Oscars 2024: ಮುಂದಿನ ʻಆಸ್ಕರ್‌ʼ ರೇಸ್‌ನಲ್ಲಿ ಯಾವೆಲ್ಲ ಸಿನಿಮಾಗಳು ಇರಲಿವೆ? Vistara News

ಬಾಲಿವುಡ್

Oscars 2024: ಮುಂದಿನ ʻಆಸ್ಕರ್‌ʼ ರೇಸ್‌ನಲ್ಲಿ ಯಾವೆಲ್ಲ ಸಿನಿಮಾಗಳು ಇರಲಿವೆ?

Oscars 2024: ಸನ್ನಿ ಡಿಯೋಲ್ ಅವರ ಇತ್ತೀಚಿನ ಬ್ಲಾಕ್‌ಬಸ್ಟರ್ ಸಿನಿಮಾ ಗದರ್ 2 ಸೇರಿದಂತೆ ಇನ್ನೂ ಹಲವು ಚಲನಚಿತ್ರಗಳು ಮುಂಬರುವ ಆಸ್ಕರ್‌ ರೇಸ್‌ನಲ್ಲಿ ಇರಲಿದೆ ಎಂದು ವರದಿಯಾಗಿದೆ.

VISTARANEWS.COM


on

Oscars 2024 Film list
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತೀಯ ಚಿತ್ರರಂಗಕ್ಕೆ 2023 ಅತ್ಯುತ್ತಮ ವರ್ಷವಾಗಿದೆ. 2024ರ ಆಸ್ಕರ್‌ (Oscars 2024) ರೇಸ್‌ನಲ್ಲಿ ಹಲವು ಭಾರತೀಯ ಸಿನಿಮಾಗಳು ಇರಲಿವೆ. ಕೆಲವು ಮೆಗಾ ಬ್ಲಾಕ್‌ಬಸ್ಟರ್‌ ಸಿನಿಮಾಗಳ ಬಗ್ಗೆ ಈಗಾಗಲೇ ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ಶುರುವಾಗುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, ಮುಂದಿನ ವರ್ಷ ಆಸ್ಕರ್‌ ರೇಸ್‌ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸುವ ಸಿನಿಮಾಗಳ ಹಸೆರುಗಳು ವೈರಲ್‌ ಆಗುತ್ತಿವೆ. ʻರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ (Rocky Aur Rani Kii Prem Kahaani), ʻಜ್ವಿಗಾಟೊʼ (Zwigato), ʻದಿ ಕೇರಳ ಸ್ಟೋರಿʼ (The Kerala Story) ಆಸ್ಕರ್ 2024ರ ರೇಸ್‌ನಲ್ಲಿ ಆಯ್ಕೆಯಾಗಲಿವೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ವರದಿಗಳ ಪ್ರಕಾರ, ಇತ್ತೀಚೆಗೆ ಬಿಡುಗಡೆಯಾದ ಕರಣ್ ಜೋಹರ್ ನಿರ್ದೇಶನದ ʼರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿʼ, ಕಪಿಲ್ ಶರ್ಮಾ ಅಭಿನಯದ ಜ್ವಿಗಾಟೊ, ದಿ ಕೇರಳ ಸ್ಟೋರಿ, ರಾಣಿ ಮುಖರ್ಜಿ ಅಭಿನಯದ ಮಿಸೆಸ್ ಚಟರ್ಜಿ ವರ್ಸೆಸ್‌ ನಾರ್ವೆ, ಅಭಿಷೇಕ್ ಬಚ್ಚನ್ ಅಭಿನಯದ ʼಘೂಮರ್ʼ ಮತ್ತು ʼ12th ಫೇಲ್ʼ ಸಿನಿಮಾಗಳ ಹೆಸರು ಸೇರಿವೆ. ಸನ್ನಿ ಡಿಯೋಲ್ ಅವರ ಇತ್ತೀಚಿನ ಬ್ಲಾಕ್‌ಬಸ್ಟರ್ ಸಿನಿಮಾ ʼಗದರ್ 2ʼ ಸೇರಿದಂತೆ ಇನ್ನೂ ಕೆಲವು ಚಲನಚಿತ್ರಗಳು ಮುಂಬರುವ ಆಸ್ಕರ್‌ ರೇಸ್‌ನಲ್ಲಿ ಇರಲಿದೆ ಎಂದು ವರದಿಯಾಗಿದೆ.

ಹಿರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ನೇತೃತ್ವದಲ್ಲಿ 17 ಸದಸ್ಯರ ಆಯ್ಕೆ ತೀರ್ಪುಗಾರರು ಈಗಾಗಲೇ ಎಲ್ಲೆಡೆಯಿಂದ ಪ್ರಾದೇಶಿಕ ಮತ್ತು ಉತ್ತಮ ಸಿನಿಮಾಗಳ ಆಯ್ಕೆಯನ್ನು ಮಾಡುವ ಅನ್ವೇಷಣೆಯಲ್ಲಿದೆ ಎಂದು ವರದಿಯಾಗಿದೆ. ಆಸ್ಕರ್ ಆಯ್ಕೆಗಾಗಿ ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾಕ್ಕೆ ಕಳುಹಿಸಲಾದ ಕೆಲವು ಚಲನಚಿತ್ರಗಳಲ್ಲಿ ಅನಂತ್ ಮಹದೇವನ್ ಅವರ ದಿ ಸ್ಟೋರಿಟೆಲರ್, ಮ್ಯೂಸಿಕ್ ಸ್ಕೂಲ್, ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ, 12th ಫೇಲ್, ವರ್ತಿಮಾರನ್ ಅವರ ವಿದುತಲೈ ಭಾಗ 1, ಮತ್ತು ನಾನಿ ಅಭಿನಯದ ದಸರಾ ಮುಂತಾದ ಸಿನಿಮಾಗಳು ಇವೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Actress Nayanthara: ದೀಪಿಕಾ ಹೈಲೈಟ್‌ ಆಗಿದ್ದಕ್ಕೆ ಬಾಲಿವುಡ್‌ ಸಿನಿಮಾ ಮಾಡದಿರಲು ನಯನತಾರಾ ನಿರ್ಧಾರ?

