Actor Nani: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಸರಾ’ ಟ್ರೈಲರ್‌ ಔಟ್‌: ಲುಕ್‌ ಕಂಡು ʻಪುಷ್ಪರಾಜ್‌ʼ ಅಂದ್ರು ನೆಟ್ಟಿಗರು! - Vistara News

ಟಾಲಿವುಡ್

Actor Nani: ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಸರಾ’ ಟ್ರೈಲರ್‌ ಔಟ್‌: ಲುಕ್‌ ಕಂಡು ʻಪುಷ್ಪರಾಜ್‌ʼ ಅಂದ್ರು ನೆಟ್ಟಿಗರು!

ಟ್ರೈಲರ್‌ ಮೂಲಕ ನಾನಿ (Actor Nani) ‘ದಸರಾ’ ದರ್ಬಾರ್ ಶುರುವಾಗಿದೆ. ಇದರ ಬೆನ್ನಲ್ಲೇ ನಾನಿ ಲುಕ್‌ ಅನ್ನು ಸಲ್ಲು ಅರ್ಜುನ್‌ ಅಭಿನಯದ ಪುಷ್ಪಾ ಸಿನಿಮಾದ ಪುಷ್ಪರಾಜ್​ ಪಾತ್ರಕ್ಕೆ ಹೋಲಿಕೆ ಮಾಡಲಾಗುತ್ತಿದೆ.

VISTARANEWS.COM


on

Natural star Nani's 'Dasara' trailer is out
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನ್ಯಾಚುರಲ್ ಸ್ಟಾರ್ ನಾನಿ (Actor Nani) ಮೆಗಾ ಪ್ರಾಜೆಕ್ಟ್ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಬಹು ನಿರೀಕ್ಷಿತ ಟ್ರೈಲರ್‌ ಬಿಡುಗಡೆಯಾಗಿದೆ. ಮಾಸ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಮಾರ್ಚ್ 30ರಂದು ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ. ಟ್ರೈಲರ್‌ ಮೂಲಕ ನಾನಿ ‘ದಸರಾ’ ದರ್ಬಾರ್ ಶುರುವಾಗಿದೆ. ಇದರ ಬೆನ್ನಲ್ಲೇ ನಾನಿ ಲುಕ್‌ ಅನ್ನು ಸಲ್ಲು ಅರ್ಜುನ್‌ ಅಭಿನಯದ ಪುಷ್ಪಾ ಸಿನಿಮಾದ ಪುಷ್ಪರಾಜ್​ ಪಾತ್ರಕ್ಕೆ ಹೋಲಿಕೆ ಮಾಡಲಾಗುತ್ತಿದೆ. ಟ್ರೋಲ್‌ಗೆ ಗುರಿಯಾಗುತ್ತಿದ್ದಂತೆ ನಟ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಪುಷ್ಪಾ ಸಿನಿಮಾದ ಪುಷ್ಪರಾಜ್​ ಪಾತ್ರಕ್ಕೆ ಹೋಲಿಕೆ ಮಾಡುತ್ತಿದ್ದಂತೆ ನಟ ಈ ಬಗ್ಗೆ ಮಾತನಾಡಿ ʻʻಹೇರ್​ ಸ್ಟೈಲ್​, ಲುಂಗಿ, ಬನಿಯನ್​ ಹೊರತುಪಡಿಸಿ ಬೇರೆ ಯಾವುದೇ ಅಂಶಗಳೂ ಪುಷ್ಪ ಚಿತ್ರಕ್ಕೆ ಹೋಲಿಕೆ ಆಗುವುದಿಲ್ಲ. ದಸರಾ ರಿಲೀಸ್​ ಆದ ಬಳಿಕ ಯಾರಾದರೂ ಇಂತಹ ಹೇರ್​ ಸ್ಟೈಲ್​ ಮಾಡಿಕೊಂಡು ಲುಂಗಿ, ಬನಿಯನ್​ ಧರಿಸಿ ಕಾಣಿಸಿಕೊಂಡರೆ ನೀವು ಅದನ್ನು ದಸರಾ ಗೆಟಪ್​ ಎನ್ನುತ್ತೀರಿ’ ಎಂದು ನಾನಿ ಹೇಳಿದ್ದಾರೆ.

ನಾನಿ ಮಾಸ್ ಅವತಾರ, ಕಲ್ಲಿದ್ದಲಿನ ರಕ್ತಸಿಕ್ತ ಲೋಕ ಪ್ರೇಕ್ಷಕರ ಮನದಲ್ಲಿ ಕುತೂಹಲ ಹುಟ್ಟುಹಾಕಿದೆ. ನ್ಯಾಚುರಲ್ ಸ್ಟಾರ್ ರಗಡ್ ಲುಕ್, ಹಾವ ಭಾವ ಎಲ್ಲವೂ ಗಮನ ಸೆಳೆದಿದ್ದು, ನಾನಿ ಅಭಿಮಾನಿಗಳು ಕೂಡ ಸಿನಿಮಾ ಮೇಲೆ ಅಪಾರ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ತೆಲಂಗಾಣದ ಗೋದಾವರಿಖಾನಿ ಸುತ್ತಮುತ್ತಲಿನ ವೀರ್ಲಪಲ್ಲಿ ಗ್ರಾಮ ಹಾಗೂ ಸಿಂಗರೇಣಿ ಕಲ್ಲಿದ್ದಲಿನ ಪ್ರಪಂಚವನ್ನು ತೆರೆ ಮೇಲೆ ತರುತ್ತಿದೆ ದಸರಾ ಸಿನಿಮಾ.

ಇದನ್ನೂ ಓದಿ: Actor Nani: ರಾಮ್ ಚರಣ್ ಜತೆ ತನ್ನನ್ನು ತಾನು ಹೋಲಿಸಿಕೊಂಡ ಟಾಲಿವುಡ್‌ ನಾನಿ: ನೆಪೋಟಿಸಂ ಬಗ್ಗೆ ನಟ ಹೇಳಿದ್ದೇನು?

ಶ್ರೀಲಕ್ಷ್ಮೀ ವೆಂಕಟೇಶ್ವರ ಸಿನಿಮಾಸ್ ಬ್ಯಾನರ್‌ನಡಿ ಸುಧಾಕರ್ ಚೆರುಕುರಿ ಬಿಗ್ ಬಜೆಟಟ್‌ನಲ್ಲಿ ನಿರ್ಮಾಣ ಮಾಡಿದ್ದಾರೆ. ಶ್ರೀಕಾಂತ್ ಒಡೆಲಾ ಚೊಚ್ಚಲ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬಂದಿದ್ದು, ಖ್ಯಾತ ನಟಿ ಕೀರ್ತಿ ಸುರೇಶ್ ನಾನಿ ಜೋಡಿಯಾಗಿ ಸ್ಕ್ರೀನ್ ಶೇರ್ ಮಾಡಿದ್ದಾರೆ.

ಬಹು ದೊಡ್ಡ ತಾರಾಗಣ ಒಳಗೊಂಡ ಈ ಚಿತ್ರದಲ್ಲಿ ‘ದಿಯಾ’ ಖ್ಯಾತಿಯ ದೀಕ್ಷಿತ್ ಶೆಟ್ಟಿ, ಸಮುದ್ರಕನಿ, ಸಾಯಿಕುಮಾರ್, ಜರೀನಾ ವಹಾಬ್ ಸೇರಿದಂತೆ ಸ್ಟಾರ್ ಕಲಾವಿದರ ತಾರಾಬಳಗವಿದೆ. ಸಂತೋಷ್ ನಾರಾಯಣನ್ ಮ್ಯೂಸಿಕ್, ಸತ್ಯನ್ ಸೂರ್ಯನ್ ಕ್ಯಾಮೆರಾ ವರ್ಕ್, ನವೀನ್ ನೂಲಿ ಸಂಕಲನ, ಅನ್ಬರಿವ್ ಸಾಹಸ ನಿರ್ದೇಶನ, ವಿಜಯ್ ಚಗಂಟಿ ಕಾರ್ಯಕಾರಿ ನಿರ್ಮಾಣದಲ್ಲಿ ‘ದಸರಾ’ ಸಿನಿಮಾ ಮೂಡಿ ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Movie release: ಹಾರರ್, ಥ್ರಿಲರ್, ಆ್ಯಕ್ಷನ್.. ಒಟಿಟಿಯಲ್ಲಿ ಬರಲಿವೆ ಸೂಪರ್ ಹಿಟ್ ಮೂವಿಗಳು

Movie release: ಸುಮಾರು ಎರಡು ವಾರಗಳ ಬಳಿಕ ಈ ವಾರದಲ್ಲಿ ಹಲವಾರು ಚಿತ್ರಗಳು ಒಟಿಟಿಯಲ್ಲಿ ಬರಲು ಸಜ್ಜಾಗಿದೆ. ಹಾರರ್, ಥ್ರಿಲರ್, ಆಕ್ಷನ್, ರೋಮ್ಯಾಂಟಿಕ್ ಸೇರಿದಂತೆ ಸೂಪರ್ ಹಿಟ್ ಮೂವಿಗಳು ಈ ವಾರ ತೆರೆ ಕಾಣಲಿದೆ.

