Actor Kishore: ರಾಮ ಮಂದಿರ ಉದ್ಘಾಟನೆ ದಿನ `ಉಳ್ಳವರು ಶಿವಾಲಯವ ಮಾಡುವರು' ಎಂದ ಕಿಶೋರ್‌! ಜನರ ಪ್ರತಿಕ್ರಿಯೆ ಏನು? - Vistara News

ರಾಮ ಮಂದಿರ

Actor Kishore: ರಾಮ ಮಂದಿರ ಉದ್ಘಾಟನೆ ದಿನ `ಉಳ್ಳವರು ಶಿವಾಲಯವ ಮಾಡುವರು’ ಎಂದ ಕಿಶೋರ್‌! ಜನರ ಪ್ರತಿಕ್ರಿಯೆ ಏನು?

Actor Kishore: ಪ್ರಾಣ ಪ್ರತಿಷ್ಠಾಪನೆ ದಿನವೇ ಇದೀಗ ನಟ ಕಿಶೋರ್ ಅವರು ಬಸವಣ್ಣ ಅವರ ವಚನವನ್ನು ಪೋಸ್ಟ್‌ ಮಾಡಿದ್ದಾರೆ. ಈ ಬಗ್ಗೆ ನೆಟ್ಟಿಗರು ಆಕ್ರೋಶ್‌ ಹೊರ ಹಾಕಿ ʻ ಈ ನಾಸ್ತಿಕವಾದವನ್ನು ಇತರ ಧರ್ಮದ ಪ್ರಾರ್ಥನಾ ಕೇಂದ್ರಗಳ ಉದ್ಘಾಟನೆ ದಿನ ಬಳಸಿʼʼಎಂದು ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Pran Pratishtha day cryptic post actor kishore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಹುಭಾಷಾ ನಟ ಕಿಶೋರ್ (Actor Kishore) ಸಿನಿಮಾಗಳ ಜತೆ ಜತೆಗೆ ಮೋದಿ ಬಗ್ಗೆ ತಮ್ಮ ಕಮೆಂಟ್‌ಗಳ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ. ಇದೀಗ ರಾಮ ಮಂದಿರದ (Ram Mandir) ಕನಸು ನನಸಾಗಿದೆ. ರಾಮಲಲ್ಲಾನಿಗೆ ಪ್ರಾಣ ಪ್ರತಿಷ್ಠಾಪನೆ (Pran Pratishtha) ನೆರವೇರಿಸಲಾಗಿದೆ. ಇದರೊಂದಿಗೆ ಕೋಟ್ಯಂತರ ರಾಮಭಕ್ತರ ಕನಸು ಸಾಕಾರಗೊಂಡಿದೆ. ಇದರ ಬೆನ್ನಲ್ಲೇ ಇದೀಗ ನಟ ಕಿಶೋರ್‌ ಅವರ ಪೋಸ್ಟ್‌ ವೈರಲ್‌ ಆಗಿದೆ.

ಜ್ವಲಂತ ಸಮಸ್ಯೆಗಳನ್ನು ಮರೆಮಾಚಿ, ಅರ್ಧಂಬರ್ಧ ದೇವಸ್ಥಾನದ ಉದ್ಘಾಟನೆ ಮಾಡಿ ಓಟು ಬಾಚಲು ನಿಂತಿರುವ ಧೂರ್ತರು ಅವರ ಅಂಧಭಕ್ತರು ಹಿಂದೂ ವಿರೋಧಿಗಳೇ ಅಲ್ಲವೇ ಎಂದು ಈ ಹಿಂದೆ ಕಿಶೋರ್‌ ಅವರು ಪೋಸ್ಟ್‌ ಮಾಡಿ ಸಖತ್‌ ಚರ್ಚೆಯಲ್ಲಿದ್ದರು. ಪ್ರಾಣ ಪ್ರತಿಷ್ಠಾಪನೆ ದಿನವೇ ಇದೀಗ ಅವರು ಬಸವಣ್ಣ ಅವರ ವಚನವನ್ನು ಪೋಸ್ಟ್‌ ಮಾಡಿದ್ದಾರೆ. ಈ ಬಗ್ಗೆ ನೆಟ್ಟಿಗರು ಆಕ್ರೋಶ್‌ ಹೊರ ಹಾಕಿ ʻ ಈ ನಾಸ್ತಿಕವಾದವನ್ನು ಇತರ ಧರ್ಮದ ಪ್ರಾರ್ಥನಾ ಕೇಂದ್ರಗಳ ಉದ್ಘಾಟನೆ ದಿನ ಬಳಸಿʼʼ ಎಂದು ಕಮೆಂಟ್‌ ಮಾಡಿದ್ದಾರೆ.

ಕಿಶೋರ್‌ ಸೋಷಿಯಲ್‌ ಮೀಡಿಯಾದಲ್ಲಿ ʻʻಉಳ್ಳವರು ಶಿವಾಲಯವ ಮಾಡುವರು !
ನಾನೇನ ಮಾಡುವೆ ? ಬಡವನಯ್ಯ!
ಎನ್ನ ಕಾಲೇ ಕಂಬ, ದೇಹವೇ ದೇಗುಲ,
ಶಿರವೇ ಹೊನ್ನ ಕಳಶವಯ್ಯ!
ಕೂಡಲಸಂಗಮದೇವ ಕೇಳಯ್ಯ,
ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ!ʼʼ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಇದನ್ನು ಇಂಗ್ಲೀಷ್‌ನಲ್ಲಿಯೂ ಭಾಷಾಂತರ ಮಾಡಿದ್ದಾರೆ ಕಿಶೋರ್‌. ಇದಕ್ಕೆ ನೆಟ್ಟಿಗರು ನಟನ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ʻʻನಿಮ್ಮ ನಾಸ್ತಿಕವಾದ ನಿಮ್ಮ ಇಚ್ಛೆ. ಈ ನಾಸ್ತಿಕವಾದವನ್ನು ಇತರ ಧರ್ಮದ ಪ್ರಾರ್ಥನಾ ಕೇಂದ್ರಗಳ ಉದ್ಘಾಟನೆ ದಿನ ಬಳಸಿ. .ನಿಮ್ಮ ಮೆದುಳಿಗೂ ಸ್ವಲ್ಪ ವಿಶ್ರಾಂತಿ ಕೊಡಿ. ಬೇಗ ಹುಚ್ಚರಾಗ್ತಿರʼʼ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Ram Mandir : ಜಗತ್ತಿನಾದ್ಯಂತ ಸಂಭ್ರಮ; ಪಟಾಕಿ ಸಿಡಿಸಿ, ಸಿಹಿ ಹಂಚಿದ ರಾಮಭಕ್ತರು

