Prabhu Deva | ಪ್ರಭುದೇವ ಅಭಿನಯದ `Wolf' ಚಿತ್ರದ ಚಿತ್ರೀಕರಣ ಮುಕ್ತಾಯ - Vistara News

ಕಾಲಿವುಡ್

Prabhu Deva | ಪ್ರಭುದೇವ ಅಭಿನಯದ `Wolf’ ಚಿತ್ರದ ಚಿತ್ರೀಕರಣ ಮುಕ್ತಾಯ

“wolf” ಚಿತ್ರದಲ್ಲಿ ನಟ ಪ್ರಭುದೇವ (Prabhu Deva) ನಾಯಕನಾಗಿ ನಟಿಸುತ್ತಿದ್ದಾರೆ. ಇದೀಗ ಶೂಟಿಂಗ್‌ ಕಂಪ್ಲೀಟ್‌ ಆಗಿದೆ.

VISTARANEWS.COM


on

Prabhu Deva
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಟ ಪ್ರಭುದೇವ (Prabhu Deva) ಅಭಿನಯದ “wolf” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಚಿತ್ರಕ್ಕೆ ಪಾಂಡಿಚೆರಿ, ಚೆನ್ನೈ, ಬೆಂಗಳೂರು, ಅಂಡಮಾನ್ – ನಿಕೋಬಾರ್ ಮುಂತಾದ ಕಡೆ 65 ದಿನಗಳ ಚಿತ್ರೀಕರಣ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಡಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಈ ಚಿತ್ರ ನಿರ್ಮಿಸಿದ್ದಾರೆ.

ವಿನು ವೆಂಕಟೇಶ್ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಚಿತ್ರ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳ ಭಾಷೆಗಳಲ್ಲಿ ನಿರ್ಮಾಣವಾಗಿದೆ. ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 

ಇದನ್ನೂ ಓದಿ | Ranveer Singh | ಮತ್ತೆ ಸೋಲುಂಡ ರಣವೀರ್‌ ಸಿಂಗ್‌: ʻಸರ್ಕಸ್‌ʼ ಸಿನಿಮಾ ಕಲೆಕ್ಷನ್‌ ಮಾಡಿದ್ದೆಷ್ಟು?

Prabhu Deva

ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ. ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ | Tripura Sundari Serial | ʻಸ್ಪರ್ಶʼ ಸಿನಿಮಾ ಖ್ಯಾತಿಯ ನಟಿ ರೇಖಾ ಧಾರಾವಾಹಿಗೆ ಎಂಟ್ರಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Veera Dheera Sooran: ಚಿಯಾನ್ ವಿಕ್ರಮ್ 62ನೇ ಸಿನಿಮಾದ ಟೈಟಲ್‌ ಟೀಸರ್‌ ಔಟ್‌!

Veera Dheera Sooran: ‘ವೀರ ಧೀರ ಸೂರನ್’ ಎಂಬ ಟೈಟಲ್‌ನೊಂದಿಗೆ ಸಿನಿಮಾ (Chiyaan Vikram) ಫಸ್ಟ್‌ ಲುಕ್‌ ಪೋಸ್ಟರ್‌ ಶೇರ್‌ ಮಾಡಿಕೊಂಡಿದೆ. “ವೀರ ಧೀರ ಸೂರನ್” ಶೀರ್ಷಿಕೆಯ ಟೀಸರ್ ಚಿತ್ರತಂಡ ಅನಾವರಣಗೊಳಿಸಿದೆ. ಚಿಯಾನ್ 62ರ ಹೊಸ ಶೀರ್ಷಿಕೆಯ ಟೀಸರ್ ಜತೆಗೆ, ʻವೀರ ಧೀರ ಸೂರನ್ʼ ಹೊಸ ಪೋಸ್ಟರ್ ಕೂಡ ಅನಾವರಣ ಮಾಡಿದರು. ಪೋಸ್ಟರ್ ಹಂಚಿಕೊಂಡ ಚಿಯಾನ್‌ “ನೀವು ಗ್ಯಾಂಗ್‌ಸ್ಟರ್‌ ಆಗಿದ್ದರೆ.. ನಾನು ಮಾನ್‌ಸ್ಟರ್‌ !!”ಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ.

VISTARANEWS.COM


on

Veera Dheera Sooran Title Teaser OUT
Koo

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ನಟ ಚಿಯಾನ್ ವಿಕ್ರಮ್ (Veera Dheera Sooran) ಅವರ ಜನ್ಮದಿನದಂದು 62 ನೇ ಸಿನಿಮಾದ ಟೈಟಲ್‌ ರಿವೀಲ್‌ ಆಗಿದೆ. ಎಸ್‌ಯು ಅರುಣ್ ಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಚಿಯಾನ್‌ ರಗಡ್‌ ಲುಕ್‌ ನಲ್ಲಿ ಕಂಡಿದ್ದಾರೆ. ‘ವೀರ ಧೀರ ಸೂರನ್’ ಎಂಬ ಟೈಟಲ್‌ನೊಂದಿಗೆ ಸಿನಿಮಾ (Chiyaan Vikram) ಫಸ್ಟ್‌ ಲುಕ್‌ ಪೋಸ್ಟರ್‌ ಶೇರ್‌ ಮಾಡಿಕೊಂಡಿದೆ. “ವೀರ ಧೀರ ಸೂರನ್” ಶೀರ್ಷಿಕೆಯ ಟೀಸರ್ ಚಿತ್ರತಂಡ ಅನಾವರಣಗೊಳಿಸಿದೆ.

