Pathaan Movie: ವಿಶ್ವಾದ್ಯಂತ 924 ಕೋಟಿ ರೂ. ಬಾಚಿದ ಪಠಾಣ್‌: ಚಿತ್ರತಂಡದಿಂದ ಅಧಿಕೃತ ಘೋಷಣೆ - Vistara News

ಬಾಲಿವುಡ್

Pathaan Movie: ವಿಶ್ವಾದ್ಯಂತ 924 ಕೋಟಿ ರೂ. ಬಾಚಿದ ಪಠಾಣ್‌: ಚಿತ್ರತಂಡದಿಂದ ಅಧಿಕೃತ ಘೋಷಣೆ

ಭಾರತದಲ್ಲಿ 572 ಕೋಟಿ ರೂ. ಹಾಗೂ (Pathaan Movie) ವಿದೇಶಗಳಲ್ಲಿ 352 ಕೋಟಿ ರೂ. ಲಾಭ ಮಾಡಿದೆ ಈ ಮಾಹಿತಿಯನ್ನು ಸ್ವತಃ ನಿರ್ಮಾಣ ಸಂಸ್ಥೆಯೇ ನೀಡಿದೆ. ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

VISTARANEWS.COM


on

Pathaan Movie box office collection reached RS 1000 crore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಶಾರುಖ್ ಖಾನ್, ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಹಾಂ ಅಭಿನಯದ ಪಠಾಣ್‌ ಸಿನಿಮಾ (Pathaan Movie) ಈವರೆಗೂ 924 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿ ಮಾಡಿದೆ. ಭಾರತದಲ್ಲಿ 572 ಕೋಟಿ ರೂ. ಹಾಗೂ ವಿದೇಶಗಳಲ್ಲಿ 352 ಕೋಟಿ ರೂ. ಲಾಭ ಮಾಡಿದೆ ಈ ಮಾಹಿತಿಯನ್ನು ಸ್ವತಃ ನಿರ್ಮಾಣ ಸಂಸ್ಥೆಯೇ ನೀಡಿದೆ. ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

ಮಂಗಳವಾರ, ಪ್ರೇಮಿಗಳ ದಿನಾಚರಣೆಯಂದು ಸಿನಿಮಾ ಭಾರಿ ಕಲೆಕ್ಷನ್‌ ಮಾಡುವ ನಿರೀಕ್ಷೆ ಇದೆ. ಪಠಾಣ್, ಅದರ ಮೂರನೇ ಶನಿವಾರ, ಗಲ್ಲಾಪೆಟ್ಟಿಗೆಯಲ್ಲಿ ಭಾರಿ ಜಿಗಿತವನ್ನು ಕಂಡಿತು. ಇದೀಗ ಪಠಾಣ್‌ ವಿಶ್ವಾದ್ಯಂತ ಒಟ್ಟು 924 ಕೋಟಿ ರೂ. ಕಲೆಕ್ಷನ್‌ ಮಾಡಿದೆ.

ಇದನ್ನೂ ಓದಿ: Pathaan Movie: ಕೆಜಿಎಫ್‌-2 ಹಿಂದಿ ಆವೃತ್ತಿಯ ಲೈಫ್‌ ಟೈಮ್‌ ಗಳಿಕೆಯನ್ನು ಮೀರುವತ್ತ ʻಪಠಾಣ್‌ʼ ದಾಪುಗಾಲು

ಪಠಾಣ್ ಈಗ ಹಿಂದಿ ಚಿತ್ರರಂಗದ ಇತಿಹಾಸದಲ್ಲಿ ಅತಿ ಹೆಚ್ಚು ಹಣ ಗಳಿಸಿದ ಹಿಂದಿ ಚಲನಚಿತ್ರವಾಗಿದೆ. ಯಶ್‌ ರಾಜ್‌ ಫಿಲ್ಮ್ಸ್‌ ಸ್ಪೈ ಯೂನಿವರ್ಸ್‌ನ ಅತಿ ಹೆಚ್ಚು ಗಳಿಕೆ ಮಾಡಿದ ಚಲನಚಿತ್ರವಾಗಿ ಹೊರಹೊಮ್ಮಿದೆ. ಸಿದ್ಧಾರ್ಥ್ ಆನಂದ್ ನಿರ್ದೇಶನದ ಪಠಾಣ್ ಚಿತ್ರದಲ್ಲಿ ಶಾರುಖ್ ಖಾನ್ ರಾ ಏಜೆಂಟ್ ಆಗಿ ನಟಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Raveena Tandon: ರವೀನಾ ಟಂಡನ್ ವಿರುದ್ಧ ಸುಳ್ಳು ದೂರು ನೀಡಿದ್ರಾ? ಪೊಲೀಸರು ಹೇಳೋದೇನು?

Raveena Tandon: ನಟಿ ರವೀನಾ ಟಂಡನ್ ವಿರುದ್ಧ ಖಾರ್ ಪೊಲೀಸರಿಗೆ ಸುಳ್ಳು ದೂರು ದಾಖಲಿಸಲಾಗಿತ್ತು ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ದೂರುದಾರರು ನಟಿ ಕುಡಿದು, ಅಶ್ಲೀಲವಾಗಿ ವಾಹನ ಚಲಾಯಿಸಿದ್ದಾರೆ ಎಂದು ದೂರು ದಾಖಲಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರವೀನಾ ಅವರ ಕಾರು ಯಾರಿಗೂ ಡಿಕ್ಕಿ ಮಾಡಿಲ್ಲ ಮತ್ತು ಅವರು ಕುಡಿದಿಲ್ಲ ಎಂದು ಕಂಡುಬಂದಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

