Nikhil Kumaraswamy: ಜನುಮದಿನದಂದು ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಿಖಿಲ್‌ ಕುಮಾರಸ್ವಾಮಿ Vistara News
Connect with us

ಸಿನಿಮಾ

Nikhil Kumaraswamy: ಜನುಮದಿನದಂದು ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಿಖಿಲ್‌ ಕುಮಾರಸ್ವಾಮಿ

ಹುಟ್ಟುಹಬ್ಬದ ಪ್ರಯುಕ್ತ ಹೊಸ ಚಿತ್ರಕ್ಕೆ ಸೈನ್ ಹಾಕಿದ್ದು, ಸ್ಪೋರ್ಟ್ಸ್ ಡ್ರಾಮಾ ಚಿತ್ರದಲ್ಲಿ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಕಾಣಿಸಿಕೊಳ್ಳಲಿದ್ದಾರೆ.ಕೆ.ಪಿ.ಶ್ರೀಕಾಂತ್ ನಿರ್ಮಾಣದ ಹೊಸ ಚಿತ್ರಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಈ ಚಿತ್ರವನ್ನು ಮನೋಹರ್‌ ಅವರು ನಿರ್ದೇಶಿಸುತ್ತಿದ್ದಾರೆ. ಅಭಿಮಾನಿಗಳ ಜತೆ ಕೇಕ್‌ ಕತ್ತರಿಸುವ ಮೂಲಕ ಬರ್ತಡೇ ಸೆಲೆಬ್ರೇಷನ್ ಮಾಡಿದ್ದಾರೆ.

VISTARANEWS.COM


on

Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು 35ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಜೆ ಪಿ ನಗರದ ನಿವಾಸದ ಬಳಿ ಫ್ಯಾನ್ಸ್ ಜತೆ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಹೊಸ ಚಿತ್ರಕ್ಕೆ ಸೈನ್ ಹಾಕಿದ್ದು, ಸ್ಪೋರ್ಟ್ಸ್ ಡ್ರಾಮಾ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಜನುಮದಿನಕ್ಕೆ ನಿಖಿಲ್‌ ಕುಮಾರಸ್ವಾಮಿ ಅವರು ಹೊಸ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ಕೆ.ಪಿ.ಶ್ರೀಕಾಂತ್ ನಿರ್ಮಾಣದ ಹೊಸ ಚಿತ್ರಕ್ಕೆ ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ. ಈ ಚಿತ್ರವನ್ನು ಮನೋಹರ್‌ ಅವರು ನಿರ್ದೇಶಿಸುತ್ತಿದ್ದಾರೆ. ಅಭಿಮಾನಿಗಳ ಜತೆ ಕೇಕ್‌ ಕತ್ತರಿಸುವ ಮೂಲಕ ಬರ್ತಡೇ ಸೆಲೆಬ್ರೇಷನ್ ಮಾಡಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಮಾತನಾಡಿ ʻನನಗೆ ಅಭಿಮಾನಿಗಳ ಪ್ರೀತಿನೇ ದೊಡ್ಡ ಉಡುಗೊರೆ. ನನ್ನ ಹೆಂಡತಿ ರೇವತಿಗೆ ನಾನು ಸಮಯ ಕೊಡುವುದು ದೊಡ್ಡ ಉಡುಗೊರೆ. ಸಿನಿಮಾ ಕಡೆ ಗಮನ ನೀಡಲು ಸಾಧ್ಯವಾಗುತ್ತಿಲ್ಲʼʼಎಂದರು.

ಇದನ್ನೂ ಓದಿ: ರಾಮನಗರದಿಂದ ಕಣಕ್ಕಿಳಿಯಲಿದ್ದಾರೆ ನಿಖಿಲ್‌ ಕುಮಾರಸ್ವಾಮಿ: ಹಾಗಾದರೆ ಎಚ್‌ಡಿಕೆ ಸ್ಪರ್ಧೆ ಎಲ್ಲಿಂದ?

ಇದನ್ನೂ ಓದಿ: Anitha Kumaraswamy | ಪುತ್ರ ನಿಖಿಲ್‌ಗಾಗಿ ಅನಿತಾ ಕುಮಾರಸ್ವಾಮಿ ಕ್ಷೇತ್ರ ತ್ಯಾಗ, ಇದು ಪತ್ನಿಯ ನಿರ್ಧಾರ ಎಂದ ಎಚ್‌ಡಿಕೆ

