Nawazuddin Siddiqui Ex-Wife Aaliya Update On New Relationship Nawazuddin Siddiqui: ಬಾಯ್​ಫ್ರೆಂಡ್ ಪರಿಚಯಿಸಿದ ನವಾಜುದ್ದೀನ್ ಸಿದ್ದಿಕಿ ಮಾಜಿ ಪತ್ನಿ ಆಲಿಯಾ; ಆತ ಭಾರತದವನಲ್ಲ! - Vistara News

South Cinema

Nawazuddin Siddiqui: ಬಾಯ್​ಫ್ರೆಂಡ್ ಪರಿಚಯಿಸಿದ ನವಾಜುದ್ದೀನ್ ಸಿದ್ದಿಕಿ ಮಾಜಿ ಪತ್ನಿ ಆಲಿಯಾ; ಆತ ಭಾರತದವನಲ್ಲ!

ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಅವರ ಮಾಜಿ ಪತ್ನಿ ಆಲಿಯಾ (Aaliya) ಅವರು ತಮ್ಮ ಸ್ನೇಹಿತನೊಂದಿಗಿನ ಚಿತ್ರವನ್ನು ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Nawazuddin Siddiqui Ex-Wife Aaliya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಅವರ ಮಾಜಿ ಪತ್ನಿ ಆಲಿಯಾ (Aaliya) ಅವರು ತಮ್ಮ ಸ್ನೇಹಿತನೊಂದಿಗಿನ ಚಿತ್ರವನ್ನು ಇನ್‌ಸ್ಟಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಾಧ್ಯಮವೊಂದಕ್ಕೆ ಆಲಿಯಾ ತಾವು ಹೊಸ ನಿರ್ಧಾರಕ್ಕೆ ಬಂದಿರುವ ಬಗ್ಗೆ ಹಾಗೂ ಬಾಯ್‌ಫ್ರೆಂಡ್‌ ಜತೆಗಿನ ಫೋಟೊವನ್ನು ಹಂಚಿಕೊಂಡಿದ್ದಾರೆ. ʻʻನನಗೆ ನನ್ನದೇ ಆದ ಜೀವನವಿದೆ, ನಾನು ನನ್ನ ಮಕ್ಕಳೊಂದಿಗೆ ಬದುಕಬೇಕು ಮತ್ತು ನನ್ನ ಮಕ್ಕಳಿಗೆ ಯಾವುದೇ ಸಮಸ್ಯೆಗಳನ್ನು ನೀಡಲು ನಾನು ಬಯಸುವುದಿಲ್ಲʼʼ ಎಂದು ಮಾಧ್ಯಮವೊಂದರ ಜತೆ ಮಾಹಿತಿ ಹಂಚಿಕೊಂಡಿದ್ದಾರೆ.

ಹೊಸ ಫೋಟೊ ವೈರಲ್‌ ಆಗುತ್ತಿದ್ದಂತೆ ಆಲಿಯಾ ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿ ʻʻಹೌದು, ನಾನು ಹಳೆಯ ಸಂಬಂಧದಿಂದ ಹೊರಗಡೆ ಬರಲು ನಿರ್ಧರಿಸಿದ್ದೇನೆ. ನನ್ನ ಈ ಸಂಬಂಧವು ಸ್ನೇಹಕ್ಕಿಂತ ಹೆಚ್ಚಾಗಿದೆ. ನನಗೆ ನನ್ನದೇ ಆದ ಜೀವನವಿದೆ. ನಾನು ನನ್ನ ಮಕ್ಕಳೊಂದಿಗೆ ಬದುಕಬೇಕು ಮತ್ತು ನನ್ನ ಮಕ್ಕಳಿಗೆ ಯಾವುದೇ ಸಮಸ್ಯೆಗಳನ್ನು ನೀಡಲು ನಾನು ಬಯಸುವುದಿಲ್ಲ. ಇದು ಗೌರವಯುತ ಸಂಬಂಧ. ನೀವು ಒಳ್ಳೆಯದನ್ನೂ ಮಾಡಿದರೂ ಕೂಡ ಜನರು ಇನ್ನೂ ನಿಮ್ಮ ಬಗ್ಗೆ ಕೆಟ್ಟದ್ದನ್ನು ಹೇಳುತ್ತಾರೆ.”ಎಂದರು.

ʻʻಹಣವು ನಿಮಗೆ ಸಂತೋಷವನ್ನು ನೀಡುವುದಿಲ್ಲ ಆದರೆ ವ್ಯಕ್ತಿ ನೀಡಬಲ್ಲ. ಅವರು ಭಾರತದವರಲ್ಲ. ಇಟಲಿಯವರು. ನಾವು ದುಬೈನಲ್ಲಿ ಭೇಟಿಯಾಗಿದ್ದೇವೆ. ಅವರು ನನ್ನನ್ನು ಗೌರವಿಸುತ್ತಾರೆ ಮತ್ತು ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಾರೆ. ನಾವು ದೀರ್ಘಕಾಲ ಸ್ನೇಹಿತರಾಗಿದ್ದೇವೆ. ಅವರನ್ನು ಅರ್ಥ ಮಾಡಿಕೊಳ್ಳಲು ನನಗೆ ಸ್ವಲ್ಪ ಸಮಯ ಹಿಡಿಯಿತುʼ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Nawazuddin Siddiqui: ಪತ್ನಿ ಆರೋಪಕ್ಕೆ ಫಸ್ಟ್‌ಟೈಮ್ ಪ್ರತಿಕ್ರಿಯಿಸಿದ ನವಾಜುದ್ದೀನ್ ಸಿದ್ದಿಕಿ: ಇದು ಎಮೋಷನ್‌ ಅಂದಿದ್ಯಾಕೆ?

