Oscars 2023: ಆಸ್ಕರ್‌ ಅವಾರ್ಡ್‌ ಘೋಷಣೆಗೆ ಕ್ಷಣಗಣನೆ, ಪ್ರಶಸ್ತಿ ಆಯ್ಕೆ ಹೇಗೆ? ಇಲ್ಲಿದೆ ಡಿಟೇಲ್ಸ್ - Vistara News

EXPLAINER

Oscars 2023: ಆಸ್ಕರ್‌ ಅವಾರ್ಡ್‌ ಘೋಷಣೆಗೆ ಕ್ಷಣಗಣನೆ, ಪ್ರಶಸ್ತಿ ಆಯ್ಕೆ ಹೇಗೆ? ಇಲ್ಲಿದೆ ಡಿಟೇಲ್ಸ್

Oscars 2023 Nominations: ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ ಸೇರಿ ಭಾರತದ ಮೂರು ಚಿತ್ರಗಳು ಆಸ್ಕರ್‌ ಪ್ರಶಸ್ತಿಯ ಅಂತಿಮ ಸುತ್ತಿಗೆ ಆಯ್ಕೆಯಾಗಿವೆ.‌ ಭಾರತೀಯ ಕಾಲಮಾನ ಮಾ.13ರ ಭಾನುವಾರ ಬೆಳಗ್ಗೆ 5.30ಕ್ಕೆ ಪ್ರಶಸ್ತಿ ಘೋಷಣೆ ಮಾಡಲಾಗುತ್ತದೆ. ಅಂತಿಮ ಸುತ್ತಿನಲ್ಲಿ ಪ್ರಶಸ್ತಿಯ ಆಯ್ಕೆ ಹೇಗೆ ನಡೆಯುತ್ತದೆ? ಇಲ್ಲಿದೆ ಸಂಕ್ಷಿಪ್ತ ಮಾಹಿತಿ.

VISTARANEWS.COM


on

Natu Natu Song
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದ ಮೂರು ಸಿನಿಮಾಗಳು ಆಸ್ಕರ್‌ ಪ್ರಶಸ್ತಿಯ (Oscars 2023 Nominations) ಅಂತಿಮ ಸುತ್ತಿಗೆ ನಾಮನಿರ್ದೇಶನಗೊಂಡಿವೆ. ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡು ಒರಿಜಿನಲ್‌ ಬೆಸ್ಟ್‌ ಹಾಡು ಕೆಟಗರಿ, ಅತ್ಯುತ್ತಮ ಸಾಕ್ಷ್ಯಚಿತ್ರ ಕೆಟಗರಿಯಲ್ಲಿ (Best Documentary Feature Film) ಆಲ್‌ ದಿ ಬ್ರೆತ್ಸ್‌ (All The Breathes) ನಾಮಿನೇಟ್‌ ಆಗಿವೆ. ಈ ಮೂರೂ ಸಿನಿಮಾಗಳು ಪ್ರಶಸ್ತಿಯ ಸನಿಹಕ್ಕೆ ಹೋಗಿವೆ. ಮಾರ್ಚ್‌ 12ರಂದು ಪ್ರಶಸ್ತಿ ಘೋಷಿಸಲಾಗುತ್ತದೆ.

ಹಾಗಾದರೆ, ಅಂತಿಮವಾಗಿ ಆಸ್ಕರ್‌ ಪ್ರಶಸ್ತಿಯನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ? ಇದಕ್ಕೆ ಇರುವ ನಿಯಮಗಳು ಯಾವವು? ಆಸ್ಕರ್‌ ಪ್ರಶಸ್ತಿಯ ಹಿನ್ನೆಲೆ, ಇದುವರೆಗೆ ಆಸ್ಕರ್‌ ಗೆದ್ದ ಭಾರತದ ಸಿನಿಮಾಗಳು ಯಾವವು ಎಂಬುದು ಸೇರಿ ಹಲವು ವಿಷಯಗಳ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ಆಸ್ಕರ್‌ ಪ್ರಶಸ್ತಿ ಚಲನಚಿತ್ರಗಳಿಗೆ ಸಿಗುವ ಅತಿ ದೊಡ್ಡ ಜಾಗತಿಕ ಮನ್ನಣೆ. ಹಾಲಿವುಡ್‌ ನೆಲೆ ನಿಂತಿರುವ ಲಾಸ್‌ ಏಂಜಲೀಸ್‌ನಲ್ಲಿರುವ ʼಅಕಾಡೆಮಿ ಆಫ್‌ ಮೋಷನ್‌ ಪಿಕ್ಚರ್‌ ಆರ್ಟ್ಸ್‌ ಆಂಡ್‌ ಸೈನ್ಸಸ್‌ʼ ಈ ಪ್ರಶಸ್ತಿಯನ್ನು ಕೊಡಮಾಡುತ್ತದೆ. 1927ರಲ್ಲಿ ಈ ಸಂಸ್ಥೆ ಅಸ್ತಿತ್ವಕ್ಕೆ ಬಂತು. 1929ರಿಂದ ಅಕಾಡೆಮಿ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಈ ಪುರಸ್ಕಾರಗಳಿಗೆ ಈಗ 95 ವರ್ಷ.

ಆಸ್ಕರ್‌ ಎಂಬ ಹೆಸರು ಹೇಗೆ ಬಂತು?

ಈ ಕುರಿತು ಒಮ್ಮತದ ಅಭಿಪ್ರಾಯವಿಲ್ಲ. ಅಕಾಡೆಮಿ ಲೈಬ್ರೇರಿಯನ್‌ ಮಾರ್ಗರೆಟ್‌ ಹೆರ್ರಿಕ್‌, ತನ್ನ ಅಂಕಲ್‌ ಆಸ್ಕರ್‌ನನ್ನು ಈ ಪ್ರಶಸ್ತಿ ಮೂರ್ತಿ ಹೋಲುತ್ತದೆ ಎಂದಳೆಂದೂ, ನಟಿ ಬೆಟ್ಟಿ ಡೇವಿಸ್‌ ತನ್ನ ಗಂಡ ಹರ್ಮನ್‌ ಆಸ್ಕರ್‌ ನೆಲ್ಸನ್‌ನ ಬೆನ್ನನ್ನು ಈ ಮೂರ್ತಿ ಹೋಲುತ್ತದೆ ಎಂದು ಹೇಳಿದಳೆಂದೂ, ಅಂಕಣಕಾರ ಸಿಡ್ನಿ ಸ್ಕೋಲ್ಸ್‌ಕಿ ಮೊದಲ ಬಾರಿಗೆ ಪ್ರಶಸ್ತಿಯನ್ನು ಹಾಗೆ ಕರೆದನೆಂದೂ- ಮೂರು ಮೂರು ಕತೆಗಳಿವೆ. ಯಾವುದು ನಿಜವೋ ತಿಳಿಯದು. ಬಹುಶಃ ಮೂರೂ ಸತ್ಯವಿರಬಹುದು.

ಪ್ರಶಸ್ತಿಗೆ ಪರಿಗಣನೆ ಹೇಗೆ?

ಪ್ರತಿ ವರ್ಷ ಜನವರಿ ಒಂದರಿಂದ ಡಿಸೆಂಬರ್‌ ಅಂತ್ಯದವರೆಗೆ ಚಿತ್ರಗಳು, ಸಾಕ್ಷ್ಯಚಿತ್ರಗಳು ಮತ್ತು ಆನಿಮೇಟೆಡ್‌ ಚಿತ್ರಗಳನ್ನು ಆ ವರ್ಷದ ಅಕಾಡೆಮಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುತ್ತದೆ. ಚಲನಚಿತ್ರಗಳ ನಿರ್ಮಾಪಕರು, ನಿರ್ದೇಶಕರು, ನಟರು, ತಂತ್ರಜ್ಞರು, ಮತ್ತು ಆಯಾ ದೇಶದ ಸರ್ಕಾರಿ ಚಲನಚಿತ್ರ ಮಾಧ್ಯಮ ನಿಯಂತ್ರಣ ಸಂಸ್ಥೆಗಳು ಇದಕ್ಕೆ ಅರ್ಜಿ ಸಲ್ಲಿಸಬಹುದು. ಇದು ಮೊದಲ ಸುತ್ತು. ಇವುಗಳನ್ನು ಸಾವಿರಾರು ಮಂದಿ ವೀಕ್ಷಿಸಿ ಪರಿಶೀಲಿಸಿದ ಬಳಿಕ ಮೊದಲ ಸುತ್ತಿಗೆ ಆಯ್ಕೆ ಮಾಡಲಾಗುತ್ತದೆ. ಅನಂತರ ಚಿತ್ರಗಳು ನಾಮನಿರ್ದೇಶನ ಪಟ್ಟಿಗೆ ಬರುತ್ತವೆ.

ಯಾವೆಲ್ಲಾ ವಿಭಾಗಗಳಿವೆ?

