Pathaan Movie: ವಿಶ್ವಾದ್ಯಂತ ಪಠಾಣ್‌ ಗರ್ಜನೆ: ಭಾರತದಲ್ಲಿ 300 ಪ್ರದರ್ಶನಗಳನ್ನು ಹೆಚ್ಚಿಸಿದ ಚಿತ್ರತಂಡ Vistara News

ಬಾಲಿವುಡ್

Pathaan Movie: ವಿಶ್ವಾದ್ಯಂತ ಪಠಾಣ್‌ ಗರ್ಜನೆ: ಭಾರತದಲ್ಲಿ 300 ಪ್ರದರ್ಶನಗಳನ್ನು ಹೆಚ್ಚಿಸಿದ ಚಿತ್ರತಂಡ

ಭಾರತದಾದ್ಯಂತ 300 (Pathaan Movie ) ಪ್ರದರ್ಶನಗಳನ್ನು ಚಿತ್ರತಂಡ ಹೆಚ್ಚಿಸಿದೆ. ಹಿಂದಿ, ತಮಿಳು ಮತ್ತು ತೆಲುಗು ಪ್ಲ್ಯಾಟ್‌ಫಾರ್ಮ್‌ಗಳಲ್ಲಿ ಪ್ರಪಂಚದಾದ್ಯಂತ ಈಗ ಒಟ್ಟು ಸ್ಕ್ರೀನ್‌ಗಳ ಸಂಖ್ಯೆ 8000 ಆಗಿದೆ. ಪಠಾಣ್‌ ವಿಶ್ವದ 100ಕ್ಕೂ ಹೆಚ್ಚು ದೇಶಗಳಲ್ಲಿ ಬಿಡುಗಡೆಯಾದ ಮೊದಲ ಭಾರತೀಯ ಚಲನಚಿತ್ರವಾಗಿದೆ.

VISTARANEWS.COM


on

Pathaan Film 300 shows increased by exhibitors
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ನಾಲ್ಕು ವರ್ಷಗಳ ನಂತರ ಶಾರುಖ್ ಖಾನ್ ಮತ್ತೆ ತೆರೆ ಮೇಲೆ ಬಂದಿದ್ದಾರೆ. ಪಠಾಣ್‌ ಸಿನಿಮಾ (Pathaan Movie ) ವಿಶ್ವಾದ್ಯಂತ ಬಿಡುಗಡೆಯಾಗಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ದೊಡ್ಡ ಪರದೆಯಲ್ಲಿ ವೀಕ್ಷಿಸಲು ತುದಿಗಾಲಲ್ಲಿ ನಿಂತಿದ್ದರು. ಸಿನಿಮಾಗೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಭಾರತದಾದ್ಯಂತ 300 ಪ್ರದರ್ಶನಗಳನ್ನು ಚಿತ್ರತಂಡ ಹೆಚ್ಚಿಸಿದೆ.

ಶಾರುಖ್‌ ಅಭಿಮಾನಿಗಳು ಕೇಕ್ ಕತ್ತರಿಸುವ ಮೂಲಕ ಮತ್ತು ಸೂಪರ್‌ಸ್ಟಾರ್ ಅವರ ಬೃಹತ್ ಕಟ್-ಔಟ್ ಅನ್ನು ಸ್ಥಾಪಿಸುವ ಮೂಲಕ ಅಭಿಮಾನ ವ್ಯಕ್ತಪಡಿಸಿದ್ದಾರೆ. ಇದೀಗ ಭಾರತದಾದ್ಯಂತ 300 ಪ್ರದರ್ಶನಗಳನ್ನು ಚಿತ್ರತಂಡ ಹೆಚ್ಚಿಸಿದೆ. ಹಿಂದಿ, ತಮಿಳು ಮತ್ತು ತೆಲುಗು ಪ್ಲ್ಯಾಟ್‌ಫಾರ್ಮ್‌ಗಳಲ್ಲಿ ಪ್ರಪಂಚದಾದ್ಯಂತ ಈಗ ಒಟ್ಟು ಸ್ಕ್ರೀನ್‌ಗಳ ಸಂಖ್ಯೆ 8000 ಆಗಿದೆ. ದೇಶೀಯ- 5,500 ಸ್ಕ್ರೀನ್‌ಗಳು, ಅಂತಾರಾಷ್ಟ್ರೀಯ – 2,500 ಪರದೆಗಳು ಆಗಿವೆ. ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಇದುವರೆಗೆ ಬಿಡುಗಡೆಯಾಗದ ಅತಿ ದೊಡ್ಡ ಸಿನಿಮಾವಾಗಿ ಪಠಾಣ್‌ ಬಿಡುಗಡೆ ಕಂಡಿದೆ.

ಇದನ್ನೂ ಓದಿ: Pathaan Movie : ಬಿಡುಗಡೆಗೂ ಮೊದಲೇ 58 ಕೋಟಿ ರೂ. ಬಾಚಿಕೊಂಡ ʼಪಠಾಣ್‌ʼ; 100 ದೇಶಗಳಲ್ಲಿ ಸಿನಿಮಾ ಬಿಡುಗಡೆ

ಇದನ್ನೂ ಓದಿ: Pathaan Movie: ಸಣ್ಣ ಬದಲಾವಣೆಗಳೊಂದಿಗೆ ತೆರೆಗೆ ಅಪ್ಪಳಿಸಿದ ʻಪಠಾಣ್ʼ, ಕೇಸರಿ ಬಿಕಿನಿ ವಿವಾದ ಏನಾಯ್ತು?

