ಯೂಟ್ಯೂಬ್​ನಲ್ಲಿ ಟ್ರೆಂಡ್​ ಆದ ಪೊನ್ನಿಯನ್ ಸೆಲ್ವನ್ ಟೀಸರ್, ನಟಿ ಐಶ್ವರ್ಯಾ ರೈ ಲುಕ್‌ಗೆ ಜನ ಫಿದಾ Vistara News
Connect with us

ಕಾಲಿವುಡ್

ಯೂಟ್ಯೂಬ್​ನಲ್ಲಿ ಟ್ರೆಂಡ್​ ಆದ ಪೊನ್ನಿಯನ್ ಸೆಲ್ವನ್ ಟೀಸರ್, ನಟಿ ಐಶ್ವರ್ಯಾ ರೈ ಲುಕ್‌ಗೆ ಜನ ಫಿದಾ

ಐತಿಹಾಸಿಕ ಕಥಾಹಂದರ ಹೊಂದಿರುವ ಪೊನ್ನಿಯನ್ ಸೆಲ್ವನ್ ಭಾಗ 1 ರ ಚಿತ್ರದ ಟೀಸರ್​ ರಿಲೀಸ್ ಮಾಡಲಾಗಿದ್ದು, ಟೀಸರ್ ನೋಡಿದ ಅಭಿಮಾನಿಗಳು ಐಶ್ವರ್ಯಾ ಲುಕ್​ಗೆ ಫಿದಾ ಆಗಿದ್ದಾರೆ.

VISTARANEWS.COM


on

ponniyin selvan teaser
ಪೊನ್ನಿಯನ್ ಸೆಲ್ವನ್ ಭಾಗ 1ರ ಚಿತ್ರತಂಡ
Koo

ಚೆನ್ನೈ : ಮಣಿರತ್ನಂ ನಿರ್ದೇಶನದ ಐತಿಹಾಸಿಕ ಚಿತ್ರ ಪೊನ್ನಿಯನ್ ಸೆಲ್ವನ್ ಭಾಗ 1 ರ ಬಗ್ಗೆ ಚಿತ್ರತಂಡ ದಿನಕ್ಕೊಂದು ಹೊಸ ಹೊಸ ಆಪ್​ಡೇಟ್​ಗಳನ್ನು ನೀಡುತ್ತಿದೆ. ಈಗಾಗಲೇ ಸಿನಿಮಾ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಈಗಿನಿಂದಲೇ ಪ್ರಚಾರವನ್ನು ಆರಂಭಿಸಿದೆ. ಸದ್ಯಕ್ಕೆ ಸಿನಿಮಾದ ಟೀಸರ್​ ಬಿಡುಗಡೆಯಾಗಿದ್ದು, ಟೀಸರ್ ನೋಡಿದ ಅಭಿಮಾನಿಗಳಲ್ಲಿ ಸಿನಿಮಾ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

ಸುಮಾರು ಮೂರು ವರ್ಷಗಳ ಕಾಲ ನಡೆದ ಚಿತ್ರೀಕರಣ ಕೊನೆಗೂ ಮುಕ್ತಾಯವಾಗಿದ್ದು, ಸಿನಿಮಾ ಪ್ರೇಕ್ಷಕರ ಎದುರು ಬರಲು ಇನ್ನು ಕೆಲವೇ ತಿಂಗಳುಗಳು ಮಾತ್ರ ಬಾಕಿ ಉಳಿದಿದೆ. ಹೀಗಾಗಿ ಚಿತ್ರತಂಡ ಕೂಡ ಪ್ರತಿದಿನ ಒಬ್ಬೊಬ್ಬರ ಪಾತ್ರದ ಪರಿಚಯ ಮಾಡಿಸಿರುವ ಚಿತ್ರತಂಡ ಈಗ ಅದ್ಧೂರಿಯಾಗಿ ಸಿನಿಮಾ ಟೀಸರ್​ ರಿಲೀಸ್ ಮಾಡಿದ್ದು, ಪ್ರತಿಯೊಂದು ಪಾತ್ರವನ್ನು ಬಹಳ ಅದ್ಬುತವಾಗಿ ಪರದೆ ಮೇಲೆ ತೋರಿಸಿದ್ದಾರೆ.

ಇದನ್ನು ಓದಿ| ತ್ರಿಷಾ ಈಗ ರಾಜಕುಮಾರಿ ಕುಂದವೈ: ಪೊನ್ನಿಯನ್‌ ಸೆಲ್ವಂ ಚಿತ್ರದಲ್ಲಿ ಫುಲ್‌ ಮಿಂಚಿಂಗ್‌

ಪೊನ್ನಿಯನ್ ಸೆಲ್ವನ್ ಭಾಗ 1ರಲ್ಲಿ ಸೌತ್ ಸ್ಟಾರ್‌ಗಳು ಹಾಗೂ ಬಾಲಿವುಡ್​ನ ದೊಡ್ಡ ತಾರಾಬಳಗವೇ ಇದೆ. ಶುಕ್ರವಾರ (ಜು.8) ಸಂಜೆ 6 ಗಂಟೆಗೆ ಚೆನ್ನೈನಲ್ಲಿ ಅದ್ಧೂರಿಯಾಗಿ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಯಿತು. ಒಂದು ನಿಮಿಷ ಮತ್ತು 20 ಸೆಕೆಂಡುಗಳ ಟೀಸರ್​ನಲ್ಲಿ ಎಲ್ಲಾ ತಾರೆಯರು ಅದ್ಭುತವಾಗಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಐಶ್ವರ್ಯಾ ಮತ್ತು ತ್ರಿಷಾ ರಾಣಿಯರ ಲುಕ್​ನಲ್ಲಿ ಮಿಂಚಿದ್ದು, ಟೀಸರ್​ನ ಪ್ರಮುಖ ಆಕರ್ಷಣೆಯಾಗಿದ್ದಾರೆ.