ಸಂಬಂಧಗಳು ಸ್ನೇಹಕ್ಕಿಂತಲೂ ಮಿಗಿಲಾದದ್ದು!

ಕೆಲವು ದಿನಗಳ ಹಿಂದೆ ಇನ್‌ಸ್ಟಾಗ್ರಾಮ್‌ನಲ್ಲಿ ಆಲಿಯಾ ಹೊಸ ಬಾಯ್‌ಫ್ರೆಂಡ್‌ ಜತೆಗಿನ ಫೋಟೊ ಹಂಚಿಕೊಂಡುʻ ನಾನು ಅಮೂಲ್ಯವಾದ ಸಂಬಂಧದಿಂದ ಹೊರಬರಲು 19 ವರ್ಷಗಳನ್ನು ತೆಗೆದುಕೊಂಡೆ. ಆದರೆ ನನ್ನ ಜೀವನದಲ್ಲಿ, ನನ್ನ ಮಕ್ಕಳು ನನ್ನ ಮೊದಲ ಆದ್ಯತೆ. ಜೀವನದಲ್ಲಿನ ಕೆಲವು ಸಂಬಂಧಗಳು ಸ್ನೇಹಕ್ಕಿಂತಲೂ ಮಿಗಿಲಾದವು. ಈ ಸಂಬಂಧ ಕೂಡ ಇದೇ ರೀತಿ ಆಗಿರುವಂಥದ್ದು. ಇದರಲ್ಲಿ ನಾನು ಖುಷಿಯಾಗಿದ್ದೇನೆ. ಹಾಗಾಗಿ ಈ ಖುಷಿಯ ವಿಷಯವನ್ನು ನಿಮ್ಮ ಜತೆ ಹಂಚಿಕೊಂಡಿದ್ದೇನೆ. ಖುಷಿಯಾಗಿ ಬದುಕುವ ಹಕ್ಕು ನನಗೆ ಇಲ್ಲವೇ’ ಎಂದು ಆಲಿಯಾ ಸಿದ್ದಿಕಿ ಅವರು ಪ್ರಶ್ನೆ ಮಾಡಿದ್ದಾರೆ.

ಆಲಿಯಾ ಸಿದ್ದಿಕಿ ಮಾಡಿದ ಈ ಪೋಸ್ಟ್​ಗೆ ಅನೇಕ ಬಗೆಯ ಪ್ರತಿಕ್ರಿಯೆಗಳು ಬಂದಿವೆ. ‘ನಿಮ್ಮ ಸರ್​ನೇಮ್​ ಬದಲಾಯಿಸಿಕೊಳ್ಳಿ’ ಎಂದು ಒಬ್ಬರು ಸಲಹೆ ನೀಡಿದ್ದಾರೆ. ಅದಕ್ಕೆ ಉತ್ತರಿಸಿರುವ ಆಲಿಯಾ ಅವರು ‘ಅತಿ ಶೀಘ್ರದಲ್ಲಿ’ ಎಂದು ಕಮೆಂಟ್​ ಮಾಡಿದ್ದಾರೆ. ಈ ಬಗ್ಗೆ ಕೆಲವು ದಿನಗಳ ಹಿಂದೆ ಕೂಡ ಅವರು ಬರೆದುಕೊಂಡಿದ್ದರು. ಅಧಿಕೃತವಾಗಿ ವಿಚ್ಛೇದನ ಪಡೆದ ಬಳಿಕ ‘ಆಲಿಯಾ ಸಿದ್ಧಿಕಿ’ ಎಂಬ ಹೆಸರನ್ನು ‘ಅಂಜನಾ ಕಿಶೋರ್​ ಪಾಂಡೆ’ ಎಂದು ಬದಲಾಯಿಸಿಕೊಳ್ಳುವುದಾಗಿ ಅವರು ತಿಳಿಸಿದ್ದರು.

ಇದನ್ನೂ ಒದಿ: Nawazuddin Siddiqui : ನವಾಜುದ್ದೀನ್‌ ನೀವು ಕಂಡಂತಲ್ಲ; ನಟನ ಬಗ್ಗೆ ಗಂಭೀರ ಆರೋಪ ಮಾಡಿದ ಸಹೋದರ!

ವಿಚ್ಛೇದನದ ಸಮಯದಲ್ಲಿ ನವಾಜುದ್ದೀನ್ ಸಿದ್ದಿಕಿ ಮತ್ತು ಅವರ ಕುಟುಂಬದವರು ಕಿರುಕುಳ ನೀಡಿದ್ದಾರೆ ಎಂದು ಆಲಿಯಾ ಈ ಹಿಂದೆ ಆರೋಪಿಸಿದ್ದರು. ನಂತರ, ಮಾರ್ಚ್‌ನಲ್ಲಿ, ನಟ ನವಾಜುದ್ದೀನ್ ತನ್ನನ್ನು ಮತ್ತು ಅವರ ಇಬ್ಬರು ಮಕ್ಕಳನ್ನು ತನ್ನ ಮನೆಯಿಂದ ಹೊರಹಾಕಿದ್ದಾರೆ ಎಂದು ಆಲಿಯಾ ಹೇಳಿದ್ದಾರೆ. ಈ ಹಿಂದೆ ಬಾಂಬೆ ಹೈಕೋರ್ಟ್ ದಂಪತಿ ತಮ್ಮ ಮಕ್ಕಳ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ತಮ್ಮ ಭಿನ್ನಾಭಿಪ್ರಾಯಗಳನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಲು ಪ್ರಯತ್ನಿಸಬೇಕೆಂದು ಸೂಚಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Actress Priyamani: ಕೇರಳದ ದೇವಾಲಯವೊಂದಕ್ಕೆ `ಯಾಂತ್ರಿಕ ಆನೆ’ ಉಡುಗೊರೆ ಕೊಟ್ಟ ಪ್ರಿಯಾಮಣಿ!

