Oscars 2023: ಯಾರ್ಯಾರು ಯಾವ ಪ್ರಶಸ್ತಿ ಪುರಸ್ಕೃತರು? ಇದುವರೆಗಿನ ಪಟ್ಟಿ - Vistara News

Oscars 2023

Oscars 2023: ಯಾರ್ಯಾರು ಯಾವ ಪ್ರಶಸ್ತಿ ಪುರಸ್ಕೃತರು? ಇದುವರೆಗಿನ ಪಟ್ಟಿ

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್‌ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇದುವರೆಗೆ ಪ್ರಶಸ್ತಿ ಗಳಿಸಿಕೊಂಡ ಚಿತ್ರಗಳ ವಿವರ ಇಲ್ಲಿದೆ.

VISTARANEWS.COM


on

RRR Cinema
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಾಸ್‌ ಏಂಜಲೀಸ್‌: ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್‌ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಇದುವರೆಗೆ ಪ್ರಶಸ್ತಿ ಗಳಿಸಿಕೊಂಡ ಚಿತ್ರಗಳ ವಿವರ ಇಲ್ಲಿದೆ.

ಭಾರತದ RRR ಸಿನಿಮಾದ ʼನಾಟು ನಾಟು’ ಹಾಡಿಗೆ ಬೆಸ್ಟ್ ಒರಿಜಿನಲ್ ಸಾಂಗ್ ಪ್ರಶಸ್ತಿ.
ಭಾರತದ ʼದಿ ಎಲಿಫೆಂಟ್‌ ವಿಸ್ಪರರ್ಸ್‌ʼಗೆ ಅತ್ಯುತ್ತಮ ಕಿರು ಸಾಕ್ಷ್ಯಚಿತ್ರ ಪ್ರಶಸ್ತಿ.

All Quiet on the Western Frontಗೆ ಉತ್ತಮ ಸಿನಿಮಾಟೋಗ್ರಫಿ ಪ್ರಶಸ್ತಿ.

All Quiet On The Western Front ಸಿನಿಮಾಗೆ ಬೆಸ್ಟ್ ಪ್ರೊಡಕ್ಷನ್ ಡಿಸೈನ್ ಪ್ರಶಸ್ತಿ
All Quiet On The Western Front ಸಿನಿಮಾಗೆ ಬೆಸ್ಟ್ ಒರಿಜಿನಲ್ ಸ್ಕೋರ್ ಪ್ರಶಸ್ತಿ

ಜೇಮ್ಸ್ ಕ್ಯಾಮರೂನ್ ಅವರ ‘ಅವತಾರ್ 2’ ಸಿನಿಮಾ ಬೆಸ್ಟ್ ವಿಶ್ಯುವಲ್ ಎಫೆಕ್ಟ್ ಪ್ರಶಸ್ತಿ ಪಡೆದಿದೆ.
Navalny ಸಿನಿಮಾಗೆ ಬೆಸ್ಟ್ ಡಾಕ್ಯುಮೆಂಟರಿ ಫೀಚರ್ ಫಿಲ್ಮ್ ಪ್ರಶಸ್ತಿ
An Irish Goodbye ಸಿನಿಮಾಗೆ ಬೆಸ್ಟ್ ಲೈವ್ ಆಕ್ಷನ್ ಶಾರ್ಟ್ ಸಿನಿಮಾ ಪ್ರಶಸ್ತಿ
Everything Everywhere All At Once ಸಿನಿಮಾಗೆ ಬೆಸ್ಟ್ ಒರಿಜಿನಲ್ ಸ್ಕ್ರೀನ್‌ಪ್ಲೇ ಪ್ರಶಸ್ತಿ

Guillermo Del Toros Pinocchio ಚಿತ್ರಕ್ಕೆ ಉತ್ತಮ ಆನಿಮೇಶನ್ ಚಿತ್ರ ಗೌರವ.
Everything EveryWhere All at Once ಚಿತ್ರದ Ke Huy Quan ಉತ್ತಮ ಪೋಷಕ ನಟ, Jamie Lee Curtis ಉತ್ತಮ ಪೋಷಕ ನಟಿ.