ಈ ಸಿನಿಮಾದ ಟೀಸರ್​ ಅನ್ನು ಹಿಂದಿಯಲ್ಲಿ ಅಮಿತಾಭ್‌ ಬಚ್ಚನ್ ಬಿಡುಗಡೆ ಮಾಡಿದ್ದರೆ, ಕನ್ನಡದಲ್ಲಿ ರಕ್ಷಿತ್ ಶೆಟ್ಟಿ ಬಿಡುಗಡೆ ಮಾಡಿದ್ದಾರೆ. ಯೂಟ್ಯೂಬ್​ನಲ್ಲಿ ರಿಲೀಸ್​ ಆಗಿ ಇಲ್ಲಿಯವೆರಗೂ 6,464,081 ಮಂದಿ ವೀಕ್ಷಣೆ ಮಾಡಿದ್ದಾರೆ.

ಐತಿಹಾಸಿಕ ಕಥಾ ಹಂದರವುಳ್ಳ ಈ ಸಿನಿಮಾ ಪ್ರಾಚೀನ ತಮಿಳು ರಾಜಮನೆತನ ಚೋಳರಾಜರ ಕುರಿತಾಗಿನ ಕತೆಯನ್ನು ಹೊಂದಿದೆ. ಚಿತ್ರದಲ್ಲಿ ನಟಿ ಐಶ್ವರ್ಯ ರೈ ಪಳುವೂರಿನ ರಾಣಿ ನಂದಿನಿಯಾಗಿ ಕಣ್ಮನ ಸೆಳೆದಿದ್ದಾರೆ. ಇನ್ನು ಪೊನ್ನಿಯನ್ ಸೆಲ್ವನ್ ಸಿನಿಮಾ ಮಾಡಬೇಕೆಂಬುದು ತಮಿಳುನಾಡಿನಲ್ಲಿ ಎಂಜಿಆರ್ ಕಾಲದಿಂದಲೂ ಕನಸಾಗಿತ್ತು. ಮಣಿರತ್ನಂ ಈಗ ಇದನ್ನು ನನಸಾಗಿಸಿದ್ದಾರೆ. ಚಿತ್ರದ ಮೊದಲ ಭಾಗ ಸೆಪ್ಟೆಂಬರ್ 30ರಂದು ಪಂಚ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಇದನ್ನು ಓದಿ| ಪಳುವೂರಿನ ರಾಣಿ ನಂದಿನಿಯಾದ ನಟಿ ಐಶ್ವರ್ಯಾ ರೈ ಬಚ್ಚನ್, ಮಹಾರಾಣಿ ಲುಕ್​ಗೆ ಅಭಿಮಾನಿಗಳು ಫಿದಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

South Cinema

Actress Nayanthara: ನಯನತಾರಾ -ವಿಘ್ನೇಶ್ ಶಿವನ್ ಅವಳಿ ಮಕ್ಕಳ ಮೊದಲ ಬರ್ತ್‌ಡೇ; ಕ್ಯೂಟ್‌ ಫೋಟೊಸ್ ಔಟ್‌!

Actress Nayanthara: ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರು ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದು ಒಂದು ವರ್ಷವಾಗಿದೆ.

VISTARANEWS.COM


on

Edited by

Nayanthara Vignesh Shivan twin
Koo
Actress Nayanthara
ನಯನತಾರಾ Actress Nayanthara ಮತ್ತು ವಿಘ್ನೇಶ್ ಶಿವನ್ ಅವರ ಅವಳಿ ಮಕ್ಕಳಿಗೆ ಮೊದಲ ವರ್ಷದ ಬರ್ತ್ ಡೇ ಮುದ್ದಾದ ಅವಳಿ ಮಕ್ಕಳ ಚೆಂದದ ಫೋಟೊಗಳನ್ನು ದಂಪತಿ ಇನ್‌ಸ್ಟಾದಲ್ಲಿ ಶೇರ್‌ ಮಾಡಿಕೊಂಡಿದೆ ಸೆಪ್ಟೆಂಬರ್ 26ರಂದು ದಂಪತಿ ತನ್ನ ಇಬ್ಬರು ಮಕ್ಕಳಾದ ಉಯಿರ್ ಹಾಗೂ ಉಳಗ ಜತೆ ಬರ್ತಡೇ ಆಚರಿಸಿಕೊಂಡಿದ್ದಾರೆ
Actress Nayanthara
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರು ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳನ್ನು ಪಡೆದು ಒಂದು ವರ್ಷವಾಗಿದೆ
Actress Nayanthara
ಮಕ್ಕಳ ಬಗ್ಗೆ ಹಲವು ಪೋಸ್ಟ್​ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ದಂಪತಿ ಹಾಕುತ್ತ ಇರುತ್ತಾರೆ

ಇದನ್ನೂ ಓದಿ: Actress Nayanthara: ಯೂಟ್ಯೂಬರ್ ಸಿನಿಮಾಗೆ ನಯನತಾರಾ ನಾಯಕಿ; ಅಚ್ಚರಿಗೊಂಡ ಫ್ಯಾನ್ಸ್‌!

