South Cinema
Pavitra Naresh: ನಾವಿಬ್ಬರೂ ಒಟ್ಟಿಗೆ ಸಹಜೀವನ ನಡೆಸುತ್ತಿದ್ದೇವೆ; ನರೇಶ್-ಪವಿತ್ರಾ ಲೋಕೇಶ್
Pavitra Naresh: ತಮ್ಮ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ಪವಿತ್ರಾ ಲೋಕೇಶ್ ಹಾಗೂ ನರೇಶ್ ತಮ್ಮ ಸಂಬಂಧದ ಕುರಿತು ಮನಬಿಚ್ಚಿ ಮಾತನಾಡಿದರು.
ಬೆಂಗಳೂರು: ಟಾಲಿವುಡ್ ನಟ ನರೇಶ್ ಹಾಗೂ ಪವಿತ್ರಾ ಲೋಕೇಶ್ (Pavitra Naresh) ನಟಿಸಿರುವ ʻಮತ್ತೆ ಮದುವೆʼ ಸಿನಿಮಾ ಮೇ 26ರಂದು ತೆರೆ ಕಾಣುತ್ತಿದೆ. ತಮ್ಮ ಸಿನಿಮಾ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ಪವಿತ್ರಾ ಲೋಕೇಶ್ ಹಾಗೂ ನರೇಶ್ ತಮ್ಮ ಸಂಬಂಧದ ಕುರಿತು ಮನಬಿಚ್ಚಿ ಮಾತನಾಡಿದರು. ತಾವು ಸಹಜೀವನ ನಡೆಸುತ್ತಿದ್ದೇವೆ ಎಂದು ಮಾಧ್ಯಮದ ಮುಂದೆ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ನರೇಶ್, ‘ಸುಪ್ರೀಂಕೋರ್ಟ್ ಕೂಡ ಲೀವ್ ಇನ್ ರಿಲೇಶನ್ಶಿಪ್ ಮದುವೆಗೆ ಸಮ ಎಂದು ಹೇಳಿದೆ. ಹಾಗಾಗಿ ನಾವು ಸಹಜೀವನ ನಡೆಸುತ್ತಿದ್ದೇವೆ. ನಾನು ಸಿಂಗಲ್ ಆಗಿ ಇದ್ದೇನೆ ಎಂದು ತಿಳಿಯಬೇಡಿ. ನಾವಿಬ್ಬರೂ ಒಟ್ಟಿಗೆ ಇದ್ದೇವೆ. ಖುಷಿಯಾಗಿದ್ದೇವೆ’ ಎಂದು ಪವಿತ್ರಾ ಲೋಕೇಶ್ ಕೈ ಹಿಡಿದುಕೊಂಡೇ ಹೇಳಿದರು.
ʻʻನಮ್ಮ ಹೃದಯಗಳ ಮಧ್ಯೆ ಮದುವೆ ಆಗಿದೆ, ನಾವು ಖುಷಿಯಿಂದ ಇದ್ದೇವೆ. ತುಂಬಾ ಜನರು ನನಗೆ ಮದುವೆ ಆಗಿದ್ದೀರಾ ಎಂದು ಕೇಳುತ್ತಾರೆ. ಮದುವೆ ಅಂದರೆ ಏನು? ಉಂಗುರು ಬದಲಾಯಿಸಿಕೊಳ್ಳುವುದಾ ಅಥವಾ ತಾಳಿ ಕಟ್ಟುವುದಾ? ಇದೆಲ್ಲವೂ ಸಂಪ್ರದಾಯವಷ್ಟೇ. ಒಟ್ಟಿಗೆ ಖುಷಿಯಾಗಿ ಇರುವುದೇ ಮದುವೆ. ನಾವಿಬ್ಬರೂ ಆ ಅಡಿಯಲ್ಲಿ ಜೀವನ ನಡೆಸುತ್ತಿದ್ದೇವೆ. ಇಬ್ಬರೂ ನೆಮ್ಮದಿಯಾಗಿ ಇದ್ದೇವೆ’ʼ ಎಂದರು.
ಇದನ್ನೂ ಓದಿ: Pavitra Naresh: ನರೇಶ್ ನಿಜವಾಗಿಯೂ ಪವಿತ್ರಾರನ್ನು ಮದುವೆ ಆದ್ರಾ? ಸಿನಿಮಾಗೆ 15 ಕೋಟಿ ರೂ. ಖರ್ಚು ಮಾಡಿದ್ಯಾಕೆ?
