿ ತಂದುಕೊಟ್ಟಿತ್ತು. ಇದರಲ್ಲಿ ಕನ್ನಡದ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದರು. ರಶ್ಮಿಕಾ ಮಂದಣ್ಣ ಅವರಿಗೆ ಕಾಲಿವುಡ್‌ನಲ್ಲಿ ಇದು ಮೊದಲ ಸಿನಿಮಾ ಆಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

ಬಾಹುಬಲಿ: ಕ್ರೌನ್ ಆ ಬ್ಲಡ್ ಅನಿಮೇಟೆಡ್ ಸರಣಿ ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ ಬಿಡುಗಡೆಯಾಗಿದ್ದು, ಶರದ್ ಕೇಲ್ಕರ್ (Sharad Kelkar) ಚಿತ್ರದೊಂದಿಗಿನ ತಮ್ಮ ನಂಟನ್ನು ನೆನಪಿಸಿಕೊಂಡಿದ್ದಾರೆ.

VISTARANEWS.COM


on

By

Sharad Kelkar
Koo

ಅದ್ಧೂರಿ ಬಜೆಟ್‌ನ ʼಬಾಹುಬಲಿʼ (bahubali) ಚಿತ್ರದ ಒಂದೊಂದು ದೃಶ್ಯಗಳು ಇನ್ನೂ ಕಣ್ಣಿಗೆ ಕಟ್ಟಿದಂತಿದೆ. ಸಿನಿಮಾದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷ ಸಮೀಪಿಸಿದರೂ ಈಗಲೂ ಚಿತ್ರದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇದೆ. ʼಬಾಹುಬಲಿʼ ಪಾತ್ರಧಾರಿ ಪ್ರಭಾಸ್‌ಗೆ (actor prabhas) ಧ್ವನಿ ನೀಡಿರುವ ಶರದ್ ಕೇಳ್ಕರ್ (Sharad Kelkar) ತಮ್ಮ ಮರೆಯಲಾಗದ ಅನುಭವವನ್ನು ಹಂಚಿಕೊಂಡಿದ್ದಾರೆ.

ಡಿಸ್ನಿ+ಹಾಟ್‌ಸ್ಟಾರ್‌ ನಲ್ಲಿ (Disney Plus star) ಬಿಡುಗಡೆಯಾಗಿರುವ “ಬಾಹುಬಲಿ: ಕ್ರೌನ್ ಆ ಬ್ಲಡ್” (Baahubali: Crown of Blood) ಅನಿಮೇಟೆಡ್ ಸರಣಿಯು ಈಗ ಚರ್ಚೆಯಲ್ಲಿದೆ. ಬಾಹುಬಲಿ ಮತ್ತು ಮಾಹಿಷ್ಮತಿಯ ಜಗತ್ತಿನಲ್ಲಿ ಇದೂವರೆಗೂ ಕೇಳಿರದ, ಕಂಡಿರದ ಹಾಗೂ ತಿಳಿಯಲಾಗದಿದ್ದ ಅನೇಕ ಘಟನೆಗಳು ಕಥೆಗಳು ಒಂದೊಂದಾಗಿ ಕೇಳಿ ಬರುತ್ತಿವೆ.


ಅನೇಕ ಐತಿಹಾಸಿಕ ಚಿತ್ರಗಳಿಗೆ ಧ್ವನಿ ನೀಡಿ ಖ್ಯಾತರಾಗಿರುವ ಮೂಲತಃ ನಟರೂ ಆಗಿರುವ ಶರದ್ ಕೇಳ್ಕರ್ ಅವರು ಬಾಹುಬಲಿ ನಾಯಕ ಪ್ರಭಾಸ್‌ ಅವರಿಗೆ ಕಂಠದಾನ ಮಾಡಿದ್ದರು. ಈ ಕುರಿತಂತೆ ಅವರು ತಮ್ಮ ಸಂತಸವನ್ನು ಈಗ ಹಂಚಿಕೊಂಡಿದ್ದಾರೆ.

ತನ್ನ ಬಲವಾದ ಧ್ವನಿಗಾಗಿ ಹೆಸರಾಗಿರುವ ಶರದ್ , ಐಕಾನಿಕ್ ‘ಬಾಹುಬಲಿ’ ಸರಣಿಯನ್ನು ಹಿಂದಿ ಭಾಷೆಗೆ ಡಬ್‌ ಮಾಡುವಾಗ ಚಲನಚಿತ್ರ ನಿರ್ಮಾಪಕ ಎಸ್‌.ಎಸ್. ರಾಜಮೌಳಿ ಅವರು ತಮ್ಮ ಆಯ್ಕೆ ಬಗ್ಗೆ ಮೊದಲು ಸಂದೇಹ ಪಟ್ಟಿದ್ದರು. ‘ಬಾಹುಬಲಿ: ದಿ ಬಿಗಿನಿಂಗ್’ ಮತ್ತು ‘ಬಾಹುಬಲಿ: ದಿ ಕನ್‌ಕ್ಲೂಷನ್’ ಎರಡರಲ್ಲೂ ರೆಬೆಲ್ ಸ್ಟಾರ್ ಪ್ರಭಾಸ್ ಮೂಲತಃ ಚಿತ್ರಿಸಿದ ಅಮರೇಂದ್ರ ಬಾಹುಬಲಿ ಮತ್ತು ಮಹೇಂದ್ರ ಬಾಹುಬಲಿ ಪಾತ್ರಗಳಿಗೆ ಧ್ವನಿ ನೀಡಿದ ಕೇಳ್ಕರ್‌ ಅವರು ಎಪಿಕ್ ಸಾಹಸದ ಡಬ್ಬಿಂಗ್ ಕಾರ್ಯದ ಬಗ್ಗೆ ಅನೇಕ ವಿಚಾರಗಳನ್ನು ಹೇಳಿಕೊಂಡಿದ್ದಾರೆ.