ʻವೀರ ಧೀರ ಸೂರನ್ʼ . 3 ನಿಮಿಷ 45 ಸೆಕೆಂಡ್ ಕಾಲ ಟೀಸರ್‌ ಇದೆ. ಜಿವಿ ಪ್ರಕಾಶ್ ಕುಮಾರ್ ಅವರ ಹಿನ್ನೆಲೆ ಸಂಗೀತ ಸಖತ್‌ ಕಿಕ್‌ ಕೊಡುವಂತಿದೆ. ಚಿಯಾನ್ 62ರ ಹೊಸ ಶೀರ್ಷಿಕೆಯ ಟೀಸರ್ ಜತೆಗೆ, ʻವೀರ ಧೀರ ಸೂರನ್ʼ ಹೊಸ ಪೋಸ್ಟರ್ ಕೂಡ ಅನಾವರಣ ಮಾಡಿದರು. ಪೋಸ್ಟರ್ ಹಂಚಿಕೊಂಡ ಚಿಯಾನ್‌ “ನೀವು ಗ್ಯಾಂಗ್‌ಸ್ಟರ್‌ ಆಗಿದ್ದರೆ.. ನಾನು ಮಾನ್‌ಸ್ಟರ್‌ !!”ಎಂದು ಕ್ಯಾಪ್ಷನ್‌ ಕೊಟ್ಟಿದ್ದಾರೆ. ಇನ್ನು ಟೀಸರ್‌ನಲ್ಲಿ ಭಾಗ -2 ಎಂದು ಉಲ್ಲೇಖಿಸಲಾಗಿದೆ.

ಚಿಯಾನ್‌ ವಿಕ್ರಮ ಜತೆಗೆ ಎಸ್‌ಜೆ ಸೂರ್ಯ, ಸುರಾಜ್ ವೆಂಜರಮೂಡು ಮತ್ತು ದಸರಾ ವಿಜಯನ್ ಅವರೂ ಇರಲಿದ್ದಾರೆ. ನಟ ಸೂರಜ್‌ಗೆ ಚೊಚ್ಚಲ ತಮಿಳು ಚಿತ್ರ ಇದಾಗಿದೆ.

ಇದನ್ನೂ ಓದಿ: Chiyaan Vikram: ಚಿಯಾನ್ ವಿಕ್ರಮ್ ಜನುಮದಿನಕ್ಕೆ ʻತಂಗಲಾನ್‌ʼ ಚಿತ್ರತಂಡದಿಂದ ಭರ್ಜರಿ ಗಿಫ್ಟ್‌!

ಚಿಯಾನ್ ವಿಕ್ರಮ್ ಜನುಮದಿನಕ್ಕೆ ʻತಂಗಲಾನ್‌ʼ ಚಿತ್ರತಂಡದಿಂದ ಭರ್ಜರಿ ಗಿಫ್ಟ್‌!

ʻʻತಂಗಲಾನ್‌ʼʼ (Thangalaan)ಚಿತ್ರತಂಡ ಏಪ್ರಿಲ್‌ 17ರಂದು ಸಣ್ಣ ವಿಡಿಯೊ ಗ್ಲಿಂಪ್ಸ್‌ ಔಟ್‌ ಮಾಡಿತ್ತು. ಕೋಲಾರದ ಚಿನ್ನದ ಗಣಿ ಕಾರ್ಮಿಕರ ಜೀವನದ ಸುತ್ತ ಸುತ್ತುವ ನೈಜ ಘಟನೆಗಳಿಂದ ಪ್ರೇರಿತವಾದ ʻʻತಂಗಲಾನ್‌ʼʼನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದರು ಚಿಯಾನ್‌ ವಿಕ್ರಮ್‌.

ಅಪ್ರತಿಮ ಪ್ರತಿಭೆ, ವೈಭವದೊಂದಿಗೆ ವಿಸ್ಮಯವನ್ನು ಪ್ರೇರೇಪಿಸುತ್ತದೆ. ಜನ್ಮದಿನದ ಶುಭಾಶಯಗಳು ಚಿಯಾನ್ ವಿಕ್ರಮ್. ದೊಡ್ಡ ಪರದೆ ನಿಮ್ಮ ಉಪಸ್ಥಿತಿಗಾಗಿ ಕಾಯುತ್ತಿದೆ!ʼʼಎಂದು ವಿಡಿಯೊ ಪೋಸ್ಟ್‌ ಮಾಡಿದೆ ಚಿತ್ರತಂಡ. ವಿಡಿಯೊದಲ್ಲಿ, ಚಿಯಾನ್ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ವಿಡಿಯೊದಲ್ಲಿ ವಿವಿಧ ರೀತಿಯ ಆಯುಧಗಳನ್ನು ಹಿಡಿದು, ಒರಟಾದ ಅವತಾರದಲ್ಲಿ ಕಂಡಿದ್ದರು.

