Oscars 2024: ಓಪನ್‌ಹೈಮರ್‌ ನಟ ಸಿಲಿಯನ್‌ ಮರ್ಫಿಗೆ ಆಸ್ಕರ್‌ ಪ್ರಶಸ್ತಿ ಗರಿ! - Vistara News

ಸಿನಿಮಾ

Oscars 2024: ಓಪನ್‌ಹೈಮರ್‌ ನಟ ಸಿಲಿಯನ್‌ ಮರ್ಫಿಗೆ ಆಸ್ಕರ್‌ ಪ್ರಶಸ್ತಿ ಗರಿ!

Oscars 2024: ಓಪನ್‌ಹೈಮರ್‌ ಸಿನಿಮಾ ನಟ ಸಿಲಿಯನ್‌ ಮರ್ಫಿ ಅವರಿಗೆ 2024ನೇ ಸಾಲಿನ ಆಸ್ಕರ್‌ ಪ್ರಶಸ್ತಿ ದೊರೆತಿದೆ. ಓಪನ್‌ಹೈಮರ್‌ ಜಾಗತಿಕವಾಗಿ ಹೆಸರು ಮಾಡಿದ ಹಾಲಿವಡ್‌ ಸಿನಿಮಾ ಆಗಿದೆ.

VISTARANEWS.COM


on

Cillian Murphy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಾಸ್‌ಏಂಜಲೀಸ್:‌ ಹಾಲಿವುಡ್‌ನ ಖ್ಯಾತ ನಟ, ಜಾಗತಿಕ ಖ್ಯಾತಿ ಪಡೆದಿರುವ ಓಪನ್‌ಹೈಮರ್‌ (Oppenheimer) ಸಿನಿಮಾದ ಹೀರೊ ಸಿಲಿಯನ್‌ ಮರ್ಫಿ (Cillian Murphy) ಅವರಿಗೆ 2024ನೇ ಸಾಲಿನ ಆಸ್ಕರ್‌ (Oscars 2024) ಪ್ರಶಸ್ತಿ ದೊರೆತಿದೆ. ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಲಿಯನ್‌ ಮರ್ಫಿ ಅವರಿಗೆ ಓಪನ್‌ಹೈಮರ್‌ ಸಿನಿಮಾದ ನಟನೆಗಾಗಿ ಅತ್ಯುತ್ತನ ನಟ (Best Actor) ಪ್ರಶಸ್ತಿ ದೊರೆತಿದೆ. ಇದರೊಂದಿಗೆ ಓಪನ್‌ಹೈಮರ್‌ ಸಿನಿಮಾಗೆ ಮತ್ತೊಂದು ಜಾಗತಿಕ ಗರಿ ಮೂಡಿದಂತಾಗಿದೆ. ಈ ಬಾರಿ ಓಪನ್‌ಹೈಮರ್‌ ಸಿನಿಮಾಗೆ ಏಳು ಆಸ್ಕರ್‌ ಪ್ರಶಸ್ತಿಗಳು ದೊರೆತಿವೆ.

ಓಪನ್‌ಹೈಮರ್‌ ಸಿನಿಮಾ ನಿರ್ದೇಶಕ ಕ್ರಿಸ್ಟೋಫರ್‌ ನೋಲನ್‌ ಅವರಿಗೂ ಆಸ್ಕರ್‌ ದೊರೆತಿದೆ. ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಗೆ ಕ್ರಿಸ್ಟೋಫರ್‌ ನೋಲನ್‌ ಭಾಜನರಾಗಿದ್ದಾರೆ. ಇದೇ ಮೊದಲ ಬಾರಿಗೆ ಸಿಲಿಯನ್‌ ಮರ್ಫಿ ಅವರ ಹೆಸರು ಆಸ್ಕರ್‌ಗೆ ನಾಮನಿರ್ದೇಶನಗೊಂಡಿತ್ತು. ಅಷ್ಟೇ ಅಲ್ಲ, ಮೊದಲ ನಾಮನಿರ್ದೇಶನದಲ್ಲೇ ಅವರು ಮೊದಲ ಆಸ್ಕರ್‌ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ.

ಓಪನ್‌ಹೈಮರ್‌ ಸಿನಿಮಾವು ಹಲವು ಜಾಗತಿಕ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಕೆಲ ದಿನಗಳ ಹಿಂದಷ್ಟೇ ಗೋಲ್ಡನ್‌ ಗ್ಲೋಬ್ಸ್‌ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಅಷ್ಟೇ ಅಲ್ಲ, ʻಬ್ರಿಟಿಷ್ ಅಕಾಡೆಮಿ ಆಫ್ ಫಿಲ್ಮ್ ಆ್ಯಂಡ್ ಟೆಲಿವಿಷನ್ ಆರ್ಟ್ಸ್ʼಫಿಲ್ಮ್ ಅವಾರ್ಡ್ಸ್ 2024ರಲ್ಲಿ ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಚಲನಚಿತ್ರ ಮತ್ತು ಅತ್ಯುತ್ತಮ ನಾಯಕ ನಟ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