ಆಲಿಯಾ ಭಟ್ ಹಾಗೂ ರಣ್‌ವೀರ್ ಸಿಂಗ್ ಜೋಡಿಯ ಸಿನಿಮಾ ‘ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’. ಬಹಳ ದಿನಗಳ ಬಳಿಕ ಕರಣ್‌ ಜೋಹರ್ ನಿರ್ದೇಶಿಸಿದ ಈ ಸಿನಿಮಾ ಜುಲೈ 28ಕ್ಕೆ ವಿಶ್ವದಾದ್ಯಂತ ರಿಲೀಸ್ ಆಗಿತ್ತು. ಹೀಗಿದ್ದರೂ, ‘ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’ ವಿಶ್ವದಾದ್ಯಂತ ಬಾಕ್ಸಾಫೀಸ್‌ನಲ್ಲಿ ಸುಮಾರು 340 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ ಎಂದು ವರದಿಯಾಗಿತ್ತು.’ರಾಕಿ ಔರ್ ರಾಣಿ ಕೀ ಪ್ರೇಮ್ ಕಹಾನಿ’ ಸಿನಿಮಾ ಇದೀಗ ಅಮೆಜಾನ್ ಪ್ರೈಂನಲ್ಲಿ ಲಭ್ಯವಿದೆ. ಈ ಸಿನಿಮಾದಲ್ಲಿ ರಣ್‌ವೀರ್ ಸಿಂಗ್ ರಾಕಿ ರಾಂಧವನಾಗಿ ಹಾಗೂ ಆಲಿಯಾ ಭಟ್ ರಾಣಿ ಚಟರ್ಜಿಯಾಗಿ ಕಾಣಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

The Archies Film: ನಿಮಗೆ ಅಮಿತಾಭ್‌ ತಮ್ಮ ಅಜಿತಾಭ್‌ ಗೊತ್ತಾ? ಅವರೇ ಇವರು!

The Archies Film: ಈ ಸಿನಿಮಾದ ಪ್ರೀಮಿಯರ್‌ ಶೋನಲ್ಲಿ ಹಲವು ವಿಶೇಷತೆಳು ಕಂಡು ಬಂದವು. ಶ್ರೀದೇವಿ ಪುತ್ರಿ ಖುಷಿ ಕಪೂರ್ ಅವರು ಶ್ರೀದೇವಿಯವರ ಹಳೇಯ ಗೌನ್‌ ಧರಿಸಿ ತಾಯಿಯನ್ನು ಸ್ಮರಿಸಿಕೊಂಡಿದ್ದಾರೆ.

VISTARANEWS.COM


on

Ajitabh Bachchan, Younger Brother Of Amitabh At The Archies Film Screening
Koo

ಬೆಂಗಳೂರು: ಅಮಿತಾಭ್ ಬಚ್ಚನ್ ಅವರ ಕಿರಿಯ ಸಹೋದರ ಅಜಿತಾಭ್‌ ಅಪರೂಪವಾಗಿ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದಾರೆ. ‘ದಿ ಆರ್ಚೀಸ್​’ (The Archies Film) ಚಿತ್ರ ಡಿಸೆಂಬರ್​ 7ರಂದು ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಶಾರುಖ್​ ಖಾನ್​ ಪುತ್ರಿ ಸುಹಾನಾ ಖಾನ್​, ಅಮಿತಾಭ್​ ಬಚ್ಚನ್​ ಮೊಮ್ಮಗ ಅಗಸ್ತ್ಯ ನಂದ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾದ ಪ್ರೀಮಿಯರ್‌ ಶೋನಲ್ಲಿ ಹಲವು ವಿಶೇಷತೆಗಳು ಕಂಡು ಬಂದವು. ಶ್ರೀದೇವಿ ಪುತ್ರಿ ಖುಷಿ ಕಪೂರ್ ಅವರು ಶ್ರೀದೇವಿಯವರ ಹಳೇಯ ಗೌನ್‌ ಧರಿಸಿ ತಾಯಿಯನ್ನು ಸ್ಮರಿಸಿಕೊಂಡಿದ್ದಾರೆ.