ಈ ಮುಂಚೆ ಕಿಶೋರ್‌ ಅವರು ಅಸಲಿ ಹಿಂದೂ ವಿರೋಧಿ ಯಾರು ಎಂಬ ಪೋಸ್ಟ್‌ ಹಾಕಿ ಭಾರಿ ಚರ್ಚೆಗೆ ಗುರಿಯಾಗಿದ್ದರು.

ಕಿಶೋರ್‌ ತಮ್ಮ ಪೋಸ್ಟ್‌ನಲ್ಲಿ ʻʻಅಸಲಿ ಹಿಂದೂ ವಿರೋಧಿ ಯಾರು? ಧರ್ಮದ ರಾಜಕೀಕರಣವನ್ನು ವಿರೋಧಿಸುವವರನ್ನು ಹಿಂದೂ ವಿರೋಧಿಗಳು, ದೇಶ ವಿರೋಧಿಗಳೆಂದು ಟ್ರೋಲ್ ಮಾಡುವ ವಿಶ್ವಗುರು ಭಕ್ತರು ಮತ್ತು ತನ್ನ ವೃತ್ತಿಧರ್ಮಕ್ಕೆ ದ್ರೋಹ ಬಗೆದ ಗೋದಿ ಮಾಧ್ಯಮದವರು ಈಗೇನು ಮಾಡುತ್ತಾರೆ? ಶಂಕರಾಚಾರ್ಯರುಗಳನ್ನೂ ಹಿಂದೂ ವಿರೋಧಿಗಳು, ದೇಶ ವಿರೋಧಿಗಳೆಂದು ಟ್ರೋಲ್ ಮಾಡುತ್ತಾರೆಯೇ? ರಾಮ ಮಂದಿರದ ರಾಜಕೀಯಕರಣವನ್ನು ವಿರೋಧಿಸುತ್ತಿರುವ ಶಂಕರಾಚಾರ್ಯರುಗಳು ಹಿಂದೂ ವಿರೋಧಿಗಳಲ್ಲವೆಂದರೆ ನಿಜವಾದ ಹಿಂದೂ ವಿರೋಧಿಗಳು ಯಾರು? ಜ್ವಲಂತ ಸಮಸ್ಯೆಗಳನ್ನು ಮರೆಮಾಚಿ, ಅರ್ಧಂಬರ್ಧ ದೇವಸ್ಥಾನದ ಉದ್ಘಾಟನೆ ಮಾಡಿ ಓಟು ಬಾಚಲು ನಿಂತಿರುವ ಧೂರ್ತರು, ಅವರ ಅಂಧಭಕ್ತರು ಹಿಂದೂ ವಿರೋಧಿಗಳೇ ಅಲ್ಲವೇ?
ಅವರ ಧರ್ಮಾಂಧತೆಯ ಮಂಕುಬೂದಿಯ ಭ್ರಮೆಯಲ್ಲಿ ಮಂತ್ರಾಕ್ಷತೆ ಹಂಚುತ್ತಿರುವವರೂ ಅದೇ ಆಗಿ ಬಿಡುವುದಿಲ್ಲವೇ??
ಈ ಅಯೋಗ್ಯ ರಾಜಕಾರಿಣಿಗಳಿಗೆ ರಾಮ ಬರೀ ರಾಜಕೀಯ ಲಾಭಕ್ಕಾಗಿಯೇ ಇರುವ
ವ್ಯಾಪಾರದ ಸರಕು ಅಷ್ಟೇ.
ನಿಜವಾದ ದೈವವೆನ್ನುವ ನಂಬಿಕೆ ಇರುವುದು ಮಂದಿರ ಮಸೀದಿ ಚರ್ಚುಗಳಲ್ಲಲ್ಲ..
ಗಾಂಧಿಯಂತೆ, ಜೀವನದ ಪ್ರತಿ ನಡೆಯಲ್ಲಿ ರಾಮ.. ಪ್ರತಿ ನುಡಿಯಲ್ಲಿ ರಾಮ.. ಸಾವಲ್ಲೂ ಹೇ ರಾಮ..
ಈ ಢೋಂಗಿಗಳಿಗೆ ಎಂದಾದರೂ ಅದು ಸಾಧ್ಯವೇ ?
ಎಷ್ಟೇ ಆಗಲಿ ಆ ಗಾಂಧಿಯನ್ನು ಕೊಂದವರಲ್ಲವೇ..ʼʼ ಎಂದು ಬರೆದುಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Ayodhya Ram Mandir : ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ ‘ಟೆಂಪಲ್ ಮ್ಯೂಸಿಯಮ್​’; ಯೋಗಿ ಸಂಪುಟದ ಸಮ್ಮತಿ

Ayodhya Ram Mandir : ಟಾಟಾ ಸನ್ಸ್ ಕೇಂದ್ರ ಸರ್ಕಾರದ ಮೂಲಕ ಈ ಯೋಜನೆಗೆ ಪ್ರಸ್ತಾಪ ಇಟ್ಟಿತ್ತು. ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಡಿ 650 ಕೋಟಿ ರೂ.ಗಳ ವೆಚ್ಚದಲ್ಲಿ ವಸ್ತುಸಂಗ್ರಹಾಲಯವನ್ನು ನಿರ್ಮಿಸಲು ಮುಂದಾಗಿತ್ತು” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಸಿಂಗ್ ಹೇಳಿದ್ದಾರೆ.