ಕ್ರಿಸ್ಟೋಫರ್‌ ನೊಲನ್‌ ನಿರ್ದೇಶನದ ಓಪನ್‌ಹೈಮರ್‌ ಭಾರತದಲ್ಲಿ ಬಿಡುಗಡೆಗೊಂಡಿದ್ದಾಗ ಮಿಷನ್‌ ಇಂಪಾಸಿಬಲ್‌ 7ರ ದಾಖಲೆಯನ್ನು ಮುರಿದು ಹಾಕಿತ್ತು. ಓಪನ್‌ಹೈಮರ್‌ ಸಿನಿಮಾ ಭಾರತದಲ್ಲಿ ಬಿಡುಗಡೆಯಾದ ದಿನದಂದೇ 13 ಕೋಟಿ ರೂ.ಗೂ ಅಧಿಕ ಸಂಪಾದನೆಯನ್ನು ಮಾಡಿಕೊಂಡಿತ್ತು. ಓಪನ್‌ಹೈಮರ್‌ʼ ಸಿನಿಮಾವು ಪರಮಾಣು ಬಾಂಬ್‌ನ ಪಿತಾಮಹ ಎಂದು ಕರೆಯಲ್ಪಡುವ ಭೌತಶಾಸ್ತ್ರಜ್ಞ ಜೆ. ರೆಬಾರ್ಟ್‌ ʻಓಪನ್‌ಹೈಮರ್‌ʼ ಅವರ ಜೀವನ ಚರಿತ್ರೆಯ ಕತೆಯಾಗಿದೆ. ʻಓಪನ್‌ಹೈಮರ್‌ʼ ಅವರು ಎರಡನೇ ವಿಶ್ವ ಯುದ್ಧದ ಸಮಯದಲ್ಲಿ ಪರಮಾಣು ಶಸ್ತ್ರಾಸ್ತ್ರಗಳನ್ನು ಆವಿಷ್ಕರಿಸಲು ಸಹಾಯ ಮಾಡಿದ್ದರು. ಅವರ ಜೀವನದ ಕುರಿತಾಗಿ ಈಗ ಬಿಡುಗಡೆಯಾಗಿರುವ ಚಿತ್ರದಲ್ಲಿ ತೋರಿಸಲಾಗಿದೆ.

ಇದನ್ನೂ ಓದಿ: Golden Globe Awards 2024: ಓಪನ್‌ಹೈಮರ್‌‌, ಬಾರ್ಬಿ, ಪೂವರ್‌ ತಿಂಗ್ಸ್… ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ

ನಟ ಸಿಲಿಯನ್ ಮರ್ಫಿ ಅವರು ಈ ಸಿನಿಮಾದಲ್ಲಿ ಓಪನ್‌ಹೈಮರ್‌ ಪಾತ್ರವನ್ನು ನಿರ್ವಹಿಸಿದ್ದಾರೆ. ಹಾಗೆಯೇ ನಟ ಮ್ಯಾಟ್‌ ಡ್ಯಾಮನ್‌ ಅವರು ಮ್ಯಾನ್‌ಹ್ಯಾಟನ್‌ ಪ್ರಾಜೆಕ್ಟ್‌ನ ಮುಖ್ಯಸ್ಥರಾಗಿದ್ದ ಜನರಲ್‌ ಲೆಸ್ಲಿ ಗ್ರೋವ್ಸ್‌ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಎಮಿಲಿ ಬ್ಲಂಟ್‌ ಅವರು ಓಪನ್ಹೈಮರ್ ಅವರ ಪತ್ನಿ ಕ್ಯಾಥರೀನ್‌ ಪಾತ್ರಕ್ಕೆ ಬಣ್ಣ ಹಚ್ಚಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಿರುತೆರೆ

Kavitha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿʻಲಕ್ಷ್ಮೀಬಾರಮ್ಮʼ ಧಾರಾವಾಹಿ ಖ್ಯಾತಿಯ ಜೋಡಿ

Kavitha Gowda: ಲಕ್ಷ್ಮೀ ಬಾರಮ್ಮ ಧಾರಾವಾಹಿ ಮೂಲಕ ಜೋಡಿ ಸಾಕಷ್ಟು ಮನೆಮಾತಾಗಿತ್ತು. ಸೀರಿಯಲ್, ಸಿನಿಮಾ, ನಟನೆಯಲ್ಲಿ ಬ್ಯುಸಿಯಿರುವ ಜೋಡಿ ಇದೀಗ ಸಂಭ್ರಮದ ವಿಚಾರವನ್ನು ಹಂಚಿಕೊಂಡಿದೆ. ಇಬ್ಬರೂ ಲಾಕ್‌ಡೌನ್ ಸಮಯಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕವಿತಾ ಗೌಡ ಹಿರಿತೆರೆಯಲ್ಲಿ ಶ್ರೀನಿವಾಸ ಕಲ್ಯಾಣ, ಫಸ್ಟ್ ಲವ್, ಗುಬ್ಬಿ ಮೇಲೆ ಬ್ರಹ್ಮಾಸ್ತ್ರ, ಗೋವಿಂದಾ ಗೋವಿಂದ, ಹುಟ್ಟುಹಬ್ಬದ ಶುಭಾಶಯಗಳು ಸೇರಿದಂತೆ ಚಿತ್ರಗಳಲ್ಲಿ ನಟಿಸಿದ್ದರು.

VISTARANEWS.COM


on

Kavitha Gowda chandan expected First Child
Koo

ಲಕ್ಷ್ಮೀ ಬಾರಮ್ಮ ಖ್ಯಾತಿಯ ಚಂದನ್ ಕುಮಾರ್ ಮತ್ತು ಕವಿತಾ (Actor Chandan ) ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಇದೀಗ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಲಕ್ಷ್ಮೀ ಬಾರಮ್ಮ ಧಾರಾವಾಹಿ ಮೂಲಕ ಜೋಡಿ ಸಾಕಷ್ಟು ಮನೆಮಾತಾಗಿತ್ತು. ಸೀರಿಯಲ್, ಸಿನಿಮಾ, ನಟನೆಯಲ್ಲಿ ಬ್ಯುಸಿಯಿರುವ ಜೋಡಿ ಇದೀಗ ಸಂಭ್ರಮದ ವಿಚಾರವನ್ನು ಹಂಚಿಕೊಂಡಿದೆ. 