VISTARANEWS.COM


on

By

Movie release
Koo

ಬೆಂಗಳೂರು: ಹೊರಗೆ ಬಿಸಿಲು ತೀವ್ರವಾಗಿದೆ. ಹೀಗಿರುವಾಗ ಮನೆಯೊಳಗೆ ಕುಳಿತು ತಂಪಾದ ಜ್ಯೂಸು ಕುಡಿಯುತ್ತಾ, ತಿಂಡಿಗಳನ್ನು ಮೆಲ್ಲುತ್ತಾ ಇಷ್ಟವಾದ ಸಿನಿಮಾಗಳನ್ನು ನೋಡುತ್ತಾ ರಜೆ ಕಳೆಯಬಹುದು. ಯಾಕೆಂದರೆ ಈ ವಾರ ಹಲವು ಹೊಸ ಚಿತ್ರಗಳು ಒಟಿಟಿಯಲ್ಲಿ (OTT) ಬಿಡುಗಡೆಯಾಗಲಿದೆ. ಅತ್ಯಂತ ನಿರೀಕ್ಷಿತ ಚಿತ್ರಗಳಾದ ಯನಿವನ್ ಬಟ್ ಯು (Anyone But You), ಡ್ಯೂನ್: ಪಾರ್ಟ್ 2 (Dune: Part 2), ಡ್ರೀಮ್ ಸಿನಾರಿಯೊ (Dream Scenario) ಮತ್ತು ಝಾಕ್ ಸ್ನೈಡರ್ಸ್ ರೆಬೆಲ್ ಮೂನ್ – ಪಾರ್ಟ್ 2: ದಿ ಸ್ಕಾರ್ಗಿವರ್ (Zack Snyder’s Rebel Moon – Part Two: The Scargiver) ಕೂಡ ಸೇರಿದೆ.

ಇನ್ನು ವಿದ್ಯಾ ಬಾಲನ್ (Vidya Balan) ಅವರ ಅಭಿಮಾನಿಗಳಿಗೆ ಸಂತಸದ ಸುದ್ದಿ. ದೋ ಔರ್ ದೋ ಪ್ಯಾರ್ (Do Aur Do Pyaar ) ಕೂಡ ಈ ವಾರ ಥಿಯೇಟರ್‌ಗಳಿಗೆ ಆಗಮಿಸಲಿದೆ. ಈಗಾಗಲೇ ಈ ಚಿತ್ರದ ಟ್ರೇಲರ್ ಸಾಕಷ್ಟು ಮಂದಿಯ ಗಮನ ಸೆಳೆದಿದೆ. ಹೀಗಾಗಿ ಮನೆಯಿಂದ ಹೊರಬಂದು ದೊಡ್ಡ ಪರದೆಯ ಮೇಲೆ ಈ ಚಿತ್ರ ನೋಡಬಹುದು.

ಇಷ್ಟೇ ಅಲ್ಲದೇ ಸೀ ಯು ಇನ್ ಅನದರ್ ಲೈಫ್, ದಿ ಗ್ರಿಮ್ ವೇರಿಯೇಷನ್ಸ್, ದಿ ಟೂರಿಸ್ಟ್: ಸೀಸನ್ 2 ಮತ್ತು ಚೀಫ್ ಡಿಟೆಕ್ಟಿವ್ 1958 ಸರಣಿಯು ತೆರೆಗೆ ಬರಲು ಕಾಯುತ್ತಿದೆ. ಈ ವಾರ ನೆಟ್ ಫ್ಲಿಕ್ಸ್, ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಸೇರಿದಂತೆ ಒಟಿಟಿಯಲ್ಲಿ ಬರಲು ಸಿದ್ದವಾಗಿರುವ ಚಿತ್ರಗಳು ಇಂತಿದೆ.

ಇದನ್ನೂ ಓದಿ: Priyanka Chopra: ʻಅಮರ್ ಸಿಂಗ್ ಚಮ್ಕಿಲಾʼ ಸಿನಿಮಾವನ್ನು ಹೊಗಳಿದ ಪ್ರಿಯಾಂಕಾ ಚೋಪ್ರಾ!

ಡ್ಯೂನ್: ಪಾರ್ಟ್ ಟು

ಬುಕ್ ಮೈ ಶೋ (BookMyShow ) ನಲ್ಲಿ ಡೆನಿಸ್ ವಿಲ್ಲೆನ್ಯೂವ್ ನಿರ್ದೇಶನದ ತಿಮೋತಿ ಚಲಾಮೆಟ್, ಝೆಂಡಯಾ, ಜೇವಿಯರ್ ಬಾರ್ಡೆಮ್, ರೆಬೆಕಾ ಫರ್ಗುಸನ್, ಜೋಶ್ ಬ್ರೋಲಿನ್, ಫ್ಲಾರೆನ್ಸ್ ಪಗ್, ಆಸ್ಟಿನ್ ಬಟ್ಲರ್, ಲಿಯಾ ಸೆಡೌಕ್ಸ್, ಕ್ರಿಸ್ಟೋಫರ್ ವಾಕೆನ್ ಮೊದಲಾದವರು ಅಭಿನಯಿಸಿರುವ ಚಿತ್ರ ಡ್ಯೂನ್: ಪಾರ್ಟ್ ಟು ಏಪ್ರಿಲ್ 16ರಂದು ಬಿಡುಗಡೆಯಾಗಲಿದೆ. ಸಾಹಸಮಯ ದೃಶ್ಯಗಳಿಂದಾಗಿಯೇ ಈ ಚಿತ್ರದ ಟ್ರೇಲರ್ ಸಾಕಷ್ಟು ಮಂದಿಯ ಗಮನ ಸೆಳೆದಿದೆ.


ಅವರ್ ಲಿವಿಂಗ್ ವರ್ಲ್ಡ್

ಜೇಮ್ಸ್ ಹನಿಬೋರ್ನ್ ನಿರ್ದೇಶನದ ಈ ಚಿತ್ರ ನೆಟ್‌ಫ್ಲಿಕ್ಸ್ ನಲ್ಲಿ ಏಪ್ರಿಲ್ 17ರಂದು ತೆರೆಗೆ ಬರಲಿದೆ. ಪ್ರಮುಖ ಪಾತ್ರಧಾರಿಯಾಗಿ ಕೇಟ್ ಬ್ಲಾಂಚೆಟ್ ಕಾಣಿಸಿಕೊಂಡಿದ್ದು,ಇದರಲ್ಲಿ ಎಮ್ಮಿ ಪ್ರಶಸ್ತಿ ವಿಜೇತ ತಂಡವು ಜೀವಂತ ಜಗತ್ತನ್ನು ಪುನಃಸ್ಥಾಪಿಸಲು ಮತ್ತು ಉಳಿಸಿಕೊಳ್ಳಲು ಪ್ರಯತ್ನಿಸುವ ಸಾಹಸಗಾಥೆಯನ್ನು ಒಳಗೊಂಡ ಚಿತ್ರವಿದು. ಅತ್ಯಂತ ರೋಮಾಂಚಕ ದೃಶ್ಯಗಳು ಮನ ಸೆಳೆಯುತ್ತದೆ.


ಸೀ ಯು ಇನ್ ಅನೆದರ್ ಲೈಫ್

ಜಾರ್ಜ್ ಸ್ಯಾಂಚೆಜ್-ಕಾಬೆಜುಡೊ, ಬೋರ್ಜಾ ಸೋಲರ್ ನಿರ್ದೇಶನದ ಈ ಚಿತ್ರದಲ್ಲಿ ರಾಬರ್ಟೊ ಗುಟೈರೆಜ್, ಪೋಲ್ ಲೋಪೆಜ್, ತಮಾರಾ ಕ್ಯಾಸೆಲ್ಲಾಸ್, ಕ್ವಿಮ್ ಅವಿಲಾ, ಮೌರಾದ್ ಔವಾನಿ, ಜೈಮ್ ಜಟಾರಿನ್ ಮುಖ್ಯ ಪಾತ್ರಧಾರಿಗಳಾಗಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ 17 ರಂದು ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಈ ಚಿತ್ರ ತೆರೆಗೆ ಬರಲಿದೆ. ಮ್ಯಾನುಯೆಲ್ ಜಬೋಯಿಸ್ ಅವರ ಪುಸ್ತಕವನ್ನು ಆಧರಿಸಿ ನಿರ್ಮಿಸಿರುವ ಈ ಕಿರುಸರಣಿಯು 11M ರೈಲು ಬಾಂಬ್ ದಾಳಿಯ ಹಿನ್ನೆಲೆಯನ್ನು ಹೊಂದಿದೆ.