ಸದ್ಯ ಆಸ್ಕರ್‌ ಪ್ರಶಸ್ತಿಯಲ್ಲಿ 24 ಅತ್ಯುತ್ತಮ ವಿಭಾಗಗಳಿವೆ. ಅವು ಹೀಗಿವೆ:

  • ಅತ್ಯುತ್ತಮ ಚಿತ್ರ
  • ಅತ್ಯುತ್ತಮ ನಟ
  • ಅತ್ಯುತ್ತಮ ನಟಿ
  • ಅತ್ಯುತ್ತಮ ಪೋಷಕ ನಟ
    ಅತ್ಯುತ್ತಮ ಪೋಷಕ ನಟಿ
    ಅತ್ಯುತ್ತಮ ನಿರ್ದೇಶನ
    ಅತ್ಯುತ್ತಮ ಮೂಲ ಚಿತ್ರಕಥೆ
    ಅತ್ಯುತ್ತಮ ಅಳವಡಿಸಿದ ಚಿತ್ರಕಥೆ
    ಅತ್ಯುತ್ತಮ ಛಾಯಾಗ್ರಹಣ
    ಅತ್ಯುತ್ತಮ ನಿರ್ಮಾಣ ವಿನ್ಯಾಸ
    ಅತ್ಯುತ್ತಮ ಸಂಕಲನ
    ಅತ್ಯುತ್ತಮ ಮೂಲ ಸ್ಕೋರ್
    ಅತ್ಯುತ್ತಮ ಮೂಲ ಹಾಡು
    ಅತ್ಯುತ್ತಮ ವಸ್ತ್ರ ವಿನ್ಯಾಸ
    ಅತ್ಯುತ್ತಮ ಮೇಕಪ್ ಮತ್ತು ಹೇರ್ ಸ್ಟೈಲಿಂಗ್
    ಅತ್ಯುತ್ತಮ ಧ್ವನಿ ಮಿಶ್ರಣ
    ಅತ್ಯುತ್ತಮ ಧ್ವನಿ ಸಂಪಾದನೆ
    ಅತ್ಯುತ್ತಮ ದೃಶ್ಯ ಪರಿಣಾಮಗಳು
    ಅತ್ಯುತ್ತಮ ವಿದೇಶಿ ಭಾಷೆಯ ಚಲನಚಿತ್ರ
    ಅತ್ಯುತ್ತಮ ಅನಿಮೇಟೆಡ್ ಚಲನಚಿತ್ರ
    ಅತ್ಯುತ್ತಮ ಅನಿಮೇಟೆಡ್ ಕಿರುಚಿತ್ರ
    ಅತ್ಯುತ್ತಮ ಲೈವ್-ಆಕ್ಷನ್ ಕಿರುಚಿತ್ರ
    ಅತ್ಯುತ್ತಮ ಸಾಕ್ಷ್ಯಚಿತ್ರ
    ಅತ್ಯುತ್ತಮ ಸಾಕ್ಷ್ಯಚಿತ್ರ ಕಿರುಚಿತ್ರ

ಆಯ್ಕೆಗೆ ನಿಯಮಗಳೇನು?

2022ರಲ್ಲಿ ಬಿಡುಗಡೆಯಾದ ಮತ್ತು ಚಿತ್ರಮಂದಿರಗಳಲ್ಲಿ ಪ್ರದರ್ಶಿತವಾದ ಚಿತ್ರಗಳನ್ನು ಪ್ರಶಸ್ತಿ ಸುತ್ತಿಗೆ ಆಯ್ಕೆ ಮಾಡಿ ಎಂದು ಚಿತ್ರದ ನಿರ್ಮಾಪಕರು, ನಿರ್ದೇಶಕರು, ನಟರು, ತಂತ್ರಜ್ಞರು ಅರ್ಜಿ ಸಲ್ಲಿಸಬಹುದು. ಅಕಾಡೆಮಿ ಅವಾರ್ಡ್‌ನ ಜಾಲತಾಣದಲ್ಲೇ ಹೀಗೆ ಅರ್ಜಿ ಸಲ್ಲಿಸಬಹುದು. ಅರ್ಜಿಯ ಜತೆಗೆ ಚಿತ್ರದ ಡಿಜಿಟಲ್‌ ಕಾಪಿಯನ್ನೂ ಕಳಿಸಬೇಕಾಗುತ್ತದೆ. ಯಾವ ವಿಭಾಗದಲ್ಲಿ ಸ್ಪರ್ಧೆ ಎಂಬುದನ್ನೂ ಅದರಲ್ಲಿ ತಿಳಿಸಬೇಕು.

ಅಕಾಡೆಮಿಯಲ್ಲಿ ಈಗ ಸುಮಾರು 10,000 ಸದಸ್ಯರಿದ್ದಾರೆ. ಇದರಲ್ಲಿ ಸಿನಿಮಾಗೆ ಸಂಬಂಧಿಸಿದ ಎಲ್ಲಾ ಕ್ಷೇತ್ರಗಳು ತಜ್ಞರು ಇರುತ್ತಾರೆ. ಈ ಎಲ್ಲಾ ಸದಸ್ಯರು ಚಿತ್ರವನ್ನು ವೀಕ್ಷಿಸುತ್ತಾರೆ. ನಾಮನಿರ್ದೇಶನ ಮಾಡಬಹುದು ಎಂಬ ಭಾವಿಸಿದ ಚಿತ್ರವನ್ನು ಅಕಾಡೆಮಿಗೆ ಶಿಫಾರಸು ಮಾಡುತ್ತಾರೆ. ಇದರ ಆಧಾರದಲ್ಲಿ ಅಕಾಡೆಮಿಯು ಒಂದು ರಿಮೈಂಡರ್‌ ಪಟ್ಟಿಯನ್ನು ಸಿದ್ಧಪಡಿಸುತ್ತದೆ.

ಈ ರಿಮೈಂಡರ್‌ ಪಟ್ಟಿಯಲ್ಲಿರುವ ಚಿತ್ರಗಳನ್ನು ನಿಮಾನಿರ್ದೇಶನ ಮಾಡಲು ಪರಿಗಣಿಸಲಾಗುತ್ತದೆ. ಚಿತ್ರವನ್ನು ಯಾವ ವಿಭಾಗದಲ್ಲಿ ಪರಿಗಣಿಸಬಹುದು ಎಂದು ಅರ್ಜಿಯಲ್ಲಿ ಪರಿಗಣಿಸಲಾಗುತ್ತ ಅಂಥ ವಿಭಾಗದ ತಜ್ಞರಿಗೆ ಅದನ್ನ ವೀಕ್ಷಣೆಗೆ ನೀಡಲಾಗುತ್ತದೆ. ಆಯಾ ವಿಭಾಗದ ಪರಿಣತರು ಚಿತ್ರವನ್ನು ವೀಕ್ಷಿಸುತ್ತಾರೆ. ಆದ್ಯತೆಯ ಮೇರೆಗೆ ತಮ್ಮ ಮತ ಚಲಾಯಿಸುತ್ತಾರೆ. ಅತ್ಯಧಿಕ ಮತ ಪಡೆದ ಚಿತ್ರಗಳನ್ನು ನಾಮನಿರ್ದೇಶನಕ್ಕೆ ಪರಿಗಣಿಸಲಾಗುತ್ತದೆ. ಹೀಗೆ ನಾಮನಿರ್ದೇಶನಗೊಳ್ಳುವ ಚತ್ರಗಳ ಹೆಸರು ಜನವರಿ 24ರಂದು ಪ್ರಕಟವಾಗಲಿದೆ.

ಅಂತಿಮ ಸುತ್ತು

ನಾಮನಿರ್ದೇಶನಗೊಂಡ ಚಿತ್ರಗಳನ್ನು ತಜ್ಞರ ಸಮಿತಿ ಮತ್ತೊಮ್ಮೆ ವೀಕ್ಷಿಸುತ್ತದೆ. ಅವುಗಳಲ್ಲಿ ಅತ್ಯುತ್ತಮವಾದುದನ್ನು ಆದ್ಯತೆಯ ಮತದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂದರೆ ಪ್ರಶಸ್ತಿ ಸುತ್ತಿನಲ್ಲಿ ಐದು ಚಿತ್ರಗಳಿದ್ದರೆ, ತಮ್ಮ ಪ್ರಥಮ ಆಯ್ಕೆಯ ಚಿತ್ರಕ್ಕೆ ಮೊದಲ ಮತ, ನಂತರ ಎರಡನೆಯದು- ಹೀಗೆ. ಈ ವೀಕ್ಷಣೆ ಮತ್ತು ಮತದಾನಕ್ಕೆ ಒಂದು ತಿಂಗಳಿಗೂ ಹೆಚ್ಚು ಕಾಲ ಬೇಕು. ಇವೆಲ್ಲ ಪ್ರಕ್ರಿಯೆಯೂ ಗುಪ್ತವಾಗಿ ನಡೆಯುತ್ತದೆ. ಹೀಗೆ ಗುಪ್ತವಾಗಿ ಸಂಗ್ರಹವಾದ ಮತಗಳನ್ನು ಅಕಾಡೆಮಿಯ ಇಬ್ಬರು ಅಧಿಕಾರಿಗಳು ಕ್ರೋಡೀಕರಿಸಿ ಅಂತಿಮ ಫಲಿತಾಂಶ ಸಿದ್ಧಪಡಿಸಿರುತ್ತಾರೆ. ಪ್ರಶಸ್ತಿ ಘೋಷಣೆಯಾಗುವವರೆಗೂ ಈ ಇಬ್ಬರನ್ನು ಹೊರತುಪಡಿಸಿ ಇನ್ಯಾರಿಗೂ ವಿಜೇತರು ಯಾರೆಂದು ತಿಳಿದಿರುವುದಿಲ್ಲ. ಸಾಕ್ಷ್ಯಚಿತ್ರ, ಆನಿಮೇಟೆಡ್‌ ಚಿತ್ರಗಳನ್ನೂ ಹೀಗೇ ಸೆಲೆಕ್ಟ್‌ ಮಾಡಲಾಗುತ್ತದೆ.