VISTARANEWS.COM


on

Ayodhya Ram Mandir
Koo

ಲಕ್ನೋ: ವಿಶ್ವ ಪ್ರಸಿದ್ಧ ರಾಮ ಮಂದಿರುವ ಇರುವ ಅಯೋಧ್ಯೆಯಲ್ಲಿ 650 ಕೋಟಿ ರೂ.ಗಳ ವೆಚ್ಚದಲ್ಲಿ ‘ದೇವಾಲಯಗಳ ವಸ್ತುಸಂಗ್ರಹಾಲಯ’ ನಿರ್ಮಿಸುವ ಟಾಟಾ ಸನ್ಸ್​ ಸಂಸ್ಥೆಯ ಪ್ರಸ್ತಾಪಕ್ಕೆ ಉತ್ತರ ಪ್ರದೇಶ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. ಈ ನಿರ್ಧಾರದ ಬಗ್ಗೆ ವಿವರಗಳನ್ನು ಹಂಚಿಕೊಂಡ ಪ್ರವಾಸೋದ್ಯಮ ಸಚಿವ ಜೈವೀರ್ ಸಿಂಗ್, ಪ್ರವಾಸೋದ್ಯಮ ಇಲಾಖೆಯು ಅಂತರರಾಷ್ಟ್ರೀಯ ಮಟ್ಟದ ವಸ್ತುಸಂಗ್ರಹಾಲಯ ನಿರ್ಮಾಣಕ್ಕಾಗಿ ಬಳಸುವ ಭೂಮಿಯನ್ನು 90 ವರ್ಷಗಳ ಗುತ್ತಿಗೆಗೆ 1 ರೂಪಾಯಿ ಮೊತ್ತಕ್ಕೆ ನೀಡಲಿದೆ ಎಂದು ಹೇಳಿದರು.

ಟಾಟಾ ಸನ್ಸ್ ಕೇಂದ್ರ ಸರ್ಕಾರದ ಮೂಲಕ ಈ ಯೋಜನೆಗೆ ಪ್ರಸ್ತಾಪ ಇಟ್ಟಿತ್ತು. ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ನಿಧಿಯಡಿ 650 ಕೋಟಿ ರೂ.ಗಳ ವೆಚ್ಚದಲ್ಲಿ ವಸ್ತುಸಂಗ್ರಹಾಲಯವನ್ನು ನಿರ್ಮಿಸಲು ಮುಂದಾಗಿತ್ತು” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕ್ಯಾಬಿನೆಟ್ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಸಿಂಗ್ ಹೇಳಿದ್ದಾರೆ. ದೇವಾಲಯದ ಪಟ್ಟಣದಲ್ಲಿ ಇತರ ಅಭಿವೃದ್ಧಿ ಕಾರ್ಯಗಳಿಗಾಗಿ ಹೆಚ್ಚುವರಿ 100 ಕೋಟಿ ರೂ.ಗಳ ಕಂಪನಿಯ ಪ್ರಸ್ತಾಪವನ್ನು ಕ್ಯಾಬಿನೆಟ್ ಅನುಮೋದಿಸಿದೆ ಎಂದು ಅವರು ಹೇಳಿದರು.

ಟಾಟಾ ಸನ್ಸ್ ಪ್ರಮುಖ ಹೂಡಿಕೆ ಹೋಲ್ಡಿಂಗ್ ಕಂಪನಿ

ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಹೆಲಿಪ್ಯಾಡ್​ಗಳನ್ನು ನಿರ್ಮಿಸುವ ಮೂಲಕ ಲಕ್ನೋ, ಪ್ರಯಾಗ್ರಾಜ್ ಮತ್ತು ಕಪಿಲವಾಸ್ತುಗಳಲ್ಲಿ ಹೆಲಿಕಾಪ್ಟರ್ ಸೇವೆಗಳನ್ನು ಪ್ರಾರಂಭಿಸುವುದು ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ಪಡೆದ ಇತರ ಪ್ರಸ್ತಾಪಗಳಾಗಿವೆ.

ಇದನ್ನೂ ಓದಿ:Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

ಸುಪ್ತ ಪಾರಂಪರಿಕ ಕಟ್ಟಡಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸುವ ಪ್ರಸ್ತಾಪಕ್ಕೂ ಸಂಪುಟ ಅನುಮೋದನೆ ಪಡೆದಿದೆ ಎಂದು ಸಚಿವರು ಹೇಳಿದರು.

ಲಕ್ನೋದ ಕೋಥಿ ರೋಶನ್ ದುಲ್ಹಾ, ಮಥುರಾದ ಬರ್ಸಾನಾ ಜಲ್ ಮಹಲ್ ಮತ್ತು ಕಾನ್ಪುರದ ಶುಕ್ಲಾ ತಲಾಬ್ (ಕೊಳ) ಈ ಮೂರು ಪಾರಂಪರಿಕ ಕಟ್ಟಡಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದೆ ಎಂದು ಸಿಂಗ್​ ಹೇಳಿದ್ದಾರೆ. ಈ ಉದ್ದೇಶಕ್ಕಾಗಿ ಮುಖ್ಯಮಂತ್ರಿ ಪ್ರವಾಸೋದ್ಯಮ ಫೆಲೋಶಿಪ್ ಕಾರ್ಯಕ್ರಮದಡಿ ಸಂಶೋಧಕರನ್ನು ಆಯ್ಕೆ ಮಾಡಲಾಗುವುದು ಎಂದು ಅವರು ಹೇಳಿದರು.

Continue Reading

ಪ್ರಮುಖ ಸುದ್ದಿ

Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

Ayodhya Ram Mandir : ನಾನು ಸ್ವತಃ ದೇವಾಲಯದ ಕಟ್ಟಡವನ್ನು ಪರಿಶೀಲಿಸಿದ್ದೇನೆ. ಎರಡನೇ ಮಹಡಿ ನಿರ್ಮಾಣ ಹಂತದಲ್ಲಿದೆ. ಅಂತಿಮವಾಗಿ ಎರಡನೇ ಮಹಡಿಯ ಚಾವಣಿ ನಿರ್ಮಾಣಗೊಂಡ ಬಳಿಕ ಮಳೆನೀರು ದೇವಾಲಯಕ್ಕೆ ಪ್ರವೇಶಿಸುವುದನ್ನು ನಿಲ್ಲುತ್ತದೆ ಎಂದು ಮಿಶ್ರಾ ಸುದ್ದಿಗಾರರಿಗೆ ತಿಳಿಸಿದರು.