ಪಾ ರಂಜಿತ್ ನಿರ್ದೇಶನದ ಚಿತ್ರದಲ್ಲಿ ವಿಕ್ರಮ್‌ ಬುಡಕಟ್ಟಿನ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ತಂಗಲಾನ್‌ನಲ್ಲಿನ ಈ ಪಾತ್ರಕ್ಕಾಗಿಯೇ ವಿಕ್ರಮ್ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಬ್ರಿಟಿಷರು ಹಾಗೂ ಬುಡಕಟ್ಟು ಸಮಾಜದ ನಡುವೆ ನಡೆಯುವ ಸಂಘರ್ಷವನ್ನು ʻತಂಗಲಾನ್‌ʼʼ ಹೇಳುತ್ತಿದೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ನಟ ಚಿಯಾನ್ ವಿಕ್ರಮ್ ಜತೆ ಪಾರ್ವತಿ ಮೆನನ್‌, ಮಾಳವಿಕಾ ಮೋಹನ್‌ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಕನ್ನಡದ ಕೆಜಿಎಫ್‌ ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಲ್ಪನಿಕ ಕಥೆಯನ್ನು ಕಟ್ಟಿಕೊಟ್ಟರೆ, ಕೆಜಿಎಫ್‌ನ ನಿಜವಾದ ಕಥೆಯನ್ನು ನಿರ್ದೇಶಕ ಪಾ. ರಂಜಿತ್‌ ಹೇಳಲು ಹೊರಟ್ಟಿದ್ದಾರೆ ಎಂದು ಈ ಮುಂಚೆ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೂಲಕ ಹೊಸ ಕಥೆಯನ್ನು ಹೇಳಲು ಹೊರಟ್ಟಿದ್ದಾರೆ ರಂಜಿತ್‌.

ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಸ್ಟುಡಿಯೋ ಗ್ರೀನ್ ಮತ್ತು ನೀಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ತಂಗಲಾನ್’ ಸಿನಿಮಾ ಸಿದ್ಧವಾಗಲಿದೆ.

Continue Reading

ಕಾಲಿವುಡ್

Actor Dhanush: ಧನುಷ್ – ಐಶ್ವರ್ಯಾ ರಜನಿಕಾಂತ್‌ಗೆ ಕೋರ್ಟ್ ನೋಟಿಸ್

Actor Dhanush: ಧನುಷ್ ಹಾಗೂ ಐಶ್ವರ್ಯಾ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಮದುವೆಯಾಗಿ ಬರೋಬ್ಬರಿ 18 ವರ್ಷಗಳ ಬಳಿಕ ದೂರಾಗುತ್ತಿರುವುದಾಗಿ ಹೇಳಿದ್ದರು. ವಿಚ್ಛೇದನ ವಿಚಾರ ಘೋಷಣೆ ಬಳಿಕ ಇಬ್ಬರು ತಮ್ಮ ಮಕ್ಕಳಾದ ಯಾತ್ರಾ ಮತ್ತು ಲಿಂಗ ಶಾಲೆಯ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು.ಐಶ್ವರ್ಯಾ ಇತ್ತೀಚೆಗೆ ʻಲಾಲ್ ಸಲಾಂʼ ಚಿತ್ರದ ಮೂಲಕ ನಿರ್ದೇಶನಕ್ಕೆ ಮರಳಿದ್ದರು. ಇದರಲ್ಲಿ ರಜನಿಕಾಂತ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.

VISTARANEWS.COM


on

Actor dhanush : Court Notices To Dhanush And Aishwarya
Koo

ಬೆಂಗಳೂರು: ನಟ ಧನುಷ್ (Actor Dhanush) ಹಾಗೂ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅಕ್ಟೋಬರ್ 7ರಂದು ಇಬ್ಬರೂ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ. ಈ ಸಂಬಂಧ ನೋಟಿಸ್ ನೀಡಿರುವುದಾಗಿ ವರದಿಯಾಗಿದೆ.

ಪರಸ್ಪರ ಒಪ್ಪಿಗೆ ಮೇರೆಗೆ ಜೋಡಿ ವಿಚ್ಛೇದನ ಸಲ್ಲಿಸಿತ್ತು. ಕಳೆದ ಎರಡು ವರ್ಷಗಳಿಂದ ಧನುಷ್ ಮತ್ತು ಐಶ್ವರ್ಯ ಬೇರೆ ಬೇರೆಯಾಗಿ ವಾಸಿಸುತ್ತಿದ್ದಾರೆ. ಧನುಷ್ ಹಾಗೂ ಐಶ್ವರ್ಯಾ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಮದುವೆಯಾಗಿ ಬರೋಬ್ಬರಿ 18 ವರ್ಷಗಳ ಬಳಿಕ ದೂರಾಗುತ್ತಿರುವುದಾಗಿ ಹೇಳಿದ್ದರು. ವಿಚ್ಛೇದನ ವಿಚಾರ ಘೋಷಣೆ ಬಳಿಕ ಇಬ್ಬರು ತಮ್ಮ ಮಕ್ಕಳಾದ ಯಾತ್ರಾ ಮತ್ತು ಲಿಂಗ ಶಾಲೆಯ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದರು.