ದಿ ಗ್ರಿಮ್ಮ್ ವರಿಯೇಷನ್ಸ್

ಯೊಕೊ ಕನೆಮೊರಿ, ಯಸುಹಿರೊ ಅಕಮಾಟ್ಸು, ಜುನಿಚಿರೊ ಹಶಿಗುಚಿ, ಯುಮಿ ಕಾಮಮುರಾ, ಮಸಾಟೊ ಟಕೆಯುಚಿ, ಶಿಂಟಾರೊ ನಕಾಜವಾ ನಿರ್ದೇಶಿಸರುವ ಅನಿಮೇಷನ್ ಚಿತ್ರ ಏಪ್ರಿಲ್ 17ರಂದು ನೆಟ್‌ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಲಿದೆ. ತತ್ಸುಹಿಸಾ ಸುಜುಕಿ, ಕೆಂಜಿ ನೊಜಿಮಾ, ಮಿಸಾಟೊ ಫುಕುಯೆನ್ ಧ್ವನಿ ನೀಡಿರುವ ಚಿತ್ರದಲ್ಲಿ ಜಪಾನೀಸ್ ಮೂಲ ನೆಟ್ ಅನಿಮೇಷನ್ (ONA) ಸಂಕಲನ ಸರಣಿಯು ಸಹೋದರರಾದ ಜಾಕೋಬ್ ಮತ್ತು ವಿಲ್‌ಹೆಲ್ಮ್ ಮತ್ತು ಅವರ ಕಿರಿಯ ಸಹೋದರಿ, ಮುಗ್ಧ ಮತ್ತು ಕುತೂಹಲಕಾರಿ ಚಾರ್ಲೆಟ್ ಸುತ್ತ ಸುತ್ತುತ್ತದೆ.


ದಿ ಸೀಕ್ರೆಟ್ ಸ್ಕೋರ್

ಜುವಾನ್ ಕಾರ್ಲೋಸ್ ಡಿ ಲಾಕಾ ನಿರ್ದೇಶಿಸಿದ ಈ ಚಿತ್ರದಲ್ಲಿ ವಾಲ್ ಡೊರಾಂಟೆಸ್, ಜುವಾನ್ಮಾ ಪಿಯಾನೋ, ಜೋಸ್ ಪೆರಾಲ್ಟಾ, ಡೇನಿಯಲ್ ಅಬ್ರೆಗೊ, ಮೊನಿಕಾ ಪ್ಲೆಹ್ನ್, ಡಿಯಾಗೋ ಸ್ಯಾಂಡೋವಲ್, ಪಾವೊಲಾ ಗೊಮೆಜ್, ಮಿಚೆಲ್ ಅಲ್ಮಾಗುರ್, ಸೀಸರ್ ಅಕೋಸ್ಟಾ, ಡೇವಿಡ್ ಅಂಗುಲೋ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ಏಪ್ರಿಲ್ 17ರಂದು ಚಿತ್ರ ತೆರೆಗೆ ಬರಲಿದೆ.


ಸುಗಾ: ಅಗಸ್ಟ್ ಡಿ ಟೂರ್ ಡಿ-ಡೇ ದಿ ಮೂವಿ

ಜುನ್-ಸೂ ಪಾರ್ಕ್ ನಿರ್ದೇಶನದ ಸುಗಾ, ಜಿಮಿನ್, ಜಂಗ್‌ಕುಕ್ ಅಭಿನಯಿಸಿರುವ ಈ ಚಿತ್ರ ಏಪ್ರಿಲ್ 18ರಂದು ಚಿತ್ರ ಮಂದಿರಗಳಲ್ಲಿ ತೆರೆಗೆ ಬರಲಿದೆ. ಎನ್‌ಕೋರ್ ಸಂಗೀತ ಕಛೇರಿಗಾಗಿ ಪ್ರಪಂಚದಾದ್ಯಂತ ಪ್ರಯಾಣಿಸುವ ತಂಡದ ಸುತ್ತ ಚಿತ್ರದ ಕಥೆ ಹೆಣೆಯಲಾಗಿದೆ.


ಆರ್ಟಿಕಲ್ 370

ಆದಿತ್ಯ ಸುಹಾಸ್ ಜಂಬಾಳೆ ನಿರ್ದೇಶನದ ಯಾಮಿ ಗೌತಮ್, ಪ್ರಿಯಾಮಣಿ, ಸ್ಕಂದ ಠಾಕೂರ್, ಅಶ್ವಿನಿ ಕೌಲ್, ವೈಭವ್ ತತ್ವವಾದಿ, ಅರುಣ್ ಗೋವಿಲ್, ಕಿರಣ್ ಕರ್ಮಾರ್ಕರ್ ಅಭಿನಯದ ಚಿತ್ರ ಜಿಯೋ ಸಿನಿಮಾದಲ್ಲಿ ಏಪ್ರಿಲ್ 19ರಂದು ತೆರೆ ಕಾಣಲಿದೆ. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿ ಮೇಲೆ ಚಿತ್ರ ಕೇಂದ್ರೀಕರಿಸಿದೆ. ಈಗಾಗಲೇ ಈ ಚಿತ್ರ ತೆರೆಗೆ ಬಂದಿದ್ದು, ನೋಡಲಾಗದೇ ಇದ್ದರೆ ಈ ವಾರ ಓಟಿಟಿಯಲ್ಲಿ ಕಾಣಬಹುದು.


ಚೀಫ್ ಡಿಟೆಕ್ಟಿವ್ 1958

ಕಿಮ್ ಸಿಯೋಂಗ್-ಹೂನ್ ನಿರ್ದೇಶನದ ಈ ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಲೀ ಜೆ-ಹೂನ್, ಲೀ ಡಾಂಗ್-ಹ್ವಿ, ಚೋಯ್ ವೂ-ಸಂಗ್, ಯೂನ್ ಹ್ಯುನ್-ಸೂ ಕಾಣಿಸಿಕೊಂಡಿದ್ದಾರೆ. Disney+ Hotstar ನಲ್ಲಿ ಈ ಚಿತ್ರ ಏಪ್ರಿಲ್ 19ರಂದು ತೆರೆ ಕಾಣಲಿದೆ. ಚೀಫ್ ಇನ್ಸ್‌ಪೆಕ್ಟರ್ (1971) ಸರಣಿಯ ಪೂರ್ವಭಾವಿ ಕಥೆಯನ್ನು ಅಂದರೆ 1950 ರಿಂದ 1960 ರ ದಶಕದ ಕಥೆಯನ್ನು ಇದು ಒಳಗೊಂಡಿದೆ.


ಡ್ರೀಮ್ ಸಿನಾರಿಯೋ

ಕ್ರಿಸ್ಟೋಫರ್ ಬೋರ್ಗ್ಲಿ ನಿರ್ದೇಶನದ ಈ ಚಿತ್ರದಲ್ಲಿ ನಿಕೋಲಸ್ ಕೇಜ್, ಜೂಲಿಯಾನ್ನೆ ನಿಕೋಲ್ಸನ್, ಮೈಕೆಲ್ ಸೆರಾ, ಟಿಮ್ ಮೆಡೋಸ್, ಡೈಲನ್ ಗೆಲುಲಾ, ಡೈಲನ್ ಬೇಕರ್ ಮುಖ್ಯ ಭೂಮಿಕಾಯಲ್ಲಿ ಕಾಣಿಸಿಕೊಂಡಿದ್ದಾರೆ. ಲಯನ್ಸ್‌ಗೇಟ್ ಪ್ಲೇ ನಲ್ಲಿ ಏಪ್ರಿಲ್ 19ರಂದು ಪ್ರದರ್ಶನ ಕಾಣಲಿದೆ.