ಅಗಸ್ತ್ಯ ನಂದ ಅವರ ಚೊಚ್ಚಲ ಈ ಸಿನಿಮಾದ ವಿಶೇಷ ಪ್ರದರ್ಶನದಲ್ಲಿ ಇಡೀ ಬಚ್ಚನ್ ಕುಟುಂಬವು ಹಾಜರಿತ್ತು. ಐಶ್ವರ್ಯಾ ರೈ ಬಚ್ಚನ್, ಅಭಿಷೇಕ್ ಬಚ್ಚನ್, ಮಗಳು ಆರಾಧ್ಯ, ಶ್ವೇತಾ ಬಚ್ಚನ್ ಜತೆಗೆ ಅವರ ಮಗಳು ನವ್ಯಾ, ಜಯಾ ಮತ್ತು ಅಮಿತಾಭ್‌ ಎಲ್ಲರೂ ಭಾಗಿಯಾಗಿದ್ದರು. ʻದಿ ಆರ್ಚೀಸ್​’ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆ ಆಗುತ್ತಿಲ್ಲ. ಬದಲಿಗೆ, ನೇರವಾಗಿ ನೆಟ್​ಫ್ಲಿಕ್ಸ್​ ಒಟಿಟಿ ಮೂಲಕ ವೀಕ್ಷಣೆಗೆ ಲಭ್ಯವಾಗಲಿದೆ.

ಸಿನಿಮಾದ ಪ್ರೀಮಿಯರ್​ ಶೋನಲ್ಲಿ ಬಚ್ಚನ್‌ ಅವರ ಕುಟುಂಬ ಕಪ್ಪು ಬಣ್ಣದ ಬಟ್ಟೆಯಲ್ಲಿ ಮಿಂಚಿದ್ದರು. ಇನ್ನೂ ವಿಶೇಷ ಅಂದರೆ ಅಮಿತಾಭ್ ಬಚ್ಚನ್ ಅವರ ಕಿರಿಯ ಸಹೋದರ ಅಜಿತಾಭ್‌ ಅಪರೂಪವಾಗಿ ಕ್ಯಾಮೆರಾ ಮುಂದೆ ಕಂಡರು. ಕಾಲೇಜು ಪದವಿಯ ನಂತರ, ಅಜಿತಾಭ್ ಉದ್ಯಮಿಯಾದರು. ಭಾರತದಲ್ಲಿ ಕೆಲವು ವರ್ಷಗಳ ಕಾಲ ಕೆಲಸ ಮಾಡಿದ ನಂತರ, ಅವರು ನಂತರ ಲಂಡನ್‌ಗೆ ತೆರಳಿದರು. ಅಲ್ಲೇ ಉದ್ಯಮಿಯಾಗಿ ಮುಂದುವರಿದರು. ರಾಮೋಲಾರನ್ನು ವರಸಿದ ಅಜಿತಾಭ್‌ ಅವರಿಗೆ ಮೂರು ಮಕ್ಕಳಿದ್ದಾರೆ. ಅಜಿತಾಭ್ ಮತ್ತು ಅಮಿತಾಭ್ ಅವರಿಗೆ 5 ವರ್ಷಗಳ ವಯಸ್ಸಿನ ಅಂತರವಿದೆ. ಏಕಾಏಕಿ ಅಜಿತಾಭ್ ಮತ್ತು ಅಮಿತಾಭ್ ಒಟ್ಟಿಗೆ ಕಂಡ ಫ್ಯಾನ್ಸ್‌ ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ: Big B style: ಬಿಗ್‌ ಬಿ ಅಮಿತಾಭ್ ಬಚ್ಚನ್‌ರಿಂದ ಕಲಿಯಬಹುದಾದ ಸ್ಟೈಲಿಂಗ್‌ ಟ್ರಿಕ್ಸ್!

ಶ್ರೀದೇವಿ ಮತ್ತು ಬೋನಿ ಕಪೂರ್​ ದಂಪತಿಯ ಮೊದಲ ಪುತ್ರಿ ಜಾನ್ವಿ ಕಪೂರ್ ಈಗಾಗಲೇ ಹಲವು ಭಾಷೆಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ‘ದಿ ಆರ್ಚೀಸ್​’ ಸಿನಿಮಾ ಮೂಲಕ ಎರಡನೇ ಪುತ್ರಿ ಖುಷಿ ಕಪೂರ್‌ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಕಾರ್ಯಕ್ರಮಕ್ಕೆ ಬರುವಾಗ ಖುಷಿ ಕಪೂರ್​ ಅವರು ಶ್ರೀದೇವಿಯ ಹಳೇ ಗೌನ್​ ಧರಿಸಿ ಬಂದಿದ್ದಾರೆ. ಖುಷಿ ಕಪೂರ್ ಅವರ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ.

ದಿ ಆರ್ಚೀಸ್‌ನಲ್ಲಿ ಸುಹಾನಾ ಮತ್ತು ಅಗಸ್ತ್ಯರಲ್ಲದೆ, ಚಿತ್ರದಲ್ಲಿ ಬೋನಿ ಕಪೂರ್ ಅವರ ಕಿರಿಯ ಮಗಳು ಖುಷಿ ಕಪೂರ್, ಮಿಹಿರ್ ಅಹುಜಾ, ಡಾಟ್, ಯುವರಾಜ್ ಮೆಂಡಾ ಮತ್ತು ವೇದಂಗ್ ರೈನಾ ಕೂಡ ನಟಿಸಿದ್ದಾರೆ. ಈಗಾಗಲೇ ಟ್ರೈಲರ್‌ ನೋಡುಗರ​ ಗಮನ ಸೆಳೆದಿದೆ.