ʼBlack Panther: Wakanda Forever’ ಸಿನಿಮಾಕ್ಕಾಗಿ ರುತ್ ಇಗೆ ಉತ್ತಮ ಕಾಸ್ಟ್ಯೂಮ್ ಡಿಸೈನ್ ಪ್ರಶಸ್ತಿ.
ʼThe Whale’ ಚಿತ್ರಕ್ಕೆ ಉತ್ತಮ ಹೇರ್ & ಮೇಕಪ್ ವಿಭಾಗದಲ್ಲಿ ಪ್ರಶಸ್ತಿ
Top Gun: Maverick-ಬೆಸ್ಟ್ ಸೌಂಡ್ಸ್ ಪ್ರಶಸ್ತಿ
Women Talking-ಬೆಸ್ಟ್ ಅಡಾಪ್ಟೆಡ್ ಸ್ಕ್ರೀನ್‌ಪ್ಲೇ ಪ್ರಶಸ್ತಿ

ಇದನ್ನೂ ಓದಿ: Oscars 2023 ಗೆದ್ದ RRR ಸಿನಿಮಾದ ನಾಟು ನಾಟು ಹಾಡು ಚಿತ್ರೀಕರಣ ಆಗಿದ್ದ ಜಾಗ ಈಗ ಯುದ್ಧದ ಸ್ಥಳ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Oscars 2023

ಜಪಾನ್‌ನಲ್ಲಿ 80 ಕೋಟಿ ರೂ. ಗಳಿಸಿದ RRR Movie; ದಾಖಲೆಗಳ ಮೇಲೆ ದಾಖಲೆಗಳ ಸೃಷ್ಟಿ

ಆರ್‌ಆರ್‌ಆರ್‌ ಸಿನಿಮಾ (RRR Movie) ಜಪಾನ್‌ನಲ್ಲಿ 20ನೇ ವಾರದ ಪ್ರದರ್ಶನಕ್ಕೆ ಕಾಲಿಟ್ಟಿದೆ. ಜಪಾನ್‌ ದೇಶವೊಂದರಲ್ಲೇ ಬರೋಬ್ಬರಿ 80 ಕೋಟಿ ರೂ. ಗಳಿಕೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.

VISTARANEWS.COM


on

Koo

ಹೈದರಾಬಾದ್:‌ ಎಸ್‌.ಎಸ್‌.ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌ ಸಿನಿಮಾ (RRR Movie) ಜಪಾನ್‌ನಲ್ಲಿ ಕಳೆದ ವರ್ಷ ಅಕ್ಟೋಬರ್‌ 21ರಂದು ಬಿಡುಗಡೆಯಾಗಿತ್ತು. ಇದೀಗ 20ನೇ ವಾರದ ಪ್ರದರ್ಶನಕ್ಕೆ ಕಾಲಿಟ್ಟಿರುವ ಸಿನಿಮಾ ಜಪಾನ್‌ನಲ್ಲಿ ಬರೋಬ್ಬರಿ 80 ಕೋಟಿ ರೂ. ಗಳಿಸಿ ದಾಖಲೆ ಬರೆದಿದೆ. ಮೊನ್ನೆಯಷ್ಟೇ ಬೆಸ್ಟ್ ಒರಿಜಿನಲ್ ಸಾಂಗ್ ಕೆಟಗರಿಯಲ್ಲಿ ಆರ್‌ಆರ್‌ಆರ್‌ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಕೂಡ ಬಂದಿದೆ.