VISTARANEWS.COM


on

Raveena Tandon Was Not Drunk False Complaint Filed
Koo

ಮುಂಬೈ: ಮುಂಬೈನ ಬಾಂದ್ರಾ ಉಪನಗರದಲ್ಲಿ ಶನಿವಾರ ತಡರಾತ್ರಿ ಬಾಲಿವುಡ್ ನಟಿ ರವೀನಾ ಟಂಡನ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ರವೀನಾ ಮದ್ಯ ಕುಡಿದಿದ್ದರು ಎನ್ನಲಾಗಿತ್ತು. ಸಾರ್ವಜನಿಕರು ರವೀನಾ ಮೇಲೆ ಹಲ್ಲೆ ನಡೆಸಿರುವುದಾಗಿ (Raveena Tandon) ವರದಿಯಾಗಿತ್ತು. ಸ್ಥಳೀಯರು ನಟಿಯನ್ನು ಸುತ್ತುವರೆದು ಹಲ್ಲೆ ಮಾಡಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಇದೆಲ್ಲ ಸುಳ್ಳು ತಿಳಿದು ಬಂದಿದೆ. ನಟಿ ರವೀನಾ ಟಂಡನ್ ವಿರುದ್ಧ ಖಾರ್ ಪೊಲೀಸರಿಗೆ ಸುಳ್ಳು ದೂರು ದಾಖಲಿಸಲಾಗಿತ್ತು ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ದೂರುದಾರರು ನಟಿ ಕುಡಿದು, ಅಶ್ಲೀಲವಾಗಿ ವಾಹನ ಚಲಾಯಿಸಿದ್ದಾರೆ ಎಂದು ದೂರು ದಾಖಲಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರವೀನಾ ಅವರ ಕಾರು ಯಾರಿಗೂ ಡಿಕ್ಕಿ ಮಾಡಿಲ್ಲ ಮತ್ತು ಅವರು ಕುಡಿದಿಲ್ಲ ಎಂದು ಕಂಡುಬಂದಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ನಟಿ ಕೂಡ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ರವೀನಾ ಟಂಡನ್ ಕುಡಿದಿರಲಿಲ್ಲ, ಸುಳ್ಳು ದೂರು ದಾಖಲಿಸಲಾಗಿದೆ. ದೂರುದಾರರು ಸುಳ್ಳು ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಉಪ ಪೊಲೀಸ್ ಆಯುಕ್ತ (ಡಿಸಿಪಿ) ರಾಜ್ತಿಲಕ್ ರೋಷನ್ ಈ ಬಗ್ಗೆ ಮಾತನಾಡಿ ʻʻದೂರುದಾರರು ಸುಳ್ಳು ದೂರು ನೀಡಿದ್ದಾರೆ. ನಾವು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದೇವೆ. ಆದರೆ ಕಾರು ಡಿಕ್ಕಿ ಹೊಡೆದಿರಲಿಲ್ಲ. ನಟಿ ರವೀನಾ ಟಂಡನ್ ಚಾಲಕನ ಪರ ಇದ್ದಾಗ ಸಾರ್ವಜನಿ ಕರು ನಟಿಯ ಮೇಲೆ ಮಾತಿಗಿಳಿದಿದ್ದಾರೆ. ಬಳಿಕ ರವೀನಾ ಟಂಡನ್ ಮತ್ತು ಕುಟುಂಬ ಇಬ್ಬರೂ ಖಾರ್ ಪೋಲೀಸ್ ಠಾಣೆಗೆ ಹೋಗಿ ಲಿಖಿತ ದೂರುಗಳನ್ನು ನೀಡಿದ್ದರು. ಇನ್ನು ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಕಾರು ಯಾರಿಗೂ ಡಿಕ್ಕಿ ಹೊಡೆದಿಲ್ಲʼʼಎಂದಿದ್ದಾರೆ.

ಇದನ್ನೂ ಓದಿ: Raveena Tandon: ರವೀನಾ ಟಂಡನ್ ಕಾರು ಅಪಘಾತ; ನಟಿ ಹೊಡೆಯಬೇಡಿ ಪ್ಲೀಸ್ ಎನ್ನುತ್ತಿರುವ ವಿಡಿಯೊ ನೋಡಿ!

ಏನಿದು ಪ್ರಕರಣ?

ಆರಂಭಿಕ ಮಾಹಿತಿಯ ಪ್ರಕಾರ, ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿತ್ತು. ನಟಿ ಕುಡಿದ ಅಮಲಿನಲ್ಲಿ ತನ್ನ ಕಾರಿನಿಂದ ಇಳಿದು ಸಂತ್ರಸ್ತರಿಗೆ ನಿಂದಿಸಿ ಹಲ್ಲೆ ನಡೆಸಿರುವುದಾಗಿಯೂ ವರದಿಯಾಗಿತ್ತು. ವೈರಲ್ ಆಗಿರುವ ವಿಡಿಯೋದಲ್ಲಿ ಸಂತ್ರಸ್ತರು ಮತ್ತು ಸ್ಥಳೀಯರು ರವೀನಾಳನ್ನು ಸುತ್ತುವರಿದು ಪೊಲೀಸರಿಗೆ ಕರೆ ಮಾಡಿದ್ದರು. “ತಳ್ಳಬೇಡಿ, ದಯವಿಟ್ಟು ನನಗೆ ಹೊಡೆಯಬೇಡಿ” ಎಂದು ರವೀನಾ ಮೊರೆ ಇಡುತ್ತಿರುವುದು ವಿಡಿಯೊದಲ್ಲಿ ಇತ್ತು.