ಜನವರಿ 2022ರಲ್ಲಿ ಬೇರೆಯಾಗುತ್ತಿದ್ದೇವೆ ಎಂದು ದಂಪತಿ ಘೋಷಿಸಿದ್ದರು. “18 ವರ್ಷಗಳ ಕಾಲ ಸ್ನೇಹಿತರು, ದಂಪತಿಗಳಾಗಿ , ಪೋಷಕರಾಗಿ ಹಿತೈಷಿಗಳಾಗಿ ಒಟ್ಟಿಗೆ ಇದ್ದೆವು. ಈ ಪಯಣ ನಮ್ಮಿಬ್ಬರ ಪ್ರಗತಿ, ತಿಳಿವಳಿಕೆ, ಹೊಂದಾಣಿಕೆ ಮತ್ತು ಪರಸ್ಪರ ಸ್ವೀಕಾರದ ಹಾದಿಯಾಗಿತ್ತು. ಇಂದು ನಾವು ನಮ್ಮ ಪ್ರತ್ಯೇಕ ಮಾರ್ಗಗಳನ್ನು ಕಂಡುಕೊಂಡಿದ್ದೇವೆ. ಐಶ್ವರ್ಯಾ ಮತ್ತು ನಾನು ದಂಪತಿಗಳಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮನ್ನು ನಾವು ಅರ್ಥ ಮಾಡಿಕೊಳ್ಳುವುದಕ್ಕೆ ಸಮಯ ಹಿಡಿಯಲಿದೆ. ದಯವಿಟ್ಟು ನಮ್ಮ ನಿರ್ಧಾರವನ್ನು ಗೌರವಿಸಿ. ಓಂ ನಮಶಿವಾಯ” ಎಂದು ಒಂದೂವರೆ ವರ್ಷದ ಹಿಂದೆ ಧನುಷ್ ಟ್ವೀಟ್ ಮಾಡಿದ್ದರು. ಹಿರಿಯ ನಟ ರಜನಿಕಾಂತ್ ಅವರ ಪುತ್ರಿ ಧನುಷ್ ಮತ್ತು ಐಶ್ವರ್ಯಾ ಅವರು 2004ರಲ್ಲಿ ವಿವಾಹವಾಗಿದ್ದರು.
ಇಬ್ಬರೂ ಮತ್ತೆ ಒಂದಾಗಬೇಕು ಎಂದು ಆಪ್ತರು, ಅಭಿಮಾನಿಗಳು ಬಯಸಿದ್ದರು. ಆದರೆ ಈಗ ಸದ್ಯದಲ್ಲೇ ಇವರ ವಿಚ್ಛೇದನ ಅಂತಿಮಗೊಳ್ಳಲಿದೆ. ಈ ವಿಚಾರದಲ್ಲಿ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ಇದನ್ನೂ ಓದಿ: Actor Dhanush: ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ ನಟ ಧನುಷ್-ಐಶ್ವರ್ಯಾ ರಜನಿಕಾಂತ್!

ಐಶ್ವರ್ಯಾ ಇತ್ತೀಚೆಗೆ ʻಲಾಲ್ ಸಲಾಂʼ ಚಿತ್ರದ ಮೂಲಕ ನಿರ್ದೇಶನಕ್ಕೆ ಮರಳಿದ್ದರು. ಇದರಲ್ಲಿ ರಜನಿಕಾಂತ್ ಅವರು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಕೂಡ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು.

Continue Reading

ಕಾಲಿವುಡ್

Chiyaan Vikram: ಚಿಯಾನ್ ವಿಕ್ರಮ್ ಜನುಮದಿನಕ್ಕೆ ʻತಂಗಲಾನ್‌ʼ ಚಿತ್ರತಂಡದಿಂದ ಭರ್ಜರಿ ಗಿಫ್ಟ್‌!

Chiyaan Vikram: ಪಾ ರಂಜಿತ್ ನಿರ್ದೇಶನದ ಚಿತ್ರದಲ್ಲಿ ವಿಕ್ರಮ್‌ ಬುಡಕಟ್ಟಿನ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ತಂಗಲಾನ್‌ನಲ್ಲಿನ ಈ ಪಾತ್ರಕ್ಕಾಗಿಯೇ ವಿಕ್ರಮ್ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಬ್ರಿಟಿಷರು ಹಾಗೂ ಬುಡಕಟ್ಟು ಸಮಾಜದ ನಡುವೆ ನಡೆಯುವ ಸಂಘರ್ಷವನ್ನು ʻತಂಗಲಾನ್‌ʼʼ ಹೇಳುತ್ತಿದೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ನಟ ಚಿಯಾನ್ ವಿಕ್ರಮ್ ಜತೆ ಪಾರ್ವತಿ ಮೆನನ್‌, ಮಾಳವಿಕಾ ಮೋಹನ್‌ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

