Site icon Vistara News

Mahesh Babu: ಶ್ರೀಲೀಲಾ ಇದ್ದಿದ್ದಕ್ಕೆ ಪೂಜಾ ಹೆಗ್ಡೆ ಹೊರ ಬಂದ್ರಾ? ಮಹೇಶ್‌ ಬಾಬು ಜತೆ ನಾಯಕಿ ಯಾರೀಗ?

Pooja Hegde Is Out Of Mahesh Babu Gunturu Karam

ಬೆಂಗಳೂರು: ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಅಭಿನಯದ ‘ಗುಂಟೂರು ಖಾರಂ’ (Guntur Kaaram) ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಈ ಸಿನಿಮಾದಿಂದ ನಟಿ ಪೂಜಾ ಹೆಗ್ಡೆ ಹೊರ ಬಂದಿದ್ದಾರೆ ಎನ್ನುವ ಗಾಸಿಪ್‌ಗಳು ಟಾಲಿವುಡ್‌ ಅಂಗಳದಲ್ಲಿ ಹರಿದಾಡುತ್ತಿದೆ. ಇಷ್ಟು ದಿನ ಎಸ್ಎಸ್​ಎಂಬಿ 28 ಎಂದು ಕರೆಯಲಾಗುತ್ತಿದ್ದ ಈ ಸಿನಿಮಾಕ್ಕೆ ಇನ್ನು ಮುಂದೆ ‘ಗುಂಟೂರು ಖಾರಂ’ ಎಂದು ಹೆಸರು.

ಚಿತ್ರದಲ್ಲಿ ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಲಿದ್ದು, ನಟಿ ಶ್ರೀಲೀಲಾ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿತ್ತು. ಇತ್ತೀಚೆಗೆ ತ್ರಿವಿಕ್ರಮ್ ಶ್ರೀನಿವಾಸ್ ಜತೆಗಿನ ಭಿನ್ನಾಭಿಪ್ರಾಯಗಳಿಂದ ಸಂಗೀತ ನಿರ್ದೇಶಕ ಎಸ್. ತಮನ್ ಹೊರ ಬಂದಿದ್ದಾರೆ ಎನ್ನಲಾಗಿತ್ತು. ಆದರೀಗ ನಟಿ ಪೂಜಾ ಹೆಗ್ಡೆ ಕೂಡ ಚಿತ್ರದಿಂದ ಹೊರ ಬರುತ್ತಿದ್ದಾರೆ ಎನ್ನುವ ಚರ್ಚೆ ಟಾಲಿವುಡ್‌ನಲ್ಲಿ ಶುರುವಾಗಿದೆ.

‘ಗುಂಟೂರು ಖಾರಂ’ ಸಿನಿಮಾ ಶೂಟಿಂಗ್ ಪದೇಪದೇ ತಡವಾಗುತ್ತಿದೆ. ಚಿತ್ರಕಥೆಯಲ್ಲಿ ಬದಲಾವಣೆ ಮಾಡುತ್ತಿದ್ದು, ಸಂಕ್ರಾಂತಿಗೂ ಸಿನಿಮಾ ರಿಲೀಸ್ ಆಗುವುದಿಲ್ಲ ಎನ್ನಲಾಗುತ್ತಿದೆ. ಚಿತ್ರದಿಂದ ಪೂಜಾ ಹೆಗ್ಡೆ ಹೊರ ನಡೆದಿದ್ದಾರೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಇದರ ನಡುವೆ ತ್ರಿಷಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ ಎನ್ನುವ ಸುದ್ದಿಯೂ ಇದೆ.

ಶ್ರೀಲೀಲಾ ಕಾರಣವೆ?

ಸಿನಿಮಾದಲ್ಲಿ ಶ್ರೀಲೀಲಾ ಸಹ ನಾಯಕಿಯಾಗಿದ್ದು, ಶ್ರೀಲೀಲಾರಿಂದಾಗಿ ಪೂಜಾ ಹೆಗ್ಡೆ ಅನ್​ಕಂಫರ್ಟೆಬಲ್ ಆಗಿದ್ದಾರೆ ಎನ್ನಲಾಗುತ್ತಿದೆ. ಶ್ರೀಲೀಲಾರನ್ನು ಸಿನಿಮಾದಿಂದ ತೆಗೆಯಲು ಅಥವಾ ಶ್ರೀಲೀಲಾರಿಗೆ ಕಡಿಮೆ ಸ್ಕ್ರೀನ್ ಟೈಮ್ ಕೊಡುವಂತೆ ಪೂಜಾ ಹೆಗ್ಡೆ ಒತ್ತಾಯಿಸಿದ್ದರು. ಆದರೆ ನಿರ್ದೇಶಕ ತ್ರಿವಿಕ್ರಮ್ ಒಪ್ಪದ ಕಾರಣಕ್ಕೆ ಪೂಜಾ ಹೆಗ್ಡೆ ಸರಿಯಾಗಿ ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿರಲಿಲ್ಲ ಎನ್ನಲಾಗುತ್ತಿದೆ.

ಇದನ್ನೂ ಓದಿ; Mahesh Babu: 47 ವರ್ಷ ಆಯ್ತು ಅಂತ ಯಾರಾದ್ರೂ ನೆನಪಿಸ್ರಿ ಪ್ಲೀಸ್‌; ಹೀರೊ ಹೊಸ ಲುಕ್‌ಗೆ ಫ್ಯಾನ್ಸ್‌ ಫಿದಾ!

ಸಂಗೀತ ನಿರ್ದೇಶಕ ಯಾರು?

ತಮನ್ ಬದಲು ತಮಿಳಿನ ಅನಿರುದ್ಧ್ ರವಿಚಂದರ್ ‘ಗುಂಟೂರು ಖಾರಂ’ ಚಿತ್ರಕ್ಕೆ ಮ್ಯೂಸಿಕ್ ಕಂಪೋಸ್ ಮಾಡುತ್ತಾರೆ ಎಂದು ವರದಿಯಾಗಿದೆ.

2024ರ ಜನವರಿ 13ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ. ‘ಹಾರಿಕಾ ಆ್ಯಂಡ್​ ಹಾಸಿನಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ಅದ್ಧೂರಿಯಾಗಿ ನಿರ್ಮಾಣ ಆಗುತ್ತಿದೆ. ಎಸ್​. ರಾಧಾಕೃಷ್ಣ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಈ ಹಿಂದೆ ʻಅತಡುʼ ಮತ್ತು ʻಖಲೇಜಾʼದಂತಹ ಬ್ಲಾಕ್‌ಬಸ್ಟರ್ ಚಿತ್ರಗಳಲ್ಲಿ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಶ್ರೀನಿವಾಸ್ ಒಟ್ಟಿಗೆ ಕೆಲಸ ಮಾಡಿದ್ದರು.

Exit mobile version