ಇನ್‌ಸ್ಟಾ ಪೋಸ್ಟ್‌ ಮೂಲಕ ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ್ದಾರೆ.

ಇಬ್ಬರೂ ಲಾಕ್‌ಡೌನ್ ಸಮಯಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈಗ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: Lakshmi Baramma Serial: ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಿಂದ ಹೊರಬಂದ್ರಾ ಕೀರ್ತಿ ಪಾತ್ರಧಾರಿ? ಸೀರಿಯಲ್‌ ನೋಡಲ್ಲ ಅಂದ್ರು ಫ್ಯಾನ್ಸ್‌!

ಕವಿತಾ ಗೌಡ ಹಿರಿತೆರೆಯಲ್ಲಿ ಶ್ರೀನಿವಾಸ ಕಲ್ಯಾಣ, ಫಸ್ಟ್ ಲವ್, ಗುಬ್ಬಿ ಮೇಲೆ ಬ್ರಹ್ಮಾಸ್ತ್ರ, ಗೋವಿಂದಾ ಗೋವಿಂದ, ಹುಟ್ಟುಹಬ್ಬದ ಶುಭಾಶಯಗಳು ಸೇರಿದಂತೆ ಚಿತ್ರಗಳಲ್ಲಿ ನಟಿಸಿದ್ದರು. ಪತಿ ಚಂದನ್ ಗೌಡ ಜೊತೆ ಹೋಟೆಲ್ ಉದ್ಯಮದಲ್ಲೂ ಸಕ್ರಿಯರಾಗಿದ್ದಾರೆ. 

ಕವಿತಾ ಗೌಡ ಹಾಗೂ ಚಂದನ್‌ ಒಬ್ಬರನ್ನೊಬ್ಬರು ಪ್ರೀತಿಸಿ, ಹಸೆಮಣೆ ಏರಿದ್ದ ಜೋಡಿ ನಟನೆ ಮತ್ತು ಉದ್ಯಮ ಎರಡಲ್ಲೂ ಒಬ್ಬರಿಗೊಬ್ಬರು ಸಾಥ್ ನೀಡುತ್ತಾ ಸಾಗುತ್ತಿದ್ದಾರೆ. ಕವಿತಾ ಗೌಡ ಕೆಲ ವರ್ಷಗಳ ಕಾಲ ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ನಟಿಸಿ, ನಂತರ ‘ವಿದ್ಯಾ ವಿನಾಯಕ’ ಧಾರಾವಾಹಿಯಲ್ಲಿ ಬಣ್ಣ ಹಚ್ಚಿದ್ದರು.ಅತ್ತ ನಟಿ ಕವಿತಾ ಗೌಡ ಅವರು ಕೂಡ ತಮಿಳಿನ ‘ಅನ್ಬೇ ಶಿವಂ’ ಧಾರಾವಾಹಿಯಲ್ಲಿ ನಟಿಸುವುದರ ಜೊತೆಗೆ ಒಂದಷ್ಟು ಸಿನಿಮಾಗಳಲ್ಲೂ ಬಣ್ಣ ಹಚ್ಚಿದ್ದಾರೆ.

Continue Reading

ಬಾಲಿವುಡ್

Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

Met Gala 2024: ಮೆಟ್‌ ಗಾಲಾ ಈ ಬಾರಿ ನಾಳೆ (ಮೇ.6)ರಂದು ನಡೆಯಲಿದೆ. ಮೆಟ್ ಗಾಲಾ ಅತಿಥಿ ಪಟ್ಟಿಯನ್ನು ಮುಖ್ಯ ಕಾರ್ಯಕ್ರಮದ ಹಿಂದಿನ ಸಂಜೆಯವರೆಗೂ ರಹಸ್ಯವಾಗಿ ಇರಿಸಲಾಗುತ್ತದೆ. ಸುಮಾರು 450 ಜನರು ಈ ಸಮಾರಂಭದಲ್ಲಿ ಪಾಲ್ಗೊಳಲಿದ್ದಾರೆ ಎಂದು ವರದಿಯಾಗಿದೆ. ಹೊಸ ಊಹಾಪೋಹಗಳೆಂದರೆ ಸೆಲೆಬ್ರಿಟಿ ಜೋಡಿ ಟೇಲರ್ ಸ್ವಿಫ್ಟ್ ಮತ್ತು ಟ್ರಾವಿಸ್ ಕೆಲ್ಸೆ ಈ ವರ್ಷ ಮೆಟ್ ಗಾಲಾ ರೆಡ್ ಕಾರ್ಪೆಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Met Gala 2024 Alia Bhatt attend
Koo

ಬೆಂಗಳೂರು: ನಟಿ ಆಲಿಯಾ ಭಟ್‌ (Alia Bhatt) ಈಗಾಗಲೇ ಭಾರತದ ಹಲವರ ಮನಸ್ಸು ಗೆದ್ದಿರುವ ನಟಿ. 2022ರಲ್ಲಿ ನಟಿ ಹಿಂದಿ ಚಿತ್ರೋದ್ಯಮದಲ್ಲಿ ಹಿಟ್‌ ಮೇಲೆ ಹಿಟ್‌ ಸಿನಿಮಾಗಳನ್ನು ಕೊಟ್ಟಿದ್ದಾರೆ. ವಿಶ್ವದ ಸೆಲೆಬ್ರಿಟಿಗಳ ಅತ್ಯಂತ ದೊಡ್ಡ ಫ್ಯಾಷನ್‌ ಕಾರ್ಯಕ್ರಮವಾದ ಮೆಟ್‌ ಗಾಲಾದ ( Met Gala 2024) ರೆಡ್‌ ಕಾರ್ಪೆಟ್‌ ಮೇಲೆ ಹಿಂದಿನ ವರ್ಷ ಆಲಿಯಾ ಹೆಜ್ಜೆ ಹಾಕಿದ್ದರು. ಈ ಬಾರಿಯೂ ನಟಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.