ವಿವಿಧ ಮಾಧ್ಯಮಗಳ ವರದಿಗಳ ಪ್ರಕಾರ, ಪಠಾಣ್‌ ವಿಶ್ವದ 100ಕ್ಕೂ ಹೆಚ್ಚು ದೇಶಗಳಲ್ಲಿ ಬಿಡುಗಡೆಯಾದ ಮೊದಲ ಭಾರತೀಯ ಚಲನಚಿತ್ರವಾಗಿದೆ. ಪಠಾಣ್ ಸಿನಿಮಾ ಮೊದಲ ಶೋ ಬೆಳಗ್ಗೆ (Pathaan review) 6 ಗಂಟೆಗೆ ಶುರುವಾಗಿದೆ. ಶಾರುಖ್, ದೀಪಿಕಾ ಪಡುಕೋಣೆ ಮತ್ತು ಜಾನ್ ಹೊರತುಪಡಿಸಿ, ಅಶುತೋಷ್ ರಾಣಾ ಮತ್ತು ಡಿಂಪಲ್ ಕಪಾಡಿಯಾ ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬಾಲಿವುಡ್

Vidyut Jammwal: ಬೆತ್ತಲಾಗಿ ಹಿಮಾಲಯದಲ್ಲಿದ್ದಾರೆ ಈ ಫೇಮಸ್‌ ನಟ! ಸೋಷಿಯಲ್‌ ಮೀಡಿಯಾದಲ್ಲಿ ಫೋಟೊ!

Vidyut Jammwal: ದಕ್ಷಿಣ ಭಾರತದ ಕೆಲವು ಸೂಪರ್‌ಸ್ಟಾರ್ ಸಿನಿಮಾಗಳಲ್ಲಿ ಖಳನಾಯಕನಾಗಿಯೂ ನಟಿಸಿದ್ದಾರೆ. ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಸಂತನಂತೆ ಹಿಮಾಲಯದ ಕಾಡು ಮತ್ತು ನದಿಗಳಲ್ಲಿ ಆದಿವಾಸಿಯಂತೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

VISTARANEWS.COM


on

Vidyut Jammwal
Koo

ಬೆಂಗಳೂರು; ದಳಪತಿ ವಿಜಯ್ ನಟಿಸಿದ ʼತುಪಾಕಿʼ ಸಿನಿಮಾದಲ್ಲಿ ಖಳನಾಯಕನಾಗಿ ನಟಿಸಿ ಗಮನ ಸೆಳೆದಿದ್ದ ನಟ ವಿದ್ಯುತ್ ಜಮ್ವಾಲ್ (Vidyut Jammwal) ಹಿಮಾಲಯದಲ್ಲಿ ಸನ್ಯಾಸಿಯಂತೆ ಮೈ ಮೇಲೆ ಬಟ್ಟೆ ಧರಿಸದೆ ತಿರುಗಾಡುತ್ತಿದ್ದಾರೆ. ಇದೀಗ ಬೆತ್ತಲೆಯಾಗಿರುವ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ನಟನ ಈ ಅವತಾರ ಕಂಡು ಅವರ ಫ್ಯಾನ್ಸ್‌ ಶಾಕ್‌ಗೆ ಒಳಗಾಗಿದ್ದಾರೆ. ಈ ರೀತಿ ನಟ ಇರುವುದಕ್ಕೂ ಕಾರಣ ಕೂಡ ಇದೆ.

ವಿದ್ಯುತ್ ಜಮ್ವಾಲ್ ಅವರು ಇಂದು (ಡಿಸೆಂಬರ್ 10) 43ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಈ ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಸಂತನಂತೆ ಹಿಮಾಲಯದ ಕಾಡು ಮತ್ತು ನದಿಗಳಲ್ಲಿ ಆದಿವಾಸಿಯಂತೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಇಲ್ಲೇ ಸುಮಾರು 10 ದಿನಗಳ ಕಾಲ ಹೀಗೆ ಜೀವನ ನಡೆಸುವುದಾಗಿ ಹೇಳಿಕೊಂಡಿದ್ದಾರೆ.

ʻವಿದ್ಯುತ್ ತನ್ನ ಸಾಮಾಜಿಕ ಮಾಧ್ಯಮದಲ್ಲಿ ಮೂರು ಫೋಟೊಗಳನ್ನು ಹಂಚಿಕೊಂಡರು. ಮೊದಲನೆಯದಲ್ಲಿ ಬಟ್ಟೆಯಿಲ್ಲದೆ ನದಿಯ ಪಕ್ಕ ಕುಳಿತಿರುವುದು. ನೀರಿನಲ್ಲಿ ಸೂರ್ಯ ನಮಸ್ಕಾರವನ್ನು ಮಾಡುತ್ತಿರುವ, ಅಡುಗೆ ಮಾಡುತ್ತಿರುವ ಫೋಟೊಗಳನ್ನು ಹಂಚಿಕೊಂಡಿದ್ದಾರೆ.

ತಮ್ಮ ಟ್ವೀಟ್‌ನಲ್ಲಿ ಈ ಬಗ್ಗೆ ನಟ ಹೇಳಿಕೊಂಡಿದ್ದು, ʻʻದೈವಿಕ ವಾಸಸ್ಥಾನ.. 14 ವರ್ಷಗಳ ಹಿಂದೆ ಈ ಅಭ್ಯಾಸ ಶುರುವಾಯ್ತು. ನನಗಿದು ಅರಿವಿಗೆ ಬರುವ ಮೊದಲೇ ಪ್ರತಿ ವರ್ಷ 7-10 ದಿನಗಳನ್ನು ಏಕಾಂಗಿಯಾಗಿ ಕಳೆಯುವುದು ನನ್ನ ಜೀವನದ ಅವಿಭಾಜ್ಯ ಅಂಗವಾಯಿತು.” ಎಂದು ವಿದ್ಯುತ್ ಹೇಳಿದ್ದಾರೆ.

ತಮ್ಮ ಆಚರಣೆಯನ್ನು ವಿವರಿದ ನಟ , “ಐಷಾರಾಮಿ ಜೀವನದಿಂದ ಕಾಡಿಗೆ ಬಂದ ನಾನು ನನ್ನ ಏಕಾಂತತೆಯನ್ನು ಕಂಡುಕೊಂಡಿದ್ದೇನೆ. ‘ನಾನು ಯಾರು’ ಎಂದು ತಿಳಿದುಕೊಳ್ಳುವ ಮೊದಲ ಹೆಜ್ಜೆ ಇದು. ನಿಸರ್ಗ ಒದಗಿಸಿದ್ದರಲ್ಲೇ ನನ್ನನ್ನು ನಾನೇ ರಕ್ಷಣೆ ಮಾಡಿಕೊಳ್ಳುತ್ತೇನೆ.” ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಅನಿಮಲ್‌ ಸಿನಿಮಾ ನೋಡಿ ಪರ್ಸ್‌ ಬಿಟ್ಟು ಬಂದಳು; ವಾಪಸ್‌ ತರಲು ಹೋದಾಗ ಸೆಕ್ಯುರಿಟಿ ಗಾರ್ಡ್‌ಗೆ ಒದ್ದಳು!