ನಂತರ ಮಹಮ್ಮದ್ ಎನ್ನುವ ವ್ಯಕ್ತಿ ಈ ಘಟನೆಯನ್ನು ವಿವರಿಸಿದ್ದರು. ವಿಡಿಯೋದಲ್ಲಿ ಮಾತನಾಡಿದ ವ್ಯಕ್ತಿ ʻʻತನ್ನ ತಾಯಿ, ತಂಗಿ ಹಾಗೂ ಸೊಸೆ ರಿಜ್ವಿ ಕಾಲೆಜು ಬಳಿಯಲ್ಲಿ ಹೋಗುತ್ತಿರುವಾಗ ರವೀನಾ ಅವರ ಡ್ರೈವರ್ ತನ್ನ ತಾಯಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದಿದ್ದರು. ʻʻಚಾಲಕ ನನ್ನ ಸೊಸೆ ಮತ್ತು ನನ್ನ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾನೆ. ನಂತರ ರವೀನಾ ಕೂಡ ಮದ್ಯದ ಅಮಲಿನಲ್ಲಿ ಹೊರಬಂದು ನನ್ನ ತಾಯಿಗೆ ಹೊಡೆದಿದ್ದರಿಂದ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ. ನಾಲ್ಕು ಗಂಟೆಗಳ ಕಾಲ ಖಾರ್ ಪೊಲೀಸ್ ಠಾಣೆಯಲ್ಲಿ ಕಾಯುತ್ತಿದ್ದರೂ ಅವರ ದೂರನ್ನು ಸ್ವೀಕರಿಸುತ್ತಿಲ್ಲ . ರವೀನಾ ಪೊಲೀಸ್ ಠಾಣೆಯಲ್ಲಿ ಕೇಸ್‌ವನ್ನು ಇತ್ಯರ್ಥಪಡಿಸುವಂತೆ ನಮ್ಮಲ್ಲಿ ಮನವಿ ಮಾಡಿದರು. ಆದರೆ ನಾವು ಏಕೆ ಇತ್ಯರ್ಥಗೊಳಿಸಬೇಕು? ನನ್ನ ತಾಯಿಯ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ನಾನು ನ್ಯಾಯಕ್ಕಾಗಿ ಹೋರಾಡುತ್ತೇನೆ” ಎಂದು ಹೇಳಿಕೆ ನೀಡಿದ್ದರು.

Continue Reading

ಬಾಲಿವುಡ್

Sushant Singh: ಕೇದಾರನಾಥಕ್ಕೆ ಭೇಟಿ ಕೊಟ್ಟಾಗ ಸುಶಾಂತ್ ಸಿಂಗ್ ನೆನೆದು ಕಣ್ಣೀರಿಟ್ಟ ಸಹೋದರಿ!

Sushant Singh: ನಟ ಸುಶಾಂತ್‌ ಸಿಂಗ್‌ (Sushant Singh Rajput) ಅವರು 2020ರ ಜೂನ್‌ 14ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತಾಗಿ ಅವರ ಸಹೋದರಿಯರು ಯಾವಾಗಲೂ ಮಾಧ್ಯಮಗಳ ಸಂದರ್ಶನದಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ.ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ಹೊಸ ಪುಸ್ತಕ “ಪೇನ್: ಎ ಪೋರ್ಟಲ್ ಟು ಎನ್‌ಲೈಟ್‌ಮೆಂಟ್” (Pain: A Portal to Enlightenment) ನಲ್ಲಿ ಸುಶಾಂತ್ ಅವರ ಬಗ್ಗೆ ಬರೆದಿದ್ದಾರೆ. ಪುಸ್ತಕ ಬಿಡುಗಡೆ ಕೂಡ ಆಗಿದೆ.

VISTARANEWS.COM


on

Sushant Singh Rajput's sister cries as she visits Kedarnath
Koo

ಬೆಂಗಳೂರು: ದಿವಂಗತ ನಟ ಸುಶಾಂತ್ ಸಿಂಗ್ (Sushant Singh) ರಜಪೂತ್ ಅವರ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ಕೇದಾರನಾಥಕ್ಕೆ ಭೇಟಿ ಕೊಟ್ಟ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಜತೆಗೆ ಸಹೋದರ ಸುಶಾಂತ್ ಸಿಂಗ್ ಅವರನ್ನು ನೆನೆಸಿ ಭಾವುಕ ಪೋಸ್ಟ್‌ ಶೇರ್‌ ಮಾಡಿದ್ದಾರೆ. ಈ ಮುಂಚೆ ಸುಶಾಂತ್‌ ಅವರು ಕೇದಾರನಾಥಕ್ಕೆ ಭೇಟಿ ಕೊಟ್ಟ ಫೋಟೊಗಳನ್ನು ಶೇರ್‌ ಮಾಡಿಕೊಂಡಿದ್ದಾರೆ. ಹಳೆಯ ಫೋಟೊದಲ್ಲಿ ಸುಶಾಂತ್‌ ದೇಗುಲದ ಮುಂದೆ ‘ಸಾಧು ಜತೆ ಪೋಸ್ ನೀಡಿದ್ದಾರೆ.

ನಟ ಸುಶಾಂತ್‌ ಸಿಂಗ್‌ (Sushant Singh Rajput) ಅವರು 2020ರ ಜೂನ್‌ 14ರಂದು ಆತ್ಮಹತ್ಯೆಗೆ ಶರಣಾಗಿದ್ದರು. ಸುಶಾಂತ್ ಸಿಂಗ್ ರಜಪೂತ್ ಅವರ ಕುರಿತಾಗಿ ಅವರ ಸಹೋದರಿಯರು ಯಾವಾಗಲೂ ಮಾಧ್ಯಮಗಳ ಸಂದರ್ಶನದಲ್ಲಿ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಲೇ ಇರುತ್ತಾರೆ. ಸುಶಾಂತ್‌ ಸಿಂಗ್‌ ಅವರ ಪರವಾಗಿ ನಿಲ್ಲುತ್ತಾರೆ. ನಾಲ್ಕನೇ ವರ್ಷದ ಪುಣ್ಯತಿಥಿಯಂದು ಸಹೋದರನನ್ನು ನೆನಪಿಸಿಕೊಂಡು ಶ್ವೇತಾ ಹೀಗೆ ಬರೆದಿದ್ದಾರೆ.