Actress Nayanthara
ಇದೀಗ ದಂಪತಿ ಅವಳಿ ಮಕ್ಕಳ ಫೋಟೊಗಳನ್ನು ಹಂಚಿಕೊಂಡು ʻʻಜನ್ಮದಿನದ ಶುಭಾಶಯಗಳು ನನ್ನ ಪ್ರೀತಿಯ ಮಕ್ಕಳೇ ನೀವು ನಮ್ಮ ಜಗತ್ತುʼʼಎಂದು ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ
Actress Nayanthara

ನಯನತಾರಾ ಸದ್ಯ ‘ಜವಾನ್’ ಚಿತ್ರದ ಯಶಸ್ಸಿನಲ್ಲಿದ್ದಾರೆ. ನಟಿಯ ಕೈಯಲ್ಲಿ ಹಲವು ಸಿನಿಮಾಗಳು ಇವೆ.

Continue Reading

South Cinema

Nithya Menen: ʻಮೈನಾʼ ನಟಿ ನಿತ್ಯಾ ಮೆನನ್‌ಗೆ ತಮಿಳು ಹೀರೊನಿಂದ ಕಿರುಕುಳ; ಸ್ಪಷನೆ ಕೊಟ್ಟ ನಟಿ!

Nithya Menen: ಸಿನಿಮಾಗಳಿಗಿಂತ ನಟಿ ವೈಯಕ್ತಿಕ ವಿಚಾರಗಳಿಗೆ ಆಗಾಗ ಮುನ್ನಲ್ಲೆಗೆ ಬರುತ್ತಲೇ ಇರುತ್ತಾರೆ ನಿತ್ಯಾ ಮೆನನ್‌. ಅವರು ಧನುಷ್ ನಟನೆಯ 50ನೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

VISTARANEWS.COM


on

Edited by

Nithya Menen
Koo

ಬೆಂಗಳೂರು: ‘ಮೈನಾ’ (Mynaa) ನಾಯಕಿ ನಿತ್ಯಾ ಮೆನನ್ (Nithya Menen) ಹಲವು ದಿನಗಳಿಂದ ಸಖತ್‌ ಸುದ್ದಿಯಲ್ಲಿದ್ದಾರೆ. ಸಿನಿಮಾಗಳಿಗಿಂತ ನಟಿ ವೈಯಕ್ತಿಕ ವಿಚಾರಗಳಿಗೆ ಆಗಾಗ ಮುನ್ನಲ್ಲೆಗೆ ಬರುತ್ತಲೇ ಇರುತ್ತಾರೆ. ʻʻತಮಿಳು ಚಲನಚಿತ್ರ ನಟರೊಬ್ಬರು ಚಿತ್ರೀಕರಣದ ವೇಳೆ ನನಗೆ ಕಿರುಕುಳ ನೀಡಿದ್ದಾರೆʼ ಎಂದು ನಟಿ ಹೇಳಿರುವುದಾಗಿ ಕೆಲವು ಕಡೆಗಳಲ್ಲಿ ವರದಿ ಆಗಿತ್ತು. ಇದೆಲ್ಲ ಸುಳ್ಳು ಸುದ್ದಿ ಎಂದು ನಟಿ ಇದೀಗ ಸ್ಪಷ್ಟನೆ ಕೊಟ್ಟಿದ್ದಾರೆ.

ʻʻತೆಲುಗು ಚಿತ್ರರಂಗದಲ್ಲಿ ಯಾವುದೇ ಸಮಸ್ಯೆಯನ್ನು ಎದುರಿಸಿಲ್ಲ, ಆದರೆ ತಮಿಳು ಚಿತ್ರರಂಗದಲ್ಲಿ ನಾನು ಸಾಕಷ್ಟು ಸಮಸ್ಯೆಗಳನ್ನು ಎದುರಿಸಿದ್ದೇನೆ. ತಮಿಳು ಚಲನಚಿತ್ರ ನಟರೊಬ್ಬರು ಚಿತ್ರೀಕರಣದ ವೇಳೆ ನನಗೆ ಕಿರುಕುಳ ನೀಡಿದ್ದಾರೆʼʼಎಂದು ನಿತ್ಯಾ ಮೆನನ್‌ ಹೇಳಿದ್ದರು ಎಂಬ ಸುದ್ದಿ ವೈರಲ್‌ ಆಗಿತ್ತು. ಈ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಯಲ್ಲಿತ್ತು.

