Sanju Weds Geeta 2 : ಸಂಜು ವೆಡ್ಸ್‌ ಗೀತಾ 2ನಲ್ಲಿ ರಮ್ಯಾ ಇಲ್ಲ; ನಿರ್ದೇಶಕರು ಕೊಟ್ಟ ಕಾರಣ ಹೀಗಿದೆ! - Vistara News

ಸಿನಿಮಾ

Sanju Weds Geeta 2 : ಸಂಜು ವೆಡ್ಸ್‌ ಗೀತಾ 2ನಲ್ಲಿ ರಮ್ಯಾ ಇಲ್ಲ; ನಿರ್ದೇಶಕರು ಕೊಟ್ಟ ಕಾರಣ ಹೀಗಿದೆ!

ನಾಗಶೇಖರ್‌ ನಿರ್ದೇಶನದ ಸಂಜು ವೆಡ್ಸ್‌ ಗೀತಾ 2 ಸಿನಿಮಾ (Sanju Weds Geeta 2) ಸೆಟ್ಟೇರುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸಿನಿಮಾದ ಕುರಿತಾಗಿ ನಿರ್ದೇಶಕರು ವಿಸ್ತಾರ ನ್ಯೂಸ್‌ ಸಿನಿಮಾ ತಂಡದೊಂದಿಗೆ ಈ ಬಗ್ಗೆ ವಿಸ್ತೃತವಾಗಿ ಮಾತನ್ನಾಡಿದ್ದಾರೆ.

VISTARANEWS.COM


on

Sanju Weds Geeta 2 movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕನ್ನಡದಲ್ಲಿ ದೊಡ್ಡ ಯಶಸ್ಸು ಕಂಡ ಸಿನಿಮಾ ʼಸಂಜು ವೆಡ್ಸ್‌ ಗೀತಾʼ. ನಿರ್ದೇಶಕ ನಾಗಶೇಖರ್‌ ನಿರ್ದೇಶನದಲ್ಲಿ ಮೂಡಿಬಂದಿದ್ದ ಈ ಸಿನಿಮಾ ಇದೀಗ ಎರಡನೇ ಭಾಗವಾಗಿ (Sanju Weds Geeta 2) ತೆರೆ ಕಾಣುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ವಿಚಾರವಾಗಿ ನಾಗಶೇಖರ್‌ ಅವರು ಹಲವಾರು ವಿಚಾರಗಳನ್ನು ವಿಸ್ತಾರ ನ್ಯೂಸ್‌ ಸಿನಿಮಾ ತಂಡದೊಂದಿಗೆ ಹಂಚಿಕೊಂಡಿದ್ದಾರೆ.

ಅಂದ ಹಾಗೆ ʼಸಂಜು ವೆಡ್ಸ್‌ ಗೀತಾʼ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಮತ್ತು ರಮ್ಯಾ ಅವರ ಜೋಡಿ ಅಭಿಮಾನಿಗಳನ್ನು ಮೋಡಿ ಮಾಡಿತ್ತು. ಆದರೆ ಸಿನಿಮಾದ ಎರಡನೇ ಭಾಗದಲ್ಲಿ ರಮ್ಯಾ ಇರುವುದೇ ಇಲ್ಲ. ರಮ್ಯಾ ಬದಲಾಗಿ ನಟಿ ರಕ್ಷಿತಾ ರಾಮ್‌ ಅವರನ್ನು ಸಿನಿ ತಂಡ ಆಯ್ಕೆ ಮಾಡಿಕೊಂಡಿದೆ. ಅದಕ್ಕೆ ಕಾರಣವನ್ನು ಕೊಟ್ಟಿರುವ ನಾಗಶೇಖರ್‌ ಅವರು, “ರಮ್ಯಾ ಅವರನ್ನು ಕೇಳಬೇಕು ಎನ್ನುವ ಆಸೆಯಿತ್ತು. ಅವರು ವಿದೇಶದಲ್ಲಿದ್ದಾಗಲೇ ಅವರ ಪರಿಚಯದ ಕೆಲವರ ಬಳಿ ಮಾತನಾಡಿದ್ದೆ. ಆದರೆ ನನ್ನ ಈ ಸಿನಿಮಾ ಎರಡು ಕಥೆಯನ್ನು ಹೊಂದಿದೆ. ಒಂದು ಕಥೆಯನ್ನು ನಾವು ಮುಂಬೈಯಲ್ಲಿ ಚಿತ್ರೀಕರಣ ಮಾಡಿದರೆ ಇನ್ನೊಂದನ್ನು ಸ್ವಿಝರ್ಲೆಂಡ್‌ನಲ್ಲಿ ಚಿತ್ರೀಕರಣ ಮಾಡಲಿದ್ದೇವೆ. ಆ ಎರಡನೇ ಭಾಗದ ಸಮಯದಲ್ಲಿ ಚುನಾವಣೆ ಕೂಡ ಬರುವುದರಿಂದ ರಮ್ಯಾ ಅವರು ಅದರಲ್ಲಿ ಬಿಜಿ ಆಗಿಬಿಡುತ್ತಾರೆ. ಹಾಗಾಗಿ ನಾವು ಅವರನ್ನು ಕೇಳಲು ಹೋಗಲೇ ಇಲ್ಲ” ಎಂದು ಹೇಳಿದ್ದಾರೆ.