ಹೊಸ ಚಿತ್ರಕ್ಕೆ ಗ್ರೀನ್‌ ಸಿಗ್ನಲ್‌
ಈ ಸಿನಿಮಾಗೆ ಕಾರ್ಯಕಾರಿ ನಿರ್ಮಾಪಕರಾಗಿ ಜಿ. ತುಳಸಿ ರಾಂ , ಜಿ ರಮೇಶ್, ಜಿ ಆನಂದ್, ಚಂದ್ರು ಮನೋಹರನ್, ನಾಗೇಂದ್ರ ಕೆಲಸ ಮಾಡಲಿದ್ದಾರೆ. ಈಗಾಗಲೇ ಸಿನಿಮಾದ ಫಸ್ಟ್‌ ಲುಕ್ ಅನಾವರಣ ಮಾಡಲಾಗಿದೆ. ನಿಖಿಲ್ ‘ಜಾಗ್ವಾರ್’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು. ಅದ್ಧೂರಿಯಾಗಿ ಮೂಡಿಬಂದ ಈ ಸಿನಿಮಾದ ನಂತರ ಅವರು, ‘ಸೀತಾರಾಮ ಕಲ್ಯಾಣ’ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದರು. ಇವೆರಡೂ ಸಿನಿಮಾಗಳು ಅವರ ಹೋಮ್‌ ಬ್ಯಾನರ್‌ನಲ್ಲೇ ಮೂಡಿಬಂದವು. ಮುನಿರತ್ನ ನಿರ್ಮಾಣದ ‘ಕುರುಕ್ಷೇತ್ರ’ ಸಿನಿಮಾದಲ್ಲಿ ಅಭಿಮನ್ಯು ಪಾತ್ರ ಮಾಡಿದ್ದ ನಿಖಿಲ್, ಲಹರಿ ಸಂಸ್ಥೆ ನಿರ್ಮಾಣ ಮಾಡಿದ್ದ ‘ರೈಡರ್‌’ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ಮತ್ತೊಮ್ಮೆ ಲಹರಿ ಮತ್ತು ಕೆ ಪಿ ಶ್ರೀಕಾಂತ್ ಜತೆಗೆ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಈ ಸಿನಿಮಾಗೆ ಇನ್ನೂ ಟೈಟಲ್ ಇಟ್ಟಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

Raghav-Parineeti: ಮತ್ತೆ ಒಟ್ಟಿಗೆ ಕಾಣಿಸಿದ ರಾಘವ್‌, ಪರಿಣೀತಿ; ವಾರದಲ್ಲಿ 3ನೇ ಭೇಟಿ, ಸ್ನೇಹಾನಾ? ಪ್ರೀತಿನಾ?

Raghav-Parineeti: ಆಪ್‌ ನಾಯಕ ರಾಘವ್‌ ಚಡ್ಡಾ ಹಾಗೂ ಬಾಲಿವುಡ್‌ ನಟಿ ಪರಿಣೀತಿ ಚೋಪ್ರಾ ಅವರು ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ. ಇವರಿಬ್ಬರೂ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಮಾತುಗಳಿಗೆ ವಾರದಲ್ಲಿಯೇ ನಡೆದ ಮೂರನೇ ಭೇಟಿಯು ಪುಷ್ಟಿ ನೀಡಿದೆ.

VISTARANEWS.COM


on

Edited by

Amid wedding rumours AAP MP Raghav Chadha picks up Parineeti Chopra from Delhi airport
Koo

ನವದೆಹಲಿ: ಪಂಜಾಬ್‌ ಆಪ್‌ ನಾಯಕ, ರಾಜ್ಯಸಭೆ ಸದಸ್ಯ ರಾಘವ್‌ ಚಡ್ಡಾ ಹಾಗೂ ಬಾಲಿವುಡ್‌ ನಟಿ ಪರಿಣೀತಿ ಚೋಪ್ರಾ (Raghav-Parineeti) ಅವರು ಕೆಲ ದಿನಗಳ ಹಿಂದೆ ಒಟ್ಟಿಗೆ ಕಾಣಿಸಿಕೊಂಡಿದ್ದು ಭಾರಿ ಸುದ್ದಿಯಾಗಿತ್ತು. ಇಬ್ಬರೂ ಹೋಟೆಲ್‌ನಲ್ಲಿ ಕಾಣಿಸಿಕೊಂಡ ಕಾರಣ ಇಬ್ಬರೂ ವದಂತಿಗಳಿಗೆ ಆಹಾರವಾಗಿದ್ದರು. ಈ ಕುರಿತು ರಾಘವ್‌ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಅವರಿಗೆ ಪತ್ರಕರ್ತರು ಪ್ರಶ್ನೆ ಕೇಳಿದ್ದರು. ಇಬ್ಬರೂ ಪ್ರೀತಿಸುತ್ತಿದ್ದಾರೆ, ಮದುವೆಯಾಗುತ್ತಿದ್ದಾರೆ ಎಂದೇ ಹೇಳಲಾಗುತ್ತಿತ್ತು. ಆದರೆ, ಈ ಕುರಿತು ರಾಘವ್‌ ಚಡ್ಡಾ ಹಾರಿಕೆಯ ಉತ್ತರ ನೀಡಿದ್ದರು. ಈಗ ಜೋಡಿಯು ದೆಹಲಿ ವಿಮಾನ ನಿಲ್ದಾಣದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದು, ಇದು ವಾರದಲ್ಲಿ ಮೂರನೇ ಭೇಟಿಯಾಗಿದೆ. ಹಾಗಾಗಿ, ಇಬ್ಬರೂ ಜೋಡಿ ಹಕ್ಕಿಗಳಾಗಿದ್ದಾರೆ ಎಂಬ ಮಾತಿಗೆ ಹಚ್ಚಿನ ಪುಷ್ಟಿ ಬಂದಂತಾಗಿದೆ.