VISTARANEWS.COM


on

Chiyaan Vikram birthday makers drop Thangalaan BTS video
Koo

ಬೆಂಗಳೂರು: ಕಾಲಿವುಡ್‌ ನಟ ಚಿಯಾನ್ ವಿಕ್ರಮ್ (Chiyaan Vikram) ಅವರಿಗೆ ಇಂದು (ಏ.17) 58ನೇ ಜನುಮದಿನದ ಸಂಭ್ರಮ. ಇದೀಗ  ʻʻತಂಗಲಾನ್‌ʼʼ (Thangalaan)ಚಿತ್ರತಂಡ ಏಪ್ರಿಲ್‌ 17ರಂದು ಸಣ್ಣ ವಿಡಿಯೊ ಗ್ಲಿಂಪ್ಸ್‌ ಔಟ್‌ ಮಾಡಿದೆ. ಕೋಲಾರದ ಚಿನ್ನದ ಗಣಿ ಕಾರ್ಮಿಕರ ಜೀವನದ ಸುತ್ತ ಸುತ್ತುವ ನೈಜ ಘಟನೆಗಳಿಂದ ಪ್ರೇರಿತವಾದ ʻʻತಂಗಲಾನ್‌ʼʼನಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ ಚಿಯಾನ್‌ ವಿಕ್ರಮ್‌.

ʻʻಅಪ್ರತಿಮ ಪ್ರತಿಭೆ, ವೈಭವದೊಂದಿಗೆ ವಿಸ್ಮಯವನ್ನು ಪ್ರೇರೇಪಿಸುತ್ತದೆ. ಜನ್ಮದಿನದ ಶುಭಾಶಯಗಳು ಚಿಯಾನ್ ವಿಕ್ರಮ್. ದೊಡ್ಡ ಪರದೆ ನಿಮ್ಮ ಉಪಸ್ಥಿತಿಗಾಗಿ ಕಾಯುತ್ತಿದೆ!ʼʼಎಂದು ವಿಡಿಯೊ ಪೋಸ್ಟ್‌ ಮಾಡಿದೆ ಚಿತ್ರತಂಡ. ವಿಡಿಯೊದಲ್ಲಿ, ಚಿಯಾನ್ ರಗಡ್‌ ಲುಕ್‌ನಲ್ಲಿ ಕಂಡಿದ್ದಾರೆ. ವಿಡಿಯೊದಲ್ಲಿ ವಿವಿಧ ರೀತಿಯ ಆಯುಧಗಳನ್ನು ಹಿಡಿದು, ಒರಟಾದ ಅವತಾರದಲ್ಲಿ ಕಂಡಿದ್ದಾರೆ.

ಪಾ ರಂಜಿತ್ ನಿರ್ದೇಶನದ ಚಿತ್ರದಲ್ಲಿ ವಿಕ್ರಮ್‌ ಬುಡಕಟ್ಟಿನ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ತಂಗಲಾನ್‌ನಲ್ಲಿನ ಈ ಪಾತ್ರಕ್ಕಾಗಿಯೇ ವಿಕ್ರಮ್ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು. ಬ್ರಿಟಿಷರು ಹಾಗೂ ಬುಡಕಟ್ಟು ಸಮಾಜದ ನಡುವೆ ನಡೆಯುವ ಸಂಘರ್ಷವನ್ನು ʻತಂಗಲಾನ್‌ʼʼ ಹೇಳುತ್ತಿದೆ ಎನ್ನಲಾಗುತ್ತಿದೆ. ಈ ಚಿತ್ರದಲ್ಲಿ ನಟ ಚಿಯಾನ್ ವಿಕ್ರಮ್ ಜತೆ ಪಾರ್ವತಿ ಮೆನನ್‌, ಮಾಳವಿಕಾ ಮೋಹನ್‌ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಕನ್ನಡದ ಕೆಜಿಎಫ್‌ ಚಿತ್ರದಲ್ಲಿ ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಲ್ಪನಿಕ ಕಥೆಯನ್ನು ಕಟ್ಟಿಕೊಟ್ಟರೆ, ಕೆಜಿಎಫ್‌ನ ನಿಜವಾದ ಕಥೆಯನ್ನು ನಿರ್ದೇಶಕ ಪಾ. ರಂಜಿತ್‌ ಹೇಳಲು ಹೊರಟ್ಟಿದ್ದಾರೆ ಎಂದು ಈ ಮುಂಚೆ ಸುದ್ದಿಯಾಗಿತ್ತು. ಇದೀಗ ಈ ಚಿತ್ರದ ಮೂಲಕ ಹೊಸ ಕಥೆಯನ್ನು ಹೇಳಲು ಹೊರಟ್ಟಿದ್ದಾರೆ ರಂಜಿತ್‌.

ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಸ್ಟುಡಿಯೋ ಗ್ರೀನ್ ಮತ್ತು ನೀಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ‘ತಂಗಲಾನ್’ ಸಿನಿಮಾ ಸಿದ್ಧವಾಗಲಿದೆ.