VISTARANEWS.COM


on

Ayodhya Ram Mandir:
Koo

ನವದೆಹಲಿ: ದೇವಾಲಯದ ಗರ್ಭಗುಡಿಗೆ ಮಳೆನೀರು ಸೋರಿಕೆಯಾಗುತ್ತಿದೆ ಎಂಬ ದೇವಾಲಯದ ಮುಖ್ಯ ಅರ್ಚಕರ ಆರೋಪಗಳನ್ನು ರಾಮ ಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಂಗಳವಾರ ನಿರಾಕರಿಸಿದ್ದಾರೆ. ನೀರಿನ ಸೋರಿಕೆಯಾಗುತ್ತಿಲ್ಲ. ಆದರೆ ವಿದ್ಯುತ್ ತಂತಿಗಳನ್ನು ಅಳವಡಿಸಲು ಅಳವಡಿಸಲಾದ ಪೈಪ್ ಗಳಿಂದ ಮಳೆನೀರು ಒಳಗೆ ಬಂದಿದೆ ಎಂದು ಮಿಶ್ರಾ ಹೇಳಿದ್ದಾರೆ.

ನಾನು ಸ್ವತಃ ದೇವಾಲಯದ ಕಟ್ಟಡವನ್ನು ಪರಿಶೀಲಿಸಿದ್ದೇನೆ. ಎರಡನೇ ಮಹಡಿ ನಿರ್ಮಾಣ ಹಂತದಲ್ಲಿದೆ. ಅಂತಿಮವಾಗಿ ಎರಡನೇ ಮಹಡಿಯ ಚಾವಣಿ ನಿರ್ಮಾಣಗೊಂಡ ಬಳಿಕ ಮಳೆನೀರು ದೇವಾಲಯಕ್ಕೆ ಪ್ರವೇಶಿಸುವುದನ್ನು ನಿಲ್ಲುತ್ತದೆ ಎಂದು ಮಿಶ್ರಾ ಸುದ್ದಿಗಾರರಿಗೆ ತಿಳಿಸಿದರು.

ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯವಿದೆ ಎಂದು ರಾಮ ಜನ್ಮಭೂಮಿ ದೇವಾಲಯದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ಕಳೆದ ಶನಿವಾರ ಆರೋಪಿಸಿದ್ದರು. ಮಧ್ಯರಾತ್ರಿಯ ಮಳೆಯ ನಂತರ ದೇವಾಲಯದ ಆವರಣದಲ್ಲಿ ತುಂಬಿದ್ದ ಮಳೆನೀರನ್ನು ಹೊರಹಾಕಲು ಯಾವುದೇ ವ್ಯವಸ್ಥೆ ಇಲ್ಲ ಎಂದು ಸೋಮವಾರ ಆರೋಪಿಸಿದ್ದರು. ಸಮಸ್ಯೆ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ದೇವಾಲಯದ ಅಧಿಕಾರಿಗಳನ್ನು ಒತ್ತಾಯಿಸಿದರು.

ಈ ಘಟನೆಯ ಬಗ್ಗೆ ಗಮನ ಹರಿಸುವಂತೆ ಮತ್ತು ಸೋರಿಕೆಯನ್ನು ತಡೆಯಲು ಮತ್ತು ದೇವಾಲಯದಿಂದ ನೀರಿನ ಹೊರಹರಿವನ್ನು ಖಚಿತಪಡಿಸಿಕೊಳ್ಳಲು ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ದಾಸ್ ದೇವಾಲಯದ ಅಧಿಕಾರಿಗಳಿಗೆ ಸೂಚಿಸಿದ್ದರು.

ಮಧ್ಯರಾತ್ರಿ ಸುರಿದ ಮಳೆ

ಶನಿವಾರ ಮಧ್ಯರಾತ್ರಿ ಸಂಭವಿಸಿದ ಮೊದಲ ಭಾರಿ ಮಳೆಯಲ್ಲಿ ದೇವಾಲಯದ ಗರ್ಭಗುಡಿಯ ಚಾವಣಿಯಿಂದ ಭಾರಿ ಸೋರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ. ರಾಮ್ ಲಲ್ಲಾ ವಿಗ್ರಹದ ಮುಂದೆ ಅರ್ಚಕರು ಕುಳಿತುಕೊಳ್ಳುವ ಸ್ಥಳ ಮತ್ತು ವಿಐಪಿ ದರ್ಶನಕ್ಕಾಗಿ ಜನರು ಬರುವ ಸ್ಥಳದ ಚಾವಣಿಯಿಂದ ಮಳೆನೀರು ನೇರವಾಗಿ ಸೋರಿಕೆಯಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Share Market : ಷೇರು ಮಾರುಕಟ್ಟೆಯಲ್ಲಿ ನೂತನ ದಾಖಲೆ; ಮೊದಲ ಬಾರಿಗೆ 78,000 ಮಟ್ಟವನ್ನು ದಾಟಿದ ಸೆನ್ಸೆಕ್ಸ್

ದೇಶಾದ್ಯಂತದ ಎಂಜಿನಿಯರ್​ಗಳು ರಾಮ ಮಂದಿರವನ್ನು ನಿರ್ಮಿಸುತ್ತಿರುವುದು ಅಚ್ಚರಿಯ ಸಂಗತಿಯಾಗಿದೆ. ಈ ದೇವಾಲಯವನ್ನು ಜನವರಿ 22 ರಂದು ಉದ್ಘಾಟಿಸಲಾಗಿದೆ. ಆದರೆ, ಮಳೆ ಬಂದರೆ ಚಾವಣಿ ಸೋರುತ್ತದೆ ಎಂದು ಯಾರಿಗೂ ತಿಳಿದಿರಲಿಲ್ಲ ಎಂದು ಅವರು ಹೇಳಿದ್ದರು. ದೊಡ್ಡ ಎಂಜಿನಿಯರ್​ಗಳ ಸಮ್ಮುಖದಲ್ಲಿಯೇ ಇಂತಹ ಘಟನೆ ನಡೆಯುತ್ತಿದೆ, ಇದು ತುಂಬಾ ತಪ್ಪು ಎಂದು ಅವರು ಹೇಳಿದರು.