ದಕ್ಷಿಣ ಭಾರತದ ಕೆಲವು ಸೂಪರ್‌ಸ್ಟಾರ್ ಸಿನಿಮಾಗಳಲ್ಲಿ ಖಳನಾಯಕನಾಗಿಯೂ ನಟಿಸಿದ್ದಾರೆ. ‘ಕಮಾಂಡೋ 2’ ಹಾಗೂ ‘ಕಮಾಂಡೋ 3’ ಅಂತಹ ಸೂಪರ್ ಸಿನಿಮಾಗಳನ್ನು ನೀಡಿದ ಬಳಿಕ ಇತ್ತೀಚೆಗಷ್ಟೇ ‘IB71’ ಎನ್ನುವ ಸಿನಿಮಾದಲ್ಲಿ ನಟಿಸಿದ್ದರು. ಸದ್ಯ ನಟನ ಬಾಲಿವುಡ್ ಸಿನಿಮಾಗಳಾದ ‘ಶೇರ್ ಸಿಂಗ್ ರಾಣಾ’ ಹಾಗೂ ‘ಕ್ರ್ಯಾಕ್’ ಚಿತ್ರೀಕರಣ ನಡೆಯುತ್ತಿದೆ.

Continue Reading

ಬಾಲಿವುಡ್

Triptii Dimri: ತೃಪ್ತಿ ಡಿಮ್ರಿಯ ಬೆತ್ತಲೆ ಸೀನ್‌ ನೋಡಿ ಆಘಾತಕ್ಕೆ ಒಳಗಾದ ಪೋಷಕರು

Triptii Dimri: ಸಿನಿಮಾ ಸಕ್ಸೆಸ್‌ಗೆ ಹಲವಾರು ಕಾರಣಗಳಿದ್ದು, ಅವುಗಳಲ್ಲಿ ರಣಬೀರ್ ಕಪೂರ್ ಅವರ ಜತೆ ತೃಪ್ತಿ ಡಿಮ್ರಿ ನಗ್ನವಾಗಿರುವ ಲಿಪ್-ಲಾಕ್ ದೃಶ್ಯ ಕೂಡ ಪ್ರಮುಖ ಕಾರಣ ಎನ್ನಲಾಗುತ್ತಿದೆ. ತೃಪ್ತಿ ಡಿಮ್ರಿ ಈ ಬೋಲ್ಡ್‌ ದೃಶ್ಯವನ್ನು ಕಂಡು ಅವರ ತಂದೆ ತಾಯಿ ಆಘಾತಕ್ಕೆ ಒಳಗಾಗಿದ್ದರು ಎಂದು ನಟಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

VISTARANEWS.COM


on

Tripti Dimri Shares Parents Reaction to Intimate Scenes
Koo

ಬೆಂಗಳೂರು: ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ (Triptii Dimri) ʼಅನಿಮಲ್‌ʼ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡುತ್ತಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್, ತೃಪ್ತಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಹೆಚ್ಚಾಗಿ ಸಿನಿಮಾದಲ್ಲಿ ಸೌಂಡ್‌ ಮಾಡಿದ್ದು ನಟಿ ತೃಪ್ತಿ ಡಿಮ್ರಿ ಅವರ ಬೆತ್ತಲೆ ಸೀನ್‌. ಸಿನಿಮಾ ಸಕ್ಸೆಸ್‌ಗೆ ಹಲವಾರು ಕಾರಣಗಳಿದ್ದು, ಅವುಗಳಲ್ಲಿ ರಣಬೀರ್ ಕಪೂರ್ ಅವರ ಜತೆ ತೃಪ್ತಿ ಡಿಮ್ರಿ ನಗ್ನವಾಗಿರುವ ಲಿಪ್-ಲಾಕ್ ದೃಶ್ಯ ಕೂಡ ಪ್ರಮುಖ ಕಾರಣ ಎನ್ನಲಾಗುತ್ತಿದೆ. ತೃಪ್ತಿ ಡಿಮ್ರಿ ಈ ಬೋಲ್ಡ್‌ ದೃಶ್ಯವನ್ನು ಕಂಡು ಅವರ ತಂದೆ ತಾಯಿ ಆಘಾತಕ್ಕೆ ಒಳಗಾಗಿದ್ದರು ಎಂದು ನಟಿ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

ರಣಬೀರ್ ಕಪೂರ್ ಅಭಿನಯದ ಅನಿಮಲ್ ಚಿತ್ರದಲ್ಲಿ ಅಭಿನಯಿಸಿದ ಬಳಿಕ ನಟಿ ಜನಪ್ರಿಯತೆಯನ್ನು ಗಳಿಸಿದ್ದಾರೆ. ಚಿತ್ರದಲ್ಲಿನ ಅವರ ಅಭಿನಯಕ್ಕಾಗಿ ಅವರು ನ್ಯಾಶನಲ್‌ ಕ್ರಶ್ ಎಂದು ಕರೆಸಿಕೊಳ್ಳುತ್ತಿದ್ದಾರೆ. ಹೆಚ್ಚಾಗಿ ಸಿನಿಮಾದಲ್ಲಿ ಸೌಂಡ್‌ ಮಾಡಿದ್ದು ನಟಿ ತೃಪ್ತಿ ಡಿಮ್ರಿ ಅವರ ಬೆತ್ತಲೆ ಸೀನ್‌. ಈ ಬಗ್ಗೆ ನಟಿ ಮಾತನಾಡಿ “ ಈ ದೃಶ್ಯ ನೋಡಿದ ಕೂಡಲೇ ನನ್ನ ತಂದೆ ತಾಯಿ ಆಘಾತಕ್ಕೆ ಒಳಗಾದರು. ಇಂತಹ ದೃಶ್ಯ ನಾವು ಯಾವುದೇ ಸಿನಿಮಾಗಳಲ್ಲಿ ನೋಡಿಲ್ಲ ಮತ್ತು ನೀನು ಅದನ್ನು ಮಾಡಿದ್ದೀಯಾ. ಹಾಗೆ ಮಾಡಬಾರದಿತ್ತು .ಆದರೂ ಪರವಾಗಿಲ್ಲ. ಪೋಷಕರಾಗಿ ನಮಗೆ ಈ ಬಗ್ಗೆ ತಿಳಿದಿದೆʼʼಎಂದು ನನಗೆ ಸಪೋರ್ಟ್‌ ಮಾಡಿದರು. ʻಈ ದೃಶ್ಯ ಆದ ಮೇಲೆ ಕೂಡ ನಾನು ಅವರಿಗೆ ಹೇಳಿದೆ. ನಾನು ಯಾವುದೇ ತಪ್ಪು ಮಾಡುತ್ತಿಲ್ಲ ಎಂದು. ನಾನು ನಿರ್ವಹಿಸುವ ಪಾತ್ರಕ್ಕೆ ನಾನು 100ರಷ್ಟು ಪ್ರಾಮಾಣಿಕನಾಗಿರುತ್ತೇನೆʼʼಎಂದರು.