ಇದನ್ನೂ ಓದಿ: MM Keeravani : ಆಸ್ಕರ್‌ ಗೆದ್ದ ಕೀರವಾಣಿಗೆ ಶುಭ ಹಾರೈಸಿದ ಖ್ಯಾತ ಪಿಯಾನಿಸ್ಟ್ ಕಾರ್ಪೆಂಟರ್; ಕಣ್ಣೀರಿಟ್ಟ ಸಂಗೀತ ನಿರ್ದೇಶಕ
ಆರ್‌ಆರ್‌ಆರ್‌ ಸಿನಿಮಾ ಜಪಾನ್‌ನ 44 ನಗರಗಳ 209 ಸಿನಿಮಾ ಮಂದಿರಗಳಲ್ಲಿ, 31 ಐಮ್ಯಾಕ್ಸ್‌ ತೆರೆಗಳಲ್ಲಿ ಬಿಡುಗಡೆಯಾಗಿತ್ತು. ಈ ಸಿನಿಮಾ 80 ಕೋಟಿಗೂ ಅಧಿಕ ರೂ. ಸಂಪಾದನೆ ಮಾಡಿದ್ದು, ಜಪಾನ್‌ನಲ್ಲಿ ಅತಿ ಹೆಚ್ಚು ಗಳಿಕೆ ಮಾಡಿಕೊಂಡ ಮೊದಲ ಭಾರತೀಯ ಸಿನಿಮಾ ಎನ್ನುವ ಖ್ಯಾತಿಯನ್ನೂ ಪಡೆದುಕೊಂಡಿದೆ.


ಈ ಬಗ್ಗೆ ಟ್ವಿಟರ್‌ನಲ್ಲಿ ಸಿನಿಮಾದ ಅಧಿಕೃತ ಖಾತೆಯಾದ ʼಆರ್‌ಆರ್‌ಆರ್‌ʼನಿಂದ ಟ್ವೀಟ್‌ ಮಾಡಿ ಮಾಹಿತಿ ನೀಡಲಾಗಿದೆ. “ಆರ್‌ಆರ್‌ಆರ್‌ ಸಿನಿಮಾ ಕ್ರಮೇಣವಾಗಿ ಜಪಾನ್‌ನ ಬೇರುಗಳಲ್ಲಿ ತೂರಿಕೊಳ್ಳುತ್ತಿದೆ. ಚಿತ್ರವು ಅಸಾಧಾರಣ ಹೆಜ್ಜೆಗಳನ್ನು ಇಡುತ್ತಿದೆ. 20ನೇ ವಾರಕ್ಕೆ ಕಾಲಿಟ್ಟಿರುವ ಸಿನಿಮಾ 202 ಚಿತ್ರಮಂದಿರಗಳಲ್ಲಿ ಪ್ರದರ್ಶನ ನೀಡುತ್ತಿದೆ” ಎಂದು ಸಿನಿತಂಡ ಹೇಳಿದೆ.

ಇದನ್ನೂ ಓದಿ: Oscars 2023: ದಿ ಎಲಿಫೆಂಟ್​ ವಿಸ್ಪರರ್ಸ್, ಆರ್‌ಆರ್‌ಆರ್‌ ತಂಡವನ್ನು ಶ್ಲಾಘಿಸಿದ ಪ್ರಿಯಾಂಕ ಚೋಪ್ರಾ
ಜಪಾನ್‌ನಲ್ಲಿ ಈಗಾಗಲೇ 80 ಕೋಟಿ ರೂ. ಗಳಿಸಿಕೊಂಡಿರುವ ಆರ್‌ಆರ್‌ಆರ್‌ ಸಿನಿಮಾ ಶೀಘ್ರವೇ 100 ಕೋಟಿ ರೂ. ಗಳಿಕೆ ದಾಟುವ ಸಾಧ್ಯತೆಯಿದೆ. ವಿಶ್ವಾದ್ಯಂತ ಸಿನಿಮಾ ಸಾವಿರ ಕೋಟಿ ರೂ.ಗೂ ಅಧಿಕ ಸಂಪಾದನೆ ಮಾಡಿಕೊಂಡಿದೆ.

Continue Reading

Oscars 2023

Actor Jr NTR: ಆಸ್ಕರ್‌ ಕಾರ್ಯಕ್ರಮಕ್ಕೆ ದುಬಾರಿ ವಾಚ್ ತೊಟ್ಟಿದ್ದ ಜೂ. ಎನ್‌ಟಿಆರ್‌! ಆ ವಾಚ್ ಬೆಲೆ ಎಷ್ಟು?