ಇದೀಗ ನಟಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, “ವದಂತಿಗಳು ಸಂಪೂರ್ಣವಾಗಿ ಸುಳ್ಳು, ನಾನು ಯಾವುದೇ ಸಂದರ್ಶನವನ್ನು ನೀಡಿಲ್ಲ. ಈ ರೀತಿ ಹೇಳಿಕೆ ಎಲ್ಲಿಯೂ ಹೇಳಿಕೊಂಡಿಲ್ಲ. ಕೇವಲ ಕ್ಲಿಕ್‌ಗಳನ್ನು ಪಡೆಯಲು ಈ ರೀತಿಯ ಸುಳ್ಳು ಸುದ್ದಿಗಳನ್ನು ಸೃಷ್ಟಿಸುವ ವ್ಯಕ್ತಿಗಳನ್ನು ಪತ್ತೆ ಹೆಚ್ಚಬೇಕಿದೆ. ಯಾರೂ ನನ್ನೊಂದಿಗೆ ಕೆಟ್ಟದಾಗಿ ನಡೆದುಕೊಂಡಿಲ್ಲ ʼʼಎಂದು ನಟಿ ಹೇಳಿದ್ದಾರೆ. ಇಂತಹ ವದಂತಿಗಳ ಬಗ್ಗೆ ನಟಿ ಬೇಸರ ವ್ಯಕ್ತಪಡಿಸಿದ್ದಾರೆ. ನಿತ್ಯಾ ಅವರ ಈ ಸ್ಪಷ್ಟೀಕರಣ ಎಲ್ಲಾ ಉಹಾಪೋಹಗಳಿಗೆ ಅಂತ್ಯ ಹಾಡಿವೆ.

ಇದನ್ನೂ ಓದಿ: Nithya Menen: ನಿತ್ಯಾ ಮೆನನ್ ಅಜ್ಜಿ ನಿಧನ; ಭಾವುಕ ಪೋಸ್ಟ್‌ ಹಂಚಿಕೊಂಡ ನಟಿ!

ಟ್ವಟರ್‌ನಲ್ಲಿ ನಿತ್ಯಾ ಮೆನನ್ ಸಖತ್‌ ಟ್ರೆಂಡ್‌!

ಈ ಬಗ್ಗೆ ನಟಿ ಬೇಸರ ಕೂಡ ವ್ಯಕ್ತಪಡಿಸಿದ್ದಾರೆ. ʻʻಸುದ್ದಿಗಳನ್ನು ಸೃಷ್ಟಿಸುವ ವ್ಯಕ್ತಿಗಳನ್ನು ಪತ್ತೆ ಹೆಚ್ಚಬೇಕಿದೆ’ ಎಂದು ನಿತ್ಯಾ ಮೆನನ್ ಬರೆದುಕೊಂಡಿದ್ದಾರೆ. ‘ಇಷ್ಟು ಕೆಳಮಟ್ಟಕ್ಕೆ ಇಳಿಯಬೇಡಿ. ಉತ್ತಮರಾಗಿ’ ಎಂದು ಅವರು ಮನವಿ ಮಾಡಿದ್ದಾರೆ.

ನಿತ್ಯಾ ಮೆನನ್‌ ಅವರು ಧನುಷ್ ನಟನೆಯ 50ನೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಧನುಷ್ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಸನ್ ಪಿಕ್ಚರ್ಸ್ ನಿರ್ಮಾಣದ ಡಿ50 ಸಿನಿಮಾ ದೊಡ್ಡ ಬಜೆಟ್ ಚಿತ್ರವಾಗಿದೆ.ಹಾಗೇ ಅವರೇ ನಾಯಕರಾಗಿಯೂ ನಟಿಸುತ್ತಿದ್ದಾರೆ. ಈ ಸಿನಿಮಾಗೆ ಎಆರ್ ರೆಹಮಾನ್ ಅವರ ಸಂಗೀತವಿದೆ ಎಂತಲೂ ವರದಿಯಾಗಿದೆ. ಎಸ್​ಜೆ ಸೂರ್ಯ, ಸಂದೀಪ್ ಕಿಶನ್ ಮೊದಲಾದವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

Continue Reading

South Cinema

Vijay Sethupathi: ಮಗಳ ವಯಸ್ಸಿನ ನಟಿಯ ಜತೆ ರೊಮ್ಯಾನ್ಸ್ ಮಾಡಲಾರೆ ಎಂದ ವಿಜಯ್ ಸೇತುಪತಿ!

2021ರಲ್ಲಿ ಬಿಡುಗಡೆಯಾದ ʻಉಪ್ಪೆನ’ ತೆಲುಗು ಸಿನಿಮಾದಲ್ಲಿ ಕೃತಿ ಶೆಟ್ಟಿ ಮತ್ತು ವಿಜಯ್ ಸೇತುಪತಿ ಜತೆಯಾಗಿ ನಟಿಸಿದ್ದರು. ‘ಉಪ್ಪೆನ’ದಲ್ಲಿ ಕೃತಿ ಶೆಟ್ಟಿಯ ತಂದೆಯ ಪಾತ್ರದಲ್ಲಿ ನಟ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದರು.