ಚಿತ್ರದಲ್ಲಿ ತೃಪ್ತಿ ಡಿಮ್ರಿ ಅವರು ʻಜೋಯಾʼ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಪಾತ್ರದ ತೃಪ್ತಿ ಡಿಮ್ರಿ ಅಭಿನಯವನ್ನು ವಿಮರ್ಶಕರು ಮತ್ತು ಪ್ರೇಕ್ಷಕರು ಶ್ಲಾಘಿಸಿದ್ದಾರೆ. ಇತ್ತೀಚಿನ ಮಾಧ್ಯಮದ ಸಂದರ್ಶನವೊಂದರಲ್ಲಿ “ಜೋಯಾʼ ತಮ್ಮ ಬೋಲ್ಡ್‌ ಸೀನ್‌ ಕುರಿತು ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಮಾತ್ರವಲ್ಲ ಬೋಲ್ಡ್‌ ಸೀನ್‌ ದೃಶ್ಯಗಳ ಚಿತ್ರೀಕರಣದ ಸಮಯದಲ್ಲಿ ರಣಬೀರ್‌ ಕಪೂರ್‌ ಅವರು ಹೇಗೆ ತಮಗೆ ಸಪೋರ್ಟಿವ್‌ ಆಗಿದ್ದರು ಎಂಬದನ್ನು ಬಹಿರಂಗಪಡಿಸಿದ್ದರು.

ಇದನ್ನೂ ಓದಿ: Triptii Dimri: ತೃಪ್ತಿ ಡಿಮ್ರಿ ಬೆತ್ತಲೆ ಸೀನ್‌; 5 ನಿಮಿಷಕ್ಕೊಮ್ಮೆ ನಟಿಯ ಬಳಿ ರಣಬೀರ್ ಕೇಳಿದ್ದೇನು?

ಇಂಟಿಮೇಟ್ ದೃಶ್ಯ ಮಾಡುವಾಗೆಲ್ಲ ರಣಬೀರ್ ಪ್ರತಿ 5 ನಿಮಿಷಗಳಿಗೊಮ್ಮೆ ಬಂದು ʻʻare you Okay” ಎಂದು ಎಷ್ಟೋ ಬಾರಿ ಬಂದು ಕೇಳಿದ್ದೂ ಇದೆ. ಚಿತ್ರೀಕರಣದ ಸಮಯದಲ್ಲಿ ನಿರ್ದೇಶಕರು, ಡಿಒಪಿ (ಛಾಯಾಗ್ರಹಕರು) ಮತ್ತು ನಟರು ಸೇರಿದಂತೆ 5ಕ್ಕಿಂತ ಹೆಚ್ಚು ಜನರಿರಲಿಲ್ಲ. ಸೆಟ್‌ನಲ್ಲಿ ಬೇರೆಯವರಿಗೆ ಅವಕಾಶ ಕೂಡ ನೀಡಲಿಲ್ಲ, ಎಲ್ಲಾ ಮಾನಿಟರ್‌ಗಳನ್ನು ಮುಚ್ಚಲಾಗಿತ್ತು. ಯಾವುದೇ ಹಂತದಲ್ಲಿ ನೀವು ಅಹಿತಕರವೆಂದು ಭಾವಿಸಿದರೆ, ನಮಗೆ ತಿಳಿಸಿ ಎಂದು ನಿರ್ದೇಶಕರು ನನಗೆ ಕೇರ್‌ ಮಾಡಿ ಈ ದೃಶ್ಯವನ್ನು ತೆಗೆದರುʼʼ ಎಂದರು. ರಣಬೀರ್ ಆಗಾಗ ನನ್ನನ್ನು ವಿಚಾರಿಸುತ್ತಾ, ‘ನೀವು ಆರಾಮದಾಯಕವಾಗಿದ್ದೀರಾ?’ ಎಂದು ಕೇಳುತ್ತಿದ್ದರು, ಈ ವಿಷಯಗಳು ನಿಜವಾಗಿಯೂ ಮುಖ್ಯವೆಂದು ನಾನು ಭಾವಿಸುತ್ತೇನೆʼʼ ಎಂದಿದ್ದರು.

ʻʻಈ ರೀತಿ ಶೂಟ್‌ಗಳನ್ನು ಪ್ರೇಕ್ಷಕರು ನೋಡದ ಕಾರಣ ಹಲವು ಬಾರಿ ನನಗೆ ನೆಗೆಟಿವ್‌ ಆಗಿ ಪ್ರಶ್ನಿಸಿದ್ದಾರೆ. ಆದರೆ ಅಂತಹ ಬೋಲ್ಡ್‌ ದೃಶ್ಯಗಳನ್ನು ಮಾಡುವಾಗ ಸೆಟ್‌ಗಳಲ್ಲಿ ಅತ್ಯಂತ ಸೂಕ್ಷ್ಮವಾಗಿರುತ್ತಾರೆ. ನನಗೆ ತುಂಬಾ ಆರಾಮದಾಯಕವಾಗುವಂತೆ ಈ ಸೀನ್‌ ಮಾಡಲಾಯಿತು. ಸ್ವಲ್ಪವೂ ನನಗೆ ಸಮಸ್ಯೆಯಾಗಲಿಲ್ಲʼʼ ಎಂದಿದ್ದರು.