ಪವನ್ ಕಲ್ಯಾಣ್ ಅಭಿನಯದ 2016 ರ ತೆಲುಗು ಆಕ್ಷನ್- ಕಾಮಿಡಿ ಚಿತ್ರ ‘ಸರ್ದಾರ್ ಗಬ್ಬರ್ ಸಿಂಗ್’ ನಲ್ಲಿ ಕೇಳ್ಕರ್ ತೊಡಗಿಸಿಕೊಂಡಿದ್ದರು. ಈ ವೇಳೆ ಸಿಬ್ಬಂದಿಯೊಬ್ಬ ಅವರ ಗಾಯನವನ್ನು ಗುರುತಿಸಿ ರಾಜಮೌಳಿ ಅವರಿಗೆ ಇವರ ಹೆಸರು ಶಿಫಾರಸು ಮಾಡಿದ್ದರು ಎನ್ನಲಾಗಿದೆ.


ನನಗೆ ‘ಬಾಹುಬಲಿ’ ಬಗ್ಗೆ ಯಾವುದೇ ಕಲ್ಪನೆ ಇರಲಿಲ್ಲ. ಆದರೆ ನಾನು ರಾಜಮೌಳಿ ಅವರ ಹಿಂದಿನ ಚಿತ್ರಗಳಾದ ‘ಮಗಧೀರ’ ನೋಡಿದ್ದೇನೆ. ಒಬ್ಬ ನಟನಾಗಿ ನಾನು ಈ ಮಾಸ್ಟರ್‌ಪೀಸ್‌ನ ಸೃಷ್ಟಿಕರ್ತನನ್ನು ಭೇಟಿಯಾಗಲು ಬಯಸಿದ್ದೆ. ಹಾಗಾಗಿ ನಾನು ನನ್ನ ಧ್ವನಿ ಪರೀಕ್ಷೆಯನ್ನು ಮಾಡಿದೆ. ಟೇಪ್ ನೊಂದಿಗೆ ಮರುದಿನ ಅವರನ್ನು ಸ್ಟುಡಿಯೋದಲ್ಲಿ ಭೇಟಿಯಾದೆ. ನೀವು ಬಾಹುಬಲಿಗಾಗಿ ಡಬ್ಬಿಂಗ್ ಮಾಡುತ್ತಿದ್ದೀರಿ ಎಂದು ಅವರು ಹೇಳಿದಾಗ ನಂಬಲು ಅಸಾಧ್ಯವಾಯಿತು ಎಂದಿದ್ದಾರೆ ಕೇಳ್ಕರ್.

ಈ ಪಾತ್ರವು ಕೇಳ್ಕರ್ ಅವರ ವೃತ್ತಿಜೀವನವನ್ನು ಗಮನಾರ್ಹವಾಗಿ ಹೆಚ್ಚಿಸಿತು. ಮಾತ್ರವಲ್ಲದೆ ಅವರನ್ನು ಅಪಾರ ಅಭಿಮಾನಿಗಳ ಗುಂಪಿಗೆ ಪ್ರೀತಿಸುವಂತೆ ಮಾಡಿತು, ಅವರಿಗೆ “ಬಾಹುಬಲಿಯ ಧ್ವನಿ” ಮತ್ತು ಪ್ರೀತಿಯಿಂದ “ಭಾರತದ ಧ್ವನಿ” ಎಂಬ ಬಿರುದು ಸಿಗುವಂತಾಯಿತು. ಮೊದಲು ನಾನೊಬ್ಬ ನಟ. ಉತ್ತಮವಾಗಿ ಅಭಿನಯಿಸಬಲ್ಲೆ. ವಿವಿಧ ಬಗೆಯ ಪಾತ್ರಗಳನ್ನು ಮಾಡುತ್ತಾ ಬಂದಿದ್ದೇನೆ. ಆದರೂ ಒಳ್ಳೆಯ ಕಾಲಕ್ಕೆ ಕಾಯುತ್ತಿದ್ದೇನೆ. ಅತ್ಯುತ್ತಮವಾದದ್ದು ಇನ್ನು ಬರಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎನ್ನುತ್ತಾರೆ ಶರದ್.

ಇದನ್ನೂ ಓದಿ: Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

ಎ ಗ್ರಾಫಿಕ್ ಇಂಡಿಯಾ ಮತ್ತು ಆರ್ಕ ಮೀಡಿಯಾ ವರ್ಕ್ಸ್ ಪ್ರೊಡಕ್ಷನ್ ಅಡಿಯಲ್ಲಿ ಎಸ್.ಎಸ್. ರಾಜಮೌಳಿ- ಶರದ್‌ದೇವರಾಜನ್ ಕ್ರಿಯೆಟೀವ್ ಮುಖ್ಯಸ್ಥರಾಗಿದ್ದು, ಜೀವನ್ ಜೆ. ಕಾಂಗ್, ನವೀನ್ ಜಾನ್ ಜಂಟಿಯಾಗಿ ನಿರ್ದೇಶನ ಮಾಡಿದ್ದಾರೆ. ಇವರೆಲ್ಲರೂ ನಿರ್ಮಾಣದಲ್ಲಿ ಪಾಲುದಾರರಾಗಿದ್ದಾರೆ ಎಂದು ಶರದ್ ಹೇಳಿದ್ದಾರೆ.