ಹಾಗೆಯೇ ಕಳೆದ ಬಾರಿ ಸಂಗೀತ ನಿರ್ದೇಶನ ಮಾಡಿಕೊಟ್ಟಿದ್ದ ಜೆಸ್ಸಿ ಗಿಫ್ಟ್‌ ಅವರನ್ನೂ ಕೂಡ ನಾಗಶೇಖರ್‌ ಅವರು ಈ ಬಾರಿ ಕೈ ಬಿಟ್ಟಿದ್ದಾರೆ. ಅದಕ್ಕೆ ಕಾರಣ ಕೇಳಿದಾಗ ಪ್ರತಿಕ್ರಿಯಿಸಿದ ಅವರು, “ನಮಗೆ ಮುಖ್ಯವಾಗಿ ಸಿನಿಮಾಕ್ಕಾಗಿ ಸಮಯ ಕೊಡುವವರು ಬೇಕು. ಜೆಸ್ಸಿ ಗಿಫ್ಟ್‌ ಅವರು ಸದ್ಯ ತುಂಬಾನೇ ಬಿಜಿ ಇದ್ದಾರೆ. ಹಾಗೆಯೇ ಅರ್ಜುನ್‌ ಜನ್ಯ ಅವರನ್ನು ಕೇಳೋಣ ಎಂದುಕೊಂಡೆವು. ಆದರೆ ಅವರು ಕೂಡ ವಿವಿಧ ಶೋ ಮತ್ತು ಚಿತ್ರ ನಿರ್ದೇಶನದಲ್ಲಿ ಬಿಜಿಯಾಗಿದ್ದಾರೆ. ಅದಕ್ಕಾಗಿ ವಿ ಶ್ರೀಧರ್‌ ಅವರನ್ನು ಆಯ್ಕೆ ಮಾಡಿಕೊಂಡೆವು. ಅವರಿಗೇನು ಕೆಲಸ ಇಲ್ಲ ಅಂದೇನಲ್ಲ. ಆದರೆ ನಮಗೆ ಬೇಕಾದ ಸಮಯವನ್ನು ಅವರು ಕೊಡಲು ಸಿದ್ಧರಿದ್ದರು” ಎಂದು ತಿಳಿಸಿದ್ದಾರೆ.

ಮ್ಯೂಸಿಕ್‌ ಇಲ್ಲದೆ ಸಿನಿಮಾವಿಲ್ಲ

ಅಂದ ಹಾಗೆ ʼಸಂಜು ವೆಡ್ಸ್‌ ಗೀತಾ 2ʼ ಸಿನಿಮಾ ತಯಾರಾಗುವುದಕ್ಕೂ ಮೊದಲು ಅದರ ಸಂಗೀತ ತಯಾರಾಗಿದೆಯಂತೆ. “ಸಿನಿಮಾ ನಿಲ್ಲಬೇಕೆಂದರೆ ಅದಕ್ಕೆ ಮೊದಲು ಅದ್ಭುತವಾದ ಸಂಗೀತವನ್ನು ಕೊಡಬೇಕು. ಅದಕ್ಕಾಗಿಯೇ ನಾವು ಇಷ್ಟು ದಿನ ಕಾದಿದ್ದು. ಒಮ್ಮೆ ಹಾಡು ಇಷ್ಟವಾದ ಮೇಲೆ ಅದನ್ನು ಕಿಟ್ಟಿ ಅವರಿಗೆ ಕೇಳಿಸಿದೆ. ಅವರು ಕೂಡ ಅದನ್ನು ಇಷ್ಟಪಟ್ಟ ನಂತರ ಸಿನಿಮಾ ಕಥೆ ಕಡೆ ಗಮನ ಕೊಟ್ಟೆವು. ಸದ್ಯಕ್ಕೆ ಸಿನಿಮಾದ ಕಥೆ, ಸಂಭಾಷಣೆ, ಸಂಗೀತ ಎಲ್ಲವೂ ಸಿದ್ಧವಿದೆ. ಇದೇ ಆಗಸ್ಟ್‌ 15ಕ್ಕೆ ನಮ್ಮ ʼಸಂಜು ವೆಡ್ಸ್‌ ಗೀತಾ 2ʼ ಸೆಟ್ಟೇರಲಿದೆ. ಹಾಗೆಯೇ ಮುಂದಿನ ವರ್ಷ ಏಪ್ರಿಲ್‌ 1ರಂದು ಸಿನಿಮಾ ತೆರೆ ಕಾಣಲಿದೆ. ನಮ್ಮ ʼಸಂಜು ವೆಡ್ಸ್‌ ಗೀತಾʼ ಕೂಡ ಏಪ್ರಿಲ್‌ 1ರಂದೇ ತೆರೆ ಕಂಡಿತ್ತು” ಎಂದು ನಿರ್ದೇಶಕ ನಾಗಶೇಖರ್‌ ಹೇಳಿದ್ದಾರೆ.