ಮಾರ್ಚ್‌ 29ರಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪರಿಣೀತಿ ಚೋಪ್ರಾ ಅವರನ್ನು ಪಿಕ್‌ ಮಾಡಲು ಆಮ್‌ ಆದ್ಮಿ ಪಕ್ಷದ ನಾಯಕ ರಾಘವ್‌ ಚಡ್ಡಾ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ರಾಘವ್‌ ಚಡ್ಡಾ ಕಾರಿನಲ್ಲಿಯೇ ಪರಿಣೀತಿ ಚೋಪ್ರಾ ಅವರು ವಿಮಾನ ನಿಲ್ದಾಣದಿಂದ ತೆರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಬ್ಬರೂ ಕಾಣಿಸಿಕೊಂಡ ಫೋಟೊಗಳು ಪಾಪರಾಜಿಗಳಿಗೆ ಸಿಕ್ಕಿದ್ದು, ಫೋಟೊಗಳು ವೈರಲ್‌ ಆಗಿವೆ. ಅಲ್ಲದೆ, ಇಬ್ಬರೂ ಪ್ರೀತಿಸುತ್ತಿದ್ದಾರೆ ಎಂಬುದಾಗಿ ಜಾಲತಾಣಗಳಲ್ಲಿ ಮತ್ತೆ ಹೇಳಲು ಆರಂಭಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿಯೇ ಮಾಧ್ಯಮದವರು ಇಬ್ಬರನ್ನೂ ಮಾತನಾಡಿಸಲು ಯತ್ನಿಸಿದರಾದರೂ, ಜೋಡಿಯು ಪ್ರತಿಕ್ರಿಯಿಸದೆ ತೆರಳಿದೆ.

ಏರ್‌ಪೋರ್ಟ್‌ನಲ್ಲಿ ಜೋಡಿ ಹಕ್ಕಿ

ಒಟ್ಟಿಗೆ ಊಟ, ಒಂದೇ ಕಾರಿನಲ್ಲಿ ತಿರುಗಾಟ

ಕಳೆದ ಒಂದು ವಾರದಲ್ಲಿ ರಾಘವ್‌ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಮೂರು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಮಾರ್ಚ್‌ 22ರಂದು ರಾಘವ್‌ ಹಾಗೂ ಪರಿಣೀತಿ ಅವರು ಮುಂಬೈನ ರೆಸ್ಟೋರೆಂಟ್‌ ಒಂದರಲ್ಲಿ ಒಟ್ಟಿಗೆ ಊಟಕ್ಕೆ ತೆರಳಿದ್ದರು. ಇಬ್ಬರೂ ಒಟ್ಟಿಗೆ ಹೋಟೆಲ್‌ ಪ್ರವೇಶಿಸುವ ಹಾಗೂ ಹೋಟೆಲ್‌ನಿಂದ ಹೊರಬರುವ ವಿಡಿಯೊ ಹಾಗೂ ಫೋಟೊಗಳು ಲಭ್ಯವಾಗಿವೆ. ಇದಾದ ಮರುದಿನವೇ (ಮಾರ್ಚ್‌ 23) ಇಬ್ಬರೂ ಮತ್ತೆ ಇನ್ನೊಂದು ರೆಸ್ಟೋರೆಂಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಹೀಗೆ ಪದೇಪದೆ ಒಟ್ಟಿಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡೇಟಿಂಗ್‌ ಕುರಿತು ಮಾತುಗಳು ಕೇಳಿಬರುತ್ತಿವೆ.

ಹಾರಿಕೆಯ ಉತ್ತರ ನೀಡಿದ್ದ ಚಡ್ಡಾ

ಪರಿಣೀತಿ ಜತೆಗಿನ ಡೇಟಂಗ್‌ ಕುರಿತು ಇತ್ತೀಚೆಗೆ ಸುದ್ದಿಗಾರರು ಪ್ರಶ್ನೆ ಕೇಳುತ್ತಲೇ ನಾಚಿ ನೀರಾಗಿದ್ದ ರಾಘವ್‌ ಚಡ್ಡಾ, “ನನಗೆ ಪರಿಣೀತಿ ಬಗ್ಗೆ ಅಲ್ಲ, ರಾಜನೀತಿ ಬಗ್ಗೆ ಪ್ರಶ್ನೆ ಕೇಳಿ” ಎಂದು ನಕ್ಕಿದ್ದರು. ಹಾಗೆಯೇ, ನೀವು ಮದುವೆ ಆಗುವುದು ಯಾವಾಗ ಎಂದು ಕೇಳಿದ ಪ್ರಶ್ನೆಗೆ, “ನಾನು ಮದುವೆಯಾಗುವಾಗ ನಿಮಗೆ ಖಂಡಿತವಾಗಿಯೂ ತಿಳಿಸುತ್ತೇನೆ” ಎಂದು ಹೇಳುವ ಮೂಲಕ ಜಾರಿಕೊಂಡಿದ್ದರು.