ಮದುವೆಯ ಕುರಿತಾಗಿಯೂ ಮಾತನಾಡಿದ ಅವರು, ‘ಬಹುಪತ್ನಿತ್ವ ತಪ್ಪು ಎನ್ನುವುದನ್ನು ನಾನೂ ಒಪ್ಪಿಕೊಳ್ಳುತ್ತೇನೆ. ಹಾಗಂತ ಬಲವಂತವಾಗಿ ಯಾರೊಂದಿಗೂ ಬದುಕುವುದಕ್ಕೆ ಆಗುವುದಿಲ್ಲ. ಸಮಾಜಕ್ಕೆ ಹೆದರಿ ತುಂಬಾ ಜನ ಒಟ್ಟಿಗೆ ಜೀವನ ನಡೆಸುತ್ತಿದ್ದಾರೆ. ಆದರೆ, ಅವರು ಯಾರೂ ಸುಖವಾಗಿ ಇಲ್ಲ. ಕಿರುಕುಳದ ನಡುವೆಯೂ ಬದುಕು ನಡೆಸುವುದು ನನ್ನ ಮಟ್ಟಿಗೆ ತಪ್ಪು’ ಎಂದರು ನರೇಶ್.
ಪ್ರತಿಷ್ಠಿತ ವಿಜಯ ಕೃಷ್ಣ ಮೂವೀಸ್ ಬ್ಯಾನರ್ನಡಿ ನರೇಶ್ ನಿರ್ಮಾಣ ಮಾಡಿರುವ ಮತ್ತೆ ಮದುವೆ ಚಿತ್ರಕ್ಕೆ ಎಂ. ಎಸ್. ರಾಜು ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದ್ದು ಎಂ.ಎಸ್. ರಾಜು ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಜಯಸುಧಾ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ವನಿತಾ ವಿಜಯಕುಮಾರ್, ಅನನ್ಯಾ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧೂ ಒಳಗೊಂಡ ಬಹು ದೊಡ್ಡ ತಾರಾಬಳಗ ಚಿತ್ರದಲ್ಲಿದೆ.
ಇದನ್ನೂ ಓದಿ; Pavitra Naresh: ಪವಿತ್ರಾ ಲೋಕೇಶ್-ನರೇಶ್ ಪ್ರೇಮ ಕಹಾನಿ ಶುರುವಾಗಿದ್ದು ಹೇಗೆ? ’ಮತ್ತೆ ಮದುವೆ’ ಟ್ರೈಲರ್ ಔಟ್!
ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮೆರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ. ಟೀಸರ್ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಮತ್ತೆ ಮದುವೆ ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿಬರುತ್ತಿದೆ.
ಸಿನಿಮಾದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
South Cinema
Kiccha Sudeep: ಅಭಿಷೇಕ್ ಅಂಬರೀಷ್ಗೆ ಭರ್ಜರಿ ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್!
Kiccha Sudeep: ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
ಬೆಂಗಳೂರು; ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಷ್ (Abhishek Ambareesh Wedding) ) ಹಾಗೂ ಅವಿವ ಬಿಡಪ ಜೂನ್ 5ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಕಿಚ್ಚ ಸುದೀಪ್ (Kiccha Sudeep) ಹಾಗೂ ಅಂಬರೀಷ್ ಮಧ್ಯೆ ಒಳ್ಳೆಯ ಒಡನಾಟ ಇತ್ತು. ಸುದೀಪ್ ಅವರ ಆಗಮನದಿಂದ ಮದುವೆಯ ಕಳೆ ಹೆಚ್ಚಿತ್ತು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಕರ್ಕಾಟಕ ಲಗ್ನದಲ್ಲಿ (9:30-10:30)ಜೋಡಿ ಹಸೆಮಣೆ ಏರಿತು. ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು. ಅಭಿಷೇಕ್ ಮದುವೆಗೆ ಸುದೀಪ್ ಗ್ರ್ಯಾಂಡ್ ಆಗಿಯೇ ಎಂಟ್ರಿ ಕೊಟ್ಟರು. ಸುದೀಪ್ ಜತೆ ಪತ್ನಿ ಪ್ರಿಯಾ ಸುದೀಪ್ ಹಾಗೂ ಸಾನ್ವಿ ಸುದೀಪ್ ಕೂಡ ಆಗಮಿಸಿ ಅಭಿ-ಅವಿವಾಗೆ ಶುಭಕೋರಿದರು. ಮಂಟಪದಲ್ಲಿ ಅಕ್ಷತೆ ಹಾಕಿ ನವ ಜೋಡಿಗೆ ಶುಭಕೋರಿದ ಸುದೀಪ್ ದಂಪತಿ, ಅಭಿಷೇಕ್-ಅವಿವಾಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. ಚಿನ್ನದ ಸರವನ್ನು ಸುದೀಪ್ ಉಡುಗೊರೆಯಾಗಿ ನೀಡಿದ್ದಾರೆ.