ಚಾವಣಿಯ ಮೇಲೆ ತಾತ್ಕಾಲಿಕ ಸೂರು ನಿರ್ಮಾಣ ಮಾಡುವ ಮೂಲಕ ಭಕ್ತರಿಗೆ ಮಳೆ ನೀರು ಮತ್ತು ಸೂರ್ಯನ ಬಿಸಿಲಿನಿಂದ ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆ. ದೇವಾಲಯದ ನಿರ್ಮಾಣದ ಪ್ರಗತಿಯ ಬಗ್ಗೆ ಮಾತನಾಡಿದ ಮಿಶ್ರಾ, ಮೊದಲ ಮಹಡಿಯಲ್ಲಿ ಕೆಲಸ ನಡೆಯುತ್ತಿದೆ. ಈ ವರ್ಷದ ಜುಲೈ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಹೇಳಿದ್ದಾರೆ. ಡಿಸೆಂಬರ್ ವೇಳೆಗೆ ದೇವಾಲಯದ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

Continue Reading

ದೇಶ

Ram Mandir: ಸೋರುತಿಹುದು ಅಯೋಧ್ಯೆ ರಾಮಮಂದಿರ ಮಾಳಿಗೆ; ದೇಗುಲದ ಮುಖ್ಯ ಅರ್ಚಕರ ಆತಂಕ

Ram Mandir: ರಾಮಮಂದಿರದ ಗರ್ಭಗುಡಿಯ ಒಳಚಾವಣಿ ಸೋರಿಕೆಯಾಗುತ್ತಿರುವುದು ನಮಗೆಲ್ಲ ಆತಂಕ ತಂದಿದೆ. ಹಾಗೊಂದು ವೇಳೆ ನಿರಂತರವಾಗಿ ಮಳೆ ಬಂದರೆ, ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು, ಪೂಜೆ ಮಾಡಲು ಕೂಡ ಸಮಸ್ಯೆಯಾಗುತ್ತದೆ ಎಂಬುದಾಗಿ ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಅವರು ಮಾಹಿತಿ ನೀಡಿದ್ದಾರೆ. ಸೋರುತ್ತಿರುವ ಕುರಿತು ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷರೂ ತಿಳಿಸಿದ್ದಾರೆ.

VISTARANEWS.COM


on

Ram Mandir
Koo

ಅಯೋಧ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾದ ಭವ್ಯ ರಾಮಮಂದಿರಕ್ಕೆ (Ram Mandir) ಚಾಲನೆ ನೀಡಿ ಆರು ತಿಂಗಳಾಗಿದೆ. 2024ರ ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೇ ರಾಮಮಂದಿರವನ್ನು ಲೋಕಾರ್ಪಣೆ ಮಾಡಿದ್ದಾರೆ. ದೇಶದ ಮೂಲೆ ಮೂಲೆಯಿಂದ ಲಕ್ಷಾಂತರ ಭಕ್ತರು ಮಂದಿರಕ್ಕೆ ಭೇಟಿ ನೀಡಿದ್ದಾರೆ. ಈಗಲೂ ಭೇಟಿ ನೀಡುತ್ತಿದ್ದಾರೆ. ಇದರ ಬೆನ್ನಲ್ಲೇ, ಮಳೆ ಬಂದಾಗ ರಾಮಮಂದಿರದ ಚಾವಣಿ ಸೋರುತ್ತಿದೆ ಎಂಬುದಾಗಿ ದೇವಾಲಯದ ಮುಖ್ಯ ಅರ್ಚಕರೇ ಮಾಹಿತಿ ನೀಡಿದ್ದಾರೆ.

ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಅವರು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡುವಾಗ ಈ ವಿಷಯ ತಿಳಿಸಿದ್ದಾರೆ. “ಮೊದಲ ಮಳೆಗೇ ಗರ್ಭಗುಡಿಯ ಚಾವಣಿ ಮೂಲಕ ನೀರು ಒಳಗೆ ಬಂದಿದೆ. ನೂರಾರು ಎಂಜಿನಿಯರ್‌ಗಳು ಇಲ್ಲಿದ್ದಾರೆ. ಸುಸಜ್ಜಿತವಾಗಿಯೇ ರಾಮಮಂದಿರ ನಿರ್ಮಿಸಲಾಗಿದೆ. ಹೀಗಿದ್ದರೂ ಗರ್ಭಗುಡಿಯೇ ಸೋರುತ್ತಿರುವುದು ಆತಂಕ ಸೃಷ್ಟಿಸಿದೆ. ಹೀಗಾಗುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಕೂಡಲೇ ರಾಮಮಂದಿರ ಕಡೆ ಗಮನ ಹರಿಸಿ, ಸಮಸ್ಯೆಯನ್ನು ಸರಿಪಡಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

“ರಾಮಮಂದಿರದ ಗರ್ಭಗುಡಿಯ ಒಳಚಾವಣಿ ಸೋರಿಕೆಯಾಗುತ್ತಿರುವುದು ನಮಗೆಲ್ಲ ಆತಂಕ ತಂದಿದೆ. ಹಾಗೊಂದು ವೇಳೆ ನಿರಂತರವಾಗಿ ಮಳೆ ಬಂದರೆ, ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಲು, ಪೂಜೆ ಮಾಡಲು ಕೂಡ ಸಮಸ್ಯೆಯಾಗುತ್ತದೆ. ರಾಮಮಂದಿರಕ್ಕೆ ಬರುವ ಭಕ್ತರಿಗೂ ಇದರಿಂದ ಮುಜುಗರ ಆಗುತ್ತದೆ. ಕೂಡಲೇ ಚಾವಣಿಯನ್ನು ದುರಸ್ತಿ ಮಾಡಬೇಕು. ಇದರ ಕುರಿತು ಇನ್ನಷ್ಟು ಗಮನ ಹರಿಸಬೇಕು” ಎಂಬುದಾಗಿ ಸತ್ಯೇಂದ್ರ ದಾಸ್‌ ಅವರು ಒತ್ತಾಯಿಸಿದ್ದಾರೆ.