ರೆಬೆಲ್ ಮೂನ್- ಪಾರ್ಟ್ ಟು: ದಿ ಸ್ಕ್ಯಾರ್ಗಿವೆರ್

ಝಾಕ್ ಸ್ನೈಡರ್ ನಿರ್ದೇಶನದ ಈ ಚಿತ್ರದಲ್ಲಿ ಸೋಫಿಯಾ ಬೌಟೆಲ್ಲಾ, ಚಾರ್ಲಿ ಹುನ್ನಮ್, ಮೈಕೆಲ್ ಹುಯಿಸ್ಮನ್, ಜಿಮನ್ ಹೌನ್ಸೌ, ಡೂನಾ ಬೇ, ರೇ ಫಿಶರ್, ಕ್ಲಿಯೋಪಾತ್ರ ಕೋಲ್ಮನ್, ಜೆನಾ ಮ್ಯಾಲೋನ್, ಫ್ರಾ ಫೀ, ಎಡ್ ಸ್ಕ್ರೇನ್, ಆಂಥೋನಿ ಹಾಪ್ಕಿನ್ಸ್ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ 19 ರಂದು ನೆಟ್‌ಫ್ಲಿಕ್ಸ್ ಚಿತ್ರ ತೆರೆ ಕಾಣಲಿದೆ.


ಸೀರೆನ್

ಆಂಟೋನಿ ಭಾಗ್ಯರ ನಿರ್ದೇಶನದ ಈ ಚಿತ್ರದಲ್ಲಿ ಜಯಂ ರವಿ, ಕೀರ್ತಿ ಸುರೇಶ್, ಅನುಪಮಾ ಪರಮೇಶ್ವರನ್, ಯೋಗಿ ಬಾಬು ಮತ್ತು ಸಮುದ್ರಕನಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. Disney+ Hotstar ನಲ್ಲಿ ಏಪ್ರಿಲ್ 19ರಂದು ಚಿತ್ರ ತೆರೆ ಕಾಣಲಿದೆ. ಆಕ್ಷನ್ ಥ್ರಿಲ್ಲರ್ ಚಿತ್ರಗಳನ್ನು ಇಷ್ಟಪಡುವವರಿಗೆ ಇದೊಂದು ಒಳ್ಳೆಯ ಸಿನೆಮಾ.


ದಿ ಟೂರಿಸ್ಟ್ : ಸೀಸನ್ 2

ಕ್ರಿಸ್ ಸ್ವೀನಿ ನಿರ್ದೇಶನದ ಈ ಚಿತ್ರದಲ್ಲಿ ಜೇಮೀ ಡೋರ್ನಾನ್, ಡೇನಿಯಲ್ ಮ್ಯಾಕ್ಡೊನಾಲ್ಡ್, ಓಲ್ವೆನ್ ಫೌರೆ, ಗ್ರೆಗ್ ಲಾರ್ಸೆನ್, ವಿಕ್ಟೋರಿಯಾ ಹರಾಲಾಬಿಡೌ, ಕಾನರ್ ಮ್ಯಾಕ್‌ನೀಲ್, ಮಾರ್ಕ್ ಮೆಕೆನ್ನಾ, ನೆಸ್ಸಾ ಮ್ಯಾಥ್ಯೂಸ್, ಡೈರ್ಮೇಡ್ ಮುರ್ತಾಗ್, ಫ್ರಾನ್ಸಿಸ್ ಮ್ಯಾಗೀ ಮುಖ್ಯ ಪಾತ್ರಧಾರಿಗಳು. ಏಪ್ರಿಲ್ 19 ರಂದು ಲಯನ್ಸ್‌ಗೇಟ್ ಪ್ಲೇ ನಲ್ಲಿ ಈ ಚಿತ್ರ ತೆರೆ ಕಾಣಲಿದೆ.


ಎನಿ ಒನ್ ಬಟ್ ಯು

ವಿಲ್ ಗ್ಲುಕ್ ನಿರ್ದೇಶನದ ಈ ಚಿತ್ರದಲ್ಲಿ ಸಿಡ್ನಿ ಸ್ವೀನಿ, ಗ್ಲೆನ್ ಪೊವೆಲ್, ಅಲೆಕ್ಸಾಂಡ್ರಾ ಶಿಪ್, ಗಾಟಾ, ಹ್ಯಾಡ್ಲಿ ರಾಬಿನ್ಸನ್, ಮಿಚೆಲ್ ಹರ್ಡ್, ಡರ್ಮಟ್ ಮುಲ್ರೋನಿ, ಡ್ಯಾರೆನ್ ಬಾರ್ನೆಟ್ ಮತ್ತು ರಾಚೆಲ್ ಗ್ರಿಫಿತ್ಸ್. ಕಾಣಿಸಿಕೊಂಡಿದ್ದಾರೆ. ನೆಟ್‌ಫ್ಲಿಕ್ಸ್ ನಲ್ಲಿ ಏಪ್ರಿಲ್ 19ರಂದು ಈ ಚಿತ್ರ ತೆರೆ ಕಾಣಲಿದೆ.


ಲವ್ ಸೆಕ್ಸ್ ಔರ್ ಧೋಖಾ 2

ದಿಬಾಕರ್ ಬ್ಯಾನರ್ಜಿ ನಿರ್ದೇಶನದ ಈ ಚಿತ್ರದಲ್ಲಿ ನಿಮೃತ್ ಕೌರ್ ಅಹ್ಲುವಾಲಿಯಾ, ಅನುಪಮ್ ಜೋರ್ದಾರ್, ರೊಸಾನಾ ಎಲ್ಸಾ ಸ್ಕುಗಿಯಾ, ಉರ್ಫಿ ಜಾವೇದ್, ಅನು ಮಲಿಕ್ ಮುಖ್ಯ ಪಾತ್ರಧಾರಿಗಳಾಗಿದ್ದರೆ. ಏಪ್ರಿಲ್ 19ರಂದು ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆ ಕಾಣಲಿದೆ. ಸಾಮಾಜಿಕ ಜಾಲತಾಣದಲ್ಲಿ ಬೆಳೆದ ಪ್ರೀತಿ ಹೇಗಿರುತ್ತದೆ ಎನ್ನುವುದನ್ನು ಈ ಚಿತ್ರ ವಿವರಿಸುತ್ತದೆ.


ಸಿವಿಲ್ ವಾರ್

ಅಲೆಕ್ಸ್ ಗಾರ್ಲ್ಯಾಂಡ್ ನಿರ್ದೇಶನ ನಿರ್ದೇಶನದ ಕರ್ಸ್ಟನ್ ಡನ್ಸ್ಟ್, ವ್ಯಾಗ್ನರ್ ಮೌರಾ, ಕೈಲೀ ಸ್ಪೇನಿ, ಸ್ಟೀಫನ್ ಮೆಕಿನ್ಲೆ ಹೆಂಡರ್ಸನ್, ನಿಕ್ ಆಫರ್ಮನ್ ಅವರು ಅಭಿನಯಿಸಿರುವ ಚಿತ್ರ ಏಪ್ರಿಲ್ 19ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಮಿಲಿಟರಿ-ಎಂಬೆಡೆಡ್ ಪತ್ರಕರ್ತರ ತಂಡವು ಯುನೈಟೆಡ್ ಸ್ಟೇಟ್ಸ್‌ನಾದ್ಯಂತ ವೇಗವಾಗಿ ಉಲ್ಬಣಗೊಳ್ಳುತ್ತಿರುವ ಎರಡನೇ ಅಮೇರಿಕನ್ ಅಂತರ್ಯುದ್ಧದ ಸಮಯದಲ್ಲಿ ಪ್ರಯಾಣಿಸುವ ಕಥೆಯನ್ನು ಇದು ಒಳಗೊಂಡಿದೆ.


ದೋ ಔರ್ ದೋ ಪ್ಯಾರ್

ಶಿರ್ಷಾ ಗುಹಾ ಠಾಕುರ್ತಾ ಅವರ ನಿರ್ದೇಶನದ ಈ ಚಿತ್ರದಲ್ಲಿ ವಿದ್ಯಾ ಬಾಲನ್, ಪ್ರತೀಕ್ ಗಾಂಧಿ, ಇಲಿಯಾನಾ ಡಿ’ಕ್ರೂಜ್, ಸೆಂಧಿಲ್ ರಾಮಮೂರ್ತಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಏಪ್ರಿಲ್ 19ರಂದು ಚಿತ್ರಮಂದಿರಗಳಲ್ಲಿ ಈ ಚಿತ್ರ ತೆರೆ ಕಾಣಲಿದೆ. 2017 ರ ರೊಮ್ಯಾಂಟಿಕ್ ಕಾಮಿಡಿ ದಿ ಲವರ್ಸ್‌ನ ಅಧಿಕೃತ ರೂಪಾಂತರ ವಾದ ಈ ಚಿತ್ರದಲ್ಲಿ ದಂಪತಿ ದೂರವಾಗಿ ಮತ್ತೆ ತಮ್ಮ ಹೊಸ ಸಂಗಾತಿಗಾಗಿ ಹುಡುಕುವ ಕಥೆಯನ್ನು ಇದು ಒಳಗೊಂಡಿದೆ.