ಅನಿಮೇಟೆಡ್ ಸರಣಿ ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಹಿಂದಿ ಭಾಷೆಗೆ ಭಾಷಾಂತರವಾಗಿದ್ದು, ಕೇಲ್ಕರ್ ಧ್ವನಿ ನೀಡಿದ್ದಾರೆ. ಈ ಸರಣಿಯು ಮೇ 17ರಿಂದ ಡಿಸ್ನಿ ಪ್ಲಸ್‌ನಲ್ಲಿ ಪ್ರದರ್ಶನ ಕಾಣುತ್ತಿದೆ.

Continue Reading

South Cinema

Rave party: ರೇವ್ ಪಾರ್ಟಿಯ ಕುರಿತು ತೆಲುಗು ನಟಿ ಆಶಿ ರಾಯ್ ಸ್ಫೋಟಕ ಹೇಳಿಕೆ!

Rave party: ರೇವ್‌ ಪಾರ್ಟಿಯಲ್ಲಿ ಹೇಮಾ ಮತ್ತು ಶ್ರೀಕಾಂತ್‌ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು. ಇದೀಗ ಈ ಪಾರ್ಟಿಯಲ್ಲಿ ಆಶಿ ರಾಯ್‌ ಇದ್ದರು ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಲುಗು ನಟಿ ಹೇಮಾ (telugu actress Hema) ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಅಲ್ಲಿ ತಾನಿರಲಿಲ್ಲ ಎಂದು ಹೇಮಾ ವಿಡಿಯೋ ಸಂದೇಶ ಹರಿಬಿಟ್ಟಿದ್ದು, ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ.

VISTARANEWS.COM


on

Rave party telugu actress Ashi Roy in party
Koo

ಬೆಂಗಳೂರು: ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದ ರೇವ್‌ ಪಾರ್ಟಿಯಲ್ಲಿ (Rave party) ತೆಲುಗು ನಟಿ ಹೇಮಾ (telugu actress Hema) ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದರು. ಆದರೆ ಅಲ್ಲಿ ತಾನಿರಲಿಲ್ಲ ಎಂದು ಹೇಮಾ ವಿಡಿಯೋ ಸಂದೇಶ ಹರಿಬಿಟ್ಟಿದ್ದರು. ಬಳಿಕ ಪೊಲೀಸರು, ಆಕೆ ಪಾರ್ಟಿಯಲ್ಲಿ ಭಾಗಿಯಾಗಿದ್ದನ್ನು ಖಚಿತಪಡಿಸಿದ್ದರು. ಈಗಾಗಲೇ ಪಾರ್ಟಿ ಆಯೋಜಿಸಿದ್ದ ಐವರನ್ನು ಬಂಧಿಸಲಾಗಿದೆ. ಈಗ ಬೆಂಗಳೂರಿನ ರೇವ್ ಪಾರ್ಟಿಯಲ್ಲಿ ಮತ್ತೊಬ್ಬ ನಟಿ ಹೆಸರು ಕೇಳಿ ಬಂದಿದೆ. ತೆಲುಗಿನ ನಟಿ ಆಶಿ ರಾಯ್ ತಾನು ಪಾರ್ಟಿಯಲ್ಲಿ ಇದ್ದೆ ಎಂದು ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ.

ರೇವ್‌ ಪಾರ್ಟಿಯಲ್ಲಿ ಹೇಮಾ ಮತ್ತು ಶ್ರೀಕಾಂತ್‌ ಹೆಸರು ಪ್ರಮುಖವಾಗಿ ಕೇಳಿ ಬಂದಿತ್ತು. ಇದೀಗ ಈ ಪಾರ್ಟಿಯಲ್ಲಿ ಆಶಿ ರಾಯ್‌ ಇದ್ದರು ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಆಶಿ ರಾಯ್‌ ವಿಡಿಯೊದಲ್ಲಿ ಮಾತನಾಡಿ ʻʻಅದೊಂದು ಬರ್ತ್‌ಡೇ ಪಾರ್ಟಿಯಾಗಿತ್ತು. ಒಳಗೆ ಏನು ನಡೀತಿತ್ತು ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ದಯವಿಟ್ಟು ನೀವೆಲ್ಲ ನನ್ನ ಬೆಂಬಲಿಸಿ. ನಾನು ಕಷ್ಟಪಟ್ಟು ಉದ್ಯಮದಲ್ಲಿ ಬೆಳೆಯುತ್ತಿರುವ ಹುಡುಗಿ. ದಯವಿಟ್ಟು ನನಗೆ ಸಹಾಯ ಮಾಡಿʼʼ ಎಂದು ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಆಶಿ ರಾಯ್‌ ಹಲವು ಸಂದರ್ಶನದಲ್ಲಿ ಪಾರ್ಟಿಯಲ್ಲಿ ಹೇಮಾ ಅವರನ್ನು ನೋಡಿಲ್ಲ ಎಂದಿದ್ದಾರೆ. ಆಶಿರಾಯ್‌ ಅವರು ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