ಮಾಸ್ತಿಗುಡಿ ನಂತರ ಕಾಣೆಯಾಗಿದ್ದೇಕೆ?

ಮಾಸ್ತಿಗುಡಿ ಸಿನಿಮಾ ಚಿತ್ರೀಕರಣ ವೇಳೆ ಇಬ್ಬರು ಪ್ರಮುಖ ನಟರು ಸಾವಿಗೀಡಾಗಿದ್ದರು. ಇದಾದ ನಂತರ ನಾಗಶೇಖರ್‌ ಅವರು ಕಾಣೆಯೇ ಆದರು ಎಂದು ಹೇಳಲಾಗುತ್ತಿತ್ತು. ಆದರೆ ಇದರ ಬಗ್ಗೆಯೂ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. “ಕಾಣೆಯಾದೆ ಎನ್ನುವುದು ಜನರ ತಪ್ಪು ಕಲ್ಪನೆ. ಮಾಸ್ತಿಗುಡಿ ಆದ ಮೇಲೆ ಅಂಬರೀಶ್‌ ಅವರ ಮಗನನ್ನು ಅಮರ್‌ ಸಿನಿಮಾ ಮೂಲಕ ಲಾಂಚ್‌ ಮಾಡಿದ್ದೇ ನಾನು. ಆದರೆ ಅಂಬರೀಶ್‌ ಅವರು ನಿಧನರಾದ ನಂತರ ಮನಸ್ಸಿಗೆ ನೋವುಂಟಾಯಿತು. ಇಲ್ಲಿ ನನ್ನನ್ನು ಬೆಂಬಲಿಸುವವರು ಯಾರೂ ಇಲ್ಲ ಎನಿಸಿತು. ಹಾಗಾಗಿ ತಮಿಳಿಗೆ ಹೋದೆ. ಅಲ್ಲೊಂದು ಸಿನಿಮಾ ಮಾಡಿದೆ. ತೆಲುಗು ಭಾಷೆಯಲ್ಲೂ ಒಂದು ಸಿನಿಮಾ ಮಾಡಿದೆ. ಇದೀಗ ಮತ್ತೆ ಕನ್ನಡಕ್ಕೆ ವಾಪಸ್‌ ಬರುತ್ತಿದ್ದೇನೆ” ಎಂದು ಅವರು ಹೇಳಿದ್ದಾರೆ.

ಸಂಜು ವೆಡ್ಸ್‌ ಗೀತಾ 2 ಬಗ್ಗೆ ಮಾತು ಮುಂದುವರಿಸಿದ ನಾಗಶೇಖರ್‌ ಅವರು, ಸಿನಿಮಾ ಎರಡು ಕಥೆಗಳನ್ನು ಹೊಂದಿದೆ. ಇಂದಿನ ಕಥೆಯೊಂದಾದರೆ ಹತ್ತು ವರ್ಷ ಹಿಂದಿನ ಕಥೆಯೊಂದು. ಇಂದಿನ ಕಥೆಯಲ್ಲಿ ಕಿಟ್ಟಿ ದೊಡ್ಡ ಶ್ರೀಮಂತನಾಗಿ ಕಾಣಿಸಿಕೊಳ್ಳುತ್ತಾರೆ. ಹತ್ತು ವರ್ಷದ ಹಿಂದಿನ ಕಥೆಯಲ್ಲಿ ಅದರ ವಿರುದ್ಧವಾಗಿ ಕಾಣಿಸಿಕೊಳ್ಳುತ್ತಾರೆ. ಸಿನಿಮಾದಲ್ಲಿ ಪ್ರಕಾಶ್‌ ರಾಜ್‌, ರಮ್ಯ ಕೃಷ್ಣ ಅವರನ್ನು ಕರೆತರುವ ಯೋಜನೆಯಿದೆ. ತಮನ್ನಾ ಅವರನ್ನೂ ಅತಿಥಿ ಪಾತ್ರದಲ್ಲಿ ಕರೆತರಬೇಕೆನ್ನುವ ಮನಸ್ಸಿದೆ. ಅವರಿಗೆ ಸಮಯವಿದ್ದಿದ್ದಾರೆ ಅವರನ್ನು ತರುವುದು ಗ್ಯಾರಂಟಿ ಎಂದು ಅವರು ಮಾಹಿತಿ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

