Site icon Vistara News

Nayanthara: ಮೊಬೈಲ್ ಒಡೆದು ಹಾಕುವುದಾಗಿ ಎಚ್ಚರಿಕೆ ಕೊಟ್ಟ ನಯನತಾರಾ; ನಟಿ ಗರಂ ಆಗಿದ್ಯಾಕೆ?

Nayanthara threatens to break fan’s phone during temple visit

ಬೆಂಗಳೂರು: ಲೇಡಿ ಸೂಪರ್‌ಸ್ಟಾರ್‌ ನಯನತಾರಾ (Nayanthara) ಮತ್ತು ವಿಘ್ನೇಶ್ ಶಿವನ್ ಇತ್ತೀಚೆಗೆ ಕುಂಭಕೋಣಂ ಬಳಿಯ ಕಾಮಾಕ್ಷಿ ಅಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ನಟಿಯನ್ನು ನೋಡಲು ಜನರು ಜಮಾಯಿಸಿದ್ದರಿಂದ ದರ್ಶನ ಪಡೆಯಲು ದಂಪತಿಗೆ ಕಷ್ಟಕರ ವಾತಾವರಣ ಉಂಟಾಗಿದೆ. ಪೊಲೀಸರು ಕೂಡ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು ಎನ್ನಲಾಗಿದೆ. ಪೂಜೆ ಮುಗಿಸಿ ಇಬ್ಬರೂ ಮತ್ತೊಂದು ದೇವಸ್ಥಾನಕ್ಕೆ ತೆರಳುತ್ತಾರೆ. ಶಾಂತವಾಗಿ ಇರುವಂತೆ ಎಷ್ಟೇ ಮನವಿ ಮಾಡಿದರೂ ಅಭಿಮಾನಿಗಳು ಕೇಳದಿದ್ದಾಗ ಅನಿವಾರ್ಯವಾಗಿ ಗದರಿದ್ದಾರೆ. ಈ ಸಂದರ್ಭದಲ್ಲಿ ವಿಡಿಯೊ ಮಾಡುತ್ತ ಬಂದ ಅಭಿಮಾನಿಯ ವಿರುದ್ಧ ಗರಂ ಆದ ನಯನಾ, ಮೊಬೈಲ್ ಒಡೆದು ಹಾಕುವುದಾಗಿ ಎಚ್ಚರಿಸಿದ್ದಾರೆ.

ವಿಘ್ನೇಶ್ ಶಿವನ್ ಮತ್ತು ನಯನತಾರಾ ಕಾಮಾಕ್ಷಿ ಅಮ್ಮನ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅದರ ನಂತರ, ಅವರು ಮತ್ತೊಂದು ದೇವಸ್ಥಾನಕ್ಕೆ ಹೋಗಲು ಪ್ರಯತ್ನಿಸಿದರು. ಸಾಲಾಗಿ ಬನ್ನಿ ಎಲ್ಲರಿಗೂ ಸೆಲ್ಫಿ ಕೊಡುವೆ ಎಂದು ನಯನತಾರಾ ಮನವಿ ಮಾಡಿಕೊಂಡರೂ ಅಭಿಮಾನಿಗಳು ಕೇಳಿಲ್ಲ. ಪರಿಸ್ಥಿತಿಯನ್ನು ಅರಿತ ಅವರು ಸಮಾಧಾನ ಮಾಡಲು ಪ್ರಯತ್ನಿಸಿದರೂ ಅದು ಸಾಧ್ಯವಾಗಿಲ್ಲ. ಹಾಗಾಗಿ ತರಾತುರಿಯಲ್ಲಿ ಪೂಜೆ ಮುಗಿಸಿ ಹೊರಟಿದ್ದಾರೆ.

ಇದನ್ನೂ ಓದಿ: Nayanthara: ಮೊದಲ ಬಾರಿ ಅವಳಿ ಮಕ್ಕಳೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ನಯನತಾರಾ-ವಿಘ್ನೇಶ್

ಕಾಲಿವುಡ್‌ ಚಿತ್ರರಂಗದಲ್ಲಿ ಮಿಂಚಿದ ನಯನತಾರಾ ಅವರು ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕೊನೆಯದಾಗಿ ʻಕನೆಕ್ಟ್‌ʼ ಸಿನಿಮಾದಲ್ಲಿ ಕಾಣಿಸಿಕೊಂಡರು. ಸಿನಿಮಾ ಮಿಶ್ರ ಪ್ರತಿಕ್ರಿಯೆನ್ನು ಪಡೆಯಿತು.ಈ ಸಿನಿಮಾವನ್ನು ಅಶ್ವಿನ್ ಸರವಣನ್ ನಿರ್ದೇಶಿಸಿದ್ದಾರೆ.

ಮುಂದೆ ಶಾರುಖ್‌ ಅಭಿನಯದ ಜವಾನ್‌ ಸಿನಿಮಾದಲ್ಲಿ ನಟಿಸಲಿದ್ದಾರೆ. ಈ ಸಿನಿಮಾದಲ್ಲಿ ವಿಜಯ್ ಸೇತುಪತಿ ಮತ್ತು ಪ್ರಿಯಾಮಣಿ ಕೂಡ ಇದ್ದಾರೆ. ನಯನತಾರಾ ʻಇರೈವನ್ʼಯೋಜನೆ ಕೂಡ ಹೊಂದಿದ್ದಾರೆ.

Exit mobile version