ರೇವ್‌ ಪಾರ್ಟಿಯಲ್ಲಿ ನಾನಿಲ್ಲ ಎಂದಿದ್ದ ತೆಲುಗು ನಟಿ ಹೇಮಾ

ಮೂಲಗಳ ಪ್ರಕಾರ, ಮುಜುಗರ ತಪ್ಪಿಸಲು ಅದೇ ಫಾರಂ ಹೌಸ್‌ನಲ್ಲೇ ವಿಡಿಯೋ ಚಿತ್ರೀಕರಿಸಿ ಹೇಮಾ ಅವರು ಹರಿಬಿಟ್ಟಿದ್ದರು. ಹೆಬ್ಬಗೋಡಿ ಫಾರ್ಮ್ ಹೌಸ್ ಒಳಗಡೆಯೇ ವಿಡಿಯೋ ಮಾಡಿ, ತಾನು ಹೈದರಾಬಾದ್‌ ಫಾರ್ಮ್ ಹೌಸ್‌ನಲ್ಲಿದ್ದೀನಿ ಎಂದು ಹೇಳಿದ್ದರು. ಆದರೆ ಪೊಲೀಸರು ಆಕೆಯ ತಪ್ಪು ಮಾಹಿತಿಯನ್ನು ಬಯಲು ಮಾಡಿದ್ದರು.

ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಸದ್ಯ ಫಾರ್ಮ್ ಹೌಸಿನ ಇಂಚಿಂಚನ್ನೂ ಬಿಡದೆ ಜಾಲಾಡುತ್ತಿದ್ದಾರೆ. 3 ಜನ ಡ್ರಗ್ ಪೆಡ್ಲರ್‌ಗಳು, ಆಯೋಜಕ ವಾಸು ಸೇರಿ ಐದು ಜನರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್‌ಗಳೂ ಭಾಗಿಗಳಾಗಿದ್ದರು. ಇವರು ಯಥೇಚ್ಛವಾಗಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು. ವಾಸು ಹುಟ್ಟಿದ ಹಬ್ಬಕ್ಕೆ ಪಾರ್ಟಿ ಆಯೋಜಿಸಿದ ಆರ್ಗನೈಸರ್ ಅರುಣ್, ಸಿದ್ಧಿಕಿ, ರಣಬೀರ್, ನಾಗಬಾಬುರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾದಕ ವಸ್ತು ಸಿಕ್ಕಿದಂತಹ ಐಷಾರಾಮಿ ಮರ್ಸಿಡಿಸ್‌ ಬೆಂಜ್‌, ರೇಂಜ್ ರೋವರ್, ಆಡಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಪೊಲೀಸರು ರೇವ್‌ ಪಾರ್ಟಿಯಲ್ಲಿದ್ದ 101 ಮಂದಿಯನ್ನೂ ಕೂರಿಸಿಕೊಂಡು, ಯಾರ್ಯಾರು ಡ್ರಗ್ಸ್‌ ತೆಗೆದುಕೊಂಡಿದ್ದಾರೆ ಎಂಬುದಕ್ಕೆ ವೈದ್ಯಕೀಯ ಪರೀಕ್ಷೆ ಮಾಡಿಸುತ್ತಿದ್ದಾರೆ. ಮೆಡಿಕಲ್‌ ಟೀಮನ್ನು ಫಾರಂ ಹೌಸ್‌ಗೆ ಕರೆಸಲಾಗಿದ್ದು, ಮೆಡಿಕಲ್‌ ಮುಗಿಯುವವರೆಗೆ ಎಲ್ಲ ಅತಿಥಿಗಳನ್ನೂ ಫಾರಂ ಹೌಸ್‌ ತೊರೆಯದಂತೆ ನಿರ್ಬಂಧಿಸಲಾಗಿದೆ. ಸದ್ಯ 30 ಜನ ಹುಡುಗಿಯರು, 71 ಜನ ಪುರುಷರು ಹೀಗೆ ಒಟ್ಟು 101 ಜನರ ವಿಚಾರಣೆ ನಡೆಯುತ್ತಿದೆ.

Continue Reading

ಟಾಲಿವುಡ್

List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

List of Movies Releasing: ಈ ವಾರ ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ (Kannada New Movie) ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಸಿನಿಮಾ ತೆರೆಗೆ ಬರುತ್ತಿದೆ. ಜೂನ್ 4ಕ್ಕೆ ಲೋಕಸಭೆ ಚುನಾವಣೆ ಫಲಿತಾಂಶ ಸಹ ಹೊರ ಬೀಳಲಿದೆ. ಆ ಬಳಿಕವೇ ಚಿತ್ರರಂಗ ಸಹಜ ಸ್ಥಿತಿಗೆ ಮರಳುವ ಸಾಧ್ಯತೆಯಿದೆ. ದೊಡ್ಡ ಸಿನಿಮಾಗಳು ಅಲ್ಲದೇ ಇದ್ದರೂ ಒಂದಷ್ಟು ಸಿನಿಮಾಗಳು ಈ ವಾರ ಬಿಡುಗಡೆಗೆ ಸಜ್ಜಾಗಿವೆ. ಅವುಗಳು ಯಾವುದೆಲ್ಲ ನೋಡೋಣ!

