Poonam Pandey: ಪೂನಂ ಪಾಂಡೆಗೆ ಮಕ್ಕಳಿಂದ ಚಿಕ್ಕ ರಿಕ್ವೆಸ್ಟ್‌; ಅಮ್ಮ ಹೊಡಿತಾರೆ ಎಂದ ಹಾಟ್‌ ಬೆಡಗಿ! - Vistara News

ಸಿನಿಮಾ

Poonam Pandey: ಪೂನಂ ಪಾಂಡೆಗೆ ಮಕ್ಕಳಿಂದ ಚಿಕ್ಕ ರಿಕ್ವೆಸ್ಟ್‌; ಅಮ್ಮ ಹೊಡಿತಾರೆ ಎಂದ ಹಾಟ್‌ ಬೆಡಗಿ!

Poonam Pandey: ಪೂನಂ ಪಾಂಡೆ (Poonam Pandey) ಅವರು ಗರ್ಭಕಂಠ ಕ್ಯಾನ್ಸರ್‌ನಿಂದ (Cervical Cancer) ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಡಿ, ಮರುದಿನ ‘ಇಲ್ಲ ನಾನು ಸತ್ತಿಲ್ಲ’ ಎಂದು ನಟಿ ನೀಡಿದ ಸ್ಪಷ್ಟನೆ ಕೂಡ ಭಾರಿ ಸುದ್ದಿಯಾಗಿತ್ತು. ಇದೀಗ ಪೂನಂ ಪಾಂಡೆ (Poonam Pandey) ಇತ್ತೀಚೆಗೆ ಮುಂಬೈನಲ್ಲಿ ಸಾರ್ವಜನಿಕವಾಗಿ ಕಂಡರು. ಮೈದಾನಲ್ಲಿ ಕ್ರಿಕೆಟ್ ಆಡುತ್ತಿರುವ ಮಕ್ಕಳು ಪೂನಂ ಪಾಂಡೆ ಕಡೆ ಓದಿ ಬಂದು ಮಾತನಾಡಿಸಿದ್ದಾರೆ. ಜತೆಗೆ ಪೂನಂ ಅಭಿಮಾನಿಯೊಬ್ಬರು ತಾವೇ ಬಿಡಿಸಿದ ಚಿತ್ರವನ್ನು ಪೂನಂಗೆ ಗಿಫ್ಟ್‌ ಮಾಡಿದ್ದಾರೆ.

VISTARANEWS.COM


on

Poonam Pandey instagram id in a public place
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪೂನಂ ಪಾಂಡೆ (Poonam Pandey) ಇತ್ತೀಚೆಗೆ ಮುಂಬೈನಲ್ಲಿ ಸಾರ್ವಜನಿಕವಾಗಿ ಕಂಡರು. ಪೂನಂ ನೋಡುತ್ತಲೇ ಮೈದಾನಲ್ಲಿ ಕ್ರಿಕೆಟ್ ಆಡುತ್ತಿರುವ ಮಕ್ಕಳು ಪೂನಂ ಪಾಂಡೆ ಕಡೆ ಓದಿ ಬಂದು ಮಾತನಾಡಿಸಿದರು. ಜತೆಗೆ ಪೂನಂ ಅಭಿಮಾನಿಯೊಬ್ಬರು ತಾವೇ ಬಿಡಿಸಿದ ಚಿತ್ರವನ್ನು ಪೂನಂಗೆ ಗಿಫ್ಟ್‌ ಮಾಡಿದ್ದಾರೆ. ಇದೀಗ ಪೂನಂ ಅವರ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

ಮಕ್ಕಳು ಪೂನಂ ಹತ್ತಿರ ಓಡಿ ಬರುತ್ತಿದ್ದಂತೆ ಅದರಲ್ಲಿ ಒಬ್ಬ ಬಾಲಕ ಪೂನಂ ಪಾಂಡೆಗೆ ʻನಿಮ್ಮ ಇನ್‌ಸ್ಟಾಗ್ರಾಂ ಐಡಿ ಕೊಡಿʼ ಎಂದು ಕೇಳಿದ್ದಾನೆ. ಇದಕ್ಕೆ ಪೂನಂ ʻನನ್ನ ಇನ್‌ಸ್ಟಾಗ್ರಾಂ ಐಡಿ ನಿನಗೆ ಯಾಕೆ ಬೇಕುʼ? ಅದನ್ನ ತಗೊಂಡು ನೀನೇನು ಮಾಡ್ತೀಯಾ? ಎಂದು ಮರು ಪ್ರಶ್ನೆಯನ್ನ ಹಾಕಿದ್ದಾರೆ. ʻನಿನಗೆ ನಿಮ್ಮ ಅಮ್ಮನನ್ನ ಕಂಡರೆ ಭಯ ಇಲ್ಲವಾ..? ನಿಮ್ಮ ತಾಯಿಗೆ ಈ ವಿಚಾರ ಗೊತ್ತಾದರೆ ಹೊಡೆಯುತ್ತಾರೆʼ ಎಂದಿದ್ದಾರೆ. ಈ ಸನ್ನಿವೇಶದ ವಿಡಿಯೊ ವೈರಲ್‌ ಆಗುತ್ತಿದೆ. ಪೂನಂ ಪಬ್ಲಿಸಿಟಿ ಸ್ಟಂಟ್‌ ಎಂದು ನೆಟ್ಟಿಗರು ಕಮೆಂಟ್‌ ಮಾಡಿದ್ದಾರೆ.