Actress Priyamani: ಇದು ಜೀವಂತ ಆನೆಯಲ್ಲ. ಯಾಂತ್ರಿಕ ಆನೆ. ಈ ಯಾಂತ್ರಿಕ ಆನೆಯ ಹೆಸರು ಮಹದೇವನ್‌. ಭಾನುವಾರ (ಮಾ.18) ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಹದೇವನ್ ಆನೆಯನ್ನು ಅಧಿಕೃತವಾಗಿ ದೇವಾಲಯಕ್ಕೆ ಸೇರ್ಪಡೆಗೊಳಿಸಲಾಯಿತು.

VISTARANEWS.COM


on

Priyamani donate mechanical elephant
Koo

ಕೇರಳದ ಕೊಚ್ಚಿಯಲ್ಲಿನ ತ್ರಿಕಾಯಿಲ್ ಮಹದೇವನ್ ದೇವಾಲಯಕ್ಕೆ ( Thrikkayil Mahadeva Temple ) ಆನೆಯನ್ನು ಉಡುಗೊರೆಯಾಗಿ ನೀಡಿದ್ದಾರೆ ಬಹುಭಾಷಾ ನಟಿ ಪ್ರಿಯಾಮಣಿ. ಆದರೆ ಇದು ಜೀವಂತ ಆನೆಯಲ್ಲ. ಯಾಂತ್ರಿಕ ಆನೆ. ಈ ಯಾಂತ್ರಿಕ ಆನೆಯ ಹೆಸರು ಮಹದೇವನ್‌. ಈ ಯಾಂತ್ರಿಕ ಆನೆಯನ್ನು ದೇವಸ್ಥಾನದಲ್ಲಿ ಸುರಕ್ಷಿತ ರೀತಿಯಲ್ಲಿ ಬಳಸಲಾಗುವುದು ಎಂದು ಪೀಪಲ್ ಫಾರ್ ಎಥಿಕಲ್ ಟ್ರೀಟ್‌ಮೆಂಟ್ ಆಫ್ ಅನಿಮಲ್ಸ್ ಇಂಡಿಯಾ (People for Ethical Treatment of Animals India) ಎಂಬ ಸಂಸ್ಥೆ ಮಾಧ್ಯಮಕ್ಕೆ ತಿಳಿಸಿದೆ. ಕೇರಳದಲ್ಲಿ ಪರಿಚಯಿಸಲಾಗುತ್ತಿರುವ ಎರಡನೇ ಯಾಂತ್ರಿಕ ಆನೆ ಇದಾಗಿದೆ.

ಭಾನುವಾರ (ಮಾ.18) ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಹದೇವನ್ ಆನೆಯನ್ನು ಅಧಿಕೃತವಾಗಿ ದೇವಾಲಯಕ್ಕೆ ಸೇರ್ಪಡೆಗೊಳಿಸಲಾಯಿತು. ಕೇರಳದಲ್ಲಿ ಪರಿಚಯಿಸಲಾಗುತ್ತಿರುವ ಎರಡನೇ ಯಾಂತ್ರಿಕ ಆನೆ ಇದಾಗಿದೆ ಎಂದು ವರದಿಯಾಗಿದೆ. ಉದ್ಘಾಟನಾ ಸಮಾರಂಭದ ನಂತರ ಮಾಸ್ಟರ್ ವೇದಾರ್ಥ್ ರಾಮನ್ ಮತ್ತು ಅವರ ತಂಡದಿಂದ ಚೆಂಡೆ ಮೇಳದ ಪ್ರದರ್ಶನ, ವೇಣು ಮಾರಾರ್ ಮತ್ತು ಅವರ ತಂಡದಿಂದ ಪಂಚವಾದ್ಯ ಪ್ರದರ್ಶನ ನಡೆಯಿತು.

“ತಂತ್ರಜ್ಞಾನದ ಬೆಳವಣಿಗೆಯಿಂದ ನಾವು ನಮ್ಮ ಶ್ರೀಮಂತ ಸಾಂಸ್ಕೃತಿಕ ಆಚರಣೆಗಳನ್ನು ಉಳಿಸಿಕೊಳ್ಳಬಹುದು. ಮತ್ತು ಪ್ರಾಣಿಗಳಿಗೆ ಹಾನಿಯಾಗದಂತೆ ನೋಡಿಕೊಳ್ಳುವ ಪರಂಪರೆ ಇದಾಗಲಿದೆ” ಎಂದು ಪ್ರಿಯಾಮಣಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Actress Priyamani:  ಐಷಾರಾಮಿ ಕಾರು ಖರೀದಿಸಿದ ನಟಿ ಪ್ರಿಯಾಮಣಿ; ಬೆಲೆ ಎಷ್ಟು?