ಪಂಜಾಬ್‌ ಆಪ್‌ ನಾಯಕ, ರಾಜ್ಯಸಭೆಯ ಯುವ ಸದಸ್ಯರಾಗಿರುವ ಚಡ್ಡಾ ಹಾಗೂ ಪರಿಣೀತಿ ಚೋಪ್ರಾ ಅವರು ಲಂಡನ್‌ ಸ್ಕೂಲ್‌ ಆಫ್‌ ಎಕನಾಮಿಕ್ಸ್‌ನಲ್ಲಿ ಒಟ್ಟಿಗೆ ಓದಿದ್ದಾರೆ. ಹಾಗಾಗಿ, ಇಬ್ಬರಿಗೂ ಮೊದಲಿನಿಂದಲೂ ಪರಿಚಯ ಇದೆ ಎಂದು ತಿಳಿದುಬಂದಿದೆ. ಆದರೆ, ಮೂಲಗಳ ಪ್ರಕಾರ, ಅವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಇಬ್ಬರೂ ಆತ್ಮೀಯರಾಗಿದ್ದಾರೆ. ಹಾಗಾಗಿ, ಡೇಟಿಂಗ್‌ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Raghav Chadha: ಆಪ್‌ ನಾಯಕ ರಾಘವ್‌ ಚಡ್ಡಾ, ಪರಿಣೀತಿ ಚೋಪ್ರಾ ಈಗ ಜೋಡಿ ಹಕ್ಕಿ? ಜತೆಗೇ ಸುತ್ತಿ ಚಡ್ಡಾ ಹೇಳಿದ್ದೇನು?

Continue Reading

ದೇಶ

Narendra Modi : ಆಸ್ಕರ್‌ ವಿಜೇತ ʼದಿ ಎಲಿಫೆಂಟ್ ವಿಸ್ಪರರ್ಸ್ʼ ಸಿನಿ ತಂಡವನ್ನು ಭೇಟಿ ಮಾಡಿದ ಮೋದಿ

ಭಾರತಕ್ಕೆ ಆಸ್ಕರ್‌ ಪ್ರಶಸ್ತಿ ತಂದುಕೊಟ್ಟ ʼದಿ ಎಲಿಫೆಂಟ್‌ ವಿಸ್ಪರ್ಸ್‌ʼ ಸಾಕ್ಷ್ಯಚಿತ್ರದ ತಂಡವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಭೇಟಿಯಾಗಿದ್ದಾರೆ.

VISTARANEWS.COM


on

Edited by

Koo

ನವದೆಹಲಿ: ಈ ಬಾರಿಯ ಆಸ್ಕರ್‌ ಪ್ರಶಸ್ತಿ ಭಾರತಕ್ಕೆ ಹರ್ಷ ತಂದುಕೊಟ್ಟಿದೆ. ʼದಿ ಎಲಿಫೆಂಟ್ ವಿಸ್ಪರರ್ಸ್ʼ ಡಾಕ್ಯುಮೆಂಟರಿ ಸಾಕ್ಷ್ಯಚಿತ್ರ ಮತ್ತು ಆರ್‌ಆರ್‌ಆರ್‌ ಸಿನಿಮಾದ ನಾಟು ನಾಡು ಹಾಡಿಗೆ ಆಸ್ಕರ್‌ ಪ್ರಶಸ್ತಿಗಳು ಬಂದಿವೆ. ಅದೇ ಸಂತಸದಲ್ಲಿರುವ ದಿ ಎಲಿಫೆಂಟ್ ವಿಸ್ಪರರ್ಸ್ ಚಿತ್ರತಂಡವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಗುರುವಾರ ಭೇಟಿಯಾಗಿದ್ದಾರೆ.