ಇನ್ನು ಮತ್ತೊಬ್ಬರು ಪೂನಂ ಚಿತ್ರವನ್ನು ಬಿಡಿಸಿ ಗಿಫ್ಟ್‌ ಕೊಟ್ಟಿರುವ ಬಗ್ಗೆ ಮಾಧ್ಯಮದ ಜತೆ ಮಾತನಾಡಿದರು. ʻʻಈ ಫೋಟೊ ಫ್ರೇಮ್‌ ನನಗೆ ಗಿಫ್ಟ್‌ ಆಗಿ ಕೊಟ್ಟಿರುವುದು ಆಸ್ಕರ್‌ಗಿಂತ ಕಡಿಮೆಯಿಲ್ಲ. ಫ್ಯಾನ್ಸ್‌ ಪ್ರೀತಿ ನೋಡಿ ನನ್ನ ಜೀವನದಲ್ಲಿ ನಾನು ಏನನ್ನಾದರೂ ಗಳಿಸಿದ್ದೇನೆ ಎಂದು ಖುಷಿಯಾಗುತ್ತಿದೆ. ನಾನು ಈ ಉದ್ಯಮಕ್ಕೆ ಬಂದು 12 ವರ್ಷಗಳು ಕಳೆದಿವೆ. ನೀವು ಜೀವನದಲ್ಲಿ ಏನು ಬೇಕಾದರೂ ಗಳಿಸಬಹುದು ನಿಜವಾದ ಅಭಿಮಾನಿಯನ್ನು ಗಳಿಸುವುದು ಕಷ್ಟʼʼ ಎಂದಿದ್ದಾರೆ.

ಇದನ್ನೂ ಓದಿ: Poonam Pandey: ಪೂನಂ ಪಾಂಡೆಗೆ ಕಾನೂನು ಸಂಕಷ್ಟ; 100 ಕೋಟಿ ರೂ. ಮಾನನಷ್ಟ ಕೇಸ್

ಪೂನಂ ಪಾಂಡೆ (Poonam Pandey) ಅವರು ಗರ್ಭಕಂಠ ಕ್ಯಾನ್ಸರ್‌ನಿಂದ (Cervical Cancer) ಮೃತಪಟ್ಟಿದ್ದಾರೆ ಎಂಬ ಸುದ್ದಿ ಹರಡಿ, ಮರುದಿನ ‘ಇಲ್ಲ ನಾನು ಸತ್ತಿಲ್ಲ’ ಎಂದು ನಟಿ ನೀಡಿದ ಸ್ಪಷ್ಟನೆ ಕೂಡ ಭಾರಿ ಸುದ್ದಿಯಾಗಿತ್ತು.

ಪೂನಂ ವಿಡಿಯೊದಲ್ಲಿ ʻʻನಿಮ್ಮೆಲ್ಲರೊಂದಿಗೆ ಮಹತ್ವದ ಸಂಗತಿಯೊಂದನ್ನು ಹೇಳಲೇಬೇಕಾಗಿದೆ. ನಾನು ಇನ್ನೂ ಇದ್ದೇನೆ. ಜೀವಂತವಾಗಿದ್ದೇನೆ. ಗರ್ಭಕಂಠದ ಕ್ಯಾನ್ಸರ್ ನನ್ನನ್ನು ಬಲಿ ತೆಗೆದುಕೊಂಡಿಲ್ಲ, ದುರಂತವೆಂದರೆ, ಈ ರೋಗವನ್ನು ಹೇಗೆ ನಿಭಾಯಿಸುವುದು ಎಂಬುದರ ಬಗ್ಗೆ ಜ್ಞಾನದ ಕೊರತೆಯಿಂದಾಗಿ ಸಾವಿರಾರು ಮಹಿಳೆಯರು ಜೀವ ಕಳೆದುಕೊಂಡಿದ್ದಾರೆ. ಇತರ ಕೆಲವು ಕ್ಯಾನ್ಸರ್ ಗಳಿಗಿಂತ ಭಿನ್ನವಾಗಿ ಗರ್ಭಕಂಠದ ಕ್ಯಾನ್ಸರ್ ಅನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ಎಚ್​ಪಿವಿ ಲಸಿಕೆ ಮತ್ತು ಆರಂಭಿಕ ಪರೀಕ್ಷೆಗಳು ಇಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಈ ರೋಗದಿಂದ ಯಾರೂ ಪ್ರಾಣ ಕಳೆದುಕೊಳ್ಳುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಮಗೆ ಹಲವಾರು ಮಾರ್ಗಗಳಿವೆ. ವಿಮರ್ಶಾತ್ಮಕ ಜಾಗೃತಿಯೊಂದಿಗೆ ಪರಸ್ಪರರನ್ನು ಸಬಲೀಕರಣಗೊಳಿಸೋಣ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಪ್ರತಿಯೊಬ್ಬ ಮಹಿಳೆಗೆ ಮಾಹಿತಿ ನೀಡಬೇಕಾಗಿದೆ. ಈ ರೋಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳುವುದಕ್ಕೆ ನನ್ನ ಬಯೊದಲ್ಲಿರುವ ಲಿಂಕ್ ಗೆ ಭೇಟಿ ನೀಡಿ. ಈ ರೋಗದ ವಿನಾಶಕಾರಿ ಪರಿಣಾಮವನ್ನು ಕೊನೆಗೊಳಿಸಲು ಒಟ್ಟಾಗಿ ಪ್ರಯತ್ನಿಸೋಣʼʼ ಎಂದು ಪೂನಂ ಪಾಂಡೆ ತಮ್ಮ ಇನ್​ಸ್ಟಾಗ್ರಾಮ್ ಪೋಸ್ಟ್​ನಲ್ಲಿ ಬರೆದುಕೊಂಡಿದ್ದರು..

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Sapthami Gowda: ಯುವ ಪತ್ನಿ ವಿರುದ್ಧ ಸಪ್ತಮಿಗೌಡ ಮಾನಹಾನಿ ಕೇಸ್; ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ

Sapthami Gowda: ವಕೀಲ ಶಂಕರಪ್ಪ ಅವರ ಮೂಲಕ ನಟಿ ಸಪ್ತಮಿಗೌಡ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈಗ ಮಾಡಿರುವ ಆರೋಪಗಳಿಂದ ಉಂಟಾದ ಮಾನಹಾನಿ ಸಂಬಂಧ ಶ್ರೀದೇವಿಗೆ ನೋಟಿಸ್ ನೀಡಿದ್ದು, 10 ಕೋಟಿ ಪರಿಹಾರ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Sapthami Gowda
Koo

ಬೆಂಗಳೂರು: ನಟ ಯುವ ರಾಜ್‌ಕುಮಾರ್‌ ಪತ್ನಿ ಶ್ರೀದೇವಿ ಬೈರಪ್ಪ ವಿರುದ್ಧ ನಟಿ ಸಪ್ತಮಿ ಗೌಡ ಮಾನಹಾನಿ ಕೇಸ್ ದಾಖಲಿಸಿದ್ದಾರೆ. ವಕೀಲ ಶಂಕರಪ್ಪ ಅವರ ಮೂಲಕ ನಟಿ (Sapthami Gowda) ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ ನೀಡಿದೆ.