ದೇವಸ್ಥಾನದ ಮುಖ್ಯಸ್ಥ ತೆಕ್ಕಿಣಿಯೇದತ್ ವಲ್ಲಭನ್ ನಂಬೂತಿರಿ ಮಾತನಾಡಿ, “ತಮ್ಮ ಕುಟುಂಬಗಳೊಂದಿಗೆ ಮುಕ್ತವಾಗಿ ಮತ್ತು ಸುರಕ್ಷಿತವಾಗಿ ಬದುಕಲು ಬಯಸುವ ದೇವರು ಸೃಷ್ಟಿಸಿದ ಎಲ್ಲಾ ಪ್ರಾಣಿಗಳಿಗೆ ಗೌರವಾರ್ಥವಾಗಿ ನಾವು ಪ್ರಿಯಾಮಣಿ ನೀಡಿರುವ ಕೃತಕ ಆನೆಯನ್ನು ಸ್ವೀಕರಿಸಿದ್ದೇವೆ. ಇನ್ನು ಮುಂದೆ ನಾವು ಜೀವಂತ ಆನೆಯನ್ನು ದೇವಾಲಯದ ಯಾವುದೇ ಧಾರ್ಮಿಕ ಅಥವಾ ಇನ್ಯಾವುದೇ ಕಾರ್ಯಗಳಿಗೆ ಬಳಸುವುದಿಲ್ಲʼʼ ಎಂದು ಹೇಳಿದರು. ಕಳೆದ ವರ್ಷ ಕೇರಳದ ಇರಿಂಜದಪ್ಪಿಲ್ಲಿ ಶ್ರೀಕೃಷ್ಣ ದೇವಸ್ಥಾನದಲ್ಲಿ ರೋಬೋಟಿಕ್ ಆನೆಯನ್ನು ಪರಿಚಯಿಸಲಾಗಿತ್ತು.

ಕರ್ನಾಟಕ ಮೂಲದ ನಟಿ ಪ್ರಿಯಾಮಣಿ ಪ್ರಾಣಿ ಪ್ರೇಮಿ. ಕೆಲವು ಪ್ರಾಣಿ ದಯಾ ಸಂಘದ ಕಾರ್ಯಗಳಲ್ಲಿ ಪ್ರಿಯಾಮಣಿ ತೊಡಗಿಕೊಂಡಿದ್ದಾರೆ. 2023ರ ಜನಗಣತಿಯ ಪ್ರಕಾರ, ಕೇರಳದಲ್ಲಿ 2,386 ಕಾಡಾನೆಗಳಿವೆ. ದೇವಾಲಯಗಳು, ಅರಣ್ಯ ಇಲಾಖೆ ಮತ್ತು ಖಾಸಗಿ ಮಾಲೀಕರ ಮಾಲೀಕತ್ವದ ಸುಮಾರು 412 ಸೇರಿದಂತೆ 700ಕ್ಕೂ ಹೆಚ್ಚು ಆನೆಗಳು ಜನರ ಸೆರೆಯಲ್ಲಿ ಉಳಿದಿವೆ.

Continue Reading

ಸ್ಯಾಂಡಲ್ ವುಡ್

Kannada New Movie: ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ಮತ್ತೊಂದು ಸಿನಿಮಾ

Kannada New Movie: ಡೊಳ್ಳು ಸಾರಥಿ ಸಾಗರ್ ಪುರಾಣಿಕ್ ಹಾಗೂ ಪವನ್ ಒಡೆಯರ್ ಮತ್ತೊಂದು ಸಂಗಮದ ಸಿನಿಮಾ ಸೆಟ್ಟೇರಿದೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಇತ್ತೀಚೆಗಷ್ಟೇ ಮುಹೂರ್ತ ನೆರವೇರಿದೆ.

VISTARANEWS.COM


on

Kannada New Movie Pavan Kumar Wadeyar New Movie
Koo

ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ (Kannada New Movie) ಯಶ್, ಪುನೀತ್ ರಾಜ್ ಕುಮಾರ್ ಅವರಂತಹ ಸ್ಟಾರ್ ನಟರಿಗೆ ಸಿನಿಮಾ ಮಾಡಿ ಸೈ ಎನಿಸಿಕೊಂಡವರು ಪವನ್ ಒಡೆಯರ್. ನಿರ್ದೇಶನದಲ್ಲಿ ಗೆದ್ದಿರುವ ಪವನ್ ನಿರ್ಮಾಪಕರಾಗಿಯೂ ಮೊದಲ ಹೆಜ್ಜೆಯಲ್ಲಿ ಶಹಬಾಸ್ ಗಿರಿ ಪಡೆದುಕೊಂಡಿದ್ದಾರೆ. ʻಡೊಳ್ಳುʼ ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಮತ್ತೊಮ್ಮೆ ಸಾಗರ್ ಪುರಾಣಿಕ್ ಜತೆ ಕೈ ಜೋಡಿಸಿರುವುದು ಗೊತ್ತೇ ಇದೆ.

ಡೊಳ್ಳು ಸಾರಥಿ ಸಾಗರ್ ಪುರಾಣಿಕ್ ಹಾಗೂ ಪವನ್ ಒಡೆಯರ್ ಮತ್ತೊಂದು ಸಂಗಮದ ಸಿನಿಮಾ ಸೆಟ್ಟೇರಿದೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಇತ್ತೀಚೆಗಷ್ಟೇ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ʻವೆಂಕ್ಯಾʼ ಎಂಬ ಟೈಟಲ್ ಇಡಲಾಗಿದೆ. ವೆಂಕ್ಯಾನಿಗೆ ಸಾಗರ್ ಪುರಾಣಿಕ್ ಆಕ್ಷನ್ ಕಟ್ ಹೇಳುವುದರ ಜತೆಗೆ ನಾಯಕನಾಗಿಯೂ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶನದ ಜೊತೆಗೆ ಸಾಗರ್ ನಟನೆ ಜವಾಬ್ದಾರಿನ್ನು ಹೊತ್ತುಕೊಂಡಿದ್ದಾರೆ.