ಇದನ್ನೂ ಓದಿ: Amit Shah: ನರೇಂದ್ರ ಮೋದಿ ನೇತೃತ್ವದಿಂದ ಮಾತ್ರ ಕರ್ನಾಟಕದ ಕಲ್ಯಾಣ: ಬೀದರ್‌ನ ಗೊರಟಾದಲ್ಲಿ ಅಮಿತ್‌ ಶಾ
ಈ ಬಗ್ಗೆ ಪ್ರಧಾನಿಯವರೇ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಸಿನಿಮಾದ ನಿರ್ದೇಶಕಿ ಕಾರ್ತಿಕಿ ಗೊನ್ಸಲ್ವೆಸ್‌ ಮತ್ತು ನಿರ್ಮಾಪಕಿ ಗುನೀತ್‌ ಮೊಂಗಾ ಅವರೊಂದಿಗಿರುವ ಫೋಟೋವನ್ನು ಹಂಚಿಕೊಂಡಿರುವ ಮೋದಿ ಅವರು, “ದಿ ಎಲಿಫೆಂಟ್ ವಿಸ್ಪರರ್ಸ್ ಸಿನಿಮಾದ ತೇಜಸ್ಸು ಮತ್ತು ಯಶಸ್ಸು ಜಾಗತಿಕ ಗಮನ ಸೆಳೆಯುವುದರ ಜೊತೆಗೆ ಮೆಚ್ಚುಗೆಯನ್ನೂ ಗಳಿಸಿದೆ. ಇಂದು, ಅದಕ್ಕೆ ಸಂಬಂಧಿಸಿದ ಅದ್ಭುತ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಅವರು ಭಾರತವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ”ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ಐಸ್​ ಕ್ರೀಂ ತಯಾರಿಸೋಕೆ ಫ್ರಿಜ್​ ಬೇಡ್ವೇ ಬೇಡ; ಸೀಲಿಂಗ್ ಫ್ಯಾನ್ ಇದ್ದರೂ ಸಾಕು ಎನ್ನುತ್ತಿದ್ದಾರೆ ಈ ಮಹಿಳೆ
ಈ ಸಾಕ್ಷ್ಯಚಿತ್ರವು ದಂಪತಿಯೊಂದಕ್ಕೆ ಅನಾಥ ಆನೆ ಮರಿಯೊಂದಿಗೆ ಬಾಂಧವ್ಯ ಬೆಳೆಸಿಕೊಳ್ಳುವ ಕಥೆಯನ್ನು ಕಟ್ಟಿಕೊಡುತ್ತದೆ. ಈ ಚಿತ್ರ 2022ರ ನವೆಂಬರ್‌ 9ರಂದು ನ್ಯೂಯಾರ್ಕ್‌ ಚಲನಚಿತ್ರೋತ್ಸವದಲ್ಲಿ ತೆರೆ ಕಂಡಿತು. ಅದೇ ವರ್ಷ ಡಿಸೆಂಬರ್‌ 8ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಯಿತು.

Continue Reading

South Cinema

Ponniyin Selvan: ‘ಪೊನ್ನಿಯನ್ ಸೆಲ್ವನ್-2’ ಟ್ರೈಲರ್‌ ಔಟ್‌

ಚೆನ್ನೈನಲ್ಲಿ (Ponniyin Selvan) ಮಾರ್ಚ್‌ 29ರಂದು ಸಂಜೆ ಅದ್ಧೂರಿಯಾಗಿ ಟ್ರೈಲರ್‌ ಹಾಗೂ ಆಡಿಯೋ ಲಾಂಚ್ ಕಾರ್ಯಕ್ರಮ ಜರುಗಿತು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಕಮಲ್ ಹಾಸನ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದರು.