ಯುವ ಮತ್ತು ಶ್ರೀದೇವಿ ಬೈರಪ್ಪ ನಡುವಿನ ಆರೋಪ-ಪ್ರತ್ಯಾರೋಪಗಳಲ್ಲಿ ಸಪ್ತಮಿಗೌಡ ಹೆಸರು ಮುನ್ನೆಲೆಗೆ ಬಂದ ಹಿನ್ನೆಲೆಯಲ್ಲಿ ತನ್ನ ವೃತ್ತಿ ಜೀವನದ ಪರಿಣಾಮ ಬೀರಲಿದೆ ಎಂದು ಸಪ್ತಮಿ ಗೌಡ ಮಾನಹಾನಿ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಇನ್ಮುಂದೆ ನಟಿಯ ಬಗ್ಗೆ ಎಲ್ಲಿಯೂ ಮಾತನಾಡದಂತೆ ಲೀಗಲ್ ನೋಟಿಸ್ ನೀಡಲಾಗಿದೆ ಹಾಗೂ ಈಗ ಮಾಡಿರುವ ಆರೋಪಗಳಿಂದ ಉಂಟಾದ ಮಾನಹಾನಿ ಸಂಬಂಧ ಶ್ರೀದೇವಿಗೆ ನೋಟಿಸ್ ನೀಡಿದ್ದು, 10 ಕೋಟಿ ರೂ. ಪರಿಹಾರ ನೀಡುವಂತೆ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ ನಟಿ ಸಪ್ತಮಿಗೌಡ ಬಗ್ಗೆ ಎಲ್ಲಿಯೂ ಪ್ರಸ್ತಾಪಿಸದಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಸಿಟಿ ಸಿವಿಲ್ ಕೋರ್ಟ್, ನಟಿ ಹೆಸರು ಎಲ್ಲಿಯೂ ಬಳಸದಂತೆ ಕೋರ್ಟ್ ಆದೇಶ ನೀಡಿದೆ.

ಇದನ್ನೂ ಓದಿ | Yuva Rajkumar: ‘ಅನೈತಿಕ ಸಂಬಂಧ’ ಎಂದು ಯುವ ಪರ ವಕೀಲ ಆರೋಪ; ತಿರುಗೇಟು ಕೊಟ್ಟ ಶ್ರೀದೇವಿ!

ಡಾ.ರಾಜ್‌ಕುಮಾರ್‌ ವಂಶದ ಕುಡಿ, ನಟ ಯುವ ರಾಜ್‌ಕುಮಾರ್‌ (Yuva Rajkumar) ಅವರು ಪತ್ನಿ ಶ್ರೀದೇವಿ ಭೈರಪ್ಪ (Sridevi Byrappa) ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪ- ಪ್ರತ್ಯಾರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ. “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿ ನಡೆಸಿ ಆರೋಪಿಸಿದ್ದರು. ಇನ್ನು, ನಟನ ಲೀಗಲ್‌ ನೋಟಿಸ್‌ಗೆ ಉತ್ತರಿಸಿದ್ದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ (Sapthami Gowda) ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದರು. ಆ ಮೂಲಕ ಡಿವೋರ್ಸ್‌ ಪ್ರಕರಣವು ಪರಸ್ಪರ ಕೆಸರೆರಚಾಟಕ್ಕೆ ಕಾರಣವಾಗಿತ್ತು

ನಟ ಯುವ ರಾಜ್‌ಕುಮಾರ್‌ ಕಳುಹಿಸಿದ ಲೀಗಲ್‌ ನೋಟಿಸ್‌ಗೆ ಮರುತ್ತರ ನೀಡಿದ್ದ ಶ್ರೀದೇವಿ ಭೈರಪ್ಪ, ಹಲವು ಆರೋಪಗಳನ್ನು ಮಾಡಿದ್ದರು. “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್‌ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್‌, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದರು.

ಇದನ್ನೂ ಓದಿ | Sapthami Gowda: ಲವ್‌ ಬ್ರೇಕಪ್‌ ಆಗಿದೆ, ಬಾಯ್‌ಫ್ರೆಂಡ್‌ ನನ್ನ ಜತೆ ಇಲ್ಲ ಎಂದ ಸಪ್ತಮಿ ಗೌಡ!

“ನಾನು ಹಾಗೂ ಯುವ ರಾಜ್‌ಕುಮಾರ್‌ 5 ವರ್ಷ ಪ್ರೀತಿಸಿದ್ದೆವು. 2019ರಲ್ಲಿ ಹಿಂದು ಸಂಪ್ರದಾಯದಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮದುವೆ ಮಾಡಿಕೊಂಡೆವು. ಮದುವೆಗೂ ಮುಂಚೆ ಯುವ ರಾಜ್‌ಕುಮಾರ್‌ ನಿರುದ್ಯೋಗಿ ಆಗಿದ್ದರು. ಅವರಿಗೆ ಕರಿಯರ್‌ ಬಗ್ಗೆ ಫೋಕಸ್‌ ಇರಲಿಲ್ಲ. ಅವರ ಕುಟುಂಬವು ಕೂಡ ಆರ್ಥಿಕವಾಗಿ ಸ್ಟೇಬಲ್‌ ಇರಲಿಲ್ಲ. ಇದಾದ ಬಳಿಕ ಯುವ ರಾಜ್‌ಕುಮಾರ್‌ ಸಪ್ತಮಿ ಗೌಡ ಹಿಂದೆ ಬಿದ್ದರು. ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಆರೋಪಿಸಿದ್ದರು. ಹೀಗಾಗಿ ಇದೀಗ ದಂಪತಿ ನಡುವಿನ ವಿವಾದದಲ್ಲಿ ತಮ್ಮ ಹೆಸರನ್ನು ತರದಂತೆ ಸಪ್ತಮಿ ಗೌಡ ನೋಟಿಸ್‌ ನೀಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ ಬಲೆಗೆ ಪವಿತ್ರಾ ಗೌಡ ಬಿದ್ದಿದ್ದು ಹೇಗೆ? ಇವರು ಹೀರೋಯಿನ್‌ ಆಗಿದ್ದು ಯಾವಾಗ?