Continue Reading

ಟಾಲಿವುಡ್

Sapthami Gowda: ತೆಲುಗು ನಟನ ಜತೆ ʻಚಂದನವನದ ಸಿಂಗಾರ ಸಿರಿʼ ರೊಮ್ಯಾನ್ಸ್‌!

Sapthami Gowda: ಕಳೆದ ನಾಲ್ಕು ವರ್ಷದಲ್ಲಿ , ʻಪಾಪ್‌ ಕಾರ್ನ್ ಮಂಕಿ ಟೈಗರ್ʼ, ʻಕಾಂತಾರʼʻ ಯುವʼ ಹೀಗೆ ಮೂರು ಕನ್ನಡ ಸಿನಿಮಾಗಳನ್ನು ಮಾಡಿರುವ ಸಪ್ತಮಿ ಗೌಡ, ಇದೀಗ ತೆಲುಗು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗಾಗಿ ಸಪ್ತಮಿ ಗೌಡ ತೂಕ ಇಳಿಸಿಕೊಂಡಿದ್ದಾರೆ. ಸ್ಲಿಮ್ ಆಗಿದ್ದಾರೆ. ಈ ಚಿತ್ರಕ್ಕೆ ಕುದುರೆ ಸವಾರಿಯನ್ನ ಕಲಿತಿದ್ದಾರೆ. ಪಾತ್ರದ ಬಗ್ಗೆ ನಟಿ ಹೆಚ್ಚೇನೂ ರಿವೀಲ್‌ ಮಾಡಿಲ್ಲ.

VISTARANEWS.COM


on

Sapthami Gowda new film with Nithiin Thammudu
Koo

ಬೆಂಗಳೂರು: ಸಪ್ತಮಿ ಗೌಡ ʻಕಾಂತಾರʼ ಸಿನಿಮಾ ಮೂಲಕ ಪ್ರೇಕ್ಷಕರ ಹೃದಯಕ್ಕೆ ಹತ್ತಿರ ಆದವರು. ಇದಾದ ಬಳಿಕ ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ (Yuva Rajkumar) ಅಭಿನಯದ ಯುವ ‘ಯುವ’ ಸಿನಿಮಾದಲ್ಲಿ ಸಪ್ತಮಿ ಗೌಡ (Sapthami Gowda) ಅವರು ನಾಯಕಿಯಾಗಿ ನಟಿಸಿದರು. ಇದೀಗ ನಟಿ ತೆಲುಗು ಚಿತ್ರರಂಗಕ್ಕೆ ಭರ್ಜರಿ ಎಂಟ್ರಿ ಕೊಡುತ್ತಿದ್ದಾರೆ. ಕಳೆದ ನಾಲ್ಕು ವರ್ಷದಲ್ಲಿ , ʻಪಾಪ್‌ ಕಾರ್ನ್ ಮಂಕಿ ಟೈಗರ್ʼ, ʻಕಾಂತಾರʼʻ ಯುವʼ ಹೀಗೆ ಮೂರು ಕನ್ನಡ ಸಿನಿಮಾಗಳನ್ನು ಮಾಡಿರುವ ಸಪ್ತಮಿ ಗೌಡ, ಇದೀಗ ತೆಲುಗು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. `ಜಯಂ’ ಸಿನಿಮಾ ಹೀರೊ ನಿತಿನ್‌ (Nithiin) ಅವರ ಮುಂದಿನ ಚಿತ್ರ ʻತಮ್ಮುಡುʼದಲ್ಲಿ (Thammudu) ಸಪ್ತಮಿ ಗೌಡ ಹೀರೊಯಿನ್.

ಟಾಲಿವುಡ್‌ ಎಂಟ್ರಿ ಬಗ್ಗೆ ನಟಿ ಯುವ ಸಕ್ಸೆಸ್‌ ಮೀಟ್‌ನಲ್ಲಿಯೂ ಹಂಚಿಕೊಂಡಿದ್ದರು. ʻʻನಿತಿನ್‌ ಸಿನಿಮಾದಲ್ಲಿ ನಾನು ನಟಿಸುತ್ತಿದ್ದೇನೆ. ಶೂಟಿಂಗ್‌ ಕೂಡ ಶುರವಾಗಿದೆʼʼಎಂದಿದ್ದಾರೆ. ಈ ಸಿನಿಮಾಗಾಗಿ ಸಪ್ತಮಿ ಗೌಡ ತೂಕ ಇಳಿಸಿಕೊಂಡಿದ್ದಾರೆ. ಸ್ಲಿಮ್ ಆಗಿದ್ದಾರೆ. ಈ ಚಿತ್ರಕ್ಕಾಗಿ ಕುದುರೆ ಸವಾರಿಯನ್ನೂ ಕಲಿತಿದ್ದಾರೆ. ಪಾತ್ರದ ಬಗ್ಗೆ ನಟಿ ಹೆಚ್ಚೇನೂ ರಿವೀಲ್‌ ಮಾಡಿಲ್ಲ.

ಇದನ್ನೂ ಓದಿ: Sapthami Gowda: ʻಯುವʼ ಸಿನಿಮಾದಲ್ಲಿನ ಪಾತ್ರ ಬಹಿರಂಗ ಪಡಿಸಿದ ಹೊಂಬಾಳೆ; ಇದು ಸಪ್ತಮಿ ಗೌಡ ಬರ್ತಡೇ ಸ್ಪೆಷಲ್‌!

ʼತಮ್ಮಡುʼ ಸಿನಿಮಾಗೆ ಶ್ರೀರಾಮ್ ವೇಣು ನಿರ್ದೇಶನವಿದೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಅಡಿಯಲ್ಲಿ ದಿಲ್ ರಾಜು ಅವರು ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ನಿರ್ಮಿಸುತ್ತಿರುವ 56ನೇ ಸಿನಿಮಾ ಇದು. ʻದಿಲ್’ ಮತ್ತು “ಶ್ರೀನಿವಾಸ ಕಲ್ಯಾಣ’ ಚಿತ್ರಗಳ ನಂತರ, ನಿತಿನ್ ಮೂರನೇ ಬಾರಿಗೆ ದಿಲ್ ರಾಜು ಜತೆ ಕೈಜೋಡಿಸುತ್ತಿದ್ದಾರೆ.

ʻಕಾಂತಾರಾʼ ಪ್ರೀಕ್ವೆಲ್​ನಲ್ಲಿ ಸಪ್ತಮಿ ಗೌಡ ಇಲ್ಲ! 

ಕಾಂತಾರ ಮೊದಲ ಭಾಗದಲ್ಲಿ ಸಪ್ತಮಿ ಗೌಡ ನಾಯಕಿಯಾಗಿ ಮಿಂಚಿದ್ದರು. ರಿಷಬ್‌ ಜತೆಗೆ ಅವರ ಪಾತ್ರಕ್ಕೂ ಮೆಚ್ಚುಗೆ ಲಭ್ಯವಾಗಿತ್ತು. ಚಾಪ್ಟರ್‌ 1ರಲ್ಲಿ ಅವರು ಅಭಿನಯಿಸಲಿದ್ದಾರಾ ಎನ್ನುವ ಪ್ರಶ್ನೆಗೆ ಮಾಧ್ಯಮವೊಂದರಲ್ಲಿ ನೀಡಿದ್ದರು.

ʻʻಕಾಂತಾರ: ಚಾಪ್ಟರ್ 1’ನಲ್ಲಿ ನಾನು ನಟಿಸುತ್ತಿಲ್ಲ. ಈಗ ಆಗುತ್ತಿರುವುದು ಪ್ರೀಕ್ವೆಲ್‌. ಪಾತ್ರವೇ ಇಲ್ಲ ಎಂದಾಗ ನಟಿಸುವುದು ಹೇಗೆ? ಆ ಪಾತ್ರಕ್ಕೆ ಬೇರೆಯವರು ಬಂದಿದ್ದಾರೆ. ʻಕಾಂತಾರʼ ಸಿನಿಮಾ ರಿಲೀಸ್ ಆಗಿ ಎರಡು ವರ್ಷ ಕಳೆದರೂ ಈಗಲೂ ಅದರ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಪ್ರೀಕ್ವೆಲ್‌ ಕೂಡ ಚೆನ್ನಾಗಿ ಮೂಡಿ ಬರಲಿದೆʼʼಎಂದು ಹೇಳಿದ್ದರು. ಈಗಾಗಲೇ ಸಪ್ತಮಿ ಗೌಡ ಹಿಂದಿಯಲ್ಲಿ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ವಿಜ್ಞಾನಿಯ ಪಾತ್ರ ನಿಭಾಯಿಸಿ ಸೈ ಎನಿಸಿಕೊಂಡಿದ್ದಾರೆ.