ಇದನ್ನೂ ಓದಿ: Chiyaan Vikram: ಸಿನಿಮಾ ರಿಹರ್ಸಲ್ ವೇಳೆ ಚಿಯಾನ್‌ ವಿಕ್ರಮ್‌ ಪಕ್ಕೆಲುಬು ಮುರಿತ: ಶೂಟಿಂಗ್‌ ಸ್ಥಗಿತ

ಈ ಚಿತ್ರದಲ್ಲಿ ಪಾರ್ವತಿ ತಿರುವೋತ್ತು, ಮಾಳವಿಕಾ ಮೋಹನನ್, ಪಶುಪತಿ, ಡೇನಿಯಲ್ ಕಾಲ್ಟಗಿರೋನ್ ಮತ್ತು ಇನ್ನೂ ಅನೇಕರು ಇದ್ದಾರೆ. ಜಿವಿ ಪ್ರಕಾಶ್ ಕುಮಾರ್ ಚಿತ್ರಕ್ಕೆ ಸಂಗೀತವನ್ನು ರಚಿಸಿದ್ದಾರೆ.

ಚಿಯಾನ್ ವಿಕ್ರಮ್ ಅವರ ಮುಂಬರುವ ಚಿತ್ರಗಳು

ಅಣ್ಣಿಯಾನ್ ನಟ ಚಿತ್ರನಿರ್ಮಾಪಕ ಎಸ್‌ಯು ಅರುಣ್ ಕುಮಾರ್ ಅವರೊಂದಿಗೆ ತಾತ್ಕಾಲಿಕವಾಗಿ ʻಚಿಯಾನ್ 62ʼ ಎಂಬ ಯೋಜನೆಯಲ್ಲಿ ಕೆಲಸ ಮಾಡಲಿದ್ದಾರೆ. ಚಿತ್ರದಲ್ಲಿ ಎಸ್ ಜೆ ಸೂರ್ಯ ಮತ್ತು ಸೂರಜ್ ವೆಂಜರಮೂಡು ಪ್ರಮುಖ ಭಾಗಗಳಲ್ಲಿದ್ದಾರೆ.

ಈ ಚಿತ್ರವನ್ನು HR ಎಂಟರ್‌ಟೈನ್‌ಮೆಂಟ್‌ನ ಬ್ಯಾನರ್‌ನಡಿಯಲ್ಲಿ ಶಿಬು ಥಮೀನ್ಸ್ ಮತ್ತು ರಿಯಾ ಶಿಬು ನಿರ್ಮಿಸಿಲಿದ್ದಾರೆ.

Continue Reading

ಕಾಲಿವುಡ್

Aishwarya Shankar: ತಮಿಳು ಖ್ಯಾತ ನಿರ್ದೇಶಕನ ಮಗಳ ಎರಡನೇ ವಿವಾಹ: ಯಾರೆಲ್ಲ ಭಾಗಿ?

Aishwarya Shankar: ಶಂಕರ್ ಷಣ್ಮುಗಂ ಅವರು ಮಗಳು ಐಶ್ವರ್ಯಾ ಅವರನ್ನು ,ಕ್ರಿಕೆಟ್ ಪ್ಲೇಯರ್ ದಾಮೋದರ್ ರೊಹೀತ್ ಅವರಿಗೆ ಮುಂಚೆ ಮುದುವೆ ಮಾಡಿಕೊಟ್ಟಿದ್ದರು. ಅಷ್ಟೇ ಅಲ್ಲದೇ ಅದ್ಧೂರಿಯಾಗಿ ಮದುವೆ ನೆರವೇರಿತ್ತು. ಮದುವೆಯಾದ ಕೆಲವೇ ದಿನದಲ್ಲಿ ಸಂಬಂಧ ಮುರಿದು ಬಿತ್ತು. ಈಗ ಮೂರು ವರ್ಷದ ನಂತರ ಮತ್ತೊಮ್ಮೆ ಮದುವೆಯಾಗಿದ್ದಾರೆ. ಆರತಕ್ಷತೆಯ ಫೋಟೊಗಳು ಇದೀಗ ವೈರಲ್‌ ಆಗಿದ್ದು, ಗಣ್ಯರು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಿದ್ದರು .

VISTARANEWS.COM


on

Aishwarya Shankar grand wedding reception
Koo

ಬೆಂಗಳೂರು: ʻಕಾದಲನ್ʼ, ʻಶಿವಾಜಿʼ, ಇಂಡಿಯನ್‌ 2 ಹೀಗೆ ಹಲವು ಹಿಟ್‌ ಸಿನಿಮಾಗಳನ್ನು ನೀಡಿದ್ದ ಶಂಕರ್ ಷಣ್ಮುಗಂ (shankar shanmugam) ಮಗಳು ಐಶ್ವರ್ಯಾ ಶಂಕರ್‌ ಅವರು (Aishwarya Shankar) ತರುಣ್ ಕಾರ್ತಿಕೇಯನ್ ಜತೆ ವಿವಾಹವಾಗಿದ್ದಾರೆ. ಪುದುಚೇರಿ ಕ್ರಿಕೆಟ್ ತಂಡದ ನಾಯಕನಾಗಿದ್ದ ದಾಮೋದರ್ ರೊಹೀತ್ ಜತೆ ಶಂಕರ್ ಪುತ್ರಿ ಐಶ್ವರ್ಯಾ ಶಂಕರ್‌ ಮೊದಲು ಮುದುವೆಯಾಗಿದ್ದು. ಈಗ ಮೂರು ವರ್ಷದ ನಂತರ ಮತ್ತೊಮ್ಮೆ ಮದುವೆಯಾಗಿದ್ದಾರೆ. ಆರತಕ್ಷತೆಯ ಫೋಟೊಗಳು ಇದೀಗ ವೈರಲ್‌ ಆಗಿದ್ದು, ಗಣ್ಯರು ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಭಾಗಿಯಾಗಿದ್ದರು . ರಾಮ್ ಚರಣ್, ಜಾಹ್ನವಿ ಕಪೂರ್, ಅಟ್ಲಿ ಕೂಡ ಇದ್ದರು. ಜಾನ್ವಿ ಕಪೂರ್ ಮತ್ತು ತಂದೆ ಬೋನಿ ಕಪೂರ್ ಕೂಡ ಫೋಟೊಗೆ ಪೋಸ್‌ ಕೊಟ್ಟಿದ್ದಾರೆ.