VISTARANEWS.COM


on

List of Movies Releasing From may 24
Koo

ಬೆಂಗಳೂರು: ಐಪಿಎಲ್‌, ಲೋಕಸಭಾ ಎಲೆಕ್ಷನ್‌ನಿಂದಾಗಿ ಕನ್ನಡ ಸಿನಿಮಾಗಳು (List of Movies Releasing) ಪ್ರೇಕ್ಷಕರ ಮುಂದೆ ಬಂದಿಲ್ಲ. ಜೂನ್ 4ಕ್ಕೆ ಲೋಕಸಭೆ ಚುನಾವಣೆ ಫಲಿತಾಂಶ ಸಹ ಹೊರ ಬೀಳಲಿದೆ. ಆ ಬಳಿಕವೇ ಚಿತ್ರರಂಗ ಸಹಜ ಸ್ಥಿತಿಗೆ ಮರಳುವ ಸಾಧ್ಯತೆಯಿದೆ. ದೊಡ್ಡ ಸಿನಿಮಾಗಳು ಅಲ್ಲದೇ ಇದ್ದರೂ ಒಂದಷ್ಟು ಸಿನಿಮಾಗಳು ಈ ವಾರ ಬಿಡುಗಡೆಗೆ ಸಜ್ಜಾಗಿವೆ. ಅವುಗಳು ಯಾವುದೆಲ್ಲ ನೋಡೋಣ…

‘ದಿ ಜಡ್ಜ್‌ಮೆಂಟ್’

ಜಿ9 ಕಮ್ಯೂನಿಕೇಷನ್ ಮೀಡಿಯಾ & ಎಂಟರ್ಟೈನ್ಮೆಂಟ್ ಲಾಂಛನದಲ್ಲಿ (tKannada New Movie) ನಿರ್ಮಾಣವಾಗುತ್ತಿರುವ, ‘ಕ್ರೇಜಿಸ್ಟಾರ್’ ರವಿಚಂದ್ರನ್ ಮುಖ್ಯಪಾತ್ರದಲ್ಲಿ ನಟಿಸುತ್ತಿರುವ ‘ದಿ ಜಡ್ಜ್‌ಮೆಂಟ್’ ಚಿತ್ರದಲ್ಲಿ ದಿಗಂತ್‌ ಕಾಣಿಸಿಕೊಳ್ಳುತ್ತಿದ್ದಾರೆ. ಗುರುರಾಜ್ ಕುಲಕರ್ಣಿ ನಿರ್ದೇಶನದ ‘ದಿ ಜಡ್ಜ್‌ಮೆಂಟ್’ ಸಿನಿಮಾ ಈ ವಾರ ತೆರೆಗೆ ಬರ್ತಿದೆ.ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ‌, ಪ್ರಮೋದ್ ಮರವಂತೆ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಎಂ ಎಸ್ ರಮೇಶ್ ಸಂಭಾಷಣೆ ಬರೆದಿದ್ದಾರೆ. ಡಾ. ರವಿ ವರ್ಮ ಸಾಹಸ ನಿರ್ದೇಶನ, ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನ ‘ದ ಜಡ್ಜ್ ಮೆಂಟ್’ ಚಿತ್ರಕ್ಕಿದೆ.

ಇದನ್ನೂ ಓದಿ: Actress Murder: ‘ಭಜರಂಗಿ’ ಸಿನಿಮಾ ನಟಿ ಗಂಡನಿಂದಲೇ ಭೀಕರ ಕೊಲೆ!

ಮೂರನೇ ಕೃಷ್ಣಪ್ಪ

ವಿಭಿನ್ನ ಕಥಾನಕದ ಮೂಲಕವೇ ಪ್ರೇಕ್ಷಕರನ್ನು ಮುಖಾಮುಖಿಯಾಗಲು ಹೊರಟಿರುವ ಸಿನಿಮಾ ʻಮೂರನೇ ಕೃಷ್ಣಪ್ಪʼ. ಲೂಸ್ ಮಾದ ಯೋಗಿ (Kannada New Movie) ಸಂಭಾಷಣೆಯಿಂದ ಶುರುವಾಗುವ ಟ್ರೈಲರ್‌ನಲ್ಲಿ ಕೋಲಾರ‌ ಕನ್ನಡ‌ , ರಂಗಾಯಣ ರಘು, ಸಂಪತ್ ಮೈತ್ರಿಯಾಯಂತಹ ಅದ್ಭುತ ಕಲಾವಿದರ ಅಭಿನಯ ಗಮನ ಸೆಳೆಯುತ್ತದೆ. ಹಳ್ಳಿ ಸೊಗಡನ್ನು ಸೊಗಸಾಗಿ ಕಟ್ಟಿಕೊಡಲಾಗಿದೆ. ಟ್ರೇಲರ್ ಪ್ರಾಮಿಸಿಂಗ್ ಆಗಿದ್ದು, ಸಿನಿಪ್ರಿಯರಿಗೆ ಮನರಂಜನೆ ಗ್ಯಾರಂಟಿ ಎಂಬ ಸಂದೇಶ ರವಾನಿಸಿದೆ. ರೆಡ್ ಡ್ರ್ಯಾಗನ್ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದೆ. ‘ಮೂರನೇ ಕೃಷ್ಣಪ್ಪ’ ಸಿನಿಮಾಗೆ ಮೋಹನ್ ರೆಡ್ಡಿ ಜಿ, ರವಿಶಂಕರ್ ಹಣ ಹೂಡಿದ್ದಾರೆ. ಆನೇಕಲ್ ಭಾಗದ ಭಾಷೆಯ ಸೊಬಗನ್ನು ಇಟ್ಟುಕೊಂಡು ಈ ಸಿನಿಮಾದ ಕಥೆಯನ್ನು ಹೆಣೆಯಲಾಗಿದೆ. ಸಂಪತ್ ಮೈತ್ರೀಯಾ ನಾಯಕನಾಗಿ ನಟಿಸುತ್ತಿದ್ದರೆ, ಪ್ರಮುಖ ಪಾತ್ರದಲ್ಲಿ ರಂಗಾಯಣ ರಘು ಕಾಣಿಸಿಕೊಂಡಿದ್ದಾರೆ. ಶ್ರೀಪ್ರಿಯಾ ನಾಯಕಿಯಾಗಿದ್ದಾರೆ. ಮೇ 24ಕ್ಕೆ ಮೂರನೇ ಕೃಷ್ಣಪ್ಪನ ಕಥೆ ತೆರೆಗೆ ಬರಲಿದೆ.