ಅತ್ಯುತ್ತಮ ಚಿತ್ರ- ಅತ್ಯುತ್ತಮ ವಿದೇಶಿ ಭಾಷೆಯ ಚಿತ್ರ

ಆಸ್ಕರ್‌ ಪ್ರಶಸ್ತಿಯಲ್ಲಿ ʼಅತ್ಯುತ್ತಮ ಚಿತ್ರʼ ಎಂದರೆ ಹಾಲಿವುಡ್‌ ಚಿತ್ರ ಮಾತ್ರ. ಅಕಾಡೆಮಿಯ ಸಕ್ರಿಯ ಮತ್ತು ಆಜೀವ ಸದಸ್ಯರು ಮತದಾನದ ಮೂಲಕ ಇದಕ್ಕೆ ತಮ್ಮ ಆಯ್ಕೆಯನ್ನು ತಿಳಿಸುತ್ತಾರೆ. ಬೇರೆ ಬೇರೆ ವಿಭಾಗಗಳಿಗೆ ಆಯಾ ವಿಭಾಗದ ಪರಿಣಿತರು ಮತ ಹಾಕಿದರೆ, ಈ ವಿಭಾಗಕ್ಕೆ ಮಾತ್ರ ಎಲ್ಲ ಸದಸ್ಯರೂ ಮತ ಹಾಕುತ್ತಾರೆ. ಈ ಚಿತ್ರವು ಅಮೆರಿಕದಲ್ಲಿ ನಿರ್ಮಾಣವಾಗಿರಬೇಕು ಹಾಗೂ ಅಲ್ಲಿನ ಚಲನಚಿತ್ರ ಮಂದಿರಗಳಲ್ಲಿ ಪ್ರದರ್ಶನಗೊಂಡಿರುವುದು ಕಡ್ಡಾಯ.

ʼಅತ್ಯುತ್ತಮ ವಿದೇಶಿ ಭಾಷೆಯ ಚಿತ್ರʼ ಪುರಸ್ಕಾರ ಹಾಲಿವುಡ್‌ ಹೊರತುಪಡಿಸಿ ಇತರ ಎಲ್ಲ ಭಾಷೆಗಳಿಗೆ ಮೀಸಲು. ಇಲ್ಲಿ ಸ್ಪರ್ಧೆ ಹೆಚ್ಚು. ಅಮೆರಿಕ ಅಲ್ಲದೆ ಬೇರೆ ದೇಶ, ಭಾಷೆಗಳಲ್ಲಿ ನಿರ್ಮಾಣವಾದ ಸಿನಿಮಾಗಳನ್ನು ಈ ವಿಭಾಗಕ್ಕೆ ಪರಿಗಣಿಸಲಾಗುತ್ತದೆ. ಅವು ಅಮೆರಿಕದ ಚಿತ್ರಮಂದಿರಗಳಲ್ಲಿ ಪ್ರದರ್ಶಿತವಾಗಿರಬೇಕು ಎಂದೇನೂ ಇಲ್ಲ. ಆದರೆ 40 ನಿಮಿಷಕ್ಕೂ ಹೆಚ್ಚು ಪ್ರದರ್ಶನಾವಧಿ ಹೊಂದಿರುವ ಫೀಚರ್‌ ಫಿಲಂಗಳಾಗಿರಬೇಕು. ಇಂಗ್ಲಿಷ್‌ ಸಬ್‌ಟೈಟಲ್‌ ಇರಬೇಕು.

ಎಷ್ಟು ಭಾರತೀಯರಿಗೆ ಬಂದಿದೆ?

ಭಾರತದ ಐವರು ಸಾಧಕರಿಗೆ ಮಾತ್ರ ಈವರೆಗೆ ಈ ಪ್ರಶಸ್ತಿ ಲಭಿಸಿದೆ. ೧೯೮೨ರಲ್ಲಿ ʼಗಾಂಧಿʼ ಚಿತ್ರದ ವಸ್ತ್ರವಿನ್ಯಾಸಕ್ಕೆ, ಅತ್ಯುತ್ತಮ ವಸ್ತ್ರವಿನ್ಯಾಸಕಾರ ಪುರಸ್ಕಾರವನ್ನು ಭಾನು ಅಥೈಯಾ ಪಡೆದರು. ಅವರೇ ಇದನ್ನು ಪಡೆದ ಮೊದಲಿಗರು. ೧೯೯೨ರಲ್ಲಿ ಜೀವಮಾನ ಸಾಧನೆಯ ಪ್ರಶಸ್ತಿಯನ್ನು ನಿರ್ದೇಶಕ ಸತ್ಯಜಿತ್ ರೇ ಪಡೆದುಕೊಂಡರು. ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಮತ್ತು ಗೀತಕಾರ ಗುಲ್ಜಾರ್ ʼಸ್ಲಂ ಡಾಗ್‌ ಮಿಲಿಯನೇರ್‌ʼ ಚಿತ್ರದ ʼಜೈ ಹೋʼ ಹಾಡಿಗೆ ʼಅತ್ಯುತ್ತಮ ಮೂಲ ಗೀತೆʼ ಪ್ರಶಸ್ತಿಯನ್ನು ಹಂಚಿಕೊಂಡರು. ಇದೇ ಚಿತ್ರದಲ್ಲಿನ ʼಅತ್ಯುತ್ತಮ ಧ್ವನಿ ಮಿಶ್ರಣʼಕ್ಕೆ ರೆಸೂಲ್ ಪೂಕುಟ್ಟಿ ಆಸ್ಕರ್ ತೆಗೆದುಕೊಂಡರು.

ಭಾರತದ ಈ ಹಿಂದಿನ ಯಾವ ಚಿತ್ರ ಆಸ್ಕರ್‌ಗೆ ಹೋಗಿತ್ತು?

ಆಸ್ಕರ್‌ ಮೊದಲ ಸುತ್ತಿಗೆ ಭಾರತದ ಅನೇಕ ಸಿನಿಮಾಗಳು ಹೋಗಿವೆ. ಆದರೆ ಅಂತಿಮ ಸುತ್ತಿಗೆ ನಾಮನಿರ್ದೇಶನಗೊಂಡ ಚಿತ್ರಗಳು ಕೇವಲ ಮೂರು- ಮದರ್‌ ಇಂಡಿಯಾ, ಸಲಾಂ ಬಾಂಬೆ ಹಾಗೂ ಲಗಾನ್. ಆಸ್ಕರ್‌ನ‌ ನಾಮನಿರ್ದೇಶನ ಸುತ್ತಿಗೆ ಹೋಗುವುದೇ ಬಹು ದೊಡ್ಡ ಸಾಧನೆಯೆನಿಸಿದೆ.‌

ಇದನ್ನೂ ಓದಿ | Oscar award | ಆಸ್ಕರ್‌ ಪ್ರಶಸ್ತಿ ಕಣದಲ್ಲಿ ಕನ್ನಡದ ಕಾಂತಾರ, ವಿಕ್ರಾಂತ್‌ ರೋಣ | ಇನ್ಯಾವ ಸಿನಿಮಾಗಳಿವೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜ್ಞಾನ

Nuclear Test In Pokhran: ಭಾರತ ಮೊದಲ ಪರಮಾಣು ಪರೀಕ್ಷೆ ನಡೆಸಿ ಇಂದಿಗೆ 50 ವರ್ಷ; ಏನಿದು ಸ್ಮೈಲಿಂಗ್‌ ಬುದ್ಧ?

ಭಾರತ ಪರಮಾಣು ಶಕ್ತಿ ರಾಷ್ಟ್ರವಾಗಿ ಇಂದಿಗೆ 50 ವರ್ಷ. ಇಂದಿಗೆ ಸುಮಾರು 50 ವರ್ಷಗಳ ಹಿಂದೆ ಭಾರತ ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯನ್ನು (Nuclear Test In Pokhran) ನಡೆಸಿತ್ತು. ಈ ಕುರಿತ ಕುತೂಹಲಕರ ಹಿನ್ನೋಟ ಇಲ್ಲಿದೆ.

VISTARANEWS.COM


on

By

Nuclear test at Pokhran
Koo

ಇಂದಿಗೆ 50 ವರ್ಷಗಳ ಹಿಂದೆ ಭಾರತದ (India) ಇತಿಹಾಸದಲ್ಲಿ ಒಂದು ಅಭೂತಪೂರ್ವ ಕ್ಷಣ ದಾಖಲಾಗಿತ್ತು. ಅದುವೇ ಅಣು ಪರೀಕ್ಷೆ. ಪೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆ (Nuclear Test In Pokhran) ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಆಗಿನ ಪ್ರಧಾನಿಯಾಗಿದ್ದ (Prime Minister) ಇಂದಿರಾ ಗಾಂಧಿಯವರು (Indira gandhi) 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ (BARC) ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಭಾರತ ಇಂದು ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯ 50ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಅಂದಿನ ಪರೀಕ್ಷೆ ಭಾರತವನ್ನು ಪರಮಾಣು ಶಕ್ತಿಯನ್ನಾಗಿ ರೂಪಿಸಿತು.

ಸ್ಮೈಲಿಂಗ್ ಬುದ್ಧ ಹೆಸರು ನೀಡಿದ್ದು ಯಾಕೆ?

ಈ ಪರೀಕ್ಷೆಗೆ ‘ಸ್ಮೈಲಿಂಗ್ ಬುದ್ಧ’ ಎಂಬ ಸಂಕೇತನಾಮವನ್ನು ನೀಡಲಾಯಿತು. 1974ರ ಮೇ 18ರಂದು ಆ ವರ್ಷದ ಬುದ್ಧ ಪೂರ್ಣಿಮೆಯಂದು ಪರೀಕ್ಷೆಯನ್ನು ನಡೆಸಲಾಗಿದ್ದರಿಂದ ಈ ಹೆಸರನ್ನು ಆಯ್ಕೆ ಮಾಡಲಾಯಿತು. “ಬುದ್ಧ ಅಂತಿಮವಾಗಿ ಮುಗುಳ್ನಕ್ಕ” ಎಂಬುದು ಭಾರತದ ಪ್ರಧಾನ ಪರಮಾಣು ಸಂಶೋಧನಾ ಸಂಸ್ಥೆ ಭಾಭಾ ಪರಮಾಣು ಸಂಶೋಧನಾ ಕೇಂದ್ರದ (BARC) ನಿರ್ದೇಶಕ ರಾಜಾ ರಾಮಣ್ಣ ಅವರು ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂದೇಶವನ್ನು ರವಾನಿಸಿದ್ದರು!


ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಹೊಂದಿರದ ರಾಷ್ಟ್ರವೊಂದು ನಡೆಸಿದ ಮೊದಲ ಪರಮಾಣು ಪರೀಕ್ಷೆ ಇದಾಗಿದೆ.

ಪೋಖ್ರಾನ್‌ನಲ್ಲಿ ಸ್ಫೋಟಿಸಿದ ಸಾಧನದ ಬಗ್ಗೆ ಚರ್ಚೆಯಾಗಿದ್ದರೂ, ಇದು ಸುಮಾರು 8- 12 ಕಿಲೋ ಟನ್‌ಗಳಷ್ಟು ಟಿಎನ್‌ಟಿ (ಪರಮಾಣು ಪರೀಕ್ಷೆ ಮಾಪನ) ಎಂದು ನಂಬಲಾಗಿದೆ. ಪರೀಕ್ಷೆಯ ಪ್ರಮುಖ ಅಂಶವೆಂದರೆ ಭಾರತವು ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಗುಪ್ತಚರ ಸಂಸ್ಥೆಗಳ ಪತ್ತೆಯನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದು. ಇಂತಹ ಪರೀಕ್ಷೆಗಳು ಪರಮಾಣು ಪ್ರಸರಣಕ್ಕೆ ಕಾರಣವಾಗಬಹುದು ಎಂದು ಹೇಳಿದ ಅಮೆರಿಕದಂತಹ ರಾಷ್ಟ್ರದ ನಿರ್ಬಂಧಗಳ ಸರಣಿಯನ್ನು ದೇಶವು ಎದುರಿಸಿತು.


ಎರಡು ವರ್ಷಗಳ ತಯಾರಿ

ಈ ಪರೀಕ್ಷೆಯನ್ನು ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಇಂದಿರಾ ಗಾಂಧಿಯವರು 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಇದನ್ನೂ ಓದಿ: Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

ಪೋಖ್ರಾನ್-II ಪರೀಕ್ಷೆ

1974ರ ಅನಂತರ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ 1998ರಲ್ಲಿ ಭಾರತವು ಅದೇ ಸ್ಥಳದಲ್ಲಿ ಪೋಖ್ರಾನ್- II ಹೆಸರಿನಲ್ಲಿ ಮತ್ತೊಂದು ಪರಮಾಣು ಪರೀಕ್ಷೆ ನಡೆಸಿತು. ಈ ಪರೀಕ್ಷೆ ಮೇ 1998ರಲ್ಲಿ ಪೋಖ್ರಾನ್‌ನಲ್ಲಿ ಐದು ಪರಮಾಣು ಸ್ಫೋಟಗಳ ಸರಣಿಯನ್ನು ಕಂಡವು. ಪೋಖ್ರಾನ್-II ಪರೀಕ್ಷೆಗಳ ವಾರ್ಷಿಕೋತ್ಸವದ ನೆನಪಿಗಾಗಿ ಪ್ರತಿ ವರ್ಷ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. 2020ರಿಂದ ಭಾರತವು 1974ರ ಪೋಖ್ರಾನ್ ಪರೀಕ್ಷೆಗಳ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಾರಂಭಿಸಿತ್ತು.

Continue Reading

ರಾಜಕೀಯ

Prime Minister Of India: ಸುದೀರ್ಘ ಕಾಲ ಪ್ರಧಾನಿಯಾಗಿದ್ದ ನೆಹರೂ, ಇಂದಿರಾ ದಾಖಲೆಯನ್ನು ಮೋದಿ ಮುರಿಯಲು ಸಾಧ್ಯವೆ?

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನ ಮಂತ್ರಿ (Prime Minister Of India) ಸ್ಥಾನವನ್ನು ಅಲಂಕರಿಸಿದ್ದಾರೆ. ಅವರಲ್ಲಿ ಕೆಲವರು ಮಾತ್ರ ಸುದೀರ್ಘಾವಧಿಗೆ ಪ್ರಧಾನಿಯಾಗಿದ್ದರು. ಯಾರು ಎಷ್ಟು ಅವಧಿಗೆ ಪ್ರಧಾನಮಂತ್ರಿಯಾಗಿದ್ದರು? ಈ ಕುರಿತ ದಾಖಲೆ ಇಲ್ಲಿದೆ.

VISTARANEWS.COM


on

By

Prime Minister of India
Koo

ಪ್ರತಿ ಬಾರಿಯೂ ಲೋಕಸಭಾ ಚುನಾವಣೆ (Lok sabha election) ಘೋಷಣೆಯಾದ ಬಳಿಕ ಮುಂದಿನ ಪ್ರಧಾನಿ (Prime Minister Of India) ಯಾರಾಗಬಹುದು ಎನ್ನುವ ಕುತೂಹಲವಂತೂ ಇದ್ದೇ ಇರುತ್ತದೆ.

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರೆಂದರೆ ಜವಾಹರ್ ಲಾಲ್ ನೆಹರೂ (Jawaharlal Nehru) , ಲಾಲ್ ಬಹಾದ್ದೂರ್ ಶಾಸ್ತ್ರೀ (Lal Bahadur Shastri), ಇಂದಿರಾ ಗಾಂಧಿ (Indira gandhi), ಮೊರಾರ್ಜಿ ದೇಸಾಯಿ (morarji desai), ಚರಣ್ ಸಿಂಗ್ (charan singh), ರಾಜೀವ್ ಗಾಂಧಿ (rajiv gandhi), ವಿಶ್ವನಾಥ್ ಪ್ರತಾಪ್ ಸಿಂಗ್ (vishwanath pratap singh), ಚಂದ್ರಶೇಖರ್ (chandra shekhar) , ಪಿ.ವಿ. ನರಸಿಂಹ ರಾವ್ (p.v. narasimha rao), ಅಟಲ್ ಬಿಹಾರಿ ವಾಜಪೇಯಿ (atal bihari vajpayee), ಎಚ್.ಡಿ. ದೇವೇಗೌಡ (h.d. deve gowda), ಇಂದರ್ ಕುಮಾರ್ ಗುಜ್ರಾಲ್ (inder kumar gujral), ಮನ್ ಮೋಹನ್ ಸಿಂಗ್ (manmohan singh), ನರೇಂದ್ರ ಮೋದಿ (narendra modi). ಇವರಲ್ಲಿ ಕೆಲವರು ಮಾತ್ರ ದೀರ್ಘಾವಧಿಗೆ ಪ್ರಧಾನಿ ಯಾಗಿದ್ದರು. ಅವರು ಯಾರು? ಇಲ್ಲಿದೆ ಮಾಹಿತಿ.


ಇಂದಿರಾ ಗಾಂಧಿ (1966ರಿಂದ1977, 1980ರಿಂದ1984)

ಜವಾಹರಲಾಲ್ ನೆಹರೂ ಅವರ ಪುತ್ರಿ ಇಂದಿರಾ ಗಾಂಧಿ ಒಟ್ಟು 15 ವರ್ಷ 350 ದಿನಗಳ ಕಾಲ ಪ್ರಧಾನಿಯಾಗಿದ್ದರು. 1975ರಲ್ಲಿ ತುರ್ತುಪರಿಸ್ಥಿತಿಯ ಜಾರಿ, ಆಪರೇಷನ್‌ ಬ್ಲೂ ಸ್ಟಾರ್‌ ಕಾರ್ಯಾಚರಣೆ ಸೇರಿದಂತೆ ಹಲವು ದಿಟ್ಟ ಮತ್ತು ವಿವಾದಾತ್ಮಕ ನಿರ್ಧಾರಗಳಿಗೆ ಹೆಸರುವಾಸಿಯಾಗಿದ್ದರು. ತುರ್ತು ಪರಿಸ್ಥಿತಿ ಹೇರಿಕೆ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದು ಇಂದಿರಾ ಗಾಂಧಿ 1977ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಇಂದಿರಾ ಗಾಂಧಿ ಅವರು ಹೀನಾಯ ಹಿನ್ನಡೆ ಕಂಡು ಅಧಿಕಾರ ತ್ಯಜಿಸಬೇಕಾಯಿತು. ಆದರೆ 1980ರಲ್ಲಿ ಅವರು ಮತ್ತೆ ಭರ್ಜರಿ ಬಹುಮತದಿಂದ ಅಧಿಕಾರಕ್ಕೆ ಮರಳಿದರು. ಆದರೆ 1984ರಲ್ಲಿ ಸಿಖ್‌ ಭಯೋತ್ಪಾದನೆಗೆ ಬಲಿಯಾದರು.