“ನಾನು ಸಂದೀಪ್ ಸರ್ ಅವರೊಂದಿಗೆ ಪಾತ್ರಕ್ಕಾಗಿ ಚರ್ಚೆ ನಡೆಸಿದಾಗ, ಇದು ನೆಗೆಟಿವ್‌ ಪಾತ್ರ ಎಂದು ಅವರು ಹೇಳಿದರು. ನಾನು ಸಂಪೂರ್ಣವಾಗಿ ನೆಗೆಟಿವ್‌ ಆಗಿ ತೋರಿಸುವುದಿಲ್ಲ. ಬದಲಿಗೆ, ಜನರು ಜೋಯಾ ಪಾತ್ರದ ಮುಗ್ಧತೆಯನ್ನು ನೋಡಬೇಕು ಎಂದಿದ್ದರುʼʼ ಎಂದು ಹೇಳಿದ್ದರು.

ಇದನ್ನೂ ಓದಿ: Sunny Deol: ಒಂದೇ ದಿನ ರಿಲೀಸ್‌ ಆಗಲಿದೆ ಗದರ್‌ 2, ಅನಿಮಲ್‌ ಸಿನಿಮಾ : ಸನ್ನಿ ಡಿಯೋಲ್ ಪೋಸ್ಟರ್‌ ಔಟ್‌!

ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಕೂಡ ʻಅನಿಮಲ್‌ʼ ಸಿನಿಮಾ ರಣಬೀರ್ ಅವರ ವೃತ್ತಿಜೀವನದ ಅತಿದೊಡ್ಡ ಓಪನರ್ ಎಂದು ಭವಿಷ್ಯ ನುಡಿದಿದ್ದರು. ’ಕಬೀರ್ ಸಿಂಗ್’ ನಂತರ ‘ಅನಿಮಲ್’ ಸಂದೀಪ್ ರೆಡ್ಡಿ ವಂಗಾ ಅವರ ಎರಡನೇ ಬಾಲಿವುಡ್ ಚಿತ್ರವಾಗಿತ್ತು.

ಕಳೆದ ತಿಂಗಳವರೆಗೆ 6 ಲಕ್ಷ ಫಾಲೋವರ್ಸ್ ಹೊಂದಿದ್ದ ನಟಿ ಈಗ 2.7 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ. ಆಲಿಯಾ ಭಟ್, ನವ್ಯಾ ನಂದಾ, ಮತ್ತು ಕುಶಾ ಕಪಿಲಾ ಸೇರಿದಂತೆ ಜನಪ್ರಿಯ ತಾರೆಯರು ತೃಪ್ತಿ ಅವರನ್ನು ಫಾಲೋ ಮಾಡುತ್ತಿದ್ದಾರೆ.

Continue Reading

ಬಾಲಿವುಡ್

Animal Movie: ‘ಅನಿಮಲ್’ 600 ಕೋಟಿ ರೂ. ಗಳಿಕೆ; ಗಲ್ಲಾಪೆಟ್ಟಿಗೆಯಲ್ಲಿ ಮುಂದುವರಿದ ಕಮಾಲ್!

Animal Movie: ಕೇವಲ 8 ದಿನಗಳಲ್ಲಿ ಈ ಚಿತ್ರವು ರಣಬೀರ್‌ ಕಪೂರ್‌ ನಟನೆಯ ಈ ಹಿಂದಿನ ʼಸಂಜುʼ ಚಿತ್ರದ ಲೈಫ್‌ ಟೈಮ್‌ ಕಲೆಕ್ಷನ್‌ ಹಿಂದಿಕ್ಕುವ ಸಾಧ್ಯತೆ ದಟ್ಟವಾಗಿದೆ.

VISTARANEWS.COM


on

animal cinema
Koo

ಡಿಸೆಂಬರ್‌ 1ರಂದು ತೆರೆಕಂಡ ಬಾಲಿವುಡ್‌ ಚಿತ್ರ ಅನಿಮಲ್‌ (Animal Movie) ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಬಿಡುಗಡೆಯಾದ ಮೊದಲ ದಿನವೇ 60 ಕೋಟಿ ರೂ.ಗಿಂತ ಅಧಿಕ ಕಲೆಕ್ಷನ್‌ ಮಾಡಿತ್ತು. ಇದೀಗ ಚಿತ್ರ ಬಿಡುಗಡೆಗೊಂಡು 1 ವಾರ ಕಳೆದಿದ್ದು, ಸುಮಾರು 600 ಕೋಟಿ ರೂ. ಗಳಿಸಿದೆ. ರಣಬೀರ್‌ ಕಪೂರ್‌ (Ranbir Kapoor) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಮೊದಲ ಬಾರಿ ತೆರೆ ಹಂಚಿಕೊಂಡಿರುವ ಈ ಚಿತ್ರಕ್ಕೆ ತೆಲುಗು ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ.

‘ಅನಿಮಲ್‌’ ಚಿತ್ರ 3 ಗಂಟೆ 21 ನಿಮಿಷಗಳಷ್ಟು ದೀರ್ಘವಾಗಿದೆ. ಅಲ್ಲದೆ ಹಿಂಸಾತ್ಮಕ, ಬೋಲ್ಡ್‌ ದೃಶ್ಯಗಳಿಂದಾಗಿ ಎ ಸರ್ಟಿಫಿಕೇಟ್ ಪಡೆದುಕೊಂಡಿದೆ. ಇವುಗಳ ಹೊರತಾಗಿಯೂ ಚಿತ್ರವು ಭರ್ಜರಿ ಯಶಸ್ಸು ದಾಖಲಿಸಿದೆ. ಕೇವಲ 8 ದಿನಗಳಲ್ಲಿ ಈ ಚಿತ್ರವು ರಣಬೀರ್‌ ಕಪೂರ್‌ ನಟನೆಯ ಈ ಹಿಂದಿನ ʼಸಂಜುʼ ಚಿತ್ರದ ಲೈಫ್‌ ಟೈಮ್‌ ಕಲೆಕ್ಷನ್‌ ಹಿಂದಿಕ್ಕುವ ಸಾಧ್ಯತೆ ದಟ್ಟವಾಗಿದೆ. ಆ ಮೂಲಕ ರಣಬೀರ್ ಕಪೂರ್ ಅವರ ಅತಿದೊಡ್ಡ ಹಿಟ್ ಆಗಿ ಹೊರಹೊಮ್ಮಲಿದೆ. ಎರಡನೇ ವಾರದ ಆರಂಭದಲ್ಲಿಯೇ 400 ಕೋಟಿ ರೂ.ಗಳ ಕ್ಲಬ್‌ಗೆ ಪ್ರವೇಶಿಸಲಿದೆ ಎಂದು ಬಾಲಿವುಡ್‌ ಪಂಡಿತರು ಲೆಕ್ಕ ಹಾಕಿದ್ದಾರೆ.