Continue Reading

ಟಾಲಿವುಡ್

Pooja Hegde: 45 ಕೋಟಿ ರೂ. ಬೆಲೆಯ ಹೊಸ ಮನೆ ಖರೀದಿಸಿದ ಪೂಜಾ ಹೆಗ್ಡೆ

Pooja Hegde: ಸಮುದ್ರದ ಕಡೆ ಮುಖ ಮಾಡಿರುವ ಈ ಮನೆ ತುಂಬ ಸುಂದರವಾಗಿದೆ ಎಂದು ಅನೇಕ ಮಾಧ್ಯಮಗಳು ವರದಿ ಮಾಡಿವೆ. ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆಗಿದ್ದಾರೆ. ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಅನೇಕ ಬ್ರ್ಯಾಂಡ್​ಗಳಿಗೆ ಪ್ರಚಾರ ರಾಯಭಾರಿ ಆಗಿದ್ದಾರೆ.

VISTARANEWS.COM


on

Pooja Hegde In Mumbai Worth 45 Crore
Koo

ಬೆಂಗಳೂರು: ಶಾಹಿದ್ ಕಪೂರ್ ಜತೆಗೆ ಮುಂಬರುವ ಚಿತ್ರ ‘ದೇವ’ದಲ್ಲಿ ಶೀಘ್ರದಲ್ಲೇ ಕಾಣಿಸಿಕೊಳ್ಳಲಿರುವ ನಟಿ ಪೂಜಾ ಹೆಗ್ಡೆ (Pooja Hegde) ಅವರು ಹೊಸ ಮನೆ ಖರೀದಿಸಿದ್ದಾರೆ. ಮುಂಬೈನ ಬಾಂದ್ರಾದಲ್ಲಿ 45 ಕೋಟಿ ರೂ. ಮೌಲ್ಯದ ಮನೆ ಖರೀದಿ ಮಾಡಿದ್ದಾರೆ. ಮನೆಯ ವಿಸ್ತೀರ್ಣ 4000 ಚದರ ಅಡಿ ಎಂದು ಹೇಳಲಾಗುತ್ತಿದೆ. ಬಾಲಿವುಡ್ ಸ್ಟಾರ್ ನಟಿ- ನಟಿಯರು ವಾಸಿಸುವ ಸ್ಥಳದಲ್ಲಿಯೇ ಮನೆ ಖರೀದಿ ಮಾಡಿದ್ದಾರೆ.

ಸಮುದ್ರದ ಕಡೆ ಮುಖ ಮಾಡಿರುವ ಈ ಮನೆ ತುಂಬ ಸುಂದರವಾಗಿದೆ ಎಂದು ಅನೇಕ ಮಾಧ್ಯಮಗಳು ವರದಿ ಮಾಡಿವೆ. ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲಿ ನಟಿಸಿ ಫೇಮಸ್​ ಆಗಿದ್ದಾರೆ. ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. ಅನೇಕ ಬ್ರ್ಯಾಂಡ್​ಗಳಿಗೆ ಪ್ರಚಾರ ರಾಯಭಾರಿ ಆಗಿದ್ದಾರೆ.

ಶಾಹಿದ್ ಕಪೂರ್ ಅವರ ಮುಂಬರುವ ಆ್ಯಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ನಟಿ ಪೂಜಾ ಹೆಗ್ಡೆ (Pooja Hegde) ನಾಯಕಿಯಾಗಿ ನಟಿಸಲಿದ್ದಾರೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಘೋಷಿಸಿತ್ತು. ಇನ್ನೂ ಹೆಸರಿಡದ ಚಿತ್ರ ಪೊಲೀಸ್ ಅಧಿಕಾರಿಯ ಕುರಿತಾಗಿದೆ ಎನ್ನಲಾಗಿದೆ. “ಅಲಾ ವೈಕುಂಠಪುರಮುಲೂ”, “ಬೀಸ್ಟ್”, “ರಾಧೆ ಶ್ಯಾಮ್” ಮತ್ತು “ಕಿಸಿ ಕಾ ಭಾಯ್ ಕಿಸಿ ಕಿ ಜಾನ್” ಚಿತ್ರಗಳಲ್ಲಿ ಕಾಣಿಸಿಕೊಂಡಿರುವ ಪೂಜಾ ಹೆಗ್ಡೆ, ನಿರ್ದೇಶಕ ರೋಶನ್‌ ಆಂಡ್ರ್ಯೂಸ್ ಮತ್ತು ಕಪೂರ್ ಅವರೊಂದಿಗೆ ಮೊದಲ ಬಾರಿಗೆ ಕೈ ಜೋಡಿಸುತ್ತಿರುವುದು ಸಂತಸ ತಂದಿದೆ ಎಂದಿದ್ದರು.

ಇದನ್ನೂ ಓದಿ: Pooja Hegde: ನಟಿ ಪೂಜಾ ಹೆಗ್ಡೆಗೆ ಕೊಲೆ ಬೆದರಿಕೆ?

ಈ ಬಗ್ಗೆ ಶಾಹಿದ್ ಕಪೂರ್ ಮಾತನಾಡಿ ʻʻಇದೊಂದು ರೋಚಕ ಹಾಗೂ ವಿಭಿನ್ನ ಕಥಾಹಂದರ ಹೊಂದಿರುವ ವಿಶೇಷ ಚಿತ್ರ. ರೋಶನ್ ಆಂಡ್ರ್ಯೂಸ್ ಅವರು ದೊಡ್ಡ ಪರದೆಯ ಮೇಲೆ ಮ್ಯಾಜಿಕ್ ಮಾಡಲಿದ್ದಾರೆ. ಈ ಪ್ರಯಾಣವನ್ನು ಪ್ರಾರಂಭಿಸಲು ಮತ್ತು ಪ್ರೇಕ್ಷಕರು ನನ್ನನ್ನು ವಿಶಿಷ್ಟ ಮತ್ತು ವಿಭಿನ್ನ ಪಾತ್ರದಲ್ಲಿ ನೋಡಲಿದ್ದಾರೆʼʼಎಂದರು. ಜೀ ಸ್ಟುಡಿಯೋಸ್ ಮತ್ತು ರಾಯ್ ಕಪೂರ್ ಫಿಲ್ಮ್ಸ್ ಸಿನಿಮಾವನ್ನು ಬೆಂಬಲಿಸಿತ್ತು. ಶೀಘ್ರದಲ್ಲೇ ಸಿನಿಮಾ ಸೆಟೇರಲಿದ್ದು, 2024ರಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ವರದಿಯಾಗಿತ್ತು.

ಕೆಲವು ದಿನಗಳ ಹಿಂದೆಯಷ್ಟೇ ಪೂಜಾ ಹೆಗ್ಡೆ ಖ್ಯಾತ ಕ್ರಿಕೆಟಿಗನ ಜತೆ ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ ಎಂದು ವರದಿಯಾಗಿತ್ತು. ಮದುವೆಗೆ ಎಲ್ಲ ಸಿದ್ಧತೆ ನಡೆಯುತ್ತಿದೆ ಎಂತಲೂ ವರದಿಯಾಗಿತ್ತು. ಆ ಖ್ಯಾತ ಕ್ರಿಕೆಟಿಗ ಯಾರು ಎಂಬುದರ ಬಗ್ಗೆ ಎಲ್ಲೂ ರಿವೀಲ್ ಆಗಿಲ್ಲ.ಈ ಬಗ್ಗೆ ನಟಿ ಯಾವುದೇ ಸ್ಪಷ್ಟನೆ ನೀಡಿಲ್ಲ ಆದರೆ ತೆಲುಗು ಮಾಧ್ಯಮಗಳು ಈ ಬಗ್ಗೆ ಸುದ್ದಿ ಮಾಡಿದ್ದವು. ಪೂಜಾ ಹೆಗ್ಡೆ ತೆಲುಗು ಸಿನಿಮಾ ಹಾಗೂ ಬಾಲಿವುಡ್​ನಲ್ಲಿಯೂ ಆ್ಯಕ್ಟಿವ್ ಆಗಿದ್ದಾರೆ. ಹಿಂದಿಯಲ್ಲಿ ಹಲವು ಸಿನಿಮಾ ಮಾಡಿದ್ದರೂ ಮೂವಿ ಯಾವುದೂ ಅಷ್ಟಾಗಿ ಹಿಟ್ ಆಗಿಲ್ಲ.