VISTARANEWS.COM


on

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಕುರಿತು ದಿನಕ್ಕೊಂದು ಹೊಸ ಸುದ್ದಿ ಬರ್ತಿದೆ. ಇದೀಗ ಸಿನಿಮಾದ ಕೆಲವು ದೃಶ್ಯಗಳ ಬಗ್ಗೆ ಚಿತ್ರದ ನಾಯಕಿ ಕಿಯಾರಾ ಅಡ್ವಾಣಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಚಿತ್ರೀಕರಣಕ್ಕೂ ಮೊದಲು ನಿರ್ದೇಶಕರು ಈ ದೃಶ್ಯಗಳು ನಟಿಯ ಕಂಫರ್ಟ್ ಜೋನ್ ಒಳಗೇ ಇರುತ್ತವೆ ಎಂದು ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ, ಚಿತ್ರೀಕರಣ ಮುಗಿದ ನಂತರ ಔಟ್‌ಪುಟ್ ನೋಡಿದ ಕಿಯಾರಾ ಅವರಿಗೆ ಆ ದೃಶ್ಯಗಳು ತೆರೆಯ ಮೇಲೆ ಅತಿ ಎನಿಸಿದೆಯಂತೆ. ಈ ಕಾರಣದಿಂದ ಅವರು ದೃಶ್ಯಗಳನ್ನು ಎಡಿಟ್ ಮಾಡಲು ಕೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಮತ್ತು ‘ಮಾನ್ಸ್‌ಟರ್ ಮೈಂಡ್ ಕ್ರಿಯೇಷನ್ಸ್’ ಜಂಟಿಯಾಗಿ ನಿರ್ಮಾಣ ಮಾಡುತ್ತಿವೆ. ಜೂನ್ 4ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾದ ರಿಲೀಸ್ ದಿನಾಂಕ ಸದ್ಯಕ್ಕೆ ಮುಂದೂಡಿಕೆ ಆಗಿದೆ. ಹೊಸ ರಿಲೀಸ್ ಡೇಟ್ ತಿಳಿಯಲು ಫ್ಯಾನ್ಸ್ ಕಾತುರದಿಂದ ಕಾಯುತ್ತಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

VISTARANEWS.COM


on

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್'

ಆದಿತ್ಯ ಧರ್ ನಿರ್ದೇಶನದ ʼಧುರಂಧರ್’ (ಭಾಗ 1) ಈಗ ಜಪಾನ್‌ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. 2025ರ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಬರೋಬ್ಬರಿ 1328 ಕೋಟಿ ರೂಪಾಯಿಗಳಿಗೂ ಹೆಚ್ಚು ಸಂಗ್ರಹ ಮಾಡಿ ದಾಖಲೆ ಬರೆದಿತ್ತು. ಇದೀಗ ಜುಲೈ 10, 2026 ರಂದು ಜಪಾನ್‌ನಲ್ಲಿ ಅದ್ಧೂರಿಯಾಗಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ರಣವೀರ್ ಸಿಂಗ್ ಅವರ ಪವರ್‌ಫುಲ್ ಆಕ್ಷನ್ ಮತ್ತು ಅದ್ಭುತ ಮೇಕಿಂಗ್‌ನಿಂದಾಗಿ ಈ ಸಿನಿಮಾ ಜಪಾನ್ ಪ್ರೇಕ್ಷಕರನ್ನು ಸೆಳೆಯುವ ಭರವಸೆ ಮೂಡಿಸಿದೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಸಂಜಯ್ ದತ್, ಅಕ್ಷಯ್ ಖನ್ನಾ, ಆರ್. ಮಾಧವನ್ ಮತ್ತು ಅರ್ಜುನ್ ರಾಂಪಾಲ್ ಅವರಂತಹ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ.