“ಇದು ಜೂನ್ 1, ಮತ್ತು ನಾಲ್ಕು ವರ್ಷಗಳ ಹಿಂದೆ ಈ ತಿಂಗಳ 14 ರಂದು ಸುಶಾಂತ್ ಬಾರದ ಲೋಕಕ್ಕೆ ಹೋದ. ಆ ದುರಂತದ ದಿನ ಏನಾಯಿತು ಎಂಬುದರ ಕುರಿತು ನಾವು ಇನ್ನೂ ಉತ್ತರಗಳನ್ನು ಹುಡುಕುತ್ತಲೇ ಇದ್ದೇವೆ. ಇತ್ತೀಚೆಗೆ ಕೇದಾರನಾಥಕ್ಕೆ ಪ್ರಾರ್ಥನೆ ಸಲ್ಲಿಸಲು ಹೋಗಿದ್ದೆ. ಸಹೋದರ ಸುಶಾಂತ್‌ ನೆನಪಾದ. ನಾನು ಕೇದಾರನಾಥಕ್ಕೆ ಇಳಿದ ತಕ್ಷಣ ಕಣ್ಣೀರಿಟ್ಟೆ. ಆ ಕ್ಷಣ ನನ್ನೊಂದಿಗೆ ಅವನು ಇದ್ದಿದ್ದರೆ ಚೆಂದ ಎನಿಸಿತು. .ಅವನು ಧ್ಯಾನಿಸಿದ ಸ್ಥಳದಲ್ಲಿ ನಾನು ಕುಳಿತು ಧ್ಯಾನಿಸಿದೆ, ಮತ್ತು ಆ ಕ್ಷಣಗಳಲ್ಲಿ, ಅವನು ಇನ್ನೂ ನನ್ನೊಂದಿಗೆ, ನನ್ನೊಳಗೆ, ನನ್ನ ಮೂಲಕ ವಾಸಿಸುತ್ತಿದ್ದಾನೆ ಎಂದು ನಾನು ಭಾವಿಸಿದೆʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Adah Sharma: ಸುಶಾಂತ್ ಸಿಂಗ್ ರಜಪೂತ್  ಆತ್ಮಹತ್ಯೆ ಮಾಡಿಕೊಂಡ ಮನೆ ಖರೀದಿಸಿದ್ರಾ `ದಿ ಕೇರಳ ಸ್ಟೋರಿ’ ನಟಿ?

ಸುಶಾಂತ್‌ ಅವರು ಕೇದಾರನಾಥ್ (2018) ಸಿನಿಮಾದಲ್ಲಿ ಸಾರಾ ಅಲಿ ಖಾನ್ ಅವರೊಂದಿಗೆ ನಟಿಸಿದ್ದರು. ಸುಶಾಂತ್‌ ಕೇದಾರನಾಥ್‌ಗೆ ಆಗಗ ಶೂಟಿಂಗ್‌ಗಾಗಿ ಹೋಗುತ್ತಲೇ ಇರುತ್ತಿದ್ದರು.

ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ಹೊಸ ಪುಸ್ತಕ “ಪೇನ್: ಎ ಪೋರ್ಟಲ್ ಟು ಎನ್‌ಲೈಟ್‌ಮೆಂಟ್” (Pain: A Portal to Enlightenment) ನಲ್ಲಿ ಸುಶಾಂತ್ ಅವರ ಬಗ್ಗೆ ಬರೆದಿದ್ದಾರೆ. ಪುಸ್ತಕ ಬಿಡುಗಡೆ ಕೂಡ ಆಗಿದೆ.

ಶ್ವೇತಾ ಸಿಂಗ್ ಕೀರ್ತಿ ಅವರು ತಮ್ಮ ಪುಸ್ತಕಲ್ಲಿ ಸುಶಾಂತ್‌ ಅವರ ವೃತ್ತಿ ಜೀವನ, ವೈಯಕ್ತಿಕ ಜೀವನ ಬಗ್ಗೆ ಬರೆದುಕೊಂಡಿದ್ದಾರೆ. ʻಸುಶಾಂತ್ ಬಾಲಿವುಡ್‌ನಲ್ಲಿ ಬ್ಯುಸಿಯಾಗಿಬಿಟ್ಟಿದ್ದ. ನನಗೆ ಅವನನ್ನು ಭೇಟಿ ಮಾಡಲು ಸಾಧ್ಯವಾಗುತ್ತಿರಲ್ಲಿಲ್ಲ. 2014 ರಿಂದ 2017 ರವರೆಗೆ ನಾನು ಪ್ರತಿ ವರ್ಷ ಭಾರತಕ್ಕೆ ತೆರಳಿ ಅವನನ್ನು ಭೇಟಿಯಾಗುತ್ತಿದ್ದೆ. ದುರದೃಷ್ಟವಶಾತ್, 2018 ಮತ್ತು 2019ರಲ್ಲಿ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಜನವರಿ 2020ರಲ್ಲಿ ಪ್ಲ್ಯಾನ್‌ ಕೂಡ ಮಾಡಿಕೊಂಡಿದ್ದೆ. ಕೊನೆಗೂ ಅವನನ್ನು ಮೀಟ್‌ ಆಗಲು ಆಗಲೇ ಇಲ್ಲ. 2020 ರ ಜೂನ್‌ 14ರಂದು ಅವನು ಬಾರದ ಲೋಕಕ್ಕೆ ಹೋಗೆ ಬಿಟ್ಟಿದ್ದ. ಸಾವಿಗೂ ಮುಂಚೆ ನಾಲ್ಕು ದಿನಗಳ ಮೊದಲು ನಾನು ಕಾಲ್‌ ಮಾಡಿದ್ದೆ, ಅಮೆರಿಕಾಗೆ ಬರುವಂತೆ ಹೇಳಿದ್ದೆ. ಜೂನ್‌ 13ರ ರಾತ್ರಿ ನನಗೆ ಸುಶಾಂತ್‌ ಮೃತಪಟ್ಟ ಸುದ್ದಿ ತಿಳಿಯಿತು. ನಾನು ಕೂಗಾಡಲಿಲ್ಲ. ಅಳಲಿಲ್ಲ. ಅಲ್ಲಿಯೇ ಆಘಾತದಲ್ಲಿ ಕುಸಿದು ಬಿದ್ದೆʼʼ ಎಂದು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.