3ದೇವಿ

3ದೇವಿ ಅಶ್ವಿನ್ ಮ್ಯಾಥ್ಯೂ ನಿರ್ದೇಶನದ 3ದೇವಿ ಸಿನಿಮಾ ಕೂಡ ಈ ವಾರವೇ ಪ್ರೇಕ್ಷಕರ ಮುಂದೆ ಬರಲಿದೆ. ಮೊಗ್ಗಿನ ಮನಸ್ಸಿನ ಶುಭಾ ಪೂಂಜಾ (Shubha Poonja) ದೇವಿ ರೂಪದಲ್ಲಿಯೇ ಅಭಿನಯಿಸಿದ್ದಾರೆ. ಸಂಧ್ಯಾ ಮತ್ತು ಜ್ಯೋತ್ಸ್ನಾ ತಾರಾಗಣದಲ್ಲಿದ್ದಾರೆ.

ಎವಿಡೆನ್ಸ್

ಸಿ. ಪಿ ಪ್ರವೀಣ್ ನಿರ್ದೇಶನದ ‘ಎವಿಡೆನ್ಸ್’ ಚಿತ್ರ ಇದೇ ಶುಕ್ರವಾರ ತೆರೆ ಕಾಣುತ್ತಿದೆ. ʼಮಂಗಳಗೌರಿ ಮದುವೆ’ ಸೇರಿ ಅನೇಕ ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿರುವ, ಅದರಲ್ಲಿಯೂ ದೇವಿ ಪಾತ್ರದಲ್ಲಿ ಹೆಚ್ಚು ಕಾಣಿಸಿಕೊಂಡಿರುವ ನಟಿ ಮಾನಸಾ ಜೋಶಿ ಅವರು ಈ ಬಾರಿ ‘ಎವಿಡೆನ್ಸ್’ ಎನ್ನುವ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಈ 3 ಚಿತ್ರಗಳ ಜೊತೆಗೆ ‘ಸೆಲ್ಯೂಟ್’ ಎನ್ನುವ ಮತ್ತೊಂದು ಕನ್ನಡ ಸಿನಿಮಾ ತೆರೆಗೆ ಬರಲಿದೆ.

ಟರ್ಬೋ

ಮಮ್ಮುಟ್ಟಿ (Mammootty) ಅವರು ಈ ಹಿಂದೆ ಘೋಷಿಸಿದ ಮೂರು ಸಿನಿಮಾಗಳ ಬಿಡುಗಡೆಗಳಲ್ಲಿ ʻಟರ್ಬೋʼ (Turbo Trailer Out) ಕೂಡ ಒಂದು. ರಾಜ್ ಬಿ ಶೆಟ್ಟಿ (Raj B Shetty) ಮತ್ತು ತೆಲುಗು ನಟ ಸುನೀಲ್ ಕೂಡ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಇಲ್ಲಿ ರಾಜ್‌ ಬಿ ಶೆಟ್ಟಿ ಅವರದ್ದು ಸಣ್ಣ ಪಾತ್ರ ಏನಲ್ಲ. ಮಮ್ಮುಟಿಗೆ ಪೈಪೋಟಿ ಕೊಡುವಂತಿದೆ. ಟರ್ಬೊ’ ಸಿನಿಮಾ ನಿರ್ದೇಶಕ ವೈಶಾಖ್ ಜತೆ ಇದು ಮೂರನೇ ಬಾರಿ ಮಮ್ಮುಟ್ಟಿ ಜತೆ ಕೈ ಜೋಡಿಸುತ್ತಿದ್ದಾರೆ. ಪೊಕ್ಕಿರಿ ರಾಜ ಮತ್ತು ಮಧುರ ರಾಜ ಸಿನಿಮಾಗಳ ಬಳಿಕ ಮಮ್ಮುಟ್ಟಿಯವರ ಮೂರನೇ ಚಿತ್ರವಾಗಿದೆ.