Continue Reading

ದೇಶ

Mamata Banerjee: ಸಲ್ಮಾನ್‌ ಖಾನ್‌ ಜತೆ ಮಮತಾ ಬ್ಯಾನರ್ಜಿ ಡ್ಯಾನ್ಸ್‌! ವಿಡಿಯೊ ಇಲ್ಲಿದೆ

Mamata Banerjee: 29ನೇ ಕೋಲ್ಕತ್ತಾ ಇಂಟರ್​ನ್ಯಾಷನಲ್ ಫಿಲ್ಮ್​ ಫೆಸ್ಟಿವಲ್‌ನಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಡ್ಯಾನ್ಸ್‌ ಮಾಡಿದ್ದು, ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

mamtha
Koo

ಕೋಲ್ಕತ್ತಾ: ಸದಾ ರಾಜಕೀಯದಲ್ಲಿ ಬ್ಯುಸಿ ಇರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ರಾಜಕೀಯವನ್ನೆಲ್ಲ ಮರೆತು ವೇದಿಕೆ ಮೇಲೆ ಡ್ಯಾನ್ಸ್‌ ಮಾಡಿದ್ದಾರೆ. ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ಜತೆ ಮಮತಾ ಸ್ಟೆಪ್‌ ಮಾಡಿದ್ದು, ವಿಡಿಯೊ ವೈರಲ್‌ ಆಗಿದೆ. ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 29ನೇ ಕೋಲ್ಕತ್ತಾ ಇಂಟರ್​ನ್ಯಾಷನಲ್ ಫಿಲ್ಮ್​ ಫೆಸ್ಟಿವಲ್ (KIFF) ಮಂಗಳವಾರ (ಡಿಸೆಂಬರ್ 6) ಉದ್ಘಾಟನೆಗೊಂಡಿತು. ಈ ವೇಳೆ ಮಮತಾ ಡ್ಯಾನ್ಸ್‌ ಮಾಡಿ ಬೆರಗು ಮೂಡಿಸಿದರು.

ಸಲ್ಮಾನ್ ಖಾನ್ ಹಾಗೂ ಇತರ ಸೆಲೆಬ್ರಿಟಿಗಳು ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದರು. ಆ ವೇಳೆ ಮಮತಾ ಬ್ಯಾನರ್ಜಿ ವೇದಿಕೆ ಮೇಲೆ ಕುಳಿತಿದ್ದರು. ಈ ವೇಳೆ ಡ್ಯಾನ್ಸ್ ಮಾಡುವಂತೆ ಮಮತಾ ಬ್ಯಾನರ್ಜಿ ಬಳಿ ಬಂದು ಸಲ್ಮಾನ್ ಖಾನ್ ಮನವಿ ಮಾಡಿದರು. ಅದಕ್ಕೆ ಮಮತಾ ಬ್ಯಾನರ್ಜಿ ಒಪ್ಪಿ ಡ್ಯಾನ್ಸ್ ಮಾಡಿದ್ದಾರೆ. ಈ ವೇಳೆ ಸಲ್ಮಾನ್, ಮಮತಾ ಮಾತ್ರವಲ್ಲದೆ ಮಹೇಶ್ ಭಟ್, ಅನಿಲ್ ಕಪೂರ್, ಸೋನಾಕ್ಷಿ ಸಿನ್ಹಾ, ಶತ್ರುಘ್ನ ಸಿನ್ಹಾ ಕೂಡ ಸೊಂಟ ಬಳುಕಿಸಿದ್ದಾರೆ. ವೇದಿಕೆಯಲ್ಲೇ ಇದ್ದ ಸೌರವ್‌ ಗಂಗೂಲಿ ನಗುತ್ತಾ ಚಪ್ಪಾಳೆ ತಟ್ಟುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿದೆ.

ಮಮತಾ ಬ್ಯಾನರ್ಜಿ ಜಾಸ್ತಿ ಸ್ಟೆಪ್ಸ್‌ ಹಾಕಿಲ್ಲ. ಬರೀ ಕೈ ಬೀಸಿದ್ದಾರೆ. ಇದನ್ನೇ ಕೆಲವರು ಟ್ರೋಲ್‌ ಮಾಡುತ್ತಿದ್ದಾರೆ. ಅಲ್ಲದೆ ಮಮತಾ ಬ್ಯಾನರ್ಜಿ ಅವರಿಂದ ಸ್ಟೆಪ್‌ ಮಾಡಿಸಿದ ಸಲ್ಮಾನ್‌ ಖಾನ್‌ ಅವರಿಗೂ ಹಲವರು ಮೆಚ್ಚುಗೆ ಸೂಚಿಸಿದ್ದಾರೆ. ಡಿಸೆಂಬರ್ 12ರವರೆಗೆ ಚಲನಚಿತ್ರೋತ್ಸವ ನಡೆಯಲಿದೆ. ಈ ವೇಳೆ 39 ದೇಶಗಳ 219 ಚಲನಚಿತ್ರ ಪ್ರದರ್ಶನವಾಗಲಿದೆ. ಹಲವು ಸೆಲೆಬ್ರಿಟಿಗಳು, ನಿರ್ದೇಶಕರು, ವಿಮರ್ಶಕರು ಭಾಗಿ ಆಗಲಿದ್ದಾರೆ.