ಸುಶಾಂತ್‌ ಸಿಂಗ್‌ ಅವರು ʻಕಾಯ್‌ ಪೋ ಚೆʼ, ʻಎಂಎಸ್ ಧೋನಿʼ, ʻದಿ ಅನ್‌ ಟೋಲ್ಡ್ ಟೇಲ್ʼ, ʻಕೇದಾರನಾಥ್ʼ ಮತ್ತು ʻಚಿಚೋರೆʼಯಂತಹ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದರು. ಸುಶಾಂತ್ ಅವರ ವೈವಿಧ್ಯಮಯ ಸಿನಿಮಾ ಜೀವನ 2020 ರಲ್ಲಿ ಕೊನೆಗೊಂಡಿತು. 2020ರ ಜೂನ್ 14ರಂದು ಬಾಂದ್ರಾದ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಾಗ ಅವರ ವಯಸ್ಸು 34 ಅಷ್ಟೇ. ಈ ಸಾವು ದೇಶಾದ್ಯಂತ ಭಾರಿ ಆಘಾತವನ್ನುಂಟು ಮಾಡಿತ್ತು.

ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಬಗ್ಗೆ ಹಲವಾರು ಅನುಮಾನಗಳು ಇದ್ದವು. ಚಿತ್ರರಂಗದಲ್ಲಿ ನಡೆಯುತ್ತಿರುವ ಸ್ವಜನ ಪಕ್ಷಪಾತದಿಂದ ಅವರಿಗೆ ಅನ್ಯಾಯವಾಗುತ್ತಿದೆ. ಆ ಕಾರಣಕ್ಕೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ ಎನ್ನುವುದು ಒಂದು ಅನುಮಾನವಾದರೆ, ಯಾರೋ ಆತ್ಮೀಯರೇ ಕೊಲೆ ಮಾಡಿದ್ದಾರೆ ಎಂಬ ವಾದವೂ ಇತ್ತು. ಸಾವಿನ ಸುತ್ತ ಮಾದಕ ವ್ಯಸನ, ಡ್ರಗ್ಸ್‌ ಜಾಲ ಮತ್ತು ಅಕ್ರಮ ಹಣ ವರ್ಗಾವಣೆ ಹೀಗೆ ಹಲವು ಸಂಶಯದ ಹುತ್ತಗಳು ಬೆಳೆದಿದ್ದವು. ಸಿಬಿಐ, ಇ.ಡಿ, ಎನ್‌ಸಿಬಿ ಸೇರಿದಂತೆ ಹಲವು ತನಿಖಾ ತಂಡಗಳು ನಾನಾ ಆಯಾಮಗಳಲ್ಲಿ ತನಿಖೆಯನ್ನು ನಡೆಸುತ್ತಿವೆ. ಪೋಸ್ಟ್‌ ಮಾರ್ಟಂ ವರದಿಗಳ ಪ್ರಕಾರ ಸುಶಾಂತ್‌ ಆತ್ಮಹತ್ಯೆಯೇ ಹೌದಾಗಿದ್ದರೂ ಅದರ ಹಿಂದಿನ ಶಕ್ತಿಗಳು, ಸಿನಿಮಾ ರಾಜಕಾರಣ ಹೊರಬರಬೇಕು ಎನ್ನುವುದು ಅಭಿಮಾನಿಗಳ ಆಗ್ರಹವಾಗಿತ್ತು.

Continue Reading

ಬಾಲಿವುಡ್

Raveena Tandon: ರವೀನಾ ಟಂಡನ್ ಕಾರು ಅಪಘಾತ; ನಟಿ ಹೊಡೆಯಬೇಡಿ ಪ್ಲೀಸ್ ಎನ್ನುತ್ತಿರುವ ವಿಡಿಯೊ ನೋಡಿ!

Raveena Tandon: ಆರಂಭಿಕ ಮಾಹಿತಿಯ ಪ್ರಕಾರ, ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ನಟಿ ಕುಡಿದ ಅಮಲಿನಲ್ಲಿ ತನ್ನ ಕಾರಿನಿಂದ ಇಳಿದು ಸಂತ್ರಸ್ತರಿಗೆ ನಿಂದಿಸಿ ಹಲ್ಲೆ ನಡೆಸಿರುವುದಾಗಿಯೂ ವರದಿಯಾಗಿದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಸಂತ್ರಸ್ತರು ಮತ್ತು ಸ್ಥಳೀಯರು ರವೀನಾಳನ್ನು ಸುತ್ತುವರಿದು ಪೊಲೀಸರಿಗೆ ಕರೆ ಮಾಡಿರುವುದನ್ನು ಕಾಣಬಹುದು.