ಇದನ್ನೂ ಓದಿ: Kannada New Movie: ’ಭುವನಂ ಗಗನಂ’ ಸಿನಿಮಾಗೆ ಧ್ರುವ ಸರ್ಜಾ ಸಾಥ್‌!

ವೆಂಕ್ಯಾ ಶೂಟಿಂಗ್ ಈಗಾಗಲೇ ಚಾಲುವಾಗಿದೆ. ಇದೊಂದು ವಿಭಿನ್ನ ಪ್ರಯತ್ನದ ಸಿನಿಮಾ. ಉತ್ತರ ಕರ್ನಾಟಕದ ಕಥೆಯಾದ್ರೂ ಅದು ದೇಶ ಎಲ್ಲಾ ಸುತ್ತಲಿದೆ. ಇದೊಂದು ಹೊಸ ಬಗೆಯ ಕಮರ್ಷಿಯಲ್ ಸಿನಿಮಾ ಅಂತಿದೆ ಚಿತ್ರತಂಡ. ಶೀಘ್ರದಲ್ಲೇ ಉಳಿದ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ಹಣ ಹಾಕುತ್ತಿರುವ ವೆಂಕ್ಯಾ ಚಿತ್ರಕ್ಕೆ ಸ್ನೇಹಿತರಾದ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿರಲಿದೆ.

Continue Reading

ಟಾಲಿವುಡ್

Prabhas Vs Allu Arjun: ‘ಪುಷ್ಪ 2’ ಜತೆ ಪೈಪೋಟಿಗಿಳಿದ ಶಿವಣ್ಣ, ಪ್ರಭಾಸ್!

Prabhas Vs Allu Arjun: ಮೇ 9ರಂದು ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ರಿಲೀಸ್‌ ಮಾಡುವುದಾಗಿ ಈಗಾಗಲೇ ಘೋಷಿಸಲಾಗಿದೆ. ಇದೇ ಸಂದರ್ಭದಲ್ಲಿ ತೆಲುಗು ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಈ ಕಾರಣಕ್ಕೆ ಡೇಟ್‌ ಪೋಸ್ಟ್‌ಪೋನ್‌ ಆಗುವ ಸಾಧ್ಯತೆ ಇದೆ.

VISTARANEWS.COM


on

Prabhas Vs Allu Arjun
Koo

ಬೆಂಗಳೂರು: ಪ್ರಭಾಸ್ ಜಾಗತಿಕವಾಗಿ ಇಮೇಜ್ ಹೊಂದಿರುವ ಪ್ಯಾನ್-ಇಂಡಿಯಾ (Prabhas Vs Allu Arjun) ಹೀರೊ. ಸ್ಟೈಲ್ ಐಕಾನ್ ಎಂದು ಖ್ಯಾತಿ ಪಡೆದಿರುವ ರಾಷ್ಟ್ರೀಯ ಪ್ರಶಸ್ತಿ ವಿಜೇತ ಅಲ್ಲು ಅರ್ಜುನ್. ಇಬ್ಬರೂ ಆಫ್-ಸ್ಕ್ರೀನ್‌ನಲ್ಲಿ ಉತ್ತಮ ಸ್ನೇಹಿತರು. ಆದರೀಗ ಇಬ್ಬರ ಸಿನಿಮಾಗಳು ಒಂದೇ ದಿನ ರಿಲೀಸ್‌ ಆಗಲಿದೆ ಎಂದು ವರದಿಯಾಗಿದೆ. ಮೇ 9ರಂದು ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ರಿಲೀಸ್‌ ಮಾಡುವುದಾಗಿ ಈಗಾಗಲೇ ಘೋಷಿಸಲಾಗಿದೆ. ಇದೇ ಸಂದರ್ಭದಲ್ಲಿ ತೆಲುಗು ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಈ ಕಾರಣಕ್ಕೆ ಡೇಟ್‌ ಪೋಸ್ಟ್‌ಪೋನ್‌ ಆಗುವ ಸಾಧ್ಯತೆ ಇದೆ. ಇದೀಗ ವರದಿಯ ಪ್ರಕಾರ ಕಾರಣ ಆಗಸ್ಟ್ 15 ಸಿನಿಮಾ ರಿಲೀಸ್ ಮಾಡಲು ಪ್ಲ್ಯಾನ್ ರೂಪಿಸಿದ್ದಾರೆ ಎನ್ನಲಾಗಿದೆ.

ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಮೇ 13ರಂದು ವೋಟಿಂಗ್ ನಡೆಯಲಿದೆ. ಈಗಾಗಲೇ ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಹಾಗೂ ಕನ್ನಡದಲ್ಲಿ ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಈ ಡೇಟ್​ನ ಲಾಕ್ ಮಾಡಿವೆ. ಇದರ ಜತೆ ‘ಕಲ್ಕಿ 2898 ಎಡಿ’ ಸಿನಿಮಾ ಕೂಡ ಬರುತ್ತದೆ ಎಂದು ವರದಿಯಾಗಿದೆ.

ಇದನ್ನೂ ಓದಿ: Prabas vs Allu Arjun: ʻಜೈ ಅಲ್ಲು ಅರ್ಜುನ್ʼ ಹೇಳು ಎಂದು ಪ್ರಭಾಸ್‌ ಅಭಿಮಾನಿಗೆ ಥಳಿತ; ಬೆಂಗಳೂರಿನಲ್ಲಿ ಫ್ಯಾನ್ಸ್‌ ವಾರ್‌!