ಶ್ರೀ ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ಕೂಡ ನೀರು ಒಳಗೆ ಬರುತ್ತಿರುವುದನ್ನು ದೃಢಪಡಿಸಿದ್ದಾರೆ. “ನಾನು ಅಯೋಧ್ಯೆಯಲ್ಲಿ ಇದ್ದೇನೆ. ಮೊದಲ ಮಹಡಿಯಿಂದ ಮಳೆ ನೀರು ಸೋರಿಕೆಯಾಗುತ್ತಿರುವುದನ್ನುನೋಡಿದ್ದೇನೆ. ಎರಡನೇ ಮಹಡಿಯ ಗುರು ಮಂಟಪ ತೆಗೆದ ಕಾರಣ ನೀರು ಒಳಗೆ ಬರುತ್ತಿದೆ ಎಂದು ಎನಿಸುತ್ತಿದೆ. ಎರಡನೇ ಮಹಡಿಯನ್ನು ಸಂಪೂರ್ಣವಾಗಿ ನಿರ್ಮಿಸಿದ ಬಳಿಕ ಸಮಸ್ಯೆ ಬಗೆಹರಿಯುತ್ತದೆ ಎಂದು ಅನಿಸುತ್ತಿದೆ. ಇದರ ಕುರಿತು ಹೆಚ್ಚಿನ ಗಮನ ಹರಿಸಲಾಗುವುದು” ಎಂದು ಮಾಹಿತಿ ನೀಡಿದ್ದಾರೆ.

ಪರಿಣತ ಎಂಜಿನಿಯರ್‌ಗಳು, ತಜ್ಞರು ಸೇರಿ ರಾಮಮಂದಿರವನ್ನು ನಿರ್ಮಿಸಿದ್ದಾರೆ. ತೀವ್ರ ಪ್ರಮಾಣದಲ್ಲಿ ಭೂಕಂಪ ಸಂಭವಿಸಿದರೂ ಮಂದಿರಕ್ಕೆ ಧಕ್ಕೆಯಾಗದ ಹಾಗೆ ನಿರ್ಮಿಸಲಾಗಿದೆ. ಹೀಗಿದ್ದರೂ ರಾಮಮಂದಿರವು ಮೊದಲ ಮಳೆಗೇ ಸೋರಿಕೆಯಾಗಿರುವುದು ಅರ್ಚಕರ ಆತಂಕಕ್ಕೆ ಕಾರಣವಾಗಿದೆ. ಅವ್ಯವಸ್ಥೆ ಕುರಿತು ರಾಮನ ಭಕ್ತರು ಕೂಡ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Ram Mandir: ರಾಮಮಂದಿರ ಸ್ಫೋಟಿಸುವ ಉಗ್ರರ ಬೆದರಿಕೆ ಆಡಿಯೊ ವೈರಲ್; ಅಯೋಧ್ಯೆಯಲ್ಲಿ ಹೈ ಅಲರ್ಟ್‌

Continue Reading

ರಾಮ ಮಂದಿರ

Ayodhya Ram Mandir: ಅಯೋಧ್ಯೆ ರಾಮಲಲ್ಲಾನ ಸ್ನಾನವನ್ನೇ ಮರೆತ ಎಂಜಿನಿಯರ್‌ಗಳು! ಗರ್ಭಗುಡಿಯಲ್ಲೀಗ ದೊಡ್ಡ ಸಮಸ್ಯೆ!

ಅಯೋಧ್ಯೆ ರಾಮ ಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪಿತವಾಗಿರುವ ರಾಮಲಲ್ಲಾನಿಗೆ ಸ್ನಾನ ಮಾಡಿಸುವುದು ಪುರೋಹಿತರಿಗೆ ದೊಡ್ಡ ಸವಾಲಾಗಿದೆ. ದೇವಾಲಯವನ್ನು ನಿರ್ಮಿಸಿದಾಗ ಎಂಜಿನಿಯರ್‌ಗಳು ಭಗವಾನ್ ರಾಮನ ‘ಸ್ನಾನ’ದ ಬಗ್ಗೆ ಯೋಚಿಸಲೇ ಇಲ್ಲ. ಹಾಗಾಗಿ ದೇವರಿಗೆ ಸ್ನಾನ ಮಾಡಿಸಿದ ನೀರನ್ನು ಹೊರ ಚೆಲ್ಲುವುದು ದೊಡ್ಡ ಸಮಸ್ಯೆಯಾಗಿದೆ.

VISTARANEWS.COM


on

By

Ayodhya Ram Mandir
Koo

ಅಯೋಧ್ಯೆ: ಸುಮಾರು ಒಂದು ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಅಯೋಧ್ಯೆ ರಾಮಮಂದಿರದ (Ayodhya Ram Mandir) ಗರ್ಭಗುಡಿಯಲ್ಲಿ (sanctum sanctorum) ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಅರ್ಚಕರಿಗೆ ತಲೆನೋವಾಗಿ ಪರಿಣಮಿಸಿದೆ. ನೀರು ಸಂಗ್ರಹವಾಗಲು ಹೊರಹರಿವು ಇಲ್ಲದ ಕಾರಣ ಒಳಚರಂಡಿ ವ್ಯವಸ್ಥೆಯಲ್ಲಿ (drainage system) ದೋಷಗಳು ಕಾಣಿಸಿಕೊಂಡಿವೆ.

ನಿತ್ಯದ ಪೂಜಾ ಕೈಂಕರ್ಯಗಳಿಗೆ ಬಳಸುವ ನೀರು ಹರಿದು ಹೋಗದೇ ಇರುವುದು ಅರ್ಚಕರು ಹಾಗೂ ದೇವಸ್ಥಾನದ ಆಡಳಿತ ಮಂಡಳಿಗೆ ಆತಂಕ ತಂದಿದೆ ಎಂದು ಅರ್ಚಕರೊಬ್ಬರು ತಿಳಿಸಿದರು.