ಇದನ್ನೂ ಓದಿ: Aamir Khan: ಚೆನ್ನೈ ಪ್ರವಾಹ ಪೀಡಿತ ಸ್ಥಳದಿಂದ ಬಾಲಿವುಡ್‌ ನಟ ಆಮೀರ್ ಖಾನ್ ಗ್ರೇಟ್‌ ಎಸ್ಕೇಪ್‌

Continue Reading

ಬಾಲಿವುಡ್

Animal Movie: 150 ಕೋಣೆಯ ಅರಮನೆಯಲ್ಲಿ ʻಅನಿಮಲ್‌ʼ ಶೂಟಿಂಗ್‌; ಇದು ಯಾರ ಬಂಗಲೆ ನೋಡಿ!

Animal Movie: ಚಿತ್ರದಲ್ಲಿ ಚಿತ್ರಿಸಲಾದ ಐಷಾರಾಮಿ ಬಂಗಲೆ, ಬಾಲಿವುಡ್ ನಟ ಸೈಫ್ ಅಲಿ ಖಾನ್ ಒಡೆತನದ 800 ಕೋಟಿ ರೂ. ಪಟೌಡಿ ಅರಮನೆ ಎಂದರೆ ನೀವು ನಂಬಲೇ ಬೇಕು.

VISTARANEWS.COM


on

Ranbir Kapoor Animal was shot at Saif Ali Khan’s 800 crore Pataudi Palace
Koo

ಬೆಂಗಳೂರು: ರಣಬೀರ್ ಕಪೂರ್ ಅವರ ʻಅನಿಮಲ್‌ʼ ಸಿನಿಮಾ (Animal Movie) ಆರು ದಿನಗಳಲ್ಲಿ ವಿಶ್ವಾದ್ಯಂತ 500 ಕೋಟಿ ರೂ. ಗಡಿ ದಾಟಲು ಸಿದ್ಧವಾಗಿದೆ. ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಚಿತ್ರವು ಈಗ ಜಾಗತಿಕ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 425 ಕೋಟಿ ರೂ. ಗಳಿಸಿದೆ. ಇದರ ಜತೆಗೆ ಸಾಕಷ್ಟು ಚರ್ಚೆಯಲ್ಲಿರುವುದು ಸಿನಿಮಾದ ಶೂಟಿಂಗ್‌ ಸ್ಪಾಟ್‌. ಅದ್ಧೂರಿ ಬಜೆಟ್‌ನಲ್ಲಿ ನಿರ್ಮಿಸಲಾದ ಈ ಸಿನಿಮಾ ಇಂಗ್ಲೆಂಡ್, ಸ್ಕಾಟ್ಲೆಂಡ್, ಮುಂಬೈ, ಗುರುಗ್ರಾಮ, ದೆಹಲಿ ಮತ್ತು ಮನಾಲಿ ಸೇರಿದಂತೆ ವಿವಿಧ ಕಡೆಗಳಲ್ಲಿ ಶೂಟಿಂಗ್‌ ಆಗಿದೆ. ಇನ್ನು ಬಹುಮುಖ್ಯವಾಗಿ ಚಿತ್ರದಲ್ಲಿ ಚಿತ್ರಿಸಲಾದ ಐಷಾರಾಮಿ ಸಿಂಗ್ ಕುಟುಂಬದ ನಿವಾಸ ಶೂಟಿಂಗ್‌ ಆಗಿದ್ದು, ಬಾಲಿವುಡ್ ನಟ ಸೈಫ್ ಅಲಿ ಖಾನ್ ಒಡೆತನದ 800 ಕೋಟಿ ರೂ. ಮೌಲ್ಯದ ಪಟೌಡಿ ಅರಮನೆಯಲ್ಲಿ ಎಂದರೆ ನೀವು ನಂಬಲೇ ಬೇಕು!