ಇದನ್ನೂ ಓದಿ: Dina Bhavishya : ಈ ರಾಶಿಯವರು ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ

ಚಲನಚಿತ್ರ ನಿರ್ಮಾಪಕ ಮಿಧುನ್ ಮ್ಯಾನುಯೆಲ್ ಥಾಮಸ್ ಬರೆದ ಚಿತ್ರಕಥೆಯನ್ನು ಈ ಸಿನಿಮಾ ಆಧರಿಸಿದೆ. ಇದು ಆ್ಯಕ್ಷನ್ ಕಾಮಿಡಿ ಎಂದು ಹೇಳಲಾಗುತ್ತದೆ. ಸಿನಿಮಾದಲ್ಲಿ ಮಮ್ಮುಟ್ಟಿಗೆ ನಾಯಕಿಯಾಗಿ ನಟಿ ಜ್ಯೋತಿಕಾ ಕಾಣಿಸಿಕೊಂಡಿದ್ದು, ಒಂದು ದಶಕದ ಬಳಿಕ ಮಲಯಾಳಂ ಚಿತ್ರರಂಗಕ್ಕೆ ಹಿಂತಿರುಗಿದ್ದಾರೆ.ಇದೊಂದು ಆಕ್ಷನ್ ಕಾಮಿಡಿ ಎಂಟರ್‌ಟೈನರ್ ಆಗಿದ್ದು ಮೇ 23ಕ್ಕೆ ತೆರೆಗೆ ಬರಲಿದೆ. ಆಟೋ ಬಿಲ್ಲ ಆಗಿ ತೆಲುಗು ನಟ ಸುನೀಲ್ ಕೂಡ ಕಾಣಿಸಿಕೊಂಡಿದ್ದಾರೆ. ಅಂಜನಾ ಜಯಪ್ರಕಾಶ್, ಕಬೀರ್ ದುಹಾನ್ ಸಿಂಗ್, ಸಿದ್ದಿಕಿ ಸೇರಿದಂತೆ ದೊಡ್ಡ ತಾರಾಗಣ ‘ಟರ್ಬೋ’ ಚಿತ್ರದಲ್ಲಿದೆ. ವಿಷ್ಣು ಶರ್ಮಾ ಛಾಯಾಗ್ರಹಣ, ಕ್ರಿಸ್ಟೋ ಕ್ಸೇವಿಯರ್ ಸಂಗೀತ ಚಿತ್ರಕ್ಕಿದೆ.

Continue Reading

South Cinema

Allu Arjun: ರಸ್ತೆ ಬದಿ ಡಾಬಾದಲ್ಲಿ ಊಟ ಮಾಡಿದ ಅಲ್ಲು ಅರ್ಜುನ್‌ ದಂಪತಿ! ಫ್ಯಾನ್ಸ್‌ಗೆ ಅಚ್ಚರಿ

Allu Arjun: ಐಕಾನ್ ಸ್ಟಾರ್​ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ನಟಿಸಿದ್ದಾರೆ.

VISTARANEWS.COM


on

Allu Arjun Sneha spotted at a dhaba
Koo

ಬೆಂಗಳೂರು: ಅಲ್ಲು ಅರ್ಜುನ್ (Allu Arjun) ಮತ್ತು ಪತ್ನಿ ಸ್ನೇಹಾ ರೆಡ್ಡಿ ಅವರು ರಸ್ತೆ ಬದಿಯ ಡಾಬಾದಲ್ಲಿ ಊಟ ಮಾಡಿರುವ ಫೋಟೊ ಇದೀಗ ವೈರಲ್‌ ಆಗಿದೆ. ಡಾಬಾದಲ್ಲಿ ಊಟ ಮಾಡುತ್ತಿರುವ ಫೋಟೊ ಕಂಡು ದಂಪತಿಯ ‘ಸರಳತೆ’ಗೆ ನೆಟ್ಟಿಗರು ಹಾಡಿ ಹೊಗಳುತ್ತಿದ್ದಾರೆ. ಜೋಡಿ ಯಾವ ಡಾಬಾದಲ್ಲಿ ಊಟ ಮಾಡಿದೆ ಎಂದು ತಿಳಿದು ಬಂದಿಲ್ಲ.

ಅಭಿಮಾನಿಯೊಬ್ಬರು ಕ್ಲಿಕ್ಕಿಸಿದ ಚಿತ್ರದಲ್ಲಿ ಅಲ್ಲು ಅವರು ಫೋನ್‌ನಲ್ಲಿ ಮಾತನಾಡುತ್ತಿರುವುದನ್ನು ಕಾಣಬಹುದು, ಸ್ನೇಹಾ ಊಟ ಮಾಡುತ್ತಿದ್ದಾರೆ. ʻʻರಸ್ತೆ ಬದಿಯ ಡಾಬಾದಲ್ಲಿ ಜೋಡಿ! ಸರಳತೆಯ ಮನುಷ್ಯ.” ಎಂದು ಬರೆದುಕೊಂಡಿದ್ದಾರೆ ಒಬ್ಬ ಅಭಿಮಾನಿ. ಇನ್ನೊಬ್ಬರು ʻʻಪುಷ್ಪ ಅಂತಹ ಸೂಪರ್‌ ಹಿಟ್‌ ಸಿನಿಮಾ ಮಾಡಿದ್ದರೂ ಸಿಂಪಲ್‌ ಆಗಿ ಇದ್ದಾರೆʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಐಕಾನ್ ಸ್ಟಾರ್​ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ನಟಿಸಿದ್ದಾರೆ.