ಈ ಕುರಿತು ಮಾತನಾಡಿದ ಅರ್ಚಕರೊಬ್ಬರ ಪ್ರಕಾರ, ಅಲಂಕಾರ ಸಮಾರಂಭದ ಮೊದಲು ರಾಮ್ ಲಲ್ಲಾನಿಗೆ ಪ್ರತಿದಿನ ಸ್ನಾನ ಮಾಡಿಸಲಾಗುತ್ತದೆ. ಈ ಆಚರಣೆಯಲ್ಲಿ ಮೊದಲು ಸರಯು ನದಿಯ ನೀರಿನಿಂದ ಅಭಿಷೇಕ ಮಾಡಲಾಗುತ್ತದೆ. ಬಳಿಕ ಹಾಲು, ಮೊಸರು, ತುಪ್ಪ ಮತ್ತು ಜೇನುತುಪ್ಪವನ್ನು ಒಳಗೊಂಡಿರುವ ಮಧು ಪರ್ಕ್ ಎಂದು ಕರೆಯಲ್ಪಡುವ ಮಿಶ್ರಣವನ್ನು ಹಾಕಲಾಗುತ್ತದೆ. ಇದರ ಅನಂತರ ರಾಮ್ ಲಲ್ಲಾನನ್ನು ಸರಯುವಿನ ನೀರಿನಿಂದ ಮತ್ತೆ ಸ್ನಾನ ಮಾಡಿಸಲಾಗುತ್ತದೆ. ಈ ಆಚರಣೆಗಳ ಅನಂತರ ನೆಲದ ಮೇಲೆ ಸಂಗ್ರಹವಾಗುವ ನೀರನ್ನು ಹರಿಸುವುದಕ್ಕೆ ಅವಕಾಶವಿಲ್ಲ ಎಂದು ತಿಳಿಸಿದರು. ಪ್ರಸ್ತುತ, ನೀರನ್ನು ಹಿಡಿಯಲು ದೊಡ್ಡ ಪ್ಲೇಟ್ ಅನ್ನು ಇರಿಸಲಾಗುತ್ತದೆ. ಅನಂತರ ಅದನ್ನು ಸಸ್ಯಗಳಿಗೆ ಬಿಡಲಾಗುತ್ತದೆ. ಉಳಿದ ನೀರನ್ನು ಕೈಯಾರೆ ಒರೆಸಿ ಒಣಗಿಸಲಾಗುತ್ತದೆ.

ಈ ಬಗ್ಗೆ ಯಾವ ಎಂಜಿನಿಯರ್‌ಗಳೂ ಯೋಚಿಸಲಿಲ್ಲ!

ರಾಮಲಲ್ಲಾನಿಗೆ ಸ್ನಾನ ಮಾಡಿಸುವುದು ಪುರೋಹಿತರಿಗೆ ನಿರಂತರ ಸವಾಲಾಗಿದೆ. ದೇವಾಲಯವನ್ನು ನಿರ್ಮಿಸಿದಾಗ ಯಾವುದೇ ಎಂಜಿನಿಯರ್ ಭಗವಾನ್ ರಾಮನ ‘ಸ್ನಾನ’ದ ಬಗ್ಗೆ ಯೋಚಿಸಲಿಲ್ಲ ಮತ್ತು ಆದ್ದರಿಂದ ಗರ್ಭಗುಡಿಯಲ್ಲಿ ಯಾವುದೇ ಔಟ್ಲೆಟ್ ಅನ್ನು ರಚಿಸಲಾಗಿಲ್ಲ ಎಂದು ಅರ್ಚಕರು ಹೇಳಿದರು. ಈ ಕುರಿತು ಎಲ್ ಆ್ಯಂಡ್ ಟಿ ಸಂಸ್ಥೆಯ ಎಂಜಿನಿಯರ್‌ಗಳಿಗೆ ಮಾಹಿತಿ ನೀಡಲಾಗಿದ್ದು, ಪರಿಹಾರ ಹುಡುಕುತ್ತಿದ್ದಾರೆ ಎಂದು ಅವರು ತಿಳಿಸಿದರು.

ರಾಮ್ ಲಲ್ಲಾನನ್ನು ಶಾಖದಿಂದ ರಕ್ಷಿಸಲು ಸಾಕಷ್ಟು ಕೂಲಿಂಗ್ ಪರಿಹಾರ, ಎರಡು ಟವರ್ ಏರ್ ಕಂಡಿಷನರ್‌ಗಳನ್ನು ಸ್ಥಾಪಿಸಲಾಗಿದೆ. ಆದರೆ, ಈ ಎಸಿಗಳು ಸಾಕಷ್ಟಿಲ್ಲ ಎಂಬುದು ಸಾಬೀತಾಗಿದೆ. ರಾಮಮಂದಿರದ ಎಂಜಿನಿಯರ್‌ಗಳು ಸಹ ಈ ಸಮಸ್ಯೆಗೆ ಪರಿಹಾರವನ್ನು ಸಕ್ರಿಯವಾಗಿ ಹುಡುಕುತ್ತಿದ್ದಾರೆ ಎಂದು ಅರ್ಚಕರು ಉಲ್ಲೇಖಿಸಿದ್ದಾರೆ.
ಈ ಕುರಿತು ರಾಮಮಂದಿರ ಟ್ರಸ್ಟ್ ಪ್ರತಿಕ್ರಿಯಿಸಲು ನಿರಾಕರಿಸಿದೆ.

ಇದನ್ನೂ ಓದಿ: Pandit Laxmikant Mathuranath Dixit: ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಮಾಡಿದ ಅರ್ಚಕ ವಿಧಿವಶ

ಪರಿಹಾರ ಕಷ್ಟ ಯಾಕೆ?