ಶಂಕರ್ ಷಣ್ಮುಗಂ ಅವರು ಮಗಳು ಐಶ್ವರ್ಯಾ ಅವರನ್ನು ,ಕ್ರಿಕೆಟ್ ಪ್ಲೇಯರ್ ದಾಮೋದರ್ ರೊಹೀತ್ ಅವರಿಗೆ ಮುಂಚೆ ಮುದುವೆ ಮಾಡಿಕೊಟ್ಟಿದ್ದರು. ಅಷ್ಟೇ ಅಲ್ಲದೇ ಅದ್ಧೂರಿಯಾಗಿ ಮದುವೆ ನೆರವೇರಿತ್ತು. ಮದುವೆಯಾದ ಕೆಲವೇ ದಿನದಲ್ಲಿ ಸಂಬಂಧ ಮುರಿದು ಬಿತ್ತು. ದಾಮೋದರ್ ರೊಹೀತ್ ವಿರುದ್ದ ಮದುವೆಯಾದ ವರ್ಷ 2021ರಲ್ಲಿಯೇ 16 ವರ್ಷದ ಯುವತಿ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಫೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣವನ್ನ ಕೂಡ ದಾಖಲಿಸಿಕೊಂಡಿದ್ದರು. ಐಶ್ವರ್ಯ ಬಳಿಕ ರೋಹಿತ್‌ಗೆ ಡಿವೋರ್ಸ್‌ ನೀಡಿದರು. ಈಗ ಮೂರು ವರ್ಷದ ನಂತರ ತರುಣ್ ಕಾರ್ತಿಕೇಯನ್ ಜತೆ ಮದುವೆಯಾಗಿದ್ದಾರೆ.

ಇದನ್ನೂ ಓದಿ: Indian 2: ‘ಇಂಡಿಯನ್ 2′ ಚಿತ್ರದ ಶೂಟಿಂಗ್ ಪೂರ್ಣ; ಕಮಲ್‌ ಹಾಸನ್‌ ಸಿನಿಮಾ ತೆರೆಗೆ ಯಾವಾಗ?

ಮದುವೆ ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜಿನಿಕಾಂತ್‌, ಕಮಲ್‌ ಹಾಸನ್, ಚಿಯಾನ್ ವಿಕ್ರಮ್.. ಮಣಿರತ್ನಂ, ಸುಹಾಸಿನಿ, ನಯನತಾರಾ ಹೀಗೆ ಅನೇಕ ತಾರೆಯರು ಭಾಗಿಯಾಗಿದ್ದರು.

ಇನ್ನು ಆರತಕ್ಷತೆಯಲ್ಲಿ ರಾಮ್ ಚರಣ್, ಪತ್ನಿ ಉಪಾಸನಾ ಕಾಮಿನೇನಿ ಜತೆಯಲ್ಲಿ, ಚಿರಂಜೀವಿ ಇದ್ದರು. ರಾಮ್ ಚರಣ್ ಪ್ರಸ್ತುತ ಶಂಕರ್ ಅವರ ಬಹು ನಿರೀಕ್ಷಿತ ಪ್ರಾಜೆಕ್ಟ್ ʻಗೇಮ್ ಚೇಂಜರ್‌ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಜೂನ್‌ನಲ್ಲಿ  ʻಇಂಡಿಯನ್‌ 2ʼ ಸಿನಿಮಾ ತೆರೆಗೆ!

ʻಇಂಡಿಯನ್ʼ (Indian 2 Movie) ಸಿನಿಮಾದಲ್ಲಿ ಕಮಲ್ ಹಾಸನ್ (kamal haasan) ಸೇನಾಪತಿ ಪಾತ್ರದಲ್ಲಿ ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಹೊಸ ಪೋಸ್ಟರ್‌ ಜತೆಗೆ ಸಿನಿಮಾ ಡೇಟ್‌ ಅನೌನ್ಸ್‌ ಮಾಡಿದೆ. ಶಂಕರ್ ನಿರ್ದೇಶನದ ʻಇಂಡಿಯನ್ 2ʼ ಇದೇ ಜೂನ್‌ನಲ್ಲಿ ಬಿಡುಗಡೆಯಾಗಲಿದೆ.