ಇದನ್ನೂ ಓದಿ: ರಾಮನಗರದಲ್ಲಿ ಯುವಕನ ಕತ್ತು ಕೊಯ್ದು ಕಲ್ಲು ಎತ್ತಿ ಹಾಕಿ ಬರ್ಬರ ಹತ್ಯೆ; ಕೊಪ್ಪಳದಲ್ಲಿ ಸಿಲಿಂಡರ್‌ ಸ್ಫೋಟದಿಂದ ಹೊತ್ತಿ ಉರಿದ ಡಾಬಾ

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಪುಷ್ಪ 2 ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿದ್ದಾರೆ. ಅವರು ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿದ್ದರು. ಅವರು ಗೂಂಡಾಗಳನ್ನು ಹೊಡೆಯುತ್ತಿರುವುದು ಕಂಡುಬಂದಿದೆ.

ಪುಷ್ಪಾ 2 ಅನ್ನು ಚಿತ್ರಮಂದಿರಗಳಲ್ಲಿ ನೋಡಲು ಎಲ್ಲರೂ ಉತ್ಸುಕರಾಗಿದ್ದಾರೆ. ಚಿತ್ರವು ಖಂಡಿತವಾಗಿಯೂ ಬಾಕ್ಸ್ ಆಫೀಸ್ ಆಳುತ್ತಿದೆ. ಪುಷ್ಪಾ 2 ಚಿತ್ರದ ಥಿಯೇಟರ್ ಹಕ್ಕುಗಳನ್ನು ಅನಿಲ್ ತಡಾನಿ 200 ಕೋಟಿ ರೂ.ಗೆ ಮುಂಗಡವಾಗಿ ಖರೀದಿಸಿದ್ದಾರೆ ಎಂದು ಪಿಂಕ್​ವಿಲ್ಲಾ ಇತ್ತೀಚೆಗೆ ವರದಿ ಮಾಡಿತ್ತು.

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!
ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading
Advertisement
Saree Fashion
ಫ್ಯಾಷನ್1 hour ago

Saree Fashion: ಮಹಿಳೆಯರ ಮನಗೆದ್ದ ಕಟ್‌ ವರ್ಕ್ ಬಾರ್ಡರ್‌ ಪಾರ್ಟಿ ಸೀರೆ

Hardik Pandya
ಕ್ರೀಡೆ2 hours ago

Hardik Pandya: ಪ್ರೇಯಸಿಯ ದೋಖಾದ ಸುಳಿವು ಮೊದಲೇ ಇತ್ತಾ? ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

ಕರ್ನಾಟಕ2 hours ago

Lockup Death: ಲಾಕಪ್‌ ಡೆತ್‌ ಅಲ್ಲ ಎಂದಿದ್ದ ಮೃತ ಯುವಕನ ತಂದೆ ಮತ್ತೆ ಉಲ್ಟಾ!

Actor Kiran Raj Ronny Movie Reels with Fans Song
ಸ್ಯಾಂಡಲ್ ವುಡ್2 hours ago

Actor Kiran Raj: ʻರಾನಿʼ ಸಿನಿಮಾ ಸಾಂಗ್‌ ಔಟ್‌; ಇದೇ ಭಾನುವಾರ ಕಿರಣ್ ರಾಜ್‌ ʻರೀಲ್ಸ್ with ಫ್ಯಾನ್ಸ್ʼ!

Speech Fasting
ಆರೋಗ್ಯ2 hours ago

Speech Fasting: ಸದಾ ವಟವಟ ಮಾತಾಡ್ತಾ ಇರ್ತೀರಾ? ʼಮೌನವ್ರತʼ ಮಾಡಿ, ಆರೋಗ್ಯ ಸುಧಾರಣೆ ನೋಡಿ!

Jawa Yezdi
ಆಟೋಮೊಬೈಲ್2 hours ago

Jawa Yezdi : ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಜಾವಾ 42 ಬಾಬರ್ ರೆಡ್ ಶೀನ್‌ ಬಿಡುಗಡೆ

road Accident
ಕಲಬುರಗಿ2 hours ago

Road Accident : ಅಯೋಧ್ಯೆಯಲ್ಲಿ ಭೀಕರ ಅಪಘಾತ; ಕಲಬುರಗಿ ಮೂಲದ ಮೂವರು ದುರ್ಮರಣ, 19 ಮಂದಿಗೆ ಗಾಯ

KKR vs SRH Final 2024
ಕ್ರೀಡೆ2 hours ago

KKR vs SRH Final 2024: ನಾಳೆ ಕೆಕೆಆರ್​-ಹೈದರಾಬಾದ್​ ಫೈನಲ್​ ಕಾದಾಟ; ಯಾರಿಗೆ ಒಲಿಯಲಿದೆ ಐಪಿಎಲ್​ ಕಿರೀಟ?

Life Expectancy
ಆರೋಗ್ಯ2 hours ago

Life Expectancy: ಕೊರೊನಾದಿಂದ ನಮ್ಮ ಆಯುಷ್ಯದಲ್ಲಿ 2 ವರ್ಷ ಕಡಿತ; WHO ಭೀಕರ ವರದಿ

Tiger Project PM Modi hotel bill in Karnataka dues Rs 6 crore and Centre vs state departments clash
ರಾಜಕೀಯ2 hours ago

PM Modi: ಮೋದಿ ಬಂಡೀಪುರ ಭೇಟಿ ಆತಿಥ್ಯಕ್ಕೆ 6 ಕೋಟಿ ರೂ. ಖರ್ಚು; ಬಿಲ್‌ ಬಾಕಿಗೆ ಕೇಂದ್ರ – ರಾಜ್ಯ ಇಲಾಖೆಗಳ ಜಟಾಪಟಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