ಅನಿಮಲ್ ತನ್ನ ಮೊದಲ ವಾರದಲ್ಲಿ ವಿಶ್ವಾದ್ಯಂತ 563 ಕೋಟಿ ರೂ. ಗಳಿಸಿತು ಮತ್ತು ಎರಡನೇ ಶುಕ್ರವಾರ ವಿಶ್ವಾದ್ಯಂತ 600.67 ಕೋಟಿ ವ್ಯಾಪಾರ ಮಾಡಿದೆ.

ಐದು ದಿನಗಳಲ್ಲಿ ಈ ಚಿತ್ರವು ರಣಬೀರ್ ಅವರ ಎರಡನೇ ಅತಿದೊಡ್ಡ ಹಿಟ್ ಆಗಿದ್ದ ʼಬ್ರಹ್ಮಾಸ್ತ್ರ: ಪಾರ್ಟ್ ಒನ್-ಶಿವʼ ಸಿನಿಮಾದ ಕಲೆಕ್ಷನ್‌ ಹಿಂದಿಕ್ಕಿದೆ. ಆ ಚಿತ್ರ ಸುಮಾರು 282.96 ಕೋಟಿ ರೂ.ಗಳನ್ನು ಗಳಿಸಿತ್ತು. ಆರೇ ದಿನಗಳಲ್ಲಿ ʼಅನಿಮಲ್‌ʼ 300 ಕೋಟಿ ರೂ. ಕ್ಲಬ್ ಪ್ರವೇಶಿಸಿತ್ತು. ಗುರುವಾರ (ಡಿಸೆಂಬರ್‌ 7)ರಂದು ಈ ಸಿನಿಮಾ 25.50 ಕೋಟಿ ರೂ. ಗಳಿಸಿದೆ. ಸದ್ಯ ಚಿತ್ರದ ಒಟ್ಟು ಕಲೆಕ್ಷನ್‌ 338.35 ಕೋಟಿ ರೂ. ಆಗಿದೆ. ʼಸಂಜುʼ ಸಿನಿಮಾ ಭಾರತದಲ್ಲಿ 342 ಕೋಟಿ ರೂ. ಗಳಿಸಿತ್ತು. ಶುಕ್ರವಾರದ ಮುಂಗಡ ಬುಕಿಂಗ್ ಪ್ರಕಾರ, ಸುಮಾರು 5 ಕೋಟಿ ರೂ. ಕಲೆಕ್ಷನ್‌ ಆಗಿದೆ. ಅಂದರೆ ʼಅನಿಮಲ್‌ʼ 343 ಕೋಟಿ ರೂ. ಗಳಿಸಿದಂತಾಗುತ್ತದೆ.

ಇದನ್ನೂ ಓದಿ: Animal Movie: ರಣಬೀರ್‌ ಕಪೂರ್‌ ವೃತ್ತಿ ಜೀವನದ ಅತೀ ಹೆಚ್ಚು ಕಲೆಕ್ಷನ್‌ ಮಾಡಿದೆ ʼಅನಿಮಲ್‌ʼ!

ಇನ್ನು ಐದು ದಿನಗಳಲ್ಲಿ ʼಅನಿಮಲ್‌ʼ ಚಿತ್ರವು ವಿಶ್ವಾದ್ಯಂತ 481 ಕೋಟಿ ರೂ.ಗಳಿಸಿದೆ. ಈಗಾಗಲೇ ಜಾಗತಿಕವಾಗಿ ಬಾಕ್ಸ್‌ ಆಫೀಸ್‌ನಲ್ಲಿ 500 ಕೋಟಿ ರೂ. ಕ್ಲಬ್‌ ಸೇರಿದೆ. ‘ಜವಾನ್’, ‘ಪಠಾಣ್‌’ ಮತ್ತು ‘ಗದರ್ 2’ ನಂತರ ‘ಅನಿಮಲ್’ ಈಗ ವರ್ಷದ ನಾಲ್ಕನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರ ಹೊಮ್ಮಿದೆ. ಶಾರುಖ್ ಖಾನ್ ಅವರ ‘ಜವಾನ್’ ಭಾರತದಲ್ಲಿ 643.87 ಕೋಟಿ ರೂ. ಗಳಿಸಿದರೆ, ‘ಪಠಾಣ್’ 543.05 ಕೋಟಿ ರೂ. ಕಲೆಕ್ಷನ್‌ ಮಾಡಿದೆ. ಸನ್ನಿ ಡಿಯೋಲ್ ಅವರ ‘ಗದರ್ 2’ 525.45 ಕೋಟಿ ರೂ. ಗಳಿಕೆ ಮಾಡಿದೆ.

ʼಅನಿಮಲ್‌ʼ ಚಿತ್ರದಲ್ಲಿ ಅನಿಲ್ ಕಪೂರ್, ಬಾಬಿ ಡಿಯೋಲ್ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ತಂದೆ-ಮಗನ ನಡುವಿನ ಸಂಕೀರ್ಣ ಸಂಬಂಧದ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ.

Continue Reading

ಬಾಲಿವುಡ್

Amitabh Bachchan: ಐಶ್ವರ್ಯಾ ರೈ ಇನ್‌ಸ್ಟಾ ಅನ್‌ಫಾಲೋ ಮಾಡಿದ ಅಮಿತಾಭ್‌ ಬಚ್ಚನ್!