VISTARANEWS.COM


on

Raveena Tandon attacked In Mumbai After Being Accused Of Rash Driving
Koo

ಮುಂಬೈ: ಮುಂಬೈನ ಬಾಂದ್ರಾ ಉಪನಗರದಲ್ಲಿ ಶನಿವಾರ ತಡರಾತ್ರಿ ಬಾಲಿವುಡ್ ನಟಿ ರವೀನಾ ಟಂಡನ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ರವೀನಾ ಮದ್ಯ ಕುಡಿದಿದ್ದರು ಎನ್ನಲಾಗಿದೆ. ಸಾರ್ವಜನಿಕರು ರವೀನಾ ಮೇಲೆ ಹಲ್ಲೆ ನಡೆಸಿರುವುದಾಗಿ (Raveena Tandon) ವರದಿಯಾಗಿದೆ. ಸ್ಥಳೀಯರು ನಟಿಯನ್ನು ಸುತ್ತುವರೆದು ಹಲ್ಲೆ ಮಾಡಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

ಆರಂಭಿಕ ಮಾಹಿತಿಯ ಪ್ರಕಾರ, ರಿಜ್ವಿ ಕಾಲೇಜು ಬಳಿಯ ಕಾರ್ಟರ್ ರಸ್ತೆಯಲ್ಲಿ ರವೀನಾ ಅವರ ಚಾಲಕ ಅಜಾಗರೂಕತೆಯಿಂದ ಚಾಲನೆ ಮಾಡಿ ಮೂವರಿಗೆ ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ನಟಿ ಕುಡಿದ ಅಮಲಿನಲ್ಲಿ ತನ್ನ ಕಾರಿನಿಂದ ಇಳಿದು ಸಂತ್ರಸ್ತರಿಗೆ ನಿಂದಿಸಿ ಹಲ್ಲೆ ನಡೆಸಿರುವುದಾಗಿಯೂ ವರದಿಯಾಗಿದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಸಂತ್ರಸ್ತರು ಮತ್ತು ಸ್ಥಳೀಯರು ರವೀನಾಳನ್ನು ಸುತ್ತುವರಿದು ಪೊಲೀಸರಿಗೆ ಕರೆ ಮಾಡಿರುವುದನ್ನು ಕಾಣಬಹುದು. “ನೀವು ಈ ರಾತ್ರಿ ಜೈಲಿನಲ್ಲಿ ಕಳೆಯಬೇಕಾಗುತ್ತದೆ. ನನ್ನ ಮೂಗಿನಿಂದ ರಕ್ತ ಸುರಿಯುತ್ತಿದೆ” ಎಂದು ಸಂತ್ರಸ್ತರಲ್ಲಿ ಒಬ್ಬರು ಹೇಳುವುದನ್ನು ಕೇಳಬಹುದು.

ವಿಡಿಯೊಗಳನ್ನು ರೆಕಾರ್ಡ್ ಮಾಡಬೇಡಿ ಎಂದು ರವೀನಾ ನೆರದವರಲ್ಲಿ ವಿನಂತಿಸಿದ್ದಾರೆ. “ತಳ್ಳಬೇಡಿ, ದಯವಿಟ್ಟು ನನಗೆ ಹೊಡೆಯಬೇಡಿ” ಎಂದು ರವೀನಾ ಮೊರೆ ಇಡುತ್ತಿರುವುದು ವಿಡಿಯೊದಲ್ಲಿ ಕೇಳಬಹುದು.

ನಂತರ ಮಹಮ್ಮದ್ ಎನ್ನುವ ವ್ಯಕ್ತಿ ಈ ಘಟನೆಯನ್ನು ವಿವರಿಸಿದ್ದಾರೆ. ಇಡೀ ಘಟನೆಯನ್ನು ವಿಡಿಯೊ ಮೂಲಕ ತಿಳಿಸಿದ್ದಾರೆ. ವಿಡಿಯೋದಲ್ಲಿ ಮಾತನಾಡಿದ ವ್ಯಕ್ತಿ ʻʻತನ್ನ ತಾಯಿ, ತಂಗಿ ಹಾಗೂ ಸೊಸೆ ರಿಜ್ವಿ ಕಾಲೆಜು ಬಳಿಯಲ್ಲಿ ಹೋಗುತ್ತಿರುವಾಗ ರವೀನಾ ಅವರ ಡ್ರೈವರ್ ತನ್ನ ತಾಯಿಗೆ ಡಿಕ್ಕಿ ಹೊಡೆದಿದ್ದಾನೆʼʼ ಎಂದಿದ್ದಾರೆ.

ಇದನ್ನೂ ಓದಿ: Actor Suriya: ಹೊಸ ಸಿನಿಮಾ ಶೂಟಿಂಗ್‌ ಶುರು ಮಾಡಿದ ನಟ ಸೂರ್ಯ!

ʻʻಚಾಲಕ ನನ್ನ ಸೊಸೆ ಮತ್ತು ನನ್ನ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾನೆ. ನಂತರ ರವೀನಾ ಕೂಡ ಮದ್ಯದ ಅಮಲಿನಲ್ಲಿ ಹೊರಬಂದು ನನ್ನ ತಾಯಿಗೆ ಹೊಡೆದಿದ್ದರಿಂದ ಆಕೆಯ ತಲೆಗೆ ಗಂಭೀರ ಗಾಯಗಳಾಗಿವೆ. ನಾಲ್ಕು ಗಂಟೆಗಳ ಕಾಲ ಖಾರ್ ಪೊಲೀಸ್ ಠಾಣೆಯಲ್ಲಿ ಕಾಯುತ್ತಿದ್ದರೂ ಅವರ ದೂರನ್ನು ಸ್ವೀಕರಿಸುತ್ತಿಲ್ಲ . ರವೀನಾ ಪೊಲೀಸ್ ಠಾಣೆಯಲ್ಲಿ ಕೇಸ್‌ವನ್ನು ಇತ್ಯರ್ಥಪಡಿಸುವಂತೆ ನಮ್ಮಲ್ಲಿ ಮನವಿ ಮಾಡಿದರು. ಆದರೆ ನಾವು ಏಕೆ ಇತ್ಯರ್ಥಗೊಳಿಸಬೇಕು? ನನ್ನ ತಾಯಿಯ ಮೇಲೆ ಹಲ್ಲೆ ಮಾಡಲಾಗಿದೆ ಮತ್ತು ನಾನು ನ್ಯಾಯಕ್ಕಾಗಿ ಹೋರಾಡುತ್ತೇನೆ” ಎಂದು ಹೇಳಿಕೆ ನೀಡಿದ್ದಾರೆ. ಘಟನೆ ಕುರಿತು ರವೀನಾ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