VISTARANEWS.COM


on

Edited by

Vijay Sethupathi Krithi Shetty
Koo

ಬೆಂಗಳೂರು: ವಿಜಯ್ ಸೇತುಪತಿ (Vijay Sethupathi) ಸದ್ಯ ʻಜವಾನ್‌ʼ ಸಿನಿಮಾದ ಸಕ್ಸಸ್​​ ಮೂಡ್‌ನಲ್ಲಿ ಇದ್ದಾರೆ. ಬಹುಭಾಷಾ ನಟ ತಮಿಳು ಮಾತ್ರವಲ್ಲದೆ, ತೆಲುಗು ಮತ್ತು ಮಲಯಾಳಂ ಭಾಷೆಯ ಸಿನಿಮಾಗಳಲ್ಲೂ ಅವರು ಬ್ಯುಸಿಯಾಗಿದ್ದಾರೆ. ಇಷ್ಟೊಂದು ಜನಪ್ರಿಯತೆ ಪಡೆದಿರುವ ವಿಜಯ್‌ ಸೇತುಪತಿ ಅವರು ನಟಿ ಕೃತಿ ಶೆಟ್ಟಿ (Krithi Shetty) ಜತೆ ನಾಯಕನಾಗಿ ನಟಿಸಲು ನಿರಾಕರಿಸಿದ್ದಾರೆ ಎಂದು ವರದಿಯಾಗಿದೆ. ಮಗಳ ಪಾತ್ರ ಮಾಡಿದ ನಟಿ ಜತೆ ರೊಮ್ಯಾನ್ಸ್ ಮಾಡಲಾರೆʼ ಎಂದು ನಟ ಹೇಳಿದ್ದಾರಂತೆ.

2021ರಲ್ಲಿ ಬಿಡುಗಡೆಯಾದ ʻಉಪ್ಪೆನ’ ತೆಲುಗು ಸಿನಿಮಾದಲ್ಲಿ ಕೃತಿ ಶೆಟ್ಟಿ ಮತ್ತು ವಿಜಯ್ ಸೇತುಪತಿ ಜತೆಯಾಗಿ ನಟಿಸಿದ್ದರು. ‘ಉಪ್ಪೆನ’ದಲ್ಲಿ ಕೃತಿ ಶೆಟ್ಟಿಯ ತಂದೆಯ ಪಾತ್ರದಲ್ಲಿ ನಟ ವಿಜಯ್ ಸೇತುಪತಿ ಕಾಣಿಸಿಕೊಂಡಿದ್ದರು. ಹೀಗಾಗಿ ಒಂದು ಸಿನಿಮಾದಲ್ಲಿ ಮಗಳಂತೆ ನೋಡಿದ ನಟಿಯ ಜತೆ ಮತ್ತೊಂದು ಸಿನಿಮಾದಲ್ಲಿ ರೊಮ್ಯಾನ್ಸ್ ಮಾಡುವುದಿಲ್ಲ ಎಂಬುದಾಗಿ ಸೇತುಪತಿ ಹೇಳಿದ್ದಾರೆ. ತಮ್ಮಿಬ್ಬರನ್ನು ನಾಯಕ-ನಾಯಕಿಯನ್ನಾಗಿಸಿ ತಮಿಳು ಸಿನಿಮಾವೊಂದನ್ನು ಮಾಡುವುದಕ್ಕೆ ಆಫರ್‌ ಬಂದರೂ ವಿಜಯ್‌ ನಿರಾಕರಿಸಿದ್ದಾರೆ.

ಈ ಬಗ್ಗೆ ವಿಜಯ್​ ಸೇತುಪತಿ ಸ್ಪಷ್ಟನೆಯನ್ನೂ ನೀಡಿದ್ದಾರೆ. ʻಒಮ್ಮೆ ಮಗಳೆಂದು ಕಲ್ಪಿಸಿಕೊಂಡ ನಟಿಯ ಜತೆಗೆ ನಾನು ಹೇಗೆ ರೊಮ್ಯಾನ್ಸ್ ಮಾಡಲಿ? ಉಪ್ಪೆನ ಸಿನಿಮಾದ ಕ್ಲೈಮ್ಯಾಕ್ಸ್‌ ಶೂಟಿಂಗ್ ಮಾಡುವಾಗ, ನನ್ನನ್ನು ನಿನ್ನ ತಂದೆ ಎಂದು ಕಲ್ಪಿಸಿಕೋ ಎಂದು ಕೃತಿಗೆ ಹೇಳಿದ್ದೆ. ಆ ಸಿನಿಮಾ ಮಾಡುವಾಗ ನನ್ನ ಮಗನಷ್ಟೇ ಕೃತಿಗೂ ವಯಸ್ಸು. ನಾನು ಕೂಡ ಕೃತಿಯನ್ನು ಮಗಳಂತೆ ಭಾವಿಸಿದ್ದೇನೆ. ಹೀಗಿರುವಾಗ ಕೃತಿ ಜತೆಗೆ ರೊಮ್ಯಾನ್ಸ್ ಮಾಡುವುದಿಲ್ಲ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: Vijay Sethupathi: ‘ಮಹಾರಾಜʼಫಸ್ಟ್‌ ಲುಕ್‌ ಔಟ್‌; 50ನೇ ಸಿನಿಮಾದಲ್ಲಿ ರಗಡ್‌ ಲುಕ್‌ನಲ್ಲಿ ಮಿಂಚಿದ ವಿಜಯ್‌ ಸೇತುಪತಿ!

