Site icon Vistara News

Prajwal Devaraj: ಪ್ರಜ್ವಲ್ ದೇವರಾಜ್ ಬರ್ತ್‌ಡೇ ಸೆಲೆಬ್ರೇಷನ್‌ ಕ್ಯಾನ್ಸಲ್‌; ದರ್ಶನ್‌ ಕಾರಣ?

Prajwal Devaraj cancel birthday darshan main reason

ಬೆಂಗಳೂರು: ಈಗಾಗಲೇ ಗೋಲ್ಡನ್‌ ಸ್ಟಾರ್‌ ಗಣೇಶ್‌, ರಕ್ಷಕ್‌ ಬುಲೆಟ್‌ ತಮ್ಮ ಜನುಮದಿನವನ್ನು ಆಚರಿಸಿಕೊಂಡಿಲ್ಲ ಎಂಬುದು ಗೊತ್ತೇ ಇದೆ. ಇದೀಗ ನಾಳೆ ಪ್ರಜ್ವಲ್ ದೇವರಾಜ್ (Prajwal Devaraj) ಹುಟ್ಟಿದ ಹಬ್ಬ ಇದ್ದ ಕಾರಣ, ನಟ ಇದೀಗ ಬರ್ತ್‌ಡೇ ಆಚರಿಸಲ್ಲ ಎಂದು ಹೇಳಿಕೊಂಡಿದ್ದಾರೆ. ಇದೀಗ ಸ್ಯಾಂಡಲ್‌ವುಡ್‌ ಸ್ಟಾರ್‌ಗಳು ದರ್ಶನ್‌ ಅರೆಸ್ಟ್‌ ಆದ ಕಾರಣ ಬರ್ತ್‌ಡೇಗೆ ಬ್ರೇಕ್‌ ಹಾಕಿದ್ದಾರಾ? ಎನ್ನುವ ಅನುಮಾನ ಫ್ಯಾನ್ಸ್‌ಗೆ ಮೂಡಿದೆ.

ಗಣೇಶ್, ಲೂಸ್ ಮಾದ ಯೋಗಿ, ಪ್ರಜ್ವಲ್ ದೇವರಾಜ್ ಅಭಿಮಾನಿಗಳ ಜತೆ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. ನಾಳೆ ಪ್ರಜ್ವಲ್ ದೇವರಾಜ್ ಹುಟ್ಟು ಹಬ್ಬ. ಇದೀಗ ಅವರು ಪೋಸ್ಟ್‌ ಮಾಡಿದ್ದು ಹೀಗೆ.

ʻʻಜುಲೈ 4ರಂದು ನಾನು ಬೆಂಗಳೂರಿನಲ್ಲಿ ಇಲ್ಲದಿರುವ ಕಾರಣ ಈ ವರ್ಷ ನನ್ನ ಹುಟ್ಟು ಹಬ್ಬವನ್ನು ನಿಮ್ಮ ಜತೆ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಕ್ಷಮೆ ಇರಲಿ. ಪ್ರತಿಸಲ ನನ್ನ ಜತೆ ಹಾಗೂ ನಿಮ್ಮ ಊರುಗಳಲ್ಲಿ, ನಗರಗಳಲ್ಲಿ ನಿಮ್ಮ ಪ್ರೀತಿ ಅಭಿಮಾನವನ್ನು ಅನಾಥಾಶ್ರಮಗಳಲ್ಲಿ, ವೃದ್ಧಾಶ್ರಮಗಳಲ್ಲಿ , ಅನ್ನದಾನ, ಸಿಹಿ ಹಂಚುವುದು ಹಾಗೂ ಶಾಲಾ ಮಕ್ಕಳಿಗೆ ಪುಸ್ತಕ, ಪೆನ್ನು ಹಂಚುವುದು, ರಕ್ತದಾನ ಹೀಗೆ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತ ನನ್ನ ಹುಟ್ಟುಹಬ್ಬವನ್ನು ಆಚರಿಸುತ್ತ ಬಂದಿದ್ದೀರಿ. ಈ ಪ್ರೀತಿ ಅಭಿಮಾನಕ್ಕೆ ನಾನು ಸದಾ ಚಿರರುಣಿ. ಈ ವರ್ಷ ನಿಮ್ಮ ಊರಿನ ನಿಮ್ಮ ಅಕ್ಕ ಪಕ್ಕ ಶಾಲೆಗಳಲ್ಲಿ ಆಶ್ರಮಗಳಲ್ಲಿ ಬಡವರಿಗೆ, ಅಸಹಾಯಕರಿಗೆ ಸಹಾಯ ಹಸ್ತವನ್ನು ನೀಡುವ ಮುಖಾಂತರ ಆಚರಿಸಿ ಎಂದು ಈ ಮೂಲಕ ನನ್ನ ಗೆಳೆಯರಲ್ಲಿ ಮನವಿ. ಮುಂದಿನ ವರ್ಷ ಖಂಡಿತ ಸೇರೋಣ , ನಿಮ್ಮ ಪ್ರೀತಿಯ ಪ್ರಜ್ವಲ್‌ ದೇವರಾಜ್‌ʼʼಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Prajwal Devaraj: ಪ್ರಜ್ವಲ್​ ದೇವರಾಜ್ ಇನ್ನಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಕುಟುಂಬಸ್ಥರ ಆಕ್ರೋಶ!