1935ರಲ್ಲಿ ಪಟೌಡಿಯ ಕೊನೆಯ ಆಡಳಿತದ ನವಾಬ್ ಇಫ್ತಿಕರ್ ಅಲಿ ಖಾನ್ ನಿರ್ಮಿಸಿದ ಅರಮನೆಯು, ಸೈಫ್ ಅಲಿ ಖಾನ್ ಅವರ ತಂದೆಯ ಮರಣದ ನಂತರ 2014ರಲ್ಲಿ ಅವರ ಕೈಗೆ ಹಸ್ತಾಂತರವಾಯಿತು. ಹರಿಯಾಣದ ಪಟೌಡಿಯಲ್ಲಿ ಇರುವ ಈ ಪಟೌಡಿ ಅರಮನೆಯು 10 ಎಕರೆಗಳಷ್ಟು ವಿಸ್ತಾರವಾಗಿದೆ. ಮಲಗುವ ಕೋಣೆಗಳು, ಡ್ರೆಸ್ಸಿಂಗ್‌ ರೂಮ್‌ಗಳು, ಒಳಗೊಂಡಂತೆ 150ಕ್ಕೂ ಹೆಚ್ಚು ರೂಮ್‌ಗಳನ್ನು ಹೊಂದಿದೆ. ಹೊರಾಂಗಣದಲ್ಲಿ ಈಜುಕೊಳ, ಕೃಷಿ ಪ್ರದೇಶ, ಒಳಗೊಂಡಿದೆ. ಮೂಲತಃ ಆಸ್ಟ್ರಿಯನ್ ವಾಸ್ತುಶಿಲ್ಪಿ ಕಾರ್ಲ್ ಮೊಲ್ಟ್ಜ್ ವಾನ್ ಹೈಂಜ್ ಅವರ ಸಹಯೋಗದೊಂದಿಗೆ ಬ್ರಿಟಿಷ್ ವಾಸ್ತುಶಿಲ್ಪಿ ರಾಬರ್ಟ್ ಟಾರ್ ರಸ್ಸೆಲ್ ವಿನ್ಯಾಸಗೊಳಿಸಿದ್ದಾರೆ. ಈ ಅರಮನೆಯು ಭಾರತೀಯ ಮತ್ತು ಇಸ್ಲಾಮಿಕ್ ವಾಸ್ತುಶಿಲ್ಪದ ಶೈಲಿಗಳ ಮಿಶ್ರಣವನ್ನು ಹೊಂದಿದೆ. ಸೈಫ್ ಅಲಿ ಖಾನ್ ಮಾಲೀಕತ್ವವನ್ನು ವಹಿಸಿಕೊಂಡ ನಂತರ ಒಳಾಂಗಣದಲ್ಲಿ ಸಾಕಷ್ಟು ಬದಲಾವಣೆಗಳನ್ನು ಮಾಡಲಾಗಿದೆಯಂತೆ. ಪಟೌಡಿ ಅರಮನೆಯಲ್ಲಿ ಈ ಅನಿಮಲ್‌ಗೂ ಮುಂಚೆ ಇತರ ಬಾಲಿವುಡ್ ಸಿನಿಮಾಗಳು ಶೂಟಿಂಗ್‌ ಆಗಿತ್ತು. ಶಾರುಖ್ ಖಾನ್ ಮತ್ತು ಪ್ರೀತಿ ಜಿಂಟಾ ನಟಿಸಿದ ʻವೀರ್ ಝರಾʼ ಮತ್ತು ʻರಂಗ್ ದೇ ಬಸಂತಿʼ ಕೂಡ ಸೇರಿವೆ. ಪಟೌಡಿ ಅರಮನೆಯಲ್ಲಿ ಸೈಫ್‌ ಮತ್ತು ಕರೀನಾ ಕಪೂರ್ ಕುಟುಂಬದ ಕಾರ್ಯಕ್ರಮಗಳೂ ನಡೆದಿವೆ.

ಇದನ್ನೂ ಓದಿ: Animal Box Office: 200 ಕೋಟಿ ರೂ. ಗಡಿ ದಾಟಿದ ʻಅನಿಮಲ್‌ʼ!

Ranbir Kapoor Animal was shot at Saif Ali Khan’s 800 crore Pataudi Palace

ಈಗಾಗಲೇ ಅನಿಮಲ್‌ ಸಿನಿಮಾ ಕಲೆಕ್ಷನ್‌ನಲ್ಲಿ 500 ಕೋಟಿ ರೂ. ಗಡಿ ದಾಟುವಲ್ಲಿ ಇದೆ. ಚಲನಚಿತ್ರ ವ್ಯಾಪಾರ ವಿಶ್ಲೇಷಕ ರಮೇಶ್ ಬಾಲಾ ಟ್ವೀಟ್ ಮಾಡಿ ಉತ್ತರ ಅಮೆರಿಕಾದಲ್ಲಿ ಅತಿ ಹೆಚ್ಚು ಕಲೆಕ್ಷನ್‌ ಮಾಡಿರುವ ಸಿನಿಮಾದಲ್ಲಿ ಅನಿಮಲ್‌ 5ನೇ ಭಾರತೀಯ ಚಲನಚಿತ್ರವಾಗಿದೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ರೆಡ್ ಚಿಲ್ಲಿಸ್ ಎಂಟರ್‌ಟೈನ್‌ಮೆಂಟ್ ಪ್ರಕಾರ. ನಾಲ್ಕು ದಿನಗಳಲ್ಲಿ ಜಾಗತಿಕವಾಗಿ 520.79 ಕೋಟಿ ಗಳಿಸಿದ ಈ ವರ್ಷದ ಅತಿ ದೊಡ್ಡ ಹಿಟ್ ಸಿನಿಮಾ ʻಜವಾನ್‌ʼಗೆ ಹೋಲಿಸಿದರೆ, ಅನಿಮಲ್ ಇನ್ನೂ ಹಿಂದುಳಿದಿದೆ. ತರಣ್ ಆದರ್ಶ್ ಪ್ರಕಾರ ಪಠಾಣ್ ನಾಲ್ಕು ದಿನಗಳಲ್ಲಿ 429 ಕೋಟಿ ರೂ. ಗಳಿಕೆ ಕಂಡಿತ್ತು.

ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಕೂಡ ʻಅನಿಮಲ್‌ʼ ಸಿನಿಮಾ ರಣಬೀರ್ ಅವರ ವೃತ್ತಿಜೀವನದ ಅತಿದೊಡ್ಡ ಓಪನರ್ ಎಂದು ಭವಿಷ್ಯ ನುಡಿದಿದ್ದರು. ’ಕಬೀರ್ ಸಿಂಗ್’ ನಂತರ ‘ಅನಿಮಲ್’ ಸಂದೀಪ್ ರೆಡ್ಡಿ ವಂಗಾ ಅವರ ಎರಡನೇ ಬಾಲಿವುಡ್ ಚಿತ್ರವಾಗಿತ್ತು.