Actor Darshan: ಕಾಲೇಜು ದಿನಗಳಲ್ಲೇ ಬಣ್ಣದ ಜಗತ್ತಿನ ಕ್ರೇಜ್‌ ಹತ್ತಿಸಿಕೊಂಡು ನಾಟಕ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಿಂಚಿದ್ದರು ಪವಿತ್ರಾ. ಬಿಷಪ್ ಕಾಟನ್ ಕಾಲೇಜಿನಲ್ಲಿ ಬಿಸಿಎ ಪದವಿ ಮುಗಿಸಿ ಮಾಡ್‌ಲಿಂಗ್‌ ಕ್ಷೇತ್ರಕ್ಕೆ ಬಂದರು. ಬೆಂಗಳೂರಿನಲ್ಲಿ ನಡೆದ ಮೂರು ಫ್ಯಾಷನ್ ಶೋಗಳಲ್ಲಿ ಮೂರು ಬಾರಿ ಶೋ ಟಾಪರ್ ಪಟ್ಟ ಗಿಟ್ಟಿಸಿಕೊಂಡವರು ಪವಿತ್ರಾ. ದರ್ಶನ್‌ ಬಲೆಗೆ ಬೀಳುವ ಮುಂಚೆ ಪವಿತ್ರಾ ಅವರು ಸಂಜಯ್ ಸಿಂಗ್ ಎಂಬುವರನ್ನು ಮದುವೆಯಾಗಿದ್ದರು. ಆದರೆ ಈಗ ಸಂಜಯ್‌ ಜತೆ ಪವಿತ್ರಾ ಜತೆಗಿಲ್ಲ.

VISTARANEWS.COM


on

Actor Darshan pavithra gowda relationship secrete
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renuka Swamy murder case) ಕೊಲೆ ಆರೋಪದಲ್ಲಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ (Actor Darshan) ಕಂಬಿ ಎಣಿಸುತ್ತಿದ್ದಾರೆ ನಟ ದರ್ಶನ್‌. ದರ್ಶನ್ ಹೇಳಿದಂತೆ ನಡೆದುಕೊಂಡಿದ್ದರಿಂದ ಅನೇಕರು ತೊಂದರೆ ಅನುಭವಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್, ಪವಿತ್ರಾ, ವಿನಯ್, ಪವನ್ ಸೇರಿ ಹಲವರು ಅರೆಸ್ಟ್ ಆಗಿದ್ದಾರೆ. ಈಗಾಗಲೇ ಜೈಲಿನಲ್ಲಿರುವ ಎ7 ಆರೋಪಿ ಅನುಕುಮಾರ್​ ತಂದೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.  ಪವಿತ್ರಾ ಗೌಡಗೆ ಅಶ್ಲೀಲ ಮೆಸೆಜ್‌ ಕಳುಹಿಸಿದ ಎನ್ನುವ ಕಾರಣಕ್ಕೆ ದರ್ಶನ್‌ ಹಾಗೂ ಗ್ಯಾಂಗ್‌ ಇದೀಗ ಅರೆಸ್ಟ್‌ ಆಗಿದೆ. ಹಾಗಾದ್ರೆ ಈ ಪವಿತ್ರಾ ಗೌಡ ಯಾರು? ದರ್ಶನ್‌ಗೆ ಪವಿತ್ರಾ ಲಿಂಕ್‌ ಆಗಿದ್ದು ಹೇಗೆ? ಪವಿತ್ರಾ ಮಾಜಿ ಪತಿ ಈಗೇನು ಮಾಡುತ್ತಿದ್ದಾರೆ ಎಂಬುದು ತಿಳಿಯಲು ಮುಂದೆ ಓದಿ.

ಕಾಲೇಜು ದಿನಗಳಲ್ಲೇ ಬಣ್ಣದ ಜಗತ್ತಿನ ಕ್ರೇಜ್‌ ಹತ್ತಿಸಿಕೊಂಡು ನಾಟಕ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಿಂಚಿದ್ದರು ಪವಿತ್ರಾ. ಬಿಷಪ್ ಕಾಟನ್ ಕಾಲೇಜಿನಲ್ಲಿ ಬಿಸಿಎ ಪದವಿ ಮುಗಿಸಿ ಮಾಡ್‌ಲಿಂಗ್‌ ಕ್ಷೇತ್ರಕ್ಕೆ ಬಂದರು. ಬೆಂಗಳೂರಿನಲ್ಲಿ ನಡೆದ ಮೂರು ಫ್ಯಾಷನ್ ಶೋಗಳಲ್ಲಿ ಮೂರು ಬಾರಿ ಶೋ ಟಾಪರ್ ಪಟ್ಟ ಗಿಟ್ಟಿಸಿಕೊಂಡವರು ಪವಿತ್ರಾ. ಇವರು ಮೂಲತಃ ಬೆಂಗಳೂರಿನ ಜೆ ಪಿ ನಗರದವರು. ಭೂಗತ ದೊರೆ ಎಂದು ಗುರುತಿಸಿಕೊಂಡಿದ್ದ ಎಂ.ಪಿ ಜಯರಾಜ್ ಮಗ ನಾಯಕನಾಗಿದ್ದ ಸಿನಿಮಾದಲ್ಲಿ ಪವಿತ್ರಾ ನಾಯಕಿಯಾಗಿ ಕಂಗೊಳಿಸಿದ್ದರು. ಇದಾದ ಬಳಿಕ ಕೆಲವು ಸಿನಿಮಾಗಳಲ್ಲಿ ನಾಯಕಿಯಾದರು.