Amitabh Bachchan: ಸಲ್ಮಾನ್ ಖಾನ್, ಅಭಿಷೇಕ್ ಬಚ್ಚನ್, ಕತ್ರಿನಾ ಕೈಫ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ವಿರಾಟ್ ಕೊಹ್ಲಿ, ಶ್ವೇತಾ ಬಚ್ಚನ್ ನಂದಾ ಮತ್ತು ನವ್ಯಾ ನವೇಲಿ ನಂದಾ ಸೇರಿದಂತೆ ಅಮಿತಾಭ್ ಇನ್‌ಸ್ಟಾಗ್ರಾಮ್‌ನಲ್ಲಿ ಒಟ್ಟು 74 ಜನರನ್ನು ಫಾಲೋ ಮಾಡುತ್ತಿದ್ದರು. ಇದೀಗ ಏಕಾಏಕಿ ಅನ್‌ಫಾಲೋ ಮಾಡುತ್ತಿದ್ದಾರೆ.

VISTARANEWS.COM


on

Amitabh Bachchan Unfollows Aishwarya
Koo

ಬೆಂಗಳೂರು; ಐಶ್ವರ್ಯಾ ರೈ-ಅಭಿಷೇಕ್ ಬಚ್ಚನ್ ಡಿವೋರ್ಸ್‌ ವದಂತಿ ಬೆನ್ನಲ್ಲೇ ಅಮಿತಾಭ್‌ ಬಚ್ಚನ್ (Amitabh Bachchan) ತಮ್ಮ ಸೊಸೆ, ನಟಿ ಐಶ್ವರ್ಯಾ ರೈ ಬಚ್ಚನ್ ಅವರ ಇನ್‌ಸ್ಟಾಗ್ರಾಮ್‌ ಅನ್‌ಫಾಲೋ ಮಾಡಿದ್ದಾರೆ. ಸಲ್ಮಾನ್ ಖಾನ್, ಅಭಿಷೇಕ್ ಬಚ್ಚನ್, ಕತ್ರಿನಾ ಕೈಫ್, ದೀಪಿಕಾ ಪಡುಕೋಣೆ, ಆಲಿಯಾ ಭಟ್, ವಿರಾಟ್ ಕೊಹ್ಲಿ, ಶ್ವೇತಾ ಬಚ್ಚನ್ ನಂದಾ ಮತ್ತು ನವ್ಯಾ ನವೇಲಿ ನಂದಾ ಸೇರಿದಂತೆ ಅಮಿತಾಭ್ ಇನ್‌ಸ್ಟಾಗ್ರಾಮ್‌ನಲ್ಲಿ ಒಟ್ಟು 74 ಜನರನ್ನು ಫಾಲೋ ಮಾಡುತ್ತಿದ್ದರು. ಇದೀಗ ಏಕಾಏಕಿ ಅನ್‌ಫಾಲೋ ಮಾಡುತ್ತಿದ್ದಾರೆ. ಐಶ್ವರ್ಯಾ ಕೂಡ ಅಭಿಷೇಕ್ ಬಚ್ಚನ್ ಅವರನ್ನು ಮಾತ್ರ ಫಾಲೋ ಮಾಡುತ್ತಿದ್ದಾರೆ.

ಮುಂಬೈನಲ್ಲಿ ನಡೆದ ಅಗಸ್ತ್ಯ ನಂದಾ ಅವರ ಚೊಚ್ಚಲ ಚಲನಚಿತ್ರ ʻದಿ ಆರ್ಚೀಸ್‌ʼ ವಿಶೇಷ ಪ್ರದರ್ಶನದಲ್ಲಿ ಇಡೀ ಬಚ್ಚನ್ ಕುಟುಂಬ ಭಾಗಿಯಾಗಿತ್ತು. ಮೂಲಗಳ ಪ್ರಕಾರ ಅಗಸ್ತ್ಯ ನಂದಾ ಪಾಪರಾಜಿಗಳ ಕ್ಯಾಮೆರಾಗೆ ಪೋಸ್ ಕೊಡುವಾಗ ಐಶ್ವರ್ಯಾ ರೈ ಅವರು ಅಗಸ್ತ್ಯ ಅವರಿಗೆ ನಗುತ್ತಲೇ ಟೀಕೆ ಮಾಡಿದ್ದರಂತೆ. ‘ನೀನು ಕ್ಯಾಮೆರಾ ಫೇಸ್ ಮಾಡೋದು ಕಲಿಯಬೇಕು’ ಎಂದು ಹೇಳಿದ್ದರು. ಈ ವಿಡಿಯೊ ಸಾಕಷ್ಟು ವೈರಲ್ ಆಗಿತ್ತು. ಈ ಕಾರಣದಿಂದಲೇ ಅಮಿತಾಭ್ ಅವರು ಐಶ್ವರ್ಯಾ ಅವರನ್ನು ಅನ್​ಫಾಲೋ ಮಾಡಿದ್ದಾರೆ ಎಂದು ವರದಿಯಾಗಿದೆ.

ಅತ್ತೆ, ನಾದಿನಿ ಕ್ರಾಪ್‌ ಮಾಡಿ ಫೋಟೊ ಹಂಚಿಕೊಂಡಿದ್ದ ಐಶ್ವರ್ಯಾ ರೈ!