ಟಾಲಿವುಡ್‌ ಹೀರೋ ಜೂ. ಎನ್‌ಟಿಆರ್‌ ಅವರು ಆಸ್ಕರ್‌ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ದುಬಾರಿ ಬೆಲೆಯ ವಾಚ್‌ ಧರಿಸಿದ್ದರು. ಅದರ ಬಗ್ಗೆ ಎಲ್ಲೆಡೆ ಚರ್ಚೆಗಳು ನಡೆಯುತ್ತಿವೆ.

VISTARANEWS.COM


on

Koo

ಹೈದರಾಬಾದ್:‌ ರಾಜಮೌಳಿ ಅವರ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡು ಆಸ್ಕರ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಸಿನಿಮಾ ರಂಗದ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುವ ಸಂತಸದಲ್ಲಿ ಚಿತ್ರತಂಡವಿದೆ. ಅಂದ ಹಾಗೆ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಜೂನಿಯರ್‌ ಎನ್‌ಟಿಆರ್‌ ಅವರು ತೊಟ್ಟಿದ್ದ ವಾಚ್‌ ಇದೀಗ ಭಾರೀ ಸುದ್ದಿಯಲ್ಲಿದೆ.

ಇದನ್ನೂ ಓದಿ: Jr NTR: ಆಸ್ಕರ್‌ನಿಂದ ಹಿಂತಿರುಗಿದ ಬಳಿಕ ಜ್ಯೂ. ಎನ್‌ಟಿಆರ್‌ಗೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತ
ಆಸ್ಕರ್‌ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ತೆರಳಿದ್ದ ಜೂ .ಎನ್‌ಟಿಆರ್‌ ಮತ್ತು ರಾಮ್‌ ಚರಣ್‌ ಅವರು ಸೆಮಿ ವೆಸ್ಟರ್ನ್‌ ಶೈಲಿಯ ಸೂಟ್‌ಗಳನ್ನು ಧರಿಸಿದ್ದರು. ಹಾಗೆಯೇ ಸಿನಿಮಾದ ನಿರ್ದೇಶಕ ರಾಜಮೌಳಿ ಅವರು ಕುರ್ತಾ ಹಾಗೂ ಲೇಯರ್ಡ್‌ ಪ್ಯಾಂಟ್‌ ಧರಿಸಿ ಭಾರತದ ಸಂಸ್ಕೃತಿಯನ್ನು ಪ್ರತಿಬಿಂಬಿಸಿದ್ದರು. ವಿಶೇಷವಾಗಿ ಜೂ. ಎನ್‌ಟಿಆರ್‌ ಅವರು ಪಟೇಕ್‌ ಫಿಲ್ಲಿಪೆ ನೌಟಿಲಸ್‌ ಟ್ರಾವೆಲ್‌ ಟೈಮ್‌ ಕಂಪನಿಯ ವಾಚ್‌ ಅನ್ನು ತೊಟ್ಟಿದ್ದರು. ಈ ವಾಚ್‌ನ ಬೆಲೆ ಬರೋಬ್ಬರಿ 1,90,000 ಡಾಲರ್‌ ಅಂದರೆ 1.56 ಕೋಟಿ ರೂಪಾಯಿ!‌

ಜೂ. ಎನ್‌ಟಿಆರ್‌ ಅವರು ತೊಟ್ಟಿದ್ದ ಈ ವಾಚ್‌ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ಅಂದ ಹಾಗೆ ಜೂ. ಎನ್‌ಟಿಆರ್‌ ಅವರು ಬ್ರಾಂಡೆಡ್‌ ವಾಚ್‌ಗಳನ್ನು ಇಷ್ಟಪಡುವ ವ್ಯಕ್ತಿ. ಈ ಹಿಂದೆಯೂ ಕೂಡ ಅನೇಕ ಕಾರ್ಯಕ್ರಮಗಳಿಗೆ ಅವರು ಭಾರೀ ಬೆಲೆ ಬಾಳುವ ವಾಚ್‌ಗಳನ್ನು ತೊಟ್ಟು ಬಂದಿದ್ದರು. ಅವರ ವಾಚ್‌ ಕಲೆಕ್ಷನ್‌ ಬಗ್ಗೆಯೂ ಹಲವು ಬಾರಿ ಚರ್ಚೆಗಳು ನಡೆದಿವೆ.