ʻಕಲ್ಕಿ 2898 ಎಡಿʼ

ಈ ವರ್ಷದ ಅತೀ ಹೆಚ್ಚಿನ ಬಜೆಟ್‌ ಹೊಂದಿರುವ ಚಿತ್ರ ಎನಿಸಿಕೊಳ್ಳಲಿದೆ. ಈ ಚಿತ್ರದ ಬಜೆಟ್‌ ಬರೋಬ್ಬರಿ 600 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಅಂದರೆ ಇತ್ತೀಚಿನ ಬಹು ಕೋಟಿ ರೂ. ಬಜೆಟ್‌ನ ʼಸಲಾರ್‌ʼ (270 ಕೋಟಿ ರೂ.), ʼಅನಿಮಲ್‌ʼ (100 ಕೋಟಿ ರೂ.) ಮತ್ತು ʼಡಂಕಿʼ (140 ಕೋಟಿ ರೂ.) ಈ ಮೂರು ಚಿತ್ರಗಳ ಒಟ್ಟು ಬಜೆಟ್‌ಗಿಂತ ಜಾಸ್ತಿ. ಅಲ್ಲದೆ 2022ರಲ್ಲಿ ತೆರೆಕಂಡ ಬಾಲಿವುಡ್‌ ಚಿತ್ರ ʼಬಹ್ಮಾಸ್ತ್ರʼಕ್ಕಿಂತಲೂ (400 ಕೋಟಿ ರೂ.) ʼಕಲ್ಕಿʼಯ ಬಜೆಟ್‌ ಅಧಿಕ. ಹೀಗಾಗಿಯೇ ಈ ಚಿತ್ರದ ಮೇಲೆ ನಿರೀಕ್ಷೆ ಗರಿಗೆದರಿದೆ. ಪ್ರಭಾಸ್‌ ಮತ್ತು ದೀಪಿಕಾ ಪಡುಕೋಣೆ ಜತೆಗೆ ಘಟಾನುಘಟಿಗಳಾದ ಕಮಲ್‌ ಹಾಸನ್‌ ಮತ್ತು ಅಮಿತಾಭ್‌ ಬಚ್ಚನ್‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಾಲಿವುಡ್‌ ನಟಿ ದಿಶಾ ಪಠಾನಿ ಕೂಡ ಅಭಿನಯಿಸುತ್ತಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಸಂತೋಷ್ ನಾರಾಯಣನ್ ಸಂಗೀತ ಸಂಯೋಜಿಸಿದ್ದು, ಡಿಜೋರ್ಜೆ ಸ್ಟೋಜಿಲ್ಕೋವಿಕ್ ಅವರ ಛಾಯಾಗ್ರಹಣ, ಕೋಟಗಿರಿ ವೆಂಕಟೇಶ್ವರ ರಾವ್ ಅವರ ಸಂಕಲನ ಸಿನಿಮಾಕ್ಕಿದೆ.

‘ಪುಷ್ಪ 2’ ಜತೆ ಪೈಪೋಟಿಗಿಳಿದ ʻಭೈರತಿ ರಣಗಲ್ʼ

‘ಮಫ್ತಿ’ ಸಿನಿಮಾದಲ್ಲಿ ʻಭೈರತಿ ರಣಗಲ್ʼ (Bhairathi Ranagal) ಆಗಿ ಸಾಕಷ್ಟು ಗಮನ ಸೆಳೆದಿದ್ದರು ಶಿವಣ್ಣ (Shiva Rajkumar). ಶಿವಣ್ಣ ಅವರ ಹೋಂ ಬ್ಯಾನರ್​ನಲ್ಲಿ ಈ ಚಿತ್ರ ಮೂಡಿ ಬರುತ್ತಿರುವುದು ಗೊತ್ತೇ ಇದೆ. ‘ಗೀತಾ ಪಿಕ್ಚರ್ಸ್​’ನಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ʻಮಫ್ತಿ’ ಸಿನಿಮಾ ತೆರೆಗೆ ಬಂದಿದ್ದು 2017ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ನರ್ತನ್ ಅವರು ಯಾವುದೇ ಸಿನಿಮಾ ಘೋಷಣೆ ಮಾಡಿರಲಿಲ್ಲ. ಇದೀಗ ಈ ಸಿನಿಮಾ ಬಿಗ್‌ ಅಪ್‌ಡೇಟ್‌ ಹಂಚಿಕೊಂಡಿದೆ. ‘ಪುಷ್ಪ 2’, ‘ಸಿಂಗಂ ಅಗೇನ್’ ಜತೆ ಸ್ಪರ್ಧೆಗೆ ಇಳಿಯುತ್ತಿದೆ ‘ಭೈರತಿ ರಣಗಲ್ʼ. ಆಗಸ್ಟ್ 15ರಂದು ಚಿತ್ರ ಬಿಡುಗಡೆ ಆಗಲಿದೆ.

ಈ ಚಿತ್ರಕ್ಕೆ ‘ಮಫ್ತಿ’ ಖ್ಯಾತಿಯ ನರ್ತನ್ ನಿರ್ದೇಶನ ಮಾಡುತ್ತಿದ್ದಾರೆ. ಶಿವರಾಜ್​ಕುಮಾರ್, ರುಕ್ಮಿಣಿ ವಸಂತ್ ಮೊದಲಾದವರು ಪಾತ್ರವರ್ಗದಲ್ಲಿದ್ದಾರೆ. ಈಗಾಗಲೇ ತೆಲುಗಿನಲ್ಲಿ ‘ಪುಷ್ಪ 2’ ಚಿತ್ರ ರಿಲೀಸ್ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಈಗ ಇದರ ಜೊತೆ ಶಿವಣ್ಣ ನಟನೆಯ ‘ಭೈರತಿ ರಣಗಲ್’ ಕೂಡ ರಿಲೀಸ್ ಆಗಲಿದೆ.