VISTARANEWS.COM


on

Edited by

Ponniyin SelvanPonniyin Selvan Trailer Out
Koo

ಬೆಂಗಳೂರು: ಖ್ಯಾತ ನಿರ್ದೇಶಕ ಮಣಿರತ್ನಂ ಕನಸಿನ ಕೂಸು ಐತಿಹಾಸಿಕ ದೃಶ್ಯಕಾವ್ಯ ಪೊನ್ನಿಯನ್ ಸೆಲ್ವನ್-2 (Ponniyin Selvan) ಸಿನಿಮಾದ ಟ್ರೈಲರ್‌ ರಿಲೀಸ್ ಆಗಿದೆ. ಚೆನ್ನೈನಲ್ಲಿ ಮಾರ್ಚ್‌ 29ರಂದು ಸಂಜೆ ಅದ್ಧೂರಿಯಾಗಿ ಟ್ರೈಲರ್‌ ಹಾಗೂ ಆಡಿಯೋ ಲಾಂಚ್ ಕಾರ್ಯಕ್ರಮ ಜರುಗಿತು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಕಮಲ್ ಹಾಸನ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದರು. ಟ್ರೈಲರ್‌ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಮಣಿರತ್ನಂ, ಕಾರ್ತಿ, ಐಶ್ವರ್ಯ ರೈ, ವಿಕ್ರಮ್, ತ್ರಿಯ, ಜಯಂರವಿ, ಪ್ರಕಾಶ್ ರೈ, ಶರತ್ ಕುಮಾರ್ ಸೇರಿದಂತೆ ಹಲವು ಸೂಪರ್ ಸ್ಟಾರ್ಸ್‌ಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಕಲ್ಕಿ ಕೃಷ್ಣಮೂರ್ತಿ ಬರೆದ ಪೊನ್ನಿಯನ್ ಸೆಲ್ವನ್ ಕಾದಂಬರಿ ಆಧಾರಿಸಿ ನಿರ್ದೇಶಕ ಮಣಿರತ್ನಂ ಎರಡು ಭಾಗದಲ್ಲಿ ಚಿತ್ರ ತಯಾರಿಸಿದ್ದರು. ಕಳೆದ ವರ್ಷ ರಿಲೀಸ್ ಆಗಿದ್ದ ಮೊದಲ ಭಾಗಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಪೊನ್ನಿಯನ್ ಸೆಲ್ವನ್ 500 ಕೋಟಿ ರೂ. ಬಾಚಿ ಬಾಕ್ಸಾಫೀಸ್ ಶೇಕ್ ಮಾಡಿತ್ತು. ಲೈಕಾ ಪ್ರೊಡಕ್ಷನ್ ಜತೆಗೂಡಿ ಮಣಿರತ್ನಂ ನಿರ್ಮಿಸಿ ನಿರ್ದೇಶಿಸಿರುವ ಪೊನ್ನಿಯಯನ್ ಸೆಲ್ವನ್-2 ಸೀಕ್ವೆಲ್ ಟ್ರೈಲರ್‌ ರಿಲೀಸ್ ಆಗಿದ್ದು, ನಿರೀಕ್ಷೆ ನೂರ್ಮಡಿಗೊಳಿಸಿದೆ.

ಚೋಳ ಸಾಮ್ರಾಜ್ಯದ ಗದ್ದುಗೆಗಾಗಿ ನಡೆಯುವ ಹೋರಾಟ, ಪಾಂಡ್ಯ ರಾಜರ ಕುತಂತ್ರ, ಚೋಳ ಸಾಮ್ರಾಜ್ಯ ನಾಶಪಡಿಸಲು ನಂದಿನಿ ಮಾಡುವ ಶಪಥ, ಕರಿಕಾಲನ್ ವೀರಾವೇಶದ ಹೋರಾಟ, ನಂದಿನಿ ಕರಿಕಾಲನ್ ಮುಖಾಮುಖಿಯಾಗುವ ಸನ್ನಿವೇಶ..ಅದ್ಧೂರಿ ಮೇಕಿಂಗ್, ಬೃಹತ್ ಸೆಟ್‌ಗಳು ಟ್ರೈಲರ್‌ನಲ್ಲಿ ಝಗಮಗಿಸಿವೆ. ಕನ್ನಡ ಸೇರಿದಂತೆ ಐದು ಭಾಷೆಯಲ್ಲಿಯೂ ಪೊನ್ನಿಯನ್ ಸೆಲ್ವನ್-2 ಮೊದಲ ನೋಟ ರಿಲೀಸ್ ಆಗಿದ್ದು, ಭಾರೀ ಮೆಚ್ಚುಗೆಗೆ ಪಡೆದುಕೊಂಡಿದೆ. ಆಸ್ಕರ್ ವಿಜೇತ ಎ ಆರ್ ರೆಹಮಾನ್ ಸಂಗೀತ ಸಿನಿಮಾಕ್ಕಿದೆ.

ಇದನ್ನೂ ಓದಿ: Kamal Haasan: ನಿರ್ದೇಶಕ ಮಣಿರತ್ನಂ ಬಗ್ಗೆ ಅನೇಕರಿಗೆ ಅಸೂಯೆ! ನಟ ಕಮಲ್ ಹಾಸನ್ ಹೀಗೆ ಹೇಳಿದ್ದೇಕೆ?

`ಪೊನ್ನಿಯನ್ ಸೆಲ್ವನ್-2’ ಟ್ರೈಲರ್‌ ಔಟ್‌

ಟ್ರೈಲರ್‌ ಮೂಲಕ ಪ್ರಚಾರ ಕಾರ್ಯಕ್ಕೆ ಕಿಕ್ ಸ್ಟಾರ್ಟ್ ಕೊಟ್ಟಿರುವ ಮಣಿರತ್ನಂ ತಂಡ ಕಟ್ಟಿಕೊಂಡು ಹೊರರಾಜ್ಯಗಳಲ್ಲಿಯೂ ಪ್ರಮೋಷನ್ ಶುರು ಮಾಡಲು ಸಜ್ಜಾಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಪೊನ್ನಿಯನ್ ಸೆಲ್ವನ್-2 ಏಪ್ರಿಲ್ 28ಕ್ಕೆ ವರ್ಲ್ಡ್ ವೈಡ್ ತೆರೆಗೆ ಬರುತ್ತಿದೆ. ಐಶ್ವರ್ಯಾ ರೈ, ತ್ರಿಷಾ, ಕಾರ್ತಿ, ವಿಕ್ರಂ, ಪ್ರಕಾಶ್ ರೈ, ಶರತ್ ಕುಮಾರ್, ಜಯಂರವಿ, ಐಶ್ವರ್ಯ ಲಕ್ಷ್ಮೀ, ಶೋಭಿತಾ ಧುಲಿಪಾಲ, ಪ್ರಭು ಸೇರಿದಂತೆ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.