ಇದನ್ನೂ ಓದಿ: Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ʻಜಗ್ಗು ದಾದಾʼಗೆ ಲಿಂಕ್‌ ಆದ ಬೆಡಗಿ!

ʼಜಗ್ಗುದಾದಾʼ ಸಿನಿಮಾ ಮೂಲಕ ದರ್ಶನ್‌ಗೆ ಪರಿಚಯವಾದವರು ಈ ಪವಿತ್ರಾ. ಹೀಗೆ ಶುರುವಾದ ಸ್ನೇಹ ಆ ನಂತರ ಪ್ರೇಮಕ್ಕೆ ತಿರುಗಲು ಹೆಚ್ಚೇನು ಸಮಯ ಬೇಕಾಗಲಿಲ್ಲ. ಇದಕ್ಕೆ ಸಾಕ್ಷಿ ಎನ್ನುವಂತೆ 2016ರಲ್ಲಿ ʼಜಗ್ಗುದಾದಾʼ ತೆರೆಗೆ ಬಂದ ಬೆನ್ನಲ್ಲಿಯೇ, 2017ರಲ್ಲಿ ʻತಾರಕ್ʼ ಚಿತ್ರದ ಬಿಡುಗಡೆಯ ಸಮಯದಲ್ಲಿ ಪವಿತ್ರಾ ಗೌಡ ತನ್ನ ಪ್ರಿಯಕರ ದರ್ಶನ್ ಜೊತೆ ಅತ್ಯಾಪ್ತವಾದ ಫೋಟೊವೊಂದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಸಂಜಯ್ ಸಿಂಗ್‌ಗೆ ಡಿವೋರ್ಸ್‌ ಕೊಟ್ಟ ಪವಿತ್ರಾ

ದರ್ಶನ್‌ ಬಲೆಗೆ ಬೀಳುವ ಮುಂಚೆ ಪವಿತ್ರಾ ಅವರು ಸಂಜಯ್ ಸಿಂಗ್ ಎಂಬುವರನ್ನು ಮದುವೆಯಾಗಿದ್ದರು. ಆದರೆ ಈಗ ಸಂಜಯ್‌ ಜತೆ ಪವಿತ್ರಾ ಜತೆಗಿಲ್ಲ. ಡಿವೋರ್ಸ್‌ ಆಗಿದೆ. 12 ವರ್ಷಗಳ ಹಿಂದೆ ಬೆಂಗಳೂರು ತೊರೆದು ಹುಟ್ಟೂರು ಉತ್ತರ ಪ್ರದೇಶದಲ್ಲಿ ಸ್ವಂತ ಶಾಲೆ ನಡೆಸುತ್ತಿದ್ದಾರೆ ಸಂಜಯ್ ಸಿಂಗ್.

ಅರೆಸ್ಟ್‌ ಆದ ಬಳಿಕ ಸಂಜಯ್‌ ಸಿಂಗ್‌ ಹೇಳಿದ್ದೇನು?

ʻಪವಿತ್ರಾ ಕೊಲೆ ಕೇಸಿನಲ್ಲಿ ಮಿಂಗಲ್‌ ಆಗಿದ್ದಾಳೆ ಎಂದರೆ ನಂಲಾಗುತ್ತಿಲ್ಲ. ಪವಿತ್ರಾ ಇಲಿ ಕಂಡರೂ ಹೆದರುತ್ತಿದ್ದಳು. ಹೀಗಾಗಿ ಆಕೆ ಕೊಲೆ ಮಾಡಿದ್ದಾಳೆ ಅಂದರೆ ನಾನು ನಂಬಲ್ಲ. ಕೊಲೆ ನಡೆದ ಜಾಗದಲ್ಲಿ ದರ್ಶನ್ ಜೊತೆ ಪವಿತ್ರಾ ಇದ್ದಿರಬಹುದು ಅಷ್ಟೆ. ಆಕೆ ತುಂಬ ಸಾಫ್ಟ್‌ʼʼ ಎಂದಿದ್ದಾರೆ.

ಸಂಜಯ್‌ ಸಿಂಗ್‌-ಪವಿತ್ರಾ ದಾಂಪತ್ಯ ಜೀವನ ಹೇಗಿತ್ತು?

ʻಮೊದಲಿಗೆ ನಾನು ಐಟಿ ವೃತ್ತಿಯಲ್ಲಿ ಇದ್ದೆ. ಹಾಗೇ ಪವಿತ್ರಾಗೂ ಸಿನಿಮಾ ಮೇಲೆ ಹುಚ್ಚಿತ್ತು. ನಟಿಯಾಗುವ ಕನಸನ್ನು ಹೊತ್ತಿದ್ದಳು. ಆಗ ಮಗು ಕೂಡ ನಮಗೆ ಆಯ್ತು. ಬಳಿಕ ನಮ್ಮಿಬ್ಬರ ಮಧ್ಯೆ ಹೊಂದಾಣಿಕೆ ಹದಗೆಡುತ್ತಾ ಹೋಯ್ತು. ನಾನು ಮೂಲತಃ ಉತ್ತರ ಪ್ರದೇಶದವನು. 2013ರಲ್ಲಿ ಪರಸ್ಪರ ಒಪ್ಪಿಗೆ ಮೇರೆಗೆ ಡಿವೋರ್ಸ್‌ ಆಯ್ತು. ಅವಳು ಹೇಳುವ ಹಾಗೇ ದರ್ಶನ್‌ ಮದುವೆ ಕೂಡ ಆಗಿದ್ದಾಳಂತೆ. ಮಗು ಹುಟ್ಟಿದ ಬಳಿಕ ಮನಸ್ತಾಪವಾಗಿ ಒಂದು ವರ್ಷದ ಬಳಿಕ ಬೇರೆಯಾದೆವು. ಈಗಲೂ ನಾನು ಪವಿತ್ರಾ ಜತೆ ಸಂಪರ್ಕದಲ್ಲಿ ಇಲ್ಲ. ಅತ್ತೆ ಮಾವಗೆ ಪೋನ್ ಮಾಡಿದಾಗ ಮಗಳು ಇದ್ದಾಗ ಆಗ ಅವಳ ಬಳಿ ಮಾತನಾಡುತ್ತೇನೆ. ದರ್ಶನ್‌ ಮದುವೆ ಆಗಬೇಕು ಎಂದು ನನ್ನ ಬಳಿ ವಿಚ್ಛೇದನ ಪಡೆದುಕೊಂಡಳು. ಕಳೆದ 12 ವರ್ಷಗಳಲ್ಲಿ ನಾನು ಮಗಳ ಜೊತೆ ಎರಡು ಬಾರಿ ಮಾತನಾಡಿದ್ದು, 2017ರಲ್ಲಿ ಬೆಂಗಳೂರಿಗೆ ಬಂದು ಮಗಳನ್ನು ಭೇಟಿ ಮಾಡಿದ್ದೆʼʼ ಎಂದಿದ್ದಾರೆ.