ತಾಂತ್ರಿಕ ನ್ಯೂನತೆಗಳಿಂದಾಗಿ ಗರ್ಭಗುಡಿಯೊಳಗೆ ಹೆಚ್ಚು ಪರಿಣಾಮಕಾರಿ ತಂಪಾಗಿಸುವ ವ್ಯವಸ್ಥೆಯನ್ನು ಅಳವಡಿಸಲು ಅಸಾಧ್ಯವಾಗಿದೆ. ಸಂಕೀರ್ಣವಾದ ಕೆತ್ತಿದ ಕಲ್ಲುಗಳಿಂದ ನಿರ್ಮಿಸಲಾದ ರಚನೆಯು ಎಸಿ ಅಳವಡಿಕೆಗೆ ಅಥವಾ ಒಳಚರಂಡಿ ವ್ಯವಸ್ಥೆಯನ್ನು ರಚಿಸಲು ಗಮನಾರ್ಹ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಕಲ್ಲುಗಳನ್ನು ಒಡೆಯುವುದು ಗರ್ಭಗುಡಿಯ ಸೌಂದರ್ಯವನ್ನು ಹಾಳುಮಾಡುವುದು ಮಾತ್ರವಲ್ಲದೆ ತಾಂತ್ರಿಕವಾಗಿಯೂ ಇದು ಸವಾಲಾಗಿದೆ. ಏಕೆಂದರೆ ನಿರ್ಮಾಣವು ಸುಲಭವಾಗಿ ಹಾಳುಮಾಡಲು ಸಾಧ್ಯವಾಗದ ಇಂಟರ್ ಲಾಕ್ ಕಲ್ಲುಗಳನ್ನು ಒಳಗೊಂಡಿದೆ.

ರಾಮ ಮಂದಿರ ಟ್ರಸ್ಟ್ ಈ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವಾಗ ಗರ್ಭಗುಡಿಯ ಸೌಂದರ್ಯವನ್ನು ಸಂರಕ್ಷಿಸುವ ಕಷ್ಟಕರವಾದ ಕೆಲಸವನ್ನು ಎದುರಿಸುತ್ತಿದೆ. ಎಂಜಿನಿಯರ್‌ಗಳು ಸಂಭಾವ್ಯ ಪರಿಹಾರಗಳ ಕುರಿತು ಚರ್ಚಿಸುವುದನ್ನು ಮುಂದುವರೆಸಿದ್ದು ಅರ್ಚಕರು ಮತ್ತು ಭಕ್ತರು ಈ ಪೂಜ್ಯತೆಯ ಪವಿತ್ರತೆ ಮತ್ತು ಸಮಗ್ರತೆಯನ್ನು ಕಾಪಾಡುವ ನಿರ್ಣಯಕ್ಕಾಗಿ ಆಶಿಸುತ್ತಿದ್ದಾರೆ ಎಂದು ಅರ್ಚಕರು ಹೇಳಿದ್ದಾರೆ.

Continue Reading
Advertisement
Actor Darshan Suffering From Sade Sati
ಸ್ಯಾಂಡಲ್ ವುಡ್2 mins ago

Actor Darshan: 2024 ಡೇಂಜರಸ್ ಇಯರ್ ಫಾರ್ ಮಿ ಅನ್ನೋದು `ಡೆವಿಲ್‌’ಗೆ ಮೊದಲೇ ಗೊತ್ತಿತ್ತಾ?

deepika padukone
Latest2 mins ago

Deepika Padukone: ‘ಕಲ್ಕಿ 2898 ಎಡಿ’ ಚಿತ್ರದ ದೀಪಿಕಾ ಪಡುಕೋಣೆ ನಗ್ನ ಚಿತ್ರ ಸೋರಿಕೆ; ನೆಟ್ಟಿಗರು ಹೇಳಿದ್ದೇನು?

attika babu
ಬೆಂಗಳೂರು ಗ್ರಾಮಾಂತರ3 mins ago

Attica Babu: ಕಳ್ಳರಿಂದ ಚಿನ್ನ ಖರೀದಿ; ಅಟ್ಟಿಕಾ ಗೋಲ್ಡ್ ಕಂಪೆನಿ ಮಾಲೀಕ ಮತ್ತೊಮ್ಮೆ ಬಂಧನ

Shah Rukh Khan
ಪ್ರಮುಖ ಸುದ್ದಿ5 mins ago

Shah Rukh Khan: ನಟ ಶಾರುಖ್ ಖಾನ್ ಬಗ್ಗೆ ಶಾಕಿಂಗ್ ಸುದ್ದಿ ಕೊಟ್ಟ ನಟ ಗೋವಿಂದ್ ನಾಮದೇವ್

Ram Path
ದೇಶ22 mins ago

Ram Path: ಅಯೋಧ್ಯೆ ರಾಮ ಪಥ ಕಾಮಗಾರಿಯಲ್ಲಿ ನಿರ್ಲಕ್ಷ್ಯ; 6 ಅಧಿಕಾರಿಗಳ ತಲೆದಂಡ

DP Manu
ಕ್ರೀಡೆ23 mins ago

DP Manu: ಡೋಪಿಂಗ್ ಸುಳಿಯಲ್ಲಿ ಸಿಲುಕಿದ ಜಾವೆಲಿನ್‌ ತಾರೆ ಮನು; ಒಲಿಂಪಿಕ್ಸ್​ಗೆ ಹಿನ್ನಡೆ

Love Failure
ರಾಯಚೂರು32 mins ago

Love Failure : ಅತ್ತಿಗೆ ತಂಗಿಯ ಪ್ರೀತಿ ಸಿಗದ್ದಕ್ಕೆ ಫ್ಯಾನಿಗೆ ನೇಣು ಬಿಗಿದುಕೊಂಡ ಹುಚ್ಚು ಪ್ರೇಮಿ

Gold Rate Today
ಪ್ರಮುಖ ಸುದ್ದಿ43 mins ago

Gold Rate Today: ತುಸು ಏರಿಕೆ ಕಂಡ ಚಿನ್ನದ ಬೆಲೆ; ಇಷ್ಟಿದೆ ಇಂದಿನ ದರ

ಬಾಲಿವುಡ್51 mins ago

Asha Bhosle: ಹಿರಿಯ ಗಾಯಕಿ ಆಶಾ ಭೋಂಸ್ಲೆ ಪಾದಕ್ಕೆ ಮುತ್ತಿಟ್ಟು, ಪನ್ನೀರಿನಿಂದ ತೊಳೆದು ನಮಸ್ಕರಿಸಿದ ಸೋನು ನಿಗಮ್

karnataka Rain
ಮಳೆ60 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ60 mins ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ17 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