ಅಕ್ಟೋಬರ್ 11ರಂದು (Aishwarya Rai) ಅಮಿತಾಭ್‌ ಬಚ್ಚನ್ ತಮ್ಮ 81ನೇ ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಿಸಿಕೊಂಡಿದ್ದರು. ಮಧ್ಯರಾತ್ರಿಯೇ ಸಂಭ್ರಮಾಚರಣೆಯಲ್ಲಿ ಅವರ ಮಕ್ಕಳು ಮತ್ತು ಮೊಮ್ಮಕ್ಕಳು ಭಾಗಿಯಾಗಿ ವಿಶಸ್‌ ಕೂಡ ತಿಳಿಸಿದ್ದರು. ಅಮಿತಾಭ್ ಬಚ್ಚನ್ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ಅವರು ಜಯಾ ಬಚ್ಚನ್, ಆರಾಧ್ಯಾ ಬಚ್ಚನ್ ಮತ್ತು ಅಗಸ್ತ್ಯ ನಂದಾ ಅಮಿತಾಭ್‌ ಅವರ ಜತೆ ಇರುವ ಫೋಟೊ ಕೂಡ ಶೇರ್‌ ಮಾಡಿಕೊಂಡಿದ್ದರು. ಇದೇ ಫೋಟೊವನ್ನು ಅಕ್ಟೋಬರ್ 12ರಂದು ಐಶ್ವರ್ಯಾ ರೈ ಫೋಟೊ ಹಂಚಿಕೊಂಡಿದ್ದರು. ಆದರೆ ಅತ್ತೆ ಜಯಾ ಬಚ್ಚನ್‌, ನವ್ಯಾ ನವೇಲಿ ನಂದಾ ಅವರನ್ನು ಹೊರಗಿಟ್ಟು, ಅಮಿತಾಭ್​ ಬಚ್ಚನ್​ ಜತೆ ಆರಾಧ್ಯಾ ಬಚ್ಚನ್ ಮಾತ್ರ ಕಾಣುವಂತೆ ಕ್ರಾಪ್‌ ಮಾಡಿ ಫೋಟೊ ಪೋಸ್ಟ್‌ ಮಾಡಿದ್ದರು.  ʻʻಐಶ್ವರ್ಯಾ ಬೇಕು ಅಂತಲೇ ಫೋಟೊ ಕ್ರಾಪ್‌ ಮಾಡಿದ್ದಾರೆʼʼ ಎಂದು ನೆಟ್ಟಿಗರು ಕಮೆಂಟ್‌ ಕೂಡ ಮಾಡಿದ್ದರು.

ಇದನ್ನೂ ಓದಿ: Amitabh Bachchan: 50 ಕೋಟಿ ರೂ. ಮೌಲ್ಯದ ಬಂಗಲೆ ಗಿಫ್ಟ್‌ ಕೊಟ್ಟ ಅಮಿತಾಭ್‌; ಮಗ, ಸೊಸೆಗೆ ಅಲ್ಲ!

ಪ್ಯಾರಿಸ್ ಫ್ಯಾಷನ್ ವೀಕ್‌ ಪೋಸ್ಟ್‌

ಪ್ಯಾರಿಸ್ ಫ್ಯಾಶನ್ ವೀಕ್‌ ಫೋಟೊವನ್ನು ಈ ಹಿಂದೆ ನವ್ಯಾ ನವೇಲಿ ನಂದಾ ಹಂಚಿಕೊಂಡಿದ್ದರು. ಅದರಲ್ಲಿ ಐಶ್ವರ್ಯಾ ಕೂಡ ಭಾಗಿಯಾಗಿದ್ದರು. ಅಷ್ಟೇ ಅಲ್ಲದೇ ನವ್ಯಾ ಮತ್ತು ಅವರ ತಾಯಿ ಶ್ವೇತಾ ಬಚ್ಚನ್​ ಅವರು ಅದೇ ಇವೆಂಟ್​ನಲ್ಲಿ ಭಾಗಿಯಾಗಿದ್ದರು. ಈ ವೇಳೆ ಫೋಟೊ ಶೇರ್‌ ಮಾಡುವಾಗ ಐಶ್ವರ್ಯಾ ಅವರನ್ನು ಟ್ಯಾಗ್‌ ಮಾಡಿರಲಿಲ್ಲ. ಹೀಗಾಗಿ ಐಶ್ವರ್ಯಾ ಅವರು ಶೀಘ್ರದಲ್ಲೇ ಅಭಿಷೇಕ್ ಬಚ್ಚನ್ ಅವರಿಗೆ ಡಿವೋರ್ಸ್‌ ಕೊಡಲಿದ್ದಾರೆ ಎಂಬ ವದಂತಿಗಳು ಶುರುವಾದವು.

Continue Reading
Advertisement
Rambhapuri seer and MB Patil
ಕರ್ನಾಟಕ13 mins ago

ಎಂ.ಬಿ. ಪಾಟೀಲ್‌ಗೆ ನೀರಾವರಿ ಖಾತೆ ಸಿಗಬೇಕಿತ್ತು; ಡಿಕೆಶಿಗೆ ಕೊಟ್ಟಿದ್ದಕ್ಕೆ ರಂಭಾಪುರಿ ಶ್ರೀ ಬೇಸರ!

India U19 vs Pakistan U19
ಕ್ರಿಕೆಟ್14 mins ago

U19 Asia Cup: ಪಾಕಿಸ್ತಾನ​ ವಿರುದ್ಧ ಭಾರತಕ್ಕೆ 8 ವಿಕೆಟ್​ ಸೋಲು

Reliance Retail launches beauty retail store 'Tira' in Bengaluru
ದೇಶ29 mins ago

Reliance Retail: ಯಲಹಂಕದಲ್ಲಿ ರಿಲಯನ್ಸ್ ರೀಟೇಲ್‌ನ ‘ಟಿರಾ’ ಮಳಿಗೆ ಆರಂಭ

South Africa vs India 1
ಕ್ರಿಕೆಟ್48 mins ago

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ವಿಳಂಬ

Shri Ram Janmabhoomi Mandir carvings are wonderful
ದೇಶ53 mins ago

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!

Bus-jeep accident
ಉಡುಪಿ59 mins ago

Road Accident: ಕಾರ್ಕಳ ಬಳಿ ಖಾಸಗಿ ಬಸ್‌-ಜೀಪ್ ನಡುವೆ ಭೀಕರ ಅಪಘಾತ; 12 ಮಂದಿಗೆ ಗಂಭೀರ ಗಾಯ

Killers who killed lawyer for property in kalaburagi
ಕರ್ನಾಟಕ1 hour ago

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

air india
ಉದ್ಯೋಗ1 hour ago

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

man accused of murder wins acquittal after studying law and fighting own Case
ದೇಶ1 hour ago

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Kate Cross reveals ‘soft spot for RCB’ after bagging deal
ಕ್ರಿಕೆಟ್1 hour ago

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ4 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ7 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ15 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