Continue Reading

ಮಾಲಿವುಡ್

Thalapathy Vijay: 14 ವರ್ಷಗಳ ಬಳಿಕ ಕೇರಳಕ್ಕೆ ಬಂದ ದಳಪತಿ ವಿಜಯ್‌!

Thalapathy Vijay: ರಾಜಕೀಯಕ್ಕೆ ಪ್ರವೇಶಿಸುವ ಮೊದಲು ದಳಪತಿ ವಿಜಯ್‌ ಅವರ ಕೊನೆಯ ಸಿನಿಮಾ ಇದು ಎನ್ನಲಾಗುತ್ತಿದೆ. ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ಹಲವಾರು ವೀಡಿಯೊಗಳಲ್ಲಿ, ವಿಜಯ್ ಅವರ ಅಭಿಮಾನಿಗಳು ನಟನಿಗಾಗಿ ಕಾದಿದ್ದಾರೆ.

VISTARANEWS.COM


on

Thalapathy Vijay
Koo

ಬೆಂಗಳೂರು: ವೆಂಕಟ್ ಪ್ರಭು ನಿರ್ದೇಶನದ ದಳಪತಿ ವಿಜಯ್ (Thalapathy Vijay) ಅವರ ಬಹುನಿರೀಕ್ಷಿತ ಚಿತ್ರ ‘ಗ್ರೇಟೆಸ್ಟ್ ಆಫ್ ಆಲ್ ಟೈಮ್ (ಗೋಟ್)’ (‘Greatest Of All Time (GOAT)’) ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ಬಿಡುಗಡೆಗೂ ಮುನ್ನ, ಅದರ ಕ್ಲೈಮ್ಯಾಕ್ಸ್ ಚಿತ್ರೀಕರಣಕ್ಕಾಗಿ ನಟ ಕೇರಳಕ್ಕೆ ಭೇಟಿ ನೀಡಿದ್ದಾರೆ. 14 ವರ್ಷಗಳ ಸುದೀರ್ಘ ಅವಧಿಯ ನಂತರ ಅವರು ಕೇರಳ ರಾಜ್ಯಕ್ಕೆ ಮರಳಿದ್ದರು. ಸೋಮವಾರ (ಮಾ.18), ನೂರಾರು ಅಭಿಮಾನಿಗಳು ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಜಮಾಯಿಸಿದರು. ಇದೀಗ ಈ ವಿಡಿಯೊ ವೈರಲ್‌ ಆಗಿದೆ.

ರಾಜಕೀಯಕ್ಕೆ ಪ್ರವೇಶಿಸುವ ಮೊದಲು ದಳಪತಿ ವಿಜಯ್‌ ಅವರ ಕೊನೆಯ ಸಿನಿಮಾ ಇದು ಎನ್ನಲಾಗುತ್ತಿದೆ. ಆನ್‌ಲೈನ್‌ನಲ್ಲಿ ಕಾಣಿಸಿಕೊಂಡ ಹಲವಾರು ವೀಡಿಯೊಗಳಲ್ಲಿ, ವಿಜಯ್ ಅವರ ಅಭಿಮಾನಿಗಳು ನಟನಿಗಾಗಿ ಕಾದಿದ್ದಾರೆ. ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಮಹತ್ವದ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದರು. ಅಷ್ಟೇ ಅಲ್ಲ, ‘ವಿಜಯ್ ಸ್ಟಾರ್ಮ್ ಹಿಟ್ಸ್ ಕೇರಳ’ ಮತ್ತು ‘ಗೋಟ್’ ಎಂಬ ಹ್ಯಾಶ್‌ಟ್ಯಾಗ್‌ಗಳು ಎಕ್ಸ್‌ನಲ್ಲಿ ಟ್ರೆಂಡ್‌ ಆಗಿವೆ.

ನಟ ಕೇರಳದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರ ಹಿಂದಿನ ಚಿತ್ರ, ಲೋಕೇಶ್ ಕನಕರಾಜ್ ಬರೆದು ನಿರ್ದೇಶಿಸಿದ ‘ಲಿಯೋ’, ಕೇರಳದ ಗಲ್ಲಾಪೆಟ್ಟಿಗೆಯಲ್ಲಿ ಯಶಸ್ಸನ್ನು ಕಂಡಿತು. ಥಿಯೇಟರ್ ಗಳಿಕೆಯಲ್ಲಿ 60 ಕೋಟಿ ರೂ. ಗಳಿಸಿತು.

ಇದನ್ನೂ ಓದಿ: Actor Rajinikanth: ರಾಜಕೀಯಕ್ಕೆ ಧುಮುಕಿದ ನಟ ದಳಪತಿ ವಿಜಯ್‌; ರಜನಿಕಾಂತ್‌ ರಿಯಾಕ್ಷನ್‌ ಏನು?

‘GOAT’ ಸಿನಿಮಾದಲ್ಲಿ ವಿಜಯ್ ಜೊತೆ ಪ್ರಭುದೇವ, ಪ್ರಶಾಂತ್, ವಿನಯ್, ಮೀನಾಕ್ಷಿ ಚೌಧರಿ ಮೊದಲಾದವರು ನಟಿಸುತ್ತಿದ್ದಾರೆ. ವೆಂಕಟ್ ಪ್ರಭು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ತ್ರಿಷಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಗೋಟ್’ ಅನ್ನು ಎಜಿಎಸ್ ಎಂಟರ್‌ಟೈನ್‌ಮೆಂಟ್‌ನಿಂದ ಕಲ್ಪತಿ ಎಸ್ ಅಘೋರಂ, ಕಲ್ಪತಿ ಎಸ್ ಗಣೇಶ್ ಮತ್ತು ಕಲ್ಪತಿ ಎಸ್ ಸುರೇಶ್ ಅವರು ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಅವರ ಸಂಗೀತ ಸಂಯೋಜನೆ. ಸಿದ್ಧಾರ್ಥ ನುನಿ ಅವರ ಛಾಯಾಗ್ರಹಣ ಮತ್ತು ವೆಂಕಟ್ ರಾಜೇನ್ ಅವರ ಸಂಕಲನವಿದೆ.