Continue Reading

ಸಿನಿಮಾ

Actor Rishi: ‘ರಾಮನ ಅವತಾರ’ದಲ್ಲಿ ಕವಲುದಾರಿ ರಿಷಿ: ರಾಮರಾಜ್ಯ ಮತ್ತೆ ಶುರು ಎಂದ ನಟ

ಥೇಟ್ ರಾಮನ ಗೆಟಪ್‌ನಲ್ಲಿಯೇ ರಿಷಿ ಕಾಣಿಸಿಕೊಂಡಿದ್ದು, ಅರುಣ್ ಸಾಗರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಶುಭ್ರ ಅಯ್ಯಪ್ಪ ಹಾಗೂ ಪ್ರಣೀತಾ ಸುಭಾಷ್ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ.

VISTARANEWS.COM


on

Edited by

Actor Rishi New Film announce
Koo

ಬೆಂಗಳೂರು: ಕನ್ನಡ ಚಿತ್ರರಂಗದ ನಟ ರಿಷಿ (Actor Rishi) ವಿಭಿನ್ನ ಪಾತ್ರಗಳ ಮೂಲಕ ಸಿನಿರಸಿಕರನ್ನು ರಂಜಿಸಿಕೊಂಡು ಬರುತ್ತಿದ್ದಾರೆ. ಇದೀಗ ನಟ ರಾಮನ ಅವತಾರ ಎಂಬ ಮತ್ತೊಂದು ಹೊಸ ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಥೇಟ್ ರಾಮನ ಗೆಟಪ್‌ನಲ್ಲಿಯೇ ರಿಷಿ ಕಾಣಿಸಿಕೊಂಡಿದ್ದು, ಅರುಣ್ ಸಾಗರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಶುಭ್ರ ಅಯ್ಯಪ್ಪ ಹಾಗೂ ಪ್ರಣೀತಾ ಸುಭಾಷ್ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ.

ನಿರ್ದೇಶಕ ಸಿಂಪಲ್ ಸುನಿ ಕ್ಯಾಂಪನ್‌ನಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಬರಹಗಾರನಾಗಿ ಕೆಲಸ ಮಾಡಿರುವ ಅನುಭವವಿರುವ, ತಮ್ಮದೇ ನಾಟಿ ಫ್ಯಾಕ್ಟರಿ ಯೂಟ್ಯೂಬ್ ಚಾನೆಲ್ ಮೂಲಕ ಹೆಸರು ಪಡೆದಿರುವ ವಿಕಾಸ್ ಪಂಪಾಪತಿ ರಾಮನ ಅವತಾರ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಇದು ಇವರ ಚೊಚ್ಚಲ ಸಿನಿಮಾವಾಗಿದೆ. ಈ ಚಿತ್ರದ ಮೂಲಕ ವಿಕಾಸ್ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.

ಸ್ಟಾರ್ ಫ್ಯಾಬ್ ಪ್ರೊಡಕ್ಷನ್ ನಡಿ ಆಪರೇಷನ್ ಅಲಮೇಲಮ್ಮ ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಚಿತ್ರ ನಿರ್ಮಾಣ ಮಾಡಿದ್ದಾರೆ. ರೊಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದು, ಅಮರನಾಥ್ ಸಂಲಕನವಿದೆ.

ಇದನ್ನೂ ಓದಿ: Rishi Sunak: ಟಿ20 ಚಾಂಪಿಯನ್​ ತಂಡದೊಂದಿಗೆ ಕ್ರಿಕೆಟ್​ ಆಡಿದ ಪ್ರಧಾನಿ ರಿಷಿ ಸುನಕ್; ವಿಡಿಯೊ ವೈರಲ್​

ಉಡುಪಿ, ಬೆಂಗಳೂರು ಸುತ್ತುಮುತ್ತ ಶೂಟಿಂಗ್ ನಡೆಸಲಾಗಿದೆ. ಈಗಾಗಲೇ ಚಿತ್ರೀಕರಣ ಮುಕ್ತಾಯಗೊಂಡಿದ್ದು, ಗ್ರಾಫಿಕ್ಸ್ ಹಾಗೂ ಮ್ಯೂಸಿಕ್ ಕೆಲಸಗಳು ಭರದಿಂದ ಸಾಗ್ತಿಗುತ್ತಿವೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಜೂನ್ ಮೊದಲನೇ ವಾರದಲ್ಲಿ ರಾಮನ ಅವತಾರ ಸಿನಿಮಾವನ್ನು ತೆರೆಗೆ ತರುವುದಕ್ಕೆ ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Continue Reading
Advertisement
Man commits suicide after wife commits suicide in Srirangapatna
ಕರ್ನಾಟಕ2 hours ago