Continue Reading

Oscars 2023

Oscars 2023: ಎಲ್ಲೇ ಹೋದರೂ ಸಣ್ಣ ದೇವಾಲಯ ಸ್ಥಾಪಿಸುವ ರಾಮ್ ಮತ್ತು ಪತ್ನಿ ಉಪಾಸನಾ!

Oscars 2023: ಬೆಸ್ಟ್ ಒರಿಜಿನಲ್ ಸಾಂಗ್ ಕೆಟಗರಿಯಲ್ಲಿ ಆಸ್ಕರ್‌ ಗೆದ್ದ ಆರ್‌ಆರ್‌ಆರ್‌ (RRR Movie)ಚಿತ್ರದ ನಟ ರಾಮ್ ಚರಣ್ (Ram Charan) ಹಾಗೂ ಅವರ ಪತ್ನಿ ಉಪಾಸನಾ ಅವರ ಧಾರ್ಮಿಕ ಮನೋಭಾವನೆಗೆ ಮತ್ತೊಂದು ಸಾಕ್ಷ್ಯ ದೊರೆತಿದೆ.

VISTARANEWS.COM


on

Oscars 2023: Ram and his wife set up a small temple Whenever the go
Koo

ನವದೆಹಲಿ: ಸೋಮವಾರ ಆಸ್ಕರ್ ಘೋಷಣೆಯಾಗುವ ಸ್ಥಳಕ್ಕೆ ಹೋಗುವ ಮುನ್ನ ರಾಮ್ ಚರಣ್ (Ram Charan) ಮತ್ತು ಅವರ ಪತ್ನಿ ಉಪಾಸನಾ ಅವರು ತಮ್ಮ ಮನೆಯಲ್ಲಿರುವ ಚಿಕ್ಕ ದೇಗುಲದಲ್ಲಿ ಪ್ರಾರ್ಥನೆ ಮಾಡಿ ಬಂದಿದ್ದರಂತೆ. ಈ ಜೋಡಿ ಎಲ್ಲೇ ಹೋದರೂ, ತಾವಿರುವಲ್ಲೇ ಚಿಕ್ಕ ದೇವಾಲಯವನ್ನು ರೆಡಿ ಮಾಡಿ, ಪೂಜಿಸುತ್ತಾರಂತೆ. ಇದು ಅವರಿಗೆ ಭಾರತದ ಜತೆ ಸಂಪರ್ಕ ಹೊಂದಲು ಸಹಾಯ ಮಾಡುತ್ತದಂತೆ. ಈ ಮಾಹಿತಿಯನ್ನು ರಾಮ್ ಚರಣ್ ಅವರು ಹಂಚಿಕೊಂಡಿದ್ದು, ಲಾಸ್ ಏಂಜಲೀಸ್‌ನಲ್ಲಿರುವ ತಮ್ಮ ಮನೆಯಲ್ಲಿ ರೂಪಿಸಿದ ಚಿಕ್ಕ ದೇಗುಲದ ಫೋಟೋ ತೆಗೆಯಲು ಮಾಧ್ಯಮದವರಿಗೆ ಅವಕಾಶ ಮಾಡಿಕೊಟ್ಟರೆನ್ನಲಾಗಿದೆ(Oscars 2023:).