ಇದೀಗ ದರ್ಶನ್‌ ಹಾಗೂ ಗ್ಯಾಂಗ್‌ವನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಜೂನ್‌ 11ರಿಂದ ಜೂನ್‌ 17ರ ವರೆಗೆ ಪೊಲೀಸರು ದರ್ಶನ್‌ ಮತ್ತು ಪವಿತ್ರಾ ಗೌಡ ಅವರನ್ನು ವಶಕ್ಕೆ ಪಡೆದಿದ್ದರು. ಆದರೆ ಜೂನ್‌ 17ರಂದು ಸರ್ಕಾರಿ ರಜೆ ಇರುವುದರಿಂದ ಪೊಲೀಸರು ಎರಡು ದಿನಗಳ ಮೊದಲೇ ಕೋರಮಂಗಲದ ಜಡ್ಜ್​​​​ ನಿವಾಸಕ್ಕೆ ಇಬ್ಬರನ್ನು ಹಾಜರು ಪಡಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಪೊಲೀಸರು ದರ್ಶನ್‌ ಅವರ ಪ್ರಾಥಮಿಕ ವಿಚಾರಣೆಯನ್ನು ಮುಗಿಸಿದ್ದಾರೆ. 

Continue Reading

ಬಾಲಿವುಡ್

Uorfi Javed: ನೈಟ್‌ ಪಾರ್ಟಿಯ ಕಿಲಾಡಿ ಓರಿ ಮತ್ತು ಉರ್ಫಿ ಮದುವೆ ಆಗ್ತಾರಾ?

Uorfi Javed: ಓರಿ ಹೇಳಿಕೊಂಡಿರುವ ಪ್ರಕಾರ, ಶ್ರೀಮಂತ ಜನರೇ ಓರಿಯನ್ನು ಪಾರ್ಟಿ ಕರೆಯುತ್ತಾರೆ ಮತ್ತು ತಮ್ಮ ಹೆಂಡತಿ, ಮಕ್ಕಳೊಂದಿಗೆ ಫೋಟೋಗೆ ಪೋಸು ನೀಡುವಂತೆ ಕೇಳಿಕೊಳ್ಳುತ್ತಾರೆ. ಹೀಗೆ ನಾನು ಫೋಟೋ ತೆಗೆಸಿಕೊಳ್ಳಲು ಮತ್ತು ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲು ಹಣ ಪಡೆದುಕೊಳ್ಳುತ್ತೇನೆ. ಈ ಫೋಟೋಗಳಿಗಾಗಿ ಒಂದು ರಾತ್ರಿಯನ್ನು ಕನಿಷ್ಠ 20 ರಿಂದ 30 ಲಕ್ಷ ರೂಪಾಯಿ ಗಳಿಸುತ್ತೇನೆ ಎಂದು ಹೇಳಿಕೊಂಡಿದ್ದರು.

VISTARANEWS.COM


on

Uorfi Javed and Orry were spotted outside a restaurant in Mumbai
Koo

ಬೆಂಗಳೂರು: ಬಿಗ್ ಬಾಸ್ (Big Boss) ಮನೆ ಸೇರಿದ್ದ ಓರ್ಹಾನ್ ಅವತ್ರಮಣಿ ಅಲಿಯಾಸ್ ಓರಿ, ಸೆಲಿಬ್ರೆಟಿ ಪಾರ್ಟಿಗಳಿಗೆ ಹೋಗಿ (Uorfi Javed) ಅಲ್ಲಿನ ನಟ, ನಟಿಯರ ಎದೆಯ ಮೇಲೆ ಕೈಯಿಟ್ಟು ಫೋಟೋ ತೆಗೆಸಿಕೊಳ್ಳುವುದರಲ್ಲೇ ಫೇಮಸ್‌. ಇದೀಗ ಉರ್ಫಿ ಹಾಗೂ ಓರಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಜತೆಗೆ ಉರ್ಫಿ ಅವರು ಓರಿ ಕೆನ್ನೆಗೆ ಮುತ್ತು ಕೊಟ್ಟಿದ್ದಾರೆ. ಮದುವೆ ಬಗ್ಗೆ ಮಾತನಾಡಿ, ತಮ್ಮ ಸಂಬಂಧದ ಬಗ್ಗೆ ಮತ್ತಷ್ಟು ಅನುಮಾನ ಹುಟ್ಟಿಸಿದ್ದಾರೆ.  ಇದೀಗ ಓರಿ ಹಾಗೂ ಉರ್ಫಿ ಫೋಟೊಗಳು ವೈರಲ್‌ ಆಗಿವೆ.