ಮೆಟ್ ಗಾಲಾ 2024ರ ಭಾಗವಾಗಿರುವ ಕೆಲವೇ ಕೆಲವು ಭಾರತೀಯ ಹೆಸರುಗಳಲ್ಲಿ ಆಲಿಯಾ ಭಟ್ ಕೂಡ ಒಬ್ಬರು. ಈ ಈವೆಂಟ್‌ಗೆ ಭಾಗವಾಗುತ್ತಿರುವುದು ಆಲಿಯಾ ಎರಡನೇ ಬಾರಿ. ಮೇ 4ರ ರಾತ್ರಿ ಮುಂಬೈನ ಅಂತಾರಾಷ್ಟ್ರೀಯ ಖಾಸಗಿ ಟರ್ಮಿನಲ್‌ನಿಂದ ನ್ಯೂಯಾರ್ಕ್‌ಗೆ ನಟಿ ಪ್ರಯಾಣಿಸಿರುವುದು ವರದಿಯಾಗಿದೆ.

ಮೆಟ್‌ ಗಾಲಾ ಈ ಬಾರಿ ನಾಳೆ (ಮೇ.6)ರಂದು ನಡೆಯಲಿದೆ. ಮೆಟ್ ಗಾಲಾ ಅತಿಥಿ ಪಟ್ಟಿಯನ್ನು ಮುಖ್ಯ ಕಾರ್ಯಕ್ರಮದ ಹಿಂದಿನ ಸಂಜೆಯವರೆಗೂ ರಹಸ್ಯವಾಗಿ ಇರಿಸಲಾಗುತ್ತದೆ. ಸುಮಾರು 450 ಜನರು ಈ ಸಮಾರಂಭದಲ್ಲಿ ಪಾಲ್ಗೊಳಲಿದ್ದಾರೆ ಎಂದು ವರದಿಯಾಗಿದೆ. ಹೊಸ ಊಹಾಪೋಹಗಳೆಂದರೆ ಸೆಲೆಬ್ರಿಟಿ ಜೋಡಿ ಟೇಲರ್ ಸ್ವಿಫ್ಟ್ ಮತ್ತು ಟ್ರಾವಿಸ್ ಕೆಲ್ಸೆ ಈ ವರ್ಷ ಮೆಟ್ ಗಾಲಾ ರೆಡ್ ಕಾರ್ಪೆಟ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಲಾರೆನ್ ಸ್ಯಾಂಚೆಜ್, ಕೈಟ್ಲಿನ್ ಕ್ಲಾರ್ಕ್, ಸ್ಯಾಮ್ ಆಲ್ಟ್‌ಮನ್, ಜೆಫ್ ಬೆಜೋಸ್ ಸಹ ಈ ವರ್ಷದ ಮೆಟ್ ಗಾಲಾದಲ್ಲಿ ನಿರೀಕ್ಷಿಸಲಾದ ಕೆಲವು ಹೆಸರುಗಳು. ಪ್ರಿಯಾಂಕಾ ಚೋಪ್ರಾ ಈ ಬಾರಿ ಗೈರಾಗಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Heeramandi Trailer: ʻಹೀರಾಮಂಡಿʼ ಟ್ರೈಲರ್‌ ಕಂಡು ರಶ್ಮಿಕಾ, ಆಲಿಯಾ, ವಿಕ್ಕಿ ಕೌಶಲ್‌ ಫಿದಾ!

ಈ ಹಿಂದೆಯೂ ಬಾಲಿವುಡ್‌ನ ಅನೇಕ ನಟಿಯರು ಈ ಮೆಟ್‌ ಗಾಲಾದ ರೆಡ್‌ ಕಾರ್ಪೆಟ್‌ನಲ್ಲಿ ವಿಶೇಷವಾದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು. ಕಳೆದ ವರ್ಷ ನತಾಶಾ ಅವರು ಸಬ್ಯಸಾಚಿ ಸೀರೆ ತೊಟ್ಟು ಅದರೊಂದಿಗೆ ಚಿನ್ನದ ಬಣ್ಣದ ಲೋಹದ ಕೋಟ್‌ ಧರಿಸಿ ಕಾಣಿಸಿಕೊಂಡಿದ್ದರು. ನಟಿಯ ಈ ಲುಕ್‌ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿತ್ತು. ಹಾಗೆಯೇ 2017ರಲ್ಲಿ ದೀಪಿಕಾ ಪಡುಕೋಣೆ ಅವರು ಬಿಳಿ ಬಣ್ಣದ ಉಡುಗೆಯಲ್ಲಿ ಮೆಟ್‌ ಗಾಲಾದ ರೆಡ್‌ ಕಾರ್ಪೆಟ್‌ ಮೇಲೆ ಮೊದಲನೇ ಬಾರಿಗೆ ಕಾಣಿಸಿಕೊಂಡಿದ್ದರು. 2018ರಲ್ಲಿ ಮತ್ತೊಮ್ಮೆ ರೆಡ್‌ ಕಾರ್ಪೆಟ್‌ನಲ್ಲಿ ಅವರು ಕಾಣಿಸಿಕೊಂಡಿದ್ದರು. ಆಗ ನಟಿ ಪ್ರಬಲ್‌ ಗುರುಂಗ್‌ ಅವರು ವಿನ್ಯಾಸ ಮಾಡಿದ್ದ ಕೆಂಪು ಬಣ್ಣದ ಉಡುಗೆ ತೊಟ್ಟಿದ್ದರು. ಒಂದು ಶೋಲ್ಡರ್‌ನ ಆ ಉಡುಗೆಯ ಫೋಟೋ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿತ್ತು.