ಆಸ್ಕರ್‌ಗಾಗಿ ಡಾಲ್ಬಿ ಥಿಯೇಟರ್‌ಗೆ ಹೊರಡುವ ಮೊದಲು ದಂಪತಿಗಳು ಹೇಗೆ ತಯಾರಿ ನಡೆಸಿದ್ದಾರೆ ಎಂಬುದನ್ನು ನೋಡಲು ವ್ಯಾನಿಟಿ ಫೇರ್ ಮ್ಯಾಗ್‌ಜಿನ್ ತಂಡವು ರಾಮ್ ಅವರ ಇರುವ ಮನೆಗೆ ಆಗಮಿಸಿತ್ತು. ಈ ತಂಡವನ್ನು ರಾಮ್ ಅವರು ಸ್ವಾಗತಿಸಿದರು. ಕ್ಯಾಮೆರಾಗಳಿಗೆ ತಮ್ಮ ಬಟ್ಟೆಗಳನ್ನು ತೋರಿಸುವುದರ ಜೊತೆಗೆ, ಅವರು ಪ್ರಪಂಚದ ಎಲ್ಲೇ ಇದ್ದರೂ ಅವರು ಅನುಸರಿಸುವ ಆಚರಣೆಯ ಮಾಹಿತಿಯನ್ನು ರಾಮ್ ಅವರು ಹಂಚಿಕೊಂಡರು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಆಸ್ಕರ್‌ ಗೆಲುವು ಆರೋಗ್ಯಕರ ಸ್ಪರ್ಧೆಗೆ ನಾಂದಿಯಾಗಲಿ

ಈ ವೇಳೆ ವ್ಯಾನಿಟಿ ಫೇರ್ ಮ್ಯಾಗ್‌ಜಿನ್ ಜತೆ ಮಾತನಾಡಿದ ರಾಮ್ ಚರಣ್ ಅವರು, ನಾನು ಎಲ್ಲಿಗೆ ಹೋದರೂ, ನನ್ನ ಹೆಂಡತಿ ಮತ್ತು ನಾನು ಈ ಸಣ್ಣ ದೇವಾಲಯವನ್ನು ಸ್ಥಾಪಿಸುತ್ತೇವೆ. ಈ ಆಚರಣೆಯು ನಮ್ಮ ಶಕ್ತಿಗಳು ಮತ್ತು ಭಾರತದೊಂದಿಗೆ ನಮ್ಮನ್ನು ಸಂಪರ್ಕಿಸುತ್ತದೆ. ಇಲ್ಲಿರಲು ನಮಗೆ ಸಹಾಯ ಮಾಡಿದ ಎಲ್ಲದಕ್ಕೂ ಮತ್ತು ಪ್ರತಿಯೊಬ್ಬ ವ್ಯಕ್ತಿಗೂ ಕೃತಜ್ಞತೆ ಸಲ್ಲಿಸುವುದು ಮುಖ್ಯ ಎಂದು ಹೇಳಿದರು. ರಾಮ್ ಮತ್ತು ಉಪಾಸನಾ ಸಮಾರಂಭಕ್ಕೆ ಹೊರಡುವ ಮೊದಲು ಒಂದು ಸಣ್ಣ ಪ್ರಾರ್ಥನೆಯನ್ನು ಮಾಡಿದರು ಎಂದು ವರದಿಯಾಗಿದೆ.

Continue Reading

Oscars 2023

Budget Session 2023: ಮೋದಿ, ಆರ್‌ಆರ್‌ಆರ್ ಆಸ್ಕರ್ ಗೆದ್ದಿರುವ ಕ್ರೆಡಿಟ್ ತೆಗೆದುಕೊಳ್ಳಬೇಡಿ! ಖರ್ಗೆ ವ್ಯಂಗ್ಯ

Budget Session 2023: ಪ್ರಧಾನಿ ನರೇಂದ್ರ ಮೋದಿ ಅವರೇ, ಆರ್ ಆರ್ ಆರ್ ಮತ್ತು ದಿ ಎಲಿಫೆಂಟ್ ವಿಸ್ಪರರ್ಸ್ ಆಸ್ಕರ್ ಗೆದ್ದಿದ್ದು, ಅವುಗಳ ಕ್ರೆಡಿಟ್ ತೆಗೆದುಕೊಳ್ಳಲು ಹೋಗಬೇಡಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ವ್ಯಂಗ್ಯವಾಡಿದ್ದಾರೆ.