Continue Reading

ಟಾಲಿವುಡ್

Rashmika Mandanna: ಪುಷ್ಪ 2ನಲ್ಲಿ ಶ್ರೀವಲ್ಲಿ 2.0 ಲೆವೆಲ್‌ಗೆ ಇದ್ದಾಳಂತೆ! ರಶ್ಮಿಕಾ ಹೇಳಿದ್ದೇನು?

Rashmika Mandanna: ಈ ಹಿಂದೆಯಷ್ಟೇ ರಶ್ಮಿಕಾ ಜನುಮದಿನದಂದು ಪುಷ್ಪ ತಂಡ ಹೊಸ ಪೋಸ್ಟರ್‌ ಶೇರ್‌ ಮಾಡಿಕೊಂಡಿತ್ತು. ರಗಡ್‌ ಲುಕ್‌ನಲ್ಲಿ ಕಂಡಿದ್ದರು ರಶ್ಮಿಕಾ. ಇದೀಗ ಸಂದರ್ಶನದಲ್ಲಿ ಈ ಬಗ್ಗೆ ರಶ್ಮಿಕಾ ಮಾತನಾಡಿ ಈ ಬಾರಿ ಶ್ರೀವಲ್ಲಿಯನ್ನು 2.0 ಲೆವಲ್‌ ಅಂದರೆ ಇನ್ನಷ್ಟು ಅದ್ಧೂರಿಯಾಗಿ ನೋಡಲಿದ್ದೀರಿ ಎಂದು ಹೇಳಿಕೊಂಡಿದ್ದಾರೆ.ಪುಷ್ಪʼ ಚಿತ್ರದ ಮೊದಲ ಭಾಗದಲ್ಲಿ ಅಲ್ಲು ಅರ್ಜುನ್‌ ಜತೆಗೆ ರಶ್ಮಿಕಾ ಮಂದಣ್ಣ ಕೂಡ ಅಭಿಮಾನಿಗಳ ಗಮನ ಸೆಳೆದಿದ್ದರು. ನಾಯಕ ಪುಷ್ಪ ರಾಜ್‌ನ ಮನದನ್ನೆ ಶ್ರೀವಲ್ಲಿಯಾಗಿ ಮೋಡಿ ಮಾಡಿದ್ದರು.

VISTARANEWS.COM


on

Rashmika Mandanna Pushpa 2 The Rule will see Srivalli 2.0
Koo

ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಸುಕುಮಾರ್ ನಿರ್ದೇಶನದ ಪುಷ್ಪ-2 ಸಿನಿಮಾದಲ್ಲಿ ಶ್ರೀವಲ್ಲಿ ಪಾತ್ರವನ್ನು ಮುಂದುವರಿಸಿದ್ದಾರೆ. ಈ ಹಿಂದೆಯಷ್ಟೇ ರಶ್ಮಿಕಾ ಜನುಮದಿನದಂದು ಪುಷ್ಪ ತಂಡ ಹೊಸ ಪೋಸ್ಟರ್‌ ಶೇರ್‌ ಮಾಡಿಕೊಂಡಿತ್ತು. ರಗಡ್‌ ಲುಕ್‌ನಲ್ಲಿ ಕಂಡಿದ್ದರು ರಶ್ಮಿಕಾ. ಇದೀಗ ಸಂದರ್ಶನದಲ್ಲಿ ಈ ಬಗ್ಗೆ ರಶ್ಮಿಕಾ ಮಾತನಾಡಿ `ಈ ಬಾರಿ ಶ್ರೀವಲ್ಲಿಯನ್ನು 2.0 ಲೆವಲ್‌ ಅಂದರೆ ಇನ್ನಷ್ಟು ಅದ್ಧೂರಿಯಾಗಿ ನೋಡಲಿದ್ದೀರಿ’ ಎಂದು ಹೇಳಿಕೊಂಡಿದ್ದಾರೆ.

ರಶ್ಮಿಕಾ ಈ ಬಗ್ಗೆ ಮಾತನಾಡಿ ʻʻಈ ಪಾತ್ರ ಮಾಡುವ ಮೊದಲು ನನಗೆ ಕಥೆ ತಿಳಿದಿಲ್ಲದ ಕಾರಣ ನನಗೆ ಪುಷ್ಪಾದಲ್ಲಿನ ನನ್ನ ಪಾತ್ರ ಅಂದರೆ ಶ್ರೀವಲ್ಲಿ ಬಗ್ಗೆ ಅಷ್ಟಾಗಿ ತಿಳಿದಿರಲಿಲ್ಲ. ಶ್ರೀವಲ್ಲಿ ಪಾತ್ರ ಹೇಗೆ ನಿಭಾಯಿಸಬೇಕೆಂದು ತಿಳಿದಿರಲಿಲ್ಲ. ನನಗೇನೂ ಗೊತ್ತಿರಲಿಲ್ಲ. ಹಾಗಾಗಿ, ಸೆಟ್‌ನಲ್ಲಿ ಪ್ರತಿದಿನ ಆಟದ ಮೈದಾನಕ್ಕೆ ಭೇಟಿ ನೀಡುವಂತೆ ಭಾಸವಾಗುತ್ತಿತ್ತು. ಆದರೀಗ ಎರಡನೇ ಪಾರ್ಟ್‌ ಮಾಡುವಾಗ ಆ ಪಾತ್ರದ ಬಗ್ಗೆ ಗೊತ್ತಾಗುತ್ತಿದೆ. ನಾನು ಈಗ ಪಾತ್ರದ ಬಗ್ಗೆ ಹೆಚ್ಚು ಹೇಳುವಂತಿಲ್ಲ. ಆದರೆ ಒಂದು ಮಾತ್ರ ಹೇಳಬಲ್ಲೆ. ಪುಷ್ಪ 2ನಲ್ಲಿ ಶ್ರೀವಲ್ಲಿ 2.0 ಲೆವಲ್‌ ಅಂದರೆ ಇನ್ನಷ್ಟು ಅದ್ಧೂರಿಯಾಗಿ ನೋಡಲಿದ್ದೀರಿ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Rashmika Mandanna: ಶ್ವಾನಗಳನ್ನು ಮುದ್ದಾಡಿದ ರಶ್ಮಿಕಾ ಮಂದಣ್ಣ!

ನಟಿ ರಶ್ಮಿಕಾ ಮಂದಣ್ಣ (Rashmika mandanna) ಅವರ ಜನ್ಮದಿನದ ಪ್ರಯುಕ್ತ ಪ್ರೊಡಕ್ಷನ್ ಹೌಸ್ ಮೈತ್ರಿ ಮೂವಿ ಮೇಕರ್ಸ್ (Mythri Movie Makers ) ಹೊಸ ಪೋಸ್ಟರ್‌ ಹಂಚಿಕೊಂಡಿತ್ತು. ರೆ. ʻಶ್ರೀವಲ್ಲಿʼ ರೇಷ್ಮೆ ಸೀರೆಯುಟ್ಟು, ಮೈ ತುಂಬ ಒಡವೆ ಧರಿಸಿ ಪೋಸ್‌ ಕೊಟ್ಟಿದ್ದರು. ಮೊದಲ ಭಾಗದಲ್ಲಿ ರಶ್ಮಿಕಾ ಅವರು ಅತ್ಯಂತ ನಾಚಿಕೆಯಿಂದ, ನಾಜೂಕಾಗಿ ಕಂಡಿದ್ದರು. ಆದರೆ, ‘ಪುಷ್ಪ 2’ ಚಿತ್ರದಲ್ಲಿ ಅವರ ಪಾತ್ರ ಆ ರೀತಿ ಇರುವುದಿಲ್ಲ ಎನ್ನಲಾಗಿದೆ. ಪುಷ್ಪರಾಜ್ ಜತೆ ಸೇರಿ ಶ್ರೀವಲ್ಲಿ ಕೂಡ ಬದಲಾಗುತ್ತಾಳೆಯೇ ಎನ್ನುವ ಪ್ರಶ್ನೆಯನ್ನು ಪೋಸ್ಟರ್ ಹುಟ್ಟುಹಾಕಿತ್ತು. ಚಿತ್ರದ ನಾಯಕ ಅಲ್ಲು ಅರ್ಜುನ್‌ ಅವರ ಹುಟ್ಟುಹಬ್ಬವಾದ ಏಪ್ರಿಲ್‌ 8ರಂದು ʼಪುಷ್ಪ 2ʼ ಸಿನಿಮಾದ ಟೀಸರ್‌ ಬಿಡುಗಡೆಯಾಗಿದೆ. ʼಪುಷ್ಪ 2ʼ ಸಿನಿಮಾ ವಿಶ್ವಾದ್ಯಂತ ಅಗಸ್ಟ್‌ 15ರಂದು ತೆರೆಗೆ ಬರಲಿದೆ. ಅಂದಹಾಗೆ ʼಪುಷ್ಪ 2: ದಿ ರೂಲ್‌ʼ ಚಿತ್ರ 2021ರಲ್ಲಿ ತೆರೆಕಂಡ ʼಪುಷ್ಪ: ದಿ ರೈಸ್‌ʼ ಸಿನಿಮಾದ ಎರಡನೇ ಭಾಗ. ಅದನ್ನೂ ಸುಕುಮಾರ್‌ ನಿರ್ದೇಶಿಸಿದ್ದರು.