Continue Reading

ಬಾಲಿವುಡ್

Deepika Padukone: ಫ್ಯಾಮಿಲಿ ಜತೆ ಜಾಲಿ ಮಾಡುತ್ತಿರುವ ಪ್ರೆಗ್ನೆಂಟ್‌ ದೀಪಿಕಾ ಪಡುಕೋಣೆ

Deepika Padukone: ಶುಕ್ರವಾರವೂ ದೀಪಿಕಾ ಕುಟುಂಬದ ಜತೆ ಡಿನ್ನರ್‌ ಪಾರ್ಟಿಯಲ್ಲಿ ಕಂಡಿದ್ದರು. ತನ್ನ ತಾಯಿಯೊಂದಿಗೆ ರೆಸ್ಟೋರೆಂಟ್‌ನಿಂದ ನಿರ್ಗಮಿಸುತ್ತಿರುವುದು ಕಂಡುಬಂದಿತ್ತು ಸೆಪ್ಟೆಂಬರ್‌ನಲ್ಲಿ ಮಗು ಜನಿಸಲಿದೆ ಎಂದು ದೀಪಿಕಾ ದಂಪತಿ ಹೇಳಿಕೊಂಡಿದ್ದಾರೆ. ಆರು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ ರಣವೀರ್-ದೀಪಿಕಾ 2018ರಂದು ಇಟಲಿಯ ಲೇಕ್ ಕೊಮೊದಲ್ಲಿ ಮದುವೆಯಾಗಿದ್ದರು.

VISTARANEWS.COM


on

Deepika Padukone clicks selfies with fans dinner outing with family
Koo

ಬೆಂಗಳೂರು: ಸೆಪ್ಟೆಂಬರ್‌ನಲ್ಲಿ ದೀಪಿಕಾ ಪಡುಕೋಣೆ (Deepika Padukone) ಮಗುವಿಗೆ ಜನ್ಮ ನೀಡಲಿದ್ದಾರೆ. ಸದ್ಯ ನಟಿ ಆಗಾಗ ಕುಟುಂಬದ ಜತೆ ಡಿನ್ನರ್‌ ಪಾರ್ಟಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ನಟ ತಾಯಿ ಉಜ್ಜಲಾ ಪಡುಕೋಣೆ ಮತ್ತು ಮುಂಬೈನಲ್ಲಿರುವ ಅವರ ಸಂಬಂಧಿಕರೊಂದಿಗೆ ಸತತ ಎರಡನೇ ಬಾರಿಗೆ ಡಿನ್ನರ್ ಡೇಟ್‌ನಲ್ಲಿ ಭಾಗಿಯಾಗಿದ್ದಾರೆ. ಇದಕ್ಕೂ ಮುಂಚೆ ನಟಿ ಕುಟುಂಬದ ಜತೆ ಕಾಣಿಸಿಕೊಂಡಿದ್ದರು.

ನಟಿಯ ಹಲವು ಫೋಟೊ ಹಾಗೂ ವಿಡಿಯೊಗಳು ವೈರಲ್‌ ಆಗಿವೆ. ಶನಿವಾರ ರಾತ್ರಿಯೂ ಸಹ ದೀಪಿಕಾ ತನ್ನ ಕುಟುಂಬದೊಂದಿಗೆ ರೆಸ್ಟೋರೆಂಟ್‌ನಿಂದ ಹೊರಬರುತ್ತಿರುವುದು ಕಂಡುಬಂದಿತ್ತು. ಹೂವಿನ ಪ್ರಿಂಟೆಡ್‌ ಟಾಪ್, ಡೆನಿಮ್ಸ್ ಮತ್ತು ಬಿಳಿ ಸ್ನೀಕರ್ಸ್‌ನಲ್ಲಿ ನಟಿ ಕಾಣಿಸಿಕೊಂಡರು.

ದೀಪಿಕಾ ತನ್ನ ಕಾರಿನೊಳಗೆ ಹಗುವ ಮೊದಲು ಕ್ಯೂಟ್‌ ಸ್ಲೈಲ್‌ ಕೊಟ್ಟಿದ್ದಾರೆ. ವಿಡಿಯೊಗೆ ಪ್ರತಿಕ್ರಿಯಿಸಿದ ಅಭಿಮಾನಿಯೊಬ್ಬರು, “ನಟಿ ಸುಂದರವಾಗಿ ಕಾಣುತ್ತಿದ್ದಾರೆʼʼ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು, “ನೀವು ಪ್ರತಿ ದಿನವೂ ಹೆಚ್ಚು ಗ್ಲೋ ಆಗಿ ಕಾಣುತ್ತೀರಿʼʼಎಂದು ಕಮೆಂಟ್‌ ಮಾಡಿದ್ದಾರೆ. ಶುಕ್ರವಾರವೂ ದೀಪಿಕಾ ಕುಟುಂಬದ ಜತೆ ಡಿನ್ನರ್‌ ಪಾರ್ಟಿಯಲ್ಲಿ ಕಂಡಿದ್ದರು. ತನ್ನ ತಾಯಿಯೊಂದಿಗೆ ರೆಸ್ಟೋರೆಂಟ್‌ನಿಂದ ನಿರ್ಗಮಿಸುತ್ತಿರುವುದು ಕಂಡುಬಂದಿತ್ತು ಸೆಪ್ಟೆಂಬರ್‌ನಲ್ಲಿ ಮಗು ಜನಿಸಲಿದೆ ಎಂದು ದೀಪಿಕಾ ದಂಪತಿ ಹೇಳಿಕೊಂಡಿದ್ದಾರೆ. ಆರು ವರ್ಷಗಳ ಕಾಲ ಡೇಟಿಂಗ್ ಮಾಡಿದ ನಂತರ ರಣವೀರ್-ದೀಪಿಕಾ 2018ರಂದು ಇಟಲಿಯ ಲೇಕ್ ಕೊಮೊದಲ್ಲಿ ಮದುವೆಯಾಗಿದ್ದರು.