50ನೇ ಸಿನಿಮಾದಲ್ಲಿ ರಗಡ್‌ ಲುಕ್‌ನಲ್ಲಿ ಮಿಂಚಿದ ವಿಜಯ್‌ ಸೇತುಪತಿ

ಸದ್ಯ ವಿಜಯ್‌ ಸೇತುಪತಿ ಅವರ ಕೈಯಲ್ಲಿ ಹಲವು ಸಿನಿಮಾಗಳಿವೆ. ವಿಜಯ್‌ ಸೇತುಪತಿ ಅವರ ‘ಮಹಾರಾಜ’ ಸಿನಿಮಾದ (Maharaja first Look Out) ಫಸ್ಟ್-ಲುಕ್ ಪೋಸ್ಟರ್ ಅನಾವರಣಗೊಂಡಿದೆ. ವಿಜಯ್‌ ಸೇತುಪತಿ 50ನೇ ಚಿತ್ರಕ್ಕಾಗಿ,(50th film ‘Maharaja) ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಜತೆ ಕೈ ಜೋಡಿಸಿದ್ದಾರೆ.

ಮಹಾರಾಜ’ ಸಿನಿಮಾದ ಫಸ್ಟ್-ಲುಕ್‌ನಲ್ಲಿ ವಿಜಯ್‌ ರಗಡ್‌ ಲುಕ್‌ನಲ್ಲಿ ಮಿಂಚಿದ್ದಾರೆ. ಚೇರ್‌ನಲ್ಲಿ ಚಾಕು ಹಿಡಿದು ರಕ್ತಸಿಕ್ತರಾಗಿ ಗಂಭೀರದಿಂದ ಕೂತಿದ್ದಾರೆ ವಿಜಯ್‌. ಸುತ್ತಲೂ ಪೊಲೀಸ್ ಅಧಿಕಾರಿಗಳು ನಿಂತಿದ್ದಾರೆ. ನಟ ವಿಜಯ್ ಅವರ ಎಡ ಭಾಗದ ಕಿವಿಗೆ ಬ್ಯಾಂಡೆಜ್ ಹಾಕಲಾಗಿದೆ. ಈ ಚಿತ್ರದಲ್ಲಿ ವಿಜಯ್ ಸೇತುಪತಿ ಜತೆಗೆ ಅನುರಾಗ್ ಕಶ್ಯಪ್, ಮಮತಾ ಮೋಹನ್ ದಾಸ್ ಮತ್ತು ನಟ್ಟಿ ನಟರಾಜ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡುತ್ತಿದ್ದು, ದಿನೇಶ್ ಪುರುಷೋತ್ತಮನ್ ಅವರ ಛಾಯಾಗ್ರಹಣವಿದೆ.


Continue Reading

South Cinema

Silk Smitha: ಸಿಲ್ಕ್​ ಸ್ಮಿತಾ ಶವದ ಮೇಲೆ ಅತ್ಯಾಚಾರ ; ನಟಿಯ ಪುಣ್ಯತಿಥಿಯಂದು ಅಚ್ಚರಿಯ ಸತ್ಯ ಹೊರಬಿತ್ತು!

Silk Smitha:  ಸಿಲ್ಕ್​ ಸ್ಮಿತಾ ಅವರು ಮೃತಪಟ್ಟ ಬಳಿಕ ಅವರ ಶವದ ಮೇಲೆ ಅತ್ಯಾಚಾರ ಮಾಡಲಾಗಿತ್ತು ಎಂಬ ಪತ್ರಕರ್ತ ಬೈಲ್ವಾನ್ ರಂಗನಾಥನ್ ಅವರ ಹೇಳಿಕೆ ಮತ್ತೆ ವೈರಲ್‌ ಆಗುತ್ತಿದೆ.

VISTARANEWS.COM


on

Edited by

Silk Smitha
Koo

ಬೆಂಗಳೂರು: ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಕೆಲಸ ಮಾಡಿದ ಸಿಲ್ಕ್‌ ಸ್ಮಿತಾ (Silk Smitha) ಮೂಲ ಹೆಸರು ವಿಜಯಲಕ್ಷ್ಮಿ. 1960ರ ಡಿಸೆಂಬರ್ 2ರಂದು ಜನಿಸಿದರು. ಆ ನಂತರದ ದಿನಗಳಲ್ಲಿ ಸಿಲ್ಕ್ ಸ್ಮಿತಾ ಎಂದೇ ಫೇಮಸ್ ಆದರು.  ಸೆಪ್ಟೆಂಬರ್​ 23 ನಟಿ ಸಿಲ್ಕ್​ ಸ್ಮಿತಾ ಅವರ 27ನೇ ಪುಣ್ಯತಿಥಿ. ಇದೀಗ ಕಾಲಿವುಡ್​ ನಟ ಹಾಗೂ ಪತ್ರಕರ್ತ ಬೈಲ್ವಾನ್ ರಂಗನಾಥನ್ ಅವರ ಹಳೆಯ ಹೇಳಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಸಿಲ್ಕ್​ ಸ್ಮಿತಾ ಅವರು ಮೃತಪಟ್ಟ ಬಳಿಕ ಅವರ ಶವದ ಮೇಲೆ ಅತ್ಯಾಚಾರ ಮಾಡಲಾಗಿತ್ತು ಎನ್ನುವ ಅವರ ಹೇಳಿಕೆ ಮತ್ತೆ ವೈರಲ್‌ ಆಗುತ್ತಿದೆ.