ಇನ್ನು ಜುಲೈ 12ಕ್ಕೆ ಶಿವಣ್ಣ ಬರ್ತಡೇ ಇದ್ದು ಅವರು ಕೂಡ ಹುಟ್ಟು ಹಬ್ಬವನ್ನು ಆಚರಿಸ್ತಾರಾ ಇಲ್ಲವಾ ಎಂಬುದು ಕಾದು ನೋಡಬೇಕಿದೆ.

ದರ್ಶನ್‌ ಭೇಟಿಯಾದ ಪವಿತ್ರಾ ಆಪ್ತೆ

ಜೈಲಿನಲ್ಲಿರುವ ನಟ ದರ್ಶನ್‌ನನ್ನು ಪವಿತ್ರಾ ಗೌಡ ಆಪ್ತ ಸ್ನೇಹಿತೆ ಮಂಗಳವಾರ ಭೇಟಿ ಮಾಡಿದ್ದಾರೆ. ಒಂದು ಕಡೆ ಪವಿತ್ರಾ ಸ್ನೇಹಿತೆ 15 ನಿಮಿಷ ದರ್ಶನ್ ಜತೆ ಮಾತುಕತೆ ನಡೆಸಿದ್ದರೆ, ಮತ್ತೊಂದೆಡೆ ದರ್ಶನ್‌ರನ್ನು‌ (Actor Darshan) ಭೇಟಿಯಾಗಲು ನಟ ಧನ್ವೀರ್‌ಗೆ ಅವಕಾಶ ಸಿಗದಿರುವುದು ಕಂಡುಬಂದಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ದರ್ಶನ್ ಅಭಿಪ್ರಾಯ ತಿಳಿಯಲು ಪವಿತ್ರಾ ಗೌಡ ಯತ್ನಿಸಿದ್ದಾರೆ. ಹೀಗಾಗಿ ಅವರು ನೀಡಿದ ಮಾಹಿತಿಯನ್ನು ದರ್ಶನ್‌ಗೆ ಪವಿತ್ರಾ ಗೌಡ ಆಪ್ತ ಸ್ನೇಹಿತೆ ಸಮತಾ ರವಾನಿಸಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿ ಬೇರೆ ಬೇರೆಯಾಗಿದ್ದರೂ ದರ್ಶನ್ ಮತ್ತು ಪವಿತ್ರಾಗೆ ಪರಸ್ಪರ ಮಾಹಿತಿ ಸಿಗುತ್ತಿದೆ. ಇದಕ್ಕೆ ಪವಿತ್ರಾ ಸ್ನೇಹಿತೆ ಸಮತಾ ಮಧ್ಯವರ್ತಿಯಾಗಿದ್ದಾರೆ. ನಟ ದರ್ಶನ್ ತನ್ನ ಬಗ್ಗೆ ಏನು ಹೇಳುತ್ತಿದ್ದಾರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಬಳಿಕ ಅವರ ಅಭಿಪ್ರಾಯ ತಿಳಿಯಲು ಪವಿತ್ರಾ ಪ್ರಯತ್ನಿಸಿದ್ದಾರೆ. ಹೀಗಾಗಿ ಸ್ನೇಹಿತೆ ಮೂಲಕ ದರ್ಶನ್‌ರನ್ನು ಭೇಟಿ ಮಾಡಿಸಿದ್ದಾರೆ ಎನ್ನಲಾಗಿದೆ. ನಟ ದರ್ಶನ್ ಕೂಡ ಸಮತಾ ಭೇಟಿಗೆ ಓಕೆ ಅಂದಿದ್ದರು. ಹೀಗಾಗಿ ಅವರನ್ನು ಜೈಲಿನೊಳಗೆ ಕಳುಹಿಸಲಾಗಿದೆ.

Exit mobile version