ಇದನ್ನೂ ಓದಿ: Deepika Padukone: ವೋಟ್‌ ಮಾಡಿದ ದೀಪಿಕಾ ಪಡುಕೋಣೆ; ಅವರ ಹೊಟ್ಟೆ ನೋಡಿ ಗಂಡು ಮಗು ಎಂದ ನೆಟ್ಟಿಗರು!

ಸಿನಿಮಾ ವಿಚಾರಕ್ಕೆ ಬಂದರೆ ದೀಪಿಕಾ ಅವರು ರೋಹಿತ್ ಶೆಟ್ಟಿ ಅವರ ʻಸಿಂಗಮ್ ಅಗೇನ್‌ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಜಯ್ ದೇವಗನ್, ಕರೀನಾ ಕಪೂರ್, ರಣವೀರ್ ಸಿಂಗ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಮತ್ತು ಅರ್ಜುನ್ ಕಪೂರ್ ಜೊತೆಗೆ ಲೇಡಿ ಸಿಂಗಮ್ ಪಾತ್ರಕ್ಕೆ ದೀಪಿಕಾ ಹೆಜ್ಜೆ ಹಾಕಿದ್ದಾರೆ. ಅಮಿತಾಭ್ ಬಚ್ಚನ್, ಕಮಲ್ ಹಾಸನ್, ಪ್ರಭಾಸ್ ಮತ್ತು ದಿಶಾ ಪಟಾನಿ ಅಭಿನಯದ ಕಲ್ಕಿ 2898 AD ಸಿನಿಮಾದಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಜತೆಗೆ ಅಮಿತಾಭ್‌ ಬಚ್ಚನ್ ಅವರೊಂದಿಗೆ ʻದಿ ಇಂಟರ್ನ್ʼ ಸಿನಿಮಾ ಕೂಡ ಹೊಂದಿದ್ದಾರೆ.

Continue Reading
Advertisement
moral policing shivamogga
ಕ್ರೈಂ3 mins ago

Moral Policing: ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕೂರಿಸಿಕೊಂಡದ್ದಕ್ಕೆ ಹಿಂದೂ ಯುವಕನಿಗೆ ಹಲ್ಲೆ

mlc election raghupathi bhat
ಪ್ರಮುಖ ಸುದ್ದಿ37 mins ago

MLC Election: ಮೇಲ್ಮನೆ ಚುನಾವಣೆ ಮತದಾನ ಆರಂಭ, 6 ಕ್ಷೇತ್ರಗಳಲ್ಲಿ 78 ಸ್ಪರ್ಧಿಗಳ ಹಣಾಹಣಿ

Parvathi Menon secretly marry prashant murali
ಮಾಲಿವುಡ್43 mins ago

Parvathi Menon: ಸದ್ದಿಲ್ಲದೇ ಮದುವೆಯಾದ್ರಾ ʻಮಿಲನʼ ನಾಯಕಿ ಪಾರ್ವತಿ ಮೆನನ್?

Lok Sabha Election 2024
ದೇಶ50 mins ago

Lok Sabha Election 2024: ವಿಜಯೋತ್ಸವಕ್ಕೆ ಬಿಜೆಪಿ ಪ್ಲ್ಯಾನ್‌ ಹೇಗಿದೆ? ಈಗಿನಿಂದಲೇ ಶುರು ಭರ್ಜರಿ ತಯಾರಿ

vrl bus road accident
ಕ್ರೈಂ1 hour ago

Road Accident: ವಿಆರ್‌ಎಲ್ ಬಸ್‌ ಪಲ್ಟಿಯಾಗಿ ಇಬ್ಬರ ಸಾವು, ಹಲವರಿಗೆ ಗಾಯ

Raveena Tandon Was Not Drunk False Complaint Filed
ಬಾಲಿವುಡ್1 hour ago

Raveena Tandon: ರವೀನಾ ಟಂಡನ್ ವಿರುದ್ಧ ಸುಳ್ಳು ದೂರು ನೀಡಿದ್ರಾ? ಪೊಲೀಸರು ಹೇಳೋದೇನು?

ICMR Guidelines
ಆರೋಗ್ಯ1 hour ago

ICMR Guidelines: ಕಬ್ಬಿನ ಹಾಲು ಕುಡಿದರೆ ಆರೋಗ್ಯಕ್ಕೆ ಹಾನಿಯೆ? ICMR ಅಭಿಪ್ರಾಯ ಹೀಗಿದೆ

bangalore rain news
ಪ್ರಮುಖ ಸುದ್ದಿ2 hours ago

Bangalore Rain News: ಬೆಂಗಳೂರಿಗೆ ಮುಂಗಾರು ಶಾಕ್‌, ನೂರಾರು ಮರಗಳು ಧರೆಗೆ, ಅಪಾರ್ಟ್‌ಮೆಂಟ್‌ ನಿವಾಸಿಗಳು ಅಲ್ಲೇ ಲಾಕ್!‌

Chikkodi Lok Sabha Constituency
ಚಿಕ್ಕೋಡಿ2 hours ago

Chikkodi Lok Sabha Constituency: ಜೊಲ್ಲೆ vs ಜಾರಕಿಹೊಳಿ; ಯಾರಿಗೆ ಗೆಲುವಿನ ಹೋಳಿ?

Toll Fee Hike
ದೇಶ2 hours ago

Toll Fee Hike: ವಾಹನ ಸವಾರರಿಗೆ ಮತ್ತೆ ಸುಂಕದ ಬರೆ; ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