ಯಾಂಕಾ ಚೋಪ್ರಾ ಅವರು 2017ರಲ್ಲಿ ಮೆಟ್‌ ಗಾಲಾದಲ್ಲಿ ಭಾಗವಹಿಸಿದ್ದರು. ಅದರಲ್ಲಿ ಅವರು ಈಗಿನ ಪತಿ ನಿಕ್‌ ಜೋನಾಸ್‌ ಅವರ ಜತೆಗೆ ಕಾಣಿಸಿಕೊಂಡಿದ್ದರು. ಉದ್ದನೆಯ ವೇಲು ರೀತಿಯಲ್ಲಿ ಬಟ್ಟೆ ಹೊಂದಿರುವ ಟ್ರೆಂಚ್‌ ಕೋಟ್‌ ಉಡುಗೆಯಲ್ಲಿ ನಟಿ ಮಿಂಚಿದ್ದರು

Continue Reading

ಸಿನಿಮಾ

Kannada New Movie: ಭಾರಿ ಮೊತ್ತಕ್ಕೆ ಸೇಲ್ ಆಯ್ತು ರೂಪೇಶ್ ಶೆಟ್ಟಿ-ಜಾಹ್ನವಿ ಸಿನಿಮಾ ಆಡಿಯೊ ರೈಟ್ಸ್!

Kannada New Movie: ಅಧಿಪತ್ರ ಸಿನಿಮಾದ ಶೂಟಿಂಗ್ ಹಾಗೂ ಮೇಕಿಂಗ್‌ನಿಂದಲೂ ಎಲ್ಲರ ಗಮನ ಸೆಳದಿದೆ . ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ತೆರೆಗೆ ಬರಲು ರೆಡಿಯಾಗುತ್ತಿರುವ ಅಧಿಪತ್ರ ಸಿನಿಮಾದ ಟೀಸರ್ ಬಿಡುಗಡೆಗೆ ತಯಾರಿ ನಡೆದಿದೆ. ಈ ಚಿತ್ರದ ಆಡಿಯೊ ಹಕ್ಕು ಪ್ರತಿಷ್ಠಿತ ಆಡಿಯೊ ಸಂಸ್ಥೆ ಖರೀದಿ ಮಾಡಿದೆ. 2024 ಬಹು ನಿರೀಕ್ಷಿತ ಸಿನಿಮಾ ಸಾಲಿನಲ್ಲಿ ಅಧಿಪತ್ರ ಕೂಡ ಒಂದು.

VISTARANEWS.COM


on

Kannada New Movie Adhipatra audio rights
Koo

ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ (Kannada New Movie) ರೂಪೇಶ್ ಶೆಟ್ಟಿ (Roopesh shetty) ನಟನೆಯ‌ ಬಹು ನಿರೀಕ್ಷಿತ ಸಿನಿಮಾ ʻಅಧಿಪತ್ರʼ.(Adhipatra) ಈಗಾಗಲೇ ಮೇಕಿಂಗ್ ಹಾಗೂ ಕಂಟೆಂಟ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಆಡಿಯೊ ಹಕ್ಕು ಪ್ರತಿಷ್ಠಿತ ಆಡಿಯೊ ಸಂಸ್ಥೆ ಲಹರಿ ಖರೀದಿ ಮಾಡಿದೆ. 2024 ಬಹು ನಿರೀಕ್ಷಿತ ಸಿನಿಮಾ ಸಾಲಿನಲ್ಲಿ ಅಧಿಪತ್ರ ಕೂಡ ಒಂದು.

ಮೇ‌ 10ಕ್ಕೆ ಅಧಿಪತ್ರ ಟೀಸರ್

ಅಧಿಪತ್ರ ಸಿನಿಮಾದ ಶೂಟಿಂಗ್ ಹಾಗೂ ಮೇಕಿಂಗ್‌ನಿಂದಲೂ ಎಲ್ಲರ ಗಮನ ಸೆಳದಿದೆ . ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗುತ್ತಿದೆ. ತೆರೆಗೆ ಬರಲು ರೆಡಿಯಾಗುತ್ತಿರುವ ಅಧಿಪತ್ರ ಸಿನಿಮಾದ ಟೀಸರ್ ಬಿಡುಗಡೆಗೆ ತಯಾರಿ ನಡೆದಿದೆ. ಇದೇ ತಿಂಗಳ 10ರಂದು ಲಹರಿ ಆಡಿಯೋದಲ್ಲಿ ಅಧಿಪತ್ರದ ಮೊದಲ ಝಲಕ್ ಹೊರಬೀಳಲಿದೆ. ರೂಪೇಶ್ ಗೆ ಜೋಡಿಯಾಗಿ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಜಾಹ್ನವಿ ಸಾಥ್ ಕೊಟ್ಟಿದ್ದಾರೆ.