ಅಟಲ್ ಬಿಹಾರಿ ವಾಜಪೇಯಿ (1996, 1998-2004)

ನುರಿತ ವಾಗ್ಮಿ ಮತ್ತು ದೂರದೃಷ್ಟಿಯ ನಾಯಕ, ಅಟಲ್ ಬಿಹಾರಿ ವಾಜಪೇಯಿ ಅವರು ಮೂರು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಒಮ್ಮೆ 13 ದಿನ, ಮತ್ತೊಮ್ಮೆ 13 ತಿಂಗಳಷ್ಟೇ ಅವರು ಪ್ರಧಾನಿಯಾಗಿದ್ದರು. ಆದರೆ 1998ರಿಂದ 2004ರ ಅವರು ಪೂರ್ಣಾವಧಿ ಪ್ರಧಾನಿಯಾಗಿದ್ದರು. ಒಂದೆಡೆ ಪರಮಾಣು ಪರೀಕ್ಷೆಯ ದಿಟ್ಟತನ ಮತ್ತು ಇನ್ನೊಂದೆಡೆ ಪಾಕಿಸ್ತಾನದೊಂದಿಗೆ ಶಾಂತಿಯನ್ನು ಬೆಳೆಸುವ, ಸಂದರ್ಭ ಬಂದಾಗ ಅದಕ್ಕೆ ಬುದ್ಧಿ ಕಲಿಸುವ ಅವರ ಉಪಕ್ರಮಗಳಿಗಾಗಿ ವಾಜಪೇಯಿ ಸದಾ ನೆನಪಿನಲ್ಲಿರುತ್ತಾರೆ. ಹೆದ್ದಾರಿ ನಿರ್ಮಾಣದ ಕ್ರಾಂತಿ ನಡೆದಿದ್ದು ಅವರ ಕಾಲದಲ್ಲಿ.


ಮನಮೋಹನ್ ಸಿಂಗ್ (2004-2014)

ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದ ಮನಮೋಹನ್ ಸಿಂಗ್ ಅವರು ಒಟ್ಟು 10 ವರ್ಷಗಳ ಕಾಲ ಪ್ರಧಾನಿಯಾಗಿ ಸತತ ಎರಡು ಬಾರಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯು ಗಮನಾರ್ಹ ಆರ್ಥಿಕ ಸುಧಾರಣೆಗಳು ಮತ್ತು ಉದಾರೀಕರಣದ ಉಪಕ್ರಮಗಳಿಂದ ಗುರುತಿಸಲ್ಪಟ್ಟಿದೆ.


ನರೇಂದ್ರ ಮೋದಿ (2014ರಿಂದ ಈಗಿನವರೆಗೆ)

ಪ್ರಸ್ತುತ ಭಾರತದ ಪ್ರಧಾನಮಂತ್ರಿ ಆಗಿರುವ ನರೇಂದ್ರ ಮೋದಿ ಅವರು ಸತತ ಎರಡನೇ ಅವಧಿಯಲ್ಲಿದ್ದಾರೆ. ವರ್ಚಸ್ವಿ ನಾಯಕತ್ವಕ್ಕೆ ಹೆಸರುವಾಸಿಯಾದ ಅವರು ದೇಶದಲ್ಲಿ ಗಮನಾರ್ಹ ಸುಧಾರಣೆಗಳನ್ನು ತಂದಿದ್ದಾರೆ. ದೇಶ ಮತ್ತು ವಿದೇಶಗಳಲ್ಲಿ ಭಾರಿ ಜನಪ್ರಿಯತೆ ಗಳಿಸಿದ್ದಾರೆ. ಇದೇ ವೇಳೆ ಅವರನ್ನು ವಿರೋಧಿಸುವವರೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಸರ್ಜಿಕಲ್‌ ಸ್ಟ್ರೈಕ್‌ ಮೂಲಕ ಪಾಕಿಸ್ತಾನಕ್ಕೆ ನಡುವ ಹುಟ್ಟಿಸಿದ ಕೀರ್ತಿ ಖ್ಯಾತಿ ಇವರಿಗಿದೆ. ನೋಟ್‌ ಬ್ಯಾನ್‌, ಜಿಎಸ್‌ಟಿ ಜಾರಿಯಂಥ ಆರ್ಥಿಕ ಸುಧಾರಣೆ ಕ್ರಮಗಳನ್ನೂ ಕೈಗೊಂಡಿದ್ದಾರೆ. ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ವಿದೇಶಿ ನಾಯಕರೊಂದಿಗೆ ಮಾತುಕತೆ ನಡೆಸಿ ಶಾಂತಿ ನೆಲೆಸುವ ಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಎರಡನೇ ಅವಧಿಯು 2019ರಲ್ಲಿ ಪ್ರಾರಂಭವಾಯಿತು. ಮೂರನೇ ಅವಧಿಯಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಚುನಾವಣೆ ಪೂರ್ವ ಸಮೀಕ್ಷೆಗಳು ಹೇಳಿವೆ. ಆದರೆ ಮೋದಿ ಅವರು ಮೂರನೇ ಅವಧಿಯಲ್ಲಿ ಪ್ರಧಾನಿಯಾಗಿ ಪೂರ್ಣಾವಧಿ ಮುಗಿಸಿದರೂ ನೆಹರೂ ಮತ್ತು ಇಂದಿರಾ ಗಾಂಧಿ ಅವರ ಸುದೀರ್ಘ ಆಡಳಿತ ಅವಧಿಯ ದಾಖಲೆ ಹಾಗೆಯೇ ಮುಂದುವರಿಯುತ್ತದೆ. ಈ ದಾಖಲೆ ಮುರಿಯಬೇಕೆಂದರೆ ಮೋದಿ ನಾಲ್ಕನೇ ಬಾರಿಯೂ ಪ್ರಧಾನಿ ಆಗಬೇಕಾಗುತ್ತದೆ!

Continue Reading

ದೇಶ

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Uttar Pradesh: 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ 71 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2019ರಲ್ಲಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇದು ಕೇಂದ್ರದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಜಕೀಯ ಸ್ಥಿತಿಗತಿ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Uttar Pradesh
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಅದರಲ್ಲೂ, ದೇಶದ ಗಮನವೀಗ ಉತ್ತರ ಪ್ರದೇಶದ (Uttar Pradesh) ರಾಜಕೀಯ ಸ್ಥಿತಿಗತಿಗಳ ಮೇಲೆ ನಿಂತಿದೆ. ಮೊದಲಿನಿಂದಲೂ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಪಕ್ಷವು ಕೇಂದ್ರದಲ್ಲಿ ಅಧಿಕಾರ ಗಳಿಸುತ್ತದೆ ಎಂಬ ಮಾತಿದೆ. ಅದು ಬಹುತೇಕ ಚುನಾವಣೆಗಳಲ್ಲಿ ನಿಜವೂ ಆಗಿದೆ. ಉತ್ತರ ಪ್ರದೇಶದಲ್ಲಿ 80 ಲೋಕಸಭೆ ಕ್ಷೇತ್ರಗಳು ಇರುವುದೇ ಇದಕ್ಕೆ ಕಾರಣವಾಗಿದ್ದು, ಈ ಬಾರಿಯೂ ಕದನ ಕುತೂಹಲ ಮೂಡಿದೆ. ಹಾಗಾದರೆ, ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಸಮರ ಹೇಗೆ ನಡೆಯುತ್ತಿದೆ? ಯಾವ ಪಕ್ಷಕ್ಕೆ ಗೆಲುವಾಗಬಹುದು? ಯಾವ ಪಕ್ಷಗಳ ರಾಜಕೀಯ ತಂತ್ರಗಾರಿಕೆ ಹೇಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ರಾಮಮಂದಿರ ವಿಷಯ ಪ್ರಧಾನ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿರುವುದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರು ಅಬ್ಬರದ ಪ್ರಚಾರದ ವೇಳೆ ರಾಮಮಂದಿರ ನಿರ್ಮಾಣ, ಅದು ಹೇಗೆ ಉತ್ತರ ಪ್ರದೇಶದ ಅಸ್ಮಿತೆ ಎಂಬುದರ ಕುರಿತು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಇದರಿಂದಾಗಿ, ಪ್ರತಿಪಕ್ಷಗಳೂ ರಾಮನ ಜಪ ಮಾಡುವಂತಾಗಿದೆ. ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮೊದಲು ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೇಟಿ ನೀಡಿರುವುದೂ ಪ್ರಮುಖ ಅಂಶವಾಗಿದೆ. ಅಷ್ಟರಮಟ್ಟಿಗೆ, ಉತ್ತರ ಪ್ರದೇಶದಲ್ಲಿ ರಾಮಮಂದಿರವು ಲೋಕಸಭೆ ಚುನಾವಣೆಯ ಪ್ರಬಲ ವಿಷಯವಾಗಿದೆ.

Ram Mandir

ಕಾಂಗ್ರೆಸ್‌-ಎಸ್‌ಪಿ ಮೈತ್ರಿಯ ರಣತಂತ್ರವೇನು?

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳೂ ಆದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸೀಟುಗಳನ್ನು ಹಂಚಿಕೊಂಡು ಚುನಾವಣೆ ಕಣಕ್ಕಿಳಿದಿವೆ. 2019ರಲ್ಲಿ ಬಿಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಎಡವಿದ ಸಮಾಜವಾದಿ ಪಕ್ಷವು ಈ ಬಾರಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಶೇ.3ರಷ್ಟು ಮತ ಪಡೆದರೂ ಕಾಂಗ್ರೆಸ್‌ ಉತ್ಸಾಹದಿಂದ ಪ್ರಚಾರ ಕೈಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.20ರಷ್ಟು ಮುಸ್ಲಿಮರ ಮತಗಳಿದ್ದು, ಇವುಗಳನ್ನು ಪಡೆಯಲು ಸಮಾಜವಾದಿ ಪಕ್ಷವು ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ ಹಾಗೂ ಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳು, ನಾಯಕರು ಜತೆಗೂಡಿ ದಲಿತರು, ಮುಸ್ಲಿಮರು ಹಾಗೂ ಹಿಂದುಳಿದವರ ಮತಗಳನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಹೇಗೆ ಫಲ ನೀಡಲಿದೆ ಎಂಬುದು ಫಲಿತಾಂಶದ ಬಳಿಕವೇ ಗೊತ್ತಾಗಲಿದೆ.