ಚಿತ್ರತಂಡ ಸಿನಿಮಾ ಜೂನ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದು, ಯಾವ ದಿನ ಎಂಬುದನ್ನು ಬಹಿರಂಗಪಡಿಸಿಲ್ಲ. ಹೊಸ ಪೋಸ್ಟರ್‌ನಲ್ಲಿ, ಕಮಲ್ ಬಿಳಿ ಅಂಗಿ ಧರಿಸಿ, ಕೈಯನ್ನು ಕೈಕೋಳದಲ್ಲಿ ಕಟ್ಟಿರುವುದನ್ನು ತೋರಿಸಲಾಗಿದೆ. ಚಿತ್ರದಲ್ಲಿ ಸೇನಾಪತಿ ಪಾತ್ರದಲ್ಲಿ ಕಮಲ್ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಭ್ರಷ್ಟಾಚಾರ ಮತ್ತು ಅನ್ಯಾಯದ ವಿರುದ್ಧ ಸೇನಾಪತಿಯ ಹೋರಾಟದ ಕಥೆ ಇರಲಿದೆ ಎನ್ನಲಾಗಿದೆ.

Continue Reading
Advertisement
Steet Food
ಆಹಾರ/ಅಡುಗೆ2 hours ago

ವಿಸ್ತಾರ ಸಂಪಾದಕೀಯ: ಸಾರ್ವಜನಿಕ ಆಹಾರದಲ್ಲಿ ಆರೋಗ್ಯ ಕಾಳಜಿ ಪ್ರಮುಖವಾಗಿರಲಿ

IPL 2024
ಪ್ರಮುಖ ಸುದ್ದಿ3 hours ago

IPL 2024 : ಪಂಜಾಬ್​ ತಂಡಕ್ಕೆ ವಿರೋಚಿತ 9 ರನ್ ಸೋಲು, ಜಯದ ಹಳಿಗೆ ಮರಳಿದ ಮುಂಬೈ

Physical Abuse
ದೇಶ3 hours ago

Physical Abuse : ಸ್ಪೇನ್​ನ ಮಹಿಳೆ ಮೇಲೆ ಜಾರ್ಖಂಡ್​ನಲ್ಲಿ ಗ್ಯಾಂಗ್​ ರೇಪ್​; ತಿಂಗಳ ಬಳಿಕ ಪ್ರಕರಣ ಬಯಲು

Amanatullah Khan
ದೇಶ3 hours ago

Amanatullah Khan: ಆಪ್‌ಗೆ ಮತ್ತಷ್ಟು ಸಂಕಷ್ಟ; ಶಾಸಕ ಅಮಾನತುಲ್ಲಾ ಖಾನ್ ಅರೆಸ್ಟ್‌

Moral policing
ಪ್ರಮುಖ ಸುದ್ದಿ4 hours ago

Moral policing : ನೈತಿಕ ಪೊಲೀಸ್​ಗಿರಿ; ಮುಸ್ಲಿಮರ ಗುಂಪಿನಿಂದ ಹಿಂದೂ ಯುವಕನ ಮೇಲೆ ಹಲ್ಲೆ

Rishab Shetty
ಸಿನಿಮಾ4 hours ago

Rishab Shetty: ರಿಷಬ್‌ ಮೀಟ್ಸ್‌ ಮೋಹನ್‌ಲಾಲ್‌; ʼಕಾಂತಾರʼ ಪ್ರೀಕ್ವೆಲ್​ನಲ್ಲಿ ಅಭಿನಯಿಸುತ್ತಾರಾ ಮಾಲಿವುಡ್‌ ಸೂಪರ್‌ ಸ್ಟಾರ್‌?

lok Sabha Election
ಪ್ರಮುಖ ಸುದ್ದಿ4 hours ago

Lok Sabha Election : ಕಾಂಗ್ರೆಸ್​​ಗೆ ಹಿನ್ನಡೆಯಾದರೆ ಸಿದ್ದರಾಮಯ್ಯ ಸ್ಥಾನಕ್ಕೆಕಂಟಕ​​​; ಚರ್ಚೆ ಹುಟ್ಟು ಹಾಕಿದ ಬೈರತಿ ಸುರೇಶ್​ ಹೇಳಿಕೆ

Hubli Murder Case
ಪ್ರಮುಖ ಸುದ್ದಿ4 hours ago

Hubli murder case : ನೇಹಾಳನ್ನು ಕೊಲ್ಲಲೆಂದೇ ಕಾಲೇಜಿಗೆ ಸಜ್ಜಾಗಿ ಬಂದಿದ್ದ ಶಿಕ್ಷಕರ ಪುತ್ರ ಫಯಾಜ್!

congress workers meeting in kudligi
ವಿಜಯನಗರ5 hours ago

Lok Sabha Election 2024: ಬಳ್ಳಾರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಈ. ತುಕಾರಾಂ ಗೆಲ್ಲಿಸಲು ಸಂತೋಷ್‌ ಲಾಡ್‌ ಮನವಿ

Indian Railways
ದೇಶ5 hours ago

Indian Railways: ಹಿರಿಯ ನಾಗರಿಕ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಲೋವರ್ ಬರ್ತ್ ಕಾಯ್ದಿರಿಸುವಿಕೆಗೆ ಹೊಸ ನಿಯಮ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