ತುಳು ಸಿನಿಮಾರಂಗದಲ್ಲಿ ರೂಪೇಶ್ ಶೆಟ್ಟಿಗೆ ಸಾಕಷ್ಟು ಅನುಭವ ಇದೆ. ಸಿನಿಮಾದ ನಾನಾ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ. ನಟನಾಗಿ ಮತ್ತು ನಿರ್ದೇಶಕನಾಗಿ ಅವರು ಅಲ್ಲಿ ನೆಲೆ ಕಂಡುಕೊಂಡಿದ್ದಾರೆ. ಬಿಗ್ ಬಾಸ್‌ಗೆ ಕಾಲಿಟ್ಟ ಬಳಿಕ ಅವರಿಗೆ ಜನಪ್ರಿಯತೆ ಹೆಚ್ಚಾಯಿತು. ಬಿಗ್ ಬಾಸ್ ವಿನ್ ಆದ ಬಳಿಕ ಅವರು ತುಳು ಭಾಷೆಯ ‘ಸರ್ಕಸ್’ ಸಿನಿಮಾವನ್ನು ನಿರ್ದೇಶಿಸಿ, ನಿರ್ಮಾಣ ಮಾಡಿದರು. ಆ ಸಿನಿಮಾದಿಂದ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿತು. ಕನ್ನಡದಲ್ಲಿ ಸ್ವಲ್ಪ ತಡವಾಗಿ ಆದರೂ ಪರವಾಗಿಲ್ಲ, ಒಂದು ಒಳ್ಳೆಯ ಕಥೆಯ ಮೂಲಕ, ಡಿಫರೆಂಟ್ ಆದಂತಹ ಪಾತ್ರದ ಮೂಲಕ ಪ್ರೇಕ್ಷಕರ ಎದುರು ಬರಬೇಕು ಎಂಬುದು ರೂಪೇಶ್ ಶೆಟ್ಟಿ ಅವರ ಉದ್ದೇಶ ಆಗಿತ್ತು. ಅದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು ಅವರು ‘ಅಧಿಪತ್ರ’ ಸಿನಿಮಾ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

ಸುದ್ದಿವಾಹಿನಿಯಲ್ಲಿ ನಿರೂಪಕಿಯಾಗಿ ಗುರುತಿಸಿಕೊಂಡಿರುವ ಜಾಹ್ನವಿ, ಅಲ್ಲಿಂದ ಕಿರುತೆರೆ ರಿಯಾಲಿಟಿ ಶೋಗಳಲ್ಲಿಯೂ ಕಣಕ್ಕಿಳಿದು ಇದೀಗ ನೇರವಾಗಿ ಸಿನಿಮಾ ನಾಯಕಿಯಾಗಿ ಹೊಸ ಇನಿಂಗ್ಸ್‌ ಆರಂಭಿಸಿದ್ದಾರೆ. ರೂಪೇಶ್‌ ಶೆಟ್ಟಿ ಅಧಿಪತ್ರ ಚಿತ್ರದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಹಿಂದೆ ಕೆಲವು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಹಾಗೂ ಇವರು ನಿರ್ದೇಶನ ಮಾಡಿದ ಶಾರ್ಟ್ ಫಿಲಂ ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರಶಂಸೆ ಪಡೆದಿತ್ತು ಹಾಗೂ ಕೆಲವು ಜಾಹೀರಾತುಗಳಿಗೆ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಚಯನ್ ಶೆಟ್ಟಿ ʼಅಧಿಪತ್ರʼ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಕೆ ಆರ್ ಸಿನಿ ಕಂಬೈನ್ಸ್ ಬ್ಯಾನರ್ ಬಂಡವಾಳ ಹೂಡುತ್ತಿದ್ದು, ನೈಜ ಘಟನೆಯಿಂದ ಸ್ಫೂರ್ತಿ ಪಡೆದು ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ.

ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಅಧಿಪತ್ರ ಸಿನಿಮಾವನ್ನು . ಕೆ ಆರ್ ಸಿನಿಕಂಬೈನ್ಸ್ ಬ್ಯಾನರ್‌ನಡಿ‌ ದಿವ್ಯಾ ನಾರಾಯಣ್, ಕುಲದೀಪ್ ರಾಘವ್ ಲಕ್ಷ್ಮೇ ಗೌಡ ‌ಬಂಡವಾಳ ಹೂಡಿದ್ದು, ಕಾರ್ತಿಕ್ ಶೆಟ್ಟಿ ಹಾಗೂ ಸತೀಶ್ ಶೆಟ್ಟಿ ಸಹ ನಿರ್ಮಾಣದಲ್ಲಿ ಹೆಗಲು ಕೊಟ್ಟಿದ್ದಾರೆ.

Continue Reading

ಸಿನಿಮಾ

Prajwal Revanna Case: ವೈರಲ್ ಆಗುತ್ತಿರುವ 2976 ವಿಡಿಯೊಗಳಲ್ಲಿ ಒಂದನ್ನು ನಾನು ನೋಡಿದೆ ಎಂದ ಹರ್ಷಿಕಾ ಪೂಣಚ್ಚ!

Prajwal Revanna Case: ತಮಿಳು ನಟಿ ಕಸ್ತೂರಿ, ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಈ ಆರೋಪ ಪ್ರಕರಣದ ಬಗ್ಗೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಇನ್ನು ತೆಲುಗು ನಟಿ, ನಿರೂಪಕ ಪರೋಕ್ಷವಾಗಿ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದರು.ಈ ನಡುವೆ ಪ್ರಜ್ವಲ್‌ ಅವರನ್ನು ಭಾರತಕ್ಕೆ ಬರುವಂತೆ ಜೆಡಿಎಸ್‌ ಮುಖಂಡರು ಮನವೊಲಿಸಿದ್ದು, ಅವರು ಇಂದು (ಭಾನುವಾರ – ಮೇ 5) ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಏರ್‌ಪೋರ್ಟ್‌ ಬಳಿ ಬೀಡು ಬಿಟ್ಟಿರುವ ಎಸ್‌ಐಟಿ ತಂಡವು ಪ್ರಜ್ವಲ್‌ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.