ಸಿಲ್ಕ್ ಸ್ಮಿತಾ ಕುಟುಂಬದ ಆರ್ಥಿಕ ಸ್ಥಿತಿ ಉತ್ತಮವಾಗಿರಲಿಲ್ಲ ಮತ್ತು ಅದಕ್ಕಾಗಿಯೇ ಸಿಲ್ಕ್ ಬಾಲ್ಯದಲ್ಲಿ ತಮ್ಮ ಓದನ್ನು ಬಿಡಬೇಕಾಯಿತು. ವರದಿಗಳ ಪ್ರಕಾರ, ಸಿಲ್ಕ್ ಸ್ಮಿತಾ ಅವರು ಕೇವಲ 14 ವರ್ಷದವರಾಗಿದ್ದಾಗ ಮದುವೆಯಾಗಿದ್ದರು ಮತ್ತು ಅವರು ಸಾಕಷ್ಟು ಕೌಟುಂಬಿಕ ಹಿಂಸೆಯನ್ನು ಎದುರಿಸಿದರು. ಸಿಲ್ಕ್ ಸ್ಮಿತಾ ತಮ್ಮ ಗಂಡನ ಮನೆಯಿಂದ ಓಡಿಹೋದ ನಂತರ ಮೇಕಪ್ ಕಲಾವಿದನಾಗಿದ್ದ ತಮ್ಮ ಸ್ನೇಹಿತನ ಮನೆ ಸೇರಿಕೊಂಡಿದ್ದರು. ಮೇಕಪ್ ಕಲಾವಿದರಾಗಿ ಕೆಲಸ ಮಾಡಲು ಪ್ರಾರಂಭಿಸಿದರು. ನಂತರ ತಮಿಳು ನಿರ್ದೇಶಕ ವಿನು ಚಕ್ರವರ್ತಿ ಅವರು ಸಿಲ್ಕ್ ಸ್ಮಿತಾಗೆ ದೊಡ್ಡ ಬ್ರೇಕ್ ನೀಡಿದರು. 1979ರಲ್ಲಿ ತಮಿಳು ಚಲನಚಿತ್ರ ‘ವಂದಿಚಕ್ಕರಂ’ನಲ್ಲಿನ ಅವರ ಅದ್ಭುತ ಅಭಿನಯಕ್ಕಾಗಿ ಮೊದಲ ಬಾರಿಗೆ ಗಮನ ಸೆಳೆದರು. ಸಿಲ್ಕ್ ಸ್ಮಿತಾ ಅವರು 17 ವರ್ಷಗಳ ಕಾಲ ನಟಿಯಾಗಿ, ನೃತ್ಯಗಾತಿಯಾಗಿ ಮಿಂಚಿದರು. 450ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಕಾಣಿಸಿಕೊಂಡರು. ಸೆಪ್ಟೆಂಬರ್ 23, 1996ರಂದು ತಮ್ಮ 35ನೇ ವಯಸ್ಸಿನಲ್ಲಿ ನಿಗೂಢವಾಗಿ ಮೃತಪಟ್ಟರು. ಪೊಲೀಸರಿಗೆ ಸೂಸೈಡ್ ನೋಟ್ ಸಿಕ್ಕಿದೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ: Silk Smitha: ಜ್ಯೂನಿಯರ್‌ ಸಿಲ್ಕ್‌ ಸ್ಮಿತಾ ಕಂಡು ಸಿನಿ ಪ್ರೇಮಿಗಳು ಥ್ರಿಲ್‌; ʻಹಳ್ಳಿ ಮೇಷ್ಟ್ರೇʼ ಬೇಗ ಬನ್ನಿ ಅಂದ್ರು ನೆಟ್ಟಿಗರು!

Bayilvan Ranganathan

ನಟಿ ಕಾಮಪ್ರಚೋದಕ ದೃಶ್ಯಗಳಲ್ಲಿ ನಟಿಸಿ ಫೇಮಸ್ಸಾದ ಕಾರಣ ಅಭಿಮಾನಿಗಳ ಸಂಖ್ಯೆ ಹೆಚ್ಚಿನ ರೀತಿಯಲ್ಲಿ ಇತ್ತು. ಒಮ್ಮೆಯಾದರೂ ಈ ನಟಿಯನ್ನು ನೇರವಾಗಿ ನೋಡಿ ಕಣ್ತುಂಬಿಸಿಕೊಳ್ಳಬೇಕು ಎಂದುಕೊಂಡವರೇ ಹೆಚ್ಚು. ಇದ್ದಕ್ಕಿದ್ದಂತೆ ನಟಿ ಬಾರದ ಲೋಕಕ್ಕೆ ಹೋಗುತ್ತಾರೆ. ʻʻಶವದೊಂದಿಗೆ ಅತ್ಯಾಚಾರ ಮಾಡಲಾಗಿತ್ತು. ಶವಾಗಾರದಲ್ಲಿ ನಟಿಯ ನೌಕರರು ಕುಡಿದ ಅಮಲಿನಲ್ಲಿ ಇರುತ್ತಾರೆ. ಅಲ್ಲಿನ ಹೆಚ್ಚು ನೌಕರರು ಬೆಳಗ್ಗೆ ಕೆಲಸ ಆರಂಭಿಸಿದಾಗಿನಿಂದ ಕುಡಿದಿರುತ್ತಾರೆ. ಇದೇ ಅಮಲಿನಲ್ಲಿ ಕುಡಿದು ಪ್ರಜ್ಞಾಹೀನರಾಗಿರುವ ನೌಕರರು ಹಲವು ಬಾರಿ ಸಿಲ್ಕ್ ಸ್ಮಿತಾ ಅವರ ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾರೆʼʼ ಎಂದಿದ್ದಾರೆ ಬೈಲ್ವಾನ್ ರಂಗನಾಥನ್. ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದಾಗ ಶವ ಪರೀಕ್ಷೆ ನಡೆದ ಸ್ಥಳಕ್ಕೆ ಹೋಗಿ ಖುದ್ದು ನೋಡಿದ್ದೆ ಎನ್ನುವ ಅವರ ಮಾತು ಇದೀಗ ಮತ್ತೆ ವೈರಲ್‌ ಆಗಿದೆ.