ಡಿನ್ನರ್‌ಗೆ ಉರ್ಫಿ ಹಸಿರು ಉಡುಗೆಯಲ್ಲಿ ಕಂಡು ಬಂದರೆ, ಓರಿ ಮರೂನ್ ಟಿ-ಶರ್ಟ್, ಮ್ಯಾಚಿಂಗ್ ಪ್ಯಾಂಟ್ ಮತ್ತು ಸ್ನೀಕರ್ಸ್‌ನಲ್ಲಿ ಕಾಣಿಸಿಕೊಂಡರು. ಪಾಪರಾಜಿಗಳಿಗೆ ಉರ್ಫಿ ಮತ್ತು ಓರಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಮದುವೆ ಬಗ್ಗೆ ಮಾತನಾಡಿ, ತಮ್ಮ ಸಂಬಂಧದ ಬಗ್ಗೆ ಮತ್ತಷ್ಟು ಅನುಮಾನ ಹುಟ್ಟಿಸಿದ್ದಾರೆ. ಮಾಧ್ಯಮದವರೂ ಓರಿಗೆ ಉರ್ಫಿಯನ್ನು ಮದುವೆಯಾಗುತ್ತೀರಾ ಎಂದು ಕೇಳಿದ್ದಾರೆ. ಉರ್ಫಿ ಮದುವೆಯಾಗೋಕೆ ಓಕೆ ಅಂದ್ರೆ ನನಗೂ ಓಕೆ ಎಂದು ಓರಿ ಹೇಳಿದ್ದಾರೆ.  ಇದಕ್ಕೂ ಮುನ್ನ ಉರ್ಫಿಗೂ ಈ ಪ್ರಶ್ನೆ ಕೇಳಲಾಗಿದೆ. ಅದಕ್ಕೆ ಉರ್ಫಿ ತಮಾಷೆಯಾಗಿಯೇ ಉತ್ತರ ನೀಡಿ, ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ನೀವೆಲ್ಲ ನನ್ನ ಮದುವೆ ಬಗ್ಗೆ ಆತುರದಲ್ಲಿದ್ದೀರಿ ಹೇಳಿದ್ದಾರೆ.

ಈ ಹಿಂದೆ, ಪೋಸ್ಟ್ ಆಗಿದ್ದ ಮತ್ತೊಂದು ವಿಡಿಯೊದಲ್ಲಿ, ಉರ್ಫಿ ಅವರು ಓರಿಯನ್ನು ಮದುವೆಯಾಗಲು ಬಯಸುವುದಾಗಿ ತಿಳಿಸಿದ್ದರು.

ಇದನ್ನೂ ಓದಿ: Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

ಓರಿ ಯಾರು?

ಓರಿ ಹೇಳಿಕೊಂಡಿರುವ ಪ್ರಕಾರ, ಶ್ರೀಮಂತ ಜನರೇ ಓರಿಯನ್ನು ಪಾರ್ಟಿ ಕರೆಯುತ್ತಾರೆ ಮತ್ತು ತಮ್ಮ ಹೆಂಡತಿ, ಮಕ್ಕಳೊಂದಿಗೆ ಫೋಟೋಗೆ ಪೋಸು ನೀಡುವಂತೆ ಕೇಳಿಕೊಳ್ಳುತ್ತಾರೆ. ಹೀಗೆ ನಾನು ಫೋಟೋ ತೆಗೆಸಿಕೊಳ್ಳಲು ಮತ್ತು ಅವುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲು ಹಣ ಪಡೆದುಕೊಳ್ಳುತ್ತೇನೆ. ಈ ಫೋಟೋಗಳಿಗಾಗಿ ಒಂದು ರಾತ್ರಿಗೆ ಕನಿಷ್ಠ 20ರಿಂದ 30 ಲಕ್ಷ ರೂಪಾಯಿ ಗಳಿಸುತ್ತೇನೆ ಎಂದು ಹೇಳಿಕೊಂಡಿದ್ದರು.

ಓರಿಯನ್ನು ಬಾಲಿವುಡ್ ʻಬೆಸ್ಟ್‌ ​​ಫ್ರೆಂಡ್ ಫಾರೆವರ್ʼ ಎಂದೇ ಹೇಳುತ್ತಾರೆ. ಓರಿ ತನ್ನ ಫ್ಯಾಷನ್​ನಿಂದಾಗಿಯೂ ಸುದ್ದಿಯಾಗುತ್ತಾರೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ನ ಚೇರ್​ ಪರ್ಸನ್ ಆಫೀಸ್​ನಲ್ಲಿ ಸ್ಪೆಷಲ್ ಪ್ರಾಜೆಕ್ಟ್ ಮ್ಯಾನೇಜರ್ ಆಗಿದ್ದಾರೆ.ಇತ್ತೀಚೆಗೆ ಜಾಮ್‌ನಗರದಲ್ಲಿ ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭದಲ್ಲಿ (anant ambani pre wedding) ರಿಹಾನ್ನಾ ಅವರೊಂದಿಗೆ ಕಾಣಿಸಿಕೊಂಡು ಓರಿ ಸಖತ್‌ ಸುದ್ದಿಯಾಗಿದ್ದರು. ಈ ರೀತಿ ಹಲವು ಸಮಾರಂಭಗಳಲ್ಲಿ ಹಾಜಾರಾಗಲು ಓರಿ ಪಡೆಯುವ ಸಂಭಾವನೆ ಕೇಳಿದರೆ ಶಾಕ್‌ ಆಗೋದು ಗ್ಯಾರಂಟಿ.