ಮಾಯಾವತಿ ಮಾಡುವರೇ ಕಮಾಲ್?‌

ಬಹುಜನ ಸಮಾಜ ಪಕ್ಷದ ಮಾಯಾವತಿ ಅವರು ಒಂದು ಕಾಲದಲ್ಲಿ ಇಡೀ ರಾಜ್ಯಾದ್ಯಂತ ಪ್ರಾಬಲ್ಯ ಹೊಂದಿದ್ದರು. ಆದರೀಗ, ಅವರ ವರ್ಚಸ್ಸು, ಪಕ್ಷದ ಹಿಡಿತ ಸಡಿಲವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೇ.19.70ರಷ್ಟು ಮತಗಳನ್ನು ಪಡೆದರೂ ಬಿಎಸ್‌ಪಿ ಒಂದೇ ಒಂದು ಸೀಟು ಗೆದ್ದಿರಲಿಲ್ಲ. ಇನ್ನು, 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೂ 10 ಸೀಟುಗಳು ಮಾತ್ರ ಲಭಿಸಿದ್ದವು. ಇನ್ನು 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಮತ ಪ್ರಮಾಣವು ಶೇ.12.8ಕ್ಕೆ ಕುಸಿದಿದೆ. ಮುಸ್ಲಿಮರ ಮತಗಳು ಎಂದೋ ಬಿಎಸ್‌ಪಿಯಿಂದ ದೂರಾಗಿವೆ. ಈಗೇನಿದ್ದರೂ ದಲಿತರು, ಹಿಂದುಳಿದವರ ಮತಗಳೇ ಬಿಎಸ್‌ಪಿಯ ಆಧಾರವಾಗಿವೆ. ಇಷ್ಟಾದರೂ, ಟಕ್ಕರ್‌ ಕೊಡಲು ಮಾಯಾವತಿ ರೆಡಿಯಾಗಿದ್ದಾರೆ.

Mayavati

ಯೋಗಿ ಎಂಬ ಬಲಿಷ್ಠ ನಾಯಕ

ಫೈರ್‌ಬ್ರ್ಯಾಂಡ್‌ ನಾಯಕ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೇಶದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ನಂತರ ಬಿಜೆಪಿಯಲ್ಲಿ ಹೆಚ್ಚು ವರ್ಚಸ್ಸು ಇರುವ ನಾಯಕರಾಗಿದ್ದಾರೆ. ಹಾಗಾಗಿಯೇ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 109 ರ‍್ಯಾಲಿ ಸೇರಿ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಾಖಂಡ ಹಾಗೂ ಜಮ್ಮು-ಕಾಶ್ಮೀರದಲ್ಲಿ ಒಟ್ಟು 135 ಚುನಾವಣೆ ಸಮಾವೇಶಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ, 2017ರಿಂದಲೂ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿ ಅಪರಾಧವನ್ನು ನಿಯಂತ್ರಿಸುವ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿ ವರ್ಚಸ್ವಿ ನಾಯಕ ಎನಿಸಿದ್ದಾರೆ. ರಾಜ್ಯದಲ್ಲಿ ಇವರ ನಾಯಕತ್ವವೂ ಬಿಜೆಪಿಗೆ ವರದಾನವಾಗಿದೆ.

Yogi Adityanath

ಜಾತಿ ರಾಜಕಾರಣದ ಸಮೀಕರಣ

ಉತ್ತರ ಪ್ರದೇಶದಲ್ಲಿ ದಶಕಗಳಿಂದಲೂ ಚುನಾವಣೆಗಳಲ್ಲಿ ಜಾತಿವಾರು ಮತಗಳ ಸಮೀಕರಣವೇ ನಿರ್ಣಾಯಕವಾಗಿದೆ. 1990ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹಾಗೂ ಒಬಿಸಿ ಮತಗಳು ಬಿಜೆಪಿಯಿಂದ ದೂರವೇ ಇದ್ದವು. ಆದರೆ, 2014ರಿಂದ ರಾಜ್ಯದಲ್ಲಿ ಜಾಟವರ ಹೊರತಾದ ದಲಿತರು, ಯಾದವರ ಹೊರತಾದ ಒಬಿಸಿಯವರು ಬಿಜೆಪಿಯ ಹಿಂದುತ್ವ ರಾಜಕಾರಣಕ್ಕೆ ಬಲ ತುಂಬುತ್ತಿದ್ದಾರೆ. ಮೇಲ್ವರ್ಗದವರ ಮತಗಳು ಬಿಜೆಪಿಗೆ ಸಲೀಸಾಗಿ ಲಭಿಸಲಿವೆ. ಆದರೆ, ಜಾತಿ ಗಣತಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ, ಮೀಸಲಾತಿಯನ್ನು ಕಿತ್ತೊಗೆಯುತ್ತದೆ ಎಂದು ಪ್ರತಿಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿದ್ದು, ಈ ಅಂಶಗಳು ಯಾವ ರೀತಿಯ ಪರಿಣಾಮ ಬೀರಲಿವೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Continue Reading

ಆರೋಗ್ಯ

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

ಒಂದೂವರೆ ವರ್ಷದ ಬಾಲಕ ಸೊಂಟದ ಕೆಳಗಿನ ದೈಹಿಕ ಬಲವನ್ನು ಕಳೆದುಕೊಂಡಿದ್ದ. ಆತನ ಸಾಮಾನ್ಯ ಜೀವನ ನಡೆಸುವಂತೆ ಸಾಧ್ಯವಾಗಿಸಲು ಆತನಿಗೆ ಒಂದು ಚುಚ್ಚು ಮದ್ದು ನೀಡಲೇ ಬೇಕಿತ್ತು. ಇದರ ಮೌಲ್ಯ ಬರೋಬ್ಬರಿ 17.5 ಕೋಟಿ ರೂಪಾಯಿ. ತಂದೆ ತಾಯಿ ತಮ್ಮಿಂದ ಇದು ಸಾಧ್ಯವಾಗದು (Most costly medicine) ಎಂದು ಕೈಚೆಲ್ಲಿದ್ದರು. ಆದರೂ ಕೊನೆಯ ಪ್ರಯತ್ನವೆಂಬಂತೆ ಸಾರ್ವಜನಿಕರ ನೆರವು ಕೇಳಲು ಮುಂದಾಗಿ ಅದರಲ್ಲಿ ಯಶಸ್ವಿಯಾಗಿದ್ದಾರೆ.

VISTARANEWS.COM


on

By

Most costly medicine
Koo

ಜೈಪುರ: ಜನಪ್ರಿಯ ನಟ (actor), ಭಾರತ ತಂಡದ ಕ್ರಿಕೆಟಿಗ (cricketer), ವ್ಯಾಪಾರಿಗಳು (Vendor), ತರಕಾರಿ ಮಾರಾಟಗಾರರು ಮತ್ತು ಸಾಮಾನ್ಯ ಜನರು ಒಗ್ಗಟ್ಟಾಗಿ 22 ತಿಂಗಳ ಮಗುವೊಂದರ ಜೀವ ಉಳಿಸಲು ದುಬಾರಿ ಔಷಧ ಖರೀದಿಗಾಗಿ (Most costly medicine) ಹೊರಡಿರುವ ಹೃದಯಸ್ಪರ್ಶಿ ಕಥೆ ರಾಜಸ್ಥಾನದ (Rajasthan) ಜೈಪುರದಲ್ಲಿ (jaipur) ನಡೆದಿದೆ. ಈ ಔಷಧದ ಹಿನ್ನೆಲೆ ಕುತೂಹಲಕರವಾಗಿದೆ.

ಒಂದೂವರೆ ವರ್ಷದ ಬಾಲಕ ಸೊಂಟದ ಕೆಳಗಿನ ದೈಹಿಕ ಬಲವನ್ನು ಕಳೆದುಕೊಂಡಿದ್ದ. ಆತನ ಸಾಮಾನ್ಯ ಜೀವನ ನಡೆಸುವಂತೆ ಸಾಧ್ಯವಾಗಿಸಲು ಆತನಿಗೆ ಒಂದು ಚುಚ್ಚು ಮದ್ದು ನೀಡಲೇ ಬೇಕಿತ್ತು. ಇದರ ಮೌಲ್ಯ ಬರೋಬ್ಬರಿ 17.5 ಕೋಟಿ ರೂಪಾಯಿ. ತಂದೆ ತಾಯಿ ತಮ್ಮಿಂದ ಇದು ಸಾಧ್ಯವಾಗದು ಎಂದು ಕೈಚೆಲ್ಲಿದ್ದರು. ಆದರೂ ಕೊನೆಯ ಪ್ರಯತ್ನವೆಂಬಂತೆ ಸಾರ್ವಜನಿಕರ ನೆರವು ಕೇಳಲು ಮುಂದಾದರು.

ರಾಜಸ್ಥಾನ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನರೇಶ್ ಶರ್ಮಾ ಅವರ ಪುತ್ರ ಹೃದಯಾಂಶ್ ಶರ್ಮಾ ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಎಂಬ ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದನ್ನು ವಿಶ್ವದ ಅತ್ಯಂತ ದುಬಾರಿ ಔಷಧಿಗಳಲ್ಲಿ ಒಂದಾದ ಝೋಲ್ಗೆನ್ಸ್ಮಾ (Zolgensma) ಎಂಬ ಜೀನ್ ಥೆರಪಿ ಇಂಜೆಕ್ಷನ್‌ನೊಂದಿಗಿನ ಚಿಕಿತ್ಸೆಯಿಂದ ಮಾತ್ರ ಗುಣಪಡಿಸಬಹುದಾಗಿದೆ. ಇದರ ಬೆಲೆ 17.5 ಕೋಟಿ ರೂ.