VISTARANEWS.COM


on

Don't take credit oscar winning films, Kharge requested to Modi at Budget Session 2023
Koo

ನವದೆಹಲಿ: ಬೆಸ್ಟ್ ಒರಿಜಿನಲ್ ಸಾಂಗ್ ಕೆಟಗರಿಯಲ್ಲಿ ಆರ್‌ಆರ್‌ಆರ್ ಸಿನಿಮಾ ಮತ್ತು ಡ್ಯಾಕುಮೆಂಟರಿ ಶಾರ್ಟ್ ಫಿಲ್ಮ್ ದಿ ಎಲಿಫೆಂಟ್ ವಿಸ್ಪರರ್ಸ್ ಆಸ್ಕರ್ ಗೆದಿದ್ದು, ಅದರ ಕ್ರೆಡಿಟ್ ಅನ್ನು ನರೇಂದ್ರ ಮೋದಿ ಅವರು ತೆಗೆದುಕೊಳ್ಳಬಾರದು ಎಂದು ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ವ್ಯಂಗ್ಯ ಮಾಡಿದ್ದಾರೆ(Budget Session 2023).

ಆರ್‌ಆರ್‌ಆರ್ ಸಿನಿಮಾ ತೆಲುಗು ಸಿನಿಮಾವಾದ್ರೆ, ಎಲಿಫೆಂಟ್ ವಿಸ್ಪರರ್ಸ್ ತಮಿಳು ಸಾಕ್ಷ್ಯ ಚಿತ್ರವಾಗಿದ್ದು, ಎರಡೂ ದೇಶದ ಸಿನಿಮಾ ಕ್ಷೇತ್ರಕ್ಕೆ ಕಾಣಿಕೆ ನೀಡಿವೆ ಎಂದು ಖರ್ಗೆ ಅವರು ಹೇಳಿದರು. ನಾವು (ಬಿಜೆಪಿ) ನಿರ್ದೇಶನ ಮಾಡಿದ್ದೇವೆ, ನಾವು (ಬಿಜೆಪಿ) ಹಾಡು ಬರೆದಿದ್ದೇವೆ ಎಂದೋ ಅಥವಾ ಮೋದಿಜಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ ಎಂದು ಆಡಳಿತ ಪಕ್ಷವು ಕ್ರೆಡಿಟ್ ತೆಗೆದುಕೊಳ್ಳಬಾರದು. ಇದು ನನ್ನ ವಿನಂತಿ ಮಾತ್ರ. ಇವು ದೇಶದ ಕೊಡುಗೆಯಾಗಿದೆ ಎಂದು ಖರ್ಗೆ ಸಂಸತ್ತಿನಲ್ಲಿ ಹೇಳಿದರು.

ಇದನ್ನೂ ಓದಿ: Oscars 2023 : ಆರ್‌ಆರ್‌ಆರ್, ದಿ ಎಲಿಫೆಂಟ್ ವಿಸ್ಪರರ್ಸ್ ತಂಡಗಳಿಗೆ ಪಿಎಂ ಮೋದಿ, ರಾಹುಲ್ ಶುಭಾಶಯ

ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು, ಆರ್ ಆರ್ ಆರ್ ಚಿತ್ರದ ಕತೆ ಬರೆದವರು ವಿ ವಿಜಯೇಂದ್ರ ಪ್ರಸಾದರು. ಅವರನ್ನು ಮೋದಿ ನೇತೃತ್ವದ ಸರ್ಕಾರವೇ ಸಂಸತ್ತಿಗೆ ನಾಮನಿರ್ದೇಶನ ಮಾಡಿದೆ ಎಂಬುದು ವಾಸ್ತವಾಂಶ ಎಂದರು. ಗೋಯಲ್ ಅವರು ಈ ಮಾತಿಗೆ ತೀವ್ರ ವಿರೋಧ ವ್ಯಕ್ತವಾಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖ ನಾಯಕರೆಲ್ಲರೂ ಆಸ್ಕರ್ ವಿಜೇತ ಆರ್ ಆರ್ ಆರ್ ಹಾಗೂ ಸಾಕ್ಷ್ಯ ಚಿತ್ರ ದಿ ಎಲೆಫೆಂಟ್ ವಿಸ್ಪರರ್ಸ್ ಚಿತ್ರ ತಂಡಗಳಿಗೆ ಶಭಾಶಯ ಕೋರಿದ್ದಾರೆ.