Suicide Case: ಕೌಟುಂಬಿಕ ಕಲಹ; ಪತ್ನಿ ಆತ್ಮಹತ್ಯೆ ಕಂಡು ಪತಿಯೂ ನೇಣಿಗೆ ಶರಣು

Amid wedding rumours, AAP MP Raghav Chadha picks up Parineeti Chopra from Delhi airport
ದೇಶ2 hours ago

Raghav-Parineeti: ಮತ್ತೆ ಒಟ್ಟಿಗೆ ಕಾಣಿಸಿದ ರಾಘವ್‌, ಪರಿಣೀತಿ; ವಾರದಲ್ಲಿ 3ನೇ ಭೇಟಿ, ಸ್ನೇಹಾನಾ? ಪ್ರೀತಿನಾ?

Do you know how much marks Virat Kohli got in iron pea maths?
ಕ್ರಿಕೆಟ್2 hours ago

Virat Kohli : ಕಬ್ಬಿಣದ ಕಡಲೆ ಗಣಿತದಲ್ಲಿ ವಿರಾಟ್​ ಕೊಹ್ಲಿ ಪಡೆದ ಮಾರ್ಕ್​ ಎಷ್ಟು ಗೊತ್ತಾ?

Manmohan Lalwani says Solar powered system best tool to cross digital gap
ಕರ್ನಾಟಕ2 hours ago

SELCO India: ಡಿಜಿಟಲ್ ಕಂದಕ ದಾಟಲು ಸೌರಚಾಲಿತ ವ್ಯವಸ್ಥೆ ಅತ್ಯುತ್ತಮ ಸಾಧನ: ಮನಮೋಹನ್ ಲಾಲ್ವಾನಿ

Four farmers seriously injured in lathi charge by forest department personnel
ಕರ್ನಾಟಕ2 hours ago

Tumkur News: ಒತ್ತುವರಿ ತೆರವಿಗೆ ಆಕ್ಷೇಪಿಸಿದ್ದಕ್ಕೆ ಲಾಠಿ ಚಾರ್ಜ್ ಮಾಡಿದ ಅರಣ್ಯ ಸಿಬ್ಬಂದಿ; 4 ರೈತರಿಗೆ ಗಂಭೀರ ಗಾಯ

Bengaluru company to gift ChatGPT Plus subscription to employees after seeing rise in productivity
ಕರ್ನಾಟಕ2 hours ago

ChatGPT Subscription: ದಕ್ಷತೆ ಹೆಚ್ಚಳ; ನೌಕರರಿಗೆ ಚಾಟ್‌ಜಿಪಿಟಿ ಉಚಿತ ಸಬ್‌ಸ್ಕ್ರಿಪ್ಶನ್‌ ನೀಡಿದ ಬೆಂಗಳೂರು ಕಂಪನಿ

No prejudice about Hindi, such imposition is not worth it
ಪ್ರಮುಖ ಸುದ್ದಿ3 hours ago

ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು

Google Layoffs: Some employees may get up to Rs 2.60 crore in severance pay
ದೇಶ3 hours ago

Google Layoffs: ಗೂಗಲ್‌ನಿಂದ ವಜಾಗೊಂಡ ನೌಕರರಿಗೆ ಸಿಗಲಿದೆ 2.6 ಕೋಟಿ ರೂ., ಇವರಿಗೆ ಬೇರೆ ನೌಕರಿಯೇ ಬೇಕಿಲ್ಲ

Former bowler of Rajasthan Royals who joined Chennai Super Kings
ಕ್ರಿಕೆಟ್3 hours ago

IPL 2023 : ಚೆನ್ನೈ ಸೂಪರ್​ ಕಿಂಗ್ಸ್​ ಬಳಗ ಸೇರಿದ ರಾಜಸ್ಥಾನ್​ ರಾಯಲ್ಸ್​ನ ಮಾಜಿ ಬೌಲರ್​

ಕರ್ನಾಟಕ4 hours ago

Prof. Madhav Kulkarni: ಖ್ಯಾತ ಲೇಖಕ, ವಿಮರ್ಶಕ ಪ್ರೊ. ಮಾಧವ ಕುಲಕರ್ಣಿ ಇನ್ನಿಲ್ಲ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

Post Office Recruitment 2023
ಉದ್ಯೋಗ2 months ago

India Post GDS Recruitment 2023 : ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ವಿದ್ಯಾರ್ಹತೆ ಎಸ್ಸೆಸ್ಸೆಲ್ಸಿ

ಕರ್ನಾಟಕ8 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ14 hours ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ3 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 weeks ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

ಟ್ರೆಂಡಿಂಗ್‌

error: Content is protected !!