ಚುಚ್ಚು ಮದ್ದು ನೀಡಲು ಗಡುವು

ಬಾಲಕ 20 ತಿಂಗಳ ಮಗುವಾಗಿದ್ದಾಗ ಫೆಬ್ರವರಿಯಲ್ಲಿ ರಾಜಸ್ಥಾನ ಪೊಲೀಸರು ಕಟ್ಟುನಿಟ್ಟಾದ ಗಡುವನ್ನು ಹೊಂದಿದ್ದ ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸಿದರು. ಏಕೆಂದರೆ ಮಗುವಿಗೆ 2 ವರ್ಷ ವಯಸ್ಸಿನವರೆಗೆ ಮಾತ್ರ ಈ ಚುಚ್ಚುಮದ್ದನ್ನು ನೀಡಬಹುದು.

ನಟ, ಕ್ರಿಕೆಟಿಗನ ಬೆಂಬಲ

ಇವರ ಈ ಅಭಿಯಾನಕ್ಕೆ ಕ್ರಿಕೆಟಿಗ ದೀಪಕ್ ಚಾಹರ್ ಮತ್ತು ನಟ ಸೋನು ಸೂದ್ ಅವರೂ ಬೆಂಬಲ ನೀಡಿದರು. ಅವರು ಸಾಮಾಜಿಕ ಮಾಧ್ಯಮದಲ್ಲಿ ಮನವಿಗಳನ್ನು ಪೋಸ್ಟ್ ಮಾಡಿದರು ಮತ್ತು ಜೈಪುರದಾದ್ಯಂತ ಜನರಿಂದ ಹಣವನ್ನು ಸಂಗ್ರಹಿಸುವ ಚಾಲನೆ ನೀಡಲಾಯಿತು.

ಹಣ್ಣು, ತರಕಾರಿ ಮಾರಾಟಗಾರರು, ವ್ಯಾಪಾರಿಗಳು ಸೇರಿದಂತೆ ಎಲ್ಲಾ ವರ್ಗಗಳ ಜನರಿಂದ ಹಣದ ಸಹಾಯ ಪಡೆಯಲಾಯಿತು. ವಿವಿಧ ಎನ್‌ಜಿಒಗಳು ಮತ್ತು ಸಾಮಾಜಿಕ ಸಂಸ್ಥೆಗಳು ಪ್ರಚಾರಕ್ಕಾಗಿ ಹಣವನ್ನು ಸಂಗ್ರಹಿಸಲು ಸಹಾಯ ಮಾಡಿದವು.


ಮೂರು ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

ರಾಜಸ್ಥಾನದಲ್ಲಿ ಈ ಪ್ರಮಾಣದಲ್ಲಿ ಕ್ರೌಡ್‌ಫಂಡಿಂಗ್ ನಡೆಯುತ್ತಿರುವುದು ಇದೇ ಮೊದಲು. ಮೂರು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ 9 ಕೋಟಿ ರೂ. ಸಂಗ್ರಹವಾಗಿದ್ದು, ಜೈಪುರದ ಜೆಕೆ ಲೋನ್ ಆಸ್ಪತ್ರೆಯಲ್ಲಿ ಹೃದಯಾಂಶ್‌ಗೆ ಚುಚ್ಚುಮದ್ದನ್ನು ನೀಡಲಾಯಿತು. ಉಳಿದ ಮೊತ್ತವನ್ನು ಮೂರು ಕಂತುಗಳಲ್ಲಿ ಒಂದು ವರ್ಷದೊಳಗೆ ಆಸ್ಪತ್ರೆಗೆ ಜಮಾ ಮಾಡಬೇಕಿದೆ.

ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಎಂದರೇನು?

ಬೆನ್ನುಮೂಳೆಯ ಸ್ನಾಯುವಿನ ಕ್ಷೀಣತೆ ಅಥವಾ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (SMA) ಎಂಬುದು ಒಂದು ಆನುವಂಶಿಕ ಅಸ್ವಸ್ಥತೆಯಾಗಿದೆ. ಇದರಲ್ಲಿ ಬೆನ್ನುಹುರಿ ಮತ್ತು ಮೆದುಳಿನ ಕಾಂಡದಲ್ಲಿನ ನರ ಕೋಶಗಳ ನಷ್ಟದಿಂದಾಗಿ ವ್ಯಕ್ತಿಯು ಸ್ನಾಯುಗಳ ಚಲನೆಯನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಇದು ಸ್ನಾಯು ದೌರ್ಬಲ್ಯಕ್ಕೆ ಕಾರಣವಾಗುತ್ತದೆ ಮತ್ತು ಕೈಕಾಲುಗಳ ಚಲನೆ ಮತ್ತು ಉಸಿರಾಟದ ಮೇಲೆ ಪರಿಣಾಮ ಬೀರುತ್ತದೆ.

ಬೆನ್ನುಮೂಳೆಯ ಸ್ನಾಯುವಿನ ಕ್ಷೀಣತೆಯು ಸರ್ವೈವಲ್ ಮೋಟಾರ್ ನ್ಯೂರಾನ್‌ಗಳು 1 ಎಂಬ ಜೀನ್‌ನ ನಷ್ಟದಿಂದ ಉಂಟಾಗುತ್ತದೆ. ಇದು ಪ್ರೋಟೀನ್ ತಯಾರಿಸಲು ಅಗತ್ಯವಾದ ಮಾಹಿತಿಯನ್ನು ಹೊಂದಿರುತ್ತದೆ. ಇದು ದೇಹದ ಪ್ರತಿಯೊಂದು ಜೀವಕೋಶಕ್ಕೂ ಅಗತ್ಯವಾಗಿರುತ್ತದೆ. ಮಾನವ ಸಾಮಾನ್ಯವಾಗಿ ಹೆಚ್ಚುವರಿ ಜೀನ್ (SMN2) ಅನ್ನು ಹೊಂದಿರುತ್ತಾನೆ. ಆದರೆ ಅದು SMN1 ನಷ್ಟವನ್ನು ಭಾಗಶಃ ಸರಿದೂಗಿಸುತ್ತದೆ.

SMN1 ಗೆ ಹೋಲಿಸಿದರೆ SMN2 ಕೇವಲ ಒಂದು ಸಣ್ಣ ಪ್ರಮಾಣದ ಅಗತ್ಯ ಪ್ರೋಟೀನ್ ಅನ್ನು ಉತ್ಪಾದಿಸುತ್ತದೆ ಮತ್ತು ದೇಹದಲ್ಲಿನ ಅನೇಕ ಜೀವಕೋಶಗಳು ಮತ್ತು ಅಂಗಗಳು ಈ ಕಡಿಮೆ ಪೂರೈಕೆಯೊಂದಿಗೆ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ತೋರುತ್ತದೆಯಾದರೂ ಮೆದುಳಿನಿಂದ ಸ್ನಾಯುಗಳಿಗೆ ಸಂದೇಶಗಳನ್ನು ಕಳುಹಿಸುವ ಜವಾಬ್ದಾರಿಯುತ ಮೋಟಾರ್ ನ್ಯೂರಾನ್ ಗಳು ಕಡಿಮೆ ಮಟ್ಟದ SMNಗೆ ಸ್ಪಂದಿಸುವುದಿಲ್ಲ. ಹೀಗಾಗಿ ಇದು ಸ್ನಾಯು ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ.

17 ಕೋಟಿ ರೂ. ನ ದುಬಾರಿ ಔಷಧ

ಐಎಎನ್ ಎಸ್ ವರದಿ ಮಾಡಿದಂತೆ 17 ಕೋಟಿ ರೂ. ವೆಚ್ಚದ ವಿಶ್ವದ ಅತ್ಯಂತ ದುಬಾರಿ ಚುಚ್ಚುಮದ್ದನ್ನು ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಿಂದ ಬಳಲುತ್ತಿರುವ ಎರಡು ವರ್ಷದೊಳಗಿನ ಮಕ್ಕಳಿಗೆ ನೀಡಬೇಕು. ಈ ಔಷಧವನ್ನು ಕ್ರೌಡ್‌ಫಂಡಿಂಗ್ ಸಹಾಯದಿಂದ ಝೋಲ್ಗೆನ್ಸ್ಮಾ ಎಂಬ ಈ ಇಂಜೆಕ್ಷನ್ ಅನ್ನು ಯುಎಸ್ ನಿಂದ ಜೈಪುರಕ್ಕೆ ತರಲಾಯಿತು. ಈ ಔಷಧ ಪಡೆಯಲು ಹಲವಾರು ಭಾರತೀಯ ಕುಟುಂಬಗಳು ಪರದಾಡುತ್ತಿವೆ.

ಭಾರತದಲ್ಲಿ ಬೆನ್ನುಮೂಳೆಯ ಸ್ನಾಯು ಕ್ಷೀಣತೆ

ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಕಾಯಿಲೆ ಹೊಂದಿರುವ ಭಾರತೀಯರ ಸಂಖ್ಯೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲದಿದ್ದರೂ, ಅಸ್ತಿತ್ವದಲ್ಲಿರುವ ಪ್ರಕಾರ 10,000 ಜೀವಂತವಾಗಿ ಜನಿಸಿದ ಶಿಶುಗಳಲ್ಲಿ 1ರಲ್ಲಿ ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಕಾಣಿಸಿಕೊಳ್ಳುತ್ತಿದೆ. ಒಂದು ಅಧ್ಯಯನದ ಪ್ರಕಾರ 38 ಭಾರತೀಯರಲ್ಲಿ ಒಬ್ಬರು ಬೆನ್ನುಮೂಳೆಯ ಸ್ನಾಯು ಕ್ಷೀಣತೆಗೆ ಒಳಗಾಗುತ್ತಾರೆ.