ಪ್ಯಾನ್‌ ಇಂಡಿಯಾ ಚಿತ್ರವಾಗಿ ತೆರೆಗೆ ಬಂದಿದ್ದ ಅದು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡಿತ್ತು. 370 ಕೋಟಿ ರೂ.ಗಿಂತ ಅಧಿಕ ಬಾಚಿಕೊಂಡಿತ್ತು. ಅಲ್ಲದೆ ಅಲ್ಲು ಅರ್ಜುನ್‌ ಮೊದಲ ಬಾರಿಗೆ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು. ಮೊದಲ ಭಾಗದಲ್ಲಿ ಕಾಣಿಸಿಕೊಂಡಿದ್ದ ಬಹುತೇಕ ಕಲಾವಿದರು ಇಲ್ಲೂ ಮುಂದುವರಿದಿದ್ದಾರೆ. ಸದ್ಯ ಚಿತ್ರತಂಡ ವಿಶಾಖಪಟ್ಟಣದಲ್ಲಿ ಬೀಡು ಬಿಟ್ಟಿದ್ದು, ಕೊನೆಯ ಹಂತದ ಚಿತ್ರೀಕರಣದಲ್ಲಿ ತೊಡಗಿದೆ.

ಇದನ್ನೂ ಓದಿ: Rashmika Mandanna : ಮಹೇಶ್ ಬಾಬು ಫೋಟೊಗೆ ಹೋಲಿಸಿದ್ದಕ್ಕೆ ರಶ್ಮಿಕಾ ಮಂದಣ್ಣ ಕೊಟ್ಟ ರಿಯಾಕ್ಷನ್‌ ಏನು?

ಪುಷ್ಪʼ ಚಿತ್ರದ ಮೊದಲ ಭಾಗದಲ್ಲಿ ಅಲ್ಲು ಅರ್ಜುನ್‌ ಜತೆಗೆ ರಶ್ಮಿಕಾ ಮಂದಣ್ಣ ಕೂಡ ಅಭಿಮಾನಿಗಳ ಗಮನ ಸೆಳೆದಿದ್ದರು. ನಾಯಕ ಪುಷ್ಪ ರಾಜ್‌ನ ಮನದನ್ನೆ ಶ್ರೀವಲ್ಲಿಯಾಗಿ ಮೋಡಿ ಮಾಡಿದ್ದರು. ಇತ್ತೀಚೆಗೆ ‘ಪುಷ್ಪ 2’ ಸೆಟ್‌ನಲ್ಲಿ ಹಣೆಯ ಮೇಲೆ ಸಿಂಧೂರವಿಟ್ಟು ಕೆಂಪು ಸೀರೆಯನ್ನು ಧರಿಸಿ ರಶ್ಮಿಕಾ ನಟಿಸುತ್ತಿರುವ ಫೋಟೊ ಮತ್ತು ವಿಡಿಯೊ ಲೀಕ್‌ ಆಗಿತ್ತು. ಸದ್ಯ ಅವರ ಪಾತ್ರದ ಬಗ್ಗೆಯೂ ನಿರೀಕ್ಷೆ ಬೆಟ್ಟದಷ್ಟಾಗಿದೆ. ಇನ್ನು ‘ಪುಷ್ಪ 2’ ಸಿನಿಮಾದಲ್ಲಿ ಫಹಾದ್‌ ಫಾಸಿಲ್‌, ಪ್ರಕಾಶ್‌ ರೈ, ರಾವ್‌ ರಮೇಶ್‌, ಡಾಲಿ ಧನಂಜಯ್‌, ಜಗಪತಿ ಬಾಬು, ಅನಸೂಯಾ ಭಾರದ್ವಾಜ್‌ ಮತ್ತಿತರರು ಅಭಿನಯಿಸುತ್ತಿದ್ದಾರೆ. ರಶ್ಮಿಕಾ ಅವರು ರಣಬೀರ್ ಕಪೂರ್ ಜತೆ ಬಾಲಿವುಡ್ ಸಿನಿಮಾ ʻಅನಿಮಲ್‌ʼನಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು.

Continue Reading
Advertisement
UPSC Results 2023
ದೇಶ2 hours ago

ವಿಸ್ತಾರ ಸಂಪಾದಕೀಯ: ಯುಪಿಎಸ್‌ಸಿ ಸಾಧಕರ ಕತೆಗಳು ಇತರರಿಗೆ ಸ್ಫೂರ್ತಿಯಾಗಲಿ

Ram Navami
ಪ್ರಮುಖ ಸುದ್ದಿ2 hours ago

Ram Navami : ಇಂದು ದೇಶಾದ್ಯಂತ ರಾಮ ನವಮಿ ಸಂಭ್ರಮ; ಏನು ಈ ದಿನದ ಮಹತ್ವ?

State Administrative Reforms Commission Chairman R V Deshpande statement
ಉತ್ತರ ಕನ್ನಡ2 hours ago

Lok Sabha Election 2024: ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ್ದ ಬಿಜೆಪಿಗರೇ ಈಗ ಗ್ಯಾರಂಟಿ ಪದ ಬಳಸುತ್ತಿದ್ದಾರೆ: ಆರ್.ವಿ.ದೇಶಪಾಂಡೆ

IPL 2024
ಪ್ರಮುಖ ಸುದ್ದಿ2 hours ago

IPL 2024 : ಬಟ್ಲರ್ ಮುಂದೆ ಮಂಕಾದ ನರೈನ್​; ಕೆಕೆಆರ್ ವಿರುದ್ಧ ಆರ್​​ಆರ್​ಗೆ 2 ವಿಕೆಟ್ ಜಯ

Murder Case
ಕರ್ನಾಟಕ2 hours ago

Chitradurga News: ಚಿತ್ರದುರ್ಗದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ

amith shah
ದೇಶ3 hours ago

Amit Shah: ಶೀಘ್ರದಲ್ಲೇ ಭಾರತ ನಕ್ಸಲ್‌ ಮುಕ್ತವಾಗಲಿದೆ; ಅಮಿತ್ ಶಾ

Nitin Gadkari
ದೇಶ3 hours ago

Nitin Gadkari : ನಾಗ್ಪುರ ಕ್ಷೇತ್ರಕ್ಕೆ ಮತ್ತೊಂದು ಪ್ರಣಾಳಿಕೆ ಬಿಡುಗಡೆ ಮಾಡಿದ ನಿತಿನ್ ಗಡ್ಕರಿ

UPSC Results 2023
ಕರ್ನಾಟಕ3 hours ago

UPSC Results 2023: ಯುಪಿಎಸ್‌ಸಿಯಲ್ಲಿ 644 ರ‍್ಯಾಂಕ್‌ ಪಡೆದ ಶಾಂತಪ್ಪ ಕುರುಬರ; ಸೋಲನ್ನು ಗೆಲುವಿನ ಮೆಟ್ಟಿಲಾಗಿಸಿಕೊಂಡ ಸಾಧಕ!

Dalip Singh Majithia
ಪ್ರಮುಖ ಸುದ್ದಿ3 hours ago

Dalip Singh Majithia : 2ನೇ ಮಹಾಯುದ್ಧದಲ್ಲಿ ಸೇವೆ ಸಲ್ಲಿಸಿದ ಐಎಎಫ್ ಯೋಧ 103 ನೇ ವಯಸ್ಸಿನಲ್ಲಿ ನಿಧನ

Ayodhya Ram Mandir
ದೇಶ3 hours ago

Ayodhya Ram Mandir: ನಾಳೆ ಅಯೋಧ್ಯೆ ಶ್ರೀರಾಮನಿಗೆ ಸೂರ್ಯ ತಿಲಕ; ಮನೆಯಲ್ಲೇ ಕೂತು ಹೀಗೆ ಕಣ್ತುಂಬಿಕೊಳ್ಳಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ21 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20242 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ3 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ4 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ5 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ5 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20246 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