Continue Reading

ದೇಶ

Aamir Khan: ಚೆನ್ನೈ ಪ್ರವಾಹ ಪೀಡಿತ ಸ್ಥಳದಿಂದ ಬಾಲಿವುಡ್‌ ನಟ ಆಮೀರ್ ಖಾನ್ ಗ್ರೇಟ್‌ ಎಸ್ಕೇಪ್‌

Aamir Khan: ಚೆನ್ನೈಯ ಪ್ರವಾಹ ಪೀಡಿತ ಸ್ಥಳದಿಂದ ಬಾಲಿವುಡ್‌ ನಟ ಆಮೀರ್‌ ಖಾನ್‌ ಅವರನ್ನು ರಕ್ಷಿಸಲಾಗಿದೆ. ಸದ್ಯ ಈ ಫೋಟೊ ವೈರಲ್‌ ಆಗಿದೆ.

VISTARANEWS.COM


on

chennai
Koo

ಚೆನ್ನೈ: ಚೆನ್ನೈನ ಪ್ರವಾಹ ಪೀಡಿತ ಸ್ಥಳದಿಂದ ಬಾಲಿವುಡ್‌ ನಟ ಆಮೀರ್ ಖಾನ್ (Aamir Khan) ಅವರನ್ನು ರಕ್ಷಿಸಲಾಗಿದೆ. ಆಮೀರ್ ಖಾನ್ ಮತ್ತು ತಮಿಳು ನಟ ವಿಷ್ಣು ವಿಶಾಲ್ (Vishnu Vishal), ಪ್ರವಾಹ ಪೀಡಿತ ಇತರರೊಂದಿಗೆ ರಕ್ಷಣಾ ದೋಣಿಯಲ್ಲಿ ಕುಳಿತಿರುವ ಫೋಟೊ ವೈರಲ್ ಆಗಿದೆ. ಫೋಟೋಗಳಲ್ಲಿ ಆಮೀರ್ ಮತ್ತು ವಿಷ್ಣು ವಿಶಾಲ್ ರಕ್ಷಣಾ ಅಧಿಕಾರಿಗಳಿಂದ ಸಹಾಯ ಪಡೆಯುತ್ತಿರುವುದನ್ನೂ ಕಾಣಬಹುದು. ಸುರಕ್ಷಿತ ಸ್ಥಳಕ್ಕೆ ತೆರಳಿದ ಬಳಿಕ ಅವರು ಫೋಟೊಗಳಿಗೆ ಪೋಸು ನೀಡಿದ್ದಾರೆ.

ಈ ಫೋಟೊ ವಿಷ್ಣು ವಿಶಾಲ್ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ನೆರೆಗೆ ಸಿಲುಕಿದ ನಮ್ಮಂತಹ ನೂರಾರು ಜನರಿಗೆ ಸಹಾಯ ಮಾಡಿದ ಅಗ್ನಿಶಾಮಕ ಮತ್ತು ಇತರ ಇಲಾಖೆಗಳ ಸಿಬ್ಬಂದಿಗೆ ಧನ್ಯವಾದಗಳು. ಕರಪಕ್ಕಂನಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ. ಈಗಾಗಲೇ 3 ದೋಣಿಗಳು ಕಾರ್ಯನಿರ್ವಹಿಸುತ್ತಿರುವುದನ್ನು ನೋಡಿದೆ. ಇಂತಹ ಸಂಧಿಗ್ಧ ಸಮಯದಲ್ಲಿ ತಮಿಳುನಾಡು ಸರ್ಕಾರದ ಉತ್ತಮ ಕೆಲಸ ಮಾಡುತ್ತಿದೆ. ಅವಿರತವಾಗಿ ಕೆಲಸ ಮಾಡುತ್ತಿರುವ ಎಲ್ಲರಿಗೂ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ವಿದ್ಯುತ್ ಮತ್ತು ನೆಟ್‌ವರ್ಕ್‌ ಇಲ್ಲದೆ ಚೆನ್ನೈನ ತಮ್ಮ ಮನೆಯಲ್ಲಿ ಸಿಲುಕಿಕೊಂಡಿದ್ದೇನೆ ಎಂದು ವಿಷ್ಣು ವಿಶಾಲ್‌ ಈ ಹಿಂದೆ ಬಹಿರಂಗಪಡಿಸಿದ್ದರು. ತನ್ನ ಮನೆಯೊಳಗೆ ನೀರು ನುಗ್ಗಿದೆ ಎಂದು ತಿಳಿಸಿದ್ದರು. ಫೋಟೊಗಳನ್ನು ಹಂಚಿಕೊಂಡಿದ್ದ ಅವರು, “ನೀರು ನನ್ನ ಮನೆಯೊಳಗೆ ನುಗ್ಗುತ್ತಿದೆ. ಕರಪಕ್ಕಂನಲ್ಲಿ ನೀರಿನ ಮಟ್ಟ ಅಪಾಯಕಾರಿಯಾಗಿ ಏರುತ್ತಿದೆ. ನಾನು ಸಹಾಯಕ್ಕಾಗಿ ಕರೆ ಮಾಡಿದ್ದೇನೆ. ವಿದ್ಯುತ್ ಇಲ್ಲ, ವೈಫೈ ಇಲ್ಲ, ಫೋನ್ ಸಿಗ್ನಲ್ ಇಲ್ಲ, ಏನೂ ಇಲ್ಲ. ಒಂದು ನಿರ್ದಿಷ್ಟ ಸ್ಥಳದಲ್ಲಿ ಟೆರೇಸ್‌ನಲ್ಲಿ ಮಾತ್ರ ನನಗೆ ಕೆಲವು ಸಿಗ್ನಲ್ ಸಿಗುತ್ತದೆʼʼ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ಧಾರಾಕಾರ ಮಳೆ