Continue Reading
Advertisement
DK Shivakumar in Uttar Pradesh and Strategy in Amethi and Rae Bareli
Lok Sabha Election 20243 mins ago

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

IPL 2024
ಪ್ರಮುಖ ಸುದ್ದಿ10 mins ago

IPL 2024 : ವಾಂಖೆಡೆ ಸ್ಟೇಡಿಯಮ್​ನಲ್ಲಿ ಗುದ್ದಾಡಿಕೊಂಡ ಮುಂಬೈ ಇಂಡಿಯನ್ಸ್ ಆಟಗಾರರು; ಇಲ್ಲಿದೆ ವಿಡಿಯೊ

Virat kohli
ಪ್ರಮುಖ ಸುದ್ದಿ30 mins ago

Virat kohli : ಕೊಹ್ಲಿಯನ್ನು ಹೊಗಳಿದ ಜಗತ್​​ಪ್ರಸಿದ್ಧ ವೇಗದ ಓಟಗಾರ ಉಸೇನ್​ ಬೋಲ್ಟ್​​

Shah Rukh Khan
ದೇಶ50 mins ago

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

Rajat Patidar
ಪ್ರಮುಖ ಸುದ್ದಿ58 mins ago

Rajat Patidar : ರಜತ್ ಪಾಟೀದಾರ್​ ಮುಂದಿನ ಆವೃತ್ತಿಗೆ ಆರ್​ಸಿಬಿಯಲ್ಲೇ ಇರಬೇಕು; ಮಾಜಿ ಆಟಗಾರನ ಸಲಹೆ

ASI who was injured in a road accident died in kunigal
ಕರ್ನಾಟಕ1 hour ago

Road Accident: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಎಎಸ್‌ಐ ಚಿಕಿತ್ಸೆ ಫಲಿಸದೆ ಸಾವು

IPL 2024
ಕ್ರಿಕೆಟ್1 hour ago

IPL 2024: ಸಿಎಸ್​​ಕೆ ಮಾಜಿ ಆಟಗಾರನಾಗಿದ್ದರೂ ಈ ಸಲ ಕೊಹ್ಲಿ ಗೆಲ್ಲಲಿ ಎಂದ ಸುರೇಶ್​ ರೈನಾ!

Prajwal Revanna Case KR Nagar victim kidnapping case Satish sent to judicial custody
ಕ್ರೈಂ1 hour ago

Prajwal Revanna Case: ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್;‌ 2, 6ನೇ ಆರೋಪಿಗಿಲ್ಲ ಬಿಡುಗಡೆ ಭಾಗ್ಯ! ಸತೀಶ್‌ಗೆ ನ್ಯಾಯಾಂಗ ಬಂಧನ

Pay attention to childrens safety during holidays Minister Lakshmi Hebbalkar appeals to parents
ಬೆಳಗಾವಿ1 hour ago

Lakshmi Hebbalkar: ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ; ಪಾಲಕರಿಗೆ ಹೆಬ್ಬಾಳ್ಕರ್ ಮನವಿ

Four Digit PIN
ತಂತ್ರಜ್ಞಾನ2 hours ago

Four Digit PIN: ಇಂಥ ಪಿನ್ ನಂಬರ್ ಕೊಡ್ತಾ ಇದ್ದೀರಾ? ನಿಮ್ಮ ದುಡ್ಡಿಗೆ ಕಾದಿದೆ ಅಪಾಯ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ7 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು11 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