ಇದನ್ನೂ ಓದಿ: Kiccha Sudeep: ಕನ್ನಡಿಗರ ಹೃದಯ ಗೆದ್ದ ʻ2018ʼ ಚಿತ್ರ; ಮಲಯಾಳಂ ಸಿನಿಮಾಗೆ ಕಿಚ್ಚ ಸುದೀಪ್ ಫುಲ್ ಫಿದಾ
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು. ಪರಿಚಯ ಪ್ರೀತಿಗೆ ತಿರುಗಿತು. ಕುಟುಂಬದ ಒಪ್ಪಿಗೆ ಪಡೆದು ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡರು. ಈಗ ಇಬ್ಬರೂ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.
South Cinema
Actor Yash: ಅಭಿಷೇಕ್ ದಂಪತಿಗೆ ವಿಶ್ ಮಾಡಿದ ಯಶ್ -ರಾಧಿಕಾ; ಸೈಲಿಶ್ ಆಗಿ ಕಂಡ ರಾಕಿ ಭಾಯ್!
Actor Yash : ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದ ಕಲ್ಯಾಣಮಂಟಪದಲ್ಲಿ ಮದುವೆ ಗೌಡರ ಸಂಪ್ರದಾಯದಲ್ಲಿ ಅದ್ಧೂರಿಯಾಗಿ ನೆರವೇರಿತು
South Cinema
Abhishek Ambareesh Wedding: ಅಭಿಷೇಕ್ ಅಂಬರೀಶ್- ಅವಿವ ಜೋಡಿಗೆ ಆಶೀರ್ವದಿಸಿದ ರಜನಿಕಾಂತ್!
Abhishek Ambareesh Wedding: ಸೂಪರ್ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಸೂಪರ್ಸ್ಟಾರ್ ರಜನಿಕಾಂತ್ ಅವರು ಅಭಿಷೇಕ್ ಅಂಬರೀಶ್ (Abhishek Ambareesh Wedding) ಹಾಗೂ ಅವಿವ ಮದುವೆಗೆ ಹಾಜರಿದ್ದರು. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.
ಖ್ಯಾತ ಫ್ಯಾಷನ್ ಡಿಸೈನರ್ ಪ್ರಸಾದ್ ಬಿಡಪ ಅವರ ಪುತ್ರಿ ಆಗಿರುವ ಅವಿವ ಬಿಡಪ (Aviva Bidapa) ಹಾಗೂ ಅಭಿಷೇಕ್ ಅಂಬರೀಷ್ ನಡುವೆ ಇತ್ತೀಚಿನ ವರ್ಷಗಳಲ್ಲಿ ಪರಿಚಯ ಬೆಳೆದಿತ್ತು.
ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ.
South Cinema
Kannada New Movie: ಮೊದಲ ಬಾರಿಗೆ ಗುಜರಾತಿ ಸಿನಿಮಾ ಕನ್ನಡದಲ್ಲಿ!
Kannada New Movie: ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದನ್ನು ಕನ್ನಡದಲ್ಲಿಯೂ ರಿಲೀಸ್ ಮಾಡುವ ಪ್ರಯತ್ನಕ್ಕೆ ಕೈ ಹಾಕಿರೋದು ವಿಕ್ರಾಂತ್ ರೋಣ ಚಿತ್ರ ನಿರ್ಮಿಸಿದ್ದ ಜಾಕ್ ಮಂಜು.
ಬೆಂಗಳೂರು: ‘ರಾಯರು ಬಂದರು ಮಾವನ ಮನೆಗೆ’..ಇದು ಕನ್ನಡದ ಎವರ್ ಗ್ರೀನ್ ಹಾಡುಗಳಲ್ಲೊಂದು. ಸುಧಾರಾಣಿ ಹಾಗೂ ಆನಂದ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದ ರಾಷ್ಟ್ರಪ್ರಶಸ್ತಿಗೆ ಭಾಜನವಾಗಿದ್ದ ಮೈಸೂರು ಮಲ್ಲಿಗೆ ಸಿನಿಮಾದ ಅತ್ಯುತ್ತಮ ಗೀತೆ. ಇದೇ ರಾಯರು ಬಂದರು ಮಾವನ ಮನೆಗೆ ಎಂಬ ಶೀರ್ಷಿಕೆಯಡಿ (Kannada New Movie) ಸಿನಿಮಾವೊಂದು ತೆರೆಗೆ ಬರಲು ಸಜ್ಜಾಗಿದೆ. ವಿಶೇಷ ಏನಂದರೆ ಇದು ಗುಜರಾತಿ ಸಿನಿಮಾ.