ಮಾಧ್ಯಮವೊಂದರ ಸಂದರ್ಶನದಲ್ಲಿ ಹಲವು ಸಮಾರಂಭಗಳಲ್ಲಿ ಹಾಜಾರಾಗಲು ಪಡೆಯುವ ಸಂಭಾವನೆ ಕುರಿತು ಮಾತನಾಡಿದ್ದರು. ʻʻಕಾರ್ಯಕ್ರಮಗಳಿಗೆ ಹಾಜರಾಗಲು ಮುಖ್ಯ ಕಾರಣ ಎಲ್ಲಿರಿಗೂ ಸಂತೋಷ ನೀಡಬೇಕು ಎಂದು. ಸೆಲೆಬ್ರಿಟಿಗಳು ನನ್ನನ್ನು ಮದುವೆಗೆ ಕರೆಯುತ್ತಾರೆ. 15ರಿಂದ 30 ಲಕ್ಷದವರೆಗೆ ಸಂಭಾವನೆ ನೀಡಿ ಸಂತೋಷಪಡುತ್ತಾರೆ. ನಾನು ಅತಿಥಿಯಾಗಿ ಅಲ್ಲಿ ಭಾಗಿಯಾಗಲ್ಲ. ಒಳ್ಳೆಯ ಸ್ನೇಹಿತನಾಗಿ ಹೋಗುತ್ತೇನೆʼʼ ಎಂದಿದ್ದರು. ಓರಿ ಶಾರುಖ್ ಖಾನ್ ಮಗಳು ಸುಹಾನಾ ಖಾನ್​ಗೂ ಬೆಸ್ಟ್ ಫ್ರೆಂಡ್. ಸುಹಾನಾ ಖಾನ್ ಜತೆ ಓರಿ ಹಲವಾರು ಸಲ ಪಾರ್ಟಿಗಳಲ್ಲಿ ಕಾಣಿಸಿಕೊಂಡಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ್ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಯುವನಟಿ ರಿಹಾನಾ ರಾಜವರ್ಧನ್‌ಗೆ ಜೋಡಿಯಾಗಿ ನಟಿಸಿದ್ದಾರೆ.

VISTARANEWS.COM


on

Kannada New Movie hiranys song out
Koo

ಬೆಂಗಳೂರು: ʻಬಿಚ್ಚುಗತ್ತಿʼ ಸಿನಿಮಾ ಮೂಲಕ ಭರವಸೆ ಹುಟ್ಟಿಸಿರುವ ಮ್ಯಾಸೀವ್ ಸ್ಟಾರ್ ರಾಜವರ್ಧನ್, ಹಿರಣ್ಯ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಹಾಜರಲು ಸಜ್ಜಾಗಿದ್ದಾರೆ. ಇದೀಗ ಈ ಚಿತ್ರದ ಮೆಲೋಡಿ ನಂಬರ್ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಮೂಡಿ ಬಂದಿರುವ ಪದೇ ಪದೇ ಎಂಬ ಗೀತೆಗೆ ಸಂಚಿತ್ ಹೆಗ್ಡೆ ಧ್ವನಿಯಾಗಿದ್ದಾರೆ. ಜೂಡಾ ಸ್ಯಾಂಡ್ ಟ್ಯೂನ್ ಹಾಕಿದ್ದಾರೆ.

ಚಿತ್ರವನ್ನು ಪ್ರವೀಣ್ ಅವ್ಯೂಕ್ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಚಿತ್ರ. ಇದಕ್ಕೂ ಮುನ್ನ ಕಿರುಚಿತ್ರಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ‘ವೇದಾಸ್ ಇನ್ಫಿನಿಟಿ ಪಿಚ್ಚರ್’ ಬ್ಯಾನರ್​ನಲ್ಲಿ ವಿಘ್ನೇಶ್ವರ್ ಮತ್ತು ವಿಜಯ್ ಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ದಿವ್ಯಾ ಸುರೇಶ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದು, ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ್ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಯುವನಟಿ ರಿಹಾನಾ ರಾಜವರ್ಧನ್‌ಗೆ ಜೋಡಿಯಾಗಿ ನಟಿಸಿದ್ದಾರೆ.

ಇದನ್ನೂ ಓದಿ: OTT Release: ಈ ವಾರ ಒಟಿಟಿಯಲ್ಲಿ ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು

ಹಿರಣ್ಯ ಸಿನಿಮಾಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ. ಚಿತ್ರೀಕರಣ ಮುಗಿಸಿ ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ನಿರತವಾಗಿರುವ ಹಿರಣ್ಯ ಸಿನಿಮಾವನ್ನು ಆದಷ್ಟು ಬೇಗೆ ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.

Continue Reading
Advertisement
Mohan Bhagwat
ದೇಶ5 mins ago

Mohan Bhagwat: ಎರಡು ಸುತ್ತಿನ ರಹಸ್ಯ ಸಭೆ ನಡೆಸಿದ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್-ಯೋಗಿ ಆದಿತ್ಯನಾಥ್‌

Actor Darshan
ಕರ್ನಾಟಕ32 mins ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್;‌ ಮೊಬೈಲ್‌ ಪಾಸ್‌ವರ್ಡ್‌ ನೀಡಲು ದರ್ಶನ್‌ & ಗ್ಯಾಂಗ್‌ ತಕರಾರು!

Apple With sticker
Latest44 mins ago

Apple With sticker: ಸೇಬು ಹಣ್ಣುಗಳ ಮೇಲೆ ಸ್ಟಿಕ್ಕರ್; ಏನಿದರ ಹಿಂದಿರುವ ರಹಸ್ಯ?

Viral News
Latest44 mins ago

Viral News: ಮುಖಕ್ಕೆ ಎಂಜಲು ಉಗಿದು ಫೇಸ್ ಮಸಾಜ್ ಮಾಡಿದ ಅಮ್ಜದ್ ಅರೆಸ್ಟ್!

Viral Video
Latest56 mins ago

Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

Health Tips
Latest1 hour ago

Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Temple Bell
ಧಾರ್ಮಿಕ1 hour ago

Temple Bell: ದೇವಾಲಯದಿಂದ ಹಿಂತಿರುಗುವಾಗ ಗಂಟೆ ಬಾರಿಸಲೇಬಾರದು ಯಾಕೆ ಗೊತ್ತೇ?

Morning Nutrition
ಆರೋಗ್ಯ1 hour ago

Morning Nutrition: ಆರೋಗ್ಯಕರ ಆಗಿರಬೇಕಿದ್ದರೆ ನಮ್ಮ ಬೆಳಗಿನ ತಿಂಡಿ ಹೇಗಿರಬೇಕು?

Karnataka Weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Siddaramaiah
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಬೆಲೆ ಏರಿಕೆ ಮಾಡುವುದೇ ರಾಜ್ಯ ಸರ್ಕಾರದ 6ನೇ ‘ಗ್ಯಾರಂಟಿ’ ಆಗದಿರಲಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ18 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