ಅತ್ಯಂತ ದುಬಾರಿ ಔಷಧ ಇದು

ಅಪರೂಪದ ಆನುವಂಶಿಕ ಕಾಯಿಲೆಯಾದ ಬೆನ್ನುಮೂಳೆಯ ಸ್ನಾಯು ಕ್ಷೀಣತೆಯೊಂದಿಗೆ ಜನಿಸಿದ ಶಿಶುಗಳು ಚಿಕಿತ್ಸೆಯಿಲ್ಲದೆ ಎರಡು ವರ್ಷ ಕೂಡ ಪೂರ್ಣಗೊಳಿಸುವುದಿಲ್ಲ. 1990ರ ದಶಕದವರೆಗೂ ಇದಕ್ಕೆ ಯಾವುದೇ ಚಿಕಿತ್ಸೆಗಳು ಇರಲಿಲ್ಲ. ಇದನ್ನು ತಡೆಗಟ್ಟಲು ಇತ್ತೀಚೆಗೆ ಪರವಾನಗಿ ಪಡೆದ ಎರಡು ಔಷಧಿಗಳಿವೆ. ಇದರಲ್ಲಿ ಒಂದು Zolgensma, ಯುಕೆಯಲ್ಲಿ ಶಿಶುಗಳಿಗೆ ಚಿಕಿತ್ಸೆ ನೀಡಲು ಇದು ಇತ್ತೀಚೆಗೆ ಅಷ್ಟೇ ಲಭ್ಯವಾಗುತ್ತಿದೆ. ಇದನ್ನು “ವಿಶ್ವದ ಅತ್ಯಂತ ದುಬಾರಿ ಔಷಧ” ಎಂದು ಕರೆಯಲಾಗುತ್ತದೆ. ಯಾಕೆಂದರೆ ಇದರ ಒಂದು ಡೋಸ್ ಗೆ ಸುಮಾರು 1.79 ಮಿಲಿಯನ್ ಡಾಲರ್ ಅಂದರೆ ಭಾರತೀಯ ಕರೆನ್ಸ್ ಮೌಲ್ಯ 17 ಕೋಟಿ ರೂ. ಪಾವತಿಸಬೇಕು.

ಇದನ್ನೂ ಓದಿ: Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

ಈ ಕಾಯಿಲೆಗೆ ಲಭ್ಯವಿರುವ ಇನ್ನೊಂದು ಔಷಧ ಸ್ಪಿನ್ರಾಜಾ (ಜೆನೆರಿಕ್ ಹೆಸರು ನುಸಿನೆರ್ಸೆನ್) ಇದು SMN2 ಜೀನ್ ದೇಹಕ್ಕೆ ಅಗತ್ಯವಿರುವ ಪ್ರೋಟೀನ್ ಅನ್ನು ಒದಗಿಸಲು ಸಹಾಯ ಮಾಡುವ ಡಿಎನ್‌ಎಯ ಒಂದು ಸಣ್ಣ ಭಾಗವಾಗಿದೆ. ಇದನ್ನು ನೇರವಾಗಿ ಬೆನ್ನುಮೂಳೆಯ ನಿರ್ಧಿಷ್ಟ ಭಾಗಕ್ಕೆ ಚುಚ್ಚಬೇಕಾಗುತ್ತದೆ. ಇದನ್ನು ನಿಯಮಿತವಾಗಿ ವರ್ಷದಲ್ಲಿ ಆರು ಬಾರಿ ಮಾಡಬೇಕು. ಚಿಕಿತ್ಸೆಯ ಮೊದಲ ವರ್ಷದಲ್ಲಿ ಆರು ಚುಚ್ಚುಮದ್ದುಗಳು ಪ್ರತಿ ಇಂಜೆಕ್ಷನ್‌ಗೆ 75,000 ಡಾಲರ್ ಪಾವತಿಸಬೇಕಾಗುತ್ತದೆ.

2021 ರಿಂದ ಲಭ್ಯವಿರುವ Zolgensma ಮಾನವನ SMN1 ಜೀನ್ ನ ನಕಲು ಮಾಡಲು ಸಹಾಯ ಮಾಡುತ್ತದೆ. SMN1 ಜೀನ್ ಅನ್ನು ರಕ್ತಪ್ರವಾಹಕ್ಕೆ ಚುಚ್ಚಿದಾಗ ಇದು ವ್ಯಕ್ತಿಗೆ ಅಗತ್ಯವಿರುವ ಹೆಚ್ಚಿನ ಪ್ರೋಟೀನ್‌ಗಳನ್ನು ಉತ್ಪಾದಿಸುತ್ತದೆ. ನಿರ್ವಹಣೆಗೆ ಸುಲಭ ಮತ್ತು ಕಡಿಮೆ ಅಡ್ಡ ಪರಿಣಾಮ ಉಂಟು ಮಾಡುವ Zolgensmaನ ಕೇವಲ ಒಂದು ಡೋಸ್ ಸಾಕಾಗುತ್ತದೆ.

ಭಾರತಕ್ಕೆ ಈ ಔಷಧ ತರಿಸಲು ಯಾವುದೇ ತೆರಿಗೆ ಪಾವತಿಸಬೇಕಿಲ್ಲ. ಆದರೆ ತೆರಿಗೆ ಇಲ್ಲದೇ ಇಲ್ಲಿ ಈ ಔಷಧೀಯ ದರ ಸುಮಾರು 17 ಕೋಟಿ ರೂ. ಆಗುತ್ತದೆ!

ನೊವಾರ್ಟಿಸ್ ವೆಬ್‌ಸೈಟ್‌ನ ಪ್ರಕಾರ, ಈ ಔಷಧವನ್ನು 45 ದೇಶಗಳಲ್ಲಿ ಅನುಮೋದಿಸಲಾಗಿದೆ. 2 500 ಕ್ಕೂ ಹೆಚ್ಚು ರೋಗಿಗಳು ಜಾಗತಿಕವಾಗಿ ಇದರ ಚಿಕಿತ್ಸೆ ಪಡೆಯುತ್ತಾರೆ. ಕಂಪೆನಿಯು 36 ದೇಶಗಳಲ್ಲಿ ಸುಮಾರು 300 ಮಕ್ಕಳಿಗೆ ಇದರ ಥೆರಪಿಯನ್ನು ಉಚಿತವಾಗಿ ನೀಡಿದೆ.

Continue Reading
Advertisement
Russia Tourism
ಪ್ರವಾಸ12 seconds ago

Russia Tourism: ವೀಸಾ ಇಲ್ಲದೆ ಭಾರತೀಯರಿನ್ನು ರಷ್ಯಾಕ್ಕೆ ಭೇಟಿ ನೀಡಬಹುದು!

Constitution
ದೇಶ50 seconds ago

ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

Rain News Boy dies after being struck by lightning in Banavasi Heavy rains lash Chikkamagaluru and Hassan
ಮಳೆ7 mins ago

Rain News: ಬನವಾಸಿಯಲ್ಲಿ ಆಟವಾಡುತ್ತಿದ್ದ ಬಾಲಕ ಸಿಡಿಲು ಬಡಿದು ಸಾವು; ಚಿಕ್ಕಮಗಳೂರು, ಹಾಸನದಲ್ಲಿ ಮಳೆ ಅವಾಂತರ

Election Icon
Lok Sabha Election 20249 mins ago

Election Icon: ಹಿಮಾಚಲ ಪ್ರದೇಶದ ಮಂಗಳಮುಖಿ ಈಗ ‘ಚುನಾವಣಾ ಐಕಾನ್’

Virat Kohli
ಕ್ರೀಡೆ29 mins ago

Virat Kohli: ರೋಹಿತ್​ ಶರ್ಮ ರನ್​ ದಾಖಲೆ ಮುರಿದ ಕಿಂಗ್​ ಕೊಹ್ಲಿ

Covid 19
ವಿದೇಶ30 mins ago

Covid 19: ಸಿಂಗಾಪುರದಲ್ಲಿ ಕೊರೊನಾ ಹೊಸ ಅಲೆ; ವಾರದಲ್ಲಿ 25 ಸಾವಿರ ಕೇಸ್‌, ಭಾರತಕ್ಕೆ ಇದೆಯೇ ಭೀತಿ?

Inspirational Story
ಶಿಕ್ಷಣ33 mins ago

Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

MLC Election Withdrawal of nomination paper says Suresh Sajjan
ಕರ್ನಾಟಕ34 mins ago

MLC Election: ನಾಮಪತ್ರ ವಾಪಸ್ ಪಡೆಯಲು ನಿರ್ಧರಿಸಿದ ಬಿಜೆಪಿ ಬಂಡಾಯ ಅಭ್ಯರ್ಥಿ

SSLC 2024 Exam 2
ಪ್ರಮುಖ ಸುದ್ದಿ45 mins ago

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

Two killed after being hit by the wheel of a chariot while performing at Veerabhadreswara fair
ಕರ್ನಾಟಕ53 mins ago

Veerabhadreswara Fair: ವೀರಭದ್ರೇಶ್ವರ ಜಾತ್ರೆಯಲ್ಲಿ ಉತ್ತತ್ತಿ ಆಯುವಾಗ ರಥದ ಚಕ್ರದಡಿ‌ ಸಿಲುಕಿ ಇಬ್ಬರ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