Continue Reading

Latest

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

VISTARANEWS.COM


on

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಡಾ. ಧನ್ಯತಾ ಈಗ ಹೊಸ ಸಂಭ್ರಮದಲ್ಲಿದ್ದಾರೆ. ಮದುವೆಯಾದ ಕೆಲವು ತಿಂಗಳುಗಳ ನಂತರ ಈ ದಂಪತಿ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸುಂದರವಾದ ಪೋಸ್ಟ್ ಹಂಚಿಕೊಂಡಿರುವ ಅವರು, Our universe is expanding ಎಂದು ಬರೆಯುವ ಮೂಲಕ ತಂದೆ-ತಾಯಿ ಆಗುತ್ತಿರುವ ಸಂತಸದ ವಿಷಯವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ನಟ ಧನಂಜಯ್ ಅವರು 2025ರ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾ. ಧನ್ಯತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇವರ ಅದ್ಧೂರಿ ಮದುವೆಯಲ್ಲಿ ಚಿತ್ರರಂಗ ಹಾಗೂ ರಾಜಕೀಯದ ಗಣ್ಯರು ಭಾಗವಹಿಸಿ ಶುಭ ಹಾರೈಸಿದ್ದರು. ಇದೀಗ ಡಾಲಿ ದಂಪತಿ ನೀಡಿರುವ ಈ ಗುಡ್ ನ್ಯೂಸ್ ಕೇಳಿ ಅವರ ಅಭಿಮಾನಿಗಳು ಮತ್ತು ಸ್ಯಾಂಡಲ್‌ವುಡ್‌ನ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

Continue Reading
Advertisement
ದೇಶ7 hours ago

ಬಂಗಾಳದಲ್ಲಿ ಬಿಜೆಪಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ, ಯಾರ ಪಾಲಾಗಲಿದೆ ಮುಖ್ಯಮಂತ್ರಿ ಗದ್ದುಗೆ?

ರಾಜಕೀಯ7 hours ago

ವಿಜಯ್‌ ಪ್ರಮಾಣವಚನಕ್ಕೆ ಬ್ರೇಕ್‌, ರಾಷ್ಟ್ರಪತಿಗೆ ಟಿವಿಕೆ ಪತ್ರಚೆನ್ನೈ

ರಾಜಕೀಯ10 hours ago

ತಮಿಳುನಾಡು ರಾಜಕೀಯಕ್ಕೆ ರೋಚಕ ಟ್ವಿಸ್ಟ್‌, ದಳಪತಿ ಪ್ರಮಾಣವಚನಕ್ಕೆ ಬ್ರೇಕ್‌, ಡಿಎಂಕೆ-ಎಐಎಡಿಎಂಕೆ ಮೈತ್ರಿ ಸಾಧ್ಯತೆ

ಕ್ರೈಂ11 hours ago

ಪ.ಬಂಗಾಳ ಶೂಟೌಟ್‌ಗೆ ಟ್ವಿಸ್ಟ್‌, ಅಸಲಿಗೆ ಸುವೇಂದು ಟಾರ್ಗೆಟ್‌ ಆಗಿದ್ರಾ?

ಕ್ರೈಂ11 hours ago

ಪಶ್ಚಿಮ ಬಂಗಾಳದಲ್ಲಿ ರಕ್ತದೋಕುಳಿ, ಸುವೇಂದು ಅಧಿಕಾರಿ ಪಿಎ ಚಂದ್ರನಾಥ್‌ ಶೂಟೌಟ್‌‌..!

Latest1 day ago

ಪಶ್ಚಿಮ ಬಂಗಾಳದಲ್ಲಿ ಕೇಸರಿ ಪರ್ವ: ಯಾರಾಗಲಿದ್ದಾರೆ ʼಸಿಎಂʼ?

Latest1 day ago

ದಳಪತಿʼ ಪಟ್ಟಾಭಿಷೇಕಕ್ಕೆ ಕ್ಷಣಗಣನೆ : ತಮಿಳುನಾಡು ರಾಜಕಾರಣದಲ್ಲಿ ಬಿರುಗಾಳಿ

Latest2 days ago

ಸಿಎಂ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವುದಿಲ್ಲ ಎಂದಿದ್ದೇಕೆ ಮಮತಾ ಬ್ಯಾನರ್ಜಿ?

Latest2 days ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest2 days ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