VISTARANEWS.COM


on

Prajwal Revanna Case reaction by Harshika Poonacha
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ದಿನೇ ದಿನೆ ಜಟಿಲವಾಗುತ್ತಾ ಸಾಗಿದೆ. ಈ ನಡುವೆ ಅವರ ತಂದೆ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣದ ಬಗ್ಗೆ ಸಿನಿಮಾ ತಾರೆಯರು ಕೂಡ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ನಟಿ ಹರ್ಷಿಕಾ ಪೂಣಚ್ಚ ಎಕ್ಸ್‌ನಲ್ಲಿ ಈ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.”ದುರದೃಷ್ಟವಶಾತ್ ವೈರಲ್ ಆಗುತ್ತಿರುವ 2976 ವೀಡಿಯೊಗಳಲ್ಲಿ ಒಂದನ್ನು ನಾನು ನೋಡಿದೆʼʼಎಂದು ಬರೆದುಕೊಂಡಿದ್ದಾರೆ.

ಹರ್ಷಿಕಾ ಎಕ್ಸ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ʻʻದುರದೃಷ್ಟವಶಾತ್ ವೈರಲ್ ಆಗುತ್ತಿರುವ 2976 ವೀಡಿಯೊಗಳಲ್ಲಿ ಒಂದನ್ನು ನಾನು ನೋಡಿದೆ. ಅದನ್ನು ನೋಡುವುದು ನಿಜಕ್ಕೂ ನೋವಿನ ಸಂಗತಿ. ವಿಡಿಯೊಗಳು ಕಾನೂನುಬದ್ಧ ಮತ್ತು ನೈಜವಾಗಿದ್ದರೆ, ಅಂತಹ ಕೃತ್ಯಗಳನ್ನು ಸೃಷ್ಟಿಸಿದವರು ಖಂಡಿತವಾಗಿಯೂ ದೇಶದ ಕಾನೂನಿನ ಪ್ರಕಾರ ಪರಿಗಣನೆಗೆ ತೆಗೆದುಕೊಳ್ಳಬೇಕು” ಎಂದು ಹರ್ಷಿಕಾ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಮಧ್ಯಾಹ್ನ 3 ಗಂಟೆಗೆ ಪ್ರಜ್ವಲ್‌ ರೇವಣ್ಣ ಆಗಮನ? ಬಂದ ಕೂಡಲೇ ಅರೆಸ್ಟ್!

ಮತ್ತೊಂದು ಎಕ್ಸ್‌ನಲ್ಲಿ ʻʻಈ ವಿಡಿಯೊಗಳಲ್ಲಿ ಕಾಣಿಸಿಕೊಂಡಿರುವ ಅಸಂಖ್ಯಾತ ಮಹಿಳೆಯರನ್ನು ನೋಡಿ ನೋವಾಗುತ್ತಿದೆ. ಅವರೆಲ್ಲರೂ ಸಭ್ಯ ಮತ್ತು ಸರಳ ಕುಟುಂಬದಿಂದ ಬಂದವರ ಎಂದು ಕಾಣುತ್ತಾರೆ. ಈ ಸಂತ್ರಸ್ತರ ಮುಖಗಳನ್ನು ವಿವಿಧ ಗುಂಪುಗಳು ರಾಜಕೀಯ ಚರ್ಚೆಗೆ ಬಳಸಿಕೊಳ್ಳುತ್ತಿರುವುದು ಅತ್ಯಂತ ದುರದೃಷ್ಟಕರʼʼಎಂದು ಬರೆದುಕೊಂಡಿದ್ದಾರೆ.

ʻʻಕೊನೆಪಕ್ಷ ಅಲ್ಲಿರುವ ಮಹಿಳೆಯರ ಮುಖವನ್ನು ಬ್ಲರ್‌ ಮಾಡಬಹುದಿತ್ತು. ಭವಿಷ್ಯದಲ್ಲಿ ಅವರು ಸಮಾಜವನ್ನು ಹೇಗೆ ಎದುರಿಸುತ್ತಾರೆ? ಇನ್ನು ಮುಂದೆ ಅವರನ್ನು ಯಾವ ದೃಷಿಯಲ್ಲಿ ಜನ ನೋಡಲಿದ್ದಾರೆ? ಅವರ ಕುಟುಂಬ ಮತ್ತು ಮಕ್ಕಳ ಗತಿ ಏನು? ಎಂದು ಹರ್ಷಿಕಾ ಕಳವಳ ವ್ಯಕ್ತಪಡಿಸಿದ್ದಾರೆ.

ತಮಿಳು ನಟಿ ಕಸ್ತೂರಿ, ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಈ ಆರೋಪ ಪ್ರಕರಣದ ಬಗ್ಗೆ ನೇರವಾಗಿ ವಾಗ್ದಾಳಿ ನಡೆಸಿದ್ದಾರೆ. ಇನ್ನು ತೆಲುಗು ನಟಿ, ನಿರೂಪಕ ಪರೋಕ್ಷವಾಗಿ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದರು.

ಈ ನಡುವೆ ಪ್ರಜ್ವಲ್‌ ಅವರನ್ನು ಭಾರತಕ್ಕೆ ಬರುವಂತೆ ಜೆಡಿಎಸ್‌ ಮುಖಂಡರು ಮನವೊಲಿಸಿದ್ದು, ಅವರು ಇಂದು (ಭಾನುವಾರ – ಮೇ 5) ಬೆಂಗಳೂರಿನ ಕೆಂಪೇಗೌಡ ಏರ್‌ಪೋರ್ಟ್‌ಗೆ ಆಗಮಿಸುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ಏರ್‌ಪೋರ್ಟ್‌ ಬಳಿ ಬೀಡು ಬಿಟ್ಟಿರುವ ಎಸ್‌ಐಟಿ ತಂಡವು ಪ್ರಜ್ವಲ್‌ ಆಗಮಿಸುತ್ತಿದ್ದಂತೆ ವಶಕ್ಕೆ ಪಡೆಯುವ ಸಾಧ್ಯತೆ ದಟ್ಟವಾಗಿದೆ.

ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸವನ್ನು ವಶಕ್ಕೆ ಪಡೆದ ಎಸ್‌ಐಟಿ ಅಧಿಕಾರಿಗಳು

ಇಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಜ್ವಲ್‌ ಯಾವುದೇ ಸಮಯದಲ್ಲಿ ಬೇಕಿದ್ದರೂ ಭಾರತಕ್ಕೆ ಬರಬಹುದು ಎಂಬ ನಿಟ್ಟಿನಲ್ಲಿ ಶನಿವಾರ ರಾತ್ರಿಯಿಂದಲೇ ಏರ್‌ಪೋರ್ಟ್‌ನಲ್ಲಿ ಎಸ್‌ಐಟಿ ಟೀಂ ಬೀಡುಬಿಟ್ಟಿದೆ. ಆದರೆ, ಪ್ರಜ್ವಲ್‌ ರೇವಣ್ಣ ಈವರೆಗೂ ಆಗಮಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರಿಗಾಗಿ ಕಾದು ಕಾದು ಅಧಿಕಾರಿಗಳು ಸುಸ್ತಾಗಿದ್ದಾರೆ.

ಆದರೆ, ಈಗಿನ ಮಾಹಿತಿ ಪ್ರಕಾರ, ಪ್ರಜ್ವಲ್‌ ರೇವಣ್ಣ ಅವರು ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬೆಂಗಳೂರಿಗೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್‌ಗಾಗಿ ಎಸ್ಐಟಿ, ಗುಪ್ತಚರ ತಂಡಗಳು ಕಾದು ಕುಳಿತಿದ್ದು, ವಿದೇಶಿ ವಿಮಾನಗಳ ಪ್ಯಾಸೆಂಜರ್ ಲಿಸ್ಟ್ ಅನ್ನು ಪರಿಶೀಲನೆ ನಡೆಸಲಾಗುತ್ತಿದೆ. ದುಬೈ, ಮಸ್ಕಟ್, ಪ್ರಾಂಕ್ ಫರ್ಟ್ ವಿಮಾನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ.

Continue Reading
Advertisement
Vijay Namdevrao Wadettiwar
ದೇಶ4 mins ago

ಮುಂಬೈ ದಾಳಿ ಉಗ್ರ ಅಜ್ಮಲ್‌ ಕಸಬ್‌ ನಿರಪರಾಧಿ ಎಂದ ಕಾಂಗ್ರೆಸ್‌ ನಾಯಕ; ಭುಗಿಲೆದ್ದ ವಿವಾದ!

Beer Shortage
ಕರ್ನಾಟಕ18 mins ago

Beer Shortage: ಬೇಸಿಗೆಯಲ್ಲಿ ಮದ್ಯ ಪ್ರಿಯರಿಗೆ ಬ್ಯಾಡ್‌ ನ್ಯೂಸ್; ಇನ್ನೆರಡು ತಿಂಗಳು ಬಿಯರ್‌ ಸಿಗೋದು ಕಷ್ಟ!

Torn Jeans Styling Tips
ಫ್ಯಾಷನ್31 mins ago

Torn Jeans Styling Tips: ಟೊರ್ನ್‌ ಜೀನ್ಸ್‌ ಪ್ಯಾಂಟ್‌ ಪ್ರಿಯರು ನೆನಪಿನಲ್ಲಿಟ್ಟುಕೊಳ್ಳಬೇಕಾದ 5 ಪ್ರಮುಖ ಸಂಗತಿಗಳು

lok sabha Election 2024 Bus Fare Hike
Lok Sabha Election 202433 mins ago

Lok Sabha Election 2024 : ಮತದಾನದ ಹಬ್ಬದಲ್ಲೂ ಲೂಟಿಗೆ ಇಳಿದ ಖಾಸಗಿ ಬಸ್‌! ವೋಟ್‌ ಹಾಕಲು ಬಸ್‌ ಏರುವವರಿಗೆ ಟಿಕೆಟ್ ದುಬಾರಿ!‌

IPL 2024
Latest35 mins ago

IPL 2024 : ಚೆನ್ನೈ ತಂಡದ ಮಾರಕ ಬೌಲರ್ ಮಹೀಶ್​ ಪತಿರಾನಾ​ ಐಪಿಎಲ್​ನಿಂದ ಹೊರಕ್ಕೆ

MI vs SRH
ಕ್ರೀಡೆ1 hour ago

MI vs SRH: ಸನ್ ಸ್ಟ್ರೋಕ್​ನಿಂದ ತಪ್ಪಿಸಿಕೊಂಡೀತೇ ಮುಂಬೈ ಇಂಡಿಯನ್ಸ್​​?

Kavitha Gowda chandan expected First Child
ಕಿರುತೆರೆ1 hour ago

Kavitha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿʻಲಕ್ಷ್ಮೀಬಾರಮ್ಮʼ ಧಾರಾವಾಹಿ ಖ್ಯಾತಿಯ ಜೋಡಿ

Met Gala 2024 Alia Bhatt attend
ಬಾಲಿವುಡ್1 hour ago

Met Gala 2024: ಮೆಟ್‌ ಗಾಲಾದಲ್ಲಿ ಆಲಿಯಾ ಹಾಜರಿ: ಪ್ರಿಯಾಂಕಾ ಚೋಪ್ರಾ ಗೈರು!

IPL2024
ಕ್ರೀಡೆ1 hour ago

IPL 2024 : ಮ್ಯಾಕ್ಸಿ ಐಪಿಎಲ್​ನಲ್ಲಿ ಬರೀ ಬೂಸಿ; ಮ್ಯಾಕ್ಸ್​ವೆಲ್​ ಆಟಕ್ಕೆ ಅಭಿಮಾನಿಗಳ ಆಕ್ರೋಶ

Job Alert
ಉದ್ಯೋಗ1 hour ago

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