`ವರ ಪಧಾರವೋ ಸಾವಧಾನ; ಎಂಬ ಟೈಟಲ್ ನಡಿ ಬಿಡುಗಡೆಯಾಗಲಿರುವ ಈ ಚಿತ್ರ ಕನ್ನಡದಲ್ಲಿಯೂ ಮೂಡಿಬಂದಿದೆ. ಇದೇ ಮೊದಲ ಬಾರಿಗೆ ಗುಜರಾತಿ ಸಿನಿಮಾವೊಂದನ್ನು ಕನ್ನಡದಲ್ಲಿಯೂ ರಿಲೀಸ್ ಮಾಡುವ ಪ್ರಯತ್ನಕ್ಕೆ ಕೈ ಹಾಕಿರೋದು ವಿಕ್ರಾಂತ್ ರೋಣ ಚಿತ್ರ ನಿರ್ಮಿಸಿದ್ದ ಜಾಕ್ ಮಂಜು. ಸುದೀಪ್ ಆಪ್ತರಾಗಿರುವ ಜಾಕ್ ಮಂಜು ತಮ್ಮದೇ ಶಾಲಿನಿ ಆರ್ಟ್ ಬ್ಯಾನರ್ ನಡಿ ರಾಯರು ಬಂದರು ಮಾವನ ಮನೆಗೆ ಸಿನಿಮಾವನ್ನು ಕನ್ನಡ ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದಾರೆ.
ರತ್ನಪುರ, ಜಿತಿ ಲೇ ಜಿಂದಗಿ ಎಂಬ ಎರಡು ಹಿಟ್ ಚಿತ್ರ ಕೊಟ್ಟಿರುವ ವಿಫುಲ್ ಶರ್ಮಾ ನಿರ್ದೇಶನದಲ್ಲಿ ಈ ಚಿತ್ರ ತಯಾರಾಗಿದೆ. ಶೈಲೇಶ್ ಧಮೇಲಿಯಾ, ಅನಿಲ್ ಸಂಘವಿ, ಭರತ್ ಮಿಸ್ತ್ರೀ ಬಂಡವಾಳ ಹೂಡಿದ್ದಾರೆ. ಸಾಧುತುಷಾರ್, ಕಿಂಜಲ್ ರಾಜಪ್ರಿಯಾ, ರಾಗಿ ಜಾನಿ ಮತ್ತು ಕಾಮಿನಿ ಪಾಂಚಾಲ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಪ್ರಶಾಂತ್ ಬರೋಟ್, ಜಯ್ ಪಾಂಡ್ಯ ಮತ್ತು ಜೈಮಿನಿ ತ್ರಿವೇದಿ ಇತರರು ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ: Kannada New Movie: ‘ಹಿರಣ್ಯ’ನ ನಾಯಕಿಗೆ ಹುಟ್ಟುಹಬ್ಬದ ಸಂಭ್ರಮ
ಜುಲೈ 7ಕ್ಕೆ ಕನ್ನಡದಲ್ಲಿ ರಾಯರು ಬಂದರು ಮಾವನ ಮನೆಗೆ ಸಿನಿಮಾ ಬಿಡುಗಡೆಯಾಗುತ್ತಿದೆ. ಈ ನಿಟ್ಟಿಯಲ್ಲಿ ಇಡೀ ಚಿತ್ರತಂಡ ಬೆಂಗಳೂರಿನಲ್ಲಿಯೂ ಪ್ರಚಾರ ಕಾರ್ಯ ನಡೆಸಲಿದೆ. ಇದೇ 9ರಂದು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿದ್ದು, ಇಡೀ ತಂಡ ಭಾಗಿಯಾಗಲಿದೆ. ಅಂದಹಾಗೇ ರಾಯರು ಬಂದರು ಮಾವನ ಮನೆಗೆ ಸಿನಿಮಾ ಫ್ಯಾಮಿಲಿ ಡ್ರಾಮಾ ಕಥಾಹಂದರ ಹೊಂದಿದೆ. ಮದುವೆ. ಕುಟುಂಬ, ಸಂಬಂಧಗಳ ಸುತ್ತಾ ಇಡೀ ಸಿನಿಮಾ ಸಾಗಲಿದೆ.
-
ಕರ್ನಾಟಕ19 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ17 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ14 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ಕರ್ನಾಟಕ10 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ದೇಶ15 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ಕರ್ನಾಟಕ8 hours ago
ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ
-
ದೇಶ19 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಕರ್ನಾಟಕ9 hours ago
Free Bus: ಉಚಿತ ಬಸ್ ಪ್ರಯಾಣಕ್ಕೆ ಸಿಕ್ಕಿತು ಅನುಮೋದನೆ; ಏಳು ಕಂಡೀಷನ್ನೊಂದಿಗೆ ಚಾಲನೆ!