‘ಗೋಟ್’ ನಿರ್ಮಾಣದ ಕೊನೆಯ ಹಂತದಲ್ಲಿದ್ದು, ಚೆನ್ನೈ, ಥೈಲ್ಯಾಂಡ್, ಹೈದರಾಬಾದ್ ಮತ್ತು ಪಾಂಡಿಚೇರಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಈ ವರ್ಷದ ಕೊನೆಯಲ್ಲಿ ಚಿತ್ರವು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ.

Continue Reading
Advertisement
viral video
ಕ್ರೀಡೆ48 seconds ago

Imad Wasim: ಡ್ರೆಸ್ಸಿಂಗ್‌ ರೂಮ್​ನಲ್ಲೇ ರಾಜಾರೋಷವಾಗಿ ಸಿಗರೇಟ್‌ ಸೇದಿದ ಪಾಕ್​ ಆಟಗಾರ

Pashupati Kumar Paras
ಪ್ರಮುಖ ಸುದ್ದಿ1 min ago

Lok Sabha Election: ಚಿರಾಗ್‌ಗೆ ಮಣೆ ಹಾಕಿದ ಎನ್‌ಡಿಎ, ಸಿಟ್ಟಿಗೆದ್ದ ಕೇಂದ್ರ ಸಚಿವ ಪಶುಪತಿ ಕುಮಾರ್‌ ಪರಾಸ್‌ ರಾಜೀನಾಮೆ

Water crisis Youth climbs mobile tower in Vijayapura
ವಿಜಯಪುರ20 mins ago

Water Crisis: ವಿಜಯಪುರದ ಗ್ರಾಮದಲ್ಲಿ ಕುಡಿಯುವ ನೀರಿಲ್ಲವೆಂದು ಮೊಬೈಲ್‌ ಟವರ್‌ ಏರಿದ ಯುವಕ!

Priyamani donate mechanical elephant
ಸಿನಿಮಾ21 mins ago

Actress Priyamani: ಕೇರಳದ ದೇವಾಲಯವೊಂದಕ್ಕೆ `ಯಾಂತ್ರಿಕ ಆನೆ’ ಉಡುಗೊರೆ ಕೊಟ್ಟ ಪ್ರಿಯಾಮಣಿ!

Murder Case Haveri newsMurder Case Haveri news
ಹಾವೇರಿ27 mins ago

Murder Case : ತನ್ನನ್ನು ಮದುವೆಯಾಗಲು ನಿರಾಕರಿಸಿದ ಸೊಸೆಯನ್ನೇ ಕೊಂದ ಮಾವ!

Illicit relationship Murder Case
ಕ್ರೈಂ35 mins ago

Illicit Relationship : ವಿಜಯಪುರದಲ್ಲಿ ಜೋಡಿ ಕೊಲೆ; ಅಕ್ರಮ ಸಂಬಂಧಕ್ಕಾಗಿ ನಡೆಯಿತಾ ಹತ್ಯೆ?

gold in hand
ಚಿನ್ನದ ದರ37 mins ago

Gold Rate Today: ಬಿಸಿಲಿನಂತೆ ಏರತೊಡಗಿದೆ ಚಿನ್ನದ ಬೆಲೆ ! ಇಂದು ಎಷ್ಟಿದೆ ನೋಡಿ

rohit sharma
ಕ್ರೀಡೆ47 mins ago

IPL 2024: ರೋಹಿತ್ ಬ್ಯಾಟಿಂಗ್​​ ಅಭ್ಯಾಸದ ವಿಡಿಯೊ ಹಂಚಿಕೊಂಡ ಮುಂಬೈ ಇಂಡಿಯನ್ಸ್

John Abraham Vedaa teaser out
ಬಾಲಿವುಡ್1 hour ago

Vedaa teaser out: ಜಾನ್ ಅಬ್ರಹಾಂ ನಟನೆಯ ಆ್ಯಕ್ಷನ್-ಪ್ಯಾಕ್ಡ್ ‘ವೇದಾ’ ಟೀಸರ್ ಔಟ್‌

Harassment Case obscene video
ಬೆಂಗಳೂರು1 hour ago

Harassment Case : ಹೆಂಡತಿಗೆ ಅಶ್ಲೀಲ ವಿಡಿಯೊ ಕಳುಹಿಸಿದ ಗಂಡನಿಗೆ 1 ತಿಂಗಳ ಜೈಲು ಶಿಕ್ಷೆ!

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು18 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ1 day ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ3 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ4 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ5 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

Different Danny Filed Case Against Ravi Varma
ಬೆಂಗಳೂರು5 days ago

Different Danny : ಫೈಟ್‌ ಮಾಸ್ಟರ್ಸ್‌ ಫೈರ್‌ ಫೈಟಿಂಗ್‌; ರವಿವರ್ಮ ವಿರುದ್ಧ ಡಿಫರೆಂಟ್‌ ಡ್ಯಾನಿ ಸಮರ

ಟ್ರೆಂಡಿಂಗ್‌