Continue Reading
Advertisement
dina bhavishya September 27
ಪ್ರಮುಖ ಸುದ್ದಿ46 mins ago

Dina Bhavishya : ಈ ರಾಶಿಯವರಿಗೆ ಇಂದು ಕಿರಿಕಿರಿ, ಆತಂಕದ ಭಾವವೇ ಹೆಚ್ಚು; ಸ್ವಲ್ಪ ಎಚ್ಚರವಹಿಸಿ!

Sphoorti Salu
ಸುವಚನ46 mins ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

S somanath and HD DeveGowda
ಕರ್ನಾಟಕ6 hours ago

Honorary Doctorate: ಇಸ್ರೋ ಅಧ್ಯಕ್ಷ ಎಸ್‌. ಸೋಮನಾಥ್‌, ಎಚ್‌.ಡಿ ದೇವೇಗೌಡರಿಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್‌

Gujarat High Court
ದೇಶ6 hours ago

ಜಿಮೇಲ್ ಓಪನ್ ಆಗ್ಲಿಲ್ಲ, ಅದ್ಕೆ ಜೈಲಿನಿಂದ ಬಿಡಲಿಲ್ಲ! ಹೈಕೋರ್ಟ್ ಬೇಲ್ ನೀಡಿದ್ರೂ 3 ವರ್ಷ ಜೈಲಿನಲ್ಲೇ ಉಳಿದ ಯುವಕ!

World culture fest
ಕಲೆ/ಸಾಹಿತ್ಯ6 hours ago

World Culture Festival: ಸೆ.29ರಿಂದ ವಾಷಿಂಗ್ಟನ್‌ನಲ್ಲಿ ಸಾಂಸ್ಕೃತಿಕ ಒಲಿಂಪಿಕ್ಸ್; ಶ್ರೀ ರವಿಶಂಕರ್ ಗುರೂಜಿ ಮುಂದಾಳತ್ವ

credit cards
ದೇಶ7 hours ago

Flipkart, Amazon Sale: ಹಬ್ಬದ ಸೀಸನ್‌ ಆನ್‌ಲೈನ್ ಖರೀದಿ, ಕ್ರೆಡಿಟ್‌ ಕಾರ್ಡ್‌ದಾರರು ತಿಳಿದುಕೊಳ್ಳಬೇಕಾದ ಸಂಗತಿಗಳು

virat kohli dance
ಕ್ರಿಕೆಟ್7 hours ago

Viral Video: ಬ್ರೇಕ್​ ಪಡೆದ ಆಸೀಸ್​ ಆಟಗಾರರ ಮುಂದೆ ಬ್ರೇಕ್​ ಡ್ಯಾನ್ಸ್​ ಮಾಡಿದ ವಿರಾಟ್​ ಕೊಹ್ಲಿ

Knives
ಕರ್ನಾಟಕ7 hours ago

Kolar News: ಬಾರ್‌ನಲ್ಲಿ ಚೂರಿಯಿಂದ ಇರಿದು ವ್ಯಕ್ತಿಯ ಕೊಲೆ

Afghan cricketer Naveen-ul-Haq
ಕ್ರಿಕೆಟ್7 hours ago

​ಕೊಹ್ಲಿಗೆ ಹೆದರಿಯೇ ಏಕದಿನ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ 24 ವರ್ಷದ ನವೀನ್​ ಉಲ್​ ಹಕ್​

Vistara top 10 News 2709
ಕರ್ನಾಟಕ7 hours ago

VISTARA TOP 10 NEWS : ಎಲ್ಲರ ಕಣ್ಣು ಶುಕ್ರವಾರದ ಕರ್ನಾಟಕ ಬಂದ್‌ನತ್ತ, ಇಸ್ರೋ ಚಿತ್ತ ಮಾತ್ರ ಶುಕ್ರನತ್ತ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

bangalore bandh
ಕರ್ನಾಟಕ2 days ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

dina bhavishya
ಪ್ರಮುಖ ಸುದ್ದಿ1 day ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ3 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ3 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ3 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ3 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ4 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