ಚೆನ್ನೈ, ಚೆಂಗಲ್ಪಟ್ಟು, ಕಾಂಚೀಪುರಂ, ನಾಗಪಟ್ಟಿಣಂ, ಕಡಲೂರು ಮತ್ತು ತಿರುವಳ್ಳೂರು ಜಿಲ್ಲೆಗಳು ಮಳೆಯಿಂದಾಗಿ ಹಾನಿಗೊಳಗಾಗಿವೆ. ಚೆನ್ನೈನ ಹೆಚ್ಚಿನ ಭಾಗಗಳು ಪ್ರಸ್ತುತ ನೀರಿನಲ್ಲಿ ಮುಳುಗಿವೆ. ತಗ್ಗು ಪ್ರದೇಶಗಳಲ್ಲಿ ಭಾರೀ ಪ್ರವಾಹ ಕಂಡು ಬಂದಿದ್ದು, ರಕ್ಷಣಾ ಸಿಬ್ಬಂದಿ ನಿರಂತರವಾಗಿ ಕಾರ್ಯ ನಿರತರಾಗಿದ್ದಾರೆ. ನಿಂತ ನೀರನ್ನು ತೆರವುಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಕೆಲವು ಪ್ರದೇಶಗಳಲ್ಲಿ, ನೀರು ತುಂಬಿದ ರಸ್ತೆಗಳಲ್ಲಿ ಕಾರುಗಳು ತೇಲುತ್ತಿರುವ ದೃಶ್ಯ ವೈರಲ್‌ ಆಗಿತ್ತು.

ಇದನ್ನೂ ಓದಿ: Cyclone Michaung: ಮಿಚಾಂಗ್ ಚಂಡಮಾರುತದಿಂದ 8 ಸಾವು; ಶಾಲೆ, ಬ್ಯಾಂಕ್‌ ಕ್ಲೋಸ್‌

ನೆರವಿಗೆ ಬಂದ ಸಹೋದರರು

ಈ ಮಧ್ಯೆ ತಮಿಳು ಚಿತ್ರರಂಗದ ನಟರಾದ ಸೂರ್ಯ ಮತ್ತು ಕಾರ್ತಿ 10 ಲಕ್ಷ ರೂ.ಗಳ ಆರಂಭಿಕ ದೇಣಿಗೆಯನ್ನು ಘೋಷಿಸಿದ್ದಾರೆ. ಅಗತ್ಯವಿರುವ ಯಾವುದೇ ರೀತಿಯ ಸಹಾಯ ಒದಗಿಸಲು ಈ ಹಣವನ್ನು ಬಳಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ನಟರ ಅಭಿಮಾನಿ ಸಂಘಗಳ ಮೂಲಕ ನೆರವು ನೀಡಲಾಗುತ್ತದೆ.

ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡು ಬೀಸುತ್ತಿರುವ ಮಿಚಾಂಗ್‌ ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಇದುವರೆಗೆ 8 ಮಂದಿ ಮೃತಪಟ್ಟಿದ್ದಾರೆ. ಹಲವೆಡೆ ಭೂಕುಸಿತವಾಗಿದೆ. ಕಾರು- ಬೈಕುಗಳು ಕೊಚ್ಚಿಕೊಂಡು ಹೋಗಿವೆ. ಮನೆಗಳು ಕುಸಿದಿವೆ. ಕೋಟಿಗಟ್ಟಲೆ ಆಸ್ತಿಗೆ ಹಾನಿಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading
Advertisement
cleaning
ದೇಶ15 mins ago

ಒಳ ಚರಂಡಿ ಸ್ವಚ್ಛಗೊಳಿಸುವಾಗ 5 ವರ್ಷಗಳಲ್ಲಿ 443 ಕಾರ್ಮಿಕರ ಸಾವು!

Ajitabh Bachchan, Younger Brother Of Amitabh At The Archies Film Screening
ಬಾಲಿವುಡ್17 mins ago

The Archies Film: ನಿಮಗೆ ಅಮಿತಾಭ್‌ ತಮ್ಮ ಅಜಿತಾಭ್‌ ಗೊತ್ತಾ? ಅವರೇ ಇವರು!

MLA Basanagouda Patil Yatnal and CM Siddaramaiah
ಕರ್ನಾಟಕ19 mins ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ32 mins ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Khalistani Terrorist Pannun
ದೇಶ50 mins ago

ಸಂಸತ್ತಿನ ಮೇಲೆ ಡಿ.13ರಂದು ಉಗ್ರ ದಾಳಿ: ಬೆದರಿಕೆ ವಿಡಿಯೋ ಹರಿಬಿಟ್ಟ ಖಲಿಸ್ತಾನಿ ಉಗ್ರ ಪನ್ನುನ್‌

lidkar ambassador dolly dhananjay Officially
South Cinema1 hour ago

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Government Job Vistara Exclusive and CM Siddaramaiah
ಉದ್ಯೋಗ1 hour ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ1 hour ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ2 hours ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್2 hours ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

MLA Basanagouda Patil Yatnal and CM Siddaramaiah
ಕರ್ನಾಟಕ19 mins ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ32 mins ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ1 hour ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ2 hours ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ9 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ17 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ18 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ18 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

ಟ್ರೆಂಡಿಂಗ್‌